ಒಟ್ಟು 652 ಕಡೆಗಳಲ್ಲಿ , 90 ದಾಸರು , 605 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ವೆಂಕಟರಮಣ ವೇದಾಂತಕೋಟಿವಂದ್ಯ ಪತಿ ಏಳೆನ್ನುತ ಪ. ಪಂಕಜಮುಖಿ ಪದ್ಮಾವತಿ ಸರ್ವಾ- ಲಂಕಾರದ ನಿದ್ದೆ ಸಾಕೆನ್ನುತ ಅ.ಪ. ಮಂಗಲಚರಿತ ಭುಜಂಗಶಯನ ನಿ- ನ್ನಂಗದಾಯಾಸವ ಪರಿಹರಿಸಿ ಪೊಂಗಲಶದಿ ಉಷ್ಣೋದಕ ಗಂಧ ತೈಲಾ- ಮೂರ್ತಿ 1 ದಧಿಯ ಪೃಥುಕದಲಿ ಹದಗೈದು ಮಧುರದಿ ಮಧುಸೂದನ ನಿನ್ನ ಪದದ ಮುಂದೆ ಸದ್ ಹೃದಯರು ತಂದಿಹರು ಸಮರ್ಪಿಸೆ ಮದಜನಕ ನಿನ್ನ ಓಲೈಸುವರಯ್ಯ 2 ಸಣ್ಣಕ್ಕಿಯನು ದಿವ್ಯಾನ್ನ ಪಾಕವ ಮಾಡಿ ಚೆನ್ನಾದ ಗೋಕ್ಷೀರವನ್ನು ತಂದು ಉನ್ನತ ಮಹಿಮನೆ ಉಣ್ಣೆಂದು ಲಲಿತ ಸು- ವರ್ಣಪಾತ್ರೆಯೊಳು ತಂದಿಹರು ಶ್ರೀಹರಿಯೇ 3 ವಿಧವಿಧ ಷಡುರಸಭರಿತ ಮನೋಹರ ಸುಧೆಗೆಯಿಮ್ಮಡಿ ಮಧುರತ್ವದಲಿ ಮೃದುವಾದ ಉದ್ದಿನ ದೋಸೆಯ ಸವಿಯೆಂದು ಪದುಮನಾಭನೆ ನಿನ್ನ ಹಾರೈಸುವರಯ್ಯ 4 ಕದಳಿ ಉತ್ತಮ ಫಲಗಳ ತಂದು ರಕ್ಕಸವೈರಿಯೆ ನಿನ್ನ ಮುಂದೆ ಚೊಕ್ಕಟವಾಗಿಡೆ ಲೆಕ್ಕ ಲೇಖನಗಳ ವಾಸುದೇವ ನೀನೇಳಯ್ಯ5 ಸಾರಹೃದಯ ಗೌಡಸಾರಸ್ವತ ವಿಪ್ರ ಭೂರಿ ವೇದಾದಿ ಮಂತ್ರದ ಘೋಷದಿ ಶ್ರೀರಮಣನೆ ದಯೆದೋರೆಂದು ಕರ್ಪೂರ- ದಾರತಿಯನು ಪಿಡಿದಿಹರು ಶ್ರೀಹರಿಯೇ 6 ಭಾಗವತರು ಬಂದು ಬಾಗಿಲೊಳಗೆ ನಿಂದು ಭೋಗಿಶಯನ ಶರಣಾದೆನೆಂದು ಜಾಗರದಲಿ ಮದ್ದಳ ತಾಳರಭಸದಿ ರೇಗುಪ್ತಿರಾಗ ಸಂಗೀತ ಪಾಡುವರಯ್ಯ 7 ಕರುಣಾಸಾಗರ ನಿನ್ನ ಚರಣದ ಸೇವೆಯ ಕರುಣಿಸೆಂದೆನುತಾಶ್ರಿತ ಜನರು ಕರವ ಮುಗಿದು ಕಮಲಾಕ್ಷ ನಿನ್ನಯ ಪಾದ- ಸ್ಮರಣೆಗೈಯುತ ನೋಳ್ಪಾತುರದಿಂದ ಹರುಷದಿ 8 ನಾನಾ ಜನರು ಬಂದು ಕಾಣಿಕೆ ಕಪ್ಪವ ಶ್ರೀನಿವಾಸನೆ ನಿನ್ನ ಪದಕೆ ಒಪ್ಪಿ ದಾನವಾಂತಕ ನಿನ್ನ ದಯವೊಂದೆ ಸಾಕೆಂದು ಧ್ಯಾನಮಾಳ್ಪರು ದಯಮಾಡೆಂದು ಹರಿಯೇ 9 ನೀನೆ ಗತಿಯೆಂದು ನಿನ್ನ ನಂಬಿಹರು ಲ- ಕ್ಷ್ಮೀನಾರಾಯಣ ಪುರುಷೋತ್ತಮನೆ ಮಾನದಿ ಭಕ್ತರ ಸಲಹಯ್ಯ ಸಂತತ ಶ್ರೀನಿವಾಸನೆ ಬೇಗ ಏಳು ಶ್ರೀಹರಿಯೆ 10
--------------
ತುಪಾಕಿ ವೆಂಕಟರಮಣಾಚಾರ್ಯ
ವೆಂಕಟಾಚಲ ನಿವಾಸಾ-ಜಗದೀಶ ಸಂಕಟ ಹರಿಸೋ ಶ್ರೀಶಾ ಪ ಪಂಕಜಾಸನ ಪ್ರಮುಖ ಶಶಾಂಕಸುರವರಪೂಜಿತ ಅಕಳಂಕಮಹಿಮ ಖಗಾಂಕ ಚಕ್ರಗದಾ ಶಂಖಶ್ರೀಕರಕಂಜಧರಪಾಣೀ ಅ.ಪ ಲೋಕನಾಥ ಲೋಕಬಂಧು-ದಯಾಸಿಂಧು ಭಕುತರನಿಮಿತ್ತಬಂಧು-ಎಂದೆಂದೂ ಭಕುತರ ಬೆಂಬಲನು ಎಂದೂ-ಇಂತೆಂದೂ ಪಾಕಶಾಸನಪೂಜ್ಯ ಪಿನಾಕಿಪಿತ ಸುರಜೇಷ್ಠವಂದ್ಯ ಏಕಮೇವ ನೀ ಕೈಬಿಡದೆ ಕರ್ಮ- ಪಾಕಮಾಡಿಸೋ-ಕಾಲನಾಮಕ1 ಬಂಧಕಗಳ ತಂದೊಡ್ಡೀ-ಭಕುತರ ಮನ ಪರಿ ಧೃಢಮಾಡಿ-ಪರಿಯುನೋಡಿ ಬಂದ ಬಂಧವ ಹರಿಸಿ-ಹೃದ್ವಾಸೀ ಹಿಂದುಮುಂದೂಕಾಣದ ಮಹ- ಅಂಧಕಾರಣ್ಯದಲಿ ಸಲಹಿದೆ ಬಂಧ ಮೋಚಕನಹುದೋ ಅನಾಥ ಬಂಧು ನೀನೆಂದು ನಂಬಿದೇ 2 ಕರುಣಾಸಾಗರನೇ ನಿನ್ನಾ-ನಾ ನಂಬಿದೆ ಸ್ಮರಣೆಯೊಂದನೆ ಪಾಲಿಸೋ ಈ ಜನುಮದೀ ಪರಮಸಾಧನ ಕಾಣದೇ-ಪರಿತಪಿಸುವೇ ನಿರುತ ಭವಸಂಕೋಲೆಯಾ ಕಡಿದು ಪೊರೆಯುವುದೋ ಶ್ರೀ ವೆಂಕಟೇಶನೆ ಸ್ಮರಿಪರಘ ಪರಿಹರಿಪ ಶ್ರೀ- ಉರಗಾದ್ರಿವಾಸವಿಠಲ ಪ್ರಭೋ 3
--------------
ಉರಗಾದ್ರಿವಾಸವಿಠಲದಾಸರು
ವೇಣುಧರ ವಿಠಲಾ | ನೀನೆ ಪೊರೆ ಇವಳಾ ಪ ಕಾಣೆ ನಿನ್ಹೊರತು ಕಾ | ರುಣ್ಯ ಮೂರುತಿಯೆ ಅ.ಪ. ಸ್ವಾಪದಲಿ ಗುರುರೂಪ | ರೂಪ ಸಮ್ಮುಖದಲ್ಲಿಗೋಪಕೃಷ್ಣಾಕೃತಿಯ | ಪಡೆದಿಹಳು ಇವಳುಶ್ರೀಪತಿಯೆ ನಿನ್ನೊಲಿಮೆ | ಆಪಾರವಿರುತಿರಲುಪ್ರಾಪಿಸುತ ಅಂಕಿತವ | ಒಪ್ಪಿಸಿಹೆ ನಿನಗೇ 1 ಪಥ ತೋರೋ ಹರಿಯೇ2 ಪತಿ ಸುತನೆ | ಕಾರುಣ್ಯ ತೋರಿ ಆ-ಪಾರ ದುಷ್ಕರ್ಮಗಳ | ಪಾರಗಾಣಿಪುದೋ |ಮಾರುತನ ಮತದಲ್ಲಿ | ಧೀರೆ ಎಂದೆನಿಸಿ ಸಂ-ಸಾರ ಸಾಗರವನ್ನು | ದಾಟಿಸೋ ಹರಿಯೇ 3 ಸೃಷ್ಟಿ ಸ್ಥಿತಿ ಲಯ ಕರ್ತ | ಕೃಷ್ಣಮಾರುತಿ ದೇವಅಷ್ಟಸೌಭಾಗ್ಯಗಳ | ಕೊಟ್ಟು ಕಾಪಾಡೋವಿಷ್ಟರಶ್ರವ ಹರಿಯೆ | ನಿಷ್ಠೆ ಆಚಾರದಲಿಕೊಟ್ಟು ಕೈಪಿಡಿ ಇವಳ | ಜಿಷ್ಣುಸಖ ಹರಿಯೇ 4 ಸರ್ವದಾ ತವ ಮಹಿಮೆ | ಶ್ರವಣ ಸುಖ ಸಾಧನವಹವಣೀಸಿ ತವನಾಮ | ವಜ್ರಾಂಗಿ ತೊಡಿಸೀಭವವನುತ್ತರಿಸತ್ಕಿ | ಬಿನೈಪೆ ಶ್ರೀ ಹರಿಯೆಸರ್ವ ಸುಂದರ ಗುರು | ಗೋವಿಂದ ವಿಠಲಾ 5
--------------
ಗುರುಗೋವಿಂದವಿಠಲರು
ವ್ಯಾಪಾರ ಉದ್ಯೋಗವನು ಮಾಡುವೆ | ಭೂಪಾಶದೊಳಗೆ ಎಲ್ಲರಿಗೆ ಬಲ್ಲಿದನಾಗಿ ಪ ಮುರಾರಿ ನಾಮವೆಂಬೊ ಮುಂಡಾಸವನೆ ಸುತ್ತಿ | ಅರವಿಂದನಾಭವೆಂಬೊ ಅಂಗಿಯ ತೊಟ್ಟು || ನರಹರಿನಾಮವೆಂಬೊ ನಡುಕಟ್ಟನೆ ಸುತ್ತಿ | ಕರುಣಾಸಾಗರನೆಂಬೊ ಕಠಾರಿಯನು ಸಿಕ್ಕಿಸಿ 1 ಕಮಲನಾಭವೆಂಬೊ ಕಮಲದಾನಿ ಪಿಡಿದು | ತಿಮಿರದೋಷವೆಂಬೊ ಪಾಯಿಪೋಸು ಮೆಟ್ಟಿ || ಶಮೆದಮೆಯೆಂಬೊ ಪರಿಚಾರಕರ ಒಡಗೊಂಡು ಗಮಿಸಿದ್ದೆನೊ ಹರಿದಾಸರಿದ್ದ ಚಾವಡಿಗೆ 2 ಪೋಗಿ ನಮಸ್ಕಾರವೆಂದು ತಲೆಬಾಗಿ ನಿಲ್ಲಲು | ಭಾಗವತರು ಕರೆದು ಇಂಬನಿತ್ತು || ಯೋಗಕ್ಷೇಮವೆಲ್ಲ ವಿಚಾರಿಸಿ ಪ್ರೀತಿಯಲಿ | ಈಗಳೆ ಕುಳಿತ ಅಚ್ಯುತನ ತೋರಿದರು 3 ಕಂಡು ಕರವನು ಮುಗಿಯೆ ಕರುಣಾಸಾಗರನೆಂಬೊ | ಮಂಡಲಾಧಿಪನು ಕರೆದು ಮನ್ನಿಸಿ || ಗಂಡುಗಲಿಯಾಗೆಂದು ಸಂಚುಗಾರಿಕೆ ತುಲಸಿ | ದಂಡೆ ಕೊರಳಿಗೆ ಹಾಕಿ ದಾಸರೊಳಗಿರಿಸಿದನು 4 ಘನವಾದ ಉದ್ಯೋಗ ದೊರಕಿತು ನನಗಿನ್ನು | ಅನುಮಾನವಿಲ್ಲವು ಎಂದೆಂದಿಗೂ || ದಿನದಿನಕೆ ಹರಿನಾಮವೆಂಬೊ ಲೆಖ್ಖ-| ವನು ಬರೆದು ತ್ರಿಲೋಕದರಸನಿಗೆ ಒಪ್ಪಿಸಿದೆ || 5 ಬರೆದು ಲೆಖ್ಖವ ನೋಡಿ ದಯಾಪಯೋವಾರಿಧಿ | ಹರುಷದಿಂದಲಿ ಎನಗೆ ಸಂಬಳಕ್ಕೆ || ಬರೆಸಿ ಕೊಟ್ಟನು ಸನದು ಕೇಶವಾದಿಯಂಬೊ | ವರಹಗಳು ಎಂದಿಗಾದರು ಅಳಿವಿಲ್ಲದೆ || 6 ಈಸು ದಿನ ಉದ್ಯೋಗ ಹೀನನಾಗಿ ನೊಂದೆ | ದಾಸರಾ ದಯದಿಂದ ದೊರೆಕಿತಿಂದು || ಸಂಚಿತ ಕರ್ಮ ಓಡಿಸಿ |ಶ್ರೀಶ ವಿಜಯವಿಠ್ಠಲನಲ್ಲಿ ಬಾಳಿದೆನೊ || 7
--------------
ವಿಜಯದಾಸ
ಶಂಕರ ಕೃಪಾಸಾಗರ ಶಿವ ಮೃಗಾಂಕಾ ಶಶಿಶೇಖರಾ ಪ ಕಿಂಕರರಿಗೆ ಬಂದ ಸಂಕಟವ ಬಿಡಿಸುವ ಅ.ಪ ಭವ ರೋಗಗಳ ಕಳೆವ ಭೋಗ ನಂಜುಂಡದೇವ 1 ಕಂದರ್ಪ ಸಂಹಾರನೆ 2 ಸಂಗರಹಿತ ಭಸಿತಾಂಗಲೇಪಿತ ಶಿವ 3 ಗರಳಪುರದಿ ನೆಲೆಸಿರುವ ಶ್ರೀಕಂಠೇಶ ಶರಣಾಗತರ ಸುರತರುವೆ ಮದ್ಗುರುವೆ | ಶಿವ 4 ಲಕ್ಷ್ಮೀಶನಾದ ಗುರುರಾಮವಿಠಲನ ಸಖ5
--------------
ಗುರುರಾಮವಿಠಲ
ಶಂಕರ ಗುರುವರ ಮಹದೇವ ಭವ- ಸಂಕಟ ಪರಿಹರಿಸಯ್ಯ ಶಿವ ಪ. ಸಂಕಲ್ಪ ವಿಕಲ್ಪಮನೋನಿಯಾಮಕ ಕಿಂಕರಜನಸಂಜೀವ ಅ.ಪ. ಭಾಗವತರರಸ ಭಾಗೀರಥೀಧರ ಬಾಗುವೆ ಶಿರ ಶರಣಾಗುವೆ ಹರ ಶ್ರೀ ಗೌರೀವರ ಯೋಗಿಜನೋದ್ಧರ ಸಾಗರಗುಣಗಂಭೀರ 1 ರಾಯ ಲಕ್ಷ್ಮೀನಾರಾಯಣ ಭಕ್ತಿಪ- ರಾಯಣ ತ್ರಿನಯನ ಪುರಹನ ಕಾಯಜಮಥನ ಮುನೀಂದ್ರ ಸಿದ್ಧಜನ- ಗೇಯಸ್ವರೂಪೇಶಾನ 2
--------------
ತುಪಾಕಿ ವೆಂಕಟರಮಣಾಚಾರ್ಯ
ಶಕ್ತಿಗೊಲಿವೆಯೋ ರಂಗ ಯುಕ್ತಿಗೊಲಿವೆಯೋ ಪ ಶಕ್ತಿ ಯುಕ್ತಿಗೇ ಒಲಿವನಲ್ಲ ಭಕ್ತಿಯೆಂಬುದಿಲ್ಲದಿರಲು ಅ.ಪ ಸಕಲ ಭುವನಗಳೊಳು ಹುಡುಕಿ ವಿಕಲನಾದನಂದು ಕಶಿಪು ಭಕುತಿಯಲಿ ಪ್ರಹ್ಲಾದ ಕರೆಯೆ ಮರುಘಳಿಗೆಯೆ ಕಂಭದಿ ಬಂದೆ1 ಸೆರೆಯೊಳರಿಯು ಜನಿಸಲಂದು ಬರಿಯಮಾಯೆಯ ಸೆರೆಯೊಳಿರಿಸಿ ಭರದಿ ಗೋಕುಲಕೈದಿದೆಯಲ್ಲವೆ2 ಕರೆದ ಕೌರವರಿಗೊಲಿಯಲಿಲ್ಲ ಕರೆಯದಾವಿದುರಗೊಲಿದೆ ಅರಿಯಲರಿದು ಮಹಿಮೆಗಳ ಮಾಂಗಿರಿರಂಗ ಕರುಣಾಸಾಗರ 3
--------------
ಅಸೂರಿ ರಾಮಸ್ವಾಮಿಅಯ್ಯಂಗಾರ್
ಶರಣು ಶರಣು ಶ್ರೀ ದತ್ತಾತ್ರೇಯಾ ಶರಣು ಸಕಲಾ ಭುವನಾಶ್ರಯಾ ಶರಣೆಂಬೆ ಸಿಂಹಾಚಲ ನಿಲಯಾ ಸುರಜನ ರೇಯಾ ಸಲಹಯ್ಯಾ 1 ವನರುಹ ಸಂಭವ ತ್ರಿಲೋಚನ ಸನಕಾದಿ ಮುನಿ ವಂದಿತ ಚರಣ ಜನವನ ವಿಜನ ವ್ಯಾಪಕ ಘನ ಅನಸೂಯಾ ನಂದನ ಯೋಗೀಶಾ 2 ತತ್ವಯೋಗ ಸಿದ್ಧಿ ಬುದ್ಧಿ ದಾತಾರಾ ಸತ್ವ ಗುಣಾಲಂ ಕೃತ ಜ್ಞಾನ ಸಾಗರಾ ಸತ್ಯ ಸನಾತನೇ ಮುನಿ ದಿಗಂಬರಾ ಭಕ್ತ ಸಹಕಾರಾ ಅವಧೂತಾ 3 ಕಂದರ್ಪ ಕೋಟಿ ಸುಂದರಾಕಾರಾ ಹೊಂದಿದಾಭರಣಾನೇಕ ಶೃಂಗಾರಾ ಇಂದು ಸೂರ್ಯಾನಳ ತೇಜ ವ್ಯಾಪಾರಾ ಎಂದೆಂದೆಚ್ಚರಾ ಕಂಡು ನಿನ್ನಾ 4 ಮಂದಮತಿ ಬಾಲನ ಬಿನ್ನಾಹದ ಸ್ತುತಿ ಬಂದು ಅರ್ಪಿಸಿಕೋ ದುದಿ ಶ್ರೀಪತಿ ಇಂದು ಮೊರೆ ಹೊಕ್ಕೆನು ಅನನ್ಯಾಗತಿತಂದೇ ಮಹಿಪತಿ ಸುತ ಸ್ವಾಮೀ 5
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಶರಣು ಶಿರೀಶ ಹರೇಗೋವಿಂದಾ ಪ ದಾನವ ಕುಲಸಂಹಾರಕಾ ದೀನ ತಾರಕಾ ದೀನ ತಾರಕಾ ಪರಮ ಪಾವನ ರೂಪಾ 1 ಈರೇಳು ಲೋಕದ ಜೀವನಾ ವರಪಾವನಾ ವಿನುತ ದಯಚರಣಾ2 ಭಯಹರ ಆನಂದಸಾಗರಾ ದಯ ಸಾಗರಾ ದಯಸಾಗರಾ ಗರುಡಗಮನ ವರ ಫಣಿಶಯನಾ3 ದುರಿತ ಕುಲಾಂಬುಧಿ ಶೋಷಣಾ ಖರದೋಷಣಾ ಖರದೋಷಣಾ ತನು ಪರ್ವತ ಕುತಿಲಿಶಾ4 ಸುರವರ ಮುನಿಜನ ಪಾಲನಾ ಧರಿಲೋಲನಾ ಧರಿ ಲೋಲನಾ ರಾಯಣ ಸರಜ ನೇತ್ರಾ5 ರವಿಕೋಟಿ ನಿಧನಂದ ನಂದನಾ ಭವಬಂಧನಾ ಪತಿ ಜನಕಾ6 ಅಸಮ ಪಯೋಧರ ಸುಂದರಾ ದಶಕಂಧರಾ ದಶಕಂಧರಾ, ಮರ್ಧನ ನಿರುಪಮ ಚರಿತಾ7 ಸಕಲ ವ್ಯಾಪಕ ಯದುನಾಯಕಾ ಸುಖದಾಯಕಾ ಸುಖದಾಯಕಾ ಮಹಿಪತಿ ನಂದನ ಪ್ರೀಯಾ8
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಶಿಖಾಮಣಿ ಬಾರೋ ಬಾರೊ ಪಾವನ ಗೈಸುವ ಪರಮ ದಯಾಕರುಣ ಬಾರೊ ಬಾರೊ ಧ್ರುವ ಮಾಧವ ಶ್ರೀಹರಿ ಮುಕುಂದ ಬಾರೊ ಸುಂದರ ವದನನೆ ನಂದ ಯಶೋದೆಯ ಕಂದ ಬಾರೊ ಕಂದರ್ಪ ಕೋಟಿ ಲಾವಣ್ಯದಲೊಪ್ಪುವಾನಂದ ಬಾರೊ ವಂದಿತ ತ್ರೈಲೋಕ್ಯ ಇಂದಿರಾಪತಿ ದೀನಬಂಧು ಬಾರೊ 1 ಗರುಡವಾಹನ ಗೋವಿಂದ ಗೋಪಾಲ ಶ್ರೀಕೃಷ್ಣ ಬಾರೊ ಸರಸಿಜೋದ್ಭವನುತ ಸಿರಿಯ ಲೋಲನೆ ಪರಿಪೂರ್ಣ ಬಾರೊ ಶರಣರಕ್ಷಕ ಸದಾ ಸಾಮಜವರದ ಸದ್ಗುಣ ಬಾರೊ ವರ ಶಿರೋಮಣಿ ಮುನಿಜನರ ಸ್ವಹಿತ ಸುಭೂಷಣ ಬಾರೊ 2 ಅನಾಥರನುಕೂಲಾಗುವ ಘನದಾಗರ ಬಾರೊ ಅನುಭವಿಗಳ ಅನುಭವದ ಸುಖಸಾಗರ ಬಾರೊ ಭಾನುಕೋಟಿತೇಜ ಭಕ್ತಜನ ಸಹಕಾರ ಬಾರೊ ದೀನಮಹಿಪತಿ ಸ್ವಾಮಿ ನೀನೆ ಎನ್ನ ಮನೋಹರ ಬಾರೊ 3
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಶುದ್ಧ ಸನ್ಮಾರ್ಗ ಸರ್ವರಿಗಿದು ಒಂದೆ ಬುದ್ಧಿವಂತರು ತಿಳಿದರು ಇದರಿಂದೆ 1 ಇದರಿಂದೇವೆಂಬುದು ನಿರ್ವಾಣ ಒದರುತಲಿಹುದು ವೇದಪುರಾಣ 2 ಪುರಾಣ ಪುಣ್ಯದ ಹಾದಿಯು ನಿಜ ಸುರಮುನಿಗಳಿಗಿದು ಹೊಳೆವದು ಸಹಜ 3 ಸಹಜಾನಂದದ ಸುಖಸಾಗರ ಬಾಹ್ಯಾಂತ್ರ ಸದೋತಿತ ಸಹಕಾರ 4 ಸಹಕಾರವು ಚಿನ್ಮಯ ಚಿದ್ರೂಪ ಸೋಹ್ಯದೋರುವ ಶ್ರೀ ಗುರುಸ್ವರೂಪ 5 ಸ್ವರೂಪವೆ ಸದ್ಗೈಸುವ ಹಾದಿ ಪರಮ ವೈಷ್ಣವರ ಮೂಲಾಗ್ರದ ಆದಿ 6 ಅಧಿವೆಂಬುದು ನಿಜನಿರ್ಧಾರ ಸಾಧಿಸುದವರಿಗೆ ಸಾಕ್ಷಾತಾರ 7 ಸಾಕ್ಷಾತ್ಕಾರವೆ ಮೋಕ್ಷದಮನೆಯು ಅಕ್ಷಯ ಪದ ಅದ್ವೈತದ ಖಣಿಯ 8 ಅದ್ವೈತವೆ ಆಧ್ಮಾತ್ಮ ಸುವಿದ್ಯ ಸಿದ್ದಸಾಧಕರಿಗೆ ಆಗುವ ಸಾಧ್ಯ 9 ಸಾಧ್ಯವೆಂಬುದು ನಿಜಸಿದ್ಧಾಂತ ಭೇದಿಸಿದವರಿಗೆ ಇದು ಸನ್ಮತ 10 ಸನ್ಮತವೆ ಮತ ಸರ್ವರಿಗೆಲ್ಲ ಉನ್ಮನಲೀಹ ಮಹಾಯೋಗಿಯು ಬಲ್ಲ 11 ಬಲ್ಲೆವೆಂಬುದು ಬಲು ಅಗಾಧ ಸೊಲ್ಲಿಗೆ ಸಿಲುಕದು ಗುರುನಿಜಭೋದ 12 ಬೋಧವೆ ಸದ್ಗುರುವಿನ ದಯಕರುಣ ಸದ್ಗತಿಸುಖ ಸಾಧನದ ಸ್ಫುರಣ 13 ಸ್ಫುರಣವೆ ಬ್ರಹ್ಮಾನಂದದ ಹರುಷ ತರಣೋಪಾಯದ ಮಹಾ ಉಪದೇಶ 14 ಉಪದೇಶವೆ ನಿಜ ಉಪನಿಷದ್ವಾಕ್ಯ ಒಪ್ಪಿಡುವದು ಭೂಸ್ವರ್ಗತ್ರೈಲೋಕ್ಯ 15 ತ್ರೈಲೋಕ್ಯಕೆ ಇದು ನಿಜನಿಧಾನ ಭಯವಿಲ್ಲದ ಮಹಾಸುಖಸಾಧನ 16 ಸಾಧನದಿಂದ ಸದ್ಗತಿ ಸಂಪೂರ್ಣ ಸಾಧು ಸಜ್ಜನರಿಗೆ ಸಕಲಾಭರಣ 17 ಸಕಲಾಭರಣ ಸದ್ಗುರು ನಿಜ ಅಭಯವು ಶುಕಾದಿ ಮುನಿಗು ಕೂಡಿದ ಪ್ರಭೆಯು 18 ಪ್ರಭೆಗಾಣಲು ತೋರದು ನೆಲೆನಿಭವು ನಿಭವೆ ಮಹಾಮಂಗಳಕರ ಶುಭವು 19 ಶುಭದೋರುದು ಸದ್ಗುರು ಕೃಪೆಯಿಂದ ಭ್ರಮೆಹಾರಿತು ಮಾಯೆ ಇದರಿಂದ 20 ಇದರಿಂದೆ ಇದರಿಟ್ಟಿತು ಪುಣ್ಯ ಒದಗಿ ಕೈಗೂಡಿತು ಬಂತು ತಾರ್ಕಣ್ಯ 21 ತಾರ್ಕಣ್ಯವು ಬಂತೆನ್ನೊಳು ಪೂರ್ಣ ಸರ್ಕನೆ ದೊರೆಯಿತು ಸದ್ಗುರುಖೂನ 22 ಖೂನವೆ ಎನ್ನೊಳಗಾಯಿತು ಧ್ಯಾನ ಘನಸುಖದೋರುವ ಅನುಸಂಧಾನ 23 ಅನುಕೂಲಾದ ನಮ್ಮಯ್ಯ ಪ್ರಸಿದ್ಧ 24 ಪ್ರಸಿದ್ಧವೆ ಪ್ರತ್ಯಕ್ಷ ಪ್ರಮಾಣ ಭಾಸುತಿಹುದು ಶ್ರೀಗುರು ಶ್ರೀಚರಣ 25 ಶ್ರೀಚರಣಕೆ ಎರಗಿಹ ಮಹಿಪತಿಯು ಸೂಚನೆ ಮಾತ್ರ ಕೊಂಡಾಡಿದ ಸ್ತುತಿಯು 26
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಶುಭ ವಾಸುದೇವ ಮೂರುತಿಗೆ ಪಕುಂದಣಕೆ ಸರಿಯಾದ ಕಾಯದತಿ ಕಾಂತಿಗೆಸಿಂಧುವನು ಪೋಲ್ವ ಗಂಭೀರ ರಸಕೆಇಂದುಬಿಂಬವ ಜರೆವ ಮುಖದ ಸೊಂಪಿನ ಸಿರಿಗೆಕಂದರ್ಪ ಕೋಟಿ ಲಾವಣ್ಯ ನಿಧಿಗೆ 1ಅಭಯದಾನವ ಕೊಡುವ ಕರಗಳತಿ ಚೆಲು'ಕೆಗೆಶುಭಗಳಿಗೆ ನೆಲೆಯಾದ ನೇತ್ರಗಳಿಗೆ'ಭವಗಳಿಗೆಡೆಬಿಡದ ಮುಗುಳುನಗೆಯೊಗು'ುಗೆಗೆತ್ರಿಭುವನಂಗಳನಳೆದ ಪದ ನಳಿನಗಳಿಗೆ 2ಜ್ಞಾನಮುದ್ರೆಯ ಕರದಿ ಜ್ಞಾನೋಪದೇಶವನುತಾನೆ ಕರೆದಿತ್ತು ಭಕ್ತರ ಸಲಹುತಾ ಮಾನವನು ಕಡೆಗೊತ್ತಿ ಮಾನ್ಯ ತಾನೆಂದೆನಿಪಶ್ರೀನಿಕೇತನ ನಿಜದ ಚಿನ್ಮಯಾತ್ಮಕಗೆ 3ಕಾವೇರಿ ಗಂಗೆಯೊಲು ಕಮಲನಾಭನ ಕಥೆಯ ಪಾವನದ ತೀರ್ಥದಲಿ ಪಾಪವಳಿದು ಜೀವಭಾವವ ಬಿಟ್ಟು ಬ್ರಹ್ಮ ತಾನೇಯಾಗಿಯಾವಗವು ಸುಖಶರಧಿಯಾದ ಚಿನ್ಮಯಗೆ 4ರಾಗಾದಿರ'ತನಿಗೆ ರಾಗಿಗಳ ಸಂಸಾರಸಾಗರವ ದಾಟಿಸುವ ಬೋಧ ಘನಗೆಯೋಗಿಗಳ ಸಂಮತಗೆ ಗುರು ವಾಸುದೇವಗೆಯೋಗೇಶ ತಿರುಪತಿಯ ವೆಂಕಟೇಶ್ವರಗೆ 5ಓಂ ಶ್ರೀವತ್ಸಕೌಸ್ತುಭಧರಾಯ ನಮಃ
--------------
ತಿಮ್ಮಪ್ಪದಾಸರು
ಶೇಷನುತ ಗೋಪ ವಿಠ್ಠಲ | ನೀ ಸಲಹೊ ಇವಳಾ ಪ ವಾಸದೇವನೆ ನಿನ್ನ | ಪ್ರಾರ್ಥಿಸುವೆ ಹರಿಯೇ ಅ.ಪ. ಕನ್ಯೆ ಬಹು ಭಾವುಕಳು | ನಿನ್ನೆಯಿಂ ಪ್ರಾರ್ಥಿಪಳುಘನ್ನ ಹರಿದಾಸ್ಯದಲಿ | ಮುನ್ನಮನವಿರಿಸೀ |ಇನ್ನು ತೈಜಸರೂಪ | ಚೆನ್ನ ಶೇಷನು ಆಗೆಮಾನ್ಯರೂ ಪರಮಗುರೂ | ವನ್ನೆ ಕಂಡಿಹಳೋ 1 ಗುರುತರೂಪಿ ತೈಜಸನು | ವ್ಯಾಸಪೀಠದ ಮುಂದೆಇರುತ ಗುರು ರಾಜರ | ಮಹಿಮೆ ಪೇಳುತಲೀ |ಹರಿಸುತಲಿ ಕನ್ಯೆಗೇ | ಫಲಪುಷ್ಪ ತಾಂಬೂಲದೊರಕಿಸಿಹ ಅದರಿಂದೆ | ಉಪದೇಶವಿತ್ತೇ 2 ಪತಿಸೇವೆ ದೊರಕಿಸುತ | ಕೃತ ಕಾರ್ಯಳೆಂದೆನಿಸೊಹಿತವಹಿತವೆರಡರಲಿ | ರತಿ ಇಡದೆ ಉಂಬಾ |ಮತಿಯನ್ನೇ ಕರುಣಿಸುತಾ | ಮತಿಮತಾಂವರರಂಘ್ರಿಶತಪತ್ರ ಸೇವೆಯಲಿ | ರತಳು ಎಂದೆನಿಸೊ 3 ಭವ | ಸಾಗರದ ಬತ್ತಿಪುದುಮರುತಾಂತರಾತ್ಮ ಹರಿ | ವೇಣುಗೋಪಾಲಾ 4 ಭಾವ ಮೈದುನಗೊಲಿದ | ಶ್ರೀವರನೆ ಮೈದೋರಿಭಾವುಕಳೆ ಪೊರೆಯೆಂದು | ಪ್ರಾರ್ಥಿಸುವೆ ಹರಿಯೇ |ಸಾರ್ವಭೌಮನೆ ಹರಿಯೆ | ಕೋವಿದೋತ್ತಂಸ ಗುರುಗೋವಿಂದ ವಿಠ್ಠಲನೆ | ನೀವೊಲಿಯ ಬೇಕೋ 5
--------------
ಗುರುಗೋವಿಂದವಿಠಲರು
ಶೋಭಾನೆ ಶೋಭಾನೆ ಶೋಭಾನೆ ಪ ಶ್ರೀಗಣಾಧಿಪತಿಯ ಸಂಸೇವಿಸಿ ಶಂಕರನ ಭಜಿಸಿ ವಾಗಾಭಿಮಾನಿಯೆನಿಪ ಸರಸ್ವತಿ ದೇವಿಗೆ ವÀಂದಿಸಿ ಸಾಗರಸುತೆಯರಮಣ ನಿಂತು ಪೇಳಿಸಿದ ಪರಿಯೊ ಳೀಗ ಗಂಡುಮಕ್ಕಳಾಶೀರ್ವಾದ ಪದವ ಪೇಳ್ವೆ ಸುಜನರೆಲ್ಲಾಲಿಪುದು ಶೋಭಾನೆ 1 ಬಾಲನಾಗಿ ಪ್ರಹ್ಲಾದನವೋಲ್ ಬಹುಕ್ರೀಡೆಗಳಾಡುತಲಿ ಮೇಲೆ ಪಂಚಾಬ್ದದಿ ಸದ್ ವಿದ್ಯಾಭ್ಯಾಸಗಳನೆ ಮಾಡಿ ಶಾಸ್ತ್ರಾರ್ಥವೇತ್ತನಾಗುತಲಿ ಶೀಲಾದಿ ಸದ್ಗುಣಗಳುಳ್ಳ ಬಾಲೆಯಳ ಮದುವೆಯಾಗಿ ಕಾಲ ಕಾಲದಲ್ಲಿ ದೇವಋಷಿ ಪಿತೃಗಣಗಳ ಪೂಜೆ ಅಗ್ಗಳ ನೀನಾಗು 2 ಕೆರೆಗಳ ಕಟ್ಟಿಸು ಸರೋವರಗಳನ್ನೆ ಮಾಡಿಸು ನಿ- ನಿಖಿಳ ಯಜ್ಞಗಳಾಚರಿಸು ಸತ್ಪಾತ್ರಕ್ಕೆಯಿತ್ತುದಾತನೆಂದೆನಿಸು ನಿರತ ಬಂದವರಿಗನ್ನ ನೀಡುತ್ತ ಪ್ರಸನ್ನ ಮನದಿ ಮರಗಳ ಹಾಕಿಸು ಸಪ್ತಸಂತಾನಗಳನ್ನೆಗಳಿಸು ಮಾನ್ಯರೊಳು ವರ್ತಿಸಿಸುಖಿಸು 3 ಧರ್ಮಯುಕ್ತನಾಗುತ್ತ ಅಧರ್ಮಗಳ ಬಿಡುತ ಸ- ತ್ಕರ್ಮಗಳಾಚರಿಸು ಫಲವ ಕಂಜಾಕ್ಷಗರ್ಪಿತಮಾಡು ನಿತ್ಯ ಸಂತಸದಿ ಮರ್ಮಜ್ಞರೆನಿಪ ಗುರುಹಿರಿಯರ ಸೇವಿಸುತ ಸ ಮಾಡಿ ನಿತ್ಯಸುಖಿಯಾಗು 4 ಧೀರ್ಘಾಯುವಾಗಿರು ಬಂಧು ವರ್ಗವ ಪರಿಪೋಷಿಸು ಭರ್ಗಾದಿ ದೇವತೆಗಳ ಭಕ್ತಿಯಿಂದಾ ಪೂಜಿಸಿತ್ರಿ- ಅರ್ಥಿಯ ಪೊಂದು ಸ್ವರ್ಗಸ್ಥಿತಿ ಲಯಕರ್ತ ಗುರುರಾಮವಿಠಲ ನಘ್ರ್ಯ ಸಂಪದಗಳಿತ್ತು ಆದರಿಸಿ ತನ್ನ ಭಕ್ತಾ ನಿತ್ಯ ಸತ್ಯಾಧನವ ಮಾಡಿಸುವಾ ಶೋಭಾನೆ 5
--------------
ಗುರುರಾಮವಿಠಲ
ಶೌರಿ ಬಾರೋ ಶ್ರೀಹರಿ ಪ ಬಾರೋ ಬಾರೋ ಕರುಣಾನಿಧಿ ನಿನ್ನನು ಬಾರಿ ಬಾರಿಗೆ ಸಿರಬಾಗಿ ನಮಿಸುವೆನು ಅ.ಪ ಮಾರನಯ್ಯನೆ ಮಂಗಳರೂಪ ತೋರೊ ಬೇಗನೆ ಸಾರಸಾಕ್ಷ ಸನ್ಮಂಗಳ ಮಹಿಮನೆ ತೋರೋ ನಿನ್ನ ಮಹಾ ಮೀನರೂಪವನು 1 ಸುಂದರಾನನ ಚಂದಿರವದನ ಮಂದಹಾಸನೆ ದುರಿತ ಕಳೆವಂದದಿ ಬೆನ್ನಿಲಿ ಮಂದರವೆತ್ತಿದ2 ಆದಿದೈತ್ಯನು ಭೂದೇವಿಯಪಹಾರ ಗೈದನು ಆ ದಿತಿಜರ ಸಂಹಾರ ಮಾಡಲು ನೆಲ ವರಾಹ ಬೇಗ 3 ಕಂದನಾಡಿದ ಆ ನುಡಿ ಕೇಳಿಯಾನಂದ ತಾಳಿದ ಮಂದರೋದ್ಧರ ಮುಚುಕುಂದ ವರದ ಸುರ- ಗಂಗೆಯ ಪಿತ ನರಸಿಂಗರೂಪದಿ 4 ಬಾಲರೂಪದಿ ಬೇಡಿದ ದಾನ ಭೂಮಿ ಮಾತ್ರದಿ ಬೇಡಿದುದನೆ ಕೊಟ್ಟಾಮಹೀಪಾಲನ ದೂಡಿ ಪಾತಾಳಕ್ಕೆ ಬಾಗಿಲ ಕಾಯ್ದೆ 5 ಶೂರ ರಾಜರ ಸಂಹಾರ ಮಾಡಿ ತೋರಿ ಶೌರ್ಯವ ಸಾಗರಶಯನಗೆ ತೋರಿ ಪರಾಕ್ರಮ ಶೂಲಿಯ ಧನುವಿತ್ತೆ ರೇಣುಕಾತ್ಮಜ 6 ವಾನರಾಧಿಪ ಹಗಲಿರುಳು ಭಕ್ತಿಮಾಡಿ ಧ್ಯಾನಿಪ ಶ್ರೀ ಮಾನಿನಿಯಳ ಕೈಪಿಡಿಯುತ ಅಯೋಧ್ಯದಿ ಮೆರೆದ ಶ್ರೀರಾಮ ಚಂದಿರನೆ 7 ಪಾಂಡುನಂದನ ಮಾಡಿದ ನಿನ್ನ ಬಂಡಿ ಬೋವನ ಸಂದೇಹಿಸದಲೆ ಅಂದು ಅವರ ಮನೆ ಎಂಜಲ ಬಳಿದ ಮುಕುಂದನೆ ಬೇಗದಿ 8 ಮಂಗಳಾತ್ಮಕ ತ್ರಿಪುರರ ಮದ ಭಂಗನಾಶಕ ಮಂಗಳಮಹಿಮ ವಿಹಂಗವಾಹನ ಸುರ ಸಂಗೀತಲೋಲ ಕೃಪಾಂಗ ದಯಾನಿಧೆ 9 ತೇಜಿಯನೇರುತ ಸುಜನರು ಮಾಳ್ಪಪೂಜೆಗೊಳ್ಳುತ ರಾಜೀವಾಕ್ಷ ರಕ್ಕಸ ಸಂಹಾರಕ ಅ- ಪಾರ ಮಹಿಮ ರಥವೇರುತ ತವಕದಿ 10 ಕಂಜಲೋಚನ ಕಮಲಾಯತಾಕ್ಷ ಮಂಜುಭೂಷಣ ಕಂಜದಳಾಂಬಕ ಕಮಲನಾಭ ವಿಠ್ಠಲಝಗಝಗಿಸುವ ಮದ್ಹøದಯ ಮಂಟಪಕೇ 11
--------------
ನಿಡಗುರುಕಿ ಜೀವೂಬಾಯಿ