ಒಟ್ಟು 183 ಕಡೆಗಳಲ್ಲಿ , 48 ದಾಸರು , 165 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಉರುಟಣೆ ಪದ ಜಯ ಜಯ ರಾಮ ಜಯಜಯ ಜಯ ನಮ್ಮ ಜಾನಕೀ ರಮಣಗೇ ಪ ಇಂದಿರಾದೇವಿ ರಮಣಿ ಶರಣ್ಯಮಂದರ ಗಿರಿಧರ ಶರಣ್ಯಕಂದನ ನುಡಿ ಕೇಳಿ ಕಂಬದಿಂದಲಿ ಬಂದಸಿಂಧು ಶಯನ ಸಲಹುವಾದೆನ್ನ 1 ಗುರು ವಿಜಯದಾಸರ ಚರಣಾಸರಸಿರುಹವ ಮನದೊಳಾಗಿರಿಸಿಹರಿ ಸರ್ವೋತ್ತಮ ಮಂಗಳ ಚರಿತೆಯವಿರಚಿಸುವೆನು ಸುಜನರು ಕೇಳಿ 2 ಮುತ್ತೈದೆರೆಲ್ಲಾ ಬೇಗಾದಿ ಬಂದುಅರ್ತಿಯಿಂದಲಿ ಶೃಂಗಾರವಾಗಿಚಿತ್ತಜನಯ್ಯನ ಉರುಟಣೆ ಎನುತಾಲಿಮತ್ತ ಗಮನೇರು ಬಂದರಾಗಾ 3 ಸರಸ್ವತಿ ಭಾರತಿ ಮೊದಲಾದಸರಸಿಜ ಮುಖಿಯರೆಲ್ಲಾರು ನೆರೆದುಸರಸ ಉರುಟಣಿಯ ಮೊಡಬೇಕೆನುತಾಲಿಕರೆಸಿದರಾಗ ಮುತ್ತೈದೆರಾಗ 4 ಹೇಮಮಯದ ಮಂಟಪದೊಳಗೆಪ್ರೇಮದಿಂದಲಿ ಹಾಸಿಕೆ ಹಾಕಿಸೋಮವದನನ ಗುಣವ ಕೊಂಡಾಡುತಕಾಮಿನಿಯರು ಕರೆದಾರು ಹಸೆಗೇ 5 ಕೌಸಲ್ಯಾದೇವಿ ತನಯಾನೆ ಕೇಳುಹರ್ಷದಾಯಕ ರಕ್ಷಕನೇಳುಹಂಸವಾಹನನಯ್ಯನೆ ಹಸೆಗೆ ಏಳೇಳೆಂದುಹಂಸಗಮನೆಯರು ಕರೆದರು ಹಸೆಗೆ 6 ನಿಗಮವ ತಂದಾ ಮಚ್ಚ್ಯಾನೇಳುನಗವ ಬೆನ್ನಿಲಿ ಪೊತ್ತ ಕೂರ್ಮನೇಳುಜಗವನುದ್ಧರಿಸಿದ ವರಹ ಮೂರುತಿ ಏಳುಮೃಗ ನರ ರೂಪ ಹರಿಗೇಳೆಂದಾರು 7 ಸುರನದಿಯ ಪಡೆದ ವಾಮನನೇಳುಪರಶುರಾಮ ಮೂರುತಿ ಏಳುಶರಧಿಯ ದಾಟಿ ಸೀತೆಯ ತಂದಶಿರಿ ರಾಮಕೃಷ್ಣ ಹಸೆಗೇಳೆಂದರು 8 ವ್ರತವನಳಿದ ಬೌದ್ಧನೇಳುಅತಿಬಲ ರಾಹುತನೇಳುಪೃಥಿವಿಗೊಡೆಯ ರಾಮನೇಳೆಂದುಅತಿ ಚಮತ್ಕಾರದಿ ಕರೆದರಾಗ 9 ಇಂತು ಬಗೆಯಾಲಿ ತುತಿಸಿ ಕರೆಯೇಕಂತುಜನಕನು ಹರುಷದಾಲೆದ್ದುಕಾಂತೆ ಕೈ ಪಿಡಿದು ನಡೆ ತರಲಾಗಲುನಿಂತಾರು ನಾರಿಯರೆಲ್ಲರಾಗ 10 ಎತ್ತಿಕೊಂಬುವದು ರಾಘವ ನಿಮ್ಮಪತ್ನಿಯ ನಡೆಸಲಾಗದು ಕೇಳಿನೀ ಪೃಥ್ವೀಶನಾದರೆ ನಮಗೇನೆನುತಾಲಿಸುತ್ತು ಕಟ್ಟಿದರು ವಾಮಾಕ್ಷಿಯರು 11 ಮಂಗಳಾಂಗಿಯನು ಎತ್ತಿಕೊಂಡು ರಾಮಹಿಂಗಾದೆ ದ್ವಾರದಲ್ಲಿಗೆ ಬರಲುಮಂಗಳದೇವಿಯ ಹೆಸರು ಹೇಳೆನುತಾಲಿಅಂಗನೆಯರು ಅಡ್ಡಗಟ್ಟಿದರಾಗಾ 12 ನಾಳೆ ಹೇಳುವೆನು ಇವಳ ಹೆಸರುತಾಳಲಾರೆನು ಭಾರವು ಎನಲುಶ್ರೀ ಲಕ್ಷ್ಮೀದೇವಿಯ ಹೆಸರು ಹೇಳಿದೆ ಬಿಡೆವೆಂದುಬಾಲೆಯರೆಲ್ಲಾರು ಇಟ್ಟರು ಕದವಾ 13 ಪುತ್ಥಳಿ ಗೊಂಬೆ ಹೆಸರು ಹೇಳೆನೆ ರಘು-ನಾಥಾನು ಎಂದಾಳು ಜಾನಕೀ 14 ಅಂಗಜನಯ್ಯಾ ಸತಿಯು ಸೀತೆಯ ಸಹಿತರಂಗು ಮಾಣಿಕದ ಹಾಸಿಕೆಯ ಮೇಲೆಶೃಂಗಾರದಿಂದಾಲಿ ಬಂದು ಕುಳ್ಳಿರಲಾಗಸುರರೆಲ್ಲಾ ಹಿಗ್ಗಿ ಕರೆದರು ಪೂ ಮಳೆಯಾ 15 ಸಾಸಿರ ನಾಮದ ಒಡೆಯ ಬಂದಾಶೇಷಶಯನಾ ಮೂರುತಿ ಬಂದಾಭಾಸುರಾಂಗನೆ ಸೀತೆ ಆಳಿದಾ ರವಿಕುಲಾ-ಧೀಶ ಬಂದಾನು ಎಂದಾರು ಕೇಳೆ 16 ವಾನರಾಧೀಶನೊಡೆಯಾ ಬಂದಾದಾನವಾಂತಕ ರಾಘವ ಬಂದಾ ಶ್ರೀ-ಜಾನಕೀದೇವಿ ಪ್ರಾಣದೊಲ್ಲಭ ಜಗ-ತ್ರಾಣ ಬಂದಾನು ಎಂದಾರು ಕೇಳೆ 17 ಸತ್ಯ ಸಂಕಲ್ಪ ಶ್ರೀ ಹರಿಯು ಬಂದಾಭೃತ್ಯ ಪಾಲಕ ದೊರೆಯು ಬಂದಾಮಿತ್ರೆ ಜಾನಕಿದೇವಿ ಪ್ರಾಣದೊಲ್ಲಭ ಸ-ರ್ವೋತ್ತಮ ಬಂದನೆಂದಾರು ಕೇಳೇ 18 ಸುಗ್ರೀವನ ಪರಿಪಾಲಕ ಬಂದಾ ಕ-ರಿಗ್ರಾಹ ಸಂಹಾರಿಕ ಬಂದಾವ್ಯಾಘ್ರ ಚರ್ಮಾಂಬರ ಸಖ ಸುಂದರವಿಗ್ರಹ ಬಂದಾ ಎಂದಾರು ಕೇಳೇ 19 ಇಂದ್ರನ್ನ ಪರಿಪಾಲಕ ಬಂದಾಚಂದ್ರನ್ನ ಪ್ರಭೆಯಾ ಸೋಲಿಪ ಬಂದಾಇಂದುವದನೆ ಸೀತೆ ಪ್ರಾಣದೊಲ್ಲಭ ರಾಮ-ಚಂದ್ರ ಬಂದನೆಂದಾರು ಕೇಳೇ 20 ಚಂದನ ಗಂಧೆಯರು ಎಲ್ಲಾರು ಕೂಡಿಗಂಧ ಕುಂಕುಮ ಅರಿಷಿಣ ಕಲಿಸಿಇಂದುವದನೆ ಸೀತೆಯ ಕೈ ಒಳಗಿಟ್ಟು ಶ್ರೀರಾಮ-ಚಂದ್ರಗೆ ಹಚ್ಚಿಸಿರೆಂದರಾಗ 21 ವಾರಿಜೋದ್ಭವ ಮೊದಲಾದವರುತಾರತಮ್ಯದಿಂದಾಲಿ ಕುಳಿತುವಾರಿಜಾಮುಖಿ ಸೀತೆ ನುಡಿಯೆಂದೆನುತಾಲಿಸಾರಿದರಾಗ ಸಂದಣಿಯರೆಲ್ಲಾ 22 ವಾಕು ಕೇಳಬೇಕೆಂದುಜಲಜ ಸಂಭವನು ನುಡಿದಾನು ನಗುತಾ 23 ಕಂಜವದನೆ ಜಾನಕೀದೇವಿಅಂಜಲಾಗ ನಿಮ್ಮ ಪುರುಷಾರಿಗೆಕುಂಜರ ವರದಾ ದಾಕ್ಷಿಣ್ಯ ಬ್ಯಾಡೆಂದುಅಂಜಾದೆ ನುಡಿದಾರು ನಸುನಗುತಾ 24 ದೋಷ ವರ್ಜಿತನೇ ಹರಿ ನಿಮ್ಮದೂಷಣೆ ಮಾಡಿದಳೆನ ಬ್ಯಾಡಿಮೋಸದಿಂದಲಿ ಬಲು ದೈತ್ಯರ ಕೊಂದ ಜಗ-ದೀಶ ನಿಮ್ಮ ಮುಖವಾ ತೋರೆಂದಾಳು 25 ದೇವಿ ಹಸ್ತದೊಳು ಅರಿಶಿನವ ಪಿಡಿದುಭಾವಜನಯ್ಯನ ನುಡಿದಾರಾಗದೇವರ ದೇವೋತ್ತಮ ಶಿಖಾಮಣಿದೇವಾ ನಿಮ್ಮಯ ಮುಖವಾ ತೋರೆಂದಾಳು 26 ಭಸ್ಮಾಸುರನ ಕೊಂದಾ ಬಹು ಶೂರನಾರಿಕಂಸನಳಿದಾ ಧೀರ ಅಸುರ ಹಿರಣ್ಯಕನಅಸುವ ಹೀರಿದ ದೊಡ್ಡಅಸುರಾಂತಕ ಮುಖವಾ ತೋರೆಂದಾಳು 27 ವಾಲಿಯ ಸಿಟ್ಟಿನಿಂದಾಲಿ ಕೊಂದುಕಾಲ ಯಮನಾನಸುವ ಯುಕ್ತಿಯಿಂದಾಭಳಿರೆ ಮಧುಕೈಟಭರ ಕೊಂದಾಕಾಲಾಂತಕ ಮುಖವ ತೋರೆಂದಾಳು 28 ಶ್ರೀನಾಥ ದ್ವಾರಕಾಪುರ ಮಾಡಿಆ ನಂದಿ ಗೋಮಂತಾ ಗಿರಿಗೊಲಿದೆವಾನರಾಧೀಶನಾ ಬಲು ಕೊಂಡಾಡುತ್ತದಾನವಾಂತಕಾ ಮುಖವಾ ತೋರೆಂದಾಳು 29 ಅರಿಶಿನವಾನು ಹಚ್ಚಿದಳು ಸೀತೆಅರಸನ ಫಣೆಗೆ ಕುಂಕುಮವಾ ಹಚ್ಚಿಸರಸದಿ ವದನಕ್ಕೆ ಗಂಧವಾ ಹಚ್ಚಲುಸುರರೆಲ್ಲಾ ನಕ್ಕಾರು ಕೈ ಹೊಡೆದು 30 ಪತಿ ಮೊದಲಾಗಿ ಚಪ್ಪಾಳೆನಿಟ್ಟುಹರಸಿದರಾಗ ಜಾನಕಿದೇವಿಶಿರಿಯು ಗೆದ್ದಳು ಅಯೋಧ್ಯದಅರಸು ಸೋತನೆಂದು ನಗುತೆ 31 ಬಾಹುಗಳಿಗೆ ಗಂಧವಾ ಹಚ್ಚಿಸಿಮ್ಯಾಲೆ ಪರಿಮಳಾ ಪೂಸಿದಳುಶ್ರೀ ಹರಿಯ ಚರಣಾವ ಪಾಲಿಸಬೇಕೆನುತಲಿಸರಸಾದಿಂದಾಲಿ ನುಡಿದಾಳು ಜಾನಕೀ 32 ಪಾಷಾಣ ಪೆಣ್ಣಾ ಮಾಡಿದಾ ಚರಣಶೇಷನಾ ಮ್ಯಾಲೆ ಮಲಗಿದ ಚರಣಭಾಸುರಾಂಗಿ ನಿನ್ನ ಲೀಲೆಯಾ ತೋರಿದಾಶೇಷಶಯನ ಚರಣಾ ಪಾಲಿಸೆಂದಾಳು 33 ಆಕಾಶಗಂಗೆಯ ಪಡೆದಾ ಚರಣಾಶಕಟನ ಮುರಿದೊಟ್ಟಿದ ಚರಣಾಭಕುತ ಜನರ ಸೇವೆ ಕೊಂಬ ಚರಣರಕ್ಕಸ ದಲ್ಲಣ ಚರಣಾವ ಪಾಲಿಸೆಂದಾಳು 34 ಅಂಕುಶದೊಜ್ರ ರೇಖೆಯ ಚರಣಾಕುಂಕುಮಾಂಕಿತ ರಾಶಿಯ ಚರಣಾಬಿಂಕದಿಂದ ಕುರುಪತಿಯ ಕೆಡಹಿದ ಬಿರು-ದಾಂಕ ನಿನ್ನಯ ಚರಣಾ ಪಾಲಿಸೆಂದಾಳು 36 ನಸುನಗುತ ಹರಿ ಚರಣ ವೀಕ್ಷಿಸಿಶಶಿಮುಖಿ ಸೀತೆ ಆನಂದದಿಂದಾಮಿಸಣಿಯಂತೊಪ್ಪುವ ಅರಿಶಿನೆಣ್ಣೆಯಾಎಸೆವ ಪಾದಕ್ಕೆ ಹಚ್ಚಿದಳಾಗ 37 ಪಾದ ಪದ್ಮಕ್ಕೆ ಎರಗಿಪಾಲಿಸಬೇಕೆಂದಾಳು ಅಂಗನೆ 38 ಕರಗಳ ಪಿಡಿದೆತ್ತಿದನು ರಾಮಾಹರಸಿದ ಮುತ್ತೈದಾಗೆಂದುಪರಮ ಪತಿವ್ರತೆಯೆನಿಸು ಎನುತಾಲಿಹರಿ ಹರಸೀದಾನು ಹರುಷದಲ್ಲಾಗ 39 ಅಂಡಜವಾಹ ಭಗವಂತನುಹೆಂಡತಿಯ ಮುಖವ ನೋಡೆನುತಲಿಗಂಡು ಮಕ್ಕಳ ಘನವಾಗಿ ಪಡೆಯೆಂದುಪುಂಡರೀಕಾಕ್ಷ ಹರಸಿದನಾಗ 40 ಮಂದಗಮನಿಯ ಕುಳ್ಳಿರಿಸಿಇಂದಿರೇಶ ಮುಂಗುರಳಾ ತಿದ್ದಿಎಂದೆಂದಿಗೆ ಅಗಲದಿರೆಂದು ರಾಮ-ಚಂದ್ರಾನು ಹರಸಿದನಾಗ 41 ಭೂಲೋಕದೊಡೆಯ ರಾಘವರಾಯನಶ್ರೀಲತಾಂಗಿಯ ಕುಳ್ಳಿರಿಸಿದನುಬಾಲಕಿಯರೆಲ್ಲಾರು ಗಲಿಬಿಲಿ ಮಾಡಾದಿರೆಂದುಫಾಲಾಲೋಚಾನು ನುಡಿದನು ನಗುತ 42 ಕಂತುಜನಕ ರಾಘವಾ ನಿಮ್ಮಾಪಂಥ ಸಲ್ಲಾದು ಜಾನಕಿಯೊಡನೆಯಂತ್ರವಾಹಕ ಶ್ರೀರಾಮ ಏಳೇಳೆಂದುಕಾಂತೆಯರೆಲ್ಲರು ನುಡಿದಾರು ನಗುತಾ 43 ಭಾಗೀರಥಿ ಪಾರ್ವತಿದೇವಿಬೇಗದಿ ಅರಿಷಿನ ಕೈಲಿ ಕಲಿಸಿಸಾಗರ ಶಯ್ಯನ ಕೈಯೊಳಗಿಟ್ಟುಬಾಗಿ ಸೀತೆಯ ಮುಖಕೆ ಹಚ್ಚೆಂದಾರು 44 ನಿಂದಲ್ಲಿ ನಿಲ್ಲಾದೆ ಚಂಚಳೆ ಲಕ್ಷ್ಮೀಬಂಧು ಬಳಗವನಗಲಿಸುವ ತರಳೆತಂದೆ ಮಕ್ಕಳೊಳಗೆ ಕದನವ ನಿಡುವಂಥಮಂದಹಾಸೆ ಮುಖವ ತೋರೆಂದಾನು ರಾಮಾ 45 ಅಣ್ಣನ ವಂಚಿಸಿ ಬೇಡಿದವಳೇಮನ್ನೆ ಮನ್ನೆಯರಾ ಕಳಿಸಿದವಳೇಚೆನ್ನಾಗಿ ಮನೆಯೋಳಿದ್ದು ಪೋಗುತಚೆನ್ನಾಯಿತೆ ಮುಖವ ತೋರೆಂದಾನು 46 ಭಾಷೆಯನು ಕೊಟ್ಟು ತಪ್ಪಿಸುವಳೆಕಾಸುವೀಸಾಕೆ ವತ್ತಿ ಬೀಳುವಳೆಹೇಸಿಕಿಲ್ಲದೆ ಕುಲಹೀನನ ಮನೆಯೊಳುವಾಸವಾಗಿರುವಾ ಮುಖವ ತೋರೆಂದಾನು 47 ರಾಮಚಂದ್ರಾನು ಅರಿಶಿನ ಗಂಧವಭೂಮಿಜಳಿಗೆ ಹಚ್ಚಿದನಾಗಾಸಾಮಜಗಮನೆಯ ಹಣೆಗೆ ಕುಂಕುಮ ಹಚ್ಚಿಪ್ರೇಮದಿ ಪರಿಮಳ ಪೂಸಿದಾನು 48 ಕುಸುಮ ದಂಡೆಯ ಮಾಡಿದರುಬಾಸಿಂಗವನು ಕಟ್ಟಿದಾರುಭೂಸುರರೆಲ್ಲರು ಮಂತ್ರಾಕ್ಷತೆ ತಳಿದು ನಿ-ರ್ದೋಷನಾಗೆಂದು ಹರಸಿದರು 49 ಇಂದುಮುಖಿಯರೆಲ್ಲಾರು ಕೂಡಿನಂದದಿ ಜಾನಕಿಗೆ ವೀಳ್ಯವನಿತ್ತುಅಂದಮಾಣಿಕದ ಅಕ್ಷತೆಗಳ ತಳಿದುಮಂದರೋದ್ಧರನ ಹರಿಸಿದರು 50 ದೇವಿಯನ್ನೆತ್ತಿಕೊಂಡು ರಾಮದೇವರ ಮನೆಗೆ ಬಾಹೋದು ಕಂಡುಭಾವುಕರೆಲ್ಲಾ ಹೆಸರು ಪೇಳೆಂದೆನುತದೇವಿ ರಘುನಾಥನೆಂದು ಪೇಳಿದಳಾಗ 51 ಇಂದುಮುಖಿಯರೆಲ್ಲಾರು ಕೂಡಿಇಂದಿರೇಶಾನೆ ಹೆಸರು ಪೇಳೆನಲುಎಂದಾ ಮೇಲೆ ಜಾನಕಿಯೆಂತೆಂದುಮಂದರಧರನು ನುಡಿದನಾಗ 52 ಸತಿಪತಿಯರಿಬ್ಬರು ಕೂಡಿಅತಿಶಯದಲಿ ನಮಸ್ಕರಿಸಿದಾರುಕ್ಷಿತಿಯ ಸುರರಿಗೆ ಲೀಲೆಯ ತೋರಿದ ದೇವಾಪತಿತ ಪಾವನ್ನ ಎನ್ನ ಸಲಹು ಎಂದಾನು 53 ಈ ಕಥೆಯನು ಆದರದಿಂದಾ ಬರೆದು ಹೇ-ಳಿ ಕೇಳುವ ಜನರಾಶ್ರೀಕಾಂತನೊಲಿದು ಕರುಣಿಸುವ ತಾ ಸಿದ್ಧನೇಮದಿಂದಾ ಪಾಡಿರಿ ಜನರು 54 ಕುರುಡಾನು ಈ ಕಥೆಯಾನು ಕೇಳಿದರೆಕರುಣದಿಂದಾಲಿ ಕಂಗಳ ಬರಿಸುವಶರಣವತ್ಸಲ ತನ್ನ ಶರಣರೊಳಿಟ್ಟುಪರಿಪಾಲಿಸುವನು ಶತಸಿದ್ಧ 55 ಸಿರಿ ಒದಗುವದುದಾರ ಇಲ್ಲದ ಬ್ರಹ್ಮಚಾರಿ ತಾ ಕೇಳಲುನಾರಿಯ ಸಹಿತೆ ವಾಸಿಸುವನು 56 ಉದ್ಯೋಗ ಇಲ್ಲದವನು ಕೇಳಿದರೆಸದ್ಯ ಐಶ್ವರ್ಯ ಒದಗುವದು ಸಿದ್ಧಮುದ್ದು ಸುತರಿಲ್ಲದ ಸ್ತ್ರೀಯು ಕೇಳಲುಬುದ್ಧಿವಂತ ಸುತರಾಗುವರು ಸಿದ್ಧ 57 ಮೂರ್ತಿ 58 ಕಮಲ ಧರಿಸಿಪ್ಪಪಾವನ ಮೂರುತಿ ಹೃದಯಾದಲ್ಲಿದೇವಿ ಸಹಿತವಾಗಿ ಕಾವನು ಕರುಣಾದಿನೀವೆಲ್ಲಾರು ತಿಳಿರಿ ಜನರು 59 ಜಾಹ್ನವಿ ಜನಕನುಜಯ ಜಯವೆಂದು ಮಂಗಳವ ಪಾಡೇ 60
--------------
ಮೋಹನದಾಸರು
ಉರುಟಣೆ ಹಾಡು ಪದ್ಮಾವತಿ ನಿಂತು ಮುದ್ದು ಪದ್ಮನಾಭನಿಗೆ ಪದ್ಧತಿಯಲಿ ಉರುಟಾಣಿಯನು ಮಾಡಿದಳೊ ಪ. ಪದ್ಮಾಕ್ಷ ನಿನ್ನಯ ಪಾದಪದ್ಮವನೆ ತೋರೀಗ ಪದ್ಮರೇಖೆಯ ಪಾದಕರಿಶಿಣವ ಹಚ್ಚುವೆನು ಪದ್ಮ ಸಂಭವನ ಪಿತ ವೆಂಕಟೇಶ ಶ್ರೀಶ ಅ.ಪ. ಪಣೆ ತೋರು ವರ ಕುಂಕುಮದ ತಿಲಕ ತಿದ್ದುವೇನು ಕೃಷ್ಣ ಕೊರಳ ತೋರೆಲೊ ದೇವ ಶ್ರೀ ವತ್ಸದಾಮೇಲೆ ಮೆರೆವ ತೆರ ಹಾರಹಾಕುವೆನೀಗ ಶ್ರೀಶಾ ಸುರವಂದ್ಯನೆ ದೇವ ಶ್ರೀನಿವಾಸ 1 ವೇದಾಭಿಮಾನಿಯೆ ವೇದದಿಂದಮುತ್ರವನು ಆದರದಿ ಭಕ್ತರಿಗೆ ಕೊಟ್ಟಿ ಕರಕೆ ಮೋದದಿಂದ ಗಂಧವನು ಹಚ್ಚುವೆನು ಎಲೊ ದೇವ ಸಾಧಿಸಿ ಭೂಮಿಯ ತಂದ ವರಹ ಕಂಠವ ತೋರೋ ಆದರದಿ ಹಚ್ಚುವೆನು ದೇವ ದೇವ 2 ಕಂದನಾ ನುಡಿಕೇಳಿ ಕಂಬದಿಂ ಬಂದವನೆ ಅಂದದಿಂ ಬ್ರಹ್ಮಚಾರಿಯಾಗಿ ಮೆರೆವ ದೇವ ಸುಂದರ ಪರಶುರಾಮ ಅಂದದ ದಶರಥಸುತನೆ ಮಂದರೋದ್ಧರ ಕೃಷ್ಣ ಸುಂದರ ಬೌದ್ಧ ಕಲ್ಕಿ ನಿನ್ನ ಮಂದಗಮನೆಯ ವೀಳ್ಯ ಸ್ವೀಕರಿಸೊ ಶ್ರೀ ಶ್ರೀನಿವಾಸಾ 3
--------------
ಸರಸ್ವತಿ ಬಾಯಿ
ಉರುಠಾಣೆ ಮಾಡುವೆ ಅರಸ ನಿನಗೆ ನಾ ಪ ಸ್ಮರಶತ ಸುಂದರ ಸರ್ವಲೋಕೇಶ್ವರ ಚರಣಸೇವೆಕಳ ಕರುಣದಿ | ನೋಡು ದ- ಶುಭ ಚರಿತ ಅ.ಪ ಕರಕಮಲವ ದಯಮಾಡು | ನಿನಗೆ ನಾ ಅರಿಸಿನ ಪೂಸುವೆ ಸರಸಿಜನಯನ 1 ದಿಟ್ಟ ಲಲಾಟವ ಕೊಟ್ಟರೆ | ಕುಂಕುಮ ವಿಟ್ಟು ತಿದ್ದುವೆನು ಸೃಷ್ಟಿಗೊಡೆಯನ 2 ಪರಮ ಪುರುಷ ನಿನ್ನ | ಶಿರಕೊರಳಿಗೆ ನಾ ಧರಿಸಿ ಲೇಪಗೈಯ್ಯುವೆ ಪ್ರಾಣೇಶಾ 3 ಪರುಷೋತ್ತಮ ಭಾಸ್ಕರ ಕುಲತಿಲಕ 4 ಹೇಮದ ತಟ್ಟೆಯ ತಾಂಬೂಲವ | ಗುರು- ರಾಮವಿಠಲ ತವಕದಿ ಸ್ವೀಕರಿಸೈ 5
--------------
ಗುರುರಾಮವಿಠಲ
ಐಸಿರಿಯನೇನೆಂದು ಪಾಡಲಿ ಶ್ರೀಹರಿಯ ಮೈಸಿರಿಯ ಪಾದಾದಿ ಕೇಶ ಪರ್ಯಂತ ಪ ಸಿರಿಯ ಕರಾಬ್ಜ ಪರಾಗದಿಂ ರಂಜಿಪ ಸರಸಿಜ ಕುಂಕುಮರಜ ರಮ್ಯವೆಂದೆನಿಪ ನಿರುತ ಯೋಗೀಂದ್ರ ಹೃತ್ಕಮಲವನರಳಿಪ ತರುಣಾತಪದ ಕಾಂತಿಯೆನೆ ಕಂಗೊಳಿಪ ವರಶ್ರುತಿ ಸೀಮಂತ ಸಿಂಧೂರವೆನೆ ತೋರ್ಪ ಫಣಿ ರತುನಾರತಿಯೆನಿಪ ಸುರುಚಿರ ಶೋಣ ಪ್ರವಾಳವ ಸೋಲಿಪ ಅರುಣಾಂಬುರುಹದಂದದಿ ಥಳಥಳಿಪ 1 ಚರಣತಳಂಗಳೊಪ್ಪುವ ತನಿ ಕೆಂಪಿನ ಶರಣ ಚಿಂತಾಮಣಿಯ ನಸುಗೆಂಪಿನ ಧರಣಿಯನೀರಡಿ ಮಾಡಿದ ಪೆಂಪಿನ ಕರುಣದಿ ಕಲ್ಲ ಪೆಣ್ಮಾಡಿದ ಸೊಂಪಿನ ಕರ ಶಂಖ ಪದ್ಮ ರೇಖಾಂಕಿತದಿಂಪಿನ ಕುರುನೃಪಗರ್ವ ನಿರ್ವಾಹಾಪಗುಂಪಿನ ಸುರಮಣೀಮಕುಟ ನಾಯಕದ ಸೊಂಪಿನ ಪರಮಪಾವನ ಪಾದದುಂಗುಟದಲಂಪಿನ 2 ಕಂಜಭವಾಂಡ ಸೋಂಕದ ಮುನ್ನ ಬೆಳಗುವ ಸಂಜನಿಸಿಹ ಗಂಗೆ ಮುದದಲ್ಲಿ ಮುಳುಗುವ ಭುಂಜಿಸಿತಮಸ ಜಗಂಗಳ ಬೆಳಗುವ ಮಂಜೀರ ಕಡಗ ಭಾಪುರಿಗಳಿಂ ಮೊಳಗುವ ಮಂಜುಳಾಂಗದಿ ನಖಪಂಕ್ತಿಗಳ್ ತೊಳಗುವ ರಂಜನೆಯಿಂ ಶ್ರೀಮದಂಘ್ರಿಗಳೆಸೆವ ವಂಚಿತ ಸೌಮ್ಯ ಜಂಘೆಗಳಿಂ ಸೊಗಯಿಸುವ ಕುಂಜರ ರುಚಿಯ ಪೂರ್ಣೇಂದು ರಂಜಿಸುವ 3 ಅಳವಟ್ಟ ಪೀತಾಂಬರದ ಸುಮಧ್ಯದ ಕಳಕಾಂಚಿದಾಮದುನ್ನತ ಕಟಿತಟದ ನಳಿನಾಲವೋದಿತ ನಾಭಿಪಂಕರುಹದ ಇಳೆಯ ಜನಂಗಳಿಗೆನಿಸುವ ವುದರದ ವಿಳಸದಲಂಕೃತ ಬಾಹು ಚತುಷ್ಟದ - ಮಳ ಶಂಕಚಕ್ರ ಸದಬ್ಜ ಸಂಭೃತದ ಪೊಳೆವ ಕೌಸ್ತುಭಮಣಿ ಶ್ರಿವತ್ಸೋದರದ ತುಳಸಿ ಮಂದಾರ ಮಾಲೆಗಳ ಕಂಧರದ 4 ಘನ ಸೌಭಗ ಗಂಡಮಂಡಲಯುಗ್ಮದ ಮಕರಕುಂಡಲ ಕರ್ಣಯುಗ್ಮದ ವನಜ ನೇತ್ರಂಗಳ ಕರುಣಾಕಟಾಕ್ಷದ ವಿನುತ ಮೌಕ್ತಿಕದಿಂದ ಮೆರೆವ ನಾಸಿಕದ ನಸು ಮೋಹನದಿ ಸಮನಿಪ ಚುಬುಕಾಗ್ರದ ತನಿರಸ ತುಳುಕುವ ಚೆಲುವಿನಧರದ (?)ಲಲಿತ ವದನದ ವರದಂತಪಂಙ್ತಯ ಇನಿಗೆದರುವೆಳನಗೆಯ ಸಿರಿಮೊಗದ 5 ಸಿಂಗಾಡಿಯಿಂ ಮಿರುಗುವ ಪುರ್ಬುಗಳ ಸ - ನಾಸಿಕ ಬೆಳ ದಿಂಗಳ ಪೊಂಗಿನ ಕಸ್ತೂರಿ ತಿಲಕ ರ ತ್ನಾಂಗದ ರಂಗಿನ ಮಕುಟ ಮಸ್ತಕದ ನೀ ಲಾಂಗದಳಾಂಗನೆಯರು ಸುರಪುರ ಮಧ್ಯ ನಿಖಿಳ ಜ ಗಂಗಳ ಹಿಂಗದೆ ಪೊರೆವ ಶ್ರೀ ಲಕ್ಷ್ಮೀಶ ಮಂಗಳೋತ್ತುಂಗ ಮೂರುತಿಗೆ ನಮೋ ನಮೋ 6
--------------
ಕವಿ ಲಕ್ಷ್ಮೀಶ
ಕನ್ನಡಿಯ ಪೋಲುವೊ ಚೆನ್ನ ಕೆನ್ನೆಯ ತೋರು ಪ. ಚನ್ನ ಚೆಲುವೆ ಬಣ್ಣದರಿಶಿಣವ ಪೂಸುವೆನು ರನ್ನದ ಲಲಾಟಕೆ ಚನ್ನ ಕುಂಕುಮ ತಿಲಕ ಚಿನ್ನದಾ ಬೊಂಬೆ ಪದ್ಮಾವತಿ ನಿನಗೆ ತಿದ್ದುವೆನೆ ಚನ್ನಕೇಶವರಾಯ ನಿನ್ನ ಚೆಲುವಿಕೆಗೆ ಮೆಚ್ಚಿ ಬಂದಿಹೆನೆ 1 ಅರವಿಂದದಳನಯನೆ ಅಡವಿಯಲಿ ಯನ ಮೇಲೆ ಅರಸಿ ನೀ ಕಲ್ಲುಗಳ ಬೀಸಿದಾ ಕರಕೆ ಗಂಧ ಸರಸದಲಿ ಹಚ್ಚುವೆನೆ ಸರಸಿಜಾಕ್ಷಿಯೆ ಕೊರಳ ಹರುಷದಲಿ ತೋರೀಗ ನಿನ್ನ ಸರಸಿಜಾಕ್ಷಗೆ ಅರಸಿ ಪದ್ಮಿನಿಯೆ 2 ಸರ್ಪವೇಣಿಯೆ ನಿನಗೆ ಕಂದರ್ಪಪಿತ ಮಲ್ಲಿಕಾ ಪುಷ್ಪ ದಂಡೆಯನು ಮುಡಿಸುವೆನು ಕಮಲನಯನೆ ಸರ್ಪಶಯನನು ನಿನಗೆ ಅರ್ಪಿಸುವೆ ಸುತಾಂಬೂಲ ದರ್ಪವನು ಬಿಟ್ಟು ಕೈಕೊಳ್ಳೆ ವೀಳ್ಯವ ಅರಸಿ ಸರ್ವರಿಗೆ ಅಪ್ಪ ಶ್ರೀ ಶ್ರೀನಿವಾಸಾನೆಂದು ತಿಳಿಯೆ ದೇವಿ 3
--------------
ಸರಸ್ವತಿ ಬಾಯಿ
ಕಮಲಮುಖಿಯೆ ಕಮಲಾಲಯೆ ಕಮಲೆಕಮಾಲಾಕ್ಷಿಯೆ ಕೋಮಲೆ ಪ. ಕಮಲನಾಭನ ಪಾದಕಮಲಯುಗಳ ಮಧುಪೆಕಮಲಜ ಜನನಿಯೆ ಕಮಲಮಿತ್ರೆ ಸುಪ್ರಭೆ ಅ.ಪ. ಅರುಣನ ಪೋಲುವ ಚರಣವು ಬಾಲಚಂದಿರನ ಸೋಲಿಪ ನಖವುಬೆರಳಲ್ಲಿ ಪಿಲ್ಲಿ ಕಾಲುಂಗುರ ಮೆಂಟಿಕೆ ಕಿರುಗೆಜ್ಜ್ಯಂದಿಗೆ ಪೆಂಡೆಯುಕರಿಯ ದಂತದಂತೆ ಜಾನುದರ್ಪಣ ಜಂಘೆ ಉಟ್ಟ ದಟ್ಟಿಯು ನೆರಿಗೆಯುಹರಿನಡು ಕಿಂಕಿಣಿ ಭರದಿ ಒಡ್ಯಾಣವು ಉದರ ತ್ರಿವಳಿರೇಖೆ ವರ ಕಂಚುಕಧಾರಿ1 ಉರೆ ವೈಜಯಂತೀ ಮಂದಾರಮೆರೆವ ಚುಬುಕ ಬಿಂಬಾಧರ ಕೂರ್ಮಕದಪು ಕಿರಿದಂತ ರತುನದ ಕರಡಿಗೆ ವದನೆ 2 ಸುರಭಿ ಚಂಪಕನಾಸಿಕ ಮೂಗುತಿ ಶಾಂತ ಪರಮ ಕರುಣ ನೋಟದಹರಿಣನಯನೆ ಪುಬ್ಬುಸ್ಮರನ ಚಾಪದಂತೆ ಕರ್ಣಾಭರಣಲಂಕಾರ ಸಿರಿಕುಂಕುಮ ಕಸ್ತೂರಿ ತಿಲಕದ ಮೇಲೆ ಅರಳೆಲೆ ಬೈತಲೆಯ ಸರ ಕುರುಳುಸುಳಿಯು ಪರಿಪರಿ ರತ್ನ ಖಚಿತದ ವರ ಮಕುಟವು ಕೋಟಿ ತರಣಿಯಂತೊಪ್ಪುವ 3 ತೆತ್ತೀಸಕೋಟಿ ದೇವತೆಗಳು ವಾಣಿ ಭಾರತಿ ಪಾರ್ವತಿ ಮೊದಲಾದಉತ್ತಮಸ್ತ್ರೀಯರು ಛತ್ರಚಾಮರನೆತ್ತಿ ಬೀಸುವಲಂಕಾರಸುತ್ತಗಂಧರ್ವರು ತುಂಬುರ ನಾರದರು ಸ್ವರವೆತ್ತಿ ಪಾಡುವ ಝೇಂಕಾರತತ್ತರಿತರಿಘಟ್ಟ ಝಣುತ ಝಣುತ ಎಂದು ಎತ್ತ ನೋಡಿದರತ್ತ ತಥೈ ಎಂಬೊ ಶಬ್ದ 4 ಅಜ ಫಾಲಾಕ್ಷ ಸುರವಿನುತೆಮೋಕ್ಷದಾಯಕಿ ಲೋಕರಕ್ಷಕಿ ರಮಾದೇವಿ ಇಕ್ಷುಧನ್ವನ ಜನನಿಅಕ್ಷಯಫಲದ ಗೋಪಾಲವಿಠಲನ ಪ್ರತ್ಯಕ್ಷ ತೋರಿಸೆನ್ನಪೇಕ್ಷೆ ಪೂರೈಸೆ ತಾಯೆ 5
--------------
ಗೋಪಾಲದಾಸರು
ಕರುಣಿಸಿಯಭಯವನು ಕೊಟ್ಟು ಕಾಯುವೆನಿರತಂ ಕರಕಮಲವದಯಮಾಡೈ ಅರಿಸಿನ ಹಚ್ಚುವೆನು ಮುದದಿ ಅರಸ ನಿನಗೆ ನಾಂ 1 ಪಂಕಜರಿಪು ನಿಭವಕ್ತ್ರನೆ ಪಂಕಜ ಸೂರ್ಯನೆ ಕುಂಕುಮ ಹಚ್ಚುವೆ ನಿನಗೆ ಕೊಡು ನಡು ಪಣೆಯಂ 2 ಭವ ತ್ಕಂಧರವ ನೀಡು ಪರಿಮಳ ಗಂಧವ ಹಚ್ಚುವೆನು ನಾನು ಕಮಲದಳಾಕ್ಷ 3 ನಿರತವು ಮನ್ಮಾನಸ ಪಂ ಕರುಹದಿ ಸೇವಿಸುವೆ ನಿನ್ನ ಕರುಣಾನಿಧಿಯೆ ಸರವನು ಕಂಧರದಿ ಧರಿಸುವೆ ಜಗನ್ನಾಥಾ 4 ನಾಮಾಡಿದ ತಪ್ಪುಗಳಂ ನೀ ಮನದಲಿ ತರದೆ ಕ್ಷಮಿಸುವದು ಪ್ರಾಣೇಶಾ ಪ್ರೇಮದಿ ವೀಳ್ಯವ ಶ್ರೀಗುರು ರಾಮವಿಠಲ ಕೊಡುವೆ ನಿನಗೆ ರಮ್ಯಚರಿತ್ರ 5
--------------
ಗುರುರಾಮವಿಠಲ
ಕಾಮನ ಪಿತ ಕೃಷ್ಣ ಕಾಮಿನಿಯಾದನು ಕಾಮನ ಪಿತ ಕೃಷ್ಣ ಕಾಮಿನಿ ಆಗುವೊ ಕಾರಣ ಕೇಳಿರಿ ಕಾಮಿಸಿ ಶ್ರೀಹರಿ ಆ ಮಹಾಸುರರಿಗೆ ಸುಧೆಯನ್ಹಂಚುಣಿಸಲು ಶ್ರೀ ಮಾಯಾಪತಿಯು ತಾ ಸ್ತ್ರೀಯಾದ ಚೆಲುವಿಕೆ ಪ ರುಳಿ ಲುಲ್ಲು ಗೆಜ್ಜೆ ಪೈಜಣ ಪಾಗಡವನಿಟ್ಟು ಚರಣದಿ ಕಾಲುಂಗರ ಪಿಲ್ಯ ಮೆಂಟಿಕೆ ಝಣ ಝಣ ನಾದ ಕಾಳಿಯ ಫಣ ತುಳಿದಂಥ ಖಳರ ಮರ್ದನ ದಿವ್ಯ ತರುಣಿ ತಾನಾದನು 1 ಸೆರಗು ನಿರಿಯು ಜರತಾರಿ ಪೀತಾಂಬರ ಬಿಡಿ ಮುತ್ತಿನುಡಿಗಂಟೆ ನಡುವಿನ್ವೊಡ್ಯಾಣ ಸಡಗರದಿಂದ್ವೊಪ್ಪೊ ತಾಳಿ ಪದಕವಿಟ್ಟು ಮೃಡನ ಪ್ರಿಯನು ಮುದ್ದು ಮಡದಿ ತಾನಾದನು 2 ಕಂಚುಕ ತೋಳಿನಲ್ವಂಕಿ ಬÁಜುಬಂದು ಮಿಂಚಿನಂದದಿ ನಲಿದಾಡುತ ಗೊಂಡ್ಯವು ಕಂಕಣ ತೋಡ್ಯ ವಜ್ರದ್ವಾರ್ಯ ಹರಡಿಯು ಪಂಚ ಬೆರಳಿನಲ್ಲುಂಗುರವನಿಟ್ಟು ಸೊಬಗಲಿ 3 ಚಿಂತಾಕು ಸರಿಗೆ ಚಿನ್ನದ ಗುಂಡು ಹವಳವು ಕೆಂಪು ಏಕಾವಳಿ ಮಲಕು ತಾಯಿತ ಮುತ್ತು ಮಿಂಚುವೋ ಪದಕ ಮುತ್ತಿನ ಕಟ್ಟಾಣಿಯು ಪಂಚರತ್ನದ ಹಾರ ಪರಮಾತ್ಮಗಲೆಯುತ4 ಉಂಗುರ ಕೂದಲು ಶೃಂಗಾರ ಕ್ಯಾದಿಗೆ ಚಂದ್ರ ಚೌರಿ ಜಡೆಬಂಗಾರ ರಾಗಟೆ ಮುಂದೆ ಮುತ್ತಿನದಂಡೆ ಮುಡಿಯಲ್ಲೆ ಒಪ್ಪಿದ ದುಂಡು ಮಲ್ಲಿಗೆ ದÉೂೀಷದೂರನಿಗಲೆವುತ 5 ವಾಲೆ ಬುಗುಡಿ ಬಾಳ್ಯ ಚಳತುಂಬು ಚಂದ್ರ ಮುರುವು ಚಿನ್ನದ ಕಡ್ಡಿ ಕಿವಿಯಲ್ಲಿ ಕುಂದಣ ಕುಸುರು ವಜ್ರಗಳು ಕೆಂಪ್ಹೊಳೆವಂಥ ದುಂಡು ಮುತ್ತಿನ ಮುಕುರ್ಯವ ಮೂಗಿನಲ್ಲಿಟ್ಟು 6 ಅಚ್ಚ ಮುತ್ತಿನ ದಂಡೆ ಕುಚ್ಚು ತೊಂಡಿಲುಗಳು ಹಚ್ಚೆಯ ಬೊಟ್ಟು ಕಸ್ತೂರಿ ಕುಂಕುಮನಿಟ್ಟು ಪಚ್ಚೆ ಮಾಣಿಕ್ಯದರಳೆಲೆ ಚಂದ್ರ ಸೂರ್ಯರು ನಿತ್ಯ ತೃಪ್ತನು ನೀಲವರ್ಣದಂತ್ಹೊಳೆಯುತ 7 ಆ ಮಹಾವೈಕುಂಠಪುರದರಸಾದ ಈ ಮಹಾ ರಜತ- ಪೀಠ ಪುರದಲಿ ಬಂದು ಪ್ರೇಮದಿ ನಿಂತು ನೋಡುತ ಬಂದ ಜನರಿಗೆ ಕಾಮಿತ ಫÀಲ ಮುಕ್ತಿ ಕೊಡುವ ಕಮಲಾಪತಿ 8 ಅಷ್ಟಯತಿಗಳಿಂದಲಿ ಪೂಜೆಯಗೊಂಬೊ ಲಕ್ಷ್ಮಿಯ ಪತಿಯು ಸ್ತ್ರೀರೂಪವ ಧರಿಸಿರೆ ದೃಷ್ಟಿಂದೆ ನೋಡದಿನ್ನಿರುವೋರೆ ಭೀಮೇಶ- ಕೃಷ್ಣ ನಿನ್ನ ಮನದಲ್ಲಿಟ್ಟು ಸ್ತುತಿಸುವೆನು 9
--------------
ಹರಪನಹಳ್ಳಿಭೀಮವ್ವ
ಕೃಷ್ಣ ರುಕ್ಮಿಣಿ ವಿವಾಹದೈದು ದಿನದಲ್ಲಿ ಅರ್ಥಿ(ಯಿಂ)ಂದೋಕುಳಿಯನಾಡಿ ಕುಂಕುಮ ಗಂಧ ಬುಕ್ಕಿ ್ಹಟ್ಟಲೂ(ಲುರು?) ಟಣಿಯ ಮಾಡಿ ಆರತಿನೆತ್ತಿ ಮುತ್ತೈದೇರು ಪಾಡಿ ವೀಳ್ಯಗಳ ನೀಡಿ ಸರ್ಪಶಯನನು ತನ್ನ ಸತಿಯ ಎತ್ತಿ ಬರುವೋ ಕಾಲದಲ್ಲಿ ಚಿಕ್ಕ ಸುಭದ್ರೆ ತಾ ಬಾಗಿಲು ಕಟ್ಟಿ ತಾ ನಗುತ ನುಡಿದಳು 1 ಪಟ್ಟದರಸಿಕೂಡ ಮತ್ತೆಲ್ಲಿ ಪಯಣ ಈ ವಾರ್ತೆ ಹೇಳುವುದೆನಗೆ ಕೇಳುವೆ ಕೊಟ್ಟು ಎನಮನ ಕಾಮಿತಾರ್ಥವ ದಯಮಾಡಣ್ಣಯ್ಯ ಶ್ರೀಕೃಷ್ಣಯ್ಯ 2 ನಾರಿಮಣಿಯೆ ನವರತ್ನದ ಹೆರಳು ಬಂ- ಗಾರ ರಾಗಟೆಯು ಗೊಂಡ್ಯ ಕಂಕಣ ವಂಕಿ ದ್ವಾರಾ ಹರಡಿಯು ಚೆಂದ ಒಪ್ಪುವ ಗೆಜ್ಜೆ ನಾಗಮುರಿಗೆಯು ಕಾಲ ಪೈಜಣ ಗೆಜ್ಜೆ ರುಳಿ ವೈಡೂರ್ಯದ್ವೊಡ್ಯಾಣವನೆ ಮಾಣಿಕ್ಯದ್ವಾಲೆ ಮೋಹನ್ಮಾಲೆ ಕೊಡುವೆನು ಕದವ ಬಿಡು ತಂಗಿ ಕೋಮಲಾಂಗಿ 3 ಪಚ್ಚಮಾಣಿಕದ ಗೊಂಡ್ಯಗಳು ಬಾಜುಬಂದು ರತ್ನಹ್ಹೆರಳುಬಂಗಾರ ಕಂಕಣವಂಕಿ ಹಸ್ತಕಡಗವು ದ್ವಾರ್ಯ ಪುತ್ಥಳಿ ಏಕಾವಳಿಯ ಸರ ಚಿಂತಾಕು ಸರಿಗೆ ತೆತ್ತಿಸಿಯರಚಂದ್ರರಾಗಟೆÉ ಮತ್ತೆ ಎನಗಮ್ಮಯ್ಯಕೊಡುವಳು ಅರ್ಥಿಯಿಂದೀಗೆನ್ನ- ಮನೋರಥ ದಂiÀiಮಾಡಣ್ಣಯ್ಯ ಶ್ರೀಕೃಷ್ಣಯ್ಯ 4 ಹರದಿ ನಿನಗೆ ಹವಳದ ಕಾಲ್ವಜ್ರದ ಮಂಚ ಜರದ ಸುಪ್ಪತ್ತಿಗೆಯು ಹಾಸಿಕೆ ಲೋಡು ವರಪೀಠ ವಸನಂಗಳು ಚ- ಪ್ಪರ ಮಂಚಕ್ಕೊಲೆವೋ ಮುತ್ತಿನ ಗೊಂಚಲು ರವಿಪೋ- ಲ್ವ ರಥವು ಕರಿತುರಗ ಕರೆವೆಮ್ಮೆ ಗೋವ್ಗಳು ತರತರದ ಛತ್ತರಿಗೆ ಚಾಮರ ಜರತಾರಂಚಿನ ಸೀರೆ ಕೊಡುವೆನು ಕದವ ಬಿಡು ತಂಗಿ ಕೋಮಲಾಂಗಿ 5 ಪನ್ನಂಗಶಯನ ಕೇಳೆನ್ನ ಗಲ್ಲದಲೊಪ್ಪೋ ಸಣ್ಣ ಮುತ್ತಿನ ಗೊಂಚಲು ದ್ರಾಕ್ಷಿಯ ಬಳ್ಳಿ ಹೊನ್ನಾ ್ವಲೆ ಸರಪಳಿಯು ಹೊಸ ಪ್ರೀತಿಯಲಿನ್ನು ನಾ ಬೇಡಿದ್ದು ಕೊಡುವನು ಮನ್ಮಥನ ಪಿತ ಎನ್ನ ಮನೋರಥ ದಯಮಾಡಣ್ಣಯ್ಯ ಶ್ರೀಕೃಷ್ಣಯ್ಯ 6 ಮುದ್ದು ಸುಭದ್ರ ಮೇಲಾದ ಜೊತೆಯ ಮುತ್ತು ವÀಜ್ರ ಕೆಂಪನು ಕೆತ್ತಿಸಿ ಕೊಡುವೆನೀಗ ತಿದ್ದಿ ಮಾಡಿದ ಮೂಗುತಿ ಪಾರ್ಥನ ರಥಕಿದ್ದು ಆಗುವೆ ಸಾರಥಿ ನಡೆಸುವೆನು ಕೀರ್ತಿ ಉಗ್ರಸೇನಗೆ ಹೇಳಿ ಇದರೊಳ- ಗರ್ಧ ರಾಜ್ಯವ ಕೊಡಿಸಿ ನಾ ನಿನ್ನುದ್ದ ಹಣ ಬಿಡು ತಂಗಿ ಕೋಮಲಾಂಗಿ 7 ಅಚ್ಚುತ ಬಲರಾಮರೆಂಬೊ ಎನಗೆ ಜೋಡು ಹೆಚ್ಚಿನ ಭುಜಗಳಿನ್ನು ಯಶೋದ ದೇವಕ್ಕಿ ರೋಹಿಣೀದೇವೇರು ಇರಲು ತಂದೆ ಶ್ರೇಷ್ಠನಾದ್ವಸುದೇವನು ನೀ ಕೊಡುವುದೇನು ಮುತ್ಯನಾಗಿದ್ದುಗ್ರಸೇನನು ಮತ್ತೆ ನಾ ಬೇಡಿದರೆ ಈ ಕ್ಷಣ ಕೊಟ್ಟು ಬಿಡನೇ- ನಧರ್À ರಾಜ್ಯವ ದಯಮಾಡಣ್ಣಯ್ಯ ಶ್ರೀಕೃಷ್ಣಯ್ಯ 8 ಎಷ್ಟು ಹೇಳಿದರು ಸನ್ಮತವಿಲ್ಲೆ ಸುಭದ್ರೆ ಮತ್ತೇನು ಕೊಡಲೆ ನಾನು ಮನಕೆ ಬೇಕಾದಿಷ್ಟವ ಬೇಡೆ ನೀನು ಭಾರ ಎಷ್ಟು ತಡೆಯಲಾರೆನೆ ನೀನು ಕೈಬಿಟ್ಟು ಬಿಡುವೆನು ಬೆಟ್ಟವನು ಕಿರು ಬೆಟ್ಟಿಲಿಂದೆ ಎತ್ತಿನಿಂತಿದ್ದೇಳು ದಿವಸ ಕದವ ಬಿಡು ತಂಗಿ ಕೋಮಲಾಂಗಿ 9 ಪಕ್ಷಿವಾಹನ ನಿನ್ನ ಚೊಚ್ಚಲಮಗಳ ಎನ್ನಚ್ಛದ ಅಭಿಮನ್ಯುಗೆ ಮಾಡುವುದು ಅ- ಪೇಕ್ಷವಾಗೇದೆ ಎನಗೆ ಬೇಡುವೆನು ನಿಶ್ಚಯ ಮಾಡಿ ಜನರೊಳಗೆ ಕೊಡು ಕೀರ್ತಿ ನಿನಗೆ ಪಟ್ಟದರಸಿಯ ಸಹಿತ ನೀ ಒಡಂಬಟ್ಟು ಎನಗ್ವಚನವನೆ ಪಾಲಿಸು ಕಟ್ಟಿದ್ಹಾದಿಯ ಬಿಟ್ಟು ಪೋಗುವೆ ದಯಮಾಡಣ್ಣಯ್ಯ ನೀ ಕೃಷ್ಣಯ್ಯ 10 ತರವಲ್ಲೆ ರುಕ್ಮಣಿ ಬೀಗತನವ ಭಾಳ ಪರಿ- ಯಾಲೋಚನೆ ಮಾಡು ರುಕುಮನ ಗಡ್ಡ ಶಿರ ಪಟ್ಟಿ ಪನ್ನಿ ನೋಡು ದೊರೆ ಶಿಶುಪಾಲ ವರನವಸ್ಥೆಯ ಕೊಂಡಾಡು ಧೈರ್ಯವನೆ ಮಾಡು ಬರೆದು ಓಲೆಯ ಕಳಿಸಿ ಎನ್ನ ಕರೆಸಿ ಬೆನ್ನ ್ಹತ್ತೋಡಿಬಂದ ಬಿರುದನರಿಯೇ ನ್ವರ ಶುಭಾಂಗಿನಿ ಕದವ ಬಿಡು ತಂಗಿ ಕೋಮಲಾಂಗಿ 11 ಕೃಷ್ಣ ಸುಭದ್ರೆ ಮಾತುಗಳ ರುಕ್ಮಿಣಿ ಕೇಳಿ ಮತ್ಯಾತಕೆನ್ನ ದೂರು ಯತಿಗಳ ಬೆನ್ನ ್ಹತ್ತಿ ಹೋದವರು ದಾರು ಕೃತ್ಯವ ನಡೆಸಿದರೆನ್ನ ನಾದಿನೇರು ಚಿತ್ರಾಂಗಿಯೇರು ಹಸ್ತಿನಾವತಿ ಅರಸು ಧರ್ಮರು ಹೆಚ್ಚಿನ್ಹಿರಿ ಯಣ್ಣಯ್ಯ ಭೀಮನು ಪಾರ್ಥಸುತ ಎನ್ನ ಸೋದರಳಿಯಗೆ ಕೊಟ್ಟೇನು ತೌರುಮನಿಗ್ಹೆಣ್ಣು 12 ರಂಗ ಸುಭದ್ರೆ ಮಾತಿಗೆ ಬಪ್ಪಿ ್ವ್ವಳ್ಯವ ಕೊಟ್ಟು ಚಂದ್ರಗಾವಿಯ ಕುಪ್ಪಸ ಜರದ ಪೀ- ತಾಂಬ್ರದುಡುಗೊರೆ ಕೊಡುತ ಮುತ್ತಿನ ಹಾರ ತಂದು ಕೊರಳಿಗೆ ಹಾಕುತ ರುಕ್ಮಿಣಿಯ ಸಹಿತ ಬಂದ ಭೀಮೇಶ ಕೃಷ್ಣ ಪಾರ್ಥನ ರಂಭೆ ಕನ್ಯವಗೆದ್ದಳೆನುತಲಿ ಸಂಭ್ರಮದಿ ದೇವೇಂದ್ರ ಬ್ಯಾಗನೆ ಚೆಂದದÀಲ್ಹೂಮಳೆಯ ಕರೆದರು 13
--------------
ಹರಪನಹಳ್ಳಿಭೀಮವ್ವ
ಕೊಡು ತಾಯೆ ವರವ ಧೃಡವಾಗಿರುವ ಕೊಡು ತಾಯೆ ವರವಾ ಪ. ಕೊಡೆ ವರ ತಡಮಾಡದೆ ಧೃಡ ಭಕ್ತಿ ಎಂಬ ಮಾಂಗಲ್ಯ ಭಾಗ್ಯ ಧೃಡವಾಗಿರುವಂತೆ ಅ.ಪ. ಪರಿಪರಿ ಧ್ಯಾನಿಸೆನ್ನ ಮನಮಂದಿರವೆಂಬ ವರಗೃಹದಲಿ ಯೆನ್ನಯ ಭಕ್ತಿಮಂಟಪದಿ ಹರದಿ ಲಕುಮಿ ನಿನ್ನ ಪೂಜಿಸಿ ನಮಿಸಲು ವರ ಅಘ್ರ್ಯಪಾದ್ಯ ಆಚಮನವಿತ್ತು ನಲಿವೆ 1 ನವವಿಧ ಭಕ್ತಿಯೆಂಬ ನವರತ್ನ ಮಂಟಪದಿ ನವವಧು ಹರಿಗೆ ನೀನೆಂದು ಕುಳ್ಳಿರಿಸಿ ನವವಿಧ ಪಂಚಾಮೃತ ಸ್ನಾನಗೈಸಿ ನವನೀತಚೋರ ನಿನಗೆ ವಸ್ತ್ರಾಭರಣವನಿಟ್ಟು ನವವಿಧ ಭಕುತಿಲಿ ಪೂಜಿಪೆ 2 ಜಾಜಿ ಮಲ್ಲಿಗೆ ರೋಜ ಸಂಪಿಗೆ ರಾಜಿಪಲಕ್ಷ್ಮಿಗೆ ಮಲ್ಲಿಗೆ ದಂಡೆ ಮುಡಿಸಿ ಜಡೆಗೆ ಕಮಲ ಕೆಂಪಿನ ತಿರುಪಿನ ಹೂವ ತಿರುಗಿಸಿ 3 ಅರಿಶಿನ ಕುಂಕುಮ ಪರಿಮಳ ಗಂಧದಿ ವರಮಹಾಲಕ್ಷ್ಮಿಗೆ ಪೂಜಿಸುವೆ ವರಲಕ್ಷ್ಮಿಗೆ ಪರಿಪರಿ ಪುಷ್ಪ ಅಷ್ಟೋತ್ತರಗಳಿಂದರ್ಚಿಸೆ ಕೊಡು ವರ ದೃಢಭಕ್ತಿಯೆಂದು ಬೇಡುವೆ 4 ಷಡ್ರಾಸಾನ್ನ ಪಾಯಸ ಭಕ್ಷ್ಯಗಳ ಷಡ್ವಿಧ ದದಿಘೃತ ಪಾಲು ಸಕ್ಕರೆ ಬಗೆಬಗೆ ಉಂಡೆಗಳ ಷಡ್ವಿದ ಫಲಗಳನರ್ಪಿಸಿ ಧೂಪ ದೀಪದಿ ವರ ಅಷ್ಟ ಮಂಗಳಾರತಿ ಬೆಳಗಿ ಪಾಡುತ ನಮಿಸುವೆ 5
--------------
ಸರಸ್ವತಿ ಬಾಯಿ
ಕೋಮಲಾಂಗಿಯೆ ಸಾಮಗಾಯನ ಪ್ರಿಯೆ ಪ ಹೇಮಗರ್ಭ ಕಾಮಾರಿ ಶಕ್ರಸುರ ಬಟ್ಟುಕುಂಕುಮ ನೊಸಲೋಳೆ ಮುತ್ತಿನ ಹೊಸ ಕಟ್ಟಾಣಿ ತ್ರಿವಳಿ ಕೊರಳೋಳೆ ಇಟ್ಟ ಪೊನ್ನೋಲೆ ಕಿವಿಯೋಳೆ ಪವಳದ ಕೈಯ ಕಟ್ಟ ಕಂಕಣ ಕೈಬಳೆ ತೊಟ್ಟ ಕುಪ್ಪಸ ಬಿಗಿದುಟ್ಟ ಪೀತಾಂಬರ ಘಟ್ಟಿ ವಡ್ಯಾಣ ಕಾಲಂದಿಗೆ ರುಳಿಗೆಜ್ಜೆ ಬೆಟ್ಟಿಲಿ ಪೊಳೆವುದು ವೆಂಟಿಕೆ ಕಿರುಪಿಲ್ಲಿ ಇಟ್ಟು ಶೋಭಿಸುವ ಅಷ್ಟಸಂಪನ್ನೆ 1 ಸಕಲ ಶುಭಗುಣಭರಿತಳೆ ಏಕೋದೇವಿಯೆ ವಾಕುಲಾಲಿಸಿ ನೀ ಕೇಳೆ ನೋತನೀಯನ್ನ ಮಹಲೀಲೆ ಕೊಂಡಾಡುವಂಥ ಏಕಮನವ ಕೊಡು ಶೀಲೆ ಪತಿ ಪಾದಾಬ್ಜವ ಏಕಾಂತದಿ ಪೂಜಿಪರ ಸಂಗವ ಕೊಡು ಲೋಕದ ಜನರಿಗೆ ನಾ ಕರವೊಡ್ಡದಂತೆ ನೀ ಕರುಣಿಸಿ ಕಾಯೆ ರಾಕೇಂದುವದನೆ 2 ಇಂದಿರೆ ಯೆನ್ನ ಕುಂದು ದೋಷಗಳಳಿಯೆ ಅಂದ ಸೌಭಾಗ್ಯದ ಸಿರಿಯೆ ತಾಯೆ ನಾ ನಿನ್ನ ಕಂದನು ಮುಂದಕ್ಕೆ ಕರೆಯೆ ಸಿರಿ ವಿಜಯವಿಠ್ಠಲರೇಯ ಎಂದೆಂದಿಗೊ ಮನದಿಂದಗಲದೆ ಆ ನಂದದಿಂದಲಿ ಬಂದು ಮುಂದೆ ಕುಣಿಯುವಂತೆ ವಂದಿಸಿ ಪೇಳಮ್ಮ ಸಿಂಧುಸುತೆಯಳೆ3
--------------
ವಿಜಯದಾಸ
ಕೋಲ ಕೋಲೆನ್ನಿ ಕೋಲ ಕೋಲ ಕೋಲೆನ್ನಿ ಕೋಲಕೋಲೆಂದು ಹರಿಯ ಪಾಡುವರು ಎಷ್ಟಪ. ನಾಗಶಯನನ ಮುಂದೆ ಪೂಗಿ ಫಲಗಳ ಇರಿಸಿನಾಗವೇಣಿಯರು ಸಾಗುವರು ಎಷ್ಟ 1 ಪಂಕಜಾಕ್ಷನ ಮುಂದೆ ಕುಂಕುಮ ಅರಿಷಿಣ ಪಿಡಿದುಕಂಕಣದ ಕೈಯ ಶಂಕಿನಿಯರೆಷ್ಟ2 ಅಂಬುಜಾಕ್ಷನ ಮುಂದೆ ತಾಂಬೂಲ ತಬಕಗಳುಸಂಭ್ರಮದಿ ಧರಿಸಿದ ರಂಭೆಯರು ಎಷ್ಟ3 ಮಂದಗÀಮನೆಯರ ಮುಂದೆಗಂಧ ಕಸ್ತೂರಿ ಪುನಗುಛsÀಂದದಲಿ ಧರಿಸಿ ಮುಂದಾಗÀುವರೆಷ್ಟ4 ಚಲ್ವ ರಂಗನ ಮುಂದೆ ಮಲ್ಲಿಗೆ ಹೂವಿನ ಝಲ್ಲೆಗಳ ಧರಿಸಿದ ನಲ್ಲೆಯರು ಎಷ್ಟ 5 ಬುಕ್ಕಿಟ್ಟು ಮೊದಲಾಗಿ ವಿಶಿಷ್ಠ ಪರಿಮಳ ಧರಿಸಿಕೃಷ್ಣರಾಯನ ಮುಂದೆ ನಡೆವೋರು ಎಷ್ಟ6 ಕ್ಯಾದಿಗೆ ಸಂಪಿಗೆ ಊದಿನ ಖಡ್ಡಿಗಳುಮುದದಲಿ ಧರಿಸಿ ಮುಂದಾಗುವರಷ್ಟ7 ಉತ್ತತ್ತಿಕದಳಿ ಜಂಬುದ್ರಾಕ್ಷ ಚೂತÀ ಫಲ ಹೊತ್ತುಹರುಷದಲ್ಲಿ ಮಿತ್ರೆಯರು ಸಾಗುವರೆಷ್ಟ8 ಹಾಲು ಮೊಸರಿನ ಕುಂಭ ಬಾಲೆಯರು ಧರಿಸುತ ಸಾಲು ಸಾಲಾಗಿ ಸಾಗುವರೆಷ್ಟ 9 ಬೆಂಡು ಬತ್ತಾಸ ದುಂಡುಗಡಲೆ ಕಬ್ಬುತಂಡ ತಂಡದಲಿ ಹಿಡಿದವರು ಎಷ್ಟ10 ರಂಗರಾಯನ ಮುಂದೆ ಗಂಗೋದಕ ಧರಿಸಿಶೃಂಗಾರದಿಂದ ಸಾಗಿದವರು ಎಷ್ಟ11 ಚಲ್ವರಮಿಅರಸಗೆ ಸಲ್ಲಿಸಬೇಕೆಂದುಕಲ್ಲು ಸಕ್ಕರೆ ಹೊತ್ತ ನಲ್ಲೆಯರು ಎಷ್ಟ 12
--------------
ಗಲಗಲಿಅವ್ವನವರು
ಕೋಲ ನವರಂಗದ ಕೋಲ ನಳನಳಿಸುವಕೋಲಶ್ರೀಲೋಲನೆಂದು ಹೊಗಳುವ ಕೋಲ ಪ. ಛsÀತ್ರ ಚಾಮರ ವಿಚಿತ್ರದ ಬಾಣ ಬಿರಸುನೃತ್ಯವಾದ್ಯಗಳು ಹೊಗÀಳುವನೃತ್ಯವಾದ್ಯಗಳು ಹೊಗÀಳುವ ಬಂಧಿಗಳಿಂದ ಅರ್ಥಿಲೆ ನಿಮ್ಮ ಕರೆಸುವ ಕೋಲ 1 ಶಂಕಿನಿ ಪದ್ಮಿನಿಯರು ಕುಂಕುಮ ಅರಿಷಿಣವಪಿಡಿದು ಪಂಕÀಜನಾಭನೆದುರಿಗೆ ಕೋಲಪಂಕಜನಾಭನೆದುರಿಗೆ ಕರೆಯಲುಅಲಂಕಾರವಾಗಿ ಬರುತಾರೆ ಕೋಲ2 ಗಂಧ ಕೇಶರದ ಚಂದದೋಕುಳಿ ತುಂಬಿಮಂದಗಮನೆಯರು ಹಿಡಕೊಂಡುಮಂದಗಮನೆಯರು ಹಿಡಕೊಂಡು ಐವರಿಗೆಬಂದು ನಿವಾಳಿ ತೆಗಿಸುವೆವು ಕೋಲ 3 ಚಿತ್ತಜನಯ್ಯಗ ಮಿತ್ರೆಯರು ಕರೆಯಲುಮುತ್ತಿನಾರತಿಯ ಹಿಡಕೊಂಡುಮುತ್ತಿನಾರತಿಯ ಹಿಡಕೊಂಡು ಐವರಿಗೆ ಎತ್ತಬೇಕೆಂಬೊ ಭರದಿಂದ ಕೋಲ4 ಅರಳು ಅರಳು ಫಲಗಳು ಐವರಿಗೆ ಭರದಿಂದ ಸೂರ್ಯಾಡಿ ಬರತೇವ ಕೋಲ 5 ರಥ ಕುದುರೆಗಳೆಷ್ಟು ರಥಿಕರು ಸೊಬಗೆಷ್ಟು ರತಿಯಿಟ್ಟು ನೋಡೊ ಜನರೆಷ್ಟು ಕೋಲರತಿಯಿಟ್ಟು ನೋಡೊ ಸೊಬಗೆಷ್ಟು ಸಖಿಯೆನಮ್ಮ ಅತಿಶಯವಾದ ಸೊಬಗೆಷ್ಟು ಕೋಲ6 ವೀರ ರಾಮೇಶನು ಭೇರಿ ದುಂಧುಭಿ ಹೊಯ್ಸಿಭೋರೆಂಬೊ ಕಾಳಿ ಹಿಡಿಸುತ ಭೋರೆಂಬೊ ಕಾಳಿ ಹಿಡಿಸುತ ಐವರವಾರಿಜನಾಭ ಕರೆಸುವ ಕೋಲ7
--------------
ಗಲಗಲಿಅವ್ವನವರು
ಕೋಲೆಂದು ಪಾಡಿರೆ ಕೋಮಲೆಯರೆಲ್ಲ ಅಮ್ಮಯ್ಯಬಾಲೆಯರು ಅರಿಷಿಣ ಕುಂಕುಮ ಹಚ್ಚಿಹೊಯಿದಾರಮ್ಮಯ್ಯ ಕೋಲ ಹೊಯಿದಾರಮ್ಮಯ್ಯ ಪ. ಹಿಂಡು ನಾರಿಯರೆಲ್ಲ ಕೂಡಿ ದುಂಡು ಗಟ್ಟುತ ಕೊಂಡಾಡಿ ಕೃಷ್ಣನ ಕೋ¯ ಹೊಯಿದಾರಮ್ಮಯ್ಯ 1 ಹಸ್ತ ಕಡಗ ಹರಡಿ ದೋರೆ ಹವಳ ಕಂಕಣಹಸ್ತಿಗಮನೆಯರು ಎತ್ತಿ ಕೋಲ ಹೊಯಿದಾರಮ್ಮಯ್ಯ 2 ವಾಲೆ ಮೂಗುತಿ ಮುದ್ದು ಸುರಿಯುತ್ತಜತ್ತಾಗಿ ಜಾಣೆಯರು ಕೋಲ ಹೊಯಿದಾರಮ್ಮಯ್ಯ 3 ನಳಿನ ಮುಖಿಯರಿಟ್ಟ ಕೋಲ ಹೊಯಿದಾರಮ್ಮಯ್ಯ 4 ಮಲ್ಲಿಗೆ ಸಂಪಿಗೆ ಮುಡಿದ ನಲ್ಲೆಯರೆಲ್ಲರುನಮ್ಮ ಫುಲ್ಲನಾಭನ ಪಾಡಿ ಕೋಲ ಹೊಯಿದಾರಮ್ಮಯ್ಯ5 ಚವರಿ ರಾಗಟೆ ಚಲ್ವಗೊಂಡ್ಯ ಛಂದಾಗಿ ಒಪ್ಪುತಚದುರೆಯರು ಛಂದಾಗಿ ಕೋಲ ಹೊಯಿದಾರಮ್ಮಯ್ಯ 6 ಭಾರ ಧರಿಸುತ ರಘುವೀರನ ಕೊಂಡಾಡಿ ಕೋಲ ಹೊಯಿದಾರಮ್ಮಯ್ಯ 7 ನಡುವಿಗೆ ಒಡ್ಯಾಣವಿಟ್ಟು ನಾರಿಯರೆಲ್ಲರು ತಮ್ಮ ಬಡನಡಬಳುಕುತ ಕೋಲ ಹೊಯಿದಾರಮ್ಮಯ್ಯ8 ಉಟ್ಟ ಪೀತಾಂಬರ ಕಾಲಿಗಿಟ್ಟ ಗೆಜ್ಜೆಯುನಮ್ಮ ಧಿಟ್ಟರಮಿಅರಸನೆಂದು ಕೋಲ ಹೊಯಿದಾರಮ್ಮಯ್ಯ9
--------------
ಗಲಗಲಿಅವ್ವನವರು
ಕೋಲೆಂದು ಪಾಡಿರೆ ಕೋಮಲೆಯರೆಲ್ಲಾ ಅಮ್ಮಯ್ಯ ಗೋಪಾಲ ಕೃಷ್ಣಯ್ಯಗ ಶರಣಿಂದು ಕೋಲ ಪ. ಮುದ್ದು ಸುಭದ್ರ ನೀನು ಗೆದ್ದುಬರುತಿಯೆಂದುಎದ್ದ ಬೃಹಸ್ಪತಿಯು ತವಕದಿ ಕೋಲಎದ್ದ ಬೃಹಸ್ಪತಿಯು ತವಕದಿ ಅರ್ಜುನ ಸಿದ್ಧ ಮಾಡೆಂದ ರಥಗಳ ಕೋಲ 1 ಕೇಳಿರಿ ನಿಮಗೆಲ್ಲ ಭಾಳ ಬಲವದೆಕಾಳಿ ಮೊದಲಾದ ಕೆಲದೆಯರುಕಾಳಿ ಮೊದಲಾದ ಕೆಲದೆಯರು ಹರುಷದಿ ಹೇಳಿ ಬೃಹಸ್ಪತಿಯು ನುಡಿದಾನು ಕೋಲ2 ಪಾಂಡವರೆಲ್ಲರು ಉಂಡು ವೀಳ್ಯವನ್ಹಾಕಿಪುಂಡರಿಕಾಕ್ಷನ ಅರಮನೆಗೆ ಕೋಲಪುಂಡರಿಕಾಕ್ಷನ ಅರಮನೆಗೆ ಐವರುತಂಡ ತಂಡದಲೆ ನಡೆದಾರು ಕೋಲ3 ದ್ರೌಪದಿ ಸುಭದ್ರಾ ಇಬ್ಬರು ಒಂದಾಗಿಅಗಣಿತ ಒನಿತೆಯರು ಕೋಲಅಗಣಿತ ಒನಿತೆಯರು ಕೂಡಿಕೊಂಡು ತಾವುಪ್ರೇಮದಿಂದಲಿ ಬರುತಾರೆ ಕೋಲ 4 ಅರಿಷಿಣ ಕುಂಕುಮ ಗಂಧಬೆರೆಸಿ ಪರಿಮಳದಿಂದಸರಸಾದ ಸುರಭಿ ಕುಸುಮವ ಕೋಲಸರಸಾದ ಸುರಭಿ ಕುಸುಮರಾಮೇಶನ ಅರಸಿಯರಿಗೆ ಒಯ್ವೋ ಉಪಚಾರ ಕೋಲ 5
--------------
ಗಲಗಲಿಅವ್ವನವರು