ಒಟ್ಟು 2337 ಕಡೆಗಳಲ್ಲಿ , 105 ದಾಸರು , 1791 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಕೇಳಿರೈ ಶಿವಶರಣರು ಹೇಳಲಂಜಿಕೆ ಆವುದು ಪ ಭಾಳನೇತ್ರನ ಭಕ್ತರಿಂತು ನೋಡಿಕೊಳ್ಳಿರೈಅ ಮೂರುಲಿಂಗ ತನ್ನೊಳು ಮುಖ್ಯವಾಗಿರುವಾಗಬೇರೊಂದು ಲಿಂಗ ಬೆಲೆ ಮಾಡಿ ತಂದುತೋರುವಂಗೈಲಿಟ್ಟು ತೋಯ ಪುಷ್ಪವ ನೀಡಿಯಾರ ಮನಕೊಪ್ಪಿಸುವರೀ ಶೀಲವಂತರು 1 ಲಿಂಗವೊಂದು ತನ್ನೊಳು ಲೀನವಾಗಿರುವಾಗಅಂಗಭವಿಗಳು ಕೂಡಿ ಆಡಿಕೊಂಬರುಅಂಗದನುಭವದರ್ಥವನರಿಯದ ಇಂತಹಭಂಗಿ ಹುಚ್ಚರೆಲ್ಲ ಶಿವನ ಭಕ್ತರಹರೆ 2 ನಾಗಲಿಂಗ ತನ್ನೊಳು ನಾಟ್ಯವಾಡುತಲಿರಲುಆಗಮಿಸಿದ ಲಿಂಗವ ಬೆದಕಲೇತಕ್ಕೆಕಾಗಿನೆಲೆಯಾದಿಕೇಶವನೆ ನಾಗಶಯನನಾಗಿರಲು ಬೇರೊಂದನರಸಲೇತಕ್ಕೆ 3
--------------
ಕನಕದಾಸ
ಕೇಳೆ ಕೊಳಲಿನ ದನಿಯ ಸಖಿಯೆ ನಾಳೆಯೆಂದೆನಬೇಡವೆ ಪ ಹೇಳೆ ಕೊಳಲಿನ ನಾದ ಸೇರಲಿ ತಾಳವನು ಬಿಡಬೇಡವೆ ಬಾಳು ಹಸನಾಗಿರಲು ಗಾನವು ಮೇಳವಿಸಬೇಕಲ್ಲವೆ ಅ.ಪ ಗಾನವೇ ಸುಖಸಂಪದದ ನೆಲೆ ಗಾನವೆ ಶಿಶುಲಾಲನೆ ಗಾನವೇ ಫಣಿಗಿಷ್ಟವಲ್ಲವೇ ಗಾನವೇ ಪಶುಪಾಲನೆ ಗೋಪಿ ನಲಿದಳು ಗಾನ ವೇದದ ಸಾಧನೆ 1 ವೈರಿ ಅಂಗಜಾತನ ಪಿತನ ಕೊಳಲಿನ ಗಾನವೇ ಮಧುಪಾನವು ಮಂಗಳಾಂಗನ ಪಾದಸೇವೆಗೆ ಮಾಂಗಿರೀಶನ ನಾಮವು 2
--------------
ಅಸೂರಿ ರಾಮಸ್ವಾಮಿಅಯ್ಯಂಗಾರ್
ಕೇಳೆ ನಂದನ ಕಾಂತೆ ಹೇಳೆ ಮಗಗೆ ಬುದ್ದಿ ಬಾಲೆಯರನು ಇರಗೊಡನೆ ದಮ್ಮಯ್ಯ ಪ ಕುತ್ತಿಗೆಯೊಳಗಣ ಮುತ್ತಿನ ಸರಗಳ ಕಿತ್ತು ಹರಿದು ಚೆಲ್ಲಿ ಪೋದ ದಮ್ಮಯ್ಯ 1 ಕಟ್ಟಿದ ಕರುಗಳ ಬಿಟ್ಟು ಒಲೆಯ ಮೇಲೆ ಇಟ್ಟ ಪಾಲ್ಗಳನೆಲ್ಲ ಕುಡಿದ ಗೋಪಮ್ಮ 2 ಪಿಕ್ಕದೊಳಿಹ ಬೆಣ್ಣೆ ಚೊಕ್ಕನೆಲ್ಲವ ಮೆದ್ದು ಮರ್ಕಟಗಳಿಗಷ್ಟನಿತ್ತ ದಮ್ಮಯ್ಯ 3 ಬೇಡವೆಂದರೆ ಛಲಗೇಡಿ ಹಿಡಿದು ಎನ್ನ ನೋಡಿ ಮೋಸವ ಮಾಡಿ ಹೋದ ದಮ್ಮಯ್ಯ 4 ಮರುತಾತ್ಮಜ ಕೋಣೆ ಲಕ್ಷ್ಮೀರಮಣಗೊಮ್ಮೆ ನಾರಿ ನೀ ಬುದ್ದಿಯ ಹೇಳೆ ದಮ್ಮಯ್ಯ 5
--------------
ಕವಿ ಪರಮದೇವದಾಸರು
ಕೈಯ ತೋರಿದ ಬಗೆಯ, ಅಮ್ಮಮ್ಮ ಯಾದವಗಿರಿ ಕಲ್ಯಾಣಿ ನೀನು ಪ ವತ್ಸರ ಚೈತ್ರ ದ್ವಿತೀಯೇಕಾದಶಿಯೊಳುಪ್ರಕಟಿತಾ ಶುಕ್ರವಾರದೊಳು ತನ್ನಭಕುತರಿಗುತ್ಸಾಹ ಸಂಧ್ಯಕಾಲದೊಳು 1 ಕಡಗ ಕಂಕಣ ಗೀರುಗಂಧ ಮಿಗೆಕಡು ಚೆಲುವಿನ ಬಣ್ಣ ಕುಪ್ಪುಸದಿಂದನಡು ಬೆರಳುಂಗುರದಿಂದ ಕೈಯಬೆಡಗ ನೋಡಿದ ಜನರಿಗೆ ಪುಟ್ಟಿತಾನಂದ 2 ಜನರೆಲ್ಲ ಯದುಶೈಲೋತ್ಸವವ ಕೇಳಿಘನ ಕಾಲದೇಶದಜಿತ ಭಯವನಿಮಗೆ ಬಿನ್ನೈಪೆನು ನಯವ ಕೊಟ್ಟಮನೋಹರುಷದಿ ನಮಗಿತ್ತ ವೈಭವವ 3 ಚೆಲುವರಾಯನ ರಥೋತ್ಸವದೀ ತೀರ್ಥಕೊಲಿದು ಗಂಗಾದೇವಿ ಬರುವ ಸಂಭ್ರಮವನೆಲೆಯ ಸರ್ವರಿಗನುಭವವ ಕೋಟಿಮನೋಹರುಷವನ್ನು ನಮಗಿತ್ತ ವೈಭವವ 4 ನಿನ್ನ ಮೋಹದ ಕಂದ ನಾನೊ ಕೇಳೆನಿನ್ನೊಮ್ಮೆ ದಿವ್ಯ ಹಸ್ತಂಜವನೀವಚೆನ್ನಿಗ ವರದ ವೆಂಕಟಾದಿಕೇಶವನುತನ್ನ ನಂಬಿದ ಭಕ್ತರಾಶ್ರಿತ ಕಾಮಧೇನು 5
--------------
ಕನಕದಾಸ
ಕೈಲಾಸದಾಶೆಯಲ್ಲಿಹುದೊಶೈಲೇಂದ್ರಸುತೆಯರಸ ಶಿವನ ಒಲವಿಲ್ಲದವಗೆ ಪ. ಗುರುಹಿರಿಯರರಿಯದಗೆ ಪರಗತಿಯ ತೊರೆದವಗೆವರಧರ್ಮಪಥವ ಮರೆದವಗೆದುರುಳರನೆ ಪೊರೆದು ಪರಸತಿಯ ನೆರೆದವಗೆ 1 ದೀನಜನರೊಡನಾಡಿ ಹೀನಕರ್ಮವ ಮಾಡಿಆನೆಂಬ ಮಮತೆಯನೆ ಕೂಡಿದಾನವನೆ ಬೇಡಿ ದುರ್ದಾನಕೆ ಮರುಳಹಗೆ 2 ಅನಾಚಾರಂಗಳ ಬಿಡÀದೆ ಮನೆಗೆ ಬಂದರು ಕೊಡದೆಧನದ ಗಂಟುಗಳನು ಕಡಿಯದೆಅನುಸರಿಸಿ ನಡೆಯದೆ ಪರರ ಜರಿದು ನುಡಿವವಗೆ 3 ವಾದಿರಾಜನ ನುಡಿಯ ಹಿತವೆಂದು ಲಾಲಿಸದೆಕ್ರೋಧಮಯನಾಗಿ ದೂಷಿಪಗೆಪಾದಕೆರಗದೆ ಜನನಿಯನಾದರಿಸದವಗೆ 4 ಹಯವದನನಲ್ಲೆಂದು ತಾನೆಲ್ಲ ಬಲ್ಲೆಯೆಂದುದಯವುಳ್ಳವರ ದೈವನೆನದೆ ಈಸ್ವಯಂಭು ಲಿಂಗದ ಕಲ್ಲೇ ದೈವವೆಂಬುವಗೆ 5
--------------
ವಾದಿರಾಜ
ಕೈವಲ್ಯ ಪಡೆವರು ಜನರು - ಹರಿ ಪ ಮೂರ್ತಿ ಶ್ರೀ ಚೆನ್ನಕೇಶವನ ಮನದೊಳಗಿಟ್ಟು ಅ ಹಗೆ ಮಾಡಬೇಡಕುಲದಲ್ಲಿ ಜನಿಸಿ ಕುಚೋದ್ಯ ಮಾಡಲುಬೇಡನಲಿದು ಹರಿಯ ಪೊಗಳದ ನಾಲಗೆಯು ಬೇಡ 1 ಮಂದಮತಿಗಳ ಕೂಡ ಮಹಕಥೆಯ ನುಡಿಬೇಡಯತಿಯಾದ ಮೇಲೆ ಸತಿಸುತರಾಸೆ ಬೇಡ..................................................................ಹಿತ ತಪ್ಪಿ ನಡೆವಂಥ ಹೆಂಡತಿಯು ಬೇಡ 2 ಕೆಟ್ಟು ಹೋದವರನ್ನು ತಿರುಗಿ ಕರೆತರಬೇಡಮುಟ್ಟಾದ ಮೇಲೆ ಮೋಹಿಸಿ ಕೂಡಬೇಡಭ್ರಷ್ಟನಾಡಿದನೆಂದು ಸಿಟ್ಟಿನಲಿ ನುಡಿಬೇಡಕಷ್ಟದೆಸೆಯೊಳು ಧೈರ್ಯ ಬಿಟ್ಟು ಕೆಡಬೇಡ 3 ಜಂಭ ಬೇಡ 4 ತೀರ್ಥ ಯಾತ್ರೆಗೆ ಪೋಗಿ ತಿರುತಿರುಗಿ ಬಳಲಿ ಕೃ-ತಾರ್ಥನಾದೆನು ಎಂಬ ಘನತೆ ಬೇಡಪಾರ್ಥಸಾರಥಿ ಕಾಗಿನೆಲೆಯಾದಿಕೇಶವನಸಾರ್ಥಕದಿ ಭಜಿಸಿ ಸುಖಿಯಾಗು ಮನುಜ 5
--------------
ಕನಕದಾಸ
ಕೊಕೊಕೋ ಎನ್ನಿರೊ ಕುಂಭಿನಿಯವರೆಲ್ಲಕೊಕೊಕೋ ಎನ್ನಿರೊ - ನಮ್ಮ ಪ ಗೋಕುಲದೊಳಗೊಬ್ಬ ಕಳ್ಳ ಬರುತಾನೆಂದುಕೊಕೊಕೋ ಎನ್ನಿರೊ ಅ ಹೊದ್ದಿ ಮೊಲೆಯನುಂಡವಳಸುವನೆ ಕೊಂದಮುದ್ದುಗಾರ ಕಳ್ಳ ಕೊಕೊಕೋ ಎನ್ನಿರೊಕದ್ದುಕೊಂಡೊಯ್ವ ರಕ್ಕಸರನೆಲ್ಲರ ಕಾಲಲೊದ್ದೊರಸಿದ ಕಳ್ಳ ಕೊಕೊಕೋ ಎನ್ನಿರೊಹದ್ದು ಹಗೆಯ ಹಾಸಿಗೆಯ ಮೇಲೊರಗಿದಮುದ್ದುಗಾರ ಕಳ್ಳ ಕೊಕೊಕೋ ಎನ್ನಿರೊಅರ್ಧದೇಹನ ಕೈಯ ತಲೆಯ ಕಪಟದಿಂದಕದ್ದು ಬಿಸುಟ ಕಳ್ಳ ಕೊಕೊಕೋ ಎನ್ನಿರೊ 1 ಮಣಿ ಮಲ್ಲಿಗೆ ದಂಡೆಯರಂಜೆ ಕದ್ದ ಕಳ್ಳ ಕೊಕೊಕೋ ಎನ್ನಿರೊಗುಂಜಿಯ ದಂಡೆಯ ಕಲ್ಲಿಯ ಚೀಲದಮಂಜು ಮೈಯ್ಯ ಕಳ್ಳ ಕೊಕೊಕೋ ಎನ್ನಿರೊಅಂಜದೆ ಗೊಲ್ಲರ ಹಳ್ಳಿಯೊಳಗೆ ಹಾಲನೆಂಜಲಿಸಿದ ಕಳ್ಳ ಕೊಕೊಕೋ ಎನ್ನಿರೊಸಂಜೆ ಬೈಗಿನಲ್ಲಿ ಕರೆಯುವ ಸತಿಯರಅಂಜಿಸಿದ ಕಳ್ಳ ಕೊಕೊಕೋ ಎನ್ನಿರೊ 2 ಕೇಸರಿ ಎಂಬ ರಕ್ಕಸರನೆಲ್ಲರ ಕೊಂದವೇಷಧಾರಿ ಕಳ್ಳ ಕೊಕೊಕೋ ಎನ್ನಿರೊಮೋಸದಿ ಬಲಿಯ ದಾನವ ಬೇಡಿ ಅನುದಿನಬೇಸರಿಸಿದ ಕಳ್ಳ ಕೊಕೊಕೋ ಎನ್ನಿರೊಮೀಸಲ ಅನ್ನವ ಕೂಸಾಗಿ ಸವಿದುಂಡವೇಷಧಾರಿ ಕಳ್ಳ ಕೊಕೊಕೋ ಎನ್ನಿರೊಸಾಸಿರ ನಾಮಕ್ಕೆ ಹೆಸರಾದ ಚಪ್ಪನ್ನದೇಶದ ದಾರಿಗಳ್ಳ ಕೊಕೊಕೋ ಎನ್ನಿರೊ 3 ಆಕಳೊಳಾಡಿ ಪರಲೋಕಕೆ ನಡೆದಂಥಆಕೆವಾಳ ಕಳ್ಳ ಕೊಕೊಕೋ ಎನ್ನಿರೊಭೂಕಾಂತೆಯ ಸೊಸೆಯರನೆತ್ತೆ ಬಲುಹಿಂದನೂಕಿ ತಂದ ಕಳ್ಳ ಕೊಕೊಕೋ ಎನ್ನಿರೊಗೋಕುಲದೊಳು ಪುಟ್ಟಿ ಗೊಲ್ಲರೆಲ್ಲರ ಕೈಲಿಸಾಕಿಸಿಕೊಂಡ ಕಳ್ಳ ಕೊಕೊಕೋ ಎನ್ನಿರೊಸಾಕಾರನಾಗಿ ಈ ಲೋಕವನೆಲ್ಲವಆಕ್ರಮಿಸಿದ ಕಳ್ಳ ಕೊಕೊಕೋ ಎನ್ನಿರೊ4 ಕ್ಷೀರವಾರಿಧಿ ವೈಕುಂಠನಗರಿಯನುಸೇರಿಸಿದ ಕಳ್ಳ ಕೊಕೊಕೋ ಎನ್ನಿರೊದ್ವಾರಾವತಿಯನು ನೀರೊಳು ಬಚ್ಚಿಟ್ಟಊರುಗಳ್ಳ ಬಂದ ಕೊಕೊಕೋ ಎನ್ನಿರೊದ್ವಾರಕೆಯಾಳುವ ಉಭಯದಾಸರ ತನ್ನಊರಿಗೊಯ್ದ ಕಳ್ಳ ಕೊಕೊಕೋ ಎನ್ನಿರೊಕಾರಣಾತ್ಮಕ ಕಾಗಿನೆಲೆಯಾದಿಕೇಶವಕ್ಷೀರ ಬೆಣ್ಣೆಯ ಕಳ್ಳ ಕೊಕೊಕೋ ಎನ್ನಿರೊ 5
--------------
ಕನಕದಾಸ
ಕೊಟ್ಟಿಗೋತ್ಸವ ಗೀತೆ ಕೊಟ್ಟೊಗೋತ್ಸವ ನೋಡಿ ಸೃಷ್ಟಿಗೀಶ್ವರನ ಪ. ವಾಸುದೇವನ ಸಹಸ್ರಸ್ತಂಭಮಂಟಪವ ದಾಸರು ಬಂದು ಶೃಂಗಾರವ ಮಾಡಿ ದೇಶದ ಮೇಲುಳ್ಳ ಬೊಂಬೆಗಳನು ರಚಿಸಿ ಲೇಸಾದ ಮೇಲುಕಟ್ಟುಗಳ ಕಟ್ಟಿದರು 1 ಸೃಷ್ಟಿಗೀಶ್ವರನಾದ ರಂಗನಾಥನಿಗೆ ಕೊಟ್ಟಿಗೋತ್ಸವವನ್ನು ನಡೆಸಬೇಕೆನುತ ಕಟ್ಟಿ ಕಂಕಣವನ್ನು ನಾಲ್ಕುವೇದಗಳಿಂದ ಭಟ್ಟರು ಓದಿ ಪೇಳಿದರು ಸಂಭ್ರಮದಿ 2 ವಜ್ರದ ಕಿರೀಟವಿಟ್ಟು ರತ್ನದಂಗಿಯ ತೊಟ್ಟು ಅರ್ಜುನಸಖ ಸಂಭ್ರಮದಲಿ ಪೊರಟು ಸ್ವರ್ಗದ ಬಾಗಿಲೊಳಗೆ ತಾ ನಿಂದು ಮೂರ್ಜಗವೆಲ್ಲ ಮೋಹಿಸುತಲೆ ಬಂದು 3 ಮಂದಹಾಸದಲಿ ನಿಂದು ಮಂಟಪದಲಿ ಬಂದ ಆಳ್ವಾರರಿಗಾಸ್ಥಾನವಿತ್ತು ಚಂದದಿಂದ ದಿವ್ಯ ಪ್ರಬಂಧವ ಕೇಳಿ ಒಂದುಅಂಕಣ ಬಿಡದೆ ಬಂದ ಶ್ರೀರಂಗ 4 ಸಂಕ್ರಾಂತಿಯಲಿ ಶಂಕರನ ಪ್ರಿಯನು ಶಂಕೆ ಇಲ್ಲದೆ ಆಭರಣವನು ಧರಿಸಿ ಪಂಕಜಮುಖಿಯರೊಡಗೊಂಡು ಹರುಷದ ಲಂಕಾರವಾಗಿ ಬಂದನು ಮಂಟಪಕೆ 5 ಮತ್ತೆ ಮರುದಿನದಲ್ಲಿ ಭಕ್ತವತ್ಸಲನು ಮುತ್ತಿನಅಂಗಿ ಮುಂಡಾಸನಳವಡಿಸಿ ಮುತ್ತಿನಛತ್ರಿ ಚಾಮರ ಸೂರೆಪಾನದಿ ಮುತ್ತರಸಿಯ ಮಂಟಪಕೆ ನಡೆತಂದ 6 ಅರ್ಥಿಯಿಂಬಂದು ತಾ ಅಶ್ವವನೇರಿ ಮತ್ತೆ ಬೇಟೆಯಮೃಗವನೆ ಕೊಂದು ಸಂ ಕ್ರಾಂತಿಯ ಪಾರ್ವೇಟೆಯನಾಡಿ ಸಂತೋಷದಿ ಬಂದ 7 ನಾರಿವೇಷವ ಆಳ್ವಾರರಿಗೆ ಧರಿಸಿ ಪೇರಿಯ ತಾ ಬಿಟ್ಟು ತೇಜಿಯನೇರಿ ಚೋರತನವ ಮಾಡಿದ ಭಕ್ತರಿಗೆ ಮೂಲಮಂತ್ರವ ಪೇಳಿ ಮುಕ್ತಿಯನಿತ್ತ 8 ಮಿಂದು ಮಡಿಯನುಟ್ಟು ಅಂದು ರಾತ್ರಿಯಲಿ ಹ ನ್ನೊಂದು ವಿಧ ಭಕ್ಷ್ಯಗಳನು ತಾ ಗ್ರಹಿಸಿ ಬಂದ ಆಳ್ವಾರರಿಗೆ ಮುಕ್ತಿಯನಿತ್ತು ಬಂದು ಆಸ್ಥಾನದಿ ನಿಂದ ಶ್ರೀರಂಗ 9 ಭಕ್ತರು ಮಾಡಿದ ಪ್ರಬಂಧವನೆಲ್ಲ ಭಕ್ತಿಯಿಂದಲೆ ಪೇಳಿದ ಆಚಾರ್ಯರಿಗೆ ಯುಕ್ತಿ ತೋರಿದ ಪರಾಶರವ್ಯಾಸರಿಗೆ ಬ್ರಹ್ಮ ರಥವನಿತ್ತ ಬ್ರಹ್ಮಾಂಡರೂಪ 10 [ಶೌ]ರಿಯು ತಾನಿರಲು ಮೇಘಮಂಡಲದಂತೆ ತೋರುವುದು ತಾರಕೆಯಂತೆ ಮೈಯುಡುಗೆ ವಾರಿಜನಾಭನ ಮುತ್ತಿನಂಗಿಯ ನೋಡು ವವರಿಗೆ ತಾ ಆನಂದವಾಗಿಹುದು 11 ಕ್ಷೀರಸಾಗರದಲ್ಲಿ ಪವಡಿಸಿಹ ಹರಿಗೆ ಕ್ಷೀರಬಿಂದುಗಳು ಮೈಯೊಳಗೆ ಬಿದ್ದಂತೆ ವಾರಿಜನೇತ್ರಗೆ ವಜ್ರದನಾಮವು ಧರಿಸಿದರು ಹೇಮದ ಪಾದಹಸ್ತಗಳ 12 ಮುತ್ತಿನಂಗಿಸೇವೆ ನೋಡಬೇಕೆನುತ ಹತ್ತುಸಾವಿರ ಪ್ರಜೆ ಬಂದು ನಿಂತಿರಲು ಇತ್ತು ಕಾಣಿಕೆಯನು ನೋಡಿ ವೆಂಕಟರಂಗನ ಮುಕ್ತರಾದೆವೆಂದು ಭಕ್ತರು ನುಡಿದರು 13
--------------
ಯದುಗಿರಿಯಮ್ಮ
ಕೊಂಡಜ್ಜಿ ಶ್ರೀ ಜನಾರ್ದನ ಸ್ವಾಮಿ ಸ್ತೋತ್ರ ಎಂಥಾ ಸುಂದರನೊ ಶ್ರೀಕಾಂತನೂ ||ಅ|| ಸಂತರ ಮನೋರಥ ಸಂತತ ಪಾಲಿಸಿಪಂಥಾವ ಗೆಲಿಪ ಮಹಾಂತನೋ - ಶ್ರೀಕಾಂತನೂ ಅ.ಪ. ಮಾನಿನೀಯಳ ಬಿಟ್ಟು | ಮೌನಿಯಂದದಿ ನೀನುಕಾನನವನೆ ಸೇರಿ ನೆಲೆಸೀರ್ಪುದೂ | ಮುನಿಜನ ವಂದ್ಯಾ 1 ತೊಂಡ ಜನರು ನಿನ್ನ | ಬಂಡುಣಿಯಂದದಿಪುಂಡು ಮಾಡುವರೆಂದು ಬಂದೆಯಾ | ಪುಂಡರಿಕಾಕ್ಷಾ 2 ಹಿಂಡು ಭಕ್ತರು ತಮ್ಮ | ದಿಂಡು ಮಂಡಿಪರೆಂದು ಕೊಂಡಜ್ಜಿಯಲಿ ನೆಲಿಸೀದ್ಯಾ | ಪಾಂಡವ ಪ್ರೀಯಾ 3 ವೇಲಾಪುರಿಗೆ ಪೋಗ | ಲೊಲ್ಲೆನೆಂದೆನುತಲಿಇಲ್ಲೇ ನೆಲಸಿ ಪೂಜೆಗೊಂಬುದು ಫಾಲಾಕ್ಷ ಪ್ರಿಯನೇ 4 ಎಲ್ಲಿಪೋದರೂ ಬಿಡ | ಲೊಲ್ಲರೂ ನಿನ್ನ ಜನಸಲ್ಲಿಸೆನ್ನಯ ಮನೋಭೀಷ್ಟವ | ಹೇ ಜನಾರ್ಧನಾ 5 ಆರು ಕಾಯುವರಿಲ್ಲ | ಸಾರಿದೆ ತವ ಚರಣಪೋರನಾಮಯ ಹರಿಸಯ್ಯಾ | ನಾರದ ವಂದ್ಯಾ 6 ಗುರುಗಳಂತರ ಗುರು | ಗೋವಿಂದ ವಿಠಲನೆಪರಿಪರಿ ನಿನ ಕೀರ್ತಿ ನುಡಿಸಯ್ಯಾ | ಸುರವರ ವಂದ್ಯಾ7
--------------
ಗುರುಗೋವಿಂದವಿಠಲರು
ಕೊಂಡಿರ್ಯಾ ನೀವು ಕೊಂಡಿರ್ಯಾ ಮಂಡಲದೊಳು ವಸ್ತು ಕೊಂಡಿರ್ಯಾ ಧ್ರುವ ಕೊಳಬೇಕಾದರ ನೀವು ತಿಳಿದುಕೊಂಡು ಬನ್ನಿ 1 ತಿಳಿಯದಿದ್ದರೆ ಖೂನ ಕೇಳಿ ಸದ್ಗುರುವಿನ 2 ಬೆಲೆಯು ಹೇಳುವದಲ್ಲ ನೆಲೆಯ ತಿಳಿಯುವದಲ್ಲ 3 ಕೊಳಗ ಎಣಿಸುವುದಲ್ಲ4 ತೂಕ ಮಾಡುವುದಲ್ಲ ಲೆಕ್ಕ ಇಡುವುದಲ್ಲ 5 ಇಟ್ಟು ಮಾರುವದಲ್ಲ ಕೊಟ್ಟರ್ಹೋಗುವುದಲ್ಲ 6 ಪಂಡಿತರಿಗೆ ಪ್ರಾಣ ಕೊಂಡವರಿಗೆ ತ್ರಾಣ 7 ಹೇಳಿದ ನಾ ನಿಮಗೊಂದು ಸುಲಭವಾಗಿಂದು 8 ಒಮ್ಮನವಾದರ ಸುಮ್ಮನೆಬಾಹುದು 9 ಸಾಧುಸಜ್ಜನರಿಗೆ ಸಾಧ್ಯವಾಗುದಿದು 10ಸಾರಿ ಚೆಲ್ಲೇದ ಮಹಿಪತಿ ವಸ್ತುಮಯಮಿದು11
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಕೊಡುಕೊಡು ವರವನು ತಡವು ಮಾಡದೆ ಎ ನ್ನೊಡೆಯ ಶ್ರೀಹರಿ ಕೃಪೆ ಮಾಡಯ್ಯ ಪ ಬಿಡದಿರೆನ್ನನು ಜಗದೊಡತಿಯಾಣೆ ನಿ ನ್ನಡಿಗಳನೆಂದಿಗೂ ಬಿಡೆನಯ್ಯಾ ಅ.ಪ ಕ್ಷಿತಿಯೊಳಗತಿಶಯ ಪತಿತ ಪಾವನ ಶ್ರೀ ಪತಿ ನೀಗತಿ ಎನುತಿಹೆನಯ್ಯ ರತಿಪತಿಪಿತನೆ ಸುಮತಿಯನು ಪಾಲಿಸಿ ಗತಿಯನು ತೋರಿಪುದೆನಗಯ್ಯ1 ನಿನ್ನ ಪದವ ನಂಬಿ ನಿನ್ನವನೆನಿಸಿದ ಎನ್ನನುಪೇಕ್ಷಿಪರೇನಯ್ಯ ಸನ್ನುತ ನಿನ್ನನು ಮನ್ನಿಸಿ ಕೇಳುವ ಬಿನ್ನಪವಿನಿತೆ ಕೇಳಯ್ಯ 2 ಎಲ್ಲರ ಹೃದಯದೊಳಲ್ಲಿ ನೆಲೆಸಿರುವ ಫುಲ್ಲನಯನ ನೀ ಪೇಳಯ್ಯ ಕಲ್ಲುಮನದಿ ನೀನೊಲ್ಲದೊಡೀ ಜಗ ದಲ್ಲಿ ಪೋಪುದಿನ್ನೆಲ್ಲಯ್ಯ 3 ಪತಿಯಗಲಿದ ಪತಿವ್ರತೆಗೆ ಇತರರಲಿ ರತಿ ಸಂಜನಿಸುವದೇನಯ್ಯ ಗತಿಪತಿಯೆಲ್ಲರಪತಿ ನೀನೆನ್ನುತ ಶ್ರುತಿನುತಿಪುದು ಪುಸಿಯೇನಯ್ಯ 4 ಜಗದೊಳು ನಿನ್ನನೆ ಸುಗುಣಿಯು ಎನ್ನುತ ನಿಗಮವು ಪೊಗಳುತಲಿಹುದಯ್ಯ ಖಗಪತಿಗಮನನೆ ಬಗೆ ಬಗೆಯಲಿ ರತಿ ಸೊಗಯಿಸು ನಿನ್ನೊಳು ಎನಗಯ್ಯ 5 ಸೃಷ್ಟಿನಾಥಪದ ವಿಷ್ಟರ ಭಕ್ತಿಯ ಕೊಟ್ಟರಭೀಷ್ಟವು ಎನಗಯ್ಯ ಇಷ್ಟರ ಮೇಲಿನ್ನು ಲಕ್ಷ ಕೊಟ್ಟರೂ ಎನ ಗಿಷ್ಟವಲ್ಲ ಶ್ರೀ ಕೃಷ್ಣಯ್ಯ 6 ಚರಣಕಮಲದೊಳಗೆರಗುವೆ ಪುಲಿಗಿರಿ ವರದವಿಠಲ ದಯೆಯಿರಿಸಯ್ಯ ಚರಣಶರಣನಿಗೆ ಕರುಣಿಸದಿದ್ದರೆ ಕರುಣಿಗಳರಸರಿನ್ನಾರಯ್ಯ 7
--------------
ವೆಂಕಟವರದಾರ್ಯರು
ಕೊಡುವುದಿಲ್ಲದೆ ಪೋದ ಕಣ್ಣು ನಾಲಗೆಯಾ ಎ- ನ್ನೊಡೆಯನಲ್ಲಾನು ಊಳಿಗನಲ್ಲವೆ ಚನ್ನಾ ಪ ಕೊಂದು ಬಳಲಿಸುತಿರುವುದಿದು ಧರ್ಮವೇ ಮುಂದೆ ನಂಬುವರಿಗೆ ಅದೃಢವಾಗದಿರು ದೇವ ಕಂದರ್ಪಪಿತನೆ ಕಮನೀಯಮೂರುತಿಯೆ 1 ನೋಡುವುದೆಂತೊ ಕಣ್ಣಿಲ್ಲದಿರೆ ನಿನ್ನ ತುತಿ ಮಾಡುವುದೆಂತೊ ನಾಲಿಗೆಯುಡುಗಲು ಬೇಡುವುದೆಂತೊ ಕೈವಲ್ಯಂಗನೆಯನು ದಯ ಮಾಡೆನ್ನ ನಲ್ಲ ದಾಸರೊಳುತ್ತಮೊತ್ತಮ ನೇ 2 ಕಮಲ ಮಧ್ಯದೊಳಾವಾಗ ವಾಸವಾಗಿಪ್ಪ ಸರ್ವೇಶ್ವರನೇ ಘಾಸಿಬಡಿಸಲು ಅವರ ನೋವು ನಿನಗಲ್ಲವೇ ಕೇಶವ ಮುರಾರಿ ಅಚ್ಚುತದಾಸನಿಗೆ ಬೇಗ3 ಕೇಳಿದನೆ ನಿನ್ನಿತರ ಹಲವು ಚಿಂತೆಯಲಿ ತೊಳಲಿ ನೆಲೆಯರಿಯದಜ್ಞಾನಿಯಾಗಿ ಬಳಲುವತಿಚಂಚಲಗೀ ಮಾರ್ಗವಿರಿಸಿದೇಕೋ ನಳಿನಾಕ್ಷ ಭಕ್ತವತ್ಸಲ ಕೃಪಾಸಿಂಧೂ 4 ಶರಣರಕ್ಷಕನೆಂಬ ಬಿರುದಾರದೆಲೆ ದೇವ ಇರಿಸು ಎಂದಿನವೋಲಚ್ಚುತದಾಸನಾ ಹರಿಯದಿದ್ದರೆನ್ನ ಕಣ್ಣು ನಾಲಿಗೆಯ ಕಿ ತ್ತಿರಿಸುವೆನು ಮುಂದೆ ವೈಕುಂಠವಿಠಲ ಚನ್ನಿಗರಮಣ5
--------------
ಬೇಲೂರು ವೈಕುಂಠದಾಸರು
ಕೊರವಂಜಿ ಪದ ಬಾರೆ ಸತ್ಯಭಾಮೆ ತೋರೆ ನಿಮ್ಮ ಸುಹಸ್ತದ ಠೇವೆ ಧ್ರುವ ಸರ್ಕನೆ ಬಾರವ್ವಾ ಅರಿಕ್ಯುಳ್ಳ ಗರತಿ ಕರವ ಕೊರವತಿ ತಾರ್ಕಣ್ಯ ಬರುತಾದ ಪರಮ ಸುವಾರ್ತಿ ತರ್ಕರಹಿತ ವಸ್ತು ಕರಕೊ ಸುಮೂರ್ತಿ 1 ಓಯವ್ವ ಅವ್ವ ಬಾರೆ ನಮ್ಮವ್ವ ದೈವುಳ್ಳ ಗರತಿ ನೀನವ್ವ ದೈವ ಬರುದೆ ನಿನ್ನೊಳಗವ್ವ ಕೈದೋರೆ ಕೈದೋರೆ ಕೈದೋರೆ ನಿಮ್ಮ 2 ಕೈದೋರೆ ಕೈದೋರೆ ಕೈದೋರೆ ನಿಮ್ಮ ಕೈಯ ಲಕ್ಷಣ ನೋಡಿ ಹೇಳುವೆನಮ್ಮ ಅಯ್ಯ ಬರುತಾನೆ ಆಶೇಲಿ ನಿಮ್ಮ ಕೈಗೊಟ್ಟು ಕೇಳೆ ನಿಜ ಗುಹ್ಯವರ್ಮ 3 ಸುಳ್ಳು ಮಾತನಾಡಿ ಒಡಲ ಹೊರಳವಲ್ಲ ಬಲ್ಲಷ್ಟು ಬೊಗಳುವೆ ವಿಷಯ ದಾಸ್ಯವಳಲ್ಲ ಉಳ್ಳಷ್ಟು ಹೇಳುವೆ ಕೇಳೆ ಶಿವ ಸೊಲ್ಲ ಹೇಳುವ ಮಾತಿದು ಘನ ಗುರು ತಾ ಬಲ್ಲ 4 ಕೊರವಂಜಿ ಮಾತಿದು ಕಿವಿಗೊಟ್ಟು ಕೇಳಮ್ಮ ಬರುತಾನ ಉದರಲಿ ಹುಟ್ಟಿ ಸಗುಣ ನಿಮ್ಮ ತಾರಿಸುವ ಸ್ವಾಮಿ ಪತಿತ ಪಾವನ ನಿಮ್ಮ ಹರಷದೋರುವ ನಿತ್ಯಾನಂದೋ ಬ್ರಹ್ಮ 5 ಎಂದ ಮಾತನೆ ಕೇಳಿ ಬಂದಳು ಭಾವೆಮ್ಮ ಚೆಂದ ಉಳ್ಳ ಸುರಸ ವಾಕ್ಯ ಕೇಳಿದಳೊಮ್ಮೆ ಬಂದು ಹರುಷದಿ ಪೂರ್ಣ ಸಂದಿಸಿಟ್ಟಳು ಪ್ರೇಮ ಒಂದೆ ನಿಜಸುಮಾತ್ಹೇಳ್ಯೆಂದಳು ನೇಮ 6 ಎಲ್ಲಿಂದ ಬಂದೆವ್ವ ಸೊಲ್ಲ ಬೀರುತ ಶಿವ ಬಲ್ಲ ಮಹಿಮಳೆಂದು ನಾನರಿಯೆನವ್ವ ಇಲ್ಲೆವೆ ಕಂಡೆ ನಾ ಸೊಲ್ಲಿನ ಮಹಿಮರು ಎಲ್ಲ ನೆಲೆನಿಭೇಳೌವ್ವ 7 ಸರಿಯ ಬಂದರ ನಿನ್ನ ಮರಿಯೆನವ್ವ ಎಂದು ಖರೆ ಉಳ್ಳ ಮಾತನೆ ಹೇಳೆ ನಿಜ ಒಂದು ಹಿರಿಯರಗೀ ಮಾತು ಸರಿಯ ಬಾವ್ಹಾಂಗಿಂದು ಬೀರವ್ವ ನಿಜಸಾರವಿಂದು 8 ಲಕ್ಷ ಎಂಬತ್ತುನಾಲ್ಕು ಗ್ರಾಮವ ನೋಡಿ ಲಕ್ಷಿಸುತ ಬಂದ ಲಕ್ಷಣ ನಿಜಗೂಡಿ ಲಕ್ಷುಮಿ ಕರದೋರುತದ ನಿಮ್ಮೊಳೊಡಮೂಡಿ ಅಕ್ಷಯಾನಂದ ಬರುತಾನೆ ಇದರಿಡಿ 9 ಕರ ಕೊಟ್ಟಳು ಸುಶೀಲೆ ವರ ಕೃಪೆಯಲಿ ಕೊರವಂಜಿ ಮಾತಲಿ ಅರಿತಳು ತಾ ತನ್ನಲಿ ಪರಮಾನಂದ ಲೀಲೆ ಬೆರದಳು ಕೇಳಿ 10 ನುಡಿಯುವ್ವ ಸಲಲಿತವಾದ ನಿಜವಾಕ್ಯ ಬಡುವಂತೆ ಹರುಷವು ನೋಡಿ ತ್ರಯಲೋಕ್ಯ ಬಡಸವ್ವ ನನಗಿಂದು ಇದೆ ನಿಜ ಮುಖ್ಯ ಕುಡಲಿಕ್ಕೆ ನಿನಗಿದು ಶಕ್ಯ 11 ಮನದಂತೆಯಾದರ ನೆನದೇನವ್ವ ನಿಮ್ಮ ಅನುಕೂಲಾಗುವ ಪುಣ್ಯ ಪೂರ್ವಾರ್ಜಿತ ನಮ್ಮ ಸಾನುಕೂಲಾಗುವಂತೆ ಬೇಡಿಕೊಳ್ಳಮ್ಮ ನೆನಿ ಎಕನಾತಿ ಎಲ್ಲಮ್ಮ 12 ಒಡಮೂಡಿ ಬಂದರ ಉಡಿಯ ತುಂಬೇನವ್ವ ಜಡಿತಾಭರಣದುಡಿಗಟ್ಟೆ ನಿನಗವ್ವ ಹಿಡಿಯದೆ ಅನುಮಾನ ನುಡಿ ನಿಜ ಸಾರವ್ವ ಕುಡಲಿಕ್ಕೆ ನಿಧಾನದವ್ವ 13 ಕೈಯ ಲಕ್ಷಣದಲಿ ಶ್ರೇಯ ತೋರುತಲ್ಯದ ದಯ ಉಳ್ಳ ಮಹಿಮದ ಸೋಹ್ಯ ಬೀರುತಲ್ಯದ ಭಯವಿಲ್ಲದ ಭಾಗ್ಯ ಅಚಲ ತಾನಾಗ್ಯದ ಜಯಜಯಕಾರ ಭಾಸುತದ 14 ಪುಣ್ಯ ಪ್ರಭೆಯ ಚೆನ್ನಾಗಿ ಭಾಸುತಲ್ಯದೆ ಕಣ್ಣಿಗೆ ಸುಚಿನ್ಹ ಹೊಳವುತದೆ ಚಿನ್ನುಮಯದ ಸುಪುತ್ಥಳಿ ಬರುತದೆ ಬಣ್ಣ ಬಣ್ಣದ ಸುಖ ಬೀರುತದೆ 15 ಅಂಗದೊಳಗ ನಿಮ್ಮ ರಂಗ ಬರುತಾನಮ್ಮ ಕಂಗಳಿಗಿದರಿಡುತದೆ ಹರುಷವು ನಿಮ್ಮ ಭವ ಬಂಧದ ದುಷ್ಕರ್ಮ ಮಂಗಳಕರಾನಂದೊ ಬ್ರಹ್ಮ 16 ನಿನ್ನ ಭಾಗ್ಯಕ ಸರಿ ಇಲ್ಲೆ ಸಂಜೀವನಿ ಚೆನ್ನಾಗಿ ಕೇಳೆ ನೀ ಭಾವೆಗುಣಮಣಿ ಧನ್ಯವಾಯಿತು ನಿನ್ನಂದೆವೆ ಯತಿಮುನಿ ನಿನ್ನೊಳಗುಂಟು ದೇವಶಿಖಾಮಣಿ 17 ಭಾವೆ ನಿನ್ನಿಂದ ಪಾವನ್ನವಾಯಿತು ಜಗ ದೇವಾಧಿದೇವ ಮೂಡುವ ನಿನ್ನೊಳಗೀಗ ಕಾವಕರುಣ ಪ್ರತ್ಯಕ್ಷವಾಗುವ ಯೋಗ ಸುವಿದ್ಯ ಭಾಸುವ ದಿವ್ಯಭೋಗ 18 ಉಂಡ ಊಟ ಕಂಡ ಕನಸು ಪಿಂಡಲಕ್ಷಣ್ಹೇಳುವೆ ಮಂಡಲೊಳಗ ಮಂಡಿಸಿಹ್ಯ ಮಹಿಮೆ ನೀನಗ್ಹೇಳುವೆ ಹಿಂಡದೈವದೊಡಿಯ ನಿನ್ನೊಡಲೊಳಗ ತಾಳುವೆ ಪಂಡಿತರಿಗೆ ಪ್ರಿಯವಾದಾಗ್ಯ ಖಂಡನೀನೆ ಬಾಳುವೆ 19 ನೀನೆ ಜಗಕ ತಾರಿಸುವ ದೈವದೋರಿಕುಡುವೆ ನೀನೆ ಭಕ್ತಜನರ ಜನ್ಮಸಾರ್ಥಕವು ಮಾಡುವೆ ಜ್ಞಾನಗಮ್ಯವಾದ ವಸ್ತುಹಿಡದು ನೀನೆ ಕುಡುವೆ ನಿತ್ಯ ಆಡುವೆ 20 ಅಮ್ಮ ನಿಮ್ಮೊಳು ಘಮ್ಮನ್ಹೊಳುವ ತಮ್ಮ ಬರುತಾನ ಸುಮ್ಮಾನಿಹ್ಹಾ ಸಮೀಪಲೆ ಧಿಮ್ಮ ಹಿಡಿದ ಹಮ್ಮಿನೊಳು ಘುಮ್ಮವಾದರು ಬ್ರಹ್ಮಾದಿಗಳೆ ನಮ್ಮ ನಿಮ್ಮದೆಂಬು ಭ್ರಮೆ ಸುಮ್ಮನ್ಯಾಕಿದೊ ಅಮ್ಮಕೇಳೆ 21 ಬಯಕಿ ಲಕ್ಷಣ ನಿನ್ನ ಹೇಳ್ಹೆನವ್ವಾ ತಾಯಿ ಮಾಯಿಕ ಗುಣ ಸುಟ್ಟು ತಿಂದೇನೆಂಬುದು ಬಾಯಿ ಕೈಕಚ್ಚಿಲೆ ಶುದ್ದಿಲ್ಲಾದವರ ತಾಳದು ಸೋವಿ ಐರಾವತ ಬರುತಾನ ನಿನ್ನೊಳು ಪನ್ನಂಗಶಾಯಿ 22 ಬಾಹ್ಯನಿಷ್ಟರ ಕಂಡು ಬದಿಗೆ ಬರಗುಡಿ ನೀನು ಅಹಂಭಾವಕ ಹೇಸಿ ವಾಕರಿಸುವೆ ನೀನು ಗುಹ್ಯ ಹೇಳುವೆ ನಾನು ಸಾಹ್ಯ ಮಾಡುವ ಶ್ರೀಗುರು ತಾನು 23 ಕಾಮಕ್ರೋಧ ಕರದು ತಿಂದೇನೆಂಬುದು ಬಯಕಿ ನೇಮದಿಂದಲಿ ಮದ ಮತ್ಸರನೆ ನೂಕಿ ಪ್ರೇಮವಿಲ್ಲದವರ ಎಂದಿಗಾದರ ಸೋಕಿ ವರ್ಮಿಕರಿಗೆ ನೀ ಕೈಯಗುಡುವಾಕಿ 24 ಆಸಿ ಎಂಬುದು ಅಟ್ಟುಅರದೇನೆಂಬುದು ಬ್ಯಾಗ ಹುಸಿನುಡಿವೆಂಬದು ಹುರವಾದೀಗ ಹಸನಾದ ಬಯಕೀದು ಋಷಿ ಮುನಿಗಳ ಯೋಗ ಲೇಸು ಲೇಸು ನಿನ್ನ ಅಂತರಂಗ 25 ಧನ್ಯವಾದ ರಾಜಯೋಗವ ಬಯಸುದು ಉನ್ಮನವಾಗಿ ಊರ್ಜಿತವಾದೇನೆಂಬುದು ಸ್ವಾನುಭವದ ಸುಖ ಸೂರ್ಯಾಡೇನೆಂಬುದು ಭಿನ್ನ ಭೇದಕ ಕಣ್ಣ ತ್ಯರಿಯದಿದು 26 ವಾಸುದೇವನ ಭಕ್ತಿ ಆಶ್ರೈಸೇನೆಂಬುದು ಶ್ವಾಸೋಚ್ಛ್ವಾಸಕ ಒಮ್ಮೆ ಬಯಸುವುದು ವಿಷಯ ಪ್ರಪಂಚಕ ಹೇಸಿ ತಾ ಜರೆವುದು ಕುಸುಮನಾಭನ ಸೇವೆ ಇಚ್ಛಿಸುವದು 27 ಒಮ್ಮೆ ಸರಸ್ವತಿ ಕೂಡ ಸರಸಾಡೇನೆಂಬುದು ಒಮ್ಮೆ ಲಕ್ಷುಮಿ ಕೂಡ ಲೋಲಾಡೇನೆಂಬುದು ಒಮ್ಮೆ ಪಾರ್ವತಿ ಕೂಡ ಪವಡೀಸೆನೆಂಬುದು ಒಮ್ಮೆ ಏನುನೊಲ್ಲ್ಯೆನೆಂಬುದು 28 ಹೇಳೇನೆಂದರೆ ನಿನ್ನ ಬಯಕಿಯ ಉಲ್ಹಾಸ ತಿಳಿಯದಿನ್ನೊಬ್ಬರಿಗ ಗರ್ಭದ ಸುವಾಸ ಉಲವುತದೆ ನಿನ್ನೊಳು ಸುಪ್ರಕಾಶ ಥಳಥಳಗುಡುತಿಹ್ಯ ಬಾಲವೇಷ 29 ಧನ್ಯ ಧನ್ಯ ನಿನ್ನ ಗರ್ಭಹೊಳುವ ಹೊಂಬಣ್ಣವು ಒಡಲು ನಿನ್ನ ಪುಣ್ಯ ಪಾವನ್ನವು ಧನ್ಯ ಧನ್ಯ ನಿನ್ನ ದರುಷಣದ ಜೀವನವು ಧನ್ಯ ಧನ್ಯ ನಿನ್ನ ಕಂಡ ಜನರ ಜೀವಪ್ರಾಣವು 30 ಭಾವೆ ನಿನ್ನಿಂದ ಖ್ಯಾತಿಪಡೆದ ಪ್ರಹ್ಲಾದನು ದೇವ ದೇವ ಬಂದು ಸ್ತಂಭದೊಳು ಮೂಡಿದನು ಆವಾವ ಠಾವಿನೊಳು ಬಂದು ರಕ್ಷಿಸಿದನು ಜೀವ ಜೀವ ತಾನೆ ಅಗಿ ಪ್ರಾಣನುಳಹಿದನು 31 ನಿನ್ನ ಬಲಗೊಂಡು ದ್ರೌಪದಿಯ ಖ್ಯಾತಿಪಡೆದಳು ಪುಣ್ಯ ಉಳ್ಳ ಮಹಿಮನಂಘ್ರಿ ಕಣ್ಣಾರ ಕಂಡಳು ಚೆನ್ನಾಗಿ ಬಂದು ಸ್ವಾಮಿ ಲಜ್ಜೆಗಾಯ್ದು ಸಭೆಯೊಳು ಬಣ್ಣ ಬಣ್ಣ ವಸ್ತ್ರ ಪೂರಿಸಿದಾನೇಕಗಳು 32 ಸ್ತುತಿಯು ಮಾಡಲು ನಿನ್ನ ಯತಿಮುನಿಗಳವಲ್ಲ ಗತಿಯ ಪಡೆದರು ಸಕಲ ಮುನಿಜನರೆಲ್ಲ ಅತಿ ಹರುಷವು ಕೂಡಿದರು ಜಗದೊಳಗ್ಯಲ್ಲ ಹಿತದೋರುತಿದೆ ವಸ್ತು ಮಯವೆಲ್ಲ 33 ಹೊಳೆವ ಸುಳಿವ ಚೆಲುವ ನಿನ್ನೊಳಗ ನಲುವನೆ ಕಳವಿಲೊಯಿದ ವೇದನುಳುಹಿದವನು ಬೆಳೆವನೆ ಭಾರ ತಾಳಿದವನು ಉಲುವನೆ ನೆಲವ ಗೆದ್ದ ಬಲಿಯು ನಿನ್ನೊಳಗೆ ಒಲುವನೆ 34 ಸೀಳಿ ದೈತ್ಯನ ಕೊಂದ ಶೂರ ಘಮಗುಡತಾನೆ ಅಳದು ಭೂಮಿಯ ಕೊಂಡು ಬೆಳದವ ಬರುತಾನೆ ತಿಳಿದು ಪಿತರ ಸೂಡುಕೊಂಡವ ಬರುತಾನೆ ಬಲುಪರಾಕ್ರಮದವ ತೋಳುತಾನೆ 35 ತಾಂ ಸಂಚರಿಸ್ಹ್ಯಾನ ನಿನ್ನೊಳಗ ಮೂಡಿ ಬರುತಾನೆ ಬ್ಯಾಗೆ ನಗುತ ಬರುತಾನೆ ಈಗ ಕೈಯಗೊಟ್ಟು ಬರುತಾನೆ ನಿನಗೆ 36 ಸಾಧೀಸಿ ಕೇಳೆ ಕಿವಿಗೊಟ್ಟು ಒದುಗುವ ತಾಂ ಇದರಿಟ್ಟು ಉದಿಯವಾಗುವ ದಯವಿಟ್ಟು ಸದ್ಬಕ್ತರಿಗೆ ಕೈಯಗೊಟ್ಟು 37 ಹುಟ್ಟುವ ಶಿಶುವಿನ ಘಟಣಿಯ ಬಹಳ ಗುಟ್ಟೊಡಿಯಲು ತಾಂ ಮುಟ್ಟನು ತಾಳ ಕಟ್ಟುವ ದೈತ್ಯರ ದಿಟ್ಟ ಮಾ ಸಾಳ ದೃಷ್ಟಿಸಿ ನೋಡುವ ನಿಷ್ಠರ ಮೇಳ 38 ಶಿಶುವಿನ ಲಕ್ಷಣ ಬಲು ಅಗಾಧ ಪರಿ ಮಾಟವು ಋಷಿಗಳ ಬೋಧ ಹಸು ನೀರಡಿಸರವುದು ಶ್ರೀಪಾದ ಬಸುರಿನ ಬಯಕಿದು ಬಲುಸುಸ್ವಾದ 39 ಘಮಗುಡುತದೆ ಅನಾಹತದ ಧ್ವನಿಯು ಕ್ರಮ ತಿಳಿವದು ಸುಯೋಗದ ಮನಿಯು ಧಿಮಿಗುಡುತದ ಆನಂದದ ಖಣಿಯು ಭ್ರಮ ಬಿಡಿಸುವ ಘನ ಚಿಂತಾಮಣಿಯು 40 ಹುಟ್ಟಿ ಬರುತಾನಿವ ಶಿಷ್ಟರ ಮನಿಲಿವ ದುಷ್ಟ ಮರ್ದನ ದೇವ ನಿಷ್ಠರಿಗೆ ಕಾವ ಎಷ್ಟೆಂದ್ಹೇಳಲವ್ವ ಸೃಷ್ಟಿಗಧಿಕನಿವ ಮುಟ್ಟಿ ಮುದ್ರಿಸುವ ದಿಟ್ಟೆದೆ ಕೂಸವ್ವ 41 ವರ್ಣಿಸಲಾಗದು ಶಿಶುವಿನ ವಿವರಣ ದಣಿಯಿತು ಕೊಂಡಾಡಿ ವೇದಸುಪುರಾಣ ಖೂನ ತಿಳಿಯದು ತಾನು ಶಾಸ್ತ್ರಕ ಸಂಪೂರ್ಣ ದ್ಯಾನ ಮೋನಕ ದೂರಗಮ್ಯ ಸ್ಥಾನ 42 ಗುಟ್ಟು ತಿಳಿಯದ ವಸ್ತು ಹುಟ್ಟಿಬಾಹುದು ಕೇಳಿ ಉಂಟಾಗುವದು ನಿನ್ನೊಳು ನೆನದಾಗಳೆ ಘಟ್ಯಾಗಿ ಅನುಭವಿಸುತ ನೀನೆ ಬಾಳೆ ದೃಷ್ಟಿಯೊಳೀಗುಟ್ಟು ಆರೀಗ್ಹೇಳೆ 43 ಬಸುರು ಬಯಕೆಂಬುದು ಹೆಸರಿಸಲಳವಲ್ಲ ಹಸನಾಗಿ ಅನುಭವಿಸುವ ಪುರುಷನೆ ಬಲ್ಲ ವಾಸುದೇವನ ಕಾಣದಿಹ್ಯದೆ ಕಣ್ಣಲ್ಲ ಆಸಿ ಅಳಿದವರೆ ತಾಂ ತಿಳಿದರೆಲ್ಲ 44 ಹುಟ್ಟುವ ಲಕ್ಷಣ ಕೇಳೆ ನೀ ಕಿವಿಗೊಟ್ಟು ಮುಟ್ಟಿ ಮುದ್ರಿಸಿಹ್ಯ ಗುರು ಕಟಾಕ್ಷವ ಕೊಟ್ಟು ಇಟ್ಟುಕೊ ಈ ಮಾತು ಆರಿಗ್ಹೇಳೆ ಬಿಟ್ಟು ಗಂಟು ಕಟ್ಟಿದ ಮಾತು ಹೇಳೆಬಿಟ್ಟು 45 ಆಲಕ್ಷವೆಂಬ ಸುನಕ್ಷತ್ರದಲಿ ಪುಟ್ಟಿ ಸುಲಕ್ಷಣದಲಿ ಬರುತಾನೆ ಜಗಜಟ್ಟಿ ನೆಲಯುಗೊಂಡಾಡಿಸಿ ಮನಮುಟ್ಟಿ 46 ಜನ್ಮನಾಮೆಂಬುದು ಕೂಸಿನ ನಿರ್ಗುಣ ಸಮಸ್ತರಿಗೆ ನಡವ ನಾಮವೆ ಸಗುಣ ಬ್ರಹ್ಮಾನಂದದಿ ಲೋಲ್ಯಾಡುವ ಪರಿಪೂರ್ಣ ಕಮಲನಯನ ಸ್ವಾಮಿ ರಮಾರಮಣ 47 ಕೂಸು ಎಂದರ ತಾನು ಕೂಸು ಎನಲಾಗದು ವಾಸವಾಗ್ಯಾಡುದು ವಿಶ್ವಲಿದು ಹೆಸರನೇಕಪರಿಯಲಿ ಕರಿಸಿಕೊಂಡು ಲೇಸು ಲೇಸಾಗಿ ತಾ ಆಡುವುದು 48 ಹಿಂದ ಅಡಿದ ಆಟ ಮಂದದೆ ಆಡುದು ಎಂದಿಗ್ಯದರ ಗುಟ್ಟು ತಿಳಿಯಗುಡುದು ಒಂದಿಸಿದವರ ತನ್ನೊಳು ಕೂಡಿಕೊಂಬುದು ಒಂದೆ ವಸ್ತುವಾಗಿ ತೋರುವುದು 49 ಹೇಳುವೆ ಕೇಳೆ ಶಿಶುವಿನ ಆಟ ತಿಳಿಯಲು ಜಗದೊಳು ಬಲು ಅವ್ಹಾಟ ನೆಲಿ ತಿಳಿದವರಿಗೆ ತೋರುದದು ನೀಟ ನಲಿನಲಿದಾಡುವ ಸಲಲಿತದಾಟ 50 ಒಮ್ಮೆ ನೀರನೆ ಚಲಿಪಿಲಿ ಮಾಡುವ ಒಮ್ಮೆ ಬಾಗಿ ಜಗನೆಗುವ ಒಮ್ಮೆ ಹಲ್ಲಿಲೆ ಬೇರನೆ ಅಗಳುವ ಒಮ್ಮೆ ಬರುತಲಿ ಗುರುಗುಡುವ 51 ಒಮ್ಮೆ ಬಲು ಗಿಡ್ಡಾಗಿ ತೋರುವ ಒಮ್ಮೆ ಪರಾಕ್ರಮ ಹಿಡುವ ಒಮ್ಮೆ ವನದೊಳಗಾಡುತ ಹೋಗುವ ಒಮ್ಮೆ ಕಡವ ಬೆಣ್ಣೆಯ ಮೆಲುವ 52 ಒಮ್ಮೆ ಬತ್ತಲೆ ತ್ರಿಪುರದಲಿ ಸುಳಿವ ಒಮ್ಮೆ ಏರುವ ತಾ ಹಯವ ಒಮ್ಮೊಮ್ಮಾಗುವ ತಾನೆವೆ ಸಗುಣವ ಒಮ್ಮೊಮ್ಮಾಗುವ ನಿರ್ಗುಣವ 53
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಕೋಣ ಕೇಳಲೋ ಕೋಣ ನೀನು ಕೋಣನಲ್ಲವು ಬ್ರಹ್ಮ ಕೋಣ ಪ ಶಾಸ್ತ್ರ ಪುರಾಣವ ಕೋಣ ನೀನು ವಿಸ್ತರವೋದಿದೆ ಕೋಣವಸ್ತು ತಿಳಿಯಲಿಲ್ಲ ಕೋಣ ನಿನ್ನ ಪುಸ್ತಕ ಬಟ್ಟೆಯಲ್ಲೋ ಕೋಣ 1 ಎಲ್ಲವನೋದಿದೆ ಕೋಣ ನಾನು ಬಲ್ಲೆನೆನುತಿಹೆ ಕೋಣಬಲ್ಲೆನು ನಿನ್ನ ಕೋಣ ನೀನು ಬಲ್ಲಿಡೆ ಬಲ್ಲೆಯೋ ಕೋಣ2 ಹೆಂಡಿರು ಮಕ್ಕಳು ಕೋಣ ಪ್ರಪಂಚ ಯಮನಾಳು ಕೋಣಖಂಡಿಸಿ ತಿಳಿ ನೀನು ಕೋಣ ಪ್ರಾಣ ಕೊಂಡವರವರೀಗ ಕೋಣ3 ಎಲ್ಲಿಂದ ಬಂದೆಯೋ ಕೋಣ ನೀನೆಲ್ಲಿಗೆ ಹೋಗುವೆ ಕೋಣಬಲ್ಲವಿಕೆ ನಿನಗಿಲ್ಲ ಕೋಣ ನೀ ಎಲ್ಲರ ಹೊಡೆಗೆಡೆ ಕೋಣ 4 ಅರಿ ಕೋಣ ಇನ್ನು ಚಿದಾನಂದನರಿಯದಿದ್ದಡೆ ಕೋಣ5
--------------
ಚಿದಾನಂದ ಅವಧೂತರು
ಕೋಪವೇನೋ ಕೃಷ್ಣ ಕೋಪವೇನೊ ಪಾಪಿ ಜನಗಳಿಗೆ ನಿನ್ನ ರೂಪವÀ ತೋರಿದೆನೆಂದು ಪ ಪೇಳು ಕೃಷ್ಣ ನಿನ್ನ ಕೇಳುವೆನೊ ಗಾಳಿ ಚಳಿಮಳೆಗಳಲಿ ನಿನ್ನ ಧಾಳಿಯ ಮಾಡಿದೆನೆಂದು 1 ಸುಳ್ಳಿದಲ್ಲ ಕೃಷ್ಣ ಒಲ್ಲೆನೆಲ್ಲ ಹಳ್ಳ ಕೊಳ್ಳಗಳಲಿ ನುಗ್ಗಿ ಹಳ್ಳಿ ಹಳ್ಳಿಗೆ ತೋರಿದೆನೆಂದು 2 ಗುಟ್ಟಿದಲ್ಲ ಕೃಷ್ಣ ಬಿಟ್ಟಿದ್ದಲ್ಲ ಹೊಟ್ಟೆಪಾಡಿಗಾಗಿ ನಿನ್ನ ರಟ್ಟುಮಾಡಿ ದಣಿಸಿದೆನೆಂದು 3 ನಿನ್ನ ತ್ಯಾಗ ಕೃಷ್ಣ ಎನ್ನ ಯೋಗ ಮನ್ನಿಸಲಾರೆಯ ದಯದಿ ಚಿನ್ಮಯ ಪ್ರಸನ್ನ ಕೃಷ್ಣ 4
--------------
ವಿದ್ಯಾಪ್ರಸನ್ನತೀರ್ಥರು