ಒಟ್ಟು 116 ಕಡೆಗಳಲ್ಲಿ , 40 ದಾಸರು , 103 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಧ್ಯಾನವನು ಮಾಡು ಬಿಂಬ ಮೂರುತಿಯಪ ಆನಂದದಲಿ ಕುಳಿತು ಅಂತರಂಗದಲಿ ಅ.ಪ ಸದಾಚಾರನಾಗಿ ದ್ವಾದಶಗುರುಗಳಿಗೆರಗಿ ಮುದದಿಂದ ಮೂಲಮಂತ್ರವನು ಜಪಿಸಿ ಸದಮಲ ಭಕುತಿಯಲಿ ದೇಹಸ್ಥಿತಿಯನೆ ತಿಳಿದು ಪದಮಾಸನವ ಹಾಕಿ ಪರಮ ವಿಶ್ವಾಸದಲಿ1 ಅಂಗವನು ಚಲಿಸದೆ ಚೆನ್ನಾಗಿ ದೃಢವಾಗಿ ಕಂಗಳನೆ ಮುಚ್ಚಿ ಇಂದ್ರಿಯಗಳನೆ ತೆರೆದು ಮಂಗಳ ಶೋಭಿತ ಅಖಂಡ ಧ್ಯಾನದಂತ ರಂಗದೊಳಗೆ ನಿಲಿಸಿ ಎಲ್ಲವನು ಕಾಣೊ 2 ಭಗವದ್ರೂಪಗಳೆಲ್ಲ ಒಂದು ಬಾರಿ ಸ್ಮರಿಸಿ ಮಗುಳೆ ಪರಮ ಗುರುವಿನ ಮೂರ್ತಿಗೆ ತೆಗೆದು ಆಹ್ವಾನಮಾಡಿ ಅಲ್ಲಿಂದ ಹರುಷದಿ ಸ್ವಗುರು ಬಿಂಬಮೂರ್ತಿಯಲಿ ಐಕ್ಯವನೆ ಮಾಡು3 ತಿರುಗಿ ಮೆಟ್ಟಿಕೆ ಮೂರು ವೇಗದಿಂದಲಿ ನಿನ್ನ ಲ್ಲಿರುವ ಮೂರ್ತಿಯಲ್ಲಿ ಚಿಂತನೆಯ ಮಾಡೊ ಭರದಿಂದ ಎಲ್ಲವನು ತಂದು ಹೃದಯದಲ್ಲಿ ಸ್ಥಿರವಾಗಿ ಇಪ್ಪ ಮೂರುತಿಯೊಡನೆ ಕಲೆಸು 4 ಆತನೆ ಬಿಂಬ ಮೂರುತಿಯೆಂದು ತಿಳಿದುಕೊ ಆ ತರುವಾಯ ನಾಡಿಗಳ ಗ್ರಹಿಸಿ ಆ ತೈಜಸನ ತಂದು ವಿಶ್ವಮೂರ್ತಿಯಲ್ಲಿ ಪ್ರೀತಿಯುಳ್ಳವನಾಗಿ ಪತಿಕರಿಸು ಮರುಳೆ 5 ಜ್ಞಾನ ಪ್ರಕಾಶದಲಿ ಇದ್ದು ನಿನ್ನ ಹೃದಯ ಕಮಲ ಮಧ್ಯ ಮೂರ್ತಿ ನಿಲ್ಲಿಸಿ ಬಾಹ್ಯದಲಿ ಏನೇನು ಪೂಜೆಯನು ಉಳ್ಳದನು ಮಾಡೊ6 ಗುಣ ನಾಲ್ಕರಿಂದಲಿ ಉಪಾಸನವನೆ ಮಾಡು ಕ್ಷಣ ಕ್ಷಣಕೆ ಹರಿಪಾದವನು ನೋಡುತ ಅಣುರೇಣು ಚೇತನಾಚೇತನಕೆ ನೇಮಕ ಫಣಿಶಯನನಲ್ಲದೆ ಮತ್ತೊಬ್ಬರಿಲ್ಲವೆಂದು 7 ಮಮತೆಯನು ತೊರೆದು ಮೇಲೊಂದಪೇಕ್ಷಿಸದೆ ಸಮ ವಿಷಮ ತಿಳಿದೊಂದೆ ಭಕುತಿಯಲ್ಲಿ ಸ-ಮಾಧಿಗೊಳಗಾಗಿ ದಿವ್ಯ ದೃಷ್ಟಿಲಿ ಸರ್ವ ಕ್ರಮ ಅನುಕ್ರಮದಿಂದ ಭರಿತಭಾವುಕನಾಗೊ 8 ಪರಿ ಧೇನಿಸಲು ದೇವ ಕರುಣನ ಮಾಡೆ ಪಾಪ ಸಂಚಿತವು ಪ್ರಾರಬ್ಧ ನಾಶ ಅಪರೋಕ್ಷಿತನಾಗಿ ತನ್ನ ಯೋಗ್ಯತದಷ್ಟು ಗೋಪಾಲ ವಿಜಯವಿಠ್ಠಲನೊಲಿವನಾಗ9
--------------
ವಿಜಯದಾಸ
ಧ್ರುವತಾಳ ಬಂದೆನ್ನ ಕಾಯೊ ಕರುಣದಿಂದ ಕೈಪಿಡಿದು ದೀನ ಬಂಧುವೆ | ಒಂದೂರು ಮಂದಿರಾರ್ಯ | ಸಂದೇಹವ್ಯಾಕೆ ನಿನ್ನ ಪೊಂದಿದ ಸತ್ಯಶಿಷ್ಯವೃಂದದೊಳಗೆ ನಾ ಕಡೆಯವನೋ ತಂದೆ ನೀನಗಲಿದಕೆ ನೊಂದೆನೊ ನಾ ಭವ ಬಂಧದೊಳಗೆ ಬಿದ್ದು ಬಹುವಿಧದಿ ನಮಗಿನ್ನು ಹಿಂದು ಮುಂದು ಮನಕೆ ನೀ ತಾರದಲೆ ಕಣ್ಣೆರೆದು ಈಕ್ಷಿಸಿ ಎನ್ನೊಳಿದ್ದ | ಮಂದಮತಿಯ ಬಿಡಿಸಿ ಮಧ್ವಶಾಸ್ತ್ರವ ತಿಳಿಸೋ | ಮಂದರಕುಜ ಭಕ್ತಸಂದೋಹಕೆ | ಹಿಂದೆ ವರದಾತನೆಂದೆನಿಸಿದ ಕರ್ಮಂದಿಗಳರಸರ ಕ್ಷೇತ್ರದಲ್ಲಿ | ಬಂದ ಸಮಯವೆನ್ನ ಬಿನ್ನಪ ಚಿತ್ತಕೆ | ತಂದು ತವಕದಿಂದ ಭೂಸುರರ ಸಂದಣಿಯಲ್ಲಿ ನಿನ್ನ ಮಹಿಮೆ ಪ್ರಕಟಿಸಿ ಇಂದುವಿನಂತೆ ಪೊಳೆದು ಮೆರೆದ ಕರುಣೀ ಅಂದಿನಾರಭ್ಯ ನೀನೆ ಸ್ವರೂಪೋದ್ಧಾರಕರ್ತನೆಂದು ದೃಢನಾಗಿ ನಂಬಿ ತ್ವತ್ವಾದಕೆ ವಂದಿಸಿ ಮೊರೆ ಇಡೆ ಇಂದು ನೀನು ನಮ್ಮ ಛಾತ್ರಮಾಲೆಯಲ್ಲಿ ಸಂದವನೆಂದು ಮನದಿ ಭಾವಿಸಿದೆವು | ಎನುತ ಛಂದದಿ ಸಿಂಧು ಪೋಲುವ ಕರುಣಿ ಸುಜ್ಞಾನ ಸದ್ಭಕ್ತಿ ಕುಂದದ ವೈರಾಗ್ಯ ಭಾಗ್ಯವ ಕೊಟ್ಟು ಧಾಮ ಶಾಮಸುಂದರವಿಠಲನ ಒಂದೇ ಮನದಿ ಭಜಿಪಾನಂದ ಭಾಗ್ಯವ ನೀಡೋ 1 ಮಟ್ಟತಾಳ ಅನುಪಮಸುಚರಿತ್ರ | ಅನುದಿನದಲಿ ಎನ್ನ ಅಣುಗನೆಂದರಿತೊಂದು ಕ್ಷಣವಗಲದೆ ಇದ್ದು ಬಿನುಗು ಬುದ್ಧಿಯ ಕಳದು | ಧನದಾಶೆಯ ಕಡಿದು ಮನದ ಚಂಚಲ ಬಿಡಿಸಿ | ಹನುಮ ಭೀಮಾನಂದ ಮುನಿಕೃತ ಪಾದವನಜ ಸೇವಿಪುದಕೆ ತನುವಿಗೆ ಬಲವಿತ್ತು ದಿನದಿನದಲಿ ನೆನೆಯುವ ಸಂಪದ ಗುಣನಿಧಿಯನುಗ್ರಹಿಸೋ 2 ತ್ರಿವಿಡತಾಳ ಭವ ಮೊದಲಾದ ಬುಧರು ಹರಿಯಾಜ್ಞೆಯಲಿ ಮದಡಾರುದ್ಧರಿಸಲು ಜಗದಿ ಬಂದು | ಸುಧೆಯಂತೆ ಸವಿಯಾದ ಮಧುರ ಕನ್ನಡದಲ್ಲಿ | ಮುದದಿ ರಚಿಸಿದಂಥ | ಪದಸುಳಾದಿಗಳಲ್ಲಿ ಹುದುಗಿದ ವೇದಾರ್ಥ ತ್ವತ್ವಾದಾಶ್ರಿತರಿಗೆ | ವಿಧ ವಿಧದಿಂದಲಿ ಬೋಧಿಸುತಾ | ವದಗಿದ ಅಜ್ಞಾನ ಸದೆದು ಸುಮತಿ ಕೊಟ್ಟು ಸದಾಚಾರ ಸಂಪನ್ನನೆನಿಸಿ | ಅವರ ಬದಿಗನು ನೀನಾಗಿ ಸುಕ್ಷೇಮ ಚಿಂತಿಸಿ | ಅಧಮರಿಂದಲಿ ಬಾಧೆ ಬಾರದಂತೆ ಸದಯನೆ ಸಲಹಿದ ಕಾರಣದಿಂದಲಿ | ವಿದಿತವಾಯಿತು ನಿನ್ನ ಮಹಿಮೆ ಮನಕೆ ಪದೆ ಪದೆ ಪ್ರಾರ್ಥಿಪೆ ಸದಮಲಗಾತ್ರನೆ ಅಧೋಗತಿ ತಪ್ಪಿಸಿ ಬಿಡದೆ ಒಲಿದು | ಯದುಕುಲೋದ್ಭವ ಪೊಳೆವಂತೆ ಕೃಪೆಮಾಡು 3 ಅಟ್ಟತಾಳ ಗುರುವರ ಶ್ರೀ ನರದ್ವಿರದಾರಿ ನಾಮಕ | ವರ್ಣಿಸಲಳವಲ್ಲ ನಿನ್ನುಪಕಾರವು | ಜ್ವರಬಹುಜನರಿಗೆ ಪರಿಹಾರ ಮಾಡಿದಿ ತುರಗ ಕಚ್ಚಿದ ಘಾಯ ತಕ್ಷಣ ಮಾಯಿಸಿದಿ | ಶರಣಗೆ ಬಂದಪಮೃತ್ಯು ಓಡಿಸಿದಿ | ಅರಿಯದರ್ಭಕಿ ಹೋಮಕುಂಡದಿ ಬೀಳೆ | ತ್ವರಿತಭಿಮಂತ್ರಿಸಿ | ಭಿಸ್ಮವಲೇಪಿಸಿ ಉರಿತಂಪುಗೈಸಿದಿ || ಪುರದವರ ಮೊರೆ ಕೇಳಿ ಮಾರಿಯ ಭಯ ಕಳೆದಿ | ತರುಳರು ದಕ್ಕದ ದೀನಕುಟುಂಬಕ್ಕೆ ಚಿರಕಾಲ ಬಾಳುವ ಸಂತಾನ ನೀಡಿದಿ | ಸ್ಮರದೂರ ನಿಮ್ಮಾಜ್ಞೆ ಮೀರದ ಕಿಂಕರನ ತರುಣಿಗೆ ಸೋಂಕಿದ ಭೂತವ ಬಿಡಿಸಿದಿ | ನೆರೆನಿನ್ನ ಪದವನುಸರಿಸೀದ ಸುಜನಕ್ಕೆ ವರಭಾಗವತಶಾಸ್ತ್ರ ಅರುಹೀದಿ ಸಲುಹೀದಿ | ಹರಿಕಥಾಮೃತಸಾರವ ಸಾರೀದಿ | ತರತಮದ ಭೇದಜ್ಞಾನವ ಬೀರಿದಿ | ವರದಾಯಕ ಸತ್ಯದೇವನ ಪಾವನ ಚರಿತೆ ವಿಚಿತ್ರವಾಗಿ ಪರಿಪರಿ ಪೇಳುತ್ತ ಪೊರೆದೆ ನಿನ್ನವರನ್ನು ಧರೆ ಋಣ ತೀರಿದ ಕುರುಹು ಅರಿತು ಒಬ್ಬರಿಗೆ ಸೂಚಿಸದೆ ಪರಲೋಕಯಾತ್ರೆಗೆ ತೆರಳಿದದಕೆ ನಿನ್ನ ಪರಿವಾರದ ನಾವೆಲ್ಲರೂ ನಿತ್ಯಸಿರಿಯ ಕಳೆದುಕೊಂಡ ಲೋಭಿಗಳಂದದಿ ಶರಧಿ ಕಾಯ ತೊರೆದರೇನಾಯಿತು ಮರೆಯಾದೆ ಗೋವತ್ಸನ್ಯಾಯದಂತೆ ನೀ ದರುಶನ ಸ್ವಪ್ನದಿಗರೆದು ಸಂತೈಸುತ ನಿರಯಕೆ ನಮ್ಮನು ಗುರಿಮಾಡದೆ ಪೊರೆ ತರುಳಗೊಲಿದ ಶಾಮಸುಂದರವಿಠಲ ಸರಸಿಜಾಂಘ್ರಿಯುಗ್ಮ ಮಧುಪನೆಂದೆನಿಸಿ 4 ಆದಿತಾಳ ಭೂಮಿ ವಿಬುಧವರ ರಾಮವಿಠಲಾರ್ಯರ ಶ್ರೀ ಮುಖದಿಂದ ಸಕಲಶಾಸ್ತ್ರಮನನಮಾಡಿ | ಶ್ರೀಮತ್ಸು ಶೀಲೇಂದ್ರಸ್ವಾಮಿಗಳಿಂದಲಿ ನೀ ಮಾನಿತನಾಗಿ ಕಾಮಿತಫಲಪ್ರದ ರಾಯರ ದಯಪಡೆದು ಕಾಮಾದಿ ಷಡ್ರಿಪುವರ್ಗ ಜಯಿಸುತಲಿ | ನೇಮನಿಷ್ಟೆಯಲಿ ಜಪತಪಾಚರಿಸುತ ಹೇಮರಜತಧನ ತೃಣಸಮಾನೆನಿಸುತ ಸಾಮಜವರದನ ಕಳೆಯದೆ ಪಾಮರ ಜನರನು ಪ್ರೇಮದಿಂದದ್ಧರಿಸಿ | ಸಾಮಗಾನಪ್ರೇಮ ಶಾಮಸುಂದರನ ಧಾಮವ ಸೇರಿದ ಹೇ ಮಹಾಮಹಿಮನೆ 5 ಜತೆ ನಿನ್ನೊಡೆಯನ ದ್ವಾರಾ ಶ್ರೀ ಶಾಮಸುಂದರನ ಎನ್ನಂತರಂಗದಿ ನೋಳ್ವಂತೆ ಕರುಣಿಸೋ ||
--------------
ಶಾಮಸುಂದರ ವಿಠಲ
ನಂಬದಿರು ಈ ದೇಹ ನರಲೋಕವೆಂಬುದು ಸುಖವೆಂದು ಮಾಯಾ ಪ್ರಪಂಚವನು ಅನುಗಾಲಾ ನಂಬು ನಮ್ಮಂಬುಜಾಂಬಕನ ಪಾದಾಂಬುಜವ ನಂಬಿದರೆ ಮುಕ್ತಿಯಲಿ ಇಂಬುಂಟು ಮರುಳೆ ಪ ತಂದೆ ತಾಯಿ ತಮ್ಮ ಸುಖಕೆ ಏಕಾಂತದಲಿ ಒಂದು ದಿನಲಿರಲಾಗಲವರರೇತಸು ಬಿಂದುವಿನಲಿ ಉತ್ಪತ್ಯವಾಗಿ ಬೆರೆದಾಗ ದು ರ್ಗಂಧದೊಳು ಬಂದು ನಿಂದೂ ಬಂಧನದೊಳಗೆ ಸಿಲುಕಿ ಒಂದೆಂಟು ತಿಂಗಳು ಪೊಂದಿ ಯಾತನೆಬಟ್ಟು ಮಲಮೂತ್ರ ಹೇಸಿಕೆಯಿಂದ ಕುದಿದು ಬಿಂದು ಕೆಳಗೆ ಹೊರಳಿದಿರು ಮರುಳೆ 1 ತಾಮಸವ ಕವಿದು ಕಾವಳಗೊಂಡ ಕತ್ತಲೆಯ ಸೀಮೆಯೊಳಗೆ ಸಿಲ್ಕಿ ಬಾಲತ್ವತನದಲ್ಲಿ ನೀ ಮಂದನಾಗಿ ಮರುಳಾಟಕ್ಕೆ ಮನವು ಉಬ್ಬಿ ಮುಂಜಿಯನು ಕಟ್ಟಿ ಬಂಧುಬಳಗ ಪ್ರೇಮದಿಂದಲಿ ನೆರೆದು ಮೋಹದಲಿ ಒಬ್ಬ ಕೋಮಲೆಯ ಜತೆಮಾಡಲು ನೋಡಿ ಹಿಗ್ಗುತ್ತಾ ಛೀಮಾರಿಯಾಗಿ ತಿರುಗಲಿ ಬೇಡ ಮರುಳೆ 2 ಮದ ಮತ್ಸರ ಲೋಭ ಮೋಹ ಕಾಮಾದಿಯಲಿ ಮದನ ಬಲಿಗೆ ಬಿದ್ದು ಅಹಂಮತಿ ಪಂಕದಾ ಹುದಲಿನೊಳಗೆ ಮುಣುಗಿ ಮುಂಗಾಣದಲೆ ತನು ರೂಹ ತುಂಬಿ ಕಾಲವನು ಕಳೆದು ಮಕ್ಕಳ ಪಡೆದು ತುದಿಮೊದಲು ಧರ್ಮವನು ಮರೆದು ಮಮತೆಯಲ್ಲಿ ಸದರೆಂದಿಲ್ಲದಾ ದುಷ್ಕರ್ಮಗಳು ಮಾಡಿ ಮುದದಿಂದ ನರಕದೊಳು ಬೀಳುವಾ ಹುರುಳೆ 3 ಇದ್ದಾಗ ನೆಂಟರಿಷ್ಟರು ಬಂದು ಚೆನ್ನಾಗಿ ಹೊದ್ದಿಕೊಂಡು ನಿನ್ನ ಕೊಂಡಾಡಿ ನೂರಾರು ಸುದ್ದಿಯನು ಪೇಳಿ ನಡುಮನೆಯೊಳಗೆ ಇದ್ದು ನಿನ್ನಯ ಬದುಕು ಉದ್ದಿನ ಕಾಳಿನಷ್ಟು ಉಳಿಯಲೀಸದೆ ನಿತ್ಯಾ ಬದ್ಧವಿಲ್ಲದಲೆ ಕರಗಾತಿಂದು ಬಡತನಾ ಸಿದ್ಧನಾಗಲು ತಿಂದವರು ಹರದೋಡಿ ಎದ್ದು ಪೋಗಲು ಕೆಟ್ಟಬಾಯಿದೆರವಾ ಮರುಳೆ 4 ಬಿಡು ಬಿಡು ಅಕಟ ಸಂಸಾರ ಸಾಗರದ ಮಡುವಿನೊಳಗೆ ಬಿದ್ದು ಕಾಲ್ಗೆಡೆದು ಪೋಗದೆ ಹಿಡಿ ಹಿಡಿ ಪರಮ ಭಾಗವತರ ಸಂಗತಿಯ ಸರ್ವಜ್ಞತೀರ್ಥರ ಮತದ ಕರುಣವನು ಪಡೆಯಲು ಅಧಿಕಾರನಾಗಿ ಸಿರಿದೇವಿಯ ವೊಡಿಯ ವಿಜಯವಿಠ್ಠಲನಂಘ್ರಿ ನೆರೆ ನಂಬಿ ತಡಿಯದಲೆ ಸದ್ಗತಿಗೆ ಸೇರುವದು ಮರುಳೆ5
--------------
ವಿಜಯದಾಸ
ನವವಿಧ ಭಕ್ತಿ ಶ್ರವಣ ಪಾವನವಾದ ಹರಿಕಥೆ ಪುರಾಣ ಮೊದ ಲಾದುದನು ಕೇಳುತ್ತಿ ಪರಮಾತ್ಮನನ್ನು ಹೃದಯ ಪೀಠದಲಿರಿಸಿ ಪೂಜಿಸುವ ಭಕ್ತನೇ ಶ್ರವಣ ಫಲ ಹೊಂದಿದವ ಶ್ರವಣಭಕ್ತಿಯಿದು 64 ದಾಸಕೂಟದ ಭಕ್ತರಿಂ ರಚಿತವಾದ ಸು ಶ್ರಾವ್ಯ ಹಾಡುಗಳನ್ನು ಪಾಡಿ ಕುಣಿಯುತ್ತ ದೇವರನು ನೆನೆನೆನೆದು ಧ್ಯಾನಿಸುವ ಭಕ್ತರೇ ಕೀರ್ತನದ ಭಕ್ತರೆಂದರಿ ಮನುಜ ನೀನು 65 ವ್ಯಾಸ ದಾಸರ ಕೂಟದಿಂದರಿತ ದೇವರನು ಮಾನಸದ ಮಂಟಪದಲ್ಲಿರಿಸಿ ಪೂಜಿಸುತ ಅದನೆ ಪೌನಃಪುನ್ಯದಿಂದ ಮೆಲುಕಾಡುವದು ಸ್ಮರಣಭಕ್ತಿಯಿದೆಂದು ತಿಳಿ ಮನುಜ ನೀನು 66 ಅವತಾರ ರೂಪಗಳ ಮೂರ್ತಿಗಳ ರಚಿಸುತಲಿ ನಿನ್ನ ಚಿತ್ತದ ದೇವರನ್ನಲ್ಲಿಯಿರಿಸಿ ಅವನ ಗುಣಗಳ ನೆನೆದು ಪಾದಸೇವೆಯ ಮಾಡೆ ಪಾದಸೇವನಭಕ್ತಿಯೆಂದು ತಿಳಿ ಮನುಜ 67 ಹೂ ತುಳಸಿ ಮೊದಲಾದ ವಸ್ತುಗಳ ಶೇಖರಿಸಿ ದೇವ ಮೂರ್ತಿಗಳನ್ನು ಇದಿರಲ್ಲಿಯಿರಿಸಿ ಷೋಡಶದ ಉಪಚಾರ ಪೂಜೆಗಳ ನಿತ್ಯದಲಿ ಮಾಡುವುದೆ ಅರ್ಚನದ ಭಕ್ತಿಯಿದು ತಿಳಿಯೈ 68 ಎದೆ ಶಿರಸು ಕಣ್ಣು ಮನ ಕೈಕಾಲು ಮೊಣಕಾಲು ವಾಗೆಂಬುದೆಂಟಂಗಗಳನು ಪಾದದೆಡೆಯೀಡಾಡಿ ನಮಿಸುವುದೇ ವಂದನವು ಸಾಷ್ಟಾಂಗನಮನವಿದು ತಿಳಿಯೈ 69 ದಾಸೋಹವೆಂಬುದನು ತಿಳಿದು ನೀನನವರತ ಫಲದ ಬಯಕೆಯ ತೊರೆದು ಸೇವೆಯನು ಮಾಡೆ ಸೇವಕನ ನಿನ್ನನ್ನು ತನ್ನ ಬಳಿಗೊಯ್ಯುವನು ಭವಬಂಧ ತೊರೆಯಿಸುತ ಪಾಲಿಸುವನವನು 70 ಸಚ್ಚಿದಾನಂದ ಸ್ವರೂಪದವ ಪರಮಾತ್ಮ ತನ್ನ ಗುಣಗಳನ್ನೆಲ್ಲ ಭಕ್ತರಿಗೆ ಕೊಡುವ ನೀರು ಹಾಲನು ನಂಬಿದಂತೆ ನಂಬುವನನ್ನು ಭಕ್ತರಕ್ಷಕನವನು ಮುಕ್ತಿದಾಯಕನು 71 ಕೃಷ್ಣನು ಪರಬ್ರಹ್ಮ ಕೃಷ್ಣನನು ವಂದಿಸುವೆ ಕೃಷ್ಣನಿಂದಲೆ ಸಕಲ ವಿಶ್ವಗಳ ಸೃಷ್ಟಿ ಸುಕೃತ ದುಷ್ಕøತವೆಲ್ಲ ಕೃಷ್ಣನಡಿಯಲಿ ಮುಡಿಯು ಕೃಷ್ಣನಲಿ ಮನವು 72 ಕಾಮಹತಕನು ರುದ್ರದೇವನಿಲ್ಲಿಯೆ ಇದ್ದು ಅಷ್ಟಯತಿಗಳ ಶುದ್ಧಮಾನಸರ ಮಾಡಿ ಬಾಲಯತಿಗಳ ಮೂಲಕವೆ ಪೂಜೆಯನು ಪಡೆದು ರಾರಾಜಿಸುವೆ ದೇವ ಕೃಷ್ಣರೂಪದಲಿ 73 ಭಾರ್ಗವೀಪತಿಯಾದ ಸಿರಿವರನು ಮಾಧವನು ಭಾರ್ಗವೀರೂಪವನು ಶುಕ್ರವಾರದಲಿ ತಾಳ್ದು ಭಕುತರ ಹೃದಯವನ್ನರಳಿಸುವೆ ನೀನು ಮೋಹಿನೀರೂಪವದು ಮೋಹಕವದಲ್ತೆ 74 ಬಲ್ಲಾಳ ವಂಶಜರು ಉಡುಪ ಕುಲದವರೆಂದು ಭಕುತ ಗುರುವಾದಿರಾಜರ ಹಸ್ತದಿಂದ ಮೂರು ಅವತಾರ ಚಿಹ್ನೆಯ ತಾಳ್ದ ಮಾರುತಿಯ ಆರಾಧ್ಯ ಭೂವರಾಹರ ಕೊಡಿಸಿ ಪೊರೆದೆ 75 ದುಷ್ಟ ಜನಮರ್ದನ ಜನಾರ್ದನನು ನೀನಿರುವೆ ನಿನ್ನ ರೂಪವೆ ಪಕ್ಷನಾಥ ಸೇವಿತವು ಚಕ್ರ ಶಂಖಾಸಿ ಪಾನದ ಪಾತ್ರೆಗಳ ಧರಿಸಿ ದುಷ್ಟ ಶಿಕ್ಷಣಕಾಗಿ ಕಾಳಿ ಸೇವಿಪಳು 76 ಜಮದಗ್ನಿಪುತ್ರನಾಗವತರಿಸಿ ನೀನೊಮ್ಮೆ ಕೊಡಲಿಯಿಂ ಕಡಿಕಡಿದು ದುಷ್ಟರಾಜರನು ನಕ್ಷತ್ರ ಮಂಡಲವ ಭೂ ಮಂಡಲವ ಮಾಡಿ ಪರಶುರಾಮನು ಎಂಬ ಪೆಸರನ್ನು ಪಡೆದೆ 77 ಪರಶುರಾಮನು ರಾಮ ಪರಶುರಾಮನು ಕೃಷ್ಣ ಒಬ್ಬನೇ ಹಲವಾರು ರೂಪಗಳ ತಾಳಿ ಸಾಸಿರದ ನಾಮದಿಂ ಸ್ತುತಿಸಿಕೊಳ್ಳುವೆ ಹರಿಯೆ ನಿನ್ನ ಮಾಯಾರೂಪ ತಿಳಿದವರು ಯಾರು? 78 ಮೇಘದೆಡೆಯಿರುವ ಮಿಂಚಿನ ಹಾಗೆ ನೀನೆಂದು ತಿಳಿಸಲ್ಕೆ ನೀನು ಮೇಘದ ವರ್ಣದವನು ನೀಲತೋಯದ ಮಧ್ಯದಲ್ಲಿರುವ ವಿದ್ಯುತ್ತಿನಂತಿರುವಿ ಯೆಂದು ಶ್ರುತಿ ಹೇಳುವುದು ತಿಳಿಯೈ79 ಪುರುಷೋತ್ತಮನೆ ನಿನ್ನ ಪುರವೆಯೆನ್ನಯ ದೇಹ ಉತ್ತಮನು ನೀನಿರುವೆ ಅಧಮ ನಾನಿರುವೆ ಅಜ್ಞಾನದಾಚ್ಛಾದಿಕೆಯನೆನಗೆ ಹಾಕುತಲಿ ಬಿಂಬರೂಪದಲಿದ್ದು ಬೆಳಗಿಸುವೆ ನನ್ನ 80 ಶ್ರವಣಮನನಾದಿ ಸಾಧನದ ಬಲದಿಂದ ನಾ ನನ್ನ ಮುಸುಕನು ತೆಗೆದರೂ ನೀನು ಎನ್ನ ಬಳಿಯಲ್ಲಿದ್ದು ಕಾಣದಿಹೆ ಪರಮಾತ್ಮ ನಿನ್ನ ಪರಮಾಚ್ಛಾದಿಕೆಯ ತೆಗೆದು ತೋರು 81 ಗೋವರ್ಧನೋದ್ಧಾರಿ ಸಿರಿವರನೆ ನೀನೊಮ್ಮೆ ನಾಭಿರಾಜನ ಪುತ್ರನಾಗಿಯವತರಿಸಿ ಅಜನಾಭವೆಂಬ ಮೋಡವನು ಸೃಷ್ಟಿಸಿ ನೀನು ಲೋಕದ ಕ್ಷಾಮವನು ಹೋಗಲಾಡಿಸಿದೆ 82 ನೀನೊಮ್ಮೆ ದಕ್ಷಿಣದ ಕರ್ಣಾಟಕಕೆ ಬಂದು ಅಜಗರದ ವೃತ್ತಿಯಲಿ ದೇಹವನು ತೊರೆದು ನಿರ್ವಾಣ ಬೌದ್ಧಮತ ಜೈನಾದಿ ಮತಗಳಿಗೆ ಮೂಲಪುರುಷನದಾಗಿ ಮೆರೆದೆ ಪರಮಾತ್ಮ 83 ಸತ್ವ ರಜ ತಮವೆಂಬ ಮೂರು ಗುಣ ಪ್ರಕೃತಿಯದು ಪ್ರಾಕೃತದ ದೇಹವನು ಹೊಂದಿದಾ ಜನರು ಹುಟ್ಟುಗುಣ ಮೂರರಿಂ ಕರ್ಮವನು ಮಾಡುತ್ತ ಸುಖ ದುಃಖವನು ಹೊಂದಿ ಜೀವಿಸುವರವರು 84 ಸತ್ಯಾತ್ಮಕನು ನೀನು ಚ್ಯುತಿಯಿಲ್ಲ ಸತ್ಯಕ್ಕೆ ಅಚ್ಯುತನ ನಾಮದಿಂ ಪಾಪ ಪರಿಹರಿಪೆ ಅಂತವಿಲ್ಲದುದಾತ್ಮ ಆತ್ಮರಕ್ಷಕನಾಗಿ ನಾಮದಲನಂತನೆನಿಸಿರುವೆ ಶ್ರೀಹರಿಯೇ 85 ವೇದರಕ್ಷಕನಾಗಿ ಗೋವುಗಳ ರಕ್ಷಿಸುತ ಗೋವಿಂದನಾಮವನು ಧರಿಸುತಲಿ ನೀನು ನಾಮತ್ರಯಗಳಿವನು ಕರ್ಮಾಂತದಲಿ ಪಠಿಸೆ ಕರ್ಮದೋಷದ ಪಾಪ ಪರಿಹಾರವಹುದು 86 ಸಚ್ಚಿದಾನಂದಸ್ವರೂಪ ಹರಿ ನೀನಿರುವೆ ನಿನ್ನ ರೂಪಗಳೆಲ್ಲ ಪೂರ್ಣವಾಗಿಹವು ಜ್ಞಾನವಾನೆಂದವನು ಹೆರವರ್ಗೆ ತಿಳಿಸುತಿರೆ ನಮ್ಮಲ್ಲಿ ಹೆಚ್ಚುವವು ಅದರಿಂದ ಪೂರ್ಣ 87 ಹರದಾರಿ ಸಾವಿರಾರಿದ್ದರೂ ನಾದವನು ಚಣದೊಳಗೆಯಾಕಾಶವಾಣಿ ಕೇಳಿಸುವದು ಕಾಣದಿಹ ವಿದ್ಯುತ್ತುರೂಪವನು ತಾಳಿದವ ದೇವನಲ್ಲದೆ ಬೇರೆ ಯಾರ ಮಾಯೆಯಿದು 88
--------------
ನಿಡಂಬೂರು ರಾಮದಾಸ
ನಾಕೇಶ ವಿನುತೆ | ರ ತ್ನಾಕರನ ತಾಯೆ ಪ ಗೋಕುಲದೊಳಿದ್ದು | ಆಕಳ ಕಾಯ್ದಗೆ ಲೋಕಪಾವನೆ ಸಿರಿಯೆ ಅ.ಪ ನೀರೊಳಗೆ ಇದ್ದು ನಗಭಾರ ಬೆನ್ನಲಿಪೊತ್ತು ಬೇರು ಮೆಲ್ಲುವನಿಗೆ | ಚೀರಿ ಕಂಭದಿ ಬಂದು | ಘೋರ ರೂಪದಿ ಬಲಿ ದ್ವಾರ ಕಾಯ್ದವಗೆ | ವೀರ ನೆನಿಸಿ ಪೆತ್ತ | ನಾರಿಯ ಶಿರವ ಸಂ ಹಾರಮಾಡಿದವಗೆ | ಭೂರುಹಚರ ಪರಿವಾರ ದೊಳಗಿದ್ದು ದಧಿ ಚೋರನೆನಿಸಿದವಗೆ 1 ಸಂದೇಹವಿಲ್ಲದೆ ವಸನ ತ್ಯಜಿಸುತ ಬಂದು ನಿಂದವನಿಗೆ | ಇಂದಿರಾಧವ ನಿನ್ನ ಹಿಂದೆ ಬಂದವನ ಅಂದು ಕೊಂಡವನಿಗೆ | ಕುಂದರದನೆ ನಿನ್ನ ಪೊಂದದೆ ಛಂದದಿ ಕಂದರ ಪಡೆದವಗೆ 2 ಜಾತಿಯನರಿಯದೆ ಶಬರಿಯ ಎಂಜಲ ಪ್ರೀತಿಲಿ ಉಂಡವಗೆ ಶ್ವೇತವಾಹನಜಗೆ ತಾ ಸೂತನೆಂದೆನಿಸುತ ಖ್ಯಾತಿ ಪಡೆದವಗೆ ನೀತಿ ಇಲ್ಲದೆಯ ಮಾತೆಯ ಅನುಜನ ಘಾತಿಸಿದಾತನಿಗೆ || ವಾತಾಶನವರ ತಲ್ಪದೊಳು ಮಲಗಿದ ಶಾಮಸುಂದರ ಧೊರೆಗೆ 3
--------------
ಶಾಮಸುಂದರ ವಿಠಲ
ನಾಮ ಮುದ್ರೆಯ ಧರಿಸೋ ಶ್ರೀಹರಿಯ ದಿವ್ಯ ಪ ನಾಮ ಮುದ್ರೆಯ ಧರಿಸೆ ಆ ಯಮನಾಳುಗಳ ಭೀಮವಿಕ್ರಮದ ಭಯ ಲೇಶವಿಲ್ಲವೋ ಅ.ಪ ಚಕ್ರದೊಳು ಹೀಂಕಾರನಾಮಕನಾಗಿ ನಕ್ರವೈರಿಯ ಕಾಯ್ವ ತಮವನ್ನು ಹರಿಸಿ ವಿಕ್ರಮ ಕೃಧ್ಧೋಲ್ಕ ತಮಲೋಕದೊಳು ಇದ್ದು ಚಕ್ರಧರಿಸದ ಜೀವರ ಕ್ರೂರತನದಲಿ ಶಿಕ್ಷಿಪಾ 1 ಶಂಕಿಸುವವನ ಪಾಪಪಂಕದೊಳಿಟ್ಟು ಮಂಕುಕವಿಸಿ ಮಹೋಲ್ಕ ಶಿಕ್ಷಿಪನಯ್ಯ 2 ಗದೆಯೊಳು ನಿಧನನಾಮಕ ಹರಿಯು ತಾನಿದ್ದೂ ಮುದದಿ ಮರೆಯುವವರನಾ ವೀರೋಲ್ಕ ತಾ ನಿತ್ಯ 3 ಪದುಮನೊಳು ಪ್ರಸ್ತಾವನಾಮದಿ ಪದ್ಮರಹಿತ ಮಾನವರ ದ್ಯುಲ್ಕರೂಪದಿ ನಿತ್ಯ 4 ನಾರಾಯಣ ಮುದ್ರೆಯೊಳು ಉದ್ಗೀಥನು ಹರಿಭಕುತರ ಅಂಧತಾಮಿಶ್ರ ಕಳೆವನು ದುರುಳ ಕಲ್ಯಾದ್ಯರ ಸಹಸ್ರೋಲ್ಕ ರೂಪದಿ ಕ್ರೂರತನದಿ ಅಂಧಂತಮದೊಳಿಡುವನು 5 ನೇಮದಿ ದ್ವಾದಶ ಊಧ್ರ್ವಪುಂಡ್ರಗಳು ಕಮಲ ತುಲಸಿಮಣಿಮಾಲೆಗಳ ಕೊರಳೊಳು ಯಮನಾಳುಗಳ ಭಯ ಲೇಶವಿಲ್ಲೆಂದಿಗೂ 6 ಪಂಚ ಪಂಚ ಕರಣಗಳ ಕಾರ್ಯ ಒಪ್ಪಿಸೇ ಪಂಚನರಕಬಾಧೆ ಕಿಂಚಿತ್ತ್ತಾದರು ಇಲ್ಲ ಪಂಚಾನನನುತ ಶ್ರೀ ವೇಂಕಟೇಶನ ದಿವÀ್ಯ7
--------------
ಉರಗಾದ್ರಿವಾಸವಿಠಲದಾಸರು
ನಿತ್ಯ ನಿತ್ಯದಲಿ ಧೂಪ ಪ ನಾನದಾರಿಹೆನೆಂದು ತಿಳಿದವಗೆ ಧೂಪನಾನು ಆತ್ಮವು ಎಂದು ಕಂಡವಗೆ ಧೂಪನಾನಾ ಜೀವ ಭ್ರಾಂತಿಯಳಿದವಗೆ ಧೂಪತಾನೆ ತಾನಾಗಿಹೆನೆಂದವಗೆ ಧೂಪ 1 ಸಂಸಾರದೊಳು ಇದ್ದು ಇಲ್ಲದವನಿಗೆ ಧೂಪಸಂಸಾರ ಸಂತೆಂದು ಕಂಡವಗೆ ಧೂಪಸಂಸಾರ ಲೇಪ ಅಂಟದವನಿಗೆ ಧೂಪಸಂಸಾರದೊಳು ಮುಕ್ತನಾದವಗೆ ಧೂಪ2 ಸೂರ್ಯ ಚಂದ್ರ ಸ್ವರದಿ ನಡೆದವಗೆ ಧೂಪಆರು ಚಕ್ರದಿ ನಡೆದವಗೆ ಧೂಪಭೋರೆನಿಪ ಓಂಕಾರ ಕೇಳ್ದವಗೆ ಧೂಪಧೀರ ಚಿದಾನಂದ ಗುರುವಾದವಗೆ ಧೂಪ 3
--------------
ಚಿದಾನಂದ ಅವಧೂತರು
ನಿನಗಿನಿತು ಮಮಕಾರವಿರಲೆನಗೆ ಭಯವೇನು ಚಿನುಮಯನೆ ಧನ್ಯ ನಾನು ಪಜನಕ ನೀನೆನಗಾದೆ ತನುಜ ನಾ ನಿನಗಾದೆ ಘನಮಹಿಮ ಕಾಮಧೇನು ನೀನು ಅ.ಪಜನ್ಮಕೋಟಿಗಳಲ್ಲಿ ಪುಣ್ಯಕರ್ಮಗಳನ್ನು ಮುನ್ನ ಮಾಡಿಸಿದೆ ನೀನುಮುನ್ನಿನಾ ದೇಹಗಳು ಭಿನ್ನವಾಗಲು ಕರ್ಮವಿನ್ನುಳಿವ ಬಗೆಯದೇನುಚಿನ್ಮಯನೆ ತನುಕರಣ ಭಿನ್ನವಾದರು ಸಾಕ್ಷಿ ನಿನ್ನೊಳಿಂಬಿಟ್ಟೆಯವನುಸನ್ನುತನೆ ಬಾಲಕನಿಗುಣ್ಣ ಕಲಿಸುವ ತೆರದಿ ನಿನ್ನನಿತ್ತುದೇನೆಂಬೆನು ನಾನು 1ದುಷ್ಟಸಂಗವ ಬಿಡಿಸಿ ದುರ್ಬುದ್ದಿಯನು ಕೆಡಿಸಿ ಶಿಷ್ಟರೊಳು ತಂದು ನಿಲಿಸಿಕಷ್ಟಸಾಧನಗಳನು ಮುಟ್ಟಲೀಸದೆ ಸುಲಭ ನಿಷ್ಠೆಯಲಿ ಚಿತ್ತವಿರಿಸಿಹುಟ್ಟುಹೊಂದುಗಳನ್ನು ಕೊಟ್ಟು ಮೋಹಿಸುತಿರುವ ಪುಟ್ಟ ಫಲಗಳ ತೇಲಿಸಿಮುಟ್ಟಿ ನಿನ್ನಯ ಪದವನಿಟ್ಟು ಹೃದಯಾಂಬುಜದಲಿಷ್ಟಮೋಕ್ಷವ ತೋರಿಸಿ ನಿಲಿಸಿ 2ವಿದ್ಯವಿಸ್ತರವಾದರದ್ದುವದು ಗರ್ವದಲಿ ಬುದ್ಧಿ ನಿಲ್ಲದು ನಿನ್ನಲಿಇದ್ದು ವೃದ್ಧರ ಪಥದಿ ಹೊದ್ದಿ ಶುದ್ಧತ್ವವನು ಶ್ರದ್ಧೆ ಸೇರದು ನಿನ್ನಲಿಉದ್ದುರುಟುತನದಿಂದ ಬಿದ್ದು ವಾದದ ಮಡುಹವದ್ದು ಸುಕೃತವ ಕಾಲಲಿಇದ್ದ ನಿಜಸ್ಥಿತಿುವಗೆ ಸಿದ್ಧವಾಗದುಯೆಂದು ನಿರ್ಧರಿಸಿ ನೀನೆ ದಯದಿ ಇಲ್ಲಿ 3ಅನಿಮಿತ್ತ ಬಂಧು ನೀನೆಂಬುದನು ಫಲುಗುಣನು ಮನದೊಳೆಣಿಸಿದುದಿಲ್ಲವೆಅಣುಮಾತ್ರದುಪಕಾರ ಜನರಿಂದ ನಿನಗುಂಟೆ ಮನಕೆ ದೂರ ನೀನಲ್ಲವೆವನಜಭವ ದಿಕ್ಪಾಲ ಮನುಗಳೈಶ್ವರ್ಯಗಳು ನಿನಗೆ ಗಣನೆಗೆ ಬರುವವೆಇನಿತು ಬ್ರಹ್ಮಾಂಡಗಳ ನೆನದು ನಿರ್ಮಿಸಿ ಬಳಿಕ ಕ್ಷಣದೊಳಳಿಸುವದಿಲ್ಲವೆ ನಿಜವೆ 4ನಿನ್ನ ಭಜಿಸುವ ಭಾವವಿನ್ನುಂಟೆ ಜಡಮತಿಗೆ ಅನ್ಯವಿಷಯದಿ ಮೋಹಿಸೆತನ್ನ ಮರೆದತಿದುಃಖದುನ್ನ ತದ ಸಂಸಾರ ವೆನ್ನದೆನ್ನುತ ದುಃಖಿಸೆನಿನ್ನ ನೆನಯದೆ ಬಹಳ ಜನ್ಮವೇಗದ ನದಿಯಲುನ್ನಿಸುವ ಕರ್ಮ ಹೊದಿಸೆಭಿನ್ನ ಬುದ್ಧಿಯಲೊಂದಿ ತನ್ನ ತಾನರಿಯದಿರೆ ನಿನ್ನಿಂದ ಮುಕ್ತನೆನಿಸೆ ನಿಲಿಸೆ 5ಚಲಿಸದಂದದಿ ಮನವ ನಿಲಿಸಿ ನಿನ್ನೊಳು ಬಾಹ್ಯವಳಿವ ಬಗೆುಲ್ಲವಲ್ಲನಳಿನನಾಭನೆ ನೀನು ಸುಲಭನೇ ಯೋಗಿಗಳು ಬಳಲುವರು ಕಾಣರಲ್ಲನಿಲುವೆ ಮನದಲಿ ನೀನೆ ಸಲಹೆಂದು ಭಜಿಸಿದರೆ ಗೆಲರೆ ಸಂಸೃತಿಯನೆಲ್ಲತಿಳುಹಿ ಸುಲಭದ ದಾರಿಯೊಳಗೆನ್ನ ನೀನಿರಲು ಬಳಲುವಿಕೆುಲ್ಲವಲ್ಲಾ ಲಲ್ಲಾ 6ಬಿನುಗು ಭೋಗವನುಂಡು ಜುಣುಗಿ ಮತ್ತದರಲ್ಲಿ ಮನವೆರಗಿ ಮುಳುಗುತಿಹುದುತನುವಿನಭಿಮಾನದಲಿ ನೆನಹು ತಗ್ಗದು ಮತ್ತೆ ಕನಲಿ ಮುರಿದೇಳುತಿಹುದುಅನುವರಿಯದಂಧತಮದಲಿ ತಾನು ನೆರೆಹೊಕ್ಕು ಘನದುಃಖಬಡುತಲಿಹುದುಇನಿತವಸ್ಥೆಯಲಿರುವ ಮನಕೆ ಸಿಕ್ಕಿರಲೆನ್ನ ದಿನಕರನೆ ಕೈವಿಡಿವುದು ಸೆಳೆದು 7ಧ್ಯಾನ ಧಾರಣೆುಂದ ನಿನ್ನ ಮೂರ್ತಿಯ ನಿತ್ಯ ಮಾನಸದಿ ನಿಲಿಸಬೇಕುಧ್ಯಾನಾಂಗ ನಿಯಮಗಳನಭ್ಯಾಸವಂ ಮಾಡಿ ತಾನು ತಾನಾಗಬೇಕುಏನೊಂದ ಕಂಡರೂ ನಾಮರೂಪವ ಬಿಟ್ಟು ನೀನೆಂದು ನಿಲ್ಲಬೇಕುಏನೆಂಬೆನಿವನೆಲ್ಲ ನೀನೆ ಸಾಧಿಸಿಕೊಟ್ಟು ದೀನನನು ಸಲಹಬೇಕು ಸಾಕು 8ಪರಮ ಕರುಣಾನಿಧಿಯೆ ಪರಿಪೂರ್ಣ ಪರಮೇಶ ಪರಮಸಂವಿದ್ರೂಪನೇಶರಣಜನಸುರಧೇನು ದುರಿತಭೂಧರಕುಲಿಶ ಕರಿವರನ ರಕ್ಷಿಸಿದನೇಮರೆಯೊಕ್ಕೆ ನಿನ್ನಡಿಯ ಮರವೆಯನು ಪರಿಹರಿಸು ಅರಿವಿನೊಳು ಪೊಗಿಸು ನೀನೆತಿರುಪತಿಯ ನೆಲೆವಾಸ ವರದ ವೆಂಕಟರಮಣ ಅರವಿಂದದಳನೇತ್ರನೆ ಅಜನೆ 9ಓಂ ಜಲಕ್ರೀಡಾಸಮಾಸಕ್ತಗೋಪೀವಸ್ತ್ರಾಪಹಾರ ಕಾಯ ನಮಃ
--------------
ತಿಮ್ಮಪ್ಪದಾಸರು
ನಿನ್ನ ವಶದಲಿ ಇದ್ದು ಇದ್ದು ಮುನ್ನೆ ದುರ್ವೃತ್ತಿಗೆ ಪೋಗುವುದೆನ್ನ ಮನಾ ಪ ಚಿತ್ರವಾದ ಕರಿಯ ಶೃಂಗರಿಸಿ ಮೇಲೆ ಛತ್ರಿಗೆ ನೆರಳಲ್ಲಿ ಕುಳ್ಳಿರೆನೆ ಆನೆ ಕೆಳಗೆ ಇಳಿದು ಬೂದಿಯೊಳಗಿಪ್ಪ ಕತ್ತೆ ಏರುವನೆಂದು ಇಚ್ಛೆ ಮಾಡುತಲಿದೆ 1 ಕಾಲಕಾಲಕೆ ಸುಧಿಯ ಸವಿದು ಮಾಣಿಕದ ಉಯ್ಯಾಲೆ ಮೇಲಾಡುತ್ತ ಬಾಳು ಎನೆ ತಾಳವೃಕ್ಷವನೇರಿ ತಲೆಕೆಳಗಾಗಿ ತಾ ಬೀಳುವೆನೆಂದು ಅಪೇಕ್ಷೆ ಮಾಡುತಲಿದೆ 2 ವೇಣಿ ಮಾಧವರಾಯಾ ನಿನ್ನ ಚರಣಾಂಬುಜ ಕಾಣುವ ಪ್ರಕಾಶ ಉದಾಸಸಿ ಕ್ಷೋಣಿಯೊಳಗೆ ಮಹಾ ಕತ್ತಲೆ ಬಯಸುವೆ ಹೀನನಂತೆಯಾದೆ ವಿಜಯವಿಠ್ಠಲರೇಯಾ 3
--------------
ವಿಜಯದಾಸ
ನೀನೆ ಗುರುವಾಗೆನಗೆ ಕೋನೇರಿವಾಸ ಙÁ್ಞನವಿಲ್ಲದ ಮನುಜ ತಾನಿದ್ದು ಫಲವೇನು ಪ ನಾಳವಿಲ್ಲದ ಘಂಟೆ ಭಾರವಾಗಿದ್ದರೇನು ತೋಳ ಬಲಹಿಲ್ಲದವ ದೊರೆಯಾದರೇನು ಹಾಳು ಭೂಮಿಯು ತನ್ನ ಮೂಲವಾದರೆಯೇನು ಬಾಳಲೀಸದ ಮನೆಯ ಬಲವಂತವೇನು 1 ತಿದ್ದಬಾರದ ತೇಜಿ ಉದ್ದವಾಗಿದ್ದರೇನು ಮೂರ್ತಿ ಮುದ್ದಾದರೇನು ಕದ್ದ ಕಳ್ಳನ ಮಾತು ಬದ್ಧವಾದರೆಯೇನು ಮದ್ದನರಿಯದೆ ಧಾತು ತಿಳಿದಿದ್ದರೇನು 2 ಗೊಡ್ಡು ದನವಿನ ಕ್ರಯವು ಅಡ್ಡವಾದರೆಯೇನು ಬಡ್ಡು ಅರಸಿನ ಬಂಟನೊಡ್ಡೊಕ್ಕರೇನು ಹೆಡ್ಡನಾದವ ಬಹಳ ಗಡ್ಡವಿರಿಸಿದರೇನು ಕಡ್ಡಾಯದಂಗಡಿಯಲಿದ್ದು ಫಲವೇನು3 ಒಕ್ಕಲಿಲ್ಲದ ಊರು ಮಕ್ಕಳಿಲ್ಲದ ಮನೆಯು ಅಕ್ಕರಿಲ್ಲದ ತವರು ಇದ್ದು ಫಲವೇನು ಚೊಕ್ಕ ಹೆಂಡತಿಯವಳ್ಗೆ ತಕ್ಕ ವರನಿಲ್ಲದಿರೆ ಕುಕ್ಕೆ ತುಂಬಿದ ರೊಕ್ಕವಿದ್ದು ಫಲವೇನು 4 ಬಡಿಗೆಯಿಲ್ಲದೆ ಚಿನ್ನ ಕಡಗವಾಗುವುದೇನೊ ಪೊಡವಿ ಕಡಿಯದೆ ಬೆಳೆಯ ನೆಡುವುದೇನೊ ಕಡಗೋಲು ಹೊರತಾಗಿ ಬೆಣ್ಣೆ ತೋರುವುದೇನೊ ತುಡುಬು ಬಡಿಯದೆ ಧ್ವನಿಯ ಕೊಡುವುದೇನೊ 5 ಅಡವಿಯೊಳಗಿಹ ವೇಣು ತಿದ್ದಿದರೆ ಮೈಗೊಟ್ಟು ಕಡುಹುಳ್ಳ ದೊರೆಗಳನು ಹೊರವುತಿಹುದು ಶುಕ ಪಕ್ಷಿಯನು ಅಡಗಿಸಿಯೆ ಹಾಲೆರೆದು ಒಡನೆ ಹೇಳಿದ ನುಡಿಯ ತಾ ನುಡಿವುದು 6 ಬಂಟ ಬಿಡದೆ ಸೇವೆಯ ಮಾಳ್ಪ ಮಡದಿ ತಾ ಚೆಲುವಾಗಿ ಅಡಿಗೆ ಮಾಡುವಳು ಕಡೆಯ ಕಾಲಕೆ ತನ್ನ ದೃಢ ಬುದ್ಧಿ ಹಿಂಗುವುದು ಒಡೆಯನನು ಭಜಿಸಲಿಕೆ ಮನವಿಲ್ಲವು 7 ಗುರುವಾಗು ಇಹಪರಕೆ ಸ್ಥಿರವಾದ ಸೌಖ್ಯವನು ಒರೆದು ಮಾರ್ಗವ ತೋರು ಉರಗಗಿರಿವಾಸ ಗುರುವೆಂದು ಭಾವಿಸಿಯೆ ಕರಮುಗಿದು ಶಿರಬಾಗಿ ಸರಸಿಜಾಂಘ್ರಿಯ ನೆನೆವೆ ವರಾಹತಿಮ್ಮಪ್ಪ 8
--------------
ವರಹತಿಮ್ಮಪ್ಪ
ನೋಡಿ ನೋಡಿ ಸತ್ಯಪ್ರಿಯರ ನಾ ನಿಂದು ನಿಂದು ಪಾಡಿ ಪಾಡಿ ಯೋಗಿವರ್ಯರ ನಾ ಪಾಡಪಂಥದಲಿ ಬಂದ ಮೂಢ ಮಿಥ್ಯಾವಾದಿಗಳ ಓಡಿಸಿ ತನ್ನನು ಕೊಂ ಡಾಡಿದವರ ಪೊರೆವ ಯತಿಯ ಪ ನಾಗಸರ ನಾಗಬಂಧ ಕೊಂಬು ಕೊಳಲು ರಾಗದಿಂದ ಪಾಡುವ ಸನಾಯಿಸುತಿಗಳು ಬೇಗಿ ಕೂಗುವ ಹೆಗ್ಗಾಳೆ ದುಂದುಭಿ ಎಸಿಯೆ ಚತು ಪರಿಯಂತ ಮೆರೆದ ಯೋಗಿಗಳಾಗ್ರಣ್ಯನ1 ವಾದಿಗಳೆದೆಯು ಬಿರಿಯೆ ಧವಳ ಶಂಖದಾ ನಾದ ಒಪ್ಪ್ಪಿಸುತ್ತಿ ಮೆರೆವ ಬಿರಿದು ಸಮುದಾಯ ಮೇದಿನಿ ಸುರರು ಬಲದಾರಿಯಲಿ ಬರೆ ಆಶೀ ರ್ವಾದವನ್ನು ಕೊಡುವ ಧೀರನು 2 ಗಜ ಪಾಯಿದಳನೇಕಸಂದಣಿ ಯೋಜನದಗಲಕೆ ಘೋಷಣವಾಗಲು ರಾಜಾಧಿರಾಜರು ಪೂಜೆಯನ್ನು ಮಾಡುತಿರೆ ಈ ಜಗದೊಳಗೆ ಸಿದ್ಧ ತೇಜಪುಂಜರನ್ನ 3 ಅದ್ವೈತಮತಶಾಸ್ತ್ರ ವದ್ದು ಕಳವುತ ಮಧ್ವಮತವ ಎಂಬೊ ಸುಧಾಬ್ಧಿಗೆ ರಾಕೇಂದುನಂತೆ ಇದ್ದು ಭವರೋಗಳಿಗೆ ಮದ್ದು ಅಹುದೋ ಸುಗುಣದವರ4 ಹಿಂಡು ಬರಲಾಗಿ ಕಂಡು ಹರುಷದಿಂದ ಸಭಾಮಂಡಿತರಾಗಿ ಖಂಡ ತುಂಡು ಮಾಡಿ ಅವರ ದಿಂಡುಗೆಡಹಿ ಮಂಡಲಕೆ ಪುಂಡರಿಕಾಕ್ಷನೆ ಉದ್ದಂಡನೆಂದು ಸಾರಿದರನ5 ಬಿಜವಾಡದಲಿ ಕೃಷ್ಣ ತಜ್ಜಲದೊಳು ದುರ್ಜಂತುಗಳು ನರರಾ ಬೆಚ್ಚರಿಸಲು ಪ್ರಜ್ವಲಿಸುತ ಪೋಗಿ ಮಾರ್ಜನೆ ಯನ್ನು ಗೈದು ಭೀತ ರಾಜಝರವ ಬಿಡಿಸಿ ಕಾಯಿದ ಸಜ್ಜನರ ಮನೋಹರ 6 ದೇಶÀದೊಳೀ ಶೇಷವಾದ ದಾಸರ ಪ್ರಿಯ ಸಿರಿ ವಿಜಯವಿಠ್ಠಲೇಶನಂಘ್ರಿಯ ಸಾಸಿರ ದಳದ ಧ್ಯಾನ ಮೀಸಲಾಗಿ ಮಾಡುತಿಪ್ಪ ದೋಷರಹಿತರಾದ ಸಂ ನ್ಯಾಸ ಕುಲಭೂಷಣನಾ 7
--------------
ವಿಜಯದಾಸ
ನೋವುಗಳ ತಾಳಲಾರೆ ನೊಂದುಕೊಂಡು ಇರಲಾರೆ ಕಾವುದಯ್ಯ ವೆಂಕಟೇಶ ಕರುಣದಿಂದೆನ್ನ ಪ ಕಣ್ಣಿಗೆ ಕಾಣದ ನೋವು ಹುಣ್ಣುಗಳಿಲ್ಲದ ನೋವು ಬಣ್ಣವು ಮಾಸಿದ ನೋವು ಬಲುಹಾದ ನೋವು ಎಣ್ಣಿದುಯಿಲ್ಲದ ನೋವು ಎಣಿಕೆಗೊಳ್ಳದ ನೋವು ಬಣ್ಣನೆ ನುಡಿಯ ನೋವು ಬಂದೀತು ನೋವು 1 ದುಷ್ಟರಿಂದ ನೊಂದ ನೋವು ಹೊಟ್ಟೆಯೊಳ್ಹುಟ್ಟಿದ ನೋವು ಕಷ್ಟಗಳ ಬಿಟ್ಟ ನೋವು ಕಡುಹಾದ ನೋವು ಇಷ್ಟರು ಇಲ್ಲದ ನೋವು ಇಂತಾದ ನೋವು 2 ಬಡವನಾಗಿಹ ನೋವು ಒಡೆಯರಿಲ್ಲದ ನೋವು ಕೇಡುಗರ ನುಡಿಯ ನೋವು ಕೆಟ್ಟಿಹ ನೋವು ಪಡೆದ ಕರ್ಮದ ನೋವು ಪಾಪವೆಂಬುದು ನೋವು ಕಡೆಯ ಕಾಲದ ನೋವು ಕಾಳಾಹಿ ನೋವು 3 ವಿದ್ಯೆವಿಲ್ಲದ ನೋವು ಬುದ್ಧಿ ಕೆಟ್ಟಿಹ ನೋವು ಸಿದ್ಧಿಯಿಲ್ಲದ ನೋವು ಸಿಟ್ಟೊಂದು ನೋವು ಇದ್ದುಯಿಲ್ಲದ ನೋವು ಇಚ್ಛೆಗೊಳ್ಳದ ನೋವು ಬದ್ಧವಾಗಿಹ ನೋವು ಬಳಲುವ ನೋವು 4 ಇಂತು ನೋವುಗಳೆನ್ನ ಭ್ರಾಂತಿಯನು ಬಡಿಸುತಿವೆ ಪಂಥ ಬೇಡವೊ ಲಕ್ಷ್ಮಿಕಾಂತಯೆನ್ನಯ ಬಳಿಗೆ ಅಂತರಂಗದಿ ಬಂದು ಚಿಂತಿತಾರ್ಥತವನೀಯೊ ಯಂತ್ರದಾಯಕನಾದ ವರಾಹತಿಮ್ಮಪ್ಪರಾಯ 5
--------------
ವರಹತಿಮ್ಮಪ್ಪ
ಪಟ್ಟಿಯು ಬಂದಿಲ್ಲ ಕೃಷ್ಣ ಪಟ್ಟಿಯು ಬಂದಿಲ್ಲ ಪಟ್ಟಿಯು ಬಾರದೆ ಕಟ್ಟಲು ಸಾಧ್ಯವೆ ಪ ನಿಷ್ಠುರ ಮಾಡದೆ ಇಷ್ಟ ಬಂದುದ ಮಾಡೊ ಅ.ಪ ಬುದ್ಧಿಯು ಸಾಲದೆ ಬಿದ್ದೆನೋ ಸಾಂಕೆ ಬದ್ದನಾಗಿರುವೆನೋ ತೀರಿಸಲು ಇದ್ದು ಇಲ್ಲೆಂಬುವ ಸುದ್ದಿಯ ಪೇಳುವ ಕ್ಷುದ್ರ ನಾನಲ್ಲವೋ ಉದ್ಧರಿಸಯ್ಯ 1 ಕೊಟ್ಟ ಭಾಗ್ಯವನು ದೂಷ್ಯ ರೀತಿಯಲಿ ಕುಟ್ಟಿ ಕೋಲಾಹಲ ಮಾಡಿದೆನೊ ಇಷ್ಟು ದಿನವು ಬಡ್ಡಿ ಕಟ್ಟಲಿಲ್ಲವೆಂದು ಸಿಟ್ಟು ಮಾಡಿದರೆ ಕೆಟ್ಟು ಹೋಗುವೆನೊ 2 ಭೃತ್ಯರ ಸಲಹುವ ಸತ್ಯ ಸಂಕಲ್ಪನೆ ಭೃತ್ಯನಾಗಿ ನಾ ಸೇವೆಯ ಮಾಡುವೆ ಭಕ್ತರು ಈ ಜನ ಭಕ್ತ ಪ್ರಸನ್ನ ನಾ ನಿತ್ತ ಸಾಲಗಳು ಉತ್ತಾರಾಯಿತೆಂಬೊ 3
--------------
ವಿದ್ಯಾಪ್ರಸನ್ನತೀರ್ಥರು
ಪದ್ಯ ಅಥಃ ಪ್ರಥÀಮೋಧ್ಯಾಯ ಪಾದ ವಾರಿಜಕೆರಗುತ ನೀರಜ ಮುಖಿ ಸರಸ್ವತಿಯಾ || ಸಾರ ಭಕ್ತಿಲಿ ಸ್ತುತಿಸಿ ಪೇಳುವೆ ಸತ್ಯ ಚಾರು ಕಥೆಯಾ ಪ ಸುರಮುಖಿವಂದಿತ ಸರಸಿಜ ಭವಪಿತ ಶರಧಿ ಕರಿವರದಾ | ಹರುಷದಿಂದಲಿ ನಿನ್ನ ಚರಿತೆ ಕೊಂಡಾಡಲು ವರವ ಪಾಲಿಸು ದಯದಿಂದ 1 ಶರನಿಧಿ ಸಂಭೂತೆ ಸುರಜೇಷ್ಟ ಸ್ಮರಮಾತೆ ಪುರಹರ ವಂದಿತೆ ಖ್ಯಾತೆ || ಸ್ಮರಿಸಿ ಬೇಡುವೆ ನಿನ್ನ ಧೊರಿಯ ವರ್ಣಿಸಲೀಗ ಗರಿಯೆ ವರವ ಸುಖದಾತೆ 2 ಹರಿಕುಲೋತ್ತುಮ ನಿನ್ನ ಸರಸಿಜ ಪದಯುಗ ನೆರೆನಂಬಿದೆನು ಮುದಿಂದ || ಹರಿಸುಚರಿತ್ರವು ಅರುಹಲು ಎನ್ನಗೆ ಸ್ಥಿರ ಬುದ್ಧಿಕೊಡು ವಾಯುಕಂದ 3 ಗಿರಿಜೇಶ ಶಚಿಪತಿ ಸುರತತಿಗೆರಗುವೆ ಪರಮ ಸುಭಕ್ತಿ ಪೂರ್ವಕದಿ || ಹರಿದಾಸ ವರ್ಗಕೆ ಶುಭನೀಡಲೆನಗೆಂದು ಶಿರಬಾಗಿ ಬೇಡುವೆ ಮನದಿ 4 ಘನತರ ನೈಮಿಷವನದೊಳು ವಾಸಿಪ ಮುನಿ ಸೂತನಲ್ಲಿಗೆ ಬಂದು | ವಿನಯದಲಿ ವಿಜ್ಞಾಪನ ಮಾಡಿಕೊಂಡರು ಶೌನಕಾದಿಗಳೆಲ್ಲ ನಿಂದು 5 ಕ್ಷಿತಿಯೊಳು ಮನದಾಸೆ ಹಿತದಿಂದ ನೀಡುವ | ವ್ರತದಾವದ್ಹೇಳಿರೆನುತ || ಅತಿ ಭಕ್ತಿಯಿಂದ ಕೇಳುವ ಮುನಿಗಳ ಕಂಡು ಕಥಿಸಿದನಾಗೆತಿ ಸೂತಾ 6 ಛಂದದಿ ಕೇಳಿರಿ ಒಂದೆ ಮನದಿ ಈಗಾ | ನಂದದಿ ನಾರದ ತಾನೂ || ಹಿಂದಕ್ಕೆ ಈತೆರ ನಂದನ ಗೋ ವಿಂದನ ಪ್ರಶ್ನೆ ಮಾಡಿದನೂ 7 ಕಾರುಣ್ಯದಿಂದಲಿ ಸಾರಸೋದ್ಭವಕು | ಮಾರ ನಾರದ ಮುನಿವರಗೆ || ಶೌರಿ ಪೇಳಿದ ಕಥೆ ಸಾಧುವೆ ಮೋದದಿ ನಿಮಗೆ 8 ವರಸುರ ಲೋಕಾದಿ ಚರಿಸುತ್ತನಾರದ | ಹರುಷದಿ ಭೂಮಿಗೆ ಬರಲು || ನರರತಿ ಕಷ್ಟದಿ ಮರುಗುವದಂ ನೋಡಿ | ಪೊರೆಟರು ಹರಿಗ್ಹೇಳಿ ಕೊಳಲು 9 ಪದುಮಜ ಸುತ ನಾರದ ಮುನಿ ವೇಗದಿ | ವಿದುಧರ ವಂದಿತನಾದ || ಯದುಪನಲ್ಲಿಗೆ ಬಂದು ಮುದಮನದಿಂದಲಿ | ವಿಧ ವಿಧದಲಿ ಸ್ತುತಿಗೈದಾ 10 ಅಗಣಿತ ಮಹಿಮನೆ ತ್ರಿಗೂಣ ವರ್ಜಿತ ತ್ರಿವಿಕ್ರಮನೆ || ಪೊಗಳುವ ತವ ಪದಯುಗಕೆರಗುತ ನಾನು ಜಗದುತ್ವತ್ತಿ ಕಾರಣನೆ 11 ಮಗಳಲ್ಲಿ ಪುಟ್ಟದಿ ಮಗನನ್ನು ಕುಟ್ಟದಿ | ಮಗನ ಮಗಳ ಮದುವ್ಯಾದಿ || ಮಗನ ಮಗನ ವರಪಡೆದಾತನ ಜೈಸಿ ಮಗನ ಮಗನ ನೀನು ತಂದಿ 12 ಸಿಂಧುಜರಿಪ್ರಸಖ ನಂದನ ಕೊಂದನ | ತಂದೆಯ ತಂದೆಯಾ ಸುತೆಯಾ || ನಂದಿನಿಯಳಿಗಾಗಿ ನೊಂದಿದಿ ನೀ ನರ ರಂದದಿ ಕವಿಗಣಗೇಯಾ 13 ಘನ್ನ ಮಹಿಮ ನಿನ್ನ ಅನಂತ ಚರಿಯವ ಬಣ್ಣಿಸ ಬಲ್ಲೆನೆ ದೇವಾ || ಪನ್ನಗರಾಜಗಾಗಣ್ಯವಾಗಿಪ್ಪುದು ಮನ್ನಿಸು ಎನ್ನ ಬಿನ್ನಪವಾ 14 ಬಾ ಮುದ್ದು ನಾರದನೆ ಬಾ ಮುನಿವರ್ಯನೆ ಬಾ ಮೂರು ಭುವನ ಸಂಚಾರಿ ನೇಮದಿಂದಲಿ ನಿನ್ನ ಕಾಮಿತ ಪೇಳೀಗ ಪ್ರೇಂದಿಂದಲಿ ವೀಣಾಧಾರಿ 15 ಮುರಹರ ನಿನ್ನಗೆ ಅರಿಯದ ವಾರ್ತೆಯು | ಧರಣಿ ತ್ರಯದಿ ಉಂಟೇನೋ || ನರರತಿ ಕಷ್ಟದಿ ಮರುಗುತಲಿಪ್ಪರು ಹರಿಪೇಳಿದಕುಪಾಯವನು 16 ಸತ್ಯಲೋಕೇಶನ ಪುತ್ರನೆ ನಿನ್ನಯ | ಉತ್ತಮ ಪ್ರಶ್ನೆಗೆ ನಾನು || ಚಿತ್ತೈಸು ಮುನಿವರ ನೀನು 17 ನಾರದ ಶ್ರೀ ಸತ್ಯನಾರಾಯಣ ವ್ರತ ಧಾರುಣಿಯೊಳಗಿನ ಜನರು ಆರು ತಮ್ಮ ಪರಿವಾರದಿಂದಲಿ ಗೈಯ್ಯೆ ಭೂರಿ ಸೌಖ್ಯದಿ ಮೆರೆವರೋ 18 ದೇವನೆ ಈ ನಿನ್ನ ಸೇವಕನಿಗೆ ಸತ್ಯ || ದೇವನೆ ವ್ರತದ ವಿಧಾನ || ಸಾವಧಾನದಿ ಪೇಳು ಭಾವ ಜಪಿತ ಏಕೋ ಭಾವದಿ ಕೇಳುವೆ ಮುನ್ನ 19 ಬುಧನುತ ನಾರದ ಘೃತಕ್ಷೀರ ಶರ್ಕರ | ಕದಳಿ ಗೋಧೂ ಮಾದಿಗಳನು || ಪದುಳದಿಂದಲಿ ಸುಪಾಕಗೈದು ಮೇಣ್ ವಿಧ ವಿಧ ಪಕ್ವಾದಿಗಳನು 20 ಪರಮ ಭಕ್ತಿಯಲಿಂದ ಪರಿವಾರ ಸಹಿತದಿ ಧರುಣಿಸುರನ ಪರಿಮುಖದಿ ತುರಧೂಳಿಕಾಲದಿ ಪರಿಪರಿ ಪೂಜಿಸಿ ಹರಿಗರ್ಪಿಸಲಿ ಬೇಕು ಮುದದಿ 21 ಈರೀತಿಗೈವರ ಕೋರಿಕೆಯನು ದಯ | ವಾರಿಧಿ ಶಾಮಸುಂದರನೂ || ನಿತ್ಯ ವಾರಿಜಸಹಿತದಿ ಸೇರಿ ತಾ ನಲಿದಾಡುತಿಹನೂ 22 ಇತಿ ಪ್ರಥಮೋಧ್ಯಾಯ ಸಂಪೂರ್ಣಂ ಅಥಃ ದ್ವಿತೀಯೋಧ್ಯಾಯಃ ಅತಿ ಮೋದದಿಂದಲಿ ಮತಿಯುತರೆ ಈಗ ಪೃಥವಿಯೊಳಗೆ | ಪೂರ್ವದಲಿ || ವ್ರತಗೈದ ಸುಗುಣರ ಇತಿಹಾಸ ನಿಮ್ಮಗೆ ಕಥಿಸುವೆ ಹಿತದಿಂದ ಕೇಳಿ 1 ಕಾಶಿಯೊಳಗೆ ಒಬ್ಬ ಭೂಸುರ ಬಡತನ ಕ್ಲೇಶದಿ ವಾಸಿಸುವದನು || ಶ್ರೀಶ ಅವನ ನೋಡಿ ಪೋಷಿಸಲು ವೃದ್ಧ ವೇಷದಿ ಮಾತನಾಡಿಸಿದನು 2 ಭೂತವಕದಿ ವಿಪ್ರನಾಥನೆ ತವ ಮುಖ ಪಾಥೋಜ ಬಾಡಿದ ಬಗೆಯಾ ಈ ತೆರ ದುಃಖದಿ ನೀ ತಿರಗುವಂಥ ಮಾತು ಪ್ರೀತಿಲಿ ಪೇಳಯ್ಯಾ 3 ಕಥಿಸುವೆ ಹೇವಿಪ್ರ ಹಿತದಿಂದ ನೀಯನ್ನ | ಸ್ಥಿತಿಯಾ ಲಾಲಿಸು ಮನದಿಂದಾ || ಗತಿಗೆಟ್ಟು ಚರಿಸುವೆ ಪೃಥಿವಿಯೊಳಗೆ ಈಗ ಅತಿ ಬಡತನ ದೆಶೆಯಿಂದಾ 4 ಶ್ರೇಷ್ಟನೆ ದಾರಿದ್ರ್ಯ ಕಷ್ಟ ತೊಲಗುವಂಥ | ಥಟ್ಟನೆ ನೀ ಪೇಳುಪಾಯಾ || ಘಟ್ಪ್ಯಾಗಿ ನಿನ್ನ ಉತ್ಕøಷ್ಟ ಪಾದಾಂಬುಜ ಮುಟ್ಟಿ ಸೇವಿಪೆ ಮಹರಾಯಾ 5 ಮಿಡುಕುತ್ತ ವಿಪ್ರನು ನುಡಿದ ಮಾತನುಕೇಳಿ | ಕಡಲಜಪತಿ ಕವಿಗೇಯಾ || ಕಡುದಯದಲಿ ಪೇಳ್ದ ಬಡತನ ಕಳೆಯುವ ಪೊಡೆವಿಯೊಳಿದ್ದ ಉಪಾಯಾ 6 ಸಾರುವೆ ಕೇಳಯ್ಯ ಮಾರಜನಕ ನಿಜ | ನಾರಾಯಣನ ಸು ವ್ರತವಾ ಆರು ಜಗದಿ ಭಕ್ತಿ ಪೂರ್ವಕ ಮಾಳ್ವರು ದಾರಿದ್ರ್ಯ ಹರಿ ದೂರಗೈವಾ 7 ಮುದುಕನ ನುಡಿಕೇಳಿ ಮುದಮನದಿಂದಲಿ ಸದನಕ್ಕೆ ದ್ವಿಜ ಬಂದು ತಾನೂ ಸುದತಿ ಸಹಿತನಾಗಿ ಸತ್ಯನಾಥಾನ ಪೂಜೆ ವಿಧ ವಿಧದಲಿ ಮಾಡಿದನೂ 8 ಹರುಷದಿ ಈ ರೀತಿ ಧರಣಿ ದೇವನು ಮಾಡೆ | ಶಿರಿಸತಿ ಸುತರಿಂದ ತಾನೂ || ಧರೆಯೊಳು ಸುಖಬಿಟ್ಟು ಪರಮ ದುರ್ಲಭವಾದ ಪಥ ಹಿಡಿದನೂ 9 ಸೂತರೆ ಅತ್ಯಂತ ಕೌತುಕವಾಗಿಹ ಧಾತ ಪಿತನ ಈ ವ್ರತವು ಭೂತಳದೊಳಗೆಂತು ಖ್ಯಾತಿಯ ಪೊಂದಿತು ಪ್ರೀತಿಲಿ ಪೇಳಿರಿ ನೀವು 10 ಸತಿಸುತ ಪರಿವಾರ ಸಹಿತಾ ಅತಿ ಹಿತದಲಿ ಮನೋರಥ ಪೂರೈಸುವ ಈ ವ್ರತ ಮಾಡುತಿರಲಾಗತ್ವರಿತಾ 11 ಚರಣನೋರ್ವನು ಶಿರದಿ ಕಾಷ್ಟಭಾರವ ಧರಿಸಿ ಮಾರಲು ಬೀದಿಗಳಲಿ ಬರುತಿರೆ ಮಾರ್ಗದಿ ಧರಣಿದೇವನೆ ಮಂ ದಿರ ಕಂಡ ಪರಮ ಮೋದದಲಿ 12 ಶ್ರೀನಿವಾಸನ ಘನಧ್ಯಾನದಿಂರ್ಚಿಪ ಕ್ಷೋಣಿ ಸುರನ ನೋಡಿ ಜವದಿ ಮಾನವ ಕೇಳಿದ ಏನಿದೆಂದೆನು ತಲಾಕ್ಷಣದಿ 13 ಶೂದ್ರನ ನುಡಿ ಕೇಳಿ ಆ ದ್ವಿಜ ಪೇಳ್ದನು ಶುದ್ಧ ಮನದಿ ಚರಣೋಧ್ಭವ ಗೈದನಿ ಶುದ್ಧನ ಪಾದಾರ್ಚನವಾ 14 ಹರುಷದಿಂದಲಿ ಸತ್ಯ ಹರಿ ಪೂಜಿಸಿದ ಶೂದ್ರ ಪರಮ ಸೌಜನ್ಯದಿ ಇದ್ದು ಕೊನೆಗೆ ಪರಿವಾರಯುತನಾಗಿ ತೆರಳಿದ ಸ್ಥಿರ ಉಳ್ಳ ಶಿರಿಶಾಮಸುಂದರನ ಪುರಿಗೆ 15 ಇತಿ ದ್ವಿತೀಯೋಧ್ಯಾಯ ಸಂಪೂರ್ಣಂ ಅಥಾಃತೃತೀಯೋಧ್ಯಾಯ ಋಷಿ ಜನಗಳೆ ಕೇಳಿ ವಸುಧಿ ತ್ರಯದಿ ಘನ ಪೆಸರಾದ ಇನ್ನೊಂದು ಕಥೆಯಾ ಉಸುರುವೆ ಕೇಳ್ವರ ವ್ಯಸನವು ಪರಿಹಾರ ಪುಸಿಯಲ್ಲಿ ಈ ನುಡಿ ಖರಿಯಾ 1 ವರ ಉಲ್ಕಮುಖನೆಂಬ ಧರಣೀಶನೋರ್ವನು ಹರುಚದಿಂದಲಿ ತನ್ನ ಹಿತದಾ ಶರಧಿ ತೀರದಿ ನಿಜ ಹರಿಯನ್ನು ಪೂಜಿಸುತಿರ್ದ 2 ಕ್ಷೋಣಿಪಾಲಕನಿದ್ದ ಆ ನದಿತೀರದಿ | ವಾಣಿಜ್ಯ ಮಧುನಾಯಕನೂ || ಸಾನುರಾಗದಿ ಬಂದು ಶ್ರೀನಿಧಿ ವ್ರತದ ವಿ ಧಾನವೇನೆಂದು ಕೇಳಿದ 3 ಭೂಮಿಪಾಲಕ ಮಧುನಾಮಕ ವೈಶ್ಯನ ಆ ಮೃದು ನುಡಿಕೇಳಿ ಜವದಿ ಕಾಮಿತದ ಸತ್ಯ ಸ್ವಾಮಿಯ ವ್ರತ್ತದಾ ನೇಮವ ಪೇಳ್ವ ಸಮ್ಮುದದಿ 4 ರಕ್ಕಸಾರಿಯ ಕಥಾ ಭಕ್ತಿಲಿ ಕೇಳುತ ಲಕ್ಕುಮಿಯುತ ಮುದದಿಂದ ಮಕ್ಕಳೆನಗಾಗಲು ಚಕ್ರಿಯ ಸುವೃತ ಅಕ್ಕರದಲಿ ಮಾಳ್ಪೆನೆಂದ 5 ಈ ರೀತಿ ಧೃಡ ಬ್ಯಾಪಾರಿಯು ತಾಗೈದು ಶೌರಿ ಪ್ರಸಾದ ಸ್ವೀಕರಿಸಿ || ಸಾರಿ ಪೇಳಿದ ತನ್ನಾಗಾರಕ್ಕೆ ಬಂದು ತಾ ನಾರಿಯ ಮುಂದೆ ವಿಸ್ತರಿಸಿ 6 ಸತಿ ಶಿರೋಮಣಿ ಲೀಲಾ ವತಿಯು ತನ್ನ ಮಂದಿರದಿ || ಪತಿ ಕರುಣದಿ ಗರ್ಭ ವತಿ ತಾನಾದಳಾಕ್ಷಣದಿ 7 ಹತ್ತನೆ ಮಾಸದ ಉತ್ತಮ ಪುತ್ರಿಯ ಪೆತ್ತಳು ಆ ನಾರಿ ತಾನೂ || ಅತ್ಯಂತ ಸನ್ಮುದ ಚಿತ್ತನಾಗಿ ಸಾಧು ಮರ್ತನು ಹರಿವ್ರತವನ್ನು 8 ಸತಿ ಲೀಲಾವತಿ ತನ್ನ ಪತಿಗಭಿವಂದಿಸಿ ನಿಂದು || ಅತಿ ಭಕ್ತಿಯಿಂದಲಿ ಕಥಿಸಿಕೊಂಡಳಲ ಯದು ಪತಿ ವ್ರತ ಮಾಡಬೇಕೆಂದು 9 ಸುದತಿಯ ನುಡಿಕೇಳಿ ಮಧುನಾಮಕ ಸಾಧು ವಿಧಿಸಿದ ಸುತೆ ಕಲಾವತಿಯಾ || ಮದುವೆಯ ಕಾಲದಿ ಉದುಪನರ್ಚಿಪೆನೆಂದು ಮುದದಿಂದ ಪೇಳ್ದನುಪಾಯಾ 10 ಪರಿಪರಿ ಸೌಖ್ಯದಿಂದಿರುತಿರೆ ವೈಶನ ತರುಳೆಗೆ ಪೂರ್ಣಯೌವನವು | ಬರಲು ಮಾಡಿದ ತಕ್ಕವರ ತಂದು ಲಗ್ನವ ಮರೆತು ಬಿಟ್ಟನು ಹರಿವ್ರತವಾ 11 ಶ್ರೀಮಂತವೈಶ್ಯನು ಪ್ರೇಮದಿಂದಲಿ ತನ್ನ ಜಾಮಾತನೊಡನೆ ವ್ಯಾಪಾರಾ ನೇಮದಿ ಗೈಯಲು ಗ್ರಾಮ ತ್ಯಜಿಸಿ ಪೋದಾ ಆ ಮಹಾಪುರ ರತ್ನಸಾರಾ&ಟಿbs
--------------
ಶಾಮಸುಂದರ ವಿಠಲ
ಪಾಲಿಸೆನಗೀ ಜ್ಞಾನ ಪಾಲಸಾಗರಶಾಯಿ ಶ್ರೀ ಲೋಲ ನೀ ನಿತ್ಯದಿ ಪ. ಶೀಲಗುಣ ನಿನ್ನ ಏನು ಬೇಡುವುದಿಲ್ಲೊ ಕಾಲರೂಪನೆ ನಿನ್ನನು | ಇನ್ನು ಅ.ಪ. ಒಂದು ಅಸ್ವತಂತ್ರ ಒಂದು ಸರ್ವಸ್ವತಂತ್ರ ಒಂದು ಮನೆಯೊಳಗೆ ಇದ್ದು ಒಂದೆರಡು ಲೋಕಕ್ಕೆ ಒಂದೆ ದೈವನು ಎನಿಸಿ ಒಂದೊಂದರಲಿ ಇರುವ ಒಂದು ಅಪೇಕ್ಷಿಸದೆ ಒಂದೆರಡು ಗುಣದಿಂದ ಒಂದೆರಡು ಮಾಳ್ಪ ಜಗವ ಇಂದಿರೇಶನೆ ನಿನ್ನ ಈ ವಿಧದ ವ್ಯಾಪಾರ ಒಂದೊಂದು ಮನಕೆ ತೋರೋ | ಸ್ವಾಮಿ 1 ಎರಡು ಮಾರ್ಗಗಳಿಹವು ಎರಡು ಕರ್ಮಗಳಿಂದ ಎರಡು ವಿಧ ಸಮ ತಿಳಿದರೆ ಎರಡು ರೂಪಗಳನು ಒಂದಾಗಿ ಭಾವಿಸುತ ಎರಡೊಂದು ಜೀವ ತಿಳಿದು ಎರಡು ಫಲ ಅನುಭವಿಸಿ ಎರಡು ಹರಿಗರ್ಪಿಸುತ ಎರಡು ವಿಧ ಕರ್ತನೆಂದು ಎರಡು ಎಪ್ಪತ್ತು ಸಹಸ್ರನಾಡಿಗಳಲ್ಲಿ ಎರಡು ರೂಪದಲಿರುವ ಪೊರೆವ 2 ಮೂರು ಅವಸ್ಥೆಯಲಿ ಮೂರು ತಾಪವ ಸಹಿಸಿ ಮೂರು ಮಾರ್ಗದಲಿ ನಡೆದು ಮೂರೆಂಟು ಇಂದ್ರಿಯವ ಮೂಲರೂಪದಿ ಲಯಸಿ ಮೂರಾರು ವಿಧ ಭಕ್ತಿಯಲಿ ಮೂರೈದು ನುಗ್ಗೊತ್ತಿ ಮೂರು ಮೂರು ಅರಿಯ ಮೂರು ಶುದ್ಧಿಯಲಿ ಗೆದ್ದು ಮೂರಾರು ಎರಡೊಂದು ಖೋಡಿ ಮತಗಳ ಮುರಿಸಿ ಮಾರುತಿಯ ಮತದಿ ನೆಲಸಿ | ತಿಳಿಸಿ 3 ವಿೂನ ಕೂರ್ಮನೆ ವರಹ ಶ್ರೀ ನಾರಸಿಂಹನೆ ದಾನಯಾಚಕ ಭಾರ್ಗವ ವಾನರರಿಗೊಲಿದನೆ ವೇಣುಹಸ್ತರೂಪಿ ಮಾನವಿಲ್ಲದ ಕಲ್ಕಿಯೆ ಶ್ರೀನಿವಾಸನೆ ನಿನ್ನ ನಾನಾವಿಧ ರೂಪಗಳು ನಾನು ವರ್ಣಿಸಲು ಅಳವೆ ಮಾನಾಭಿಮಾನದೊಡೆಯನೆ ಕೃಷ್ಣ ಕೈಪಿಡಿಯೊ ಭಾನುಪ್ರಕಾಶ ಹರಿಯೆ | ಸಿರಿಯೆ 4 ಶಿರದಲ್ಲಿ ಕಿರೀಟ ಫಣೆಯಲ್ಲಿ ತಿಲುಕವು ಮೆರೆವ ಕುಂಡಲದ ಕದಪು ಕಿರುನಗೆಯ ಪಲ್ಗಳು ಕೊರಳಲ್ಲಿ ಹಾರಗಳು ಕರದಲ್ಲಿ ಆಯುಧಗಳು ಸಿರಿ ಭೂಮಿ ಎಡಬಲದಿ ಸುರನದಿಯ ಪೆತ್ತಪಾದ ಸಿರಿರಮಣ ಗೋಪಾಲಕೃಷ್ಣವಿಠ್ಠಲ ಎನಗೆ ಪರಿ ಪರಿಯ ರೂಪ ತೋರೊ ಸ್ವಾಮಿ 5
--------------
ಅಂಬಾಬಾಯಿ