ಒಟ್ಟು 7812 ಕಡೆಗಳಲ್ಲಿ , 132 ದಾಸರು , 3804 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಈ ಊರೋಳ್ಳೇದು ಪ ದೇವರ ಕೃಪೆ ಒಂದಾದರೆ ಸಾಕು ಅ.ಪ ತಂಟೆ ಮಾಳ್ಪ ಭಂಟರೈವರ ಗೆದ್ದರೆ ತಾನೆಲ್ಲಿದ್ದರು ಭಯವಿಲ್ಲಣ್ಣ 1 ಜಲತೃಣ ಕಾಷ್ಠಕೆ ವಸತಿ ಈ ಊರು ಬಲು ಸಜ್ಜನಗಳ ನೆರೆ ಈ ಊರು ಫಲಗಳುಂಟು ಮಾಡುವುದೀ ಊರು ಹೊಲಗದ್ದೆ ತೋಟಗಳಿಹ ಊರು 2 ಕೇಳಿದ ಪದಾರ್ಥ ದೊರೆಯುವ ಊರು ವೇಳೆಗೆ ಅನುಕೂಲವು ಈ ಊರು ತಾಳ ಮೇಳ ವಾದ್ಯಗಳಿಹ ಊರು ಸೂಳೆ ಬೋಕರಿಗೆ ಕಷ್ಟದ ಊರು 3 ಕಷ್ಟಪಡುವ ನರ ಭ್ರಷ್ಟನಲ್ಲವೇ ಮೂರು ಬಿಟ್ಟು ತಿರುಗುವ ಜನರಿಗೆ 4 ನರಜನ್ಮವೆಂಬ ಊರಿಗೆ ಬಂದು ಗುರುರಾಮವಿಠ್ಠಲನ ಕರುಣನ ಪಡದರೆಕರತಲಾಮಲಕವಿದು ಕೈವಲ್ಯಕೆ 5
--------------
ಗುರುರಾಮವಿಠಲ
ಈ ತನುವಿನೊಳಗೆ ಅನುದಿನವಿದ್ದು ಎನಗೊಂದು ಮಾತ ಹೇಳದೆ ಹೋದಿ ಹಂಸ ಪ. ಜಾಳಂಧರಯೆಂಬೊ ಮಾಳಿಗೆ ಮನೆಯಲ್ಲಿ ನೋಳ್ಪರೆ ಒಂಬತ್ತು ಬಾಗಿಲು ಬೇರಿಗೆ ಹೇಳಿ ಹೋಯಿತೆ ಒಂದು ಮಾತ 1 ಏರಿಯು ನೀರನು ತೆಗೆದುಕೊಂಡಿದ್ದೇನೊ ಭೋರೆಂಬೋ ಮಳೆ ಹೊಯ್ದು ಭೋರೆಂಬೊ ಮಳೆ ಹೊಯ್ದು ಬಣವೆದ್ದು ಹೋಗುವಾಗ ಈ ಏರಿಗೆ ಹೇಳಿಹೋಯಿತೆ ಒಂದು ಮಾತ 2 ಗಟ್ಟಿ ಬೆಟ್ಟಗಳಲ್ಲಿ ಅಟ್ಟಡವಿಯಲ್ಲಿ ಇಕ್ಕಿತ್ತು ಇಟ್ಟಿತ್ತು ಜೇನು ತನ್ನ ಸುಖಕಾಗಿ [ಇಟ್ಟ]ತುಪ್ಪವನುಂಡು ನೊಣ ಹಾರಿಹೋಗುವಾಗ ಈ ಬೆಟ್ಟಿಗೆ ಹೇಳಿ ಹೋಯಿತೆ ಒಂದು ಮಾತ 3 ಹೆಸರು ಹೇಳುವೆ ನಾನನುದಿನವು ರಸಭೋಜನವವುಂಡು ಜೋತಿತಾಹೋಗುವಾಗ ಪ್ರಣತಿಗೆ ಹೇಳಿ ಹೋಯಿತೆ ಒಂದು ಮಾತ 4 ಸಪರ್Àಶಯನ ಹಯವದನನಾಡಿದ ಮಾತು ಪಣೆ ಲಕ್ಷ್ಯವ ತೊಡೆದು ಮ್ಯಾಲಿರಲಾಗಿ ಸುಪ್ಪಾಣಿಮುತ್ತು ಬಾಯ್ಬಿಟ್ಟು ಹೋಗುವಾಗ ಈ ಚಿಪ್ಪಿಗೆÀ ಹೇಳಿ ಹೋಯಿತೆ ಒಂದು ಮಾತ 5
--------------
ವಾದಿರಾಜ
ಈ ದೇಹ ನಿನ್ನ ಒಳಗೊಂಡಿತೊ ಇಷ್ಟಾದ ಮೇಲೆ ಪ. ದೇಹ್ಯ ಬಾಹ್ಯ ವ್ಯಾಪಾರವ ನೀ ಪರಿಹರಿಸಿದೇ ದೇವ ಅ.ಪ. ದೇಹದೊಳಗಿದ್ದವರು ಬಾಹ್ಯ ವ್ಯಾಪಾರಕ್ಕೆಳೆಯೆ ಈ ದೇಹ ಬಾಂಧವರು ಎಲ್ಲ ಎನ್ನ ದೇಹ ಕೀಳು ಮಾಡಿ ನೋಡೆ ದಾಹ ಹತ್ತಿತೋ ನಿನ್ನಲ್ಲಿ ದೇಹ ಸಾರ್ಥಕವಾಗಲು 1 ರಂಗ ನಿನ್ನ ಸ್ತುತಿಮಾಡೆ ಹಂಗಿಸುವರೆಂದು ಇದ್ದೆ ಹಂಗಿಸಿ ಭಂಗಿಸಿ ರಂಗಕ್ಕೆಳಸಿ ಎನ್ನ ನಿನ್ನ ಅಂತರಂಗಕ್ಕೆ ಎಳೆತಂದೆ ಹರಿ ರಂಗಾ ನಿನ್ನ ಸಿರಿಯಾರೋ ಮಂಗಳ ಮಹಿಮ 2 ಕಂತು ಜನಕನೆ ನಾ ನೆಂದು ಸ್ತುತಿಸಲು ನಿನ್ನ ಅಂತರದಂತಿರಲಿ ಪಂಥ ಬೇಡ ಎನ್ನ ಮೇಲೆ ಇಂತು ಕೃಪೆ ತೋರಿಸುತ ನಿಂತು ಅಂತರಂಗಕೆ ಬಾ ಲಕ್ಷ್ಮೀಕಾಂತ ಶ್ರೀ ಶ್ರೀನಿವಾಸ 3
--------------
ಸರಸ್ವತಿ ಬಾಯಿ
ಈ ದೇಹ ಬಲು ಸಾಧನ ಭೂದೇವ ಜನ್ಮದಲಿ ಬಂದ ಕಾರಣ ನಮಗೆ ಪ ಶ್ವಸನ ಮತವೆ ಪೊಂದಿ | ನಸು ಚಿತ್ತದಲಿ ಯಿದ್ದು | ವಿಷಯಂಗಳೆಲ್ಲ ನಿರಾಕರಿಸಿ | ಋಷಿಮಾರ್ಗದಲಿ ನಡೆದು ವಿಹಿತಾರ್ಥದ ಸತ್ಯ | ನಿತ್ಯ ಸಜ್ಜನರ ಒಡಗೂಡು1 ಬಾಹುದ್ವಯದಲಿ ಶಂಖ ಚಕ್ರ ಧರಿಸಿ ಉ | ತ್ಸಾಹದಲಿ ದ್ವಾದಶ ಪುಂಡ್ರಗಳನಿಟ್ಟು | ಸ್ನೇಹಭಾವದಲಿ ಸತತ ಭಕುತಿಯ ಮಾಡು | ಇಹಲೋಕದಲಿ ಇಷ್ಟಾರ್ಥ ಬೇಡುತಲಿರು 2 ಅನಿಷಿದ್ದ ಕರ್ಮಗಳು ಆಚರಿಸಿ ಭೂತದಯ | ಅನುಗಾಲ ಇರಲಿ | ಬಂಧುಗಳ ಕೂಡಾ | ಮನಮೆಚ್ಚು ನಡೆದು ನೀ ಮಂದಮತಿಯನು ಕಳೆದು | ಘನಜ್ಞಾನದಲಿ ನಡೆದು ಗುಣವಂತನಾಗು 3 ಧರ್ಮೋಪದೇಶವನೆ ಮಾಡುತಲಿರು ನೀನು | ಪೇರ್ಮೆಯುಳ್ಳವನಾಗು ಪೃಥವಿಯೊಳಗೆ | ನಿರ್ಮತ್ಸರನಾಗು ವೈಷ್ಣವ ಜನರ ಕೂಡ | ದುರ್ಮತವ ಪೊಂದದಿರು ಅನಂತ ಜನ್ಮಕ್ಕೆ 4 ಕರ್ಣ ತುಲಸೀ ದಳ | ಬೆರಳಲ್ಲಿ ಪವಿತ್ರದುಂಗರವನಿಟ್ಟು | ಪರಮ ವಿರಕುತಿಯಲಿ ದೇಹವನು ದಂಡಿಸುವ | ಹಿರಿದಾಗಿ ಭಾಗವತನಾಗು ವ್ಯಾಕುಲವ ಬಿಡೋ 5 ವದನದಲಿ ಹರಿಸ್ಮರಣೆ ಮರೆಯದಿರು ಕಂಡಕಡೆ | ಉದರಕ್ಕೆ ಪೋಗಿ ಚಾಲ್ವಯದಿರು ಅಧಿಕರ ಆಪೇಕ್ಷಗಳ ಮಾಡದಿರು ಹರಿಯಿತ್ತ ದದು ಭುಂಜಿಸಿ | ಬಂದ ಕಾಲವನು ಹಿಂಗಳಿಯೊ 6 ತೀರ್ಥಯಾತ್ರೆಯ ಚರಿಸು ಕಥಾಶ್ರವಣವನು ಕೇಳು | ಅರ್ಥವನೆ ಬಯಸದಿರು ಬಾಕಿ ಬಸಿದು ವ್ಯರ್ಥ ನಿನ್ನಾಯುಷ್ಯ ಪೋಯಿತೆಂದೆನಿಸದೆ | ಪ್ರಾರ್ಥನೆಯ ಮಾಡು ಪ್ರತಿಕ್ಷಣಕೆ ಶ್ರೀ ಹರಿಚರಣ 7 ಪರಿಯಂತ | ಮಿತ ಆಹಾರ ಮಿತ ನಿದ್ರಿ ಮಿತ ಮಾತನು | ಸತತ ಮೀರದಲಿರು ಶೋಕಕ್ಕೊಳಗಾಗದಿರು | ಸತಿ ಸುತರು ಎಲ್ಲ ಶ್ರೀ ಹರಿಗೆ ಸೇವಕರೆನ್ನು 8 ಜಾಗರ ಗಾಯನ | ಮರಳೆ ಮರಳೆ ಮಂತ್ರ ಪಠನೆಯಿಂದ | ಧರೆಯೊಳಗೆ ಪುಣ್ಯವಂತನಾಗಿ ಸರ್ವದ | ಇರಬೇಕು ಇಹಪರಕೆ ಲೇಸು ಎನಿಸಿಕೊಂಡು9 ಸುಖ ದು:ಖ ಸೈರಿಸುತ ಅರಿಗಳಿಗೆ ಭಯಪಡದೆ | ನಖಶಿಖವಾಗಿ ಆನಂದ ವಿಡಿದೂ | ಮುಖದಲ್ಲಿ ಹರಿನಾಮ ಅಮೃತವೆ ಸುರಿಸುತ್ತ | ಸಖರೊಳಗೆ ಲೋಲಾಡು ಹರಿಗುಣವ ಕೊಂಡಾಡು10 ಸಕಲಾಧಿಷ್ಠಾನದಲಿ ಹರಿಯೆ ಲಕುಮಿ ತತ್ವ | ಕರ ಮುಗಿದು ತಿಳಿದು | ಮುಕುತಿ ಕರದೊಳಗಿಡು ವಿಜಯವಿಠ್ಠಲರೇಯನ | ವಿಕಸಿತ ಮನದಲ್ಲಿ ಭಜಿಸು ಬಲು ವಿಧದಿಂದ11
--------------
ವಿಜಯದಾಸ
ಈ ಧರಣಿಯೊಳ್ ಹದಿನಾರು ಸಾವಿರ ಮಂದಿ ಆಳುತ ದ್ವಾರಕೆಯಲ್ಲಿ ವಿನೋದದಿ ಕುಳಿತಿದ್ದ ಹರಿಯು 1 ಅಂಬುಜೋದ್ಭವನ ಅಂಕದಲುದಿಸಿದ ಸುತ ಚೆಂದ ಚೆಂದ ವೀಣೆ ಪಿಡಿದು ಕಂದರ್ಪಪಿತ (ನಲ್ಲಿಗೆ) ನಲಿನಲಿದಾಡುತ ಬಂದ ನಾರಂದ ಹರುಷದಲಿ2 ಬಂದ ನಾರಂದನ ಕಂಡು ಕಮಲನಾಭ ಚೆಂದದಿಂದಲಿ ಅಘ್ರ್ಯ ಪಾದಪೂಜೆಯ ಮಾಡಿ ನಾ- ರಂದಗೆ ಎರಗಿದನಾಗ3 ದೇವಾಧಿದೇವನೆ ದೇವಲೋಕದಿ ಸುತ್ತಿ ಈ ಪಾರಿಜಾತವ ತಂದೆ ದೇವಿ ರುಕ್ಮಿಣಿಗೀಗ ಮುಡಿಸೆಂದು ನಾರಂದ ಸ್ವಾಮಿಯ ಚರಣಕ್ಕರ್ಪಿಸಿದ 4 ತಕ್ಷಣದಿ ಜಗನ್ಮಾತೆ ಮಾಲಕ್ಷುಮಿ ಸಾಕ್ಷಾತ ಶ್ರೀನಾರಾಯಣನು ವಕ್ಷಸ್ಥಳದಲಿ ಹೊಂದಿರುವ ರುಕ್ಮಿಣಿಯನು ಸ್ತೋತ್ರ ಮಾಡಿದನು ನಾರದನು 5 ಕಡಲಶಯನ ಕಡೆಗಣ್ಣ ನೋಟಗಳಿಂದ ಕಡುಮುದ್ದು ಸುರಿವೊ ರುಕ್ಮಿಣಿಯ ಬಡನಡುವಿನ ಭಾಮಿನಿರನ್ನೆ ಬಾರೆಂದು ತೊಡೆಯ ಮ್ಯಾಲಿಟ್ಟ ಶ್ರೀಕೃಷ್ಣ 6 ದುಂಡುಮಲ್ಲಿಗೆ ಗೊಂಡ್ಯ ಚೌರಿ ರಾಗಟೆ ಜಡೆ- ಅಂಗನೆ ರುಗ್ಮಿಯಾಲಿಂಗನೆ ಮಾಡುತ ರಂಗ ತಾ ಮುಡಿಸಿದ ಸತಿಗೆ 7 ಸರಿಸವತೇರ ಬಿಟ್ಟು ಸುರಪಾರಿಜಾತವ ಗರುವಿಕೆಯಿಂದ ನೀ ಮುಡಿದೆ ಹರದಿ ಸತ್ಯಭಾಮೆ ಕೇಳಿ ಮುನಿದರಿನ್ನು ಅರಿಯೆನು ನಾ ಇದಕೆ ಉಪಾಯ 8 ಗಾಡಿಕಾರನು ಕೃಷ್ಣ ಆಡುವೊ ಮಾತನು ಕೇಳಿ ರುಕ್ಮಿಣಿ ನಗುತಿರಲು ಓಡುತ ಬಂದು ನಾರದ ಸತ್ಯಭಾಮೆ- ಗಲ್ಲದ ವಾರ್ತೆಗಳರುಹಿದನು 9 ಅಲ್ಲಿಂದ ದೇವಲೋಕವ ಸುತ್ತಿ ತಂದೇನೆ ಚೆಲ್ವೆನಗೆ ತಕ್ಕ ಕುಸುಮ ಗೊಲ್ಲ ಕೃಷ್ಣನ ಕೈಯಲ್ಲಿ ಕೊಟ್ಟರೆ ತನ್ನ ನಲ್ಲೆ ರುಕ್ಮಿಣಿಗೆ ಮುಡಿಸಿದನು 10 ಕೇಳುತ ಭಾಮೆ ತಲ್ಲಣಿಸಿ ಕೋಪಗಳಿಂದ ಹೇಮಮಾಣಿಕ್ಯದ್ವಜ್ರಾಭರಣ ಹಾರ ಪದಕ ಕಠಾಣಿಮುತ್ತನೆ ಚೆಲ್ಲಿ ಭೂಮಿಲಿ ಬಿದ್ದೊ ್ಹರಳಿದಳು 11 ಮಲ್ಲಿಗೆ ದವನ ಕ್ಯಾದಿಗೆ ಶಾವಂತಿಗೆ ಬಿಟ್ಟು ಒಲ್ಲೆನೆಂದೊರೆಸಿ ಕಸ್ತೂರಿಯ ವಲ್ಲಭನೊಲ್ಲದೀ ಸೊಗಸ್ಯಾತಕೆನುತಲಿ ಗಲ್ಲದ್ವಿಳ್ಯವನುಗುಳಿದಳು 12 ಸರ್ಪನಂದದಿ ಉಸುರ್ಹಾಕುತ ಭಾಮೆ ತಾ ನೇತ್ರದಿ ಜಲವ ಸುರಿಸುತಲಿ ಸರ್ಪಶಯನನೊಲ್ಲದೀ ದೇಹವ್ಯಾಕೆಂದು ಪಟ್ಟೆ ಮಂಚದಲೊರಗಿದಳು 13 ನಿಂತು ನೋಡುತ ಸತ್ಯಭಾಮೆ ಮಾಡುವೊದು ಇ- ನ್ನೆಂತು ಮಾಡಲಿಯಿದಕೆಂದು ಅಂತರಂಗದಲಿ ಯೋಚನೆ ಮಾಡಿ ನಾರಂದ ಶ್ರೀ- ಕಾಂತನ ಮನೆಮಾರ್ಗ ಹಿಡಿದ 14 ತಿರುಗಿ ಬಂದ್ಹರಿಯ ಮುಂದರುಹಿದ ನಾರಂದ ತೊರೆವೋಳು ತನ್ನ ಪ್ರಾಣವನು ಮರುಗುತ ಸೊರಗಿ ಬಿದ್ದಿರುವೊ ಭಾಮೆಯ ನೋಡಿ ಕರುಣವಿಲ್ಲೇನೊ ಶ್ರೀ ಕೃಷ್ಣ 15 ಮುನಿಯ ಮಾತನು ಕೇಳಿ ಮುಗುಳು ನಗೆಯ ನಕ್ಕು ಪರಿ ಬವಣೆಗೆ ಒಳಗಾದೆ ಧರೆಯ ಒಳಗೆ ಇಬ್ಬರ್ಹೆಂಡರಾಳುವೋರಿನ್ನು ಪರಮ ಮೂರ್ಖರು ಅವರೆಂದ 16 ಹೊದ್ದ ಪೀತಾಂಬರ ಅಲೆಯುತ ಶ್ರೀಕೃಷ್ಣ ಹದ್ದನೇರದೆ ನಡೆಯುತಲಿ ಮುದ್ದು ರುಕ್ಮಿಣಿಯ ಮುಂದಕೆ ಕರೆದ್ಹೇಳದೆ ಎದ್ದು ಬಂದನು ಭಾಮೆಮನೆಗೆ 17 ಅರ್ಕನಂತ್ಹೊಳೆಯುತ ಹೊಕ್ಕ ತನ್ನರಮನೆ ಕಕ್ಕಬಿಕ್ಕ್ಯಾಗಿ ನೋಡುತಲಿ ದಿಕ್ಕು ದಿಕ್ಕಿಗೆ ಬಿದ್ದಾಭರಣವಾರಿಸಿ ರತ್ನ ದೆಕ್ಕಿಲೇ(?) ಬಂದು ತಾ ಕುಳಿತ 18 ಮಿಂಚು ಸೂರ್ಯಗೆ ಮಿಗಿಲಾಗಿದ್ದ ಮುಖ ಬಾಡಿ ಸಂಪಿಗೆ ಸರವ ಈಡ್ಯಾಡಿ ಚಿಂತೆಮಾಡುವರೆ ಚಿನ್ನದ ಗೊಂಬೆ ಏಳೆಂದು ಮಂಚದ ಮ್ಯಾಲೆ ತಾ ಕುಳಿತ 19 ಬೆವರಿದ್ದ ಮುಖವ ಮುಂಜೆರಗಿಲಿಂದೊರೆಸುತ ಹ- ರವಿದ ಹಾರ ಹಾಕುತಲಿ ಪರಮ ಪ್ರೀತಿಲಿ ತನ್ನ ಕರಗಳಿಂದ್ಹಿಡಿದೆತ್ತೆ- ನ್ನರಗಿಳಿ ಏಳೆಂದೆಬ್ಬಿಸಿದ 20 ಸಿಟ್ಟಿಲಿಂದೆದ್ದು ಶ್ರೀ ಕೃಷ್ಣನ ಒಳೆಯಿಕ್ಕೆ ಬಿಟ್ಟವರಾರು ಈಗೆನುತ ದೃಷ್ಟಿ ತೆಗೆದು ಕೋಟಿಸೂರ್ಯ ಪ್ರಕಾಶನ ಇ- ಕ್ಕದ್ಹಾಗೆವೆಯ ನೋಡಿದಳು 21 ಇಷ್ಟು ಕ್ರೋಧಗಳ್ಯಾತಕೀ ಚಾಡಿ ನಾರಂದ ಹಚ್ಚಿ ಹೋದನೆ ಕದನವನು <ಈಔಓಖಿ size=
--------------
ಹರಪನಹಳ್ಳಿಭೀಮವ್ವ
ಈ ಧರೆಯೊಳಗಿಂಥಾ ಸೊಬಗ ಕಾಣೆನೋ ಪ ಕಂತುಪಿತ ತನ್ನ ಕಾಂತೇಯರೊಡಗೂಡಿ | ನಿಂತು ಮಜ್ಜನಗೊಂಡು ಸಂತಸವಾಂತಪರಿಅ.ಪ ನಂದಾವ್ರಜದಿ ಇಂದ್ರನೂ | ಕುಪಿತನಾಗಿ | ಅಂಧವೃಷ್ಟಿಯ ಕರೆಯಲು | ಸಿಂಧೂಶಯನ ಗಿರಿಯ | ಮಂದಹಾಸದಿ ನೆಗಹಿ | ಸುಂದರ ಗೋವ್ಗಳನೆ | ಚೆಂದಾದಿಂದಲೆ ಪೊರೆಯೆ | ಅಂದು ತೋರಿದುಪಕೃತಿಯ ನೆನೆದು ಗೋ | ವೃಂದಗಳೈ | ತಂದಿಂದಿರೆಯರಸಗೆ | ಮಿಂದು ಮಧುರಕ್ಷೀರಧಾರೆಯ ಕರೆಯಲು | ನಂದಕುವರಾನಂದವ ಬೀರಿದ 1 ಕಿರಿಯರೊಡನೆ ಕೂಡುತ | ಗೋಪಾಲನು | ಮುರಲಿನಾದವ ಗೈಯುತ | ಹರಿಣಾಕ್ಷಿಯರಮನೆ | ಹರುಷದಿಂದಲೇ ಪೊಕ್ಕು | ಪರಿಪರಿ ಲೀಲೆಯಿಂ | ಬೆರಗು ಮಾಡುತಲಿರೆ | ವರ ಧದಿಘೃತ ಭಾಂಡಗಳನೊಡೆದು | ಯದುವರನಾಲೈಸುತ ಬರುವರ ಸುಳಿವನು | ಸರಸದಿ ಕಂಡಾಕ್ಷಣದಿಂದೋಡಲು | ಸುರಿದುದು ಶಿರದಲಿ ದಧೀಘೃತಧಾರೆಯು 2 ಕರುಣಾಸಾಗರ ಹರಿಯು | ಮೋಹದಿ ವರ | ಭೈಷ್ಮಿಭಾಮೇರ ಕೂಡುತಾ | ಭರದಿ ಕುಣಿಯಲವರ ಶಿರದಿ ಮುಡಿದ ಸುರಗೀ | ಅರಳುಮಲ್ಲಿಗೆಯೊಳು | ಸೆರೆಬಿದ್ದ ಮಧುಪಗಳ | ನೆರೆದು ಝೇಂಕರಿಸುತ | ಹರುಷದಿ ಸುರಿಸಲು ಸುರ ಸಂದೋಹವು | ಪರಿ 3 ಅಂಗಳದೊಳು ಆಡುತ | ಮಂಗಳಮೂರ್ತಿ | ಸಂಗಡಿಗರ ಸೇರುತಾ | ಮುಂಗುರುಳ್ಗಳ ಮೇಲೆ | ಕೆಂದೂಳಿಯನೇ ಧರಿಸಿ | ಗೋಪಿ ರಂಗನ್ನಪ್ಪಿದಳು ಮುದದೀ || ಅಂಗನೆ ರುಕ್ಮಿಣಿ ಭಂಗಿಯ ನೋಡಲು | ಅಂಗಜ ಪಿತನನು | ಪಿಂಗದೆ ಬೇಡಲು | ಮಂಗಳಾಂಗಿ ಮನದಿಷ್ಟವ ಸಲಿಸಲು | ಸಿಂಗರಗೊಂಡನು | ಸಕ್ಕರೆ ಸುರಿಸುತೆ 4 ಸುರನದೀ ಜನಕ ತಾನೂ | ಕುಂಜವನದಿ | ಸರಸಿಜಾಕ್ಷೇರ ಕೂಡುತ | ಸರಸವಾಡುತಲಿರೇ | ಪರಮ ಸಂತೋಷದಿ | ತರುಲತೆಗಳು ಹರಿಯ ಚರಣ ಸೇವೆಯಗೈಯ್ದು | ಕದಳಿಗಳುದುರಿಸೆ | ಗಳಿತ ಫಲಂಗಳು | ಸರಸಿಜನಾಭನು ಕರುಣಿಸಿ ಭಕುತರ | ಶಿರಿಯಾಳಪುರದೊಳು ಮೆರೆದನು ವಿಭವದಿ 5 ವ್ಯಾಸರಾಜರ ಪೀಠದೀ | ರಂಜಿಪ ಲಕ್ಷ್ಮೀಶತೀರ್ಥರಿಂ ಸೇವಿಪ ಭವ | ಪರಿಪರಿ ನರಳುವ ದಾಸರ ಸಲಹಲಿನ್ನು | ಸಾಸಿರ ಶಂಖದಿ ಪೂಜೆಯಗೊಳುತಿರೆ | ದೇಶದೇಶದ ಜನರಾಲಿಸಿ ಬರುತಿರೆ | ಶ್ರೀಶಕೇಶವ ತನ್ನ ಮಹಿಮೆಯ ತೋರಿದ 6
--------------
ಶ್ರೀಶ ಕೇಶವದಾಸರು
ಈ ಭಾಗ್ಯ ನೋಡ ಒಯ್ಯಾರಿನಮ್ಮ ಸೌಭಾಗ್ಯ ಶ್ರೀ ಕೃಷ್ಣ ಕೈ ಸೇರಶೌರಿ ಪ. ಅರಳು ಅರಳು ಮೊದಲಾಗಿ ಏ ನಾರಿಸಕ್ಕರೆಯ ತಂದಿಟ್ಟು ಮಾರುವವರು ಕಡೆಯಿಲ್ಲ 1 ಕುಂಕುಮ ಅರಿಷಿಣ ಅಲಂಕಾರ ದ್ರವ್ಯವಅಂಕ ಅಂಕಣಕ ನೆರವ್ಯಾವ ಏನಾರಿ ಅಂಕ ಅಂಕಣಕ ನೆರವ್ಯಾವ ಬೆಲೆ ಮಾಡೊಕಂಕಣದ ಕೈಯ ಕೆಲದೆಯರು ಕಡೆಯಲ್ಲಾ ಏ ನಾರಿ 2 ಬುಕಿಟ್ಟು ಪÀರಿಮಳ ದ್ರವ್ಯ ಪೊಟ್ಟಣ ಕಟ್ಟಿತರಹತರಹ ಏ ನಾರಿಪೊಟ್ಟಣವ ಕಟ್ಟಿ ತರಹತರದ ದ್ರವ್ಯವ ಕೊಟ್ಟು ಕೊಂಬುವರು ಕಡೆಯಿಲ್ಲ ಏ ನಾರಿ3 ಸೋಜಿಗವಾಗಿದ್ದ ಜಾಜಿ ಮಲ್ಲಿಗೆ ಹೂ ಸೂಜಿ ಮಲ್ಲಿಗೆ ಸರಗಳು ಸೂಜಿ ಮಲ್ಲಿಗೆ ಸರಗಳ ರಂಗನ ಪೂಜೆಗೊಯ್ವೊ ಪುರುಷರು ಏ ನಾರಿ4 ನಾಲ್ಕು ದಿಕ್ಕಿಗೆ ದಿವ್ಯ ಆಕಳ ಹಿಂಡುಗಳು ಸಾಕುವ ಎರಳೆ ಎಳಿಗಾವು ಏ ನಾರಿಸಾಕುವ ಎರಳೆ ಎಳಿಗಾವು ಹೂಂಕರಿಸಿ ಬಾಹೋ ಚಲ್ವಿಕೆಯ ಏ ನಾರಿ 5 ಎತ್ತೆತ್ತ ನೋಡಿದರೂ ಮುತ್ತಿನ ಪಲ್ಲಕ್ಕಿಉತ್ತಮ ರಥವ ಹಿಡಿದೇಜಿ ಏ ನಾರಿಉತ್ತಮ ರಥವ ಹಿಡಿದೇಜಿ ಮ್ಯಾಲಿನ್ನು ಹತ್ತಿ ಬಾಹುವರು ಕಡೆಯಿಲ್ಲ ಏ ನಾರಿ6 ಬಾಜಾರದೊಳಗಿನ್ನು ರಾಜಸಿಂಹಾಸನ ರಾಜ ರಾಮೇಶ ಕುಳಿತಲ್ಲಿಯೆ ಏ ನಾರಿ ರಾಜ ರಾಮೇಶ ಕುಳಿತು ಪೂಜೆಗೊಂಬೊಮೂರ್ಜಗವು ಮುದದಿಂದ ಏ ನಾರಿ7
--------------
ಗಲಗಲಿಅವ್ವನವರು
ಈ ಮಾತುರ ನೀಯದಿದ್ದರೆ ನಿನ್ನ | ಧಾಮದಲ್ಲಿಗೆ ಪೋಗಿ ಸೇರಿ ಸುಖಿಪದೆಂತೋ ಪ ಹುಟ್ಟಿದಾರಭ್ಯದಿ ಹೊಟ್ಟಿ ಬಟ್ಟಿಯಲಿಂದ | ಕಷ್ಟ ಬಟ್ಟೆನೆಂದು ಹೇಳಲಿಲ್ಲಾ | ಸೃಷ್ಟೇಶ ಕಾಡುವ ಅಷ್ಟ್ಟ ಮಹಾಮದಗಳ ನಷ್ಟಗೊಳಿಸಿ ನಿನ್ನ | ನಿಷ್ಟಿಲಿಡೆಂದೆಲ್ಲದೆ 1 ಸತಿ ಸುತರಿಗೆ ಯೇನೋ | ಗತಿ ಗೋತ್ರವಿಲ್ಲೆಂದು | ಸತತ ನಿನ್ನ ಕೇಳಿ ದಣಿಸಿಲಿಲ್ಲಾ | ಪತಿತ ಪಾವನ ಎನಗೆ ಗತಿಯಾಗುವುದಕೆ | ಸುಪಥವನೆ ತೋರುವ | ಮತಿಕೊಡೆಂದೆನಲ್ಲದೆ2 ಕರುಣಿ ಬೇಡಿಕೊಂಬೆ | ಉರು ಕಾಲದಲಿ ನಿನ್ನ | ಶರಣರ ಸಂಗತಿಲೆನ್ನ ಇಟ್ಟು | ಪರಮ ಶುದ್ಧನ ಮಾಡಿ ವಿಜಯವಿಠ್ಠಲ ನಿನ್ನ | ಚರಣಸೇವೆ ನಿರಂತರ ಕೊಡೆಂದೆನಲ್ಲದೆ3
--------------
ವಿಜಯದಾಸ
ಈ ಸಿರಿಯ ನಂಬಿ ಹಿಗ್ಗಲು ಬೇಡ ಮನವೆ ಪ ವಾಸುದೇವನ ಭಜಿಸೊ ಒರಟು ಜೀವನವೆ ಅ ನೆಂಟರೂರಿಗೆ ಹೋಗಿ ನಾಲ್ಕು ದಿವಸವಿದ್ದರೆಎಂಟು ದಿನದಾಯಾಸ ಅಟ್ಟಬಹುದೊಉಂಟು ಸೌಭಾಗ್ಯವೆಂಬ ಧೈರ್ಯವ ಬಿಟ್ಟು ವೈ-ಕುಂಠವಾಸಿಯ ಭಜಿಸೊ ತುಂಟ ಜೀವನವೆ1 ಮಾಯಾ ಸಂಸಾರಕ್ಕೆಸಡಗರವಗೊಂಡು ಬರಿದೆ ಭ್ರಮಿಸಲೇಕೆಬಿಡದೆ ಯಮನಾಳುಗಳು ಬಾರೆಂದು ಎಳೆವಾಗಮಡದಿ ಮಕ್ಕಳು ಬಹರೆ ಭಂಡ ಜೀವನವೆ2 ಇಷ್ಟ ಸಂಪತ್ತನ್ನು ಬಡವರಾ ಕರೆತಂದುಕೊಟ್ಟು ಮಾಡಿದ ಪುಣ್ಯಫಲ ತನ್ನದೊಸೃಷ್ಟಿಯೊಳು ಕಾಗಿನೆಲೆಯಾದಿಕೇಶವನಂಘ್ರಿಮುಟ್ಟಿ ಮನದಲಿ ಭಜಿಸೊ ಭ್ರಷ್ಟಜೀವನವೆ3
--------------
ಕನಕದಾಸ
ಈ ಸುದ್ದಿ ಹೇಳಮ್ಮಇಂದಿರೇಶಗೆ ಹೋಗಿಶ್ರೀಶನ ತಂಗಿಯರು ಮುಯ್ಯಾಸೋಸಿಲೆ ತಂದರೆಂದು ಪ. ಸತ್ಯ ಲೋಕದ ದೊರೆಯುತಾನು ಮತ್ತೆ ಪಾಂಡವರ ಕೂಡಿಅರ್ಥಿಲೆ ಬಂದು ಇಳಿದಾರೆಂದುಸತ್ಯಭಾಮೆಯ ರಮಣಗೆ 1 ಸ್ವರ್ಗದರಸು ಭೀಮರಾಯನ ಅಗ್ರಜಅನುಜರ ಕೂಡಿ ಶೀಘ್ರದಿಬಂದಿಳಿದಾರೆಂದುರುಕ್ಮಿಣಿ ರಮಣಗೆ2 ವೈವಸ್ವತನು ರಾಮೇಶನ ವೈಭವವ ನೋಡುವೆನೆಂದುತಾವಿಭವ ಸಹಿತ ಬಂದು ದೇವಾಧಿ ದೇವನ ಮುಂದೆ3
--------------
ಗಲಗಲಿಅವ್ವನವರು
ಈ ಸೊಬಗು ಇನ್ನಾವ ಕ್ಷೇತ್ರದಲಿ ಕಾಣೆನಾ ಇಲ್ಲಿ | ವಾಸುದೇವ ಮುನಿಯಿದ್ದ ಕಾರಣ ಪ ರಾಜಧಾನಿಯ ನೋಡೆ ಇಂದ್ರಭವನಕೆ ಮೇಲು | ತೇಜದಲಿ ನೋಡೆ ಸೂರ್ಯನದೆ ಸೋಲು || ಪೂಜೆದಲಿ ನೋಡೆ ಸರ್ವ ಧರಣಿಗೆ ಮೇಲು | ಭೋಜನದಲಿ ನೋಡೆ ಅಮೃತಕೆ ಮೇಲು 1 ಉತ್ಸಾಹದಲಿ ನೋಡೆ ನಹಿ ಪ್ರತಿ ನಹಿ ಪ್ರತಿ | ಸತ್ಸಂಗತಿಯ ನೋಡೆ ಬುಧ ಸಂಗತಿ || ಸುಚರಿತೆಯ ನೋಡೆ ಶುದ್ಧ ಸತ್ವದ ನೀತಿ | ಮತ್ಸರ ಮೆರೆದು ನೋಡೆ ಇಲ್ಲೆ ಮುಕುತಿ 2 ಓಲಗದಲಿ ನೋಡೆ ಸತ್ಯಲೋಕಕೆ ಸಮ | ಪೇಳುವ ಕೀರ್ತನೆ ನೋಡು ವೇದಸ್ತೋಮ || ಬಾಲ ಉಡುಪಿಯ ಕೃಷ್ಣ ವಿಜಯವಿಠ್ಠಲರೇಯನ | ತಿಳಿದ ಮಾನವಗೆ ಫಲವು ನಿಷ್ಕಾಮಾ3
--------------
ವಿಜಯದಾಸ
ಈಗಲೊ ಇನ್ನಾವಾಗಲೊ ಈ ತನುವು ಪೋಗದಿರದು ಪ. ಭೋಗದಾಸೆಯ ಬಿಡಿಸಯ್ಯ ನಾಗಶಯನ ನಳಿನನಯನ ಅ.ಪ. ಎಂಬತ್ತು ನಾಲ್ಕು ಲಕ್ಷ ಯೋನಿಗಳಲಿ ಬಂದು ಅಂಬುಜಾಕ್ಷನೊಂದೆನಯ್ಯ ಅಂದಂದು ಮಾಡಿದ ಅಘದಿಕುಂಭೀಪಾಕ ಮೊದಲಾದ ಕುತ್ಸ್ಸಿತ ನರಕದಿ ಬಿದ್ದುಉಂಬ ದುಃಖವ ಬಿಡಿಸಯ್ಯ ಉದಧಿಶಯನ ಪುಣ್ಯಕಥನ 1 ಓದನ ಮಾತ್ರಕ್ಕೆ ಸಭೆಯೊಳುವಾದಿಸುವೆ ವೇದಶಾಸ್ತ್ರ ಉಪನ್ಯಾಸಂಗಳನು ಮಾಡುವೆಕ್ರೋಧರಹಿತನಾಗಿ ಅವರು ಕೊಡಲು ಕೊಂಡಾಡುವೆಆದರಿಸದಿದ್ದರವರ ಬೈದು ಬರುವೆ ಖಿನ್ನನಾಗಿ2 ದೇಶದೇಶಂಗಳಿಗೆ ಧನದ ಆಸೆಗಾಗಿ ಪೋಗಿ ಪೋಗಿಬ್ಯಾಸರದೆ ಕಂಡವರ ಕಾಡಿ ಬೇಡಿ ಬಳಲಿದೆಕಾಸಿನ ಲಾಭವು ಕಾಣೆ ಘಾಸಿಯಾದೆನಯ್ಯ ಶ್ರೀನಿ-ವಾಸ ನಿನ್ನ ಪೂಜಿಸದೆ ಮೋಸಹೋದೆನಯ್ಯ ನಾನು3 ಸ್ನಾನಮೌನಂಗಳನು ಮಾಡುವೆ ಸಕಲ ಜನರ ಮುಂದೆಮಾನವರಿಲ್ಲದಾಗಲೆ ಮೌನವಿಲ್ಲ ಮಂತ್ರವಿಲ್ಲಜ್ಞಾನವ ಪೇಳುವೆ ಮೋಸಕಟ್ಟ[ಲೆ]ಯ ಮಾಡಿಕೊಂಡುಧ್ಯಾನಿಸದೆ ಹೊಟ್ಟೆಯನ್ನು ಹೊರೆವೆ ನಿನ್ನ ಮರೆವೆ4 ಕರ್ಣ ಕೇಳದು ಅನ್ಯವಾರ್ತೆ[ಗೆ] ಹೊತ್ತುಸಾಲದುಇನ್ನು ಹೇಸಿಕೆ ಮನಕೆ ಬಾರದು ಮುಂದಿನ ಗತಿಗೆ ದಾರಿ ತೋರದು 5 ಕಂಬುಕಂಧರ ನಿನ್ನ ನೆನೆಯದೆ 6 ವೃದ್ಧನಾದೆನು ಪಲ್ಗಳೆಲ್ಲ ಬಿದ್ದವು ಕಣ್ಣುಕಾಣಬಾರದುಎದ್ದು ನಿಲ್ಲಲಾರೆನಯ್ಯ ಉದ್ಧರಿಸೊ ಹಯವದನತಿದ್ದಿ ಮನವ ನಿನ್ನ ಪಾದಪದ್ಮವ ನೆನೆವಂತೆ ಮಾಡೊಪೊದ್ದಿದವರ ಪೊರೆವ ಕರುಣಾಸಿಂಧು ಎನಗೆ ನೀನೆ ಬಂಧು 7
--------------
ವಾದಿರಾಜ
ಈಗಿದ್ದ ಇರವೇ ಮನುಜರಿಗೆ ಈಗಿದ್ದ ಇರವೇ ? ಪ ಮಾಯಾಪ್ರಪÀಂಚದ ಬಲೆಯ ಪಾಶಕ್ಕೆ ಸಿಕ್ಕಿ ಕಾಯದೊಳಿಹ ಪರಮಾತ್ಮನನರಿಯದೆ ಅ.ಪ. ನರರ ಯೋನಿಗೆ ಬಂದು ನಡತೆ ಸಜ್ಜನರೆಂದು ಬರಿಯ ಬನ್ನಣೆಯೊಳು ಬೆರೆತಿಹರಲ್ಲದೆ ಶರೀರ ಸುಖವನ್ನೆಲ್ಲ ಮರೆತು ತನ್ನಾತ್ಮನೊಳಿರುವ ಸುಖವು ತಾನು ಬಯಸಬೇಕಲ್ಲದೆ ಈಗಿದ್ದ 1 ಮಂದಮತಿಗಳಾಗಿ ಮಮತೆಮಾರ್ಗಕೆ ತಾಗಿ ಅಂದಣದೈಶ್ವರ್ಯ ಬಯಸುವವರಲ್ಲದೆ ಹೊಂದಿಸಿ ಸಚ್ಚಿದಾನಂದ ಬ್ರಹ್ಮದಿಮನ ಬಂದಾಗಿ ನಲಿಸಿ ವಿರಕ್ತಿಯ ಬಂದಿಯೊಳ್ಬಲಿಸಿ ನಿಂದು ನಿಜದ ನಿರುಪಮನೆ ನಿತ್ಯಾತ್ಮನೆ ಎಂದು ಕುಂದದೆ ಸಹಜಾನಂದನಾಗದ ಮೇಲೆ ಈಗಿದ್ದ 2 ಪರಮಪುರುಷರಾದ ಪ್ರಹುಢ ಸಂತರ ಪಾದ ಸ್ಮರಣೆಯ ನಿರುತ ಮಾಡಿರಬೇಕಲ್ಲದೆ ಪರತತ್ವಮಯನಾದ ಗುರುಮಹಾರಾಯನ ಕರುಣವ ಪಡೆದು ಕಣ್ಣಿನೊಳು ಶ್ರೀ ಚರಣವ ಪಿಡಿದು ಬರಿಯಮಾತಲ್ಲವೆಂದರಿತು ಪೂರ್ಣ ಬ್ರಹ್ಮ ಗುರುವಿಮಲಾನಂದ ಭರಿತನಾಗದ ಮೇಲೆ ಈಗಿದ್ದ 3
--------------
ಭಟಕಳ ಅಪ್ಪಯ್ಯ
ಈಗುಂಟೋ ಆಗುಂಟೋ ಈ ದೇಹ ಏಗಬಲ್ಲರು ಯಾರು ಈ ಜಗದ ಗುಂಟ ಪ ನಾಲ್ಕು ದಿನ ಇರುವಾಗ ಚೆನ್ನಾಗಿ ಇರಬೇಕು ನಾಲ್ಕಾರು ಜನರಿಗೆ ಉಪಕಾರ ಮಾಡಬೇಕು ಬಾಲೆ ಸರಸತಿಗೆ ಪರಧನಕೆ ವಸ್ತುವಿಗೆ ಏಕೆ ಹಾಳು ಮನವನು ನಿಲಿಸಿ ಕೆಡಿಸಬೇಕು 1 ಹಾರುವ ಮನವನ್ನು ಕಟ್ಟಿ ಹಾಕಬೇಕು ಹಾರುವನ ಕಂಡರೆ ತಡೆಯಬೇಕು ಹಾರಲೇಕೆ ಪರರ ಒಡವೆ ಕಂಡೊಡನೆಯೆ ಬಾರಿಬಾರಿಗೆ ಬರಿದೆ ಕೆಣಕಲೇಕೆ 2 ವಿಚಾರಿಸಿಕೋ ದೇವ ಶಿಷ್ಟರ ಭಂಟ ಊರೊಳಗೆ ಉಚಾಯಿಸುತಿದ್ದಾರೆ ಐದಾರು ಮಂದಿ ಎಚ್ಚರಿಕೆ ಹಾಕುತ್ತ ಇದ್ದಾರೆ ದುಷ್ಟ ಮಂದಿ ಎಚ್ಚರಿಸೊ ಉದ್ಧರಿಸೊ ನೆಂಟ ಜಾಜಿಪುರೀಶ3
--------------
ನಾರಾಯಣಶರ್ಮರು
ಈಡಾಡಿದ್ಯಾ ಪಾಪಂಗಳ ಆಹಾ ಪ ಮನಸಿಲಿ ನೋಡಿದ್ಯಾ ಯತಿಗಳನ್ನ ನಾಡಿನೊಳಗೆ ಈಡಿಲ್ಲದಿಹ ಈ ಗುರುಗಳಾ ಅ.ಪ. ಹೊದ್ದ ಕಾವಿಶಾಠಿಯಲ್ಲಿ ಶ್ರೀ ಮುದ್ರೆ ಹಚ್ಚಿದ ದೇಹಕಾಂತಿಯು ಆಹಾ ತಿದ್ದಿದ ಅಂಗಾರದ ನಡುವೆ ಅಕ್ಷತೆಯು ಎದ್ದು ಬರುವಂಥ ಈ ಮುದ್ದು ಗುರುಗಳಾ 1 ನಿಂತ ಎದುರಲ್ಲಿ ಮುಖ್ಯಪ್ರಾಣಾ ಬೇಡಿ- ದಂಥ ವರಗಳ ಕೊಡುವ ಜಾಣಾ ಆಹಾ ಜಗದಂತರದೊಳಗೆ ಪ್ರವೀಣಾ ಸೀತಾ- ಕಾಂತರೊಳಗೆ ಅತಿಪ್ರಾಣಾ2 ಮಂತ್ರಾಲಯದಲ್ಲಿರುವ ಮುದ್ದು ಬೃಂದಾವನದ ನೋಟ ನಮ್ಮಲಿದ್ದ ಪಾಪಗಳೆಲ್ಲ ಓಟಾ ಅಲ್ಲಿ ವಿದ್ವಾಂಸರ ಜಗ್ಯಾಟ ಆಹಾ ಮುದ್ದುವಾಹನನೆ ನೀನು ನರಸಿಂಹವಿಠ್ಠಲ ದೂತ ದಾರಿದ್ರ್ಯಗಳೆಲ್ಲವ ಪರಿಹರಿಸುವಂಥಾ 3
--------------
ನರಸಿಂಹವಿಠಲರು