ಒಟ್ಟು 15952 ಕಡೆಗಳಲ್ಲಿ , 137 ದಾಸರು , 7176 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಲಾಲಿ ಶ್ರೀ ಕೃಷ್ಣ ಬಾಲ ಲಾಲಿ ನಂದ ಯಶೋದೆ ಲೀಲ ವೇಣುಗೋಪಾಲ ಪ. ವಸುದೇವ ಸುತನಾಗಿ ಬಂದು ಎಸೆವೊ ಗೋಕುಲದಲಿ ನಿಂದು ಅಸುರಕುಲ ಸಂಹಾರಕೆಂದು ನಸುನಗುತ ಗೋಪಿಯರ ವಶವಾಗ್ವೆನೆಂದು 1 ಪುಟ್ಟಿದಾ ಶಿಶುವನ್ನೆ ನೋಡಿ ನಕ್ಷತ್ರ ರೋಹಿಣಿ ಎಂದು ತಿಳಿದು ಅಷ್ಟಜನ ಸಹಿತ ಗೋಕುಲದಿ ಸಂತುಷ್ಟಿಯೊಳು ನಾಮಕರಣವ ಮಾಡಿ ನಲಿದೂ 2 ವೇದ ಘೋಷಗಳಾಗುತಿರಲೂ ಆದಿ ಮೂರುತಿಗೆ ಮೋಹದಲಿ ಕೃಷ್ಣನೆಂದ್ಹೆಸರನಿಡಲೂ ಸಾದರದಿ ಗೋಪ ದಕ್ಷಿಣೆ ತಾಂಬೂಲ ಅಗಾಧದಲಿ ಬ್ರಾಹ್ಮಣರಿಗೆ ಕೊಟ್ಟು ನಲಿದೂ 3 ಚತುರ ವೇದದ ನಾಲ್ಕು ಸರಪಣಿಯ ಹೂಡಿ ಚತುರ ದಿಕ್ಕನೆ ನಾಲ್ಕು ಚೌಕ ತೊಟ್ಟಿಲನೆ ಕಟ್ಟಿ ಚತುರ್ಮುಖನಯ್ಯನ ತೊಟ್ಟಿಲೊಳಗಿಟ್ಟು ಅತಿಶಯದಿ ನಾರಿಯರು ತೂಗಿದರು ಹರಿಯಾ ಲಾಲಿ4 ಮಚ್ಛಕೂರ್ಮನೆ ವರಹ ಲಾಲಿ ತುಚ್ಛ ದೈತ್ಯನ ಕೊಂದ ನರಹರಿಯೆ ಲಾಲಿ ಅಚ್ಚವಾಮನ ಭಾರ್ಗವ ಕೃಷ್ಣ ಲಾಲಿ ಸಚ್ಚ ಬೌದ್ಯಕ ಶ್ರೀ ಶ್ರೀನಿವಾಸನೆ ಲಾಲಿ 5
--------------
ಸರಸ್ವತಿ ಬಾಯಿ
ಲಾಲಿಪುದೆನ್ನ ಸೊಲ್ಲ ಲಕುಮಿಯ ನಲ್ಲ ನೀಲ ನೀರದ ನಿಭ ನಿರುಪಮ ಮಲ್ಲ ಪ. ಉದಯದೋಳೇಳುತ ಉಚಿತ ಕರ್ಮಗಳ ಸದರದಿ ಮಾಡದೆ ಸಾಧುಪೂಜೆಗಳ ಮದ ಮುಖತನದಿಂದ ಮನೆಯಲ್ಲಿ ತಿರುಗುವೆ- ನಿದನು ನಿನ್ನಯ ಸೇವೆಯೆಂಬ ಭಾವನೆಯಿತ್ತು 1 ಕೀಟಕೆ ಸಾಮ್ರಾಜ್ಯ ಪದವಿಯನಿತ್ತಿ ಹಾಟಕಕಶಿಪನ ಮಗನ ಮೇಲೆತ್ತಿ ಆಟದ ನೆವದಿಂದ ಶಕಟನ ತರಿದಿ ಕಿ- ಭವ ದಾಟುವಂದದಿ ತೋರಿ2 ಪಾದ ವನರುಹಗಳನು ನೆನೆದು ಪೂಜಿಸುವದಕನುಕೂಲಗಳನು ಮನೆಗಧಿಪತಿ ನೀನು ಮಾಡಿ ರಕ್ಷಿಪುದಿನ್ನು ವನಜ ಭವಾರ್ಚಿತ ವೆಂಕಟಾಚಲನಾಥ 3
--------------
ತುಪಾಕಿ ವೆಂಕಟರಮಣಾಚಾರ್ಯ
ಲಾಲಿಸಿ ರಘುವರನ ಚರಿತೆಯ ಸಾರ ಪೇಳುವೆ ಸುಖನಾಥನ ಪ ಶ್ರೀ ಲಲಾಮನು ಸುರರ ಮೊರೆಯನು ಭಾರ ಹರಿಸಲು ಲೀಲೆಯಲು ದಶರಥ ನೃಪಾಲನ ಬಾಲನೆನಿಸುತ ಅವತರಿಸಿದನು ಅ.ಪ. ಕುಶಿಸುತನ ಯಜ್ಞವ ರಕ್ಷಿಸಿ ಪಥದಿ ಋಷಿ ಪತ್ನಿಯ ಶಿಲಾರೂಪವ ಬಿಡಿಸಿದ ದೇವ ಪಶುಪತಿಯ ಕೋದಂಡ ಖಂಡಿಸಿ ಶಶಿವದನೆ ಜಾನಕಿಯ ಕರವನು ಕುಶಲದಲಿ ಪರಿಗ್ರಹಿಸಿ ಲೀಲೆಯ ನಸಮ ಭಾರ್ಗವನೊಡನೆ ತೋರಿದ 1 ತಂದೆ ವಾಕ್ಯವ ಪಾಲಿಸೆ ತಾ ಧರಣಿಗೆ ಬಂದ ಕಾರ್ಯವ ಸಲ್ಲಿಸೆ ಋಷಿಗಳಾಸೆ ತಂದು ತಾ ಮನಕಂಡು ವನಕೆ ಸತಿ ಸೋದರರ ಸಹಿತದಿ ಮುಂದೆ ಗಂಗೆಯ ದಾಟಿ ಭರದ್ವಾಜ ನಿಂದ ಸತ್ಕಾರವನು ಕೊಂಡನು2 ಚಿತ್ರಕೂಟದಲಿರಲು ವಿನಯದಿ ಬಂದು ಭಕ್ತ ಭರತನು ಬೇಡಲು ಪಾದುಕೆಯಿತು ಮತ್ತೆ ದಂಡಕವನ ಪ್ರವೇಶಿಸಿ ದೈತ್ಯರನು ಸಂಹರಿಸಿ ಶರಭಂಗ ಗಿತ್ತು ಮುಕ್ತಿಯ ಕುಂಭಸಂಭವ ನಿತ್ತ ದಿವ್ಯಾಸ್ತ್ರಗಳ ಪಡೆದನು 3 ವರಪಂಚವಟಿಯೊಳಗೆ ಶೂರ್ಪನಖಿಯು ದುರುಳ ಬುದ್ಧಿಯೊಳು ಬರೆ ಕಿವಿಮೂಗ ಕೊಯ್ಸಿ ಹರಿಣರೂಪದಿ ಬಂದ ದೈತ್ಯನ ಹರಣಗೈದಾಶ್ರಮಕೆ ತಿರುಗಲು | ಧರಣಿಸುತೆಯನು ಕಾಣದೆಲೆ ತಾ ನರರ ಪರಿಯಲಿ ಹಂಬಲಿಸಿದನು 4 ವನಜಾಕ್ಷಿ ವೈದೇಹಿಯ ಪುಡುಕುತ ಪಂಪಾ ಸನಿಹಕ್ಕೈತಂದು ವಾಲಿಯ ಸಂಹರಿಸ್ಯವನ ಅನುಜ ಸುಗ್ರೀವನಿಗೆ ಹರುಷದಿ ವಿನುತ ವಾನರ ರಾಜ್ಯದೊಡೆತನ ವನು ಕರುಣಿಸಿದ ಬಳಿಕ ಜಾನಕಿ ಯನು ಪುಡುಕೆ ಕಳುಹಿದನು ಕಪಿಗಳ 5 ಸ್ವಾಮಿಯ ಸ್ತುತಿಗೈಯುತ ಶ್ರೀ ಹನುಮಂತ ಆ ಮಹೋದದಿಯ ದಾಟುತ ಲಂಕೆಯ ಪೊಕ್ಕು ಭೂಮಿಜಾತೆಯ ಕಂಡು ರಾಮನ ಕ್ಷೇಮ ವಾರ್ತೆಯ ತಿಳುಹಿ ಬಹುಜನ ತಾಮಸರ ಸದೆಬಡಿದು ರಾವಣ ನಾ ಮಹಾ ನಗರಿಯನು ದಹಿಸಿದ 6 ಮರಳಿ ರಾಮನ ಬಳಿಗೆ ಬೇಗದಿ ಬಂದು ಮರುತ ಸುತನು ರಾಮಗೆ ಸೀತೆಯ ಕ್ಷೇಮ ವರುಹಿ ಚೂಡಾಮಣಿಯ ನೀಡಲು ಕರದಿ ಕೈಕೊಂಡದನು ನೋಡುತ ನರರ ಪರಿಯಲಿ ಹರುಷಬಾಷ್ಪವ ಸುರಿಸಿದನು ಶ್ರೀ ಕರಿಗಿರೀಶನು 7
--------------
ವರಾವಾಣಿರಾಮರಾಯದಾಸರು
ಲಾಲಿಸೆನ್ನ ವೃತ್ತಾಂತ ಲಕ್ಷುಮಿಯ ಕಾಂತ ಬಾಲನೊಳಿಂಥಾ ಪಾಂಥ ಬ್ಯಾಡ ಭೃಂಗಾಳ ಕಾಂತ ಪ. ಮಾನವ ನೀನೆ ಕೊಡರೆ ತಡವರು ಸೃಷ್ಟಿಯ ಒಳಗಾರು ಶ್ರೀ ರಮಣ ವಿಠಲ ನಿನಗಿನ್ನು ವಿವರಿಸಿ ಪೇಳ್ವದೇನು ಭ್ರಷ್ಟಗೊಳಿಸದಿರು ಭಯಹರ ಬೇರಿನ್ನಾರು 1 ಏಸು ತಪ್ಪಿದ್ದರೂ ದಾಸ ಬಿಡನೆಂಬ ಲೇಸಿನ ಬಿರುದೆಂತು ಮಾನುವದು ಈ ಸಮಯದೀ ಕರುಣಾ ಸಮುದ್ರನೆ ಎನ್ನ ಘಾಸಿ ಮಾಡದೆ ಗರುಡಾಸನ ಕೃಪೆದೋರು2 ನಡಿಯುವದಳವಲ್ಲ ತಡೆಯುವರೊಶವಲ್ಲ ನಡಿವ ಕಾರ್ಯಗಳೆಲ್ಲ ನುಗ್ಗಿತಲ್ಲ ಬಿಡದೆ ಮಾಡುವ ದಾನ ಧರ್ಮಗಳಿಗೆ ಇಂಥ ತೊಡಕು ಬಂದರೆ ಮುಂದೆ ತಾಳುವದೆಂತೋ ತಂದೆ 3 ಮಾನವರೊಳಗೊಬ್ಬ ಮರುಳುಗೊಂಡಾದರು ತಾನಿಟ್ಟ ತರುವನು ತೆಗಿಯನೆಂಬ ಮಾನಿತ ನುಡಿಯಿದ್ದು ಮೊದಲಿನಿಂದ ನೀನು ಕಾದು ದೀನನ ಬಿಡದಿಂದು ದಯದೋರು ಕೃಪಾಸಿಂಧು 4 ತೋರುವದಿಲ್ಲುಪಾಯ ಭೋರೆನುತಿದೆ ಮಾಯ ಕಾಯ ಕರ ಕರಿಯಾ ಹಾರಿಸು ಹಲಧರನನು ವೆಂಕಟರಾಯ ದೂರು ನಿನ್ನ ಪದಕೆ ಬಾರದಂದದಿ ಜೀಯ 5
--------------
ತುಪಾಕಿ ವೆಂಕಟರಮಣಾಚಾರ್ಯ
ಲಾವಣಿ ಖೋಡಿಮನಸು ಇದು ಓಡಿ ಹೋಗುತದಬೇಡೆಂದರು ಕೇಳದು ಹರಿಯೆಜೋಡಿಸಿ ಕೈಗಳ ಬೇಡಿಕೊಂಬೆ ದಯಮಾಡಿಹಿಡಿದು ಕೊಡು ನರಹರಿಯೆ ಪ ಗಾಡಿಕಾರ ನಿನ್ನ ಮೋಡಿಯ ಮೂರ್ತಿಯಕೂಡಿಸಿ ಪೂಜಿಸಲಘ ಹರಿಯೆದೂಡುತ ಹೃದಯದ ಗೂಡಿನೊಳಗೆ ಸ್ಥಿರ ಮಾಡಲು ಹದವನು ನಾನರಿಯೆನೋಡಿಂದ್ರಿಯಗಳ ತೀಡಬಲ್ಲೆ ಮನತೀಡುವ ಯತ್ನವು ಬರೆಬರೆಯೆಬೇಡಬೇಡವೆಂದಾಡುವೆನೆ ನಿನ್ನನೋಡುವುದೆಂತೈ ಜಗದೊರೆಯೆಕೋಡಗನಂತಿದು ಕಿಡಿಗೇಡಿ ಜಿಗಿದಾಡಿ ಪೋಗುವುದು ತ್ವರೆಮಾಡಿಕೂಡಿಸದದು ಬಹುಕಾಡಿ ದಿಟಿಸ್ಯಾಡಿ ನೋಡಲದು ಅಡನಾಡಿಕಾಡಿಕಾಡಿ ಬಲು ಪೀಡಿಸುತಿರುವದುಕಾಡುವುದೇನಿದು ಈ ಪರಿಯಾಜೋಡಿಸಿ ಕೈಗಳ 1 ತುಣುಕು ತುಣುಕು ಮನಸು ಇದು ಕ್ಷಣದೊಳು ಹಿಡಿವುದುತಿಣಿಕಿ ತಿಣಿಕಿ ಗಡ ಇದನ್ಹಿಡಿಯೆ ಹೆಣಗಲ್ಯಾತಕೆಂದು ಗೊಣಗುತಿಹರುಜನ ಗುಣ ಗೊತ್ತಿತ್ತಿಲ್ಲಿದೆ ಗುಣ ಖಣಿಯೆಗುಣರಹಿತನೆ ನಿನ್ನ ಗುಣ ನಾಮಂಗಳನೆಣಿಸುತೆ ನಾಲಗೆ ತಾದಣಿಯೆ ಟೊಣೆದು ನಿಮ್ಮನು ಕ್ಷಣಕ್ಷಣಕೊಂದುಕಣಕೆ ಹಾರುವುದು ಸುರಧರಣಿಯೆಇಣಚಿಹಾಂಗೆ ಚಪಲವೋಧಣಿಯೆಅಣಕಿಸಿದ್ಹಾಂಗ ಕುಣಿಕುಣಿಯೆಬಣಗು ಜನರು ನಮಗದು ಹೊಣಿಯೆಒಣ ಮಾತಿದು ಕೇಳ್ ನಿರ್ಗುಣಿಯೆಮಣಿಯದು ದಣಿಯದು ಹಣಿಯದು ತಣಿಯದುಟೊಣಿಯಲು ನಿನ್ನದು ಅದರಣಿಯೆ 2 ಸ್ಪಷ್ಟ ಹೇಳುವೆನು ಚೇಷ್ಟೆಗಳದರದುಯ ಥೇಷ್ಟವಾಗಿ ಕಣಾ ಕಣಾಶಿಷ್ಯರನೆಲ್ಲಾ ಭ್ರಷ್ಟ ಮಾಡುವುದು ದೃಷ್ಟಿ ಇಂದೊಂದೇ ಕಾರಣಎಷ್ಟು ಮಾತ್ರಕಿವರಿಷ್ಟ ನಡೆಸದಿಂದಿಷ್ಟೇ ಇದರದು ಧೋರಣಾಕಷ್ಟದಿ ಹಿಡಿದಿಟ್ಟ ಅಷ್ಟು ಇಂದಿಯಕಿದೆದುಷ್ಟರುಪದೇಶದ ಪ್ರೇರಣಾನಷ್ಟಮಾಡೋ ಈ ಚೇಷ್ಟೆಗುಣ ಸುಪುಷ್ಟ ಮತಿಯ ಕೊಡೊ ಪೂರಣಮುಷ್ಠಿಯೊಳಗಿಸೊ ತನುಹರಣಸೃಷ್ಟಿಸ್ಥಿತಿಲಯ ಕಾರಣಸೃಷ್ಟಿಯೊಳಗೆ ಉತ್ಕøಷ್ಟ ಗದುಗಿನಶ್ರೇಷ್ಠ ವೀರನಾರಾಯಣ 3
--------------
ವೀರನಾರಾಯಣ
ಲಾವಣಿ ಪದ ದೂರ್ ದೂರಲ್ಲ ಕೋಲ್‍ಕಾರ ಕೃಷ್ಣ ಕೇಳು ಬಾಲೆ ದಾರಿಯೋಳ್ ಸುಂಕ ಶೋದಗಳುಂಟೂ ಇದು ಏನ್ ಗಂಟು 1 ಗಂಡನುಳ್ಳ ಬಾಲೆಯರ ದುಂಡಕುಚ ಮುಟ್ಟಲಿಕ್ಕೆ ಪುಂಡತನ ಬುದ್ಧಿಯಿದು ಥರವೇನೋ ಜೀವಯರವೇನೋ ಪುಂಡತನ ಬುದ್ದಿಯಿದು ಥರವೇನೆಂದರೆ ಹೆಂಡತೆಂತ ಮುಟ್ಟಿದಾಗ ಕುಚಯುಗವಾ ಕಾಣದೆ ನಗುವ 2 ಕಾಕು ಮಾತಾಡುತಿದ್ದಿ ಸಾಕು ನಿನ್ನ ಮಾತೀಗ ಸಲುಗೇನೆಂದರೆ ಬೇಕು ಬೇಡಿದ್ದು ನಾ ಕೊಡುತೇನೆ ನಿನ್ನಿಡುತೇನೇ 3 ಕೊಂಡು ಕೊಂಡು ನಡೆಸಲಿಕ್ಕೆ ಶೆಟ್ಟಿಗಾರ ನಾನಲ್ಲ ನೀನಿಟ್ಟುಕೊಂಡ ಸೂಳೆ ನಾನಲ್ಲ ಹೋಗೋ ನೀನಲ್ಲ ಸಾಗೋ ಇಟ್ಟುಕೊಂಡ ಸೂಳೆ ನಾನಲ್ಲ ಹೋಗೆಂದರೆ ಕಟ್ಟಿಕೊಂಡು ಹೋದೇನು ಒಳತನಕಾ ಬೆಳಬೆಳತನಕಾ 4 ಒಳತನಕ್ಯಾತಕೆ ಬೆಳತನಕ್ಯಾತಕೆ ತಾಳಿಯರಿಲ್ಲಾ ಮಾತಿನ ಬೆಡಗಾ ಅಹುದೆಲೊ ಹುಡುಗ ತಿಳಿಯದಿದ್ದರೆ ನಾ ತಿಳಿಯ ಹೇಳಿಕೊಡುವೆನೆಂದು ಸೆಳೆದಪ್ಪಿಕೊಂಡ ಶ್ರೀದವಿಠಲ ಬಹುಬಹು ಧಿಟಲಾ5
--------------
ಶ್ರೀದವಿಠಲರು
ಲಿಂಗಾ ಎನ್ನಂತರಂಗ ಪ ಮಂಗಳಾಂಗ ಸರ್ವೋ-ತುಂಗನೆ ರಾಮ ಅ. ಪ. ಮಂದಾಕಿನೀಧರಗೆ ಗಂಗಾಂಬು ಮಜ್ಜನವೆ ಚಂದ್ರಮೌಳಿಗೆ ಗಂಧ ಕುಸುಮಾರ್ಪಣೆಯೆ ಕಂದರ್ಪಜಿತಗೆ ಮಿಗಿಲಾಪೇಕ್ಷೆಯೆ ರಾಮಾ 1 ಘನವಿದ್ಯಾತುರಗೆ ಮಂತ್ರಕಲಾಪವೆ ಧನವತಿಯ ಸಖಗೆ ಕೈಕಾಣಿಕೆಯೆ ಮನೆರಜತ ಪರ್ವತಗೆ ಫಣಿಯ ಆಭರಣವೆ ಮನೋ ನಿಯಾಮಕಗೆನ್ನ ಬಿನ್ನಹವೆ ರಾಮಾ2 ವೈರಾಗ್ಯ ನಿಧಿಗೆ ಈ ವಿಷಯ ಪದಾರ್ಥವೆ ಗೌರಿಯ ರಮಣಗೆ ಈ ಸ್ತೋತ್ರವೆ ವೀರ ರಾಘವ ವಿಜಯವಿಠ್ಠಲ ನಿಜಹಸ್ತ ವಾರಿಜದಳದಿಂದುದ್ಭವಿಸಿದ ಮಹಾ 3
--------------
ವಿಜಯದಾಸ
ಲಿಂಗಾಭಟ್ಟರಗ್ರಹಾರದಲ್ಲಿ ಗುರುದರ್ಶನಕಾವೇರಿ ತೀರದಲಿ ಕಂಡೆ ಗುರುವರರಆವಜನ್ಮಾಂತರದಲಾಯ್ತೊ ಭವಪಾರ ಪಶ್ರೀರಂಗಪಟ್ಟಣದ ಸನ್ನಿಧಿಯೊಳಿರುತಿರುವಆರ್ಯ ಲಿಂಗಾಭಟ್ಟರಗ್ರಹಾರದಲಿಮಾರಹರನಾಲಯದ ಮುಂದೆಸೆವ ಮಠದಲ್ಲಿಸೇರಿದ್ದರದ ಕಾಣೆ ಸ್ನಾನಕವರೈತರಲು 1ಏಕಾದಶಿಯ ದಿವಸ ದಿನನಸ್ತಮಯದಲ್ಲಿಆ ಕಮಲ 'ುತ್ರನಿಂಗಭಿನ'ುಸಿ ಬಳಿಕಪ್ರಾಕಾರದಲಿ ಶಿವನ ಪ್ರಾದಕ್ಷಿಣಂಗೆಯ್ಯುತಾ ಕಾಲದಲಿ ನನ್ನ ಕರೆದು ಮನಿನ್ನಿದವರ 2ನಾರಾಯಣಾಯೆನುತ ನಾಮಗಳನ'ುತವನುಚೀರಿ ಹೊಗಳುತ ತಾವು ಚರಣಗಳನಿಡುತಸೇರಿ ಸನ್ನಿಧಿಯಲ್ಲಿ ಸದ್ವಿಪ್ರರಿಬ್ಬರಿರೆ'ುೀರಿಯವರನು ನನ್ನ ಮಂದಲಿಸಿದವರನ್ನು 3ಅಪರಿ'ುತ ಜನ್ಮಗಳಲಾರ್ಜಿಸಿದ ಕರ್ಮಗಳಸುಪ'ತ್ರ ದೆಮ್ಮಡಿಗೆ ಸೇರಿಸೆಂದೆನುತತಪನ'ಗ್ರಹರದನು ತಾವೆ ಸೆಳೆದೆವೆನುತ್ತಸುಪಥನನು ಮಾಡಿ ಸಲೆ ಸನ್ಮಂತ್ರ'ತ್ತರನು 4ಇರು ಜಪಿಸುತೀ ಮನವನಿಚ್ಛೆ ಬಂದಂತೆಂದುಯೆರಗಿಸಿದರೀಶನಡಿಗೆಣಿಸಿ ನೂರೆಂಟಾತಿರುಪತಿಯ ವೆಂಕಟನ ತನು ರೂಪರಾದಿಂಥಉರು ದಯಾನಿಧಿಯಾದ ವಾಸುದೇವಾರ್ಯರನು 5
--------------
ತಿಮ್ಮಪ್ಪದಾಸರು
ಲೀಲೆಯಿಂ ಬಾ ಲೋಲಲೋಚನೆ ಕೋಲನಾಡುವ ಪ. ಶೀಲದಿಂದೆಮ್ಮಾಳ್ವ ಭೂಪಗೆ ಜಯವ ಪಾಡುವ ಅ.ಪ. ಮಂದಗಮನದಿಂದ ಬಾ ಅರವಿಂದ ಲೋಚನೆ ಮಂದಿಗಳಿಗಾನಂದ ಸಮಯಮಿಂದು ಪೊಸತೆನೆ 1 ಬಣ್ಣ ಬಣ್ಣ ಬೆಳೆಗಳಿಂ ಪೊಂಬಣ್ಣ ದುಡುಪಿನಿಂ ಕಣ್ಮನಂಗಳ ತಣ್ಪುಗೊಳಿಪಳ್ ಜನ್ಮಭೂಮಿತಾಂ 2 ನವನವೊತ್ಸವದಿರವ ಸೂಚಿಪ ಶರತ್ಸಮಾಗಮಂ [ತವ] ಮೆರೆವುದರರೆ ಶೇಷಶೈಲವರದನೊಲವಿನಿಂ3
--------------
ನಂಜನಗೂಡು ತಿರುಮಲಾಂಬಾ
ಲೇನು ಕಾರಣ ಯೆನ್ನ ಪ್ರಾಣನಾಥ ಪ ನೀನೆ ವಂಚಿಸಿದರೆನ | ಗೇನು ಗತಿ ಹರಿಯೇ ಅ.ಪ ನಾ ನೆನದುದಕೆ ವಿಘ್ನ | ನೀನೆಸಗಬಹುದೇ 1 ಸತಿ ನೀನಚಿಂತ್ಯನು ಯೆನಗ | ದೇನು ಚಿಂತೆಗಳೂ 2 ಕಪಟ ನಿನ್ನಂತೆ ಯೆನ್ನನು ಸದಾನಂದನೆನಿಸೋ 3
--------------
ಸದಾನಂದರು
ಲೇಸಾಗಿ ಭಜಿಸುವೆ ಗೋಪಾಲದಾಸರ ರಾಶಿ ದುರಿತಂಗಳಾ ಪ ವಾಸವಾ ಪಿಡಿದ ವಜ್ರವೀಗಿರಿಯಂತೆ ನಿಶ್ಶೇಷದಿ ಭೇದಿಪರೊಇವರು ಅ.ಪ. ಸತಿ ಗಿರಿವಾಸ ನಾಮಕಳಾ ಸುರುಚಿರೋದರವೆಂಬೊ ಶರನಿಧಿಯಲ್ಲಿ ಚಂದಿರನಂತೆ ಉದಿಸಿಹರೋ ಇವರು 1 ಸದಮಲಮನದಲ್ಲಿ ಪದುಮನಾಭನ ನಾಮ ಪದೋಪದಿಯಲ್ಲಿ ಬಿಡದೇ ಪದರೂಪದಲ್ಲಿ ಪೊಗಳುವೊ ಸುಜನರಿಗೆ ಮೋಹವನುಣಿಸುತಿಹರೊ ಇವರು 2 ವಿಜಯದಾಸರೇ ತಮ್ಮ ನಿಜಗುರುಗಳೂ ಎಂದು ಭಜಿಪರೋ ಭಕುತಿಯಲ್ಲಿ ದ್ವಿಜವರ್ಯ ಜನಕಿಷ್ಟ ಸೃಜಿಸೋರು ಕಲ್ಪ ಭುಜದಂತೆ ನಿರುತದಲ್ಲಿ ಇಲ್ಲಿ 3 ತೊಂಡ ಪ್ರಹ್ಲಾದ ಪ್ರಿಯನ ಮಂಡಲ ಯತಿಗಳ ಬೆಳೆಪ ಯಾತ್ರೆಗಳ ಕೈಕೊಂಡು ಸೇವಿಸುತಿಹರೊ ಇವರು 4 ಭಕುತಿ ಪ್ರಾಚುರವಾಗೆ... ಹರಿನಾಮಪ್ರಕಟಿಸಿ ಕವನದಿಂದಾ ನಿಖಿಳಾಭೀಷ್ಟವನೀವ ಲಕುಮೀಪತಿಯೇ ಎಂದು ಭಕುತಗೆ ಬೋಧಿಪರೊ ಇವರು 5 ಆವಾವ ಕ್ರಿಯೆಗಳಲ್ಲಾವಾವ ಕಾಲದಿ ತಾವದಗಿನ್ನು ಹರಿಕಾವ ಸುಜೀವರ ಈ ವಿಧವೆಂದು ತನ್ನವರಿಗುಪದೇಶಿಪಾ6 ಭವ ತೋಯದಿ ಕಡೆಗೆತ್ತುವಾ . 7 ಸುಜನ ಜನರ ಕಾಯಕ್ಲೇಶವ ಕಳೆದು ಮಾಯಾರಮಣನ ವಲಿಸುವಂಥ ದಿವ್ಯ ಉಪಾಯವ ತೋರಿಪರೊ ಇವರು 8 ಮಂದ ಮನುಜ ನಾನು ಒಂದೊಂದಿವರ ಗುಣವೃಂದ ಪೊಗಳಲೊಶವೇ ತಂದೆ-ವರದಗೋಪಾಲವಿಠ್ಠಲನ ಹೊಂದಿ ಸೇವಿಪ ಗುರುವೇ 9
--------------
ತಂದೆವರದಗೋಪಾಲವಿಠಲರು
ಲೋಕ ನಾಯಕ ಲಕ್ಷ್ಮೀಲೋಲನಾ ಸ್ಮರಣೆ ಬಿಟ್ಟೂ ಪ ವಿದಿ ಮುನ್ನೆ ಬರದಿಷ್ಟಾ ಯಡಿಯಾತಪ್ಪಾದು ತುದಿಮೊದಲಿಂದಾ ಮಾಡಿದ ದೋಷವೆಲ್ಲಾ ಬೆದರಿಸಿದರೆ ಅದು ಬಿಡಲು ಬಲ್ಲುದೆ ಕೇಳೂ ಪಾದ ಭಜನಿಯ ಬಿಟ್ಟು 1 ನಾನಾಪರಿಯ ಮನಸೂ ನಟಿಸುವದಲ್ಲಾದೆ ಏನು ಎಲ್ಲವೂ ವ್ಯರ್ಥಾ ವೇದನೆ ನಿಂದೆ ನೀನು ಮಾಡಿದಾ ಫಲ ನಿನಗುಣಿ ಸದೆ ಬಿಡದೂ ಮಾನವಾಧೀಶನಂಘ್ರಿ ಧ್ಯಾನವೆಂಬುದು ಬಿಟ್ಟು 2 ಸಕಲಕೆ ಕರ್ತನಾಗಿ ಸರ್ವೋತ್ತಮನಿರಲು ಭಕುತಿ ಭಾವನೆಯಿಂದ ಭಜಿಸಾದೆ ನಿ ವಿಕಟಯೋಚನೆಯಿಂದ ಏನುಫಲವು ಇಲ್ಲಾ ನಿಕರ `ಹೊನ್ನೆಯ ವಿಠ್ಠಲನ ' ನಾಮೋಪಾಸನೆ ಬಿಟ್ಟು 3
--------------
ಹೆನ್ನೆರಂಗದಾಸರು
ಲೋಕಕ್ಕೆ ನೀ ತಾಯಿ ಲೋಕಕ್ಕೆ ನೀ ತಂದೆ ಸಾಕುವಾಕೆಯೆ ನೀನು ಲೋಕಕ್ಕೆ ನೀ ತಾಯಿ ಪ ಬೇಸರಿಸಿ ಧರಿಸಿದಳು ಜನನಿ ಎನ್ನನÀು ದಶ- ಮಾಸ ಗರ್ಭದೊಳಿದ್ದು ಬಹಳ ಬಳಲಿದೆನು ಹೇಸಿಕೆಯ ವಿಣ್ಮೂತ್ರ ರಾಶಿಯೊಳುಗುದಿಸಿದರೆ ಆಸುರದಿ ಕೈಯೆತ್ತಿ ಪಿಡಿದು ರಕ್ಷಿಸಿದೆ1 ಮಲ ಮೂತ್ರ ಮೈಲಿಗೆಯ ಮೈಯೊಳಗೆ ಧರಿಸಿದರು ತಿಲ ಮಾತ್ರ ಹೇಸಿದೆಯ ಎನ್ನೊಳಗೆ ನೀನು ಜಲಜಮುಖಿ ಎನ್ ತಾಯಿ ಎಲೆಯ ಓಗರವಿಟ್ಟು ತೊಳೆದ ಹಸ್ತದಿ ಎನಗೆ ಕೊಳೆಯನಿಕ್ಕಿದಳು 2 ಮಗುವೆಂದು ಯೋಚಿಸದೆ ಉಗುಳುತ್ತ ಎಂಜಲನು ಒಗೆದು ಬೀಸಾಡಿದಳು ಎಡದ ಹಸ್ತದಲಿ ಜಗಳವಾಡಲು ಪಿತನು ಮಗನ ಮೋಹದ ಮೇಲೆ ತೆಗೆಯಬಾರದೆ ಮಲವನೆಂದು ಜರೆÀದಪಳು3 ಪಡೆದ ತಾಯ್ತಂದೆಗಳು ಅಡಗಿ ಹೋದರು ಎನ್ನ ಬಿಡದೆ ಸಲಹಿದೆ ನೀನು ಪೊಡವಿ ದೇವತೆಯೆ ಕಡೆಗಾಲದೊಳು ಕೈಯ ಪಿಡಿದು ರಕ್ಷಿಸದೆನ್ನ ಒಡಲ ದುಃಖವ ನೋಡಿ ನುಡಿಯದಿರಬಹುದೆ 4 ಬಲವಾಗಿ ಕೈವಿಡಿದೆ ವರಾಹತಿಮ್ಮಪ್ಪನಿಗೆ ಗೆಲವಿಂದ ಭೂರಮಣನೆನಿಸಿ ಮೆರೆವ ಜಲಜನಾಭನೆ ಎನ್ನ ಪಿತನು ಮಾತೆಯು ನೀನು ಸುಲಭದೊಳು ಮೈದೋರು ಫಲಿತವಹ ಪದವ 5
--------------
ವರಹತಿಮ್ಮಪ್ಪ
ಲೋಕದವರ ತಳ್ಳಿ ಕಾಲಿಗೆಸುತ್ತಿದ ಬಳ್ಳಿ ಶೋಕಮಯಸಂಕೋಲೆ ಸಾಕು ಹರಿ ಕಡಿ ಕೀಲಿ ಪ ದಮ್ಮನಿದ್ದರೆ ಠೊಣ್ಯನೆಂಬುವರು ತೆಳ್ಳಗಿದ್ದರೆ ಬಡಕನೆಂಬುವರು ರಮ್ಯನುಡಿಯೆ ಬಾಯ್ಬಡಕನೆಂಬುವರು ಸುಮ್ಮನಿದ್ದರೆ ಗುಸುಕನೆಂಬುವರು 1 ಜಮ್ಮಾಸಿ ಉಂಡರೆ ಜೋಗಿಯೆಂಬುವರು ಕಮ್ಮಿ ಉಂಡರೆ ರೋಗಿಯೆಂಬುವರು ದಿಮ್ಮಾಕೆಂಬುವರು ಜಳಜಳವಿದ್ದರೆ ಸಮ್ಮತಬಡರು ಹೊಲಸುಕಂಡರೆ 2 ಮಾಡಿ ಉಂಡರೆ ನೋಡಿ ಸಹಿಸರು ಬೇಡಿ ಉಂಡರೆ ಹೇಡಿಯೆಂಬುವರು ಗಾಢಮುಕ್ತಿಪದ ಕೊಡುವ ಶ್ರೀರಾಮನ ಹಾಡಿ ಪಾಡಿದರೆ ನಿಂದೆ ಮಾಡುವರು3
--------------
ರಾಮದಾಸರು
ಲೋಕನೀತಿ 1 ಕಾಮಧೇನು ಕಲ್ಪತರು ಕಾಮಿತಾರ್ಥವನೀವ ಹರಿಯೇ ಎನಗಿರೆ ಎನಗ್ಯಾತಕೆ ಚಿಂತೆ ಕಾಮಿತಾರ್ಥವನೀವ ದೊರೆಯಿರಲು ಯನಗ್ಯಾತರ ಕೊರೆತೆ ಹರಿಕಾವದೇವ ನೀನಿರಲು ಕೋಳಿ ತನ್ನ ಮರಿಗೆ ಹಾಲುಕೊಟ್ಟು ಸಾಕುವದೆ ಕಾಳ ರಾತ್ರಿಯು ಕಳೆದು ಹರಿ ಉದಿಸುವನೆಂದು ಕೋಳಿಕೂಗಿದರೂ ಏಳದೆ ಮಲಗಿ ಕಾಲಕಳೆವರು ಮನುಜರುಹರಿಯೆ ಕಾಲಕೂಟ ಸಮ ಕಾಮಿತಾರ್ಥವ ಬೇಡುವರು ಕಾಲದೂತರು ಬರುವ ವ್ಯಾಳೆತನಕ ನಿನಧ್ಯಾನಿಸದೆ ಕಾಲಕಳೆವರು ಮನುಜರು ಕಾಲಮೂರುತಿ ನೀನೆ ಎಂದರಿಯರು ಹರಿ ಕಾಲ ಅಕಾಲ ನಿನಗುಂಟೆ ಎನಗುಂಟೆ ದೇವ ನೀ ಎನಗೆ ಇಂಥಾ ಕೀಳು ಬುದ್ಧಿಯ ಕೊಡದಿರೊ, ಏಳು ಬೆಟ್ಟದ ಒಡೆಯ ಶ್ರೀ ಶ್ರೀನಿವಾಸ 2 ಬೆಳಗೆದ್ದು ಹರಿ ನಿನ್ನ ಧ್ಯಾನಿಸದೆ ಪರಧ್ಯಾನ ಪರನಿಂದೆಯಲ್ಲಿಹರು ನಿತ್ಯ ನಿನ್ನ ಧ್ಯಾನ ಬಿಟ್ಟು ಬೆಳಗಾಗೆ ನಿನ್ನ ಸೂರ್ಯರಶ್ಮಿ ಬಿದ್ದರೂ ಏಳರು ಶಯನ ಬಿಟ್ಟು ಈ ಜಗದಿ ದೇವ ಈ ಕಲಿ ಜನರು ಇಂಥಾ ಬೆಳಗ ಎನಗೀಯದೆ ನೀ ಎನ್ನೊಳಗಿದ್ದು ಬೆಳಗಿನ ಜಾವದಿ ನಿನ್ನ ಕಳೆಕಳೆರೂಪ ಎನಗೆ ತೋರೋ ಘಳಿರನೆ ಶ್ರೀ ಶ್ರೀನಿವಾಸ 3 ಎರಡನೆ ಜಾವದಲಿ ಹುಂಜ ಹರಿಪೂರ್ವದಲಿ ಬರುವ ಏಳಿರೆಂದು ಕೂಗಲು ಸತಿ ಸಹಿತ ಕಾಮಕೇಳಿಯಲಿಹರು ಮೂರನೆ ಝಾವದಲಿ ಹರಿ ಉದಿಸಿ ಬ್ರಾಹ್ಮೀಮುಹೂರ್ತದೊಳು ಹರಿ ಬೆಳಕೀವ ಲೋಕಕೆ ಎಂದು ಕೂಗುವುದು ಕೋಳಿ ಕೇಳಿ ಕರ್ಣದಲಿ ಶಯನ ಬಿಟ್ಟೇಳರೊ ಈ ಜಗದಿ ಮೂರೆರಡು ಶತಶ್ವಾಸ ಜಪ ಮಾಡಿಸುವ ಹರಿಭಕ್ತ ಹನುಮನೆಂದರಿಯದೆ ಮಲಗಿ ಕಾಲ ಎರಗಿ ಬರುವುದು ಆಯುಷ್ಯವೆಂದರಿಯದೆ ಭಾರತೀಪತಿ ಅಂತರ್ಯಾಮಿ ನಿನ್ನಧ್ಯಾನಿಸದೆ ಇಹರಲ್ಲೋ ಈ ಜಗದಿ ಶ್ರೀ ಶ್ರೀನಿವಾಸ ಎನ್ನ ನೀನವರ ಸಂಗ ಸೇರಿಸದೆ ಕಾಯೊ ಹರಿಯೆ ಎನ್ನ ದೊರೆಯೆ 4 ಸೂರ್ಯನಂತರ್ಯಾಮಿ ನೀನಲದೆ ಮತ್ಯಾರಿಹರು ಹರಿ ಸೂರ್ಯಾಂತರ್ಗತ ಸೂರ್ಯನಾರಾಯಣ ಸೂರ್ಯಕೋಟಿ ತೇಜದಿ ಮೆರೆವೆ ಸೂರ್ಯ ಸಹಸ್ರ ಉದಿಸಿದಂತೆ ಬರುವೆ ಕರ್ಮ ನೀ ಮಾಡಿಸಿ ಪೆರ್ಮೆಯಿಂದವರ ಕಾಯ್ವ ಶರ್ವಾದಿವಂದಿತ ಗರ್ವರಹಿತ ವೈಕುಂಠಪತಿ ನೀ ನಿನ್ನವರ ಕಾಯಲು ಸರ್ವದಾ ಅವರಿಗೆ ವಲಿದು ಕಾವೆ ಆದಿನಾರಾಯಣ ಶ್ರೀ ಶ್ರೀನಿವಾಸ ಕಾಯೆನ್ನ ಸೂರ್ಯಾಂತರ್ಗತ ವೆಂಕಟೇಶಾ 5 ಹಗಲಿರುಳು ಎನ್ನದೆ ನಿನ್ನ ಸ್ತುತಿಪರು ಭಕ್ತರು ಅಘಹರನೆ ನಿನ್ನ ಪ್ರೇರಣೆಯಿಂದಲವರಿರಲು ಬಗೆಬಗೆಯ ರೂಪದಿ ಬಂದವರ ಸಲಹುವೆ ನಗೆ ಮೊಗದ ಶ್ರೀ ರಮೆಯರಸ ಲಕ್ಷ್ಮೀಶ ನಿನ್ನ ಬಗೆ ಅರಿತಿಹರಾರಿರೀಜಗದಿ ಪಗಲಿರುಳೆನ್ನದೆ ನೀನವರಲ್ಲಿದ್ದು ಸಲಹಲು ಬಗೆವರೆ ಅನ್ಯರಿಗೆ ಅಲ್ಪರಿವರೆ ನಿನ್ನವರು ಜಗದಾಖ್ಯ ವೃಕ್ಷನೀನಿರಲು ನಿನ್ನ ಭಕ್ತರು ನಿನಗಲ್ಲದೆ ಜಗದೊಡೆಯ ಶ್ರೀ ಶ್ರೀನಿವಾಸ
--------------
ಸರಸ್ವತಿ ಬಾಯಿ