ಒಟ್ಟು 124 ಕಡೆಗಳಲ್ಲಿ , 35 ದಾಸರು , 106 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಜಯ ಶರಣರ ಸುರಧೇನು ಜಯ ಜಯ ಸೀತಾರಮಣ ಪ ಸೊಕ್ಕಿದ ದೈತ್ಯರ ಬಾಧಿಗಾರದಿಹ ದೇವರ್ಕಳ ಮೊರೆಯನು ಕೇಳಿ ಮಿಕ್ಕನುಜರ ಕೂಡ ಬೆಳೆದು ಅಕ್ಕರದಲಿ ಕಾಯದು ಬರಲಿ ನಕ್ಕಿ ಕೈವಿಡಿದನೇ ಜಯತು 1 ಆಖರ ದೂಷಣರಳಿದು ತಾಕಪಿಕರಢಿಯನೆ ಕೂಡಿ ಬೇಕಾದ ಸ್ಥಿರಪದ ನೀಡಿ ಸಾಕೇತ ಪುರಾಧೀಶ ಜಯತು 2 ಲಲನೆ ದಾಮದಲಿ ಕುಳ್ಳಿರಲಿ ಬಲಕವಶಿಷ್ಠ ಭರತ ಶತೃಘ್ನ ಕೂಡೆ ನೆಲಿಛತ್ರ ವಿಡಯೆ ಲಕ್ಷ್ಮಣನು ಉಳಿದಸುರನರರು ಕುಳ್ಳಿರಲಿ ಬೆಳಗಿದಳಾರತಿ ಜಯತು 3
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಜರ ಇನ್ಯಾತಕೆ ಬಂತಮ್ಮಾ ಸಜ್ಜನರಿಗೆಜರ ಇನ್ಯಾತಕೆ ಬಂತಮ್ಮಾ ಸಜ್ಜನರಿಗೆ ಪ ಪರಮೇಷ್ಠಿ ಜನಕಾನೆಪರನೆಂದು ತಿಳಿಸಾದೆ ಪರಗತಿಯ ತೋರದ ಅ.ಪ. ಸ್ನಾನವ ಮಾಡಿಕೊಂಡು ಕುಳಿತು ಬಲುಮೌನದಿಂದಿರಲೀಸಾದೆ ||ಶ್ರೀನಿವಾಸನ ಧ್ಯಾನ ಮಾಡಾದೆ ಮನಸುಶ್ವಾನನೋಪಾದಿಯಲ್ಲಿ ತಾ ಓಡುವಂಥ 1 ಜಪ ಮಾಡುವ ಕಾಲದಲ್ಲಿ ಕರೆಯ ಬರೆವಿಪರೀತವಾಗುವದು ಮನಸು ||ಸ್ವಪನದಂತೆ ಮನಸಿಗೆ ಪೊಳದು ಬಲುಸುಪಥವ ತಪ್ಪಿಸಿ ಅಪಗತಿ ಕೊಡುವಂಥ 2 ಯಜಮಾನನು ಮಾಡಿದ ಪಾಪಂಗಳವ್ರಜವು ಬಿಡದೆ ಅನ್ನದೊಳಗಿಪ್ಪುದ ||ದ್ವಿಜನು ಭುಂಜಿಸಲಾಗಿ ಅವನ ಉದರದೊಳುನಿಜವಾಗಿ ಇಪ್ಪಾವು ಸುಜನಾರು ಲಾಲಿಸಿ 3 ಉದರದೊಳಗೆ ಬಿಚ್ಚದ ಸಾವಿರಾರುವಿಧವಾಗುವದು ಕೇಳು ||ಅದೇ ದೇಹ ಪುಷ್ಟಿ ಮಲ ರೇತಸ್ಸುಅದೇ ಪಾಪಿಗೆ ತಿಳಿಯದೆ ಭುಜಿಸುವಂಥ 4 ಕೆಳಗೆ ಕುಳ್ಳಿರಿಸಿದಾರೆ ಜ್ಞಾನಿ-ಗಳ ಬೊಗಳುವೆ ಕುನ್ನಿಯಂದದಿ ||ಒಳಗೆ ಕರೆದು ಒಯ್ದು ಬೆಳಗಿಲಿಕುಳ್ಳಿರಿಸೆ ಸಾಯಂ ಪ್ರತಿ ಸ್ತುತಿ ಮಾಡುವಾ 5 ಪ್ರಸ್ತದಾ ಮನೆಯೊಳಗೆ ಕರೆಯಾದಲ್ಲಿಗೆಸ್ವಸ್ಥಾದಿ ನೀ ಕುಳಿತುಕೊಂಡು ||ವಿಸ್ತಾರದಿ ಹಾರೈಸಿ ಪ್ರ-ಶಸ್ತವಾಯಿತೆಂದೂ ಮಸ್ತಕ ತಿರುಹುವೆ 6 ಮಾಡಿದ ಮಹಾ ಪುಣ್ಯದ ಓದನಕಾಗಿಕಾಡಿಗೊಪ್ಪಿಸಿ ಪೋದಂತಾಯಿತು ||ಗಾಡಿಕಾರ ಮೋಹನ್ನ ವಿಠಲನಪಾಡಿ ಪೊಗಳಿ ಕೊಂಡಾಡಿಕೊಂಡಿರದಂತೆ 7
--------------
ಮೋಹನದಾಸರು
ತುರುಗಾಯ ಬಂದ ಗೋಪಿಯ ಕಂದಆನಂದದಿಂದ ಪ ಮೃಗ ಜಲಚರ ಮೋಹಿಸೆತರಳೇರ ಮನ ಸೂರೆಯಾಗೆ ಕೊಳಲಿನಿಂದ ಅ.ಪ. ತಂದೆಯ ಕಂದನೆಂದು ಕೊಂಕುಳೊಳಿಟ್ಟುಕಂದನ ಕೆಳಗಿಟ್ಟುಅಂದಿಗೆ ಗೆಜ್ಜೆ ಕಿವಿಗಳಿಗಿಟ್ಟುಮುತ್ತಿನ ಬಟ್ಟುಹೊಂದಿಸಿ ಗಲ್ಲದಲ್ಲಿ ತಾನಿಟ್ಟುಕಸ್ತೂರಿಯ ಬಟ್ಟುಮುಂದಾಗಿ ಮೂಗಿನ ಮೇಲಳವಟ್ಟುಮನೆಬಾಗಿಲ ಬಿಟ್ಟುಕಂದರ್ಪನ ಶರದಿಂದ ನೊಂದು ಬಹುಕಂದಿ ಕುಂದುತಲಿಂದುವದನೆಯರುಇಂದಿರೇಶನಾನಂದದ ಗಾನಕೆಚಂದ್ರಮುಖಿಯರೊಂದಾಗುತ ಬರುತಿರೆ 1 ಮುರಳಿಯ ಸ್ವರಕೆ ಮೋಹಿತರಾಗೆಕರುಗಳನು ತಂದುಕರದಿಂದಲೆತ್ತಿ ತೊಟ್ಟಿಲೊಳಗೆಇರಿಸುತ್ತ ಹಾಲಬೆರಸುತ್ತ ಮಜ್ಜಿಗೆ ಮೊಸರಿನೊಳಗೆಪರಮಾತ್ಮನ ನೆನೆದುಹೊರಟರು ಬಿಸಿಲು ಚಳಿ ಮಳೆಯೊಳಗೆಮನೆಮನೆಯೊಳಗೆತರಳರ ಬೆದರಿಸಿ ಮಾರ್ಜಾಲಕೆ ಮೊಲೆತ್ವರಿತದಿ ಉಣಿಸುತ ಸರಿಸರಿಯೆನುತಲಿಪರಿಪರಿ ಭ್ರಾಂತರಾಗಿ ನೋಡುತಪುರಮಾರ್ಗಕೆ ಬರುವರು ನಿರುಕಿಸುತ 2 ಮದನ ಶತಕೋಟಿ ತೇಜನು ಬಂದಸ್ತ್ರೀರೆದುರಲಿ ನಿಂದಅಧರಾಮೃತ ಪಾನವ ಮಾಡಿರೆಂದಬಾಯಾರಿದಿರೆಂದಬದಿಯಲ್ಲಿ ಬಂದು ಕುಳ್ಳಿರಿಯೆಂದಅವರಿರವನೆ ನೋಡ್ದಚದುರೇರ ಮೋಹಕನೆ ನಾನೆಂದವಾದ್ಯದ ರವದಿಂದಸದಯನೆದುರ ರಂಭೆ ಊರ್ವಶಿ ಮೇನಕೆಒದಗಿ ನಾಟ್ಯಗಳ ಚದುರತನದಲಾಡೆಮಧುಸೂದನ ಭಕ್ತರ ಕಾಯ್ವುದಕೀವಿಧದೊಳಗಾಡಿದ ರಂಗವಿಠಲ ತಾ 3
--------------
ಶ್ರೀಪಾದರಾಜರು
ಧನ್ಯರಾದರು ಗುರುಗಳನು ಪೂಜಿಸುತ ಇನ್ನಿವರ ಪಾತಕವು ತೊಲಗಿತು ಜಗದಿ ಪ. ತಂದೆ ಮುದ್ದುಮೋಹನದಾಸ ರಾಯರನು ಚಂದದಿಂ ಸತಿಸಹಿತ ಕರೆತಂದು ಮನೆಗೆ ಮಂದರೋದ್ಧರನ ಪದಸೇವೆ ಇದು ಎಂದರಿತು ಮಂದಹಾಸದಲಿ ನಸುನಗುತ ಸದ್ಭಕ್ತರು 1 ಮಂಗಳೋದಕದಿಂದ ಮಜ್ಜನವಗೈಸುತಲಿ ಅಂಗಗಳನೊರೆಸುತಲಿ ನಾಮಗಳನ್ಹಚ್ಚಿ ರಂಗನಾಥನಿಗರ್ಪಿಸುತ ಪುಷ್ಪಹಾರವನ್ಹಾಕಿ ಶೃಂಗಾರವನೆಗೈದು ಶ್ರೀ ಗುರುಗಳನ್ನು 2 ಪಚ್ಚೆಕರ್ಪೂರ ಕೇಸರಿಯಿಂದ ಕೂಡಿದ ಅಚ್ಚ ಗಂಧವನ್ಹಚ್ಚಿ ಅಕ್ಷತೆಯನಿಟ್ಟು ಮಚ್ಛರೂಪಿಯ ನೆನೆದು ಪಾದಕಮಲವ ತೊಳೆದು ನಿಚ್ಚಳದ ಭಕ್ತಿಯಲಿ ನಿಜ ಭಕ್ತರೆಲ್ಲ 3 ಸತಿಸಹಿತ ಕುಳ್ಳಿರಿಸಿ ಗುರುಗಳನು ಪೀಠದಲ್ಲಿ ಅತಿಶಯದಿ ಕುಡಿಬಾಳೆ ಎಲೆಗಳನೆ ಹಾಕಿ ಮತಿಯಿಂದ ರಂಗೋಲೆಗಳನ್ಹಾಕಿ ಲವಣ ಸ- ಪರಿಯಂತ ಬಡಿಸುತಲಿ 4 ಅನ್ನಾದಿ ಸಕಲ ಷಡ್ರಸಗಳನೆ ಬಡಿಸುತ್ತ ಘನ್ನ ಮಹಿಮರಿಗೆ ಭಕ್ಷಾದಿಗಳ ಬಡಿಸಿ ಸನ್ನುತಿಸುತಲಿ ತೀರ್ಥ ಆಪೋಷನವನ್ಹಾಕಿ ಪನ್ನಗಶಯನನಿಗೆ ಅರ್ಪಿಸುತ ಮುದದಿ 5 ಘೃತಶರ್ಕರಾದಿಗಳನಡಿಗಡಿಗೆ ಬಡಿಸುತಲಿ ನುತಿಸಿ ಗಾನಗಳಿಂದ ಗುರುಮಹಿಮೆಯ ದಧಿ ಕ್ಷೀರದನ್ನಗಳನುಣಿಸುತಲಿ ಘೃತ ಕ್ಷೀರದಿಂದ ಕೈ ತೊಳೆದು ಸಂಭ್ರಮದಿ 6 ಯಾಲಕ್ಕಿ ಕರ್ಪೂರ ಮಿಳಿತ ವೀಳೆಯವನಿತ್ತು ವೇಳೆವೇಳೆಗೆ ತಪ್ಪು ಕ್ಷಮೆಯ ಬೇಡುತಲಿ ವ್ಯಾಳಶಯನಗರ್ಪಿಸುತ ಉಡಿಗೆ ತೊಡಿಗೆಗಳನಿತ್ತು ಮಾಲೆಹಾಕುತ ಆರತಿಯನೆತ್ತಿ ಮುದದಿ 7 ಹರಿಪ್ರೀತನಾಗುವನು ಗುರು ಹೃದಯದಲಿ ನಿಂತು ಕರ್ಮ ತೊಡಕುಗಳು ಸರಸಿಜಾಕ್ಷನು ತಾನು ಹರುಷಪಡುವನು ದಯದಿ ಕರಕರೆಯ ಸಂಸಾರ ಕಡಿದು ಗತಿ ಈವ 8 ಗುರುದ್ವಾರ ಒಲಿಯುವನು ಹರಿಯು ಮೋಕ್ಷಾರ್ಥಿಗಳ ಅರಘಳಿಗೆಯಗಲದಲೆ ಕಾಯುವನು ಸತತ ಗುರು ಅಂತರ್ಯಾಮಿ ಶ್ರೀ ಗೋಪಾಲಕೃಷ್ಣವಿಠ್ಠಲ ತ್ವರಿತದಿಂ ಹೃದಯದಲಿ ತೋರ್ವನು ತನ್ನ9
--------------
ಅಂಬಾಬಾಯಿ
ಧರ್ಮೇಂದ್ರಿಯಕ್ಕೆ ದಟ್ಟಡಿಯನಿಡಲೊಲ್ಲೆ ದುಷ್ಕರ್ಮೇಂದ್ರಿಯಕ್ಕೆ ಕಾಲ್ಗೆರಗುತ್ತಲಿಹೆ ಮರುಳೆ ಪ ಪುಸ್ತಕವ ಬಿಚ್ಚಿ ಪೌರಾಣ ಶಾಸ್ತ್ರಂಗಳಿಂವಿಸ್ತರಿಸಿ ಹರಿಯ ಕಲ್ಯಾಣಗುಣ ಕಥೆಯನ್ನುಸ್ವಸ್ಥದಿಂ ಕುಳ್ಳಿರ್ದು ಕೇಳೆಂಬ ಠಾವಿನಲಿಮಸ್ತಕಕೆ ವ್ಯಥೆಯೆಂದು ಮನೆಯತ್ತ ನೀ ನಡೆವೆಹಸ್ತದಿಂ ಹಣ ಭತ್ತ ಹಚ್ಚಡಂಗಳ ಕೊಟ್ಟುಕುಸ್ತರಿಸಿ ಬಿನಗು ಚಾರಿತ್ರ್ಯವಂ ಲಾಲಿಸುತದುಸ್ತರದ ಲೆತ್ತ ಚದುರಂಗ ಪಗಡೆಯನು ಉದಯಾಸ್ತದವರೆಗಾಡುತ ಮೇಲೇಳದಿಹೆ ಮರುಳೆ 1 ಸುರಭಿ ಸೇವಂತಿ ಮಲ್ಲಿಗೆ ಮೊಲ್ಲೆ ಬಕುಳ ಪಾದರಿ ಚಂಪಕಾ ಕಂಜ ಕಣಿಗಲು ಶ್ರೀ ತುಳಸಿಪರಿಮಳದ ಪಚ್ಚೆತೆನೆ ಹರಿಪಾದಕರ್ಪಿಸುತೆನಿರುಮಾಲ್ಯ ಪರಿಮಳವನಾಘ್ರಾಣಿಸೆನೆ ಒಲ್ಲೆಬಿರಿದ ಕೆಂಜಾಜಿ ಪುಷ್ಪಂಗಳಂ ವನಿತೆಯರಸಿರಿ ಮುಡಿಗೆ ಮುಡಿಸಿ ಕುಂತಳ ಸೌರಭವ ಕಂಡುಹರುಷದಿಂ ರೋಮ ಪುಳಕಿತನಾಗುತಡಿಗಡಿಗೆಪರಮ ಸಂತೋಷಮಂ ನೀ ಪಡೆಯುತಿಹೆ ಮರುಳೆ 2 ಭಾಗವತ ನೃತ್ಯವಂ ನೋಡುತತಿಶಯದ ಹರಿದಿನವ್ರತದಲ್ಲಿ ಜಾಗರವ ಮಾಡದಲೆ ನಿದ್ರೆಗೈವೆಕೃತಕ ಪಣ್ಯಾಂಗನೆಯ ಚತುರ ನೃತ್ಯಕೆ ಮನೋ-ರಥ ಸಿದ್ಧಗೊಳಿಸಿ ಈಕ್ಷಿಪೆನೆಂದು ಕುಜನ ಸಂ-ಮತವೆರಸಿ ಬೆಳತನಕ ಕುಳ್ಳಿರುತ ನಿದ್ರಾ ವ-ರ್ಜಿತನಾಗಿ ಪರಮ ಸಂತಸ ಪಡೆಯುತಿಹೆ ಮರುಳೆ 3 ಗಂಧ ಶಾಲ್ಯಾನ್ನ ನವಘೃತ ತೋಯ ಪಳಿದ್ಯ ನಲ-ವಿಂದ ಪರಮಾನ್ನ ಮಹಶಾಕ ಸೀಕರಣೆಯನುಒಂದೆರಡು ಪರುಠವಿಸಿ ದ್ವಾದಶಿ ದಿನದಂದು ಮು-ಕುಂದಾರ್ಪಣವ ಮಾಡಿ ಮನೆಯೊಳಗೆ ಉಣ್ಣದಿಹೆಬಂದಾವನಾದೊಡಂ ಕರೆಯೆ ದೇಹದ ಪುಣ್ಯವೆಂದವರ ಮನೆಗಳಿಗೆ ಹೋಗಿ ನೀ ಕುಳ್ಳಿರ್ದುಚಂದದಿಂ ಬಣ್ಣಿಸುತ ಮಿಂಚುಕೂಳುಗಳನ್ನುತಿಂದೊಡಲ ಪೊರೆದು ಕಾಲವ ಕಳೆಯುತಿಹೆ ಮರುಳೆ4 ಸಿರಿ ವೈಕುಂಠ ಪದವಿಯನು ಪಡೆ ಮರುಳೆ 5
--------------
ಕನಕದಾಸ
ನದಿಗಳು ಭಾಗೀರಥ್ಯಾದಿ ನದಿಗಳ ತಾರತಮ್ಯ ನಿಜ ಭಾಗವತ ತಿಲಕ ನಿಮಿರಾಜಗೊಲಿದು ವಸಿಷ್ಠ ರಾಗದಲಿ ಕೇಳಿ ಜನರಯ್ಯಾ ಪ ಒಂದು ದಿನ ಗೋದಾವರಿಯ ತಟದಿ ನಿಮಿರಾಜ ಸಂದು ಯಜ್ಞವ ಮಾಡುತಿರಲಾಗ ಪರಮೇಷ್ಠಿ ನಂದನೆನಿಪ ವಶಿಷ್ಠ ಮಹಮುನಿ ನಡೆತಂದ ಮೇಧಾಗಾರಕೆ ಬಂದ ಯತಿವರನ ಮಣಿಪೀಠದಲಿ ಕುಳ್ಳಿರಿಸಿ ಸುಂದರಾಧಿಪ ಬೆಸಸಿದಾ 1 ವ್ರತಿಪತಿ ವಶಿಷ್ಠ ವೈಷ್ಣವಕುಲ ಶಿರೋರತುನ ಶ್ರುತಿಶಾಸ್ತ್ರ ಸರ್ವಜ್ಞ ಗಂಗಾದಿ ಪುಣ್ಯತೀ ಮತ್ಪಿತನೆನುತ ಪದಕೆರಗುವಾ ಕ್ಷಿತಿಪನೋಕ್ತಿಯ ಕೇಳುತಾನಂದ ಶರಧಿಯೊಳು ಗತನಾಗಿ ರೋಮ ಲಕ್ಷಣ ಕಳೇವರದಿ ಪುಳ ನೃಪತಿಗಿಂತೆಂದನು 2 ಕೇಳು ಜನನಾಥ ಮಹಭಾಗ ನಿನ್ನಯ ಪ್ರಶ್ನ ದೇಳಿಗೆಗೆ ಎನ್ನ ಸಂತೋಷ ಕಲ್ಪತರು ತ ಶಿಷ್ಯರೊಳು ಮೌಳಿಮಣಿ ನೀನಹುದು ನಿಖಿಳ ನದಿಗೊಳಿಪ್ಪ ಶ್ರೀಲೋಲನ ಸುಮೂರ್ತಿಗಳು ತಾರÀತಮ್ಯ ಸುವಿ ಮಾನವ ಇದನಾಲಿಪುದು ನೀನೆಂದನು 3 ಹರಿಪಾದನಖದ ಸಂಸ್ಪರ್ಶ ಮಾತ್ರದಿಂದಲಿ ಸುರತರಂಗಿಣಿ ಶ್ರೇಷ್ಠಳೆನಿಸುವಳು ನದಿಗಳೊಳು ದೊರೆಮೆನಿಪನಾ ತೀರ್ಥಕೆ ಸರಿತಾಗಗಣ್ಯ ಗೋದಾವರಿ ನಳಿನಿಗಿಂ ಕೊರತೆಯೆನಿಪಳೈ ವತ್ತು ಗುಣದಲಿ ಶಂಖ ಚರಣ ಸುಗದಾಬ್ಜ ಶೋಭಿತ ವೀರನಾರಾಯಣ- ರಸೆನಿಪನಾ ಸಲಿಲಕೆ 4 ಹರಜಟೋದ್ಭವ ಕುಶಾವರ್ತಿಗೆ ಸಹಸ್ರಗುಣ ಚಾರು ಕಂ ಬುರಲಿ ವಾರುಚಿ ಧನುರ್ಧಾರಿ ಯಮನಂದನಲಿ ವಿಹರಿಸುತಿಹನಾಜಲದೊಳು ತುರುಗಾಯ್ದ ದೇವನಂಗಜ ನದಿಗೆ ಈರೈದು ವಾಗ್ದೇವಿ ಶರಧಿಯೊಳು ಪು ಗೋದ ರಂಗನಾಥನೆನಿಪ 5 ಆ ಯಮಳನದಿಗಳಿಗೆರಡು ಗುಣಾಧಮ ಸರಯು ತೋಯಾಧಿಪತಿ ರಾಮ ಸರಯು ನೀರೆಂದು ಗುಣ ವಿಹಾಯ ಸಮಮಣಿತನಯಳೆ ಸ್ಥಾಯಕೆ ಚತುರ್ಬಾಹು ವಿಷ್ಣು ಕಾವೇರಿಗೆ ನಾಯಕ ವರಾಹದೇವಾ6 ಸಿಂಧು ಭವನಾಶಿಗೀರ್ವರು ಸಮರು ಕ್ಷೀರಾಬ್ಧಿ ಮಂದಿರ ನೃಸಿಂಹರಲ್ಲಿಹರು ಭವನಾಶನಿಗೆ ತಂದೆಯೆನಿಪ ತ್ರಿವಿಕ್ರಮ ಒಂದೆನಿಸುವುವು ನಾಲ್ಕು ನದಿಗಳು ಗುಣಗಳಿಂದ ಮುಂದಿಹ ಪದದಿ ಪೇಳ್ವೆ ಪೆಸರು ಹರಿರೂಪ ನೆಲ ತಮ್ಮಿಂದೀರಗಿಂತೆಂದನೂ 7 ವಾಜಿವದನು ಮಂಝರಾನದಿಯೊಳಿಹನು ನವ ರಾಜೀವನಯನ ಶ್ರೀಧರ ಭೀಮರಥಿಯೊಳಿಹ ವಿರಾಜಿಪ ಮಲಾಪಹಾರಿ ಭಾಜನದೊಳಿಪ್ಪ ದುಷ್ಟ ಜನರನು ಮರ್ದಿಸುವ ಶ್ರೀ ಜನಾರ್ದನ ನಾಲ್ಕು ನದಿಗಳು ದ್ವಿಗುಣದಿಂದಾ ನಿತ್ಯ ನೈಜಭಕ್ತಿ ಜ್ಞಾನದಿ 8 ಭೀಮರಥಿ ಸಮ ಪಿನಾಕಿನಿಯೊಳಗೆ ಕೇಶವನು ಭೂಮಿಯೊಳು ಪೃಥಕು ಪೃಥಕು ಸುಖ ಜ್ಞಾನದಿ ಶ್ರೀ ಮನೋರಮ ಕೇಶವಾದಿ ರೂಪಗಳಿಂದ ಸ್ವಾಮಿಯೆನಿಸುವನಲ್ಲ ಸ್ನಾನಾದಿ ಸತ್ಕರ್ಮ ಮೋಕ್ಷ ಗಳೀವನೊ 9 ಈ ನದಿಗಳೆರಡು ಗುಣ ಪುಷ್ಕರಣಿನಿಚಯ ನ್ಯೂನವೆನಿಪವು ಮುಕ್ತಿ ದತ್ತಾತ್ರಯನು ಕೃಷ್ಣ ಮಾನಸ ಸರೋವರದೊಳು ಜ್ಞಾನಾತ್ಮ ವಾಮನನ ಶ್ರೀ ಭೂ ಸಹಿತ ಪ್ರಸ ನ್ನಾನನಾಬ್ಜದಿದರೆ ಜಘನಸ್ಥಿತಾಭಯ ಸು ಧೇನಿಪುದು ಎಂದಾ 10 ದೇವಖಾತಗಳು ಶತಗುಣಕಡಿಮೆ ಮಾನಸ ಸ ರೋವರಕೆ ಇತರ ಪುಷ್ಕರಣಿಗಳಿಗಲ್ಪಗುಣ ಪಾವನವಗೈವ ಕ್ಷುದ್ರಾ ಪ್ರಾವಹಿಗಳೀರೈದು ಗುಣದಿ ಕಡಿಮೆ ಲಕ್ಷ್ಮೀ ದೇವಿಪತಿ ನಾರಾಯಣನ ಚಿಂತಿಸೆಂದು ನೃಪ ಭವನೋವ ಪರಿಹರಿಪುದೆಂದು 11 ಈ ಸಲಿಲತೀರ್ಥಂಗಳೆರಡು ಗುಣದಿ ತಟಾಕ ಶೇಷಪರ್ಯಂಕ ಅಚ್ಯುತನಿಹನು ಸಜ್ಜನರ ವಾಸವಾಗಿಹನು ಚಕ್ರಿ ಘೋಷಗೈವ ಧರಾಂತಕೂಪಗಳೊಳಿರುತಿಹ ನಾ ಕೇಶನದಿಗಳ ತಾರÀತಮ್ಯ ರೂಪಗಳನುಪ ಪಾಸನಗೈವುದೆದೆಂದು 12 ಈ ತೆರದಿ ನಿಮಿರಾಜಗೋಸುಗ ವಶಿಷ್ಠಮುನಿ ತಾ ತಿಳಿದ ಕಥಾತಿಶಯ ಪರಮ ವಿಬುಧರು ಧ ಪ್ರೀತಿಯಿಂದಾಚರಿಸಲು ಶೀತಾಂಶು ಕಮಲಾಪ್ತರುಳ್ಳನಕ ಸುರಪತಿ ನಿ ಕೇತನದಿ ವಿವಿಧ ಭೋಗಗಳಿತ್ತು ಶ್ರೀ ಜಗ ಸಂಪ್ರೀತಿಯಿಂದನುರಾಗದೀ 13
--------------
ಜಗನ್ನಾಥದಾಸರು
ನಮಿಪೆ ನದಿ ದೇವತೆಗಳೇ | ನಿಮಗೆ ಪ. ನಮಿಪೆ ನದಿ ದೇವತೆಗಳೇ ನಿಮ್ಮ ಚರಣಕ್ಕೆ ಕಮನೀಯ ಗಾತ್ರೆಯರೆ ಕಂಜದಳ ನೇತ್ರೆಯರೆ ಸುಮನರ ವಂದಿತರೆ ಸುಗುಣ ಸಂಪನ್ನೆಯರೆ ಅಘ ಹರೆಯರೇ ಕಮಲನಾಭನ ಅಂಗೋಪಾಂಗ ಸಂಜಾತೆಯರೇ ಅಮರ ಭೂ ಪಾತಾಳ ಲೋಕ ಸಂಚರೆಯರೆ ನಮಿಸಿ ಸ್ನಾನವಗೈವ ನರರ ಪಾವನಗೊಳಿಪ ಅಮಿತ ಪಾವಿತ್ರತರರೇ 1 ಗಂಗೆ ಗೋದಾವರಿ ಯಮುನೆ ಸರಸ್ವತಿ ಸಿಂಧು ಮಂಗಳಾಂಗೆ ಕೃಷ್ಣ ಭೀಮರಥಿ ಪಲ್ಗುಣಿ ಸಂಗಮ ತ್ರೀವೇಣಿ ಸರಯು ಗಂಡಿಕಿ ಸೀತ ತುಂಗಭದ್ರಾ ನಾಮರೇ ಅಂಗ ಮಾಲಾಪಾರಿ ಕಾವೇರಿ ಕಪಿಲೆ ನರ ರಂಗ ಪಾವನ ಗೈವ ಪುಷ್ಕರಗಳಭಿಮಾನಿ ಅಂಗನೆಯರೆÀಲ್ಲರಿಗೆ ಅಭಿವಂದಿಸುವೆ ಅಘವ ಹಿಂಗಿಸುವುದೆಂದು ಮುದದೀ 2 ಬಂದು ಸ್ವಪ್ನದಿ ಮಾಘ ಶುದ್ಧ ನವಮೀ ಭರಣಿ ಸಂಯೋಗದ ಪರ್ವವೆಂದು ಭದ್ರೆಲಿ ಸ್ವಾನ ವಿಂದು ಗೈದೆವು ಎಂದು ಮುಂದೆ ಕುಳ್ಳಿರೆ ನಾನಾ ನಂದದಿಂ ಕಂಡು ನಿಮ್ಮಾ ಸುಂದರಿಯರೇ ನಿಮ್ಮ ಸಂದರ್ಶನದಿ ಫಲವು ಬಂದುದೆನಗೆಂದು ನಾನಂದ ವಚನಕೆ ನಲಿದು ಒಂದು ಅರಿಯದ ಎನಗೆ ತಂದು ಕೊಟ್ಟಿರಿ ಸ್ನಾನ ದಿಂದ ಬಹು ಪುಣ್ಯ ಫಲವಾ 3 ಹರದಿಯರೆ ಕಂಡೆ ನಿಮ್ಮರವಿಂದ ಮುಖ ಶುಭ್ರ ಸರಿತು ದೇವತೇಗಳೇ ಗುರು ಕೃಪೆಯ ಬಲದಿಂದ ಸಿರಿ ನದಿಗಳೇ ಜಗದಿ ಭರದಿಂದ ಪರಿದು ಸಾಗರವ ಕೂಡುವ ತ್ವರದಿ ಪರಿಪರಿಯ ಜಲ ಜಂತು ಸಂಸಾರಿ ಸಂಗೆಯರೆ ನರರು ಬಣ್ಣಿಸಲಳವೆ ಕರುಣಿ ನಿಮ್ಮಯ ಮಹಿಮೆ ಸಿರಿಕಾಂತ ಪ್ರಿಯಸುತೆಯರೇ 4 ಶ್ರೇಷ್ಟನದಿ ಅಭಿಮಾನಿ ಸತಿಯರೇ ಎನ್ನ ಅಘ ಸುಟ್ಟು ನಿರ್ಮಲ ಭಾವ ಕೊಟ್ಟು ಹೃತ್ಪದದಲಿ ವಿಷ್ಣು ಮೂರ್ತಿಯ ಕಾಂಬ ಶ್ರೇಷ್ಟ ಜ್ಞಾನದ ಮಾರ್ಗ ಕೊಟ್ಟು ಸದ್ಭಕ್ತಿ ಭರದೀ ಚಿಟ್ಟನೇ ಚೀರಿ ದಾಸ್ಯದ ಭಾವದಲಿ ಕುಣಿದು ಶ್ರೇಷ್ಟ ಶ್ರೀ ಗೋಪಾಲಕೃಷ್ಣವಿಠ್ಠಲನ ಪದ ಮುಟ್ಟುವೊ ವಿಜ್ಞಾನ ಪ್ರವಹ ರೂಪದಿ ವಲಿದುದಿಟ್ಟಿಯರ ಸಂತೈಸಿರಿ 5
--------------
ಅಂಬಾಬಾಯಿ
ನರಜನ್ಮ ವ್ಯರ್ಥವಲ್ಲವೇ | ಈ ಮೂಢರ | ನರಜನ್ಮ ವ್ಯರ್ಥವಲ್ಲವೇ ಪ ಗುರುಗಳ ಶರಣ್ಹೊಕ್ಕು ದಯ ಪಡಿಲಿಲ್ಲಾ | ತರಣೋಪಾಯದ ನಿಜ ತಿಳಿದವನಲ್ಲಾ 1 ಘಟ್ಟಿಸಿ ಒಬ್ಬರ ಮನಿಯ ಮುಣಗಿಸಿ | ಹೊಟ್ಟೆಯ ಬಿಟ್ಟನು ಅನ್ಯಾಯ ಘಳಿಸಿ 2 ಉತ್ತಮರಲ್ಲಿ ಅರಕ್ಷಣವಕ್ಕುಳ್ಳಿರನು | ಲೆತ್ತ ಪಗಡಿಯಾಡಿ ಹೊತ್ತು ಗಳೆವನು 3 ವಾಸುದೇವನ ಸೇವೆಗಾಲಸ್ಯ ಹಿಡಿದಾ | ಕಾಸಿನ ಆಶೆಗೆ ಎತ್ತಾಗಿ ದುಡಿವಾ 4 ಮಹಿಪತಿ ನಂದನ ಪ್ರಭುವಿನ ಮರತಾ | ಸ್ವಹಿತದ ಹಾದಿಗೆ ಅವನು ಹೊರತಾ 5
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ನರನೆನಬಹುದೆ ಸದ್ಗುರು ವರನಾತರುವೆನಬಹುದೆ ಸುರತರುವನ್ನ ಪ ಆಸನವನೆಹಾಕಿ ಕುಳ್ಳಿರಿಸಿದವನನಾಸಿಕ ಕೊನೆದೃಷ್ಟಿ ಇರಿಸಿದವನಬೀಸುವ ವಾಯುವ ಕುಂಭೀಸೀದವನಸೂಸುವ ಮುತ್ತಿನ ಮಳೆ ಸುರಿಸಿದವನ 1 ಆರು ಮಂಟಪ ನೆಲೆ ಅಡರಿಸಿದವನಭೇರಿ ಘಂಟವು ಶಂಖವು ಭೋರಿಡಿಸಿದವನಬೀರುವ ದ್ವಿದಳ ಸದರಕಾಶಿಸಿದವನನೂರು ಕೋಟಿಯ ರವಿ ಬೆಳಕ ಚೆಲ್ಲಿದವನ 2 ಸಾವಿರ ದಳದ ಮನೆಯ ಜೈಸಿದವನಈವ ಬ್ರಹ್ಮರಂದ್ರ ಸುಖವುಣಿಸಿದವನಕೇವಲ ಶಿಂಶುಮಾರಕೆ ಸೇರಿದವನದೇವ ಚಿದಾನಂದನ ಮಾಡಿದವನ 3
--------------
ಚಿದಾನಂದ ಅವಧೂತರು
ನಾಟ್ಯವಾಡಿದನು ರಂಗ ಮಂಗಳಾಂಗ ಪ. ನಾಟ್ಯವಾಡಿ ಶಕಟಾಂತಕ ಕೃಷ್ಣ ನೋಟಕರಿಗೆ ತನ್ನಾಟ ತೋರಿ ಭಂಗ ಜಗದಂಗ ಧಿಕಿಟದಿಂ ತದಾಗಿಣ ತೋಂ ತರನಾನಂದದಿ ಸುಂದರನಾಟ್ಯ ಅ.ಪ. ಅಪ್ರಮೇಯ ಹರಿ ತನುಭವ ಬಲರಾಮರ ಜತೆ ಸೇರಿ ಅನುನಯದಲಿ ಗೋವನು ಕಾಯುತಲಿರೆ ಪೀತಾಂಬರಧರನಾಟವ ನೋಡುವೆನೆಂದು ಸಾಟಿಯಿಲ್ಲದ ವಿಷಮಡುವಿಲಿ ಕಾಳಿಂಗ ನೀಟಿಲಿ ಕುಳ್ಳಿರೆ ಓಟದಿ ಪಶುಗಳು ನೀರಾಟದಿ ಕುಡಿಯಲು ನಾಟಿ ಗಾರಾದ ನೆಲಕುರುಳಲು ರಂಗ ಕೋಟಿಪ್ರಕಾಶ ಕಾಳಿಂಗನಾಟ ತೋರುವೆನೆಂದೂ ಧಿಕಿಟ1 ದುಷ್ಟನ ವಿಷಮಯ ನೀರನು ಕುಡಿದು ಉತ್ಕøಷ್ಟ ಗೋವು ಮೂರ್ಛೆಯ ಪೊಂದೆ ಪುಟ್ಟ ಬಾಲಕರು ಕೃಷ್ಣಗೆ ಪೇಳಲಾ ತಟ್ಟನೆ ಕಡಹದ ಮರವೇರುತ ಧುಮುಕೆ ಪುಟ್ಟ ರಂಗನೆಂದು ಬಿಟ್ಟನೆ ದುಷ್ಟನು ಸುತ್ತಿ ಬಾಲ ಕುಟ್ಟುಪ್ಪಳಿಶಿದನು ಕಷ್ಟವೆ ರಂಗಗೆ ನಿಷ್ಟುರ ಭಕ್ತರು ಶಿಷ್ಟಾಚಾರದಿ ಮೆಟ್ಟಿ ಬಾಲ ಕೈಗಿಟ್ಟು ತವಕದಿ ದಿಟ್ಟ ಶ್ರೀ ಕೃಷ್ಣ ಥಕಥೈ ತದಿಗಿಣಝಂ ಆನಂದ ನಾಟ್ಯ 2 ಅಂಬುಜೋದ್ಭವನ ನಾಟ್ಯವ ನೋಡೆ ಕುಂಭಿಣಿ ತಳದಾಕಾಶದಿ ಸುರರು ತುಂಬುರು ನಾರದ ಸಂಭ್ರಮಗಾನ ರಂಭಾದ್ಯಪ್ಸರ ಸ್ತ್ರೀರಂಭರ ನಾಟ್ಯ ಅಂಬರದಿಂ ಪೂಮಳೆ ರಂಗಗೆರೆಯೆ ಜಗಂಗಳು ನೋಡೆ ಶ್ರಿಂಗರ ಶ್ರೀ ಶ್ರೀನಿವಾಸಗೆ ಗೋಪಿ ರಂಗ ಬಾರೆನುತಲೆ ಮಂಗಳಾರುತಿ ಮೂರ್ತಿ ಕಾಳಿಂಗಭಂಗ ನಾಟ್ಯ 3
--------------
ಸರಸ್ವತಿ ಬಾಯಿ
ನಾರಾಯಣನು ನಾರಿಯಾದನು ನಾರಾಯಣನು ನಾರಿಯಾಗಲು ಉಗರು ಕಾಂತಿ ಪೋಗಿ ಸಾರಸುಂದರವ ತಿರಸ್ಕರಿಸೆ ಶೃಂಗಾರಸ ನಿಧೆ ಪ ಸುರರಸುರ ಕರೆಸಿ ವೈರೆವ ಮರೆಸಿ ಸ್ನೇಹದಿಂದಿರಿಸಿ ಈ ಕುಲ ವರಿಸಿ ನಿಮ್ಮೊಳು ಬೆರಸಿ ಸುಖವಂಕುರಿಸುವಂತೆ ಸಂಚರಿಸೆಂದು ಸರಸದಿಂದಲಾದರಿಸೆ ಸುರರ ಧರಿಸಿ ಬಿಡದುದ್ಧರಿಸುವೆ ನಿದ್ರಿ ತರಿಸಿ ದೈತ್ಯರ ವರಿಸೆಂದು ಸಿರಿ 1 ದಿತಿಜಾದಿತಿ ಜ್ಯಾತ ತತಿಗಳನು ಸ ಅಮೃತ ಬಪ್ಪದಕ್ಕೆ ಹಿತವ ಪೇಳುವೆನೆಂದತಿಶಯದಿಂದ ಚತುರಾತುಮ ಮಾರುತ ಪಿತಾ ಕ್ಷಿತಿಯೊಳು ನೂರು ಶತ ಯೋಜನ ಪರ್ವತ ಮಂದಾರುಂಟು ಜತೆಯಲಿ ಏಕಮತರಾಗಿ ಪೊಲ್ ಜಾತವ ಕಿತ್ತೆತ್ತಿಸಿತಾಬ್ಧಿಯೊಳು ಮಥಿüಸೆಂದು 2 ಹರಿ ನಿರೂಪವÀ ಧರಿಸಿ ಎಲ್ಲರು ಗಿರಿಯ ಬಳಿಗೆ ಹರಿದರಾಗಲೆ ಕಿರಿ ಬೆರಳ ಅಬ್ಬರದಾಟವು ಬೊಬ್ಬಿರುವ ಧ್ವನಿ ಭೀಕರ ಕರಿ ಶರಧಿ ಮಿಕ್ಕ ಗೋತುರ ಸಪ್ತದ್ವೀಪ ತರು ಮೃಗಾದಿ ಜೀವರು ತಲ್ಲಣಿಸೆ ಗಿರಿ ವೆಗ್ಗಳಿಪ ಭರಕಂದು3 ಸುತ್ತ ಈ ಪರಿಯಾಗುತ್ತಿರೆ ಇತ್ತ ಪ ರ್ವತವಲ್ಲಾಡಿಸಿ ಕಿತ್ತಿ ತೆಗೆದೆತ್ತಿ ಹೊತ್ತರಿತ್ತಂಡದಿ ಚಿತ್ತ ಮಾರ್ಗವನು ಹತ್ತಿ ಬರಲು ದೇವತೆಗಳು ಹೊತ್ತರದ್ರಿಮೂಲ ಎತ್ತಲಾರದಲೆ ತತ್ತಳಗೊಂಡು ಮಾರುತ್ತ ಅಡಿಗಡಿ ಎತ್ತಿಡಲರಿದು ದೈತ್ಯರ ವಂಚಿಸಿ ಆ ದಿತ್ಯರಿಗಿರಿಸಿದುತ್ತಮನೊ4 ವನಧಿsಯೊಳದ್ರಿ ದನುಜ ಮರರ ಗುಣವಿಳಹಿ ಸ ರ್ಪನ ತಂದೀಗ ನೇಣನೆ ಮಾಡಿದರು ಸುರರು ಬಾಲನು ದೈತ್ಯಯರು ಹೂಣಿಕೆಲಿ ವಿನಯದಿಂದ ಮಥಿüಸುವಾಗ ವದನದನಿಲಕೆ ಅನಿಮಿಷರು ತಲ್ಲಣಿಸೆ ಹರಿ ತನ್ನನು ನಂಬಿದವರ ಕಾಯಿದ ವಂಚನೆಯಿಂದ5 ಉಭಯ ಜನರು ಗಂಭೀರವಾದ ಕ್ಷೀರಾಂಬುಧಿ ಕಟವ ರಭಸಗೈದು ಕಕುಭದಲಿ ಪ್ರತಿ ಶಬ್ದಪುಟ್ಟಿ ಉ ದುಭವಿಸಿದವು ಶುಭಾ ಶುಭ ಪ್ರಭು ಧನ್ವಂತ್ರಿ ಸುಲುಭ ರಸ ತಾರೆ ವಿಭುದರೊಳಗೆ ಗಲಭೆಯ ಬೀಸಿ ಅ ನಿಬರು ಒಯ್ಯಲು ಋಭುಜಾದ್ಯರು ಅಬುಜಾಪ್ತ ಪೋದನಭವಾಗೆ6 ಹರಿ ತಿಳಿದ ಭಕ್ತರ ಮನೋಕ್ಲೇಶ ಸಿರಿ ಸ್ತುತಿಗಗೋಚರನೆನ್ನಲು ಧರಿಸಿ ಬಂದನು ಮಿರುಗುತಿಪ್ಪ ಸುಂ ದರ ನಾರೀ ರೂಪ ಪರದೈವ ಕುಸುಮ ಪೊಂಗೆಜ್ಜೆಯ ಸರಪಳಿಯ ಮೇಲೊಲಿವ ಕಾಂಚಿದಾಮ ಶರತ್ಕಾಲದ ಚಂದಿರನಂತೆ7 ಸಣ್ಣವನಾರಾ ಮೋಹನ್ನಕರವು ಪಾ ಕೌಸ್ತುಭ ರನ್ನ ವನಮಾಲೆ ಚಿನ್ನದ ಸರ ಶೋಭನ ಕರಡಿಗೆ ಚನ್ನಗೋಡಿ ಸರ ಬಣ್ಣ ಸರ ರನ್ನದಪದಕ ಕನ್ನಡಿ ಮಲಕು ಚನ್ನಪ ನ್ಯಾವಳ ಮುನ್ನೆ ಸರ್ವಹಾರ ಮೂರ್ತಿ 8 ಮುತ್ತಿನ ಚಿಂತಾಕ ಮುತ್ತಿನೋಲೆ ಜಾತ ಮುತ್ತಿನ ಮೂಗುತಿ ಮುತ್ತಿನಕ್ಷತಿಯು ಮುತ್ತಿನ ಸೂಸುಕಾ ಮುತ್ತಿನ ಜಡೆಯು ಮುತ್ತಿನ ಗೊಂಚಲು ಮತ್ತೆ ತೋಳು ಮುತ್ತು ಮೇಲಗೊಪ್ಪು ಕತ್ತಲೆ ಸೋಲಿಪ ಕಸ್ತೂರಿ ತಿಲಕಾ ನೆತ್ತಿಯ ಬೈತಲು ಸುತ್ತ ತಳಪು ಸುರೋತ್ತಮ ಚಂದ್ರಮಾ ನಿತ್ಯಾನಂದ ಪರುಷೋತ್ತಮನು 9 ನೀಲಗೂದಲು ಸುಫಲಾದಿ ಶ್ರವಣ ಭ್ರೂಲಾದಿಕÀವು ಚಂ ಕಪೋಲ ನಾಸಿಕ ತಾಂಬುಲದ ವದನ ನಾಲಿಗೆತಳ ವಿಶಾಲ ಭುಜ ಕಂದರ ಸುಂಡಾಲಾಕಾರವಾದ ತೋಳು ಕರತಳ ಪಾಲು ಬಪ್ಪ ಸ್ತನ ಸ್ಥೂಲೋದರ ನಾಭಿ ಲೀಲಾ ನಡವು ಪಂ ಚಳ ಊರು ಜಾನು ಲೋಲಾಡುತಾ 10 ಹರಡಿ ಕೈಕಟ್ಟು ಬೆರಳುಂಗುರವ ವರ ಕಂಕಣಾದಿ ಸರಿಗೆ ತಾಯಿತ ಸರ ಹುಲೆಯುಗರು ಎಣ್ಣೆ ನೂಲು ತರುಳಹಾರ ಚೌರಿಯಿಂದ ಪರಿಪರಿ ಚಿತ್ರ ಬರೆದ ಕಂಚುಕಾ ಸರಿಸರಿ ಬಂದಾಭರಣ ಧರಿಸಿ ಅರೆ ಶರಗು ಗಹ್ವರದಿ ಮಾಡುತ್ತ ಮರಿಯಾನೆ ಬಪ್ಪ ತೆರದಂತೆ 11 ಗಂಧ ಪಚ್ಚಿಕೊಂಡು ಒಂದು ಕರದೊಳು ಗಂಧ ವಿಳ್ಯವು ಮತ್ತೊಂದು ಕರದೊಳು ಕಂದುಕ ಪುಟಿಸುತ್ತೊಂದೊಂದು ಹೆಜ್ಚೆಯನು ನಿಂದಲ್ಲಿ ನಿಲ್ಲದೆ ಚಂದದಿಂದ ಬಂದಬಂದಂತೆ ಪೂ ಮಂದರಾದಿ ಮುಡಿಯಿಂದ ಉದರಲು ಮಂದಹಾಸದಿಂದ ವೇಗ ನಡೆ ತಂದು ಸಮೀಪದಿ ನಿಂದನು ಖಳರಿಗೊಂಡಿ ಮಾರಿ12 ದುರುಳ ಸಮೂಹ ಪರವಶನಾಗಿ ಬೆರಗಾಗಿ ನಿಲ್ಲೆ ಪರಿ ಏನೆನಲು ಇರದೆ ಪೇಳಲು ಶಿರವದೂಗುತ್ತಾತಾರವೆಂದ ಭರ ಯೌವ್ವನ ಸ್ತ್ರೀ ಪರಪುರಷರ ಸರಿತದಲ್ಲಿಗೆ ಚರಿಸಬಾರದು ಎರಡು ಬಲದವರು ಕರದಿ ಲೋಚನವ ಮುಚ್ಚಿ ಸಾಗಿರೆ ಪಂಙÂ್ತ 13 ಬಡಿಸೂವೆನೆ ಒಡನೆ ತಮ್ಮಯ ಪಡೆ ಸಮ್ಮತ ಸಾಲ್ಹಿಡಿದು ಕುಳ್ಳಿರೆ ನಡುವೆ ಪಿಯೂಷ ಪಿಡಿದು ದುಷ್ಟರ ಕಡಿಗೊಂದು ಬಿಂದು ಬಡಿಸದೆ ದೃಢ ಭಕ್ತರಿಗೆ ಕುಡಿಸುತ್ತಿರಲು ಬಡ ರಾಹು ತಾನು ದುಡುಗಿ ಸುರರಾ ಎಡೆಯೊಳಿರಲು ಕುಡಿತಿಯೊಳು ತಾ ಬಡಿಸಿ ಚಕ್ರವಾ ತುಡುಕಿದ14 ಓರ್ವನ ತರಿದು ಈರ್ವಗೆ ಮಾಡಿದ ಊರ್ವಿಗೆ ಕೆಡಹಿ ಗರ್ವ ಮುರಿದು ಸರ್ವಬಗೆಯಿಂದ ನಿರ್ವಾಹ ಕರ್ತನು ಓರ್ವನಲ್ಲದೆ ಮತ್ತೋರ್ವನಾರೊ ಗೀರ್ವಾಣ ಜನರ ನಿರ್ವಾಧಿಕವೊಹಿಸಿ ಪರ್ವತೆಡೆಯಿದ್ದ ದು ರ್ವಿಷಯಾಬ್ಧಿಗೆ ಚೀರ್ವನಾಗಿದ್ದ ವಿಜಯವಿಠ್ಠಲ ನಿರ್ವಾಣೇಶ15
--------------
ವಿಜಯದಾಸ
ನಾಲ್ಕನೆಯ ಸಂಧಿ ಶಶಿಹಾಸ ಕಾಳಿಯನೊಲಿಸಿ ಪೊಸತಾಗಿ ತೋರಿತಾಶ್ಚರ್ಯ ಮಿಥ್ಯದ ವಿಷವನು ಉಣಿಸಿ ಕೃತ್ಯವೆ ಪಥ್ಯವಾದುದನು 1 ಕರುಣದ ಬಗೆಯ ತನುಜೆಯು ವಿಷಯು 2 ವಿಷಯೆ ಇದ್ದೆಡೆಗೆ ತಲೆಯ ತಗ್ಗುವಳು 3 ಪನ್ನಗಧರನ ಕೃಪೆಯಿಂದ ಸನ್ಮಾನವನೆ ಮಾಡಿದರು 4 ಜಾರಿದ ಕುರುಳನೋಸರಸಿ ಚಾರುಮಾಣಿಕಖಚಿತ ಪೀಠಕ್ಕೆ 5 ಹರಸಿ ಅಕ್ಷತೆಗಳನಿಟ್ಟು ಅರಸಿನಗಳ ತಿವರಿದರು 6 ಮಜ್ಜನ ತಂಬಿಗೆಯ ಲೋಕುಳಿಯ ಬೆನ್ನಲೋಕುಳಿಯನೆರೆದರು 7 ಮುಡಿಮೈಗಳನೋಸರಿಸಿ ದುಕೂಲವ ಬಡನಡುವಿಗೆ ಅಳವಡಿಸಿ ಜಡಿತದಾಭರಣಕರಡಿಗೆಯನು ತಂದಿಡುವರು ಇಕ್ಕೆಲದಲ್ಲಿ8 ಪಾಟಿಸಿ ತುರುಬನೋಸರಿಸಿ ಮಧ್ಯದಲಿ ಇಡುವರು 9 ಬೆಳಗುವ ಮೂಗುತಿಯ ಮಂದ ಗಮನೆಯರು ಹರುಷದಲಿ 10 ಮೂಗುತಿಯನಿಕ್ಕುವರು ಕೋಕಿಲಗಾನೆ ಕುಟಿಲಕುಂತಳದಾನೆ ಬಾಗಿದ ಬಾವುಲಿಗಳಲಿ11 ಇಟ್ಟರು ತೋಳ ಚಳರಕ್ಷೆ ಮಣಿಗಳ ಗಟ್ಟಿಕಂಕಣ ಚಳಕಗಳ ಬೆರಳ ಮುದ್ರಿಕೆಯು 12 ಕಡಗ ಮುತ್ತಿನ ಹತ್ತೆ ಕಡಗ ಎಡೆಪಣಿಚಿಂತಾಕದ ಸರಿಗೆಯ ತಂದಿಡುವರಂಗನಗೆ ನಾರಿಯರು 13 ಕಂಠೀಸರ ಬಿಲ್ಲಸರವು ಸರಸಿಜ ಗಂಧಿಯರೊಲಿದು 14 ಕಣಕಾಲುಗಳೆಸೆವ ಭಾವಕಿಯ ಸಾಲುಗಂಟೆ ಗೆಜ್ಜೆ ಸರಪಳಿ ಘಲಿರೆಂಬ ಕಾಲಂದಿಗೆಯನಿಡುವರು15 ಉಂಗುರ ಮುದ್ರಿಕೆಯಿಟ್ಟು ಮಂದಗಮನೆಗೆ ಒಪ್ಪಿದವು 16 ಸಾರಿಸಿ ಅಂಗಕ್ಕೆ ತಿಗುರಿ ಹಾವುಗೆಯನೆ ಮೆಟ್ಟಿಸಿದರು 17 ನಾರಿಯರೆಡಬಲದಲಿ ಕರವಿಡಿಯಲು ಚಾರುವದನೆ ಚಂಚಲಾಕ್ಷಿ ಬಂದೇರಿದಳೊಜ್ರದಂದಣವ 18 ಹೊತ್ತರು ಕಳಸ ಕನ್ನಡಿಯ ಹೊತ್ತಿದ ಕಾಳಂಜಿಯವರು 19 ಜಗಜಗ ಬೆಳಕುಗಳು ತುಂಬಿ ಜಗಜಗಿಸುವ ಜೊ‑ಂಪಿನ ಸುರೆಪಾನವು ನೆಗಪಿದವಗಣಿತವಾಗ20 ಉದುರು ಬಾಣ ಪುಷ್ಪಬಾಣ ಸದನದಿ ನಡೆತಂದಳಬಲೆ 21 ಹೊನ್ನಂದಣವನೆ ಇಳಿಸುವರು ಬಂದಳು ವಿವಾಹ ಮಂಟಪಕೆ 22 ಪಿಡಿದಳು ಮದನನರ್ಧಾಂಗಿ23 ಮುಕುಂದಗರ್ಪಿತವಾಗಲೆಂದು ಮಂದಾರಮಾಲೆ ಹಾಕಿದರು 24 ಪೊರೆಯಲಿ ತಂದು ನಿಲ್ಲಿಸಿದರು ಅರುಹಬೇಕೆಂದು ಕೇಳಿದರು 25 ಎನ್ನ ಪರಮ ಗುರುವೆಂದ 26 ಸಮಯವು ಲಗ್ನವೆಂದೆನುತ ಬ್ರಾಹ್ಮಣೋತ್ತಮರು ಹೇಳಿದರು 27 ಸಮಯವು ಲಗ್ನವೆಂದೆನುತ ಮೇಲೆ ಸೂಸಿದನು 28 ಶತಪತ್ರನಯನೆ ಸಮಗಾತ್ರೆ ಚಮತ್ಕಾರದಿಂದ ಸೂಸಿದಳು 29 ಸೊಡರುಗಳನೆ ಹಚ್ಚುವರು ಪಿಡಿದರು ಇತ್ತಂಡದಲ್ಲಿ 30 ಮುತ್ತೈದೆಯರೆಲ್ಲ ಅಲಂಕರದಿ ವಿಷಯೆ ಸಂಭ್ರಮದಿ 31 ಕೈಯಿಂದ ತೋರುವರು ಸುತ್ತ ನಕ್ಷತ್ರದ ಮಧ್ಯದಿ ಕಂಡಳು ಪ್ರತ್ಯಕ್ಷದಿಂದರುಂಧತಿಯ 32 ದಿನಕರ ಪ್ರತಿಬಿಂಬದಂತೆ ಅನುಕೂಲಗಳನೆ ಮಾಡಿದರು 33 ಮಾಡಿದನು ಶ್ರೀಪತಿಯ ಆಜ್ಯತಂಡುಲ ಆಪೋಶನೆ ಮಾಡಿದ ನಿರ್ಜರಪತಿ ಮೆಚ್ಚುವಂತೆ34 ಎಡೆಮಾಡಿ ಚಪ್ಪರದೊಳಗೆ ಭೋಜನಕೆ ಕುಳ್ಳಿರಿಸಿ 35 ಉಪ್ಪಿನೆÀಸರುಕಾಯಿ ಪರಿಪರಿ ಶಾಕವು ಹಪ್ಪಳ ಬಾಳಕಗಳನು ಅಪ್ಪಲು ಅತಿರಸ ಸೂಪಾಕ್ಷತಶಾಲ್ಯನ್ನ ಚಪ್ಪರದಲಿ ಬಡಿಸುವರು 36 ಕಾಮಿನಿಯರು ಕನಕದ ಹರಿವಾಣದಿ ಶಾವಿಗೆ ಪರಮಾನ್ನಘೃತವ ಭೂಮಕ್ಕೆ ಬಡಿಸಿದರಾಗ 37 ರಾಜೀವ ಮುಖಿ ತನ್ನ ಪತಿಗೆ ಮ- ಹಾಜನರೆಲ್ಲ ಉಂಡು ಕೈತೊಳೆದರು ಹೂಜಿಯಲ್ಲುದಕವ ಪಿಡಿದು38 ಸಂಭ್ರಮದಿಂದ ಸೂಸಿದರು39 ವಾಸುದೇವ ಕೃಷ್ಣ ಎನುತ ಮದನ ವಿಲಾಸದಿಂದಲಿ ನಿದ್ರೆಗೈದ 40
--------------
ಹೆಳವನಕಟ್ಟೆ ಗಿರಿಯಮ್ಮ
ನಿತ್ಯ ಶುಭಮಂಗಳಂ ಪ. ಹೃದಯವೆಂಬೀ ದಿವ್ಯ ಪದ್ಮಪೀಠದ ಮೇಲೆ ಪದ್ಮಾಕ್ಷಿ ಪದ್ಮೆಯನು ಕುಳ್ಳಿರಿಸಿ ಸದಮಲ ಭಾವದಿಂ ಮಧುಕೈಟಭಾಂತಕನ ಹೃದಯೇಶ್ವರಿಯ ಸೇವೆಗೈವೆ 1 ಜ್ಞಾನವೆಂಬುವ ದಿವ್ಯ ಜ್ಯೋತಿಯಂ ಮುಂದಿರಿಸಿ ಧ್ಯಾನವೆಂಬುವ ನಿಲುವುಗನ್ನಡಿಯ ನಿಲಿಸಿ ದಾನÀವಾಂತಕ ರಾಮಚಂದ್ರಮನ ಧ್ಯಾನಿಸುತ ಜಾನಕಿಯ ಬಲಗೊಂಬೆ ಭರದಿ 2 ನೇಮನಿಷ್ಠೆಯ ಶುದ್ಧ ಹೇಮಕಲಶದಿ ಮತ್ತೆ ಭಕ್ತಿರಸದ ಪನ್ನೀರ ತುಂಬಿ ನಾಮಸಂಕೀರ್ತನೆಯ ನಾರಿಕೇಳವ ಬೆರಸಿ ಶ್ರೀನಾರಿಗಭಿಷೇಕವ ಗೈವೆ 3 ಚಿತ್ತಶುದ್ಧಿಯ ಶುಭ್ರವಸ್ತ್ರದಿ ನೇವರಿಸಿ ಸತ್ವಗುಣದ ಪೀತಾಂಬರವನುಡಿಸಿ ಕಂಚುಕ ತೊಡಿಸಿ ಚಿತ್ತಜನ ಜನನಿಯರ ನೋಡಿ ನಲಿವೆ 4 ಅಂತಃಕರಣ ಶುದ್ಧಿಯ ಅರಿಸಿನವನು ಪೂಸಿ ಶಾಂತಗುಣದ ತಿಲಕ ತಿದ್ದಿ ನಂದಮಲ್ಲಿಗೆಯ ದಂಡೆಯನು ಮುಡಿಸುತ್ತ ಇಂದ್ರಿಯ ನಿಗ್ರಹದ ಗಂಧ ಹಚ್ಚುವೆನು 5 ಪಂಚಭೂತಾತ್ಮಕದ ಛತ್ರಿಯನು ಪಿಡಿದೆತ್ತಿ ಪಂಚನಾದಗಳೆಂಬ ವಾದ್ಯಗಳ ನುಡಿಸಿ ಪಂಚೇಂದ್ರಿಯಂಗಳೇ ಪಂಚಭಕ್ಷ್ಯಗಳಾಗಿನಿ ರ್ವಂಚನೆಯಿಂದಾರೋಗಿಸೆಂಬೆ 6 ರೇಚಕವೆಂಬ ವ್ಯಜನದಿಂ ಬೀಸಿ ತಾರಕ ಚಾಮರವ ಪಿಡಿದು ಕುಂಭಕವೆಂಬ ಪನ್ನೀರಿನಿಂ ತೋಯ್ಸಿ ತಾರಕ ಬ್ರಹ್ಮನರಸಿಯಂ ಸೇವಿಸುವೆ 7 ಭೋಗಭಾಗ್ಯವನೀವ ಭಾಗ್ಯಲಕ್ಷ್ಮಿಗೆ ವೈರಾಗ್ಯದ ತಟ್ಟೆಯನು ಪಿಡಿದು ಭಾವದೀವಿಗೆಯ ಕರ್ಪೂರದಾರಿತಯೆತ್ತಿ ಬಾಗಿವಂದಿಪೆ ತಾಯೆ ಕರುಣಿಸೆಂದು 8 ವರದಾತೆ ಭೂಜಾತೆ ಸುವಿನೀತೆ ಸುವ್ರತೆ ವರಶೇಷಗಿರಿವಾಸದಯಿತೆ ಮಹಿತೇ ಸೆರಗೊಡ್ಡಿ ಬೇಡುವೆನು ಕರಪಿಡಿದು ಸಲಹೆಂದು ನೆರೆನಂಬಿ ನೆನೆನೆನೆದು ನಲಿವೆನಿಂದು 9
--------------
ನಂಜನಗೂಡು ತಿರುಮಲಾಂಬಾ
ನಿತ್ಯ ಸಲಹೆ ಜನರನು ಅನ್ನಪೂರ್ಣೆ ಪ ಉಲ್ಲಾಸದಿಂದಲಿ ಪಲ್ಲಕ್ಕಿಯ ಮೇಲೆ ನೀ ಕುಳ್ಳಿರ್ದು ಛತ್ರ ಚಾಮರ ವ್ಯಜನಗಳಿಂದ ಅಲ್ಲಿ ಗಲ್ಲಿಗೆ ನೃತ್ಯಗೀತ ವಾದ್ಯುಪಚಾರ ದಲ್ಲಿ ಉತ್ಸವದಿ ಬರುವ ಸಂಭ್ರಮವಕಂಡೆ 1 ಹಾಡಿ ಪಾಡಿಸಿ ಕೊಳುತ ಚತುರ್ವಿಧ ಗೂಡಿದ ಮಂತ್ರ ಸ್ತುತಿಗಳಿಂದಲಿ ಕೂಡಿದ ಜನರ ಸಂದಣಿಯಲ್ಲಿ ಮನೆಯಲ್ಲಿ ಬೇಡಿದ ಜನರಿಂಗಿಷ್ಟಾರ್ಥವ ನೀವುದ ಕಂಡೆ 2 ಮೂರು ಮೂರುತಿ ನೀನೆ ನಿರ್ಮಿಸಿ ಮತ್ತೆ ಮೂರು ಗುಣಂಗಳ ಧರಿಸಿ ತಾರಣ ರೂಪೆ ಸೃಷ್ಟಿಸ್ಥಿತಿಗಳನು ಸಂಹಾರವ ಮಾಳ್ಪ ಚೈತನ್ಯ ರೂಪೆಯಕಂಡೆ 3 ಬಿಂಕವ ಮುರಿದೆ ಜನರ ಸಾಕಿನ್ನು ಭಯಂಕರವನು ಬೀರದಿರು ತಾಯೆ ಎನ್ನ ಮಾಡಲ ಮನೆಯೊಳು ನೆಲಸಿ ಭಕುತರನು ಶಂಕರಿ ಸಲಹೆ ದಯದೊಳನ್ನಪೂರ್ಣೆ 4 ಎಲ್ಲ ಜೀವರಿಗು ಜೀವಳು ನೀನು ಇಲ್ಲಿನ್ನು ನಿನಗಿಂತ ಬಲ್ಲಿದರು ಇಲ್ಲಮ್ಮ ವಿಜಯದಶಮಿಯೊಳು ನೀ ಬಂದು ಕೊಲ್ಲೂರ ಮೂಕಾಂಬೆಯೊಳಿರ್ದುದ ಕಂಡೆ 5
--------------
ಕವಿ ಪರಮದೇವದಾಸರು
ನಿದ್ರೆ ಬಂತಿದೆಕೋ ಅನಿ- ಪ ರುದ್ಧನ ಸೇವೆಗೆ ವಿಘ್ನವ ಮಾಡುತ್ತ ಅ ಅಸ್ತಮಾನದಿಂದ ಉದಯವಾಗೋತನಕಸ್ವಸ್ಥದಿ ಪಗಡೆ ಪಂಜಿಯನಾಡುತವಿಸ್ತಾರದಿ ವೇಷನೋಡೆ ನಿದ್ರೆಯಿಲ್ಲಪುಸ್ತಕ ಹಿಡಿಯಲು ಮಸ್ತಕ ಮಣಿಸುತ 1 ಹರಿಕಥಾಶ್ರವಣ ಮಾಡಬೇಕೆನುತಲಿಪರಮ ಭಕುತಿಯಿಂದ ಕುಳ್ಳಿರಲುಕಿರಿಗಣ್ಣ ನೋಟದಿ ಸ್ಮರಣೆ ತಪ್ಪಿಸುತ್ತಗುರುಗುರು ಗುಟ್ಟುತ ಕೊರಳ ತೂಗಿಸುತ 2 ಜಾಗರ ಮಾಳ್ಪಲ್ಲಿ3
--------------
ವ್ಯಾಸರಾಯರು