ಒಟ್ಟು 4323 ಕಡೆಗಳಲ್ಲಿ , 125 ದಾಸರು , 2943 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಎಲೆ ಮಾನವಾ ಅಭಿಮಾನವಾ ಅವಿವೇಕವಾ ದೂಡೈ ಸುಖದುಃಖದಾ ಘನ ಮೂಲವಾ ಸುವಿವೇಕದೀ ನೋಡೈ ಪ ಪರರಿಂದ ಈ ಪರಿತಾಪವು ಬರುತಿರ್ಪುದೆಂಬುದಿದೋ ಬರಿ ಬ್ರಾಂತಿಯೋ ನಿಜವಲ್ಲವೋ ಅಲೋಚಿಸಿ ನೋಡೈ 1 ಗ್ರಹಕಾಲಗಳ್ ಘನ ಕರ್ಮಗಳ್ ಇವು ಕಾರಣಲ್ಲವಿದೋ ಮನವೇ ಇದೇ ಪರಿತಾಪದ ಘನಮೂಲವೈ ನೋಡೋ 2 ಸಟೆಯಾಗಿಹ ಸಂಸಾರವ ದಿಟವೆಂದು ತೋರ್ಪುದಿದೋ ಮನದಿಂದಲೇ ಇದು ಕಾಂಬುದೋ ಮನವಿಲ್ಲದಾಗಿಲ್ಲ 3 ಪರಮಾತ್ಮನ ಪರಿಪೂರ್ಣನ ಮರೆಮಾಡುತೀಮನವು ಹರಿದಾಡುತಾ ಸುಖದುಃಖವಾ ಗುಣಿಸುತ್ತ ತಾನಿಹುದೋ 4 ವನದಾಟಕೇ ಮರುಳಾಗದೇ ಗುರುಶಂಕರಾರ್ಯನಲಿ ಮನ ನಿಲ್ಲಿಸಿ ಈ ಮೋಹವಾ ಬಿಡು ಬೇಗ ನೀನೀಗ 5
--------------
ಶಂಕರಭಟ್ಟ ಅಗ್ನಿಹೋತ್ರಿ
ಎಲ್ಲಮ್ಮ ದಯಮಾಡಮ್ಮ ಕಾಡಬೇಡ ಎನ್ನಮ್ಮ ಪ ಇಲ್ಲದೆ ಪೋದರೆ ನಿಲ್ಲದೆ ಏನನು ಬಲ್ಲಿದನ ಕರೆತಂದು ಕೊಲ್ಲಿಸಿಬಿಡುವೆನೆ ಅ.ಪ ಕೊಡಲಿ ಹೊತ್ತು ಬರುತಾನ ತಾಯಿ ಗಡನೆ ಹೊರಳಿ ನೋಡಿನ್ನ ಬಡವರ ದಯಾನಿಧಿ ಕಡುಬಾಧೆ ಕಂಡರೆ ತಡೆಯದೆ ನಿನ್ನನು ಕಡಿಯದೆ ಬಿಡನವ್ವ 1 ತಂದೆವಚನ ಪರಿಪಾಲನು ಅವ ಬಂದರೆ ನಿನ್ನನು ಕೊಂದಾನು ಕಂದನ ಬಂಧನ ಚಂದದಿ ಕಳೆದಾ ನಂದವ ಕೊಡು ಕೊಡು ಸುಂದರಮುಖಿಯೆ 2 ಕಾರ್ತವೀರ್ಯ ತಂದಾನೇ ಈ ವಾರ್ತೆ ಕೇಳಲು ನಿನ್ನ ಬಿಟ್ಟಾನೇ ಅರ್ತುಭಜಿಪೆ ನಿನ್ನ ಗುರ್ತಿಟ್ಟೀಬಾಧೆ ತುರ್ತು ಕಳೆಯೆ ತಾಯಿ ಅರ್ತು ಶ್ರೀರಾಮನ 3
--------------
ರಾಮದಾಸರು
ಎಲ್ಲಾ ಶಾಸ್ತ್ರದ ಸಾರದ ತಿಳಲ್ಮನ ದಲ್ಲಿ ಹರಿಯನು ಕಾಂಬುದಕೆ ಪ. ಮನದಲಿ ಹರಿಯನು ಕಾಂಬುವ ಸೊಬಗು ಬಲ್ಲಿದ ವೈಕುಂಠಕೋಡ್ವದಕೆ ಅ. ವಿಧಿನೀಷೇಧಗಳಾಚರಿಸುವುದು ವಿಧ ವಿಧ ಜೀವರ ಸಾಧನಕೆ ವಿಧ ವಿಧ ಸಾಧನ ನಂತರ ತಿಳಿವುದು ವಿಧಿ ಜನಕನ ಪದಪಿಡಿವುದಕೆ 1 ಸ್ನಾನಜಪಾಹ್ನೀಕಗಳೆಲ್ಲವು ತನ್ನ ಧ್ಯಾನಕೆ ಶ್ರೀಹರಿ ನಿಲ್ವುದಕೆ ಧ್ಯಾನಕೆ ಶ್ರೀಹರಿ ನಿಂತ ಮೇಲೆ ಸು ಜ್ಞಾನದಿಂದ ತನ್ನರಿವುದಕೆ 2 ನೆಲೆ ಇಲ್ಲದ ಕರ್ಮಾಳಿಗಳ್ ದೇಹದ ಮಲಿನ ತೊಳೆದು ಶುದ್ಧಿಗೈವುದಕೆ ಮಲಿನ ತೊಳೆದು ಮನಶುದ್ಧದಿ ಹೃದಯದಿ ಇಳೆಯರಸನ ನೆಲೆ ಅರಿವುದಕೆ 3 ಅಗ್ನಿ ಹೋತ್ರಯಜ್ಞಾದಿ ಕಾರ್ಯಗಳ್ ಶೀಘ್ರದಿ ಹರಿಯನು ಕಾಂಬುದಕೆ ಶೀಘ್ರದಿ ಹರಿಯನು ಕಂಡ ಮ್ಯಾಲೆ ಇವು ಅಗ್ರಜವಲ್ಲೆಂದರಿವುದಕೆ 4 ರಂಗನ ಮೂರ್ತಿಯನಿಟ್ಟು ಪೂಜಿಸುವುದು ಅಂಗÀದಲ್ಲಿ ತಾನು ಕಾಂಬುದಕೆ ಅಂಗದಲ್ಲಿ ತಾನು ಕಂಡ ಮೇಲೆ ಇವು ಅಂಗಡಿ ಎಂತೆಂದರಿವುದಕೆ 5 ನಿತ್ಯ ನೈಮಿತ್ತಿಕ ಕರ್ಮಗಳೆಲ್ಲವು ಚಿತ್ತದಿ ಹರಿಯನು ತೋರ್ಪುದಕೆ ಚಿತ್ತದಿ ಹರಿಯನು ಕಂಡ ಮೇಲೆ ಇವು ಮತ್ರ್ಯರಿಗೆಸಗಿ ಮೌನಾಗ್ವುದಕೆ 6 ಚಾಂದ್ರಾಯಣ ವ್ರತ ಉಪವಾಸಗಳು ಇಂದ್ರಿಯ ನಿಗ್ರಹ ಮಾಡ್ವದಕೆ ಇಂದ್ರಿಯ ಚಲಿಸದೆ ಮನ ಧೃಡವಾಗಲು ಹಿಂದಿನ ಹಂಬಲ ತ್ಯಜಿಪುದಕೆ 7 ಮಧ್ವಶಾಸ್ತ್ರದ ಸಾರತತ್ವ ಮನ ಶುದ್ಧಿಯಗೈಸುತ ಸುಖಿಪುದಕೆ ಶುದ್ಧರಾದ ಶ್ರೀ ಗುರು ಕರುಣವು ಅನಿ- ರುದ್ಧನ ಹೃದಯದಿ ತೋರ್ವದಕೆ 8 ನೇಮದಿ ದ್ವಾದಶ ನಾಮಧಾರಣೆ ಹರಿ ನಾಮದ ದೇಹ ಬೆಳಗ್ವದಕೆ ಕಾಮಕ್ರೋಧವ ಬಿಡುವುದು ವಳಗಿನ ಶ್ರೀ ಮನೋಹರನನು ಕಾಂಬುದಕೆ 9 ಹೊರಗಿನ ವಸ್ತು ದೃಷ್ಟಿಸುವುದು ಶ್ರೀ ಹರಿ ವರ ವಿಶ್ವರೂಪವ ತಿಳಿವುದಕೆ ವರ ವಿಶ್ವರೂಪಧ್ಯಾನದಿಂದ ತನ್ನ ವರ ಬಿಂಬನ ಕಂಡು ನಲಿವುದಕೆ 10 ಅರಗಣ್ಣ ಮುಚ್ಚುವ ಅಭ್ಯಾಸಗಳೆಲ್ಲ ಸ್ಥಿರಮನವಾಗುವ ಕಾರಣಕೆ ಸ್ಥಿರಮನ ಶ್ರೀ ಹರಿ ದಯ ಮಾಡಲು ನೇತ್ರ ತೆರೆಯದೆ ಬಿಂಬನ ಕಾಂಬುದಕೆ 11 ಶಾಸ್ತ್ರದಿ ಪೇಳುವ ಧ್ಯಾನ ಪ್ರಕರಣವು ಶ್ರೋತ್ರದಿ ಕೇಳುತ ತಿಳಿವುದಕೆ ಗಾತ್ರದಿ ಶ್ರೀ ಗುರು ಕೃಪೆ ಮಾಡಲು ವಳ ನೇತ್ರದಿ ಸರ್ವವು ಕಾಂಬುದಕೆ 12 ಪಕ್ಷಮಾಸ ವ್ರತ ಪಾರಾಯಣ ಅಪ- ರೋಕ್ಷ ಪುಟ್ಟಲು ದಾರಿ ತೋರ್ವದಕೆ ಶಿಕ್ಷ ರಕ್ಷಕರಾದ ಗುರುಕರುಣವು ಅಪ- ರೋಕ್ಷ ಪುಟ್ಟಿಸಿ ನಿಜವರಿವುದಕೆ13 ಪರಿ ಜನರನು ಸೇವಿಸುವುದು ತನ್ನ ಪರಮಾರ್ಥತೆ ದೂರಾಗ್ವದಕೆ ಗುರುಚರಣವ ಸೇವಿಸುವುದು ಶ್ರೀ ಹರಿ ಅರಘಳಿಗಗಲದೆ ಪೊರೆವುದಕೆ 14 ಡಾಂಭಿಕ ಸಾಧನವೆಲ್ಲವು ಶ್ರೀ ಹರಿ ಡಿಂಬದೊಳಗೆ ಮರೆಯಾಗ್ವದಕೆ ನಂಬಿ ಶ್ರೀ ಹರಿ ಗುರು ಚರಣವ ಪೊಗಳ್ಪದು ಡಿಂಬದೊಳಗೆ ಹರಿ ಕಾಂಬುದಕೆ15 ಕರ್ಮ ವೈರಾಗ್ಯಗಳೆಲ್ಲವು ಪುಟ್ಟಿಸಲೂ ಭಕ್ತಿ ಜ್ಞಾನಕ್ಕೆ ಪುಟ್ಟಲು ಭಕ್ತಿ ಜ್ಞಾನ ಪಾಂಡುರಂಗ ವಿಠ್ಠಲನೊಬ್ಬನ ಪಿಡಿವುದಕೆ 16 ಯಾತ್ರೆ ತೀರ್ಥ ಚರಿಪುದು ಶ್ರೀ ಹರಿ ತನ್ನ ಗಾತ್ರದಲ್ಲಿರುವನೆಂದರಿವುದಕೆ ಗಾತ್ರವೆ ಕ್ಷೇತ್ರವೆಂದರಿತ ಮೇಲೆ ಸ ರ್ವತ್ರದಿ ವಿಠಲನ ಕಾಂಬುದಕೆ17 ಎಂತೆಂತೋ ಮಾರ್ಗಗಳರಸುವುದು ಚಿಂತನೆಗೆ ಹರಿ ನಿಲ್ವುದಕೆ ಚಿಂತನೆಗೆ ಹರಿ ನಿಂತ ಮೇಲೆ ತಾನು ಶಾಂತನಾಗಿ ಜಡನಾಗ್ವದಕೆ 18 ಹೊರಗಿನ ಸಂಸ್ಕಾರಗಳೆಲ್ಲವು ತನ್ನ ವಳಗಿನ ಸಂಸ್ಕಾರ ತೆರೆವುದಕೆ ವಳಗಿನ ಸಂಸ್ಕಾರ ತೆರೆದಮ್ಯಾಲೆ ತನ್ನ ಇರವರಿತು ಸುಖ ಸುರಿವುದಕೆ19 ಸಾಸಿರ ಜನ್ಮದ ಸಾಧನಗಳು ಹರಿ ದಾಸನಾಗಿ ತಾನು ಮೆರೆವುದಕೆ ದಾಸನಾದ ಮೇಲೆ ಕ್ಲೇಶಕೆ ಸಿಲುಕದೆ ಶ್ರೀಶನ ಹೃದಯದಿ ಕಾಂಬುದಕೆ 20 ಸಾರತತ್ವವನು ಅರಿವುದು ಗುರು ಮಧ್ವ- ಚಾರ್ಯರ ಮಾರ್ಗವ ಪಿಡಿವುದಕೆ ಪ್ರೇರಕ ಗೋಪಾಲಕೃಷ್ಣವಿಠಲ ಮನ ಸೇರಲು ಕಂಡು ತಾ ನಲಿವುದಕೆ 21
--------------
ಅಂಬಾಬಾಯಿ
ಎಲ್ಲಿ ತಿಳಿವುತದೆ ನಿಮ್ಮಾಟದ ಸುಧ್ಯೇಯ ಧ್ರುವ ನಾಲ್ಕಾರು ಹದಿನೆಂಟು ಮಂದಿಯ ಕೇಳಿದೆ ಸಿಲುಕನೆಂದವರಾಡುದೆ ಮಲಕು ಎಂಬತ್ತು ನಾಲ್ಕು ಲಕ್ಷ ನೂ ಸೋಸಿದೆ ನಿಲುಕಿ ನಿನ್ನ ನೆಲೆ ನಿಜವು ದೋರದೆ 1 ನಾನಾ ಮತ ನಾನಾ ಮಾರ್ಗ ಶೋಧಿಸಿದೆ ಖೂನ ನಿನ್ನದು ತಿಳಿಯದೆ ನಾನು ನಾನೆಂಬವರಿಗೆ ಅನುಸರಿಸಿದೆ ನೀ ನಿಹ ಸ್ಥಳದ ಗಾಳಿಯು ಬೀಸದೆ 2 ಬೀಳದವರ ಕಾಲುಬಿದ್ದು ನಾ ಕೇಳಿದೆ ಸುಳಹು ನಿನ್ನದು ತೋರದೆ ತಲೆ ಕೆಳಗನೆ ಮಾಡಿ ತಪಸವ ಮಾಡಿದೆ ಒಲವು ನಿಮ್ಮದು ಎಂದಿಗೆ ಅಗದೆ 3 ಬಡದ ಬವಣೆ ಬಟ್ಟು ಹುಡುಕದಾ ಹುಡುಕಿದೆ ತುಡಕು ನಿಮ್ಮದು ತಿಳಿಯದೆ ಒಡನೆ ಎನ್ನೊಳು ಬಂದು ಅಡಕವ ಹರಿಸಿದೆ ಬಡವನಾಧಾರೆಂದು ಕೈ ಬಿಡದೆ 4 ಮನೋನ್ಮನವಾಗಿ ಕಂಗಳ ತೆರೆಸಿದೆ ಸ್ವಾನುಭವನೇ ಬೀರಿದೆ ದೀನಮಹಿಪತಿ ಮನೋಹರಣ ಮಾಡಿದೆ ಅನುದಿನ ಘನಸುಖದೊಳಗಿರಿಸಿದೆ 5
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಎಲ್ಲಿ ನೋಡಿದರು ಹಾನಂತೆ ಹರಿ ಎಲ್ಲ ಜಗವ ತುಂಬಿಹನಂತೆ ಪ ಮಣ್ಣುಮುಳ್ಳು ಎಲ್ಲ ಬಿಡದೆ ಸೋಸಿಲಿನೋಡಲಲ್ಹಾನಂತೆ ಅ.ಪ ಸಾಗರ ನಿಲಯ ತಾನಂತೆ ಕೂಗಲು ಕಂಬಂದಿ ಬಂದನಂತೆ ನಾಗಶಾಯಿದ್ದ್ವೊಯ್ಕುಂಠಂತೆ ಬೇಗನೆ ಸರಸಿಯಲ್ಲಿದ್ದನಂತೆ ನೀಗಿ ಚಂಚಲಮನ ಬಾಗಿ ವಿಚಾರಿಸಲು ಯೋಗಿ ವಂದ್ಯ ಎಲ್ಲಿಲ್ಲಂತೇ 1 ದ್ವಾರಕಾಪುರದಲ್ಲಿ ಮನೆಯಂತ ಕ್ರೂರನ ಸಭೆಗೊದಗಿದನಂತೆ ಸಾರನಿಗಮಕಗೋಚರನಂತೆ ಪೋರಗೆ ದೊರೆತ್ವವಿತ್ತನಂತೆ ಸಾರಮನದ ವಿಕಾರವಳಿದು ತಿಳಿ ಅ ಪಾರಮಹಿಮ ಯಾರೆಲ್ಲಂತೇ 2 ಘೋರರಕ್ಕಸ ಸಂಹರನಂತೆ ಸೇರಿಭಕ್ತರ ಸಲಹುವನಂತೆ ಮೂರು ಲೋಕಗಳ ದೊರೆಯಂತೆ ಸಾರಥಿತನ ಮಾಡಿದನಂತೆ ಮೂರುಲೋಕದ ಧಣಿ ಓರ್ವ ಶ್ರೀರಾಮನೆ ಆರಾಧಿಪರಲ್ಲಿ ಹಾನಂತೆ 3
--------------
ರಾಮದಾಸರು
ಎಲ್ಲಿ ಮತಿಯು ಎಲ್ಲಿ ಗತಿಯು ಎಲ್ಲವೀಗ ಹುಸಿಯು ಕಂಡ್ಯಎಲ್ಲವಿಹುದು ಬಹುದು ಬಹಳ ಸಂಸ್ಕಾರಿಯೊಬ್ಬಗೆ ಪ ಭಕ್ತಿಯನ್ನು ಮಾಡುವರು ಹಲವು ಮಂದಿ ನೋಡಲಿಕೆಭಕ್ತಿಯಿಹುದು ತಾನೀಗ ಅದರೊಳೊಬ್ಬಗೆಮುಕ್ತಿಮಾತ ಕೇಳುವರು ಮುಗಿದ ಕೈಗಳಿಂದಮುಕ್ತಿ ಮೇಲೆ ಚಿತ್ತವಿಹುದು ಅದರೊಳೊಬ್ಬಗೆ1 ಕಣ್ಣುಗಳ ಮುಚ್ಚಿಕೊಂಡು ನೋಡವರು ಆತ್ಮನಕಣ್ಣು ಕುಳಿತು ಕಾಣಬಹುದದರೊಳೊಬ್ಬಗೆಹುಣ್ಣಿಮೆಯ ಬೆಳಕಿನಂತೆ ಹರಹಿಯಿಹುದು ಎಂಬರುತಣ್ಣನೆಯ ಕಳೆಯು ತೋರುವುದದರೊಳೊಬ್ಬಗೆ2 ಜ್ಞಾನಗಳ ಹೇಳುವರು ಜ್ಞಾನಿಗಳೊ ಎಂಬಂತೆಜ್ಞಾನ ನಿಶ್ಚಯಹುದು ತಾನು ಅದರೊಳೊಬ್ಬಗೆಮಾನನಿಧಿ ಚಿದಾನಂದ ತಾನೀಗ ಎನುತಲಿಹರುತಾನೆ ತಾನಾದ ನಿಜವು ಅದರೊಳೊಬ್ಬಗೆ 3
--------------
ಚಿದಾನಂದ ಅವಧೂತರು
ಎಲ್ಲಿ ಸುವರಗಳು ಇಲ್ಲದಿದ್ದರೆ ಇವ | ನಲ್ಲದೆ ಮತ್ತಾರಾ | ವಲ್ಲಿ ಕಾಣದೆ ಪೋದೆ ಪ ಸಾರುವ ಶರೀರ ಧರಿಸಿ ಬಾಳಿದ ಮಹಾ | ಭಾರವಾಗಿದ್ದ ಪಾಷಾಣವ ಪೊತ್ತವ | ಗೊರುವ ನೆಲನಂದು ಕಾಷ್ಟದಿಂದಲಿ ಬಂದ | ಹಾರುವನಾಗಿ ತಿರದುಂಡು ಕುಲಧರ್ಮ | ಮೀರಿ ನಡೆದವ ಉಪವಾಸದವÀನಿಂದ | ಊರ ಎಂಜಲಿಗೆ ಹೇಸದೆ ಓಡಾಡಿದವ | ನಾರಿಯರ ವ್ರತ ಕೆಡಿಸಿ ರಾವುತನಾಗಿ | ಕಾಯ | ಆರಿಂದ ಜನಿತನಿವ ನೋಡಲಾಗಿ | ಧಾರುಣಿಯೊಳಗಿದ್ದವ ಸರ್ವರನ್ನ | ಮೀರಿ ನಡೆತÀಲಿದ್ದವ ಇವಗೆ ಮೆಚ್ಚಿ | ಧಾರಿ ಎಂದ ನಿನ್ನ ಮಗಳೆ ಬೇಕೆಂದವ 1 ಬಿರಿಗಣ್ಣೆನವನಿವ ಆವಾವ ಕಾಲಕ್ಕೆ | ಶಿರವಾಗಿ ಕೊಂಡಿಪ್ಪ ಶೀಲ ಸ್ವಭಾವದಿ | ಕೊರಳ ತಿರುಹಲಾರ ಕರುಳ ಮಾಲೆಯುವ | ಪರರ ಬಾಗಿಲ ಕಾವರಾಜ್ಯವಿಲ್ಲದವ | ಸುರರ ಕೋತಿಯ ಮಾಡಿ ಕುಣೆಸಾಡಿದವನಿವ | ದಿಗಂಬರನಾಗಿ ಚರಿಸಿದೆನೆಂದು ಕೋಪದಿಂದ | ಕರವಾಳ ಹಸ್ತದವ || ಪರಾಕ್ರಮ ಉರಗನ್ನ ಮೇಲಿದ್ದವ ಇವನ ಖೂನ | ಅರಿಯನು ದಾವದಾವ | ಭೇದವನಿಕ್ಕಿ | ತಿರುಗಿಸುವನು ಲೋಕವ ವಂಚಕನಿಗೆ | ಪರಮ ಪ್ರೀತಿಯಿಂದ ಕೊಟ್ಟದನೆಣಿಸುವ 2 ತನ್ನ ಜಾತಿಗಳನ್ನು ನುಂಗುವನವನಿವ | ಬೆನ್ನ ಮೇಲಿನ ಒಂದೆ ಬುಗುಟಿ ಪಲ್ಲಿನ ತುದಿ | ಮಣ್ಣು ತೋರುವನಿವ ವಿಕಾರ ಮೊಗದವ | ಕಣ್ಣು ಚುಚ್ಚಿದ ಒಬ್ಬ ಹಾರವನ್ನು ನೋಡಿ | ಹೆಣ್ಣಿಗಭಯವಿತ್ತು ಕಾದಿ ಸೋತವನಿವ | ರಣ್ಯ ವಾಗನಿವ ರಣದೊಳೋಡಿದನಿವ | ಅನ್ಯಾಯ ಪೇಳಿದ ನಂಬಿದವರಿಗೆ | ಮುನ್ನೆ ಕುದುರಿಯೇರಿದಾ ಇವನು ತಾನೆ | ಅನಂತ ಮಾಯಮೋದಾ ಎಂಥವರಲ್ಲಿ | ಪಾದ ಇಟ್ಟು ಇದ್ದು | ಕಣ್ಣಿಗೆ ಪೊಳಿಯೆ ಖೇಡ ಬಡಿಸವಂಥ | ಬಣ್ಣಾಣಿಗಾರನು ಬಂದೆಲ್ಲಿ ದೊರಕಿದಾ 3 ಮೀಸಿ ಕಟ್ಟಿಸಿಕೊಂಡಿವನೀವ ಪ್ರಳಯಾದಿ | ದ್ವೇಷವನಿಕ್ಕಿದ ದೇವದಾನವರಿಗೆ | ಏಸು ದಿವಸವಾಗೆ ಅದೋ ದೃಷ್ಠಾಯವನಿವ | ಭಿಕ್ಷೆ ಪಾತ್ರಿಯವ | ಬಿಗಿಯನೆ ಮುರದು ಬಿಟ್ಟವನಿವ | ಕೊಂಡ ಲಜ್ಜೆಗೇಡಿ | ಘಾಸೆತನಕೆ ಶೂರನು ಒಮ್ಮ್ಯಾದರು || ಮಾಡುತಲಿಪ್ಪನು ಇವನು ಹೆಣ್ಣು | ವೇಷ ಧರಿಸಿಕೊಂಬನು ಕೇವಲ ಅವ | ಕಾಶ ಯಿಲ್ಲದ ಸ್ಥಾನದಲ್ಲಿ ವೊಂದಿಪ್ಪನು 4 ದೃಷ್ಟಿ ಮುಚ್ಚದಿಪ್ಪನವನಿವ ಆವಾಗ | ಬೆಟ್ಟವೆ ಗತಿ ಎಂದು ಸೇರಿಕೊಂಡವನಿವ | ದಿಟ್ಟ ಕಠೀಣ ಕಾಯದವನಿವ ಎದುರಿಗೆ | ಎಷ್ಟಗಲ ಬಾಯದೆರೆದಿಪ್ಪ ಪಾದದ | ಬಟ್ಟಿನಿಂದಲಿ ನೀರು ಸುರಿಸುವ ಬಗೆ ಉಂಟು | ಕುಟ್ಟಿ ಮಾತೆಯ ಶಿರ ಕೆಡಹಿದನಿವ ಜಡೆ | ಗಟ್ಟಿಪ್ಪ ಚೋರನಾಯಕ ಮೌನಪ್ರಾಂತಕ್ಕೆ | ದುಷ್ಟನೆನಸಿ ಮೆರೆವ ಹತ್ತದೆಂದು || ಅಟ್ಟಿಬಿಟ್ಟರೆ ಬರುವ ತನ್ನೆಲ್ಲಿಗೆ | ಕೆಟ್ಟವರನ ಕರೆವ ಉತ್ತಮರನ್ನು | ಪಟ್ಟದ ರಾಣಿಗೆ ಪೇಳದೆ ಜವಾ | 5 ಜಲದೊಳಗಾಡುವನಿವ ಹೊರೆ ಹೊತ್ತು | ಕಲೆಪರಟಿಯಾಗಿ ತಿರುಗುವನಿವ ಮೂಗಿಲ್ಲಿ | ಳಿದು ಬಂದವನಿವ ಗೊಗ್ಗರÀ ಧ್ವನಿಯವ | ತಲುವರಿ ಇವ ತಾನೆ ಶಿಷ್ಯಗೆ ವಿದ್ಯವÀ | ಕಲಿಸಿ ಶ್ಯಾಪವ ಕೊಟ್ಟನವನಿವ ವೈರತ್ವ | ಬಳಸದವನ ಮೇಲೆ ಕಲ್ಲು ಹಾಕಿಸಿದವ | ಬಲು ಭಂಡುಗೋವಳ ಅನ ಬರದದು ಬಿಟ್ಟು | ಕಲಿಯಾಗಿ ಓಡಾಡಿದ | ಹೆರರಿಗಾಗಿ ಸ್ತಳ ದ್ರವ್ಯವ ಮಾಡಿದಾ ದಾನವರಿಂದ | ಬಲವಾವನು ಬೇಡಿದಾ ಬೊಮ್ಮಾಂಡದ | ಒಳಗೆ ಹೊರಗೆ ಕಾಡಿದಾ | ಬಹು ಠಕ್ಕನು | ತಿಳಿದು ತಿಳಿದು ಈರ್ವರಿಗೆಯಲ್ಲಿ ನೋಡಿದಾ 6 ಸವಿ ನೋಡದದರ ರೂಪನಾದವನಿವ | ಅವಯವಂಗಳೆಲ್ಲ ಮುದುರಿಕೊಂಡಿಪ್ಪಾನಿವ | ಅವನಿಗೋಡಿ ಪೋದನಿವ ಮೃಗವಲ್ಲ ಮಾ | ನವನಲ್ಲ ವದ್ಭೂತನಾಗಿ ತೋರುವನಿವ | ಬವರಿಗಾದವನಿವ ತನ್ನ ಕಾಲಕೆ ತಪ್ಪ | ಭವನವಿಲ್ಲದೆ ದಿನ ಕಳೆದವ ಯಾಗದ | ನ್ನವನುಂಡು ನಾನಾ ಶಸ್ತ್ರವನ್ನು ನುಂಗಿದವನಿವ || ಯುವತಿ ಧರಿಸಿದ ಸಂಗಾ ಹಾ | ರುವ ಪಕ್ಕಿ ದಿವಸ ದಿವಸ ತುರುಗಾನಾಗಿಪ್ಪದು | ಅವಧೂತ ಮಾರ್ಗ ತುಂಗಾ | ಪರ್ವತವನು | ಲವಕಾಲಬಿಡದೆ ಬಾಯಲಿ ಕಚ್ಚಿದ ರಂಗಾ 7 ಮಾರಧ್ವಜನನವತಾರ ತಾಳಿದನಿವ | ನೀರೋಳಗಡಿಗಿಪ್ಪ ಎರಡು ಭಾಗಗಲ್ಲಿ | ಕೋರೆಗಳದ್ದಿ ಮಸÀದು ಮತ್ಸರಿಸುತಿಪ್ಪ | ಚೀರಿ ಕೂಗುವ ಮಹಾ ಬೊಮ್ಮಾಂಡವಡದಂತೆ | ಮೂರಡಿಯೊಳಗೆ ತ್ರಿಲೋಕವÀನಿಟ್ಟವ | ಬೇರು ಕಡುವನಂತೆ ಕೊಡಲಿಕಾರನಿವ | ಆರೋಗಣಿಗೆ ಶಬರಿಯ ಹಣ್ಣು ಮೆದ್ದವ | ಬುದ್ಧ ಉದ್ದಂಡಾ ಏಕನು ಇವ || ಕೊಂಡ ಬಹು ಕಡೆ | ಬೀರಿದನ್ನವ ಕೈಕೊಂಡಾ ಒಂದು ತುತ್ತು | ಆರಗೀಯದಲೆ ಉಂಡಾ ಇವನನ್ನು | ಹಾರೈಸಿದವರಿಗೆ ಏನು ಲಕ್ಷ ಹೆಚ್ಚಳ ಕಂಡಾ 8 ಉದಕ ಬಿಟ್ಟರೆ ಬದುಕಲಾರದವನಿವ | ಎದೆಗಟ್ಟಿಯವನಲ್ಲಿ ಮುಟ್ಟಿ ನೋಡಿದರೆ | ಪೊದೆ ಪೊದರಿನೊಳು ಸೇರಿ ಕೊಂಡವನಿವ | ಎದುರಿಗೆ ಒಬ್ಬರ ಬರಗೊಡದವ ತನ್ನ | ಪದದ ಕೆಳಗೆ ಕೊಟ್ಟವನ ಇಟ್ಟವನಿವ | ಮದಕಾವ ಮಾಡಿ ತನ್ನೊಳು ತಾನೆ ಸೋತವ | ಸುದತಿಯುಳಟ್ಟಿದ ಪಾರ್ಥಗಾಳಾದ | ಚದುರ ಕ್ರೂರರಿಗೆ ಕ್ರೂರಾ ನಿರಂತರ | ಉದಧಿ ಎಂಬೊದೆ ಮಂದಿರಾ ಇವಗೆ ನೋಡು | ಬದರಿ ಗಿಡವೆ ಆಸರಾ ಏನೆಂಬೆನೊ | ಕದರು ಮೋರಿಯೆ ಶೃಂಗಾರ ತನ್ನಯ ಗುಣ | ಮೊದಲಿದೆ ಕಡೆ ಎಂದು ಆರಾರಿಗೆ ತೋರಾ 9 ಚಪಲಾಕ್ಷದವನಿವ ಚಲುವನೆಂತೆಂಬೆನೆ | ವಿಪರೀತ ನಿದ್ರೆ ಮಾಡುವನಿವ ಕರೆದರೆ | ಕುಪಿತವಾಗುವ ಕಿಡಿ ಉಗುಳುವನಿವ | ಕಪಟದಲ್ಲಿ ಗಟ್ಟಿ ತಲೆ ಹೊಡಕ ರಾಮ | ಕಪಿಯ ಮೋಸದಿಂದ ಕೆಡಹಿದ ಮಾವನ್ನ | ನಿಪತನ ಗೈಸಿದ | ದೋಷಕ್ಕೆ ಶಂಕಿಸಾ | ತ್ರಿಪುರವ ಕೆಡಸಿದ ಹರಗೆ ಸಾಯುಕವಾಗಿ | ಅಪಕಾರಿ ಝಗಳಗಂಟ ಒದಿಸಿಕೊಂಡ || ವಿಪುಳದೋಳೇನು ಒಂಟಾ ಉಚ್ಚರಿಸುವೆ | ಕೃಪಣ ಜನರಿಗೆ ನೆಂಟಾಸನಕ್ಯಾದರ | ಶಪತದಲ್ಲಿಗೆ ಪೊರವಂಟಾ ಉತ್ತಮರಿಂದ | ಉಪದೇಶವಿಲ್ಲದ ಬಾಳುವ ಮಹಾತುಂಟಾ 10 ಇವರೀರ್ವರಿಗೆ ಈಡೆ ತಪ್ಪಿಸಲು ಪದ್ಮ | ಭವಗಳವಲ್ಲವು ನಿನ್ನ ಕುವರಿಗೆ | ಸವಿಗಾರ ಇವನಲ್ಲದೆ ಮತ್ತಾವಾವಾ | ವಿವರಿಪೆ ಎಂಥವರಕೆ ಅಂಥ ಕನ್ನಿಕೆ | ಹವಣವಾಗಿದೆ ಸತ್ಯ ಸಂಕಲ್ಪವೆ ಸಿದ್ಧಾ | ಶ್ರವಣಾದಿ ಇಂದ್ರಿಂಗಳಿಗಗೋಚರಾ | ಸ್ಥವಿರ ಯೌವನ ಬಾಲ ಒಂದಾದರಿವನೆಲ್ಲಾ | ನವನವ ಬಗೆ ಸುಕಾಯಾ || ಮೋಹನ್ನ ಯಾ | ದವರಾಯಾ ಶಿರಿ ವಿಜಯವಿಠ್ಠಲ ಕೃಷ್ಣ | ಶಿವಕುಲ್ಲ್ಯ ಪುರಿ ನಿಲಯಾ ಭಕ್ತರ ಪ್ರೀಯಾ | ಮಾಯಾ ಜಗದ್ಗುರು | ಪವನವತಾರ ಶ್ರೀ ಆನಂದ ಮುನಿಗೇಯಾ11
--------------
ವಿಜಯದಾಸ
ಎಲ್ಲಿ ಹುಟ್ಟಿದರೇನು ಎಲ್ಲಿ ಮಡಿದರೇನು ಸೊಲ್ಲು ಸೊಲ್ಲಿಗೆ ಬರುತಿರಲು ಪ ಇಹವು ಎಂಬತ್ತನಾಲ್ಕು ಲಕ್ಷ ಜೀವ ರಾಶಿಯಲ್ಲಿ ಮರಳಿ ಮರಳಿ ಹುಟ್ಟಿ ಸತ್ತು ಬರುವ ಜನ್ಮದೊಳಗೆ ಜ್ಞಾನವಿರಲಿ ಕಲ್ಲಿ ಹರಿಯ ಸ್ಮರಣೆ ನಿರುತ ವಿರಲು ಬಂದರದು ಆನಂದ 1 ನೊರಜು ಕೀಟ ಸರಿಸೃಪಾದಿ ಕ್ರಿಮಿ ಮೃಗಾದಿ ಪಕ್ಷಿನಿಚಯ ತರು ಲತಾದಿ ಸಕಲ ಜೀವ ಜಂತು ಜ್ಞಾನ ವಿರಲಿ ಕಾವ ಜನ್ಮದಲ್ಲಿ ಬಂದರೇನು ಅಳಿದರೇನು ಜಿಹ್ವೆ ಕೊನೆಯೊಳಿರಲಿಕದು ಆನಂದ 2 ಕರ್ಮ ವಶದಿ ಕೂಚುಮಾಡಿ ಜನ್ಮಕಿಕ್ಕಿ ಚಾಚಿ ಬರಗುತಿಹಳುಮಾಯೆ ಈಚ - ರಾಚರಂಗಳೆಲ್ಲ ಬ್ರಾಹ್ಮವೆಂದು ತಿಳಿದವರಿಗೆ ಕೀಚಕಾರಿ ಕೋಣೆ ಲಕ್ಷ್ಮೀಪತಿಯ ಸ್ಮರಣೆಯೊಂದು ಆನಂದ 3
--------------
ಕವಿ ಪರಮದೇವದಾಸರು
ಎಲ್ಲಿಗ್ಹೋಗಿ ತಡಮಾಡಿದ್ಯೋ ಫುಲ್ಲಲೋಚನ ಕೃಷ್ಣ ನೀ ಎಲ್ಲಡಗಿದ್ಯೊ ಧ್ರುವ ಬಲ್ಲವರಿಗೆ ಬಲ್ಲತನದೋರ ಹೋಗಿದ್ಯೊ ಅಲ್ಲಿ ಅವರ ಸಹಕಾರ ನೀನಾದ್ಯೊ ಸುಲ್ಲಭವಾಗಿ ಜ್ಞಾನಕೆ ನೀ ಸಿಲುಕಿದ್ಯೋ ಒಲ್ಲದ್ಹಾಂಗ್ಹೋಗಿ ಎಲ್ಲರಿಗಾಗಿದ್ಯೊ 1 ಙÁ್ಞನಿಗಳಿಗೆ ಙÁ್ಞನಸಮುದ್ರ ನಾಗಿದ್ಯೊ ಧ್ಯಾನಮಾಡುವರ ಧ್ಯಾನವೆ ಅಗಿದ್ಯೊ ಮುನಿಜನರೊಡನೆ ಮಾನಸ ಹಂಸನಾಗಿದ್ಯೊ ಖೂನದೋರಲು ಹೋಗಿ ನೀನೆ ಆಗಿದ್ಯೊ 2 ಧೃಢಭಕ್ತರೊಡನೆ ಭಿಡಿಯೊಳಗಾಗಿದ್ಯೊ ಕಡಿಗಾಗದ್ಹಾಂಗ ಕೈಯೊಳಗಾಗಿದ್ಯೊ ಎಡಬಲಕವರೆಂದು ಬಿಡದ್ಹಾಂಗಾಗಿದ್ಯೊ ಒಡಲ ಹೊಕ್ಕವರ ಒಡಿಯನಾಗಿದ್ಯೊ 3 ಪ್ರೇಮ ಉಳ್ಳವರ ಪ್ರೀತಿಯೊಳಗಾಗಿದ್ಯೊ ಸ್ವಾಮಿತನದಲಿ ಸಮೀಪನಾಗಿದ್ಯೊ ಕಾಮ ಪೂರಿಸಲಿಕೆ ನೇಮವ ಪಿಡಿದ್ಯೊ ಮಾಮನೋಹರ ನೀ ಸುಗಮವಾಗಿದ್ಯೊ 4 ಇಂದು ನೆನಪಾಯಿತೆಂದು ಓಡಿ ನೀ ಬಂದ್ಯೊ ಚಂಚವಾಗೆನ್ನೊಳಗಾದ್ಯೊ ನೀ ಬಂದ್ಯೊ ಕಂದಮಹಿಪತಿಗನುಭವದೋರ ನೀ ಬಂದ್ಯೊ ತಂದೆ ಸದ್ಗುರು ಅನಂದವ ತಂದ್ಯೊ 5
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಎಲ್ಲಿಂದ ಬಂದಿದ್ದೆಲೆ ಖೋಡಿ ನೀ ನೆಲ್ಲಿಗೆ ಹೋಗ್ತಿದ್ದಿ ತ್ವರೆಮಾಡಿ ಪ ಕಲ್ಲುಮುಳ್ಳೆನ್ನದೆ ಮುಂದೆ ನೋಡಿ ಜರ ನಿಲ್ಲದೆ ಹೋಗ್ತಿದ್ದಿ ಓಡೋಡಿ ಅ.ಪ ಏಳುಗೇಣಿನ ಕುದುರೇರಿದ್ದಿ ಭವ ಮಾಲೆ ಕೊರಳಿಗೆ ಹಾಕಿದ್ದಿ ಮೂಲ ಲಗಾಮವೆ ತೆಗೆದಿದ್ದೀ ನೀ ಬೀಳುವ ಎಚ್ಚರ ಮರೆತಿದ್ದಿ 1 ಶೀಲ ಸನ್ಮಾರ್ಗವ ಬಿಟ್ಟಿದ್ದಿ ಮಹ ಕಾಳು ಕತ್ತಲೆಹಾದ್ಹಿಡಿದಿದ್ದಿ ಕಾಲನಾಳಿನ ಕೈಗೆ ಸಿಗುತಿದ್ದಿ ಬಹು ಗೋಳಿನೊಳಗೆ ಹೋಗಿ ಬೀಳುತಿದ್ದಿ2 ಅಸ್ಥಿರ ಕುದುರೆ ಹತ್ತಿದ್ದಿ ಬಲು ಮಸ್ತಿಲಿಂದ ಕಣ್ಣು ಮುಚ್ಚಿದ್ದಿ ಪುಸ್ತಿಯಿಲ್ಲದ ದಾರ್ಹಿಡಿದಿದ್ದಿ ಮುಂದೆ ಸ್ವಸ್ಥತೆ ನೀ ಹ್ಯಾಂಗೆ ಪಡೀತಿದ್ದಿ 3 ಯಾರನ್ನ ಬೇಡಿ ಬಂದಿದ್ದಿ ನೀ ನಾರಸೇವೆ ಕೈಕೊಂಡಿದ್ದಿ ದಾರಿ ತಪ್ಪಿದಾರ್ಹಿಡಿದಿದ್ದಿ ಸುವಿ ಚಾರ ಪಥವ ಧಾರೆರೆದಿದ್ದಿ 4 ಬಂದಕಾರ್ಯವನು ತೊರೆದಿದ್ದಿ ಮನ ಬಂದಂತೆ ಕುಣಿಕುಣಿದಾಡುತಿದ್ದಿ ತಂದೆ ಶ್ರೀರಾಮನ ಮರೆತಿದ್ದಿ ಈ ಬಂಧುರಸಮಯ ವ್ಯರ್ಥ ಕಳೀತಿದ್ದಿ 5
--------------
ರಾಮದಾಸರು
ಎಲ್ಲಿರುವುದೋ ಸಿರಿವಲ್ಲಭನೆ ನಿನ ಗಲ್ಲದ ಕಾರ್ಯಗಳು ಪ ಕಲ್ಲಾಗಿದ್ದ ಅಹಲ್ಯಯೆ ನಿಮಿಷದಿ ಚಲ್ವೆಯ ಮಾಡಿದ ನಲ್ಲ ತ್ರಿಭುವನದಿ ಅ.ಪ ಶರಧಿಯೆ ವಾಸವು ಗರುಡನೆ ವಾಹನ ಉರಗಪತಿಯೆ ನಿನ್ನ ಪರಿಯಂಕ ಶರಧಿ ಕುಮಾರಿಯು ವರರಮಣಿಯು ಸುರ ವೀರರು ನಿನಗೆ ಕಿಂಕರರಾಗಿರಲು 1 ಕಂಬದಿ ಜನಿಸಿದೆ ಅಂಬಿಗರವಳನು ಸಂಭ್ರಮದಲಿ ನಿನ್ನ ಜನನಿಯೆನಿಸಿದೆ ಅಂಬುಜ ಮಿತ್ರನ ತನಯಗೆ ಮರುತನ ಬೆಂಬಲವರಿಯುತ ಉಳಿಸಿದೆ ಗೆಲಿಸಿದೆ 2 ಅಮಿತ ಕಾರ್ಯಗಳ ಕ್ರಮದಲಿ ನಡಿಸಿದೆ ವಿಮಲ ತನೋ ಸುಮನಸರೊಡೆಯನೆ ಕ್ಷಮಿಸಿ ಎನ್ನಯ ಮೋಹ ತಿಮಿರವ ತೊಲಗಿಸೊ ಸುಮನ ಪ್ರಸನ್ನನೆ 3
--------------
ವಿದ್ಯಾಪ್ರಸನ್ನತೀರ್ಥರು
ಎಷ್ಟು ಚಲುವರೋ ರಾಮಕೃಷ್ಣರೆಷ್ಟು ಚಲುವರೊಎಷ್ಟು ಚಲುವರಿವರ ಶಿರದಿ ಬಿಟ್ಟ ಜುಲುಪಿ ಕೇಶ ಚಂದ ಪುಟ್ಟ ಬಾಲಕಾರು ಕೂಡಿ ಗೋಷ್ಟದೊಳಗೆ ಚಲಿಸಿದಾರೊ ಪ ನಿನಗು ಇದ್ದವೋ ಈ ಜುಲುಪಿ ನಿನ್ನನುಜಗಿದ್ದವೊಮುನಿಯ ಕೂಡಿ ಪೋಗುವಾಗ ವನದಿ ನಾಲ್ಕು ಹತ್ತು ವರುಷಜನತೆಗಾದ ನಯನ ಸುಖದ ಘನತೆ ನೀನು ತಿಳಿದು ಪೇಳೋ 1 ಬಹಳ ಶೂರನೋ ತಥೋಪಿ ಧೈರ್ಯಶೀಲನಾಮನೋಶೂಲ ಪಾಣಿ ಧನದ ಭೂಮಿ ಪಾಲು ಸಾಧಿಸಿ ಮುರಿದು ನಿಂತಬಾಲಕೃಷ್ಣ ಶತ್ರುಗಣದಿ ಬಾಲೆಯೆತ್ತಿಕೊಂಡು ಪೋದ 2 ಕಾಲ ಎತ್ತಜೀವ ಎತ್ತಕಾಯಪುತ್ರ ವೃತ್ತಿ ಮಾತೆ ಗುರು ಸುಪಾತ್ರರನ್ನು ಸುಖಿಸಿದಾರು 3 ಪಿತೃನಾಗ್ಞದಿ ನೋಡುತಲೆ ವನದೊಳ್ಹೆತ್ತೆ ಮಾಡಿದೆಮತ್ತ ಆನೆಯಮಲ್ಲ ಕಂಸನೊತ್ತಿ ತುಳಿದು ಮಧುರೆಯಲ್ಲಿಹತ್ತು ಒಂದು ವಯದ ಬಾಲ ಮುತ್ಯಾ ಮಾತೆಯರನು ಕಾಯ್ದ 4 ಕೂಸುಪಿಡಿಯಿತು ಪೂಥಣಿಯ ಮೊಲೆಯ ತಾಸು ತಿಂದಿತುಈ ಶರೀರದೊಳಗೆ ತಾಟಕಾಸುರೀಯ ಕೊಂದ ಇಂದಿರೇಶಅದ್ಭುತಾವದಿದರೊಳಾರು ಪೇಳೊ ದಾಶರಥಿಯೆ 5
--------------
ಇಂದಿರೇಶರು
ಎಷ್ಟು ದಿನದ ಪೂಜೆ ಹಿಡಿದೆಣ್ಣಾ ಸತಿಯೆಂಬ ಮಾರಿದಿ- ನ್ನೆಷ್ಟು ದಿನ ಪೂಜೆ ಮಾಡಬೇಕಣ್ಣಾ ಪ ಎಷ್ಟು ದಿನದ ಪೂಜೆ ಹಿಡಿದಿ ನ್ನೆಷ್ಟುದಿನ ಮುಂದೆ ಬಾಕಿ ಉಳಿದಿದೆ ಕಷ್ಟಕಂಜದೆ ಬಿಡದೆ ಅನುದಿನ ನಿಷ್ಠೆಯಿಂದ ಪೂಜೆ ಮಾಡುವಿ ಅ.ಪ ಒಬ್ಬರ ಮನೆ ಮುರಿದು ತರುವಿ ಅವಳಿಗೇನೆ ಹಬ್ಬಮಾಡಿ ಉಣಿಸುತಿರುವಿ ಮತ್ತು ಇನ್ನು ಒಬ್ಬರೈತರ ಬೊಬ್ಬೆ ಹೊಡೆಯುವಿ ದಬ್ಬಿ ಓಡಿಸುವಿ ಹಬ್ಬ ಹುಣ್ಣಿಮೆ ಬರಲು ವೈಭವದುಬ್ಬಿಉಬ್ಬಿವಸ್ತ್ರ ಒಡವೆ ಅಬ್ಬರದಿಂದುಡಿಸಿ ತೊಡಿಸಿ ಮಬ್ಬಿನಿಂದ ಹಿಗ್ಗುತಿರುವಿ 1 ಧನವ ತಂದು ಅವಳಿಗರ್ಪಿಸಿ ಮತ್ತು ನಿನ್ನಯ ಮನವ ಅವಳ ವಶಕೆ ಸಲ್ಲಿಸಿ ಎಂಟುಗೇಣಿನ ತನುವು ಅವಳಾಧೀನದಲ್ಲಿರಿಸಿ ಕುಣಿವಿ ಪಶುವೆನಿಸಿ ಪಾಲಿಸಿ ದಿನಗಳೆಯುವಿ ನೋಡಿಕೊಳ್ಳದೆ 2 ಬಂದಕಾರ್ಯ ಮರೆದುಬಿಟ್ಟ್ಯಲ್ಲ ಹೆಡತಲೆಮೃತ್ಯು ಹಿಂದೆ ನಿಂತು ನಲಿಯುತಾಳಲ್ಲ ಹೇ ಪಾಪಿ ನೀನು ಒಂದೂ ವಿಚಾರ ಮಾಡಿ ಅರೀಲಿಲ್ಲ ಮಂದನಾದೆಲ್ಲ ತಂದೆ ಶ್ರೀರಾಮನ್ನಂತಂಘ್ರಿಗೊಂದಿ ಭಜಿಸಿ ದಾಸನಾಗಿ ಅಂದಮಾದ ನಿತ್ಯಮುಕ್ತಿ ಪಡೆವ ಸುಸಂಧಿ ನಡುವೆ ಹೋಗುತಾದರ್ಲ3
--------------
ರಾಮದಾಸರು
ಎಷ್ಟು ದಿವಸ ಹೀಗೆ ಕಳೆಯಲೊ ಗೋಪಾಲಕೃಷ್ಣ ಎಷ್ಟು ದಿವಸ ಹೀಗೆ ಕಳೆಯಲೊ ಪ. ಎಷ್ಟು ದಿವಸ ಹೀಗೆ ಎನ್ನ ಸೃಷ್ಟಿಗೊಡೆಯ ಬಳಲಿಸುವೆಯೊ ಕಷ್ಟಪಡಲಾರೆ ಭವದಿ ದೃಷ್ಟಿಯಿಂದ ನೋಡಿ ಸಲಹೋ ಅ.ಪ. ನಾನಾ ಜನ್ಮದಿ ತೊಳಲಿಸಿ ಎನ್ನನು ನೀನೆ ತಂದೆಯೊ ಮಾನವತ್ವದಿ ನಾನು ಎಂಬುದು ಬಿಡಿಸಿ ಈಗ ನೀನೆ ಕರ್ತನೆನಿಸಿ ಕಾಯೋ1 ದೇಹಸ್ಥನೆಂದೆನಿಸಿ ಎನ್ನ ದೇಹ ಮಧ್ಯದಿ ಕಾಣದಿಹರೆ ದೇಹಗಳನು ಧರಿಸಲಾರೆ ದೇಹ ಮೋಹ ಬಿಡಿಸದಿಪ್ಪರೆ 2 ಭೃತ್ಯವತ್ಸಲನೆಂದು ನಿನ್ನ ಭಕ್ತರೆಲ್ಲರು ಕರೆಯುತಿಹರೊ ಪೊತ್ತ ಬಿರುದು ಬಿಡುವರೇನೊ ಭೃತ್ಯಳೆಂದು ಎನ್ನ ಸಲಹೊ3 ಪೋಗುತಿದÉ ದಿವಸ ನೋಡು ಬೇಗ ಬೇಗನೆ ದಯವ ಮಾಡು ಭೋಗದಲಿ ವೈರಾಗ್ಯ ನೀಡು ಭಾಗವತರ ಸಂಗ ಕೊಡು 4 ಕರ್ಮದಲ್ಲಿ ಶ್ರದ್ಧೆಯಿಲ್ಲ ಧರ್ಮದಲ್ಲಿ ಬುದ್ಧಿಯಿಲ್ಲ ನಿರ್ಮಲದ ಜ್ಞಾನವಿಲ್ಲ ನಿರ್ಮಲಾತ್ಮ ಬಲ್ಲೆಯಲ್ಲ 5 ಅಂಧಕಾರದಿ ಎನ್ನನಿರಿಸಿ ಚಂದವೇನೋ ಹೀಗೆ ಮಾಳ್ಪದು ಕರ್ಮ ಸ್ವೀಕರಿಸಿ ಮುಂದೆ ಕರ್ಮವಿಡದೆ ಸಲಹೋ 6 ಅಪಾರ ಜನುಮದಲ್ಲಿನ ಪಾಪ ಸಮೂಹಗಳ ತರಿದು ಶ್ರೀಪಾದ ಸ್ಮರಣೆ ನೀಡೋ ಗೋಪಾಲಕೃಷ್ಣವಿಠಲ 7
--------------
ಅಂಬಾಬಾಯಿ
ಎಷ್ಟು ಪರೀಕ್ಷಿಸಿ ನೋಡುವೆಯೋ ಇನ್ನು ಎಷ್ಟು ಶೋಧಿಸೆ ನಿನಗಿಷ್ಟವೋ ರಂಗಾ ಪ ಹಣವಿರುವನಕ ಕುಣಿಕುಣಿದು ಮೆರೆದೆನೊ ಹಣವನಪಾತ್ರಕೆ ಮಣಿದು ಕಳೆದೆನೋ ಋಣವಮಾಡಿ ಯೆನ್ನ ಬಣಗುಹೊಟ್ಟೆಯ ಹೊರೆದೆ ಉಣಲುಡಲಿಲ್ಲದೆ ನೋಡದವೋಲಲೆದೇ 1 ಹೆಣ್ಣು ಹೊನ್ನು ಮಣ್ಣು ಕಣ್ಣಿಗಿಂಪಾಗಲು ಬಣ್ಣಿಸಿ ಭಾಗ್ಯವನುಣ್ಣಲು ಬಯಸಲು ಬೆಣ್ಣೆಯಂತಿದ್ದುದು ಸುಣ್ಣವಾಯಿತೊ ದೇವ ಕಣ್ಣು ಮಂಜಾಗಿ ಮೈಗಿಣ್ಣು ಮುರಿಯಿತಿನ್ನು 2 ಬಹು ಜನುಮದಿ ಸಂಗ್ರಹಿಸಿದ ಪಾತಕ ಬೃಹದಾಕಾರವಾಗಿದ್ದು ರಂಗಯ್ಯ ಅಹಿಶಯನನೆ ನಿನ್ನ ಮಹಿಮೆಯಿಂದೆಲ್ಲವು ದಹಿಸುವುದೆಂದು ನಂಬಿದೆ ಮಾಂಗಿರೀಶ 3
--------------
ಅಸೂರಿ ರಾಮಸ್ವಾಮಿಅಯ್ಯಂಗಾರ್