ಒಟ್ಟು 606 ಕಡೆಗಳಲ್ಲಿ , 80 ದಾಸರು , 528 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

126 - 3ಚತುರ್ಥ ಕೀರ್ತನೆಸತ್ಯ ಬೋಧಾರ್ಯರ ವೃತತಿಜಾಂಘ್ರಿಗಳಲ್ಲಿಸತತ ಶರಣಾದೆ ನಾಹಿತದಿ ಪಾಲಿಪರುಪ್ರತತ ಭೂಮಾದಿ ಗುಣಸಿಂಧು ಪುರುಷೋತ್ತಮನವಿತತ ಮನದಲಿ ಧ್ಯಾನಿಸಿ ಒಲಿಸಿಕೊಂಡ ಪಸತ್ಯಬೋಧಾರ್ಯರು ಭಾಗೀರಥಿ ಕುರಿತುಯಾತ್ರೆ ಮಾಡಲು ಮನದಿ ಯೋಚಿಸುತಲಿದ್ದಾಗಇದ್ದ ಕಡೆಯಲ್ಲೆ ಗಂಗಾ ಬಂದು ಒದಗುವಳುಎಂದು ಸ್ವಪ್ನವು ಆಯಿತು ಅಂದು ರಾತ್ರಿಯಲಿ 1ಶ್ರೀ ಮಠಕ್ಕೆ ಅರ್ಧಗಾವುದ ದೂರ ಇರುವಂಥಭೂಮಿಯಲಿ ಕೃಷಿಕೂಪ ಬಹು ದೊಡ್ಡದಲ್ಲಿಸಮೀಪಸ್ತ ಔದುಂಬರತರುಮೂಲದಿಂಅಮರ ತಟನೀ ಬರುವ ವೇಳೆಯು ತಿಳಿಯಿತು 2ಶ್ರೀಗುರು ನವಾಬನಿಗೂ ಖಂಡೇರಾಯನಿಗುನಗರಜನರಿಗು ತಿಳಿಸಿ ಆ ಸ್ಥಳಕ್ಕೆ ಪೋಗೆಗಂಗಾವತರಣವು ಆಯಿತು ಸೂಚಿತವೇಳೆಕಂಗೊಳಿಸುವ ಬಾಗೀರಥೀ ಧಾರಾಸುರಿದು 3ತ್ರಿವಿಕ್ರಮ ಸುಪಾದಜಾ ತ್ರಿಜಗತ್ ಪಾವನಿಗಂಗಾತ್ರಿದಶೇಶ್ವರಿ ನಳಿನಿ ಸೀತಾನಮಸ್ತೆತ್ರಾಹಿಜಾಹ್ನವಿಭಾಗೀರಥೀ ನಮೋ ಭೋಗವತಿತ್ರಿಪಥ್‍ಗಾಮಿನಿಪಾಹಿಮಾಲತಿ ನಂದಿನಿ4ನವಾಬನು ಮಂತ್ರಿಯು ನೆರೆದಿದ್ದ ಜನರೆಲ್ಲದೇವ ತಟಿನಿ ಧಾರಾ ಸುರಿದದ್ದು ನೋಡಿದೈವೀಕ ಈ ಮಹಿಮೆ ಕೊಂಡಾಡಿ ಸ್ನಾನಜಪಸೇವೆದಾನಾದಿಗಳ ಮಾಡಿದರು ಮುದದಿ 5ವಿಷ್ಣುತೀರ್ಥ ಎಂಬ ನಾಮ ಈ ತೀರ್ಥಕ್ಕೆವಿಷ್ಣು ಭಕ್ತಾಗ್ರಣಿ ಸದಾಶಿವನ ಲಿಂಗವಿಷ್ಣು ತೀರ್ಥದ ದಡದಿ ಇಹುದು ಶರಣೆಂಬೆವಿಷ್ಣು ್ವಂಘ್ರಿ ಜಾತೆಗೂ ಉಮೇಶನಿಗೂ ಶ್ರೀಶಗೂ 6ಶ್ರೀ ಸತ್ಯಬೋಧರು ಗಂಗೆಯ ತರಿಸಿದ್ದುಶ್ರೀ ಸತ್ಯಬೋಧರ ಬಹು ಇಂಥ ಮಹಿಮೆವಸುಮತಿಯಲಿ ಹರಡಿ ದೇಶ ದೇಶಗಳಿಂದಭೂಸುರರು ಸಜ್ಜನರು ಬಂದು ಸೇವಿಪರು 7ಪಟ್ಟಣದ ಮಧ್ಯದಿ ನವಾಬ ಕೊಡಿಸಿದ ಸ್ಥಳದಿಕಟ್ಟಡವು ಶ್ರೀಮಠ ವಿಸ್ತಾರವಾದ್ದುಮಠದಲ್ಲೇ ಉಂಟೊಂದು ಸೋಪಾನ ಭಾವಿಯುಕಟ್ಟೆಯಲಿ ಶಿವಲಿಂಗ ಭಾವಿಯಲಿ ಗಂಗಾ 8ಭೃಗು ಅಂಶ ವಿಜಯದಾಸಾರ್ಯರ ಪ್ರಭಾವವುಏಕದಂತಾಂಶ ಗೋಪಾಲ ದಾಸಾರ್ಯರ ಪ್ರಭಾವಭಾಗಣ್ಣಾನುಜರು ಈರ್ವರು ಪ್ರಭಾವವಶ್ರೀ ಗುರುಗಳು ಮೆಚ್ಚಿ ಮಾನ್ಯ ಮಾಡಿದರು 9ವಿದ್ವತ್ಸ್‍ಭೆಯಲಿ ಗೋಪಾಲದಾಸಾರ್ಯರುಆ ದಾಸವರ್ಯರ ಅನುಜರು ಈರ್ವರುದೇವತಾಂಶದವರುಅಪರೋಕ್ಷಪ್ರಚುರರುಎಂದು ಜನರಿಗೆ ನಿದರ್ಶನ ತೋರಿಸಿದರು 10ವಿಠ್ಠಲ ನೃಹರಿವ್ಯಾಸ ಶ್ರೀಸಹ ವೇಂಕಟರಾಮಘೋಟಕಾಸ್ಯ ಮಧ್ವೇಶನ್ನರಾಧಿಪಂತಮಠದಲ್ಲಿ ಜಗನ್ನಾಥ ದಾಸಾರ್ಯರ ಸೇವೆಕೊಂಡು ಬಹು ಪ್ರೀತಿಯಲಿ ಅನುಗ್ರಹ ಮಾಡಿಹರು 11ಅಮಲ ವೈದಿಕ ತತ್ವ ಮಧ್ವಸಿದ್ಧಾಂತವಭೂಮಿ ದೇವರಿಗೆ ಬೋಧಿಸಿ ಸರ್ವಜನರ್ಗುಕ್ಷೇಮ ಒದಗಿಸಿ ರಮಾಕಾಂತನ್ನ ಸ್ಮರಿಸುತಈ ಮಹಿಯೋಳ್ ಸರ್ವಜನ ಪ್ರಿಯತಮರಾಗಿಹರು 12ಒಳ್ಳೆರೀತಿಯಲಿ ಚತ್ವಾರಿವತ್ಸರಮಠಆಳಿ ಶಾಲಿಶಕ ಹದಿನೇಳ್ ನೂರೈದುಫಾಲ್ಗುಣ ಕೃಷ್ಣ ಪ್ರತಿಪದ ದಿನ ಹರಿಧ್ಯಾನದಲ್ಲಿ ಕುಳಿತರು ಲೋಕ ಚಟುವಟಿಕೆ ತೊರೆದು 13ಸತ್ಯಬೋಧರ ವೃಂದಾವನದಿ ಅವರೊಳಿಹನುಸತ್ಯಬೋಧಾಹ್ವಯನು ಶ್ರೀಸಹಹಯಾಸ್ಯವಾತಸೇವಿತ ರಾಮಕೃಷ್ಣನೃಹರಿ ವ್ಯಾಸಭೃತ್ಯವತ್ಸಲ ವಾಮದೇವನುತನಾಗಿ 14ದರ್ಶನ ಪ್ರದಕ್ಷಿಣೆ ನಮನ ಪಾದೋದಕಸಂಸ್ಕøತಿಸುಚರಿತ್ರೆ ಪಾರಾಯಣಸಚ್ಛಾಸ್ತ್ರ ಪ್ರವಚನ ಜಪತಪದಾನಾದಿಗಳುವಾಂಛಿತಪ್ರದ ಸರ್ವ ಪೀಡಹರವು 15ಪುತ್ರಧನ ಆರೋಗ್ಯ ಆಯುಷ್ಯ ಮಾಂಗಲ್ಯತಾಪತ್ರಯ ಪರಿಹಾರ ರೋಗ ನಿವೃತ್ತಿಕ್ಷಿಪ್ರಲಭಿಸುವುವು ಹರಿಗುರುಗಳ ದಯದಿಂದಸುಶ್ರವಣ ಪಠನ ಈ ಗ್ರಂಥಮಾಳ್ಪರಿಗೆ 16ಸತ್ಯಸಂಧಾರ್ಯರು ಮಹಾಮಹಿಮ ಶಿಷ್ಯರುಸತ್ಯಬೋಧರ ಆರಾಧನ ಭಕ್ತಿಉತ್ಸಾಹದಿ ಮಾಡಿದರು ಅದ್ಯಾಪಿ ಸಹಸ್ರಾರುಭಕ್ತರು ಸೇವಿಸುತಿಹರು ಪ್ರೇಮದಲಿ 17ಹೇಮಗರ್ಭನತಾತಶ್ರಿಪತಿ ಜಗನ್ನಾಥಅಮಲಗುಣಗಣಸಿಂಧು ಪ್ರಸನ್ನ ಶ್ರೀನಿವಾಸರಾಮ ಹಯಮುಖವ್ಯಾಸನೃಹರಿಗೆ ಪ್ರಿಯತಮರೆನಿಮ್ಮಲ್ಲಿ ಶರಣಾದೆ ಸತ್ಯಬೋಧಾರ್ಯ 18 ಪ|| ಇತಿ ಶ್ರೀ ಸತ್ಯಬೋಧ ಚರಿತ್ರೆ ಸಂಪೂರ್ಣಂ ||
--------------
ಪ್ರಸನ್ನ ಶ್ರೀನಿವಾಸದಾಸರು
161ಆರಿಗೆ ವಧುವಾದೆ - ಅಂಬುಜಾಕ್ಷಿ |ಕ್ಷೀರಾಬ್ಧಿ ಕನ್ನಿಕೆ - ಶ್ರೀ ಮಹಾಲಕುಮೀ ಪಶರಧಿಬಂಧನ ರಾಮಚಂದ್ರ ಮೂರುತಿಗೊ |ಪರಮಾತ್ಮ ಸಿರಿಯನಂತ ಪದ್ಮನಾಭನಿಗೋ ||ಸರಸಿಜಭವ ಜನಾರ್ದನ ಮೂರುತಿಗೋ |ಎರಡು ಹೊಳೆಯ ರಂಗಪಟ್ಟಣವಾಸಗೊ 1ಚೆಲುವ ಬೇಲೂರು ಚೆನ್ನಿಗರಾಯನಿಗೊ |ಕೆಳದಿ ಹೇಳುಡುಪಿಯ ಕೃಷ್ಣರಾಯನಿಗೊ ||ಇಳೆಯೊಳು ಪಂಢರಪುರ ವಿಠಲೇಶಗೊ ||ನಳಿನಾಕ್ಷಿ ಹೇಳು ಬದರೀನಾರಾಯಣನಿಗೊ 2ಮಲಯಜಗಂಧಿ, ಬಿಂದುಮಾಧವರಾಯಗೊ |ಸುಲಭದೇವ ಪುರುಷೋತ್ತಮಗೊ ||ಫಲದಾಯಕನಿತ್ಯಮಂಗಳನಾಯಕಗೊ |ಚೆಲುವೆ ನಾಚದೆ ಪೇಳು ಶ್ರೀವೆಂಕಟೇಶಗೋ 3ವಾಸವಾರ್ಚಿತ ಕಂಚೀವರದರಾಜ ಮೂರುತಿಗೊ |ಆ ಸುರವಂದ್ಯ ಶ್ರೀಮುಷ್ಣದಾದಿ ವರಹನಿಗೊ ||ಶೇಷಶಾಯಿಯಾದ ಶ್ರೀ ರಂಗನಾಯಕಗೊ |ಸಾಸಿರ ನಾಮದೊಡೆಯ ಅಳಗಿರಿಯೀಶಗೋ 4ಶರಣಾಗತರನು ಪೊರೆವ ಶಾರ್ಙಪಾಣಿಗೊ |ವರಗಳನೀವ ಶ್ರೀನಿವಾಸ ಮೂರುತಿಗೋ |ಕುರುಕುಲಾಂತಕ ರಾಜಗೋಪಾಲ ಮೂರುತಿಗೊ |ಸ್ಥಿರವಾದ ಪುರಂದರವಿಠಲರಾಯನಿಗೊ 5
--------------
ಪುರಂದರದಾಸರು
2 (ಅ) ಗುರುಸ್ತುತಿ165ಅಗಲಿ ಜೀವಿಸಬಹುದೆ ಕರುಣಿಯನಗಲಿ ಜೀವಿಸಬಹುದೆ ಪ.ಆಗಮಜÕನಬುಧಉಡುಗಣ ಚಂದ್ರನವಿಗಡಜನಾರ್ದನವರ್ಯರನುಳಿದುಅ.ಪ.ಇಳೆಯೊಳು ಸುರತರುವಿಲ್ಲದ ಕಾರಣನಳಿನನಾಭಾಜÕದೊಳವತರಿಸಿನೆಳಲೊಳಿರಿಸಿ ಬಹುಸಲಹಿಕರವಬಿಟ್ಟುಸಲೆ ಹರಿಪುರಕೆ ಪೋಗಿಹ ಮಾತಾಪಿತನ 1ಆರುಕರ್ಮಕ್ಕೆ ಎಳ್ಳನಿತು ಕುಂದಿಲ್ಲದೆಮೀರದೆ ಹರಿಪದಸೇವೆಯನುಸೂರೆ ಮಾಡಿದ ತತ್ವಸಾರವ ಜನರೊಳುಮೀರಿದ ಸುಗುಣನ ಪರಮಪಾವನನ 2ಸೀತಾಪತಿಯ ಪಾದಯಾತ್ರೆಯ ಕಾಲಕೆಇತರ ವಿಷಯ ಭ್ರಾಂತಿಯಜರಿದುಪ್ರತತಿಮತಿಗುಣಾನ್ಮುಕ್ತಿಮೇತೇ ವ್ರಜಂತಿಯೆಂದುಪಥವಿಡಿದ ಪ್ರಸನ್ವೆಂಕಟೇಶ ಪ್ರಿಯನ 3
--------------
ಪ್ರಸನ್ನವೆಂಕಟದಾಸರು
212ತುಂಗೆ ಮಂಗಳತರಂಗೆ-ಹರಿಸರ್ವಾಂಗೇ |ಜಯಜಯ ಜಯತು ತುಂಗೆ ಪಆದಿಯಲೊಬ್ಬ ದೈತ್ಯ ಮೇದಿನಿಯಕದ್ದೊಯ್ದ |ಸಾಧಿಸಿ ರಸಾತಳದಲ್ಲಿರಿಸೆ ||ಭೇದಿಸಿದವನ ನಾಸಿಕದಲ್ಲಿ ಪುಟ್ಟಿದೆ |ಆದಿವರಾಹನ ದಾಡೆಯಲಿ ಬಂದೆ ದೇವಿ 1ಜಲವೆಲ್ಲ ಹರಿಮಯ, ಶಿಲೆಯೆಲ್ಲ ಶಿವಮಯ |ಮಳಲುಮಿಟ್ಟೆಗಳೆಲ್ಲ ಮುನಿಮಯವು ||ಬೆಳೆದ ದರ್ಭೆಗಳು ಸಾಕ್ಷಾತು ಬ್ರಹ್ಮಮಯ |ನಳಿನನಾಳವು ಸರ್ವ ವಿಷ್ಣುಮಯ 2ಇದೆ ವೃಂಧಾವನ, ಇದೆಕ್ಷೀರಾಂಬುಧಿ|ಇದೆ ವೈಕುಂಠಕೆ ಸರಿಮಿಗಿಲೆನಿಸಿದೆ ||ಇದೆ ಬದರಿಕಾಶ್ರಮ, ಇದೆ ವಾರಣಾಸಿಗೆ,ಅಧಿಕವೆಂದೆನಿಸಿದೆ ದೇವಿ ತುಂಗೆ 3ಧರೆಗೆ ದಕ್ಷಿಣವಾರಣಾಸಿಯೆಂದೆನಿಸಿದೆ |ಪರಮಪವಿತ್ರ ಪಾವನ ಚರಿತ್ರೆಯು ನಿನ್ನ ||ಸ್ಮರಣೆಮಾತ್ರದಿ ಕೋಟಿ ಜನ್ಮದಘವನಳಿವ |ಪರಮಸಾಯುಜ್ಯದ ಫಲವೀವ ದೇವಿ4ಪರಮಭಕ್ತ ಪ್ರಹ್ಲಾದಗೊಲಿದು ಬಂದ |ಪರಮನರಸಿಂಹಕ್ಚೇತ್ರವೆಂದೆನಿಸಿ ಮೆರೆದೆ ||ಧರೆಯೊಳಧಿಕವಾದ ಕೂಡಲಿ ಪುರದಲಿ |ವರದಪುರಂದರವಿಠಲನಿರಲು ಬಂದೆ5
--------------
ಪುರಂದರದಾಸರು
ಅಂದುಂಟಿಂದಿಲ್ಲೇಮಾಧವನಿನ್ನ |ಹೊಂದಿದವರ ಭಯ ಕಳೆದು ಪೊರೆವ ದಯೆ ಪಶಂತನು ಭೂಪನರಸಿ ಬಳಲಿ |ಕಂತುಜನಕನೀ ಗತಿಯೆನಲೀ ||ಅಂತರಿಸದೆ ವಿಧವೆರಲಾಕ್ಷಣಸಂತತಿ ನೆಲಸಿದೆ ಮನ್ನಿಸುತಾ ದಯ 1ಕಲಿಯಾಳಿಕೆ ಬಹಳಾಗಿರಲು |ಮಲಿನಯುಕ್ತ ಧರೆಯಾಗಿರಲು ||ತಿಳಿದ ಹದಿನೆಂಟು ಪುರಾಣವ ವಿರಚಿಸಿ |ಸಲಹಿದೆಯುತ್ತಮ ಜೀವರನಾ ದಯೆ 2ತಿಳಿಯದೆ ನಿನ್ನೊಲುಮೆಯವಗೆಂದು |ನಳಿನಾನುಜ ನೀ ಬೇಕೆಂದು ||ಕೊಳಲರಿದರ ಕರದಿತ್ತಾರಣದೊಳು |ಗೆಲಿಸಿದೆ ತೋಂಡನ ಮುದದಿಂದಾ ದಯೆ 3ಪಾದಜಲರಸರ ಬದುಕಿಸಿತು |ಪಾದಪೆಸರೇ ಪತಿತನ ಕಾಯ್ತು ||ಪಾದದಮುಂದು ಕುಬೇರಜರೀರ್ವರ |ಪಾದವೇ ಸದ್ಗತಿಗೈದಿಸಿತಾ ದಯ 4ಆ ಸೈಂಧವನಳಿದರ್ಜುನನ |ಪೋಷಿಸಿದಂತೆ ಮೃತಾತ್ಮಜನಾ ||ಭೂಸರಗಿತ್ತಂತೀ ವಿಪ್ರರ ಪ್ರಾ |ಣೇಶ ವಿಠ್ಠಲ ರಕ್ಷಿಸಬೇಕಾ ದಯೆ 5
--------------
ಪ್ರಾಣೇಶದಾಸರು
ಅನುದಿನಭವಾಬ್ಧಿಯಲ್ಲಿ ಭವತರಂಗ ರಾಶಿಯಲ್ಲಿಮುಳುಗುತಿಹೆ ಕೈಯ ಪಿಡಿಯೊ ಜನಕ ಕೃಷ್ಣಯ್ಯ ಪ.ಶ್ರೀನಿವಾಸ ನಿನ್ನ ಭಕ್ತಿ ಮಾಡದ ಅಘವಂತನೆಂದುಹೀನ ಜನರ್ಪಾಳಕಿಟ್ಟರೇನ ಹೇಳಲೊನೀನು ಪಾಲಿಪ ರಾಜ್ಯದಲ್ಲಜ್ಞಾನಿ ದೇಶಿಗನೊಬ್ಬ ಕೆಡಲುಹಾನಿ ಹೆಚ್ಚಳ ನಿನ್ನದಲ್ಲೆ ದೀನದಯಾಳು 1ಚಿತ್ತವೇಗಕ್ಕವಧಿ ಇಲ್ಲ ಹೊತ್ತುಕೊಂಡು ಕಂಡ ಕಡೆಗೆಸುತ್ತುತಿದೆ ತನ್ನ ದಳವ ಕೂಡಿ ರಂಗಯ್ಯಕರ್ತನಿನ್ನ ಪಾದದೆಡೆಯೆ ಒತ್ತಿ ನೀನಿದನಾಳಬೇಕುಹೆತ್ತ ತಾಯಿ ನೀನೆ ಗಡಾನೆತ್ತಿಕೊಳ್ಳಯ್ಯ 2ಹಳುವಗಳು ದಾರಿಕಾಣೆ ಸೆಳವಿನೊಳಾಶ್ರಯ ಕಾಣೆನಳಿನನೇತ್ರ ನೀನೆ ಕಾಯೊ ಸುಲಭರೊಡೆಯನೆಲೆಯ ತೋರಾತಂಕಹಾರಿ ಒಲಿದು ವರಾಭಯವ ಬೀರಿಒಲಿಯೊ ಪ್ರಸನ್ವೆಂಕಟಾದ್ರಿನಿಲಯ ಉದಾರಿ 3
--------------
ಪ್ರಸನ್ನವೆಂಕಟದಾಸರು
ಆಕಳ ಕಾಯ್ದ ಗೋಕುಲವಾಸನುಆಕಳ ಕಾಯ್ದ ಗೋಕುಲವಾಸನನೇಕ ಗುಣನಿಧಿನಾಕೇಶವಿನುತಪುರದಲ್ಲಿದ್ದಂಥ ಕೇರಿಯ ಮಕ್ಕಳ ನೆರಹಿ ಯಾದವ ಪರಿವಾರವೆಲ್ಲನಳಿನಕೇತಕಿ ಎಳೆಯ ಮಾವಿನ ತಳಿಲ ವನದ ಒಳಗೆ ರಂಗನುತೊಂಡರೊಡಗೂಡಿಪುಂಡರೀಕಾಕ್ಷಗೋವಿಂದ ಕಾಳಿಯ ದಂಡೆಯಲ್ಲಿರಿಸಿಕಡು ತೃಷದಿ ಆ ಮಡುವಿನುದಕ ಕುಡಿದು ಗೋವುಗಳೆಲ್ಲ ನಡುಗಿ ಬೀಳಲುಹೊಕ್ಕ ಭರದಿ ದೇವಕಿ ಸುತನ ಸಿಕ್ಕಿಸಿಕೊಂಡು ಬಾಲಕೆ ಬಿಗಿಯಲುಇಂದಿರಾಪತಿ ಆನಂದದಿಂದಾಡಲು ಬಂದುಬೊಮ್ಮವಾಯುಉರಗಾಂಗನೆಯರ ಮೊರೆಯ ಲಾಲಿಸಿ ಕರುಣಿ ಅವರಿಗೆ ಗರುಡನ ಭಯಗರಳಭಯದಿ ಧರೆಗೆ ಬಿದ್ದಂಥ ತುರುಗಳಿಗೆಲ್ಲ ಸ್ಮರಣೆ ಬಪ್ಪಂತೆಮಂಗಳ ಮೂರುತಿ ಪೊಂಗೊಳಲೂದುತ್ತ ತಿಂಗಳಿನಂದದಿ
--------------
ಗೋಪಾಲದಾಸರು
ಆಗಮವ ತಮನೊಯ್ಯೆ | ಅವನ ಪಾತಾಳದಲಿ |ತಾಗಿದಲೆವರಿದು ವೇದಾವಳಿಗಳಾ |ಆಗ ತಂದ್ದತ್ತ ಮಚ್ಛಾಮಾರನೆ ವುದಯವಾಗುತಿದೆವುಪ್ಪುವಡಿಸೊ ಪಹರಿಯ ಭಾಗೀರಥಿ ಪಿತನೆ |ಭಾಗವತ ಜನಪ್ರಿಯನೆ |ಯೊಗಧೆಯ ವಪ್ಪುವಡಿಸೊ ಹರಿಯೆ | ಭಾಗೀರಥಿ ಪಿತನೆ 1ದೇವಾಸುರರು ಶಿಂದ್ಧು | ಮಥನದಲಿ ಗಿರಿ ಮುಳುಗೆ |ದೆವಾ ರಾಕ್ಷಿಸುತಾ ಕ್ಷಿಶನ ಉಳಿದೂ |ಆನೊಯಲು ವಾಗಿರಿಯ | ನಂತ ಕೂರ್ಮನೆ ವುದಯವಾಗುತಿದೆವಪ್ಪುವಡಿಸೊ ಹರಿಯೆ 2ಭೂತಳವ ಕಾದ್ದೊಯಿದ | ಹರಂಣ್ಯಕ್ಷನೆಂಬ ನರಪಾತಳದ |ಲೊರಶಿನಿಲಿಶಿದ ಜಗಂಗಳಾ | ಖ್ಯಾತಿ ಪಡೆದ ಪ್ರತಿಮ |ವರಹಾರೂಶಪನೆ ಸುಪ್ರಭಾತದಲಿವುಪ್ಪವಡಿಸೊ ಹರಿಯೇ 3ಭೂದೇವದೆವರನು | ಭಾಜಿಸುವ ಶಿವುವ ಪ್ರಹ್ಲಾದಗಾ | ಗಾಹವನುಕವಲುಗಿಶಿ ಉಗದೆ | ತೂದ ಕರುಳಿನಮಾಲೆ |ಯಪ್ಪನರಶಿಂಹ ಕಾರುಣೋದಯದೊ ವಪ್ಪವಡಿಸೊ ಹರಿಯೆ 4ಬರಿ ಭಕತಿಯಿಂದ ಮೊರಡಿನೆಲನ ಮಾತು ಕೂಡೆ |ನೆಲ ನಭನೆ ನೀರಡಿಯ ಮಾಡಿ ಬೆಳೆದೆ |ನಳಿನ ಜಾಂಡವನೊಡದೆ | ವಾಮನ ತ್ರಿವಿಕ್ರಮನೆಬೆಳಗಾಯಿತುಪ್ಪವಡಿಸೋಹರಿಯೆ 5ಕಾತ್ರ್ತವಿಯ್ರ್ಯಾರ್ಜುನನ ಕಡಿದು ಕ್ಷತ್ರಿಯ ಕುಮುದು |ಮಾತ್ರ್ತಂಡನಾದೆ ಮಾತೆಯ ಮಾತಿಗೆ ಆತ್ರ್ತಜನಬಂಧುವೆ | ಪರಶುರಾಮನೆ ಬ್ರಾಹ್ಮಿ ಮೂಹೋರ್ತದಲ್ಲಿವುಪ್ಪವಡಿಸೊ ಹರಿಯೆ 6ಪಂಪಾದಿಪನವರದ | ಅಮರಪತಿಯಾದ ಷ್ಕಂಪ್ಪರಾವಣನಗೆಲಿದವನನುಜಗೆ ಸಂತ್ಪಾರಂಪರೆಯಯಿತ್ತರಘುರಾಮದೆಶೆ | ಕೆಂಪಾಯಿತುಪ್ಪ ವಡಿಸೊಹರಿಯೆ 7ಯಿಂದು ರವಿಕುಲಗಳಲಿ | ಜನಿಶಿದಮಜರಾಜ| ಬೃಂದಾರಿಯಾಗಿಭೂಭರವಿಳಿಪಿದೆ | ನಂದನಂದನ ಕೃಷ್ಣ |ಆಂಗಯಗರಗಾಣ ಬಂದವಿದವುಪ್ಪ ವಡಿಸೊ ಹರಿಯೇ 8ತ್ರಿಪುರದಮಕಾರಿಗಳ | ಸತಿಯರಿಗೆವುಪಸತಿಗಳುಪದೆಶಗಳ ತೊಟ್ಟುಭ್ರಮಗೊಳಿಶಿದುತ್ರಿಪುರ ಹತಗಂಬಾದೆ |ತ್ರಿಪುರ ಸಾಧಕ ಜಾದ್ಕ ತಪ ನವಿದೆವುಪ್ಪವಡಿಸೊ ಹರಿಯೆ9ಆಶಿ ಖಾಡವಿಡಿದಾಶ್ವವೇರಿ ಕೋಪದಿ ವಿಷ್ಣು |ಯಶಶಿನಲಿ ಕಲ್ಕ್ಯಾವ | ತಾರನಾದೆ |ಕುಶಿರಿದರಿದಶಸುವೇಪದಶ್ಯೂಗಳಗೆಲಿದೆ | ಬಿಶಿಲಾಯಿತುಪ್ಪವಡಿಸೊ ಹರಿಯೆ 10ಯಿಂದ ಚಂದ್ದ್ರ್ಯಾದಿಗಳ್ ಬ್ರಹ್ಮ ರುದ್ದ್ರಾದಿಗಳುಪೇಂದ್ರಜಯ |ಜಯಯೆನುತ ಬಂದೈಧರೆ | ವೀಂದ್ದ್ರವಾಹನ ಪುರಂದರವಿಠಲಸೌಭಾಗ್ಯ ಸಾಂದ್ದ್ರನಿಧಿ ವುಪ್ಪವಡಿಸೊ ಹರಿಯೆ 11
--------------
ಪುರಂದರದಾಸರು
ಆತನ ಪಾಡುವೆನನವರತ |ಪ್ರೀತಿಯಿಂದಲಿ ತನ್ನ ಭಕುತರ ಸಲಹುವ ಪಆವಾತನ ಕೀರ್ತಿಯನುಪರೀಕ್ಷಿತ ಕೇಳೆ |ಪಾವನನಾದನು ಮೂಜಗವರಿಯೆ ||ಭಾವಶುದ್ಧಿಯಲಿ ಶುಕನಾರನು ಪೊಗಳುವ |ಆವಗಂ ಪ್ರಹ್ಲಾದನಾದವನ ನೆನೆವನಯ್ಯ 1ಶಿಲೆಯ ಬಾಲೆಯ ಮಾಡಿದ ಪಾದವಾರದು |ನಳಿನ ಸಂಭವನನು ಪೆತ್ತವನಾರು ||ಕಲಿಯುಗದ ಮನುಜರಿಗೆ ಆರನಾಮವುಗತಿ |ಇಳೆಯ ಭಾರವನಿಳುಹಿ ಸಲಹಿದರಾರಯ್ಯ 2ದ್ರುಪದನ ಸುತೆಯ ಮಾನರಕ್ಷಕನಾರು |ನೃಪಧರ್ಮನಿಗೆ ಸಂರಕ್ಷಕನಾರು |ಕೃಪೆಯಿಂದ ವಿದುರನ ಮನೆಯಲುಂಡವನಾರು |ಆಪತ್ಕಾಲದಿ ಗಜವ ಸಲಹಿದರಾರಯ್ಯ 3ಅತಿಶಯದಿಂದ ಅರ್ಜುನಗೆ ಸಾರಥಿಯಾಗಿ |ರಥವ ಪಿಡಿದು ನಡೆಸಿದವನಾರೊ ||ಪೃಥಿವಿಯೆಲ್ಲವಬಲಿ ಆರಿಗೊಪ್ಪಿಸಿದನು |ಮತಿವಂತ ಧ್ರುವನ ರಕ್ಷಕನಾರು ಪೇಳಯ್ಯ 4ಸಾಗರನ ಮಗಳಿಗೆ ಆರ ನಾಮವೆಗತಿ |ಯೋಗದಿ ನಾರದನಾರ ಭಜಿಪನಯ್ಯ ||ರಾಗರಹಿತ ಹನುಮಂತನೊಡೆಯನಾರು |ಭಾಗವತರ ಪ್ರಿಯ ಪುರಂದರವಿಠಲ 5
--------------
ಪುರಂದರದಾಸರು
ಆನಂದಂ ಮಹದಾನಂದಂಹರಿಯ ಭಜನ ಬ್ರಹ್ಮಾನಂದಂ ಪಸತ್ಯ ನುಡಿಯುವುದೆ ಆನಂದಂ ತನ್ನಗುರ್ತ ತಿಳಿಯುವುದೆ ಆನಂದಂನಿತ್ಯನಿರ್ಮಲನ ಸತ್ಯ ಗುಣಂಗಳನುಭಕ್ತಿಯಿಂ ಭಜಿಸೆ ನಿತ್ಯಾನಂದಂಸತ್ಯ ಸತ್ಯ ಸರ್ವೋತ್ತಮ ಹರಿಯೆಂದುಅರ್ತಿಯಿಂ ಭಜಿಸೆ ಅತ್ಯಾನಂದಂ 1ಆಶ ನೀಗುವುದೆ ಆನಂದಂಭವಪಾಶಗೆಲಿಯುವುದೆ ಆನಂದಂಶ್ರೀಶ ಕೇಶವನ ಸಾಸಿರ ನಾಮದಧ್ಯಾಸದಿರುವುದೆ ಲೇಸಾನಂದಂದೋಷದೂರ ಭವಪಾಶಹರನ ಅನುಮೇಷ ಪÀಠಿಸೆ ಸ್ಥಿರದಾನಂದಂ 2ಹಮ್ಮನಳಿವುದೇ ಆನಂದಂ ತಾಸುಮ್ಮನಿರುವುದೆ ಆನಂದಂಕರ್ಮರಹಿತನಾಗಿ ಬ್ರಹ್ಮಪಿತನಪಾದಒಮ್ಮನದೊಳಗಸಮಾನಂದಂಧರ್ಮವಿಡಿದು ಪರಬ್ರಹ್ಮ ಶ್ರೀರಾಮನಮರ್ಮ ತಿಳಿಯೆ ನಿರ್ಮಲಾನಂದಂ 3
--------------
ರಾಮದಾಸರು
ಆನೆ ಬಂತಾನೆ ಬಂತಾನೆ ಬಂತಮ್ಮದಾನವಕದಳಿಯಕಾನನಮುರಿವ ಮದ್ದಾನೆ ಬಂತಮ್ಮಪ.ಉಂಗುರುಗುರುಳು ನೀಲಾಂಗ ಚೆಲ್ವಾನೆಕಂಗಳುಹೊಳೆವೊ ವ್ಯಾಘ್ರಾಂಗುಲಿಯಾನೆಬಂಗಾರದಣುಗಂಟೆ ಶೃಂಗಾರದಾನೆಮಂಗಳತಿಲಕದ ರಂಗನೆಂಬಾನೆ 1ಅಲೆದೊಲೆದಾಡುವ ಎಳೆಮರಿಯಾನೆಕೆಳದಿ ಗೋಪಿಯರೊಳು ಗೆಳೆತನದಾನೆಘಳಿಲು ಫಳಿಲು ರವದಿ ಸುಳಿದಾಡುವಾನೆಮಲೆತವರೆದೆ ತುಳಿದಾಡುವಾನೆ 2ನಳಿನಭವರಿಗೆ ತಾ ನಿಲುಕದ ಆನೆಹಲವು ಕವಿಗಳಿಗೆ ಸಿಲುಕದೀ ಆನೆನಲವಿಂದ ಭಕ್ತರ ಸಲಹುವ ಆನೆಸಲೆ ಪ್ರಸನ್ವೆಂಕಟನಿಲಯನೆಂಬಾನೆ 3
--------------
ಪ್ರಸನ್ನವೆಂಕಟದಾಸರು
ಆವ ಪುಣ್ಯವೊ ಗೋಪಿಗಾವ ಪುಣ್ಯವೊ ಪ.ಆವ ಪರಬೊಮ್ಮನಾವಾವ ಪರಿಯಲಾಡಿಸುವ ಅ.ಪ.ಮಾರನನ್ನ ಪೆತ್ತನ ಕುಮಾರನೆಂದು ಕರೆದು ತನ್ನಮಾರಬೀಸಿ ಬಿಗಿದಪ್ಪಿ ಮೋರೆ ನೋಡಿ ಮೊಲೆಯ ಕೊಡುವ1ಕಾಲನಾಗಿ ಜಗವ ತತ್ಕಾಲದಲ್ಲಿ ನುಂಗುವಂಗೆಕಾಲಮೇಲೆ ಮಲಗಿಸಿ ತ್ರಿಕಾಲದಲ್ಲಿ ಹಾಲನೆರೆವ2ನೀತ ಪ್ರಭು ವಿಶ್ವಕೆ ವಿನೀತನಾಗಿ ಕೈಯ ಒಡ್ಡೆನೀತಿ ಹೇಳಿ ನವನವನೀತವಿತ್ತು ರಂಜಿಸುವ 3ಆನೆಗೊಲಿದು ಎಂಟುದಿಕ್ಕಿನಾನೆಯಾಳ್ದ ಅಪ್ರತಿಮ ದಯಾನಿಧಿಯ ಕುಳ್ಳಿರಿಸಿ ಆನೆ ಬಂತಂತಾನೆಯೆಂಬ 4ತೋಳನೋಡುಧೈರ್ಯದೀರ್ಹತ್ತು ತೋಳಿನವನ ಹೋರುವ ನಳಿತೋಳವಿಡಿದು ವಾರಂವಾರ ತೋಳನ್ನಾಡೊ ಮಗನೆ ಎಂಬ 5ತಾರಕೋಪದೇಶಕಗೆತಾರಕರಂಗನಳಲುತಾರಕಪತಿಯ ತೋರಿ ತಾರಕ್ಕ ಬಿಂದಿಗೆಯೆಂಬ 6ದಟ್ಟವಾದ ಜೀವಜಾಲದಅಟ್ಟುಳಿನಿವಾರಣಂಗೆದಟ್ಟು ದಟ್ಟು ಎಂದು ರಂಗನ ದಟ್ಟ ಸಾಲನಿಕ್ಕಿಸುವ 7ಚಿನ್ಮಯಾತ್ಮ ಮುಕ್ತಾಮುಕ್ತ ಚಿನ್ನರನಾಡಿಸುವಂಗೆಚಿನ್ನ ತಾ ಹೊನ್ನ ಗುಬ್ಬಿ ಚಿನ್ನ ಗುಬ್ಬಿಯಾಡಿಸುವ 8ದೃಷ್ಟಾದೃಷ್ಟದೇಹಿಗಳದೃಷ್ಟ ನಿಯಾಮಕಂಗೆದೃಷ್ಟಿ ತಾಕಿತೆಂದು ತೆಗೆದು ದೃಷ್ಟಿ ದಣಿಯೆತುಷ್ಟಿಬಡುವ9ಅನ್ನಮಯನು ಬ್ರಹ್ಮಾದ್ಯರಿಗೆ ಅನ್ನಕಲ್ಪತರುಪರಮಾನ್ನ ಚಿನ್ನಿಪಾಲಿನಿಂದ ಅನ್ನಪ್ರಾಶನ ಮಾಡಿಸುವ 10ನಿತ್ಯತೃಪ್ತ ನಿತ್ಯಾನಂದ ನಿತ್ಯಭೋಗಿ ನಿತ್ಯತಂತ್ರನಿತ್ಯಕರ್ಮನ್ನೆತ್ತಿಕೊಂಡುನೆತ್ತಿಮೂಸಿ ಮುದ್ದಿಸುವ11ಆ ಲಯದಲ್ಲಾಲದೆಲೆ ಆಲಯಗೆ ತೊಟ್ಟಿಲು ಉಯ್ಯಾಲೆಯಿಟ್ಟು ಮುದ್ದು ಮಾತನಾಲಿಸಿ ಜೋಗುಳವ ಪಾಡುವ 12ಅಂಜಲಿಪುಟದಿ ಸುರರಂಜಿಕೆಯ ಬಿಡಿಸುವ ನಿರÀಂಜನಗಭ್ಯಂಜನಿಸಿ ಅಂಜನಿಟ್ಟುಅಮ್ಮೆಕೊಡುವ13ಸಪ್ತ ಸಪ್ತಭುವನಜನಕೆಸುಪ್ತಿಎಚ್ಚರೀವನಿಗೆಸುಪ್ತಿಕಾಲವೆಂದು ತಾನು ಸುಪ್ತಳಾಗಿ ಸ್ತನವ ಕೊಡುವ14ತನ್ನ ಮಗನ ನಡೆಯ ನುಡಿಯ ತನ್ನ ಪತಿಗೆ ಹೇಳಿ ಹಿಗ್ಗಿತನ್ನ ಭಾಗ್ಯ ಲಕ್ಷ್ಮೀಶ ಪ್ರಸನ್ನವೆಂಕಟ ಕೃಷ್ಣಯೆಂಬ 15
--------------
ಪ್ರಸನ್ನವೆಂಕಟದಾಸರು
ಇಂದುನಾಳ್ಯೊ ಈಗಾವಾಗೊ ಈಕಾಯಸ್ಥಿರವಲ್ಲಇಂದಿರೇಶ ನಿನ್ನ ನೆನೆವ ಮತಿಯ ನೀಡೊ ಮನ್ನಿಸಿ ನೋಡೊ ಪ.ಕುಚ್ಛಿತ ಕರ್ಮವಾಚರಿಸಿ ಕಶ್ಮಲ ಜನ್ಮನುಭವಿಸಿದುಶ್ಚಿತ್ತದಿ ಬಾಳ್ದೆನಯ್ಯ ದೂರಾದೆ ನಿಮಗೆ ದಮ್ಮ್ಮಯ್ಯಅಚ್ಚುತ ನಿನ್ನಿಚ್ಛೆಯಿಂದೆ ಆದಿವರ್ಣದವನಾದೆಸ್ವಚ್ಛಿತ ಭಕ್ತಿಯನಿಲಯ ಸುಜನಬಂಧು ಸುಗುಣಸಿಂಧು 1ಹೊಟ್ಟೆಯ ಹೋರಟೆಗಾಗಿ ಹೊತ್ತಾರೆದ್ದು ತಿರುಗಿ ತಿರುಗಿಕೆಟ್ಟ ವೃತ್ತಿಯನ್ನು ಹಿಡಿದೆ ಕೀಳುಮನುಜರೊಳಾಡಿದೆಬಿಟ್ಟೆ ನಿಮ್ಮ ಪೂಜೆಯನ್ನು ಬಿದ್ದೆ ಭವಾಂಬುಧಿಯನ್ನುವಿಠ್ಠಲ ಎನ್ನುದ್ಧರಿಸೊ ವಿದ್ವದ್ಹøದ್ಯ ವೇದವೇದ್ಯ 2ವೇದಶಾಸ್ತ್ರಾಭ್ಯಾಸವಿಲ್ಲ ವೇದಜÕರರ್ಚಿಸಲಿಲ್ಲಬೋಧವನು ಕೇಳಲಿಲ್ಲ ಬುದ್ಧಿ ಎನ್ನೊಳು ಚೂರಿಲ್ಲಸಾಧನವ ತಿಳಿಯಲಿಲ್ಲ ಸಾಧುಮಾರ್ಗವ ಕಾಣಲಿಲ್ಲಭೇದಜÕರೊಳ್ ಕೂಡಿಸೆನ್ನ ಭೀಮಪಾಲಾಭಿನವಲೀಲ 3ಕಾಂತೇರ ಕುಚೇಷ್ಟೆಗಳಿಗೆ ಕೀಳುಚ್ಚಾರದ ಮಕ್ಕಳಿಗೆಭ್ರಾಂತನಾಗಿ ಸ್ನೇಹ ತೋರ್ದ ಬಲೆಯೊಳ್ ಸಿಲುಕಿದೆಸಂತರಂಘ್ರಿ ಸಖ್ಯವನೊಲ್ಲೆ ಸತ್ಕಥೆಯನಾಲಿಸಲೊಲ್ಲೆಅಂತು ಮದವನಿಳಿಸಿ ಕಾಯೊಅಂಗಜಪಿತನೆ ಅಘರಹಿತನೆ4ಬಳಲಿಸಿದೆ ತನುವನು ಬಯಸಿ ಖಳರಾರ್ಥವನ್ನುನಳಿನಾಕ್ಷ ನಿನ್ನ ಬೇಡದೆ ನಾಸ್ತಿಕರಿಗೆ ಕೈಯನೊಡ್ಡಿದೆಹೊಳೆವ ಸುರಭಿಯ ಬಿಟ್ಟು ಹುಲಿಪಾಲಿಗಾಯಾಸಬಟ್ಟೆಕಳೆದೆನನಘ್ರ್ಯಾಯುಷ್ಯವ ಕುಚೇಲಮಿತ್ರ ಕರುಣನೇತ್ರ 5ವಿಷ್ಣು ತತ್ವವರಿಯದೆ ಧೀರ ವೈಷ್ಣವನೆನಿಸದೆಭ್ರಷ್ಟಮನವ ತೊಳೆಯದೆ ಬಹಿಛ್ಛಿನ್ನದಲ್ಲೆ ಮೆರೆದೆಶಿಷ್ಯ ಗುರುಗಳ ಜರಿದೆ ಶಠರನು ಅನುಸರಿಸಿದೆದುಷ್ಟವೃತ್ತಿಯನು ಬಿಡಿಸೊ ದುರ್ಗುಣಧಾಮನ ದುರಿತಶಮನ 6ಇಂದ್ರಿಯಗ್ರಾಮ ನಿನ್ನದು ಇಷ್ಟ ಬಳಗವು ನಿನ್ನದುಸೌಂದರ್ಯ ಸುಖ ನಿನ್ನದು ಸ್ವರೂಪ ಸ್ವಾತಂತ್ರ್ಯ್ರನಿನ್ನದುಮಂದಮತಿಯಿಂದ ಅಹಂಮತಿಯಲ್ಲಿ ನೊಂದೆ ಬಹುಕುಂದನೋಡದೆನ್ನ ಸಲಹೊ ಕುಂಜರವರದ ಕುಶಲಪದದ7ನಿನ್ನ ಕಥಾಮೃತವು ಕಿವಿಗೆ ನಿನ್ನ [ಕೀರ್ತನೆ ನಾಲಗೆಗೆ]ನಿನ್ನ ಲಾವಣ್ಯವು ಕಣ್ಣಿಗೆ ನಿನ್ನ ಸೇವೆ ಸರ್ವ ಇಂದ್ರಿಯಕ್ಕೆಎನಗೆ ಬೇಗ ಕರುಣಿಸಿ ಎಲ್ಲ ದುರಿಚ್ಛೆಗಳ ನೂಕುಇನ್ನು ದಾಸದಾಸ್ಯವು ಬೇಕೊ ಋಷಿಕುಲೇಶ ಹೃಷಿಕೇಶ 8ಅಚ್ಯುತಾನಂತಗೋವಿಂದ ಆದಿಪುರುಷ ಮುಕುಂದಸಚ್ಚಿದಾನಂದಸರ್ವೇಶ ಸುಚರಿತ್ರ ಕರಿವರದನೆಚ್ಚಿದೆ ತವ ಪಾದಾಂಬುಜ ನಮೊ ಬೊಮ್ಮಾದ್ಯರ ದೇವನಿಚ್ಚಪ್ರಸನ್ವೆಂಕಟ [ನಿನ್ನ ನೆನೆವ ಮ್ಮತಿಯನೀಡೊಮನ್ನಿಸಿ ನೋಡೊ] 9
--------------
ಪ್ರಸನ್ನವೆಂಕಟದಾಸರು
ಇದೆಕೊದಧಿಮಥಿಸಿ ಹೊಸ ಬೆಣ್ಣೆ ಕೊಡುವೆನೊಪದುಮನಾಭನೆ ಗೊಲ್ಲ ಗೋರಸಕೆ ಗೋಳಿಡಬ್ಯಾಡೊ ಪ.ಮಲತ ಹಾಲು ಹುಳಿಮೊಸರು ತಂಗಳ ಬೆಣ್ಣೆನಳಿನಾಕ್ಷ ನಿನಗೇನು ರುಚಿಯೊ ಕಂದಕಳವಿನ ಮಾತ್ಯಾಕೆ ಹಸುಳೆ ಗೋವಳೆಯರಗೆಳತನವ್ಯಾತಕೊ ನಿನಗೆ ರಂಗಮ್ಮ 1ಮನೆ ಮನೆ ತಿರುಗಲು ತಿರುಕರ ಮಗನೇನೊಮನೆಯಲೇನು ಗೋರಸ ಕೊರತ್ಯಾಗಿದೈಅನುದಿನವಿಗಡೆÉೀರು ದೂರುತಲೈದಾರೆದಣಿದೆನಾರೋಪಣೆಯಕೇಳಿಕೃಷ್ಣಮ್ಮ2ಎನ್ನ ಮುದ್ದಿನಮೂರ್ತಿಎನ್ನ ಭಾಗ್ಯದ ನಿಧಿಯೆಎನ್ನ ಚಿತ್ತದ ಚಿಂತಾಮಣಿಯೆಚಿನ್ನರರಸನಾದ ಪ್ರಸನ್ವೆಂಕಟ ಕೃಷ್ಣನನ್ನಾಣೆ ಕಣ್ಣ ಮುಂದಿರೊ ನಮ್ಮಮ್ಮ 3
--------------
ಪ್ರಸನ್ನವೆಂಕಟದಾಸರು
ಈ ಜೀವನಿಂದು ಫಲವೇನು |ರಾಜೀವಲೋಚನನ ಮರೆದಿಹ ತನುವಿನಲಿ ಪ.ಅರುಣನುದಯಲೆದ್ದು ಹರಿಸ್ಮರಣೆಯ ಮಾಡಿ |ಗುರು - ಹಿರಿಯರ ಚರಣಕಮಲಕೆರಗಿ ||ಪರಮಶುಚಿಯಾಗಿ ನದಿಯಲಿ ಮಿಂದು ರವಿಗಘ್ಯ |ವೆರೆಯದೆ ಮರೆಹ ಈ ಪಾಪಿತನುವಿನಲಿ 1ಹೊನ್ನಗಿಂಡಿಯಲಿ ಅಗ್ರೋದಕವನೆ ತಂದು |ಚೆನ್ನಾಗಿ ಹರಿಗೆ ಅಭಿಷೇಕ ಮಾಡಿ ||ರನ್ನದುಡಿಗೆಯುಡಿಸಿ ರತುನಗಳಳವಡಿಸಿ |ಕಣ್ಣಿರಲು ನೋಡಲರಿಯದ ಪಾಪಿತನುವಿನಲಿ 2ನಳನಳಿಸುವ ನಾನಾ ಪುಷ್ಪಗಳು ಶ್ರೀತುಳಸಿ |ಹೊಳೆವ ಕಿರೀಟ ಕೊರಳಲಿ ಪದಕ ||ನಳಿನಾಕ್ಷನಿಗೆ ಕರ್ಪುರದಾರತಿಯನೆತ್ತಿ |ಕಳೆಯ ನೋಡಲರಿಯದ ಪಾಪಿತನುವಿನಲಿ 3ವರಭಕ್ಷ್ಯಗಳುಪರಮಾನ್ನ ಶಾಲ್ಯನ್ನವು |ವರವಾದ ಮಧುಘೃತ ಕ್ಷೀರವನ್ನು ||ಸಿರಿನಾರಾಯಣಗೆ ಸಮರ್ಪಣೆ ಮಾಡಿ ತಾ - |ಎರಡು ಕೈಮುಗಿಯದ ಪಾಪಿತನುವಿನಲಿ 4ಉರಗಾದ್ರಿ - ಸ್ವಾಮಿಪುಷ್ಕರಣಿಗಳು ಮೊದಲಾದ |ಪರಿಪರಿ ತೀರ್ಥಗಳನೆಲ್ಲ ಮಿಂದು ||ತಿರುವೆಂಗಳಪ್ಪ ಶ್ರೀ ಪುರಂದರವಿಠಲನ |ಚರಣವನು ಭಜಿಸಲಯದ ಪಾಪಿತನುವಿನಲಿ 5
--------------
ಪುರಂದರದಾಸರು