ಒಟ್ಟು 32858 ಕಡೆಗಳಲ್ಲಿ , 139 ದಾಸರು , 10357 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ನೋಡಿರೆ ನೋಡಿರೆ ನಂದನ ಕಂದನ| ಆಡುವ ಆಟದ ಘನ ಮಹಿಮೆಯನು| ರೂಢಿಲಿ ಶಿಶುವೆಂದವರ ನುಡಿ ಮಾಡುವ ಬಲುಕುಂದಾ ಪ ದುರುಳತನವ ಬಲು ಮಾಡಲೈಶೋಧೆಯು| ತರಳನ ಚರಣವ ನೆರೆ ಕಟ್ಟಿದರೆ| ಒರಳವ ನೆಳೆದೊಯ್ದಾ ಭರದಲಿ ಮರಗಳ ನಡ ಮುರಿದಾ 1 ಸಿಕ್ಕಿದ ಗೋವಳನೆನುತಲಿ ಬಾಲೇರು| ಅಕ್ಕರದಲಿ ಹಿಡಿದೆಳೆತರಲವರಾ| ಮಕ್ಕಳ ರೂಪವನು ಆಗುತೆ ಠಕ್ಕಿಸಿ ಹೋಗುವನು2 ತಂದೆ ಮಹಿಪತಿ ನಂದನ ಪ್ರಭುವಿನಾ| ನಂದನ ಲೀಲೆಯ ಹೇಳಲೆನ್ನಳವೇ| ಒಂದಲ್ಲ ಎರಡಲ್ಲ ನೆಲೆಯನು ಇಂದುಧರನೇ ಬಲ್ಲ3
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ನೋಡಿರೇ ನಂದ ಕಂದನಾ ನೋಡಲು ಕಣ್ಣಿನ ಪಾರಣಿ ಮಾಡುವಾ ಪ ಸೂರಿಯಾ ನಿಳಿಯಲು ಅಪರದ ಜಾವಕ ಸಾರಿಸಿ ಗೋಧನ ತಿರುಗಿಸುತಾ ವಾರಿಗ ರೆಲ್ಲರು ವಂದಾಗಿ ಹರುಷದಿ ಧೀರನು ದಾರನು ಆಡೂತ ಬರುವಾ 1 ಚಂಡು ಬಗರಿ ಚಿಣಿ ಕೋಲು ಚಪ್ಪಳಿಕೈಯ್ಯಾ ಹಿಂಡ ನೆರೆದು ಹಂಬಲಿ ಹಾಕುತಾ ಮಂಡಳದೊಳಗುಳ್ಳ ಆಟವ ನಾಡುತ ಪಂಡರಿ ಕಾಕ್ಷನು ಲೀಲೆಯ ನಲುವಾ 2 ಗೋಧೂಳಿ ತುಂಬಿದ ಗುಂಗುರ ಗೂದಲು ಉದಿಸಿದ ಹಣೆಯಲಿ ಕಿರಿ ಬೆವರು ಬೆರಿಸಿ ಪರಿಪರಿ ಸ್ವರದಲ್ಲಿ ಕೊಳಲವ ನೂದುತ ಕುಣಿಯುತ ನಗೆವುತ ಬರುವಾ3 ಕುಂಡಲ ಹೊಳೆಯುತ ಕಣ್ಣಿನ ಚಲುವಿನ ಕಸ್ತೂರಿ ರೇಖೆಯಲಿ ನೌಲಗರಿಯ ವಾರಿ ದುರುಬವ ಕಟ್ಟಿಸಿ ಪುತ್ಥಳಿ ಬರುವಾ4 ಪೇಂದ್ಯ ಉದ್ದದ ಬಲರಾಯ ಸುಧಾಮರ ವೃಂದದಿ ಮಹಿಪತಿ ಸುತ ಪ್ರೀಯನು ಇಂದು ವದನೆಯರು ಆರುತಿ ಕೊಳುತಲಿ ವಂದದಿ ಮಧ್ಯ ನಾಯಕನಾಗಿ ಬರುವಾ5
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ನೋಡಿರೇ ನೋಡಿರಮ್ಮಾ ಚೆಲುವನಾ ನೋಡಿರೇ || ಇವ|| ರೂಢಿಗೆ ಆವನಿಜೆಯಾ ತಕ್ಕುವರನೇ ಮುದ್ದುಸ್ಮರನೇ ಪ ಪಾದ ಜಂಘಯಿಂದ ಜಾನೂರುಮಾರಾ ತ್ರಿವಳವೇ| ಹಾರ ದಿಯ ಕರ ಸರಳವೇ 1 ಮಂಡಿತದ ಕುಂಡಲವಾ| ಮೃಗಮದ ಕಿರೀಟ 2 ಆವರಾಯನಮಗನೋತಾನರಿಯೇ|ಭೂಸು| ರಾವಳಿಯೊಳಿಂದ್ಧಾರೇನು |ಅಂಗ| ದಾವ ತೇಜಮುಸುಕಿತು ಧರಿಯೇ|ತ್ರ್ಯೆಭುವನವರಕ್ಷಿಸ ಬಂದಾಹರಿಯೇ | ಮುಜ್ಜಿಮರಿಯೇ 3 ಮುಟ್ಟಿಲೀ ತಗಧನುಏಳಲಿ ಝಮ್ಮೆನೇ ನಾವು ನೆಟ್ಟನೆಪೂಜಿಪೆವು ಗೌರಮ್ಮನೇ ಎಂದು ಬಿಟ್ಟ ಮಗಳು ಬೇಡಿಕೊಂಡರು ಸುಮ್ಮನೇ ಆಡಿಯಿಟ್ಟುನಲಿದು ಬರುವ ರಾಮೊ ಘಮ್ಮನೇ ಪರಬೊಮ್ಮನೆ 4 ಬಂದು ನೋಡಿಬಿಲ್ಲನೆತ್ತಿದ್ದಾಚಕ್ಕನೇ ಅರುವಿಂದ ಲೋಚನೆ ಮಾಲಿ ಹಾಕಲು ಘಕ್ಕನೇ ವೃಂದ ಕಾಣುತ ಹೆದರಿತುಧಕ್ಕನೇ ನಮ್ಮ ತಂದೆ ಮಹಿಪತಿ ನಂದನ ಪ್ರಭು ಠಕ್ಕನೇ ಪಾಲಕ್ಕುನೇ 5
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ನೋಡಿರೇ ಬೇಲೂರ ಕೇಶವನ ನೋಡಿರೇ ಪ ನೋಡಿ ನೀವವನ ಕೊಂಡ್ಯಾಡಿ | ತನುವೀಡ್ಯಾಡಿ ಅವನ ಚರಣದಿ | ಆಹಜೋಡಿಸಿ ಕರಗಳ | ಬೇಡಲು ವರಗಳಖೋಡಿ ದೈವರ ದೇವ ಗಾಢ ದಯವ ತೋರ್ವ ಅ.ಪ. ಪಣೆ ಸದನ | ಆಹವಜ್ರಿಯ ಮೊರೆ ಕೇಳಿ | ನಿರ್ಜರರ ಸಲಹಿದಕಜ್ಜಗಳಮಿತದಿ | ಸಜ್ಜನರ ಪೊರೆದನ 1 ಕೇಳೆಡ ಕರದಲ್ಲಿ ಗದ | ನೋಡಿಮೇಲ್ಹಸ್ತದಲಿ ಚಕ್ರ ಬಲದ | ಮತ್ತೆಮೇಲ್ಕರ ಶಂಖದ ನಿನದ | ಇನ್ನುಕೀಳು ಕರಾಭಯ ಮಧ್ಯದ | ಆಹಶೀಲ ಭೂವರಹನ | ಶಾಲಿಗ್ರಾಮವ ನೋಡಿಲೀಲ ರೂಪದಿ ಘೋರ | ಕಾಲ್ಯವನನ ಕೊಂದ 2 ಸುಜನ | ಆಹಆವಾವ ಕಾಲಕ್ಕೂ | ನೋವು ರಹಿತ ಧಾಮಆ ವೈಕುಂಠವ ಪೊಕ್ಕ | ಶಾಶ್ವತ ಸುಖ ಪೊಂದ್ವ 3
--------------
ಗುರುಗೋವಿಂದವಿಠಲರು
ನೋಡಿರೈ ಜನಾ ರಂಜನೆಯಲ್ಲಿ | ನೋಡಿರೈ ಜನಾ | ಮಾಡದೆ ಹಿರಿಗುರು ಭಕ್ತಿಯ ಶೀಲದಿ | ರೂಢಿಯ ಡಂಭಕ ಹರಿದಾಡುವದು ಪ ಸಾಧು ಸಂತರ ಮನೆಯಲ್ಲಿ | ಆದರವಿಲ್ಲಾ ಮನದಲ್ಲಿ | ಮೇದಿನಿಯಲಿ ನುಡಿಸಿದ್ಧಿಯ ಹೇಳಲು | ಸಾಧಿಸಿ ಹೋಗುತ ಬಾಗುತಲಿಹುದು 1 ಚಂದನವಿಡಿದು ತೆಯ್ವಲ್ಲಿ | ಒಂದು ಬಾರದು ನೊಣವಲ್ಲಿ | ಕುಂದದೆ ಎಂಜಲ ತೊಳೆವಾಸ್ಥಳದಲ್ಲಿ | ಸಂದಿಸಿ ಮುಕುರುವ ಸಂದಲಿ ಯಂದದಿ 2 ಪರಗತಿ ಸಾಧನ ವರಿಯರು | ಬರಿದೆ ಭ್ರಾಂತಿಗೆ ಬೆರೆವರು | ಗುರುಮಹಿಪತಿಸುತ ಪ್ರಭು ಕಲ್ಪತರು | ಸೇರದೆ ಬೊಬ್ಬುಲಿ ಮರಕೆಳಗಾಡುವ 3
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ನೋಡಿರೋ ನೋಡಿರೋ ನಾಡಿನೊಳಗೆ ಮಹ ಗೂಢದಿ ಹೊಳೆಯುವ ಶ್ರೀಗಳ ಚರಣಪ ಪಾಡಿ ಬೇಡಿ ಹುಡುಕಾಡಿ ಪಡೆಯಿರೋ ವರ ಗಾಢ ಜ್ಞಾನದಿಗೂಡಿದ ಯತಿಗಳ ಅ.ಪ ಮಾಧವತೀರ್ಥರ ಮತದೊಳುದಿಸಿ ಬಾಧಕರೂಪಿನ ಭವಭಯಛೇದಿಸಿ ವೇದಸುಸ್ವಾದವ ಬೋಧಿಸಿ ನಿಜದ ಬೋಧ ಶ್ರೀಗುರುಗಳ 1 ಭಕ್ತರ ಕೂಡಿಸಿ ಮತ್ತು ಮಮತೆಯನೆ ನಿತ್ಯ ಸತ್ಯವ ಸಾಧಿಸಿ ಚಿತ್ತನಿಲಿಸಿ ಪುರುಷೋತ್ತಮನೊಳು ಬಿಡ ದತ್ಯಾನಂದಿಪ ಮುಕ್ತಿಗೆ ಮೂಲರ 2 ಆಶಾಪಾಶ ಮಾಯಮೋಸವ ಗೆಲಿದು ನಾಶ ಪ್ರಪಂಚದ ವಾಸನೆ ಅಳಿದು ಶ್ರೀಶ ಶ್ರೀರಾಮನ ಲೀಲದಿ ಬಿಡದನು ಮೇಷದಾಡುವ ಮಹ ಪಾವನಶೀಲರ 3
--------------
ರಾಮದಾಸರು
ನೋಡು ಎನ್ನೊಳು ಮಾಡು ದಯವನು ಬೇಡಿಕೊಂಬುವೆ ಮುರಹರ ಪ ರೂಢಿಯೊಳು ಎನ್ನ ಖೋಡಿಮಾಡದೆ ಕಾ ಪಾಡು ಬೇಗ ಭಕ್ತಹಿತಕರ ಅ.ಪ ಪಂಕಜಾಕ್ಷನೆ ಕಿಂಕರನ ಈ ಮಂಕುಗುಣಗಳ ಬಿಡಿಸಯ್ಯ ಶಂಖಸುರಹರ ಶಂಕೆಯಾತಕೆ ಕಿಂಕರನು ನಾಂ ಪಿಡಿ ಕೈಯ 1 ಹಿಂದು ಇಲ್ಲೆನ್ನ ಮುಂದು ಇಲ್ಲಯ್ಯ ತಂದೆ ನಿನ್ಹೊರತ್ಯಾರ್ಯಾರು ಮಂದಮತಿಯನು ಛಿಂದಿಸಿ ಬೇಗ ಕಂದನನು ಪೊರೆ ದಯಾಕರ 2 ತಂದೆ ನೀನೆ ತಾಯಿ ನೀನೆ ಬಂಧು ನೀನೆ ಶ್ರೀಕರ ಬಂದ ದುರಿತದಿಂದ ಕಾಯೊ ಸಿಂಧು ನೀನೆ ದೇವರೊ 3 ಉರಗನ ಬಾಯಲಿರುವ ಮಂಡೂಕ ಸ್ಮರಿಸಿ ನೋಣಕ್ಹವಣಿಸುವ ತೆರದಿ ಶರಧಿಸಂಸಾರ ಸ್ಥಿರವೆಂದರಿಯದೆ ಮರವಿನಿಂ ಬಿದ್ದೆ ದುರಿತದಿ 4 ಕಾಯಜೆಂಬುವ ಮಾಯಕೋರನು ಪಾಯಕೆ ಒಳಪಟ್ಟೆನು ತೋಯಜಾಕ್ಷೇರ ಮಾಯಮೋಹದಿ ಕಾಯದಂದಿಸಿ ಕೆಟ್ಟೆನು 5 ಕುಂಭಿನಿಯೊಳೆನಗಿಂಬುಗೊಟ್ಟು ಬಲು ನಂಬಿದವರಾಸ್ತ್ಯಳಿದೆನೊ ಜಂಬಬಡಿಯುತ ಶುಂಭಗುಣಗಳಿ ಗಿಂಬುಗೊಟ್ಟು ದಿನಗಳೆದೆನೊ 6 ಪ್ರಾಣತಗ್ಗಿಸಿ ದೀನತನದಲಿ ದೈನ್ಯಬಡುವರಿಗ್ಹಾನಿಮಾಡಿದೆ ದಾನಕೊಡುವರ ದಾನಕಡ್ಡಾಗಿ ನಾನಾ ದುರ್ಬೋಧವುಸುರಿದೆ 7 ಜಾನಕೀಶನ ಧ್ಯಾನಯುತರಿಗೆ ಹೀನ ಹಾಸ್ಯವ ಗೈದೆನೊ ಏನು ತಿಳಿಯದೆ ಗಾಣಕೆ ಬಿದ್ದ ಮೀನಿನಂತೆ ನಾನಾದೆನೊ 8 ಶ್ವಾನನಂದದಿ ಖೂನವಿಲ್ಲದೆ ನಾನಾಪಾಪವ ಗೈದೆನೊ ಮಾನವಜನುಮೇನು ಶ್ರೇಷ್ಠಿದ ಜ್ಞಾನದೋಳ್ಹೊತ್ತುಗಳೆದೆನೊ9 ಮಂಗನಂದದಿ ಹಂಗದೊರೆದು ಅಂಗಲಾಚಿ ಪರರನ್ನು ಬೇಡಿದೆ ಅಂಗಜಪಿತ ಮಂಗಳಾಂಗ ಶ್ರೀ ರಂಗ ನಿಮ್ಮ ಮಹಿಮ್ಯರಿಯದೆ 10 ದಾಸ ಮಾಡಿದ ದೋಷ ಮನ್ನಿಸಿ ಪೋಷಿಸು ಶ್ರೀರಾಮನೆ ಶ್ರೀಶ ಶ್ರೀನಿವಾಸ ಎನ್ನಂತ ರಾಸೆ ಪೂರೈಸು ಬೇಗನೆ 11
--------------
ರಾಮದಾಸರು
ನೋಡು ಗರ್ವ ಹಿಡಿಯ ಬ್ಯಾಡಾ ಪ ಜಗದೊಳಗ ಹಿತ ಮಾಡಿಕೊ | ಸಂತರೊಳು ಕೂಡಿ ನೀ ಪ್ರಾಣಿ ಅ.ಪ ಸುರಪದ ಮದ-ಗಜವೇರಿ ಸುರಸೈನ್ಯದಿಂಬರಲು | ಕರುಣದಿಂ ದೂರ್ವಾಸ ಸರ್ವ ಕುಡಲು | ಕೊರಳಿಗಿಕ್ಕದೆ ಬಿಡಲು ಧರೆಗೆರಗುವದ ಕಂಡು | ಮೊರೆದು ಕೋಪಿಸಲು ಸಿರಿಹರದ್ಹೋಯಿತು ಪ್ರಾಣಿ 1 ನೃಪತಿ ನಹುಷನನು ಯಜ್ಞ ಅಪರಿಮಿತ ಮಾಡಿ ನಿಜ | ಉಪಬೋಗಿಸದೆ ತಾ ಸುರಪ ಪದವಿಯಾ | ವಿಪುಲ ಋಷಿಯರ ಕೂಡ ಅಪಹಾಸ ಮಾಡಲಿಕೆ | ಶಪಿಸಲಾಕ್ಷಣ ಉರಗಾಧಿಪನಾದ ಪ್ರಾಣಿ 2 ವೈರಿ ಗರ್ವ ವಿದ್ಯಕ ಹಾನಿ | ಗರ್ವದಿಂ ಕೆಡಬಹುದುರ್ವಿಯೊಳಗ | ಸರ್ವಥಾ ಬ್ಯಾಡೆಂದು ಹೊರೆಯೊ ಗುರು ಮಹಿಪತಿ | ಅರ್ವವನು ಕೊಟ್ಟೆನಗ ಸರ್ವರೊಳು ಪ್ರಾಣಿ 3
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ನೋಡು ನೋಡಮ್ಮ ಭಾರತಿದೇವಿ ಪ ನೋಡಿ ನೋಡಮ್ಮ ಜೋಡುಕರಗಳ ಜೋಡಿಸಿ ಎದುರಿಲಿ ಮೂಢನು ನಿಂತಿಹೆಅ.ಪ. ಕಾಳಿ ದ್ರೌಪದಿ ನೀಲಲೋಹಿತೆಬಾಲೇ ಮಂಗಳೇ ಶೀಲೆ ಸುಂದರಿ 1 ಇಂದ್ರಸತಿ ಮುಖ ಸುಂದರಿಯರುಬಂದು ಸೇವಿಸೆ ಪೊಂದಿಪುಟ್ಟಿದೆ 2 ವಾಸುದೇವನ ನೀ ಸ್ಮರಿಸೆ ವಸ್ತ್ರರಾಶಿ ಪಡೆದೆ ಇಂದಿರೇಶನ ಸುಪ್ರಿಯೆ 3
--------------
ಇಂದಿರೇಶರು
ನೋಡು ನೋಡು ಜೀವನೆ ನೀ ನಿನ್ನಯ ನಿಜರೂಪವಾ ತಿಳಿದು ನಲಿದು ಜ್ಞಾನಪಥದಿ ಆನಂದವ ಹೊಂದು ನೀ ಪ ಅಮರನಾದ ಆತ್ಮ ನೀನು ಆನಂದದ ನಿಧಿಯೇ ನೀ ಅರಿತು ಇದನು ನಿನ್ನ ಮನದಿ ಶಾಂತರೂಪನಾಗು ನೀ 1 ನಾನೆನ್ನುವ ಅನಿಸಿಕೆಯದು ಅಡಗಲು ತಾನುಳಿಯುವಾ ತೋರಿಕೆಯನು ಮೀರಿದಾ ನಿರ್ವಿಕಲ್ಪ ನೋಡು ನೀ ಶ್ರವಣ ಮನನ ನಿದಿಧ್ಯಾಸ ಸಾಧನೆಗಳ ಮಾಡುತಾ ತಿಳಿವುದಾತ್ಮರೂಪ ನಾನೆ ಎಂದು ನಿನ್ನ ಮನದಲಿ 2 ಮನದೊಳಗೀಪರಿಯಾ ದೃಢತರದಲಿ ನಿಶ್ಚಿತಮಾಡೀ ದೇಹ ಮನಸು ಬುದ್ಧಿಗಳಿವು ನಾನಲ್ಲೆಂದರಿಯುತ ತೋರಿ ಅಡಗುತಿರುವ ಜಗವು ಕನಸೇ ಎಂದರಿತು ನೀ ಪರಮಸತ್ಯ ಆತ್ಮರೂಪ ನಾನಿಹೆನೆಂದರಿತುಕೋ 3 ಪ್ರೇಮರೂಪ ನೀನೆ ಎಂದು ಸಾರಿ ಪೇಳ್ದ ಜ್ಞಾನವ ಆ ಮಹಾತ್ಮಶಂಕರಗುರುರಾಜನ ನುಡಿ ತಿಳಿಯೋ ನೀ 4
--------------
ಶಂಕರಭಟ್ಟ ಅಗ್ನಿಹೋತ್ರಿ
ನೋಡು ನೋಡು ನಾರೀಮಣಿಯೆ ಪ ನೋಡು ನೋಡು ನಿನ್ನಾ ಕಣ್ಮನ ದಣಿಯಾ ಅ.ಪ. ಮುದ್ದು ಸೂಸುವ ಸಲೆ ಮುಗುಳ್ನಗೆ ಮೊಗವಾ ತಿದ್ದಿದ ಕಸ್ತೂರಿ ತಿಲಕದ ಫಣಿಯಾ 1 ಸಾರ ಗಂಭೀರ ಶೃಂಗಾರ ವಿಹಾರಾ ಚಾರು ಸೌಂದರ್ಯವೈಯ್ಯಾರ ಸುಗುಣಿಯಾ 2 ಶ್ರೀದವಿಠ್ಠಲ ಸಾಕ್ಷಾತ್ತ್ರಿಜಗನ್ಮಯಾ ಇಂದ್ರಶರಾ ಜಗನ್ಮೋಹನ ಖಣಿಯಾ 3
--------------
ಶ್ರೀದವಿಠಲರು
ನೋಡು ನೋಡು ನಿನ್ನ ಹಿತವಾ ಪ ಇಂದು ನರದೇಹದಲ್ಲಿ ಬಂದುದೇನೋ | ಒಂದು ಪಥವರಿಯದಾ ಛಂದವೇನೋ ಅ.ಪ ಗುರುವಿನಂಘ್ರಿಯ ಕಂಡ ಗುರುತ ಅನುಭವನುಂಡ ಸೈಸ್ಯೆ | ಕರುವೇ ಬಾರೆನ್ನುತಾ ಸೈಸ್ಯೆ | ಶರಣ ಬಾರೆನ್ನುತಾ ಸೈಸ್ಯೆ | ಹರಿಯ ಭಕ್ತ ನೆನ್ನುತಾ ಧರಿಯೊಳ್ಹೀಂಗ ಹಿರಿಯರಿಂದ | ಕರಿಸ ಕೊಳ್ಳಲಾಗದೇ | ಬರಿದೆ ಭ್ರಾಂತಿಗೆ ಬಿದ್ದು | ಬರಡ ಜನ್ಮ ಮಾಡ ಬ್ಯಾಡಾ 1 ನೀಗಿ ಕೇಳು ಕೇಳು | ಆದಿ ಸನ್ಮಾರ್ಗವ ಕೇಳು ಕೇಳು | ಸಾಧನವ ಬಲಿಯೋ ನೀ | ಕಂದ ಭೂಮಿಯ ಮೇಲೆ ಹನಿ ಮಾಡದೇ 2 ಗುರುಮಹಿಪತಿಸ್ವಾಮಿ ಅರ್ಹವಿನೊಳಗೆರಕವಾದ ಧೀರ ಧೀರ| ನೀರು ಪದ್ಮ ಹೋಲುವಾ ಎರಡು ಸಮನಿನಿಸಿ ಸುಖ | ಭರಿತರಾದ ಪರಿಯಲಿ ಹರಿಯ ಧ್ಯಾನ ಬಲಿಯೋ ಮೈಯ್ಯ | ಮರೆಯಬೇಡಾ ಮನವೇ 3
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ನೋಡು ನೋಡು ನೋಡಯ್ಯ ರಂಗ ಮಾಡು ದಯ ಕರುಣಾಂತರಂಗ ಪ ಖೋಡಿಸಂಸಾರದ ಪೀಡೆಯ ಕಡೆಹಾ ಕರ ಭವಭಂಗ ಅ.ಪ ಮಡದಿಮಕ್ಕಳುಯೆಂಬ ಕಡುತೊಡರಿನ ಬಳ್ಳಿ ತೊಡರಿಕೊಂಡೆನ್ನನು ಕಡುವಿಧ ನೋಯಿಸುವುದೊಡೆಯನೆ ಕಡಿ ಗಡ1 ಸಜ್ಜಾಗಿಲ್ಲೊಲ್ಲೆ ನಾನು ಪ್ರಪಂಚವಿದು ಹೆಜ್ಜೆ ಹೆಜ್ಜೆಗೆ ಕಷ್ಟ ಗರ್ಜಲ್ಲೊರ್ಜಿಸು ಸುಜನರಜ್ಜನೆ 2 ಪ್ರೇಮದಿಂ ಕಂದನ ಪಾಮರಮನಸಿನ ಕಾಮಿತವಳುಕಿಸಿ ಕ್ಷೇಮವ ಪಾಲಿಸು ಸ್ವಾಮಿ ಶ್ರೀ ರಾಮನೆ 3
--------------
ರಾಮದಾಸರು
ನೋಡು ನೋಡೆಂಥಾ ರಘುವೀರ ದೀನೋದ್ಧಾರ ಪ ತನು ಮನ ಧನಗಳ ತನಗೊಪ್ಪಿಸದೆ ನೆನೆವ ಮನುಜರಿಗೆ ದೂರಾದೂರಾ 1 ಸೇರಿದ ಸುಜನರ ದೂರುವ ದುರುಳರ ಬೇರಿಗೆರೆವ ಬಿಸಿ ನೀರಾ ನೀರಾ 2 ಶ್ರೀದವಿಠಲ ನಿಜಪಾದಾಶ್ರಿತರಪ- ರಾಧವ ಮನಸಿಗೆ ತಾರಾ ತಾರಾ 3
--------------
ಶ್ರೀದವಿಠಲರು
ನೋಡು ಮನವೆ ನಿನ್ನೊಳಾತ್ಮನ ನೋಡು ಮನವೆ ಧ್ರುವ ಸಾಧುಸಂಗವ ನೀ ಮಾಡಿ ಭೇದ ಬುದ್ಧಿಯ ಹೋಗಾಡಿ ಆದಿತತ್ವವ ನೀ ನೋಡಿ ಸದಮಲಾನಂದ ಕೂಡಿ1 ಕಾಮಕ್ರೋಧವ ಕಳೆದು ಮಮತಾ ಮಾಯವನಳಿದು ತಾಪ ತೊಳೆದು ಶಮದಮಾದಿ ತಿಳಿದು 2 ನಾನು ನೀನೆಂಬುದು ನೀಗಿ ಜ್ಞಾನದಿಂದ ಗುಪ್ತನಾಗಿ ಭಾನುಕೋಟಿತೇಜನಂಘ್ರಿ ಬೆರೆದು ನಿಶ್ಚಿಂತನಾಗಿ 3 ಅವಿದ್ಯುಪಾಧಿಯ ಜರಿದು ಮೂವಿಧ ಮದ ಮುರಿದು ಪವಿತ್ರ ಪ್ರಣವರಿದು ಸುವಿದ್ಯ ಸುಖಬೆರೆದು 4 ಬಾಹ್ಯಾಂತ್ರದೊಳಿಹ ಪೂರ್ಣ ಮಹಾಗುರುನಿರಂಜನ ಇಹ ಪರತ್ರ ಸಾಧನ ಮಹಿಪತಿ ಅಂತರಾತ್ಮನ 5
--------------
ಕಾಖಂಡಕಿ ಶ್ರೀ ಮಹಿಪತಿರಾಯರು