ಒಟ್ಟು 149 ಕಡೆಗಳಲ್ಲಿ , 43 ದಾಸರು , 144 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಕೇಳು ಕೇಳು ಕೇಳು ಮನವೇ ನಿನ್ನ ಸ್ವಹಿತವನು ಪ ಕೇಳು ಕೇಳು ಕೇಳು ಮನವೇ ನಿನ್ನ ಸ್ವಹಿತವನು | ಬಾಳು ಬಾಳು ಬಾಳು ಗಳದು ಭವದ ಬೆಜ್ಜರವನು 1 ನೀಗು ನೀಗು ನೀಗು ನೀ ದುಸ್ಸಂಗಾ ಜಗದೊಳಗೆ | ಬೇಗ ಬೇಗ ಬೇಗ ಹೊಕ್ಕು ಶರಣಾಗು ಗುರುವಿಗೆ 2 ಬಾಗು ಬಾಗು ಬಾಗು ಗರ್ವ ತ್ಯಜಿಸಿ ಜಗದೊಳಗೆ | ಸಾಗು ಸಾಗು ಸಾಗು ಸಿಕ್ಕಿದೆ ಆರು ಅರಿಗಳಿಗೆ 3 ದಾರಿ ದಾರಿ ದಾರಿ ವಿಡಿದು ನಡೆಂದ ಹಿರಿಯರಾ | ಸೇರಿ ಸೇರಿ ಸೇರಿ ಸಂತ ನೆರಿಯ ನಿರಂತರಾ 4 ನಂಬಿ ನಂಬಿ ನಂಬಿ ನಂದನಸ್ವಾಮಿ ಮಹಿಪತಿಯಾ| ಇಂಬು ಇಂಬು ಪಡೆದರಹುದು ನಿಜಗತಿಯಾ 5
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಕೈಕೊಂಡ - ನೃಹರಿ ಕೈಕೊಂಡ ಪ ಕೈಕೊಂಡ ಪೂಜೆಯ ನೃಹರಿ | ತ್ರೈಲೋಕ್ಯಕನಾಥನು ಅಸುರಾರಿ | ಆಹತೋಕನ ಸಲಹಲು | ಏಕಮೇವನ ಲೀಲೆಕೈಕೊಂಡ ಅವತಾರ | ಆ ಕಂಬೋದ್ಭವನಾಗಿಅ.ಪ. ಭಕ್ತಿ ಭಾವದಿ ಪರಾಶರ | ಬಹುತಪ್ತ ಭಾವದಿ ಕೃಷ್ಣೇ ತೀರ | ದಲ್ಲಿಸಕ್ತನಿರೆ ಧ್ಯಾನ ಗೋಚರ | ನಾಗಿವ್ಯಕ್ತನು ಷೋಡಶಕರ | ಆಹದೃಪ್ತ ದಾನವ ಧ್ವಂಸಿ | ದೀಪ್ತಾನಂತ ತೇಜಮೂರ್ತಿ ಕಾಣಿಸಿದನ | ವ್ಯಕ್ತನಾಗಿದ್ದಂಥ 1 ಕಟಿಸೂತ್ರ ಸ್ಮರ ಕೋಟಿ ಲಾವಣ್ಯಕರ ಪಾಶ ಅಸಿಕುಂತ | ವರದಾ ಭಯವು ಹಸ್ತ 2 ಕಂಬು ಚಕ್ರ ಚರ್ಮಕರ | ಮತ್ತೆಅಂಬುಜ ಶಾಂಙÁ್ರ್ಞದಿಧರ | ಗದಸಂಭೃತ ತುಳಸಿಯ ಹಾರ | ಮತ್ತೆಇಂಬಿನ್ವ್ಯೊ ಜಯಂತಿ ಹಾರ | ಆಹಅಂಬುಜದಳ ನೇತ್ರ | ಇಂಬಾಗಿ ಕರಪಾತ್ರತುಂಬ ಪೀಯುಷಧಿ | ಪೊಂಬಸಿರ ವಂದ್ಯನು 3 ಶ್ರೀವತ್ಸ ಲಾಂಛನ ಭೂಷ | ತನ್ನಭ್ರೂವಿಲಾಸದಿ ಬ್ರಹ್ಮ ಈಶ | ರಿಗೆತಾವೊಲಿದೀವ ಆವಾಸ | ಯೆನುತವ ವೇದಂಗಳು ಅನಿಶ | ಆಹಮಾವಿನೋದಿಯ ಗುಣ | ಸಾವಕಾಶಿಲ್ಲದೆಸಾರ್ವದ ಪೊಗಳುತ್ತ | ಭಾವದೊಳ್ಹಿಗ್ಗುವವು 4 ಪೊತ್ತು ರೂಪವ ಬಲಪಾದ | ಚಾಚುತ್ತ ರಕ್ಕಸನೊಡಲಗಾಧ | ಇಟ್ಟುವತ್ತುತ ತೊಡೆಯಲ್ವಿನೋದ | ದ್ವಯಹಸ್ತ ನಖದಿ ಉದರ ಬಗೆದ | ಆಹಕಿತ್ತುತ ಕರುಳನ್ನ | ಕತ್ತಿನೊಳ್ಹಾಕುತಭಕ್ತನ ಸಂಬಂಧ | ಎತ್ತಿ ತೋರ್ದ ಜಗಕೆ 4 ಪಂಚ ಮೋಕ್ಷಪ್ರದ ಹರಿ | ಆಯ್ತುಪಂಚಾಮೃತಭಿಷೇಕ ಅವಗೆ | ಮತ್ತೆಪಂಚಕಲಶಾರ್ಚನವು ಆವಗೆ | ಆಯ್ತುಪಂಚ ಕುಂಭಾಭಿಷೇಕವಗೆ | ಆಹಸಂಚಿಂತಿಸುತ ಹೃ | ತ್ಪಂಕಜದೊಳು ನೋಡೆಸಂಚಿಂತಾಗಮ ನಾಶ | ಕೊಂಚವು ಪ್ರಾರಬ್ಧ 6 ಶಾಲಿಗ್ರಾಮದ ಶಿಲ ಏಕ | ಪೊತ್ತುಪೋದಕ ಬಾಹು ಅಲೀಕ | ಶತಶಾಲೀವಾಹನವೆಂಬ ಶಕ | ದೊಳುಜ್ವಾಲಾ ನರಹರಿ ನಾಮಕ | ಆಹಯೇಳು ಐದೊರ್ಷದ | ಭಾಳ ತಪಕೆ ಮೆಚ್ಚಿಶೀಲ ದ್ವಿಜ ದಂಪತಿ | ಗೊಲಿದು ಪೇಳಿದ ಹೀಗೆ 7 ಭೀಮಕ ರಾಜಗೆ ಪೇಳು | ತೃಣಜಾಲವ ಹಾಕೆ ನೀರೊಳು | ಅಲ್ಲಿಜ್ವಾಲೆ ಉದ್ಭವಿಸಲು ಬಲು | ನೀರಮೇಲಕ್ಕೆ ಒಳಗಿಂದ ಬರಲು | ಆಹತೋಳೆರಡಲಿ ರಾಜ | ಮೇಲೆತ್ತೆ ಬರುವನುತಾಳ ಮೇಳ್ವೈಭವ | ದೊಳಗೆ ಸ್ಥಾಪಿಸಲೆಂದು 8 ಅಂಗಹೀನರೆ ಕೇಳಿ ಆವ | ನಿಮ್ಮಭಂಗಿಪ ಮೂಕಾಂಧ ಭಾವ | ನೀಗಿಶೃಂಗಾರ ರೂಪ ಸ್ವಭಾವ | ನರಸಿಂಗ ಕೊಡುವೆನು ಸೇವ | ಆಹ ಹಿಂಗದೆ ಕೊಡುವೆನು | ಅಂಗಜ ಪಿತ ನರಸಿಂಗಪುರವೆಂದು | ಸಂಗೀತವಾಗಲಿ 9 ವತ್ಸರ ಸೌಮ್ಯವು ಪುಷ್ಯ | ದಿನದರ್ಶ ವ್ಯಾಸತೀರ್ಥ ಶಿಷ್ಯ | ಆದರ್ಶ ದಾಸರ ದಿನ ಭವ್ಯ | ಭಕ್ತವತ್ಸಲ ಸ್ವೀಕಾರ ಆಲ್ಪ್ಯ | ಆಹಉತ್ಸವ ಕೊಳ್ಳುತ | ಉತ್ಸಾಹವೆನಗಿತ್ತುಮತ್ಸ್ಯಾದಿ ದಶರೂಪಿ | ಕೃತ್ಸ್ನ ಕಾರುಣ್ಯನು 10 ಪರಾಶರಗೊಲಿದ ಸುಶೀಲ | ಖಗವರನು ಭೂದೇವಿಯು ಬಲ | ಎಡವರಲಕ್ಷ್ಮೀ ಪ್ರಹ್ಲಾದ ಬಾಲ | ಸುರವರರಿಂದ ಸ್ತುತ್ಯ ವಿಶಾಲ | ಆಹಗುರು ಗೋವಿಂದ ವಿಠ್ಠಲ | ಗುರು ಬಿಂಬ ನರಸಿಂಗಶರಣರ ಅಪಮೃತ್ಯು | ಹರಿಸಿ ಸಂತತ ಕಾಯ್ವ11
--------------
ಗುರುಗೋವಿಂದವಿಠಲರು
ಕೊಂಬುವರಿಲ್ಲೆನ್ನ ಸರಕ | ಇಂಬಿಲ್ಲ ಇಡಲಿಕ್ಕೆ |ಹೂರಲಾರೆ ಮುದುಕ ನಾ ಪ ಸುರರು ಸೇವಿಸಲಿನ್ನು | ಸೆರೆ ಸಿಕ್ಕಿರುವರಲ್ಲಾ | ಧರೆಯೊಳು ಲೋಗರಿಗೆ |ಗುರುತಿಲ್ಲಾ ಇದರೊಳು 1 ಕೊಂಡವರಿಗೆ ಲಾಭವು ಒಂದಕ್ಕೆ ನಾಲ್ಕು | ಇಸಗೊಂಡವರಿಗೆಂಟು ಮಡಿಯಹುದು || ಪುಂಡತನದಲಿ ಕಸಗೊಂಡೇನೆಂದವರಿಗೆ | ಮಂದಮತಿಗಳಿಗೆಂದಿಗೂ ದೊರೆಯದು 2 ತಂದೆ ಸದ್ಗುರು ಭವತಾರಕನ ಭಜಕ- | ರಿಂದು ಈ ವಾರ್ತೆಯನು ಕೇಳಿದರೆ | ಬಂದು ವಂದಿಸೆನ್ನ || ಆನಂದವ ಬಡಿಸುವರು | ಎಂದು ಆಗುವದೋಹಾಗೆಂದು ಯೋಚಿಸುವೆ 3
--------------
ಭಾವತರಕರು
ಕ್ಷೇತ್ರ ದರ್ಶನ ಉಡುಪಿಯ ಯಾತ್ರೆಯ ಮಾಡಿ - ಉಡುಪಿಯಾ ಪ ಉಡುಪಿಯ ಯಾತ್ರೆಯನ್ನೆ ಮಾಡಿ | ಭಕ್ತಿಮುಡುಪಿತ್ತು ಪ್ರಮೋದ ಬೇಡಿ | ಆಹನಡುದೇಹ ದೋಳೀಹ | ನಡುನಾಡಿ ಕಮಲದಿಒಡೆಯ ಶ್ರೀ ಕೃಷ್ಣನ್ನ | ಧೃಡ ಭಕ್ತಿಯಿಂ ಭಜಿಸಿ ಅ.ಪ. ಆನಂದ ತೀರಥ ಸರಸಿ | ಯೊಳುಮೀನನಾಗಿ ಬಹು ಈಸಿ | ಹರಿಧ್ಯಾನದಿ ಸ್ನಾನ ಪೊರೈಸಿ | ಮತ್ತೆಮೌನವೆಂಬಾಸನ ಹಾಸಿ | ಆಹಮೂಧ್ರ್ನಿ ಲಲಾಟದೋಳ್ | ಗೋಣು ಮಧ್ಯೋದರಸ್ಥಾನಾದಿಯಲಿ ಹರಿ | ಧ್ಯಾನ ನಾಮವ ಹಚ್ಚಿ 1 ಮಧ್ವ ಕಿಂಕರನೆಂಬೊ ದೊಂದು | ಹರಿವಿದ್ವೇಷಿಗಳ ಬಡಿವೊದೆಂದು | ಮತ್ತೆಸದ್ವೈಷ್ಣವರ ಸೇರ್ವೋದೊಂದು | ಇನ್ನುಬುದ್ಧಿಪೂರ್ವಕ ಹರಿ ಪರನೆಂದು | ಆಹಶ್ರದ್ಧಾಳು ವೆಂದೆನಿಪ | ಮುದ್ದು ಮುದ್ರೆಗಳೈದುತಿದ್ದಿ ವಿಸ್ತರಿಸೂತ | ಕೃದ್ದೋಲ್ಕಾದಿಯನೆನೆ 2 ಸಂಧ್ಯಾ ಮೂಡಿಹುದು ನೀ ನೋಡು | ಕಾಲಮುದ್ಹಿಂದಾಗದಲೆ ನೀ ಮಾಡು | ಯಾವದೊಂದು ಮಂತ್ರಾರ್ಥವ ನೋಡು | ಇನ್ನುಸಂಧ್ಯಾ ನಾಮಕನ ಕೊಂಡಾಡು | ಆಹಛಂದದಿ ನಿನ ಜ್ಞಾನ | ಮುಂದು ಮುಕ್ಕಿಲು ಒಪ್ಪಮಂದೇಹ ದೈತ್ಯರ | ಮಂದಿಯ ಕೊಲ್ಲುತ 3 ಕಂಟಕ ಕಳೆದು ಶರೀರ | ಮಧ್ಯಮಂಟಪ ಚಿಂತಿಸೊ ಧೀರ | ಅದಕೆಎಂಟರ್ಧ ಮತ್ತೊಂದು ದ್ವಾರ | ಕಾಯ್ವಭಂಟ ಮಾರುತನ ವ್ಯಾಪಾರ | ಆಹಎಂಟ್‍ಟಾರು ನಾಲ್ಕು ಸ್ತಂಭ ಮಧ್ಯದಿ ಲಕ್ಷ್ಮಿಮಂಟಪ ಚಿಂತಿಸಿ ಒಂಟಿಯಾಗೊ ಮನದಿ 4 ಕೆಳ ಮುಖಾಬ್ಜವನೇ ನೀ ನೋಡೀ | ಮಂತ್ರಮೂಲದಿಂದ ಮೇಲು ಮಾಡಿ | ಅಲ್ಲಿಇಳೆಯಾಣ್ಮನನ ಚಿಂತೆ ಮಾಡಿ | ಸರ್ವಅಲಂಕಾರ ದಿಂದೊಡಗೂಡೀ | ಆಹನೆಲೆಸೀಹ ಕೃಷ್ಣನ್ನ | ಒಲಿಸೆ ಭಕ್ತಿಯಿಂದಸ್ಥಳ ತನ್ನ ಅರಮನೆ | ಯೊಳು ಕೊಟ್ಟು ಸಲಹುವ 5 ನಿತ್ಯ ಸ್ತವನ | ಆಹಇಂಬಿಟ್ಟು ಸ್ತೋತ್ರದಿ | ಉಂಬುಡುವೋ ಸರ್ವಬಿಂಬನೋಳರ್ಪಿಸಿ | ಸಂಭ್ರಮದಲ್ಲಿರು 6 ಮಧ್ವ ಸರೋವರ ಸ್ನಾನ | ಭಕ್ತಿಶುದ್ಧದಿ ಶ್ರೀಕೃಷ್ಣಧ್ಯಾನ | ಮಾಡೆಹೃದ್ಯನು ಹೃದ್ಯದಿಷ್ಠಾನ | ದಲ್ಲಿಸಿದ್ಧಿಸೂವನು ಗುಣ ಪೂರ್ಣ | ಆಹಮುದ್ದು ಕೃಷ್ಣನು ಗುರು | ಗೋವಿಂದ ವಿಠಲನುಶ್ರದ್ಧೆ ಸತ್ವಕ್ಕೊಲಿವ | ಸಿದ್ಧ ಕನಕನ ನೋಡಿ 7 ತೀರ್ಥ ಕ್ಷೇತ್ರ ಮಾಲಾ 1952 ರಲ್ಲಿ ಇಡೀ ಭರತ ವರ್ಷದಲ್ಲಿ ಪ್ರದಕ್ಷಿಣಾಕಾರವಾಗಿ ಹೊರಟು ಆಸೇತು ಹಿಮಾಚಲ ಪರ್ಯಂತವಿರುವ ಅನಂತ ತೀರ್ಥ ಕ್ಷೇತ್ರಗಳಲ್ಲಿ ಈ ಅಲ್ಪಾಧಿಷ್ಠಾನದ ಯೋಗ್ಯತಾಪ್ರಕಾರ ಬಿಂಬನು ಮಾಡಿ ಮಾಡಿಸಿದ ಯಾತ್ರಾ ಪ್ರಕರಣವೂ, ಮತ್ತೆ, 1954 ರಲ್ಲಿ ಉಡುಪಿ ಇತ್ಯಾದಿ ಪಶ್ಚಿಮ ಕ್ಷೇತಗಳ ಮತ್ತು 1957 ರಲ್ಲಿ ಮಲಖೇಡದಲ್ಲಿ ಬೃಹತೀ ಸಹಸ್ರವಾದಾಗ ಆಕಡೆ ಹೋದಾಗ ನೋಡಿದ ಅನೇಕ ಕ್ಷೇತ್ರಗಳ ಮತ್ತು 1961 ರಲ್ಲಿ ಸ್ವಾದಿ, ದ್ವಾರಕ, ಪುಷ್ಕರ, ಬದರಿ (ದ್ವಿತೀಯಾವರ್ತಿ) ಹೋಗಿ ಬಂದಾಗ ನೋಡಿದ ಯಾತ್ರಾ ಪ್ರಕರಣಗಳ ಜ್ಞಾಪಕಾರ್ಥವಾಗಿ ಈ ತೀರ್ಥಕ್ಷೇತ್ರಮಾಲಾ ಅಸ್ಮದ್ಗುರ್ವಂತರ್ಗತ ಬಿಂಬ ಮೂರುತಿ ಪ್ರೇರಿಸಿದಂತೆ ಬರೆಯಲ್ಪಡುತ್ತೆ :-
--------------
ಗುರುಗೋವಿಂದವಿಠಲರು
ಗೋಕುಲ ಬಿಟ್ಹ್ಯಾಂಗಿಲ್ಲಿಗೆ ಬಂದೆ ಶಿರಿಕೃಷ್ಣ ರಂಗಾ ವ್ಯಾಕುಲದಲಿ ನೀ ಸಾಗರ ತ್ಯಜಿಸಿ ಜೋಕೆಯಿಂದಲಿ ನಿಜಧಾಮಕೆ ಬಂದೆ ಪ ಬನ್ನವ ಪಡುತಿಹ ಭಕುತನ ನೋಡಿ ಚಿಂತೆಯ ಮಾಡಿ ಎನ್ನಂತರಂಗದ ಬಾಧೆಗಳು ಕಾಡೆ ಬಳಲುವುದಾ ನೋಡೆ ಮನ್ನಿಸಿ ಶರಣನ ಬಾಧಿಸುವ ಪೀಡೆ ಪರಿಹಾರ ಮಾಡೆ ಪನ್ನಗ ಶಯನ ಶ್ರೀಹರಿಯೇ ಓಡೋಡಿ ಬಂದೆ 1 ಪೊಕ್ಕಿಹೆನು ಸಂಸಾರಾರ್ಣವದೊಳಗೆ ಬಹು ದುಃಖದ ಅಲೆಗೆ ಲೆಕ್ಕವಿಲ್ಲದಾ ಜಂತುಗಳದರೊಳಗೆ ಇಂಬಿಲ್ಲಾ ಅಲ್ಲಿಡಿಂಬಕೆ ಸಿಕ್ಕಿ ಬಳಲುವಂಥ ಭಕುತನ ನೋಡಿ ಬಿಡುಗಡೆ ಮಾಡೆ ಅಕ್ಕರದಿಂದಲಿ ಭರದಿ ಕಾಪಾಡಲು ಬಂದೆ 2 ಶರಣರ ಪೊರೆಯುವುದೇ ನಿನ ಗುಟ್ಟು ಬಣ್ಣಿಸಲಿನ್ನೆಷ್ಟು ಕರುಣಿಸಿ ಬರುವಿ ಶಿರಿಯನು ಬಿಟ್ಟು ಭಕುತರೆ ನಿನಕಟ್ಟು ನಿರುಪಮ ನಿನ್ನಯ ದಯಕೇನೆನ್ನಲಿ ಶರಣರ ಪೊರೆಯುವಿ ನರಸಿಂºವಿoಲಾ ಬಂದೆ 3
--------------
ನರಸಿಂಹವಿಠಲರು
ಜ್ಞಾನವೆಂಬುದಕೇನು ಕ್ಷಣ ನಡಿಯು ಕಠಿಣ ಅನುಭವದ ನಿಜಖೂನ ಅಗಮ್ಯ ಸ್ನಾನ ಧ್ರುವ ಅಹಂ ಬ್ರಹ್ಮಾಸ್ಮಿ ಎಂಬ ಸೋಹ್ಯ ತಿಳುವದೆ ಗುಂಭ ಬಾಹ್ಯ ರಂಜನದೆ ಡಂಭ ದೇಹದಾರಂಭ ಸೋಹ್ಯ ತಿಳಿದುಕೊಂಬ ಗುಹ್ಯಗುರುತದ ಇಂಬ ಮಹಾಮಹಿಮೆಲೆ ಉಂಬ ಸಹಸ್ರಕೊಬ್ಬ 1 ಮೂರ್ತಿ ಶ್ರೀಪಾದ ಬೋಧ ಆದಿತತ್ವದ ಭೇದಿಸದಲ್ಲದ ಭೇದ ಮದಮತ್ಸರದ ಕ್ರೋಧ ಹಾದಿ ತಿಳಿಯದು ವಸ್ತುದ ಉದಯಸ್ತಿಲ್ಲದ 2 ಜ್ಞಾನಕ ಜ್ಞಾನೊಡಮೂಡಿ ಖೂನಕ ಬಾವ್ಹಾಂಗ ಮಾಡಿ ನಾ ನೀನೆಂಬುದು ಈಡಾಡಿ ಅನುಭವ ನೋಡಿ ಮನೋನ್ಮದ ನಡಿ ಅನುದಿನವೆ ಕೊಂಡಾಡಿಘನಕ ಮಹಿಪತಿ ನೀ ಕೂಡಿ ನೆನಿಯೊ ಬೆರೆದಾಡಿ 3
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಡಂಭ ತೋರಿದರೆ ಬಂತೆ ಇಂಬವಾಗದ ಗುಂಭಗುರುತ ಪಥ 1 ಶಬ್ದ ಜ್ಞಾನದಿಂದ ನಿಗಗೇನು ಲಬ್ಧ ಲಬ್ಧಾ ಲಬ್ಧ ತಿಳಿಯಗೊಡುದು ನಿನ್ನ ಪ್ರಾರಬ್ಧ ಧ್ರುವ ನೀರ ಕಡಿದರೆ ಬಂತೆ ಸಾರಸದ ನವನೀತ ಮಾರಪೀತನಂಘ್ರಿ ಗುರುತಾಗುದೇ ಹಿತ 2 ಹರಿವ ಮೃಗಜಲವಾಯಿತೆ ಅರಿತುಕೊಂಬಗೆ ಗಂಗಾಮೃತ ಅಮೃತ ಹಸ್ತ 3 ಮಣಿ ಆದೀತೆ ರಾಜಿಸುವ ನವರತ್ನ ನಿಜತತ್ವ ತಿಳಿಯುದೊಂದೇ ವಾಜಿಯ ಯತ್ನ 4 ಹೊಂದಿ ಬದುಕಿರೊ ಮಹಿಪತಿ ತಂದೆಯ ಗುರುಪಾದ ಬೋಧ 5
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಡಂಭಕ ಹರಿದೂರ ಪ್ರಾಣೀ ಪ ಅಂಬುಜನಾಭನ ಇಂಬನ ಪಡಿಯದೇ| ಡೊಂಬನ ಪರಿಯಾಚಾರ ಪ್ರಾಣೀ ಅ.ಪ ಅಬ್ಧಿಶಯನ ಸಿರಿನಾಥನ ಒಲುಮೆಯ| ಲಬ್ಧ ದೊರೆಯದೆ ವಿಚಾರಾ|| ಲಬ್ಧನಾಗಿ ಧನ ಮಾನಕಬಿಟ್ಟಿನೀ| ಶಬ್ದದಂಗಡಿ ಪ್ರಸರಾ|ಪ್ರಾಣೀ 1 ಪೊಡವಿಯೊಳಗ ಉಗ್ರಸಾಧನದಿಂದಲಿ| ಬಿಡದೆವೆ ತವಶರೀರಾ||ಒಡನೆ ಮರೆದು ರಿಧ್ಧಿಸಿಧ್ಧಿಯ ಬಲದಲಿ| ಹಿಡದಿ ಮನದಿ ಅಹಂಕಾರ|ಪ್ರಾಣೀ 2 ಅದಿತತ್ವದಾಗಲೆ ಸಾಧಿಸೇನೆಂದರೆ| ಸಾಧನ ಕೇಳು ಸುಸಾರಾ|| ಭೇದಿಸು ಮಹಿಪತಿ ನಂದನ ಸಾರಿದ| ಸಾಧು ರಾಶ್ರಯ ಮನೋಹರ|ಪ್ರಾಣೀ 3
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ತತ್ವಸುವಾಲಿಗಳು ಓಂಕಾರ ಪ್ರತಿಪಾದ್ಯ ಶ್ರೀಕಾಂತನೇ ನಿನ್ನ ಭವ ಭಂಗವ ಗೈಸಿ ಶುಭಾಂಗನೆ ಕಾಯಯ್ಯ ಶ್ರೀರಂಗ 1 ಕಾಲತÀ್ರಯಕೃತ ವಿಕಾರವಿಲ್ಲದೆ ನೀನೆ ಮೂಲರೂಪನೆ ಬಹು ರೂಪ-ಬಹುರೂಪ ಸ್ವಗತಭೇದ ವಿವರ್ಜಿಕನೆ ಸಲಹಯ್ಯ 2 ಆವಕಾಲಕು ನೀನೆ ಚತುರ ರೂಪದೊಳಿದ್ದು ಜೀವ ನಿಯಾಮನು ನೀನಾಗಿ-ನೀನಾಗಿ ವಿಶ್ವ ತೈಜಸ ಪ್ರಾಜ್ಞ ತುರ್ಯಾತ್ಮ3 ಶುಭ ವಿಷಯಂಗಳಾ ಮಾಡಿ ಉಣಿಸುವೆ 4 ವಿಶ್ವದಲಿ ವ್ಯಾಪಿಸಿಹೆ ವಿಶ್ವನಂಬೋರು ನಿನ್ನ ನಾಶರಹಿತನೆಂದೂ ನರನೆಂದೂ-ನರನೆಂದೂ ನಿನ್ನ ವೈಶ್ವಾನರನು ಎಂದು ಪೇಳ್ವಾರೊ 5 ಹರಿ ನಿನ್ನ ವಿಶ್ವನೆಂದು ಉಪಾಸನೆಯನು ಮಾಡಿ ಹೇರಂಬ ನಿನ್ನ ಒಲಿಸಿದಾ-ಒಲಿಸಿದಾ ಗಜವಕ್ತ್ರನಾಗಿ ನಿನ್ನ ಸ್ತುತಿಪಾನೋ 6 ದೇಹದೊಳು ಸ್ವಪನದಲಿ ನೀ ನೀಡಿ-ನೀ ನೀಡಿ ಜೀವರುಪಭೋಗಿಸುವ ಸಾರವನು ರಕ್ಷೀಪೆ 7 ತೈಜಸನೆ ವಾಸನಾಮಯವೆಲ್ಲ ತೋರೀಪೆ8 ತತ್ವಗಳ ವ್ಯಾಪಾರವೇ ವ್ಯಾಪಾರ9 ಸುಪ್ತಕಾಲದಿ ಜೀವ ಸ್ವರೂಪಕೆ ತಕ್ಕ ಕ್ಲುಪ್ತ ಅಜ್ಞಾನ ಮೊದಲಾದ-ಮೊದಲಾದ ಕಾಲವನನುಸರಿಸಿ ಜೀವನಿಗೆ ತನ್ನ ತಿಳಿಯಗೊಡದೆ 10 ಪ್ರಾಜ್ಞಮೂರುತಿ ನೀನೆ ಹೃದಯಸ್ಥಾನದೊಳಿದ್ದು ಅಜ್ಞಾನಿ ಜೀವನ ಕಾಲಾವ-ಕಾಲಾವ ನನುಸರಿಸಿ ಜೀವ ಸ್ವರೂಪಾನಂದವÀನು ನೀನೀವೆ11 ಸ್ವಪನ ಜಾಗ್ರತ ಜ್ಞಾನವಿನಿತಿಲ್ಲವೆಂದು ಕೂಡುವ ಜೀವ ಆನಂದ ಹಿಂದೆಂದೂ ಕಾಣನೊ12 ಘನ ಬಹಿ ಪ್ರಾಜ್ಞ ತೈಜಸಾಂತ ಪ್ರಾಜ್ಞ ಘನ ಪ್ರಾಜ್ಞ ಮೂರುತಿ-ಮೂರುತಿ ಗಳುಪಾಸನೆ ಮಾಳ್ವ ಬುಧರೇನು ಧನ್ಯರೊ 13 ನಾಗಿ ನೀ ಕೊಡುತಿರುವೆ ಮುಕ್ತರಿಗೆ ಆನಂದ 14 ಮುಕ್ತರಿಗೆ ದೃಷ್ಟನೋ ಅದೃಷ್ಟನೋ ಅ- ಗುರುಪ್ರಾಣನನುಗ್ರಹದಿ ಲಭ್ಯನಹುದಯ್ಯಾ ಹೇ ಜೀಯ 15 ಕಣ್ಮನ ಹೃದಯ ತ್ರಿಧಾಮಗಳಲ್ಲಿ ಇದ್ದು ಉಣಿಸೂವೇ ಜೀವರಿಗೆ ಫಲಭೋಗ-ಫಲಭೋಗವು ವಿಶ್ವತೈಜಸ ಪ್ರಾಜ್ಞ ಸ್ಥಿತಿಯೊಳು 16 ಸರ್ವರೂಪವು ಪೂರ್ಣ ಸರ್ವಗುಣ ಸಂಪೂರ್ಣ ಸರ್ವೋತ್ಪಾದಕ ಸುಖರೂಪಿ-ಸುಖರೂಪಿ ಸರ್ವಲೋಕ ಜೀವರೊಳಿದ್ದು ನಿರ್ಲಿಪ್ತಾ 17 ವರ್ಣತ್ರಯಯುತ ಓಂಕಾರದೊಳಾದ್ಯವರ್ಣ ವಿಶ್ವ ನೀನೆ-ವಿಶ್ವನು ನೀನೆ ಉಕಾರವೇ ತೈಜಸನು ಮಕಾರ ವಾಚ್ಯನೇ ಶ್ರೀಪ್ರಾಜ್ಞ 18 ನಾದದೊಳು ನೀ ವಾಚ್ಯ ತುರ್ಯರೆಂಬೋರು ನಿನ್ನ ಸದನವಾಗಿಹುದೈ ಶಿರಸ್ಥಾನ-ಶಿರಸ್ಥಾನ ನಾಶಿಕಾಗ್ರದಿ ಊಧ್ರ್ವ ದ್ವಾದಶಾಂಗುಲದಲ್ಲಿ ನೆಲೆಸಿರ್ಪೆ 19 ತೈಜಸನೊಡಗೂಡಿ ವಾಸನಾ-ವಾಸನಾಮಯ ಕಳೆವ ಅಜ್ಞಾನಿ ಜೀವನನ್ನಾಡಿಸುವೆ ಶ್ರೀಪ್ರಾಜ್ಞ 20 ಸರ್ವಶಕ್ತನು ನೀನೆ ಸರ್ವಕತರ್Àನು ನೀನೆ ಸವೋತ್ತಮನು ನೀನೆ ಸರ್ವಜ್ಞ-ಸರ್ವಜ್ಞ ಪೂರ್ಣಪ್ರಜ್ಞಾಂತರ್ಯಾಮಿ ಸಲಹಯೈ21 ಪಲವಿಲ್ಲ ವಾಸುದೇವನೆ ನಿನ್ನ ದಯ ಬೇಕೊ 22 ನೀ ಸುಮ್ಮನಿರದೆ ಎನ್ನನೂ-ಎನ್ನನು ಪ್ರೇರಿಸುವೆ ಲೇಸುಮನ ನಿನ್ನಲ್ಲಿ ನೆಲೆಸಲೋ 23 ಕಂಡಕಂಡಲ್ಲಿ ನಾ ಉಂಡುಂಡು ಓಡಾಡಿ ಧಾಂಡಿಗನಾಗಿ ಬೆಳೆದೆನೊ-ಬೆಳೆದೆನೊ ಪುಂಡರೀಕಾಕ್ಷ ನಿನ್ನ ಮರೆತೆನೋ24 ಅವಾವ ಕಾಲದೊಳು ನೀನಿದ್ದು ಉಣಿಸುವೆ ಜೀವಕೃತ ಕರ್ಮಫಲಗಳ-ಫಲಗಳ ಶ್ರೀ ವೇಂಕಟೇಶ ನೀನಿತ್ತು ಸಲಹೂವೇ 25 ವಂದನೆಯು ಒಂದೆ ಮನದಿಂದೆ-ಮನದಲಿ ನಿನ್ನ ಪಾದಾರವಿಂದವ ತೋರಯ್ಯ26 ಬಂಧುಗಳು ಹಿತರೆನ್ನೆ ಬಂಧಕರಾಗಿಹರು ಬಂಧನಕೆ ನಾ ಇನ್ನು ಸಿಲುಕಿದೆ 27 ಘನವಾಗಿ ತನು ಬೆಳೆಸಿ ಹಿತದಿಂದ-ಹಿತದಿಂದ ಮುಂದೆ ಪರಗತಿಯ ಕಾಣುವುದೆಂತೊ ಗೋವಿಂದ28 ವಿತ್ತಾಪಹಾರಕರು ಹೃತ್ತಾಪಕಳೆವರೆ ಉತ್ತಮಗತಿಯ ತೋರಿಸು29 ಹರಿಕಥಾಪುರಾಣಶ್ರವಣ ನಿತ್ಯದೀ ಮಾಡೀ ಪರಿಯಿಂದ ನಿಜತತ್ವವರಿಯಾದೆ-ಅರಿಯಾದೆ ಬರಿದೇ ವಿಪರೀತ ಜ್ಞಾನಕೆ ವಶನಾದೆ30 ಮದ್ಯ ತುಂಬಿದ ಭಾಂಡ ಗದ್ಗುಗೆಯ ಮೇಲಿಟ್ಟು ಶ್ರಧ್ದೆಯಿಂದಲಿ ಅದನ ಪೂಜಿಸೆ-ಪೂಜಿಸೆ ಪೂತÀ ದುರ್ಗಂಧ ಫಲವದು ಬಿಟ್ಟೀತೆ 31 ಮಂದಹಾಸದಿ ಜನರ ಸಂದೋಹದಲಿ ಕುಳಿತು ನಿಂದೆ ಮಾತುಗಳಾಡಿ ಮದತುಂಬೀ-ಮದತುಂಬಿಬಿದಾ ದುರ್ಮ ದಾಂಧರಿಗೆ ಗತಿಯು ಮುಂದೆ ಇನ್ನೆಂತೊ32 ಕಂಡಕಂಡವರಲ್ಲಿ ಕೊಂಡೆ ಮಾತುಗಳಾಡಿ ಪುಂಡರೀಕಾಕ್ಷ ನಿನ್ನ ಸ್ಮರಿಸಾದೆ-ಸ್ಮರಿಸದಲೆ ಪರದಿ ಯಮದಂಡಕ್ಕೆ ಗುರಿಯಾದೆ33 ಹಿಂದೆ ಮಾಡಿದ ಪುಣ್ಯದಿಂದ ಇಂದಿನ ಭಾಗ್ಯ ವೆಂದು ತಿಳಿದು ಮುಂದೆ ನಡೆಯಾದೆ-ನಡೆಯಾದೆ ತಿಳಿಗೇಡಿ ಬುದ್ಧಿಯಿಂದ ಕುಂದುಪೊಂದುವೆ 34 ಬಾಯಿಮಾತಲ್ಲ ಶ್ರೀ ತೋಯಜಾಕ್ಷನ ಭಕ್ತ- ರಾಯತನ ತಿಳಿವುದು ಶ್ರಮಸಾಧ್ಯ-ಶ್ರಮಸಾಧ್ಯ ವನು ಸದುಪಾಯದಿಂದ ತಿಳಿದು ನಲಿದಾಡೊ 35 ನಿಂದಕರ ನುಡಿಯಿಂದ ಹಿಂದೆ ಮಾಡಿದ ಪಾಪ ಒಂದೊಂದು ಪರಿಯಲ್ಲಿ ಪರಿಹಾರ-ಪರಿಹಾರವಾಗಿ ನಿಂದಕರು ಬಂಧನಕೆ ಬೀಳ್ವಾರೋ 36 ಸ್ಮøತಿಯುಕ್ತಿಯನೆ ಬಿಟ್ಟು ಯುಕ್ತಿಮಾತುಗಳಿಂದ ಹೊತ್ತು ಕಳೆಯುತ ಉನ್ಮತ್ತನೆನಿಸಿ-ಉನ್ಮತ್ತನೆನಿಸಿದವ ಇ- ನ್ನೆತ್ತÀ್ತ ಭವಶರಧಿಯ ದಾಟÀುವ 37 ಅರೆಘಳಿಗೆ ಕಳೆದುದಿಹ ನರಜನ್ಮ-ನರಜನ್ಮ ಬಂದುದು ನರಕಯಾತನೆಗಲ್ಲದಿನ್ನಿಲ್ಲ 38 ಪರಿಯಂತ ಉದರಭರಣಕಾಗಿ ಉದಧಿಶಯನ ನಾ ನಿನ್ನ ಭಜಿಸಾದೆ-ಭಜಿಸಾದೆ ಮದದಿಂದ ಬುಧಜನರ ನಿಂದೆಯ ಮಾಡೀದೆ39 ಇನ್ನಲ್ಲ ಪರಗತಿಯ ಸಾಧನ-ಸಾಧನವು ತನ್ನೊಳು ತÀನ್ನಿರವರಿತು ಸುಮ್ಮನಿರುವುದು ಅದು ನಿಧಾನ40 ಭಿನ್ನಧರ್ಮಂಗಳ ಗ್ರಹಿಸಾದೆ-ಗ್ರಹಿಸಾದೆ ನೀನೆಣಿಸಿದೆ ತನ್ನಗುಣಧರ್ಮದಂತನ್ಯರಿಹನೇನೊ 41 ಕಾಯವೇ ತಾನೆಂದು ಮಾಯಕೆ ಒಳಗಾಗಿ ಕಾಯಯಾತನೆಗೊಂಡು ನೋಯುವಾ 42 ವಚನ ವಚನವು ಸರ್ವ ಉಚಿತ ದೇಹದ ಕಾರ್ಯ ನಿಚಯದೊಳು ಹರಿ ಪ್ರಚುರನಾಗಿ-ಪ್ರಚುರನಾಗಿ ಕಾಯಕುಪಚಯವಿತ್ತು ಸಲಹೂವ 43 ದೇಹ ಕಾಯದ ಕಾರ್ಯಪ್ರಕ್ರಿಯವ ತಿಳಿಯಾದೆ ಮಾಯೆಗೊಳಗಾಗದಿರು ಹೇ ಮಾನವಾ-ಮಾನವನೆ ತಿ- ಳಿಯೊ ಮಾಯಾರಮಣನ ಬಿಂಬಕ್ರಿಯವಾ44 ಅನ್ಯರೊಳು ನೀ ಹೋರಾಡಬಲ್ಲೆಯ-ಬಲ್ಲೆಯಾ ನಿನ್ನ ವೈರಿಗಳ ಜಯಿಸಲರಿಯದ ಖೂಳ ರಣಹೇಡಿ 45 ಕೊಳೆತು ನಾರುವ ದೇಹದೊಳಗಿರುವ ಹುಳುಕುಗಳ ಕೊಳೆಯ ಕಳೆಯದ ಮನುಜ ನೀನೆಂತೊ-ನೀನೆಂತೊ ಕೊಳೆತÀ ಸಗಣಿಯೊಳಗಿಹ ಹುಳುವೆ ನಿನ್ನ ಗತಿಯೆಂತೊ46 ಆದದ್ದು ಆಯಿತು ಯತ್ನ ತಪ್ಪಿತು ಎಂದು ಹೆದ್ದಾರಿ ಹಿಡಿದು ಪರಮಾರ್ಥ-ಪರಮಾರ್ಥವ ಬುದ್ಧಿ ತಿದ್ದಿಕೊಳ್ಳಲು ಮುಂದೆ ಅನುವಾಗೊ47 ತತ್ತ ್ವದೇವತೆಗಳು ತತ್ತತ್ವಕಾರ್ಯಜಿ- ವೋತ್ತಮನಾಜ್ಞೆಯಿಂ ತಾವ್ ಗೈವರೊ-ತಾವ್‍ಗÉೈ ಯುತ್ತಲಿರೆ ನಾನೆತ್ತ ಮೃತ್ತಿಕಾಪ್ರತಿಮೆಯೋ48 ಒಂದೊಂದು ರೀತಿಯಿಂ ಚೆಂದಾಗಿ ಯೋಚಿಸು ಮಂದಮತಿಯು ನೀನು ಹಿಂದೆಂತೂ-ಹಿಂದೇನು ವಂದನೆಯೊಂದಲ್ಲದಿನ್ನಿಲ್ಲ49 ಡಾಂಭಿಕತನ ಬಿಟ್ಟು ಡಿಂಬದೊಳು ಸರ್ವದಾ ಅಂಬುಜನಾಭನೇ ಇಂಬಾಗಿ-ಇಂಬಾಗಿ ಸರ್ವತ್ರ ತುಂಬಿಕೊಂಡಿಹನೆಂದು ನಲಿದಾಡೋ 50 ತುಷ್ಟಿಯಾಗಿರು ನೀನು ಕೊಟ್ಟಷ್ಟು ಲಾಭಕ್ಕೆ ದುಷ್ಟವಿಷಯಗಳಿಗೆ ಎರಗಾದೆ-ಎರಗಾದೆ ಇರಲು ಸಂ- ತುಷ್ಟ ನಾಗುವನಯ್ಯ ಶ್ರೀಕೃಷ್ಣ51 ಕಾಯ ನಿನ್ನದು ಅಲ್ಲ ಮನವು ಅಧೀನವಲ್ಲ ಹೇಯವಿಲ್ಲದೆ ಮಾಯಕೊಳಗಾಗಿ ಮರುಳಾಗದಲೆ-ಮರುಳಾಗದಲೆ ಮಾಯಾರಮಣನ್ನ ನೆನೆಯೊ ನಿರ್ಭಯದಿಂದ 52 ಹಲವು ಶಾಸ್ತ್ರವ ನೋಡಿ ತಲೆಹರಟೆಯ ಬಿಟ್ಟು ಅಲವಬೋಧರ ತತ್ತ ್ವಸುಧೆಯನ್ನು- ಸುಧೆಯನ್ನು ಸವಿದು ನಿ-
--------------
ಉರಗಾದ್ರಿವಾಸವಿಠಲದಾಸರು
ತಾ ಕಾಯುತಿದ್ದ ಕೃಷ್ಣನು ಗೋಪಾಲರನೂಗೋಕುಲದಲ್ಲಿ ಗೂಢನೂ ಪುೀಕುಂಭಿನಿಯೊಳಗಿರುತಿಹ ದುಷ್ಟರನೂಕುವ ಬಿಲದಲಿ ಅನುಪಮ ಧೀರಾ ಅ.ಪಅಸಿತ ಪಕ್ಷವು ಬಂದುದೂ ಮಾಸಗಳೊಳುಎಸೆವೇಕಾದಶಿಯೆಂಬುದು ಬರಲು ಅಂದುಬಸವಾಸುರಾನಾ ಬಡಿದು ತಾನಂದು ವ್ರಜದಿ ವಸುಧೇಶ ನಿದ್ದನೊಲಿದು ಅಸುರನು ಅಳಿಯಲು ಆ ವ್ರಜವುಳಿಯಲು ಹಸುಗಳು ಹೆಚ್ಚಲು ಹರಿ ತಾನಲಿಯಲು ವಸಗೆವ್ರಜದೊಳಗೆ ಬಹುಮಸಗೆ ಹೆಸರಾಗೆ 1ದ್ವಾದಶೀ ದಿವಸಾದಲ್ಲಿ ಉದಯಕಾಲವಾದುದು ''ತದಲ್ಲಿ ಶ್ರೀಕೃಷ್ಣನಿಗೆಬೋಧವಾಗಲು ಬೇಗದಲಿ ಬಾಲರು ಸಹಾ ಮಾಧವಾ ಮುದದಿಂದಲಿಕಾದಿರೆ ಗೋವ್ಗಳ ಕಾನನಮಧ್ಯದಿಕಾದಲು ಬಂದಾ ಕೇಶಿಯನುದಯದಿಕಾದಿ ಅಸುವಸಿಗಿದಿ ವೊದ'ದೀ ಈ 'ಧದಿ 2ವೃಂದಾಖ್ಯವಾದವನಾದಿ ಗೋಪಾಲಕರಾ ವೃಂದದಾ ವರಸ್ತೋಮವಾಮದಿ ನಿಂದಿದ್ದನಾಗಾಕಂದರ್ಪಕೋಟಿತೇಜದಿ ಕುಂಭಿನಿಯನ್ನು ಹೊಂದಿಸಿದನು ಹರುಷದಿ ಮಂದರಧಾರನು ಮಂಜುಳ ಮ'ಮನು ನಿಂದಿಹ ನೀರನು ನಿಜಗುಣಧಾಮನು ಅಂದು ಅಜಬಂಧು ತಾನೆಂದೂ ಅಲ್ಲಿನಿಂದು3ಘನ ನೀಲಾಳಕದ ವೃಂದ 'ುಶ್ರಿತವಾದಾಮಣಿಮಯ ಮಕುಟದಿಂದಾ ಮೂಡುವ ಕಾಂತಿಪಣೆಯಲ್ಲಿ ಮೊಳೆಯುವಂದಾ ಕಸ್ತುರಿತಿಲಕ ಗಣನೆಗೆ ಬರುವ ಛಂದಾ ಗುಣಿಸುವರಾರಿದ ಗುಣನಿಧಿಯೊಪ್ಪಿದ ಪ್ರಣತಪ್ರೇಮದ ಪದ ಮುಖ ಪದ್ಮದಗುಣನೂ ಗುರುತರನೂ 'ನಯವನೂ 'ವರಿಪನೂ 4ಸಿಂಗಾರಿಯ ಸೋಲಿಸುವಾ ಸುಭ್ರುವದಿಂದಾಮಂಗಳವಾದ ಮುಖದ ಮನ್ನಿಸುತಿಹಕಂಗಳ ಕೋಡಿವರಿವಾ ಕಟಾಕ್ಷವನ್ನೂ ಸಂಗಿಸಿದ ಸುಸ್ಮಿತವಾ ತೊಂಗುತ ತೋರಲು ತನ್ನಾಸಿಕವೂರಂಗಿಸಿ ರಾಜಿಸೆ ರದನಚ್ಛದವೂಹೊಂಗೆ ುೀರಂಗೆ ನೋಳ್ಪಂಗೆ ಭವ'ಂಗೆ 5ಕುಂಡಲಗಳ ಕಾಂತಿಯೂ ಕರ್ನಾಗಳಲ್ಲಿಮಂಡಿತವಾಗಿ ಮತ್ತೆಯೂ ಮುಕುರದಂಥಾಗಂಡ ಸ್ಥಳಗಳಲ್ಲಿಯೂ ಗೋಚರಿಸುತ ದಿಂಡಾಗಿ ತೋರೆ ದೀಪ್ತಿಯೂ ಪುಂಡರೀಕಾಕ್ಷನು ಪೊಳೆಯುತಲಿದ್ದನು'ಂಡುತ ಖಳರನು ಹೆದರುವ ಜನರನುಕಂಡೂ ಕರಕೊಂಡೂ ಕೈಕೊಂಡೂ ಹುರಿಗೊಂಡೂ6ವೇಣುವ 'ವರಿಸಲು 'ೀರನಾ ಮುದ್ದೂತಾನೊಂದು ತೇಜ ತೋರಾಲು ಅಂಗುಲೀಗಳುಅನುಕೂಲಗಳಾಗಾಲು ಉಂಗುರಗಳೊಳು ಮಾಣಿಕ್ಯಗಳು ಮೂಡಲುಭಾನುವ 'ುೀರಲು ಬಾಹುಗಳೊಪ್ಪಲುಗಾನಗಳಾಗಲು ಗೋವ್ಗಳು ಕೇಳಲುತಾನು ತೋರಿದನು ಜಾಣುವನು ಜಗಧರನೂ 7ಭೋಗಿಯ ಭೋಗದ ಹಾಗೆ ಬಾಹುಗಳಿರೆತೂಗಿ ಜಾನುಗಳ ತಾಗೆ ಕೇಯೂರಗಳರಾಗ ರಂಜಿತಗಳಾಗೆ ಕಂಕಣವಲಯ ಯೋಗದಿಂದಿರೆ 'ೀಗೆಆಗಿನ ಕಾಲದಲಮರಿದ ಶೃಂಗದುೀಗುರು ಕೃಷ್ಣನ ಇಷ್ಟ ಕೊಳಲಿನಯೋಗೀ ಇಹಭಾಗೀ ಗತರಾಗೀ ಗುರಿಯಾಗೀ8ಕಂಬುಕಂಧರದಿಂದಲೂ ಅಲ್ಲಿರುತಿಹತೊಂಬೆ ತಾರಹಾರಗಳು ಲಕ್ಷ್ಮಿಯು ತಾನುಇಂಬೀನುರದಲಿರಲು ಕೌಸ್ತುಭಕಾಂತಿ ತುಂಬಿ ನಾಭಿಯ ತಾಕಲುಅಂಬುಜ ಸಂಭವನಾಲಯ'ರಲುಜೃಂಭಿಸಿ ಮಾಲೆಯು ಜೋಲಿಡುತಿರಲೂನಂಬೀ ಬಹುತುಂಬೀ ುಹವೆಂಬೀ ಜಗದಿಂಬೀ 9ಕಟಿತಟದತಿಶಯವು ಕಾಂಚಿಯಧಾಮಾಸ್ಪುಟವಾಗಿ ಸ್ವರ್ಣವಸ್ತ್ರವು ಊರುಗಳಲ್ಲಿಗೆಘಟಿಸಿರೆ ಗೂಢವಾದವೂ ಜಾನುಗಳಿಂದ ಪಟು ಜಂಘೆ ಪುದುಗಿಹವೂಕಟಕಗಳಿಂದಲು ಕಡುಚೆಲುವೆನ್ನಲುಅಟಸುತಲಡಿಗಳು ಅತಿಮೃದುವೆನ್ನಲುದಿಟನೂ ನರನಟನೂ ಭವತಟನೂ ಪಟುತರನೂ 10ಕಮಲ ಸೋಕಲು ಕಂದುವ ಲಕ್ಷ್ಮೀಯಕರಕಮಲಕೆ ಕಾಂತಿಯನೀವ ಯೋಗಿಯ ಹೃದಯಕಮಲದಿ ಕುಳಿತಿರುವ ುೀ ದಿವ್ಯಪಾದ ಕಮಲವಕಾಣಿಸುವಾಕಮಲೆಯ ಕಾಂತನ ಕಮಲಜ ಜನಕನ ಕಮಲವ ಕಾವನ ಕಾಂತಿಯ 'ುೀರ್ವನಕ್ರಮವೂ ಕಾಮದವೂ ಶ್ರಮ ಶಮವೂ ಶೋಭನವೂ 11ಬಲಿಯ ಬಳಿಗೆ ಬಂಜವು ಭಾಗ್ಯವನಿತ್ತುಸಲ'ದ ಸೌಮ್ಯಗಳಿವು ಬ್ರಹ್ಮನು ಬಂದುತೊಳೆಯಲು ಬಂದು ತೋರುತಿದ್ದವು ಆ ಪಾದಗಳೆ ಇಳೆಯೊಳಗಿರುತಿಹವೂಕಲಿಮಲಹರಗಳು ಕಲಿಗಳ ಕಾವವುತಾಳಿದವು ನಾಗನ ತದ್ವಶವಾಗಲುಸಿಲುಕೀ ಸಿರಿತುಳುಕೀ ಅಘಕಲಕೀ ಅವು ನಿಲುಕೀ 12ಅಂಕುಶವರ'ಂದವು ಧ್ವಜವಜ್ರವಂಕೀತವಾಗಿಯಾಢ್ಯಾವು ಲಕ್ಷ್ಮಿಯ ಕುಚಕುಂಕುಮವನ್ನು ಕದ್ದವು ಭೂ'ುಗೆ ಪಾದ ಪಂಕಜಗಳು ಬಂದಾವುಕಿಂಕರರಭಿಮತ ಕಂಕೆಯನಟ್ಟುತಮಂಕುಗಳೆನಿಸುತ ಮಲೆವರ ಮುರಿಯುತಶಂಕೆ ಸಲೆ ಕೊಂಕೆ ಹೊರೆುಂಕೆ ಸಿರಿಸೋಂಕೆ13ಈ ರೀತಿಯಲಿ ಈಶನು ಇರುತಲಿರೆನಾರದ ಬಂದು ನಿಂದನು ಕಾಣುತ ಕೃಷ್ಣಕಾರುಣ್ಯ ನಿಧಿ ಕೇಳ್ದನು ಕ್ಷೇಮಗಳನು ತೋರುತ ರೂಪವ ತಾನುವಾರಿಜನೇತ್ರನು ವರದವರೇಣ್ಯನು'ುೀರದೆ ಮುನಿಯನು ಮಾತನು ನುಡಿದನುಸಿರೀ ಅನುಸಾರೀ ಬಗೆದೋರೀ ಮುರವೈರೀ 14ಅರಿತನು ಆತನನುವ ಆ ಕಂಸಗಾಗಅರು' ತೋರಿಸಿದರ್ಥವ ಅದು ತನ್ನ ಕಾರ್ಯನೆರವೇರುವತಿಶಯವ ತಾನಾಗಿ ಮುನ್ನ ಪಿರಿದಾಗಿ ಪ್ರೇರಿಸಿರುವಕರುಣಾವನಧಿಯು ಕಾರ್ಯವ ತೋರಿಯುಮುರಹರಮೂರ್ತಿಯು ಮುಂದಿರುವಲ್ಲಿಯುಅರಿತೂ ಅಲ್ಲಿಕುಳಿತೂ ಬರೆಹೊತ್ತೂ ುದಿರಿತ್ತು 15ಕಾಣುತ ಮುನಿಕೃಷ್ಣನ ಮಾನಸದಲ್ಲಿಧ್ಯಾನಿಸಿದನು ದೇವನ ತಾ ಬಂದುದನ್ನುತಾನು ತೋರಿಸಲು ತತ್ತ್ರಾಣ ಬಂದಾಗ ನ'ುಸಿ ಪ್ರಾಣೇಶಗತಿಪ್ರ'ೀಣಾಕೃಷ್ಣಾ ಕಂಸಗೆ ಹೊದ್ದುವ ರೀತಿಗೆಶ್ರೀನಿಧಿಯಾದಗೆ ಸೂಚಿಸಿ ಸ್ವಾ'ುಗೆತಾನು ಅಜಸೂನು ಅರು'ದನು ಅರಿತದನೂ 16ಮಾನುಷಮೂರ್ತಿಯಾಗಿಯೆ ಭೂ'ುಗೆ ಬಂದುಆನತರನು ಆಳಿಯೆ ಅರ್ಥವ ಸಲಿಸಿಧೇನುವಾಗಿಹೆ ಧೊರೆಯೆ ಯೆನ್ನುತ 'ೀಗೆ ಆನತನಾಗುತಲಿಯೆಮಾನಸಪುತ್ರನು ಮಾತನು ನುಡಿದನುಶ್ರೀನಿಧಿ ತಿರುಪತಿ ವೆಂಕಟರಮಣನುತಾನೂ ತಾಳಿದನೂ ಮಾನಸನೂ ಮಾಡ್ದುದನೂ 17
--------------
ತಿಮ್ಮಪ್ಪದಾಸರು
ತಾತ್ವಿಕ ಹಿನ್ನೆಲೆ ಕರ್ತನೆಂಬೋದು ಖರೆ ಖರೆ ಪ ಇಪ್ಪನೆಂಬೋದು ಖರೆ ಖರೆ 1 ಜಗವು ಇಪ್ಪದೆಂಬೋದು ಖರೆ ಮೃಗ ಖರೆ 2 ಇಂಬಾಗಿಹನೆಂಬೋದು ಖರೆ ತುಂಬಿ ಇಪ್ಪನೆಂಬೋದು ಖರೆ3 ಸ್ಥಳ ಇಲ್ಲೆಂಬೋದು ಖರೆ ಖರೆ 4 ಇಲ್ಲೆಂಬೋದು ಖರೆ ವಿಲ್ಲವೆಂಬೋದುಖರೆ 5 ವೇದತಂದು ವೇದನಿಗಿತ್ತಾತನೆ ಭೂಧರನೆಂಬೋದು ಖರೆ ಖರೆ 6 ಬದ್ಧರೂಪನೆಂಬೋದು ಖರೆ ಖರೆ 7 ಮಾಳ್ಪನೆಂಬೋದು ಖರೆ ಖರೆ 8 ಎನಿಸಿದನೆಂಬೋದು ಖರೆ ಖರೆ 9 ಪೊರೆವನೆಂಬೋದು ಖರೆ ಖರೆ 10 ತಲಿಹ ವೆಂಬೋದು ಖರೆ ಖರೆ 11 ಯಂಬೋದು ಖರೆ ಭವ ಖರೆ 12 ಹುದೆಂಬೋದು ಖರೆ ಖರೆ 13 ಮಗನೆಂಬೋದು ಖರೆ ಖರೆ 14 ಕೇಳ್ವನೆಂಬೋದು ಖರೆ ಖರೆ 15 ಬಂದನೆಂಬೋದು ಖರೆ ಖರೆ 16 ಪರಿಶುದ್ಧವಾದುದೆಂಬೋದು ಖರೆ ಖರೆ 17 ಹರಿನಾಮಕೆ ಹರಿಯದ ಪಾಪಿಗಳೀಧರೆಯೊಳಿ- ಲ್ಲವೆಂಬೋದು ಖರೆ ಖರೆ 18 ಕರ್ಮ ಹರಿಸೇವೆಯನಿಪವೆಂಬೋದು ಖರೆ ಖರೆ 19 ನಿಜದ್ವಿಜರಹುದೆಂಬೋದು ಖರೆ ಖರೆ 20 ಬುಧರಿಗಿಲ್ಲವೆಂಬೋದು ಖರೆ ಖರೆ 21 ವರವೆಂಬೋದು ಖರೆ ಯುಕ್ತಿಯ ವಚನಗಳಲ್ಲವು ಇವು ವೇದೋಕ್ತಿಗಳ- ಖರೆ 22 ಸದ್ಗುರುವರಬೇಕೆಂಬೋದು ಖರೆ ಪರಮಸೌಖ್ಯವೆಂಬೋದುಖರೆ 23 ಖರೆ ಖರೆ ಖರೆ ಖರೆ 24 ಖರೆ ಖರೆ ಖರೆ 25
--------------
ಅಸ್ಕಿಹಾಳ ಗೋವಿಂದ
ತಾನೇ ತಾನು ಜಗದಂತರ್ಯಾಮಿ ವಿಶ್ವಂಭರಿತಾ ತಾನೇ ತಾನು ಹರಿಧ್ಯಾನ ಧನ ದಾನ ಮಾನ ಅಣುರೇಣುಗಳಲ್ಲಿ ಪ ವಬ್ಬಸೂರ್ಯಜಗ ಸರ್ವ ಚಕ್ಷಗಳ ಮಬ್ಬುಹಾರಿಸುವಂತೆ ಅ.ಪ ಘಟ ಮಠಾದಿಗಳ ಚದುಳ ಬ್ರಹ್ಮಘಟಿ ನೆಟಗೆ ವ್ಯಾಪ್ತ ನಿಚ್ಚಲ ಗಗನದಂತೆ 1 ಕಂಭಸೂತ್ರದ ಬೊಂಬೆಯಾಟದಲಿ ಇಂಬುಗೊಂಡ ಕುಳೆ ಬಿಂಬಿಸುವಂತೆ2 ಕಂದ ಕುಂದದಾನಂದ ಚಂದ ಘನ ತಂದೆ ಮಹಿಪತಿ ನಂದನ ಪ್ರೀಯಾ3
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ತಿಳಿದುಕೊಳ್ಳಿ ಖೂನ ಬಲ್ತು ನಿಜ ಜ್ಞಾನ ಧ್ರುವ ಹಾದಿ ಅದೆ ಹಿಂದಗಾಧ ಅದೆ ಮುಂದೆ ಭೇದಿಸಿನ್ನು ತಿಳಿದುಕೊಳ್ಳಿ ಗುರುಕೃಪೆಯಿಂದ 1 ಲಬ್ಧ ಅದೆ ಹಿಂದೆ ಶಬ್ದ ಅದೆ ಮುಂದೆ ಲಬ್ಧವಾಗಿ ಕೇಳಿಕೊಳ್ಳಿ ಗುರುದಯದಿಂದ 2 ಅರ್ಥ ಅದೆ ಹಿಂದೆ ಸ್ವಾರ್ಥ ಅದೆ ಮುಂದೆ ಅರ್ತು ಇದೆ ಕೇಳಿಕೊಳ್ಳಿ ಗುರು ಜ್ಞಾನದಿಂದೆ 3 ಗುಂಭ ಅದ ಹಿಂದೆ ಡಂಭ ಅದೆ ಮುಂದೆ ಇಂಬು ಇದೇ ತಿಳಿದುಕೊಳ್ಳಿ ಗುರು ಜ್ಞಾನದಿಂದೆ 4 ನೋಟ ಅದೆ ಮುಂದೆ ಕೂಟ ಅದೆ ಹಿಂದೆ ನೀಟವಾಗಿ ಗುರುವಿಗೆ ಕೇಳಬೇಕು ಒಂದೆ 5 ಮನವು ಅದೆ ಮುಂದೆ ಘನವು ಅದೆ ಹಿಂದೆ ತನುವಿನೊಳು ಮಾಡಿಕೊಳ್ಳಿ ಖೂನ ನಿಜ ಒಂದೆ 6 ದೇಹ್ಯ ಅದೆ ಮುಂದೆ ಸೋಹ್ಯ ಅದೆ ಹಿಂದೆ ಸೋಹ್ಯ ದೋರಿಕೊಡುವ ಮಹಿಪತಿ ಗುರು ತಂದೆ7
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ತಿಳಿಯದು ಶ್ರೀ ಗುರು ಮಹಿಮೆ ಧ್ರುವ ತೋರುವ ರೂಪದ ಮಾಟ ನಿರ್ಮಿಸಿಹ್ಯ ಬ್ರಹ್ಮ ವಿಷ್ಣು ಮಹೇಶ ಉತ್ಪತ್ತಿ ಸ್ಥಿತಿ ಲಯದಾಟ ಮೋಹದ ಅವ್ಹಾಟ ಬ್ಯಾರಿಹ ಅನಿಮಿಷ ನೋಟ 1 ಕಂಭ ಸೂತ್ರದ ವಿಚಾರ ನಿತ್ಯವಿಲ್ಲದನಿತ್ಯದ ಆಟವು ನಂಬಬಾರದು ಸಂಸಾರ ನಂಬಿದವರು ಇಂಬಿಲ್ಲಿದೆ ಹೋದರು ಮಿತಿ ಇಲ್ಲದೆ ಅಪಾರ ನಿಲುಕಡೆ ಇಲ್ಲದೆ ಸೂರ್ಯಾಡುವ ಬಗೆ ಇದು ಯಾತನೆ ಶರೀರ 2 ಕಂಡಂತಾಗುವುದೇನು ಸಂತೋಷ ಕಂಡಂತನುಭವಿಸುವದೇನು ಕ್ಲೇಶ ಪರಿ ಹೋದರು ಶತಂ ಭೀಷ್ಮ ತೋರು ಗುರು ಜಗದೀಶ 3
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ತಿಳಿಯಿರೋ ಸಮ್ಮಿಂದ ಹೇಳುವೆ ಸುಧಾನಂದ ಪ ಉಂಬವ ತಾನಾರು ಉಣಬಲ್ಲವನಾರುಸಂಭವಿಸುವನಾರು ಸಮನಿಸಿ ಇಂಬಾಗಿಹನಾರು 1 ಕಣ್ಣಿಂದಲೆ ನೋಡಿ ನೋಡುವ ಕಣ್ಣು ಕಾಂಬುದೆ ಖೋಡಿಕಣ್ಣೊಳಗದೆ ನೋಡಿ ಕಂಡಾ ಕಣ್ಣಹುದೆಂದಾಡಿ 2 ಕಿವಿಯಿಂದಲೆ ಕೇಳಿ ಕಿವಿಯನು ಕಿವಿಯೆ ಗಯ್ಯಾಳಿಕಿವಿಯೆ ದಿವಾಳಿ ಕಿವಿಗಾ ಕಿವಿಗರಿವಹುದ್ದೇಳಿ 3 ನಾಲಗೆ ನುಡಿಯಿರಲಿ ನುಡಿವುದೆ ನಾಲಗೆ ಬರಿ ತೊಗಲುನಾಲಗೆಯೊಳಗಿರಲು ಮೂಲದ ನಾಲಗೆಯಲಿ ಬರಲು 4 ಮೂಗಿನ ಮೂಲಕ ಪ್ರಾಣ ಅರಿವಡೆ ಮೂಗು ಬಲ್ಲುದೆ ಕೋಣಮೂಗರಿದವ ಜಾಣ ಮೂಗದು ನಿರ್ವಾಣ5 ತನುವಿನ ಒಳಗಿರ್ದು ಚೇತನ ಜನಿಸುತಲಿರುತಿರ್ದುಇನಿತಾದಲಿರ್ದು ಬೆಳಗುವ ತಾನೆ ತಾನಿರ್ದು 6 ರೂಪಕೆ ವಿರಹಿತನೆ ತೋರ್ಪಾ ರೂಪವೇ ತಾನಿಹನಾಲೇಪಕೆ ದೂರಿಹನಾ ಚಿದಾನಂದಪತಿ ಗುರುವವನಾ7
--------------
ಚಿದಾನಂದ ಅವಧೂತರು