ಒಟ್ಟು 8509 ಕಡೆಗಳಲ್ಲಿ , 134 ದಾಸರು , 5107 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಕೊಡಬಹುದೇ ಮಗಳ - ಸಮುದ್ರರಾಜಕೊಡಬಹುದೇ ಮಗಳ ಪನಡೆದರೆ ಬಡವಹಳೆಂಬ ಕುಮಾರಿಯ |ಹಿಡಿಬಿಟ್ಟಿ ಮಾಡಿ ಹರಿಗೆ ಸಿಂಧುರಾಜನುಅ.ಪಕುರುಹಬಲ್ಲವರಾರು, ಕುಲಗೋತ್ರವಾವುದೊ |ಅರಿತ ರಾಯರೊಳಗೆ ಆರ ಮಗನೊ ಇವ |ವರುಶಭಾಂಗಿಗೆ ತಕ್ಕ ವರನಹುದೆ ಇವ |ಹಿರಿಯರೆಂಬುದ ನೆರೆಹೊರೆಯೂ ಕಾಣದನಿವ |ಪರಿಪಂಥಿಜನಕೆಲ್ಲ ಪ್ರಾಣಘಾತಕನಿವ |ನಿರುತ ಮೇಘವ ಪೋಲ್ವ ನೀಲಮೆಯ್ಯವನಿವ,ಹಿರಿದಾದ ನಾಲ್ಕು ಹಸ್ತಗಳುಳ್ಳವನಿವ |ಅರುಣಚ್ಛಾಯೆಯ ರೇಖೆ ಅರಳಿಸಿಹಾರುವ ||ಗರುಡಹಕ್ಕಿಯ ನೆಚ್ಚಿದ - ಎದೆಯ ಮೇಲೆ |ಭರದಿ ಒದೆಯ ಮೆಚ್ಚಿದ - ಘೋರರೂಪ |ಧರಿಸಿ ಕೋಪದಿ ಹೆಚ್ಚಿದ - ಕರೆವ ಗೋವ |ಕರುಗಳ ಕೊರಳುಚ್ಚಿದ - ಸಂಸಾರದೊಳ್ |ಇರುತಿಹ ನಾರಿಯರ ಮನವೆಲ್ಲ ಬಿಚ್ಚಿದ 1ಅಡಿಗಡಿಗೆ ಹತ್ತು ಅವತಾರವ ಮಾಡಿದ |ಕಡುಕಪತಿಯಲ್ಲದೆ ಭಾರಿ ಗುಣದವನಲ್ಲ |ಗಿಡದ ಮರೆಯಲಿದ್ದು ಕಪಿಯ ಕೊಂದನುಹೊಲ್ಲ |ನಡತೆಯಲಿ ಸಲೆ ಜನಲಜ್ಜೆ ಇವನಿಗಿಲ್ಲ |ಹಿಡಿದು ಪೂತನಿ ಮೊಲೆಯುಂಡ ಚೌಪಟಮಲ್ಲ |ಮಡುಹಿದ ಮಾವನ ಮಧುರೆಯೊಳಗೆಖುಲ್ಲ |ಕೊಡೆಮಾಡಿ ಬೆಟ್ಟವ ಗೋಕುಲದೊಳಗೆಲ್ಲ |ಮಡದಿಯರುಡುಗೆಯ ಕದ್ದದ್ದು ಹುಸಿಯಲ್ಲ ||ಕಡಹದ ಮರವೇರಿದ -ಅವರಮಾನ - |ಕೆಡಿಸಿ ಭಂಡರ ಮಾಡಿದ - ದಧಿಕ್ಷೀರ - |ಗಡಿಗೆ ಸೂರೆಯ ಮಾಡಿದ - ಕಾಳಿಂಗನ - |ಮಡುವ ಕಲಕಿ ನೋಡಿದ - ಸ್ಯಂದನವನು |ನಡೆಸುವ ಕಾರಣ ನರಗೆ ಸಾರಥಿಯಾದ 2ಊದುತ ಕೊಳಲನರಣ್ಯದೊಳ್ ಗೋಗಳ |ಕಾದು ಕುಂಚಿಗೆ ಮಾಡಿ ಕಂಬಳಿ ಪೊದೆವನು |ಓದನವನು ಬೇಡಿ ಹೊಟ್ಟೆಯ ಹೊರೆದನು |ಯಾದವರೊಳಗಾಡಿ ಎಂಜಲನುಂಡನು |ಕ್ರೋಧದಿಂದ ಸುರರ ಕೊಂದು - ಕೊಂದಿಡುವನು |ಪಾದರಿ ಪೆಣ್ಣುಗಳೊಳಗಿರುತಿಪ್ಪನುಆದಿಯೆ ಇವಗಿಲ್ಲ ಎಂದೆಂದಿಗಿಪ್ಪನು |ಭೂದಿವಿಜರ ಕೂಡ ಬಿಕ್ಷಕೆ ಪೋಪನು ||ಮೇದಿನಿಯೊಳಗಿರುವ - ಮಸ್ತಕವು ಬೋ - |ಳಾದವರೊಳಗಿರುವ - ನೋಡಲು ಭೇದಾ - |ಭೇದದಂದದಿ ತೋರುವ - ಸಭೆಯೊಳಗೆ |ಬೈದರೆ ಮೈದೋರುವ ಶೇಷಶಾಯಿ - |ಯಾದಂಥಪುರಂದರ ವಿಠಲನೆಂದರಿಯದೆ3
--------------
ಪುರಂದರದಾಸರು
ಕೊಡುವಕರ್ತ ಬೇರೆ ಇರುತಿರೆ -<?xmಟ veಡಿsioಟಿ='1.0' eಟಿಛಿoಜiಟಿg='uಣಜಿ-8'?>ಬಿಡುಬಿಡು ಚಿಂತೆಯನು ಪ.ಒಡೆಯನಾಗಿ ಮೂಜಗವನು ಪಾಲಿಪ |ಬಡವರಾಧಾರಿಯು ಭಕ್ತರ ಪ್ರಿಯನು ಅಪಕಲ್ಲಿನೊಳಗೆ ಇರುವ - ಕಪ್ಪೆಗೆ - |ಅಲ್ಲೆ ಉದಕಕೊಡುವ |ಎಲ್ಲ ಕೋಟಿ ಜೀವರಾಶಿಗಳನೆ ಕಾಯ್ವ |ವಲ್ಲಭಶ್ರೀಹರಿ ಎಲ್ಲಿಯು ಇರುತಿರೆ|1||ಆನೆಗೈದುಮಣದಾ - ಆಹಾರವ |ತಾನೆ ತಂದು ಕೊಡುವ |ದೀನರೊಡೆಯ ಶ್ರೀನಿವಾಸ ದಯಾನಿಧಿ |ಮಾನದಿಂದಲಿ ಕಾಯ್ವ ಭಾನುಕೋಟಿತೇಜ2ಸರಸಿಜಾಕ್ಷ ತನ್ನ - ಸೇರಿದ |ನರರನು ಬಿಡನಣ್ಣ |ಪರಮದಯಾನಿಧಿ ಭಕುತರ ಸಲಹುವ |ಪುರಂದರವಿಠಲನು ಪುಷ್ಪಶರನ ಪಿತ 3
--------------
ಪುರಂದರದಾಸರು
ಕೊಡುವುದೆಂದು ಎನ್ನ ಕೊಂಬುದೆಂದು-ಕೈ-|ಪಿಡಿವುದೆಂದು ನೀ ಒಲಿವುದೆಂದು ಪಕೊಡುಕೊಂಬ ಮಹದನುಗ್ರಹದವನೆಂದು ನಿ-|ನ್ನಡಿಗೆ ಸೇರಿದೆನಯ್ಯ ಬಡತನಕೌಷಧ ಅ.ಪಶ್ವಾನಸೂಕರ ಜನ್ಮ ನಾನುಂಬೆ ನನ್ನಲ್ಲಿ |ನೀನೇ ತತ್ತದ್ರೂಪನಾದೆಯಲ್ಲ ||ಹೀನರೊಳ್ ನಾನತಿ ಹೀನನಾಗಿ-ಅಭಿ-|ಮಾನಿಯಾಗಿ ಕಾಲಕಳೆದೆನಲ್ಲ ||ವಾನರನಂಗೈಯ ಮಾಣಿಕ್ಯದಂತೆನ್ನ |ಮಾನದಂತರ್ಯಾಮಿ ಸಿಕ್ಕೆಯಲ್ಲ ||ಏನೇ ಆದರು ನಿನ್ನೊಳೆನಗೆ ಮುಂದೆ ಭಕ್ತಿ-|ಙ್ಞÕನ-ವೈರಾಗ್ಯ ಭಾಗ್ಯಗಳನು ದೇವ 1ಕಾಡಿನ ಮೃಗವು ತಾ ಹಾಡಿದರೆ ನಂಬಿ |ಆಡುವುದಲ್ಲದೆ ಓಡುವುದೆ? ||ಕಾಡುವ ಪಶುವಿನ ಬಾಲವ ಕಟ್ಟಿಸಿ |ಕೂಡೆ ಪಾಲ್ಗರೆಯಲು ಒದೆಯುವುದೆ? ||ಆಡುವ ಶಿಶು ತಪ್ಪಮಾಡಲು ಜನನಿ-ಕೊಂ-|ಡಾಡುವಳಲ್ಲದೆ ದೂಡುವಳೆ ||ಮೂಢ ಬುದ್ದಿಯೊಳು ಕೆಟ್ಟಿನೆಂದು-ಕೋಪ |ಮಾಡಬೇಡ ದಯೆಮಾಡಿ ನೀಡಿಷ್ಟವ 2ಹಣ್ಣಾದ ಹೊತ್ತು ಬಾಯ್ ಹುಣ್ಣಾದ ತೆರನಂತೆ |ನಿನ್ನ ಸೇರುವ ಯತ್ನ ಬಿಟ್ಟು ನಾನು ||ಹೆಣ್ಣು ಹೊನ್ನು ಮಣ್ಣಿಗಾಗಿಯೆ ಭ್ರಮೆಗೊಂಡೆ |ಸುಣ್ಣಕಿಕ್ಕಿದ ನೀರಿನಂತಾದೆನು ||ಎನ್ನಪರಾಧವನಂತ ಕ್ಷಮಿಸು ನೀನು |ಮನ್ನಿಸದಿರಲಾರಿಗೆ ಪೇಳ್ವೆನು ||ಓಂ ನಮೋ ಶ್ರೀಹರಿಎಂಬ ಪೂರ್ಣಙ್ಞÕನ-|ವನ್ನು ಪುರಂದರವಿಠಲನ ಎನ್ನಪ್ಪನೆ 3
--------------
ಪುರಂದರದಾಸರು
ಕೊಬ್ಬಿನಲಿರಬೇಡವೊ - ಏ ನಮ್ಮ ನನುಜಾಕೊಬ್ಬಿನಲಿರಬೇಡವೊ ಪ.ಸಿರಿಬಂದ ಕಾಲಕೆ ಸಿರಿಮದವೆಂಬರುಬಿರಿದು ಬಿರಿದು ಮೇಲಕೆ ಮಾಳ್ಪರುಸಿರಿಹೋದ ಮರುರಿನ ಬಡತನ ಬಂದರೆಹುರುಕು - ಕಜ್ಜಿಯ ತುರಿಸಿ ತಿರುಗುವರಯ್ಯಾ 1ಒಡವೆ ವಸ್ತುವನಿಟ್ಟುಬಡಿವಾರ ಮಾಳ್ಪರುನಡೆಯಲಾರನೆಂದು ಬಳುಕುವರುಸಿಡಿಲು ಎರಗಿದಂತೆ ಬಡತನ ಬಂದರೆಕೊಡವ ಹೊತ್ತನಾರ ತರುವರಯ್ಯ 2ವ್ಯಾಪಾರ ಬಂದಾಗ ವ್ಯಾಪಾರ ಮಾಳ್ಪರುಶಾಪಿಸಿಕೊಂಡರು ಬಡವರ ಕೈಲಿಶ್ರೀಪತಿ ಪುರಂದರವಿಠಲರು ಮುನಿದರೆಭೊಪಾರದೊಳಗೆಲ್ಲ ತಿರಿದು ತಿಂಬರಯ್ಯ 3
--------------
ಪುರಂದರದಾಸರು
ಕೋಪವಿದೇಕೆ ಗೋಪಾಲಕ |ರೂಪಮನದಿ |ಕಾಪಾಡು ನೀ ಕೃಪೆಯೊಳ್ ತಾಪಸರ | ಪಾಪಾರಿಯೆ ಪಚದುರೆಯರ್ ವಿಧ ವಿಧ ದೂರುವದನಾಲಿಸುತ |ದಧಿಘೃತ ಕದ್ದನೆಂದು ಬೈದಳೇ ಯಶೋದೆ ನಿನ್ನ 1ನಾರಿಯರ ಸೀರೆಯ ಕದ್ದು | ಏರಿದಾ ಮರವನೆಂದು |ದೂರುವುದಕೇಳಿಪಿತ | ಕ್ರೂರತ್ವವ ತೋರಿದನೇ ||ಕೋಪ| 2ಚಂದದಿಂದ ಬಂದು ಎನ | ಗಿಂದು ದಯತೋರಿಸಯ್ಯಾ |ಸುಂದರಾಂಗಮೂರ್ತಿಗೋವಿಂದ ದಾಸರ್ವಂದಿತನೆ 3
--------------
ಗೋವಿಂದದಾಸ
ಕೋಮಲಾಮಲ ಗಾತ್ರನ ತಾಮರಸದಳ ನೇತ್ರನಸ್ವಾಮಿ ಸಿರಿನಿವಾಸನ ಕಂಡೆ ಹೇಮಗಿರಿ ವರದೀಶನ ಪ.ಕನ್ನೆ ಲಕುಮಿಯನೆತ್ತಿದಶುಭಚಿನ್ನವಕ್ಕಿಯ ಹತ್ತಿದರನ್ನದುಡುಗೆಗಳಿಟ್ಟನ ಸುವರ್ಣದಂಬರನುಟ್ಟನಕರ್ಣಕುಂಡಲ ಬೆಳಗಿನ ನುಣ್ಗೆನ್ನೆಲಲುಗುವ ಕುರುಳಿನಸಣ್ಣನಾಮದ ನೊಸಲಿನ ಶ್ರೀ ಚಿನ್ಮಯನ ಬಲು ಚೆಲುವನ 1ಕುಂದದಲರಿನ ಮಾಲೆಯ ಪ್ರಭೆಗುಂದದ ಮಕುಟಮೌಳಿಯಸ್ಯಂದನಾಂಗದರಾಭಯವರ ಹೊಂದಿದಮಲ ಸುಪಾಣಿಯಮುಂದೆ ನಾರದ ಹನುಮರ ಗಾಯನಾನಂದದಲಿ ತಾ ಕೇಳುವಹಿಂದೆಡಬಲದಿ ಛತ್ರವ ಪಿಡಿದಿಂದಿರೆಯರೊಳೊಪ್ಪುವ 2ತೋರ ಮುತ್ತಿನ ಹಾರದಕೇಯೂರಕೌಸ್ತುಭವಕ್ಷದಚಾರುಸ್ಮಿತ ಮುಖರೋಚಿಯ ದಯಾವಾರಿಧಿಯ ಮಹೋದಾರಿಯಸಾರಿದರ ಸುರತರುವಿನ ಸುರವೈರಿಕರಿಪಂಚಾನನಭೂರಿಪ್ರಸನ್ವೆಂಕಟೇಶನ ಹೃದಯಾರವಿಂದ ನಿವಾಸನ3
--------------
ಪ್ರಸನ್ನವೆಂಕಟದಾಸರು
ಕೋಲುಹಾಡುಕೋಲು ಕಾಮನ ಗೆದ್ದ ಕೋಲು ಮಾಯ್ಗಳನೊದ್ದಕೋಲು ಆನಂದಮುನಿ ಪಿಡಿದಿಹ ಕೋಲೆ ಪ.ತಮನೆಂಬುವನ ಕೊಂದು ಕಮಲಜನಿಗೆ ವೇದಕ್ರಮದಿಂದ ಕೊಟ್ಟು ಜಗವನು ಕೋಲೆಕ್ರಮದಿಂದ ಕೊಟ್ಟು ಜಗವನು ರಕ್ಷಿಸಿದವಿಮಲ ಶ್ರೀಮತ್ಸ್ಯಮನೆದೈವ ಕೋಲೆ1ಸುರಪನ ವಿಭವೆಲ್ಲ ಶರಧೀಲಿ ಮುಳುಗಿರೆಗಿರಿಗಹಿ ಸುತ್ತಿ ಕಡೆಯಲು ಕೋಲೆಗಿರಿಗಹಿ ಸುತ್ತಿ ಕಡೆಯಲುನಗಜಾರೆಧರಿಸಿದ ಶ್ರೀಕೂರ್ಮಮನೆದೈವ ಕೋಲೆ2ಹೊಂಗಣ್ಣಿನವನು ಭೂವೆಂಗಳನೆಳೆದೊಯ್ಯೆಮಂಗಳಮಹಿಮ ದಯದಿಂದ ಕೋಲೆಮಂಗಳ ಮಹಿಮ ದಯದಿಂದ ನೆಗಹಿದ್ಯಜ್ಞಾಂಗ ಶ್ರೀವರಾಹ ಮನೆದೈವ ಕೋಲೆ 3ಒಂದೆ ಮನದೊಳಂದು ಕಂದ ನೆನೆಯಲಾಗಬಂದವನಯ್ಯನ್ನೊದೆದನು ಕೋಲೆಬಂದವನಯ್ಯನ್ನೊದೆದನು ಅನಿಮಿತ್ತಬಂಧು ನರಹರಿಯು ಮನೆದೈವ ಕೋಲೆ 4ಎದುರಿಲ್ಲವೆನಗೆಂದು ಮದವೇರಿದವನ ತ್ರಿಪದ ಭೂಮಿ ಬೇಡಿ ಗೆಲಿದನು ಕೋಲೆಪದ ಭೂಮಿ ಬೇಡಿ ಗೆಲಿದಾ ತ್ರಿವಿಕ್ರಮಮುದದ ವಾಮನ ಮನೆದೈವ ಕೋಲೆ 5ಕುಜನರಳಿದು ಭಾಗ್ಯ ಸುಜನರಿಗೊಲಿದಿತ್ತನಿಜ ತಾತನಾಜÕ ಸಲಹಿದ ಕೋಲೆನಿಜ ತಾತನಾಜÕ ಸಲಹಿದ ಶುಭಗುಣದ್ವಿಜರಾಮ ನಮ್ಮ ಮನೆದೈವ ಕೋಲೆ 6ಕೌಸಲ್ಯೆ ಗರ್ಭದಿ ಜನಿಸಿದ ಕೃಪೆಯಲ್ಲಿಕೌಶಿಕಕ್ರತುವ ಕಾಯ್ದನು ಕೋಲೆಕೌಶಿಕಕ್ರತುವ ಕಾಯ್ದ ರಾವಣಾಂತಕಶ್ರೀ ಸೀತಾರಾಮ ಮನೆದೈವ ಕೋಲೆ 7ಗೋಕುಲದಲಿ ಬೆಳೆದುಪೋಕದನುಜರ ಅನೇಕ ಪರಿಯಲಿ ಸದೆದನು ಕೋಲೆ ಅನೇಕ ಪರಿಯಲಿ ಸದೆದ ಪಾಂಡವಪಾಲಶ್ರೀಕೃಷ್ಣ ನಮ್ಮ ಮನೆದೈವ ಕೋಲೆ 8ಮಿಥ್ಯಾವಾದಿಗಳಿಗೆ ಮಿಥ್ಯವನೆ ಕಲಿಸಿಸತ್ಯವಾದಿಗಳ ಪೊರೆದನು ಕೋಲೆಸತ್ಯವಾದಿಗಳ ಪೊರೆದನು ಅಜವಂದ್ಯಕರ್ತಬೌದ್ಧನು ಮನೆದೈವ ಕೋಲೆ9ಸ್ವಾಹಾ ಸ್ವಧಾಕಾರವು ಮಹಿಯೊಳಿಲ್ಲದಾಗೆಸುಹಯವೇರಿ ಕಲಿಯನು ಕೋಲೆಸುಹಯವೇರಿ ಕಲಿಯನೆಳೆದು ಕೊಂದಮಹಾಕಲ್ಕಿ ನಮ್ಮ ಮನೆದೈವ ಕೋಲೆ 10ಹತ್ತವತಾರದಿ ಭಕ್ತಜನರ ಹೊರೆದಮತ್ತಾವಕಾಲದಿ ರಕ್ಷಿಪ ಕೋಲೆಮತ್ತಾವ ಕಾಲದಿ ರಕ್ಷಿಪ ಪ್ರಸನ್ವೆಂಕಟಕರ್ತನ ನಂಬಿ ಸುಖಿಯಾದೆ ಕೋಲೆ 11
--------------
ಪ್ರಸನ್ನವೆಂಕಟದಾಸರು
ಕೋಲುಹಾಡುಕೋಲು ಮುಕ್ತಿ ಮಾರ್ಗದ ಕೋಲು ದುಷ್ಟಶಾಸನಕೋಲು ಸುಖತೀರ್ಥಯತಿರಾಯನ ಕರದಂಡುಕೋಲು ಕೋಲೆ ಪ.ಕಂಬುಗೇಹನ ಸೀಳ್ದ ಕಲ್ಲ ಬೆನ್ನಲಿ ತಾಳ್ದಕುಂಭಿನಿತಂದ ಕಂಬದಿ ಬಂದನಮ್ಮಯ್ಯಕೊಂಬುವರಿಲ್ಲ ತ್ಯಾಗವೆಂಬ ಬಲಿಯೊತ್ತಿದಡಂಬಕಕ್ಷತ್ರೇರ ಕಂಠದರಿ ನೋಡಮ್ಮಯ್ಯ1ಅಂಬುಧಿಯ ದಾಟಿದ ರಂಭೆರೊಳೋಲ್ಯಾಡಿ ದಿಗಂಬರ ತಿರುಗಿ ಪಶುವೇರಿದ ನಮ್ಮಯ್ಯಅಂಬುಜಜಾಂಡ ಒಳಕೊಂಬ ಒಡಲ ಚೆಲುವಕೊಂಬು ಕೊಳಲೂದುವರ್ಥಿಯ ನೋಡಿರಮ್ಮಯ್ಯ 2ಸರ್ವಜÕರಾಯನ ಪೂರ್ವದ್ವಾದಶಸ್ತವನಕೋರ್ವನೆ ಮೆಚ್ಚಿ ಉಡುಪಿಲಿ ನಿಂದನಮ್ಮಯ್ಯಉರ್ವಿಗುಬ್ಬಸ ಮತವ ಪೂರ್ವಪಕ್ಷವ ಮಾಡಿದಸರ್ವೇಶ ಪ್ರಸನ್ವೆಂಕಟ ಕೃಷ್ಣ ಕಾಣಮ್ಮಯ್ಯ 3
--------------
ಪ್ರಸನ್ನವೆಂಕಟದಾಸರು
ಕೋಳಿ ಕೊಗಿತಲ್ಲಾ - ಲಕ್ಷ್ಮೀಲೋಲನಲ್ಲದೆ ಅನ್ಯರಾರಿಲ್ಲವೆಂದು ಪ.ಮೊದಲ ಜಾವದಲಿ ಮುಕುಂದನೆಂದು ಕೂಗಿಎರಡಲಿ ಶ್ರೀ ವೆಂಕಟಾದ್ರಿಯೆಂದು ||ಉರಗಗಿರಿಯ ವಾಸ ಯಾದವ ಕುಲ ಗೊಲ್ಲಚದುರ ಚಲ್ಲಪಿಲ್ಲಿ ರಾಯನಲ್ಲದಿಲ್ಲವೆಂದು 1ಮೂರು ಜಾವದಲಿ ಮುರಾರಿಯೆಂದು ಕೂಗಿನಾಕರಲಿ ನಾರಾಯಣಯೆನಲು ||ಕ್ಷೀರಾಬ್ಧಿಯ ವಾಸ ಲಕ್ಷ್ಮೀಪತಿ ಕೋನೇರಿವಾಸ ವೆಂಕಟಕೃಷ್ಣರಾಯನೆಂದು 2ಪರಮಪುರುಷ ಮುಖ್ಯ ಆಧಾರಭೂತಕರುಣದ ಪುಂಜನು ಜಗದಾದಿ ತಾ ||ಕಮಲಸಂಭವ ಮುಖ್ಯ ಕಾರುಣ್ಯ ಮೂರುತಿವಿಮಲಕಾಪುರ ತಿಮ್ಮರಾಯನಲ್ಲದಿಲ್ಲವೆಂದು 3ರೆಕ್ಕೆಯ ಬಿಚ್ಚಿ ಪಸರಿಸಿ ಡಂಗುರ ಹೊಯ್ದಕೊಕ್ಕನು ಮೇಲೆ ನೆಗಹಿಕೊಳುತ ||ಚಕ್ಕನೆ ಕೇರಿ ಕೇರಿಯಗುಂಟ ಸಾಗುತಮುಕುಂದನಲ್ಲದೆ ಅನ್ಯರಾರಿಲ್ಲವೆಂದು 4ಐದು ಜಾವದಲಿ ಅನಂತನೆಂದು ಕೂಗಿಆರರಲ್ಲಿ ಅಳಗಾದ್ರೀಶಯೆಂದು ||ಏಳರಲ್ಲಿ ಕಾಶಿಯ ಬಿಂದುಮಾಧವಎಂಟಕೆ ಪುರಂದರವಿಠಲರಾಯನೆಂದು 5
--------------
ಪುರಂದರದಾಸರು
ಕ್ಷೀರಸಾಗರದಲೆರಡೀರೈದು ಯೋಜನದ |ಮೇರೆಯಲಿ ವರತ್ರಿಕೂಟಾದ್ರಿ ಶೃಂಗತ್ರಯದಿ |ರಾರಾಜಿಸುವ ತಾಮ್ರ-ರಜತ-ಕಾಂಚನದಿಂದನಾರಾಯಣಾಂಶದಿಂದ ||ಪಾರಿಜಾತಾಂಭೋಜ ಬಕುಳ ಮಲ್ಲಿಗೆ ಜಾಜಿ |ಸೌರಭದಲಶ್ವತ್ಥಪೂಗಪುನ್ನಾಗಜಂ |ಬೀರತರುಗುಲ್ಮಶಾಖಾಮೃಗಗಳೆಸೆವಲ್ಲಿವಾರಣೀಂದ್ರನು ಮೆರೆದನು 2ಆನೆ ಹೆಣ್ಣಾನೆ ಮರಿಯಾನೆಗಳ ಸಹಿತಲ್ಲಿ |ಕಾನನದಿ ತೊಳಲುತ್ತ ಬೇಸಗೆಯ ಬಿಸಿಲಲ್ಲಿ |ತಾನು ನೀರಡಿಸಿ ಬಂದೊಂದು ಸರಸಿಯ ತಟಕೆಪಾನಾಭಿಲಾಷೆಯಿಂದ ||ನಾನಾಪ್ರಕಾರದಿಂ ಜಲಕ್ರೀಡೆಯಾಡುತಿರ |ಲೇನಿದೆತ್ತಣ ರಭಸವೆಂದುಗ್ರಕೋಪದಿಂ |ಒತ್ತಿ ಪಿಡಿದೆಳೆಯುತಿರೆ ಎತ್ತಣದಿನೇನೆನುತ |ಮತ್ತಇಭರಾಜನೌಡೊತ್ತಿ ನೋಡುತ್ತಂಘ್ರಿ |ಎತ್ತಿ ತಂದನು ತಡಿಗೆ ಮತ್ತೆ ನಡುಮಡುವಿನೊಳುಅತ್ತಲೇ ತಿರುಗೆನೆಗಳೆ||ಇತ್ತಂಡದಿಂತು ಕಾದಿದರು ಸಾವಿರ ವರುಷ |ಉತ್ತರಿಸಿತೇನೆಂಬೆ ಮತ್ತಾ ಗಜೇದ್ರಂಗೆ |ಸತ್ತ್ವ ತಗ್ಗಿತು ತನ್ನ ಮನದೊಳಗೆ ಚಿಂತಿಸಿತುಮತ್ತಾರು ಗತಿಯೆನುತಲಿ 4ಬಂದುದಾ ಸಮಯದಲಿ ಹಿಂದೆ ಮಾಡಿದ ಪುಣ್ಯ |ದಿಂದ ದಿವ್ಯಜಾÕನ ಕಣ್ದೆರೆದು ಮನದೊಳರ |ವಿಂದನಾಭಾಚ್ಯುತ ಮುಕುಂದಮಾಧವಕೃಷ್ಣನಿಖಿಲ ಮುನಿವೃಂದವಂದ್ಯ ||ಇಂದಿರಾರಮಣ ಗೋವಿಂದ ಕೇಶವ ಭಕ್ತ |ಬಂಧು ಕರುಣಾಸಿಂಧು ತಂದೆ ನೀ ಗತಿಯೆನಗೆ |ಇಂದುಸಿಲ್ಕಿದೆನು ಬಲು ದಂದುಗದಮಾಯಾಪ್ರ-ಬಂಧಕನೆ ನೆಗಳಿನಿಂದ 5ಪರಮಾತ್ಮ ಪರಮೇಶ ಪರತತ್ತ್ವ ಪರಿಪೂಜ್ಯ |ಪರತರ ಪರಂಜೋತಿಪರಮಪಾವನಮೂರ್ತಿ |ಪರಮೇಷ್ಟಿಪರಬ್ರಹ್ಮಪರಮಪರಮಾಕಾಶ |ಪರಿಪೂರ್ಣ ಪರಮಪುರುಷ ||ನಿರುಪಮ ನಿಜಾನಂದ ನಿರ್ಲಯ ನಿರಾಕಾರ |ನಿರವಧಿಕನಿರ್ಗುಣನಿರಂಜನನಿರಾಧಾರ |ನಿರವದ್ಯನಿಸ್ಸಂಗ ನಿಶ್ಚಿಂತ ನಿಖಿಲೇಶಇರದೆ ನೀ ಸಲಹೆಂದನು 6ಇಂತೆನುತ ಮೂಚ್ರ್ಛೆಯಲಿ ಗುಪ್ತಕಂಠಸ್ವರದ |ಕಾಂತ ನಡುನೀರೊಳಗೆ ತೇಲಿ ಮುಳುಗುತಲಿರೆ ಅ- |ನೆಗಳ ಬಾಯನು ಚಕ್ರದಲಿ ಸೀಳಿ ಕರಿವರದ |ಒಗುವ ಕರಣದಲಿ ಮೈದಡಹಲ್ಕೆ ಗಜಜನ್ಮ |ತೆಗೆದುದಾಕ್ಷಣಕೆ ಮಣಿಮುಕುಟ - ಕುಂಡಲದಿಂದನಗಧರನು ಓಲೈಸಿದ ||ವಿಗಡದೇವಲ ಮುನಿಯ ಶಾಪದಲಿ ದಾರುಣಿಯೊ- |ಳಗೆ ನಕ್ರನಾಗಿ ಹೂಹೂ ಎಂಬ ಗಂಧರ್ವ |ಮಗುಳಿಪುರವನು ಕಂಡು ನಿಜಗತಿಗೆ ಐದಿದಿನುಕಮಲಾಕ್ಷಮಿಗೆ ಮೆರೆದನು 8ಮಣಿಮುಕುಟಕುಂಡಲಪದಕಹಾರ ಕಡಗಕಂ- |ಕಣ ಕೌಸ್ತು ಭೊಜ್ವ ್ಜಲಾಂಗದವೈಜಯಂತಿಭೂ- |ಷಣ ಶಂಖ-ಚಕ್ರ-ಗದೆ-ಪದ್ಮ ಧರಿಸಿಹಹಸ್ತಪಣಿಯ ಕಸ್ತುರಿ ತಿಲಕದಾ ||ಝಣಝಣಿಪ ನೂಪುರದ ದಂತಪಂಕ್ತಿಯ ಕೃಪೇ- |ಕ್ಷಣದ ಸಿರಿಮೊಗದ ಪೀತಾಂಬರದ ಮೂರುತಿಗೆ |ಮಣಿದು ಜಂiÀi ಜಯಜಯಾಎಂಬ ಸುರನರರಸಂ- |ದಣಿಯಿಂದೆಹರಿಮೆರೆದನು 9ಹರಹರಿಎನುತ್ತಂಘ್ರಿಗೆರಗಲಿಭವರನನಾ- |ದರದಿಂದಲೆತ್ತುತಲಿ ಕೇಳ್ಮಗನೆ ನೀನೆನ್ನ |ವಿರಜಶರಪರಿಧಿಯಾ ಸರವನಹಿಪತಿಯನ್ನುಪರಜನ್ಮನೀ ಲಕುಮಿಯ ||ಪರಮೇಷ್ಟಿ-ಭವರ ಮನು-ಮುನಿಗಳನು ಧರಣಿಯನು |ಆವಾವನಿದನುದಯದಲ್ಲೆದ್ದು ಭಕ್ತಿಯಲಿ |ಭಾವಶುದ್ಧಿಯಲಿ ತಾ ಹೇಳಿಕೊಳುವನೊ ಅವನ- |ಘಾವಳಿಯ ಪರಿಹರಿಸಿ ಸುಙ್ಞÕನವೀವೆ ದೇ-ಹಾವಸಾನದಲೆನುತಲಿ ||ಶ್ರೀವಾಸುದೇವನಾಜಾÕನೆಸಿ ಗಜೇಂದ್ರ ಸಹಿ- |ತಾವಿಹಂಗಾಧಿಪನನೇರಿ ವೈಕುಂಠಕ್ಕೆ |ದೇವ ಬಿಜಯಂಗೈದಪುರಂದರವಿಠಲನ
--------------
ಪುರಂದರದಾಸರು
ಕ್ಷುಲ್ಲರಿಗೊದಗದು ಫುಲ್ಲನಾಭನ ಪದಅಲ್ಲ್ಲ್ಯವಧಾರಣ ಬುದ್ಧಿಗಳುಬಲ್ಲಿದಸುಖತೀರ್ಥರುಲ್ಲಾಸದಪಥದಲ್ಲಿಹರಿಗೆ ಪರಸಿದ್ಧಿಗಳು ಪ.ಆಡುವುದಮಿತವು ಮಾಡುವುದಹಿತೀಶಾಡುವದಾಶೆಗಳಬ್ಧಿನಾಡವಚನ ಉಪಗೂಡಿಸಿ ಠಾಳಿಪಮೂಢರ್ಗೆ ವಿಷಯದ ಲುಬ್ಧಿರೂಢಿಯೊಳಿವ ತನುಗೂಡಿದ ಬಯಕೆಯ ನೀಡಾಡಿದರೆ ಸುಖ ಲಬ್ಧಿಹಾಡಿ ಹರಿಯ ಕೊಂಡಾಡ್ಯನುದಿನಕೋಲ್ಯಾಡಲು ಒಲಿವ ದಯಾಬ್ಧಿ 1ಹೀನ ಶ್ರದ್ಧದಿಘನಸ್ನಾನ ಸುರಾರ್ಚನೆನಾನಾಡಂಬರಕುದಿಸುವ ಗಳಿಕೆಮೌನವೆ ವಧು ಹಣ ಧ್ಯಾನದಾರೋಹಣಜ್ಞಾನದೊಳಜ್ಞಾನದ ಬಳಕೆಏನೊಂದರಿಯರು ಮಾನುಭವಾರ್ಯರುಮಾನಪಮಾನ್ಗಳ ವೆಗ್ಗಳಿಕೆಶ್ರೀನಾಥಪದಕೊಪ್ಪು ಪ್ರಾಣವನೊಪ್ಪಿಪಜಾಣರ್ಗೆ ಮುಕುತಿಯ ಕಳವಳಿಕೆ 2ತರ್ಕಕೆ ನಿಶಿದಿನಕರ್ಕಶಭಾವದವರ್ಕಡು ಪಾತಕರ್ಬಾಧಕರುಮರ್ಕಟ ಮುಷ್ಟಿಯೊಳು ಮೂರ್ಖ ಪ್ರತಿಷ್ಠೆಯೊಳುನರ್ಕಪದೇ ಪದೇ ಸಾಧಕರುಆರ್ಕೂಡ ಮುಕ್ತರು ಶರ್ಕರ ಸೂಕ್ತರುಅರ್ಕಸುತೇಜ ಮುಖಾಧೀಶರುತರ್ಕೈಪರು ಸಂತರ್ಕಳಖಳಸಂಪರ್ಕಕೆ ಹೆದರುವ ಭೇದಕರು 3ಶಾಸ್ತ್ರ ವಿಚಾರಿಸಿ ಪ್ರಸ್ತಾರದೋರಿ ಸ್ಮರಾಸ್ತ್ರಕೆ ಮಗ್ಗುತ ಸೋಲುವರುಸ್ವಸ್ಥ ಮನಿಲ್ಲದೆ ದುಸ್ತರಬೋಧಸಮಸ್ತರೊಳಗೆ ಬೋಧಿಪರವರುವಿಸ್ತರ ತತ್ವ ಪ್ರಶಸ್ತ ಬೀರುತ್ತ ಪರಸ್ತ್ರೀ ಜನನಿಸಮನೆಂಬುವರುಅಸ್ತಮಯೋದಯದಿ ವ್ಯಸ್ತವಿದೂರ ಹೃದಯಸ್ಥ ಹರಿಯನೆ ಚರಿಸುವರು 4ಒಂದರಿದವರು ನೂರೊಂದನರಿತವರಾರೆಂದತಿಶಯಮದ ವಿಹ್ವಲರುಕುಂದುಕುಚೇಷ್ಟೆ ವಿನಿಂದೆಯ ಧೃಷ್ಟ ಮುನೀಂದ್ರ ದ್ರೋಹದಗುಣಸಂಕುಲರುಮಂದರಧರನವರಂದನುಭವದಿವನೊಂದನರಿಯರತಿ ನಿರ್ಮಳರುತಂದೆ ಪ್ರಸನ್ವೆಂಕಟೇಂದ್ರನಕಿಂಕರರೆಂದೆಂದಿಗಪವಾದಕೊಳಗೊಳರು 5
--------------
ಪ್ರಸನ್ನವೆಂಕಟದಾಸರು
ಖ್ಯಾತಿಯಿಂದಪುರುಹೂತಸಹಿತ ಸುರ |ವ್ರಾತವು ನಿನ್ನನು ಒತ್ತಿ ಓಲೈಸಲು ||ಭೂತಳದೊಳು ಸಂಪ್ರೀತಿಗೆ ಸಿಲುಕಿ ನೀ |ಪಾರ್ಥನ ರಥಕೆ ಸೂತನಾದ ಮೇಲೆ 2ಪರಮಪುರುಷ ಪರಬೊಮ್ಮ ನೀನೆನುತಲಿ |ನಿರುತದಿ ಶ್ರೂತಿಯು ಕೊಂಡಾಡುತಿರೆ ||ವರಪಾಂಡವರರ ಮನೆಯೊಳುಊಳಿಗ|ಕರೆಕರೆದಲ್ಲಿಗೆ ಪೋದಪೋದ ಮೇಲೆ 3ಧುರದಲಿ ಪಣೆಯನೊಡೆದ ಭೀಷ್ಮನ ಸಂ- |ಹರಿಪೆನೆನುತ ಚಕ್ರವ ಪಿಡಿಯೆ ||ಹರಿನಿನ್ನ ಕರುಣದ ಜೋಡು ತೊಟ್ಟಿರಲವ- |ನಿರವ ಕಾಣುತ ಸುಮ್ಮನೆ ತಿರುಗಿದ ಮೇಲೆ 4ತರಳನು ಕರೆಯಲು ಭರದಿ ಕಂಬದಿ ಬಂದು |ನರಮೃಗರೂಪ ಭಕ್ತರ ತೆತ್ತಿಗನೆ ||ವರದ ಪುರಂದರವಿಠಲರಾಯ ನಿನ |ಸ್ಮರಿಪರ ಮನದಲಿ ಸೆರೆಯು ಸಿಕ್ಕಿದ ಮೇಲೆ 5
--------------
ಪುರಂದರದಾಸರು
ಗಂಗಾಧರ ದೇವ ಜಯಗೀಷ ವ್ಯಾನಂಗಾರಿ ಗಿರಿಜಾಧವ |ಮಂಗಳ ಪ್ರದನೆ ಅಮಂಗಳ ಶೀಲ | ಭುಜಂಗ ರೂಪದಿ ಪಾಂಡು |ರಂಗ ಘಾಸಿಗೆಯಾದ ಪವೈಕಾರಿಕಾಹಂಕಾರ ತತ್ವದೊಡೆಯ, ನಾಕುಮೊಗನ ಕುಮಾರ |ಶ್ರೀಕಂಠ, ಸ್ಥಾಣು, ವಿಶ್ಖೋಜನಕ, ಚಂದ್ರಶೇಖರ, ಈಶಪಿನಾಕಿಭಕ್ತವತ್ಸಲ |ಶೋಕನಾಶಕ ಶಂಭು, ಪಶುಪತಿ, ಹೇ ಕರುಣಿ, ಸದ್ಗುಣ ಸುಖಾರ್ಣವ |ಪಾಕಶಾಸನ ಪ್ರಮುಖ ವಂದ್ಯ, ವಿಶೋಕ, ಎನ್ನಭಿಲಾಷೆ ಪೂರ್ತಿಸು1ಪ್ರಾಣನಂದನ ತೈಜಸಾಹಂಕಾರಾಭಿಮಾನಿ ಶ್ರೀಶುಕದೂರ್ವಾಸ|ಕ್ಷೋಣಿಸಂಧೃತ ಧನ್ವಿ, ದಾನವಾಂತಕ, ಶೂಲಪಾಣಿ, ಪ್ರಮಥಾಧಿಪ ಬಾಣವರದಯನ್ನ |ಮಾನನಿನ್ನದು ಚಕ್ರಿ ಪದಕಂಜರೇಣುತೋರಿಸು ತವಕದಿಂದಲಿ |ದ್ರೌಣಿ, ಶಿವ, ಪ್ರಣತ ಜನ ಸುಮನಸಧೇನು, ತವ ಪದ ಸಾರ್ವೆ ಸತತ 2ತಾಮಸಾಹಂಕಾರೇಶ ಸಂಕರ್ಷಣನಾ ಮಗನೇ ಕೊಡು ಲೇಸ ರಾಮನಾಮ ಮಂತ್ರ |ಪ್ರೇಮದಿ ಜಪಿಸುವ ಸ್ವಾಮಿ, ಅನಲ,ವಹ್ನಿಸೋಮಲೋಚನ ಹರ |ವಾಮದೇವ, ಕಪರ್ದಿ,ಭವಭಯ ಭೀಮ ಶ್ರೀ ಪ್ರಾಣೇಶ ವಿಠಲನ |ಪ್ರೇಮ ಪುಟ್ಟಿಸೋ ರೌಪ್ಯ ಪರ್ವತಧಾಮ ಶ್ರೀ ವಿರೂಪಾಕ್ಷ ಗುರುವೇ 3
--------------
ಪ್ರಾಣೇಶದಾಸರು
ಗಂಗಾಪಿತ ರಾಘವ ನಂಬಿದೆ ಶ್ಯಾಮ-ಲಾಂಗ ನಿನ್ನಯ ಪಾದವ ||ಮಂಗಳೆ ರಮಣ ಭುಜಂಗಧರಾರ್ಚಿತಾ |ನಂಗಜ ಜನಕ ಪಾಲಿಸಿಂಗಡಲೊಡೆಯನೆ ಪಶಫರ, ಕಮಠ,ಕೋಲನೃಹರಿ ಬಾಲ |ನೃಪಕುಲ ಪವನ ವ್ಯಾಲ ||ವಿಪಿನಸಂಚರಾ ಕೃಷ್ಣ ವಿಪುಳಾಬುದ್ಧಕಲ್ಕಿ |ವಪುಧರ ಅನಿರುದ್ಧಕೃಪಣವತ್ಸಲ ಸ್ವರ್ಪಾ- ||ದಪನೆಹರಿಕಾಶ್ಯಪಿಯೊಳಗೆ ಸುರ ರಿಪುಹ | ಶಿವನ ಕ |ರಿಪನ ನರಪತಿ ದ್ರುಪದ ನಂದನೆಯ ಪೊರೆದೀಶ್ವರ |ಕಪಟನಾಟಕ ಕಪಿಲ ರೂಪಿ 1ಕುರು ಕುಲೋತ್ತಮನಾಗಾರದೊಳಗೆಕ್ಷೀರ|ಸುರಿದೆ ಗೋಕುಲ ವಿಹಾರ ||ವರವಿಪ್ರಜರ ತಂದೆ ಹರಚಾಪಹನನಈ |ಶರೀರವೇ ನಿನ್ನದು ಸರಿಬಂದದನು ಮಾಡೋ ||ಕರೆಕರೆಯ ಭವಶರಧಿಯೊಳು ಬಾ- |ಯ್ದೆರೆವೆ ರಕ್ಷಿಸುವರನು ಕಾಣೆನೊಬ್ಬರ ನಿನ್ನುಳಿ- ||ದುರಗ ಶಯನನೇ ಧರಿಜವಲ್ಲಭಕರುಣಿ ಕೇಶವ2ಜನನ ಮರಣ ದೂರ ಇಂದ್ರಾನುಜ |ಮುನಿ ಗೇಯಾ ಚಲಧರ ||ವನರುಹಭವಸಂಕ್ರಂದನವಂದ್ಯ ವೀತ ಆ |ವನಿ ಮುಖ ತನ್ಮಾತ್ರಾಗುಣ ಪ್ರಾಣೇಶ ವಿಠಲ ||ಪ್ರನಮಿತಾಘ ಕಕ್ಷಾನಲ ಕಂದರ್ಪನ ಪಿತನೆ |ನಿನ್ನನುಗರೊಳಗಿಡೋ ಮಣಿಯೇ ಅನ್ಯರಿ ||ಗನಘ ಪಾಲಿಪುದನವರತ ಯನ್ನನು ಬಿಡದಲೆ 3
--------------
ಪ್ರಾಣೇಶದಾಸರು
ಗಂಗಾಪಿತ ವೆಂಕಟ ಪರ್ವತನಿಲಯಕೌಸಲ್ಯತನಯಾ |ಮಂಗಳವಲ್ಲಭಭವಕರಕರೆಯ ಪರಿಹರಿಪುದು ತ್ವರಿಯಾ |ಅಂಗಜಜನಕನೆ ಸಂಗರಹಿತ ಸತ್ಸಂಗ ಕೃಪಾಬ್ಧಿ ವಿಹಂಗವಾಹನನೇ ಪಸ್ವಾಮಿಲಾಲಿಸುಯನ್ನಯ ಮನದುಸರ ನೀನಲ್ಲದಿತರರ |ಭೂಮಿಯೊಳ್ಕಾಣೆನೋ ಉದ್ಧರಿಸುವರನವನೀತಚೋರ |ಸಾಮಜದ್ರೌಪದಿ ಆ ಮುಚುಕುಂದ ಸುಧಾಮರ ಪೊರೆದ ತ್ರಿಧಾಮ ಮಹಾತ್ಮ 1ವಾಸುಕೀ ಶಯನ ದಯಾ ಸಂಪನ್ನ ನಾರಾಯಣ ನಿನ್ನ |ದಾಸರೊಳಗಾಡಿಸೊ ಸದ್ಗುಣ ಪೂರ್ಣ ಸಾರ್ವರಿಗೆ ಪ್ರಸನ್ನ |ಈಸಲಾರೆ ಈ ಸಂಸಾರಶರಧಿಕೈ ಸೋತಿತೆಲೋ ಪರಾಶರ ತನಯ 2ನಿತ್ಯಾನಂದ ನಿಗಮೋದ್ಧಾರ ಪೂತನೀ ಸಂಹಾರ |ಮೃತ್ಯುಂಜಯಸಖರವಿದರ ಗದಾಧರ ಸುಖಪಾರಾವಾರ|ಭೃತ್ಯವತ್ಸಲ ಸುರೋತ್ತಮ ಪಾರ್ಥನ ತೊತ್ತಿಗನಾದಿ ಸುಸತ್ಯ ಸಂಕಲ್ಪ ಗಂಗಾ3ಮಂದರಾಚಲ ಧರಿಸಿದ ಗೋವಿಂದ ಶ್ರೀ ಯಶೋದಾನಂದ |ನಂದನ ಶ್ರೀ ಕೇಶವ ಮುಕುಂದ ವಾಮನ ಸುಖಸಾಂದ್ರ |ತಂದೆ ಸಲಹೊ ನಿನ್ನ ಬಂಧಕ ಶಕುತಿಯಲಿಂದ ದಣಿಸದೆ ಅರಿಂದಮ ಪ್ರಭುವೇ 4ಅಂತರಂಗವ ಬಲ್ಲ ಮಧುದ್ವೇಷಿ ಯನ್ನಯ ಮನದಾಸೀ |ಅಂತು ಪೂರ್ತಿಸಿ ದುಷ್ಕರ್ಮದ ರಾಶಿ ಉಳಿಸದೆ ಪರಿಹರಿಸಿ |ಸಂತತ ಹೃದಯದಿ ನಿಂತು ಪೊಳೆವುದೋ ಅನಂತ ಮುರಾಂತಕ ಚಿಂತಾರಹಿತನೆ 5ಶಕ್ರವರಪೂಜಿತ ಬಲವಂತ ರುಕ್ಮಣೀಪತಿ ದಂತ |ವಕ್ತ್ರಾರಿ ಬಾಧಿಸದಂತೆಕೃತಾಂತಮಾಳ್ಪುದು ಕೆಡದಂಥ |ಸುಕೃತಪೀಡಿಸೋ ತ್ರಿವಿಕ್ರಮ ಮೂರುತಿ ಶುಕ್ರ ಯುಕ್ತಿ ಹರ ಅಕ್ರೂರ ವರದ 6ಕಂಕಾನುಜ ಮಂದಿರ ಪ್ರಾಣೇಶ ವಿಠಲ ಗೋಕುಲ ಗೋಪಾಲ |ಪಂಕಜಾಸನ ಜನಕ ಶಕಟಕಾಲಜಾಂಬವತೀಲೋಲ|ಶಂಕರಾದ್ಯಮರರ ಕಳಂಕೆಣಿಸದ ಗರುಡಾಂಕಉರಗಪರ್ಯಂಕ ಸುಖಾತ್ಮ 7
--------------
ಪ್ರಾಣೇಶದಾಸರು