ಒಟ್ಟು 733 ಕಡೆಗಳಲ್ಲಿ , 90 ದಾಸರು , 578 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಶ್ರೀ ಸತ್ಯ ವಿಜಯತೀರ್ಥ ಚರಿತ್ರೆ ನಮೋ ಸತ್ಯ ವಿಜಯಾರ್ಯ ತೀರ್ಥರೇ ಸುಮಹ ಕಾರುಣ್ಯದಿಂ ಎನ್ನ ಪಾಪಗಳ ಮನ್ನಿಸಿ ವಿಮಲ ವಾಙ್ಮನೋಕಾಯದಲಿ ಶ್ರೀ ರಾಮ ಯದುಪತಿ ಸ್ಮರಣೆ ಇತ್ತು ಪಾಲಿಪುದು ಪ ಅಶೇಷ ಗುಣಗಣಾಧಾರ ವಿಭು ನಿರ್ದೋಷ ಹಂಸ ಶ್ರೀಪತಿಯಿಂದುದಿತ ಗುರುಪರಂಪರೆಗೆ ಬಿಸಜಭವ ಸನಕಾದಿ ದೂರ್ವಾಸ ಮೊದಲಾದ ವಂಶಜರು ಸರ್ವರಿಗೂ ಶರಣು ಶರಣೆಂಬೆ 1 ಅಚ್ಯುತ ಪ್ರೇಕ್ಷರಿಗೂ ಪರವಾಯು ಅವತಾರಾನಂದ ತೀರ್ಥರಿಗೂ ಉತ್ಕøಷ್ಠ ಗುರುತಮ ಮಧ್ವ ಆನಂದ ಮುನಿಗಳ ಕರಕಂಜಭವ ಸರ್ವ ಯತಿಗಳಿಗು ಶರಣು 2 ಮಾಧವ ಅಕ್ಷೋಭ್ಯ ಅದ್ವಿತೀಯ ಸುಸ್ಪಷ್ಟ ಟೀಕಾಗಳಿತ್ತ ಮೇಧಾಪ್ರವೀಣ ಜಯತೀರ್ಥಾರ್ಯರಿಗೂ ವಿದ್ಯಾಧಿರಾಜರಿಗೂ ನಮೋ ನಮೋ ಶರಣು 3 ವಿದ್ಯಾಧಿರಾಜರ ಶಿಷ್ಯರು ಈರ್ವರಲಿ ಮೊದಲನೆಯವರು ರಾಜೇಂದ್ರ ತೀರ್ಥರಿಗು ನಂತರ ಕೋವಿದೋತ್ತಮ ಕವೀಂದ್ರರಿಗೂ ತತ್ವಜ್ಞ ಶಿಷ್ಯವಾಗೀಶ ತೀರ್ಥರಿಗು ಶರಣು 4 ವಾಗೀಶ ತೀರ್ಥರು ಕವೀಂದ್ರ ಕರಜರು ವಾಗೀಶ ಕರಜರು ರಾಮಚಂದ್ರಾರಾರ್ಯರು ಈ ಗುರುಗಳಿಗೆ ಈರ್ವರು ಶಿಪ್ಯರು ಇಹರು ಬಾಗಿ ಶರಣಾದೆ ಈ ಈರ್ವರಿಗೂ 5 ಮೊದಲನೆಯವರು ವಿಭುದೇಂದ್ರತೀರ್ಥಾರ್ಯರು ವಿದ್ಯಾನಿಧಿ ತೀರ್ಥಾರ್ಯರ ಅನಂತರವು ವಿದ್ಯಾನಿಧಿ ಸುತರು ರಘುನಾಥತೀರ್ಥರು ವಂದಿಸಿ ಶರಣೆಂಬೆ ಇವರಿಗು ಇವರ ವಂಶಕ್ಕು 6 ರಘುನಾಥ ಕರಕಮಲಜಾತರಘುವರ್ಯರಿಗೆ ರಘೂತ್ತಮ ವೇದವ್ಯಾಸ ವಿದ್ಯಾಧೀಶ ವೇದನಿಧಿ ಸತ್ಯವ್ರತ ಸತ್ಯನಿಧಿ ಸತ್ಯನಾಥ ಸತ್ಯಭಿನವ ಸತ್ಯಪೂರ್ಣರಿಗೆ ನಮಿಪೆ 7 ಸತ್ಯಾಭಿನವತೀರ್ಥರ ಮಹಿಮೆ ಬಹುಬಹುವು ಸುತಪೋನಿಧಿಯು ಶ್ರೀನಿವಾಸನ್ನೊಲಿಸಿಕೊಂಡಿಹರು ಸತ್ಯಪೂರ್ಣರಿಗೆ ಶಿಷ್ಯರು ಈರ್ವರು ಸತ್ಯವರ್ಯರು ಸತ್ಯವಿಜಯರು ಎಂದು 8 ಸತ್ಯ ಪೂರ್ಣಾರ್ಯರು ತಮ್ಮ ಗುರು ಸತ್ಯಾಭಿನವರ ಪದ್ಧತಿ ಅನುಸರಿಸಿ ಶ್ರೀಮಠ ಆಳುತ್ತ ಸತ್ಯವರ್ಯರನ್ನು ಗೋದಾವರಿ ಕ್ಷೇತ್ರ ವಿಜಯ ಮಾಡೆಂದು ಸತ್ಯವಿಜಯರನ್ನ ಕಳುಹಿದರು ಪೂರ್ವದಿಸೆಗೆ 9 ಸತ್ಯವರ್ಯರು ಗೋದಾವರಿ ಪಂಚವಟಿ ನಾಸಿಕ ತ್ರಿಯಂಬಕಾದಿ ಕ್ಷೇತ್ರ ಸಮೀಪ ವಿಜಯಮಾಡೆ ಸತ್ಯವಿಜಯರು ತೋಂಡದೇಶ ಚÉೂೀಳ ಪಾಂಡ್ಯಾದಿ ನಾಡಲ್ಲಿ ವಿಜಯ ಮಾಡಿದರು 10 ಜಯಶೀಲರಾಗಿ ದಿಗ್ವಿಜಯಮಾಡಿ ತೋಯಜಾಕ್ಷನಪಾದಐದಿದರು ನಿಯಮೇನ ಸತ್ಯವಿಜಯರು ಅಲಂಕರಿಸಿದರು ಪೀಠ 11 ಸತ್ಯಾಭಿನವ ಆರ್ಯರ ಸತ್ಯಪೂರ್ಣ ಗುರುಗಳ ಪದ್ಧತಿಯಲಿ ಸತ್ಯವಿಜಯಾರ್ಯರು ವೇದಾಂತವಾಖ್ಯಾರ್ಥ ದುರ್ವಾದ ಖಂಡನ ಅಧಿಕಾರಿಗಳಿಗು ಉಪದೇಶ ಮಾಡಿದರು 12 ಸೇತುಯಾತ್ರೆ ಮಾಡಲು ದಿಗ್ವಿಜಯ ಕ್ರಮದಲಿ ಬಂದರು ಆರಣಿಗೆ ತೋಂಡದೇಶದಲಿ ವಿಪ್ರ ಆರಣಿ ರಾಜನು ಸಂತಾನ ವೃದ್ಧಿಗೆ ಕೊರಗುತ್ತಿದ್ದ 13 ಯುಕ್ತಮರ್ಯಾದೆಗಳ ವೈಭವದಿಂದಲಿ ಸತ್ಯವಿಜಯರಿಗೆ ಮಾಡಿ ದೇವಾರ್ಚನೆ ಭೂದೇವರಿಗೆ ಭೋಜನಮಾಡಿಸಿದ ರಾಜನು ವೇದ್ಯವಾಯಿತು ಗುರುಗಳಿಗೆ ರಾಜನ ಕೊರತೆ 14 ಸತ್ಯವಿಜಯತೀರ್ಥಾರ್ಯರ ಗುರುವರ್ಯರು ಸಪ್ತದಶ ಅಕ್ಷರ ಮಂತ್ರ ಪ್ರತಿಪಾದ್ಯಹರಿದಯೆಯಿಂದ ಒದಗಿಸುವ ವಂಶವೃದ್ಧಿ ಎಂದು ಅನುಗ್ರಹಿಸಿ ಪೋದರು ದಿಗ್ವಿಜಯಕೆ ವರವು ಪೂರ್ಣವಾಯಿತು 15 ಸೇತುಯಾತ್ರೆ ದಿಗ್ವಿಜಯ ಪೂರಯಿಸಿ ಆ ಗುರುಗಳು ಮತ್ತು ಬಂದರು ಆರಣಿ ಕ್ಷೇತ್ರಕ್ಕೆ ಕೃತಜ್ಞ ಆ ರಾಜನು ಎದುರುಗೊಂಡು ಗುರುಗಳ ಪಾದದಲಿ ಶಿರವಿಟ್ಟು ಸ್ವಾಗತವನಿತ್ತ 16 ಸಂಸ್ಥಾನ ಮೂರ್ತಿಸ್ಥ ಹರಿಪೂಜಾ ವೈಭವವು ನಿತ್ಯ ಪ್ರವಚನ ಪಾಠಕೀರ್ತನೆ ಏನೆಂಬೆ ಸತ್ಯವಿಜಯರನ್ನ ರಾಜ ಅಲ್ಲಿಯೇ ಇರಬೇಕು ಎಂದು ಕೋರಿ ಒದಗಿಸಿದ ತಕ್ಕ ಸೌಕರ್ಯ 17 ಸತ್ಯವಿಜಯಾರ್ಯರಿಗೆ ದೇಹ ಅಧಾರೂಢ್ಯ ವೇದ್ಯವಾಯಿತು ಆರಣಿರಾಜನಿಗೆ ಭಕ್ತಿಶ್ರದ್ಧೆಯಿಂದಲಿ ಉಪಚಾರ ಮಾಡಿದನು ಮಾಧವಗೆ ಅರ್ಪಿಸುತಕೊಂಡರು ಗುರುಗಳು 18 ಶ್ರೀ ಸತ್ಯವಿಜಯತೀರ್ಥರ ಮಹಿಮೆ ಬಹು ಉಂಟು ಒಂದು ಮಾತ್ರ ಸ್ಥಾಲಿಪುಲಿಕನ್ಯಾಯದಲಿ ಈ ದಿವ್ಯ ಸಣ್ಣ ನುಡಿಗಳಲಿ ಪೇಳಿಹುದು ಮಾಧ್ವಯತಿ ಹರಿದಾಸ ಮಹಿಮೆಗಳಿಗೆ ಅಳವುಂಟೆ 19 ತಮ್ಮ ತರುವಾಯ ಸಂಸ್ಥಾನ ಆಡಳಿತವ ಶ್ರೀ ಮನೋಹರ ಹರಿ ಪ್ರಿಯರು ಸತ್ಯವರ್ಯ ಸುಮನೋಹರ ಸತ್ಯಪ್ರಿಯ ತೀರ್ಥನಾಮದಲಿ ರಮಾರಮಣಸೇವೆಗೆ ವಹಿಸಬೇಕೆಂದು 20 ಭಕ್ತಿಮಾನ್ ಆರಣಿ ರಾಜನಿಗೆ ಹೇಳಿ ಹಿತದಿ ಅನುಗ್ರಹಿಸಿ ಗುರುವರ್ಯ ಸತ್ಯವಿಜಯರು ಧ್ಯಾನದಿಂ ಐದಿದರು ಹರಿಪುರ ಚೈತ್ರ ಕೃಷ್ಣಪುಣ್ಯದಿನ ಏಕಾದಶಿ ದ್ವಾದಶಿಲಿ 21 ಮತ್ತೊಂದು ಅಂಶದಲಿ ಸತ್ಯವಿಜಯ ನಗರಾಖ್ಯ ಕ್ಷೇತ್ರ ಆರಣಿ ಸಮೀಪ ವೃಂದಾವನದೀ ಇದ್ದು ಸೇವಿಸುವ ಸುಜನರಿಗೆ ವಾಂಛಿತ ಒದಗಿಸುತ ಕುಳಿತಿಹರು ಹರಿಧ್ಯಾನ ಪರರು 22 ಸತ್ಯಲೋಕೇಶಪಿತ ಶ್ರೀಪ್ರಸನ್ನ ಶ್ರೀನಿವಾಸ ಪ್ರಿಯ ಸತ್ಯಾಭಿನವತೀರ್ಥ ಕರಕಂಜ ಜಾತ ಕರ ಕಾಯವಾಙ್ಮನದಿ ನಮೋ ಶರಣು ಮಾಂಪಾಹಿ 23
--------------
ಪ್ರಸನ್ನ ಶ್ರೀನಿವಾಸದಾಸರು
ಶ್ರೀ ಸತ್ಯಸಂಧರು ಸತ್ಯ ಬೋಧರ ಕಂಡ | ಯತಿವರ್ಯ ಸತ್ಯಸಂಧ ಕೃತ್ಯ ನಿಮ್ಮದು ಆನಂದಾ ಪ ಸ್ತುತ್ಯುಯತ್ಯಾಶ್ರಮವ ವಹಿಸುತಪ್ರತ್ಸಹತ ಸಚ್ಚಾಸ್ತ್ರ ಬೋಧಕಪ್ರತ್ಯರ್ಥಿ ಮಾಯ್ಗಳ ಖಂಡಿಸುತಭೃತ್ಯ ಜನಕಭೀಷ್ಟ ಗರೆವಾ ಅ.ಪ. ಗಂಗೆಮೀಯಲು ಸಾಧು ಸಂಗದಿ ತೆರಳುತ್ತಅಂಗಜಾರಿಯ ಪುರದೀ |ಮಂಗಳಾಂಗನು ಹರಿಪದಾಬ್ಜದಿಬೃಂಗರೆನಿಸುತ ಪೂಜೆಯ ಗೈಯ್ಯಲುರಂಗ ಹರಿಪಾದಾರವಿಂದವಕಂಗಳಿಂದಲಿ ಕಂಡಯತಿಯ 1 ಗಯ ಗಧಾದರ ನಂಘ್ರಿಪ್ರಿಯವಿಂದ ಭಜಿಸಲುನಯಸುತ್ತ ಪರಿವಾರವಾ |ಮಾಯಿಗಳ ದುರ್ವಾದ ಖಂಡಿಸಿಹೇಯಮತವಿದ್ವಂಸ ಗೈಯ್ಯುತರಾಯದಶರಥ ಸುತನು ರಾಮಗೆಜಯಪತ್ರಾರ್ಪಿಸಿದ ಮಹಿಮ 2 ವಿಷ್ಣುಪಾದವ ಮನ ಮುಟ್ಟಿ ಭಜಿಸಲು ಪೋಗೆದುಷ್ಟಗಯಾಳವಾರರು |ದಿಟ್ಟತನದಲಿ ಕದವಮುಚ್ಚಲು |ಶ್ರೇಷ್ಠ ಯತಿಗಳ ಭಕ್ತಿಗೊಲಿಯುತಥಟ್ಟನೇ ಕದತೆರೆಯಲಂದಿನಅಟ್ಟಹಾಸದಿ ಪೂಜೆಗೈದ 3 ಬಾಳಲಜ್ಜೆಲಿಗಯ | ವಾಳರು ಶರಣೆನ್ನೆಲಾಲಿಸುವರ ಭಿನ್ನ ಪ |ಮೂಲರಾಮರ ಸೇವೆಯನುಗಯೆವಾಳರೆಲ್ಲರು ಮಾಡಲೆನುತಲೀಲೆಯಿಂ ಮುದ್ರಾಂಕಗೈದಘಜಾಲವನು ತಾ ಕಳೆದ ಯತಿಯ 4 ಮಹಿಷಿ ಕ್ಷೇತ್ರದಿಅಂಗವೃಂದಾವನವ ಪೊಗಿಸುತರಂಗಗುರು ಗೋವಿಂದ ವಿಠಲನಮಂಗಳ ಧ್ಯಾನದಲಿರುತಿಹ 5
--------------
ಗುರುಗೋವಿಂದವಿಠಲರು
ಶ್ರೀನಿವಾಸ ಸುಜನೋದ್ಧಾರ ಏನು ತಾತ್ಸಾರ ನಾನು ನಿನ್ನ ದಾಸನೆಂದು ಮಾನವರು ನುಡಿದ ಮೇಲೆ ಪ. ಪುಟ್ಟಿದಾಕ್ಷಣಾದಿಯಾಗಿ ದುಷ್ಟಸಂಗಕೊಳಗಾಗಿ ನಷ್ಟಪ್ರಜ್ಞೆಯಿಂದ ಬಹು ಕಷ್ಟಿಯಾದೆನು ಕೃಷ್ಣ ಶಬ್ದ ವಾಚ್ಯಪರಮೇಷ್ಠಿ ಜನಕ ನಿನ್ನ ಮನ ಮುಟ್ಟಿ ಭಜಿಸದೆ ಬಯಲೆಷ್ಟವ ಬಯಸುವೆನಲ್ಲೊ 1 ದಾನಧರ್ಮ ಜಪತಪ ಮೌನ ಮೊದಲಾದ ಸ- ತ್ಸಾಧನ ಹೀನನಾದರು ನಿನ್ನಾನುರಾಗದಿ ಮನಮುಟ್ಟಿ ಕ್ಞಣವಾದರು ಧ್ಯಾನಿಸಲು ಸಕಲವಂದ್ಯ ಮುನಿಗಮ್ಯ ಪದವನೀವಾತನು ನೀನೆಂದೊಂದೆ ತಿಳಿದೆ 2 ಮನವಚನ ಕಾಯಕಾದನುದಿನ ಕೃತವಾದ ಘನ ಪಾಪಂಗಳಿಗೆ ನಾ ಕೊನೆಗಾಣೆನು ದನುಜಾರಿ ರಾಮ ಅನಿಮಿತ್ತಬಂಧು ಎಂಬ ಘನತೆ ತೋರಿಸಿ ನಿನ್ನ ತನಯನೆಂದೆಂನ ಸಲಹೊ 3 ವೀರವೇದೋದ್ಧಾರ ವರಮಂದರಧರ ನರ ಹರಿಕುಬ್ಜಾಕಾರ ಪೃಥ್ವೀಭಾರವಾರಕ ವಾರುಧಿ ಬಂಧಕಯದು ವೀರ ತ್ರಿಪುರ ಸ್ಮರ ಹರನಿಂದ ತರಿಸಿದ ತುರಗವೇರಿದ ಧೀರ 4 ಮಂದಮತಿಯಾದ ಎನ್ನ ಬಂಧುವಾಗಿ ಕೈಯ ಪಿಡಿದು ಮುಂದು ಗಾಣಿಸುವೆನೆಂದು ಹಿಂದೆ ರಕ್ಷಿಸಿ ಇಂದು ಎನ್ನ ಕುಂದನೆಣಿಸಿ ತಂದೆ ನೀನುಪೇಕ್ಷಿಸಲು ಮುಂದೆ ಕಾಯ್ವರಾರೊ ಕರುಣಾಸಿಂಧು ಅನಿಮಿತ್ತ ಬಂಧು 5 ಮಾನಗೇಡಿನಿಂದ ದ್ವೇಷಿ ಮಾನವಾಧಮರ ಮುಂದೆ ಶ್ವಾನಕಿಂತ ಕಡೆಯಾಗಿನ್ನೇನು ಮಾಡಲೊ ನೀನೆ ಗತಿಯೆಂಬ ಮನೋಧ್ಯಾನದಿಂದ ಬಂದೆ ನಿಂದು ಕಾನನದ ಶಿಶುವಿದೆಂದು ಮಾನಿಸಿ ರಕ್ಷಿಸೊ ತಂದೆ 6 ಘಾಸಿಗೊಳಿಸುತೀ ಆಶಾಪಾಶದಿಂದ ಎನ್ನ ಬಿಡಿಸಿ ದಾಸರ ದಾಸ್ಯವನಿತ್ತು ಪೋಷಿಸೆನ್ನುತ ಮೀಸಲಾಗಿಹೆನು ಶ್ರೀನಿವಾಸ ಬೇಗ ಸಲಹೊ ಬಂದು 7
--------------
ತುಪಾಕಿ ವೆಂಕಟರಮಣಾಚಾರ್ಯ
ಶ್ರೀಪತೀ-ಎನಗೇನು ಗತೀ ನನಗಾಗಲಿ ನಿನ್ನಲಿ ರತೀ ಪ ಚಪಲ ತನದಿ ಬಹು ಕಪಟಭಕುತಿನಟಿಸಿ ಗುಪಿತ ದೋಷಿಯು ಆದೆ ಅ.ಪ. ಬಟ್ಟೆ ನೋಡಲು ಬಹು ಛಂಧ-ಮೇಲೆ ಘಟ್ಟಿ ಬಣ್ಣದ ಕಾವಿ ಶಾಟಿ ಹಾಗೆ ಪಟ್ಟೆಮಡಿಗಳ ಭಾರೀ ಥಳಕೊ-ಬಹಳ ದಟ್ಟ ತುಳಸೀಸರಗಳ ಹೊಳಪೂ ಆಹಾ ಸೃಷ್ಠಿಗೊಡೆಯನೆ ಎನ್ನ ಕೆಟ್ಟ ತನಗಳನ್ನು ಎಷ್ಟೆಂದು ಬಣ್ಣಿಪೆ ನಿಟ್ಟ ನೆನೆಯದೆ ಪರರ ದೃಷ್ಟಿನೋಡುತ ಹಿಗ್ಗಿ ಅಟ್ಟಹಾಸದಿ ಕುಣಿದು ಮಾನವ ನನಗೇ 1 ವೇದ ವಾದಗಳೇನು ಕಾಣೆ-ಶುದ್ಧ ಸಾಧು ಕರ್ಮಗಳೊಂದು ಇಲ್ಲ-ಜನರ ಮೋದಗೋಸುಗವೇನೆ ಎಲ್ಲ_ಕಾಮ ಕ್ರೋಧವ ನಿಬಿಡಿತೇನೇ ಬಿಚ್ಚೆಹೃದಯಾ ಆಹಾ ಮಧ್ವರಾಯರ ಶಾಸ್ತ್ರ ಗ್ರಂಥ ಸಹ ತಿಳಿಯದೆಲೆ ಸಿದ್ಧ ಸಾಧಕನಂತೆ ಸಾಧುಲಿಂಗವ ತೋರಿ ಮುಗ್ಧಗೈಯ್ಯುತ ಮಂದಿ ಮೆದ್ದು ಪಕ್ವಾನ್ನಗಳ ಗೆದ್ದುಕೊಳ್ಳುವೆ ಬಹಳ ದಕ್ಷಿಣೆ ಬಹುಮಾನ 2 ನೇಮನಿಷ್ಠೆಗಳಾಟ ಹೊರಗೆ-ಗೃಹದಿ ಪ್ರೇಮವಿಲಾಸ ಆಟ ಕೂಟಜನ ಸ್ತೋಮರೆಲ್ಲವ ನುಡಿವ ನೀತಿ ಖ್ಯಾತಿ ಕಾಮುಕನಾಗಿ ಚರಿಸಿದೆ ಜಗದೀ ಆಹಾ ಹೇಮದಾಸೆಗೆ ಸೂಳೆ ಪ್ರೇಮವ ತೋರ್ಪಂತೆ ಕಾಮಿತಪ್ರದ ನಿನ್ನ ನಾಮ ಸವಿಯನುಣ್ಣದೆ ತಾಮಸರಿಗೆ ಉಪದೇಶ ನೀಡುತ ಸತ್ಯ- ಭಾಮೆಯರಸ ನಿನಗೆ ದೂರನಾದೆನಲ್ಲಾ 3 ಹಾಡಿಹಾಡುವೆ ಎತ್ತಿ ಸುತ್ತ ಜನರು ನೋಡಿ ಹಿಗ್ಗುತ ಬಾಪು ಬಾಪು ನುಡಿಗೆ ಹಾಡಿನಲ್ಲಿಹ ಸವಿಯುಣ್ಣ ದೇನೆ ಆಡಿ ಆಡಿಪೆ ಶಿರವ ಜ್ಞಾನಿಯಂತೆ ಆಹಾ ಕೇಡು ಚಿಂತಿಸಿ ಪರರ ಸ್ವಾರ್ಥಗೋಸುಗನಿತ್ಯ ಕಾಡಿ ಬೇಡುತ ಜನರ ದೂಡುತಿಹೆ ಸಂಸಾರ ಪ್ರೌಢ ಭಕ್ತರ ಗೋಷ್ಠಿಕೂಡಿ ಭಜಿಸದ ಎನ್ನ ಗಾಢ ಡಂಭಕೆ ಜಗದಿ ಈಡು ಕಾಣಿಸು ಸ್ವಾಮಿ4 ಭಾರಿ ಶಾಲುಗಳನ್ನೆ ಹೊದ್ದು-ನಿತ್ಯ ಕೇರಿಕೇರಿ ಪುರಾಣಗಳನ್ನು ಮೆದ್ದು-ಹಾರಿ ಹಾರುತ ತತ್ವರಾಶಿ ನುಡಿದು-ಊರು ಜ- ನರಮುಂದೆ ಪಾಂಡಿತ್ಯ ತೋರ್ಪೆ ಆಹಾ ತೋರಿ ತೋರುವೆ ಪರಮವೈರಾಗ್ಯ ಭಕ್ತಿಯ ದೂರಿ ದೂಡುವೆ ಪರರ ಹುಳುಕುಗಳನು ಎತ್ತಿ ಪಾರುಗಾಣದ ಕರುಣ ತೋರದಿದ್ದರೆ ಇನ್ನು 5 ಗುಡಿಗೆ ಹೋಗುವೆ ನಾನು-ನಿತ್ಯ ಅಲ್ಲಿ ಬೆಡಗು ಸ್ತ್ರೀಯರ ಹುಡುಕುವುದೇನೆ ಕೃತ್ಯ ದೃಢಭಕುತಿಯನು ಮಾಡಲೊಲ್ಲೆ ಸತ್ಯ-ನ ಮಡದಿ ಮಕ್ಕಳಿಗಿಲ್ಲ ಭೃತ್ಯಾನುಭೃತ್ಯಾ ಆಹಾ ಹುಡುಕೀ ನೋಡಿದಾಗ್ಯೂ ವಿರಕ್ತಿ ಭಕ್ತಿಗಳಿಲ್ಲ ಬಿಡಲು ಪೊರೆಯೆ ಪುರಾಣಶಾಸ್ತ್ರಗಳನ್ನು ನಿತ್ಯ ಎನ್ನ ಅನಾದಿ ನೀ ಕಲಿಸದಿದ್ದರೆ ಈಗ 6 ದೊಡ್ಡ ಪಂಡಿತ ನಾನೆಂಬ ಹೆಮ್ಮೆ-ಶುದ್ಧ ದಡ್ಡನೆಂಬುದ ಬಲ್ಲೆ ಮನದಿ-ಹಾಗೂ ಅಡ್ಡ ಬೀಳೆನು ಭಕ್ತ ಗಣಕೆ ಸುಳ್ಳು ವೊಡ್ಡುತವರನು ಹಳಿದೂ-ಕುದಿದೇ ಮನದೀ ಆಹಾ ದುಡ್ಡುಗೋಸುಗ ಬಹಳ ದೊಡ್ಡ ದಾಸನು ಎನಿಸೀ ಹೆಡ್ಡಮಂದಿಯ ಮುಂದೆ ದೊಡ್ಡ ಭಾಷಣ ಮಾಳ್ವೆ ಗುಡ್ಡದೊಡೆಯನೆ ಭಕ್ತಜಿಡ್ಡುಲೇಶವು ಕಾಣೆ ದೊಡ್ಡ ನಾಮವ ಹಾಕಿ ಸಡ್ಡೆ ಮಾಡದೆ ತಿರಿವ 7 ಕಚ್ಚಿ ಬಿಡದಿಹ ತುಚ್ಛ ಕಲಿಯು-ಬಹಳ ಮೆಚ್ಚಿ ಬಂದಿಹ ನವನು ಬಿಡುವನೇನು ಇಚ್ಛೆ ನನ್ನದು ನಡೆಯದೇ ನೊಂದು ತುಚ್ಛ ವಿಷಯದಿ ಸೆಳೆದು ಸೆಳೆಯುತಿಹನು ಆಹಾ ಇಚ್ಛೆಯಿಂದಲಿ ಜಗವ ಸೃಜಿಸಿ ಪಾಲಿಪಲೀಲೆ ಹಚ್ಚಿಕೊಂಡಿಹ ನಿನಗೆ ನನ್ನ ಪಾಲಿಪುದೇನು ಹೆಚ್ಚು ಕಾರ್ಯವೆ ಜೀಯ ಮುಚ್ಚಿಕೊಂಡಹ ನಿನ್ನ ಸ್ವಚ್ಛ ಬಿಂಬವ ತೊರಿ ಮೆಚ್ಚಿ ಕೊಡದಿರೆ ಜ್ಞಾನ 8 ಶ್ವಾಸಮತದಲಿ ಜನ್ಮ ವಿತ್ತೆ-ವಿಜಯ ದಾಸರ ಪ್ರಿಯ ಮೋಹನ್ನ ಪರಂಪರೆಯ ದಾಸನೆನಿಸಿ ಯೆನ್ನ ಮೆರೆಸಿ ಹೀಗೆ ದೋಷಿಗೈವುದು ಥರವೆ ಶ್ರೀಭಕ್ತಪ್ರಿಯ ಆಹಾ ವಾಸುದೇವನೆ ತುರ್ಯಲೇಸು ದೃಷ್ಟಿಯ ಬೀರೆ ನಾಶವಾಗದೆ ದೋಷ ಭಾಸವಾಗದೆ ಜ್ಞಾನ ಕಾಸುಬೀಡೆನು ಹಿರಿಯ ದಾಸರ ಗುಣ ನೋಡಿ ಲೇಸು ನೀಡೆಂತೆಂಬೆ ಶ್ರೀಕೃಷ್ಣವಿಠಲಾ9
--------------
ಕೃಷ್ಣವಿಠಲದಾಸರು
ಶ್ರೀಮಧ್ವ ಚಿತ್ತಮಂದಿರನೆ ನಿನ್ನಯ ಚರಣತಾಮರಸ ನೆರೆ ನಂಬಿದೆ ಪ ಕಾಮ ಕ್ರೋಧಗಳನ್ನು ಕಡಿದು ನಿನ್ನಯ ದಿವ್ಯನಾಮಾಮೃತವನುಣಿಸೋ ಸ್ವಾಮಿ ಅ.ಪ. ಪರ ನಾರಿಯರಮೋರೆ ಬಣ್ಣವನೆ ನೋಡಿಆರು ಇಲ್ಲದ ವೇಳೆ ಕಣ್ಣು ಸನ್ನೆಯಲವಳಕೋರಿದ್ದು ಇತ್ತು ಕೂಡಿವಾರಿಜನಾಭ ನಿನ್ನಾರಾಧನೆಯ ಮರೆದುಧಾರುಣಿಗೆ ಭಾರಾಗಿ ಅಶನ ಶತ್ರುವಾದೆ 1 ಉಪರಾಗ ಮೊದಲಾದ ದಶಮಿ ದ್ವಾದಶಿ ದಿನದಿಉಪೇಕ್ಷೆಯನು ಮಾಡಿ ಜರಿದೆ |ಉಪಕಾರವೆಂದು ನಿಜವೃತ್ತಿ ಪೇಳಿದರೆನಗೆಅಪಕಾರವೆಂದು ತಿಳಿದು |ನಿಪುಣನೆನಿಸುವೆನೆಂದು ಅಜ್ಞಾನಿಗಳ ಮುಂದೆತಪವೃದ್ಧರನ್ನು ಜರಿದೆ |ಸ್ವಪನದೊಳಗಾದರೂ ವೈರಾಗ್ಯ ಬಯಸದಲೆಕಪಟ ಮನುಜರೊಳಗಾಡಿ ನಿನ್ನ ಮರೆದೆನೊ ಸ್ವಾಮಿ 2 ಭೂಸುರರು ಚಂಡಾಲ ಜಾತಿಯನ್ನದೆ ಬಲುಹೇಸಿಕಿಲ್ಲದಲೆ ತಿರಿದೆ | ಆಶಾಪಾಶಕೆ ಸಿಲುಕಿ ಕಂಡಕಂಡಲಿ ತಿಂದುದೋಷರಾಶಿಯನು ತರುವೆ |ಆ ಸತೀ ಸುತರ ಸಲಹುವೆನೆಂದು ಪರಿಪರಿವೇಷವನು ಧರಿಸಿ ಮೆರೆವೆ |ವಾಸುಕೀ ಶಯನ ವಸುದೇವ ತನಯನೆ ನಿನ್ನದಾಸನೆನಿಸದಲೆ ಅಪಹಾಸ ಮಾನವನಾದೆ 3 ಹರಿದಾಸರಲ್ಲಿ ಒಂದರಘಳಿಗೆ ಕುಳಿತರೆಶಿರವ್ಯಾಧಿಯೆಂದ್ಹೇಳುವೆ |ದುರುಳ ದುರ್ವಾರ್ತೆಗಳ ಪೇಳಲು ಹಸಿತೃಷೆಯಮರೆದು ಆಲಿಸಿ ಕೇಳುವೆ |ತರುಣಿ ತರಳರು ಎನ್ನ ಪರಿಪರಿ ಬೈದರೆಪರಮ ಹರುಷವ ತಾಳುವೆ |ಗುರು ಹಿರಿಯರೊಂದುತ್ತರವನಾಡಲು ಕೇಳಿಧರಿಸಲಾರದಲೆ ಮತ್ಸರಿಸುವೆನೊ ಅವರೊಳಗೆ 4 ನಾ ಮಾಡಿದಪರಾಧಗಳನೆಣಿಸಿ ಬರೆವುದಕೆಭೂ ಮಂಡಲವೆ ನೆರೆ ಸಾಲದೊ | ಸೀಮೆಯೊಳಗುಳ್ಳ ದುರ್ಮತಿಯೆಲ್ಲ ಕೂಡಲುಈ ಮತಿಗೆ ಆದು ಪೋಲದೋಹೋಮ ಜಪತಪವು ಇನ್ನೆಷ್ಟು ಮಾಡಲು ಪಾಪಸ್ತೋಮ ಎಂದಿಗು ವಾಲದೊ |ಸಾಮಜ ವರದ ಮೋಹನ್ನ ವಿಠ್ಠಲ ನಿನ್ನ |ನಾಮವೊಂದಲ್ಲದೆ ಪ್ರಾಯಶ್ಚಿತ್ತವ ಕಾಣೆ5
--------------
ಮೋಹನದಾಸರು
ಶ್ರೀರಂಗನಾಥ ನಂಬಿದೇ ನಿನ್ನ ನಾನೇ ಅನಾಥ ಪ ಅನಾಥರಕ್ಷಕ ಎನ್ನಾ ಪ್ರೀತಿಯಿಂದಲೆ ಕಾಯೊ ಲೋ ಕನಾಥನೆಂದು ಬಂದು ನಂಬಿದೆ ನಿನ್ನ ಅ.ಪ ನಿಮ್ಮ ರಘುಪತಿ ನಿಮ್ಮ ವಿಭೀಷಣಗೆ ಕೊಡಲು ತಾಮುನ್ನಾ ಶ್ರೀರಂಗಕ್ಷೇತ್ರದಿ ನೆಲಸಿ ಸಂತೋಷದಿ ಧರ್ಮವರ್ಮಾದಿ ಚೋಳೇಂದ್ರ ಪೂಜಿತಪಾದ 1 ಕಂದ ಪ್ರಹ್ಲಾದ ಕರೆಯೆ ಕಂಬದಿಂದಲೆ ಬೇಗ ಬಂದು ಅವನ ತಂದೆಯನು ಸಂಹರಿಸಿದೆ ಕಂದನ ಕಾಯ್ದ ಗೋವಿಂದ ರಕ್ಷಿಸೊ ಎನ್ನ 2 ಅಜಮಿಳ ಕರೆಯೆ ಆಪತ್ತಿಗೆ ಬಂದು ನೀನೊದಗೆ ನಿಜಸ್ಮರಣೆ ಮಾತ್ರದಲವನ ದುರಿತವೆಲ್ಲವ ಕಳೆದು ನಿಜ ಪಾದವನಿತ್ತೆ ಕರುಣದಿಂದಲೆ ರಂಗ 3 ಕಂದ ಧ್ರುವ ತಾನು ಅಡವಿಯಲಿ ನಿಂತು ತಪವನು ಚಂದದಿ ಮಾಡಲು ಬಂದು ಸೇವೆಯನಿತ್ತೆ ಆ ನಂದಪದವನಿತ್ತ ಸುಂದರಾಯನೆ ನೀನು 4 ಅರ್ಕಸುತನಾಗ ನಿಮ್ಮನ್ನು ಸೇರಿ ಸೌಖ್ಯವ ಬೇಗ ಮಾಡೆ ಸೊಕ್ಕಿದ ವಾಲಿಯನೊಂದು ಬಾಣದಿಂ ಕೊಂದು ಮರ್ಕಟಗೆ ರಾಜ್ಯವನಿತ್ತ ರಂಗಯ್ಯ ನೀನು5 ಮಕರಿ ಕಾಲ್ಪಿಡಿಯೆ ಮತಂಗಜ ನಿಮ್ಮನು ಕರೆಯೆ ನಕ್ರವ ಕೊಂದು ಚಕ್ರದಿ ಅತಿವೇಗದಿಂ ಕರಿಯ ರಕ್ಷಿಸೆ ಬಂದೆ ಕರುಣದಿಂದೆ 6 ಭವಕೆ ನಾ ಬೆದರಿ ಬಂದೆನೊರಂಗ ಕಾಯೋ ನೀ ಭವದಿ ಈಶಣತ್ರಯವನ್ನು ಬಿಡಿಸಿ ನಿನ್ನಯ ಪಾ ದವಾಸವ ಮಾಡಿಸೊ ವಾಸುಕಿಶಯನನೆ 7 ಆರುಜನ ಕಳ್ಳರು ಎನ್ನಲಿ ಸೇರಿ ಬಾಧಿಸುತಿಹರು ದೂರಮಾಡವರನ್ನು ಸೇರಿಹೃದಯದಲ್ಲಿ ಶ್ರೀನಿವಾಸನೆ ನಿಮ್ಮ ಪಾದದೊಳಿರಿಸೆನ್ನ 8
--------------
ಯದುಗಿರಿಯಮ್ಮ
ಶ್ರೀರುಕ್ಮಿಣೀರಮಣ ತಾನುಡಿಸಿದಂತೆ ನಾಂ ಧಾರುಣಿಪ ಜನಮೇಜಯಂಗೆ ಮುನಿ ಪೇಳಿಸಿದ ಹದಿನೆಂಟುಪದ್ಯಗಳೊಳಾಲಿಸುವುದು ದನುಜದಿವಿಜರೀ ಭುವಿಯೊಳವತಿರಿಸಿದರುಸುಯೋ ಧನಪಾಂಡುತನಯರಂ ಸೈರಿಸದೆಭೇದಮಂ ಕಟ್ಟಿಸಿಯರಗಿನಮನೆಯೊಳವರನಿಡಲು | ವನಜಲೋಚನನ ಕೃಪೆಯಿಮದದಂದಾಟಿಕಾ ನನದಲಿ ಹಿಡಿಂಬಬಕರಂ ಮುರಿದುದೃಪದರಾ ಪುತ್ರರಪಡೆದರಾದಿಪರ್ವದಲ್ಲಿ 1 ರಾಜಸೂಯಾಭಿಧಾನದ ಯಾಗಕಾರಣದೊ ಳಾಜರಾಸಂಧಾದಿಗಳ ಕೊಲಿಸಿನೃಪಧರ್ಮ ಜೂಜಿನಲಿಸೋಲಿಸಲು ಪಂಚಪಾಂಡವರಂ ಸ ರೋಜಾಕ್ಷಿ ದ್ರೌಪದಿಯ ಭಂಗಪಡಿಸಲ್ಕೆಪಂ- ಸಭಾಪರ್ವದಲಿ 2 ಅಡವಿಯೊಳು ವಾಸವಾಗಿರಲು ಪಾಂಡುಸುತರ್ಗೆ ಪೊಡವಿ ಸುರರರುಹಿಸಲ್ ಸತ್ಕಥೆಗಳಾಲಿಸುತ ಘೋಷಯೊಳಹಿತನ ಬಿಡಿಸಿದಂ ಗಂಧರ್ವಪತಿಯಿಂದ ಪಾರ್ಥನೀ ರಡಿಸಿ ನಾಲ್ವರುಮೂರ್ಛೆಪೊಂದಲ್ಕೆಯಕ್ಷಂಗೆ ಅರಣ್ಯಪರ್ವದೊಳಗೆ 3 ಬಂದುಮಾತ್ಸ್ಯಾಲಯದಲಜ್ಞಾತವಾಸದೊಳ ಗಂದುಪಾಂಡವರಿರಲ್ ಕೀಚಕಾಧಮನು ಸೈ- ಭೀಮಗಂಧರ್ವ ವ್ಯಾಜದಿಂದ ಕೊಂದವಾರ್ತೆಯ ಕುರುಪಕೇಳಿ ಸೇನೆಸಹಿತ ಪಾರ್ಥಗೆ ವಿರಾಟಪರ್ವದಲ್ಲಿ 4 ದೇವಕೃಷ್ಣಸಂಧಿಗೆ ತರಲ್ ಕುರುಪದು ರ್ಭಾವದೊಳಗಿರಲದಂ ತಿಳಿದುವಿದುರನ ಮನೆಯೊ ಕೌರವಸಭೆಗೆಪೋಗಿ ಈವುದೈದೂರುಗಳ ಪಾಂಡವರಿಗೆನೆ ಭೇದ ಭಾವದಿ ಸುಯೋಧನಂಸೂಜ್ಯಾಗ್ರಭೂಮಿಯಂ ತಾ ನೀವುದಿಲ್ಲವೆನೆ ಯುದ್ಧನಿಶ್ಚಯಗೈದನುದ್ಯೋಗಪರ್ವದಲಿ 5 ಕುರುಪತಿಯು ಗಂಗಾಸುತಗೆ ಪಟ್ಟಗಟ್ಟಿದಂ ಎರೆಡುಬಲಮಂ ಸೇರಿಯಿರಲರ್ಜುನಂ ತನ್ನ ವರಕೊಲ್ವದೆಂತೆನಲ್ ಹರಿವಿಶ್ವರೂಪಮಂ ತೋರಿತತ್ವವತಿಳಿಸಲು ತರುವಾಯ ಹತ್ತುದಿನಕಾದುತಿರಲಾಗಭೀ ಷ್ಮರಿಗೆಷಂಡನನೆವದಿ ಶಸ್ತ್ರಸಂನ್ಯಾಸ ವಾ ಭೀಷ್ಮಪರ್ವದಿಕಥೆಯಿದು 6 ಗುರುಗಳಿಗೆ ಪಟ್ಟಾಭಿಷೇಕವಾಯಿತುದ್ರೋಣ ದೊರೆಯಹಿಡಿತಹೆನೆಂದು ತಪ್ಪೆಸಂಶಪ್ತಕರ ನರನೊಡನೆ ಕಾದಿದರು ಪಾರ್ಥಸುತಪೊಕ್ಕುಪದ್ಮವ್ಯೂಹ- -ದೊಳುಮಡಿಯಲು ನರಪ್ರತಿಜ್ಞೆಯಗೈದು ಸೈಂಧವನ ವಧಿಸಿದನ ಸುರ ಘಟೋತ್ಕಚ ರಾತ್ರಿಯುದ್ಧದೋಳ್ ಸಂದನಾ ದಿನದಲಿದ್ರೋಣಪರ್ವದೊಳಗೆ 7 ಕುರುಸೈನ್ಯಬತ್ತಿರುವ ಶರಧಿಯೋಲಾಯ್ತು ದಿನ ಕರಸುತಗೆ ಪಟ್ಟವಂಗಟ್ಟಿ ದುರ್ಯೋಧನಂ ಹರನುತ್ರಿಪುರವ ಗೆದ್ದಕಥೆಯವಿಸ್ತರಿಸಿ ಸಾರಥಿಯ ಮಾಡಲು ಶಲ್ಯನ ನರನವಿಕ್ರಮಪೊಗಳಿ ಕರ್ಣನಬಲವನುಧಿ ಕ್ಕರಿಸೆಮಾದ್ರೇಶ್ವರಂ ಕರ್ಣನತಿ ಖಾತಿಯಿಂ ದೆರಡುದಿನ ಕಾದಿಯರ್ಜುನನಿಂದ ಮಡಿದ ಸೂತಜ ಕರ್ಣಪರ್ವದಲಿ 8 ಸೂತಜನಮರಣದಲಿ ಶಲ್ಯಗಾಯಿತು ಪಟ್ಟ ಶಕುನಿಯಂಸಹದೇವಸಂಹರಿಸಲು ಪಾತಕಿ ಸುಯೋದನಂ ಕೊಳನಪೊಕ್ಕಿರಲು ಯಮ ಜಾತಾದಿಗಳು ಪೋಗಿ ನುಡಿಸಲ್ಕೆಜಲ ಪೊರಟು ಕುರುಪನು ಶಲ್ಯಪರ್ವದೊಳಗೆ 9 ಗುರುಜಂಗೆ ಬೆಸಸಿದಂ ಕುರುರಾಯ ಪಾಂಡವರ ಶಿರವತಹುದೆನುತಲಶ್ವತ್ಥಾಮಪಾಳಯದಿ ಜೀವಬಿಡಲು ನರಭೀಮಸೇನರಾವಾರ್ತೆಯಂ ಕೇಳುತಲೆ ತರುಬಿ ಹಿಡಿದೆಳೆ ತಂದು ದ್ರೌಣಿಯಂ ಶಿಕ್ಷಿಸಲ್ ಸುಪ್ತಪರ್ವದಲಿ 10 ರಣದಿ ಮಡಿದಿರುವ ನೃಪರರಸಿಯರ್ ಅಂಧಭೂ ಪನು ಸತಿಯುಸಹಿತಲೈತರುತಿರಲ್ ಕಳನೊಳಗೆ ತಮ್ಮಪತಿಗಳನಪ್ಪಲು ಪೆಣಗಳೊಟ್ಟೈಸಿ ಸಂಸ್ಕಾರಕ್ರಿಯೆಗಳವಿದು ರನುಗೈದನನ್ನೆಗಂ ಧೃತರಾಷ್ಟ್ರನರಸಿ ಕೃ ಸ್ತ್ರೀಪರ್ವದಲಿ 11 ತನಗೆ ಕರ್ಣಸಹೋದರನೆಂಬ ವಾರ್ತೆಯಮ ಜನು ಕೇಳಿ ಶೋಕದಿವಿರಕ್ತಿಯಿಂದಿರೆ ಸಕಲ ಘನಬಂಧುವಧೆ ಮಹಾದೋಷವೆಂತೆಂದು ಭೀ ಷ್ಮನ ಕೇಳಲರುಹಿದಂ ರಾಜನೀತಿಯ ಧರ್ಮ ವನು ಕಷ್ಟಕಾಳಧರ್ಮವ ಮೋಕ್ಷಧರ್ಮವೆಂಬಿದುಶಾಂತಿಪರ್ವದಲಿ 12 ಅತಿಶಯ ದಾನಧರ್ಮದ ಲಕ್ಷಣಗಳಂ ನಿ ಯತಮಾದ ವರ್ಣಾಶ್ರಮಾಚಾರಕ್ರಮದಸಂ ತತಿಗಳಂ ಶಿವವಿಷ್ಣುಗಳಮಹಿಮೆ ಬ್ರಹ್ಮಸಾಕ್ಷಾತ್ಕಾರಸದ್ಬೋಧೆಯ ಕಥೆಗಳರುಹಿಸಿ ನದೀಸುತಧರ್ಮಜನ ಮನೋ ಪತಿ ಕೃಷ್ಣನಂ ಧ್ಯಾನಿಸುತ ಮುಕ್ತನಾದನಿದು- -ಮಾನುಶಾಸನ ಪರ್ವದಿ 13 ಗುರುಸುತನ ಬ್ರಹ್ಮಾಸ್ತ್ರಮಂಚಕ್ರದಿಂದಸಂ ಹರಿಸಿ ಕೃಷ್ಣಂಕಾಯ್ದನುತ್ತರೆಯಗರ್ಭಮಂ ನೇಮದಿಂದ ಪರಿಪರಿಸುವಸ್ತುಗಳನೆಲ್ಲ ತಂದುಯೈ ವರು ಮಹಾಸಂತಸದಿಹರಿ ಸಹಾಯದಿ ಮಾಡಿ ಸಂಪೂಜಿಸಿದರಶ್ವಮೇಧಕಪರ್ವದಿ 14 ಅಂಧಭೂಪತಿ ಕೌರವಸ್ತ್ರೀಯರುಂ ಕುಂತಿ ಗಾಂಧಾರಿ ಸಹಿತಬರೆ ತೆರಳಿದಂತಪಗೈಯ್ಯೆ ಮುವ್ವರುಪವಾಸದೊಳಿರೆ ಬಂದುದಾಕಾಳ್ಗಿಚ್ಚಿನೋಲ್ ಮಹಾಜ್ವಾಲೆಯೋಳ್ ಪೊಂದಿದರ್ ವಿದುರಧರಾತ್ಮಜನಕೂಡಿದಂ ಬಂದುಯಮಜನುಪುರದಿ ಶ್ರಾದ್ಧಗಳಮಾಡ್ದನಾಶ್ರಮ- -ವಾಸಪರ್ವದೊಳಗೆ 15 ವರುಷಗಳು ಷಟತ್ರೀಂತಿಯು ರಾಜ್ಯವಾಳುತಿರೆ ಬರುಬರುತಲುತ್ಪಾತಗಳುಪುಟ್ಟಿದವು ಯಾದ ಮಡಿದರೆಂಬವಾರ್ತೆಯನು ಕೇಳಿ ನರನು ನಡೆತಂದು ಶೋಕದೊಳುಳಿದವರನುತಾ ಕರದೊಯಿದು ವಜ್ರಾಖ್ಯನಂ ಯಿಂದ್ರಪ್ರಸ್ಥದೋಳ್ ಮುಸಲಪರ್ವದಕಥೆಯಿದು 16 ನರನಮೊಮ್ಮಗೆ ಪಟ್ಟವಂಗಟ್ಟಿಯೈವರುಂ ತೆರಳಿದರ್ಪಾಂಡವರ್ ಸತಿಸಹಿತಬರುತ ಹಿಮ ನಕುಲನುಂ ಸುರಪಸುತನು ವರಭೀಮಸೇನನುಂ ಬಿದ್ದರಾನೃಪತಿಯೋ ರ್ವರನುಕಾಣದೆಯೊಬ್ಬನೇಪೋಗುತಿರೆ ಕಷ್ಟ ಪ್ರಸ್ಥಾನಪರ್ವದೊಳಗೆ 17 ಮ್ಮಂದಿರೆಲ್ಲೆನಲವಂ ಸುರನದಿಯತೋರಲ್ಕೆ ತನ್ನವರೆಲ್ಲರ ನೋಡುತ ಪೊಂದಿದಂ ಯಮನೊಡನೆ ಪವನನೋಳ್ ಭೀಮನರ ನಿಂದನಂ ಯಮಳರಶ್ವಿನಿಯರೊಳ್ಕಲಿಮುಖ್ಯ ಸಂದೋಹದೋಳ್ ಸುಯೋಧನ ಪ್ರಮುಖರೊಂದಿದರ್ ಸ್ವರ್ಗಾರೋಹಣಪರ್ವದಿ 18 ಈಮಹಭಾರತ ಶತಸಹಸ್ರಗ್ರಂಥವನು ಹಾ ಮುನಿ ಪರಾಶರಾತ್ಮಜಪೇಳ್ದನದುವೆ ಗುರು ಸಂಕ್ಷೇಪಭಾರತವನು ಪ್ರೇಮದಿಂದಾಲಿಸುವ ಸಜ್ಜನರಿಗನುದಿನಂ ಕಾಮಿತಾರ್ಥವನಿಹಪರಂಗಳೊಳ್ಸುಖವಗುರು ರಾಮವಿಠ್ಠಲಕೊಡುವಭಾಗ್ಯವಲ್ಲೀನಗರ- -ನಿಲಯನರಹರಿಕರುಣದಿ 19
--------------
ಗುರುರಾಮವಿಠಲ
ಶ್ರೀವಧು ನಯನಾಬ್ಜ ವಿಲೋಚನಾ ದಾವನಾಗಿಹ ಪಂಕಜಲೋಚನಾ ದೇವನಂಘ್ರಿಯ ಚರಿತದ ಸೂಚನಾ ಪಾತಕ ಮೋಚನಾ 1 ಮತಿ ಮಂತಾಂಭುನಿಧಿ ದ್ವಿಜರಾಜ ದಿತಿ ಸುತಾಹಿ ಕುಲದ್ವಿಜರಾಜಾ ಸುತ ಮುನಿಹೃದಯಾಬ್ಜದಿನೇಶಾ ಸತತ ದುಷ್ಕøತ ತರುರದನೇಶಾ2 ಆವನೀಭುವ ನತ್ರಯವ ಪಾಲಕಾ ದೇವಕೀತಪದಲಾದನು ಬಾಲಕಾ ದೇವನಾಡಿದ ಮನಿಲಿಯ ಶೋದಾ ಭಾವಿಸಲ್ಕವಗ ಗತಿ ಶ್ರೀಯಶೋದಾ3 ಪರಮ ಸುಂದರ ನಂದ ಕುಮಾರಾ ಅರಿತು ಬಂದನುಗರ್ಭದಿ ಮಾರಾ ಧರಿಯೊಳಾವನ ಮನಿ ಕಾಪುರದ್ವಾಶಕಾ ಸ್ಮರಸಲೀ ಜಗದ ಪಾವಿದಾರಕಾ4 ಮಾನವ ತಂದಿಯಾ ಸುಗಮದಿಂದರಿದ ಬಂಧನ ತಂದಿಯಾ ಮಗನ ಕಾಯಿದಾ ಶಿಕ್ಷಿಸಿ ತಂದಿಯಾ ಮಗನ ಶಿಕ್ಷಿಸಿ ಕಾಯಿದಾತಂದಿಯಾ5 ವನಧಿ ವಂಧಿಸಿ ತೇಲಿಸಿ ಪರ್ವತಾ ಜನಪದಾಟಿಸಿ ವಾನರ ಪರ್ವತಾ ಘನಮಹಿಮನು ಜಾನಕಿ ಕಾಂತಾ ನೆನಹುತಿಹನು ಸಹಶಿವಕಾಂತಾ 6 ಸೇವಿಗಂಡೊಲಿದು ರಾಘವ ತಮ್ಮನಾ ರೇವತೀರಮಣಗೆಂಬನುತಮ್ಮನಾ ಜೀವಗಾಯಿದಾ ಭೀಮನತಮ್ಮನಾ ಪಾವನಂಘ್ರಿಯ ನೆನಿಸತತಂಮನಾ7 ಕುದಿಪುತಿರ್ಪುದು ಮಡು ಪವನಾಶನಾ ವಿದಿತೆ ಘಾಳಿಗೆ ಜೀವನ ನಾಶನಾ ಅದರೊಳಗಡಲು ತಾಜಗ ಜೀವನಾ ಸುಧಿಯ ರೂಪವ ಆಯಿತು ಜೀವನಾ8 ಜಲದಲೀ ನೆನಿಯಲು ಮದವಾರಣಾ ವಲಿದು ಮಾಡಿದ ಬಂಧ ನಿವಾರಣಾ ಸತಿಸ್ವರೂಪದ ನೀಡಿದ ಮುಕ್ತಿಯಾ ನಲಿದು ಮಾಡಲಿ ಶ್ರೀ ಹರಿ ಭಕ್ತಿಯಾ9 ದಾವ ತೇಲಿಸಿದ ನಚ್ಚಿಲಿ ಗೋಕುಲಾ ದೇವ ಕಾವನು ನೋಡಿರಿ ಗೋಕುಲಾ ಜೀವಜಾಲದ ಬೇಡಿ ಪ ಗೋಕುಲಾ ತಾವಿಹರಿಸುತಿಹನು ಗೋಕುಲಾ 10 ಸ್ಮರಿಸಿ ಗೋಕುಲಲ್ಯಾಕಳ ಕಾವನಾ ಧರೆಯೊಳೊಪ್ಪುವ ಕಾಟಿಯ ಕಾವಳಾ ಚರಣ ಗೋಚರ ಮುನಿಮನ ಕಾವನಾ ಶರಣ ಹೋಗದು ಸಕಲಿ ಕಾವನಾ11 ಅವನಂಘಿಯ ಸೇರೆ ವನೌಕಸಾ ಜೀವರಾದರು ಸಾಮದಿವೌಕಸಾ ಭಾವಿಸಲ್ಕಾರಿಯದಾದಳು ಶ್ರೀರಮಾ ದೇವನಾಸ್ತುತಿಸಿ ಬಣ್ಣಿಪ ರಾರಮಾ12 ಮುನಿ ಬಂದನೆಂದು ಸ್ಮರಿಸಲು ಕೃಷ್ಣಾ ಮನಸ್ನೇ ಹದಿಂದೋಡಿ ಬಂದನು ಕೃಷ್ಣ ಅನೇಕ ಪದಾರ್ಥದಿಂ ದುಣಿಸುತಾ ಘನಾನಂದ ನೀಡಿದ ಪಾರ್ಥನ ಸೂತಾ13 ಸುರಗಂಗಿಯ ಪಡದ ದಾವನ ಚರಣ ಅರಿಮರ್ದನಾಗಿಹ ದಾಪಾಣಿ ಚರಣಾ ಸರಿಜಾರ ನಖದಾ ತೇಜಕ್ಕ ತರಣೀ ಇಂದಿರೆ ತರುಣಿ14 ಚರಣಧ್ಯಾಯಿಪದಾವನು ಮಾಧವಾ ಸುರನರೋರಗ ಪೂಜಿ ಮಾಧವಾ ಧರಿಯೊಳಾದನು ಬಾಲಕ ನಂದನಾ ಚರಿತ ಪಾಡಿದ ಮಹಿಪತಿ ನಂದನಾ15
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಸಕಲ ಕಾಲದಿ ಮಾಡಿದ ಕರ್ಮವು | ಭಕುತಿಯಿಂದಲಿ ಬಂದರ್ಪಿತವೆನ್ನಿ ಉಡುಪಿಯಲಿ ಪ ಯಾತ್ರೆಗಳ ಮಾಡಲಿ ತೀರ್ಥಗಳ ಮೀಯಲಿ | ಸ್ತೋತ್ರಗಳ ಮಾಡಲಿ ಕೊಂಡಾಡಲಿ || ನೇತ್ರದಲಿ ನೋಡಿ ಕರಮುಗಿದು ನಮಸ್ಕರಿಸಲಿ | ಹೋತ್ರವನು ಮಾಡಿ ಹಿತವಾಗಿ ನುಡಿಯಲಿ 1 ದಾನವನು ಮಾಡಲಿ ದಾಕ್ಷಿಣ್ಯವಾಗಲಿ | ಮೌನವನು ಮಾಡಲಿ ಮಾತಾಡಲಿ || ಕಾನನವ ಸೇರಲಿ ಕಂಡಲ್ಲಿ ತಿರುಗಲಿ | ಏನೇನು ಚರಿತೆಗಳ ಮಾಡುತಿರಲಿ 2 ಪುಣ್ಯವಾದರು ಲೇಸೆ ಪಾಪವಾದರು ಹರಿ | ಮನ್ನಿಸಿ ತಾನೀಗ ತೆಗೆದುಕೊಂಡು || ತನ್ನ ಸಮೀಪದಿ ಇಟ್ಟುಕೊಂಡು ಅವನ |ಘನ್ನ ಮೂರುತಿ ವಿಜಯವಿಠ್ಠಲ ಪೊರೆವ 3
--------------
ವಿಜಯದಾಸ
ಸಂಕೀರ್ಣ ಇದೇ ವೀಳ್ಯ ಅಡಕ್ಯೆಂಬುದು ನೋಡಿ ಹದನಿಸಿ ನಾಲ್ಕುಗುಣ ಚೂರ್ಣಮಾಡಿ ಧ್ರುವ ಅಡಕೆಂಬದನುಮಾನಪೂಟ ಒಡೆದ ಹೋಳು ಮಾಡಿ ಚೊಕಷ್ಟ ಮಡಿಚಿಮ್ಮನೆಂಬುದು ವೀಳ್ಯ ನೀಟ ತೊಡೆದು ಅಹಂ ಸುಣ್ಣ ಖಾರಟಾ 1 ಗುರುವರ್ಮ ಕಾಚೆಂಬುದು ಪೂರ್ಣ ಸುರಮುನಿ ಜನರ ನಿಧಾನ ತೋರುತಿಹ್ಯದೊಂದೆ ನಿಜ ಖೂನ ಕರಗಿಹೋಯಿತು ಮೂರೊಂದು ವರ್ಣ 2 ವೀಳ್ಯ ಮಾಡಲು ಮರ್ದನ ಕಳದ್ಹೋಯಿತು ಅದರವಗುಣ ಕಳೆ ಹೆಚ್ಚಿತು ರಂಗ ಸಗುಣ ಥಳಿಥಳಿಸುವ ಜ್ಞಾನ ಸುಬಣ್ಣ 3 ನುಂಗಿ ತಾಂಬೂಲ ರಸ ಹಲವಂಗ ಹಿಂಗಿ ಹೋಯಿತು ಭವಭಯಭಂಗ ಕಂಗಳದ್ಯರಿಯತು ಅಂತರಂಗ ರಂಗದೋರಿತ್ಯನ್ನೊಳು ಸತ್ಸಂಗ 4 ವೀಳ್ಯ ಅಡಕಿ ಮಹಿಪತಿಗೆ ನೋಡಿ ತಿಳದವರಿದೆ ನಿಜಪೂರ್ಣ ಮಾಡಿ ಕಳೆದು ಕಲ್ಪನಿ ಕೊನೆ ಆಗ್ಯೀಡ್ಯಾಡಿ ಇಳಿಯೊಳಗಿದೆ ಸವಿ ಸುಖಗೂಡಿ 5
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಸಂಗಬೇಡವೈ ಆಶಾ ಪ ಸಂಗದಿಂದ ನಿನಗೆ ಅಂಗವೇ ಭಂಗವಾಹುದೈ ಅ.ಪ ಇದ್ದ ಕಡೆ ಇರಲೀಸದು | ಅ ಶುದ್ಧ ಮನುಜನಾದರೆಯು ಅ - ವಿದ್ಯದಿ ಮುಳುಗಿಸುವುದು 1 ನೋಡಿದುದು ಬಯಸುವುದು | ಬಲು ಮೋಡಿಯಿಂ ತಿರುಗಿಸುವುದು ಮಾಡಿಸಿ ಮಾಡಿಸಿ ದಣಿಸುವುದು 2 ಹಣವಿದ್ದರು ಕಳೆವುದು | ದುರ್ ಮನದಿ ಸಾಲ ಮಾಡಿಸುವುದು ಗುಣಿಯಲಿ ದುರ್ಗುಣವೇ ಕಾಣಿಸಿ ಹೆಣಕೆ ಸಮವೆಂದೆನಿಸುವುದು 3 ಬೋಧೆಯ ಕೇಳಲೀಯದು | ಮನೋ ವ್ಯಾಧಿಯಲ್ಲಿ ಕೃಶಿಸುವುದು ಹಾದಿ ಹೋಕರ ಕಂಡವರಂತೆ ಸಾಧನವ ಮಾಡಿಸುವುದು 4 ಅನ್ನಬಾರದನ್ನಿಸುವುದು ತಿನ್ನಬಾರದ್ದು ತಿನ್ನಿಸುವುದು ನನ್ನದೂ ನಾನೆಂಬ ಗರ್ವದಿ ಇನ್ನೂ ಮುನ್ನೆ ಕೆಡಿಸುವುದು 5 ಆಗೋ ಕಾರ್ಯ ಮಾಡಲೀಯದು ಹೋಗದೂರಿಗೇ ಹೊರಡಿಸುವುದು ಭೋಗಗಳೊಳಪೇಕ್ಷೆ ಪುಟ್ಟಿಸಿ ರೋಗದಿ ಬಳಲಿಸುವುದು 6 ಕೋಪಾದಿಗಳು ಹೆಚ್ಚುವುದು ಪಾಪಬುದ್ದಿ ಪುಟ್ಟುವುದು ಶರಣರಿಗಿದು ಸಲ್ಲದು 7
--------------
ಗುರುರಾಮವಿಠಲ
ಸಣ್ಣವರುದ್ದುಸಕಾಗಿ ಬಿನ್ನಯಿಸುವೆನು ನಾನುಎನ್ನ ಆಳುವ ದೊರೆಯೆ ನಿನ್ನ ಸ್ವಾತಂತ್ರ್ಯ ಸಂಕಲ್ಪಅರಿತವರಲ್ಲ ಚೆನ್ನಾಗಿ ಸಾಕಬೇಕು ಹರಿಯೆ ಪ. ಸಾಧುಸಂಗಗಳಿಲ್ಲ ಓದಿ ಕೇಳಿದರಲ್ಲಭೇದಅಭೇದಗಳ ಅರಿದುಯಿಲ್ಲಕ್ರೋಧ ಬಿಟ್ಟವರಲ್ಲ ಸಾಧುಗಳು ಯೋಗ್ಯತೆಲಿಹಾದಿ ಏನೀಜೀವರುಗಳಿಗೆ ಹೇ ಸ್ವಾಮಿ 1 ವಸ್ತ್ರದ ಮೂಲವು ಹತ್ತಿಯ ಕಾಳಹುದುಬಿತ್ತಿ ಬೆಳೆಸಿ ಅದರ ವ್ಯಕ್ತಿ ಮಾಡಿವಿಸ್ತರಿಸಿ ನೋಡಿಸಿದರೆ ಪಟ್ಟುವು ಆಗುವುದುವಸ್ತುಗಳ ವ್ಯಕುತಿ ನಿನ್ನಿಂದಾಗಬೇಕು 2 ಮಾಡಲರಿಯರು ತುತಿಯ ನೋಡಲರಿಯರು ನಿನ್ನಬೇಡಲರಿಯರು ತಮ್ಮ ಹಿತದ ಕಾಮಮಾಡುವರು ನಿನ್ನವರ ಮಮತೆಯಾದರು ಮನಸು-ಗೊಡು ಈಪರಿ ಜೀವಗಳಿಗೆ ಗತಿಯೇನೊ 3 ನಿನ್ನಿಂದ ಸೃಷ್ಟಿಯಾದ ಜೀವರುಗಳಿಗಿನ್ನುಇನ್ನು ಮೂರು ಬಗೆಯ ಭಕುತರೊಳಗೆಎನ್ನಿಂದ ಉತ್ತಮ ಮಧ್ಯಮಾಧಮರುಗಳುಇನ್ನಾವ ಇವರ ವಿವೇಕ ನೀ ಬಲ್ಲೆ 4 ಎನಗಿಂದುತ್ತಮರು ಎನಗೆ ಪ್ರಾರ್ಥಿಸುವರುಎನಗೆಂದವರಲೆನಗೆ ಹಿತ ಪೇಳ್ವರುಘನ ಅವರ ಮಧ್ಯಸ್ಥರನು ಹುಡುಕ ತಿಳಿಯದುಅನುವರಿತು ಅವರವರ ಗತಿಗೆ ಅನುಕೂಲನಾಗು 5 ನೀತವನು ನೀ ಬಲ್ಲೆ ಅವರವರ ಸಾಧನವುಯಾತಕೆ ಅವರಗೊಡವೆ ನಿನಗೆ ಎಂಬ್ಯನೀತವಾಗಿದೆ ನೋಡೊ ಪರಸ್ಪರ ಜೀವರಿಗೆಪ್ರಾರ್ಥನೆಯು ಎಂಬುವುದು ಮಾತು ಪುಸಿಯಲ್ಲ 6 ನಿನ್ನವರು ಆಗಿ ಪಾಡನುಬಡುತ ಇಪ್ಪುವರಕಣ್ಣಲಿಕಂಡು ನಾ ಬಿಡುವನಲ್ಲಮನ್ನಿಸು ನಿನ್ನ ಚಿತ್ತ ಮನ್ನಿಸದಲೆ ಪೋಗುಎನ್ನ ಸ್ವಭಾವವಿದೆ ಗೋಪಾಲವಿಠಲ 7
--------------
ಗೋಪಾಲದಾಸರು
ಸಂತ ಚರಣಕೆ ಭಾವದಿ ಮಣಿಯೋ | ಅಂತ ರಂಗದಿ ಬಹಯದುಕುಲಮಣಿಯೋ ಪ ಬಿಡದೇ ಮಾಡಲು ಅವರನುಸರಣಿಯೋ | ಕೊಡುವನು ನಾಮದಿ ಕನಿಭರಣಿಯೋ 1 ವರವರದ್ಹೇಳಲು ಬೋಧಕ ಹಣಿಯೋ | ದೊರೆವುದು ಸುಜ್ಞಾನತನದ ಖಣಿಯೋ 2 ಗುರುಮಹಿಪತಿ ಪ್ರಭು ವಶವರ್ತಣಿಯೋ | ಕರುಣಿಸಿ ಪುನರಪಿ ಭವದಲ್ಲಿ ದಣಿಯೋ 3
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಸಂತರ ನೆರೆಯಲಿರುವದು ಇಳೆಯೊಳು ಬಲುಪುಣ್ಯ ಪ ಚಂದನ ಗಾಳಿಯಲನ್ಯಗಿಡ ಬೆಲೆಗಾಣುವಂತೆ | ಕುಂದದೆ ಪಾಮರನಾಗುವನು ಮಾನ್ಯಾ 1 ಶ್ರವಣ ಮಾಡಲು ಹರಿಕಥೆ ನಿಜಬೋಧವನು | ಭವದುರಿತ ಸೇರುವದು ಅರಣ್ಯಾ 2 ತಂದೆ ಮಹಿಪತಿಸುತ ಪ್ರಭುವಿನ ಖೂನಾ | ಚಂದದಲಾಗುವದೇ ತಾರ್ಕಣ್ಯಾ 3
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಸತ್ಯಾದ ನಡಿ ಹಿಡಿರೋ ಮನಜರು ಸತ್ಯದಾ ನಡಿಗಿನ್ನು ಮತ್ತೊಂದು ಭಯವಿಲ್ಲ ಧ್ರುವ ಸತ್ಯದಾನಡಿಗಿನ್ನು ಸತ್ಯ ನುಡಿಯಲು ಬೇಕು ಸತ್ಯಂ ಸತ್ಯ ಶರಣರೆಲ್ಲಾ ಎತ್ಯಾಡಿಸುವಂತೆ ಮೈಯೊಳಗಿಹ ಕಾವನೈಯನ ಮರಿಯಬ್ಯಾಡಿ 1 ಹುಸಿಯಾಡಿ ನೀವಿನ್ನು ಘಾಸಿಗೆ ಬೀಳಲಿ ಬ್ಯಾಡಿ ವ್ಯಸನಕಾಗಿ ಬಿದ್ದು ದೆಶೆಗೆಟ್ಟು ಹೋಗಬ್ಯಾಡಿ 2 ಅಶೆಯಕೊಟ್ಟು ನಿರಾಶಯೆ ಮಾಡಲಿಬ್ಯಾಡಿ ಘಾಸಿ ಮಾಡಲಬ್ಯಾಡಿ 3 ಘಟ್ಟಿಸಿ ಒಬ್ಬರ ಹೊಟ್ಟೆಹೊರಿಯಬ್ಯಾಡಿ ಸಿಟ್ಟಿಲಿ ನೆಂಟರು ತುಟ್ಟಿಸಿ ಬಿಡಬ್ಯಾಡಿ4 ಗುಟ್ಟಿನೊಳಿಹ ಮಾತು ತುಟ್ಟಿಗೆ ತರಬ್ಯಾಡಿ ಹೊಟ್ಟೆಲೆ ಹಡೆದವರ ಕಟ್ಟಿಗೆ ತರಬ್ಯಾಡಿ 5 ಲೆತ್ತಪಗಡಿ ಅಡಿ ಹೊತ್ತುಗಳಿಯಬ್ಯಾಡಿ ತುತ್ತುಕುಡಿಯೊಳಿದ್ದಾ ಪತ್ತಬಡಲಿಬ್ಯಾಡಿ 6 ಹರಿಹರ ಭಕ್ತಿಗೆ ಬ್ಯಾರೆ ನೋಡಲಿಬ್ಯಾಡಿ ಗುರುಕೃಪೆ ಪಡೆದಿನ್ನು ಗುರುತಿಟ್ಟು ನೋಡಿರೋ 7 ಅನ್ನಬೇಡಿದವ ಗಿಲ್ಲೆನ ಬ್ಯಾಡಿ ಹೊನ್ನು ಹೆಣ್ಣಿನ ಮ್ಯಾಲೆ ಕಣ್ಣಿಟ್ಟು ಕೆಡಬ್ಯಾಡಿ 8 ಅಂತರಾತ್ಮದ ಪರಮಾತ್ಮನ ತಿಳಕೊಳ್ಳಿ ಸ್ವಾತ್ಮ ಸುಖದ ಸವಿ ಸೂರ್ಯಾಡಿಕೊಳಲಿಕ್ಕೆ 9 ಸ್ವಹಿತ ಸುಖದ ಮಾತು ಸಾಧಿಸಿಕೊಳಲಿಕ್ಕೆ ಮಹಿಪತಿ ಹೇಳಿದ ಮಾತು ಮನ್ನಿಸಿ ತಿಳಿಕೊಳ್ಳಿ 10
--------------
ಕಾಖಂಡಕಿ ಶ್ರೀ ಮಹಿಪತಿರಾಯರು