ಒಟ್ಟು 157 ಕಡೆಗಳಲ್ಲಿ , 50 ದಾಸರು , 138 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಕದವ ತೆಗೆಯೆ ಸುಂದರಿವಯ್ಯಾರಿ ಮುತ್ತಿನ ಪ ಕಡಲ ಶಯನನೆ ಮಡದಿ ಹರುಷದಿ ಸಡಗರದಿ ಮುಂದಡಿ ಇಡುತ ನಿನ್ನ ಒಡೆಯ ಬಂದಿಹನೆಂದು ಹರುಷದಿ ಬೆಡಗು ಮಾಡದೆ ಬಿಡಿಯ ಮುತ್ತಿನ 1 ಯಾರು ನಿನ್ನಯ ಪೆಸರ ಏನೆಂದು ತಿಳಿಯದೆ ಹೇಗೆ ತೆಗೆಯಲಿ ಕದವಾ ಘೋರ ರಾತ್ರಿಯ ವೇಳೆಯಲಿ ಬಂ- ದೀಗ ಬಾಗಿಲ ಬಡಿಯ ನಿಂದಿರೆ ನಾರಿಯರು ಏನೆಂದು ಕೇಳ್ಪರು ದ್ವಾರ ಬಿಡುಬಿಡುತಲಿ ಸಾಗು ಮುಂದಕೆ2 ತೆಗೆಯಲೊಲ್ಲೆನು ಕದವ ಸಮರಾತ್ರಿ ವೇಳದಿ ರುಕ್ಮನ ಅನುಜೆ ಕೇಳೆ ಪೃಥ್ವಿಯೊಳು ಎನ್ನನು ಚಕ್ರಿ ಎನ್ನುತ ಪೇಳ್ವರೆ ಅರ್ಥಿವಚನಗಳನ್ನು ಕೇಳುತ ಸತ್ವರದಿ ನೀ ಬಂದು ಮುಂದಕೆ ಮುತ್ತಿನ ಕದತೆಗೆದು ಬೇಗನೆ ರತ್ನ ಪೀಠದಿ ಕುಳ್ಳಿರಿಸೆ ಹೊಸ ಮುತ್ತಿನರಗಿಣಿ ಸತ್ಯವಾಣಿಯೆ3 ಕೇಳಿ ಹರ್ಷಿತನಾದೆನು ನಿನ್ನಯ ಮಾತ ಕೇಳಿ ನಗುವರು ಜನರು ಹೇಳಿ ಕೇಳುವರಿಲ್ಲ ನಿನ್ನ ಮನಸಾರ ಮಾತುಗಳಾಡಲೇತಕೆ ಕು- ಲಾಲ ಭವನವಿದಲ್ಲ ಸುಮ್ಮನೆ ಹೇಳ ಕೇಳದೆ ಹೊರಡು ಮುಂದಕೆ 4 ಹೀಗೆ ನುಡಿಯುವದೇತಕೆ ಈಗೆನ್ನ ಮಾತಿಗೆ ಬೇಗದಿ ತೆಗೆ ಕದವ ನಾಗವೇಣಿಯೆ ನಗುತ ಪೇಳುವೆ ಬೇಗದಲಿ ಇನ್ನೊಂದು ನಾಮವ ಈಗ ಧರಣಿಧರನು ಬಂದಿಹೆ ಸಾಗರನ ಸುತೆ ಸರ್ಪವೇಣಿಯೆ 5 ಧರಣೀಧರ ನೀನಾದರೆ ಈ ಧರೆಯನೆಲ್ಲವ ಸಿರದ ಮೇಲಿರಿಸುವೆಯ ಸರ್ವ ಜನರಿಗೆ ಭಯವ ಪಡಿಸುವ ಉರಗರಾಜ ನೀನೆಂದು ತಿಳಿದೆನು ಇರುತ ಸರ್ಪಗಳೊಳಗೆ ನೀ ಬಲು ಹರುಷದಿಂದಲಿ ಸಾಗುಮುಂದಕೆ6 ಹರಿಣಾಕ್ಷಿ ಕೇಳೆ ನೀನು ಎನ್ನನು ಜನರು ಹರಿಯೆಂದು ಕರಿಯುವರು ಕರೆ ಕರೆಯ ಮಾಡದಲೆ ಬೇಗನೆ ವರ ಕನಕ ಕದ ತೆಗೆದು ಸುಮ್ಮನೆ ಇರಿಸು ಸುಖ ಸಾಮ್ರಾಜ್ಯ ಪೀಠವ ಹರುಷದಿಂ ಕುಳಿತೆಲ್ಲ ಪೇಳುವೆ 7 ಕೋತಿ ನೀನಹುದಾದರೆ ಮಾತುಗಳ್ಯಾಕೆ ಜಾತಿ ಕಪಿಗಳ ಕೂಡುತ ಪ್ರೀತಿಯಿಂದಲಿ ಮನಕೆ ಬಂದೆಡೆ ನೀತೆರಳುತಲಿ ಪೋಗು ಮುಂದಕೆ ಕೋತಿಗಳ ಗುಂಪಿದಲ್ಲ ತಿಳಿಮಹ- ರೂಪವತಿಯರಿರುವ ಸ್ಥಳವಿದು 8 ಪ್ರೀತಿಸತಿಯೆ ನೀ ಕೇಳೆ ನಿನ್ನೊಳು ಬಹು ಪ್ರೀತಿಯಿಂದಲಿ ಬಂದೆನು ಶ್ರೀಶನ ನುಡಿಕೇಳಿ ರುಕ್ಮಿಣಿ ಆತುರದಿ ಬಾಗಿಲನೆ ತೆಗೆಯುತ ನಾಥ ಕಮಲನಾಭ ವಿಠ್ಠಲನಿಗೆ ತಾನಮಿಸಿ ವಂದಿಸುತ ಭಕುತಿಯಲಿ ಬಾಗಿಲು ತೆಗೆದಳಾಗ ಭಕುತಿಯಲಿ ಶ್ರೀಶಗೆ ಬಾಗಿಲು ತೆಗೆದಳಾಗ9
--------------
ನಿಡಗುರುಕಿ ಜೀವೂಬಾಯಿ
ಕರುಣವ ಬೀರು ಚೆನ್ನ ಕಾಯಬೇಕೋ ಎನ್ನಮರೆತಿರೆ ಕಾವರ ಕಾಣೆಪ. ಸೊಪನ ಜಾಗರದಲ್ಲಿ ನಿನ್ನ ಧ್ಯಾನವೆ ಬಂದುತೃಪ್ತನಾಗಿ ನಾನು ಜೀವಿಸುವೆಕಪಟದ ನುಡಿಯಲ್ಲ ನೀನೆ ಬಲ್ಲೆವಿಪತ್ತುಗಳನೆ ಬಿಡಿಸಯ್ಯ 1 ಕಡಲಮಗಳ ಗಂಡ ಕಾಮಧೇನು ನೀ ಕಂಡ್ಯಾಬಡವ ನಿನ್ನಡಿಗೆ ಪೊಡಮಡುವೆಒಡಲ ಬಳಿಯ ನೆಳಲಂತೆ ಬಿಡದೆ ನಿನ್ನದೃಢವಾಗಿ ನಾನು ಕೂಡುವೆನು 2 ತಂಡ ತಂಡದ ವ್ಯಾಧಿಯ ಉಂಡು ಉಂಡು ಬಳಲಿದೆಕಂಡ ಕಂಡವರ ಬೇಡಿ ನೊಂದೆಹಿಂಡುಹಿಂಡುಗಟ್ಟಿ ಬಂದ ಚಂಡ ದಂಡಧರನವರುತುಂಡು ತುಂಡು ಮಾಡಿ ಕಾಡುವರು 3 ಘೋರತರ ವ್ಯಾಧಿಗಳ ತೋರಿ ತೋರಿ ನರಕದಿಮುರಹರನುಣಿಸದೆ ಬಿಡನುಮೀರಿ ಮೀರಿ ಬಹ ಮೃತ್ಯು ಆರನಂಜಿಸುವುದುಭಾರಿ ಭಾರಿ ಗಳಿಸಿದ ಪಾಪ 4 ಹರಿ ನಿನ್ನ ಚರಣದ ಸ್ಮರಣೆ ಒಂದಿರೆ ಸಾಕುಮರಣಗಿರಣಕಂಜೆನಯ್ಯಶರಣಜನರು ನಿನ್ನ ಪ್ರಾಣಕ್ಕೆ ಸರಿಯೆಂಬೆಸಿರಿರಮಣನೆ ಸಲಹೆನ್ನ 5 ಶರಧಿಯೊಳಾಡುವ ಮಂದರಧರ ವರಾಹನೆಹಿರಣ್ಯಾಕ್ಷವೈರಿ ವಾಮನನೆಪರಶುರಾಮನೆ ರಘುರಾಮ ಕೃಷ್ಣ ಬೌದ್ಧನೆಧುರದಿ ಕಲ್ಕಿಯಾಗಿ ಮೆರೆದೆ 6 ಕರಕರ ಮತತತ್ವವ ಒರದೊರೆದು ಪೇಳುವೆಥÀರಥರದ ಹಿರಿಯರನೆಲ್ಲಮಿರಿ ಮಿರಿ ಮಿಂಚುತಿಹ ಮುರಹರನ ಭಜಿಸದೆಹರಿಹರಿಯೆಂದು ಪೇಳೆನೊಮ್ಮೆ 7 ಮನೆಮನೆವಾರ್ತೆಗೆ ಧನಂಗಳ ಗಳಿಸಿದೆಚಿನಿಚಿನಿಯಂಬರಕೆ ಮರುಳಾಹೆಮನೆಮನೆ ಮಹಿಮೆಯ ಕಾಣೆ ಕಾಣೆ ಕೆರೆಗಳನೆನೆನೆನೆದಾಡುತ್ತ ನಾ ಭಜಿಸಿ 8 ತನು ಜೀರ್ಣವಾಯಿತು ಕರಣ ಎನ್ನಿಚ್ಛೆಯೊಳಿಲ್ಲಮನವೆನ್ನ ಮಾತು ಕೇಳದಯ್ಯಇನಿತು ಸಂಕಟದವ ಇನ್ನು ನಾನೆಂತರ್ಚಿಪೆವನಜನಾಭನೆ ಹಯವದನ9
--------------
ವಾದಿರಾಜ
ಕರುಣಾ ಸಾಗರ ಬಿರುದ ತರಣೋಪಾಯದೋರುದ ಸ್ಮರಿಸೊ ಮನವೆ ಸದಾ ಶ್ರೀಗುರುನಾಮಗೊಂಬುದ 1 ತ್ವರಿತ ಪುಣ್ಯಗೈಸುದ ಸ್ಮರಿಸೊ ಮನವೆ ಸದಾ ಶ್ರೀಗುರುನಾಮಗೊಂಬುದ 2 ಹರುಷನಾಗಿ ಸೂಸುದ ಗುರುತವಾಗಿ ಭಾಸುದ ಸ್ಮರಿಸೊ ಮನವೆ ಸದಾ ಶ್ರೀಗುರುನಾಮಗೊಂಬುದ 3 ಅರಹುಪೂರ್ಣನೀಡುವ ಕುರುಹುಮಾಡಿ ಕೂಡುದ ಸ್ಮರಿಸೊ ಮನವೆ ಸದಾ ಶ್ರೀಗುರುನಾಮಗೊಂಬುದ 4 ಹರಿಯ ತಂದುಗುಡುದ ಸಿರಿಯ ಸೌಖ್ಯಲಿಡುದ ಸ್ಮರಿಸೊ ಮನವೆ ಸದಾ ಶ್ರೀಗುರುನಾಮಗೊಂಬುದ 5 ಸಾರಸೇವಿಸುವದ ಗುರುಪಾದಾರವಿಂದ ಸ್ಮರಿಸೊ ಮನವೆ ಸದಾ ಶ್ರೀಗುರುನಾಮಗೊಂಬುದ 6 ಬೆರೆದು ಘನಗೂಡುದ ಹರುಷ ಮಹಿಪತಿಗ್ಯಾಗುದ ಸ್ಮರಿಸೊ ಮನವೆ ಸದಾ ಶ್ರೀಗುರುನಾಮಗೊಂಬುದ 7
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಕಾಲಕಾಲದಲಿ ಕೇಶವನೆನ್ನಿರೊ ಬಾಲ ಮುಕುಂದ ಮಾಧವನೆನ್ನಿರೊ ಧ್ರುವ ಉದಯಕಾಲದಲಿ ಅನಂತಮಹಿಮನೆನ್ನಿ ಮಧ್ಯಾಹ್ನದಲಿ ಪದ್ಮನಾ¨sನೆನ್ನಿ ಸಂಧ್ಯಾಸಾಯಂಕಾಲದಲಿ ಶ್ರೀಧರನೆನ್ನಿ ಸದಾ ಕಾಲದಲಿ ಶ್ರೀ ಹರಿಯೆನ್ನಿರೊ 1 ಏಳುತ ಮಚ್ಛಾವತಾರ ಅಚ್ಯುತನೆನ್ನಿ ಮಲಗುತ ಶೇಷಶಯನನೆನ್ನಿರೊ ಹೇಳುತ ವಿಷ್ಣುವರಾಹವತಾರನೆನ್ನಿ ಕೇಳುತ ಕೃಷ್ಣಾವತಾರನೆನ್ನಿ 2 ನಡೆಯುತ ಸುಗುಣ ನಿರ್ಗುಣ ಸರ್ವೋತ್ತಮನೆನ್ನಿ ನುಡಿಯುತ ನಾರಯಣನೆನ್ನಿರೊ ಮಾಡುತ ಕೃಷ್ಣನಿರ್ಮಿತ ದಾಮೋದರನೆನ್ನಿ ಕೂಡುತ ಕೂರ್ಮಾವತಾರನೆನ್ನಿ3 ಆಡುತ ಗರುಡವಾಹನ ತ್ರಿವಿಕ್ರಮನೆನ್ನಿ ಬೇಡುತ ಸ್ವಾಮಿ ವಾಮನನೆನ್ನಿರೊ ನೋಡುತ ವಾರಿಜನೇತ್ರ ಪ್ರಸಿದ್ದನೆನ್ನಿ ಪಾಡುತ ಪರಮಾತ್ಮನೆನ್ನಿರೊ 4 ಉದ್ಯೋಗದಲಿ ಸಹಕಾರನಿರುದ್ದನೆನ್ನಿ ಉದರ ಕಾಯದಲಿ ಉಪೇಂದ್ರನೆನ್ನಿ ಮೇದಿನೊಯೊಳು ಹರಿಮಧುಸೂದನನೆನ್ನಿ ಆದಿ ಅಂತಿಮ ಅಧೋಕ್ಷಜನೆನ್ನಿರೊ 5 ಹೃದಯಕಮಲದೊಳು ಹೃಷೀಕೇಶನು ಎನ್ನಿ ಶಬ್ದಜಿಹ್ವೆಲಿ ಜನಾರ್ಧನನೆನ್ನಿರೊ ಬುದ್ಧಿಯಲಿ ಸಿದ್ಧಬೌದ್ದಾವತಾರನೆನ್ನಿ ಅದಿಅನಾದಿ ಗೋವಿಂದನೆನ್ನಿ 6 ಅನುದಿನ ಮನದೊಳು ಘನಮಹಿಮನು ಎನ್ನಿ ತನುವಿನೊಳು ಪುರುಷೋತ್ತಮ ನಾನೆನ್ನಿ ಅನ್ನವುದಕ ಸೇವಿಸುವ ಹರಿಭೋಕ್ತನೆನ್ನಿ ಘನಭೂಷಣದಿ ಸಂಕರುಷಣನೆನ್ನಿ 7 ಸತಿಪತಿ ಸಂಯೋಗದಲಿ ಪ್ರದ್ಯುಮ್ನನೆನ್ನಿ ಪತಿತಪಾವನ ಪರಬ್ರಹ್ಮನೆನ್ನಿ ಭಕ್ತವತ್ಸಲ ನರಸಿಂಹಾವತಾರನೆನ್ನಿ ಮುಕ್ತಿದಾಯಕ ದೇವೋತ್ತಮನೆನ್ನಿರೊ 8 ಪಾವನಮೂರುತಿ ಪರಶುರಾಮನೆನ್ನಿ ಜೀವಸಂಜೀವ ಶ್ರೀ ರಾಮನೆನ್ನಿ ಭವಭಯನಾಶ ಕಲ್ಕ್ಯಾವತಾರನೆನ್ನಿ ಮಹಿಪತಿಗುರು ವಾಸುದೇವನೆನ್ನಿ 9
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಕೌಸಲ್ಯಾಗರ್ಭಾಬ್ಧಿಸೋಮಾ ಸ್ವಾ'ು ಕೌಶಿಕ ಮಖಪಾಲ ರಾಮ ಪಆಶಯೇಶಯ ಜನಕ ಪಾಪ'ನಾಶ ತಾಪಸಹೃದಯ ಕಮಲಾವಾಸ ಭದ್ರ ಗರೀಶ ರಘುಕುಲಭೂಷ ದಶ'ಧ ವೇಷಧಾರಿ 1ತೃತಿಯರಾಮಕೋಟಿ ಕೂಡು ಭಕ್ತತತಿಗೆ ಲಭಿಸುವಂತೆಮಾಡುಪತಿತಪಾವನ ಪದ್ಮನಯನ ಶತಧೃತಿ ಶಿವಸೇವ್ಯಚರಣಾಸತತವೂ ತವಸೇವೆಗೆ ಮನ 'ತವತೋರಿಸಿ ಸಲಹೋ ಶೌರಿ 2ಭರತಪೂರ್ವಜ ದೀನಪ್ರೇಮಾ ದನುಜಹರಣಧುರೀಣ ನಿಸ್ಸೀಮಕರಿಧ್ರುವ ಪ್ರಹ್ಲಾದ ಶಬರೀ ನರಸತಿಪರಮಾರ್ಥದಾಯಕನಿರುಪಮಾನದ ರಾಮಕೋಟಿಯಾಚರಣ ಕೀರ್ತಿಯ ನಿಲಿಸು ಧೊರೆಯೆ 3ಧಾರುಣೀ ಚನ್ನಪಟ್ಣೇಶಾ ಲಕ್ಷ್ಮೀನಾರಾಯಣ ಕಾಯೊ ಶ್ರೀಶಾಮಾರಸುಂದರ ರಾಮನಾಮವ ಹಾರವಾಯಾಗಿ ಸಮರ್ಪಿಸಿದೆವುಕೋರಿಕೆ ಸಪ್ತೋತ್ಸವಂಗಳು ಪೂರ್ತಿಮಾಡುವರೆಂದು ನಂಬಿದೆ 4ಗುರುತುಲಸೀರಾಮಸ್ವರೂಪ ನಿಮ್ಮಕರುಣದಿಂದಲಿಸಾರಿಭೂಪಾಜರುಗಿಸಿದಿರೀ ಜಪಾಧ್ವರವನು ಮುರಹರೀಮದ್ದುರಿತ ಹರಣನೆನಿರತಭಕ್ತಿಯ ಕೊಟ್ಟು ಪ್ರಜಗಳುನುದ್ಧರಿಸುವ ಕರ್ತವ್ಯ ನಿನದೇ 5ಭೂ'ುಜನರ ಗರುಡುತುರಗಾ ರಂಗಸ್ವಾ'ುದಾಸೊಲ್ಲಾಸಾ ಈಗಪ್ರೇಮ ತೋರಿಸಬೇಕು ಬೇಡುವೆ ಕಾ'ುತಾರ್ಥದ ಕಲ್ಪಭೂಜಸೋಮಜಿತಮುಖ ಸಕಲ ಸುಗುಣಸ್ತೋಮ ತುಲಸೀದಾಮ ಧರಣಾ * 6* 20-8-1933 ಎಂದು ದಿನಾಂಕ ಇದೆ.(ಈ) ರಂಗಸ್ವಾ'ುದಾಸರನ್ನು ಕುರಿತ ಕೆಲವು ಕೃತಿಗಳು
--------------
ಮಳಿಗೆ ರಂಗಸ್ವಾಮಿದಾಸರು
ಗಣಾಧೀಶ ಗೌರೀಶ್ ವಾಗೀಶ ಶ್ರೀಶಾನ'ುಸಿ ಬೇಡುವ ಪ್ರಸಾದವನು ಜಗದೀಶಾನೆಲಸಿ ಹೃದಯದಿ ಬಂದು ನುಡಿಸು ದಯದಿಂದಾನೀ ನುಡಿಸಿದಂತೆ ನುಡಿಯುವೆ ಸ್ಪೂರ್ತಿುಂದಾ 1ದೇಹ ದೇವಾಲಯವು ದೇವರೊಳಗಿಹನುಮನದ ಗರ್ಭಾಲಯದಿ ಮಲಗಿಕೊಂಡಿಹನುನಾಲಿಗೆಯ ನಾಮಗರ್ಜನೆಯ ಬಲದಿಂದಾಮನದ ಕದ ತೆಗೆಯೆ ಕಾಣುನನು ಗೋ'ಂದಾ 2ಮನವೆ ಕಾರಣವು ಬಂಧಮೋಕ್ಷಗಳಿಗೆಮನವೆ ಕಾರಣ'ಲ್ಲಿ ಸುಖದುಃಖಗಳಿಗೆಮನಸು ಬಿಗಿ'ಡಿದ್ಹಿಡಿದು 'ಷಯಗಳ ತ್ಯಜಿಸುಮನತು ನಾಮಸ್ಮರಣೆಯೊಳು ಸದಾ ಇರಿಸು 3ಯಾವಾಗಲೂ ರಾಮ ನಿನ್ನೊಳಗೆ ಇರುವಾಭಾವದಿಂದಲಿ ಕರೆಯೆ 'ಒ' ಎಂದು ಬರುವಾದೇವರನು ನಂಬಿದರೆ ಸರ್ವದಾ ಕಾವಾಯಾವ ಅಂಜಿಕೆಯು ನಿನಗಿಲ್ಲ ತಿಳಿ ಜೀವಾ 4ನಿನ್ನೊಳಗೆ ನೀ ನಿನ್ನ ರಾಮನನು ನೋಡುನಿನ್ನ ಬೇಡಿಕೆಗಳನು ರಾಮನಲಿ ಬೇಡುಅನ್ಯರನು ಅಲಕ್ಷಿಸದೆ ಭಜನೆಯನು ಮಾಡುಪುಣ್ಯವಂತರ ಸಂಗದೊಳು ಸದಾ ಕೂಡು 5ಶ್ರವಣ ಭಕ್ತಿಯು ಬೇಕು ಮೊದಲು ಚೆನ್ನಾಗಿಶ್ರವಣವಾಗುವವರೆಗೆ ನಾದತಾನಾಗಿಭವ ಸಮುದ್ರವನು ದಾಟುವಡೆ ಸುಖವಾಗಿಶ್ರವಣವೇ ಮುಖ್ಯ ಸಾಧನವು ನಿಜವಾಗಿ 6ನಾದ ಹುಟ್ಟಿದ ಮೇಲೆ ನಾಮ ಕೀರ್ತನವುನಾಮ ಕೀರ್ತನದಿ ಅಸ್ಪಷ್ಟ ದರುಶನವುನೇಮ ಹೆಚ್ಚಾದಂತೆ ಸ್ಮರಣೆ ಶಾಶ್ವತವುಸ್ಮರಣೆಯೊಳು ಸಂಪೂರ್ಣ ವಸ್ತುದರುಶನವು 7ಅನನ್ಯ ಭಕ್ತಿಯ ಬಲವ ಬಣ್ಣಿಸುವದೇನುಕಣ್ಮುಂದೆ ಸರ್ವದಾ ಹರಿಯು ಕುಣಿಯುವನುಕಣ್ಣು ಮುಚ್ಚಣಿಕೆಯಾಟವನು ಆಡುವನುಅಣುರೇಣು ಪರಿಪೂರ್ಣನಾಗಿ ತೋರುವನು 8ಕುಣಿಯುವನು ಕುಣಿಸುವನು ನಗುತ ನಲಿಸುವನುದಣಿಯುವನು ದಣಿಸುವನು ಉಣುತ ಉಣಿಸುವನುಜನರಿಗದ್ಭುತ ಚಮತ್ಕಾರ ತೋರುವನುಕ್ಷಣ ಬಿಡದೆ ಕೆಳಗಿಳಿಯದಂತೆ ಕಾಯುವನು 9ದೇವರನು ನಂಬಿ ಕೆಡಕಾದವರು ಇಲ್ಲಜದೇವರನು ಬಿಟ್ಟು ಸುಖಹೊಂದಿದವರಿಲ್ಲಾದೇವರನು ಒಲಿಸುವೆಡೆ ಭಾವ'ರಬೇಕುಭಾವ'ಲ್ಲದ ಢೋಂಗಿನರ್ಚನೆಯು ಸಾಕು 10ಚಿನ್ನ ಬೆಳ್ಳಿಗಳ ಮಂಚಪವು ಬೇಕಿಲ್ಲಾಸಣ್ಣಕ್ಕಿ ಅನ್ನ ಪಕ್ವಾನ್ನ ಬೇಕಿಲ್ಲಮಣ್ಣು ಕುಳ್ಳಿಯೊಳು ಒಣ ಅಂಬಲಿಯು ಸಾಕುಘನ್ನ ಮ'ಮನಿಗೆ ನಿರ್ಮಲ ಭಕುತಿ ಬೇಕು 11ಶ್ರವಣ ಭಕ್ತಿಯ ದಾಟದವನು 'ಸಾಧಕ' ನುಪಾದಸೇವನದಿಂದ 'ಸಾಧು' ಆಗುವನುದಾಸ್ಯ ಭಕ್ತಿಯ ಮುಂದೆ 'ಸಿದ್ಧ' ನಾಗುವನುಸಖ್ಯಭಕ್ತಿಯ ಮುಂದೆ 'ಗುರು'ವು ಆಗುವನು 12ಭಕ್ತಿ ಮಾರ್ಗವು ಬಹಳ ಸುಲಭ ಸಾಧನವುಭಕ್ತಿ ಸರ್ವರಿಗೆ 'ಷಯದೊಳು ಪರಿಚಿತವು'ಷಯದೊಳಗಿನ ಪ್ರೀತಿ ಎಳೆದೆಳೆದು ತೆಗೆದುಪರಮಾತ್ಮನೊಳು ಇಡಲು ಭಕ್ತಿಯಾಗುವದು 13ಉಂಡದ್ದು ಶ್ರೀ ಹರಿಗೆ ನೈವೇದ್ಯವೆನ್ನುಕಂಡದ್ದು ಶ್ರೀ ಹರಿಯ ಪ್ರತಿರೂಪವೆನ್ನುಮಲಗಿದ್ದು ಶ್ರೀ ಹರಿಗೆ ಸಾಷ್ಟಾಂಗವೆನ್ನುಸುಲಭ ಪೂಜೆಯ ಮರ್ಮವೆನು ತಿಳಿದು ನೀನು 14ಸಾಲವನು ಮಾಡಿ ಹೋಳಿಗೆ ಹೊಡಿಯಬೇಡಾಜೇಲಿಗಂಜುತ ದೇಶಕಾರ್ಯ ಬಿಡಬೇಡಾಆಲಸ್ಯದಲಿ ಕಾಲವನು ಕಳಿಯಬೇಡಾಕೆಲಸದಲಿ ಕೀಳು ಮೇಲೆಂದು ಅನಬೇಡಾ 15ಸ್ವಚ್ಛ'ರಬೇಕು ಮನಬುದ್ಧಿ ದೇಹದೊಳುಅಚ್ಚುಕಟ್ಟಿರಬೇಕು ಸರ್ವಕಾರ್ಯದೊಳುಎಚ್ಚರಿರಬೇಕು ಜನಪಾತ್ರೆ ರಾತ್ರಿಯೊಳುಬಿಚ್ಚು ಮನ'ರಬೇಕು ಸ್ವಜನ 'ುತ್ರರೊಳು 16ಬಡತನವು ಬಂದಾಗ ಧೈರ್ಯ ಬಿಡಬೇಡ'ಡಿದು ನೆಂಟರ ಮನೆಯ ನೀ ಕೂಡಬೇಡದುಡಿದು ತಿನ್ನಲು ಸ್ವಲ್ಪ ಸಹ ನಾಚಬೇಡಮಡದಿ ಹುಟ್ಟಿದ ಮನೆಯ ನೀ ಸೇರಬೇಡಾ 17ಗಾಜಕಾರಣದೊಳು ' ಮುಚ್ಚುಮನ' ಬೇಕುಧರ್ಮಕಾರಣದೊಳಗೆ 'ಸ್ವಚ್ಛಮನ' ಬೇಕುಅರ್ಥಕಾರಣದೊಳಗೆ ' ಮೆಚ್ಚುಮನ'' ಬೇಕುಕಚ್ಚೆಕೈಗಳು ಸದಾ ಸ್ವಚ್ಛ'ರಬೇಕು 18ಸಂಸಾರ ಮಾಡುವಡೆ ಧನವ ಸಂಗ್ರ'ಸುಸನ್ಯಾಸಿಯಾಗುವೆಡೆ ವೈರಾಗ್ಯ ಬೆಳೆಸುಸರ್ವಕರ್ಮಗಳಲ್ಲಿ ಶ್ರೀಹರಿಯ ಸ್ಮರಿಸುಸರ್ವದಾ ಸಂತ ಸಂಗದೊಳು ಸಂಚರಿಸು19ಸಂತ ಸಂಗದೊಳು ಸಂಚರಿಸುವುದು ಸ್ನಾನಾಸಂತ ವಚನಾಮ್ರತದ ಪಾನವೇ ಸ್ನಾನಾಸಂತರನು ಸಂತೋಷಪಡಿಸುವುದು ಸ್ನಾನಾಶಾಂತಮನದಿಂ ಹರಿಯ ಚಿಂತಿಪುದ ಸ್ನಾನಾ 20ಬಾಲ್ಯದಲಿ ಬ್ರಹ್ಮಚರ್ಯದಿ ಬಲವ ಬೆಳೆಸುತಾರುಣ್ಯದಲಿ ದುಡಿದು ಧನವ ನೀ ಗಳಿಸುವೃದ್ಧಾಪ್ಯದೊಳು ಸದಾ ಶ್ರೀಹರಿಯ ಸ್ಮರಿಸುಶ್ರೀಹರಿಯ ಸ್ಮರಣೆಯೊಳು ಆಯುಷ್ಯ ಸವೆಸು 21ಮೊದಲು ನಿನ್ನ ಪ್ರಯತ್ನ ತಪ್ಪದೆಲೆ ಮಾಡುಅದು ನೀಗದಿರೆ ಮುಂದೆ ದೈವವನು ನೋಡುಮದುವೆಯಾಗುವ ಮೊದಲು ತಿಳಿತಿಳಿದು ನೋಡುದುಡಿದು ಧನ ಗಳಿಸಿ ಸುಖದಿಂದ ಬಾಳುವೆ ಮಡು 22ಧನ'ಲ್ಲದವನ ಸಂಸಾರ ಸುಖವಲ್ಲಾಮನೆಯೊಳಗೆ ನಿತ್ಯ ಕಿರಿಕಿರಿಯು ತರವಲ್ಲಾದನದಂತೆ ಹೆಣ್ಣು ನುಡಿಯುವುದು ಸರಿಯಲ್ಲಾಎಣಿಕೆುಲ್ಲದೆ ಮಕ್ಕಳಾಗುವುದು ಸಲ್ಲಾ23ನೆಂಟರೊಳು ಬಹುದಿನ ಕೆಳಗಿರಬೇಡಾ'ಫ್ರಂಟಸೀಟಿ'ನ ಮೇಲೆ ನೀ ಕೂಡಬೇಡಾಒಂಟಿಯಲಿ ಹೆಂಡತಿಯ ಬಿಟ್ಟು ಇರಬೇಡಾಗಂಟು ಒಬ್ಬರ ಕೈಗೆ ಕೊಟ್ಟು ಆಳಬೇಡಾ 24ನಿನ್ನಂತೆ ತಿಳಿ ಪರರ ಸುಖ ದುಃಖಗಳನುಅನ್ಯಥಾ ನೋಡದಿರು ಅಣ್ಣ ತಮ್ಮರನುಸರ್ವಥಾ ಸ'ಸದಿರು ಅನ್ಯಾಯಗಳನುತಿಳಿಯದೇ ಹಳಿಯದಿರು ಭಿನ್ನ ಮತಗಳನು 25ಅತಿ ಮತುಗಳು ಬೇಡ ಅತಿ ಮೌನ ಬೇಡಾಅತಿ ತಿನಸು ಬೇಡ ಅತಿ ಉಪವಾಸ ಬೇಡಾಅತಿ 'ಹಾರವು ಬೇಡ ಅತಿ 'ನಯ ಬೇಡಾಅತಿ ಉದಾರತೆ ಬೇಡ ಜೀನತನ ಬೇಡಾ 26ಭೂ'ುಂಗೆ ಭಾರವಾಗುತ ತಿರುಗಬೇಡಾಕೂಳಿಂಗೆ ಕಾಳಾಗಿ ನೀ ಕೂಡಬೇಡಸಾಲ ಸಿಗುವಾಗ ಸಂತೋಷ ಪಡಬೇಡಾಸಾಲವೇ ಶೂಲವೆಂಬುದು ಮರೆಯಬೇಡಾ 27ಹನಿಗೆ ಹನಿ ಕೂಡಿದರೆ ಹಳ್ಳದಾಗುವುದುತೆನಿಗೆ ತೆನಿ ಕೂಡಿದರೆ ರಾಶಿಯಾಗುವುದುಕ್ಷಣಬಿಡದೆ ಕಂಡಲ್ಲಿ 'ದ್ಯೆಯನು ಗಳಿಸುಕಣಬಿಡದೆ ಧನ ಧಾನ್ಯಗಳನು ಸಂಗ್ರ'ಸು 28ಮಾತು ಕೃತಿಗಳಿಗೆ ಬಲು ಮೇಳ'ರಬೇಕುನೀತಿಯೊಳು ತನ್ನ ಮನಸಾಕ್ಷಿ ಇರಬೇಕುಮಾತು ಬಲು ಸ'ುದ್ದು ಸತ್ಯ'ರಬೇಕುಸತ್ಯ'ಲ್ಲದ ಸುಳ್ಳು ಸ' ಮಾತು ಸಾಕು 29ಐಕ್ಯ'ದ್ದರೆ ಸೌಖ್ಯ ಭೇದದೊಳು ಬೇದಾಐಕ್ಯ'ದ್ದರೆ ಬಲವು ಕ್ಷಯಬೇನೆ ಭೇದಾಐಕ್ಯ'ದ್ದರೆ 'ಗ್ಗು ಭೇದದೊಳು ಕುಗ್ಗುಐಕ್ಯದಿಂದ ಸ್ವಾತಂತ್ರ್ಯ ರಥವನ್ನು ಜಗ್ಗು 30ತನ್ನ ಅಭಿಮಾನ ತನ್ನವರ ಅಭಿಮಾನತನ್ನ ಕುಲಗೋತ್ರ ಜಾತಿಯ ಸ್ವಾಭಿಮಾನತನ್ನ ಭಾಷಾರಾಷ್ಟ್ರ ಧರ್ಮಾಭಿಮಾನಮಾನವನಿಗಿರಬೇಕು ಇಲ್ಲದವ 'ಶ್ವಾನಾ' 31ತನ್ನತನ ಬಿಡಬೇಕು ತನ್ನವರಿಗಾಗಿತನ್ನವರ ಕುಲಗೋತ್ರ ಜಾತಿಗಳಿಗಾಗಿ ಕುಲಗೋತ್ರ ಜಾತಿಗಳ ತಾಯ್ನಾಡಿಗಾಗಿತಾಯ್ನಾಡು ನುಡಿಧರ್ಮ ಪರಮಾತ್ಮಗಾಗಿ 32ತನ್ನ ಉದ್ಯೋಗ ಮನಮುಟ್ಟಿ ಮಾಡುವರುಉಣಲು ಅಧಿಕಾರ ಆಮೇಲೆ ದೊರಕುವದುಉಣುವಾಗ ಶ್ರೀಹರಿಯ ಸ್ಮರಣೆ ಮಾಡುವದುಮನೆಯೊಳಗೆ ಶಿಸ್ತು ಶಾಂತಿಗಳ ಕಾಯುವದು33ಹರಿಕಥಾ ಕೀರ್ತನ ಪುರಾಣ ಪಠಿಸುವದುಸರಸ ವಾಙ್ಮಯದ ಅಭ್ಯಾಸ ಮಡುವದುತರು ಬರುವ ತನ್ನ ವ್ಯವಹಾರ ನೋಡುವದುಪರ ಪರಿಸ್ಥಿತಿಗಳನು ತೂಗಿ ನೋಡುವದು 34'ಶ್ರಾಂತಿ ಅಭ್ಯಾಸಿ ಸರಸ ಸಲ್ಲಾಪನಿಶ್ಚಿಂತೆುಂದ ನಿದ್ರೆಯು ಸೌಖ್ಯರೂಪನಿತ್ಯ ಮಾನವನ ದಿನಚರಿಯ ಈ ರೂಫನಿಶ್ರೇಯಸಕೆ ಸುಲಭ ಸಾಧನವು ಭೂಪಾ 35ಸ್ವಚ್ಛ ಹವೆ ನೀರು ವ್ಯಾಯಾಮ 'ಶ್ರಾಂತಿಸಾತ್ವಿಕ ಸಸತ್ವಾನ್ನ ಪಾನಗಳ ಪ್ರೀತಿಉಚ್ಚತಮ ಧ್ಯೇಯ ಆಚರಣೆಗಳ ರೀತಿಮೋಕ್ಷಕ್ಕೆ ಸಾಧನವು ಇಹದಿ ಸಂತೃಪ್ತಿ 36ದೇಹ ಬಿದ್ದರೆ 'ಂದೆ ಕೀರ್ತಿುರಬೇಕುಕೀರ್ತಿ ಬರುವಂಥ ಕಾರ್ಯವ ಮಾಡಬೇಕುಕಾರ್ಯದೊಳು ಕುಶಲತನ ದಕ್ಷತೆಯು ಇರಬೇಕುಫಲವು ಪರಮಾತ್ಮನಾಧೀನವೆನಬೇಕು 37ಸರ್ವದಾ ಸುಖವೆ ಇದ್ದವರು ಯಾರುಂಟುಅವರವರ ಕರ್ಮ ಫಲವೇ ಅವರ ಗಂಟುಬೆಳತು ಕತ್ತಲೆಯಂತೆ ಚಕ್ರ ಆರುಗುವದುಸುಖ ದುಃಖ ಬರುವಾಗ ಬಂದು ಹೋಗುವುದು 38ಅನುಭವದಿ ಹೆಚ್ಚು ಸಾಧನ ಬೆಳೆಯಬೇಕುಅನುಭವದ ಮಾತುಗಳು ಬಚ್ಚಿಡಲು ಬೇಕುಅನುಭವವು ಬಂತೆಂದು ಗರ್ವ ಪಡಬೇಡಾಗರ್ವದಿಂದಲಿ ಮತ್ತೆ ಕೆಳಗಿಳಿಯ ಬೇಡಾ 39ಅಡಗಿ ಅಂಬಲಿ ಅರ' ಅಂಚಡಿಯ ಕಡೆಗೆಹುಡುಗರ ಬಲಾರೋಗ್ಯ ನಡೆನುಡಿಯ ಕಡೆಗೆಕಡು ಚಾಣ್ಮೆುಂದ ನೋಡುವದು ಸತಿ ಪತಿ ಕೆಲಸಾ 40ಪತಿುಂದಲೇ ಸತಿಯು ಸತಿುಂದ ಪತಿಯುಸತಿಪತಿಯ ಪ್ರೇಮದಿಂದಾತ್ಮದುನ್ನತಿಯುಪತಿಯ ಕೋಪದಿ ಕಲ್ಲು ಆಗುವಳು ಸತಿಯುಸತಿಯ ಶಾಪದಿ ಕತ್ತೆಯಾಗುವನು ಪತಿಯು 41ಸಾ'ಗಂಜಲು ಬೇಡ ಸಾ'ಗಳಬೇಡಾಸಾವು ಅಂದರೆ ಭಯಂಕರ ತಿಳಿಯಬೇಡಾದೇಹಕ್ಕೆ ಬಾಲ್ಯ ಯೌವನ ಮುಪ್ಪಿನಂತೆದೇಹಾಂತರ ಪ್ರಾಪ್ತಿಯೇ ಮರಣಗೀತೆ 42'ದ್ಯಾರ್ಥಿ ಬಡವನಿದ್ದರೆ ಭಿಕ್ಷೆನೀಡುಅಶನಾರ್ಥಿ ಟೊಣಪನಿದ್ದರೆ ದೂರ ಮಾಡುಹಸಿವೆ ಚೆನ್ನಾಗಿ ಇದ್ದರೆ ಊಟ ಮಾಡುಹಸಿಯು ಸಾಕಷ್ಟು ಇದ್ದರೆ ಬಿತ್ತಿನೋಡು43ಶುದ್ಧ ಆಚರೆಣೆುದ್ದರೆ ಮಾತನಾಡುಬುದ್ಧಿ ಬಲು ಚುರುಕು ಇದ್ದರೆ ವಾದ ಮಡುದುಡ್ಡು ರಗಡಿದ್ದರೆ ಘಡಾಮೋಡ ಮಾಡುಜಡ್ಡು ಇದ್ದರೆ ಪಥ್ಯದುಪವಾಸ ಮಾಡು 44ಹಾಳುಹರಟೆಯ ಬಿಟ್ಟು ಶ್ರೀ ಹರಿಯ ಸ್ಮರಿಸುಕಾಲುವನು ನೋಡಿ ಸತ್ಕರ್ಮ ಆಚರಿಸುನಾಳೆ ಮಾಡುವೆನೆಂಬ ಮಾತು ದೂರಿರಿಸುನಾಳೆ ಮಾಡುವ ಧರ್ಮ ಇಂದು ನೀ ಮುಗಿಸು 45ಮನ ಮುಟ್ಟಿ ಸ್ಮರಣೆ ಸಂತತ ಮಾಡಬೇಕುಮನಸು ಓಡಲು ಮತ್ತೆ ಜಗ್ಗಿ ತರಬೇಕುಅನುಭವವು ಬಂದಂತೆ ಮನಸು ಕರಗುವದುಮನಸು ಕರಗಿದರೆ ವಾಸನೆಯು ಅಳಿಯುವದು 46ಎಲ್ಲ ಕಡೆಯಲಿ ಇರುವನೊಬ್ಬನೇ ದೇವಎಲ್ಲ ನಾಮಗಳಿಂದಲೂ ಕರೆಸಿಕೊಳುವಾಯಾವ ಬೇಕಾದ ಹೆಸರಿನ ದೇವರನ್ನುಭಕ್ತಿುಂ ಭಜಿಸಿದರೆ ಬಂದು ಪೊರೆಯುವನು47ಧನಕನಕದಾಶೆಯನು ತೊರೆದವನು ಸಂತವನಿತೆಯರ ಬಲೆಯೊಳಗೆ ಸಿಗದವನು ಸಂತಮನದಿ ಮಹಾದೇವನನು ಕಂಡವನು ಸಂತಜನರೊಳು ಜನಾರ್ಧನನ ನೋಡುವನು ಸಂತ 48ಘೋರ ಯುದ್ಧದಿ ನರನ ರಥವ ನಡೆಸಿಹನುಸೀರೆಯಾಗುತ ಸತಿಯ ಮಾನ ಉಳಿಸಿದನುನೀರಿನವನಾಗಿ ಎಂಜಲವ ಬಳಿದಿಹನುಪರಮ ಪುರುಷನ ಕರುಣೆಗೆಣಿಯು ಉಂಟೇನು 49ಹೃದಯ ದೊಳಗಿದ್ದ ಶ್ರೀಹರಿಯ ಮರೇತುಕಡುದ್ಯೆನ್ಯ ಬಿಡಬೇಡ 'ಷಯದೊಳು ಬೆರೆತುಕಾಮಧೇನು'ನ ಕೆಚ್ಚಲೊಳಿದ್ದ ನೀನುಅಮೃತವನು ಬಿಟ್ಟು ರತ್ನವನು ಕುಡಿವೆಯೇನು 50ಸರ್ವ ದುಃಖಗಳು ನಿರ್ಮೂಲವಾಗುವದುಸಂಸಾರ ಪರಮಾರ್ಥ ಕೂಡಿ ನಡೆಯುವವುಪ್ರಭು ರಾಮಚಂದ್ರನ ಪ್ರಸಾದ ಮ'ಮೆಯನುಪಠಿಸಿ ಆಚರಿಸಿದರೆ ಸುಖದಿ ಬಾಳುವನು 51ಜಯಜಯತು ಆರ್ಯ ಭೂಮತೆ 'ಖ್ಯಾತೆಜಯತು ಭಾರತಮಾತೆ ಸರ್ವಜನ ತ್ರಾತೆಜಯಜಯತು ಜಯ'ಂದ ಜನನಿ ಕಡು ಕರುಣಿಜಯ ಜಯತು ಸರ್ವ ಸಂಸ್ಕøತಿಯ ಮುಕುಟಮಣಿ 52ಅತಿಥಿ ಬಂದರೆ ಮನ ದೊಡ್ಡದಿರಲಿಒಣಹೆಮ್ಮೆ ಬೇಡ ಆದರದ ಮಾತಿರಲಿಮಾತು ಕೃತಿ ನಿಜ ಪ್ರೇಮ ತುಂಬಿರಲಿಊಟ ಉಪಚಾರದಿಂದ ಸಂತೋಷಗೊಳಲಿ 53ಗುಡಿಯೇಕೆ ಬೇಕು ಮನದೊಳಗೆ ಹರಿಯುಂಟುಅದರ ಕದ ತೆಗೆಯ ಪ್ರತಿಬಂಧವೇನುಂಟುಗುಡಿಯೊಳಗೆ ಹೊಗಿಸಬೇಕೆಂಬುವುದು ಛಲವುಛಲ 'ದ್ದರೇನದಕೆ ಆಧ್ಯಾತ್ಮ ಬೆಲೆಯು54ಮನ ಪ'ತ್ರ'ದ್ದರೆ ದೇವ ಒಲಿವಾಮನಸು ಅಪ'ತ್ರ'ದ್ದರೆ ದೇವ ಕುದಿವಾಮನ ಸುಪ್ರಸನ್ನ'ದ್ದರೆ ದೇವ ಒಲಿವಾಮನಸು ಧುಸುಮುಸು ಇದ್ದರೆ ದೇವ ಕುದಿವಾ 55ಮನಸು ನಿರ್ಭಯ'ದ್ದರಾ ದೇವ ಒಲಿವಾಮನಸು ನಿರ್ಮಲ'ದ್ದರಾ ದೇವ ಒಲಿವಾಮನಸು ನಿರಹಂಕಾರವಾದಾಗ ಬರುವಾಮನಸು ನಿಷ್ಕಪಟವಾದರೆ ಬಂದು ಪೊರೆವಾ 56ಅನ್ಯರಿಗೆ ನಿನ್ನ ಭಾರವ ಹಾಕಬೇಢನಿನ್ನ ಯೋಗ್ಯತೆ'ುೀರಿ ಭಾರ ಹೊರಬೇಡನಿನ್ನ ಮನೆತನದ ಜಗಳ ಬೈಲಿಗಿಡಬೇಡಹೆಣ್ಣು ಮಕ್ಕಳ ಮೇಲೆ ಕ್ಕೆ-ಎತ್ತಬೇಡ 57ನಿನ್ನ 'ರಿಮೆಯನು ನೀ ಹೇಳಬೇಡಅನ್ಯರನು ಕೀಳೆಣಿಸಿ ಮಾತಾಡಬೇಡಕಣ್ಮುಚ್ಚಿ ಇನ್ನೊಬ್ಬರನುಕರಣೆ ಬೇಡನಿನ್ನ ಸಂಸ್ಕøತಿಯ ವೈಶಿಷ್ಟ್ಯ ಬಿಡಬೇಡ 58ಸು'ಚಾರದಿಂದ ಧ್ಯೇಯವ ಗೊತ್ತುಪಡಿಸುಗೊತ್ತುಪಡಿಸಿದ ಧ್ಯೇಯವನ್ನು ನಿತ್ಯಸ್ಮರಿಸುಮುಟ್ಟಲಾ ಧ್ಯೇಯವನು ಶಕ್ತಿ ಸಂಗ್ರ'ಸುಶಕ್ತಿಯನು ಚಾತುರ್ಯದಿಂದ ನೀ ಬಳಿಸು 59ಸಮಯ ಪ್ರತಿಕೂಲ'ರೆ ವೈರಿಗಳ ನ'ುಸುನ'ುಸಿ ಒಳಹೊಕ್ಕವರ ಬಲವ ಹದಗೆಡಿಸುಶ್ರಮಪಟ್ಟು ಅ'ುತಬಲ ಗುಪಿತದಿಂ ಬೆಳಿಸುಸಮಯ ಸಾಧಿಸಿ ದುಷ್ಟಜನರನು ಸಂಹರಿಸು60ದೇಹದೊಳು ನೀನುಂಟು ದೇಹ ನೀನಲ್ಲನಾ ಎಂಬ ಜ್ಞಾನ ನಿನಗುಂಟು ಆದಕಿಲ್ಲನೀನು ಈ ದೇಹದಿಂದ ಹೊರಬೀಳಲಾಗಹೆಣವೆಂದು ಕರೆಯುವರು ದೇಹವನು ಬೇಗ 61ಹುಟ್ಟುವವ ನೀನಲ್ಲ ಹುಟ್ಟುವದು ದೇಹಬೆಳೆಯುವವ ನೀನಲ್ಲ ಬೆಳೆಯುವದು ದೇಹಸಾಯುವವ ನೀನಲ್ಲ ಸಾಯುವದು ದೇಹರೂಢಿಯೊಳು ನಿನಗಿದನು ಹಚ್ಚುವದು ಮೋಹ62ಖೋಡಿ ಮನವನು 'ಡಿದು ಸಾಧು ಮಡುವದುಸಾಧು ಮಾಡುತ ನಾಮ - ಘೋಷ ಹಚ್ಚುವದುಓಡಿ ಹೋಗಲು ಮತ್ತೆ ಎಳೆದೆಳೆದು ತಂದುಬೋಧಿಸುತ ನಾಮ ಜಪದೊಳು ಸೇರಿಸೆಂದು 63ಒಮ್ಮೆ ಹರಿನಾಮದೊಳು ಮನಸು ಸೇರಿದರೆಅದಕೆ ಆಗುವ ಸುಖವು ಆ ರುಚಿಯು ಬೇರೆಆ ರುಚಿಯ ಆ ಸುಖವು ಹತ್ತಿದರೆ ಮನಕೆತಿರುಗಿ ಎಂದಿಗೂ ಅದು ಹೋಗದದು 'ಷಯಸುಖಕೆ64ಚಿತ್ತ ಸ್ಥಿರ'ಲ್ಲದಿರೆ ಬುದ್ಧಿ ಸ್ಥಿರ'ಲ್ಲಬುದ್ಧಿ ಸ್ಥಿರ'ಲ್ಲದಿರೆ ಭಾವನೆಯು ಇಲ್ಲಭಾವನೆಯು ಇಲ್ಲದಿದ್ದರೆ ಶಾಂತಿುಲ್ಲ ಶಾಂತಿಯೇ ಇಲ್ಲದವ ಸುಖವೇನು ಬಲ್ಲ 65ಅನುಕೂಲ ಮತ ಮಾತ್ರ ನೀ ಎಣಿಸಬೇಡಪ್ರತಿಕೂಲ ಮತ ಉಪೇಕ್ಷೆಯ ಮಾಡಬೇಡಅನುಕೂಲ ಪ್ರತಿಕೂಲಗಳನು ತಿಳಿ ತಿಳಿದುಏನಾದರೊಂದು ಸಾಹಸ ಕಾರ್ಯ ಮಾಡು 66ಉದ್ಯೋಗದೊಳು ಸದಾ ಆನಂದ ಉಂಟುಉದ್ಯೋಗದೊಳಗೆ ಲಕ್ಷ್ಮಿಯ ವಾಸವುಂಟುಉದ್ಯೋಗವನು ಮಾಡಿ ದೇವರನು ಬೇಡುಉದ್ಯೋಗ ಬಿಟ್ಟು ಕುಳಿತರೆ ನಿನಗೆ ಕೇಡು 67ದೀರ್ಘ ಯೋಚನೆಯ ಮಾಡುತ ನೀ ಕೂಡಬೇಡಯೋಗ್ಯ ಮುಂಬೆಳಕು ಇಲ್ಲದೆ ಧುಮುಕಬೇಡ'ಗ್ಗಿ ಮೈಮರೆಯದಿರು ದೈವ ತೆರೆದಾಗಕುಗ್ಗಿ ಎದೆ ಒಡೆಯದಿರು 'ಧಿ ಕಾಡುವಾಗ 68ದೈವವನಕೂಲ'ದ್ದಾಗ ಎಚ್ಚರಿಕೆಗರ್ವ ಸೇರುವದು ತಿಳಿಯದಲೆ ಎಚ್ಚರಿಕೆಗರ್ವದಿ ಸ್ಮøತಿಗೆ ಸಮ್ಮೋಹವೆಚ್ಚರಿಕೆಸಮ್ಮೋಹದಿಂದ ಸರ್ವನಾಶ ಎಚ್ಚರಿಕೆ 69ದೈವ ಯತ್ನಗಳ ಗತಿ ಗಹನವಾಗಿಹುದುಒಬ್ಬೊಬ್ಬರನುಭವವು ಒಂದೊಂದು ಇಹುದುವಾದದಿಂ ಬಗೆಹರಿಯದಂಥ 'ಷಯ'ದುಇದರ ಹದ ತಿಳಿದು ಯತ್ನವಂ ಮಾಡುವದು 70ಜೋಲು ಮೋರೆಯ ಹಾಕಿ ನೀ ಕೂಡಬೇಡಕಾಲು ಅಪ್ಪಳಿಸಿ ಕೆಲಸಕೆ ಹತ್ತಬೇಡಸ್ಟೈಲು ಉಡುಗೆಯ ಉಟ್ಟುಕೊಂಡೋಡಬೇಡಮೈಲಿಗೆಯ ಮನದಿಂದ ಜಪ-ಮಾಡಬೇಡ 71ಕಾರ್ಯ ಮಾಡುವ ಜನಕೆ ಮರ್ಯಾದೆ ಮಡುಬಾಯಬಡುಕ ಜನರ ಕೃತಿಯನು ತಿಳಿದು ನೋಡುಧೈರ್ಯದಿಂ ದುರ್ಜನರ ಕೂಡ ಹೋರಾಡುಆರ್ಯ ಸಂಸ್ಕøತಿಯ ಸಂರಕ್ಷಣೆಯ ಮಾತು 72ಗುಣ ಕರ್ಮಗಳ ನೋಡಿ ಮಾನವನು ಮಾಡುಒಣ ಜನ್ಮ ಜಾತಿ ತುಸು ದುರ್ಲಕ್ಷ ಮಾಡುಗುಣ ಕರ್ಮದಿಂದ ಅತಿ ನೀಚನಾದವನುಜನುಮ ಮಾತ್ರದಿ ಹೇಗೆ ಶ್ರೇಷ್ಠನಾಗುವನು73ತಪ್ಪು ಇಲ್ಲದೆ ಕ್ಷಮೆಯ ಬೇಡುವವ ಮೂರ್ಖತಪ್ಪಿದರು ಒಪ್ಪಿದವನು ಕಡುಮೂರ್ಖತಪ್ಪು ಆಗುವದು ಮಾನವನ ಸಹಜಗುಣತಪ್ಪು ಒಪ್ಪುತ ತಿದ್ದಿಕೊಳ್ಳುವದು ಸುಗುಣ 74ನಿನ್ನ ಬಂಧುಗಳೆ ನಿನಗಾಗುವರು ಕೊನರೆಗೆಅನ್ಯರಿಗೆ ಆ ಕರುಳು ಬರುವದು ಹೇಗೆನಿನ್ನ ಬಂಧುಗಳೆಲ್ಲ ಮೂರ್ಖರೆನಬೇಡಅನ್ಯರಿಂದ ನೀ ಮೂರ್ಖನೆನಿಸಿಕೊಳಬೇಡ 75ಜನರ ಮನೆಗಳು ಬಹಳ ದಿವಸ ಇರಬೇಡಇರುವದೇ ಆದರವರಿಗೆ ಭಾರ ಬೇಡಅರಿತವರ ಕೆಲಸಗಳ ಮನೆಯಂತೆಮಡುಗೃಹದ ರೀತಿರಿವಾಜು ಕೆಡದಂತೆ ನೋಡು 76ದುಡ್ಡು ಇದ್ದಾಗ ಎಲ್ಲರ ಪ್ರೀತಿಯುಂಟುದುಡ್ಡು ಕಳಕೊಂಡು ಹೋದರೆ ಮೋರೆಗಂಟುದುಡ್ಡಿನಿಂದಲೆ ಜನರ ಬೆಲೆ ಕಟ್ಟಬೇಡದೊಡ್ಡ ಗುಣಗಳನರಿತು ನ'ುಸದಿರಬೇಡ 77ಧನದ 'ಷಯದಿ ಖಂಡ ತುಂಡ ಇರಬೇಕುಮನಬಿಚ್ಚಿ ಮೊದಲಿಗೆ ಮಾತಾಡಬೇಕುಒಣ ಮಬ್ಬುತನ ಮನದಮಂಡಿಗೆಯು ಬೇಡಕೊನೆಗೆ ಗುಣಗುಟ್ಟುತಲಿ ಹಳಹಳಿಸಬೇಡ 78ಯಂತ್ರಮಯ ಜೀವನದ ಯುಗವು ನಡೆದಿಹುದುಸ್ವಾತಂತ್ರ್ಯವೆಲ್ಲಿ ಬಡವರಿಗೆ ಉಳಿದಿಹುದುದ್ರವ್ಯಮಯವಾದ ವ್ಯವಹರ ಸಾಗಿಹುದುದೇವ ಧರ್ಮಕೆ ಅರ್ಧಚಂದ್ರ ಬಂದಿಹುದು 79ತಾಯ್ತನದ ಸುಖಕೆ ಸರಿಯಾದ ಸುಖ'ಲ್ಲತಾಯ್ತನದ ಕರುಳಿಂಗೆ ಬೆಲೆಯಂಬುದಿಲ್ಲತಾುಗಿಂದಧಿಕ ದೈವತವು ಬೇರಿಲ್ಲತಾಯ್ - ಸೇವೆಗಿಂದಧಿಕ ಪುಣ್ಯಾವೆ ಇಲ್ಲ 80ಚನ್ನಾಗಿ ಸಂಸಾರ ಮಾಡಬಲ್ಲವನುಸುಲಭದಿಂ ಪರಮಾರ್ಥವನು ಸಾಧಿಸುವನುಸಂಸಾರದೊಳಗಿದ್ದು ಸನ್ಯಾಸಿಯೆನಿಸುಸನ್ಯಾಸಿಯಾಗಿ ಸಂಸಾರದೊಳು ಈಸು81ಮನೆಯಲ್ಲಿಯೇ ಸ್ವರ್ಗ ಮನೆಯಲ್ಲಿಯೇ ನರಕಜಾಣರಿಗೆ ತಿಳಿಯುವದು ನೋಡಿದರೆ ಗಮಕಜಾಣ ಪ್ರೇಮಳ ಪತಿಯಮನೆ ಸತಿಗೆ ಸ್ವರ್ಗಕೋಣ ಕರ್ದಮ ಕಟುಕ ಪತಿುರಲು ನರಕ 82ಪತಿಯ ಮನ ಒಲಿಸಿ ಕೋತಿಯ ತೆರದಿ ಕುಣಿಸಿಅತ್ತೆ ಮಾವರು ಬಂಧುಬಳಗವನು ಹೊರನುಗಿಸಿಸ್ವೇಚ್ಛೆುಂ ಎದೆಮೆಟ್ಟಿ ಬೇರಿರುವ ಸೊಸೆಸೊಸೆಯಲ್ಲ ರಕ್ಕಸಿಯು ಕಿ'ಹೊಕ್ಕ ತೊಣಸಿ83ಸರ್ವದಾ ಸತ್ವಗುಣಿ ಶಾಂತ ನಿರುತಿಹನುರಾಜಸನ ಶಾಂತಿುಂ ಧಡಪಡಿಸುತಿಹನುಕಿರಿಕಿರಿಯು ತಾಮಸಿಗೆ ಬಿಟ್ಟುರುವದಿಲ್ಲಾತ್ರಿಗುಣಗಳ ದಾಟದಿದ್ದರೆ ಮೋಕ್ಷ'ಲ್ಲಾ 84ಅನ್ನದೊಳು ಮುಖ್ಯ ಸಾತ್ವಿಕ ಗುಣವು ಬೇಕುಸಂಪಾದನೆಯ ಮಾರ್ಗ ಸರಳ'ರಬೇಕುಸಂಸರ್ಗ ಸಂಸ್ಕಾರ ಸುಷ್ಟ'ರಬೇಕುಸಾತ್ವಿಕಾನಂದ ಮನದಿಂದ ಉಣಬೇಕು 85ಮೂಲ ಮನ'ಹುದು ಮೂರರೊಳೊಂದು ಪಾಲುಸನ್ನಿವೇಶಗಳಿಂದ ಮತ್ತೊಂದು ಪಾಲುತಿನ್ನುವಾ ಅನ್ನದಿಂದ ಉಳಿದೊಂದು ಪಾಲುಮೂರು ಕೂಡಿದ ಮನವೆ ನಿನಗೆ ಹರಿಗೋಲು86ಪ್ರಾರಬ್ಧವನುಭ'ಸಿ ತೀರಿಸಲು ಬೇಕುಅಪರೋಕ್ಷದಿಂದ ಸಂಚಿತ ಕಳಿಯಬೇಕುಸರ್ವದಾ ನಿರಪೇಕ್ಷ ಸತ್ಕರ್ಮ ಬೇಕುನಿರಭಿಮಾನದಿ ಕರ್ಮದ ಬೀಜ ಸುಡಬೇಕು87ದಯೆಯು ಧರ್ಮದಮೂಲ ದಯವಂತನಾಗುಭಯವು ದುಃಖದಮೂಲ ನಿರ್ಭಯನು ಆಗುಲೋಭ ಪಾಪದ ಮೂಲ ನಿರ್ಲೋಭಿಯಾಗುತ್ಯಾಗ ಪುಣ್ಯದ ಮೂಲ ತ್ಯಾಗಿ ನೀನಾಗು 88ನಿನ್ನ ಉದ್ಧಾರವನು ನೀ ಮೊದಲ ಮಾಡುಮನೆತನದ ಉನ್ನತಿಯಕಡೆಗೆ ನೀ ನೋಡುನಿನ್ನ ನೆರೆಹೊರೆ ಜನರ ಕಲ್ಯಾಣಮಾಡುಆಮೇಲೆ 'ಶ್ವದದ್ಧಾರ ಮಾತಾಡು 89ಹಳೆಯದಿದ್ದರೆ ಎಲ್ಲ ಒಳಿತು ಎನಬೇಡಹೊಸದೆಂಬ ಮಾತ್ರದಿಂದಲೆ ಹಳಿಯಬೇಡಒಳಿತು ಕೆಡಕುಗಳು ಎಲ್ಲದರಲ್ಲಿ ಇಹವುತಿಳಿದು ಉಪಯೋಗಿಸಿದರದು ಜಾಣತನವು 90ಕಾಲಮ'ಮೆಯ ಕಷ್ಟ ಬಂದಿತೆನಬೇಡಕಾಲಕ್ಕೆ ಹೆಚ್ಚಿನ ಮಹತ್ವ ಕೊಡಬೇಡಕಾಲ ನಿರ್ಮಾಣ 'ರಿಯರ ಕೈಯ್ಯೊಳಿಹುದುಎಂಥ 'ರಿಯರು ಅಂಥ ಕಾಲ ಬರುತಿಹುದು 91'ರಿಯರಾಚರಣಿಯಂ ಮನೆತನದ ಬೆಳಕು'ರಿಯರಾಚರಣೆುಂ ಮನೆತನಕೆ ಹುಳುಕು'ರಿಯರೇ ಕಾರಣರು ಮನೆಯ ಸುಸ್ಥಿತಿಗೆ'ರಿಯರೇ ಕಾರಣರು ಮನೆಯ ದುಸ್ಥಿತಿಗೆ 92ದೇಹವೇ ರಥವು ಸಾರಥಿಯು ಪರಮಾತ್ಮಜೀವ ಅರ್ಜುನ ಧರ್ಮ ಸಮ್ಮೂಡ ಆತ್ಮಸರ್ವ ಭಾವದಿ ಶರಣುಹೊಗು ಸಾರಥಿಗೆಸಾರಧಿಯು ಮುಟ್ಟಿಸುವ ನಿನ್ನ ಸದ್ಗತಿಗೆ 93ಜ್ಞಾನಪೂರ್ವಕ ''ತ ಕರ್ಮಗಳ ಮಾಡುಚಿತ್ತಶುದ್ಧಿಗೆ ಕರ್ಮಸಾಧನವು ನೋಡುಉದ್ದೇಶ ಪರಿಣಾಮಗಳ ತೂಕ ಮಾಡುಮೂಢತನ ರೂಢಿಗಳನರಿತು ಬಿಟ್ಟುಬಿಡು 94ಬಾಲಭಾವದಿ ದೇವರೊಳು ಹಟವಮಾಡುಬಾಲಭಾವದಿ ದೇವರೊಳು ಮಮತೆಮಾಡುಬಾಲಭಾವದಿ ದೇವರಿಗೆ ಬೇಡಿಕಾಡುಬಾಲಭಾವದಿ ನಿನ್ನ ಸರ್ವಸ್ವ ನೀಡು 95ಮಾತೃಭಾವದಿ ಅವನ ತೊಡೆಯ ಮೇಲಾಡುಮಾತೃಭಾವದಿ ನೀನು ವಾತ್ಸಲ್ಯ ಮಾಡುಮತೃಭಾವದಿ ತೂಗಿ ತೊಟ್ಟಿ ಮುದ್ದಾಡುಮಾತೃಭಾವದಿ ಬಿದ್ದು ಕಿರಿಕಿರಿಯಮಾಡು 96ಸಖ್ಯಭಾವದಿ ಹಾಲು ಮೊಸರೆರೆಯ ಬೇಕುಸಖ್ಯಭಾವದಿ ಬೆಣ್ಣೆ ಬಾಯ್ತುಂಬ ಬೇಕುಸಖ್ಯಭಾವದಿ ಕೊಳಲಿನೊಳು ಕುಣಿಯಬೇಕುಸಖನೆಂದು ಗೋಪಿಯಂದದಿ ಕುಣಿಸಬೇಕು 97ನಿನ್ನೊಳಗೆ ಆತನನು ನೀ ನೋಡಬೇಕುಅವನೊಳಗೆ ಸರ್ವವನು ನೀ ಕಾಣಬೇಕುತನ್ನತನ ಮರೆತು ಅವನೊಳು ಬೆರೆಯಬೇಕುಅವನ ಸೂತ್ರದ ಬೊಂಬೆ ನೀನಾಗಬೇಕು 98'ುೀನನಾದರೆ ಅವನ ಕಣ್ಣು ನೀನಾಗು ಕೂರ್ಮನಾದಾಗವನ ಬೆನ್ನು ನೀನಾಗುವರಾಹರೂಪದ ಹರಿಯ ಕೋರೆ ನೀನಾಗುನರಹರಿಗೆ ನೀ ಹದನವಾದ ನಖವಾಗು 100ವಟುವಾಮನಗೆ ಪಾದರಕ್ಷೆ ನೀನಾಗುದುಷ್ಟ ಸಂಹಾರಕನ ಪರಶು ನೀನಾಗುಅಟ'ವಾಸಗೆ ಬಿಲ್ಲುಬಾಣ ನೀನಾಗುದಿಟ್ಟ ಗೊಲ್ಲನ ಕರೆದ ಕೊಳಲು ನೀ ನಾಗು 101ಬುದ್ಧನಾದರೆ ಬುದ್ಧಿವಂತ ನೀನಾಗುಕಲ್ಕಿಯಾದರೆ ಚಲುವ ಕುದುರೆ ನೀನಾಗುಎಲ್ಲಿದ್ದರೂ ಅವನ ನೆರಳು ನೀನಾಗುಪ್ರಹ್ಲಾದ ದ್ರುವ ಅಂಬರೀಷ ನೀನಾಗು 102ಧನದೊಳಗೆ ಧನ ತವೋಧನನು ನೀನಾಗುಭಾಗ್ಯದೊಳು ವೈರಾಗ್ಯ ಭಾಗ್ಯವಂತನಾಗುಇಂದ್ರಿಯಂಗಳ ಜಯದಿ ನೀ ಶೂರನಾಗುಪಂಡಿತನು ತತ್ವದಾಚರಣೆಯೊಳು ಆಗು103ಸ್ವಾತಂತ್ರವೇ ಸ್ವರ್ಗ ಪರತಂತ್ರ ನರಕಮಾತೃಭೂ'ುಯ ಸೇವೆ ಮಡದವ ಶುನಕಪತಿತರುದ್ಧಾರ ಮಾಡುವದು ಸದ್ಧರ್ಮಪತಿತರನು ತುಳಿಯುವದು ಸೈತಾನಕರ್ಮ 104ಸಂಸಾರ ಸಾಗರವ ದಾಟಿಸಲು
--------------
ಭೂಪತಿ ವಿಠಲರು
ಗರುವ ರ'ತನ ಮಾಡು ಗುರುರಾಯನೇಸರ್ವದಾ ಮನದೊಳಗೆ ನಿಲ್ಲು ಮ'ಪತಿರಾಯ ಪಅಹಂಕಾರವನು ಅಳಿಸು ಮಮಕಾರವನು ಮರೆಸುಸಕಲಕ್ಕು ಶ್ರೀ ಹರಿಯ ಪ್ರೇರಣೆ ಎಂದೆನಿಸುಲಕು'ುವಲ್ಲಭನ ಕರೆತಂದು ಹೃದಯದಲಿ ನಿಲಿಸುಭಕುತಿಯನು ಹರಿಗುರುಗಳಲಿ ಸ್ಥಿರವಾಗಿ ಇರಿಸು 1ಆರು ಅರಿಗಳಗೆಲಿಸು ಮೂರುದಿನದಿನಬೆಳೆಸುಮೂರುರಾಶಿಯ ಬಿಡಿಸಿ ಮೂರು ವ್ರತ 'ಡಿಸುಮೂರಾರು'ಧ ಭಕುತಿ ಮೂರು ಕಾಲಕೆ ಕೊಟ್ಟುಮುರಾರಿ ಮೂರುತಿಯ ಮನದೊಳಗೆ ನಿಲಸು2ಮನಪ'ತ್ರವ ಮಾಡು ಮನದೊಳಗೆ ನೀಕೂಡುಮನದ ವ್ಯಕ್ತಿಗಳನು ಅಂತರಮುಖವ ಮಾಡುಜನುಮ ಜನುಮದಿ ಹರಿಯ ದಾಸರ ಮನೆಕಾಯ್ವಶುನಕನೆಂದೆನಿಸಿ ಭೂಪತಿ'ಠ್ಠಲನ ತೋರು 3
--------------
ಭೂಪತಿ ವಿಠಲರು
ಗುರು ಹೊಂದಿದವನೀಗ ಎಂದಿಗೂ ಕೆಡನುಮರಳಿ ಹುಟ್ಟಿದರೇನು ಗುರುವು ಕಾಯುವನು ಪ ಗುರು ಹೇಳಿದಂತಿರದೆ ಗುರು ಆಜ್ಞೆಯಂತಿರದೆಬರಿಯ ಪ್ರಾಪಂಚದ ನಡೆಯನೆ ನಡೆದುಮರೆತೆಯಾದರೇನು ಗುರು ಕರುಣ ತಾನದುವೆನರಕಕ್ಕೆ ಕಳುಹದೋ ಯಮನ ಸೇರಿಸದೋ 1 ತನ್ನ ಅವಗುಣದಿ ಜನ್ಮಗಳ ಸೇರಿದರೇನುಅನ್ಯಕೆ ಎಳಸದದು ಸೋಂಕಿನಲಿ ಮನವುಚೆನ್ನಾಗಿಯೇ ಗುರುದ್ವಾರವನು ಕಾದಿಹನುಭಿನ್ನಿಸದೆ ಪರತತ್ವ ಬೋಧೆ ಹೇಳುವನು 2 ಭ್ರಷ್ಟತ್ವದಿಂ ತನ್ನ ಪಾಪವನು ಉಣುತಲಿಹುಟ್ಟುತಿಹ ಹಂದಿ ಪಶುವಾಗಿ ತಾನುಘಟ್ಯಾಗಿ ನರಜನ್ಮ ಧರಿಸುತ್ತ ಕಡೆಯಲಿಶಿಷ್ಟ ಚಿದಾನಂದ ಬಗಳೆಯನು ಕೂಡುವನು 3
--------------
ಚಿದಾನಂದ ಅವಧೂತರು
ಗುರುವಿನ ಚರಣವ ನೆನೆವುತಲನುದಿನ ಪರದೊಳು ದೈವದ ನೆಲೆ ನೋಡು ಪ ಗುರುವಿನ ಕರುಣಕಟಾಕ್ಷವದಲ್ಲದೆ ನರರಿಗೆ ದೊರಕದು ಪರಸುಖವು ಹಿರಿಯರ ಅಭಿಮತವಿಲ್ಲದ ಗೃಹದೊಳು ಕರೆಕರೆಯಾಗಿದೆ ಕೌತುಕವು 1 ಸ್ಥಿರವಾಗಿ ನಿಲ್ಲದ ಮನವು ಭ್ರಮೆಯೊಳು ನೆರೆವುದು ತನ್ನೊಳು ಘಾತಕವು ಸೆರೆವಿಡಿಯಲು ಹರಿವಿಡಿದಿಹನಾತನ ತೊರೆವುದು ಭವಭಯ ಸೂತಕವು 2 ಯೋಗಿಯ ಹೃದಯದಿ ಸಕಲಾಗಮ ಸಮ ನಾಗಿಯೆ ತೋರ್ಪುದು ಧೃಢವಾಗಿ ಸಾಗರ ಸುತ್ತಿದ ಭೂಭಾಗದ ಸರಿ ಯೋಗಿಯ ದೃಷ್ಟಿಯೆ ಘನವಾಗಿ 3 ಬಾಗಿದ ಕಬ್ಬಿನ ಕೋಲೊಳು ರುಚಿಕರ ವಾಗಿಯೆ ತೋರುವ ಪರಿಯಾಗಿ ರಾಗಿಯ ಶಿಲೆ ತಾ ಬಳಲಿದೆನೆನುತಲೆ ಭಾಗೆಯ ಕೊಂಬುದೆ ಸಮವಾಗಿ 4 ನಂಬದಿರಂಬರ ವಾದಿಯ ಅಂಶಕ ತುಂಬಿದ ಕುಂಭ ದೃಢದಿಂದ ಅಂಬರದೊಳಗಣ ಮೇಘಕೆ ವಾಯುವು ಬೆಂಬಲವಾಗಿಹ ದಯದಿಂದ 5 ಸಂಭ್ರಮದಿಂದಲಿ ಗರ್ಜಿಸಿ ನಾಲ್ದೆಸೆ ಅಂಬಿಸಿ ಪೋಗುವ ಪರಿಯಿಂದ ಅಂಬುಜಭವ ಬರೆದಕ್ಷರ ಮಾಸಲು ಅಂಬರ ಬಯಲಹ ತೆರದಿಂದ 6 ಶುದ್ಧವಶುದ್ಧವು ಆಗಿಹ ಪೃಥಿವಿಯ ಬದ್ಧವಾಗಿಯೆ ತೊಳೆದವರಾರು ಅಬ್ಧಿಯ ಮಧ್ಯದಿ ಎದ್ದ ವಾರಿಗಳನು ತಿದ್ದಿಯೆ ಪಸರಿಸುವವರಾರು 7 ಇದ್ದರೆ ಸರ್ವರ ಭವನದೊಳಗ್ನಿಯ ಮೆದ್ದವ ಶುದ್ದವೆಂಬವರಾರು ಹೊದ್ದಿದ ಮೂರುತಿ ನಾಲ್ದೆಸೆಯೊಳಗಿರೆ ಬದ್ಧವಾಗಿಯೆ ಕಟ್ಟಿಕೊಳಲ್ಯಾರು 8 ಬಯಲೊಳಗಿರುತಿಹ ಬಹು ಝೇಂಕಾರವ ನಯದೊಳು ನೋಡಿದರೇನುಂಟು ಬಯಲೊಳು ಮೂರಕ್ಷರವನೆ ಬಿತ್ತಲು ಮೈಲಿಗೆ ತಳಿಸುವ ಬೆಳೆಯುಂಟು 9 ಸಿರಿ ಸೊಬಗನು ಜಯಿಸುವ ಹಯವನು ಏರುವ ಬಗೆಯುಂಟು ದಯದೊಳು ಶ್ರೀ ಗುರು ವಿರಚಿಸಿಯಿತ್ತರೆ ಕ್ರಮವಿಕ್ರಯದೊಳು ಫಲವುಂಟು 10 ಬೇಡನು ಸಲಹಿದ ಆಡು ತಾ ಯಾಗಕೆ ಬೇಡವೆಂಬವರಾರು ಶಾಸ್ತ್ರದಲಿ ಕಾಡಿನೊಳಿರುತಿಹ ಮೃಗವಾಲದ ಸಿರಿ ನೋಡು ನೀ ನಿತ್ಯದಿರಾಸ್ತ್ರದಲಿ 11 ಕೋಡಗನಾದರು ನೋಡಿಯೆ ಭಜಿಸಲು ಕೂಡುಗು ಹರಿಯ ಪರತ್ರದಲಿ ಕೂಡಿಕೊಂಡರೆ ಪರಬೊಮ್ಮನ ಮನದಲಿ ಆಡದು ಮಾಯದ ಸೂತ್ರದಲಿ 12 ಮೃಗ ಗೋರೋಚನ ಸಹ ಉತ್ತಮವಾಗಿಹ ಮುತ್ತುಗಳು ನಿತ್ಯದಿ ಕ್ರಯಗಟ್ಟಿ ಉಣ್ಣದೆ ಹುಲ್ಲನು ಕಿತ್ತು ಮೆದ್ದಾಡುವ ಅವಸ್ಥೆಗಳು13 ಮೃತ್ಯುವ ಕಾಣದೆ ಬೊಮ್ಮವನಡಗಿಸಿ ಎತ್ತಲಾದರು ಪೋದ ವಸ್ತುಗಳು ಭಕ್ತರಿಗಲ್ಲದೆ ಮನವಪರೋಕ್ಷದ ವಸ್ತುವ ಕಾಣದು ನಿತ್ಯದೊಳು 14 ಜ್ಯೋತಿರ್ಮಯವಾಗಿಹ ವಸ್ತುವಿನೊಳು ಸೂತಕ ಹೊದ್ದುವುದೇನುಂಟು ಜಾತಿವಿಜಾತಿಯೊಳೊಲಿದಿಹ ಶಿವನವ ದೂತರ ನಂ[ಬ]1ದರಾರುಂಟು 15 ಓತು ಆಶುದ್ದವನುಂಡರು ಕವಿಲೆಯೊ ಳ್ಮಾತಿನ ವಾಸಿಯದೇನುಂಟು ನೀತಿ ವಿಹೀನರೊಳುದಿಸಿದ ಲವಣದ ಧಾತು ಕೂಡದೆ ಸವಿಯೇನುಂಟು 16 ಧಾರುಣಿ ಭಾರವ ಮಿತಿಗಟ್ಟಿ ತಕ್ಕಡಿ ಗೇರಿಸಿ ತೂಗಲು ಬಹುದೀಗ ವಾರಿಧಿಯನು ಮುಕ್ಕುಳಿಸಿಯೆ ಬತ್ತಿಸಿ ತೋರಿಸಲಪ್ಪುದು ಬಹು ಬೇಗ 17 ಧಾರುಣಿಯೊಳು ಗುರುಕರುಣದ ಅಳತೆ ಮು ರಾರಿಗು ಸಿಲುಕದು ಅದು ಈಗ ತೋರಿತು ಅಲ್ಲಿ ವರಾಹತಿಮ್ಮಪ್ಪ ಕು ಮಾರರು ವಾಜಿಯ ತಡೆದಾಗ 18
--------------
ವರಹತಿಮ್ಮಪ್ಪ
ಗೋಪಿ ಇವನು ನಿನ್ನಾ ಪ ಜಗವ ನಿರ್ಮಿಸಿ ಪಾಲಿಸಿ ಅಳಿಸುವ ಅಗಣಿತ ಸುಗುಣಾ ಭರಣನೆ ಇವನು ಅ.ಪ ಬೆಣ್ಣೆಯ ಕದ್ದನು ಸಣ್ಣವನಿಹ ಬಹು ಚಿಣ್ಣರ ಕೂಡುತ ಗೋಗಣ ಕಾಯುವ ಮನ್ಮನ ಪುಥ್ಥಳಿ ಕಳಿಸುವದಾಗದು ಎನ್ನುವ ನುಡಿಗಳ ಬದಿಗಿಡು ತಾಯಿ ಉಣ್ಣುತ ಉಣ್ಣುತ ಮೊಲೆಯನು ಕೊಂದಿಹ ಉನ್ನತ ರಕ್ಕಸಿ ಪೂತಣಿಯನ್ನಿವ ಮಣ್ಣನು ಕಂಡರು ಕಂಸನದೂತರು ಪೂರ್ಣಾನಂದನು ಸರಿ ಇವನಮ್ಮ 1 ಜಾರ ಚೋರ ಸುಕುಮಾರನು ಸುಂದರ ನಾರೇರ ವಲಿಸಿ ಸೇರಿದ ನಿಶಿಯಲಿ ಪೋರನೆಂಬ ಮನ ದೂರವಗೈದುಗ ಭೀರ ಮಹಿಮ ಜಗ ಸಾರನೆಂದರಿಯೆ ಭಾರಿಗಿರಿಯನೆತ್ತಿ ಊರಿಗೆ ಊರನು ಸೇರಿಸಿ ಪೊರೆದಿಹಪಾರಮಹಿಮ ಜಂ ಭಾರಿದರ್ಪಹರ ಪೋರನೆ ಬಿಡುಬಿಡು ನಿಗಮ ಸಂಚಾರನೆ ಖರೆಯೆ 2 ಕಾಲ್ಗಳು ಸೋಕಲು ಶಕಟನು ಬಿದ್ದನು ಶೀಳುತ ಕೊಕ್ಕನು ಬಕನಂ ಕೊಂದನು ಕಾಳಿಯ ತುಳಿಯುತ ಗರ್ವವ ನಿಳಿಸಿದ ಲೀಲಾಜಾಲದಿ ಜ್ವಾಲೆಯ ನುಂಗಿದ ಬಾಲರು ಕೇಳಲು ಆಲಯತೋರಿದ ಪಾಲಿಸಿ ವರುಣನ ತಂದೆಯ ಕಂದನ ಲೋಲನೆ ಸರಿ ಜಗಮೂಲನು ಕೇಳೆ 3 ನೀರಜ ನಾಭಗೆ ಗೊಲ್ಲತಿಯ ಗಣ ಬೀರಲ್ ಸಾಧ್ಯವೆ ಮೋಹವ ನೆಂದಿಗು ಶ್ರೀರತಿದಾಯಕ ಕೊಳ್ಳುವನೇ ರತಿ ಭವ ತಾರಕ ಶುಭ ಶೃಂಗಾರ ಪೂರ್ಣ ಪರಿವಾರದಭೀಷ್ಠವ ಖರೆ ಭೂರಿದಯಾಮಯ ನಾರಾಯಣನಿವ ದೋಷ ವಿದೂರ 4 ಮೆಲ್ಲಗೆ ಬಾಯೊಳು ಎಲ್ಲವ ತೋರಿದ ಮಲ್ಲನು ಸರ್ವರ ವಲ್ಲಭ ಸಿದ್ಧವು ಗೊಲ್ಲನ ವೇಷದಿ ಇಲ್ಲಿಹನಮ್ಮ ಇಲ್ಲವೆ ಸಮರಿವಗೆಲ್ಲಿಯ ಸತ್ಯ ಮಲ್ಲರ ಮರ್ದಿಸಿ ಕೊಲ್ಲುತ ಕಂಸನ ನಿಲ್ಲಿಸಿ ಧರ್ಮವ ಕಾಯುವ ನಮ್ಮ ಬಲ್ಲಿದ “ಶ್ರೀಕೃಷ್ಣವಿಠಲ” ಬೇಗನೆ ನಿಲ್ಲಿಸಿ ಕೊಳ್ಳದೆ ಕಳುಹೇ ತಾಯಿ 5
--------------
ಕೃಷ್ಣವಿಠಲದಾಸರು
ಚಿಂತೆಯಾತಕೆ ಮನವೆ ಗುರುಗಳ ಪಾದ ಚಿಂತನೆಯನು ಮಾಡದೆಪ ಸಂತತ ಬಿಡದಲೆ ಚಿಂತನೆ ಮಾಳ್ಪರ ಅಂತರಂಗವ ತಿಳಿವರು ಗುರುವರರು ಅ.ಪ ಉದಯ ಕಾಲದಲಿವರ ಧ್ಯಾನವ ಮಾಡೆ ಮದಗರ್ವ ಪರಿಹರವು ಮುದದಿಂದ ಮೂರು ವೇಳೆಗಳಲ್ಲಿ ಸ್ಮರಿಸಲು ಹೃದಯ ತಾಪವ ಕಳೆವರು ಗುರುವರರು1 ದೇಶದೇಶವ ತಿರುಗಿ ತನುಮನಗಳ ಬೇಸರಗೊಳಿಸಲೇಕೆ ಪೋಷಿಪ ಗುರುಗಳಪಾದ ನಂಬಿದ ಮೇಲೆ ವಾಸುದೇವನೆ ನಲಿವ ಮುಂದೊಲಿವ 2 ವೇದವಾದಿಗಳೆಲ್ಲರೂ ವಾದವ ಮಾಡಿ ಮಾಧವನನು ಕಾಣಿರೊ ಮೋದತೀರ್ಥರ ಮತಬೋಧನೆ ಮಾಡುವ ಸಾಧು ಗುರುಗಳನೆ ಕೂಡು ಸಂಶಯಬಿಡು3 ಚಿತ್ತದಿ ಸ್ಮರಿಸುವರು ಹರಿ ಮಹಿಮೆಯ ಭಕ್ತಿಲಿ ನಲಿಯುವರು ಚಿತ್ರಗಾಯನ ನೃತ್ಯಗಾನಗಳಿಂ ಪುರು- ಷೋತ್ತಮನನೊಲಿಸುವರು ಹರುಷಿತರು4 ಕತ್ತಲೆ ಮನೆಗಳಲ್ಲಿ ಅಡಗಿಹ ವಸ್ತು ಲಕ್ಷಪರಿಮಿತಿ ಇದ್ದರು ಹಸ್ತದಿ ಜ್ಯೋತಿಯನೆತ್ತಿ ತೋರುವ ಪರಿ ಭಕ್ತರ ಸಲಹುವರು ಗುರುವರರು 5 ಸರಸೀಜಾಕ್ಷನ ನಾಮವು ಹಗಲಿರುಳು ಬಿಡದೆ ಧ್ಯಾನಿಸುತಿರ್ಪರು ಸಿರಿನಾರಾಯಣನನ್ನು ಸ್ಮರಿಸುತ್ತ ಮನದೊಳು ಪರಮಸಂಭ್ರಮ ಪಡುವರು ಗುರುವರರು 6 ಕರುಣದಿ ಸಲಹುವರು ಶಿಷ್ಯರ ಮನ ವರಿತು ವರಗಳನೀವರು ವರ ಕಮಲನಾಭವಿಠ್ಠಲನ ಧ್ಯಾನಿಪಉರಗಾದ್ರಿವಾಸ ವಿಠ್ಠಲದಾಸರನೆ ನಂಬು7
--------------
ನಿಡಗುರುಕಿ ಜೀವೂಬಾಯಿ
ಡಂಬವಿಲ್ಲದೆ ಹರಿಯ ಭಜಿಸಿ ನಂಬಿ ಮನದಲಿ ಪ ಹಂಬಲಿಸದೆ ದುರ್ವಿಷಯವ ಹರುಷ ಪಡುತಲಿ ಅ.ಪ ಸಮಚಿತ್ತದಿ ವರ್ತಿಸಿ ಸಜ್ಜನರ ಕೂಡುತ 1 ಮನುಮಥನಾಟಕೆ ಸಿಲುಕದೆ ಮಮತೆಯ ಬಿಡುತ 2 ಕಾಮ ಮಖ್ಯರಿಪುಗಳನ್ನು ಕಡೆಗೆ ನೂಕಲು ಸ್ವಾಮಿ ಶ್ರೀ ಗುರುರಾಮವಿಠಲ ತೋರ್ಪನವರೊಳು 3
--------------
ಗುರುರಾಮವಿಠಲ
ತತ್ವಸುವಾಲಿಗಳು ಓಂಕಾರ ಪ್ರತಿಪಾದ್ಯ ಶ್ರೀಕಾಂತನೇ ನಿನ್ನ ಭವ ಭಂಗವ ಗೈಸಿ ಶುಭಾಂಗನೆ ಕಾಯಯ್ಯ ಶ್ರೀರಂಗ 1 ಕಾಲತÀ್ರಯಕೃತ ವಿಕಾರವಿಲ್ಲದೆ ನೀನೆ ಮೂಲರೂಪನೆ ಬಹು ರೂಪ-ಬಹುರೂಪ ಸ್ವಗತಭೇದ ವಿವರ್ಜಿಕನೆ ಸಲಹಯ್ಯ 2 ಆವಕಾಲಕು ನೀನೆ ಚತುರ ರೂಪದೊಳಿದ್ದು ಜೀವ ನಿಯಾಮನು ನೀನಾಗಿ-ನೀನಾಗಿ ವಿಶ್ವ ತೈಜಸ ಪ್ರಾಜ್ಞ ತುರ್ಯಾತ್ಮ3 ಶುಭ ವಿಷಯಂಗಳಾ ಮಾಡಿ ಉಣಿಸುವೆ 4 ವಿಶ್ವದಲಿ ವ್ಯಾಪಿಸಿಹೆ ವಿಶ್ವನಂಬೋರು ನಿನ್ನ ನಾಶರಹಿತನೆಂದೂ ನರನೆಂದೂ-ನರನೆಂದೂ ನಿನ್ನ ವೈಶ್ವಾನರನು ಎಂದು ಪೇಳ್ವಾರೊ 5 ಹರಿ ನಿನ್ನ ವಿಶ್ವನೆಂದು ಉಪಾಸನೆಯನು ಮಾಡಿ ಹೇರಂಬ ನಿನ್ನ ಒಲಿಸಿದಾ-ಒಲಿಸಿದಾ ಗಜವಕ್ತ್ರನಾಗಿ ನಿನ್ನ ಸ್ತುತಿಪಾನೋ 6 ದೇಹದೊಳು ಸ್ವಪನದಲಿ ನೀ ನೀಡಿ-ನೀ ನೀಡಿ ಜೀವರುಪಭೋಗಿಸುವ ಸಾರವನು ರಕ್ಷೀಪೆ 7 ತೈಜಸನೆ ವಾಸನಾಮಯವೆಲ್ಲ ತೋರೀಪೆ8 ತತ್ವಗಳ ವ್ಯಾಪಾರವೇ ವ್ಯಾಪಾರ9 ಸುಪ್ತಕಾಲದಿ ಜೀವ ಸ್ವರೂಪಕೆ ತಕ್ಕ ಕ್ಲುಪ್ತ ಅಜ್ಞಾನ ಮೊದಲಾದ-ಮೊದಲಾದ ಕಾಲವನನುಸರಿಸಿ ಜೀವನಿಗೆ ತನ್ನ ತಿಳಿಯಗೊಡದೆ 10 ಪ್ರಾಜ್ಞಮೂರುತಿ ನೀನೆ ಹೃದಯಸ್ಥಾನದೊಳಿದ್ದು ಅಜ್ಞಾನಿ ಜೀವನ ಕಾಲಾವ-ಕಾಲಾವ ನನುಸರಿಸಿ ಜೀವ ಸ್ವರೂಪಾನಂದವÀನು ನೀನೀವೆ11 ಸ್ವಪನ ಜಾಗ್ರತ ಜ್ಞಾನವಿನಿತಿಲ್ಲವೆಂದು ಕೂಡುವ ಜೀವ ಆನಂದ ಹಿಂದೆಂದೂ ಕಾಣನೊ12 ಘನ ಬಹಿ ಪ್ರಾಜ್ಞ ತೈಜಸಾಂತ ಪ್ರಾಜ್ಞ ಘನ ಪ್ರಾಜ್ಞ ಮೂರುತಿ-ಮೂರುತಿ ಗಳುಪಾಸನೆ ಮಾಳ್ವ ಬುಧರೇನು ಧನ್ಯರೊ 13 ನಾಗಿ ನೀ ಕೊಡುತಿರುವೆ ಮುಕ್ತರಿಗೆ ಆನಂದ 14 ಮುಕ್ತರಿಗೆ ದೃಷ್ಟನೋ ಅದೃಷ್ಟನೋ ಅ- ಗುರುಪ್ರಾಣನನುಗ್ರಹದಿ ಲಭ್ಯನಹುದಯ್ಯಾ ಹೇ ಜೀಯ 15 ಕಣ್ಮನ ಹೃದಯ ತ್ರಿಧಾಮಗಳಲ್ಲಿ ಇದ್ದು ಉಣಿಸೂವೇ ಜೀವರಿಗೆ ಫಲಭೋಗ-ಫಲಭೋಗವು ವಿಶ್ವತೈಜಸ ಪ್ರಾಜ್ಞ ಸ್ಥಿತಿಯೊಳು 16 ಸರ್ವರೂಪವು ಪೂರ್ಣ ಸರ್ವಗುಣ ಸಂಪೂರ್ಣ ಸರ್ವೋತ್ಪಾದಕ ಸುಖರೂಪಿ-ಸುಖರೂಪಿ ಸರ್ವಲೋಕ ಜೀವರೊಳಿದ್ದು ನಿರ್ಲಿಪ್ತಾ 17 ವರ್ಣತ್ರಯಯುತ ಓಂಕಾರದೊಳಾದ್ಯವರ್ಣ ವಿಶ್ವ ನೀನೆ-ವಿಶ್ವನು ನೀನೆ ಉಕಾರವೇ ತೈಜಸನು ಮಕಾರ ವಾಚ್ಯನೇ ಶ್ರೀಪ್ರಾಜ್ಞ 18 ನಾದದೊಳು ನೀ ವಾಚ್ಯ ತುರ್ಯರೆಂಬೋರು ನಿನ್ನ ಸದನವಾಗಿಹುದೈ ಶಿರಸ್ಥಾನ-ಶಿರಸ್ಥಾನ ನಾಶಿಕಾಗ್ರದಿ ಊಧ್ರ್ವ ದ್ವಾದಶಾಂಗುಲದಲ್ಲಿ ನೆಲೆಸಿರ್ಪೆ 19 ತೈಜಸನೊಡಗೂಡಿ ವಾಸನಾ-ವಾಸನಾಮಯ ಕಳೆವ ಅಜ್ಞಾನಿ ಜೀವನನ್ನಾಡಿಸುವೆ ಶ್ರೀಪ್ರಾಜ್ಞ 20 ಸರ್ವಶಕ್ತನು ನೀನೆ ಸರ್ವಕತರ್Àನು ನೀನೆ ಸವೋತ್ತಮನು ನೀನೆ ಸರ್ವಜ್ಞ-ಸರ್ವಜ್ಞ ಪೂರ್ಣಪ್ರಜ್ಞಾಂತರ್ಯಾಮಿ ಸಲಹಯೈ21 ಪಲವಿಲ್ಲ ವಾಸುದೇವನೆ ನಿನ್ನ ದಯ ಬೇಕೊ 22 ನೀ ಸುಮ್ಮನಿರದೆ ಎನ್ನನೂ-ಎನ್ನನು ಪ್ರೇರಿಸುವೆ ಲೇಸುಮನ ನಿನ್ನಲ್ಲಿ ನೆಲೆಸಲೋ 23 ಕಂಡಕಂಡಲ್ಲಿ ನಾ ಉಂಡುಂಡು ಓಡಾಡಿ ಧಾಂಡಿಗನಾಗಿ ಬೆಳೆದೆನೊ-ಬೆಳೆದೆನೊ ಪುಂಡರೀಕಾಕ್ಷ ನಿನ್ನ ಮರೆತೆನೋ24 ಅವಾವ ಕಾಲದೊಳು ನೀನಿದ್ದು ಉಣಿಸುವೆ ಜೀವಕೃತ ಕರ್ಮಫಲಗಳ-ಫಲಗಳ ಶ್ರೀ ವೇಂಕಟೇಶ ನೀನಿತ್ತು ಸಲಹೂವೇ 25 ವಂದನೆಯು ಒಂದೆ ಮನದಿಂದೆ-ಮನದಲಿ ನಿನ್ನ ಪಾದಾರವಿಂದವ ತೋರಯ್ಯ26 ಬಂಧುಗಳು ಹಿತರೆನ್ನೆ ಬಂಧಕರಾಗಿಹರು ಬಂಧನಕೆ ನಾ ಇನ್ನು ಸಿಲುಕಿದೆ 27 ಘನವಾಗಿ ತನು ಬೆಳೆಸಿ ಹಿತದಿಂದ-ಹಿತದಿಂದ ಮುಂದೆ ಪರಗತಿಯ ಕಾಣುವುದೆಂತೊ ಗೋವಿಂದ28 ವಿತ್ತಾಪಹಾರಕರು ಹೃತ್ತಾಪಕಳೆವರೆ ಉತ್ತಮಗತಿಯ ತೋರಿಸು29 ಹರಿಕಥಾಪುರಾಣಶ್ರವಣ ನಿತ್ಯದೀ ಮಾಡೀ ಪರಿಯಿಂದ ನಿಜತತ್ವವರಿಯಾದೆ-ಅರಿಯಾದೆ ಬರಿದೇ ವಿಪರೀತ ಜ್ಞಾನಕೆ ವಶನಾದೆ30 ಮದ್ಯ ತುಂಬಿದ ಭಾಂಡ ಗದ್ಗುಗೆಯ ಮೇಲಿಟ್ಟು ಶ್ರಧ್ದೆಯಿಂದಲಿ ಅದನ ಪೂಜಿಸೆ-ಪೂಜಿಸೆ ಪೂತÀ ದುರ್ಗಂಧ ಫಲವದು ಬಿಟ್ಟೀತೆ 31 ಮಂದಹಾಸದಿ ಜನರ ಸಂದೋಹದಲಿ ಕುಳಿತು ನಿಂದೆ ಮಾತುಗಳಾಡಿ ಮದತುಂಬೀ-ಮದತುಂಬಿಬಿದಾ ದುರ್ಮ ದಾಂಧರಿಗೆ ಗತಿಯು ಮುಂದೆ ಇನ್ನೆಂತೊ32 ಕಂಡಕಂಡವರಲ್ಲಿ ಕೊಂಡೆ ಮಾತುಗಳಾಡಿ ಪುಂಡರೀಕಾಕ್ಷ ನಿನ್ನ ಸ್ಮರಿಸಾದೆ-ಸ್ಮರಿಸದಲೆ ಪರದಿ ಯಮದಂಡಕ್ಕೆ ಗುರಿಯಾದೆ33 ಹಿಂದೆ ಮಾಡಿದ ಪುಣ್ಯದಿಂದ ಇಂದಿನ ಭಾಗ್ಯ ವೆಂದು ತಿಳಿದು ಮುಂದೆ ನಡೆಯಾದೆ-ನಡೆಯಾದೆ ತಿಳಿಗೇಡಿ ಬುದ್ಧಿಯಿಂದ ಕುಂದುಪೊಂದುವೆ 34 ಬಾಯಿಮಾತಲ್ಲ ಶ್ರೀ ತೋಯಜಾಕ್ಷನ ಭಕ್ತ- ರಾಯತನ ತಿಳಿವುದು ಶ್ರಮಸಾಧ್ಯ-ಶ್ರಮಸಾಧ್ಯ ವನು ಸದುಪಾಯದಿಂದ ತಿಳಿದು ನಲಿದಾಡೊ 35 ನಿಂದಕರ ನುಡಿಯಿಂದ ಹಿಂದೆ ಮಾಡಿದ ಪಾಪ ಒಂದೊಂದು ಪರಿಯಲ್ಲಿ ಪರಿಹಾರ-ಪರಿಹಾರವಾಗಿ ನಿಂದಕರು ಬಂಧನಕೆ ಬೀಳ್ವಾರೋ 36 ಸ್ಮøತಿಯುಕ್ತಿಯನೆ ಬಿಟ್ಟು ಯುಕ್ತಿಮಾತುಗಳಿಂದ ಹೊತ್ತು ಕಳೆಯುತ ಉನ್ಮತ್ತನೆನಿಸಿ-ಉನ್ಮತ್ತನೆನಿಸಿದವ ಇ- ನ್ನೆತ್ತÀ್ತ ಭವಶರಧಿಯ ದಾಟÀುವ 37 ಅರೆಘಳಿಗೆ ಕಳೆದುದಿಹ ನರಜನ್ಮ-ನರಜನ್ಮ ಬಂದುದು ನರಕಯಾತನೆಗಲ್ಲದಿನ್ನಿಲ್ಲ 38 ಪರಿಯಂತ ಉದರಭರಣಕಾಗಿ ಉದಧಿಶಯನ ನಾ ನಿನ್ನ ಭಜಿಸಾದೆ-ಭಜಿಸಾದೆ ಮದದಿಂದ ಬುಧಜನರ ನಿಂದೆಯ ಮಾಡೀದೆ39 ಇನ್ನಲ್ಲ ಪರಗತಿಯ ಸಾಧನ-ಸಾಧನವು ತನ್ನೊಳು ತÀನ್ನಿರವರಿತು ಸುಮ್ಮನಿರುವುದು ಅದು ನಿಧಾನ40 ಭಿನ್ನಧರ್ಮಂಗಳ ಗ್ರಹಿಸಾದೆ-ಗ್ರಹಿಸಾದೆ ನೀನೆಣಿಸಿದೆ ತನ್ನಗುಣಧರ್ಮದಂತನ್ಯರಿಹನೇನೊ 41 ಕಾಯವೇ ತಾನೆಂದು ಮಾಯಕೆ ಒಳಗಾಗಿ ಕಾಯಯಾತನೆಗೊಂಡು ನೋಯುವಾ 42 ವಚನ ವಚನವು ಸರ್ವ ಉಚಿತ ದೇಹದ ಕಾರ್ಯ ನಿಚಯದೊಳು ಹರಿ ಪ್ರಚುರನಾಗಿ-ಪ್ರಚುರನಾಗಿ ಕಾಯಕುಪಚಯವಿತ್ತು ಸಲಹೂವ 43 ದೇಹ ಕಾಯದ ಕಾರ್ಯಪ್ರಕ್ರಿಯವ ತಿಳಿಯಾದೆ ಮಾಯೆಗೊಳಗಾಗದಿರು ಹೇ ಮಾನವಾ-ಮಾನವನೆ ತಿ- ಳಿಯೊ ಮಾಯಾರಮಣನ ಬಿಂಬಕ್ರಿಯವಾ44 ಅನ್ಯರೊಳು ನೀ ಹೋರಾಡಬಲ್ಲೆಯ-ಬಲ್ಲೆಯಾ ನಿನ್ನ ವೈರಿಗಳ ಜಯಿಸಲರಿಯದ ಖೂಳ ರಣಹೇಡಿ 45 ಕೊಳೆತು ನಾರುವ ದೇಹದೊಳಗಿರುವ ಹುಳುಕುಗಳ ಕೊಳೆಯ ಕಳೆಯದ ಮನುಜ ನೀನೆಂತೊ-ನೀನೆಂತೊ ಕೊಳೆತÀ ಸಗಣಿಯೊಳಗಿಹ ಹುಳುವೆ ನಿನ್ನ ಗತಿಯೆಂತೊ46 ಆದದ್ದು ಆಯಿತು ಯತ್ನ ತಪ್ಪಿತು ಎಂದು ಹೆದ್ದಾರಿ ಹಿಡಿದು ಪರಮಾರ್ಥ-ಪರಮಾರ್ಥವ ಬುದ್ಧಿ ತಿದ್ದಿಕೊಳ್ಳಲು ಮುಂದೆ ಅನುವಾಗೊ47 ತತ್ತ ್ವದೇವತೆಗಳು ತತ್ತತ್ವಕಾರ್ಯಜಿ- ವೋತ್ತಮನಾಜ್ಞೆಯಿಂ ತಾವ್ ಗೈವರೊ-ತಾವ್‍ಗÉೈ ಯುತ್ತಲಿರೆ ನಾನೆತ್ತ ಮೃತ್ತಿಕಾಪ್ರತಿಮೆಯೋ48 ಒಂದೊಂದು ರೀತಿಯಿಂ ಚೆಂದಾಗಿ ಯೋಚಿಸು ಮಂದಮತಿಯು ನೀನು ಹಿಂದೆಂತೂ-ಹಿಂದೇನು ವಂದನೆಯೊಂದಲ್ಲದಿನ್ನಿಲ್ಲ49 ಡಾಂಭಿಕತನ ಬಿಟ್ಟು ಡಿಂಬದೊಳು ಸರ್ವದಾ ಅಂಬುಜನಾಭನೇ ಇಂಬಾಗಿ-ಇಂಬಾಗಿ ಸರ್ವತ್ರ ತುಂಬಿಕೊಂಡಿಹನೆಂದು ನಲಿದಾಡೋ 50 ತುಷ್ಟಿಯಾಗಿರು ನೀನು ಕೊಟ್ಟಷ್ಟು ಲಾಭಕ್ಕೆ ದುಷ್ಟವಿಷಯಗಳಿಗೆ ಎರಗಾದೆ-ಎರಗಾದೆ ಇರಲು ಸಂ- ತುಷ್ಟ ನಾಗುವನಯ್ಯ ಶ್ರೀಕೃಷ್ಣ51 ಕಾಯ ನಿನ್ನದು ಅಲ್ಲ ಮನವು ಅಧೀನವಲ್ಲ ಹೇಯವಿಲ್ಲದೆ ಮಾಯಕೊಳಗಾಗಿ ಮರುಳಾಗದಲೆ-ಮರುಳಾಗದಲೆ ಮಾಯಾರಮಣನ್ನ ನೆನೆಯೊ ನಿರ್ಭಯದಿಂದ 52 ಹಲವು ಶಾಸ್ತ್ರವ ನೋಡಿ ತಲೆಹರಟೆಯ ಬಿಟ್ಟು ಅಲವಬೋಧರ ತತ್ತ ್ವಸುಧೆಯನ್ನು- ಸುಧೆಯನ್ನು ಸವಿದು ನಿ-
--------------
ಉರಗಾದ್ರಿವಾಸವಿಠಲದಾಸರು
ತಾತ್ವಿಕವಿವೇಚನೆ ಏರಿಸಿ ಏರಿಸಿ ಮಾರುತ ಮ್ವತಧ್ವಜ ಸಾರ ಸುಖಂಗಳ ನಿತ್ಯದಲುಂಬುವ ಯೋಗ್ಯತೆ ಯುಳ್ಳವರೂ ಪ ಈರನ ಮತವೇ ಸಾರವು ಶ್ರುತಿಗಳ ಶೌರಿಯ ಮತವೇ ಈರನ ಮತ ಖರೆ ದೂಡಿರಿ ಸಂದೇಹ ಅ.ಪ ಇಲ್ಲವು ಜಗವಿದು ಭ್ರಾಂತಿಯ ಕಲ್ಪನೆ ಸುಳ್ಳೇ ಎಲ್ಲವು ಬ್ರಹ್ಮನ ಬಿಟ್ಟರೆ ಬ್ರಹ್ಮನೆ ಸತ್ಯವೆನೆ ಅಲ್ಲವು ನುಡಿಯಿದು ಬ್ರಹ್ಮನು ಕಾರಣ ಸುಳ್ಳಾಯಿತು ನುಡಿ ಅಲ್ಲವೆ ಯೋಚಿಸಿ ಕೊಡದು ಈ ಮನವು 1 ಉಂಬುದು ಉಡುವುದು ಕಾಂತೆಯ ಸಂಗವು ನಂಬಲು ಬೇಡಿರಿ ಸುಳ್ಳೇಯೆಂತೆಂನೆ ಸಾಕ್ಷಿಯು ಒಪ್ಪುವುದೇ ನಂಬಲನರ್ಹವೆ ಕಾರ್ಯಸುಕಾರಿಯ ಖರೆ 2 ಒಂದೇ ತೆರವಿಹ ವಸ್ತು ದ್ವಯವಿರೆ ಒಂದನು ಮತ್ತೊಂದೆಂಬುವ ಭ್ರಾಂತಿಯು ಕೊಡುವದೂ ಪೊಂದಿಹ ಹೇಗೆನೆ ಉತ್ತರ ಸಿಕ್ಕದು ಯೋಚಿಸಿ ಕೋವಿದರೆ 3 ಭ್ರಾಂತಿಯ ಪೆಣ್ಣನು ಕೊಡುತ ತಾಸ್ವಾ ತಂತ್ರ ವಿಹೀನನು ಆಗುತ ಮಿಡುಕುವ ದೇವನು ಎನಿಸುವನೆ ಮಂತ್ರಿಸೆ ಬ್ರಹ್ಮನ ನಾನಿಹೆ ನೆಂಬುದ ಭ್ರಾಂತಿಯ ತೊಲಗುತ ಬ್ರಹ್ಮನು ಆಹನೆ ಮನವ ವಿಚಾರಿಸಿರಿ4 ನಾನೇ ಬ್ರಹ್ಮನು ಎಂಬೀ ಜ್ಞಾನವು ತಾನೇ ಬಾರದು ಸಹಜ ವಿದಲವು ಅನುಭವ ವಿರುದ್ಧಾ ತಾನೇ ಬ್ರಹ್ಮನು ಆಗಿರೆ ಭವದೊಳು ನಾನಾ ದುಃಖವ ನುಣ್ಣಲು ಬಂದರೆ ಹುಚ್ಚನೆ ಅವಸರಿಯು5 ಬ್ರಹ್ಮ ದ್ವಯವಿದೆ ಸತ್ಯ ದ್ವಯವಿದೆ ಬ್ರಹ್ಮನು ಆಹುದು ಕೊನೆ ಮಾತೆಂದರೆ ಬ್ರಹ್ಮನು ಶೂನ್ಯನಿಹ ಬ್ರಹ್ಮನು ನಿರ್ಗುಣ ನಂದವಿಹೀನನು ಬ್ರಹ್ಮನ ಗತಿಯೆನೆ ಸರ್ವವಿನಾಶವೆ ಯಾರಿದ ಬಯಸುವರೂ6 ವ್ಯಕ್ತಿತ್ವವು ತಾನಾಶವು ಆಹುದೆ ಮುಕ್ತಿಯು ಯೆಂತೆನೆ ಸರ್ವವಿನಾಶಕೆ ಸಾಧನೆಯೇ ಬತವು ಮುಕ್ತಿಯು ದುಃಖವಿವರ್ಜಿತ ಬರಿಸುಖ ರಿಕ್ತವು ಬರಿಯೆನೆ ಭವವಿದು ವರವೈ ಬೇಡವು ಆ ಮುಕ್ತಿ7 ಸತ್ಯವ ನುಡಿವುದು ವೇದವು ಒಂದೆಡೆ ಮಿಥ್ಯವ ನುಡಿವುದು ಮತ್ತೊಂದೆಡೆಯೆನೆ ಯಾವುದು ಸಿದ್ಧಾಂತ ಮೊತ್ತವ ನೂಕುತ ಕಿಚ್ಚಡಿ ವೇದಕೆ ಮೊತ್ತವ ಕೊಳ್ಳುತ ಒಂದೇ ಅರ್ಥವ ಜೋಡಿಸಿ ಇದು ನೀತಿ8 ಬೌದ್ಧರು ಒಪ್ಪನು ಶ್ರುತಿಗಳ ದೇವನ ವೇದವ ಒಪ್ಪುವ ಮಾಯಾವಾದಿಯ ಬ್ರಹ್ಮನು ಸೊನ್ನೆಯಿಹ ವೈದಿಕ ವೇಷದ ಬೌದ್ಧನ ವಾದವೆ ಶೋಧಿಸಿ ನೋಡಲು ಮತ್ತೇನಿಲ್ಲವು ಚಿಂತಿಸೆ ಸರಿಯಿಷ್ಠೆ9 ತರತಮ ಬಹುವಿಧ ಭೋಗವ ಮುಕ್ತಿಲಿ ಇರುವುದು ಸಿದ್ಧವು ಶೃತಿಗಳ ನಂಬಲು ಜೀವರ ಭಿನ್ನತೆಯು ಸ್ಥಿರವೇ ಆಯಿತು ಇದರಿಂ ಮುಕ್ತಲಿ ಪರಿ ಬಗೆತಾ ವಿದಿತವೆ ಜಗದಲಿ ಭೇದವೆ ಸರ್ವತ್ರ10 ನಾಸ್ತಿಕ ವಾದವ ತಳ್ಳಿರಿ ಆಚೆಗೆ ನಾಸ್ತಿಕ ಬಂದನೆ ತಂದೆಯು ಇಲ್ಲದೆ ಕಾರ್ಯವು ಜಗವಿರಲು ಆತನು ನೊಡಿಹ ಜ್ಞಾನಿಗಳಿಲ್ಲವೆ ಪೊಗಳವೆ ಗೋತತಿಯು11 ಪ್ರಕೃತಿ ವಿಕಾರದ ಜಗವಿದು ವಿದಿತವೆ ವಿಕಲ ವಿಶೇಷದ ಜೀವನು ಹಾಗೆಯೆ ಉಭಯರ ಆಳುವನು ವಿಕಲ ವಿವರ್ಜಿತ ಸಕಲ ಗುಣಾರ್ಣವ ಸಕಲ ನಿಯಾಮಕ ಸರ್ವ ಸಮರ್ಥನು ಇರಲೇ ಬೇಕಷ್ಟೆ12 ನಿತ್ಯವು ಈತ್ರಯ ಸಿದ್ಧವು ಆದರೆ ನಿತ್ಯ ಪರಸ್ಪರ ಸಂಬಂಧ ತ್ರಯ ಜ್ಞಾನವೆ ಪುರುಷಾರ್ಥ ಉತ್ತಮ ನೊಬ್ಬನು ಅಧಮರು ಇಬ್ಬರು ಮತ್ತಿವರಲಿ ಹಾಗಧಮನು ಜೀವನು ಚೇತನ ಪ್ರಕೃತಿ ವರ13 ಸರ್ವ ಸ್ವತಂತನು ಒಬ್ಬನೆ ಇರದಿರೆ ಸರ್ವಾ ಭಾಸವೆ ಜಗವಿದು ಆಹುದು ಪ್ರಭು ದ್ವಯ ಕೂಡುವುದೆ ಸರ್ವಗ ಶಾಶ್ವತ ಪೂರ್ಣಾ ನಂದನು ಸರ್ವ ವಿಚಿತ್ರನು ಮುಕ್ತಿದನಿರದಿರೆ ಪ್ರಭು ಅವನೆಂತಾಹ14 ಶುರುಕೊನೆ ಮಧ್ಯವು ಇದ್ದ ದೇವಗೆ ಬರುವನೆ ಹೊಸ ಹೊಸ ದೇವನು ಪ್ರತಿಪ್ರತಿ ಕಲ್ಪದಿ ಯೋಚಿಸಿರಿ ಇರದಿರೆ ಸಕಲೈಶ್ವರ್ಯವು ಆತಗೆ ತರುವನು ನಂದದ ಸೃಷ್ಠಿಯ ಹೇಗವ ವರಸಮರಿಲ್ಲವಗೆ15 ಸುಳ್ಳಿರೆ ಜಗವಿದು ಪಾಲಿಪ ದೊರೆಯದ ಕಳ್ಳನೆ ಅಲ್ಲವೆ ಅಷ್ಠಕರ್ತುತ್ವವು ಕೂಡುವ ದ್ಹೇಗಿನ್ನು ಎಲ್ಲಾ ಜಗವಿದು ನಿತ್ಯಾ ನಿತ್ಯವು ಎಲ್ಲಾ ಸತ್ಯವೆ ಶ್ರುತಿಗಳ ನುಡಿಗಳು ಭೃತ್ಯರು ಜೀವಗಣ16 ನಿತ್ಯವು ಪ್ರಕೃತಿಯು ಜೀವರು ಈಶನು ಸತ್ಯವು ಇದುಯೆನೆ ಪಂಚಸುಭೇದವು ನಿತ್ಯವೆ ಎಲ್ಲೆಲ್ಲು ನಿತ್ಯ ಸುಖಂಗಳ ಬಯಸುವ ನಮಗವು ಹತ್ತವು ಕಾರಣ ಸರ್ವಸ್ವತಂತ್ರನು ದೇವನೆ ಸತ್ಯವಿದು17 ಚೇತನ ಪ್ರಕೃತಿಯೆ ಲಕ್ಷ್ಮಿಯು ತಿಳಿವುದು ಆತನ ರಾಣಿಯು ನಿತ್ಯಸುಮುಕ್ತಳು ನಿತ್ಯಾವಿಯೋಗಿನಿಯು ಚೇತನ ನಿಚಯದ ಚೇತನ ಹರಿ ಇಹ ಆತನೆ ದೊರೆ ಜಗ ಜಂಗಮ ಸ್ಥಾವರ ಸತ್ತಾದಾಯಕನು 18 ದೋಷ ವಿದೂರ ಅಶೇಷ ಗುಣಾರ್ಣವ ದಾಸ ಪೋಷನಿಜ ಮುಕ್ತಿದ ನಿರದಿರೆ ಭಜಿಸುವದೇಕವನ ಶ್ರೀಶನು ಬಿಡೆ ಜಡ ಚೇತನ ಚೇಷ್ಠೆಯು ನಿಹ ಉಲ್ಲಾಸದಿ ಭಜಿಸುವುದು 19 ಪರಿಮಿತ ಶಕ್ತನು ದೇವನು ಇದ್ದರೆ ಪರಿಮಿತ ಜೀವರ ತೆರವೇ ಆಹನು ಕಾರಣ ನಿಸ್ಸೀಮ ಹರಿಗುಣವಗಣಿತ ಸಿಗ ಸಾಕಲ್ಯದಿ ನಿರುಪಮ ಸುಖಜ್ಞಾನಾತ್ಮಕ ವಿಭುವರ ಅನಾದಿ ಸಿದ್ಧವಿದು 20 ಪ್ರಾಕೃತ ಗುಣಗಣ ವರ್ಜಿತ ದೇವನ ಜ್ಞಾನ ಸುದೃಷ್ಠಿಗೆ ಗೋಚರನು ಸ್ವೀಕೃತ ನಾದರೆ ಜೀವನು ಹರಿಯಿಂ ತಾಕಿಸಿ ದೃಷ್ಠಿಗೆ ತನ್ನನೆ ತೋರುವ ಭಕ್ತರ ಬಾಂಧವನು 21 ತರತಮ ಜ್ಞಾನದಿ ಗುಣ ಉತ್ಕರ್ಷವು ಬರುವುದು ಕಾರಣ ತಿಳಿಯುತ ಹರಿಪರ ಮೋಚ್ಛನು ಹೌದೆನ್ನಿ ಅರಿವುದು ಅತಿಪರಿ ಪಕ್ವದ ಭಕ್ತಿಯ ಮಾಧವ ಮೆಚ್ಚುವನು22 ವೇದಗಳಿಂದಲೆ ದೇವನು ವ್ಯಕ್ತನು ವೇದಗಳಿಂದಲೆ ಧರ್ಮಾಧರ್ಮವಿ ವೇಕವು ಸರಿಯಷÉ್ಠ ವೇದ ನಿಜಾರ್ಥವೆ ಸಚ್ಛಾಸ್ತ್ರಂಗಳು ಮೋದವೆ ದೊರಕದು ಬಿಟ್ಟರೆ ಇವುಗಳ ಸಾದರ ಭಜಿಸುವುದು23 ಬಿಂಬನು ಹರಿ ಪ್ರತಿ ಬಿಂಬನು ಜೀವನು ಬಿಂಬಾಧೀನವು ಪ್ರತಿ ಬಿಂಬನ ಚೇಷ್ಠೆಗಳೆಂತರಿತು ಉಂಬುತ ಮುದದಿಂ ಸುಖದುಃಖಂಗಳ ಬಿಂಬಕ್ರಿಯೆಯೆನುಸಂಧಾನವ ಗುರುವಿಂದರಿತು ಸಮರ್ಪಿಸಿ24 ಮೆಚ್ಚುಲು ಮಾಧವದಾವುದಸಾಧ್ಯವು ಅಚ್ಚುತನೊಲಿಮೆಗೆ ಹೆಚ್ಚಿದುದೇನಿದೆ ಕೊಚ್ಚುತಕಲಿ ಸೊಂಕು ತಚ್ಛಭಿಮಾನ ಫಲೇಚ್ಛೆಯ ತ್ಯಜಿಸುತ ಕಚ್ಛಪ ನೊಲಿಮೆಗೆ ವಿಧಿಯ ನಿಷೇಧವ ಮರೆಯದೆ ಗೈಯುತಲಿ25 ಪರ ಮೋಚ್ಚನು ವರಸಮರಿಲ್ಲವು ಸಿರಿ ವರ ವಿಧಿಪಿತ ಸೃಷ್ಠ್ಯಾದ್ಯಷ್ಠಸು ಕರ್ತನು ವಿಭುವೆಂದು ನಿರುಪಮ ನಿಖಿಳಾಗಮ ಪ್ರತಿ ಪಾದ್ಯನು ಸ್ವರತ ಸ್ವತಂತ್ರನು ಪೂರ್ಣಾನಂದನು ಎನ್ನುತ ಸಾರುತಲಿ26 ಸಾಮನು ಸರ್ವರ ಬಿಂಬನು ಸರ್ವಸು ನಾಮನು ಸರ್ವಾಧಾರನು ಜಡಜಂಗಮ ವಿಲಕ್ಷಣನು ಭೂಮನು ಭಕ್ತ ಪ್ರೇಮಿಯು ಸದ್ಗುಣ ಧಾಮನು ಪೂರ್ಣನು ನಿಜ ಸುಖ ಮುಕ್ತಿದನೆನ್ನುತ ಸಾರುತಲಿ27 ವಿಧಿ ಪರಿಸರ ವಿಪಶಿವ ಪ್ರಮುಖರು ಪರಿವಾರವು ನಿರವದ್ಯನು ಮುಕ್ತಾ ಮುಕ್ತರ ನಾಯಕನು ಉರುಗಾಯನ ಜಗದೊಳ ಹೊರವ್ಯಾಪ್ತನು ಪರಿಮರ ಸ್ವಗತ ಭೇದ ವಿವರ್ಜಿತನೆಂಬುದ ಸಾರುತಲಿ28 ತರತಮ ಪಂಚಸುಭೇದವು ನಿತ್ಯವು ನಿರುತದಲುಂಬುವ ಸಾರವೆ ದುಃಖ ನಿರ್ಲೇಪನು ಅದ್ಭುತನು ಅರಿಯರು ಯಾರೂ ಇವನೇ ವಲಿಯದೆ ಪುರುಷೋತ್ತುಮ ಸಾಕಲ್ಯದವಾಚ್ಯನು ಎಂದು ಡಂಗುರ ಹೊಡೆಯುತ 29 ಗುರುವಿನ ದ್ವಾರವೆ ಹರಿತಾ ವಲಿಯುವ ಗುರುವೆನೆ ಮುಖ್ಯದಿ ಮುಖ್ಯ ಪ್ರಾಣನೆ ಸರಿಸಿರಿ ಯೆಂತೆಂದು ಗುರುಗಳು ಹಿರಿಯರು ಎಲ್ಲಾ ಕ್ರಮದಲಿ ಮಧ್ವರಿಗೊಂದಿಸಿ ಮುದದಿ 30 ಅನುಭವವಿಲ್ಲದ ಜ್ಞಾನವು ವಣವಣ ಸಾಧನೆ ಇದು ಖರೆಯ ಚಿನುಮಯ ನೊಲಿಸಲ್ ಮನೆಧನ ಬೇಡವು ತನುಮನೆ ವಿಷಯಗಳಿಂದಲೆ ಪೂಜಿಪ ಕ್ರಮದಿಂಯಜಿಸುತ 31 ಕಲಿಯುಗವಿದು ವರ ಸುಲಭದಿ ಸಾಧನೆ ವಲಿಯುವ ಬೇಗನೆ ನಾಮ ಸ್ಮರಣೆಗೆ ಭಜಿಸಿರಿ ಹರಿನಾಮ ವಳದಾರಿಯು ಸರಿ ಕ್ರಮದಿಂ ಪಾಡಲು ಮುಳುಗುತ ಭಕ್ತಿಯ ಕಡಲೊಳ್ ನಿಜಹರಿ ದಾಸರು ದೀಕ್ಷೆಯಲಿ32 ಕವಿಗುರು ರಾಜರ ಚರಣದಿ ಬಾಗುತ ಪವನ ಮತಾಂಬುಧಿ ಸೋಮನು ಜಯಮುನಿ ಹೃದಯಗ ವಾಯುವಲಿ ಅವಿರತ ನಲಿಯುವ ಶ್ರೀ ಕೃಷ್ಣವಿಠಲನು ತವಕದಿ ವಲಿಯುವ ಗ್ರಹಿಸಲ್ ಈ ಪದ ಜಯ ಜಯವೆನ್ನುತ33
--------------
ಕೃಷ್ಣವಿಠಲದಾಸರು
ತಾನಾ ತಂದನಾನಾ ತಾನಾ ತಂದನಾನಾ ತಾನಾ ತಂದನಾನಾ ತಾನಾ ತಂದನಾನಾ ಧ್ರುವ ಬಲ್ಲೆ ಬಲ್ಲೆನೆಂಬರು ಬಲ್ಲರಿಯದಿಹದನು ಬಲ್ಲರೆ ನೀವಿನ್ನು ಹೇಳುವುದು ತಾನಾ 1 ಕಣ್ಣು ಕಾಂಬುವದೇನು ಕಣ್ಣಿನೊಳಿಹುದೇನು ಕಣ್ಣು ಕಾಂಬುವ ಗತಿ ತಿಳಿಯುವುದು ತಾನಾ 2 ಕಿವಿಯ ಕಿವಿಯೆಂಬುದೇನು ಕಿವಿಯ ಕೇಳುವುದೇನು ಕಿವಿಯ ಕೇಳುವ ಗತಿ ತಿಳಿಯುವದು ತಾನಾ 3 ಮೂಗು ಮೂಗೆಂಬುದೇನು ಮೂಗಿನೊಳಾಡುವದೇನು ಆಡುವ ಗತಿಗಳ ತಿಳಿಯುವದು ತಾನಾ 4 ಬಾಯಿ ಬಾಯೆಂಬುದೇನು ಬಾಯಿಯೊಳ ನುಡಿವದೇನು ಬಾಯಿ ನುಡಿವ ಗತಿ ತಿಳಿಯುವದು ತಾನಾ 5 ದೇಹ ದೇಹೆಂಬುದೇನು ದೇಹದೊಳಿಹುದೇನು ದೇಹದೊಳಿಹ ವಸ್ತು ತಿಳಿಯುವದು ತಾನಾ 6 ಪ್ರಾಣವೆಂಬುದೇನು ಕರಣವೆಂಬುದೇನು ತತ್ತ್ವವೆಂಬುದೇನು ತಿಳಿಯುವದು ತಾನಾ 7 ಜೀವ ಅಂಬುದೇನು ಜೀವಭಾಗಗಳೇನು ಜೀವ ಶಿವದ ಗತಿ ತಿಳಿಯುವದು ತಾನಾ 8 ಆರುವ್ಹೆಂಬುದೇನು ಮರವ್ಹುವೆಂಬುದೇನು ಇದರೊಳು ಖೂನ ಕುರುಹು ತಿಳಿಯುವುದು ತಾನಾ 9 ಕನಸುವೆಂಬುದೇನು ಕನಸು ಕಾಂಬುವದೇನು ಕನಸು ಹೇಳುವದೇನು ತಿಳಿಯುವುದು ತಾನಾ 10 ಹಗಲು ಎದ್ದಿಹದೇನು ಇರಳು ಮಲಗುವದೇನು ಇದರ ಹಗರಣವನು ತಿಳಿಯುವದು ತಾನಾ 11 ಹುಟ್ಟಿ ಬಾಳುವದೇನು ಸತ್ತು ಹೋಗುವದೇನು ಸತ್ತು ಹುಟ್ಟುವದೇನು ತಿಳಿಯುವದು ತಾನಾ 12 ಹೆಣ್ಣು ಗಂಡೆಂಬುವದೇನು ಹೆಣ್ಣು ಗಂಡು ಕೂಡುವದೇನು ಕೂಡುವದೇನೆಂದು ತಿಳಿಯುವದು ತಾನಾ 13 ಅನುಭವ ಗತಿಗಳ ತಿಳಿಯಲು ಆತ್ಮದೊಳು ತಿಳಿಯಲು ಜನ್ಮವು ಅಳಿಯುವದು ತಾನಾ 14 ಆತ್ಮ ಅನುಭವವು ತಿಳಿಯುವದು ಗುರುಕೃಪೆಯು ತಿಳಿಯಲು ಜೀವನ್ಮುಕ್ತಿಯು ತಾನಾ 15 ಮಹಿಪತೆಂಬ್ಹೆಸರನು ಕರೆದರೊ ಎಂಬುವದೇನು ಓ ಎಂಬುವದೆನಗಿನ್ನು ತಿಳಿಯಿತು ತಾನಾ 16 ಇಂತು ಪರಿಯಾಯವು ತಿಳುಹಿದ ಗುರುರಾಯ ಎನ್ನೊಳು ಭಾಸ್ಕರ ಗುರು ತಾನೆ ತಾನಾ 17
--------------
ಕಾಖಂಡಕಿ ಶ್ರೀ ಮಹಿಪತಿರಾಯರು