ಒಟ್ಟು 676 ಕಡೆಗಳಲ್ಲಿ , 91 ದಾಸರು , 584 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಶರಣು ಶರಣು ಲಿಂಗಾ | ಶರಣು ಶ್ರೀ ಭಸಿತಾಂಗಾ | ಶರಣು ಗಗನ ಗಂಗಾಧರ ಗೋರಾಜ ತುರಂಗ | ಗುರುಕುಲೋತ್ತುಂಗಾ ಪ ಪುರಹರ | ಸಂತರ ಮನೋಹರ | ಅಂತಕನ ಗೆದ್ದೆ | ದಂತಿ ಚರ್ಮವ ಪೊದ್ದೆ | ಕಂತು ಮುನಿಯ ಗೆಲಿದೆ ಮಂತ್ರಿವಂದಿತ ಶೀಲ | ಸಂತತಿಗಳ ಪಾಲ | ಅಂತರಂಗದಲೆನ್ನ ಗ್ರಂಥಿಯ ಹರಿಸಿ ನಿರಂತರ ಸಂತರಿಸೋ 1 ಶುಕ ಯತಿಯೆ | ವನದೊಳು ರಾಯನ | ವನುತಿಯ ಮಾಡಿದ | ಘನ ಶೌರ್ಯನ ಶಿವನೆ || ಸನಕಾದಿಗಳ ಪರಿಯ | ಅನುದಿನದಲಿ ಗಿರಿಯ | ಫಣಿಭೂಷಣ ಶಂಭೋ 2 ಅಹಂಕಾರಾತ್ಮನೆ ಶರ್ವ | ಮಹಾಕೇಶ ವಿಷಗ್ರೀವ | ಬಹುದೂರ ಕೂಟ | ಮಹಿಧರ ನಿವಾಸನೆ | ಮಹಿಧರ ತೀರದಿ || ಮಹಿಮೆಯ ಬೀರುತ್ತ | ರಹಸ್ಯದಲಿ ಮೆರೆವ | ಶ್ರೀಹರಿ ವಿಜಯವಿಠ್ಠಲ ಸವೋತ್ತಮ | ನಹುದೆಂದು ಧೇನಿಪನೆ3
--------------
ವಿಜಯದಾಸ
ಶರಣು ಶರಣುಶರಣು ದಶರಥ ರಾಮದೂತಗೆ ಪ ಶರಣು ಕುರುಕುಲಾಧೀಶಗೆಶರಣು ವೈಷ್ಣವ ಮತ ವಿಲಾಸಗೆಶರಣು ಮುಖ್ಯಪ್ರಾಣಗೆ ಅ ವಾರಿಧಿಯನು ವೇಗದಿ ದಾಟಿ ವನವ ಕಿತ್ತಿದಾತಗೆಮೇರೆಯಿಲ್ಲದೆ ಅಸುರರ ಸಂಹರಿಸಿದ ರಣಶೂರಗೆವಾರಿಜಾಕ್ಷಿ ಸೀತಾದೇವಿಗೆ ವರದ ಮುದ್ರಿಕೆಯನಿತ್ತಗೆಧೀರತನದಲಿ ಅಕ್ಷಕುಮಾರನ ಪ್ರಾಣವನು ಕೊಂಡಗೆ 1 ರಾಜಸೂಯವ ರಚಿಸಬೇಕೆಂದು ರಾಜರ ಸೀಳಿದಾತಗೆರಾಜಮುಖಿಯಳ ರಕ್ಷಿಸಿ ಮೃಗರಾಜಗೆ ಒಲಿದಾತಗೆತ್ರಿಜಗವಂದಿತ ದೇವಗೆ ಸಜ್ಜನಪ್ರಿಯ ಎನಿಪಗೆರಾಜ ಧರ್ಮಗೆ ಅನುಜನಾದಗೆ ರಾಜಪೂಜಿತ ರಾಜಗೆ2 ಧಾರಿಣಿಯೊಳು ದುರ್ವಾದಿ ದೈತ್ಯರ ಗಂಟಲಗಾಣವಾದಗೆಮೂರೇಳು ಮತವನೆಲ್ಲ ಮುರಿದ ಧೀರ ಮಧ್ವರಾಯಗೆಸಾರ ತತ್ತ್ವಗಳನೆಲ್ಲ ಶೋಧಿಸಿ ಸೂರೆ ಮಾಡಿದಾತಗೆಊರ್ವಿಯೊಳು ವರ ದೇವತಾದಿಕೇಶವ ದೊರೆ ದಾಸಗೆ 3
--------------
ಕನಕದಾಸ
ಶರಣು ಹೋಗುವೆನಯ್ಯ ನಾನು ಪ ಸಿರಿ ಅಜಭವ ಶಕ್ರ ಸುರಸ್ತೋಮಗಳನೆಲ್ಲ ಸರಸದಿಂದ ಆಳ್ವ ಪರಮಪುರುಷ ಹರಿಗೆ ಶಿರಬಾಗಿ ನಮಿಸುತ ಅ.ಪ. ನಿರುತ ಆನಂದದಿ ಮೆರೆದು ಇರುವಂಥ ನಿರಜ ನಿತ್ಯನು ಆದ ಉರಗನ ಮೇಲ್ವರಗುತ ಪರಮ ಪರಾತ್ಪರ ಪರಮವೇದದ ಸಾರ ಪರಮ ಸದ್ಗುಣ ಪೂರ್ಣ ಪುರುಷಸೂಕ್ತ ವಂದ್ಯ ಪರಿಪರಿ ರೂಪದಿ ಸರ್ವತ್ರ ಇರುವಂಥ ನಿರ್ಗುಣ ನಿರಾಕಾರ ನಿರುಪಮ ನಿಸ್ಸೀಮ ನಿರುತ ತೃಪ್ತನು ಆದ ಸರ್ವಸಾರ ಭೋಕ್ತ ಸರ್ವರ ಬಿಂಬನು ಸರ್ವಗುಣ ಪೂರ್ಣ ಸರ್ವರ ಆಧಾರ ಸರ್ವೇಶ ಸ್ವತಂತ್ರ ಸರ್ವಶಬ್ದ ವಾಚ್ಯ ಸರ್ವರಿಂ ಭಿನ್ನನು ಸರಸಸೃಷ್ಟಿಯ ಮಾಳ್ವ ನೀರಜನಾಭಗೆ ಚರಣವ ಪಿಡಿಯುತ್ತ ಉರುಗಾಯನ ದೇವ ಸಲಹು ಸಲಹೆಂದು 1 ವಾರಿಯೊಳಾಡುವ ಭಾರವಹೊರುವ ಕೋರೆಯತೀಡುವ ಕರುಳಾನು ಬಗೆಯುವ ವರವಟು ಆಗುವ ಪರಶುವ ಪಿಡಿಯುವ ನಾರಿಯ ಹುಡುಕುವ ನಾರಿಯ ಕದಿಯುವ ಬರಿಮೈಯ್ಯ ತೋರುವ ತುರುಗವನೇರುವ ನಾರಿಯು ಆದವ ಭಾರತ ಮಾಡುವ ವರ ಸಾಂಖ್ಯ ಹೇಳುವ ಕರಿಯನು ಪೊರೆಯುವ ಪೋರಗೆ ಒಲಿದವ ವರ ಋಷಭನಾದ ಹರಿ ಯಜ್ಞ ನಾದವ ತರಿವ ರೋಗಂಗಳ ವರಹಂಸ ರೂಪನು ತುರುಗ ವೇಷಧಾರಿ ನಾರಾಯಣ ಮುನಿಯೆ ಗುರು ದತ್ತಾತ್ರೇಯನೆ ಪರಿಸರ ಪರಮಾಪ್ತ ಪೊರೆಯೊ ಮಹಿದಾಸನೆಂದು ಕರವೆತ್ತಿ ಮುಗಿಯುತ 2 ಪಾಪಿಯ ಪೊರೆದವಗೆ ತಾಪ ಇಲ್ಲದವಗೆ ಅಪವರ್ಗದಾತಗೆ ವಿಪನ ಏರಿದವಗೆ ಗೋಪತಿಯಾದವಗೆ ತಾಪವ ಮೆದ್ದವಗೆ ಚಾಪವ ಮುರಿದವಗೆ ಚಪಲ ಇಲ್ಲ ದವಗೆ ಕಪಟರ ವೈರಿಗೆ ಗುಪ್ತದಿ ಇರುವಗೆ ವಿಪ್ರನ ಸಖನಿಗೆ ಅಪ್ರಮೇಯನಿಗೆ ಗೋಪೇರ ವಿಟನಿಗೆ ತಾಪಸ ಪ್ರೀಯಗೆ ವಿಪ್ರಶಿಶು ತಂದವಗೆ ಮುಪ್ಪಿಲ್ಲ ದವಗೆ ತ್ರಿಪುರಾರಿ ಸಖಗೆ ಕೃಪಣ ವತ್ಸಲನಿಗೆ ತಪ್ಪು ಮಾಡದವಗೆ ಆಪ್ತತಮನಿಗೆ ಸಪ್ತ ಶಿವವ್ಯಕ್ತನಿಗೆ ಶ್ರೀಪತಿಯಾದವಗೆ ಕಪಟನಾಟಕ ಪ್ರಭು ಗೋಪಾಲಕೃಷ್ಣಗೆ ಒಪ್ಪಿಸಿ ಸರ್ವಸ್ವ ಅಪ್ಪನೆ ಅಪ್ಪನೆ ತಪ್ಪದೆ ಸಲಹೆಂದು 3 ಅನ್ನವು ಆದವಗೆ ಅನ್ನಾದ ನೆಂಬುವಗೆ ಅನ್ನದ ಖ್ಯಾತನಿಗೆ ಚಿನ್ಮಯ ರೂಪಗೆ ಬೆಣ್ಣೆಯ ಕಳ್ಳಗೆ ಅನಾಥನಾದವಗೆ ಕನಕಮಯನಿಗೆ ಅನಂತರೂಪನಿಗೆ ಉಣ್ಣದೆ ಇರುವವಗೆ ಉಣ್ಣುತ ಉಣಿಸುವವಗೆ ಜ್ಞಾನಿಗಮ್ಯನಿಗೆ ಜ್ಞಾನ ದಾಯಕನಿಗೆ ಗುಣತ್ರಯ ದೂರಗೆ ಭಾನುವ ತಡೆದವಗೆ ಆನತ ಬಂಧುವಿಗೆ ಅನುಪಮನಾದವಗೆ ತನುಮನ ಪ್ರೇರಿಪಗೆ ದಾನವ ವೈರಿಗೆ ತನ್ನಲ್ಲೆ ರಮಿಸುವನಿಗೆ ಮನ್ಮಥ ಪಿತನಿಗೆ ಪೆಣ್ಣಿನ ಪೊರೆದವಗೆ ಅಣುವಿಗೆ ಅಣುವಿಹಗೆ ಘನಕೆ ಘನ ತಮನಿಗೆ ಕಣ್ಣಿಲ್ಲದೆ ನೋಳ್ಪ ಉನ್ನತ ಪ್ರಭುವಿಗೆ ಬೆನ್ನು ಬೀಳುವೆ ನಾನು ಇನ್ನು ಕಾಯೋ ಎಂದು 4 ಹೇಯನಾಗದ ಶೃತಿ ಗೇಯನು ಸುಜನರ ಪ್ರೀಯನು ಸರ್ವರ ಕಾಯುವ ಸುಂದರ ಹಯಮುಖ ಸರ್ವದ ಪ್ರಾಯದಿ ಮೆರೆಯುವ ಗಾಯನ ಪ್ರಿಯನಾದ ಮಾಯಾರಮಣ ಭಾವ ಮಾಯೆ ಹರಿಸಿ ಮುಕ್ತಿ ಭಾಗ್ಯ ಭಕ್ತರಿಗೀವ ತೋಯಜಾಂಬಕ ಸುರ ನಾಯಕರಿಗೆ ಭಕ್ತಿ ತೋಯದಿ ಮುಳುಗಿಪ ಶ್ರೀಯರಸಾಭಯ ದಾಯಕ ಗುರು ಮಧ್ವ ರಾಯರ ಪ್ರಿಯನಾದ ಜೇಯ ಜಯಮುನಿ ವಾಯುವಿನ ಅಂತರದಿ ನವನೀತ ಧರಿಸಿರ್ಪ ತಾಂಡವ ಸಿರಿಕೃಷ್ಣ ವಿಠಲ ರಾಯನಿಗೆ ಕಾಯ ವಾಚಮನದಿ ಗೈಯ್ಯುವ ಸಕಲವನು ಈಯುತ ನಮಿಸುತ ಜೀಯನೆ ಜೀಯನೆ ಕಾಯಯ್ಯ ಕಾಯೆಂದು 5
--------------
ಕೃಷ್ಣವಿಠಲದಾಸರು
ಶರಣುಹೊಕ್ಕೆನು ಕರುಣಾಂಬುಧಿಯೇ ಕಾಯೊ ಪ ಸುರಪುರ ನಿಲಯ ಲಕ್ಷ್ಮೀಪತಿಯೇ ಅ.ಪ ಪುಂಡುದಾನವರ ಶಿರವನೆ ಛೇದಿಸಿ ಮುಂ ದಿಂಡುದರಿದು ರಕ್ಕಸರ ಸಂಹರಿಸಿ ಖಂಡ ವಿಭೀಷಣಗುದ್ದಂಡಪದವಿಯ ಇತ್ತನೆಂದು 1 ಸುರಪನ ವರ ತನುಜನ ರಥದೊಳು ನಿಂದು ಕರುಣದಿಂದಲೆ ತುರಗವ ಪೊಡೆಯೆ ಕುರುಕುಲ ಚತುರ್ಬಲವ ಸಂಹರಿಸಿಯೆ ಉರಗಶರವು ಬರೆ ನರನ ಕಾಯ್ದನೆಂದು 2 ನರಮೃಗರೂಪಿನಲಿ ಹಿರಣ್ಯಕಶಿಪುವಿನ ಉರವ ಬಗೆದು ಶರಣನ ಪೊರೆಯೆ ಸುರಪುರವಾಸನೆ ಶ್ರೀಲಕ್ಷ್ಮೀ ಅರಸನೆ ದುರುಳ ನೆಗಳ ಕೊಂದು ಕರಿಯ ಕಾಯ್ದನೆಂದು 3
--------------
ಕವಿ ಲಕ್ಷ್ಮೀಶ
ಶಶಿಮುಖಿ ಜಾನಕಿ ರಮಣ ವಸುಧೆಯೊಳಗೆ ನಿಮ್ಮ ಭಜನೆಯ ಮಾಡುವರ ಶಿಶುವುಯೆಂದು ತಿಳಿದು ಶೀಘ್ರದಿ ರಕ್ಷಿಸೊ ಪ ಪಶುಪತಿ ರಕ್ಷಕ ಪಾವನ ಮೂರ್ತಿ ಪಶುಪಾಲಕನಾದ ಪರಮಾತ್ಮ ಕುಸುಮಜನನು ಅತಿಕರುಣದಿ ನೀನು ಕುಶಲದಿ ಪಡೆದ ಗುಣವಂತಾ ಹಸ ಮೀರಿನಡೆವಂತ ಅನೇಕ ದುಷ್ಟ ಅಸುರರ ಛೇದಿಸಿದ ಬಲವಂತಾ ದಶದಿಕ್ಕಿನೊಳಗೆ ದಾರನು ಕಾಣೆನೊ ದಶವಂತನು ನಿನಗಾರು ಸರಿಹಾರೊ 1 ಪಿತೃವಾಕ್ಯ ಪರಿಪಾಲನೆ ಮಾಡಿದ ಪುತ್ರನು ಅನಿಸಿದ ಪುಣ್ಯನಿಧಿ ಪತಿ ಧರ್ಮವ ಸರ್ವದಾ ನಡೆಸುವ ಸತ್ಯಮೂರ್ತಿ ಸೌಭಾಗ್ಯನಿಧಿ ಶತದ್ರೋಹಿಯಾಗಿ ಸೀತೆಯ ಒಯ್ದನ ಶತಮುಖನಯ್ಯನ ಸಂಹರಿಸಿದಿ ಸತತ ವಿಭೀಷಣ ಭಕ್ತಿಯಿಟ್ಟ ಸಲುವಾಗಿ ಲಂಕೆಯ ಧಾರೆಯನೆರದೀ 2 ಯಾದವ ಕುಲಪತಿ ಯಶೋದೆನಂದನ ವ್ಯಾಧನ ರಕ್ಷಿಸಿದಿ ವಿಶ್ವೇಶ ಬಾಧಕ್ಕೆ ಒಳಗಾಗಿ ಕರಿಕೂಗಲು ಮಕರಿ ಬಾಧೆಯ ತಪ್ಪಿಸಿದ ಪರಮೇಶಾ ಸಾಧು ಸಜ್ಜನ ಸರ್ವರ ಸಲಹುವ ಸಾಧು ಗುಣಾನಂದ ಸರ್ವೇಶಾ ಮಾಧವ `ಸಿರಿಹೆನ್ನೆ ವಿಠಲ' ನಿನ್ನಯ ಮೋದವ ತೋರೋ ಜಗದೀಶಾ 3
--------------
ಹೆನ್ನೆರಂಗದಾಸರು
ಶಾರದೇಂದುಮುಖಿ ನೀರಜನಯನಳೆ ಬಾರೆಲೆ ಬಾಗಿಲ ತೆಗಿಯಲೆ ಭಾಮೆ ಪ ಯಾರಯ್ಯ ಬಾಗಿಲ ಹೊರಗೆ ನಿಂತಿರುವನು ಜಾರ ಪುರುಷನಂತೆ ತೋರುವೆ ನೀನು ಅ.ಪ ಜಾರನಾದರೆ ನಿಂಗೆ ಜಾರನಲ್ಲವೆ ಮೀನಾ ಕಾರ ಧರಿಸಿರುವ ಹರಿಯಲೆ ಭಾಮೆ ಮೀನನಾದರೇ ಬಲು ಮೌನದಲಿರದಂತೆ ಮಾನವರಂತೆ ಮಾತು ಯಾವುದೋ ನಿನಗೆ 1 ಮಂದರಗಿರಿಯ ಬೆನ್ನಿಂದ ಧರಿಸಿರುವ ಅಂದ ಕೂರ್ಮನಲ್ಲವೇನೆ ಭಾಮೆ ಕೂರ್ಮ ನೀನಾದರೆ ಕೂಪದೊಳಿರುವುದೆ ಧರ್ಮವೆಂಬುವುದನು ಮರೆತೆಯಾ ನೀನು 2 ನೀಲವೇಣಿಯೆ ಕೇಳೆ ಕೋಲರೂಪದಿ ಬಂದು ಕ್ಷಿತಿ ತಂದೆನೆ ಭಾಮೆ ಪೋತರೂಪನೇ ನಿಜ ಧಾತ್ರಿಯ ಭೇದಿಸಿ ಗಾತ್ರ ರಕ್ಷಣೆ ಮಾಡು ಹೋಗೆಲೊ 3 ಸ್ತಂಭ ಭೇದಿಸಿ ರಿಪು ಡಿಂಭನ ಕಾಯಲು ಜಂಭದಿ ಖಳನನು ಕೊಂದೆನೇ ಭಾಮೆ ಸ್ಥಂಭ ಭೇದಿಸಿದ ನಾ ನಂಬುವುದಿಲ್ಲವೊ ಡಂಭದಿ ಬಾಗಿಲು ಭೇದಿಸಿ ಬಾರೊ 4 ವಾಮನನೆಂದು ವಟುರೂಪದಿ ಬಂದು ಸಾರ್ವ ಭೌಮನಲ್ಲಿ ಭೂಮಿ ಬೇಡಿದೆ, ಭಾಮೆ ವಟುರೂಪನಾದರೆ ಕುಟಿಲಾಕ್ಷಿಯರಲಿಂಥ ಚಾಟುವಚನಗಳು ಯಾಕೆಲೊ 5 ದುರುಳನೃಪರ ಪರಿಹರಿಸಿದ ಭೃಗುಮುನಿ ವರಕುಲಜಾತ ಶ್ರೀ ರಾಮನೇ ಭಾಮೆ ಮುನಿವರಸುತನಾಗಿ ಸ್ವನಿಯಮಗಳ ಬಿಟ್ಟು ವನಿತೆಯರಲ್ಲಿಂಥಾ ಸರಸವೆ ನಿನಗೆ 6 ದಶರಥ ನೃಪತಿಯ ಮನೆಯೊಳವತರಿಸಿ ದಶಶಿರರನು ಕೊಂದ ರಾಮನೆ ಭಾಮೆ ಪರ ಕಾಮಿನಿಯರೊಳಿಂಥಾ ಪ್ರೇಮ ಮಾಡುವುದುಂಟೆ ಯೋಚಿಸೊ ನೀನು 7 ನೀರಜಾಕ್ಷಿ ಕೇಳೆ ಜಾರಚೋರತೆಯಲ್ಲಿ ಸಿರಿ ಕೃಷ್ಣನೇ ಭಾಮೆ ಚೋರನಾದ ಮೇಲೆ ಸೇರಿಸುವುದು ಹೇಗೆ ಭಾರಿ ಆಭರಣಗಳಿರುವುವೊ 8 ಮುಗ್ಧೆ ಕೇಳೆ ಇದಬದ್ಧವಲ್ಲದೆ ಅತಿ ಶುದ್ಧನಾದ ಬುದ್ಧರೂಪನೆ ಬುದ್ಧರೂಪನೆ ನಿನ್ನ ನಡತೆಯ ಕೇಳಲು ಶುದ್ಧಿಯು ಲೋಕಪ್ರಸಿದ್ಧವು9 ಸರಸಿಜಮುಖಿ ವರತುರಗವನೇರಿದ ನೃಪರ ಗೆಲ್ವ ಕಲ್ಕಿಯೇ ಭಾಮೆ ದುರುಳ ಜನರು ಇಲ್ಲಿ ಸೇರುವುದಿಲ್ಲವೊ ತರಳೆಯರಲಿ ದುಷ್ಟ ಕಾರ್ಯವೇ ಪೋಗೊ10 ಪರಿ ಸರಸವನಾಡುವ ನಾಮಗಿರಿ ನರಹರಿ ರೂಪ ರಮಾ ರಮೇಶರು ವಿಹರಿಪ ಬಗೆಯನು ಸ್ಮರಿಸುವ ಸುಜನರ ಪರಮಪುರುಷ ಹರಿ ಪೊರೆವುದು ನಿಜ 11
--------------
ವಿದ್ಯಾರತ್ನಾಕರತೀರ್ಥರು
ಶಿವ ಕರುಣಿಸಯ್ಯ ಚಂದ್ರಶೇಖರ ನೀನೆನ್ನೊಳೊಲಿದು ಪ ತಾಪ ಹರಣ ಮಾಡು ನಿನ್ನ ದಿವ್ಯಚರಣಗಳಿಗೆ ನಮಿಪೆನುರಗಾಭರಣ ಶರಣು ಶರಣು ಶರಣು ಅ.ಪ. ಕಾಳಭೈರವ ಶಂಭು ಶಂಕರ ಗಿರಿಜೆಯಾಣ್ಮಕೇಳು ಕೇಳು ನಿನ್ನ ಕಿಂಕರಹೂಳಿ ಷಡ್ರಿಪುಗಳನು ಮನದಲಿಊಳಿ ನಿಜಜ್ಞಾನವನು ಸಜ್ಜನರೋಳಿಯಲಿ ನಿಲಿಸುತ್ತ ನಿತ್ಯದಿಬಾಳಿ ತಾಳಿ ಎನುವಂತೆ 1 ನಂಟನಯ್ಯ ಭಕ್ತ ಜನಕೆ ಇನ್ನು ಮಿತಿಯುಂಟೆ ನಿನ್ನಯ ಕರುಣಲಹರಿಂಗೆಎಂಟು ದಿಕ್ಕನು ಸುಡುವ ವಿಷವನುಕಂಠದಲಿ ಧರಿಸಿ ಜಗತ್ತಿನಕಂಟಕವನು ಪರಿಹರಿಸಿದಂಥಬಂಟ ನೀನೈ ಮಹಾದೇವಾ 2 ಮೂರು ಊರುಗಳನು ಸಂಹಾರಾಮಾಡಿ ಉಳಿಸಿದಿಘೋರ ಸಂಕಟದಿಂದ ಜಗಪೂರಸೂರಿ ಬೊಮ್ಮನ ಮತ್ತೆ ಗದುಗಿನವೀರನಾರಾಯಣನ ಕೂಡಿನಾರಿ ಸತಿಯನಸೂಯಳನ್ನುದ್ಧಾರ ಮಾಡಿದ ರೀತಿಯಲ್ಲಿ 3
--------------
ವೀರನಾರಾಯಣ
ಶುಭ ಪ ಬ್ರಹ್ಮರೂಪದಿ ಜಗವನು ಪುಟ್ಟಿಸಿ ಬ್ರಹ್ಮಜನಕನ ನೆತ್ತಿಲಿ ರಕ್ಷಿಸಿ ಬ್ರಹ್ಮ ಮೂರುತಿ ಬಾಲಬ್ರಹ್ಮದಿ ಚರಿಸಿದಾತಂಗೆ ಮಹಾ | ಬ್ರಹ್ಮಾಂಡಕೋಟಿ ಉದರದೊಳಿರಿಸಿ | ಬ್ರಹ್ಮನ ಸ್ತುತಿಗೆ ನಿಲುಕದ ಅವಿನಾಶಿ ಬ್ರಹ್ಮಾದಿ ಸುರವಂದಿತ ರುದ್ರನಾಗಿ ಸಂಹರಿಸಿ 1 ಜಗವನುದ್ಧರಿಸಲು ದೇಹವನು ಜಗದೀಶ್ವರನು ಅವತರಿಸಿ ಬಂದಿಹನು | ಜಗ ಮೃಗಜಲವೆಂದು ತಿಳಿದಿರೆ ಜಗದೊಳಾಡುವಗೆ || ಬಗೆ ಬಗೆಯಲಾಡುತ ಗಗನ ಗಟ್ಟಿಹನು | ನಿಗಮಕೆ ನಿಲ್ಕದೆ ನಿತ್ಯನೆನಿಸುವನು ಝಗಝಗಿಸುವ ಆರತಿಯ ಬೆಳಗಿರೆ ಜಗದ ಜನಕನಿಗೆ 2 ಛಪ್ಪನ್ನ ದೇಶಕೆ ಶೋಭಿಸುವ ಒಪ್ಪುವ ಕೋಳಕೂರೆಂದೆನಿಸುವ ದಿಕ್ಕು ದಕ್ಷಿಣಾ ಭೀಮಾತೀರದಿ ಥಳಥಳದಿ ಹೊಳೆವ |ಶ್ರೀ ಮಹಾಗುರು ಇಪ್ಪತ್ತೊಂದು ಸಮಾಧಿಯೊಳಿರುವತಪ್ಪದೆ ರಾಮಾತ್ಮಜನಾಗಿರುವ | ಸೊಪ್ಪೆರಾಯನು ಸಹಜಾನಂದ ತಾ ಯೋಗಿಯಾಗಿ ಮೆರೆವ 3
--------------
ಭೀಮಾಶಂಕರ
ಶೇಷ ಗೀರೀಶ ವಿಠಲ | ಪೋಷಿಸೊ ಇವಳಾ ಪ ಕಾಸು ವೀಸಕ್ಕೆ ಮನ | ಕ್ಲೇಶಗೊಳಿಸದಂತೆ ಅ.ಪ. ಪಥ ಮಾರ್ಗಕ್ಕೆ | ಸದ್ಗುರು ಕಟಾಕ್ಷವೆಉತ್ತಮೋತ್ತಮ ಹಾದಿ | ಎಂದು ಪೇಳಿದರೂ 1 ಹರಿಗುರೂ ಸದ್ಭಕ್ತಿ | ತರತಮ ಜ್ಞಾನವನುಕರುಣಿಸೀ ಕಾಪಾಡೊ | ಕರಿವರದ ಹರಿಯೇಕರುಣಾಳು ನಿನ್ಹೊರತು | ಆರಿಯೆ ನಾ ಅನ್ಯರನುಮರುತಾಂತರಾತ್ಮಕನೆ | ಆನಂದ ನಿಲಯಾ2 ಎರಡು ಮೂರರಿಗಳನು | ಪರಿಹರಿಸಿ ವೈರಾಗ್ಯವರಜ್ಞಾನ ಸಂಪದವ | ಕರುಣಿಸುತ ಹರಿಯೇಕರಪಿಡಿದು ಉದ್ಧರಿಸೊ | ಶರಣ ಜನ ಕಾರುಣ್ಯಮರುತಾಂತರಾತ್ಮ ಗುರು | ಗೋವಿಂದ ವಿಠಲಾ 3
--------------
ಗುರುಗೋವಿಂದವಿಠಲರು
ಶೇಷ ಪರ್ಯಂಕ ಶಯನ ವಿಷಯದಭಿ ಲಾಷೆ ಪರಿಹರಿಸಿ ಕಾಯೋ ಪ ರೆನದೆ ಮನೆಮನೆ ತಿರುಗಿದೆ ಅನಿಮಿಷೋತ್ತಂಸ ನಿನ್ನ ಪಾದವೊಂ ದಿನ ಭಜಿಸಿದವನಲ್ಲವೋ 1 ಹರಿ ಗುರುಗಳನು ನಿಂದಿಪ ನೀಚರನು ಸರಿಸಿ ಅವರನು ಸ್ತುತಿಸಿದೆ ಪೊರೆಯಲೋಸುಗ ಉದರವ - ಜನರಿಂದ ಹರಿದಾಸನೆನಿಸಿಕೊಂಡೆ 2 ಭಗವಂತ ನಿನ್ನ ಗುಣವ ವರ್ಣಿಸದೆ ಭಗವತಿಯರವಯವಗಳಾ ಸೊಗಸಿನಿಂದಲಿ ವರ್ಣಿಸಿ ಎನ್ನ ನಾ ಲಗೆ ಎರಡು ಮಾಡಿಕೊಂಡೆ 3 ಸರ್ವಪ್ರಕಾರದಲ್ಲಿ ಹಗಲಿರುಳು ದುರ್ವಿಷಯಕೊಳಗಾದೆನೋ ಶರ್ವಾದಿ ವಂದ್ಯ ಚರಣಾ ನೀನೊಲಿ ದುರ್ವಿಯೊಳು ಸಲಹ ಬೇಕು 4 ಉಪರಾಗ ಪರ್ವಗಳಲಿ ಸ್ನಾನ ಜಪ ತಪ ಅನುಷ್ಠಾನ ಜರಿದು ನೃಪರ ಮಂದಿರವ ಕಾಯ್ದು ಧನವ ತಂ ದುಪ ಜೀವಿಸಿದೆನೊ ಜೀಯಾ 5 ವೇದ ಶಾಸ್ತ್ರಾರ್ಥಗಳನು ತಿಳಿದು ಸ ನ್ಮೋದ ಬಡದಲೆ ಕುಶಾಸ್ತ್ರ ಓದಿ ಪಂಡಿತನೆನಿಸಿದೆ ಕೀರ್ತಿ ಸಂ ಪಾದಿಸಿದೆ ವ್ಯರ್ಥ ಬಾಳಿದೇ 6 ವೈರಾಗ್ಯ ಪುಟ್ಟಲಿಲ್ಲ ಘೋರ ಸಂ ಸಾರದೊಳು ಮಗ್ನನಾದೆ ಸೂರಿಗಳ ಮಧ್ಯದಲ್ಲಿ ಬುಧನಂತೆ ತೋರುವೆನು ನೋಳ್ಪ ಜನಕೆ 7 ನಾ ಮಾಡ್ದ ಪಾಪರಾಶಿ ಎಣಿಸಲ್ಕೆ ತಾಮರಸಭವಗಸದಳ ಸ್ವಾಮಿ ಎನಗೇನು ಗತಿಯೋ ಭಾರವಾದೆ ಈ ಮಹಿಗೆ ಪ್ರತಿದಿನದಲೀ 8 ಭೂತ ಸಂಬಂಧದಿಂದ ಬಹುವಿಧದ ಪಾತಕವೆ ಸಮನಿಸಿದವೋ ದಾತೃನೀ ಕಡೆ ಗೈದಿಸೋ ಭವದಿ ಜಗ ನ್ನಾಥ ವಿಠ್ಠಲ ಕೃಪಾಳೋ 9
--------------
ಜಗನ್ನಾಥದಾಸರು
ಶೇಷ-ರುದ್ರದೇವರು ಪಾದ ಭೂ- ಪಾದ ಪ. ಹರಿಗೆ ಹಾಸಿಗೆಯಾಗಿ ಹರುಷಪಡುವ ಪಾದ ಹರಿಯ ಮಂದಿರಲ್ಲಿ ಇರುವ ಪಾದ ಹರ ಪುರಂದರರಿಗೆ ಪೂಜ್ಯವಾಗಿಹ ಪಾದ ಪಾದ 1 ವಾರುಣಿ ದೇವಿಗೆ ವರನೆನಿಸಿದ ಪಾದ ಶ್ರೀ ರಾಮಗೆ ಕಿರಿಯನಾದ ಪಾದ ಘೋರ ಇಂದ್ರಾರಿಯ ಸಂಹರಿಸಿದ ಪಾದ ಪಾದ 2 ವಾಯುದೇವರು ಜೊತೆಗೆ ವಾದವಾಡಿದ ಪಾದ ನೋಯದೆ ಭೂಮಿಯನು ಪೊತ್ತಿಹ ಪಾದ ಶ್ರೀಯರಸನ ಪಾದಪದ್ಮ ಸೇವಿಪ ಪಾದ ಸುರರು ಪಾದ 3 ಸಪ್ತೆರಡು ಭುವನದಲಿ ಗುಪ್ತವಾಗಿಹ ಪಾದ ಚಿತ್ತದಭಿಮಾನಿಗೆ ಸೇವಕನಾದ ಪಾದ ಮತ್ತೆ ಮನ ಅಹಂಕಾರ ತತ್ವದೊಡೆಯನ ಪಾದ ಪಾದ 4 ಘೋರರೂಪವ ತೊರೆದು ಸೌಮ್ಯವಾಗಿಹ ಪಾದ ಸೇರಿದವರನು ಪೊರೆವ ಶ್ರೇಷ್ಠ ಪಾದ ಹಾರೈಸಿ ಗೋಪಾಲಕೃಷ್ಣವಿಠ್ಠಲನ ಪಾದ ಪಾದ 5
--------------
ಅಂಬಾಬಾಯಿ
ಶೇಷವಂದ್ಯ ಹರಿ ವಿಠಲ | ನೀ ಸಲಹೊ ಇವಳಾ ಪ ವಾಸುದೇವನೆ ಕೃಷ್ಣ | ಶ್ರೀಶ ಪುರುಷೋತ್ತಮ ಅ.ಪ. ಸೂಕರ ನೀಚ | ಯೋನಿಗಳಲಿ ಜನಿಸಿಜ್ಞಾನಾನು ಸಂಧಾನ | ಕಾಣದಿದ್ದಾಗ್ಯೂಅನೇಕ ಪೂರ್ವವೆನೆ | ಪುಣ್ಯ ಸಂಚಿತದಿಂದಮಾನವ ಸುಜನ್ಮದೊಳು | ಜನುಮ ಪೊತ್ರಿಹಳೊ 1 ತೈಜಸ ಸೂಚಿ | ವರ ಅಂಕಿತವನಿತ್ತೆಮರುತಾಂತರಾತ್ಮಕನೆ | ಮದ್ಬಿಂಜ ಪೊರೆಯಿವಳಾ 2 ವರಸು ಸೌಭಾಗ್ಯವನೆ | ಪರಿಹರಿಸಿ ದುಷ್ಕರ್ಮನಿರುತ ನಿನ್ನಯ ನಾಮ | ಸ್ಮರಣೆ ಸುಖವಿತ್ತೂಮರುತ ಮತ ತತ್ವಗಳ | ಅರಿವಾಗುವಂತೆಸಗೋಕರಿವರದ ಕಮಲಾಕ್ಷ | ಕಾರುಣ್ಯ ಮಾರ್ತೇ 3 ಪತಿಸುತರು ಹಿತರಲ್ಲಿ | ಕೃತಿರಮಣ ಸುವ್ಯಾಪ್ತಮತಿಇತ್ತು ಪೊರೆ ಇವಳ | ಕ್ಷಿತಿರಮಣ ದೇವಾಮತಿಮತಾಂ ವರರಂಘ್ರಿ | ಹಿತಸೇವೆ ದೊರಕಿಸುತಕೃತ ಕೃತ್ಯಳೆಂದೆನಿಸೊ | ಅತಿ ಚಿತ್ರ ಚರಿತಾ 4 ಕಾವ ಕರುಣಿಯೆ ದೇವ | ಭಾವುಕರ ಪರಿಪಾಲನೀವೊಲಿಯ ದಿನ್ನಿಲ್ಲ | ಆವತ್ರೈ ಜಗದೀನೋವುಸುಖ ದ್ವಂದ್ವಗಳ | ಸಮತೆಯು ಉಂಬಂತೆನಿವೊಲಿಯೊ ದೇವ ಗುರು | ಗೋವಿಂದ ವಿಠಲಾ 5
--------------
ಗುರುಗೋವಿಂದವಿಠಲರು
ಶೇಷಾಚಲ ಮಂದಿರ-ಇಂದಿರೇಶ ಪ. ಪಾದ ಸ್ಮರಣೆಯಿತ್ತು ಅ.ಪ ಕರಣಕ್ರಿಯಕರ್ಮಂಗಳೆಲ್ಲವು ಜಡವು ಕರ್ಮ ನಿನ್ನ ನಿಯಮನವಿಹುದು ನಿರುತ ಪರವಶನಾಗಿ ನಾ ಮಾಳ್ಪೆನೆಂಬ ಈ ದುರಭಿಮಾನದಿ ನಾ ಭವಕೊಳಗಾದೆನೊ 1 ವಿಷಯಂಗಳೆಲ್ಲ ಜ್ಞಾನಗೋಳಕದಿ ಬಂದು ಎನ್ನ ವಿಷಮಗೊಳಿಸಿತು ಮನ ಅಭಿಮಾನದಿಂದಲಿ ಹೃಷೀಕಪನೆ ಎನ್ನ ಮನವಿಷಮತೆಯ ಹರಿಸಿ ಪೋಷಿಸೊ ನಿರುತ ಕೃಪಾಕರ ಮೂರುತೇ 2 ದೋಷದೂರನೆ ನಿನ್ನ ವಿಸ್ಮರಣೆಯಿಂದಲಿ ವಾಸುಕೀಶಯನ ನೀ ಭೂತಾವಾಸ ನೀನಾಗಿರೆ ಮೋಸಹೋದೆನ್ನನು ಪೋಷಿಸಬೇಕಯ್ಯ 3 ಕುಟಿಲ ಮನದಲಿ ನಿನ್ನ ಭಕುತನೆಂದೆನಿಸಿದೆ ವಟಪತ್ರಶಾಯಿ ನೀ ಹಟ ಸಾಧನಕ್ಕೆ ಒಲಿಯೆ ದಿಟಭಕುತಿಯ ಕೊಟ್ಟು ಕಡೆ ಹಾಯಿಸಯ್ಯ 4 ತನುಛಾಯೆ ಕ್ರಿಯೆಯು ತನ್ನ ತನುವನಾಶ್ರೈಸಿದಂತೆ ನಾ ನಿನ್ನ ಪ್ರತಿಬಿಂಬನಾಗಿರಲು ಸದಾ ಎನ್ನ ಕ್ರಿಯೆಗಳೆಲ್ಲಾ ನಿನ್ನ ಆಣತಿಯಂತಿರೆ ಘನಮಹಿಮನೆ ನಿನ್ನಾಕ್ರಿಯವನರಿಯದೆ ಹೋದೆ5 ಪನ್ನಗಾಚಲನಿಲಯ ಆಪನ್ನರಕ್ಷಕ ನೀನಿರೆ ಬನ್ನಬಡಲ್ಯಾಕಯ್ಯ ಅನ್ಯರನಾಶ್ರಯಿಸಿ ಮನೋವಾಕ್ಕಾಯ ಕರ್ಮವನರ್ಪಿಸಲು ಸನ್ಮತಿಯನೆ ಇತ್ತು ಸತತ ಸಲಹಯ್ಯ 6 ಸರ್ವಸತ್ತಾಪ್ರದನೆ ಸರ್ವಪ್ರವೃತ್ತಿಪ್ರದನೆ ಸರ್ವರಂತರ್ಯಾಮಿ ಮಮಕುಲಸ್ವಾಮಿ ಉರಗಾದ್ರಿವಾಸವಿಠಲ ನಿನ್ನಯ ದಿವ್ಯ ಚರಣಸ್ಮರಣೆಯನಿತ್ತು ಕಾಯೊ ಕಮಲಾಕಾಂತ7
--------------
ಉರಗಾದ್ರಿವಾಸವಿಠಲದಾಸರು
ಶೋಭಾನವೆನ್ನಿರೆ ಸಕಲ ಗುಣನಿಧಿಗೆ ಶೋಭಾನವೆನ್ನಿ ಸಮೀರ ಪಿತನಿಗೆ ಶೋಭಾನವೆನ್ನಿ ಸರೋಜಸದನ ಮನೋಭಿರಾಮನಿಗೆ ಶೋಭಾನವೆನ್ನಿ ಪ ಕಪಟ ಕಮಠಗೆ ತಪ ನಿಯಾಂಬಕನಸುಪರಿಹರಿಸಿದಗೆ ಕೃಪಣ ಪ್ರಹ್ಲಾದನ ವಿಪತ್ತು ಕಳೆದವಗೆ ಚಪಲಾಕ್ಷಿಯರಾರುತಿ ಬೆಳಗಿರೆ 1 ಕೊಡಲಿ ಕೋದಂಡವ ಪಿಡಿವ ಪಂಡಿತಗೆ ಕಡಲ ಕಟ್ಟಿಸಿ ಖಳರೊಡಲ ಬಗೆದಗೆ ಫಣಿ ಮೃಡನ ಗೆಲಿಸಿ ಕೀರ್ತಿ ಒಡನೆ ತಂದಿತ್ತಗೆ ಮಡದೇರಾರುತಿಯ ಬೆಳಗೀರೆ 2 ಹರಿಗಿ ಸುರಿಗಿ ಪಿಡಿದರವಿಂದಾಂಬಕಗೆ ಶರಧಿಯೊಳಾಡ್ದಗೆ ಗಿರಿಮಹಿಧರಗೆ ನರಹರಿ ರೂಪಗೆ ಧರಣಿಯಾಳ್ದಗೆ ಧುರದೊಳು ರಾಯರ ತರಿದ ಸಮರ್ಥಗೆ ಗರತೇರಾರುತಿಯ ಬೆಳಗೀರೆ3 ದಶರಥ ತನಯಗೆ ವಸುದೇವ ಸುತಗೆ ಕೂರ್ಮ ರೂಪಗೆ ವಸುಧಿ ವಾಹಕಗೆ ಮಿಸುನಿ ಕಶ್ಯಪಗೆ ಹೆಬ್ಬಸಿರ ಬಗೆದವಗೆ ಶಶಿಮುಖಿಯರಾರುತಿ ಬೆಳಗೀರೆ 4 ವಟು ಭೃಗುರಾಮಗೆ ಜಟಲ ಮಸ್ತಕಗೆ ಕಠಿಣ ಕಂಸನ ತಳ ಪಟವ ಮಾಡಿದಗೆ ಕಪಟ ಭೀಕರಗೆ ವಟಪತ್ರಶಯನ ನಿಷ್ಕುಟಿಲ ಜಗನ್ನಾಥ ವಿಠಲಗಾರುತಿಯ ಬೆಳಗೀರೆ 5
--------------
ಜಗನ್ನಾಥದಾಸರು
ಶೌರಿ ನಿನ್ನಯ ಭಕ್ತ ನಾನೆನ್ನಿಸೊ ಪ ಇಂದುವರನಂದದಲಿ ಬಂದೆ ನೀ ಕನಸಿನಲಿ ಇಂದಿರಾಪತಿಯೆಂದೆ | ಹುಸಿನಗೆಯಲಿ ಒಂದು ಶಿವಚರಿತೆ ಪೇಳೆಂದು ಗುರುರೂಪದಲಿ ಅಂದಿತ್ತ ದರ್ಶನವೆ ಸಾಕು ಎನಗೆ 1 ವಾರಿನಿಧಿಯೊಳು ಮುಳುಗಿ ದಾರಿಕಾಣದ ಮುನಿಗೆ ತೋರಿದಾ ಶಿಶುರೂಪ ಸಾಕು ಎನಗೆ ಘೋರ ಕಾನನದಲ್ಲಿ ಜಾನಿಸಿದ ಬಾಲನಿಗೆ ಸಿರಿ ಮೊಗವೆ ಸಾಕು ಎನಗೆ 2 ಅರಸಿಯಾಲಿಂಗನವ ಅರೆಘಳಿಗೆ ಬಿಡದವಗೆ ಕರುಣದಿಂ ನೀತೋರ್ದ ಚರಣ ಸಾಕೆನಗೆ ಪರರ ದಂಡಿಸಿ ಧನವ ಅಪಹರಿಸಿದಾತಂಗೆ ಗುರುವೆನಿಸಿದಾ ರೂಪ ಸಾಕು ಎನಗೆ 3 ಘೋರ ರೂಪವ ಗಳಿಸಿ ನಾರಣಾಯೆಂದವಗೆ ತೋರಿದಾ ಕಾರುಣ್ಯವಿರಲಿ ಎನ್ನೊಳಗೆ [ಹದಿ ನಾ]ರು ಸಾಸಿರ ಜನರ ಗುಂಪಿಂದಲೈತಂದು ತೋರಿದಾ ದ್ವಿಜರೂಪ ಸಾಕು ಎನಗೆ4 ರಂಗನಾಥನು ನೀನೆ ಗಂಗಾಧರನು ನೀನೇ ಮಾಂಗಿರಿಯ ಶೃಂಗಾರ ನಿಲಯ ನೀನೇ ಅಂಗಜನ ಪಿತನೀನೆ | ಅಂಗಜಾರಿಯು ನೀನೆ ಮಂಗಳಾಂಗನೆ ಭವದ ಹಂಗ ಬಿಡಿಸೋ 5
--------------
ಅಸೂರಿ ರಾಮಸ್ವಾಮಿಅಯ್ಯಂಗಾರ್