ಒಟ್ಟು 6705 ಕಡೆಗಳಲ್ಲಿ , 132 ದಾಸರು , 3679 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಇರಲಯ್ಯಾ ಶ್ರೀಹರಿ ಇರಲಯ್ಯಾ ದಾಸನ ಮೇಲೆ ದಯೆ ಪ ಮರಿಯಾದೆ ಹೋಗಲಿ ಮರಿಯಾದೆ ಇರಲಿ ಧರೆಯಮೇಲೆ ಇವ ಇರುವತನಕ ದಯೆ 1 ದು:ಖದಿಂದಿರಲಿ ನಾ ಸುಖದಿಂದಿರಲಿ ನಿಖಿಲರು ಜರಿಯಲಿ ಭಕುತನಮೇಲೆ ದಯೆ 2 ಬಂದದು ಬರಲಿ ಮಮ ತಂದೆ ಶ್ರೀರಾಮ ನಿಮ್ಮ ಬಂಧುರಧ್ಯಾನಮಾತ್ರವೊಂದೆನ್ನಗಲದಂತೆ 3
--------------
ರಾಮದಾಸರು
ಇಲ್ಲೆಂದೆ ಇಲ್ಲೆಂದೆ ಭಕ್ತಜನಕೆ ಭಯ ಇಲ್ಲೆಂದೆ ಇಲ್ಲೆಂದೆ ಪ ಪಾದ ಎಲ್ಲ ಸಂಪದವೆಂದು ಬಲ್ಲಂಥ ಭಕ್ತರಿಗೆಲ್ಲರೀತಿಲಿ ಭಯಅ.ಪ ವಂದಿಸಿ ನುಡಿದರೆ ಬಂತೇನೆಂದೆ ನಿಂದಿಸಿ ನುಡಿಯಲು ಕುಂದೇನೆಂದೆ ಸಿಂಧುಶಯನನ ತಂದು ಮಾನಸವೆಂಬ ಮಂದಿರದಿಟ್ಟವರಿಗೆಂದೆಂದಿರದು ಭಯ 1 ಬಡತನ ಬಂದರೆ ಮಿಡುಕೇನೆಂದೆ ಕಡುಸಿರಿಯಿರ್ದರೆ ನಿಜವೇನೆಂದೆ ಜಡಭವ ಕನಸೆಂದು ದೃಢವಹಿಸೊಡಲೊಳು ಮೃಡಸಿಧರನೆ ನಿಮ್ಮ ಆಡುವರಿಗೆ ಭಯ 2 ಪೊಡವಿಪ ಮೆಚ್ಚಲು ಕೊಡುವುದೇನೆಂದೆ ಕಡುಕೋಪಗೊಂಡರೆ ಕೆಡುವುದೇನೆಂದೆ ಪೊಡವೀರೇಳನು ಒಡಲೊಳಗಿಟ್ಟವನಡಿ ಬಿಡುದಿರುವರಿಗಿಡಿ ಭುವನದ ಭಯ 3 ಸತಿಸುತರಿದ್ದರೆ ಹಿತವೇನೆಂದೆ ಸತಿಸುತರಿಲ್ಲದಿರೆ ಅಹಿತವೇನೆಂದೆ ರತಿಪತಿಪಿತನಡಿ ಸತತದಿ ಗೂಡಿಟ್ಟು ನುತಿಪ ಭಕ್ತರಿಗೆ ಕ್ಷಿತಿಮೇಲೇತರ ಭಯ 4 ಭೂಷಣ ಮಾಡಲದೊಂದೇ ಅಂದೆ ದೂಷಣ ಮಾಡಲದೊಂದೇ ಅಂದೆ ಶ್ರೀಶ ಶ್ರೀರಾಮನ ಸಾಸಿರ ನಾಮದ ಧ್ಯಾಸದಿಟ್ಟವರಿಗೇಸು ಕಾಲದಿ ಭಯ 5
--------------
ರಾಮದಾಸರು
ಇವನೆವೆ ಮಾನವನು ನೋಡಿರೋ ಇವನೆವೆ ಮಾನವನು ಪ ದಾವನು ಶ್ರಿ ಹರಿ ಪಾವನ ನಾಮವ ಆವಾಗ ನೆನೆವುತ ಸಾವಧನಾದಾ ಅ.ಪ ಹಿಂದಿನ ಪುಣ್ಯದಲಿ ನಾನೀಗ ಬಂದೆನು ನರದೇಹದಲಿ | ಮುಂದಾವ ಗತಿಗಳೋ ಛಂದದ ತಿಳಿಯದು | ಮಂದರ ಧರ ಸಲಹೆಂದು ಮೊರೆಯಿಡುವ 1 ಇದ್ದಷ್ಟರೊಳುದಾವ ಶೇವೆಗೆ ಕದ್ದಿರ ತನುಮನವಾ | ಸಿದ್ಧರ ನೆರೆಯಲಿ ಶಿದ್ಧ ಬೋಧಾಮೃತ | ಬುದ್ಧಿಲಿ ಸೇವಿಸಿ ಗದ್ದಳವಾಗಾ 2 ಗುರು ಮಹಿಪತಿ ಸ್ವಾಮಿ ಚರಣಕ ಶರಣೆಂದವನು ಪ್ರೇಮಿ | ಗುರು ವಚನವನಂದದಿ ಧರೆಯೊಳು ನಡೆಯುತ | ಗುರು ಭಕ್ತಿ ಜಾಗಿಸಿ ಗುರುತನಕ ಬಂದಾ 3
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಇವುಗಳ ಹಾವಳಿಗಂಜುವಳಲ್ಲ ಅ ಲ್ಲವುಗಳ ಸ್ಮøತಿಗೆ ನಾನಂಜುವೆನೆ ಪ ಚಂದ್ರ ಚಂದ್ರಿಕೆಯು ಉದಯಿಸಲ್ಯಾತಕೆ ನಿಂದ್ರಿಸುವೆನೆ ನಾನದರನ್ನು ಇಂದ್ರನನುಜನಾ ಶ್ರುತಿಗೆ ಸ್ಮøತಿಗೆ ಬರಲು ನಿಂದ್ರಿಸಲಾರೆನೆ ನಿಮಿಷ ಮನ 1 ಪಲ್ಲವಿಸವ್ಯಾತಕೆ ಚೂತ ತರುಗಳಿಗಿನ್ನು ನಿಲ್ಲಿಸುವೆನೆ ಅದರುಲ್ಬಣವ ಪಲ್ಲವ ಪಾದವ ಮನಸಿಗೆ ಬಂದರೆ ತಲ್ಲಣಿಸುವೆನೆ ತಾವರೆ ನಯನೆ 2 ಅಂಬುದಗಳೆಲ್ಲ ಅಂಬರವೇರಲಾ ಇಂಬು ಕೊಡೆ ಅಂಬುದ ಶ್ಯಾಮನು ಮನದಲಿ ನಿಲಲು ಕಂಬು ಕಂಠಿ 3 ಕುಂದ ಕುಸುಮಗಳು ವಿಕಸಿತವಾದರು ಅಂದಗೆಡುವುದಿಲ್ಲ ಮನಸಿನಲಿ ಕುಂದರದನ ಎನ್ನ ಮನಸಿಗೆ ತೋರಲು ಕಂದಿ ಕುಂದುವೆ ಮನ ಮಂದಿರದಿ 4 ಏವಮಾದಿಗಳೆಲ್ಲ ಏನು ಮಾಡವೋ ವಾಸು- ದೇವವಿಟ್ಠಲ ಸ್ಮøತಿ ಬಾರದಿರೆ ಶ್ರೀವರ ಚಿತ್ತಕ್ಕೆ ಬಂದರೆ ನಿಂದರೆ ತಾವರೆನಯನೆ ನೀ ತಂದು ತೋರೆ 5
--------------
ವ್ಯಾಸತತ್ವಜ್ಞದಾಸರು
ಇಷ್ಟು ದಿನ ಈ ವೈಕುಂಠಎಷ್ಟು ದೂರವೊ ಎನ್ನುತಲಿದ್ದೆದೃಷ್ಟಿಯಿಂದಲಿ ನಾನು ಕಂಡೆಸೃಷ್ಟಿಗೀಶನೆ ಶ್ರೀರಂಗಶಾಯಿ ಪ ಎಂಟು ಏಳನು ಕಳೆದುದರಿಂದತುಂಟರೈವರ ತುಳಿದುದರಿಂದಕಂಟಕನೊಬ್ಬನು ಅಳಿದುದರಿಂದಭಂಟನಾಗಿ ಬಂದೇ ಶ್ರೀರಂಗಶಾಯಿ1 ವನ ಉಪವನಗಳಿಂದಘನ ಸರೋವರಗಳಿಂದಕನಕ ಗೋಪುರಗಳಿಂದಘನಶೋಭಿತನೆ ಶ್ರೀರಂಗಶಾಯಿ2 ವಜ್ರವೈಢೂರ್ಯ ತೊಲೆಗಳ ಕಂಡೆಪ್ರಜ್ವಲಿಪ ಮಹಾದ್ವಾರವ ಕಂಡೆನಿರ್ಜರಾದಿ ಮುನಿಗಳ ಕಂಡೆದುರ್ಜನಾಂತಕ ಶ್ರೀರಂಗಶಾಯಿ 3 ರಂಭೆ ಊರ್ವಶಿ ಮೇಳವ ಕಂಡೆತುಂಬುರು ನಾರದರ ಕಂಡೆಅಂಬುಜೋದ್ಭವ ಪ್ರಮುಖರ ಕಂಡೆಶಂಬರಾರಿ ಪಿತನೆ ಶ್ರೀರಂಗಶಾಯಿ4 ನಾಗಶಯನನ ಮೂರುತಿ ಕಂಡೆಭೋಗಿ ಭೂಷಣ ಶಿವನನು ಕಂಡೆಭಾಗವತರ ಸಮ್ಮೇಳವ ಕಂಡೆಕಾಗಿನೆಲೆಯಾದಿಕೇಶವ ಶ್ರೀರಂಗಶಾಯಿ 5
--------------
ಕನಕದಾಸ
ಇಷ್ಟು ಮಾಡಿ ಕೈ ಬಿಟ್ಟು ಕೂಡ್ರುವದು ಶಿಷ್ಟರ ನಡತೆಲ್ಲೆಲ್ಲೂ ಗುರುವೇ ಬಲು ಕಷ್ಟದೊಳಗೆ ನಾ ಮುಳುಗಿರುವೆ ನೀ ಕೊಟ್ಟ ಅಭಯದಿಂ ಬದುಕಿರುವೆ ಸಿಟ್ಟು ಮಾತ್ರ ನೀನಾಗ ಬೇಡ ಪೊರೆ ಜಿಷ್ಣುಸಾರಥಿಯ ಪ್ರೀಯ ಮಗುವೆ ಬಾ ಬಾ ಗುರುವೆ ಪ ಇತ್ತರು ಸರಿಯಿಲ್ಲ ಈ ಮಾತು ಹೊರಗೆ ಪೇಳುವವಲ್ಲಾ ನಾ ನಿದ್ದೆ ಪೂರ್ವದಲಿ ಅತಿ ಖುಲ್ಲಾ ಶಿಲೆಯನು ಸುಂದರ ಮೂರ್ತಿಗೈದತೆರ ಬಲು ವಿಧದಲಿ ಸಲಹಿದಿಯಲ್ಲ ಹರಿಬಲ್ಲಾ ಜ್ಞಾನವಿತ್ತಿ ಹರಿಪಾದದಲ್ಲಿ ಅಭಿಮಾನವಿತ್ತಿ ಸುಖವೆಲ್ಲಾ ಬಲುಹೇಯವೆಂದು ತಿಳಿಸಿದಿಯಲ್ಲಾ ಮೇಲ್ವರದಿ ರಂಗನೊಲಿಯುವ ಸೊಲ್ಲಾ ಅಸನ ವಸನಗಳು ಕೊಟ್ಟು ಕೊನೆಗೆ ತುಚ್ಛಿಸುವ ನಿನ್ನ ಗುಣ ತಿಳಿಯಲಿಲ್ಲಾ ಇದು ಥsÀರವಲ್ಲಾ ನಿನ್ನ ಪಾದವೇ ಸಡಗರ ಸಿರಿ ಮೇಲೆ ಸುರಪುರಿ ಜ್ಞಾನನಿಧಿ ಥsÉರಿ ಕಾಶಿ ಗಯಾ ಮಧುರಿ ಹರಿ ಓಂ ಓಂ ಓಂ ನಿನ್ನ ನಾಮ ದುರಿತವೆಂಬೊ ಕರಿ ಕುಲಕೆ ಘನ ಹರಿ ಪರಿ ತಿಳಿದೆನೆಲೊಧೊರಿ ಹರಿ ಓಂ ಓಂ ಓಂ ಇನ್ನಾದರು ಕೋಪವತ್ವರಿ ಕರುಣಿ ಕಣ್ತೆರಿ ಸುತಗೆ ಸುಖಗರಿ ತೋರೋ ನಿನ್ನ ಮಾರಿ ಹರಿ ಓಂ ಓಂ ಓಂ ಎನ್ನಯ ಬಿsÀಷ್ಟಗಳನ್ನು ನೀಡದಿರೆ ನಿನ್ನ ವಿಮಲ ಕೀರ್ತಿಗೆ ಗುರುವೆ ಕುಂದನ್ನು ಬಿಡದೆ ತಿಳಿ ನಾ ತರುವೆ ಸಿಟ್ಟು ಮಾತ್ರ ನೀನಾಗ ಬೇಡ ಪೊರೆ ಜಿಷ್ಣು ಸಾರಥಿಯ ಪ್ರಿಯ ಮಗುವೆ ಬಾ ಬಾ ಗುರುವೆ 1 ಪಂಥವೇ ಹೇ ಮಹಾಕಾಂತ ಪ್ರಿಯ ನಿನ್ನ ಸಂತತಿಯೊಳು ಸೂರಿಗಳೊಡೆಯ ನೀನೆಂತು ಪೊಂದಿದೈ ನಿರ್ಭಿಡಿಯಾ ಇದು ಸಂತರು ಕೇಳಿದರಾಶ್ಚರ್ಯ ವಂತರು ಆಗರೆ ಸಾಕು ಮುಂದೆಯನ್ನಂತರಂಗವೇ ತವನಿಲಯ ಆಗಲಿ ಜೀಯಾ ಕಂದನ ಕಾಯುವದಂತು ಸಹಜ ಸಿರಿ ಹಿಂದಕೆ ಪಾಂಡವನೆಂಭಿರಿಯಾ ಆ ಗಂಧರ್ವನ ಮಗನಾದ ಗಯಾ ತಾ ಬಂದು ಹೋಗಲವನನು ಮೊರೆಯ ಸಿಂಧು ಜಪನ ಸಹ ಲಕ್ಷಿಸದಲೆ ತ್ವರ ತಂದು ಕೊಟ್ಟನವನಿಗೆ ವಿಜಯಾ ಮೇಲ್ಹರಿಯದಯಾ ಇದು ಅಲ್ಲದೆ ಬಹು ಭಕ್ತರು ಜ್ಞಾನಯುಕ್ತರು ಸುಧಿಯ ಭೋಕ್ತರು ನೆನೆದವರ ದು:ಖ ಬಿಡಿಸಿದರು ಸುಧೆಯ ಬಡಿಸಿದರು ಹರಿ ಓಂ ಓಂ ಓಂ ಬಲು ಹಿತದಿ ಶುಭವ ಕೋರಿದರು ತಾಪ ಹೀರಿದರು ವಾಕ್ಯ ಸಾರಿದರು ಹರಿಯ ತೋರಿದರು ಹರಿ ಓಂ ಓಂ ಓಂ ನೀನಾದರೂ ಬಹಳರ ಪೊರದಿ ಈ ಹೀನ ಓರ್ವ ನಿನ್ನಗೆಯರವೆ ಮರಿಯಬ್ಯಾಡ ಕರುಣೆ ಕರವ ಮುಗಿವೆ ಸಿಟ್ಟು ಮಾತ್ರ ನೀನಾಗ ಬೇಡ2 ಪರ ಖರೆ ಗುರುವಿಲ್ಲದ ಗತಿಯನ್ನು ಧರೆತ್ರಯದಿ ತೋರು ತುಸು ನೋಡೋಣ ಗಿರಿಧರಿಯ ಬಿಟ್ಟು ನಿಲ್ಲುವುದೇನು ಗುರುವೆ ತ್ರಿಟಿಯ ಬಿಟ್ಟೊರುಷವಾಗುತದೆ ಹಿರಿಯರಿ ಪೇಳ ವದಿನ್ನೇನು ಹೇ | ಸುರಧೇನು ಗುರುವೆ ಸುಖದ ಖಣಿ ಗುರುತನುಮಣಿ ಮಣಿ ತಿಳಿದೆ ನಾ ಮನದಾಗೆ ಪರಕಿಸಿದೆನ್ನನು ಪೊರೆಯೆ ಯನುತ ಬಾ ಯ್ತೆರೆಯುತ ಮಣಿಸುವೆ ಶಿರನಿನಗೆ ಮೂಜಗದಾಗೆ | ನಿನ್ನಿಂದ ಎನಗೆ ಸದ್ಬುದ್ಧಿ ಯೋಗದಾಸಿದ್ಧಿ ಕಾರ್ಯದಾಸಿದ್ಧಿ ಸ್ವರ್ಗದಾಸಿದ್ಧಿ ಹರಿ ಓಂ ಓಂ ಓಂ ನಿನ್ನಿಂದ ಪಡೆದ ವಿಜ್ಞಾನ ಹರಿಯರಾ ಖೂನಾ ಲೋಕದೊಳು ಮಾನ ಮುಕ್ತಿ ಸೋಪಾನ ಹರಿ ಓಂ ಓಂ ಓಂ ನೀನೇವೆ ಯನಗೆ ಆಭರಣ ಝಗಝಗಿಪ ವಸನ ಶ್ರೀಹರಿಯ ಚರಣ ವಿರಜಾನದಿ ಸ್ನಾನ ಹರಿ ಓಂ ಓಂ ಓಂ ನಿನ್ನೊಮ್ಮೆ ನೆನಸೆ ಪವಮಾನ ಕಾಯ್ವ ಪ್ರತಿದಿನ ಇದಕೆ ಅನುಮಾನ ಇಲ್ಲ ಏನೇನ ಹರಿ ಓಂ ಓಂ ಓಂ ಗಡ ಕೇಳ್ವಡೆಯನೆ ಕಡೆ ನುಡಿಯನ್ನದು ಭಿಡೆಯ ಇಡದೆ ನಾನುಡಿವೆ ಎನ್ನ ಮರೆತರೆ ಮಂಗನು ನೀ ನಿಜವೆ 3
--------------
ಅಸ್ಕಿಹಾಳ ಗೋವಿಂದ
ಇಸ್ಪೀಟಾಡಬೇಕು ನಮ್ಮಯ ತಸ್ಪೀರ್ ನೋಡಬೇಕು ಪ ನಿಸ್ಪøಹರಾಗದ ಜನರಿಗೆ ಕಡೆಯಲಿ ಸಸೆÀ್ಪಂಟಾದೀತೆಂದು ತಿಳಿದು ಅ.ಪ ಆಸೆಂಬುವದಾತ್ಮ | ರಾಜಾ ತಾಸಗುಣ ಬ್ರಹ್ಮ ಲೇಸಾಗಿ ರಾಣಿಯು ಮೂಲ ಪ್ರಕೃತಿ ಗುಲಾಮನೆಂಬುದು ಚತುರ್ಮಖನೆನ್ನುತ 1 ದಹಿಲವೆಯಿಂದ್ರಿಯಗಳು | ದ್ವಾರವು ನಹಿಲವಿದು ಭುವಿಯೋಳು ಅಹಹಾ ಅಟ್ಟವು ಮದಗಳು ನೋಡಲು ವಿಹಿತವೇಳನೆ ಬಂದು ವೆಸನಗಳು 2 ನಿಜವಿದು ಮೂರನೆ ಬಂದು ತ್ರಿಕಾಲಗಳ್ 3 ಯಿಲ್ಲದಿಹದು ಮರ್ಮ ತುರುಫೆಗುಣರಾಶಿಗಳೆಂದೀಪರಿ ಅರಿತಾಡಲದೆ ಪರಮಾರ್ಥವಹದು 4 ಕ್ಳಾವ್ರಿಸ್ಪೀಟಾಟೀನ್ | ಡೈಮಂಡ್ ಈ ವಿಧ ಪೆಸರಿರಲೇನ್ ಭಕ್ತರ ಗುರುರಾಮ ವಿಠಲ ಕೈಬಿಡ 5
--------------
ಗುರುರಾಮವಿಠಲ
ಇಸ್ಪೀಟಾಡಬೇಕು ನಮ್ಮಯ ತಸ್ಪೀರ್ ನೋಡಬೇಕು ಪ ನಿಸ್ಪøಹರಾಗದ ಜನರಿಗೆ ಕಡೆಯಲಿ ಸಸೆÀ್ಪಂಟಾದೀತೆಂದು ತಿಳಿದು ಅ.ಪ ಆಸೆಂಬುವದಾತ್ಮ | ರಾಜಾ ತಾಸಗುಣ ಬ್ರಹ್ಮ ಲೇಸಾಗಿ ರಾಣಿಯು ಮೂಲ ಪ್ರಕೃತಿ ಗುಲಾಮನೆಂಬುದು ಚತುರ್ಮಖನೆನ್ನುತ 1 ದಹಿಲವೆಯಿಂದ್ರಿಯಗಳು | ದ್ವಾರವು ನಹಿಲವಿದು ಭುವಿಯೋಳು ಅಹಹಾ ಅಟ್ಟವು ಮದಗಳು ನೋಡಲು ವಿಹಿತವೇಳನೆ ಬಂದು ವೆಸನಗಳು 2 ನಿಜವಿದು ಮೂರನೆ ಬಂದು ತ್ರಿಕಾಲಗಳ್ 3 ಯಿಲ್ಲದಿಹದು ಮರ್ಮ ತುರುಫೆಗುಣರಾಶಿಗಳೆಂದೀಪರಿ ಅರಿತಾಡಲದೆ ಪರಮಾರ್ಥವಹದು 4 ಕ್ಳಾವ್ರಿಸ್ಪೀಟಾಟೀನ್ | ಡೈಮಂಡ್ ಈ ವಿಧ ಪೆಸರಿರಲೇನ್ ಭಕ್ತರ ಗುರುರಾಮ ವಿಠಲ ಕೈಬಿಡ 5
--------------
ಗುರುರಾಮವಿಠಲ
ಇಹಸುಖ ಮೊದಲೇಯಿಲ್ಲ | ಕೃಷ್ಣ ಅಹಹ ಪರಸುಖವಾಗುವುದ್ಹ್ಯಾಗೊ ಪ ಸಾಹಸಿನಾನೆನುತ ಜನರ ಮೆಚ್ಚಿಸುವೊಡೆ ಕುಹಕ ಮಾತುಗಳ ಕೂಗಿ ಬಾಯಾರಿದೆ ಅ.ಪ ಶ್ರವಣ ಮನನ ನಿಧಿ ಧ್ಯಾಸನ ವೊಂ- ದೆವೆ ಮಾತ್ರವು ನಿಜವಾಗಿ ಕಾಣೆನುನಾ ಬವನಾಶಿ ಧರಿಸಿ ದಾಸನೆಂದು ನಾ ಬರಿದೆ ದೇಶಗಳ ತಿರುಗಿ ಬೆಂಡಾದೆನು 1 ಯಮನಿಯಮಾಸನ ಯೋಗ | ಗಳ ಭ್ರಮೆಯ ಪಡುತ ಬಳಲುವೆಯಾವಾಗ ಮಮಯೆಂಬುದರಿಂ ಬಂದಿತು ರೋಗ 2 ಶಂಕರ ಮುಖ ಸುರವಂದ್ಯ | ಅರಿ ಶಂಖ ಗದಾಧರ ಶ್ರೀಶ ಮುಕುಂದ ಸಂಕಟ ಬಂದಾಗ ವೆಂಕಟರಮಣೆಂದು ಮಂಕುಜನರು ಪೇಳ್ವಗಾದೆಯಂತಾಯಿತು 3 ಕಾಸಿಗೆ ತಿರುಗಿದೆನಲ್ಲದೆ | ದಿವ್ಯ ಕಾಶಿಗಯಾಯಾತ್ರೆಯ ಮಾಡಿದೆನೇ ಘಾಶಿಪಟ್ಟಿ ಸಾಕು ಸಾಕಿದರ ಗೊಡವೇ 4 ಕೊಟ್ಟದ್ದರೆ ಹರಿಕೊಡುವ | ಯಂ ಕೊಟ್ಟರುವದಕು ಕೊಡದಿರುವದಕೂ ಕೃಷ್ಣ ನೀನರಿಯದೆ ನಾನು ಸ್ವತಂತ್ರನೇ 5 ಕಣ್ಣಿಲ್ಲದ ಚಿಂತೆವಂದು | ಸದಾ ಬನ್ನ ಬಡುವದು ಯೋಚನೆಯೆರಡು ನಿನ್ನವನೆನಿಸೀ ಕಷ್ಟ ಬಿಡಿಸಿ ಒಳ- ಕಣ್ಣು ಕೊಟ್ಟು ನಿನ್ನ ಸೇವೆಯ ಪಾಲಿಸೋ 6 ಛಳಿ ಜ್ವರದ ಯಾತನೆ ಪಡುವೆ | ನಿನ್ನ ಕರೆಕರೆ ಪಡಿಸುವುದು ನಿನಗೆ ತರವೇ 7 ಆರು ಜನರ ಸೇವೆ ಕೊಡಿಸೋ | ಯೀ ಆರು ಜನರ ಸಂಘವ ಪರಿಹರಿಸೋ ಮೂರು ಜನದ ಕೂಟ ಮೊದಲೇ ಬಿಡಿಸೋ ತಾಳಲಾರೆಯಿವರು ಬಲು ಕ್ರೂರಾತ್ಮರು 8 ಆಸೆಯ ಪರಿಹರಿಸಯ್ಯಾ | ನಿಜ ದಾಸನೆನಿಸಿ ನೀ ಪಿಡಿಯೆನ್ನ ಕೈಯ್ಯಾ ಈಸಲಾರೆ ಗುರುರಾಮ ವಿಠ್ಠಲ ಜೀಯಾ 9
--------------
ಗುರುರಾಮವಿಠಲ
ಈ ಊರೋಳ್ಳೇದು ಪ ದೇವರ ಕೃಪೆ ಒಂದಾದರೆ ಸಾಕು ಅ.ಪ ತಂಟೆ ಮಾಳ್ಪ ಭಂಟರೈವರ ಗೆದ್ದರೆ ತಾನೆಲ್ಲಿದ್ದರು ಭಯವಿಲ್ಲಣ್ಣ 1 ಜಲತೃಣ ಕಾಷ್ಠಕೆ ವಸತಿ ಈ ಊರು ಬಲು ಸಜ್ಜನಗಳ ನೆರೆ ಈ ಊರು ಫಲಗಳುಂಟು ಮಾಡುವುದೀ ಊರು ಹೊಲಗದ್ದೆ ತೋಟಗಳಿಹ ಊರು 2 ಕೇಳಿದ ಪದಾರ್ಥ ದೊರೆಯುವ ಊರು ವೇಳೆಗೆ ಅನುಕೂಲವು ಈ ಊರು ತಾಳ ಮೇಳ ವಾದ್ಯಗಳಿಹ ಊರು ಸೂಳೆ ಬೋಕರಿಗೆ ಕಷ್ಟದ ಊರು 3 ಕಷ್ಟಪಡುವ ನರ ಭ್ರಷ್ಟನಲ್ಲವೇ ಮೂರು ಬಿಟ್ಟು ತಿರುಗುವ ಜನರಿಗೆ 4 ನರಜನ್ಮವೆಂಬ ಊರಿಗೆ ಬಂದು ಗುರುರಾಮವಿಠ್ಠಲನ ಕರುಣನ ಪಡದರೆಕರತಲಾಮಲಕವಿದು ಕೈವಲ್ಯಕೆ 5
--------------
ಗುರುರಾಮವಿಠಲ
ಈ ತನು ನೀನಲ್ಲಾ ನೀನಲ್ಲಾ |ತನುವಿನ ಗುಣವು ಇದುವೆ ಎಲ್ಲಾ ಪ ರೂಪಕ ಬಂದಿತು ಸ್ಥೂಲ ಸೂಕ್ಷ್ಮ |ರೂಪವು ಒಂದೇ ಬೀಜದ ಮೂಲಾ 1 ಕಾರಣ ದೇಹದೊಳಗೆ ಒಂದೇ | ಮಹಾ ಕಾರಣದಲಿ ನೋಡಿಂದೇ 2 ತನುಮನ ಧರ್ಮದ ಜ್ಞಾನವ ಬಿಟ್ಟು |ಉನ್ಮನದಿ ನೀ ಲಕ್ಷಿಸು ಲಕ್ಷಿಟ್ಟು 3 ತನುಮನ ಕರಣಗಳ್ ನಿನಗೆ ಬ್ಯಾರೆ |ತನುಮನ ನಿನಗಿಹುದೆಂದೆನಲಾರೆ 4 ಗುರುಭವತಾರಕ ದೇವನು ಒಲಿದರೆ |ತೋರುವನರಿವಿನ ನಿಜ ಭಾವಾ 5
--------------
ಭಾವತರಕರು
ಈ ದೇಹ ಬಲು ಸಾಧನ ಭೂದೇವ ಜನ್ಮದಲಿ ಬಂದ ಕಾರಣ ನಮಗೆ ಪ ಶ್ವಸನ ಮತವೆ ಪೊಂದಿ | ನಸು ಚಿತ್ತದಲಿ ಯಿದ್ದು | ವಿಷಯಂಗಳೆಲ್ಲ ನಿರಾಕರಿಸಿ | ಋಷಿಮಾರ್ಗದಲಿ ನಡೆದು ವಿಹಿತಾರ್ಥದ ಸತ್ಯ | ನಿತ್ಯ ಸಜ್ಜನರ ಒಡಗೂಡು1 ಬಾಹುದ್ವಯದಲಿ ಶಂಖ ಚಕ್ರ ಧರಿಸಿ ಉ | ತ್ಸಾಹದಲಿ ದ್ವಾದಶ ಪುಂಡ್ರಗಳನಿಟ್ಟು | ಸ್ನೇಹಭಾವದಲಿ ಸತತ ಭಕುತಿಯ ಮಾಡು | ಇಹಲೋಕದಲಿ ಇಷ್ಟಾರ್ಥ ಬೇಡುತಲಿರು 2 ಅನಿಷಿದ್ದ ಕರ್ಮಗಳು ಆಚರಿಸಿ ಭೂತದಯ | ಅನುಗಾಲ ಇರಲಿ | ಬಂಧುಗಳ ಕೂಡಾ | ಮನಮೆಚ್ಚು ನಡೆದು ನೀ ಮಂದಮತಿಯನು ಕಳೆದು | ಘನಜ್ಞಾನದಲಿ ನಡೆದು ಗುಣವಂತನಾಗು 3 ಧರ್ಮೋಪದೇಶವನೆ ಮಾಡುತಲಿರು ನೀನು | ಪೇರ್ಮೆಯುಳ್ಳವನಾಗು ಪೃಥವಿಯೊಳಗೆ | ನಿರ್ಮತ್ಸರನಾಗು ವೈಷ್ಣವ ಜನರ ಕೂಡ | ದುರ್ಮತವ ಪೊಂದದಿರು ಅನಂತ ಜನ್ಮಕ್ಕೆ 4 ಕರ್ಣ ತುಲಸೀ ದಳ | ಬೆರಳಲ್ಲಿ ಪವಿತ್ರದುಂಗರವನಿಟ್ಟು | ಪರಮ ವಿರಕುತಿಯಲಿ ದೇಹವನು ದಂಡಿಸುವ | ಹಿರಿದಾಗಿ ಭಾಗವತನಾಗು ವ್ಯಾಕುಲವ ಬಿಡೋ 5 ವದನದಲಿ ಹರಿಸ್ಮರಣೆ ಮರೆಯದಿರು ಕಂಡಕಡೆ | ಉದರಕ್ಕೆ ಪೋಗಿ ಚಾಲ್ವಯದಿರು ಅಧಿಕರ ಆಪೇಕ್ಷಗಳ ಮಾಡದಿರು ಹರಿಯಿತ್ತ ದದು ಭುಂಜಿಸಿ | ಬಂದ ಕಾಲವನು ಹಿಂಗಳಿಯೊ 6 ತೀರ್ಥಯಾತ್ರೆಯ ಚರಿಸು ಕಥಾಶ್ರವಣವನು ಕೇಳು | ಅರ್ಥವನೆ ಬಯಸದಿರು ಬಾಕಿ ಬಸಿದು ವ್ಯರ್ಥ ನಿನ್ನಾಯುಷ್ಯ ಪೋಯಿತೆಂದೆನಿಸದೆ | ಪ್ರಾರ್ಥನೆಯ ಮಾಡು ಪ್ರತಿಕ್ಷಣಕೆ ಶ್ರೀ ಹರಿಚರಣ 7 ಪರಿಯಂತ | ಮಿತ ಆಹಾರ ಮಿತ ನಿದ್ರಿ ಮಿತ ಮಾತನು | ಸತತ ಮೀರದಲಿರು ಶೋಕಕ್ಕೊಳಗಾಗದಿರು | ಸತಿ ಸುತರು ಎಲ್ಲ ಶ್ರೀ ಹರಿಗೆ ಸೇವಕರೆನ್ನು 8 ಜಾಗರ ಗಾಯನ | ಮರಳೆ ಮರಳೆ ಮಂತ್ರ ಪಠನೆಯಿಂದ | ಧರೆಯೊಳಗೆ ಪುಣ್ಯವಂತನಾಗಿ ಸರ್ವದ | ಇರಬೇಕು ಇಹಪರಕೆ ಲೇಸು ಎನಿಸಿಕೊಂಡು9 ಸುಖ ದು:ಖ ಸೈರಿಸುತ ಅರಿಗಳಿಗೆ ಭಯಪಡದೆ | ನಖಶಿಖವಾಗಿ ಆನಂದ ವಿಡಿದೂ | ಮುಖದಲ್ಲಿ ಹರಿನಾಮ ಅಮೃತವೆ ಸುರಿಸುತ್ತ | ಸಖರೊಳಗೆ ಲೋಲಾಡು ಹರಿಗುಣವ ಕೊಂಡಾಡು10 ಸಕಲಾಧಿಷ್ಠಾನದಲಿ ಹರಿಯೆ ಲಕುಮಿ ತತ್ವ | ಕರ ಮುಗಿದು ತಿಳಿದು | ಮುಕುತಿ ಕರದೊಳಗಿಡು ವಿಜಯವಿಠ್ಠಲರೇಯನ | ವಿಕಸಿತ ಮನದಲ್ಲಿ ಭಜಿಸು ಬಲು ವಿಧದಿಂದ11
--------------
ವಿಜಯದಾಸ
ಈ ಧರಣಿಯೊಳ್ ಹದಿನಾರು ಸಾವಿರ ಮಂದಿ ಆಳುತ ದ್ವಾರಕೆಯಲ್ಲಿ ವಿನೋದದಿ ಕುಳಿತಿದ್ದ ಹರಿಯು 1 ಅಂಬುಜೋದ್ಭವನ ಅಂಕದಲುದಿಸಿದ ಸುತ ಚೆಂದ ಚೆಂದ ವೀಣೆ ಪಿಡಿದು ಕಂದರ್ಪಪಿತ (ನಲ್ಲಿಗೆ) ನಲಿನಲಿದಾಡುತ ಬಂದ ನಾರಂದ ಹರುಷದಲಿ2 ಬಂದ ನಾರಂದನ ಕಂಡು ಕಮಲನಾಭ ಚೆಂದದಿಂದಲಿ ಅಘ್ರ್ಯ ಪಾದಪೂಜೆಯ ಮಾಡಿ ನಾ- ರಂದಗೆ ಎರಗಿದನಾಗ3 ದೇವಾಧಿದೇವನೆ ದೇವಲೋಕದಿ ಸುತ್ತಿ ಈ ಪಾರಿಜಾತವ ತಂದೆ ದೇವಿ ರುಕ್ಮಿಣಿಗೀಗ ಮುಡಿಸೆಂದು ನಾರಂದ ಸ್ವಾಮಿಯ ಚರಣಕ್ಕರ್ಪಿಸಿದ 4 ತಕ್ಷಣದಿ ಜಗನ್ಮಾತೆ ಮಾಲಕ್ಷುಮಿ ಸಾಕ್ಷಾತ ಶ್ರೀನಾರಾಯಣನು ವಕ್ಷಸ್ಥಳದಲಿ ಹೊಂದಿರುವ ರುಕ್ಮಿಣಿಯನು ಸ್ತೋತ್ರ ಮಾಡಿದನು ನಾರದನು 5 ಕಡಲಶಯನ ಕಡೆಗಣ್ಣ ನೋಟಗಳಿಂದ ಕಡುಮುದ್ದು ಸುರಿವೊ ರುಕ್ಮಿಣಿಯ ಬಡನಡುವಿನ ಭಾಮಿನಿರನ್ನೆ ಬಾರೆಂದು ತೊಡೆಯ ಮ್ಯಾಲಿಟ್ಟ ಶ್ರೀಕೃಷ್ಣ 6 ದುಂಡುಮಲ್ಲಿಗೆ ಗೊಂಡ್ಯ ಚೌರಿ ರಾಗಟೆ ಜಡೆ- ಅಂಗನೆ ರುಗ್ಮಿಯಾಲಿಂಗನೆ ಮಾಡುತ ರಂಗ ತಾ ಮುಡಿಸಿದ ಸತಿಗೆ 7 ಸರಿಸವತೇರ ಬಿಟ್ಟು ಸುರಪಾರಿಜಾತವ ಗರುವಿಕೆಯಿಂದ ನೀ ಮುಡಿದೆ ಹರದಿ ಸತ್ಯಭಾಮೆ ಕೇಳಿ ಮುನಿದರಿನ್ನು ಅರಿಯೆನು ನಾ ಇದಕೆ ಉಪಾಯ 8 ಗಾಡಿಕಾರನು ಕೃಷ್ಣ ಆಡುವೊ ಮಾತನು ಕೇಳಿ ರುಕ್ಮಿಣಿ ನಗುತಿರಲು ಓಡುತ ಬಂದು ನಾರದ ಸತ್ಯಭಾಮೆ- ಗಲ್ಲದ ವಾರ್ತೆಗಳರುಹಿದನು 9 ಅಲ್ಲಿಂದ ದೇವಲೋಕವ ಸುತ್ತಿ ತಂದೇನೆ ಚೆಲ್ವೆನಗೆ ತಕ್ಕ ಕುಸುಮ ಗೊಲ್ಲ ಕೃಷ್ಣನ ಕೈಯಲ್ಲಿ ಕೊಟ್ಟರೆ ತನ್ನ ನಲ್ಲೆ ರುಕ್ಮಿಣಿಗೆ ಮುಡಿಸಿದನು 10 ಕೇಳುತ ಭಾಮೆ ತಲ್ಲಣಿಸಿ ಕೋಪಗಳಿಂದ ಹೇಮಮಾಣಿಕ್ಯದ್ವಜ್ರಾಭರಣ ಹಾರ ಪದಕ ಕಠಾಣಿಮುತ್ತನೆ ಚೆಲ್ಲಿ ಭೂಮಿಲಿ ಬಿದ್ದೊ ್ಹರಳಿದಳು 11 ಮಲ್ಲಿಗೆ ದವನ ಕ್ಯಾದಿಗೆ ಶಾವಂತಿಗೆ ಬಿಟ್ಟು ಒಲ್ಲೆನೆಂದೊರೆಸಿ ಕಸ್ತೂರಿಯ ವಲ್ಲಭನೊಲ್ಲದೀ ಸೊಗಸ್ಯಾತಕೆನುತಲಿ ಗಲ್ಲದ್ವಿಳ್ಯವನುಗುಳಿದಳು 12 ಸರ್ಪನಂದದಿ ಉಸುರ್ಹಾಕುತ ಭಾಮೆ ತಾ ನೇತ್ರದಿ ಜಲವ ಸುರಿಸುತಲಿ ಸರ್ಪಶಯನನೊಲ್ಲದೀ ದೇಹವ್ಯಾಕೆಂದು ಪಟ್ಟೆ ಮಂಚದಲೊರಗಿದಳು 13 ನಿಂತು ನೋಡುತ ಸತ್ಯಭಾಮೆ ಮಾಡುವೊದು ಇ- ನ್ನೆಂತು ಮಾಡಲಿಯಿದಕೆಂದು ಅಂತರಂಗದಲಿ ಯೋಚನೆ ಮಾಡಿ ನಾರಂದ ಶ್ರೀ- ಕಾಂತನ ಮನೆಮಾರ್ಗ ಹಿಡಿದ 14 ತಿರುಗಿ ಬಂದ್ಹರಿಯ ಮುಂದರುಹಿದ ನಾರಂದ ತೊರೆವೋಳು ತನ್ನ ಪ್ರಾಣವನು ಮರುಗುತ ಸೊರಗಿ ಬಿದ್ದಿರುವೊ ಭಾಮೆಯ ನೋಡಿ ಕರುಣವಿಲ್ಲೇನೊ ಶ್ರೀ ಕೃಷ್ಣ 15 ಮುನಿಯ ಮಾತನು ಕೇಳಿ ಮುಗುಳು ನಗೆಯ ನಕ್ಕು ಪರಿ ಬವಣೆಗೆ ಒಳಗಾದೆ ಧರೆಯ ಒಳಗೆ ಇಬ್ಬರ್ಹೆಂಡರಾಳುವೋರಿನ್ನು ಪರಮ ಮೂರ್ಖರು ಅವರೆಂದ 16 ಹೊದ್ದ ಪೀತಾಂಬರ ಅಲೆಯುತ ಶ್ರೀಕೃಷ್ಣ ಹದ್ದನೇರದೆ ನಡೆಯುತಲಿ ಮುದ್ದು ರುಕ್ಮಿಣಿಯ ಮುಂದಕೆ ಕರೆದ್ಹೇಳದೆ ಎದ್ದು ಬಂದನು ಭಾಮೆಮನೆಗೆ 17 ಅರ್ಕನಂತ್ಹೊಳೆಯುತ ಹೊಕ್ಕ ತನ್ನರಮನೆ ಕಕ್ಕಬಿಕ್ಕ್ಯಾಗಿ ನೋಡುತಲಿ ದಿಕ್ಕು ದಿಕ್ಕಿಗೆ ಬಿದ್ದಾಭರಣವಾರಿಸಿ ರತ್ನ ದೆಕ್ಕಿಲೇ(?) ಬಂದು ತಾ ಕುಳಿತ 18 ಮಿಂಚು ಸೂರ್ಯಗೆ ಮಿಗಿಲಾಗಿದ್ದ ಮುಖ ಬಾಡಿ ಸಂಪಿಗೆ ಸರವ ಈಡ್ಯಾಡಿ ಚಿಂತೆಮಾಡುವರೆ ಚಿನ್ನದ ಗೊಂಬೆ ಏಳೆಂದು ಮಂಚದ ಮ್ಯಾಲೆ ತಾ ಕುಳಿತ 19 ಬೆವರಿದ್ದ ಮುಖವ ಮುಂಜೆರಗಿಲಿಂದೊರೆಸುತ ಹ- ರವಿದ ಹಾರ ಹಾಕುತಲಿ ಪರಮ ಪ್ರೀತಿಲಿ ತನ್ನ ಕರಗಳಿಂದ್ಹಿಡಿದೆತ್ತೆ- ನ್ನರಗಿಳಿ ಏಳೆಂದೆಬ್ಬಿಸಿದ 20 ಸಿಟ್ಟಿಲಿಂದೆದ್ದು ಶ್ರೀ ಕೃಷ್ಣನ ಒಳೆಯಿಕ್ಕೆ ಬಿಟ್ಟವರಾರು ಈಗೆನುತ ದೃಷ್ಟಿ ತೆಗೆದು ಕೋಟಿಸೂರ್ಯ ಪ್ರಕಾಶನ ಇ- ಕ್ಕದ್ಹಾಗೆವೆಯ ನೋಡಿದಳು 21 ಇಷ್ಟು ಕ್ರೋಧಗಳ್ಯಾತಕೀ ಚಾಡಿ ನಾರಂದ ಹಚ್ಚಿ ಹೋದನೆ ಕದನವನು <ಈಔಓಖಿ size=
--------------
ಹರಪನಹಳ್ಳಿಭೀಮವ್ವ
ಈ ಸುದ್ದಿ ಹೇಳಮ್ಮಇಂದಿರೇಶಗೆ ಹೋಗಿಶ್ರೀಶನ ತಂಗಿಯರು ಮುಯ್ಯಾಸೋಸಿಲೆ ತಂದರೆಂದು ಪ. ಸತ್ಯ ಲೋಕದ ದೊರೆಯುತಾನು ಮತ್ತೆ ಪಾಂಡವರ ಕೂಡಿಅರ್ಥಿಲೆ ಬಂದು ಇಳಿದಾರೆಂದುಸತ್ಯಭಾಮೆಯ ರಮಣಗೆ 1 ಸ್ವರ್ಗದರಸು ಭೀಮರಾಯನ ಅಗ್ರಜಅನುಜರ ಕೂಡಿ ಶೀಘ್ರದಿಬಂದಿಳಿದಾರೆಂದುರುಕ್ಮಿಣಿ ರಮಣಗೆ2 ವೈವಸ್ವತನು ರಾಮೇಶನ ವೈಭವವ ನೋಡುವೆನೆಂದುತಾವಿಭವ ಸಹಿತ ಬಂದು ದೇವಾಧಿ ದೇವನ ಮುಂದೆ3
--------------
ಗಲಗಲಿಅವ್ವನವರು
ಈಗಲೊ ಇನ್ನಾವಾಗಲೊ ಈ ತನುವು ಪೋಗದಿರದು ಪ. ಭೋಗದಾಸೆಯ ಬಿಡಿಸಯ್ಯ ನಾಗಶಯನ ನಳಿನನಯನ ಅ.ಪ. ಎಂಬತ್ತು ನಾಲ್ಕು ಲಕ್ಷ ಯೋನಿಗಳಲಿ ಬಂದು ಅಂಬುಜಾಕ್ಷನೊಂದೆನಯ್ಯ ಅಂದಂದು ಮಾಡಿದ ಅಘದಿಕುಂಭೀಪಾಕ ಮೊದಲಾದ ಕುತ್ಸ್ಸಿತ ನರಕದಿ ಬಿದ್ದುಉಂಬ ದುಃಖವ ಬಿಡಿಸಯ್ಯ ಉದಧಿಶಯನ ಪುಣ್ಯಕಥನ 1 ಓದನ ಮಾತ್ರಕ್ಕೆ ಸಭೆಯೊಳುವಾದಿಸುವೆ ವೇದಶಾಸ್ತ್ರ ಉಪನ್ಯಾಸಂಗಳನು ಮಾಡುವೆಕ್ರೋಧರಹಿತನಾಗಿ ಅವರು ಕೊಡಲು ಕೊಂಡಾಡುವೆಆದರಿಸದಿದ್ದರವರ ಬೈದು ಬರುವೆ ಖಿನ್ನನಾಗಿ2 ದೇಶದೇಶಂಗಳಿಗೆ ಧನದ ಆಸೆಗಾಗಿ ಪೋಗಿ ಪೋಗಿಬ್ಯಾಸರದೆ ಕಂಡವರ ಕಾಡಿ ಬೇಡಿ ಬಳಲಿದೆಕಾಸಿನ ಲಾಭವು ಕಾಣೆ ಘಾಸಿಯಾದೆನಯ್ಯ ಶ್ರೀನಿ-ವಾಸ ನಿನ್ನ ಪೂಜಿಸದೆ ಮೋಸಹೋದೆನಯ್ಯ ನಾನು3 ಸ್ನಾನಮೌನಂಗಳನು ಮಾಡುವೆ ಸಕಲ ಜನರ ಮುಂದೆಮಾನವರಿಲ್ಲದಾಗಲೆ ಮೌನವಿಲ್ಲ ಮಂತ್ರವಿಲ್ಲಜ್ಞಾನವ ಪೇಳುವೆ ಮೋಸಕಟ್ಟ[ಲೆ]ಯ ಮಾಡಿಕೊಂಡುಧ್ಯಾನಿಸದೆ ಹೊಟ್ಟೆಯನ್ನು ಹೊರೆವೆ ನಿನ್ನ ಮರೆವೆ4 ಕರ್ಣ ಕೇಳದು ಅನ್ಯವಾರ್ತೆ[ಗೆ] ಹೊತ್ತುಸಾಲದುಇನ್ನು ಹೇಸಿಕೆ ಮನಕೆ ಬಾರದು ಮುಂದಿನ ಗತಿಗೆ ದಾರಿ ತೋರದು 5 ಕಂಬುಕಂಧರ ನಿನ್ನ ನೆನೆಯದೆ 6 ವೃದ್ಧನಾದೆನು ಪಲ್ಗಳೆಲ್ಲ ಬಿದ್ದವು ಕಣ್ಣುಕಾಣಬಾರದುಎದ್ದು ನಿಲ್ಲಲಾರೆನಯ್ಯ ಉದ್ಧರಿಸೊ ಹಯವದನತಿದ್ದಿ ಮನವ ನಿನ್ನ ಪಾದಪದ್ಮವ ನೆನೆವಂತೆ ಮಾಡೊಪೊದ್ದಿದವರ ಪೊರೆವ ಕರುಣಾಸಿಂಧು ಎನಗೆ ನೀನೆ ಬಂಧು 7
--------------
ವಾದಿರಾಜ