ಒಟ್ಟು 2441 ಕಡೆಗಳಲ್ಲಿ , 113 ದಾಸರು , 1820 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಗಾಯಿತ್ರಿ ಹಿರಿಮೆ ಹತ್ತು ರೂಪದ ಗಾಯಿತ್ರಿ ನಿನಗೆ ರಂಗದ ತಾನ ಹತ್ತು ರೂಪಗಳಲ್ಲಿ ಕುಣಿಯುತಿಹೆ ನೀನು ಹತ್ತು ಸಲವಾದರೂ ಗಾಯಿತ್ರಿ ಜಪಿಸದಿರೆ ನಿನ್ನಲ್ಲಿ ಭೂಸುರತೆ ಉಳಿಯುವದೆಂತು? 89 ತನ್ನಾಮದರ್ಥವೇ ವ್ಯಾಪ್ತಿರೂಪದ ಮೀನು ಅಮೃತಸವನದಕತದಿ ಕೂರ್ಮನಿಹೆ ನೀನು ಭೂವರಾಹನು ನೀನು ವರೇಣ್ಯನಾಮಕನು ಶತ್ರುಭರ್ಜನದಿಂದ ಭರ್ಗನಾಗಿರುವೆ 90 ಪ್ರಾಣವನು ಮೇಲೆತ್ತಿ ಅಪಾನವನು ಕೆಳಗಿರಿಸಿ ಮಧ್ಯದಲಿ ವಾಮನನು ದೇವ ನೀನಿರುವೆ&ಚಿmಠಿ;ಟಿ, bsಠಿ;91 ಮಹಿಯ ಭಾರವ ತೆಗೆದ ಪರಶುರಾಮನು ನೀನು ಪ್ರಾಣನ ಪ್ರೀತಿಕರ ರಾಮ ನೀನಿರುವೆ 92 ಕಲಿಯುಗದ ದೇವನೇ ಜ್ಞಾನರೂಪದ ಕೃಷ್ಣ ಬುದ್ಧ ನೀನಿರುವೆ ಧರ್ಮ ಪ್ರಸಾರಣಕೆ ಹಯವನ್ನು ಚೋದಿಸುವ ಕಲ್ಕಿನಾಮಕ ನೀನು ತಿಳಿದು ಜಪ ಮಾಡು 93 ಗಾಯನದಿ ರಕ್ಷಿಸುವೆ ಗಾಯಿತ್ರಿಯೇ ನಮಗೆ ಬ್ರಾಹ್ಮತೇಜವನುಳಿಸಿ ರಕ್ಷಿಪುದು ನಮ್ಮ ಗಾಧಿಪುತ್ರನು ತಾನು ಕ್ಷತ್ರಿಯನದಾದರೂ ಬ್ರಹ್ಮರ್ಷಿಯಾಗಿ ಬಾಳಿದನು ನಿಜವೈ 94 ಸಿರಿವರನೆ ನೀನು ಭಾಸ್ಕರನ ಮಂಡಲದಲ್ಲಿ ಕಮಲದಾಸನದಲ್ಲಿ ಶೋಭಿಸುತಲಿರುವೆ ಚಕ್ರ ಶಂಖ ಮಕರಕುಂಡಲಾದಿಗಳಿಂದ ಲೆನ್ನ ಹೃದಯಕೈತಂದು ನೆಲೆನಿಲ್ಲು 95 ನಿನ್ನ ಸೌವರ್ಣ ತೇಜದ ಬೆಳಕಿನಿಂದೆನ್ನ ಆತ್ಮದ ಜ್ಯೋತಿಯನು ಬೆಳಗಿಸುತ ನೀನು ನಿನ್ನನ್ನೆ ಹಂಬಲಿಪ ಭವಬಂಧ ತಪ್ಪಿಸುವ ನಿನ್ನ ಬಳಿಬರುವ ದಾರಿಯನು ತೋರಿಸೆಲಾ 96 ಗಾಯಿತ್ರಿಯ ಜ್ಯೋತಿ ನಂದದಂತಿರಲು ನಾನಷ್ಟಾಕ್ಷರಿಯ ಮಂತ್ರ ಜಪಿಸುವೆನು ನಾನು ವಿದ್ಯುತ್ತಿನದು ರಕ್ಷೆ ನಾರಾಯಣನ ಮಂತ್ರ ಅದರಿಂದ ರಕ್ಷಣೆಯ ಮಾಡುವೆನು ನಾನು 97 ಆತ್ಮರಕ್ಷಕನು ಹರಿ ದೇಹರಕ್ಷಕನು ಹರ ಹರನ ದೇಹವು ಪ್ರಕೃತಿಪಂಚಕದಿ ರಚಿತ ಆತ್ಮದಲ್ಲಿರುವಹಂಕೃತಿಗೊಡೆಯ ಹರ ಹರಿಹರರೇ ದೇಹಾತ್ಮ ರಕ್ಷಣೆಯ ಮಾಡಿ98 ವಿದ್ಯುತ್ತು ಬಿಳಿ ಕಪ್ಪು ಕೆಂಪು ನೀಲಿಗಳೆಂಬ ಐದು ಮುಖ ಹರನಿಗಿಹುದದರಿಂದ ನಾನು ಪಂಚಾಕ್ಷರಿಯ ಮಾಡಿ ಹರನನ್ನು ಧ್ಯಾನಿಸುವೆ ಧರ್ಮಾಯತನದ ದೇಹ ರಕ್ಷಣೆಯ ಮಾಳ್ಪೆ 99 ವೈರಿ ಮನದಲ್ಲೆ ಹುಟ್ಟಿದವ ಮನದೊಡೆಯ ರುದ್ರನನ್ನೇ ಹೊಡೆಯಲೆಂದು ಐದು ಬಯಕೆಗಳೆಂಬ ಬಾಣದಿಂ ಹೊಡೆಯುತಿರೆ ಕಾಮದಹನವ ಹೊಂದಿ ಬೂದಿಯಾದನವ 100 ಆ ಕಾಮನೇ ಮತ್ತೆ ಅಂಗಹೀನನದಾಗಿ ರುದ್ರನನ್ನರ್ಧನಾರೀಶ್ವರನ ಮಾಡಿ ಮನವನ್ನು ಕೆಡಿಸುತಲಿ ಮಾನವರೆಲ್ಲರನು ದುಃಖದಾ ಮಡುವಿನಲಿ ಕೆಡಹುವನು ನಿಜದಿ 101 ದೇಹಸೃಷ್ಟಿಗೆ ಮೂಲ ಮಣ್ಣು ತೇಜವು ನೀರು ಈ ಮೂರು ಮೂರುವಿಧವಾಗಿ ಪರಿಣಮಿಸಿ ಪಾಲನೆಯು ನಡೆಯುವದು ದೇವರಿಂದಲೇ ಇದನು ಉಪನಿಷತಿನಾಧಾರದಿಂದ ಪೇಳುವೆನು 102 ಭಕ್ಷ್ಯಭೋಜ್ಯವು ಲೇಹ್ಯ ಪೇಯವೆಂಬೀ ನಾಲ್ಕು ಪ್ರಾಣದಾಹುತಿಯನ್ನು ನಾವು ಕೊಡುತಿಹೆವು ಅದರಿಂದ ಪಾಕವನು ಮಾಡುತ್ತ ದೇವನವ ಸಪ್ತಧಾತುಗಳನ್ನು ಮಾಡಿ ರಕ್ಷಿಸುವ 103 ತೇಜವದು ವಾಗ್ರೂಪ ತಾಳುವದು ಮತ್ತದುವೆ ಅಸ್ಥಿಮಜ್ಜಗಳಾಗುವವು ನಿಜವ ಪೇಳ್ವೆ ವೈದ್ಯಕೀಯಪರೀಕ್ಷೆಗೊಳಗಾಗಿ ತಿಳಿವೆ ನೀನ್ ಶ್ರುತಿತತ್ವವೆಂದೆಂದು ಸಾರುತಿಹುದಿದನೆ 104 ಮಣ್ಣಿನನ್ನವೆ ಮೊದಲು ಮನವಾಗಿ ಮತ್ತದುವೆ ಮಾಂಸ ರೂಪವ ತಾಳಿ ಮಲವದಾಗುವುದು ನೀರೆ ಮುಖ್ಯ ಪ್ರಾಣ ಮತ್ತೆ ಶೋಣಿತವಾಗಿ ಮೂತ್ರರೂಪವ ತಾಳಿ ಹೊರಗೆ ಹೋಗುವುದು 105 ಸ್ವೇದಜೋದ್ಭಿಜ್ಜ ಮತ್ತಂಡಜ ಜರಾಯುಜಂಗಳು ಎಂಬ ನಾಲ್ಕು ವಿಧ ಜೀವಜಂತುಗಳು ನಾರಾಯಣನು ತಾನು ಜಲವಾಸಿಯಾಗುತಲಿ ಜೀವಜಂತುಗಳನ್ನು ಸೃಷ್ಟಿ ಮಾಡುವನು 106 ನಿನ್ನ ಗುಣದೋಷಗಳ ಪರರೆಂಬ ದರ್ಪಣದಿ ನೋಡಿದರೆ ತೋರುವವು ನಿನ್ನವೇ ತಿಳಿಯೈ ಪರರಲ್ಲಿ ಕಾಣುತಿಹ ದೋಷಗಳನು ತೊರೆಯುತ್ತ ಗುಣಗಳನು ಎಣಿಸುವವ ಲೋಕಮಾನ್ಯ 107 ಊಧ್ರ್ವಮೂಲದ ದೇವನೂಧ್ರ್ವದ ಹಿಮಾಲಯದೊ ಳುತ್ತುಂಗ ನಾರಾಯಣಪರ್ವತದಲಿ ತಾರಕನು ರಾಮನಂತೆಲ್ಲ ನರರನು ತನ್ನ ಬಳಿಗೆ ಕರೆದೊಯ್ಯಲ್ಕೆ ಮೇಲೆ ನಿಂತಿರುವ 108 ಮಧ್ವಗುರುಹೃದಯಭಾಸ್ಕರನು ನಾರಾಯಣನು ಬದರಿಯೊಳಿಹ ನೆಲೆಗೆ ಕರೆಯಿಸುತಲೆಮ್ಮನ್ನು ಸೇವೆಯನು ಕೈಕೊಂಡು ಭಾವಗತನಾಗಿದ್ದು ಪ್ರೇರಿಸಿದನೀಕೃತಿಗೆ ಪ್ರಕೃತಿ ಪರಮಾತ್ಮ&ಚಿmಠಿ;ಟಿbs, ಠಿ; 109 ಆತ್ಮದಲಿ ಒಳಗಿದ್ದು ಅಂತರಾತ್ಮನು ನೀನು ಆತ್ಮದ ಬಹಿರ್ಗತನು ಪರಮಾತ್ಮ ನೀನು ದೇಹದಿಂ ಹೊರಗಿದ್ದು ಕಾಲಾತ್ಮಕನು ನೀನು ನೀನಿಲ್ಲದಿಹ ದೇಶಕಾಲವೆಲ್ಲಿಹುದು? 110 ಮೂರು ನಾಮಗಳಿಹವು ಶ್ರೀನಿವಾಸನೆ ನಿನಗೆ ಅವುಗಳನು ನೆನೆದರೇ ಪಾಪ ಪರಿಹಾರ ಅಚ್ಯುತಾನಂತಗೋವಿಂದನೆನ್ನುವ ನಾಮ ಕೃತದೋಷ ಪರಿಹಾರಕಾಗಿ ಜಪಮಾಳ್ಪೆ 111 ಮಧುರಾಖ್ಯನಾಮವನು ಹಿಂದು ಮುಂದಾಗಿಸುತ ಮಧ್ಯದಕ್ಷರವನ್ನು ಕೈಯಲ್ಲಿಯಿರಿಸು ನಾಮಜಪ ಮಾಡದಿರೆ ಅವನ ಮುಖಕೆಸೆದು ನೀ ನನವರತ ಜಪಮಾಡಿ ಸಿದ್ಧಿಪಡೆ ಮನುಜಾ 112 ಅಣುವಿಂದ ಅಣುವಾಗಿ ಮಹದಿಂದ ಮಹತ್ತಾಗಿ ನಿನ್ನ ದರುಶನವು ಜನರಾರಿಗೂ ಇಲ್ಲ ಮಧ್ಯಕಾಲದಿ ಮಾತ್ರ ದರುಶನವು ವಸ್ತುವಿಗೆ ಅವತಾರ ರೂಪಗಳೆ ಪೂಜಾರ್ಹವಿಹವು 113 ಎಲ್ಲರೂ ಶ್ರೀಹರಿಯ ನೆಲೆಯೆಂದು ನೀನರಿತು ಮಮತೆಯಿಂ ನೋಡುತಲಿ ಸುಖವನನುಭವಿಸು ಹೊಲೆಯನಾದರು ನಿನ್ನ ನಂಬಿ ಮರೆಹೊಕ್ಕಿದರೆ ಕೈಬಿಡದೆ ನೀನವನ ರಕ್ಷಿಸಲೆ ಮನುಜಾ 114 ಹಲವಾರು ಜಾತಿಗಳು ಹಲವಾರು ಮತಗಳಿಹ ವವುಗಳಿಗೆ ಮೂಲಮತ ವೇದಮತವೊಂದೆ ಬೈಬಲ್ ಖುರಾನ್ ಮೊದಲಾದ ಪೆಸರಿಂದದುವೆ ಲೋಕದಲ್ಲೆಲ್ಲು ಪಸರಿಸುತಲಿಹವು 115 ಭವಬಂಧನವ ಕಳೆದು ತನ್ನ ಬಳಿಗೊಯ್ಯುವವ ನೀನಲ್ಲದಿನ್ನಾರು ಹರಿಯೆ ಶ್ರೀರಾಮ ಸಾಂತಾನಿಕದ ಲೋಕಕೊಟ್ಟು ರಕ್ಷಿಸಿದ ಹರಿ ತಾರಕನು ನೀನಿರುವೆ ನೀನೆ ಗತಿ ದೊರೆಯೆನಗೆ 116 ಪರಶುರಾಮನ ರೂಪದಿಂದ ನೀಂ ತಪಗೈದ ಪಾಜಕ ಕ್ಷೇತ್ರದಲಿ ಭಕುತನವತರಿಸೆ ಜ್ಞಾನರೂಪದಿ ನೀನು ಅವನ ಹೃದಯವ ಹೊಕ್ಕು ಮಧ್ವಮತವನು ಜಗದಿ ದೇವ ಪಸರಿಸಿದೆ 117 ಮಿನುಗು ಹುಳಗಳ ಸೃಜಿಸಿ ಬೆಳಕನದರಲ್ಲಿರಿಸಿ ಕಗ್ಗತ್ತಲೆಯ ಕಾಡುಗಳಲಿ ರಕ್ಷಿಸುವೆಯೊ ಅಂತೆಯೇ ನಮ್ಮ ದೇಹದೊಳಗಿದ್ದು ನೀನ್ ಪ್ರತಿಬಿಂಬ ಜೀವವನು ರಕ್ಷಿಸುವೆ ದೇವಾ 118 ಪರಶುರಾಮನು ರಾಮ ಪರಶುರಾಮನು ಕೃಷ್ಣ ನರನು ನಾರಾಯಣನು ವ್ಯಾಸ ಮೊದಲಾಗಿ ಒಂದಾಗಿ ಬೇರೆಯಾಗಿಯೆ ರೂಪ ತಾಳುತ್ತ ಭಕ್ತರಕ್ಷಕನಾಗಿ ದುಷ್ಟವಂಚಕನು 119 ಇಂದ್ರಿಯಂಗಳ ಹೊರಮುಖವಾಗಿ ಸೃಷ್ಟಿಸಿದೆ ಹೃದಯಗುಹೆಯಲ್ಲಿರುವೆ ಕಾಣುವುದದೆಂತು? ಮನದಬಾಗಿಲ ತೆರೆದು ಅಂತರ್ಮುಖದಿ ನೋಡೆ ಪ್ರತ್ಯಗಾತ್ಮನು ನೀನು ಕಾಣುವದು ನಿಜವು 120 ಕುರುಡನಾಗಿಹೆ ನಾನು ಕುರುಡು ಇಂದ್ರಿಯಂಗಳಿಂ ತೋರುಬೆರಳಿಂದ ತೋರಿಸಲು ಬಯಸಿದೆನು ನನಗೆ ಅಂಜನಹಾಕಿ ತೋರು ನಿನ್ನ ಜ್ಯೋತಿ ವಿಶ್ವತಶ್ಚಕ್ಷು ಪರಮಾತ್ಮ ಶರಣೆಂಬೆ 121 ಕೋಟಿ ಗೋದಾನಕ್ಕೂ ಮಿಗಿಲಾಗಿ ಪುಣ್ಯಕರ ನಿನ್ನ ನಾಮದ ಜಪವು ತಾರಕನು ನೀನು ತಿಳಿದ ಗುಣಸಾಗರದ ಹನಿಗಳನು ಹೆಕ್ಕಿ ನಾನ್ ನುತಿಸಿದೆನು ನಿನ್ನನ್ನು ಮುಕ್ತಿದಾಯಕನೆ 122 ಸುಗುಣೇಂದ್ರ ಮೊದಲಾದ ಯತಿವರರ ಪೂಜೆಯಿಂ ಜ್ಞಾನರೂಪದ ನೀನು ಸಂತಸವ ತಾಳಿ ಜ್ಞಾನಭಂಡಾರಿ ಯತಿವರರಿಗೆಲ್ಲರ್ಗೆ ಜ್ಞಾನಾಮೃತವ ಕೊಟ್ಟು ರಕ್ಷಿಸುವೆ ಹರಿಯೇ 123 ಭವದಿ ಬಂಧಿಸಿಯೆನ್ನ ಭಾವಗತನಾಗಿದ್ದು ದುಷ್ಕರ್ಮ ಮಾಡಿಸುತ ಫಲ ಕೊಡುವದೇಕೆ? ಎನ್ನ ಕೈಯಿಂದೆತ್ತಿ ಬಳಿಗೆ ಕರೆದೊಯ್ಯು 124 ಉಚ್ಛ್ವಾಸ ನಿಶ್ವಾಸ ರೂಪದಿಂದೊಳಹೊಕ್ಕು ಆತ್ಮ ಸಂದರ್ಶನವ ಮಾಡುತ್ತ ವಾಯು ಇಪ್ಪತ್ತಒಂದುಸಾಸಿರ ಮತ್ತೆ ಆರ್ನೂರು ಹಂಸಮಂತ್ರದ ಜಪವ ಮಾಡುವನು ದಿನಕೆ 125 ಪರಶುರಾಮನು ರಾಜರೆಲ್ಲರನು ಸಂಹರಿಸಿ ಭೂಮಿಯನು ನಕ್ಷತ್ರಮಂಡಲವ ಮಾಡಿ ವಿಶ್ವಜಿತ್‍ಯಾಗದಲಿ ಕಶ್ಯಪರಿಗೀಯಲದ ಕಾಶ್ಯಪಿಯ ನಾಮವನು ಭೂಮಿ ಪಡೆಯಿತಲಾ 126 ಕಶ್ಯಪರ ತಪದಿಂದ ರಾಜರಿಲ್ಲದ ಭೂಮಿ ಭಾರದಿಂ ಕೆಳಗಿಳಿಯೆ ಊರುವಿಂದೆತ್ತಿ ಅವಳ ಮೊರೆ ಕೇಳಿ ರಾಜವಂಶವನ್ನುದ್ಧರಿಸೆ ಉರ್ವಿನಾಮವ ಪಡೆಯಿತು ಭೂಮಿ ನಿಜವು 127 ವ್ಯಾಸಪುತ್ರನದಾಗಿ ವ್ಯಾಸಪಿತ ನಾನಾಗಿ ವ್ಯಾಸಭವನದ ಒಳಗೆ ಭದ್ರನಾಗಿದ್ದೆ ಈ ಭವನದಿಂದೆನ್ನ ನಿನ್ನ ಭವನಕೆ ಒಯ್ಯು ಅಮೃತಲೋಕದಿ ನಿನ್ನ ಸೇ, ವೆ ಗೈಯ್ಯುವೆನು 128 ರಾಧಿಕಾರಮಣನೆ ಮಧುರಾಪುರಾಧಿಪತಿ ದಾನವಾಂತಕ ಕೃಷ್ಣ ಸತ್ಯಸ್ವರೂಪ ವಿಶ್ವಜ್ಞ ಪೂಜಿತನೆ ರಕ್ಷಿಸೆನ್ನನು ಹರಿಯೇ ಚಿತ್ತದಲಿ ನೆಲೆನಿಲ್ಲು ತಂದೆ ಕಾಪಾಡು 129 ಇಂದ್ರಾಣಿ ತಪಗೈದ ತಾನದಲಿ ಚ್ಯವನಮುನಿ ವೇದಾದ್ರಿ ಎಂಬಲ್ಲಿ ತಪಗೈಯುತ್ತಿದ್ದ ಸ್ವರ್ಣವರ್ಣವನ್ನಿತ್ತು ಕಣ್ಣಿತ್ತ ಸ್ವರ್ಣನದಿ ಹರಿಯುತಿಹುದಿಲ್ಲಿಯೇ ಈಗಲೂ ನಿಜವು 130 ಪ್ರಕೃತಿ ಪ್ರಕೃತಿಯ ಭೇದ ಪ್ರಕೃತಿ ಜೀವದ ಭೇದ ಜೀವ ಜೀವಗಳ ಭೇದ ಮೂರನೇಯದು ಜೀವೇಶ ಭೇದವದು ಪ್ರಕೃತೀಶ ಭೇದವೆಂ ದಿಹವು ಪ್ರಪಂಚದಲಿ ಪಂಚಭೇದಗಳು 131
--------------
ನಿಡಂಬೂರು ರಾಮದಾಸ
ಗಿರಿರಾಜಕುಮಾರಿ ದೇವಿಪರಮ ಮಂಗಳಗೌರಿಪರಮ ಪಾವನೆ ಶ್ರೀಹರಿ ಸೋದರಿಸುರರಿಪು ಮಧುಕೈಟಭ ಸಂಹಾರಿಶ್ರೀಕರಿ ಗೌರಿ ಹಸೆಗೇಳು ಹಸೆಗೇಳು 1 ಕುಂಭಸಂಭವವಿನುತೆ ದೇವೀಶಾಂಭವಿ ಶುಭಚರಿತೆಜಂಭಭೇದಿ ಮುಖ ಸುರವರಪೂಜಿತೆಕಂಬುಕಂಠಿ ಶುಭಗುಣಗಣ ಶೋಭಿತೆಲೋಕೈಕಮಾತೆಹಸೆ2 ಸರಸಿಜದಳನಯನೆ ದೇವಿಸರಸಕುಂದರದನೆಸರ್ವಮಂಗಳೆ ಸರ್ವಾಭರಣೆಸುರಮುನಿ ಪರಿಭಾವಿತೆ ಶುಭಚರಣೆಕರಿರಾಜಗಮನೆ ಹಸೆ 3 ನಿರ್ಜರ ಪರಿವಾರೆಮಣಿಮಯಹಾರೆ ಹಸೆ4 ಪನ್ನಗನಾಭವೇಣಿ ದೇವಿಸುನ್ನತೆ ರುದ್ರಾಣಿ ಕನ್ನಡಿಗದಪಿನ ಶಿವೆ ಶರ್ವಾಣಿಲೋಕೈಕ ಜನನಿ ಹಸೆ 5 ಶುಭ ಲೀಲೆಮೃಗಮದ ತಿಲಕ ವಿರಾಜಿತೆ ಪಾಲೆಕುಂಕುಮನಿಟಿಲೆ ಹಸೆ 6 ಪಂಕಜ ಸಮಪಾಣಿ ಶ್ರೀ ಹರಿ-ಣಾಂಕವದನೆ ವಾಣಿಅಂಕಿತಮಣಿಗಣ ಭೂಷಣ ಭೂಷಣಿಶಂಕರೀ ಕೆಳದಿಪುರವಾಸಿನಿಪಾರ್ವತಿ ಕಲ್ಯಾಣಿ ಹಸೆ 7
--------------
ಕೆಳದಿ ವೆಂಕಣ್ಣ ಕವಿ
ಗಿರಿಶಾ ಗೌರೀಪ್ರಾಣಾಧೀಶ ಜಯ ಜಯದುರಿತ 'ನಾಶ ಮಹೇಶ ಪದಕ್ಷಯಜ್ಞ 'ಧ್ವಂಸಕಾರಿ ಸುರಪಕ್ಷಪಾತಿ ಕಾಮಾರಿ ದುಃಖಹರ 1ಘೋರಪಾಪ ಸಂದೋಹನಾಶನಭೂರಿ ದಯಾಳೋ ಭೋಗಿಭೂಷಣ 2ಈಶಗಿರೀಶ ಧನೇಶ್ವರ 'ುತ್ರಕಾಶೀಶ್ವರ ಸುರಸನ್ನುತಿ ಪಾತ್ರ 3ವಾಸವಾದಿನುತ ದುಷ್ಟಭಯಂಕರವೇಷ ಜಟಾಧರ ಚಂದ್ರಶೇಖರ 4ಕಲಭಪ್ರೌಢ ಮಹಾನಾಟ್ಯೇಶ್ವರಆ'ಮುಕ್ತೇಶ್ವರ ಪ್ರಮಥ ಗಣೇಶ್ವರ 5ಕಾಳಿಂದೀಪ್ರಿಯ ಕಮಲನಯನಸಖಕಾಲಕಾಲ ಕಾಲಾಗ್ನಿ ಪಂಚಮುಖ 6ನೀಲಕಂಠ ನಿಖಿಲಾಮರ ರಕ್ಷಕಫಾಲಚಂದ್ರ ಸಂಸೃತಿ 'ಷಭಕ್ಷಕ 7ಶಾಂತಮೂರ್ತಿವರಕಾಂತಿ ಗುಣಪ್ರಿಯಶಾಂತಿದಾಯಕಾ ಶಾಂತ ಸಂಶಯ 8ಕುಂಭಜಾತ ನುತನಟನ'ಲಾಸಶಂಭು ಹರ ಚಿದಾಕಾಸ ನಿವಾಸ 9
--------------
ಹೊಸಕೆರೆ ಚಿದಂಬರಯ್ಯನವರು
ಗುಬ್ಬಿಯಾಳೊ ಗೋವಿಂದ ಗೋವಿಂದಾ ಗೋವಿಂದ ಗೋವಿಂದಾನೆಂದು ನೆನಯಿರೊ ಗುಬ್ಬಿಯಾಳೊ ಪ. ಕ್ಲೇಶ ಪರಿಹಾರವು ಗುಬ್ಬಿಯಾಳೊ ನಾರಾಯಣನ ಧ್ಯಾನದಿಂದ ನರಕಭಯವಿಲ್ಲವೊ ಗುಬ್ಬಿಯಾಳೊ 1 ಮಾಧವನ ನೆನೆದರೆ ಮನೋಭೀಷ್ಟ ಕೊಡುವೊನು ಗುಬ್ಬಿಯಾಳೊ ನಾಶನವು ಗುಬ್ಬಿಯಾಳೊ 2 ವಿಷ್ಣುಭಜನೆಯಿಲ್ಲದವಗೆ ವೈಷ್ಣವರ ಜನ್ಮವುಂಟೆ ಗುಬ್ಬಿಯಾಳೊ ಇಹುದೊ ಗುಬ್ಬಿಯಾಳೊ 3 ತ್ರಿವಿಕ್ರಮನ ನೆನೆದರೆ ಸಾವಿತ್ರಿಯಾಗಿಹರೊ ಗುಬ್ಬಿಯಾಳೊ ವಾಮನದೇವರು ನಮಗೆ ವರಗಳ ಕೊಡುವೋರು ಗುಬ್ಬಿಯಾಳೊ 4 ಸಿರಿ ನಮಗೆ ಒಲಿವಳೊ ಗುಬ್ಬಿಯಾಳೊ ಹೃಷೀಕೇಶನ ಧ್ಯಾನದಿಂದ ಹೃದಯ ಪರಿಶುದ್ಧವೊ ಗುಬ್ಬಿಯಾಳೊ 5 ಪದ್ಮನಾಭ ನಮ್ಮೆಲ್ಲರ ಪಾಲಿಸಿ ರಕ್ಷಿಪನೊ ಗುಬ್ಬಿಯಾಳೊ ದಾಮೋದರನ ನೆನೆದರೆ ಪಾಮರತ್ವ ಬಿಡಿಸುವನೊ ಗುಬ್ಬಿಯಾಳೊ 6 ಸಂಕರ್ಷಣನ ಧ್ಯಾನದಿಂದ ಸಂತಾನ ಅಭಿವೃದ್ಧಿಯು ಗುಬ್ಬಿಯಾಳೊ ವಾಸುದೇವನ ದಯದಿಂದ ವಂಶಉದ್ಧಾರವೊ ಗುಬ್ಬಿಯಾಳೊ 7 ಪ್ರದ್ಯುಮ್ನನ ನೆನೆದರೆ ಭೂಪ್ರದಕ್ಷಿಣೆ ಫಲವು ಗುಬ್ಬಿಯಾಳೊ ಅನಿರುದ್ಧನ [ಸೇವಿಸೆ ಪುನೀತರಹೆವೊ] ಗುಬ್ಬಿಯಾಳೊ 8 ತಿಳಿಯಿರೊ ಗುಬ್ಬಿಯಾಳೊ ಅಧೋಕ್ಷಜ ನಮ್ಮೆಲ್ಲರಿಗಾಧಾರವಾಗಿಹನೊ ಗುಬ್ಬಿಯಾಳೊ 9 ನಾರಸಿಂಹದೇವರು ನಮ್ಮ ಕುಲದೈವವೊ ಗುಬ್ಬಿಯಾಳೊ ಅಚ್ಯುತ ಲಕ್ಷ್ಮಿಯ ಕೂಡಿ ಸಚ್ಚಿದಾನಂದನೊ ಗುಬ್ಬಿಯಾಳೊ 10 ಜನಾರ್ದನದೇವರು ಜಗಕೆಲ್ಲ ಶ್ರೇಷ್ಠರೊ ಗುಬ್ಬಿಯಾಳೊ ಕ್ಷಮಿಸುವನೊ ಗುಬ್ಬಿಯಾಳೊ 11 ಹರಿನಾಮಾಮೃತಕೆ ಸರಿಧರೆಯೊಳಗೆ ಇಲ್ಲವೊ ಗುಬ್ಬಿಯಾಳೊ ಶ್ರೀಕೃಷ್ಣ ರಂಗೇಶಯೆಂಬೊ ಸಿದ್ಧಕ್ರಿಯ ಬಲ್ಲರೆ ಗುಬ್ಬಿಯಾಳೊ12 ಈ ಗುಬ್ಬಿ ಪಾಡುವರಿಗೆ ಇಹಪರವು ಸಂತತವು ಗುಬ್ಬಿಯಾಳೊ ಧರಣಿಯೊಳು ಆಚಂದ್ರಾರ್ಕ ತಾರಕವಾಗಿಹರು ಗುಬ್ಬಿಯಾಳೊ 13 ನಿತ್ಯ ಮರೆಯದೆ ನೀ ನೆನೆಮನವೆ ನಿತ್ಯ ಮನವೆ ಗುಬ್ಬಿಯಾಳೊ 13
--------------
ವಾದಿರಾಜ
ಗುರು ನಾರಪ್ಪಯ್ಯನ ಚರಣಕಮಲಯುಗ್ಮ ಮಾನವ ಪ ನಿರುತ ಸ್ಮರಿಸುವ ಶರಣು ಜನರಘ- ತರಿದಭೀಷ್ಠೆಯ ಗರಿಯಲೋಸುಗ ಧರಣಿ ವಲಯದಿ ಮೆರೆವ ವೆಂಕಟ ಗಿರಿಯ ರಮಣನ ಕರೆದು ತಂದಿಹ ಅ.ಪ ಧರೆಸುರರೊಳು ಜನಿಸಿರಲು ಭ್ರಾತ್ರರುನಾನಾ ಪರಿಬಾಧಿಸಲು ಸಹಿಸಿ ಚರಣ ಯಾತ್ರೆಯಲಿಂದ ಗಿರಿಯಕಾಣುತ ಮಲಗಿರಲು ಸ್ವಪ್ನದಿಸೂಚಿಸಿ ಧರಣಿ ದೇವನೆ ನಿನಗೆ ದರುಶನ ಕೊಡಲು ನಾ ಬರುವೆನೆಂದಾಜ್ಞಾಪಿಸಿ ಭಕ್ತನನುಸರಿಸಿ ತುರುಸ್ವರೂಪವ ಧರಿಸಿ ಬರುತಿರೆ ಕುರಿಕಿಹಳ್ಳಿಯ ಗ್ರಾಮದಿಂದಲಿ ತರುವರಾಶ್ವತ್ಥದಲಿ ಸಲೆ ಪಾಲ್ಗರಿದ ದೇವನ ಕರೆದು ತಂದಿಹ 1 ನಾರಾಯಣಾರ್ಯರು ಕಾರ್ಪರಾರಣ್ಯದಿ ಆರಾಧಿಸುತಲಿರುತ ಆರಾರು ಭಕುತರು ಗೋಧನ ಧಾನ್ಯದಿ ಸಾರಾವಸ್ತುಗಳೀಯುತ್ತ ಗೋರಕ್ಷಣವ ಮಾಡಿರೆನುತ ತಮ್ಮಯ ಬಂಧು ಬಾಲಕರಿಗೆ ಪೇಳುತ್ತ ಭಯ ಬ್ಯಾಡಿರೆನುತ ಚಾರು ಶಿಲೆಯೊಳಗೊಂದು ದಿನ ಅಂಗಾರದಲಿ ಶ್ರೀ ಭಾರತೀಶನ ಮೂರುತಿಯ ಬರೆದೀತ ಭಯ ಪರಿ- ಹಾರಕನು ನಿಮಗೆಂದು ಪೇಳಿದ 2 ಧರಣಿ ಪಾಲಕನಿಂದ ನಿರ್ಮಿತಮಾದ ಬಂ- ಧುರ ನಿಲಯದಿ ರಾಜಿತ ತರುಮೂಲದೊಳಗವ- ತರಿಸಿ ಷೋಡಶ ಸಂಖ್ಯ ಕರಗಳಿಂದಲಿ ಶೋಭಿತ ವರ ಕೃಷ್ಣಾ ಜಲದೊಳಗಿರುವ ಪ್ರತಿಮೆಯ ತಂದು ತರು ಬಳಿಯಲಿ ಸ್ಥಾಪಿತ ಶ್ರೀಭೂಸಮೇತ ಮೂರ್ತಿ ನಿರುತ ಪೂಜೆಯಕೊಳುತ ಧರೆಯೊಳು ಶರಣು ಜನರನು ಪೊರೆವ ಕಾರ್ಪರ ನಿಲಯ'ಸಿರಿನರ ಹರಿ'ಯನೊಲಿಸಿದ3
--------------
ಕಾರ್ಪರ ನರಹರಿದಾಸರು
ಗುರು ರಾಘವೇಂದ್ರ ವಿಠಲ | ಪೊರೆಯ ಬೇಕಿವಳಾ ಪ ದುರಿತ ದುಷ್ಕøತ ಕಳೆದು | ವೈರಾಗ್ಯ ಕೊಡುತಾಅ.ಪ. ಪ್ರಾಚೀನ ದುಷ್ಕರ್ಮ | ಮೋಚಕೇಚ್ಛೆಯ ಮಾಡಿಕೀಚಕಾರಿಯ ಮತದಿ | ದೀಕ್ಷೆಯನೆ ಕೊಟ್ಟುನೀಚೋಚ್ಛ ತರತಮವೆ | ವಾಚಿಸುತ ಇವಳಲ್ಲಿವಾಚಾಮಗೋಚರನ | ಭಕ್ತಿಯನೆ ಕೊಡುತಾ 1 ಸಾಧುಸಂಗವ ಕೊಟ್ಟು | ಸಾಧನೆಯ ಗೈಸುವುದುಯಾದವೇಶನ ಪ್ರೀತಿ | ಸಾಧನೆಯ ಗುರಿಯಾಮಾಧವನೆ ಪರನೆಂಬೋ ಬೋದ ಸಂತತಕೊಟ್ಟುಕಾದುಕೋ ಶ್ರೀಹರಿಯೆ | ಬಾದರಾಯಣನೆ 2 ಸರುವ ಕರ್ಮಗಳೆಲ್ಲ ಹರಿ ಮಾಡಿ ಮಾಡಿಸುವಬರುವ ತತ್ಸುಖ ದುಃಖ | ಸಮತೆಯಲಿ ಎಂಬಾವರಮತಿಯ ಕರುಣಿಸುತ | ಪರಿಹರಿಸು ಭವಬಂಧಕರುಣಾಳು ಗುರುರೂಪಿ | ಪೊರೆಯ ಬೇಕಿವಳಾ 3 ಮನಸೀನ ಚಾಂಚಲ್ಯ | ವನೆ ನೀನು ಕಳೆಯುತ್ತಕ್ಷಣಕನಂತಪರಾಧ | ಎಣಿಸದಲೆ ಹರಿಯೆದೀನನಾಥನಾದ ಹರಿ | ಜ್ಞಾನ ದಂಕುರವಿತ್ತುಘನ ದಯಾವಾರಿಧೇ | ಪೊರೆಯ ಬೇಕಿವಳಾ 4 ವ್ರಜ ಕುಂದ ವರದ ಹರಿಯೇನೊಂದವಳಿಗಾನಂದ | ಸಂಧಿಸಲು ಪ್ರಾರ್ಥಿಸುವೆಇಂದಿರಾರಾಧ್ಯ ಗುರು | ಗೋವಿಂದ ವಿಠಲಾ 5
--------------
ಗುರುಗೋವಿಂದವಿಠಲರು
ಗುರು ಶ್ರೀಶಪ್ರಾಣೇಶವಿಠಲರ ಹಾಡು ಶ್ರೀಶ ಪ್ರಾಣೇಶ ವಿಠಲ ದಾಸಾರ್ಯನೆ |ಹ್ರಾಸಿಸೋ ದೋಷ ಕುಟಿಲ |ಭಾಷಾವರ್ಜಿತ ಗುಪ್ತಘೋಷ ನಂಬಿದೆ ನಿನ್ನ |ದಾಸರೊಳಗೆಣಿಸೆನ್ನ ಪೋಷಣ ಕರ್ತೆನೆ ಪ ಪಾದ |ಘಟಸೆನಗಭಯವ | ಪಟುತರಂಕಿತ ಗುರುಪ್ರಾಣೇಶ |ವಿಠಲದಾಸವರ್ಯರ ದ್ವಾರದಿ ||ಧಟದಿ ಪಡೆದಲೆಲೋಕ ಖ್ಯಾತದಿ |ಚಟುಲ ಜ್ಞಾನಾನಂದ ಭೂಷಣ 1 ಅನ್ಯ ಬಯಕೆಯ ಬಿಡಿಸಿ | ನಿನ್ನಯ ಸ್ಮರಣೆ |ಪುಣ್ಯ ಪಥವ ಪಿಡಿಸಿ | ಧನ್ಯನ ಮಾಡೊ ಸಂ |ಪನ್ನ ಗುಣಾರ್ಣ ಸೌ | ಜನ್ಯ ಪರಾತ್ಪರ ಪೂರ್ಣ ಸುಲಕ್ಷಣ ||ಪೀಡಿಸುವ ದುವ್ರ್ಯಸನ | ಕಳದೆ ನ್ನಾಡಿಸೈ ಸರ್ವಜ್ಞ ಮತದಲಿ |ಬೇಡಿಸೈ ಗುರುದಾಸ ಭಾಗ್ಯವು |ಕೊಡಿಸೈ ತವ ಶಿಷ್ಯ ವರ್ಗದಿ 2 ತ್ರಿಕಾಲದಲಿ ಕರ್ನವು | ವಾಕಿಸುವ ತೆರದಿ ನೀವು |ಲೋಕೋಪಕಾರಲೋಸುಗದಿ | ಲೋಗರನ್ನೆಲ್ಲ |ಸಾಕಂತ ಸೇವಿಪೆ | ವಾಕ್ಪತಿ ಜನಕನ |ಗಣ್ಯಗಾಣಿನು ನಿನ್ನ ಅನುಗುಣ್ಯ ಗುಣಕತಿ |ಘನ್ನ ಗುರು ಶ್ರೀಶ, ಪ್ರಾಣೇಶ ವಿಠಲ ಕಿಂಕರನಾಗಿ ಬಾಳ್ದೆ |ಪುಣ್ಯ ಶಿಲಾಗ್ರಗಣ್ಯಧೀರ 3
--------------
ಶ್ರೀಶಪ್ರಾಣೇಶವಿಠಲರು
ಗುರುರಾಯ ನೀ ಎನ್ನ ತವರ ಮನಿ | ಶರಣರಿಗೆ ಕೈವಲ್ಯದಾನಿ ಪ ಗುರುವೆ ಎನ್ನ ಬಂಧು | ಬಂದು ಪೇಳಿರಿ ವಾಕ್ಯ ಎನಗೊಂದು | ಬಿಡಿಸೀದಿ ಈ ಜೀವಶಿವ ಸಂದು | ನಿಜರೂಪ ತೋರಿದಿ ಕೃಪಾಸಿಂಧು 1 ಶಮ ದಮವು ಕೊಡುತಾನೆ |ಅಂತರ ಬಾಹ್ಯದಲಿ ತಾ ತುಂಬ್ಯಾನೆ 2 ಇರಲಾರೆನು ಬಿಟ್ಟು ಅರಕ್ಷಣಾ | ಗುರುರಾಯ ಎನ್ನಜೀವದ ಪ್ರಾಣ | ದೊರಕಿದಿ ಪರಮವೇ ದಾನಸಾರಿ ಪೇಳುವ ಜ್ಞಾನಬೋಧ ಪೂರ್ಣ 3
--------------
ಜ್ಞಾನಬೋದಕರು
ಗುರುರಾಯ ನೀನೆ ಧ್ವರೀ ! ಧ್ವರೀ ! ಪ ಪರಮ ಭಾಗವತರ ನೀ ಮರೆಯದೆ ಪೊರೆವಂಥ ಅ.ಪ ಪರಮ ಭಕ್ತರು ನಿನ್ನ ಕರೆಯಲಾಕ್ಷಣ ಬಂದು ಪರಿಪರಿ ಸುಖಗಳ ಮರೆಯದೆ ಕೊಡುವಂಥ 1 ಶರಣ ಜನರಪ - ಮರಣ ಕಳೆದು ಸ್ಥೂಲ ಹರಣರಕ್ಷಿಸಿ ಸುಖ - ಅರಣದಲ್ಲಿಡುವಂಥ 2 ಅನ್ಯರಿಗಳವಡದ - ಘನ್ನ ಮಹಿಮನೆ ನಿನ್ನ ಮನ್ನದಿ ಭಜಿಪ ಜನರ - ಚನ್ನವಾಗಿ ಪೊರೆವಂಥ 3 ರಾಜ ಚೋರ ವ್ಯಾಘ್ರ - ರಾಜ ವೃಶ್ಚಿಕ ಸರ್ಪ ರಾಜಿ ನಕÀ್ರದ ಭಯ - ಮಾಜಿಸಿ ಪೊರೆವೊನಿಂಥಾ 4 ಭೂತಳದೊಳಗತಿ - ಖ್ಯಾತನಾಗಿ ಸದಾ ದಾತ ಗುರು ಜಗನ್ನಾಥ ವಿಠಲ ನೊಲಿಸಿದಂಥ 5
--------------
ಗುರುಜಗನ್ನಾಥದಾಸರು
ಗುರುವರನನು ಭಜಿಪೆ ಶ್ರೀ ಶೃಂಗೇರಿ ಗುರುವರನನು ಭಜಿಪೆ ಪಪರಮ ಪಾವನನಾದ ಗೂಢತತ್ವವನೊರೆವನರಸಿಂಹಭಾರತಿ ಗುರುವರನನು ಭಜಿಪೆ ಅ.ಪಸ್ವರ್ಣಪೀಠದಿ ಕುಳಿತು ಸ್ವರ್ಣಾಂಬರವ ಪೊದ್ದುಚಿನ್ಮುದ್ರೆಯನು ಧರಿಸಿ ಪನ್ನಗಭೂಷಣ ಪರಶಿವನಂದದಿತನ್ನ ಭಕ್ತರ ಕರೆದು ಛಿನ್ನಸಂಶಯರಮಾಳ್ಪ 1ಮಣಿಮಯ ಮಕುಟವ ಮಸ್ತಕದೊಳಗಿಟ್ಟುಮಣಿಮಾಲಿಕೆಯ ಧರಿಸಿ ದಿನಮಣಿಶತತೇಜವನು ಬೆಳಗುತ್ತ ತಾನುಘನ ಶಾಸ್ತ್ರಮಾರ್ಗವನನುವದಿಸುತಲಿಹ 2ಚಂದ್ರಗಾ'ಯನುಟ್ಟು ಚಂದ್ರಮೌಳೀಶ್ವರನಛಂದದಿ ಪೂಜಿಸುತ ಸಿಂಧುಜಾ ಧವನಾದ ತಂದೆ ವೇಂಕಟಪತಿಯಂದದಿ ದಾಸಗಾನಂದವನಿತ್ತು ಪೊರೆವ 3
--------------
ನಾರಾಯಣದಾಸರು
ಗುರುವರ್ಯರನು ಭಜಿಸೋ ರಾಘವೇಂದ್ರ ಗುರುವರ್ಯರನು ಭಜಿಸೋ ಪ ಧರೆತಲದಲಿ ಅವತರಿಸಿ ಸುಜನರನು ಪರಿಪÀರಿ ವಿಧದಲಿ ಪೊರೆಯುತಲಿರುವ ಸದ್ ಅ.ಪ ನಳಿನನಾಭ ಶ್ರೀರಾಮರ ರುಚಿರ ಪದಗಳ ಸಂತತದಿ ಭಜಿಸಿ ಖಳರ ದುರ್ಮತಗಳನಳಿಸಿ ದಶಪ್ರಮತಿ ಗಳ ದಿವ್ಯ ಶಾಸ್ತ್ರಾರ್ಥಗಳನು ಸುಲಭದಲಿ ಇಳೆಯೊಳು ಸುಜನಕೆ ತಿಳಿಯುವ ತೆರದಲಿ ಬೆಳಗುತಿರುವ ಪರಿಮಳ ಮುಖವರ ಗ್ರಂಥ ಗಳನು ರಚಿಸುತ ಉಳಿಸಿ ಸುಮತಿಯನು ಇಳೆಯೊಳು ವರಮಂತ್ರ ನಿಲಯದಿ ನೆಲೆಸಿದ 1 ಮಂಗಳಕರಳೆಂದು ಚರಿತೆಯುಳ್ಳ ತುಂಗಾತೀರದಿ ನೆಲೆಸಿ ಕಂಗೊಳಿಸುತ ಚರಣಂಗಳ ಭಜಿಪರ ಸಂಘಕ್ಕೆ ತಮ್ಮ ಅಪಾಂಗ ವೀಕ್ಷಣದಿಂದ ಮಂಗಳ ತತಿಗಳ ನೀಡಿ ಅವರ ಆಘ ಭಂಗವಗೈಯುತ ಅನುದಿನದಲಿ ದ್ವಿಜ ಪುಂಗವ ನಿಕರದಿ ಪೂಜೆಯಗೊಂಬ ಉ ತ್ತುಂಗ ಚರಿತರಥಾಂಗಧರ ಪ್ರಿಯ 2 ಮುನ್ನ ಪ್ರಹ್ಲಾದನೆನೆಸಿ ಶ್ರೀ ನರಹರಿಯನ್ನು ಸತತ ಭಜಿಸಿ ಇನ್ನೊಂದು ಜನುಮದಿ ಮಾನ್ಯ ಶ್ರೀ ವ್ಯಾಸಮುನಿ ಯೆನ್ನಿಸಿ ಖಲಮತವನ್ನು ಖಂಡಿಸುತಲಿ ಚಿನ್ನ ಶ್ರೀಕೃಷ್ಣನ ಉನ್ನತ ಮಹಿಮೆಗ ಳನ್ನು ಬೋಧಿಸುತ ತನ್ನ ಭಕುತಜನ ರನ್ನು ಹರುಷದಲಿ ಧನ್ಯರೆನಿಸಿದ ಪ್ರ ಸನ್ನ ಶ್ರೀರಾಮರ ಭಕುತ ಶಿರೋಮಣಿ 3
--------------
ವಿದ್ಯಾಪ್ರಸನ್ನತೀರ್ಥರು
ಗುರುವಿಗೆ ಒಂದು ಶರಣಾರ್ಥಿ ಗುರು ಭಕ್ತರಿಗೊಂದು ಶರಣಾರ್ಥಿ ಪ ಸಾಧನ ನಾಲ್ಕನು ಸಾಧಿಸುತಿರುತಿಹ ಸಾಧಕರಿಗೆ ಒಂದು ಶರಣಾರ್ಥಿವಾದವ ವರ್ಜಿಸಿ ವಸ್ತುವ ಧ್ಯಾನಿಪ ಉತ್ತಮರಿಗೆ ಒಂದು ಶರಣಾರ್ಥಿ1 ಯೋಗಗಳಿಂದಲೆ ಯೋಗ್ಯರಾಗಿಹ ಯೋಗೀಶರಿಗೊಂದು ಶರಣಾರ್ಥಿರಾಗ ಪೋಗಿ ರಂಜಿಸುತಿರುತಿಹ ರಂಜಕರಿಗೆ ಒಂದು ಶರಣಾರ್ಥಿ 2 ದೂಷಣ ಭೂಷಣ ದೂರ ಮಾಡಿಹ ದೃಢವಂತರಿಗೆ ಒಂದು ಶರಣಾರ್ಥಿಆಸೆಗಳೆಂಬ ಅಳಿದು ಇರುತಿಹ ಆನಂದರಿಗೊಂದು ಶರಣಾರ್ಥಿ3 ಪ್ರಪಂಚವೆಲ್ಲವ ಪರಮಾರ್ಥ ಮಾಡಿಹ ಪಂಡಿತರಿಗೆ ಒಂದು ಶರಣಾರ್ಥಿತಾಪವನೀಗಿ ತಮ್ಮನೆ ಮರೆತಿಹ ತಾಪಸರಿಗೆ ಒಂದು ಶರಣಾರ್ಥಿ4 ಜನನ ಮರಣಗಳ ಜಡರನೆ ಕಳೆದಿಹ ಜನಪತಿಗಳಿಗೊಂದು ಶರಣಾರ್ಥಿಚಿನುಮಯಾತ್ಮಕ ಚಿದಾನಂದನ ಬೆರೆದಿಹ ಚಿದ್ರೂಪರಿಗೆ ಒಂದು ಶರಣಾರ್ಥಿ 5
--------------
ಚಿದಾನಂದ ಅವಧೂತರು
ಗುರುಸ್ತುತಿ ದಾಸರ ಭಜಿಸುತ ಕ್ಲೇಶವ ಕಳೆಯಿರೊ ವಾಸುದೇವನ ಭಕ್ತರಾದ ಶ್ರೀಪುರಂದರ ಪ ಮೀಸಲ ಮನದಲಿ ಕೇಶವನಡಿಗಳ ಆಸೆಲಿ ಪೂಜಿಪ ದಾಸರೊಳಗೆ ಶ್ರೇಷ್ಠ ಅ.ಪ ಪುರಂದರ ಗಡದೊಳು ಹಿರಿಯನೆಂದೆನಿಸಿದ ವರದಪ್ಪನಿಗೆ ವರಕÀುವರ ನೆಂದೆನಿಸಿದೀ ಧರೆಯೊಳು ತನಗ್ಯಾರು ಸರಿಯಿಲ್ಲದಂತೆ ಮೆರೆಯೆ ಸಿರಿಯರಸನು ಶೀಘ್ರದಲಿ ತಾನರಿಯುತ 1 ಬಂದನು ಮಗನಿಗೆ ಮುಂಜಿಯೆಂದೆನುತಲಿ ಚಂದದಿಂದಲಿ ಬೇಡಲು ಧಣಿಯ ಬಂದೆಯಾತಕೆ ನಮ್ಮ ಚಂದದ ಬೀದಿಲಿ ಹಿಂದಕೆ ತೆರಳೆನೆ ಬಂದನು ಬಾರಿ ಬಾರಿ 2 ಹರಿಯೆಂದು ತಿಳಿಯದೆ ಜರಿಯುತ ನುಡಿಯಲು ಮರಳಿ ಮರಳಿ ಯಾಚಿಸೆ ಬಿಡದೆ ತೆರಳನು ಈ ವೃದ್ಧ ತೆರಳಿಪೆನೆನುತಲಿ ಸರಸರ ತೆಗೆಯುತ ಸುರಿದನು ನಾಣ್ಯವ 3 ನೋಡುತ ಶ್ರೀಹರಿ ಗಾಡದಿ ಕೈನೀಡೆ ನೀಡಿದ ಸವೆದ ರೊಕ್ಕವ ನೋಡೀ ಗಾಡನೆ ಬಂದು ನಾಯಕನ ಸತಿಯಳನು ಬೇಡಿದ ಪುಣ್ಯವು ಬಾಹೋದೆನುತಲಿ 4 ಏನು ನೀಡಲಿ ಎನಗೇನಿಹುದೆನ್ನಲು ಮಾನಿನಿ ಮೂಗುತಿ ನೀಡೆಂದೆನಲು ಮಾನಿನಿ ಮಾಡಲು ಜ್ಞಾನಿಗಳರಸನು ಗಾಡ ಹಿಂತಿರುಗುತ 5 ಗಾಡನೆ ಮೂಗುತಿ ನೀಡುತ ದ್ರವ್ಯವ ಬೇಡಲು ಬೇಗದಿ ನೀಡುತ ನುಡಿದನು ನೋಡುತ ವಡವೆಯ ನೀಡಿದ ಭರಣಿಲಿ ಸತಿ ಮುಖವಾ 6 ಮೂಗುತಿ ಎಲ್ಲೆನೆ ಬೇಗದಿ ನಡುಗುತ ನಾಗವೇಣಿಯು ಪ್ರಾರ್ಥಿಸಿ ಹರಿಯ ಆಗ ಕುಡಿವೆ ವಿಷವೆನ್ನುತ ಕರದಲಿ ನಾಗವಿಷದ ಬಟ್ಲಲಿ ಇರಲು 7 ತೋರಿದಳಾಗಲೆ ತನ್ನಯ ರಮಣಗೆ ತೋರದಿರಲು ಮುಂದಿನ ಕಾರ್ಯ ಭಾರಿ ಆಲೋಚನೆಯ ಮಾಡುತ ಮನದಲಿ ಸಾರಿದ ತನ್ನ ವ್ಯಾಪಾರದ ಸ್ಥಳಕೆ 8 ತೆರೆದು ನೋಡಲು ಆ ವಡವೆಯ ಕಾಣದೆ ಮಿಗೆ ಚಿಂತೆಯು ತಾಳುತ ಮನದಿ ನಗಧರನ ಬಹು ಬಗೆಯಲಿ ಪೊಗಳುತೆ ತೆಗೆದ ಅಸ್ಥಿರ ರಾಜ್ಯದಿ ಮನವ 9 ಕಳವಳ ಪಡುತಲಿ ಆ ಲಲನೆಯ ಸಹಿತದಿ ತನುಮನ ಧನ ಹರಿಗರ್ಪಿಸುತಾ ಕ್ಷಣ ಬಿಡದಲೆ ಹರಿ ಚರಣವ ಸ್ಮರಿಸುತ ಕಮಲನಾಭ ವಿಠ್ಠಲನೆನ್ನುವ ಹರಿ 10
--------------
ನಿಡಗುರುಕಿ ಜೀವೂಬಾಯಿ
ಗುರುಸ್ತುತಿ ಬಾರಯ್ಯ ಗುಣನಿಧಿಯೆ ಗುರುಭಾನುಕೋಟ್ಯುದಯ ಧ್ರುವ ಗುರುವರ ಶಿರೋಮಣಿಯೆ ಕರುಣಾನಂದ ಖಣಿಯೆ ಸುರತರು ಚಿಂತಾಮಣಿಯೆ 1 ಸುಪಥದ ಸಾಧನಿಯೆ ಭಕ್ತಜನಭೂಷಣಿಯೆ ಜಗತ್ರಯ ಜೀವನಿಯೆ 2 ಮಹಾನುಭವದ ಜಾಗ್ರತಿಯೆ ಮಹಿಮರ ಘನ ಸ್ಫೂರುತಿಯೆ ಮಹಿಪತಿ ಸ್ವಾಮಿ ಶ್ರೀಪತಿಯೆ ಸಹಕಾರ ಸುಮೂರುತಿಯೆ 3
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಗೋಕುಲಕ್ಹೋಗು ನೀ ಶೋಕವಿನಾಶಿನಿ ಲೋಕೇಶ ಪಾರ್ವತಿ ಶ್ರೀಕರೆ ಶ್ರೀಮತಿ ಪ. ದೇವಕೀಗರ್ಭದ ಕೇವಲೆಂಟಂಶದ ದೇವಶೇಷಾಖ್ಯನ ದೇವಿಗೈ ದರ್ಶನ 1 ಶಶಿಮುಖಿ ರೋಹಿಣಿ ಬಸುರೊಳಗಿಡು ನೀ ಬಿಸರುಹಲೋಚನಿ2 ಸುಂದರಿ ದೇವಕೀ ಕಂದನಾಗುವೆ ಸುಮುಖಿ ನಂದನ ನಂದಿನಿಯೆಂದೆನಿಸು ಭವಾನಿ 3 ಜಗದಂಬಿಕೆ ಜಯೆ ಸುಗುಣೆ ವೈಷ್ಣವಿ ವಿಜಯೆ ಜಗದೊಳು ನಿನ್ನ ಪೂಜೆ ಅಗಲದ ಗೈವರಗಜೆ 4 ಲಕುಮಿನಾರಾಯಣನ ಯುಕುತಿಯಂತಾಕ್ಷಣ ಸುಖದೆ ಗೈದಳು ಶಿವಸಖಿ ತಾನೆಲ್ಲವ 5
--------------
ಪಾವಂಜೆ ಲಕ್ಷ್ಮೀನಾರ್ಣಪ್ಪಯ್ಯ