ಒಟ್ಟು 15952 ಕಡೆಗಳಲ್ಲಿ , 137 ದಾಸರು , 7176 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ರಾಮ ಪೀಠಮಾಶ್ರಯ ಕಾಮಕೋಟಿ ಮೋಹನಾಂಗಕ ಶ್ರೀ ಪ ಸೂರ್ಯಕುಲ ಮಾಲಿಕಾಮಣಿ ಆರ್ಯವಂಶ ದಿವ್ಯ ಮೌಕ್ತಿಕ ಶ್ರೀ 1 ಇಂದು ಸುಂದರಾಸ್ಯ ರಾಘವ ಶ್ರೀ 2 ವೈರಿವನ ದಾವಪಾವಕ ವೀರ ವರರಘು ನಂದನ ಶ್ರೀ 3 ಭೂಮಿಸುತ ಪ್ರಾಣನಾಯಕ, ಮಾಮಿತಾರ್ಥ ಫಲದಾಯಕ 4 ಭಾನು ಶತಕೋಟಿಭಾಸುರ ಧೇನುಪುರನಾಥ ಶ್ರೀಕರ 5
--------------
ಬೇಟೆರಾಯ ದೀಕ್ಷಿತರು
ರಾಮ ಭಜನೆ ಮಾಡೋ ಮನುಜ ರಾಮ ಭಜನೆ ಮಾಡೋ ಪ ರಾಮ ರಾಮ ಜಯ ರಾಘವ ಸೀತಾ ರಾಮನೆಂದು ಸುಸ್ವರದಲಿ ಪಾಡುತಅ.ಪ ತಾಳವನು ಬಿಡಬೇಡ ಮೇಳವನು ಮರೆಬೇಡ ತಾಳಮೇಳಗಳ ಬಿಟ್ಟು ನುಡಿದರೆ ತಾಳನು ನಮ್ಮ ಇಳಾಸುತೆಯರಸನು 1 ಭೃತ್ಯ ಮನೋಭಾವದಲಿ ಸತ್ಯ ಜ್ಞಾನ ಅನಂತ ಬ್ರಹ್ಮನು ಹೃದ್ಗತನೆಂದರಿಯುತ ಭಕುತಿಯಲಿ 2 ಭಲರೆ ಭಲರೆಯೆಂದು ತಲೆದೂಗುವ ತೆರದಿ ಕಲಿಯುಗದಿ ವರಕೀರ್ತನೆಯಿಂದಲಿ ಸುಲಭದಿ ಹರಿಯ ಪ್ರಸನ್ನತೆ ಪಡೆಯಲು 3
--------------
ವಿದ್ಯಾಪ್ರಸನ್ನತೀರ್ಥರು
ರಾಮ ರಕ್ಷಮಾಂ ರಾಮ ರಕ್ಷಮಾಂ ರಾಮ ರಕ್ಷಮಾಂ ರಾಮ ರಕ್ಷಾಮಾಂರಾಮ ರಕ್ಷಮಾಂ ಕಾಮಿತಾರ್ಥದ ಪ್ರೇಮಸಾಗರ ಶ್ರೀ ಮನೋಹರ ಪದಶರಥಾತ್ಮಜ ದಾನವಾಂತಕ ಶಶಿನಿಭಾನನ ಶತಮಖಾರ್ಚಿತಕುಶಿಕನಂದನ ವಶಮಖಾವನ ಶಶಿಮುಖೀತನೋಃ ಶಮಲವಾರಣ 1ಹರ ಶರಾಸನ ಹರ ಧರಾಸುತಾ ಕರ ಪರಿಗ್ರಹಾರಾಮ ನಿಗ್ರಹಗುರು ನಿಯೋಜಿತ ಗುಹ ಸುಪೂಜಿತ ವರ ವನಾಶ್ರಿತ ಭರತ ಪ್ರಾರ್ಥಿತ 2ಮೃಗ ನಿಷೂದನ ಖಗಪ ಪಾಲನ ಭಂಜನ ಶಬರಿ ಪಾವನಸುಗತಿ ದಾಯಕ ವಾಲಿಶಿಕ್ಷಕ ಮೃಗಪರಕ್ಷಕ ರಾಜ್ಯದಾಯಕ 3ಶರಧಿಬಂಧನ ಪುರ ವಿಮರ್ದನ ವರವಿಭೀಷಣ ಭಯನಿವಾರಣಧುರ ಧುರಂಧರ ದುಷ್ಟ ಖಳಸಹೋ ದರ ಶಿರೋಹರ ದೈತ್ಯಸಂಹರ 4ಧರಣಿಜಾನ್ವಿತ ದುರಿತ ವಾರಕ ಭರತವಂದಿತ ಪುರವರಸ್ಥಿತವರ ಮುನಿಸ್ತುತ ಸುರಸಮಾಶ್ರಿತ ತಿರುಪತೀಶ್ವರ ವೆಂಕಟೇಶ್ವರ 5ಓಂ ಕುಬ್ಜಾ ಕೃಷ್ಟಾಂಬರಧರಾಯ ನಮಃ
--------------
ತಿಮ್ಮಪ್ಪದಾಸರು
ರಾಮ ರಘೋತ್ತಮ ಕೃಷ್ಣ ಘನ | ಶಾಮಸುಂದರ ತ್ರಿಭುವನ ಜೀವನ ಪ ಪತಿ | ವಸುದೇವ ಸುತ ರುಕ್ಮಿಣಿ ರಮಣಾ 1 ಋಷಿ ಮಖದಾಲನ ಸಾಂದೀಪ ತೋಷಣ | ದಶಶಿರ ಕಂಸಾಸುರ ದಮನಾ 2 ಅಹಲ್ಯೋದ್ದಾರಣ ಕುಜಕೃತ ಪಾವನ | ಮಹಿಪತಿ ಸುತ ಪ್ರಭು ಶುಭಚರಣಾ3
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ರಾಮ ರಮಣಾರಘು ಪ ಸುಂದರವದನಾಸುರಮನಿ ಪಾಲಕ ಮಾಧವ ಕೃಷ್ಣ ಹರಿ 1 ಕುಂಡಲೀಶ ಶಯನ ಕೋದಂಡಧರ ಘನ ಮಂಡಲಾಧಿಪತಿ ಮಹಾಮಹಿಮ ರಘುಪತಿ 2 ಶ್ರೀ ಜಗನ್ನಾಯ್ಕನೆ ಶ್ರೀತಜನಪೋಷಕ ರಾಜಾಧಿರಾಜ ಮತ್ರ್ಯರಾಜನೆನಿಸಿಹ 3 ವೆಂಕಟರಮಣ ಅಕಳಂಕ ಮಹಿಮ ಪಂಕಜೋದ್ಭವನಯ್ಯಾ ಪರಮಭಕ್ತರ ಪ್ರಿಯ 4 'ಹೆನ್ನೆರಂಗ ' ಬಿಲವಾಸ ಹೆನ್ನ ಚಿನ್ಮಯ ರೂಪ ಶ್ರೀ ಚಿತ್ತಜನಯ್ಯ ಭೂಪ 5
--------------
ಹೆನ್ನೆರಂಗದಾಸರು
ರಾಮ ರಮಾರಮ ರಾಮ ಶ್ರೀರಾಮ ಪ ರಾಮ ಸೀತಾರಾಮ ರಾಮ ಜಯರಾಮ ಅ.ಪ. ಶ್ರೀ ರಘುವಂಶ ಲಲಾಮನೆ ರಾಮ ತಾರಕ ಮಂಗಳ ರಾಮನೆ ರಾಮ ನೀರದ ನಿರ್ಮಲ ಶ್ಯಾಮನೆ ರಾಮ ಸಾರಸಲೋಚನ ಸೌಮ್ಯನೆ ರಾಮ 1 ಕೌಸಲ್ಯದೇವಿ ಕುಮಾರಕ ರಾಮ ಕೋಸಲ ದೇಶಾನಂದಕ ರಾಮ ಆಸುರೀ ತಾಟಕ ಶಿಕ್ಷಕ ರಾಮ ಕೌಶಿಕ ಯಜ್ಞ ಸಂರಕ್ಷಕ ರಾಮ 2 ಮುನಿಪತಿ ಶಾಪ ವಿಮೋಚಕ ರಾಮ ಕಾರ್ಮುಕ ಭಂಜಕ ರಾಮ ಜನಕ ಸುತಾನಂದ ವರ್ಧಕ ರಾಮ ಅನುಪಮ ಲೀಲಾದ್ಯೋತಕ ರಾಮ 3 ಸತ್ಯಪರಾಕ್ರಮ ಸಾತ್ವಿಕ ರಾಮ ಪಿತೃವಾಕ್ಯ ಪರಿಪಾಲಕ ರಾಮ ಉತ್ತಮ ಚರಿತಾದರ್ಶಕ ರಾಮ ಚಿತ್ರಕೂಟಾದ್ರಿ ನಿವಾಸಕ ರಾಮ 4 ಕಾಕುತ್ಥವಂಶ ಸುಧಾರಕ ರಾಮ ಲೋಕೇಶ ಲೋಕ ಮನೋಹರ ರಾಮ ಶ್ರೀಕರಾಶ್ರಿತ ಜನ ಮಂದಾರ ರಾಮ ಶ್ರೀ ಕರಿಗಿರೀಶ ಸುಂದರ ರಾಮ 5
--------------
ವರಾವಾಣಿರಾಮರಾಯದಾಸರು
ರಾಮ ರಾಮ ರಾಮ ಎಂದು ಸ್ಮರಿಸೊ ನೀ ಮನಾ ಪ್ರೇಮದಿಂದ ಜಾನಕಿಪತಿಯ ಅನುದಿನಾ ಪ ಇಂದು ಶೇಖರ ವಂದ್ಯ ಗೋವಿಂದ ದೇವನಾ ಮಂದರಾದ್ರಿ ಗಿರಿಯನೆತ್ತಿದ ಮಹಾಮಹಿಮನ ಕಂದ ಕೂಗಲು ಕಂಬದಿ ಬಂದ ಕರುಣಾ ಸಾಗರನ ಚಂದದಿಂದ ಚಲನೆಯಿಲ್ಲದೆ ಚೆಲುವ ಕೃಷ್ಣನಾ 1 ಕುಲಸತಿಯ ಕುಚದಲ್ಲಿಟ್ಟ ಕೋಮಲಾಂಗನ ಒಲಿದು ಧ್ರುವಗೆ ಪಟ್ಟವನಿತ್ತ ವಾರಿಜನಾಭಾನಾ ಜಲದಿ ಬಂಧಿಸಿ ದೈತ್ಯರನ ಛೇದಿಸಿದಾತನಾ ಸುಲಭದಿಂದ ಹೃದಯದಲ್ಲಿ ಸ್ತುತಿಸೊ ನೀ ಇನ್ನಾ 2 ಸಿಂಧುಶಯನ ಶ್ರೀನಿವಾಸ ಸಕಲಕರ್ತನಾ ನಂದದಿಂದ ಹೆನ್ನ ವಿಠ್ಠಲ ಇಂದಿರೇಶನ ಪಾದ ದ್ವಂದ್ವ ಭಜಿಸಿ ಹರುಷದಿ ಮನಾ ಕುಂದುಯಿಲ್ಲದೆ ಕಾಯ್ವ ಭಾನುಕೋಟಿ ತೇಜನಾ 3
--------------
ಹೆನ್ನೆರಂಗದಾಸರು
ರಾಮ ರಾಮ ಹರಿ ರಾಮ ರಾಮ ಸೀತಾ ರಾಮ ರಾಮ ನುತಪ್ರೇಮ ರಾಮ ಓಂ ಪ ರಾಮ ರಾಮ ಪುಣ್ಯನಾಮ ಪಾಪವಿ ರಾಮ ಕುಜನಕುಲ ಭೀಮ ರಾಮ ಓಂ ಅ.ಪ ಶಾಮಸುಂದರ ಸುಖಧಾಮ ದಾಮೋದರ ಕಾಮಿತದಾಯಕ ಸ್ವಾಮಿ ಶ್ರೀರಾಮ ಓಂ ಸೋಮಕಸಂಹರ ಕಾಮಜನಕ ತ್ರೈ ಭೂಮಿಪಾಲಯ ನಿಸ್ಸೀಮ ರಾಮ ಓಂ 1 ಕಡಲಮಥನ ಪಾಲ್ಗಡಲನಿಲಯ ಮಹ ಕಡಲಬಂಧಕ ದಯಗಡಲ ರಾಮ ಓಂ ಜಡಜನಾಭ ಭವತೊಡರು ನಿವಾರಣ ಕಡಲಸುತೆಯ ಪ್ರಾಣದೊಡೆಯ ರಾಮ ಓಂ2 ದೋಷ ವಿನಾಶನ ಶೇಷಶಯನ ದಯ ಭೂಷಣ ಕೇಶವ ರಾಮರಾಮ ಓಂ ಭಾಸುರಕೋಟಿಪ್ರಕಾಶ ಅಪ್ರಮೇಯ ಸಾಸಿರನಾಮಕ ರಾಮ ರಾಮ ಓಂ3 ಭಕ್ತಾಂತರ್ಗತ ಭಕ್ತವತ್ಸಲ ನಿತ್ಯ ನಿರ್ಮಲಾತ್ಮ ರಾಮ ರಾಮ ಓಂ ಸತ್ಯ ಸರ್ವೋತ್ತಮ ಮೃತ್ಯು ವಿಜಯ ನಿಜ ಸತ್ಯಸಂಕುಲಧಾಮ ರಾಮ ರಾಮ ಓಂ 4 ಜಾನಕಿರಮಣ ದೀನ ಪಾಲನ ದಾನವಾಂತಕ ಹರಿ ರಾಮ ಓಂ ಧ್ಯಾನದಾಯಕ ಜಗತ್ರಾಣ ಪ್ರವೀಣ ಮಮ ಪ್ರಾಣೇಶ ಶ್ರೀರಾಮ ನಮ:ನಮ:ಓಂ 5
--------------
ರಾಮದಾಸರು
ರಾಮ ರಾಮೆನ್ನಿರೊ ಸೀತಾಪತಿ ರಾಮ ರಾಮೆನ್ನಿರೊಪ. ಗಂಗೆಯೊಳ್ ಮುಳುಗಲ್ಯಾಕೆ ನಡೆದು ಬಲು ಭಂಗವ ಪಡುವುದ್ಯಾಕೆ ಮಂಗಲದಾತ ನರಸಿಂಗನ ನಾಮವ ಹಿಂಗದೆ ನೆನೆದರಿಷ್ಟಂಗಳ ಕೊಡುವ1 ಉಪವಾಸ ಮಾಡಲ್ಯಾಕೆ ಕಪಟದೊಳು ಗುಪಿತದಿ ಕುಳ್ಳಲ್ಯಾಕೆ ಉಪಮೆರಹಿತ ಶ್ರೀಪತಿ ಕೃಷ್ಣರಾಯನ ಜಪಿಸಿ ಬಂದರೆ ಜನ್ಮ ಸಫಲವಾಗುವುದಲ್ಲೋ2 ಧ್ರುವನು ಸದ್ಗತಿ ಪಡೆದ ಕರುಣದಿಂದ ಪವಮಾನಿಗೆ ಒಲಿದ ಭುವನ ಈರಡಿ ಮಾಡಿ ಬಲಿಯನ್ನು ಸಲಹಿದ ಬವರದೊಳಗೆ ದಾನವರನ್ನು ಮಡುಹಿದ3 ಯಾತ್ರೆಗೆ ಪೋಗಲ್ಯಾಕೋ ಕಾವಡಿ ಪೊತ್ತು ತೀರ್ಥಸ್ನಾನಗಳ್ಯಾತಕೋ ಮಾಧವ ಶತಪತ್ರನಾಭನ ಸಂ- ಕೀರ್ತನಾದಿಗಳೆ ಪರತ್ರಸಾಧನವಲ್ಲೊ4 ಭೂರಿಯಾಯಾಸವ್ಯಾಕೋ ಬರಿದೆ ಸಂ- ಸಾರವ ನಂಬಲ್ಯಾಕೋ ಮಾರಾರಿಸಖ ಲಕ್ಷ್ಮೀನಾರಾಯಣನನ್ನು ಸೇರಿ ಭಜಿಪರ ಉದ್ಧಾರಮಾಡುವ ಶ್ರೀ5
--------------
ತುಪಾಕಿ ವೆಂಕಟರಮಣಾಚಾರ್ಯ
ರಾಮ ಸಲಹಯ್ಯ ಪುಣ್ಯನಾಮ | ಶ್ರೀ ರಾಘವೇಂದ್ರಾ ಪೂರಿತಕಾಮಾ ನೇಮಾ | ಶಾಮ ಪರಮಾ ಗುಣರತ್ನ ಧಾಮಾ ಪ ವನಜಾಂಬಕ ಕುಂದರದನಾ | ಅನುಪಮ ಸುಂದರ ವದನಾ | ರಣದಲಿ ಜಿತ ದಶವದನಾ | ಅನಂತವದನಾ ಲಾವಣ್ಯ ಸದನಾ 1 ಕರುಣಾ ಶರಣಾ ಭರಣಾ | ಧರಣಿ ಧರಣೋದ್ಧರಣಾ | ಸ್ಪುರಣ ಕಿರಣ ದೋರಣ ಚರಣಾ | ಅರುಣಾಂಬುಜಾಲಯ ರಮಣಾ 2 ವೀರಾಗುಣ ಗಂಭೀರಾ | ಕ್ರೂರಾಸುರ ಸಂಹಾರಾ | ಶೂರಾ ಜನ್ಮ ವಿದೂರಾ | ಮಹಿಪತಿ ಧೀರಾ ಕೃಷ್ಣನೊಡೆಯ ಉದಾರಾ 3
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ರಾಮ ಸಲಹಯ್ಯ ಪುಣ್ಯನಾಮ ಶ್ರೀ ರಾಘವೇಂದ್ರ ಪೂರಿತಕಾಮ ನೇಮ ಶ್ಯಾಮ ಪರಮಗುಣ ರತ್ನಧಾಮ ಧ್ರುವ ವನಜಾಂತಕ ಕುಂದರದನ ಅನುಪಮ ಸುಂದರವದನ ಸದನ 1 ಕರುಣ ಶರಣ ಭರಣ ಭರಣ ಧರಣೋದ್ಧಾರಣ ಸ್ಪುರಣ ಕಿರಣದೊರಣ ಚರಣ ಅರುಣಾಂಬುಜಾಲಯರಮಣ 2 ವೀರಗುಣಗಂಭೀರ ಕ್ರೂರಾಸುರ ಸಂಹಾರ ಶೂರ ಜನ್ಮವಿದೂರ ಮಹಿಪತಿ ಧೀರ ಕೃಷ್ಣೊಡಿಯ ಉದಾರ 3
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ರಾಮಕೃಷ್ಣವಿಠಲ | ಪೊರೆಯ ಬೇಕಿವಳಾ ಪ ಸನ್ನುತ ಹರಿಯೆ | ಪ್ರಾರ್ಥಿಸುವೆ ಧೊರೆಯೇ ಅ.ಪ. ಮೋದ ತೀರ್ಥರ ಮತದಿ | ಉದುಭವಿಸಿ ಇರುತಿರ್ಪಸಾಧು ಕನ್ನಿಕೆ ಇವಳಾ | ವೇದಾಂತ ವೇದ್ಯಾ |ಮೋದದಾಯಕನಾಗಿ | ಶ್ರೀಧರನೆ ತರತಮವಭೇಧ ಪಂಚಕ ತಿಳಿಸಿ | ಕಾದುಕೋ ಬಿಡದೆ 1 ಅಹಿಕ ಪಾರತ್ರಿಕದಿ | ಬಹುಸಖ್ಯಗಳ ಕೊಟ್ಟುಮಹಿತ ನಿನ್ನಯ ನಾಮ | ರೂಪಕ್ರಿಯ ಗುತಾಮವಿಹಿತ ಮಾರ್ಗದಿ ತುತಿಸಿ | ತವಚರಣಕರ್ಪಿಸುವಮಹಭಾಗ್ಯ ಇವಳೀಗೆ | ಓದಗಿಸೋ ಹರಿಯೇ 2 ಅಡಿಗಡಿಗೆ ಬರುತಿರ್ಪ | ಕಡುವಿಘ್ನ ಪರಿಹರಿಸೊಕಡುದಯಾ ಪರಿಪೂರ್ಣ | ಕರಿವರದ ಕೃಷ್ಣಾ ಬಡವಿಪ್ರಗೊಲಿದಂತೆ | ಭಕುತ ಜನ ಪರಿಪಾಲಪಿಡಿಯುವುದು ಕೈ ಇವಳ | ಬಾಲ ಗೋಪಾಲ 3 ಕಲಿಯುಗದಿ ಸಾಧನವು | ಬಲುಕಷ್ಟವೆನಿಸಿಹುದುಕಲಿಮಲಾಪಹಗಂಗೆ | ಪಿತನ ಚರಣಾಬ್ಜಾಓಲುಮೆಯಿಂ ಭಜಿಪರ್ಗೆ | ಭವಭಂಧ ಪರಿಹಾರಅಳವಡಿಸೊ ಇವಳೀಗೆ | ತವನಾಮಕವಚಾ 4 ಕೋವಿದರ ಪರಿಪಾಲ | ಪಾವಮಾನಿಯ ಪ್ರೀಯನೋವು ಸುಖ ದ್ವಂದ್ವಗಳ | ಸಮತೆಯಲಿಯುಂಬಾಭಾವವನೆ ಕರುಣಿಸುತ | ಭವವ ನುತ್ತರಿಸೆಂದುದೇವ ಗುರು ಗೋವಿಂದ | ವಿಠಲ ಪ್ರಾರ್ಥಿಸುವೇ 5
--------------
ಗುರುಗೋವಿಂದವಿಠಲರು
ರಾಮಕೋಟಿ ನಾಮಭಜನಾ ನೇಮದಿಂದ ಮಾಳ್ಪನು ಧನ್ಯ ಪ ಪ್ರೇಮಪಾಶದಿಂದಬಿಗಿದುಸ್ವಾಮಿಯನ್ನ ಹೃದಯದಿನೆನೆದು ಅ.ಪ ಶಂಭು ತನ್ನ ಮನದಿನಿತ್ಯ ಇಂಬಿನಿಂದ ಧ್ಯಾನಿಸುತ್ತ ಅಂಬಿಕೆಗನುಮೋದಿಸುತ್ತ ಸಂಭ್ರಮದಿಂದೊರೆದ ಸತ್ಯ1 ನೇಮದಿ ಕಾರ್ಯವನು ಬಗೆದು ಭೂಮಿಜಾತೆಯ ಕಂಡವಗೊಲಿದ 2 ಕರುಣಾಮೂರುತಿಯೊಲುಮೆವಡೆದು ಪರಮಪುಣ್ಯ ವಿಭೀಷಣ ಒರದ 3 ಭರತಭೂಮಿಯೊಳಗೆ ಜನಿಸಿ ಹರಿಯ ಭಕ್ತ ಗಣ್ಯರೆನಿಸಿ ಪುರಂದರ ಕನಕದಾಸರು ಕರುಣದೊರೆದ ಭವತಾರಕವಾ 4 ಸಾಸಿರನಾಮವ ಪಠಿಸಿ ವಾಸುದೇವನಿಗೆ ವಂದಿಸಿ ಭೂಸುರರಾನಂದಿಸುವ ಕೇಶವ ಜಾಜೀಶನ ತೋರ್ಪ 5
--------------
ಶಾಮಶರ್ಮರು
ರಾಮಚಂದಿರ ಶ್ಯಾಮಸುಂದರ ಪ್ರೇಮಸಾಗರಾ ಪ ಭೂಮಿಜಾತೆಯರಸ ಬಂಧುರ ಕೋಮಲಾಕರ ಶರಣಪಾಲಾ ಅ.ಪ ವೇದವಿದಿತಾ ಮೋದಭರಿತ ಶ್ರೀಧರಾಚ್ಯುತ ಭಾರ ನಿನ್ನದು 1 ಶಿಲೆಯ ಸತಿಯಗೈವ ಪಾದವ ತೊಳೆದ ಜನಕನು ಸುಲಭಮಾರ್ಗದಿ ಶಬರಿ ನಿನ್ನಯ ಜಲಜಪಾದ ಸೇವೆಗೈದಳು 2 ಕರುಣವೇ ಶರಣರ ಪರಮಸೌಭಾಗ್ಯ 3
--------------
ಅಸೂರಿ ರಾಮಸ್ವಾಮಿಅಯ್ಯಂಗಾರ್
ರಾಮಚಂದ್ರನೆ ನಿನ್ನ ನಾಮಮೃತವು ಎನ್ನ ನಾಲಿಗೆಯೊಳು ನಿಲಿಸು ಪ ದಾನವಾಂತಕ ನಿನ್ನ ಧ್ಯಾನ ಬಿಡದೆ ಇತ್ತು ದೀನ ರಕ್ಷಕ ಹರಿ ಜಾನಕಿ ರಮಣನೆ ಅ.ಪ ಕ್ಷೀರವಾರಿಧಿ ಶಯನ ಶ್ರೀ ಹರಿಯನು ಸ್ಮರಿಸುತ ಧ್ಯಾನವ ಮಾಡಿ ಭಕುತಿಲಿ ನಾರದ ಹರ ಬ್ರಹ್ಮಾದಿ ಋಷಿ ಗಂಧರ್ವರು ಸುರರೆಲ್ಲರು ಕೂಡಿ ಮಾರಮಣನ ಕೊಂಡಾಡುತ ಸ್ತೋತ್ರವ ಮಾಡಿ ಪಾರುಮಾಡು ಜಗದೀಶನೆ ಎನುತಲಿ ತವಕದಿ ಶ್ರೀ ಭೂರಮಣನು ದೀನರ ನುಡಿಗಳ ಕೇಳುತ ಆಲೋಚಿಸುತಲಿ ಬೇಗದಿ ಭೂನಾಥನ ಮನೆಯೊಳಗವತರಿಸುವೆ ಎನ್ನುತವರಿಗೆಲ್ಲಾಭಯವ ನೀಡಿದ 1 ದಶರಥನುದರದಿ ಜನಿಸಲು ನಾಲ್ವರು ಅಂದು ಯಾಗಕೆ ಕೌಶಿಕನಲ್ಲಿ ವಿದ್ಯೆಗಳನ್ನು ಕಲಿಯುತ ಬಂದು ಶಶಿಮುಖ ಜಾನಕಿ ಕರಪಿಡಿದನು ತಾನಂದು ಅಯೋದ್ಯದಿ ಎಸೆವ ಸಿಂಹಾಸನವೇರುವ ಸಮಯದಿ ಬಂದು ರಸಕಸಿ ಮಾಡಲು ಕೈಕೇಯಿಯು ತಾ ಶಶಿಮುಖ ಸೀತೆಯ ಒಡಗೂಡುತಲಿ ಬಿಸಿಲು ಗಾಳಿಮಳೆಯೊಳು ವನಚರಿಸುತ ಸತಿಯು ಬೇಡೆ ಮಾಯಮೃಗವ ಬೆನ್ನಟ್ಟಿದ 2 ಶಶಿಮುಖ ಸೀತೆಯ ದಶಶಿರನೊಯ್ಯಲು ಕೇಳಿ ದಶರಥಸುತ ಅರಸುತ ಬಲು ಶೋಕವ ತಾಳಿ ಚಿಂತಿಸಿ ಎಸೆವ ಗಿರಿ ಗುಹೆಗಳ ಹುಡುಕಲು ಮಾರುತಿ ನೋಡಿ ಮುದ್ರಿಕೆ ವಸುಧೆ ತನಯಳಿಗರ್ಪಿಸೆ ಆಕೆಯು ಮುದ ತಾಳಿ ಚೂಡಾಮಣಿ ಕೊಡಲು ಶ್ರೀ ರಘುವೀರನು ಸೇತುವೆ ಕಟ್ಟುತ ಕ್ರೂರ ಖಳರನು ಸಂಹರಿಸಿದ ಕಮಲ-ನಾಭ ವಿಠ್ಠಲ ಅಯೋದ್ಯದಿ ಮೆರೆಯುವ 3
--------------
ನಿಡಗುರುಕಿ ಜೀವೂಬಾಯಿ