ಒಟ್ಟು 40875 ಕಡೆಗಳಲ್ಲಿ , 138 ದಾಸರು , 10069 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ನೋಡಿ ದಣಯೆನೊ ರಂಗ ನಾ ಹಾಡಿ ದಣಿಯೆನೊ ನಾ ಜೋಡು ಕುಂಡಲಧರ ನೀನಾಡಿದಾಟಗಳೆಲ್ಲ ಪ. ದೇವಕಿ ನಿನ್ನ ಬಾಲಲೀಲೆ ತೋರೆನಲಾದೇವ ಮೊಸರ ಭಾಂಡವನೊಡೆದ ಭಾವಜನ್ನಯ್ಯ ಕಡೆಗೋಲು ನೇಣಿನ ಸಹ ರುಕ್ಮಿಣೀದೇವಕಿಗ್ಹರುಷವನಿತ್ತು 1 ಅಂದು ಯಶೋದೆ ನಿನ್ನ ಅಂದದ ಮದುವೆಯ ತಂದು ತೋರೆನೆ ವೇಂಕಟನಾಗಿ ಕಂದನೆನಿಸಿ ಬಕುಳೆಗೆ ಮದುವೆಯ ಅಂದದಿ ತೋರಿದೆ ತಂದೆಯಾದವ ಕೃಷ್ಣ 2 ತೊಡೆಯಲೆತ್ತಿ ನಿನ್ನ ಸಡಗರದಿಂದಲಿ ಇಡುವಳೊ ಸಕಲಾಭರಣಗಳ ಮೃಢಸಖ ಶ್ರೀ ಶ್ರೀನಿವಾಸನೆ ಎನ್ನನು ಕಡೆಹಾಯಿಸೆಂದು ಬಿಡದೆ ಧ್ಯಾನಿಪಳೊ 3
--------------
ಸರಸ್ವತಿ ಬಾಯಿ
ನೋಡಿ ದಣಿಯದೊ ನಯನ ಪಾಡಿ ದಣಿಯದೊ ಜಿಹ್ವೆ ನಾಡಿಗೊಡೆಯನೆ ರಂಗ ದೇವ ದೇವ ಪ. ಬೇಡಲೇನನೊ ಸ್ವಾಮಿ ಕಾಡಲ್ಯಾತಕೊ ದೇವ ನೀಡೊ ನಿನ್ನ ಪದಕಮಲ ಶ್ರೀ ಶ್ರೀನಿವಾಸ ಅ.ಪ. ಶಿರದಲ್ಲಿ ಮಕುಟ ವರ ಫಣೆಯಲ್ಲಿ ತಿಲುಕವು ಉರದಲ್ಲಿ ಸಿರಿವತ್ಸ ಹಾರ ಪದಕಗಳು ಕರ ಶಂಖ ಚಕ್ರಯುತ ನೆರಿಗೆ ಪೀತಾಂಬರವು ಪಾದ ಕಮಲಗಳ 1 ಮಂದಹಾಸ ಮುಖಾರವಿಂದದಲಿ ಕಿರುನಗೆಯು ಬಂದ ಭಕ್ತರಿಗಭಯ ತೋರ್ಪಕರವೊ ನಿಂದು ಸ್ತುತಿಸುವರಿಗಾನಂದ ತೋರುವ ದಿವ್ಯ ಒಂದೊಂದು ಅವಯವದ ಸುಂದರಾಕೃತಿಯ 2 ವೇದವನೆ ತಂದು ಸುತಗಾದರದಿ ಇತ್ತೆ ಕ್ಷೀ- ರೋದಧಿಯ ಮಥಿಸಿ ಸುಧೆಯ ಸುರರಿಗುಣಿಸಿದೆಯೊ ಭೂದೇವಿಯನೆ ಪೊರೆದು ಉದ್ಭವಿಸಿ ಕಂಭದೊಳು ಪಾದದಲಿ ಭೂಮಿಯನು ಅಳೆದ ವಟುರೂಪಿ 3 ದುಷ್ಟ ಕ್ಷತ್ರಿಯರನೆ ಕುಟ್ಟಿ ಕೆಡಹಿದ ಶೌರಿ ದಿಟ್ಟತನದಲಿ ಅನ್ನ ಬಟ್ಟೆಯನೆ ತೊರೆದೆÀ ಕೊಟ್ಟು ಗೋಪಿಗೆ ಮುದವ ಮೆಟ್ಟಿ ಕಾಳಿಂಗನ ಬಿಟ್ಟು ವಸನವ ಕಲಿದುಷ್ಟರನೆ ಕೊಂದೆ 4 ಅಪದ್ರಕ್ಷಕ ನಿನ್ನ ವ್ಯಾಪಾರ ರೂಪಗಳು ತಾಪ ಪರಿಹರಗೈದು ಕಾಪಾಡೆಲೊ ಶ್ರೀಪತಿಯೆ ಅಂತರ್ಬಹಿವ್ರ್ಯಾಪ್ತ ನಿರ್ಲಿಪ್ತನೇ ತಾಪ ಪರಿಹಾರನೆ 5
--------------
ಅಂಬಾಬಾಯಿ
ನೋಡಿ ದಣಿಯವೆನ್ನ ಕಂಗಳು ಈ ಸೋದೆಲಿರುವ ಈಡು ಇಲ್ಲದುತ್ಸವಂಗಳ ಬೇಡಿದವಗೀ ಧ್ವಜಬುತ್ತಿ (?) ನೀಡಿ ದಯಸೂರ್ಯಾಡುವರ ಪ ಯತಿಗಳ ಸಮೂಹವೆಷ್ಟು ಮಿತಿಯಿಲ್ಲದ ಬ್ರಾಹ್ಮಣ್ಯವೆಷ್ಟು ಮತಿಹೀನರಿಗೆ ಗತಿಯ ಕೊಡುವ ಪೃಥಿವಿಗಧಿಕ ಗುರುಗಳನ್ನು 1 ಭೂತನಾಥಗೆರಗಿ ನಿಂತು ವಾತಸುತಗೆ ಕೈಯ ಮುಗಿದು ಆತ ನಾರಾಯಣಭೂತನೆಂಬೋ ನೀತವಾದ ದೂತನಂತೆ2 ಕೊಳಲ ಕೃಷ್ಣ ಧವಳಗಂಗಾ ಹೊಳೆಯೊ ಮುತ್ತಿನ ಗದ್ದಿಗೆ ಮ್ಯಾಲೆ ಕಳೆಯು ಸುರಿವೊ ಕಮಲಪಾದ ಇಳೆಯೊಳ್ ಇಲ್ಲೀಳಿಗೆಯ ಪೂಜೆ 3 ಸನಕಾದಿ ಸುರೇಶನೆದುರು ಕಣಕ ಹ್ವಾಲಗ (ಹೋಳಿಗೆ?)ವನ್ನೆ ಮಾಡಿ ಮನಕೆ ಬಂದ ಮೃಷ್ಟಾನ್ನವನು ಜನಕೆ ತೃಪ್ತಿಬಡಿಸುತಿರಲು 4 ಸುತ್ತ ವೃಂದಾವನದ ಮಧ್ಯೆ ಉತ್ತಮರಾದ ವಾದಿರಾಜರು ಸತ್ಯವತಿಯ ಸುತರ ಎದುರು ನಿತ್ಯಾನಂದಭರಿತರಾಗಿ 5 ಸೃಷ್ಟಿಗಧಿಕಾನಂತಾಸನವು ಶ್ವೇತದ್ವೀಪ್ವೈಕುಂಠವೆಂಬೊ ಮುಕ್ತಸ್ಥಳದಲ್ವಾಸವಾದ ಲಕ್ಕುಮಿ ತ್ರಿವಿಕ್ರಮನ 6 ನೇಮನಿಷ್ಠ ಸೇವಕ ಜನಕೆ ಬೇಡಿದ ಇಷ್ಟಾರ್ಥ ಕೊಡುವೊ ಭೀಮೇಶಕೃಷ್ಣ ದಯದಿ ನೋಡಿದೆ ಹಯವದನನಂಘ್ರಿ 7
--------------
ಹರಪನಹಳ್ಳಿಭೀಮವ್ವ
ನೋಡಿ ನಾ ಧನ್ಯನಾದೆನೊ ತೋತಾದ್ರೀಶನ ನೋಡಿ ಧನ್ಯನಾದೆ ನಾಡೊಳು ತನಗೆಲ್ಲಿ ಈಡಿಲ್ಲೆನಿಸುವನ ನೋಡಿ ಧನ್ಯನಾದೆನೊ ಪ ಆರೊ ಮಹಾರೂಪ ಬಂದು ಏಕಾಂತದಲ್ಲಿ ಆರಾಧಿಸಿದಾತನಂದು ಭಕುತಿ ಬಿಡದೆ ವಾರವಾರಕ್ಕೆ ಗತಿಯೆಂದು ಈ ರೀತಿಯಲ್ಲಿ ಇರೆ ತೋರಿದ ಕರುಣ ನಿನ್ನಾ 1 ಭಕುತನ್ನ ತಪಸಿಗೊಲಿದು ವೇಗದಿಂದಲಿ ಲಕುಮಿ ರಮಣ ಸುಳಿದು ಬೇಡಿದಂಥಾ ಧಿಕವಿತ್ತು ರೋಷವಳಿದು ಸುಖದ ಭಾರತ ಪೇಳೊ ದಕ್ಕೆ ಮುನಿ ಮಾಡಿದ ದಾನಾ 2 ಧರಿಗೆ ದಕ್ಷಿಣ ದಿಕ್ಕಿಲಿ ಮಾಹೇಂದ್ರಿ ಮಹಿ ಧರನ ಸಮೀಪದಲ್ಲಿ ಪ್ರತಿದಿನ ಮೆರೆವ ವೈಭೋಗದಿಂದಲಿ ಕರುಣಿ ವಿಜಯವಿಠ್ಠಲ ವರಧೇನು ಎನಿಸುವನಾ3
--------------
ವಿಜಯದಾಸ
ನೋಡಿ ನಿನ್ನನು ಧನ್ಯಳಾದೆನು ಮಾಡಿ ಕೃಪೆಯನು ಮನ್ನಿಸೂಬೇಡಿಕೊಂಬೆನು ಭವವ ಮುಂದಕೆ ನೀಡದಂಘ್ರಿಯೊಳೊಂದಿಸೂ ಪಕೃಷ್ಣ ನಿನ್ನನು ಮುದ್ದನಾಡುತ ಕಷ್ಟವನು ಕಡೆಗಾಂಬೆನೂಇಷ್ಟದೈವವು ನನ್ನ ಜಠರದಿ ಪುಟ್ಟೆ ನಿನ್ನನು ಕಂಡೆನೂದುಷ್ಟಕರ್ಮಗಳೆಲ್ಲವನು ನೆರೆ ನಷ್ಟಗೈಯುವ ದೇವನೂಪುಟ್ಟಮಗುವಾಗಿರಲು ಕೇಶವ ಮುಟ್ಟಿಲಾಲಿಪಳಾದೆನೂ 1ಬಟ್ಟಚೆಲು'ನ ರತ್ನದರಳೆಲೆ ಕಟ್ಟಿ ಬೊಪ್ಪದೊಳೊಲೆಯಲೂಪುಟ್ಟ ಮಾಗಾುಗಳು ಕಿ'ಗಳವಟ್ಟು ಕದಪುಗಳೊಪ್ಪಲೂನಟ್ಟನಡು ಪಣೆಯಲ್ಲಿ ಕತ್ತುರಿಬಟ್ಟು ಬೆಡಗನು ಬೀರಲೂಇಟ್ಟ ಕಪ್ಪಿನ ಕಣ್ಗಳೆಸೆಯಲು ಬಿಟ್ಟಬಾಯಲಿ ಸ'ಯಲು 2ಮುತ್ತು ರತ್ನಗಳನ್ನು ತೆತ್ತಿಸಿ ಸುತ್ತಕಾಂತಿಯ ಬೀರುವಉತ್ತಮದ ಮಕುಟವನು ನಿನ್ನಯ ನೆತ್ತಿಗಿಡುವೆನು ಕೇಶವಮತ್ತು ಕಂಕಣಗಳನು ಕರಗಳಿಗಿತ್ತು ಕಟ್ಟುವೆ ಪವಳವಾಸತ್ಯವಂತನೆ ನೀನು ಶಿಶುತನವೆತ್ತೆ ಪಡೆದೆನು ಭಾಗ್ಯವಾ 3ಸನ್ನುತನೆ ಪದಕಗಳ ಸರಗಳ ನಿನ್ನ ಕೊರಳಿಗೆ ಕಟ್ಟಿಚಿನ್ನ ಮುಕ್ತದಿ ಪೊಳೆವ ಕೌಸ್ತುಭವನ್ನು ಉರಕಳವಡಿಸುವಾರನ್ನ ಮಾಣಿಕದುಡಿಯ ಸೂತ್ರಗಳನ್ನು ಕಟಿಯಲಿ ರಚಿಸುವಾಇನ್ನು ಬಹು'ಧವಾಗಿ ಮನ್ನಿಪುದನ್ನು ವ'ಸಿದೆ ದಾಸ್ಯವಾ 4ಕಟ್ಟಿ ಘಂಟೆಯ ಸರವ ಕಟಿಯಲಿ ಪುಟ್ಟ ಶ್ರೀಮೃದುಪಾದವಾಮುಟ್ಟಿ ಕೈುಂದಂದುಗೆಗಳ ನಾನಿಟ್ಟು ಘಲಿಘಲಿಗುಟ್ಟುವಾಬಟ್ಟಗೆಜ್ಜೆಯ ಸಣ್ಣಸಾಲ್ಗಳ ದಟ್ಟಗೊಳಿಸೀಯೆಂದವಾನೆಟ್ಟದ್ಟೃಯಲೀಕ್ಷಿಸುತ ಹೊರಗಟ್ಟಿಬಿಟ್ಟೆನು ಕ್ಲೇಶವಾ 5ಒಂದು ಸ್ತನವನು ಸ'ಯುತಲೆ ಮತ್ತೊಂದು ಸ್ತನವನು ಕರದಲಿತಂದು ವದನದೊಳಿಟ್ಟು ದಣಿಯುತ ಮಂದಹಾಸದ ಮುಖದಲಿಇಂದಿರೇಶನೆ ನಿನ್ನ ನೋಡುತ ಇಂದು ಸಲ'ದೆ ಕೃಪೆಯಲಿವಂದಿಪರು ನಿನ್ನಡಿಗೆ ಸುರಮುನಿವೃಂದ ಭಾ'ಸಿ ಮನದಲಿ 6ಸಕಲ ಲೋಕಾಧಾರನಾಗಿಯೆ ಸಕಲ ಜೀವರ ಸಾಕ್ಷಿಯೆಪ್ರಕಟವಾಗೆನಗೀಗ ತೋರಿದೆ ಮುಕುತಿದಾಯಕ ಮೂರ್ತಿಯೆಭೃಕುಟಿಯಲಿ ನಿರ್'ುಸಿದ ಮಾಯೆಯ 'ಕರಿಸುವನುಸಾರಿಯೆಚಕಿತಳಿಗೆ ನನಗೊಲಿದೆ ತಿರುಪತಿ ವೆಂಕಟನಡಿಗೆ ಸ್ವಾ'ುಯೆ7
--------------
ತಿಮ್ಮಪ್ಪದಾಸರು
ನೋಡಿ ನೋಡಿ ನೋಡುದರೊಳಗೆ ನೋಡಿದ ನೋಟ ಸದ್ಭನವಾಗುವ್ಹಾಂಗ ಧ್ರುವ ಮನದಿಂದಲಿ ಮನನೋಡುವ ಯೋಗ ಘನಸುಖ ತೋರುವದಿದೆ ಬ್ರಹ್ಮಭೋಗ 1 ಕಣ್ಣಿನಿಂದಲಿ ಕಣ್ಣುದೆರುವ್ಹಾಂಗ ಮಾಡಿ ಚನ್ನಾಗಿ ಉದಯವಾಗುದು ಘನ ಮೂಡಿ 2 ಭಾವ ಬಲಿದು ನೋಡುವುದು ಬಲುಚೆಂದ ಆವಾಗ ಮಹಿಪತಿಗಿದೆ ಬ್ರಹ್ಮಾನಂದ 3
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ನೋಡಿ ನೋಡಿ ಸತ್ಯಪ್ರಿಯರ ನಾ ನಿಂದು ನಿಂದು ಪಾಡಿ ಪಾಡಿ ಯೋಗಿವರ್ಯರ ನಾ ಪಾಡಪಂಥದಲಿ ಬಂದ ಮೂಢ ಮಿಥ್ಯಾವಾದಿಗಳ ಓಡಿಸಿ ತನ್ನನು ಕೊಂ ಡಾಡಿದವರ ಪೊರೆವ ಯತಿಯ ಪ ನಾಗಸರ ನಾಗಬಂಧ ಕೊಂಬು ಕೊಳಲು ರಾಗದಿಂದ ಪಾಡುವ ಸನಾಯಿಸುತಿಗಳು ಬೇಗಿ ಕೂಗುವ ಹೆಗ್ಗಾಳೆ ದುಂದುಭಿ ಎಸಿಯೆ ಚತು ಪರಿಯಂತ ಮೆರೆದ ಯೋಗಿಗಳಾಗ್ರಣ್ಯನ1 ವಾದಿಗಳೆದೆಯು ಬಿರಿಯೆ ಧವಳ ಶಂಖದಾ ನಾದ ಒಪ್ಪ್ಪಿಸುತ್ತಿ ಮೆರೆವ ಬಿರಿದು ಸಮುದಾಯ ಮೇದಿನಿ ಸುರರು ಬಲದಾರಿಯಲಿ ಬರೆ ಆಶೀ ರ್ವಾದವನ್ನು ಕೊಡುವ ಧೀರನು 2 ಗಜ ಪಾಯಿದಳನೇಕಸಂದಣಿ ಯೋಜನದಗಲಕೆ ಘೋಷಣವಾಗಲು ರಾಜಾಧಿರಾಜರು ಪೂಜೆಯನ್ನು ಮಾಡುತಿರೆ ಈ ಜಗದೊಳಗೆ ಸಿದ್ಧ ತೇಜಪುಂಜರನ್ನ 3 ಅದ್ವೈತಮತಶಾಸ್ತ್ರ ವದ್ದು ಕಳವುತ ಮಧ್ವಮತವ ಎಂಬೊ ಸುಧಾಬ್ಧಿಗೆ ರಾಕೇಂದುನಂತೆ ಇದ್ದು ಭವರೋಗಳಿಗೆ ಮದ್ದು ಅಹುದೋ ಸುಗುಣದವರ4 ಹಿಂಡು ಬರಲಾಗಿ ಕಂಡು ಹರುಷದಿಂದ ಸಭಾಮಂಡಿತರಾಗಿ ಖಂಡ ತುಂಡು ಮಾಡಿ ಅವರ ದಿಂಡುಗೆಡಹಿ ಮಂಡಲಕೆ ಪುಂಡರಿಕಾಕ್ಷನೆ ಉದ್ದಂಡನೆಂದು ಸಾರಿದರನ5 ಬಿಜವಾಡದಲಿ ಕೃಷ್ಣ ತಜ್ಜಲದೊಳು ದುರ್ಜಂತುಗಳು ನರರಾ ಬೆಚ್ಚರಿಸಲು ಪ್ರಜ್ವಲಿಸುತ ಪೋಗಿ ಮಾರ್ಜನೆ ಯನ್ನು ಗೈದು ಭೀತ ರಾಜಝರವ ಬಿಡಿಸಿ ಕಾಯಿದ ಸಜ್ಜನರ ಮನೋಹರ 6 ದೇಶÀದೊಳೀ ಶೇಷವಾದ ದಾಸರ ಪ್ರಿಯ ಸಿರಿ ವಿಜಯವಿಠ್ಠಲೇಶನಂಘ್ರಿಯ ಸಾಸಿರ ದಳದ ಧ್ಯಾನ ಮೀಸಲಾಗಿ ಮಾಡುತಿಪ್ಪ ದೋಷರಹಿತರಾದ ಸಂ ನ್ಯಾಸ ಕುಲಭೂಷಣನಾ 7
--------------
ವಿಜಯದಾಸ
ನೋಡಿ ನೋಡಿನೊ ರಂಗಾ ನಿನ್ನ ನೋಡಿನೊ ಆಡಲೇನಯ್ಯಾ ಪರಸತಿಯರ ಮೋಹಕ್ಕೆ ಸಿಲುಕಿ ಪ ಹೆಣ್ಣ ನಾ ಕಾಣುತ ಮನಸು ದ್ರವಿಸುವದು ದೃಢವಾಗಿ ಮುನ್ನೆ ದಾರಿದ್ರತನ ಯೆಣಿಸಿಕೊಳದೆ ಕಣ್ಣು ಹೋಗುವ ಸುದ್ದಿ ತಿಳಿಯದಲೆ ನೀಕ್ಷಿಸಿ ನಿತ್ಯ 1 ಜಲ್ಪಸಿಲ್ಪಿಗಳಿಂದ ಮಂತ್ರ ಮಾಡುವೆ ಅವಳಾ ಬಲ್ಪು ವಯ್ಯಾರ ಗುಣಗುಣಿಸಿಕೊಳುತಾ ತಲ್ಪಮಿಕ್ಕಾದ ಭೋಗದ್ರವ್ಯ ಬಯಸಿ ವಿ ಕಲ್ಪ ಸಂಕಲ್ಪದಲ್ಲಿ ಬಳುಲುವೆನುಬ್ಬಸವಳಿದು 2 ವ್ಯಾಖ್ಯಾತ ಪಂಡಿತದ್ವ್ಯಾಪಕ ಪಾಠಕ ಮಹಾ ಪ್ರಖ್ಯಾತ ವೇದವೇದಾಂತ ಪ್ರೌಢ ಸೌಖ್ಯ ಪುಸ್ತಕ ಪಾಣಿ ಜ್ಞಾನಿ ಎನಿಸಲು ಅವಳ ಆಖ್ಯಾನ ಕೇಳುತಲೆ ಕಿವಿಗೊಟ್ಟು ಲಾಲಿಸುವೆ 3 ಬೀದಿಯೊಳು ಪೋಗುವವಾಳೊಂದು ಪ್ರಯೋಜನಕೆ ಹಾದಿಯನು ಹಿಡಿದು ಸಮೀಪ ಬರಲು ಪಾದಕಾದರು ಬಿದ್ದು ಮಾತಾಡುವೆನೆಂಬೊ ಮೋದವನು ತಾಳಿ ಏಕಾಂತ ಹುಡುಕುವೆ 4 ಅಂಧಕ ಮೂಕಿ ಬಧಿರೆ ಹೀನಾಂಗ ಅವರೋತ್ತಮ ಜಾತಿ ವಿಧಿ ನಿಷೇಧವನು ಚಿಂತಿಸದೆ ತೀವರದಿಂದ ಅಧೋಗತಿಗೆ ಇಳುವೆನು ಸತ್ಕರ್ಮವನು ತೊರೆದು 5 ನೀರು ಸೀರೆವೊಗಿವಾಗ ಮೈ ತೊಳೆದು ಉಡುವಾಗ ಉರು ಕುಚ ಕಚ ನೋಳ್ಪ ಆಶೆಯಲ್ಲಿ ಮೂರು ಹತ್ತನೆ ತತ್ವ ನೆನೆನೆನೆದು ಯೋಚಿಸಿ ವಾರಿತಿಯ ಕೇಳಿ ತಲೆದೂಗುವೆನೊ ಲೇಸಾಗಿ 6 ಕಣ್ಣುಯಿದ್ದದಕೆ ಸಾರ್ಥಕವಾಗಲಿಲ್ಲ ಪ್ರ ಸನ್ನ ಮೂರುತಿ ಯೆನ್ನ ಸಾಧನವೇನೊ ಘನ್ನ ಏಲ್ಲೆಲ್ಲಿ ನಾ ನೋಡಿದರೆ ಅಲ್ಲಲ್ಲಿ ನಿನ್ನ ರೂಪವ ತೋರೊ ವಿಜಯವಿಠ್ಠಲ ಒಲಿದು 7
--------------
ವಿಜಯದಾಸ
ನೋಡಿ ಮರುಳಾಗದಿರು ಪರಸತಿಯರ ಪ ನಾಡೊಳಗೆ ಕೆಟ್ಟವರ ಪರಿಯ ನೀನರಿತು ಅ ಶತಮಖವ ಮಾಡಿ ಸುರಸಭೆಗೈದ ನಹುಷ ತಾನಾತುರದಿ ಶಚಿಗೆ ಮನಸೋತು ಭ್ರಮಿಸಿಅತಿ ಬೇಗ ಚಲಿಸೆಂದು ಬೆಸಸಲಾ ಮುನಿಯಿಂದಗತಿಗೆಟ್ಟು ಉರಗನಾಗಿದ್ದ ಪರಿಯರಿತು 1 ಸುರಪತಿಯು ಗೌತಮನ ಸತಿಗಾಗಿ ಕಪಟದಿಂಧರೆಗೆ ಮಾಯಾವೇಷ ಧರಿಸಿ ಬಂದುಪರಮ ಮುನಿಯ ಶಾಪದಿಂದಂಗದೊಳು ಸಾ-ಸಿರ ಕಣ್ಗಳಾಗಿರ್ದ ಪರಿಯ ನೀನರಿತು 2 ಸ್ಮರನ ಶರತಾಪವನು ಪರಿಹರಿಸಲರಿಯದೆದುರುಳ ಕೀಚಕನು ದ್ರೌಪದಿಯ ತುಡುಕಿಮರುತ ಸುತ ಭೀಮನಿಂದಿರುಳೊಳಗೆ ಹತನಾಗೆನರಗುರಿಯೆ ನಿನ್ನ ಪಾಡೇನು ಧರೆಯೊಳಗೆ3 ಶರಧಿ ಮಧ್ಯದೊಳಿದ್ದುದುರುಳ ದಶಶಿರನು ಜಾನಕಿಯನೊಯ್ಯೆಧುರದೊಳಗೆ ರಘುವರನ ಶರದಿಂದ ಈರೈದುಶಿರಗಳನೆ ಹೋಗಾಡಿಸಿದ ಪರಿಯನರಿತು 4 ಇಂತಿಂಥವರು ಕೆಟ್ಟು ಹೋದರೆಂಬುದನರಿತುಭ್ರಾಂತಿಯನೆ ಬಿಟ್ಟು ಭಯಭಕ್ತಿಯಿಂದಕಂತುಪಿತ ಕಾಗಿನೆಲೆಯಾದಿಕೇಶವನ ನಿ-ರಂತರದಿ ಭಜಿಸಿ ನೀ ನಿತ್ಯಸುಖಿಯಾಗು 5
--------------
ಕನಕದಾಸ
ನೋಡಿ ಶ್ರೀ ಹರಿಪೂಜಿ ಮಾಡುದು ಬಿಡಿ ಮನಕೃತ ವಾಜಿ ಧ್ರುವ ಮಂಗಳಕರಸುಖ ಕಂಗಳಗಿದಿರಿಡುತದನೇಕ ಮುಂಸಗುಡಿಯಲಿ ಮೂಡಿ ರಂಗದೋರುವ ಘನಕೌತುಕ 1 ತಾಳ ಮೃದಂಗ ಘನ ಭೇರಿ ಫಳಗುಡುತದೆ ಪರೋಪರಿ ತಿಳಿದವನಧಿಕಾರಿ ಕೇಳಲ್ಹೋಗುದು ಭವಭಯ ಹಾರಿ 2 ಹೇಳಲೆನ್ನಳವಲ್ಲ ಹೊಳೆವುತಿಹುದು ಮೂಜಗವೆಲ್ಲ ಕೇಳಿ ಸವಿಯ ಸೊಲ್ಲ ತಿಳಿದ ಮಹಿಮ ತಾನೆ ಬಲ್ಲ 3 ಅಜಪ ಸುಜಪ ಮಂತ್ರ ರಾಜಿಸುತಿಹುದು ಬಾಹ್ಯಾಂತ್ರ ತ್ರಿಜಗ ಮಾಡುವ ಪವಿತ್ರ ಸುಜನ ನೋಡುವ ಸುಚರಿತ್ರ 4 ಸ್ವಹಿತ ಸುಖದ ಸಾರ ಶ್ರೀಹರಿಪೂಜಿ ನಿರಂತರ ಮಹಿಪತಿ ಮನೋಹರ ಸಾಹ್ಯ ಸಕಲಕಿದೆ ಸಹಕಾರ 5
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ನೋಡಿದರೆ ತನ್ನೊಳಗದೆ ಗೂಢವಾಗದೆ ಧ್ರುವ ಸೋಹ್ಯ ತಿಳಿಯಗೊಡದೆ ಮಾಯ ಮರಿ ಆಗ್ಯದೆ ಕಾಯದೊಳಗೆ ತಾನಾದೆ ಗುಹ್ಯವಾಗ್ಯದೆ 1 ಅಡಿ ಮೇಲು ತಿಳಿಯದೆ ಬಿಡದೆ ಸೂಸುತಲ್ಯದೆ ಹಿಡಿದೇನೆಂದರೆ ಬಾರದು ಇಡದು ತುಂಬ್ಯದೆ 2 ತೋರಿಕೆ ತೋರಿಸದೆ ಪರಿಪೂರ್ಣ ತಾನಾಗ್ಯದೆ ಮೂರುಗುಣಕೆ ಮೀರ್ಯದೆ ಬ್ಯಾರೆ ತಾನದೆ 3 ಕರುಣಿಸಿ ನೋಡುತದೆ ಕರೆದರೋ ಎನುತದೆ ಬ್ಯಾರೆ ನಿರಾಶೆವಾಗ್ಹಾದೆ ಹೊರೆಯುತಲ್ಯದೆ 4 ನೀಲವರ್ಣದೊಳದೆ ಥಳಥಳಗುಡುತದೆ ಮ್ಯಾಲೆ ಮಂದಿರದೊಳದೆ ಲೋಲ್ಯಾಡುತದೆ 5 ಗುರುತ ಕಂಡವಗದೆ ಗುರುಸ್ವರೂಪವಾಗ್ಯದೆ ಗುರು ಕೃಪೆ ಆದವಂಗದೆ ಸಾರಿ ಚಲ್ಯದೆ 6 ದಾಸ ಮಹಿಪತಿಯೊಳದೆ ವಾಸವಾಗ್ಯದೆ 7
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ನೋಡಿದರೆ ನೋಡು ಮಾತಾಡು ತಾಯಿಗಳೆಂದು ನೋಡಿ ಭ್ರಮಿಸಲು ಬೇಡ ಪರಸತಿಯರ ಪ. ದಾರಿಯೊಳು ಭಯವೆಂದು ಚೋರರೊಳು ಪೋಗುವರೆ ಗೇರುಬೀಜದ ತೈಲ ಲೇಪಿಸುವರೆ ಅರಣ್ಯ ಮಧ್ಯದಲಿ ಮೃಗವಿರಲು ತುರಗವೆಂ ದೇರುವರೆ ಪರಸತಿಯ ಪಾಪಿ ಮನವೆ 1 ಹಸಿಯ ಯಕ್ಕೆಯಕಾಯಿ ನಸುಗುನ್ನಿ ತುರುಚೆಯನು ತೃಷೆಗೆ ಮೆಲುವರೆ ವ್ಯಸನ ದೋರಿತೆಂದು ವಿಷವ ಸೇವಿಸಿದಂತೆ ನೋಡಿ ನೀ ಪರಸತಿಯ ವಿಷಯಕೆಳಸುವುದೇಕೆ ಪಾಪಿ ಮನವೆ 2 ಪ್ರೀತಿಯಿಂದಲಿ ಸತಿಯ ಮನೆಗಾಗಿ ಯಿಂದ್ರನತಿ ಕಾತುರದಿ ಪೋಗಿ ಮೈತೂತಾದನು ಸೀತೆಗೋಸುಗವಾಗಿ ರಾವಣನು ತಾ ಕೆಟ್ಟ ಸೋತು ದ್ರೌಪದಿಗೆ ಕೀಚಕ ಕೆಟ್ಟನು 3 ********************4 ಕೆಟ್ಟವರದೃಷ್ಟವಿನ್ನೆಷ್ಟು ಹೇಳಿದರೇನು ಬಿಟ್ಟು ಬಿಡುವರೆ ತಮ್ಮ ಕೆಟ್ಟ ಗುಣವ ಕಟ್ಟಿನೊಳಗಿಟ್ಟು ಉತ್ಕøಷ್ಟ ಜನಗಳ ಸಂಗ ಕೊಟ್ಟು ಸಲಹಯ್ಯ ಅಚಲಾನಂದವಿಠಲ 5 * ನುಡಿ 4 ಸಿಕ್ಕಿಲ್ಲ
--------------
ಅಚಲಾನಂದದಾಸ
ನೋಡಿದೆ ಗಿರಿಯ ತಿರ್ಮಲನ ನಿತ್ಯ ಮೂಡಲ ದಿಕ್ಕಿನಲಿಪ್ಪ ನಿರ್ಮಲನಾ ಪ ನೀರೇರ ಕೂಡಾಡಿದವನಾ ದೇವ ನೀರೊಳಗೆ ಸದನವ ಬಿಗಿದವನಾ ನೀರದ ಶ್ಯಾಮ ವರ್ಣನನಾ ಭವ ನೀರಜ ಭವವಂದ್ಯಾ ದಯಾಸಾಗರನಾ 1 ನೀರು ಪಾದದಲಿ ಪೆತ್ತವನಾ ಮಹಾ ನೀರು ದಾಟಿ ಮಕ್ಕಳ ತೋರಿದವನಾ ನೀರಧಿ ಬಿಗಿದ ಪ್ರಬಲನಾ ಅಂದು ನೀರುಪತಿಯ ಭಂಗವ ಮಾಡಿದವನಾ 2 ನೀರು ಕಟದ ನಿಃಸಂಗನಾ ಸರ್ವ ನೀರು ಸೇದುವನಾಗಿ ಜಗವ ಸುತ್ತುವನ ನೀರೊಳಗಾಡುವ ನಿಜನಾ ಓರ್ವ ನೀರೇಳ ನಾರಿಯ ಮಾಡಿದ ಗುಣನಾ 3 ನೀರಜೋದರ ನಿರ್ಮೋಹನನಾ ಏಳು ನೀರಜ ದಳದಲ್ಲಿ ಪೊಳೆವ ಚನ್ನಿಗನಾ ನೀರು ಬಯಲು ಮಾಡಿದವನಾ ಅನ್ನ ನೀರೊಳಗಿದ್ದು ಜಗವ ಪೊತ್ತವನಾ 4 ನೀರಜಪಾಣಿ ವಲ್ಲಭನಾ ತೇಜ ನೀರನ್ನ ತತ್ವ ವ್ಯಾಪಿಸಿಕೊಂಡವನಾ ನೀರೆ ಗತಿಯ ಮಾಡಿದವನಾ ನಮ್ಮ ನೀರಜಾದ್ರಿ ತಿಮ್ಮ ವಿಜಯವಿಠ್ಠಲನಾ 5
--------------
ವಿಜಯದಾಸ
ನೋಡಿದೆ ಗುರುರಾಯರನ್ನ ಈ ರೂಢಿಯೊಳಗೆ ಮೆರೆವೊ ಸಾರ್ವಭೌಮನ್ನ ಪ ಥಳಥಳಿಸುವ ಬೃಂದಾವನದಿ - ತಾನು ಕುಳಿತು ಭಕ್ತರಿಗೀವ ವರವನು ತ್ವರದಿ ನಳಿನನಾಭನ ಕೃಪಾಬಲದಿ - ಇದೆ ನಳಿನಜಾಂಡದಿ ಸರಿಗಾಣೆ ಮಹಿಮಾದಿ1 ಪೊಳೆವೊ ವಕ್ಷಸ್ಥಳದವನ - ಎಳೆ ತುಳಸಿ ಮಾಲಾಂಕಿತ ಕಂಧರಯುತನಾ ನಳಿನಾಕ್ಷಮಾಲೆ ಶೋಭಿತನ - ಉರ ಚಲುವ ದ್ವಾದಶಪುಂಢ್ರ -ಮುದ್ರಚಿಹ್ನಿತನಾ 2 ಕೃಷ್ಣವರ್ಣದಿ ಶೋಭೀತನಾ - ಮಹಾ ವೈಷ್ಣವ ಕುಮುದ - ನಿಕರಕೆ ಚಂದಿರನಾ ವಿಷ್ಣು ಭಕ್ತಾಗ್ರೇಸರನಾ - ಬಾಲ ಕೃಷ್ಣಮೂರುತಿ ಪದಯುಗ ಸರೋಜ ಇನಾ 3 ದಿನನಾಥ - ದೀಪ್ತಿ - ಭಾಸಕನ - ಭವ ವನಧಿ - ಸಂತರಣ - ಸುಪೋತಕೋಪÀಮನಾ ಮುನಿಜನ ಕುಲದಿ ಶೋಭಿಪನ - ಸ್ವೀಯ ಜನರ ಪಾಲಕ ಮಹಾರಾಯನೆನಿಪನಾ 4 ಗುರುಜಗನ್ನಾಥ ವಿಠಲನ - ಪಾದ ಸರಸಿಜ ಯುಗಳಕಾರಡಿ ಎನಿಪÀನಾ ಪೆರಿವೋನು ತನ್ನ ಜನರನಾ - ಎಂದು ಶಿರಸದಿ ನಮಿಸಿ ಬೇಡಿದೆ ಗುರುವರನಾ 5
--------------
ಗುರುಜಗನ್ನಾಥದಾಸರು
ನೋಡಿದೆ ನಾ ನೋಡಿದೆ ಮಾಡಿದೆ ನಾ ಮಾಡಿದೆ ಪ ಬೆಟ್ಟವ ಕಂಡೆನು ಸೋಪಾನಂಗಳು ನಿಟ್ಟುಸುರಿಕ್ಕದೆ ಏರಿದೆ ಕಟ್ಟ ಕಡಿಯಣ ಗೋಪುರ ಶಿಖರ ದಿಟ್ಟಿಸಿ ಕಣ್ಣಿಲಿ ನೋಡಿದೆ 1 ಈ ಸಮಸ್ತರ ಗುರುವಾದ ಭಾರತಿ ಈಶನ ಪಾದಕ್ಕೆ ಎರಗಿದೆ ಕ್ಲೇಶನ ಕಳೆದು ಎದುರಾಗಿ ಪೊಳೆವ ಶ್ರೀಶನ ಮಹದ್ವಾರ ನೋಡಿದೆ 2 ಬಲವಾಗಿ ಬಂದು ಸ್ವಾಮಿ ಪುಷ್ಕರಣಿ ಒಳಗೆ ವರಹನ ನೋಡಿದೆ ಜಲದಲಿ ಮಿಂದು ವೇಗದಲಿ ತಿರುವೆಂ ಗಳ ದೇವನ ನೋಡ ಸಾಗಿದೆ 3 ಗುಡಿಯ ಪೊಕ್ಕೆನು ಗರುಡಗಂಬದ ಸಡಗರವನು ನಾ ನೋಡಿದೆ ಒಡನೆ ಪ್ರಾಣಾಚಾರದವರು ಪಡೆದ ವರಗಳ ಕೇಳಿದೆ 4 ಮುನ್ನ ಅವಸರ ಮನಿಯೊಳಗೆ ಅನ್ನಪೂರ್ಣಿಯ ನೋಡಿದೆ ಚನ್ನಾಗಿ ಮಂಟಪದೊಳು ಶ್ರೀನಿವಾ ಸನ್ನ ಮೂರುತಿಯ ನೋಡಿದೆ 5 ತೊಟ್ಟಲ ತೀರ್ಥವ ಕೊಂಡು ಪ್ರಸಾದ ಇಟ್ಟು ಮಾರುವದು ನೋಡಿದೆ ಇಷ್ಟ ಭಕ್ತರು ಸಮ್ಮುಖದಲಿ ಮುಟ್ಟಿ ಪಾಡುವದು ನೋಡಿದೆ6 ದ್ವಾರಪಾಲಕರಿಗೆ ಸಾಷ್ಟಾಂಗದಲಿ ನಮ ಸ್ಕಾರವನು ಮಾಡಿದೆ ಭೋರನೆ ಕಟಾಂಜನದ ಫಲ್ಗುಣಿ ಬಂ ಗಾರ ಬಾಗಿಲವ ನೋಡಿದೆ 7 ಇಂದು ರವಿ ಶತಕೋಟಿ ತೇಜದ ವಿಂದ ಯುಗ್ಮವ ಪುಳಕೋತ್ಸಹÀದಿಂದ ಸಂದರುಶನ ನಾ ಮಾಡಿದೆ 8 ಇಟ್ಟಿದ್ದ ಅಂದಿಗೆ ಉಟ್ಟ ಪೀತಾಂಬರ ಕಟ್ಟಿದ್ದ ಧಟ್ಟಿ ವಢ್ಯಾಣ ಝಟಿ ಕಂಕಣಾಕಾರದಾಲಾಯುಧ ಇಟ್ಟ ಕಸ್ತೂರಿಯ ನೋಡಿದೆ 9 ಮಾಸದಾ ಪೂವು ಪೂಸಿದ ಗಂಧ ಭೂಷಣಾ ನಾನಾ ಪರಿವಿಧ ಏಸು ಬಗೆಯಲ್ಲಿಟ್ಟು ಶ್ರೀನಿ ವಾಸನ ಶೃಂಗಾರ ನೋಡಿದೆ 10 ಜಯಜಯ ಜಗದೀಶ ಜಗನ್ನಿವಾಸ ಜಯ ಜಯ ಲಕುಮಿ ಪರಿತೋಷ ಜಯ ಜಯ ವಿನಾಶ ಜಯ ಜಯ ಸರ್ವೇಶ ಜಯವೆಂದು ಸ್ತೋತ್ರವ ಮಾಡಿದೆ11 ಕೇಸಕ್ಕಿ ದಧ್ಯೋದನ ಪರಮಾನ್ನ ದೋಶಿ ಬಿಸಿಬಿಸಿ ಮನೋಹರ ಲೇಸಾಗಿ ಚತುರ್ವಿಧ ಪ್ರಸಾದವನ್ನು ಈಸು ಅವಸರ ನೋಡಿದೆ 12 ಕರ್ಪೂರದಾರತಿ ವಪ್ಪಿನಿಂದಲಿ ತಂದು ತಪ್ಪದಲಿ ಬೆಳಗೋದು ನೋಡಿದೆ ರೆಪ್ಪೆಯವಿ ಹಾಕದೆ ಮನದಣಿಯ ತಿ ಮ್ಮಪ್ಪನ ವಿಗ್ರಹ ನೋಡಿದೆ 13 ಹಿಮಋತು ಪ್ರಥಮ ಮಾಸÀ ದಶಮಿ ಹಿಮಕರ ವಾರದದಿನದಲ್ಲಿ ಕ್ರಮದಿಂದಲಿ ಪೋಗಿ ಬಿಂಬ ಮೂರುತಿಯ ವಿಮಲ ಚಾರಿತ್ರವ ನೋಡಿದೆ 14 ಶತ ಅಪರಾಧವ ಮಾಡಲು ಕಳೆದು ಪತಿ ವಿಜಯವಿಠ್ಠಲ ಪುರಂದರನ ಸಂ ಗತಿಯಲ್ಲಿ ಸತತ ಸಾಕಿದಾ15
--------------
ವಿಜಯದಾಸ