ಒಟ್ಟು 8772 ಕಡೆಗಳಲ್ಲಿ , 133 ದಾಸರು , 4875 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಕೃಷ್ಣವೇಣಿ164ನಮೋ ನಮೋ ಕೃಷ್ಣವೇಣಿನಮೋ ನಮೋ ಕೃಷ್ಣವೇಣಿ ಕಲ್ಯಾಣಿ ಪ.ಈ ಜನ್ಮದಘವು ನಾನಾ ಜನ್ಮಕೃತದೋಷಆರ್ಜಿತವಾದ ಪಂಚ ಮಹಾಪಾಪವುತ್ರಿಜಗತ್ಪಾವನಿಯೆ ನಿನ್ನ ಕಂಡು ನಾ ಕಳೆದೆರಾಜಿಸುವ ದಿವ್ಯಗತಿಯೀಯೆ ಎನ್ನತಾಯೆ 1ವಿಪ್ರಮುನಿ ಸುರನರರು ಕನ್ಯಕ್ಕೆಗುರುಬರಲುಕ್ಷಿಪ್ರನೆರೆದರು ಉಭಯತೀರವಿಡಿದುಸುಪ್ರಾರ್ಥನೆಯ ಮಾಡಿ ಆನಂದದಿ ಹರಿಯನೆ ಪ್ರಸನ್ನೀಕರಿಸಿಕೊಳ್ಳುವರಮ್ಮ 2ನಿರ್ಮಳಾತ್ಮಕÉ ಗಂಗೆ ಸಂಗೆ ಗುಣೋತ್ತುಂಗೆಹಿಂಗಿಸು ಭವವ ಪಾವನತರಂಗೆಜಂಗಮ ಜಡಾತ್ಮರನುದ್ಧರಿಸುತಿಹೆ ಸದಾಮಂಗಳ ಶ್ರೀಪ್ರಸನ್ವೆಂಕಟನೊಲುಮೆಯಲ್ಲಿ 3
--------------
ಪ್ರಸನ್ನವೆಂಕಟದಾಸರು
ಕೆಡಗೊಡದಿರು ಎನ್ನ ಚಿತ್ತಗತಿಯ ಸುರರೊಡೆಯ ತವಾಂಘ್ರಿ ಹೊಂದಿದ ಮತಿಯ ಪ.ಒಂದು ಗುರಿಗಿಟ್ಟರೆ ತಪ್ಪುತಿದೆ ಮತ್ತೊಂದಕಿಡದೆ ತಾ ತಗಲುತಿದೆಹೊಂದಲೊಲ್ಲದು ತ್ವನಿಷ್ಠೆಯನು ಒಣದಂದುಗಗೊಳುತಿದೆಹರಿನೀನು1ಮುಂದಿಟ್ಟ ಷಡ್ರಸಾನ್ನವನುಣ್ಣದು ದೂರಿಂದ ನಿಸ್ಸಾರಕ್ಹೆಣಗುವುದುನಂದಿಸಲೊಲ್ಲದು ನೆಳಲ್ವಿಡಿದು ಕಿಚ್ಚೆಂದಂಜದೋಡಿ ಧುಮುಕುತದಿದು 2ಪ್ರದೇಶ ಅಂಗುಟ ಮಾತ್ರವ ಕಾಣದೆ ತಾಭೂದಿವಿ ಪಾತಾಳಕೈದುತಿದೆಮಾಧವಪ್ರಸನ್ನವೆಂಕಟ ದಯಾಳು ನಿನ್ನಪಾದದಲ್ಲಿಡು ಇದರುಲುಹು ಬಲು 3
--------------
ಪ್ರಸನ್ನವೆಂಕಟದಾಸರು
ಕೇಶವ ಬಾ ನಾರಾಯಣ ಬಾ ಬಾಮಾಧವಬಾ ಮಧುಸೂದನ ಬಾಪಗೋವಿಂದ ಬಾ ಬಾ ಗೋಪಾಲ ಬಾ ಬಾಗೋವರ್ಧನ ಗಿರಿಧಾರಿಯೆ ಬಾ ಅ.ಪರಂಗನೆ ಅಂದಿಗೆ ಗೆಜ್ಜೆಯಕಟ್ಟಿಚುಂಗುಬಿಟ್ಟು ರುಮಾಲನೆ ಸುತ್ತಿಶೃಂಗಾರದ ಹಾರ ಪದಕಗಳ್ಹಾಕಿಅಂಗಳದೊಳಗಾಡಲು ಕಳುಹುವೆನು 1ಚಂಡು ಬುಗುರಿ ಗೋಲಿ ಗಜ್ಜುಗ ಹರಿಯೆಗುಂಡು ಬಿಂದಲಿನಿಟ್ಟಿ ಕರದಲಿ ಕೊಡುವೆಹಿಂಡುಗೋಪಾಲರ ಕೂಡಿಸುವೆಪುಂಡರಿಕಾಕ್ಷನೆ ಪಾಲಿಸು ದೊರೆಯೆ 2ಹಸುಳೆ ನಿನಗೆ ಹೊಸ ಬೆಣ್ಣೆಯ ನೀವೆಬಿಸಿ ಬಿಸಿ ಕಡುಬು ಕಜ್ಜಾಯವ ಕೊಡುವೆಶಶಿಮುಖಿಯರ ಕೂಡಾಡದಿರೆನುವೆಮೊಸರು ಬೆಣ್ಣೆ ಪಾಲ್ಸಕ್ಕರೆ ಕೊಡುವೆ 3ಜರದವಲ್ಲಿ ಅಲಂಕರಿಸುತ ನಲಿವೆಪರಿಪರಿ ಗೆಳೆಯರ ಕೂಡಿಸಿ ಕೊಡುವೆಮುರಳಿ ನುಡಿಸೆನ್ನುತಕರಮುಗಿವೆಪರಮಾತ್ಮನೆ ಜಗನ್ಮೋಹನ ಹರಿಯೆ 4ಕಮಲಭವೇಂದ್ರಾದ್ಯಮರರು ಪೊಗಳೆಕಮಲಪುಷ್ಪ ಮಲ್ಲಿಗೆ ಮಳೆ ಕರೆಯೆಕಮಲನಾಭ ವಿಠ್ಠಲ ಶ್ರೀಹರಿಯೆಶ್ರಮ ಪರಿಹರಿಸೆನ್ನುತ ಪ್ರಾರ್ಥಿಸುವೆ 5
--------------
ನಿಡಗುರುಕಿ ಜೀವೂಬಾಯಿ
ಕೇಳಿಮರೆವುದು ಮನ ಕುಶಶಯನನಆಳು ಕಂಡಂತೆಚಂದ್ರಮೌಳಿಹೇಳಿದಂತೆಪ.ಮುಂಜಾವದಿ ಗುರುಮಧ್ವಮತ ಮಹಿಮಾಹರಪಾದಕಂಜಗಳ ಬಲಗೊಂಡು ಕಲಿಯಾನಕೆಂದು ಲಕುಂಜರವರದನ ನಾಮ ಕೀರ್ತನೆ ಮಾಡೆಂದುಮಂಜುಳ ಶಾಸ್ತ್ರಶ್ರವಣ ಮಹಿಮೆ ಪುರಾಣ 2ಪ್ರಸನ್ವೆಂಕಟೇಶನಪಾದಪಿಡಿದವರಿಗಾಹ್ಲಾದನಿಶಿದಿನ ಸಂಸಾರ ನಿಸ್ಸಾರಘೋರ3
--------------
ಪ್ರಸನ್ನವೆಂಕಟದಾಸರು
ಕೇಳು ಕೋಪಿಸಬೇಡ ಹೇಳಲಿಕಂಜುವೆಬಾಳು ಬಡತನವ ನಾನು ಪ.ತಲೆಗೊಯ್ಕ ಹಿರಿಯ ಮಗ ಇಳೆಗೆ ಪೂಜಿತನಲ್ಲಬಲು ಭಂಡ ನಿನ್ನಯ ಕಿರಿಯ ಮಗ ||ಲಲನೆಯು ಸೇರಿದಳು ಬಲು ಲೋಭಿಗಳ ಮನೆಯಹೊಲಕುಲವರಿಯಳು ನಿನ್ನ ಸೊಸೆಯು ರಂಗ 1ಮಗಳ ಮಾರ್ಗವುಡೊಂಕು | ಮೈದುನ ಗುರುದ್ರೋಹಿಮಗನ ಮಗನು ಚಾಡಿಗಾರಹಗರಣಕೆ ನೀಚರ ಹಣ್ಣು ಮೆದ್ದೆಂಜಲಜಗದೊಡೆಯನೆನಿಸಿಕೊಂಡೆ - ನೀನುಂಡೆ 2ಲಕ್ಷ್ಮೀಪತಿಯು ಎನಿಸಿಭಿಕ್ಷೆ ಬೇಡಲು ಪೋದೆಪಕ್ಷಿಯ ಪೆಗಲೇರಿ ರಾಜನೆನಿಸಿದೆ ||ಸಾಕ್ಷಾತು ಪುರಂದರವಿಠಲನೆ ನಿನ್ನಗುಣಲಕ್ಷಣ ಪೇಳಲಳವೆ - ಕಳೆವೆ 3
--------------
ಪುರಂದರದಾಸರು
ಕೇಳು ಶ್ರೀ ಕೃಷ್ಣ ಕಥೆಯ ಬಾಳು ವೈಷ್ಣವರಪಾಳಿಕೆ ಭಕುತಿಯಿಂದಾಳಾಗಿ ಎಲೆ ಮನುಜ ಪ.ಖೂಳರೊಳು ಮಾತಾಡದೇಳು ಹರಿಭಟರಡಿಗೆಬೀಳು ಭಗವಜ್ಜನರ ಮ್ಯಾಳದೆದುರಿನಲಿಹೇಳು ಕೀರ್ತನೆ ನಾಮದೋಳಿಗಳ ತನುಮನದಿಊಳಿಗಮಾಡುಬಿಡದಾಳು ಕರಣಗಳ1ಕೂಳು ಕಾಸಿನ ಸವಿಗೆ ಕೀಳು ಮಾನಿಸರ ಹೊಗಳಿಕೋಳು ಬಂಧನ ಹೋಗದಿರು ಮನದಾಳಿಗೊಳಗಾಗಿಏಳೆರಡು ಭುವನಗಳ ಆಳುವ ಪಿತನಗುಣದೇಳಿಗೆಗೆ ಹರುಷವಂ ತಾಳು ಅನ್ಯವ ಮರೆದು 2ಗಾಳಿಯಸೊಡರುದೇಹ ನಾಳೆಗೆನ್ನದೆ ಸುಧೆಯಮೇಳೈಸಿಕೊಂಡು ಭವವೇಳಿಲಿಸು ನೀಜಾಳು ಭಾಷ್ಯಗಳಗತಿಹಾಳೆಂದು ಗುರುಮಧ್ವಹೇಳಿದಂತಿರುತಲಿ ದಯಾಳು ಪ್ರಸನ್ವೆಂಕಟನ 3
--------------
ಪ್ರಸನ್ನವೆಂಕಟದಾಸರು
ಕೈ ಮುಗಿದು ಬೇಡುವೆನು ಕೈಲಾಸವಾಸಾ ||ವಹಿಲದಲಿ ಸಲಹೆನ್ನ ಈಶ ಗಿರಿಜೇಶಾ ಪಅಷ್ಟ ಭಾಗ್ಯವು ನೀನೆ | ಇಷ್ಟಮಿತ್ರನು ನೀನೆ |ಹುಟ್ಟಿಸಿದ ತಾಯ್ತಂದೆ |ವಿದ್ಯೆಗುರುನೀನೆ |ಸೃಷ್ಟಿ ಮೂರಕೆ ನೀನೆ ಅಧ್ಯಕ್ಷನೆನಿಸಿರುವೆ |ರಕ್ಷಿಸೆನ್ನನು ಜಟಾಜೂಟ ನಿಟಿಲಾಕ್ಷ 1ಮಾಯಾಪಾಶದಿ ಸಿಕ್ಕಿ |ಕಾಯಸುಖವನು ಬಯಸಿ |ಆಯತಪ್ಪಿದೆ ಮುಂದುಪಾಯವೇನಿದಕೆ |ಜೀಯನೀನೆಂದೆಂಬ | ನ್ಯಾಯವರಿಯದೆ ಕೆಟ್ಟೆ |ಕಾಯೊ ದಯದಲಿ ಮೃತ್ಯು | ಬಾಯಿಗೊಪ್ಪಿಸದೆ 2ಘೋರತರ ಸಂಸಾರ ಸಾಗರದಿ ಮುಳುಮುಳುಗಿ |ಕ್ರೂರ ನಕ್ರನ ಬಾಯಿಗಾಹಾರವಾದೆ |ದಾರಿಕಾಣದೆ ಬಳಲಿ ಮಾರಹರ ನಿನ್ನಂಘ್ರಿ |ಸೇರಿದೆನು ಗೋವಿಂದದಾಸನನು ಸಲಹೋ 3
--------------
ಗೋವಿಂದದಾಸ
ಕೈಯ ತೋರೋ ಕರುಣಿಗಳರಸಾ-ಕೈಯ ತೋರೊ |ಕೈಯಲಿ ಬೆಣ್ಣೆಯ ಮುದ್ದೆಯ ನೀಡುವೆ-ಕೈಯ ಪಅಂಗುಲಿಯೊಳು ಪೊನ್ನುಂಗುರವೊಪ್ಪುವ ಕೈಯ ತೋರೊ |ಶೃಂಗಾರದಿ ಶಂಖಚಕ್ರವ ಧರಿಸಿದ ಕೈಯ ತೋರೊ ||ಅಂಗೈಯಲಿ ಧ್ವಜಪಧ್ಮವಿರಾಜಿಪ ಕೈಯ ತೋರೊ |ಅಂಗನೆಯರಉತ್ತುಂಗಕುಚದಲಿಟ್ಟ ಕೈಯ ತೋರೊ1ಬಡಬ್ರಾಹ್ಮಣನವಲಕ್ಕಿಯ ಬೇಡಿದ ಕೈಯ ತೋರೊ |ಕೊಡೆ ಮಾಡಿ ಗಿರಿಯೆತ್ತಿ ಗೋಗಳ ಕಾಯ್ದ-ಕೈಯ ತೋರೊ ||ಕಡುಹಿರಣ್ಯಾಖ್ಯನ ಒಡಲನು ಬಗೆದ-ಕೈಯ ತೋರೊ |ಧೃಡ ಪ್ರಹ್ಲಾದನ ಮಂಡೆಯೊಳಿಟ್ಟ ಕೈಯ ತೋರೊ 2ಅಲ್ಲಿ ಪೂತನಿಯ ಅಸುವನೆ ಹೀರಿದ ಕೈಯ ತೋರೊ |ಬಲ್ಲಿದಮಲ್ಲರ ಮರ್ದಿಸಿ ಬಂದ-ಕೈಯ ತೋರೊ ||ಮೆಲ್ಲನೆ ಕುಬುಜೆಯ ಡೊಂಕನೆ ತಿದ್ದಿದ ಕೈಯ ತೋರೊ |ಬಿಲ್ಲನು ಎಡಗೈಯಲಿ ಮುರಿದಿಟ್ಟ ಕೈಯ ತೋರೊ 3ಬಲಿಯನು ವಂಚಿಸಿ ದಾನವ ಬೇಡಿದ ಕೈಯ ತೋರೊ |ಫಲಪುಷ್ಪ ಪಾರಿಜಾತವ ತಂದ ಕೈಯ ತೋರೊ ||ಒಲಿದು ಪಾರ್ಥಗೆ ರಥವನು ನಡೆಸಿದ ಕೈಯ ತೋರೊ |ಮಲ್ಲಿಗೆ ಜಾಜಿಯ ತುರುಬಿಗೆ ಮುಡಿಸಿದ ಕೈಯ ತೋರೊ 4ಆಕಾಶದ ಚಂದ್ರಮನನು ಕರೆದ-ಕೈಯ ತೋರೊ |ನಾಕಪತಿಗೆ ಅಭಯವನಿತ್ತ-ಕೈಯ ತೋರೊ |ನೇಕ ಬಗೆಯಲಿ ಕೊಳಲನೂದುವ-ಕೈಯ ತೋರೊ |ಶ್ರೀಕಾಂತ ನಮ್ಮ ಪುರಂದರವಿಠಲ-ಕೈಯ ತೋರೊ 5
--------------
ಪುರಂದರದಾಸರು
ಕೊಂಡಾಡಲಳವೆ ಕರುಣಾನಿಧಿ ಕಾವನದಂಡ ಸಂಜಿತ ಗುರುಸತ್ಯನಾಥರ ಕೀರ್ತಿ ಪ.ಶ್ರೀ ವಾಸುದೇದ ತಾ ಭಾವಿಸಿ ಚಿತ್ತದಿಭೂವಲಯಕೆ ಸುಜನಾವಳಿಗಾಶ್ರಯವೀವೆನೆನುತ ಶುಭದೇವವೃಕ್ಷವನಟ್ಟೆಈವರ ಪರಮಹಂಸಾವಲಂಬನ ತಾಳ್ದುಶ್ರೀ ವಾಯುಮತದಿ ತತ್ವವೆ ಲಕ್ಷಿಸುವ ಪ್ರೇಕ್ಷಾವಂತರಾಗಿಹ ಜೀವಕೋಟಿಗಳ ಕೃಪಾವಲೋಕನದೊಳಿಟ್ಟ ಅಪೇಕ್ಷಿತಭಾವಾರ್ಥಗಳನೆ ಕೊಟ್ಟು ನಂಬಿದಸೇವಕರ್ಗಭಯವಿಟ್ಟ ಗುರುರಾಯನ 1ಭಾನುತೋರುವ ಮುನ್ನೆ ಸ್ನಾನವ ಮಾಡಿ ಸುಮ್ಮಾನದಿಂದಲಿ ನೇಮ ಮೌನದೊಳಿದ್ದು ಶ್ರೀಮಾನಾಥನಂಘ್ರಿಯ ಮಾನಸದಲಿ ದೃಢಧ್ಯಾನದಿಂ ಬಲಿದುಗೀರ್ವಾಣಭಾಷ್ಯಾಮೃತಪಾನವ ಜನರಿಗೆ ಸಾನುರಾಗದಲಿತ್ತುನಾನಾ ತತ್ವಾರ್ಥ ವ್ಯಾಖ್ಯಾನವ ಜನರಿಗೆತಾನಂದು ಬೋಧಿಸಿದತಾಮಸಜ್ಞಾನವನೋಡಿಸಿದ ಆ ಕಾಮಧೇನುವೆನಿಸಿ ಎಸೆದ ಗುರುರಾಯನ 2ಭೇದವರ್ಜಿತ ಮತ್ತವಾದ ಕುಂಭಿಯಕುಂಭಭೇದಕಸಿಂಗಹಲಾಧಾರಿಹರಿಸಗುಣೋದರ ಸಾಕಾರಮಾಧವಹರನುತಪಾದನೆನುತಸೂತ್ರವೇದ ಪುರಾಣದಿಸಾಧಿಸಿ ಕುತ್ಸಿತವಾದಿಗಳಪಾದಾಕ್ರಾಂತರ ಮಾಡಿ ಮೇದಿನಿಯೊಳು ಜಯನಾದಭೇರಿಯ ಹೊಯಿಸಿದ ಮುಕ್ತಿಯಸಾಧನ ತೋರಿಸಿದ ಭ್ರಷ್ಟಂಕುರೋದಯ ಮಾಣಿಸಿದ ಗುರುರಾಯನ 3ಕಾಲಕಾಲಕೆ ಧರ್ಮ ಪಾಲಿಸಿ ಯಾಚಕಜಾಲಕೆ ಮನ್ನಿಸಿ ಮೂಲ ಮಂತ್ರೋಪದೇಶಪೇಳಿ ಪೂತರ ಮಾಡಿ ಹಾಲು ಸಕ್ಕರೆ ತುಪ್ಪಹೋಳಿಗ್ಯನ್ನವನಿಕ್ಕಿ ಮೇಲೆ ದ್ರವ್ಯವನಿತ್ತುಪಾಲಿಸಿ ತಾಯಿತಂದೆಗಳ ಹಂಬಲ ಬಿಡಿಸಿ ಲೋಕದವರಿಗಭಿಲಾಷಾ ಪೂರ್ಣಾನುಕೂಲಚಿಂತಾಮಣಿಯ ಯತಿಕುಲಮೌಳಿಮಕುಟಮಣಿಯ ವಿರತಿಭಾಗ್ಯಶಾಲಿ ಸುಗುಣಖಣಿಯ ಗುರುರಾಯನ 4ಮಣ್ಣು ವನಿತೆಸತಿಹೊನ್ನಿನ ಬಯಕೆಯಘನ್ನತೆಜರಿದುಪಾವನ್ನಮಹಿಮನಾದಚೆನ್ನ ಸತ್ಯನಿಧಿ ತೀರಥನ್ನ ಕರೋದ್ಭವತನ್ನಾಕಷೆಂಬುವಭಿನ್ನವಚಂದ್ರಿಕೆಯನ್ನು ಪ್ರಕಾಶಿಸಿ ಪೂರ್ಣಚಂದ್ರಮನಂತೆಉನ್ನತ ಕಳೆಯುತ ಚಿನ್ಮಯ ವರದ ಪ್ರಸನ್ನ ವೆಂಕಟಾಧಿಪನ ಭಜಿಸಿನಿತ್ಯಧನ್ಯನೆನಿಸುತಿಪ್ಪನ ಸತ್ಯಾಭಿನವರನ್ನನ ಪೊರೆದÀಪ್ಪನ ಗುರುರಾಯನ 5
--------------
ಪ್ರಸನ್ನವೆಂಕಟದಾಸರು
ಕೋಳಿ ಕೊಗಿತಲ್ಲಾ - ಲಕ್ಷ್ಮೀಲೋಲನಲ್ಲದೆ ಅನ್ಯರಾರಿಲ್ಲವೆಂದು ಪ.ಮೊದಲ ಜಾವದಲಿ ಮುಕುಂದನೆಂದು ಕೂಗಿಎರಡಲಿ ಶ್ರೀ ವೆಂಕಟಾದ್ರಿಯೆಂದು ||ಉರಗಗಿರಿಯ ವಾಸ ಯಾದವ ಕುಲ ಗೊಲ್ಲಚದುರ ಚಲ್ಲಪಿಲ್ಲಿ ರಾಯನಲ್ಲದಿಲ್ಲವೆಂದು 1ಮೂರು ಜಾವದಲಿ ಮುರಾರಿಯೆಂದು ಕೂಗಿನಾಕರಲಿ ನಾರಾಯಣಯೆನಲು ||ಕ್ಷೀರಾಬ್ಧಿಯ ವಾಸ ಲಕ್ಷ್ಮೀಪತಿ ಕೋನೇರಿವಾಸ ವೆಂಕಟಕೃಷ್ಣರಾಯನೆಂದು 2ಪರಮಪುರುಷ ಮುಖ್ಯ ಆಧಾರಭೂತಕರುಣದ ಪುಂಜನು ಜಗದಾದಿ ತಾ ||ಕಮಲಸಂಭವ ಮುಖ್ಯ ಕಾರುಣ್ಯ ಮೂರುತಿವಿಮಲಕಾಪುರ ತಿಮ್ಮರಾಯನಲ್ಲದಿಲ್ಲವೆಂದು 3ರೆಕ್ಕೆಯ ಬಿಚ್ಚಿ ಪಸರಿಸಿ ಡಂಗುರ ಹೊಯ್ದಕೊಕ್ಕನು ಮೇಲೆ ನೆಗಹಿಕೊಳುತ ||ಚಕ್ಕನೆ ಕೇರಿ ಕೇರಿಯಗುಂಟ ಸಾಗುತಮುಕುಂದನಲ್ಲದೆ ಅನ್ಯರಾರಿಲ್ಲವೆಂದು 4ಐದು ಜಾವದಲಿ ಅನಂತನೆಂದು ಕೂಗಿಆರರಲ್ಲಿ ಅಳಗಾದ್ರೀಶಯೆಂದು ||ಏಳರಲ್ಲಿ ಕಾಶಿಯ ಬಿಂದುಮಾಧವಎಂಟಕೆ ಪುರಂದರವಿಠಲರಾಯನೆಂದು 5
--------------
ಪುರಂದರದಾಸರು
ಕ್ಷಣಕೆಲವಕೆ ನೆನೆ ಹರಿಯ ಮನವೆಕ್ಷಣಕೆ ಲವಕೆ ಹರಿಯ ಪ.ಮನಕೆ ಶ್ರುತಿಗಳಿಗೆ ದೊರೆಯಶಶಿದಿನಕರವಂಶಕೆ ಹಿರಿಯಘನಕಲುಷದೊಳವತಾರಿಯ ಪೆತ್ತಜನಕ ತಿರುಮಲೆಯ ದೊರೆಯ 1ಕನಕಾಂಗಿಯಳ ಸಿರಿಯಭವಕನಕೋದರರಿಗೆ ವರಿಯಮುನಿಕುಲಕಾಂತಿ ಅತಿಪರಿಯ ತನ್ನಜನಕನ ವರಕುಪಕಾರಿಯ 2ಜನಕನಳಿಯ ಖಳರರಿಯದಿನದಿನಕೆ ಲಾವಣ್ಯದ ತೆರೆಯಸನಕಾದ್ಯರ ಮನೋಹರಿಯವೈರಿನಿಕರದ ಕದಳಿಗೆ ಕರಿಯ 3ಮೀನ ಕಮಠಾದ್ಯವತಾರಿಯ ಭುವನಕೊಬ್ಬನೆ ಸುಖಕಾರಿಯಧನು ಕರದಿ ಮುರಿದ ಶೌರಿಯಮಾವನಕೆಡಹಿದ ಹೊಂತಕಾರಿಯ4ತನ್ನ ಕರುಣಕೆನಿತ್ಯಗುರಿಯಾಗಿಹನ ಕಾಯುವನು ಪರಂಪರೆಯಎನ್ನ ಕುಲದೈವ ಮೇಲ್ಗಿರಿಯ ಪ್ರಸನ್ನವೆಂಕಟಕೃಷ್ಣ ನಮ್ಮ ಮರೆಯ 5
--------------
ಪ್ರಸನ್ನವೆಂಕಟದಾಸರು
ಗಂಗಾಧರ ದೇವ ಜಯಗೀಷ ವ್ಯಾನಂಗಾರಿ ಗಿರಿಜಾಧವ |ಮಂಗಳ ಪ್ರದನೆ ಅಮಂಗಳ ಶೀಲ | ಭುಜಂಗ ರೂಪದಿ ಪಾಂಡು |ರಂಗ ಘಾಸಿಗೆಯಾದ ಪವೈಕಾರಿಕಾಹಂಕಾರ ತತ್ವದೊಡೆಯ, ನಾಕುಮೊಗನ ಕುಮಾರ |ಶ್ರೀಕಂಠ, ಸ್ಥಾಣು, ವಿಶ್ಖೋಜನಕ, ಚಂದ್ರಶೇಖರ, ಈಶಪಿನಾಕಿಭಕ್ತವತ್ಸಲ |ಶೋಕನಾಶಕ ಶಂಭು, ಪಶುಪತಿ, ಹೇ ಕರುಣಿ, ಸದ್ಗುಣ ಸುಖಾರ್ಣವ |ಪಾಕಶಾಸನ ಪ್ರಮುಖ ವಂದ್ಯ, ವಿಶೋಕ, ಎನ್ನಭಿಲಾಷೆ ಪೂರ್ತಿಸು1ಪ್ರಾಣನಂದನ ತೈಜಸಾಹಂಕಾರಾಭಿಮಾನಿ ಶ್ರೀಶುಕದೂರ್ವಾಸ|ಕ್ಷೋಣಿಸಂಧೃತ ಧನ್ವಿ, ದಾನವಾಂತಕ, ಶೂಲಪಾಣಿ, ಪ್ರಮಥಾಧಿಪ ಬಾಣವರದಯನ್ನ |ಮಾನನಿನ್ನದು ಚಕ್ರಿ ಪದಕಂಜರೇಣುತೋರಿಸು ತವಕದಿಂದಲಿ |ದ್ರೌಣಿ, ಶಿವ, ಪ್ರಣತ ಜನ ಸುಮನಸಧೇನು, ತವ ಪದ ಸಾರ್ವೆ ಸತತ 2ತಾಮಸಾಹಂಕಾರೇಶ ಸಂಕರ್ಷಣನಾ ಮಗನೇ ಕೊಡು ಲೇಸ ರಾಮನಾಮ ಮಂತ್ರ |ಪ್ರೇಮದಿ ಜಪಿಸುವ ಸ್ವಾಮಿ, ಅನಲ,ವಹ್ನಿಸೋಮಲೋಚನ ಹರ |ವಾಮದೇವ, ಕಪರ್ದಿ,ಭವಭಯ ಭೀಮ ಶ್ರೀ ಪ್ರಾಣೇಶ ವಿಠಲನ |ಪ್ರೇಮ ಪುಟ್ಟಿಸೋ ರೌಪ್ಯ ಪರ್ವತಧಾಮ ಶ್ರೀ ವಿರೂಪಾಕ್ಷ ಗುರುವೇ 3
--------------
ಪ್ರಾಣೇಶದಾಸರು
ಗಂಗಾಧರ ಸುಮತಿ ಪಾಲಿಸೋ | ಪಾಂಡು |ರಂಗನ ಚರಣಾಬ್ಜ ಭಜನೆಮಾಡುನಿತ್ಯ ಪವೈಕಾರಿಕಾದಿತ್ಯರೂಪದನುಜರಿಗೆ |ಶೋಕಕೊಡುವದು ನಿರಂತರದಿ ||ಲೌಕಿಕವೆಲ್ಲ ವೈದಿಕವಾಗಲೆನಗೆ ಮೈನಾಕೀ |ಹೃತ್ಕಮಲಮಾರ್ತಾಂಡಭಕ್ತ ವತ್ಸಲ 1ವಾಸವಾದ್ಯಮರ ವಂದಿತನೆ ಪದ್ಮಜ ಸುತ |ನೀ ಸಲಹುವದೋ ಕೈಲಾಸವಾಸ ||ಕ್ಲೇಶಮೋದವು ಸಮ ತಿಳಿಸೋ ಅಶ್ವತ್ಥಾಮ |ದೋಷರಹಿತನೆ ದಕ್ಷಾಧ್ವ ರನಾಶಕ 2ಪವಮಾನತನಯನಿನ್ನವರಲ್ಲಿ ಕೊಡು ಸ್ನೇಹ |ದಿಙ ವಸನಾದಿಯಲ್ಲಿ ಎನ್ನಿರವ ಬಲ್ಲಿ ||ಅವಲೋಕಿಸದೆ ಎನ್ನನೇಕ ಪಾಪಗಳನ್ನು |ತವಕಉದ್ಧರಿಸೋ ವಿಯತ್ಪತಿ ಜನಕ 3ಸಾಮಜಾಜಿನ ವಸ್ತ್ರ ಭಸ್ಮ ಭೂಷಿತ ದೇವ |ಸೋಮಶೇಖರನೆ ಬಿನ್ನಪವ ಕೇಳು ||ಪ್ರೇಮದಿಂದಲಿ ಭಾಗವತರ ಸಂಗತಿನಿತ್ಯ|ಶ್ರೀ ಮನೋರಮನ ಚರಿತೆ ಪಾಡಿಸುವದಯ್ಯ 4ಶ್ರೀಕಂಠ ನೀ ಪೇಳಿದನ್ಯಶಾಸ್ತ್ರಕೆ ಬುದ್ಧಿ |ಸೋಕದೆಗುರುಮಧ್ವ ಮುನಿಮತವೇ ||ಬೇಕು ಜನುಮ ಜನುಮಕ್ಕೆನಿಸೋ ತ್ರಿಯಂಬಕ |ನಾ ಕೈಯ್ಯ ಮುಗಿವೆ ಪ್ರಾಣೇಶ ವಿಠಲದಾಸ 5
--------------
ಪ್ರಾಣೇಶದಾಸರು
ಗಣೇಶ ಪ್ರಾರ್ಥನೆ1ಲಂಬೋದರ ಪಾಹೀ ಪಾಹೀ ಜಗದ್ಗುರು|ಶಂಭುನಂದನ ಸುರಸುತ ಪಾದಾ ಪಯೋಗೀಶಾರ್ಚಿತ ಶ್ರೀ ಪಾರ್ವತಿ ಪುತ್ರ ನತಮಿತ್ರಾ |ಆಗಸವಾಳ್ದಮೂಷಕರೂಢಾ ||ನಾಗಶಯನನಪಾದಧ್ಯಾನದಲ್ಲಿಡು ನಿತ್ಯಾ |ಶ್ರೀ ಗಣಪತಿ ನಿನ್ನ ಬಲಗೊಂಬೆ 1ಶ್ರೀವರ ಶ್ರೀರಾಮಚಂದ್ರ ಧರ್ಮರಾಯಾ |ದೇವೇಂದ್ರಾ ನಿನ್ನ ಪೂಜಿಸಿದಾರೋ ||ಕೇವಾಲಾಕಲಿದುರ್ಯೋಧನ ಪೂಜಿಸದೆ ಕೆಟ್ಟಾ |ಶ್ರೀ ವಿಘ್ನೇಶ್ವರ ನಿನ್ನ ಬಲಗೊಂಬೆ 2ದನುಜಾರ ಮೋಹೀಸೂವದಕೆ ಸಂಕಟ ಚೌತಿ |ಮನಿಸೀ ಪೂಜಿಸಿಕೊಂಬೆ ಖಳರಿಂದಾ ||ಮುನಿ ವ್ಯಾಸ ಕೃತ ಗ್ರಂಥಾರ್ಥವ ತಿಳಿದು ಬರೆದಾ |ಗಣರಾಜಾ ನಿನ್ನ ಪಾದಾ ಬಲಗೊಂಬೆ 3ಶಂಬು ಚಕ್ರಾಂಕಿತಾ ಪಾಶಧಾರನೇ ರಕ್ತ |ಅಂಬರಾದ್ವಯ ಭೂಷಾ ನಿರ್ದೋಷಾ ||ಶಂಬರಾರಿಪುಶರಾ ವಿಜತಾಮೃದ್ಭವ ಗಾತ್ರಾ |ಅಂಬಾರಾಧಿಪ ನಿನ್ನ ಬಲಗೊಂಬೆ 4(ಅಂಬೂಜಾಲಯಜಾನೆ ಬಲಗೊಂಬೆ)ಏಕವಿಂಶತಿಪುಷ್ಪಾನ ಮನ ಮೋದಕ ಪ್ರೀಯ |ನೀ ಕರುಣಿಪುದೂ ನಿನ್ನವಾನೆಂದು ||ಸಾಕು ವಿಷಯ ಸುಖಾ ಸುಜನಾರೋಳಾಡಿಸೊ |ಏಕಾದಂತನೆ ನಿನ್ನ ಬಲಗೊಂಬೆ 5ಏನು ಬೇಡುವೊದಿಲ್ಲಾ ಏನು ಮಾಡುವೊಕರ್ಮ|ಶ್ರೀನಿವಾಸನೆ ಮಾಡಿಸುವನೆಂಬೊ ||ಜ್ಞಾನಾವೆ ಯಂದೆಂದಿಗಿರಲಿ ತಾರಶಾಂತ- |ಕಾನುಜಾ ನಿನ್ನ ಬಲಗೊಂಬೆ 6ಪ್ರಾಣಸೇವಕ ಚಾಮೀಕರವರ್ಣ ಗಜಮುಖ |ಪ್ರಾಣೇಶ ವಿಠಲನಾ ಸುಕುಮಾರಾ ||ನೀನೊಲಿದೆಮಗೆ ವಿಘ್ನವ ಪರಿಹರಿಸುತ |ಪೋಣಿಸು ಸನ್ಮತೀ ಬಲಗೊಂಬೆ 7
--------------
ಪ್ರಾಣೇಶದಾಸರು
ಗಣೇಶ ಪ್ರಾರ್ಥನೆವಂದಿಪೆ ನಾ ನಿನ್ನನು ಸೊಂಡಿಲ ಗಣಪ ಧಬಂದೆನ್ನ ಸಲಹೊ ನೀನು ಪಪುಂಡರೀಕಾಕ್ಷನುದ್ದಂಡ ಪರಾಕ್ರಮಕೊಂಡಾಡಿಸುವಿ ವಕ್ರತುಂಡನೆಂಬರೊ ನಿನ್ನ ಅಪಪಾಶಾಂಕುಶಧರನೇ ವೂೀದಕಹಸ್ತಭಾಷಿಗ ನೀನಹುದೋಆಶಾಪಾಶಗಳಿಂದ ಘಾಸಿಗೊಂಡಿಹ ಮನಬೇಸರ ಕಳೆದೆಮ್ಮ ಪೋಷಿಪನನು ತೋರೊ 1ಗೌರಿಯ ವರಪುತ್ರನೆ ಪ್ರಾರ್ಥಿಸುವೆ ಶ್ರೀ-ಶೌರಿಯಪಾದಸ್ಮರಣೆಗೌರವದಿಂ ಮಾಳ್ಪ ಶೌರ್ಯ ಎನಗೆ ಕೊಟ್ಟುಮಾರಪಿತನಪಾದತೋರಿಸು ತವಕದಿ2ಅಂತರಂಗದ ಶತ್ರುಗಳಿಂದಲಿ ಮನಚಿಂತೆಗೆ ಗುರಿಗೈಸಿತೊಎಂತು ಈಭವದಾಂಟುವಂಥ ಪಥವ ಕಾಣೆಕಂತÀುಪಿತನಪಾದಚಿಂತನೆ ಕೊಡಿಸಯ್ಯ3ವಾನರನಿಕರದೊಳು ಶ್ರೇಷ್ಠನ ಪ್ರಭುವಾರಿಧಿಯನು ಬಂಧಿಸೆಆದಿಮೂರುತಿ ನಿನ್ನ ಆರಾಧಿಸಿದನೆಂಬಸೋಜಿಗಸುದ್ದಿಯು ಮೂರ್ಜಗದೊಳಗುಂಟು4ಕಮಲನಾಭವಿಠ್ಠಲ ಭಕ್ತರ ಹೃದಯಕಮಲದೊಳಗೆ ಶೋಭಿಪಮಿನುಗುವ ಮಧ್ವಮಂಟಪದೊಳು ರಾಜಿಪಸನಕಾದಿವಂದ್ಯನ ಕ್ಷಣ ಬಿಡದಲೆ ತೋರು 5
--------------
ನಿಡಗುರುಕಿ ಜೀವೂಬಾಯಿ