ಒಟ್ಟು 585 ಕಡೆಗಳಲ್ಲಿ , 84 ದಾಸರು , 485 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಧ್ವಜದತಿಮ್ಮಪ್ಪ ಪಲ್ಲಕಿಯೇರಿ ತನ್ನಯ |<?xmಟ veಡಿsioಟಿ='1.0' eಟಿಛಿoಜiಟಿg='uಣಜಿ-8'?>ನಿಜಗಿರಿಯಾತ್ರೆಗೈದಿದ ಹರುಷವಕೇಳಿಪ.ಬಲದಲಬುಜಭವ ಭವಾದಿಗಳೆಡದಲಿ |ಉಲಿವ ವೇದ - ಉಪನಿಷದುಗಳು ||ಸಲುಗೆಯಲಿ ಸನಕಾದಿಗಳು ಸೇವಿಸೆ ಮುನ್ನ |ಹಲವು ಋಷಿ - ಮುನಿನಿಕರ ಹಿಂದೆ ಬರುತಿರಲು 1ಛತ್ರವ ಶಚಿ ಚಾಮರವ ಢಾಳಿಸೆ ಇಂದ್ರ |ಚಿತ್ತಜಾತನು ವ್ಯಜನವ ಬೀಸಲು ||ಹೊತ್ತು ಮಾರುತಿ ಹಡಪ ಹೊಳೆವೆಲೆಗಳ ಕೊಡಲು |ಹಸ್ತದ ಕಾಳಂಜಿ ಹರಿಣಾಂಕನು ಬರೆ 2ವರುಣನು ಸ್ವಾದುಜಲವ ಪಿಡಿದು ಬರೆ |ತರುಣಿ ತನಗೆ ಆಧಾರದಂತಿರಲು ||ಸುರರು ಸುಮನಗಳಿಂದ ಸರ್ವರು ತಮತಮ್ಮ |ಪರಿಪರಿ ಆಯುಧಗೊಂಡು ಬಳಸಿಬರೆ 3ಮಂದರ ಮಧ್ಯಮತಾರಕ ಮೋಹನ |ದಿಂದ ಗಂಧರ್ವರು ಗಾನಮಾಡೆ ||ತೋಂಧಿಮಿಧಿಮಿಕೆಂದು ತಾಳಮೇಳದೆ ನಾ - |ರಂದ ಪಾಡಲು ಆಡುತಾಡುತ ಬರುತಿರೆ 4ಲೋಕನಾಯಕ ಲೋಕೈಕ ರಕ್ಷಾಮಣಿ |ಸಾಕಾರರೂಪ ಸದ್ಗುಣಭರಿತ ||ವೆಂಕಟೇಶ ವ್ಯಾಸಮುನಿವರದನಾದ ಕರು - |ಣಾಕರ ಪುರಂದರವಿಠಲನು ಗರುಡ 5
--------------
ಪುರಂದರದಾಸರು
ನದೀದೇವತೆಗಳ ಸ್ತುತಿ116ಸ್ಮರಿಸುವೆನನುದಿನ ಮುದದಿಂದ | ಈಧರಿಯ ಮ್ಯಾಲುಳ್ಳ ಮಹಾ ನದಿಗಳ ಪಗೌತಮನಘ ಪರಿಹಾರ ಮಾಡಿದ ಗೋದಾ |ಮಾತೆ ಶ್ರೀ ಕೃಷ್ಣವೇಣೀ ಸರಸ್ವತೀ ||ಆ ತರೂವಾಯ ಶ್ರೀ ಕಾವೇರಿ, ಸರಿಯು ಶ್ರೀ ಯಮುನಾ |ಧೌತ ಪಾತಕೆ ಶ್ರೀ ನರ್ಮದ ತುಂಗಾ 1ಸಿಂಧೂ ಭವನಾಶಿನಿ ಕುಮದ್ವತಿ ಶ್ರೀ ವಂಝಾರ |ಸುಂದರ ಭೀಮಾ ತಾಮ್ರಪರಣೀ ಮಲಹಾ ||ಮಿಂದರೆ ಪಾವನ ಮಾಡುವ ಬಹು ನದಿಗಳ |ಒಂದೇ ಮನಸಿಲಿಂದಾ ಪೊಗಳುವೆ 2ವಾರಣೀ ಫಲ್ಗುಣೀ ಶ್ರೋಣ ಭದ್ರಾ ಗಂಡಕಿಹೇಮ|ಮೂರುವೇಣಿಗಾಯತ್ರಿ ವೇಗವತೀ ||ಸೂರಿಗಮ್ಯ ಕೌಸಿಕ ಮಣಿಕರಣಿಕ ಗೌತಮಿ ಭಾ |ಗೀರಥಿ ಕಾಗಿನಿ ಶ್ರೀ ವೇತ್ರವತೀ3ಹೇಮವತಿ ನೇತ್ರವತಿ ಪಾಪನಾಶಿ ಶ್ರೀ ಸೀತಾ |ಆ ಮಹಾಳಕನಂದಾ ಹಯಗ್ರೀವ ||ಹೇಮಮುಖರ ತಾಪಿನಿ ಕಾಳಿ ಸೌಪರಣಿ ಪಿನಾಕೀ |ಶ್ರೀ ಮತ್ಕಪಿಲ ಜಮದಗ್ನಿಪ್ರಣವಸಿದ್ಧ4ಮರುದ್ವತಿ ಮದಿರ ಮೇನುಕಾ ಸೂನಾಸಿ ಚಕ್ರವತಿ |ಗರುಡ ಶಂಖವತೀ ಕುಹು ಮಹೇಶ್ವರೀ ||ಸರಯು ಜಯ ಮಂಗಳ ಯೋಗಕೃತು ಮಾಲಾ ಗದಾ |ಧರಿ ಮಾಲಿನೀ ಗಾರ್ಗಿಣೀ ದೇವವತಿ5ಸಾವಿತ್ರಿ ಧನ್ಯಮಾಲಾ ಧರ್ಮ ಚಕ್ರತೀರ್ಥಹರಿ|ದ್ರಾವತಿ ಇಂದ್ರಾಣಿ ಪಾತಾಳಗಂಗಾ ||ಶೈವಕುಂಡ ಕುಂಡಿನಿ ನೀರ ಕುಮಾರ ಧಾರೀ ಶು |ಶಾವರ್ತಿ ಮೌಳೀ ಲೋಕಪಾವನೀ 6ಸ್ವಾಮಿ ಪುಷ್ಕರ್ಣಿ ಚಂದ್ರ ಪುಷ್ಕರ್ಣಿ ಮಾನಸ ಪುಷ್ಕರ್ಣಿ |ಶ್ರೀ ಮಧ್ವ ಸರೋವರ ಪದ್ಮ ಸರಾ ||ಸೋಮಭಾಗಾ ವ್ಯಾಸಸಿಂಧುಶ್ರೀ ಪಂಪಾ ಸರೋವರ |ವಾಮನ ಶ್ರೀ ಮಯೂರ ಸರೋವರ 7ರೋಮ ಹರ್ಷಣ ತೀರ್ಥ ಸೀತಾ ಸರೋವರ ಪುಣ್ಯ |ಧಾಮಾ ಶ್ರೀ ಕಪಿಲತೀರ್ಥ ಧವಳಗಂಗಾ ||ಭೀಮಸೇನ ತಟಾಕಬ್ರಹ್ಮಜ್ಞಾನಕನ್ಯಹೃದಯ |ಶ್ರೀ ಮದ್ವಿಶಿಷ್ಟ ತೀರ್ಥ ತಾರಾ ತೀರ್ಥ 8ಈ ತೀರ್ಥಗಳ ದಿವ್ಯನಾಮನಿತ್ಯಪಠಿಸಲು |ಯಾತಕ್ಕಾದರೂ ವಿಘ್ನ ಬಾರದು ||ಮಾತರಿಶ್ವಪ್ರೀಯ ಪ್ರಾಣೇಶ ವಿಠಲನು ಬಹು |ಪ್ರೀತನಾಗಿ ಬಿಡದೆ ಪೊರೆವನು 9
--------------
ಪ್ರಾಣೇಶದಾಸರು
ನಂಬಿದೆನು ಜಗದಂಬೆ ನಿನ್ನನು ಪಾಲಿಸು ಸರ್ವಾ-ರಂಭಸೂತ್ರಳೆ ಇಂಬುದೋರಿನ್ನು ಪ.ಅಂಬುಜಾಂಬಕಿ ಶುಂಭಮರ್ದಿನಿಕಂಬುಗ್ರೀವೆಹೇರಂಬಜನನಿಶೋ-ಣಾಂಬರಾವೃತೆ ಶಂಭುಪ್ರಿಯೆ ದಯಾ-ಲಂಬೆ ಸುರನಿಕುರುಂಬಸನ್ನುತೆ ಅ.ಪ.ಕ್ರೂರದೈತ್ಯವಿದಾರೆ ಮಹದಾಕಾರೆ ಮಂಗಲೇ ವಿಶ್ವಾ-ಧಾರೆ ಕಲ್ಮಷದೂರೆ ಕದನಕಠೋರೆ ನಿಶ್ಚಲೆ ಪಾರಾ-ವಾರ ಸಮಗಂಭೀರೆ ಸುಗುಣವಿಹಾರೆ ನಿರ್ಮಲೆ ರತಿಶೃಂ-ಗಾರೆ ರಿಪುಸಂಹಾರೆ ತುಂಬುರುನಾರದಾದಿಮುನೀಂದ್ರ ನುತಚರ-ಣಾರವಿಂದೆ ಮಯೂರಗಾಮಿನಿಸೂರಿಜನ ಸುಮನೋರಥಪ್ರದೆ 1ಮೂಲರೂಪೆ ದಯಾಲವಾಲೆವಿಶಾಲಸುಗುಣಯುತೆ ಮುನಿಜನ-ಲೋಲತರುಣಮರಾಳೆ ಸಚ್ಚರಿತೆ ನವಮಣಿಮಾಲೆ ಮನ್ಮಥಲೀಲೆ ರಿಪುಶಿರಶೂಲೆ ಸಚ್ಚರಿತೆ ಹಿಮಗಿರಿ-ಬಾಲೆ ನೀಲತಮಾಲವರ್ಣೆ ಕ-ರಾಳಸುರಗಿ ಕಪಾಲಧರೆ ಸುಜ-ನಾಳಿಪಾಲನಶೀಲೆ ಹಿಮಕರಮೌಳಿಶೋಭಿತೆ ಕಾಳಿಕಾಂಬಿಕೆÉ 2ಶೋಕಮೋಹಾನಾನೀಕದೂರೆ ಪಿನಾಕಿಸುಪ್ರೀತೆ ಕೋಟಿ ದಿ-ವಾಕರಾಭೆಪರಾಕುಶರಣಜನೈಕಹಿತದಾತೆ ಸುರನರ-ಲೋಕಮಾತೆ ನಿರಾಕುಲಿತೆ ಸುವಿವೇಕಗುಣವ್ರಾತೆ ಮಾನಸ-ವಾಕುಕಾಯದಿಂದ ಗೈದಾನೇಕ ದುರಿತವ ದೂರಗೈದು ರ-ಮಾಳಕಳತ್ರನ ಪಾದಭಕುತಿಯ ನೀ ಕರುಣಿಸು ಕೃಪಾಕರೇಶ್ವರಿ3ಈಶೆ ಪಾಪವಿನಾಶೆ ಮಣಿಗಣಭೂರಿಪ್ರದೆ ಶಕ್ತಿವಿ-ಲಾಸೆ ವಿಗತವಿಶೇಷೆ ಕೃತಜಯಘೋಷೆ ಸರ್ವವಿದೆ ಮನ್ಮನ-ದಾಸೆಗಳ ಪೂರೈಸು ಸಜನರ ಪೋಷೆ ಕುಂದರದೆ ಶಂಕರೋ-ಲ್ಲಾಸೆ ಯೋಗೀಶಾಶಯಸ್ಥಿತೆವಾಸವಾರ್ಚಿತೆ ಶ್ರೀಸರಸ್ವತಿದೋಷರಹಿತೆ ಮಹೇಶೆ ಸುಗುಣರಾಶಿ ಸುರತತಿದಾಸಜನಯುತೆ 4ಸಾಮಗಾನಪ್ರೇಮೆ ರಾಕ್ಷಸ ಭೀಮೆ ರುದ್ರಾಣಿ ಅರಳ-ಗ್ರಾಮದೇವತೆ ಕ್ಷೇಮದಾಯಿನಿ ತಾಮರಸಪಾಣಿ ಪಶುಪತಿ-ವಾಮಭಾಗಲಲಾಮೆ ಮಂಗಲಧಾಮೆ ಫಣಿವೇಣಿ ಜಯಜಯಶ್ರೀಮಹಾಲಕ್ಷ್ಮಿ ನಾರಾಯಣಿರಾಮನಾಮಾಸಕ್ತೆ ಕವಿಜನ-ಸ್ತೋಮಕೃತ ಪರಿಣಾಮೆ ಭೌಮೆ ಪುಲೋಮಜಾರ್ಚಿತೆಸೋಮಶೇಖರಿ 5
--------------
ಪಾವಂಜೆ ಲಕ್ಷ್ಮೀನಾರ್ಣಪ್ಪಯ್ಯ
ನಮೋ ಮಾಧವಾ |ಸುಜನಬಾಂಧವಾ |ನಮೋ ಕುಮುದನಯನಾ ಪಸುಮನಸಾದಿ ಮುನಿನಿಕರ ನಮಿತಪದ |ಪದ್ಮಚಕ್ರಧಾರೀ ಶ್ರೀ ಶೌರೀ ||ನಮೋ 1ರಂಗವಿಠಲ ನೀಲಾಂಗ ಜಯತು ನರಸಿಂಗಸುಜನಸಂಗಾ ||ಅಂಗಜಪಿತಕಾಳಿಂಗಮಥನಸಂಗೀತ ಗಾನಲೋಲಾ ಗೋಪಾಲ ||ನಮೋ|| 2ಇಂದಿರೇಶಅರ| ವಿಂದ ಹೃದಯ ಆ- |ನಂದ ಚಂದ್ರವದನಾ ||ಸಿಂಧುಶಯನಭವ| ಬಂಧಹರಣಗೋವಿಂದದಾಸನ ಪ್ರೆೀಮಿೀ.......|| ನಮೋ || 3
--------------
ಗೋವಿಂದದಾಸ
ನಿನಗೆ ತಿಳಿದಂತೆ ಮಾಡುವದಯ್ಯ ಬೇಡೆನಲು |ಯನಗೆ ಸ್ವಾತಂತ್ರ್ಯವುಂಟೇ ||ಮನಸಿಜಪಿತ ನಿನ್ನ ಮೀರಿ, ಸಿರಿ, ವಿಧಿ,ಶರ್ವ|ತೃಣ ಮುರಿಯೆ ಶಕ್ತರಲ್ಲಾ ಹರಿಯೇ ಪಅಪಮಾನ ಮಾಡಿಸೊ ಕೋಪವನೆ ಹೆಚ್ಚಿಸೊಕೃಪಣತನದಲ್ಲಿರಿಸೊ |ಅಪಹಾಸಗೈದಿಸೋ ಡಾಂಭಿಕದವನೆನಿಸೋಉಪವಾಸದಲ್ಲೇ ಇರಿಸೊ |ಕೃಪೆಯುಳ್ಳ ನರನೆನಿಸೋ ಮಾನವೆಗ್ಗಳ ಕೊಡಿಸೊಚಪಲ ಬುದ್ಧಿಯನೆ ಕಲಿಸೊ |ಅಪರಾಧವನೆ ಹೊರಿಸೊ ಬಲು ಭಯವ ತೋರಿಸೋತ್ರಿಪುರಾಂತಕರ್ಚಿತ ಪದ ಹರಿಯೇ 1ಬೈಸು ಬೈದಾಡಿಸೊ ಬಾಂಧವರನಗಲಿಸೊಹೇಸಿಕೆಯು ಲಜ್ಜೆ ತೋರಿಸೊ |ಗ್ರಾಸವನೇ ಉಣಿಸೋ ನರರಾಲಯವ ಕಾಯಿಸೋಕ್ಲೇಶನಿತ್ಯದಲಿ ಬಡಿಸೊ |ಆಶೆಯನು ಜರಿಸು ಕೈಕಾಲುಗಳ ಕುಂಠಿಸೊದೋಷಕ್ಕೆ ಮನವಂಜಿಸೋ |ವಾಸುದೇವನೆ ನಿನ್ನ ವ್ರತವ ಮಾಡಿಸುವಂದುದೇಶ ಬಹುಕಡೆಗೆ ತಿರುಗಿಸೊ ಹರಿಯೇ2ಕವನಗಳ ಪೇಳಿಸೊಕರ್ಮಬಾಹಿರನೆನಿಸೊಭುವನದೊಳು ಭಂಡನೆನಿಸೊ |ಕವಿಸು ಅಜ್ಞಾನವನು ಸನ್ಮತಿಯ ಪ್ರೇರಿಸೊಕಿವಿ ಮಾತ್ರ ದೃಢದಲಿರಿಸೋ |ಜವನ ಸದನದ ಪೊಗಿಸೋ ಬಂಧಾನದೊಳಗಿರಿಸೊತವ ದಾಸರೊಳು ಕೂಡಿಸೊ |ದಿವಿಜರೊಲ್ಲಭ ನ್ಯಾಯವನ್ಯಾಯವನೆಮಾಡುಭವಪಂಕದೊಳು ಮುಳುಗಿಸೋ ಹರಿಯೇ 3ಹೆತ್ತವರ ಸೇವೆ ಮಾಡಿಸೊ ನೀಚರ ಬಳಿಯತೊತ್ತು ಕೆಲಸವ ಮಾಡಿಸೋ |ಚಿತ್ತ ಚಂಚಲಗೊಳಿಸೊ ವೈರಾಗ್ಯ ಪುಟ್ಟಿಸೊಉತ್ತಮರ ನೆರೆಯಲಿರಿಸೊ |ಮುತ್ತಿನಾಭರಣಿಡಿಸೊ ತಿರುಕೆಯನೆ ಬೇಡಿಸೊವಿತ್ತಸಂಗ್ರಹ ಮಾಡಿಸೊ |ಮುತ್ತೆಗೊಲಿದಿಹನೆ ವಿಷ ಕುಡಿಸೊ ಅಮೃತವುಣಿಸೊಮತ್ತೊಬ್ಬರಾರು ಗತಿಯೋ ಹರಿಯೇ 4ಸಾಲಗೊಯ್ಯನಮಾಡುಕಂಡ ಕುಲದಲಿ ತಿನಿಸುಕೀಳು ಮನುಜರ ಪೊಂದಿಸೋ |ನಾಲಿಗೆಗೆಡಕನೆನಿಸೊ ಸತ್ಯ ವಚನಿಯು ಎನಿಸೊಸ್ಥೂಲ ಪುಣ್ಯವ ಮಾಡಿಸೋ |ಕೇಳಿಸೋ ಸಚ್ಛಾಸ್ತ್ರ, ನೀತಿಯರಿಯನು ಎನಿಸೋಆಲಯದಿ ಸುಖದಲಿರಿಸೋ |ಮೂಲೋಶ ಪತಿಯೆಹರಿಕುದುರೆಯೇರಿಸೊ ಮತ್ತೆಕಾಲು ನಡಿಗೆಯಲೆ ನಡೆಸೊ ಹರಿಯೇ 5ಅರಸು ಪದವಿಯ ಕೊಡಿಸೊಕಾಷ್ಠಭಾರವ ಹೊರಿಸೊಪರದೂಷಣೆಯ ಮಾಡಿಸೊ |ಮರ್ಯಾದೆಗಳು ತಿಳಿಸು ಅತಿಮೂಢನೆಂದೆನಿಸೊನಿರುತ ರೋಗದಲಿ ಇರಿಸೋ |ಕರೆಕರೆಯ ಹಿಂಗಿಸೊ ದಿವ್ಯ ವಸನವನುಡಿಸೊಸುರಗಂಗಿ ತಡಿಯೊಳಿರಿಸೊ |ಪರಮಾತ್ಮನೆ ವಂಧ್ಯನೆನಿಸೊ ಸುತರನ್ನೆ ಕೂಡೊಮರಿಸೋ ದುರ್ವಿಷಯಗಳನೂ ಹರಿಯೆ6ಮಾಕಾಂತ ಪ್ರಾಣೇಶ ವಿಠಲ ನೀನಿತ್ತುದಕೆಶೋಕಿಸಲು ಸಲ್ಲದಯ್ಯ |ಆ ಕುಂಭೀಪಾಕ ಮೊದಲಾದ ನರಕದೊಳೆನ್ನಹಾಕಿದರೂ ಒಳಿತೆ ಜೀಯಾ |ಈ ಕಲಿಯುಗದಿಪಂಚಭೇದತಿಳಿಯದ ದೈತ್ಯರಾಕುಲದೊಳಿರಿಸಬೇಡ |ಶ್ರೀ ಕಾಳೀಕಾಂತನರ್ಚನೆ ಸರ್ವ ಕಾಲದಲಿಬೇಕುಬಿನ್ನಪಲಾಲಿಸೋ ಹರಿಯೇ 7
--------------
ಪ್ರಾಣೇಶದಾಸರು
ನಿನ್ನ ಕೊಳಲಿಗೆ ಮೋಹಿಸಿ ನಿನ್ನ ಕೊಳಲಿಗೆಅನ್ಯ ವಿಷಯಜರಿದುಬಂದರೆ ಇನ್ನು ಯಾತಕೆ ಬಂದಿರೆÉಂದಿಪ.ಅತ್ಯಂತ ಕಾಳ ರಾತ್ರಿಯೊಳುಮತ್ತೆ ಬಂದ ಬಾಲೆಯರಿಗೆಉತ್ತಮ ಉತ್ತಮವ ನೋಡಿಮತ್ತೆ ಮನೆಗೆ ಪೋಗಿರೆಂದಿ 1ಪ್ರೀತಿ ಪತಿಗಳ ಬಿಟ್ಟು ನೀವುಯಾತಕಿಲ್ಲೆ ಬಂದಿರೆಂದಿಮಾತುಗಳನು ಆಡಿ ಪೋಗಿರಿಘಾತುಕ ಪುರುಷನಯ್ಯ ಕೃಷ್ಣ 2ಭರದಿ ಬಂದ ಬಾಲೆಯರಿಗೆತಿರುಗಿ ಪೋಗಿರೆಂದು ನುಡಿದಿಕರಗಲಿಲ್ಲ ಕಠಿಣ ಹೃದಯಕರೆವರ್ಹ್ಯಾಂಗ ಪತಿಗಳವರ 3ಜಾರರಾಜ ನಿನಗೆ ಒಂದೂತೋರದಿದ್ದ ಭಾವವೇನುಯಾರ್ಯಾರ ಅಂಜಿಕೆ ಇಲ್ಲವೆಂದುನಾರಿಯರಿಗೆ ಖಿನ್ನ ಬಡಿಸಿದೆಲ್ಲೊ 4ಇಂದುರಾಮೇಶ ಬಿಟ್ಟರೆÉ ನೀನುಹೊಂದೋದಿಲ್ಲ ಪತಿಗಳ ಘನ್ನಚಂದಾಗಿ ಬೆರಿಯೆ ಚಕೋರನ್ನಇನ್ನರೆ ರಮಿಸಿದೆಲ್ಲೊ ಚನ್ನ 5
--------------
ಗಲಗಲಿಅವ್ವನವರು
ನಿನ್ನನು ನಂಬಿದೆನು ನಾ ಸುಂದರ ಗೋವಿಂದನೇ | ಪನ್ನಗಾಶಯನಗೋಪಿಕಂದನೇ | ಮುಕುಂದನೆದುಷ್ಟರ ಶಿಕ್ಷಿಪಘೋರಕಾಲನೆ | ರಣಶೂರನೆ |ಶಿಷ್ಟರ ರಕ್ಷಿಪ ಭಕ್ತಪಾಲನೆ ಗುಣಶೀಲನೇ ಪಹೊಳೆವ ಮತ್ಸ್ಯಾವತಾರನೆನ್ನಿಸಿಇಳೆಯ ಭಾರವ ಕಳೆದನೆ ||ಜಲದಿವಾಸವಮಾಡಿಕೊಂಡು |ಜಲದಿನಾಲ್ದೆಸೆ ನಲಿದನೆ 1ಧರೆಯ ಬೆನ್ನಲಿ ಪೊತ್ತು ನೆಲಸಿದಕೂರ್ಮನೆ |ಸ್ಮøತಿಧರ್ಮನೇ ||ಶರದ ಸೇತುವೆ ಧರಿಸಿ ನಿಂದಾ |ಮರ್ಮವರಿತೇ | ಸುಶರ್ಮನೆ 2ರಸತಳದಿ ಕೆಸರೊಳಗೆ ಹೊರಳುವಹಂದಿಯೇ | ಭೂಮಿ ತಂದಿಯೇ ||ಬಸುರ ಬಗಿದಾ ಹೇಮನೇತ್ರನಕೊಂದೆಯೇ ಮಮ ತಂದೆಯೇ 3ಕಂಬದಲಿ ಮೈದೋರಿ ತರಳನ |ಪೊರೆದನೇ ನರಸಿಂಹನೇಕುಂಭಿನಿಯ ಬಾಧಿಸಲು ದುರುಳನ |ಕರುಳನೇ ಹರಿದೆಳದನೇ 4ಭೂಮಿಯಲಿ ಮೂರಡಿಯದಾನವ ಕೊಟ್ಟಾನೇಬಲಿಕೆಟ್ಟಾನೇವಾಮನನು ಎರಡಡಿಯ ತೀರಿಸಿ |ಮೆಟ್ಟುತಲಿವರಕೊಟ್ಟನೇ 5ಕೊರಳ ಕುತ್ತಿಯೆ ಮಾಲೆಮಾಡುತ್ತಾಹೆತ್ತವಳ ಕತ್ತರಿಸಿದೆ ||ಧರಣಿಪರ ಶಿರವದೆಭಾರ್ಗವ|ಸತ್ಯ ಭೂಮಿಯ ಸುತ್ತಿದೆ6ವನದಿ ರಾಮನ ಸತಿಯರಾವಣ ಕದ್ದನೇ ವಿಷ ಮೆದ್ದನೇ ||ವನದಿ ಕಪಿಗಳ ಕೂಡಿ ದೈತ್ಯರಕೊಂದನೆ ಸೀತೆಯ ತಂದನೇ 7ಸರಸಿಯಲಿ ಮೊರೆಯಿಡುವ ಗಜವ |ಕಾಯ್ದನೇ ಯಾದವನೇ ||ಧುರದಿ ಕಾಳಿಯ ಶಿರದಿ ನಲಿದ |ದೇವನೇ ಮಾಧವನೇ 8ಬತ್ತಲೆಯ ಬೌದ್ಧಾವತಾರನೆ |ಮೃತ್ಯು ತೆಕ್ಕಲ ಹೊಕ್ಕನೇ ||ಸತ್ಯ ಧರ್ಮವನರಿಯದಧರ್ಮರ |ಸೊಕ್ಕ ಮುರಿವನೆ ಪಕ್ಕನೆ 9, 10ಕಲಿಯುಗದ ಕಡುಪಾಪಿ ನರರನು |ಕಡುಗದಿಂದಲಿ ಕಡಿದನೇ ||ಕಾಲಭೈರವನಂತೆ ಕಲ್ಕ್ಯನು |ಕಿಡಿಯನುಗುಳುತ ಸುಡುವನೇ 11ದಾಸಜನರನು ಪೊರೆವಶ್ರೀನಿವಾಸನೇ | ಜಗದೀಶನೇ |ಶೇಷಶಯನನೆಂದೆನಿಪ |ಗೋವಿಂದನೇ | ಗುಣವೃಂದನೇ 12
--------------
ಗೋವಿಂದದಾಸ
ನೀನಲ್ಲದನ್ಯರೆ ಸಲಹಲು ಕಾಯೊ |ಜಾನಕೀಪತಿ ದೂತ ಹನುಮಂತ ಪಗುರುವೆ ನಿನ್ನಯಪಾದಭಜಿಸುವರನ್ನ |ಧರೆಯೊಳು ಬನ್ನಬಡಿಸುವೋರೆ ||ಗಿರಿಸುತ ನೀ ಗತಿಯೆನಲಾಗ ಬೇಗ |ಪೊರೆದೆಯಾತನ ಜಲಧಿಯೊಳಿಟ್ಟು1ರವಿಜಶಕ್ರಜನಿಂದ ಬಳಲುತ ಬಂದು |ಪವನ ಪಾಲಿಪುದೆನ್ನಲಾಕ್ಷಣ ||ಭುವನೇಶನಿಂದ ವಾಲಿ ಕೊಲ್ಲಿಸಿ ಕಾಳೀ |ಧವಸುಗ್ರೀವನ ಭಯ ಬಿಡಿಸಿದೆ2ತಂದೆ ಪ್ರಾಣೇಶ ವಿಠ್ಠಲನಿಗೆ ನಿನಗಂ |ದುಂಟಿಂದಿಲ್ಲೇ ಈ ಮಹಿಮೆಯು ||ಬಂದದುರಿತನಿವಾರಣ ಮಾಡಿ ದಯ-ದಿಂದ ಪಾಲಿಸೋ ನಿನ್ನ ದಾಸರ 3
--------------
ಪ್ರಾಣೇಶದಾಸರು
ನೀನೆನ್ನ ಪೆತ್ತಿಲ್ಲವಂತೆ-ಅಮ್ಮಾ |ನಾನಿನ್ನ ಮಗನಲ್ಲವಂತೆ ||ಧೇನುಕಾಯುವರಿಲ್ಲವೆಂದು ನೀನು |ಸಾನುರಾಗದಿ ಸಲಹಿದೆಯಂತೆ 2ವಿಷವು ತುಂಬಿದ ಮೊಲೆಯ-ಕೊಟ್ಟ |ಅಸುರೆಯ ಸಂಹರಿಸಿದೆನಂತೆ ||ಅಸುರನಾದ ಶಕಟನನಾಕ್ಷಣದಲಿ |ಶಿಶುವಾಗಲೆ ಒರೆಸಿದೆನಂತೆ 3ವತ್ಸಾಸುರನನು ಕೆಡಹಿದೆನಂತೆ |ಕಿಚ್ಚನೆಲ್ಲವನು ನುಂಗಿದೆನಂತೆ ||ಕಚ್ಚಬಂದ ಕಾಳಿಂಗನಾ ಹೆಡೆ-|ಚಚ್ಚಿ ತುಳಿದು ಓಡಿದೆನಂತೆ 4ಕುಸುಮಗಂಧಿಯರಡುವ |ವಸನಕದ್ದು ಓಡಿದೆನಂತೆ ||ಹಸುಗೂಸು ಅಲ್ಲ ಇವ |ಅಸುರ ಮಗನು ಎಂತೆಂಬುವರೆ 5ಒರಳನೆಳೆತಂದು ಮತ್ತಿ-|ಮರವ ಮುರಿದೋಡಿದೆನಂತೆ ||ತರಳೆಯರ ವಸ್ತ್ರವ ಕದ್ದು |ತರುವನೇರಿದೆನಂತೆ 6ಪರಮಗಾಡಿಕಾರನಿವ |ಪುರಂದರವಿಠಲರಾಯ ||ತರುಣಿಯರ ವಂಚಿಸುತ್ತ |ಠಕ್ಕಿಸಿ ಪೋದನೆಂತೆಂಬುವರು7
--------------
ಪುರಂದರದಾಸರು
ನೆಚ್ಚಬೆÉೀಡ ಭಾಗ್ಯವನು ಹುಟ್ಟುಗೊಂಡ ಮನುಜಾವೆಚ್ಚವಾಗಿ ಹೋಗುವುದು ಏಸೊಂದು ಬಗೆಯಲಿ ಪ.ಮುತ್ತು - ಮಾಣಿಕ - ನವರತ್ನದ ಗದ್ದುಗೆಯುಎತ್ತ ನೋಡಲು ಸಿರಿಕೋ ಎನುತಲಿಸತ್ಯ ಹರಿಶ್ಚಂದ್ರ ಮತ್ತೆ ಸುಡುಗಾಡಿನಲ್ಲಿಎತ್ತುವ ಹಣೆಯಕ್ಕಿ ಹಾಗದ ಕಾಸ 1ದೇವತೆಗಳ ಕೈಯ ಸೇವೆಯ ಕೊಳುತಿರ್ದರಾವಣನ ಬದುಕು ಮತ್ತೇನಾಯಿತು?ಜೀವದ ಪರಿಯರಿತು ನಾವು ದೊರೆಯೆಂಬುವುದೆಸಾವಿನ ಮನೆಹೊಕ್ಕು ಸಾಹಸ ಪಡಲೇಕೆ 2ಹದಿನೆಂಟುಕೋಟಿ ಧನ ಉದಯಕೆ ಬರುತಿರಲುಒದಗಿತೆ ಆ ರಾಶಿ ದಿನ ಕರ್ಣಗೆ ?ತುದಿ ಮಧ್ಯಾಹ್ನಕ್ಕೆ ದರಿದ್ರನೆನಿಸುವಇದರಿಂದ ಕಡೆಗಂಡರಾರು ಜಗದೊಳಗೆ ? 3ಬೆಳ್ಳಿಯ ಗಿಣಿಲು ಬಂಗಾರದಹರಿವಾಣಕುಳಿತಲ್ಲಿ ಕನಕದ ರಾಶಿಗಳುಗಳಿಗೆಗೆ ಈ ಭಾಗ್ಯ ಕಾಳಬೆಳುದಿಂಗಳುಉಳಿದವು ನಾ ಕಾಣೆ ಚಿರಲಕ್ಷ್ಮಿಯೆನಲು 4ಇಂತು ಈ ಪರಿಯಲನಂತರು ಹೋದರುಎಂತು ಪೇಳಲಿಅವರ ಪೆಸರುಗಳ ?ಚಿಂತಾಯತ ಶ್ರೀ ಪುರಂದರವಿಠಲನಸಂತತ ಪಾದಕಮಲವ ಭಜಿಸೊ ಮನುಜಾ 5
--------------
ಪುರಂದರದಾಸರು
ಪಥ ನಡೆಯದೈಯ ಪರಲೋಕಕೈದುವರೆ, ಮ ಪ.ನ್ಮಥನೆಂಬ ಕಳ್ಳ ಮಾರ್ಗವಕಟ್ಟಿಸುಲಿಯುತಿರೆಅಗಿಳಿವಿಂಡು ಕೋಗಿಲೆ ವಸಂತ ಮಾರುತಭ್ರಮರ <?xmಟ veಡಿsioಟಿ='1.0' eಟಿಛಿoಜiಟಿg='uಣಜಿ-8'?>ಬಲವೆರಸಿಮದನ ಮಾರ್ಗವ ಕಟ್ಟಲುಬಲವುಳ್ಳ ಭಟರು ಬಲು ಸನ್ಯಾಸಿ ಯೋಗಿಗಳುಸುಲಿಸಿಕೊಂಡರು ಕೆಲರು ಸಿಕ್ಕಿದರು ಕೆಲರು 1ತನು ರೋಮ ಗಿಡ ವೃಕ್ಷ ತಳಿತ ಭುಜಲತೆ ಮೆರೆಯೆಘನ ಸಿಂಹಖಗ ಮೃಗಗಳಟ್ಟಿಣಿಸುವವನಿತೆಯರ ಕಾಯಕಾಂತಾರದಲಿ ದುರ್ಗಮಸ್ತನ ಪರ್ವತದ ಕಣಿವೆಯಲಿಕಟ್ಟಿಸುಲಿಯುತಿರೆ2ಕಾಳಗದೊಳಿದಿರಲ್ಲ ಸುರನರೋರಗರ ಕಟ್ಟಾಳು ಮನ್ಮಥನ ಛಲದಂಕ ಬಿರುದುಪೇಳಲೆನ್ನಳವಲ್ಲ ಪುರಂದರವಿಠಲನಆಳು ಸಂಗಡವಿದ್ದರವಗೆ ಭಯವಿಲ್ಲ 3
--------------
ಪುರಂದರದಾಸರು
ಪವಮಾನ ರಾಯಾ ಪಾವನ ಕಾಯಾ | ಕಾಯೋದಿವಿಷತ್ಪೂಜಿತ ಕವಿಜನ ಗೇಯ ಪಭಕ್ತವತ್ಸಲ ದೇವ ರವಿತೇಜ | ಸರ್ವೋ-ದ್ರಕ್ತ ಪ್ರಣತ ಜನ ಸುರಭೂಜ||ಶಕ್ತ ಲೋಕೈಕ ಅನಂತಜ |ಭುಕ್ತಿಮುಕ್ತಿದ ದಿತಿಜಾಹಿ ದ್ವಿಜರಾಜ1ದುರಿತಾಂಬುಧಿ ಘಾಗಜ ಕಾಳೀಶ | ಸರ್ವಸುರವಂದ್ಯ ಪದಕಂಜ ನಿರ್ದೋಷಾ ||ಪುರರಿಪುಪಿತ ಪಯೋಧರ ಭಾಸ | ಸಾರೆ-ಗರೆದು ಪೂರ್ತಿಸೊ ಯನ್ನ ಅಭಿಲಾಷಾ 2ಪೌಲಸ್ತ್ಯಾನುಜ ಮಾಠ ರಜ ರಕ್ಷ | ಶ್ರೀ ಗೋ-ಪಾಲನವನೆನೀಸುವದುಪೇಕ್ಷ ||ನೀಲೇಶ ತ(?)ಮಾಡದೆ ತಾ ರಕ್ಷ | ವಂದ್ಯಕಾಲಿಗೆರಗುವೆ ದುರ್ಜನ ಶಿಕ್ಷ3ಮಧುಸಖ ಪಾಲಾನುಜ ಪಾದಾರವಿಂದ |ಮಧುಕರ ದಂಡ ಮೇಖಲ ಧಾರ ||ವಿದುರಾಗ್ರಜ ನಂದನ ಸಂಸಾರಾರಣ್ಯ |ಸುಧನಂಜಯ ವೃಕೋದರ ಸಮೀರ4ಕುಟಿಲರಹಿತ ಋಜುಗಣಾಧೀಶ | ಶ್ರೀ ಧೂ-ರ್ಜಟಿವಂದ್ಯ ಭಕ್ತಿಯಿಂ ಪ್ರಾಣೇಶ ||ವಿಠಲನ್ನ ಭಜಿಸುತ್ತ ಸದ್ಭಾಷ್ಯವನ್ನು |ಪಠನೆ ಮಾಡಿಸೊ ದಯದಿಂದ ನಿಶಾ 5
--------------
ಪ್ರಾಣೇಶದಾಸರು
ಪಾದಕಂಡು ಪಾವನಾದೆನು ಶ್ರೀಗಿರಿಯ ನಿಲಯನಪಾದಕಂಡು ಪಾವನಾದೆನು ಪಪಾದಕಂಡು ಪಾವನಾದೆನುಮಾಧವನ ಪ್ರಸಾದ ಪಡೆದೆನುಹಾದಿಗಾಣದೆಪರಮದುರ್ಭವಬಾಧೆಯೊಳು ಬಿದ್ದು ತೊಳಲಿ ಬಳಲುತಮೇದಿನಿಯೊಳು ಜನುಮ ತಾಳಿಭೇದಮತದ ಹಾದಿಬಿಟ್ಟು ಅ.ಪನೀಲಬಣ್ಣದೊಪ್ಪುವ ಸುಂದರ ಶುಭಕಾಯಇಂದಿರೆಲೋಲತ್ರಿಜಗಮೋಹನಾಕಾರ ಕೊರಳಪದಕಮಾಲಕೌಸ್ತುಭಮುಕುಟಮಣಿಹಾರ ರತ್ನದುಂಗುರಕಾಲೊಳ್ಹೊಳೆಯುವ ಗೆಜ್ಜೆಸರಪಳಿಶೀಲವೈಷ್ಣವ ನಾಮ ಪಣೆಯಲಿಕಾಳರಕ್ಕಸಕುಲಸಂಹಾರನಪಾಲಸಾಗರಕನ್ನೆವರನಪಾಲಮೂಲೋಕಸಾರ್ವಭೌಮನಮೇಲು ಭೂವೈಕುಂಠದಲ್ಲಿ 1ಉಟ್ಟದುಕೂಲ ಶಲ್ಯ ಜರತಾರ ಕೈಯಲ್ಲಿ ಕಂಕಣಪಟ್ಟ ರತ್ನದ ನಡುವಿಗುಡಿದಾರ ವರ್ಣಿಸುವರಾರುಸೃಷ್ಟಿಯೊಳಗೀತ ಮೀರಿದವತಾರ ಇನಕೋಟಿ ಪ್ರಭಾಕರಬಿಟ್ಟು ವೈಕುಂಠ ಇಹ್ಯಕೆ ಸಾಗಿಬೆಟ್ಟದ ಮೇಲೆ ವಾಸನಾಗಿಕೊಟ್ಟು ವರಗಳ ಮೂರು ಜಗಕೆಶೆಟ್ಟಿಯಂದದಿ ಕಾಸುಕೊಳ್ಳುವದುಷ್ಟಭ್ರಷ್ಟ ಶಿಷ್ಟರೆಲ್ಲರಇಷ್ಟದಾಯಕದಿಟ್ಟ ದೇವನ 2ಒಂದೆ ಮನದಲಿ ಸಕಲ ಸೇವಕರು ಭಯಭಕುತಿಯಿಂದಬಂದು ಹರಕೆಯ ತಂದು ನೀಡುವರು ತುಂಬರನಾರದರೊಂದಿಗಾನದಿಂ ಪಾಡಿ ಪೊಗಳುವರು ಆನಂದ ಕೋರುವರುಹೊಂದಿ ಭಜಿಸುತ ಸಪ್ತಋಷಿಗಣಬಂದು ಇಳಿವರು ಬಿಡದೆಅನುದಿನವಂದ್ಯ ನಿಗಮಾದಿಬಂಧು ಭಜಿಪರಕಂದುಗೊರಳಾದಿ ಬ್ರಹ್ಮಸುರರಿಂಗಂಧಪರಿಮಳಕುಸುಮದ್ರವ್ಯಗಳಿಂದ ಸೇವೆಯ ಗೊಂಬದೇವನ 3ಉದಯಕಾಲದಿ ಬಾಲನವತಾರ ಮಧ್ಯಾಹ್ನಕಾಲದಿಸದಮಲಾಂಗ ಯೌವನಾಕಾರಸುಸಂಧ್ಯಾಕಾಲದಿಮುದುಕನಾಗಿ ಕಾಂಬ ಮನೋಹರ ಬಹುಮಹಿಮಗಾರಪದುಮವದನ ಮದನನಯ್ಯಪದುಮವತಿಯ ಪ್ರಾಣಪ್ರಿಯಒದಗಿಬಂದ ಭಕುತಜನರನುಸುದಯದಿಂದ ಕರೆದು ಪ್ರಸಾದಮುದದಿ ನೀಡುತ ಕೃಪೆಯದೋರಿಸದಮಲಸಂಪದವನೀವನ 4ತೀರದೀತನ ಲೋಕಶೃಂಗಾರ ಏರಿ ನೋಡಲುಪಾರಗಿರಿತುದಿ ಗಾಳಿಗೋಪುರ ಮುಂದೆ ನಡೆಯಲುದಾರಿಯಲಿಕೊಳ್ಳಏಳು ವಿಸ್ತಾರ ಪರಮಪರತರತೋರುವ ಮಹ ಗುಡಿಯು ಗೋಪುರದ್ವಾರ ಚಿನ್ನದ ಕಳಸ ಬಂಗಾರಗಾರುಮಾಡದೆ ದಾಸಜನರನುತಾರತಮ್ಯದಿ ಪೊರೆಯಲೋಸುಗುಸೇರಿಧಾರುಣಿ ವೈಕುಂಠವೆನಿಸಿದಧೀರವೆಂಕಟ ಶ್ರೀಶ ರಾಮನ 5
--------------
ರಾಮದಾಸರು
ಪಾರ್ವತಿ ಜಗದ್ಭರಿತೇ ಮಹೇಶ್ವರಿ |ಶರ್ವನಂಗನೆ ಖ್ಯಾತೆ ಪಸರ್ವ ಸ್ವತಂತ್ರೆಶರ್ವಾಣಿಕಾಳಾಹಿವೇಣಿ |ಸರ್ವಜನರ ಮದ | ಗರ್ವ ನಿವಾರಿಣಿ ಅ. ಪಸೃಷ್ಟಿಪಾಲಿನಿ ಗೌರೀ ಸರ್ವೇಶ್ವರಿ |ದುಷ್ಟಮರ್ದನ ಕಾರಿ |ಇಷ್ಟದಾಯಕಿಭವ| ಕಷ್ಟನಿವಾರಿಣಿಶಿಷ್ಟಪಾಲಿನಿ ಬೆಟ್ಟದ ಕಲಿಗೆ ಭವಾನಿಯೆ 1ಅಘನಾಶಿನಿ ದೇವೀ ಕಾತ್ಯಾಯಿನಿ |ಸುಗುಣರ ಸಂಜೀವಿ |ನಗೆಮೊಗವನು ತೋರಿ | ಸುಗುಣನೆಂದಿನಿಸೆನ್ನ |ಅಗಲಬೇಡವೋ ತಾಯೇ ಮುಗಿವೆನು ಕರವಾ 2ಪರಮಪಾವನೆ ನಿನ್ನಾ | ಭಕ್ತಿಯೊಳೀಗಾ |ಸ್ಮರಿಸಲರಿಯೆ ಮುನ್ನಾ |ತರಳಷಣ್ಮುಖನಂತೆ |ಪರಸಿ ರಕ್ಷಿಸೆ ಎನ್ನ | ಭರದಿ ಗೋವಿಂದನದಾಸನಿಗೊಲಿದು ||ಪಾರ್ವತಿ|| 3
--------------
ಗೋವಿಂದದಾಸ
ಪ್ರಸನ್ನ ಶ್ರೀ ಕೃಷ್ಣಾಮೃತಸಾರ27ಬಾರೋ ಎನ್ನ ಮನಕೆ ಗೋಪಾಲಕೃಷ್ಣಬಾರೋ ಎನ್ನ ಮನಕ್ಕೆ ಪಬಾರೋ ಎನ್ನ ಮನಕೆ ಭಾಮೆ ರುಕ್ಮಿಣೀ ಸಹಸರಸೀರುಹಾಸನ ಶಿವಾದ್ಯಮರ ವಂದ್ಯ ಅ.ಪ.ಮೋದಚಿನ್ಮಯ ಜಗಚೇಷ್ಟಕ ಬಲರೂಪಯದುಪತೇ ಕೃಷ್ಣ ನೀನು ದೇವಕೀ ಸುತನೆನಿಸಿಮೇದಿನಿಯಲಿ ಅವತಾರ ಮಾಡಿದಅಜಸಾಧು ಸದ್ಭಕ್ತರ ಸದ್ಧರ್ಮ ರಕ್ಷಿಸಲು 1ಪೂತನಿ ಶಕಟತೃಣಾವರ್ತವತ್ಸಬಕಅಘಧೇನು ಕೇಶಿ ಚಾಣೂರ ಮುಷ್ಟಿಕದೈತ್ಯಕುವಲಯಪೀಡಾ ಕಂಸಾದಿ ದುಷ್ಟರನ್ನಸದೆದು ಭೂಬಾರವ ಇಳಿಸಿದಿಶೌರಿ2ಸುಂದರ ವದನದಲ್ಲಿ ಜಗವೆಲ್ಲಾ ತೋರಿಸಿದಿಉದ್ಧರಿಸಿ ಮಣಿಗ್ರೀವ ನಳಕೂಪರನ್ನಮುಖಾದಿಂದ್ರಶ್ಚಾಗ್ನಿ ದಾವಾಗ್ನಿಯನು ನುಂಗಿನಂದನ್ನ ವರ್ಣಾಲಯದಿಂದ ಬಿಡಿಸಿ ತಂದಿ 3ನಾಗಪತ್ನಿಯರಿಗೂ ಕಾಳಿಂಗನಿಗೂ ಒಲಿದುನಗವನ್ನ ಎತ್ತಿ ಗೋ ಗೋಪಾ ಜನರ ಕಾಯ್ದಿಉಕ್ಕುವ ಪ್ರೇಮದಿಂ ಸೇವಿಸಿದ ಗೋಪಿಯರಭಕುತೀಗೆ ಮೆಚ್ಚಿ ಯೋಗ್ಯ ಸಾಧನ ಫಲವಿತ್ತಿ 4ಸುದರ್ಶನಾಭಿದ ವಿದ್ಯಾಧರನ್ನ ಶಾಪದಿಂದಪಾದಸ್ಪರ್ಶವನಿತ್ತು ಮೋಚನೆ ಮಾಡಿಉದ್ಧರಾಕ್ರೂರ ಸ್ತ್ರೀ ವಾಯುಕ ಮಾಲಾಕಾರಮೊದಲಾದವರ್ಗೂವಿಪ್ರಸ್ತ್ರೀಯರಿಗೂ ಒಲಿದಿ5ಬಲಭದ್ರ ಸುಭದ್ರ ಸಹ ಕೃಷ್ಣ ಜಗನ್ನಾಥಮಾಲೋಲ ನಿನ್ನಯ ಬಾಲಲೀಲೆಗಳುಬಲು ಶುಭತಮ ಪಾಲ್‍ಬೆಣ್ಣೆಯ ಪ್ರಿಯ ಈಶಪಾಲಾಬ್ಧಿಶಾಯಿ ಅಚ್ಚುತಾನಂದ ಗೋವಿಂದ 6ಈರಾರುಯೋಜನ ದ್ವಾರಕಾ ದುರ್ಗವುಸುರದ್ರುಮ ಲತೋದ್ಯಾನ ವಿಚಿತ್ರೋಪ ವನಗಳ್ಪುರುಟ ಶೃಂಗೋನ್ನತ ಸ್ಫಟಿಕ ಅಟ್ಟಾಳಗೋಪುರಗಳು ನವರತ್ನ ಸ್ವರ್ಣಗೃಹಗಳ್ 7ಆಶ್ಚರ್ಯ ಕಡಲ್‍ಮಧ್ಯ ದ್ವಾರಕಾ ನಿರ್ಮಿಸಿಅಚ್ಛನ್ನ ಭಕ್ತ ಸೇವಕರೊಡೆ ಇದ್ದಿಮುಚುಕುಂದನಿಗೆ ಒಲಿದು ಕಾಲನ್ನ ಕೊಲ್ಲಿಸಿದಿರಚಿಸಿದಿ ಮದುವೆಯ ಅಣ್ಣ ಬಲರಾಮಗೆ 8ಸಿಂಧುಜಾ ಇಂದಿರಾಜನಕಜಾಸೀತೆಯೇಪ್ರಾದುರ್ಭವಿಸಿಹಳು ರುಕ್ಮಿಣೀ ಭೈಷ್ಮಿಸಿಂಧುಜನಕಾ ತೆರದಿ ಅಲ್ಲದೇ ಭೀಷ್ಮಕಪುತ್ರ ದುಷ್ಟಗೆ ಸೋತು ಚೈದ್ಯನಿಗೆ ಕೊಡಲಿದ್ದ 9ಅನಾದಿನಿತ್ಯನಿನ್ನಸತಿರಮಾ ರುಕ್ಮಿಣಿಜ್ಞಾನ ತೇಜಃ - ಪುಂಜ ಭಕ್ತಿಪ್ರವಾಹ ಓಲೆನಿನಗೆ ಕಳುಹಿಸಿದಳು ದ್ವಿಜವರ ಶ್ರೇಷ್ಠಬ್ರಾಹ್ಮಣ ಅಚ್ಛಿನ್ನ ಭಕ್ತನ ಕೈಯಲ್ಲಿ 10ಉನ್ನಾಮ ಉದ್ದಾಮ ಅಚ್ಚುತ ನೀನಿತ್ಯಆನಂದ ಚಿತ್ತನು ಯದುಪತಿ ಕೃಷ್ಣನೀನೇ ತನ್ನಪತಿಸಿರಿತಾನು ಎಂದುಅನಘಲಕ್ಷ್ಮೀಭೈಷ್ಮಿ ಪತ್ರದಿ ಹೇಳಿಹಳು11ಸುಧಾಕಲಶ ವಿಪ ಕಿತ್ತಿ ತಂದ ತೆರದಿಚೈದ್ಯಮಾಗಧಸಾಲ್ವಾದಿ ಕಡೆಯಿಂದಎತ್ತಿತಂದಿಯೋ ಸ್ವಯಂವರದಿಂದ ಶ್ರೀಭೈಷ್ಮಿಯವಂದಿಸಿ ಶರಣಾದೆ ಕೃಷ್ಣ ರುಕ್ಮಿಣಿಗೆ 12ಜಯ ಕೃಷ್ಣ ನೀ ರುಕ್ಮಿಣೀ ಸಮೇತದಿ ಬಾರೆಜಯಭೇರಿ ತಾಡಿಸಿ ದ್ವಾರಕಾವಾಸಿಗಳುಗಾಯಕರು ನರ್ತಕರು ವಿಪ್ರಮುತ್ತೈದೆಯರುಜಯ ಜಯತು ಎನ್ನುತಾನಂದ ತೋರಿಸಿದರು 13ಯದುಪುರಿಯಲಿ ಮನೆ ಮನೆಯಲಿ ಮಹೋತ್ಸವಮುದದಿ ಅಲಂಕೃತವಾಗಿ ಸ್ತ್ರೀ ಪುರುಷರುಜ್ಯೋತಿ ಉಜ್ವಲ ದೀಪಾವಳಿ ಪೂರ್ಣಕುಂಭಗಳುಛಂದಗೊಂಚಲ ಪುಷ್ಪರತ್ನ ತೋರಣಗಳ್14ಸಂಜಯ ಕುರು ಕೇಕಯಾದಿ ರಾಜರುಗಳುರಾಜಕನ್ಯೆಯರು ಗಜಗಳ್ ಓಡ್ಯಾಟಮೂರ್ಜಗದೊಡೆಯ ನೀ ರುಕ್ಮಿಣಿಯ ಕರೆತಂದಸುಚರಿತ್ರೆ ಪೊಗಳಿದರು ನರನಾರಿರೆಲ್ಲರು 15ಚತುರ್ಮುಖ ವಾಯು ಶಿವ ವೈನತೇಯನುಶೇಷಶತಮುಖಸ್ಮರಅಹಂಕಾರಿಕ ಪ್ರಾಣಮೊದಲಾದಅಮರರುಮುನೀಂದ್ರರು ವೇದಮಂತ್ರ ಘೋಷಿಸೆ ಮದುವೆ ವೈಭವ ಏನೆಂಬೆ 16ಪೂರ್ಣಜ್ಞÕನಾತ್ಮನೆ ಪೂರ್ಣ ಐಶ್ವರ್ಯಾತ್ಮಪೂರ್ಣಪ್ರಭಾನಂದತೇಜಶಕ್ತ್ಯಾತ್ಮಆನಮಿಪೆ ಅಚ್ಚುತಾನಂತ ಗೋವಿಂದಕೃಷ್ಣ ರುಕ್ಮಿಣಿನಾಥ ಜಗದೇಕ ವಂದ್ಯ 17ಆದರದಿಸುರರಾಜವಿಪ್ರರ ವೃಂದಯಾದವರುಗಳು ಶ್ರೀ ರುಕ್ಮಿಣಿಕೃಷ್ಣನಿತ್ಯಸತಿಪತಿ ಮದುವೆ ನೋಡಿ ಹಿಗ್ಗಿದರುಶ್ರೀದ ನೀ ಕೊಡುವಿಯೊ ಸೌಭಾಗ್ಯ ಇದು ಪಠಿಸೆ 18ಯೋಗೇಶ್ವರ ದೇವ ದೇವ ಶ್ರೀಯಃಪತೇಅಗಣಿತಗುಣಪೂರ್ಣಅಪ್ರಮೇಯಾತ್ಮನ್ಶ್ರೀಕೃಷ್ಣ ವಿಷ್ಣೋ ಶ್ರೀರಮಾರುಕ್ಮಿಣಿಬಾಗಿ ಶರಣಾದೆ ನಿಮ್ಮಲ್ಲಿ ಮಾಂಪಾಹಿ 19ರುಕ್ಮಿಣಿ ಪತ್ರಧರ ದ್ವಿಜವರ ಶ್ರೇಷ್ಠರುಧರ್ಮ ಭೀಮಾರ್ಜುನ ಸಹದೇವ ನಕುಲಅಮಲ ಭಕ್ತಾಗ್ರಣಿ ವಿದುರನು ಇಂಥಸುಮಹಾ ಭಕ್ತವಿನುತವಂದ್ಯನೇ ನಮೋ ನಮೋ20ಜಯತು ದೇವಕೀತನಯ ಸತ್ಯಾ ರುಕ್ಮಿಣೀಕಾಂತಜಯತು ಜಗಜ್ಜನಾದಿಕರ್ತ ನಮೋ ನಮೋಜಯತು ವಿಧಿತಾತ ಶ್ರೀ ಪ್ರಸನ್ನ ಶ್ರೀನಿವಾಸಜಯತು ಜಯತು ದಶಪ್ರಮತಿ ಹೃತ್‍ಪದ್ಮಸ್ಥ 21-ಇತಿ ಕೃಷ್ಣಾಮೃತಸಾರ ಸಂಪೂರ್ಣಂ -
--------------
ಪ್ರಸನ್ನ ಶ್ರೀನಿವಾಸದಾಸರು