ಒಟ್ಟು 148 ಕಡೆಗಳಲ್ಲಿ , 54 ದಾಸರು , 141 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಕಾಯ ರಾಘವೇಂದ್ರ ರಾಘವೇಂದ್ರ ದುರಿತೌಫ ಪರಿಹರಿಸಿ ರಾಘವೇಷನ ಪಾದಮೌಘ ನುತಿಪ ಗುರು ಪ ಇಂದು ಕಿರಣಪೊಲುವ ಪಾದ ಇಂದು 1 ಸಾಕುವುದು ಎನ್ನನೇಕ ಮಹಿಮ ಗುರು2 ಸಿರಿವಿಜಯವಿಠ್ಠಲ ಪರದೈವವೆ ಯೆಂದು ಸ್ಥಿರವಾಗಿ ಸ್ಥಾಪಿಸಿ ಮೆರೆದ ನಿರ್ಮಳಕಾಯ 3
--------------
ವಿಜಯದಾಸ
ಕಾಯಯ್ಯಾ ಎನ್ನಾ ಪ ಸರಸೀರುಹ ಶತಕಿರಣಾ | ಅರುಣಾಂಬುಜಾಲಯ ರಮಣಾ | ಅರುಣಾನುಜ ಗಮನಾ | ಅರಿದಮನಾ 1 ಕಿನ್ನರ ಸುತ ಚರಣಾ | ಶರಣಾಗತ ಜನಭಯ ಹರಣಾ | ಅರುಣಾದ್ರಿ ನಿಲಯ ಸಖಚಿದ ನಾ 2 ಗುರು ಮಹಿಪತಿ ಸುತ ಪ್ರಭು ಕರುಣಾ | ಹರಿಣಾಂಕ ಕುಲವರ ರನ್ನಾ | ಧರಣಿ ಧರಧರ ದೀನೋದ್ಧರಣಾ 3
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಕಾಯಿ ಕಾಯಯ್ಯಾ | ಅನಾಥ ಬಂಧೋ ಪ ಶರಣರ ದುರಿತಪಹರಣ ಸುಪಾವನ | ಚರಣನೆ ಕೌಸ್ತುಭಾಭರಣ ಹೇಮಾಂಬರಾ | ತರಣಿ ಶತ | ಕಿರಣ ವಿರಾಜಿತ ಕರುಣಾ ಸಿಂಧೋ 1 ವಾರಣಭಯ ನಿವಾರಣ ಸುರಜನ | ತಾರಣ ದೈತ್ಯ ವಿದಾರಣ ಸೃಷ್ಟಿಯೆ | ಕಾರಣ ಚಿತ್ಸುಖ ಪೂರಣ ಮುನಿಜನ | ಪ್ರೇರಣ ಫಣಿಮದ ಹಾರಣ ಧೀರಾ2 ಚಕೋರ ಸು | ಚಂದಿರ ಸ್ಮರಚಿತ ಸುಂದರ ಸದ್ಗುಣ | ಮಂದಿರ ವಿಧಿಹರ ವಂದ್ಯ ಮುಕಂದನೇ | ತಂದೆ ಮಹಿಪತಿ ನಂದನ ಪ್ರಾಣಾ 3
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಕುಣಿ ಕುಣಿಯಲೋ ಬಾಲಗೋಪಾಲ ಪ ಗೋಪಾಲ ನೀರದ ನೀರ ಅ.ಪ ಯಮುನಾ ತೀರದಿ ಹಿಮಕಿರಣನು ತಾ ಮಮತೆಯ ತೋರಲು ಬೆಳಗುತಿಹ ಘಮಘಮಿಸುವ ಈ ಸುಮಗಳು ಸೂಸಿರೆ ಪ್ರಮದೆಯರೆಲ್ಲರ ಪ್ರೇಮಾಂಗಣದಲಿ 1 ಗಂಧವ ಮಾರುತ ಬೀರುತಲಿರುವನು ಇಂದಿರೆ ಕೊಳಲಿನ ರೂಪದಲಿ ಚಂದದಿ ನಾದವ ತುಂಬಲು ಪರಮಾ ನಂದವು ಮಾನಸ ಮಂದಿರದಲಿ ನೀ 2 ಕಾಯವು ರೋಮಾಂಚಿತವಾಯ್ತೊ ಮಾಯಾವಾದವೊ ಮೋಹಗಳು ತಾಯಿ ಮಡಿಲು ಸೇರಿದ ಶಿಶುವಂದದಿ ಹಾಯವೆನಿಸಿತೊ ಜೀವನ ಯಾತ್ರೆಯು 3 ಕಾಮ ಕ್ರೋಧ ಲೋಭ ಮೋಹ ಮದ ಮತ್ಸರ ಬಿಡಿಸೊ ಸ್ವಾಮಿ ನಿನ್ನಯ ಪಾದಯುಗಳವೆ ಕ್ಷೇಮವೆನ್ನಿಸೊ ಸಾರಾಸಾರ ವಿವೇಕದಿ ಮೋಕ್ಷದ ಕೋರಿಕೆ ಪುಟ್ಟಿಸೊ ಭವ ಪಾರ ಸೇರಿಸೋ 4 ಸಾರದ ಕರುಣಕೆ ಕಾರಣ ಬಿಂಬದ ಮೂರುತಿ ದರುಶನವು ಭಾರತಿ ರಮಣನ ಮಂಗಳಶಾಸ್ತ್ರ ವಿಚಾರವೆ ಕಾರಣವು ಭಕುತ ಜನ ಪ್ರಸನ್ನ ಲಕುಮಿರಮಣ ಎನ್ನು ತಕಿಟ ತಕಿಟ ಎಂದು 5
--------------
ವಿದ್ಯಾಪ್ರಸನ್ನತೀರ್ಥರು
ಕೂಸನು ಕಂಡೀರ್ಯಾ ನಮ್ಮ ಕೂಸನು ಕಂಡೀರ್ಯಾ ಪ ಶ್ರೀಕೃಷ್ಣನ ಸೇವಿಪಅ.ಪ. ನಗುತಿಹ ಕೂಸು1 ಕರೆದರೆ ಬರುವಂಥ ಕೂಸು ಕಾರುಣ್ಯನಿಧಿ ನಮ್ಮ ಗುರುರಾಜರೆಂಬ ಕೂಸು 2 ಕಿರಣದಂತ್ಹೊಳೆಯುತ ಭಕ್ತಶಿರೋಮಣಿ ಶ್ರೀ ರಾಘವೇಂದ್ರರೆಂಬೊ ಕೂಸು3
--------------
ರಾಧಾಬಾಯಿ
ಗುರುಕೂರ್ಮಚಾರ್ಯರ ಚರಣಕಮಲಯುಗ್ಮ ಮಾನವ ಪ ಧರಣಿಯೊಳಗೆ ಸುಕ್ಷೇತ್ರಗಾಲವ ಪುರದಿ ಶ್ರಿ ನರಶಿಂಹಾ ಚಾರ್ಯರ ತರುಣಿಯಳ ಗರ್ಭಾಬ್ಧಿಯಲಿಹಿಮ ಕರನ ತೆರದಲಿ ಜನಿಸಿಮೆರೆದ ಅ.ಪ ವರಕೊಲ್ಹಾಪುರದಿ ಪೋಗಿರಲು ಸುಂದರವಾದ ಸಿರಿಯರೂಪವ ಕಾಣುತ್ತ ಅರಿತು ಪ್ರಾರ್ಥಿಸಲು ಶ್ರೀ ನರಶಿಂಹಾರ್ಯರಿಗೊಲಿದು ಕರುಣದಿಂದಲಿ ಕೊಟ್ಟಂಥ ಚರಣಕವಚ ಸ್ವರಣ ಸಂಪುಟದಲ್ಲಿ ನಿರುತ ಪೂಜೆಯ ಮಾಡುತ್ತ ಪ್ರವಚನಾಸಕ್ತ ಧರೆಯೊಳಗೆ ಬಹು ಶರಣು ಜನ ರಘ ತರಿದು ಸೌಖ್ಯವ ಗರಿವುದಕೆ ಸಂ ಚರಿಸುತಲಿ ಸಚ್ಛಾಸ್ತ್ರ ಮರ್ಮವ ನರುಹಿಜನರನುದ್ಧರಿಸಿದಂಥ 1 ಪೊಳೆವ ಫಾಲದಿ ಪುಂಡ್ರ ತಿಲಕ ಮುದ್ರಾಕ್ಷತಿ ವಿಲಸಿತ ಶುಭಗಾತ್ರದಿ ಅಲವ ಬೋಧರ ಮತದೊಳು ತತ್ವಬೋಧಕ ಸುಲಲಿತೋಪನ್ಯಾಸದಿ ಬಲು ವಿಧಾರ್ಥವ ಪೇಳಿಕುಳಿತಪಂಡಿತರನ್ನು ಒಲಿಸುತಿರೆ ಪೂರ್ವದಿ ಪಂಢರಪುರದಿ ಭವ ಮುದ್ಗಲಾಚಾರ್ಯರಿ ಗೊಲಿದು ಬಂದಿಹ ಚಲುವ ವಿಠ್ಠಲ ಮೂರುತಿಯ ಪದ ಜಲಜ ಮಧುಕರರೆನಿಸಿದಂಥ 2 ಜಡಜಾಪ್ತನುದಯದಿ ನಡೆದು ದ್ವಿಜಗೃಹದೇವ ರಡಿ ಗೊಂದನೆಯ ಮಾಡುತ್ತ ಎಡೆಬಿಡದಲೆ ತಮ್ಮ ಅಡಿಗೊಂದಿಸುವ ಭಕ್ತ ಗಡಣವ ಮನ್ನಿಸುತ ಬಿಡದೆ ಶತತ್ರಯ ಕೊಡ ಜಲದಲಿ ಸ್ನಾನ ದೃಢಮನದಲಿ ಮಾಡುತ್ತ ತಂತ್ರ ಸಾರೋಕ್ತ ಎಡಬಲದಿ ಶೇವೆಯನು ಮಾಡುವ ಪೊಡವಿಸುರಕೃತ ವೇದ ಘೋಷದಿ ಜಡಜನಾಭನ ಪೂಜಿಸುವ ಬಹು ಸಡಗರವ ನಾನೆಂತು ಬಣ್ಣಿಪೆ 3 ಭೂತಲದಲಿ ಶ್ರೇಷ್ಠವಾತ ಮಾತಾಂಬುಧಿ ಶೀತ ಕಿರಣನೆನಿಸಿ ಪ್ರಾತರಾರಭ್ಯ ಶ್ರೀನಾಥನೆ ಪರನೆಂಬೊ ಶಾಸ್ತ್ರದಿ ಮನವಿರಿಸಿ ಖ್ಯಾತ ಸತ್ಯಧ್ಯಾನ ತೀರ್ಥರೆಂಬುವ ಗುರು ಪ್ರೀತಿಯ ಸಂಪಾದಿಸಿ ಪುತ್ರರಿಗೆ ಬೋಧಿಸಿ ಪ್ರೀತಿಯಲಿ ಶಿಷ್ಯರಿಗೆ ಭಗವ ದ್ಗೀತೆಯನು ಪ್ರತಿದಿನದಿ ಪೇಳುತ ಪಾತಕವ ಪರಿಹರಿಸಿ ಪರಮ ಪು- ನೀತ ಗಾತ್ರರ ಮಾಡಿ ಸಲಹಿದ 4 ಧರೆಯೊಳಧಿಕಮಾದ ಗಿರಿ ವೇಂಕಟೇಶನ ದರುಶನವನೆ ಕೊಳ್ಳುತ ಗುರುವಾಜ್ಞೆಯಲಿ ಬಂದು ವರ ಸಭೆಯೊಳು ತಮ್ಮ ಪರಿವಾರದಿಂದಿರುತ ವರಷ ಶಾರ್ವರಿಯೊಳು ವರ ಮಾಘ ಪ್ರತಿಪದ ಬರಲು ಧ್ಯಾನವ ಮಾಡುವ ಹರಿಪದಾಸಕ್ತ ಪರಮ ಭಕುತಿಯಲಿಂದ ಶೇವಿಪ ಶರಣು ಜನ ಮಂದಾರ ನೆನಿಸುತ ಮೆರೆವ ಕಾರ್ಪರ ನಿಲಯ ಶಿರಿನರ ಹರಿಯ ಪುರವನು ತ್ವರದಿ ಶೇರಿದ 5
--------------
ಕಾರ್ಪರ ನರಹರಿದಾಸರು
ಗೋಕುಲನಂದಾ ಗೋಪಿಯ ಕಂದಾ ಶ್ರೀಪತಿ ನಿಂದಾಡುವ ಚಂದ ನಮ್ಮ ಪ. ರಿಂದಾವನದಿ ನಿಂದು ಮುಕುಂದಾ ನಂದದಿ ಕೊಳಲೂದುವ ಚಂದಾ, ಕೃಷ್ಣಾ ರಂಗಾನಂದದಿ ಎಮ್ಮಯ ಕರೆವುದು, ಬಲು ಚೆಂದಾ 1 ಅರುಣನ ಕಿರಣ ಸೋಲಿಪ ಚರಣದಿ ಕಿರುಗೆಜ್ಜೆಯ ಧರಿಸುತ ಭರದಿ ರಂಗಾ ವರ ನಾಟ್ಯವ ತೋರುವುದಾನಂದಾ, ಬಲುಚೆಂದಾ 2 ಕಸ್ತೂರಿ ತಿಲಕ ಶಿಸ್ತಿಲಿ ಪೊಳೆಯುತಾ ಭಕ್ತವತ್ಸಲ ಶ್ರೀ ಶ್ರೀನಿವಾಸನ್ನ ನೋಡೆ ರಂಗನ ಭಕ್ತರಿಗೆಲ್ಲ ಆನಂದ, ಬಲು ಚೆಂದಾ 3
--------------
ಸರಸ್ವತಿ ಬಾಯಿ
ಗೋವಿಂದ ನಿನ್ನಾನಂದದಲ್ಲಿಡೋ ಗೋವಿಂದ ಪ ಗೋವಿಂದ ಹೃದಯಾರವಿಂದದಲ್ಲಿ ಇಂದೂ ಮುಂದೂ ಚರಣಾರವಿಂದ ತೋರೊ ಅ.ಪ ಬೆಟ್ಟದ ದರುಶನ ಲಾಭವು ಕಷ್ಟ ಪಟ್ಟರು ದೊರೆಯಲಸಾಧ್ಯವು ನೋಡೆ ಸುಟ್ಟು ಹೋಗುವುದಘರಾಶಿಯು ಪಟ್ಟ ಶ್ರಮವು ಇಷ್ಟಾರ್ಥವು ದಿಟ್ಟ ಮನವ ಕೊಟ್ಟು ಅಟ್ಟುರಿಯ ಕಳೆದು ಮೆಟ್ಟು ಮೆಟ್ಟಲನೇರಿ ದಿಟ್ಟಿಪರೋ ನಿನ್ನ1 ಪದುಮಜಾಂಡ ಕೋಟಿ ನಾಯಕ ದೇವ ಶ್ರೀದ ಸೃಷ್ಟಾದ್ಯಷ್ಟ ಕರ್ತೃ ನೀನೆ ಆದ್ಯಂತ ಜಗದಾಧಾರಕ ಅಂತರಾತ್ಮಕ ವಿಶ್ವವ್ಯಾಪಕ ಆದಿಮೂಲ ಚತುಷ್ಪಾದ ಎಂದೆನಿಸಿ ತ್ರಿ- ಪಾದ ಇಳೆಯೊಳಿಟ್ಟೆ 2 ಸದಮಲಾತ್ಮಕನೇ ದೇವ ಸರ್ವದಾ ಎಲ್ಲಾ ಹದಿನಾಲ್ಕು ಲೋಕವ ಧರಿಸಿದೆ ದಿವ್ಯ ನೆಲೆಸಿದೆ ಸರ್ವರ ಹೃದಯದ ಪದುಮದಲಿ ಪೊಳೆದು ತ್ರಿಜಗವಂದಿತನಾಗಿ ಮೇದಿನಿಯೊಳು ಮೆರೆಯುತಿಹೆ 3 ಧ್ವಜವಜ್ರಾಂಕುಶಯುಕ್ತಲಾಂಛನ ದೆÉೀವ ಅಬ್ಜಭವಾರಾಧ್ಯ ಚರಣದಿವ್ಯ- ಅಬ್ಜಸಖಕೋಟಿಕಿರಣ ಪಾದಾಭರಣದಿಂದ ಕಿರಣಾ ತಾ ಝಗಝಗಿಸುತ್ತ ನೂಪುರ ಕಾಲಂದಿಗೆ ಗೆಜ್ಜೆ ಸಜ್ಜುಗೊಂಡಿಹ ಮೂರ್ಜಗದೊಡೆಯನೆ ಹರಿ 4 ತಟಿತಕೋಟಿನಿಭಸಮಕಾಯ ಕಟಿಯ ದಿವ್ಯರತ್ನಖಚಿತದಟ್ಟಿಯಾ ತೊಟ್ಟ ಪಟ್ಟೆಪೀತಾಂಬರ ಬಟ್ಟೆಯಾ ಸೊಂಟಪಟ್ಟಿಯ ಇಟ್ಟ ಪರಿಯಾ ಅಟ್ಟಹಾಸದಿ ನಿಂದ ಸೃಷ್ಟಿಗೊಡೆಯ ಮನೋ- ಭೀಷ್ಟದಾಯಕ ಬೆಟ್ಟದೊಡೆಯನೆ 5 ಕರಚತುಷ್ಟಯದಲ್ಲಿ ಮೆರಯುವಾ ಶ್ರೀ ಸು- ದರ್ಶನ ಶಂಖದಿಂದಿರುವಾ ದೀನ ಶರಣಜನರಿಗಭಯ ಹಸ್ತವಾ ಕರೆದು ನೀಡುವ ಕಾಮಿತಾರ್ಥವ ಪರಿಪರಿ ಭಾಪುರಿ ಭುಜಗಾಭರಣಾದಿಗಳ ಧರಿಸಿರುತ ಭಕ್ತಜನರಘ ಹರಿಸುವಾ6 ವಕ್ಷಸ್ಥಳದಲ್ಲಿ ಶ್ರೀವತ್ಸವೂ ಕಂಠ ದಕ್ಷಿಣದಲ್ಲಿ ತೋರ ನಕ್ಷತ್ರದಂತಿಹ ಹಾರವೂ ಕುಕ್ಷಿ ಅಂದವೂ ಮೋಕ್ಷದಾತೃವು ಅಕ್ಷರ ವಾಚ್ಯತ್ರ್ಯಕ್ಷಾದಿ ಸುರವಂದ್ಯ ಈ ಕ್ಷಿತಿಗಿಳಿದು ಪ್ರತ್ಯಕ್ಷನಾಗಿ ನಿಂದೆ 7 ಮಂದಹಾಸಮುಖ ಅರವಿಂದ ದಂತ ಚಂದಕರ್ಣಕುಂಡಲದಿಂದ ಕೆಂದುಟಿಯಿಂದ ಒಪ್ಪುವ ಚೆಂದ ಪೊಂದಿ ಮಕುಟ ಸರ್ವಾಲಂಕಾರ ಪರಿಪೂರ್u ಬಂಧ ಮೋಚನ ಹರಿ ಶ್ರೀ ವೇಂಕಟೇಶನೆ 8 ಪರಿಪರಿ ಮುಕ್ತಜೀವರುಗಳು ಇಲ್ಲಿ ಪರಿವಾರ ತರುಲತೆ ಶಿಲೆಗಳು ಇನ್ನು ವಿರಜೆ ಮೊದಲಾದ ಸರ್ವತೀರ್ಥವು ಸ್ವಾಮಿ ತೀರ್ಥವೂ ಮೋಕ್ಷದಾತೃವೂ ಭವ ಶಕ್ರಾದಿನುತಉರಗಾದ್ರಿವಾಸವಿಠಲ ಜಗದೀಶನೆ 9
--------------
ಉರಗಾದ್ರಿವಾಸವಿಠಲದಾಸರು
ಚಂಡನಾಡಿದ ಹರಿ ಚಂಡನಾಡಿದ ಪ ಪುಂಡರೀಕ ಕುಸುಮಮಯದ ಅ.ಪ. ಸಾರ ಸೊಬಗಿನಿಂದ ನೋಡಿ ಕರವ ನೀಡಿ ಪಾರಿಜಾತ ಕುಸುಮಮಯದ 1 ಸೊಂಪಿನಿಂದ ಮಂದಹಾಸ ಪೆಂಪುದೋರೆ ಸಿರಿಯಮ್ಮೆ ಗಂಪಿನಿಂದ ರಮೆಯು ಸಹಿತ ಚಂಪಕದ ಕುಸುಮಮಯದ 2 ಪುಲ್ಲನಯನ ಪರಿಮಳವ ಚೆಲ್ವ ಚಂದ್ರ ಕಿರಣದಂತೆ ಚೆಲ್ವನಾಂತ ಸರಸಮಾನ ಮಲ್ಲಿಗೆಯ ಕುಸುಮಮಯದ 3 ದಿವ್ಯ ಮಾಧುಪ ಝೇಂಕೃತಿಯು ಭವ್ಯಮಾಗೆ ದಿವಿಜರೆಲ್ಲ ದಿವ್ಯಮೆಂದು ಪೊಗಳೆ ಸುಖದಿ ನವ್ಯ ಜಾಜಿ ಕುಸುಮಮಯದ 4 ಶ್ರೀನಿವಾಸ ಸಕಲ ಹೃದಯ ಶ್ರೀನಿವಾಸ ಧೇನುನಗರಶ್ರೀನಿವಾಸ ವೆಂಕಟೇಶ ಶ್ರೀನಿವಾಸ ಕುಸುಮಮಯದ 5
--------------
ಬೇಟೆರಾಯ ದೀಕ್ಷಿತರು
ಚಂದಿರರಾಮನ ರಾಣಿ ಸೀತೆಯ ಮುಖ ದಂದಕೆ ಸೋತು ಲಜ್ಜೆಯಿಂದ ರಾತ್ರಿಚರನಾದ ಪ ಭಾರತಿ ಮೊದಲಾದ ಸತಿಯರಕ್ಷಿ ಕುಮುದ ಕೋರಿಕೆ ಬಿರಿಯೆ ರಾಜಿತ ಚಕೋರ ಪಾರವಾರವೆಂಬ ಸುರನಿಕರ ನಲಿಯೆ ವಾರಿಜಮುಖಿಯ ಆನಂದ ಶರಧಿಯುಕ್ಕೆ 1 ನೊಸಲಲೊಪ್ಪುವ ಕಸ್ತೂರಿತಿಲಕ ಕಲಂಕ ಹೊಸ ಮುತ್ತಿನೋಲೆ ವರಹಾರದ ಕುಸುಮ ತಾರೆಗಳಾಗೆ ಆ ಕಿರಣ ಲೋಕಂಗಳು ನಸುನಗು ಬೆಳದಿಂಗಳಾಗೆ ನಗೆಗೀಡಾಯಿತೆಂದು 2 ನಂದ ಮೂರುತಿ ವಿಜಯೀಂದ್ರಸ್ವಾಮಿ ರಾಮ ಚಂದ್ರ ಸೀತೆಯ ಮುಖದೊಳು ಮುಖವ ಸಂದಿಸೆ ಉಪರಾಗದಿ ಪೋಲ್ವ ಈಶ್ವರ ಹಾರ ಮಂದಾಕಿನಿ ಯಮುನ ಎಂದಾಗ ಅವರು ಮೀಯೆ3
--------------
ವಿಜಯೀಂದ್ರತೀರ್ಥರು
ಜಗದಯ್ಯ ನಿನ್ನಪಾದ ಜಗದಖಿಲ ಜನರು ಬಗೆ ತಿಳಿಯಲಾರರು ಸುಗುಣಿರೊಂದಲ್ಲದೆ ಪ ಜಾರೆ ಸೇರುವಳೆ ಸುವಿಚ್ಯಾರದ ಮಾತುಗಳ ಜಾರ ಸೇರುವನೆ ಜ್ಞಾನಸಾರ ಬೋಧಾಮೃತವ ಚೋರ ಸೇರುವನೆ ಇನತೋರಿಸಲು ಕಿರಣಗಳ ಕ್ಷೀರಮಂ ಸೇರುವನೆ ಸುರಪಾನಿಗೀಯಲು 1 ವಿಧವೆಗೆ ಸೇರುವುದೆ ಒದಗುವವರ ಬಸಿರು ಮುದುಕನಿಗೆ ಸೇರುವುದೆ ಹದದ್ಹೆಣ್ಣಿನೊನಪು ಅಧಮರಿಗೆ ಸೇರುವುದೆ ಸದಮಲಿನ ಕಥಾಶ್ರವಣ ಬುಧಜನಕೆ ಸೇರುವುದೆ ಕದನಿಕರ ನೆರೆಯು 2 ಜೀನನಿಗೆ ಸೇರುವುದೆ ದಾನಿಗಳ ಗಾಂಭೀರ್ಯ ಹೀನನಿಗೆ ಸೇರುವುದೆ ಜಾಣರೊಡನುಡಿಯು ಸುಕೃತ ಕಾಣದ ಪಾಪಿಗೆ ಮಮ ಪ್ರಾಣ ಶ್ರೀರಾಮ ನಿನ್ನ ಧ್ಯಾನ ಸೇರುವುದೆ 3
--------------
ರಾಮದಾಸರು
ಜಗದಾಖ್ಯ ವೃಕ್ಷ ಚಿಂತಿಪುದು ಬುಧರು ಪ ಭಗವಂತನೆಂಬ ಆಗಸದಲಿ ಪಸರಿಸಿದಅ.ಪ. ಚತುರಾಸ್ಯ ವಾಣಿ ಈರ್ವರು ಬೀಜ ಚಿತ್ಪ್ರ ಕೃತಿ ಪೃಥವಿ ಕರ್ಮವು ಬೇರು ತ್ರಿಗುಣತ್ವ - ವು ಕ್ಷಿತಿ ಜಲಾನಲ ವಾಯು ಗಗನ ಶಾಖೆಗಳಿಂದಕೆ ಶತಕಿರಣ ಉಪಕೊಂಬೆಯೆನಿಸಿ ಕೊಂಬವು ಇದಕೆ 1 ಅಹಂಕಾರ ಬಲದಿಂದ ಅಭಿವೃದ್ಧಿ ಐದುವುದು ಕುಸುಮ ತನ್ಮಾತ್ರ ರಸದಿ ಸಹಿತವಾರ ಪ್ರವೃತ್ತಿ ನಿವೃತ್ತಿ ಕರ್ಮಫಲ ಅಹರಹರ್ ಭುಂಜಿಪವು ತನ್ನಾಮ ಜೀವಖಗ 2 ನಾನು ನನ್ನದು ಎಂಬ ನೀಡ ದ್ವಯಗಳಿದಕೆ ಹೀನ ವಿದ್ಯಾದಿ ಪಂಚಕವೆ ಸರ್ಪಗಳಲ್ಲಿ ಶ್ರೀನಿಧಿ ಜಗನ್ನಾಥವಿಠಲ ಸಂರಕ್ಷಕನು 3
--------------
ಜಗನ್ನಾಥದಾಸರು
ಜಗದಾದಿವಂದ್ಯನಿಗೆ ಶರಣುಪ ಪನ್ನಗಾನಗದೊಡೆಯ ಶರಣು 1 ತವಪದನಖಾಗ್ರಕೆ ಶರಣು2 ಮೂಡಲಾಗಿರಿಗೆ ಶರಣು ಗಿರಿಯ ಅಡಿದಾವರೆಗಳಿಗೆ ಶರಣು3 ನಡೆರ್ವಡಿಗಳಿಗೆ ಶರಣು4 ಮೆಟ್ಟು ಮೆಟ್ಟಲಿಗೆ ಶರಣು ಮನಮುಟ್ಟ ಮೆಟ್ಟಲೇರುತಿಹ ನಿನ್ನಿಷ್ಟ ಭಕ್ತರಿಗೆ ಶರಣು 5 ತನುಕಷ್ಟ ಹರಿಸಿ ಮನತುಷ್ಟಿಯನು ತೋರ್ವ ಬೆಟ್ಟದಂದಕ್ಕೆಲ್ಲ ಶರಣು 6 ಪರಿವಾರಕ್ಕೆಲ್ಲ ಶರಣು7 ಸ್ವರಶಬ್ದವಾಚ್ಯತವ ಶರಣು 8 ಚೆಲ್ವ ಗಾಳಿಗೋಪುರ ದ್ವಾರಕ್ಕೆ ಶರಣು 9 ಲೀಲೆಯಿಂದಲಿ ನಿನ್ನನೋಲೈಪ ಭಕ್ತರ ಪಾದಪಲ್ಲವಂಗಳಿಗೆ ಶರಣು 10 ಗೋವಿಂದ ಸಚ್ಚಿದಾನಂದ ಮುಕುಂದನೆಂದು- ಚ್ಚರಿಪ ಭಕ್ತರಿಗೆ ಶರಣು11 ಹರಿ ಹರೀ ಹರಿ ಎಂದು ಹರಿದಾರಿ ಪಿಡಿದ ವರ ಅಡಿದಾವರೆಗಳಿಗೆ ಶರಣು 12 ಪರಿಪರಿ ಭಾಧೆಯಿಂ ತರಳನ್ನ ಕಾಯ್ದ ಶ್ರೀ ನರಹರಿಯ ಚರಣಾರವಿಂದಕ್ಕೆ ಶರಣು 13 ತಿರುದಾರಿ ಮೊಣಕಾಲ ಮುರಿಗೆ ಶರಣು 14 ಭಕ್ತರಾಪತ್ತಳಿವ ಶಕ್ತಿಸಂಪತ್ತೀವ ಉತ್ತಮೋತ್ತಮ ಭಕ್ತರಾ ಮಂಟಪಕ್ಕೆ ಶರಣು 15 ಭಕ್ತಿಯಿಂದಲಿ ಸಪ್ತಗಿರಿಯ ದಾಟಿದ ಹರಿ- ಭಕ್ತಜನಸಂದೋಹಗಳಿಗೆ ಶರಣು 16 ಭಕ್ತರುಧ್ಧರಿಸಲು ನಿಂದ ಸಮೀರನಿಗೆ ಶರಣು17 ಜೀವರಿವರೆನ್ನುವರು ದರುಶನವನೀಯೆಂದು ಕ- ರವ ಮುಗಿದು ಹರಿಯ ಸ್ತುತಿಸುವಗೆ ಶರಣು 18 ಪಾವನಾ ಮೂರ್ತಿಯನು ಮಾನಸದಿ ಧೇನಿಸಲು ಭಾವಶುಧ್ದಿಯನೀವ ಜೀವೇಶನಿಗೆ ಶರಣು 19 ಸಚ್ಚಿದಾನಂದಾತ್ಮ ಶ್ರೀ ಮುಕುಂದನ ದಿವ್ಯ ಅರಮನೆಯ ಮಹಾದ್ವಾರಕ್ಕೆ ಶರಣು 20 ಸಿರಿ ಅವ್ಯಾಕೃತಾಕಾಶಾವರಣಕ್ಕೆ ಶರಣು 21 ತೀರ್ಥಮಹಿಮೋಪೇತ ಸ್ವಾಮಿಪುಷ್ಕರಣೀ- ತಟವಿರಾಜಿತ ಅಶ್ವತ್ಥವೃಕ್ಷರಾಜನಿಗೆ ಶರಣು22 ಭೂದೇವಿಯಾರಮಣ ಆದಿಭೂವರಹ ಮೂರ್ತಿಯ ಶ್ರೀಪಾದಯುಗ್ಮಕ್ಕೆ ಶರಣು 23 ಬ್ರಹ್ಮಾಂಡದೊಡೆಯನ ದಿವ್ಯ ನಿಲಯದೊಳಿರುವ ಬಹಿರಾವರಣಕ್ಕೆ ಶರಣು 24 ಸರ್ವಗುಣಸಂಪೂರ್ಣ ವೈಕುಂಠಮಂದಿರನ ಸ್ವರ್ಣಮಯ ಸುಪರ್ಣಸ್ಥಂಭಕ್ಕೆ ಶರಣು 25 ಗಮನ ನಿರ್ಗಮನವುಳ್ಳ ಸುಮನಸರ ಭಕ್ತಜನಸಂಘಕ್ಕೆ ಶರಣು26 ಅಂತರಾವರಣಕ್ಕೆ ಶರಣು 27 ಕಾಂಚನರೂಪ ಸುವರ್ಣಮುಖರೀನದಿ ವಿ- ರಾಜಿತ ತೊಟ್ಟಿತೀರ್ಥ ಸಮಸ್ತ ತೀರ್ಥಗಳಿಗೆ ಶರಣು 28 ಸುಮನಸರು ಹೃನ್ಮನದಿ ಧೇನಿಸುವ ಕಾಂಚನ ವಿಮಾನದಲಿ ಬೆಳಗುತಿಹ ಶ್ರೀ ಶ್ರೀನಿವಾಸನಿಗೆ ಶರಣು 29 ಭೂಗಿರಿಯ ಸೇರಿದ ಶ್ರೀಹರಿಗೆ ಶರಣು 30 ವಾರಿಯೊಳಗ್ಯೋಲಾಡಿ ಶ್ರೀಶೈಲದೊಳು ನಿಂ- ತ ಶ್ರೀಲೋ¯ನಾಗಿರ್ಪಗೆ ಶರಣು31 ಶೇಷ್ಠನೆನಿಸಿದ ದಿಟ್ಟ ಮೂರುತಿಗೆ ಶರಣು 32 ಧರೆಯ ಕೆದರೀ ಬಂದು ಗಿರಿಯ ವರಹನ ಬೇಡಿ ಮರುಳುಮಾಡಿದ ಮಾಯಾರಮಣನಿಗೆ ಶರಣು 33 ತರಳರೂಪವ ಕೆಡಿಸಿ ಗಿರಿಯ ಹುದರಯೊಳಡಗಿ ಸುರಜೇಷ್ಠನೆಂದೀಗ ಪೂಜೆ ಗೊಂಬುವಗೆ ಶರಣು 34 ವಟಪತ್ರಶಾಯಿ ನೀ ವಟುವಾಗಿ ಬೇಡಿ ಭ- ವಾಟವಿಯ ದಾಟಿಸಲು ನಿಂದವಗೆ ಶರಣು 35 ಪೆತ್ತಮಾತೆಯ ಹರಿಸಿ ಮೆತ್ತನಿಲ್ಲಿಗೆ ಬಂದು ಉತ್ತಮಾಗತಿಪ್ರದ ಸರ್ವೋತ್ತಮಗೆ ಶರಣು 36 ಕ್ಷಿತಿಸುತೆಯ ಮಾತನು ಹಿತದಿ ಪಾಲಿಸೆ ವೇದ- ವತಿಯ ಪತಿಯಾಗಿ ನಿಂದವಗೆ ಶರಣು 37 ಗುಟ್ಟಾಗಿ ಪಾಲ್ಕುಡಿದು ಪೆಟ್ಟಿನಾ ನೆಪದಲ್ಲಿ ದೃಷ್ಟಿಗೋಚರನಾದ ಬೆಟ್ಟದೊಡೆಯನಿಗೆ ಶರಣು38 ಉತ್ತಮಾಸ್ತ್ರೀಯರಿಗೆ ನಾಚಿ ಬತ್ತಲೆಯಾಗಿ ಹುತ್ತದೊಳು ಅಡಗಿಯೆ ಮೆರೆದವಗೆ ಶರಣು 39 ಸಿರಿಯ ಹಯವನು ಮಾಡಿ ಚರಿಸಿ ಹರಿಸಿಕೊಂಡವನಿಗೆ ಶರಣು 40 ಹಿರಣ್ಯಗರ್ಭನ ಜನಕ ಸನ್ಮಹಿಯ ಸನ್ನಿಧಿಯ ಕನಕಮಯಕವಾಟಕ್ಕೆ ಶರಣು 41 ತಟಿಕ್ಕೋಟಿನಿಭ ಪೂರ್ಣ ಸಂಪೂರ್ಣ ಲಕ್ಷಣ ಸನ್ಮಾಂಗಳಾ ಸುಂದರ ಮೂರ್ತೇ ತವ ಶರಣು42 ಮುಕ್ತಾಮುಕ್ತಗಣ ವಂದಿತಾ ತವ ಶರಣು43 ನಂದಸುನಂದನ ಜಯವಿಜಯಾದಿ ಪಾ- ಸಂಸೇವ್ಯಮಾನ ತವ ಶರಣು44 ಸರ್ವಾಂಗುಳ್ಳಂಗುಷ್ಠದಳ ವಿಲಸಿತ ಸತ್ ಪಾದ- ಪಂಕಜ ಧ್ವಜ ವಜ್ರಾಂಕುಶಾದಿ ಸುಚಿಹ್ನ ಚಿಹ್ನಿತ ತವ ಶರಣು 45 ಗುಲ್ಫಾರುಣನಖ ಧೃತಾ ದೀಧಿತಿಯುಕ್ತ ತವ ಶರಣು 46 ಬೃಹತ್ ಕಟಿತಟಶ್ರೋಣಿ ಕರಭೋರು ದ್ವಯಾನಿಶ್ರ ತವ ಶರಣು 47 ವೈಜಯಂತಿ ವನಮಾಲ ತವ ಶರಣು 48 ಪ್ರಲಯ ಪೀವರಭುಜ ತುಂಗಂಶೋರಸ್ಥ ಲಾಶ್ರಯ ತವ ಶರಣು 49 ನ್ವಿತ ತವ ಶರಣು50 ಚಾರುಪ್ರಸನ್ನವದನ ಮಂದಹಾಸ ನಿರೀಕ್ಷಣ ಸು- ಭದ್ರನಾಸ ಚಾರುಸುಕರ್ಣ ಸುಕಪೋಲಅರುಣ ತವ ಶರಣು 51 ಸಹಸ್ರ ಫÀಣಶಿರೋಮಣಿಪ್ರಭಾನ್ವಿತ ಶೇಷಶೈಲಸ್ಥ ಶಾಂತ ಪದ್ಮಪತ್ರಾಯತೇಕ್ಷಣ ತವ ಶರಣು 52 ಅನಂತವೇದೋಕ್ತ ಮಹಿಮೋಪೇತ ಸರ್ವಸ್ವರವರ್ಣ ಸರ್ವಶಬ್ದವಾಚ್ಯ ಪ್ರತಿಪಾದ್ಯ ಶರಣು 53 ಸಚ್ಚಿದಾನಂದಾತ್ಮ ಸರ್ವಸುಗುಣೋಪೇತ ಸರ್ವ ಹೃತ್ಕಮಲಸ್ಥಿತ ತವ ಶರಣು 54 ಅಣುತ್ರ್ಯಣು ತೃಟಿಲವ ಕ್ಷಣಾದಿಕಾಲ ಮಹ- ತ್ಕಾಲಾತ್ಮಕ ನಿತ್ಯನಿರ್ಮಲಮೂರ್ತೇ ತವ ಶರಣು 55 ಪರ ಮೇಷ್ಟಿವಂದಿತ ತವ ಶರಣು 56 ತೈಜಸ ಪ್ರಾಜ್ಞ ತುರ್ಯಾ ದ್ಯಷ್ಟರೂಪಾತ್ಮಕ ತವ ಶರಣು57 ಕಂಸಾರಿ ಮುರಾರಿ ಶ್ರೀಹರಿಯೆ ಶರಣು58 ಭವರೋಗಭೇಷಜ ಭಕ್ತಜನಬಂಧೋ ಮುಚುಕುಂದವರದ ಗೋವಿಂದ ಶರಣು 59 ಮುಕ್ತಾಮುಕ್ತಾಶ್ರಯ ಭಕ್ತಜನಸಂರಕ್ಷಣಾ ವ್ಯಕ್ತಾವ್ಯಕ್ತ ಮಹಿಮ ತವ ಶರಣು 60 ತತ್ತದಾಕಾರ ಜಗದಾಪ್ತ ಶರಣು 61 ಚೇತನಾಚೇತನ ವಿಲಕ್ಷಣ ಸ್ವಗತಭೇದವಿವ- ರ್ಜಿತ ಪತಿತಪಾವನಮೂರ್ತೇ ತವ ಶರಣು 62 ಕ್ಷರಾಕ್ಷರ ಪರುಷಪೂಜಿತ ಪಾದ ಪುರಾಣಪುರುಷೋತ್ತಮನೆ ಶರಣು 63 ರವಿಕೋಟಿಕಿರಣ ರತ್ನಕನಕಮಯ ಮುಕು- ಟಾನ್ವಿತ ತವಶಿರಸ್ಸಿಗೇ ತವ ಶರಣು 64 ಸುಂದರಾನಂದ ಆನನಕೆ ಶರಣು 65 ಶ್ರೀಲೋಲ ಶರಣು 66 ಪೂವಿಲ್ಲನಾ ಬಿಲ್ಲ ಪೋಲ್ವ ಹುಬ್ಬು ಕಂಜ - ದಳದೋಲ್ ಚಂಪಕಾಮುಗುಳಿಗೆಣೆನಾಸಿಕಕೆ ಶರಣು 67 ಮಕರ ಕರ್ಣಕುಂಡಲಾನ್ವಿತ ತವ ಕರ್ಣಕ್ಕೆ ಶರಣು 68
--------------
ಉರಗಾದ್ರಿವಾಸವಿಠಲದಾಸರು
ತಾವಲ್ಲಿ ನೆನೆಯಲು ದಶಮತಿ ಗುರುಗಳು ನಾವಿಲ್ಲಿ ಸುಖಿಗಳು ಸುಲಭದಿಂದ ಪ ಪೂರತಿ ಮನದೊಳಗಾಗುವಂತೆ ತಾರಾ ರಮಣನು ತಾ ಮ್ಯಾಲೆ ಉದಿಸಲು ವಾರಿಧಿ ಹರುಷದಿ ಉಕ್ಕುವಂತೆ 1 ತರಣಿ ಕಿರಣ ಪಸರಿಸೆ ಸರೋವರದಲ್ಲಿ ಸರಸಿಜ ವಿಕಸಿತವಾಗುವಂತೆ ವಾರಿದ ಮ್ಯಾಲಿರೆ ತಾ ನೋಡಿ ಮಯೂರ ಮೀರಿ ಹರುಷದಿ ಕುಣಿ ಕುಣಿದಾಡುವಂತೆ2 ವ್ಯಾಸ ದೇವರ ಕೂಡ ಮಾತುಗಳಾಡುವಾಗ ಶುಭ ನಮಗೆ ವಾಸುದೇವವಿಠಲ ಪಾಶದಿಂದಾಡುವಾಗ ವಾಸ ಅಕ್ಷಯವೆನ್ನಿ ಕೃಷ್ಣೆಯಂತೆ 3
--------------
ವ್ಯಾಸತತ್ವಜ್ಞದಾಸರು
ತಿಳಿಯೊ ಮನವೆ ನಿಜವಸ್ತು ಖೂನ ಅಳಿಯೊ ದೇಹ ನಾನೆಂಬುವಭಿಮಾನ ಹೊಳಿಯೊ ಸದ್ಗುರು ಪಾದದಲಿ ನೀ ಪೂರ್ಣ 1 ಹುಟ್ಟಿ ಬಂದೇನು ಪುಣ್ಯ ಪುರುಷಾರ್ಥ ಘಟ್ಟಿಗೊಳ್ಳದೆ ನಿಜ ಸುಹಿತಾರ್ಥ ನಿಷ್ಠೆ ಹಿಡಿಯದನ ಜನ್ಮ ವ್ಯರ್ಥ ಮುಟ್ಟಿ ತೋರುವ ಶ್ರೀ ಗುರು ಪರಮಾರ್ಥ 2 ಗುರ್ತು ತಿಳಿಯೊ ಜನುಮಕೆ ಬಂದ ಮ್ಯಾಲೆ ಮರೆತು ಮೈಮರೆವದೇನು ತಾ ಮೇಲೆ ಅರ್ತು ನಡೆವದು ನಿನಗೇನು ಸೋಲು ಕರ್ತು ಸದ್ಗುರು ಸ್ಮರಿಸೋ ಆವಾಗಲೂ 3 ಎಲ್ಲಾರಂಥ ತಾನಲ್ಲೊ ಗುರುನಾಥ ಸುಲ್ಲಭದಿಂದ ದೋರುವ ಸುಪಥ ಅಲ್ಲೆ ದೋರ್ವದು ಸಕಲ ಹಿತಾರ್ಥ ಬಲ್ಲ ಮಹಿಮರೆ ತಿಳಿವರೀ ಮಾತ 4 ಭಾಸುತದೆ ಭಾಸ್ಕರ ಕೋಟಿ ಕಿರಣ ಲೇಸಾಗಿ ಹೋಗೊ ಗುರುವಿಗೆ ಶರಣ ದಾಸಮಹಿಪತಿ ಸ್ವಾಮಿ ದೀನೋದ್ಧಾರಣ ಭಾಸಿ ಪಾಲಿಸುವ ತಾ ಸುಕರಣ 5
--------------
ಕಾಖಂಡಕಿ ಶ್ರೀ ಮಹಿಪತಿರಾಯರು