ಒಟ್ಟು 33 ಕಡೆಗಳಲ್ಲಿ , 20 ದಾಸರು , 32 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಧೊರೆತನ ಮಾಡುವರೀ ಪರಿಯಾಗಲು |ತರವೇ ರುಕ್ಮಿಣೀಪತಿಕೇಳು ಪಬಲು ಬಲು ಋಷಿಗಳು ತಪವನೆ ಮಾಡಿ ನಿನ್ನ |ನಿಲುವಗಾಣದೆ ಬಳಲುವರು ||ಘಳಿಗೆ ಬೇಸರದಲೆ ಊಳಿಗದವನಂತೆ |ಬಲಿಯ ಬಾಗಿಲು ಕಾಯ್ವರೇ 1ಜಲಜ ಸಂಭವ ಈಶೇಂದ್ರಾದಿ ದೇವತೆಗಳು |ಬಿಡದೆ ನಿನ್ನ ವಂದಿಸುತಿರಲು |ಬಡವನಂದದಿ ಕರೆದಾಗಲೆ ತಡೆಯದೆ |ನಡಿಸುವರೆ ಪಾರ್ಥನ ರಥವ 2ಸಚ್ಚಿದಾನಂದನಿತ್ಯತೃಪ್ತ ಪೂರ್ಣ ಕಾಮನೆಂದು |ಹೆಚ್ಚಾಗಿ ವೇದ ಕೂಗುತಿರಲು ||ಹುಚ್ಚು ಪ್ರಾಣೇಶ ವಿಠ್ಠಲನಯ್ಯನೆ ಶಬರಿಯ |ಉಚ್ಚಿಷ್ಠ ಹಣ್ಣ ಮೆಲ್ಲುವರೆ 3
--------------
ಪ್ರಾಣೇಶದಾಸರು
ಸುಮ್ಮನೆ ಕಾಲವ ಕಳೆವರೆ - ಯಮ - |ಧರ್ಮರಾಯನ ದೂತರೆಳೆಯರೆ ಪ.ನರಿ - ನಾಯಿ ಜನುಮವು ಬಾರದೆ - ಹಾಗೆ - |ನರಜನ್ಮದಲಿ ಬಂದು ಸೇರದೆ ||ಹರಿಯ ಸ್ಮರಣೆ ಮಾಡಲಾರದೆ - ಸುಮ್ಮ |ನಿರಲು ಪಾಪದ ವಿಷವೇರದೆ 1ಬಾಲನಾಗಿದ್ದಾಗ ಬಹುಲೀಲೆ - ಮುಂದೆ |ಲೋಲನಾಗಿ ಬಾಳಿದ ಮೇಲೆ ||ಮೂಳ ವೃದ್ಧಾಪ್ಯ ಬಂತಾಮೇಲೆ - ಇನ್ನು - |ಬಾಳುವುದೆಲ್ಲ ನೂಲಮಾಲೆ 2ಮಡದಿ - ಮಕ್ಕಳ ಕೂಡಣ ಬಾಳು - ತನ್ನ |ಒಡಲಿಗಾಗೆ ತಾನು ಕರವಾಳು ||ಬಿಡದೆ ಸಂಕೀರ್ತನೆ ಮಾಡೇಳು - ಮಿಕ್ಕ - |ನುಡಿದ ನುಡಿಗಳೆಲ್ಲವು ಬೀಳು 3ಮನೆಮನೆ ವಾರ್ತೆಯು ಸ್ಥಿರವಲ್ಲ - ಈ |ಮನುಜರ ಮಾತೇನು ಘನವಲ್ಲ ||ವನಜಸಂಭವಗೂ ನಿಶ್ಚಯವಿಲ್ಲ - ಮುಂದೆ |ಹನುಮಂತ ಪಟ್ಟಕೆ ಬಹನಲ್ಲ 4ಇಂದಿನಹಮ್ಮು ನಾಳೆಗೆ ಇಲ್ಲ -ಭವ |ಬಂಧನದೊಳು ಸಿಕ್ಕಿ ನರಳಿದೆನಲ್ಲ ||ಮುಂದನರಿತು ನಡೆದುದಿಲ್ಲ - ಮೃತ್ಯು |ಬಂದಾಗ ಬಿಡಿಸಿಕೊಳ್ಳುವರಿಲ್ಲ 5ಮರಣವುಆವಾಗ ಬರುವುದೋ - ತನ್ನ |ಶರೀರವುಆವಾಗ ಮುರಿವುದೊ ||ಕರಣಂಗಳೆಲ್ಲವು ಜರಿವುದೊ - ತನ್ನ |ಗರುವದುಬ್ಬಸವೆಲ್ಲ ಮುರಿವುದೊ 6ಮರಣಕಾಲಕೆ ಅಜಮಿಳನಾಗ - ತನ್ನ |ತರಳನನಾರಗನೆಂದು ಕರೆದಾಗ ||ಕರುಣದಿ ವೈಕುಂಠ ಪದವೀಗ -ನಿತ್ಯ - |ಪುರಂದರವಿಠಲನ ನೆನೆ ಬೇಗ 7
--------------
ಪುರಂದರದಾಸರು