ಒಟ್ಟು 104 ಕಡೆಗಳಲ್ಲಿ , 32 ದಾಸರು , 76 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ನಂದ ಯಶೋದೆಯರಲ್ಲಿ ಬಂದು ಅವತರಿಸಿದ ಇಂದಿರಾಪತಿಯ ಮಹಿಮೆಯನಲುವಿನಿಂದ ಚಂದವನೆಲ್ಲ ರಚಿಸಿದ ಪ. ದೇವನಾರಾಯಣ ಭೂದೇವಿ ಮೊರೆ ಕೇಳಿ ದೇವಕಿಯಲ್ಲಿ ಅವತರಿಸಿದ ದೇವಕಿದೇವಿಯಲ್ಲಿ ಅವತರಿಸಿದ ಧರಾದೇವಿ ಭಾರವನೆಲ್ಲ ಇಳಿಸಿದ1 ದುಷ್ಟ ದೈತ್ಯರನಟ್ಟಿ ಆಪನೊಳು ಮನೆಕಟ್ಟಿಪಟ್ಟದ ರಾಣಿಯರ ಒಯ್ದಿಟ್ಟಪಟ್ಟದ ರಾಣಿಯರ ಒಯ್ದಿಟ್ಟ ಶೌರ್ಯವ ಎಷ್ಟು ವರ್ಣಿಸಲ್ಪಶವಲ್ಲ 2 ಹರಿಯು ವೈಕುಂಠದ ಪರಿಯ ತೋರುವೆನೆಂದುಧರೆ ಮೇಲಾಗ ಜನಿಸಿದ ಧರೆ ಮೇಲಾಗ ಜನಿಸಿದ ದ್ವಾರಕಾಪುರನಿರ್ಮಿಸೆಂದು ಜಲದೊಳು 3 ದೊರೆ ಕೃಷ್ಣಯ್ಯನ ಹಿರಿ ಮಡದಿಮನೆಪರಿಯ ವರ್ಣಿಸಲು ವಶವÀಲ್ಲಪರಿಯ ವರ್ಣಿಸಲು ವಶವಲ್ಲ ದ್ವಾರಕಾಸಿರಿಕೇಳಿ ಬ್ರಹ್ಮ ಬೆರಗಾದ4 ಅಪ್ಪ ರಾಮೇಶನು ಇಪ್ಪಂಥ ಅರಮನೆಯುಅಪ್ರಾಕೃತ ವೈಕುಂಠಅಪ್ರಾಕೃತ ವೈಕುಂಠ ವೆಂಬೋದುಸುಪ್ರಕಾಶವಾಗಿ ಹೊಳೆದೀತು5
--------------
ಗಲಗಲಿಅವ್ವನವರು
ನೆರೆದು ಗೋಪಿಯರೆಲ್ಲರು - ಕೃಷ್ಣಯ್ಯನಕರವ ಪಿಡಿದುಕೊಂಡುಭರದಿಂದ ಬಂದು ಯಶೋದೆಗೆ ಚಾಡಿಯಅರುಹಿದರತಿ ವೇಗದಿ ಪ ಬಲು ಕಳ್ಳ ನಿನ್ನ ಮಗ - ಯಶೋದೆ ಕೇಳೆಹಾಲು ಕರೆಯುತಿರಲುತೊಲೆಗೆ ನಿಚ್ಚಣಿಕೆಯನೆ ಹಾಕದೆ ಸುರಿದನುನೆಲುವಿನ ಪಾಲ್ಮೊಸರ 1 ಅಮ್ಮಯ್ಯ ಇಲ್ಲ ಕಾಣೆ - ಇವಳು ಎನ್ನಸುಮ್ಮನೆ ದೂರುವಳೆಹಮ್ಮಿಂದ ನಾನವಳ ಅಟ್ಟಕ್ಕೆ ನೆಗೆಯಲುಬೊಮ್ಮ ಜಟ್ಟಿಗನೇನಮ್ಮ2 ಮತ್ತೆ ಮುತ್ತಿನಂಥ - ನಿನ್ನೀ ಮಗಹತ್ತಿ ಗವಾಕ್ಷದಿಂದಎತ್ತಿಟ್ಟ ಬೆಣ್ಣೆಯನೆಲ್ಲದ ಮೆದ್ದನುಹೆತ್ತ ಮಕ್ಕಳಿಗಿಲ್ಲದಂತೆ 3 ಗಡಿಗೆ ಬೆಣ್ಣೆ ಮೆಲ್ಲಲು - ಎನ್ನ ಹೊಟ್ಟೆಮಡುವು ಭಾವಿಯೇನೆಹುಡುಗರಿಗರಿಯದೆ ಎತ್ತಿಟ್ಟ ಬೆಣ್ಣೆಯಹೊಡೆದರವರ ಮಕ್ಕಳು 4 ಮರೆತು ಮಂಚದ ಮೇಲೆ - ನಾ ಮಲಗಿರಲುಹರಿವ ಹಾವನೆ ತಂದುಅರಿಯದಂತೆ ಬಂದು ಮುಸುಕಿನೊಳಗಿಟ್ಟುಸರಸರ ಪೋದನಮ್ಮ 5 ಹರಿದಾಡುವ ಹಾವನು - ನಾ ಹಿಡಿಯಲುತರಳ ನಾ ತಡೆಗಾರನೆಹರಕೆಯ ಹೊತ್ತುದನೊಪ್ಪಿಸದಿರಲುಗುರುತು ತೋರಲು ಬಂತೇನೊ6 ಕಕ್ಕಸ ಕುಚಗಳಮುಸುಕಿನೊಳಗೆ ಹಿಡಿದ 7 ಕೇಳು ಕೇಳೆಲೆ ಅವ್ವ - ಇವಳು ಬೇ-ತಾಳನಂತಿರುವಳುಬಾಲಕ ನಾನವಳುದ್ದಕೆ ನೆಗೆವೆನೆಜೋಲುವ ತೊಗಲಿಗಾಗಿ 8 ಮಕ್ಕಳು ಪಡೆದವರು - ಇಲ್ಲದ ಕಳವಿಕ್ಕಬಹುದೆ ಕೃಷ್ಣಗೆಸಿಕ್ಕ ತಪ್ಪು ಸಮೇತ ಎಳೆತಂದರೆತಕ್ಕ ಬುದ್ಧಿಯ ಹೇಳುವೆ 9 ಅಣುಘನರೂಪ ಕಾಣೆ - ನಿನ್ನೀ ಮಗಚಿನುಮಯ ರೂಪ ಕಾಣೆಘನ ಮಹಿಮನು - ಇಂಗಳಗೊಂದಿಯಚೆನ್ನಕೇಶವರಾಯ ಕಾಣೆ 10
--------------
ಕನಕದಾಸ
ನ್ಯಾಯ ವೇನೋ ಕೃಷ್ಣಯ್ಯ _ ನ್ಯಾಯವೇನೋ ಪ ಜೀಯ ನಿನ್ನ ಸ್ಮರಣೆ ಕೊಡದೆ ಎರಡು ಭ್ರಷ್ಟ ಮಾಡಿಸೊದು ಅ.ಪ. ಇತ್ತಲಿಲ್ಲ ಅತ್ತಲಿಲ್ಲ ಅರ್ಥಮಾನ ಹೋಯಿತಲ್ಲಾ ಕಾಲ ಕಳೆಸಿ ಸುತ್ತಿ ಸುತ್ತಿ ಚರಿಸೋದು 1 ಹೊಟ್ಟೆಬಟ್ಟೆಗಾಗಿ ಹೊಗಿ ಕೆಟ್ಟ ಜನರ ಸೇವೆ ಮಾಡಿ ಕಾಯ ಭ್ರಷ್ಟನಾಗಿ ಮಾಡೋದೆನ್ನ 2 ಮಾಯಪಾಶದಲ್ಲಿ ಹಾಕಿ ಹೇಯ ವಿಷಯ ಆಶೆಕೊಟ್ಟು ನ್ಯಾಯ ಮಾರ್ಗ ತೋರದೇನೆ ನೋಯಿಸೋದು ಎನ್ನನೀನು 3 ಮೋಸಮಾಡಿ ಪರರಗಂಟು ಆಶೆಯಿಂದ ಕೂಡಿಹಾಕಿ ಘಾಸಿಭವದಲಿ ನೂಕಿ ಕ್ಲೇಶಪಡಿಸುವುದು ಎನ್ನ 4 ಇಂದು ಎಂದು ಹೇಳಿ ಮಂದನಾಗಿ ಕಾಲಕಳೆಸಿ ಪಾದ ದ್ವಂದ್ವ ಧ್ಯಾನ ಮರೆಸೋದು 5 ಮಧ್ವಮತದಲ್ಲಿ ಪುಟ್ಟಿ ಮಧ್ವಗ್ರಂಥ ಓದದೇನೆ ಶುದ್ಧಮೂಢನಾಗಿ ತಿರುಗಿ ಗದ್ದನೆನಿಸುವುದು ಎನ್ನ6 ಇನ್ನು ಮುನ್ನು ನೀನೆ ಗತಿ ಎನ್ನ ಕೈ ಪಿಡಿಯೊ ಬೇಗ ಘನ್ನ ನವನೀತಧರ ಚೆನ್ನ ಶ್ರೀ ತಾಂಡವ ಕೃಷ್ಣವಿಠಲ 7
--------------
ಕೃಷ್ಣವಿಠಲದಾಸರು
ಪಚ್ಚ ಪವಳದ ಕೋಲಅಚ್ಚ ಮುತ್ತಿನ ಕೋಲ ತುಚ್ಚಗೊಯ್ಸಿದ್ರೌಪತಿಗೆ ಹುಚ್ಚು ಹಿಡಿಸುವ ಕೋಲ ಪ. ಧಿಟ್ಟೆರಿಬ್ಬರು ನಮಗೆ ಇಟ್ಟರು ಅಣೆಯ ಕೃಷ್ಣಯ್ಯ ಇದಕೆ ನಗಬಹುದು ಕೋಲಕೃಷ್ಣಯ್ಯ ಇದಕೆ ನಗಬಹುದು ಮುಯ್ಯವ ಕೊಟ್ಟುಬಾಹುದಕೆ ತಡವ್ಯಾಕೆ ಕೋಲ 1 ಜಾಣಿಯರಿಬ್ಬರು ನಮಗೆ ಆಣಿಯನಿಟ್ಟರು ವೇಣುಗೋಪಾಲ ನಗಬಹುದು ಕೋಲವೇಣುಗೋಪಾಲ ನಗಬಹುದು ಮುಯ್ಯವ ಕ್ಷಣದೊಳು ನಾವು ತಿರುಗಿಸುವೆವು ಕೋಲ2 ಹರಿಯ ತಂಗಿಯರ ಗರುವಿನ ಮುಯ್ಯವತಿರುಗಿಸಿ ಬಂದು ಉಣಬೇಕು ಕೋಲ ತಿರುಗಿಸಿ ಬಂದು ಉಣಬೇಕು ಎನುತಲೆ ಹರಿಣಾಕ್ಷಿ ಭಾಮೆ ನುಡಿದಳು ಕೋಲ3 ರಂಗರಾಯರ ಮುದ್ದು ತಂಗಿಯರ ಹಂಗಿನ ಮುಯ್ಯ ತಿರುಗಿಸುವೆ ಕೋಲ ಹಂಗಿನ ಮುಯ್ಯ ತಿರುಗಿಸುವೆ ಮುಖವ ಭಂಗಿಸಿ ಬಾಹೊ ಸಭೆಯೊಳು ಕೋಲ4 ಇಂತು ರಾಮೇಶನ ಕಾಂತೆಯರೆಂಬುವರ ಪಂಥವ ಬಿಡಿಸಿ ಬರಬೇಕು ಕೋಲಪಂಥವ ಬಿಡಿಸಿ ಬರಬೇಕು ಮುಯ್ಯದ ಭ್ರಾಂತಿಯ ಹಿಡಿಸಿ ಕೊಡಬೇಕು ಕೋಲ 5
--------------
ಗಲಗಲಿಅವ್ವನವರು
ಪಿಡಿದೆತ್ತೊ ಕೈಯ್ಯಾ ಕೃಷ್ಣಯ್ಯ ಪ ಪಿಡಿದೆತ್ತೊ ಕೈಯ್ಯಾ ಪಾಲ್ಗಡಲೊಡೆಯನೆ ಭವ ಕಡಲಿನೊಳಗೆ ಬಿದ್ದು ಬಾಯ್ಬಿಡುವೆ ಬೇಗದಿ ಬಂದು ಅ.ಪ ತಾವರೆನಾಭಾ ಕಾವದÀು | ಎನ್ನ ಜೀವನಲಾಭಾ ಶ್ರೀವ್ಯಾಸಮುನಿಗೊಲಿದವ | ನೆಂದರಿತು ಬಂದೆ ಶ್ರೀವೇಣುಗೋಪಾಲಕೃಷ್ಣ | ಗೋವಳರೊಡೆಯ ಭಾವ ಭಕುತಿಗಳೊಂದನರಿಯೆನು ಹೇವವಿಲ್ಲದೆ ದಿನವ ಕಳೆದೆನು ಸಾವಧಾನವ ಮಾಡಲಾಗದು ಶ್ರೀವರನೇ ನವವಿಧ ಭಕುತಿ ನೀಡುತ 1 ಅನುಮಾನವ್ಯಾಕೆ | ನೀನೆ ಗತಿ ಎನುವೆನು ಬಲ್ಲಿ ಅನುದಿನ ಸೇವಿಪೆ ಅನಘನೆ | ಎನ್ನಘ ಗಣನೆ ಮಾಡದೆ ಮುನ್ನ ಅನುವಾಗಿ ಪಾಲಿಸೊ ಮಾನವೇದ್ಯನೆ ಮನದಿ ನಿರ ತನುದಿನದಿ ನಿನ್ನಯ ಧ್ಯಾನವಿತ್ತು ಮನೋವಿಷಾದವನಳಿಯೆ ನಿನ್ನನು ಮರೆಯೆನುಪಕೃತಿ ಸತತ ಸ್ಮರಿಸುವೆ 2 ಶ್ರೀ ನರಹರಿಯೆ ಭಕುತಜನ | ವನಜದಿನಮಣಿಯೆ ಸಾನುರಾಗದಿ ಕೇಳ್ವೆ | ಹನುಮನ ಮತದಲ್ಲಿ ಅನುಚಾದ ಜ್ಞಾನವ | ಕನಸಿನಲಿ ಮನಸಿನಲಿ ಜನನಿ ಜನಕ ತನುಜೆ ವನಿತೆಯಾ ತನುವಿನಲಿ ನೆಲೆಸಿರುವ ಭ್ರಾಂತಿಯ ಹೀನಗೈಸಿ ಮನೋಭಿಲಾಷೆಯ ಭಾರ ನಿನ್ನದು 3
--------------
ಪ್ರದ್ಯುಮ್ನತೀರ್ಥರು
ಬಂದೆಯಾ ಕೃಷ್ಣಯ್ಯಾ ಬಂದೆಯಾ ಪ ಸುಂದರ ನರರೂಪದಿಂದಲೀ ಧರೆಯೊಳು ಅ.ಪ. ಲೋಕೈಕ ದೇವನೆಂದು ಜ್ಞಾನಿಗಳೇಕಾಗಿ ಸಾರ್ವರಿಂದುಆಕಾರ ರಹಿತನ ಲೋಕ ಸಾಮಾನ್ಯರುಸ್ವೀಕರಿಸರು ಎಂದು ಸಾಕಾರನಾಗಿ 1 ಪೂರಾ ವಿಶ್ವದಲ್ಲೆಲ್ಲ ತುಂಬಾ ನಿಂತಿಹ ನಿನ್ನ _ನಾರು ನಂಬರು ಎಂತೆಂಬಕಾರಣ ಜಗಕೆ ತೋರರೆಲ್ಲಾ ಗುಣಸಾರ ಸಂಗ್ರಹಿಸಿ ನೀ ಧೀರ ಮಾನವನಾಗಿ2 ಜಗದೊಳಂದದ್ಭುತ ಶಕ್ತಿ ಇರುವುದೆಂ _ದುಗಮಿಕೆ ಜನದೊಳಾಸಕ್ತಿಜಗದೊಳು ಗದುಗಿನ ವೀರನಾರಾಯಣಬಗೆ ಬಗೆ ಮಹಿಮೆಯ ಸುಗುಣ ಮಾನವನಾಗಿ 3
--------------
ವೀರನಾರಾಯಣ
ಬಾರೋ ಮನೆಗೆ ಕೃಷ್ಣಯ್ಯ ಕೃಷ್ಣಾಬಾರೋ ನಮ್ಮ ಮನೆಗೆ ಪ ಬಾರೋ ನಮ್ಮ ಮನೆಗೆ ವಾರೀಜನಾಭನೆಬಾರಿ ಬಾರಿಗು ನಿನ್ನ ಸಾರಿ ಕರೆವೆ ಕೃಷ್ಣ ಅ.ಪ. ಗೋಪಿ ಮಾನುನಿಯರು ಸ್ವಾಮಿ 1 ಕುಂದ ಚಂಪಕ ಜಾಜಿವೃಂದ ಶೋಭಿಪ ಮುಖ ಗಂಧವರ್ಚಿಪ ಕೃಷ್ಣ2 ಇಂದುವದನ ನಿನ್ನ ಚಂದವ ನೋಡಲುದಿವಿಜೇಂದ್ರರು ಬಂದಿಹರು ಇಂದಿರೇಶನೆ ಕೃಷ್ಣ 3
--------------
ಇಂದಿರೇಶರು
ಬಾರೋ ರಂಗಯ್ಯ ಬಾರೋ ಕೃಷ್ಣಯ್ಯ ಬಾರೋ ರಂಗ ನವನೀರದ ನಿಭಾಂಗ ಪ ನಂದಗೋಪನಂದನ ಸುಂದರ ನಾರಾಯಣ ಇಂದು ವದನ 1 ಗಮನ ವರ ಶ್ರೀವತ್ಸಲಾಂಛನ ದುರಿತ ಹರಣ ನರಹರಿ ಪರಮಪಾವನ 2 ಪಂಕಜದಲಲೋಚನ ವೆಂಕಟಾಚಲರಮಣ ಭಂಜನ 3 ಅನಘ ವನಧಿಶಯನ ಮುನಿ ಹೃತ್ಕಮಲ ಪೋಷಣ ಘನಮಣಿ ಖಚಿತಾಭರಣ ಕನಕಾಂಬರ ಭೂಷಣ 4 ಬಲಿಬಂಧನ ವಾಮನ ಜಲಜೋದರ ಜನಾರ್ಧನ ವಿಲಸಿತ ಹೆನ್ನೆ ಪಟ್ಟಣ ನಿಲಯ ಶ್ರೀ ಮಧುಸೂದನ 5
--------------
ಹೆನ್ನೆರಂಗದಾಸರು
ಬಾಲಕೃಷ್ಣ ಸುಮ್ಮನೆ ಹಟವ್ಯಾತಕಮ್ಮಾ ನಿನಗೆಮೊಮ್ಮುಣಿಸುವೆ ನಾನು ಕೇಳೊ ಕೃಷ್ಣಯ್ಯ ಪ. ಹಶಿವಿಯಾಗಿಹುದೇನೊ ನಿನಗೆ ಸಣ್ಣಹಸುಳರಂಜಿಪ ಬಾವಾ ಬಂದಾನೊ ಹೊರಗೆಮೊಸರಕಡೆದು ನಾ ಬೇಗ ಅಟ್ಟಿಹೊಸ ಬೆಣ್ಣೆ ಕೊಡುವೆನೊ ಕಂದಯ್ಯ ನಿನಗೆ 1 ಹಾಲು ಕುಡಿಸುವೆನೊ ನಾ ಒಬ್ಬಕೀಳು ತಿರುಕ ಬಾಗಿಲಲ್ಲಿ ಬಂದಿಹನೊಬಾಲಯ್ಯ ಅಳದೀರೊ ನೀನು ತನ್ನಜೋಳಗೆಯಲಿ ನಿನ್ನ ಕೊಂಡೊಯುವನು 2 ಅರಳೆಲೆ ಅಂದಿಗಿ ಇಡಿಸಿ ನಿನ್ನಪೆರನೂಸಲಲಿ ಕಸ್ತೂರಿಯ ಧರಿಸಿಪರಿಪರಿಯಲಿ ಸಿಂಗರಿಸಿ ಗೊಲ್ಲತರಳರೊಡನ ಆಡಕಳುವೆನೋ ಕರಸಿ 3 ಉಂಗುರು ಸರಪಳಿಯಿಟ್ಟು ಬಣ್ಣದಂಗಿಯ ತೊಡಿಸುವೆ ಕೇಳೋ ನಿ ಇಷ್ಟುರಂಗಯ್ಯ ಬಂತ್ಯಾಕೊ ಸಿಟ್ಟು ನಿನಗೆಮಂಗಳಾತ್ಮಕ ಏನೂ ಬೇಕೊ ಹೇಳಿಷ್ಟು 4 ಸಿರಿ ವೆಂಕಟರಾಯಾನಿನ್ನಾಟವಬಲೇಶ ನಿಚಯಾ ನೋಡಿಕರಂಣಿನೊಳಗಿಟ್ಟು ಹೀರುವರಯ್ಯಾ 5 ಪಾಪ ಕರ್ಮವ ಮಾಡಬ್ಯಾಡಾ ನರಕಕೂಪದೊಳಗೆ ಬಿದ್ದು ಹೊರಳಾಡಬ್ಯಾಡಕಾಕಪುರುಷರ ಸಂಗ ಕೇಡಾ ನಮ್ಮಶ್ರೀಪತಿಯ ಸ್ಮರಣೆ ಮಾಡದೆ ಬಿಡಬ್ಯಾಡಾ 6 ವಿಹೀತ ಕರ್ಮಗಳನ್ನು ಮಾಡೋ ನೀನುಅಹಿತಲ್ಪನೊಲಿಸಿ ಸದ್ಗತಿಯನ್ನು ಬೇಡೊಅಹಿತ ವಿಷಯ ಸುಖ ದೂಡೋ ಲೋಕ ದಹಿತನ ಸೇವೆಗೆಯುತಲಿ ಕೊಂಡಾಡೊ 7 ಸತ್ಯವಚನದಿಂದ ಬಾಳೊ ಬಲುಭಕ್ತಿಪೂರ್ವಕದಿ ಸಚ್ಛಾಸ್ತ್ರ ಕೇಳೊಚಿತ್ತದಿ ಶಾಂತಿಯ ತಾಳೊ ದುಷ್ಟ_ರುಕ್ತಿ ಕೇಳದೆ ನಿನ್ನ ಕಿವಿ ಮುಚ್ಚಿಕೊಳ್ಳೊ 8 ಪಂಚಭೇದ ಪ್ರಪಂಚವು ನಿಜವೆನ್ನೊ ಮೂಢಾ 9 ಜೀವೇಶಾರೊಂದೆಂಬೊ ಹೊಲಿಯಾ ಪರಿಭಾವಿಸೂ ದ್ವಾಸುಪರ್ಣವೆಂಬೊ ಶ್ರುತಿಯಾಕಾವನಯ್ಯನೆ ಜಗದೊಡೆಯಾ ನಮ್ಮಜೀವಾತ್ಮ ಭೃತ್ಯನೊ ಖರಿಯಾ 10 ಅದ್ವೈತರೊಡನಾಟ ಬ್ಯಾಡ ನಮ್ಮಮಧ್ವಮತದ ಪದ್ಧತಿ ಬಿಡಬ್ಯಾಡಾಖದ್ಯೋತಸುತಗಂಜಬ್ಯಾಡಾ ನೀನುಪೊಂದು ಐಹೊಳಿಯ ವೆಂಕಟನಂಘ್ರಿಗಾಢಾ 11
--------------
ಐಹೊಳೆ ವೆಂಕಟೇಶ
ಬೆಳಗುಝಾವದಿ ಬಾರೊ ಹರಿಯೆ ನಿನ್ನ ಚರಣತೊಳೆದು ತೀರ್ಥ ಪಾನ ಮಾಡುವೆ ನಾ ಪನೀರುಬಿಟ್ಟು ಮೇಲೆ ಬಾರೋ ಬೆನ್ನ ಭಾರವನು ಕೆಳಗಿಟ್ಟು ಬಾರಯ್ಯಾ ಹರಿಯೆಕೋರೆದಾಡಿಯ ತೋರ ಬಾರೋ ನಿನ್ನಧೀರ ಗಂಭೀರ ನರಹರಿ ರೂಪ ತೋರೊ1ಪುಟ್ಟ ಬ್ರಾಹ್ಮಣನಾಗಿ ಬಾರೊ ಆ-ದುಷ್ಟ ಕ್ಷತ್ರಿಯರನ್ನು ತಿರಿದವನೆ ಬಾರೋಸತ್ಯಸಂಧ ರಾಮ ಬಾರೋ ಬಲುಸಿಸ್ತಾಗಿ ಕೊಳಲನೂದುತ ಕೃಷ್ಣ ಬಾರೋ 2ಬುದ್ಧ ಪ್ರಬುದ್ಧನಾಗಿ ಬಾರೊ ಬಲುದೊಡ್ಡ ತೇಜಿಯನೇರಿ ಭರದಿಂದ ಬಾರೋಮುದ್ದು ಭೂಪತಿ 'ಠ್ಠಲ ಬಾರೋ ನಮ್ಮಮಧ್ವರಾಯರಿಗೊಲಿದ ಕೃಷ್ಣಯ್ಯ ಬಾರೋ 3
--------------
ಭೂಪತಿ ವಿಠಲರು
ಮಡದಿ ಭಾಗ್ಯ ಎಂಬುವಿಯಾಕೊ ರಂಗಯ್ಯನಿನ್ನ ಬಡಿವಾರವ ಹೇಳಿಕೊಂಬೆ ಸಾಕೊ ಕೃಷ್ಣಯ್ಯ ಪ. ಬಿಡು ಬಿಡು ಸಣ್ಣ ಮಾರಿಯನ್ನು ನೀ ಮಾಡಬ್ಯಾಡ ಬಡಿವಾರವ ಹೇಳಿಕೊಂಬುವುದೇನೊಕಡುಭಾಗ್ಯ ಪುರುಷನಾಗೊ ನೀನು ಎತ್ತಿಕೊಂಡ್ಹೋಗಿ ಮಡುವು ಸೇರಿಕೊಂಡಿ ಮತ್ತೇನೊ1 ದೊರೆತನ ಹೇಳಿಕೊಂಬೆ ಸಾಕೊ ರಂಗಯ್ಯನಿನ್ನ ಕರಕರ ಹಲ್ಲು ತಿಂಬೊ ಸಿಟ್ಟು ಕೃಷ್ಣಯ್ಯಬಿರುಗಣ್ಣು ಬಿಡವೋದ್ಯಾಕಿಷ್ಟು ರಂಗಯ್ಯನಿನ್ನ ಉರಿಮಾರಿಗೆ ಅಂಜೋರೆಲ್ಲೊ ಅಷ್ಟು 2 ಧರೆ ಮ್ಯಾಲೆ ರಾಜ್ಯ ಹ್ಯಾಂಗ ರಂಗಯ್ಯನಿನ್ನ ತಗಿ ತಗಿ ಬಲುಲೀಲಾ ಕೈಯ್ಯ ಕೃಷ್ಣಯ್ಯಸುಗುಣನೆಂತೆಂಬೊ ಮತಿಯಾದುದಕ್ಕೆಜನರು ನಗದೆ ಸೈ ಸೈ ಎಂದಾರು ಬರಿಯ ಕೃಷ್ಣಯ್ಯ3 ಧೀರ ಧನವಂತನಲ್ಲೊ ಸಾಕೊ ರಂಗಯ್ಯಆದರೆ ವನದಿನಾರು ವಸ್ತ್ರವನುಟ್ಟುಕೊಂಡಿ ಯಾಕೊ ಕೃಷ್ಣಯ್ಯಚೋರನಂತಾಡಿಕೊಂಬಿ ಸಾಕೊ ರಂಗಯ್ಯಇದ ಕೇಳಿದ ವೀರರೆಂಬವರು ನಗತಾರೊ ಕೃಷ್ಣಯ್ಯ 4 ವಸ್ತ್ರವಿಲ್ಲೆಂಬೊ ಎಚ್ಚರಿಕಿಲ್ಲೊ ರಂಗಯ್ಯತೇಜಿ ಹತ್ತೇನು ಎಂದು ಬರುವಿಯಲ್ಲೊ ಕೃಷ್ಣಯ್ಯಕತ್ತಿ ಕೈ ಶೂರನೆಂಬೊದೆಲ್ಲೊ ರಂಗಯ್ಯರಾಮೇಶ ನಿನ್ನ ಹತ್ತಿಲ್ಲಿದ್ದರೆಲ್ಲ ನಗುವರೊ ಕೃಷ್ಣಯ್ಯ5
--------------
ಗಲಗಲಿಅವ್ವನವರು
ಮುದ್ದು ಕೃಷ್ಣಯ್ಯನ ನೋಡಾನ ಬನ್ನಿ ಪ ಕೃಷ್ಣಗೆ ಪೂಜೆಯ ಮಾಡಾನ ಬನ್ನಿ ಅ.ಪ ಚಿನ್ನದ ತೊಟ್ಟಿಲಲ್ಲಿ ಚೆನ್ನಾಗಿ ಕುಂತವ್ನೆ ಚೆನ್ನ ಚೆಲುವನಕ್ಕೋ ನಗುತವ್ನೇ ಕನ್ನೆ ರಾಧಮ್ಮಗೆ ಸನ್ನೆಯ ಮಾಡುತವ್ನೆ ಬನ್ನಿ ಬನ್ನಿ ಎಂದು ಕರಿತವ್ನೆ 1 ಹುಬ್ಬಹಾರಿಸ್ತವ್ನೆ ಮಬ್ಬ ತೋರಿಸ್ತವ್ನೆ ಅಬ್ಬಬ್ಬ ಇವನಾಟ ಬಲ್ ತಮಾಸೆ ಒಬ್ಬಿಟ್ಟು ಬೇಕಂತ ಕೈಲೇ ತೋರಿಸ್ತಾನೆ ಅಬ್ಬ ಇವ ಏಳೋದು ಒಂಥರ ಬಾಸೆ 2 ಎಂಥ ಮುದ್ದಿನ ಮೊಗ ಚೆಂದುಳ್ಳಿ ಚೆಲುವ ಇಂಥವ್ನ ನೀವೆಲ್ಲೂ ಕಂಡಿಲ್ಲ ಬನ್ರೋ ನಿಂತು ನೋಡಬೇಕಿವಗೆ ಆಲು ಮೊಸರು ಬೆಣ್ಣೆ ಹಣ್ ತುಂಬಿದ ಗಂಗಾಳ ತನ್ರೋ 3 ಕಿನ್ನರ ಗೆಜ್ಜೆ ಕೈಗೆ ಔಜುಬಂದಿ ತೊಟ್ಟವ್ನೆ ಕಣ್ಗೆ ಕಪ್ಪಾ ಹಚ್ಚಿ ನವಿಲ್ಗರಿ ತಲ್ಗಿಟ್ಟಿ ಹಣೆ ಉದ್ದಾದ ತಿಲಕ ಇಟ್ಟವ್ನೇ 4 ರಾಮ್ನೂ ನಾನೆಂತಾನೇ ಭೀಮ್ನೂ ನಾನೆಂತಾನೇ ಕಾಮ್ನಪ್ಪನೂ ನಾನೆ ನೋಡಂತಾನೆ ನಿಮ್ಮೂರ ದೇವ್ರಾಣೆ ನಾನೆ ಮಾಂಗಿರಿರಂಗ ನಿಮ್ನ ಕಾಯೋಕ್ಬಂದೆ ಅಂತಾನೆ 5
--------------
ಅಸೂರಿ ರಾಮಸ್ವಾಮಿಅಯ್ಯಂಗಾರ್
ಯಾಕೆ ಇಂಥ ದುಡುಕು ಕೃಷ್ಣಯ್ಯ ನಿನಗೇಕೆ ಇಂಥ ದುಡುಕು ಪಾಕಶಾಸನಮಧ್ಯ ಪೋಕತನಗಳನ್ನುಸಾಕುಸಾಕಯ್ಯ ಕೃಷ್ಣ ಪ ಗೊಲ್ಲ ಬಾಲಕರು ನೀವೆಲ್ಲರು ಕೂಡಿಕೊಂಡುಗುಲ್ಲ ಮಾಡದೆ ಮೊಸರೆಲ್ಲ ಸವಿದೆಯಂತೆ ಕೃಷ್ಣ 1 ಪೂತನಿ ಮೊಲೆಯನ್ನು ಭೀತಿಯಿಲ್ಲದೆ ಉಂಡುಘಾತವ ಮಾಡಿದೆ ಮಾತನಾಡಯ್ಯ ಕೃಷ್ಣ2 ದುಷ್ಟ ಕಂಸನ ನೀನು ಕಷ್ಟವಿಲ್ಲದೆ ಮಡುಹಿಮುಷ್ಟಿಕನ ಕೊಂದೆ ದೃಷ್ಟಿ ತಾಕೀತಂದು 3 ಸಾರಥಿ 4 ಅಂಗಿಟೊಪ್ಪಿಗೆ ಉಂಗುರ ಉಡಿದಾರಶೃಂಗರಿಸಿಕೊಂಡು ರಂಗವಿಠಲ ಬಾರೋ 5
--------------
ಶ್ರೀಪಾದರಾಜರು
ಯಾಕೆನ್ನ ಎದುರಲಿ ನಿಲ್ಲುವುದಿಲ್ಲೋ ಯಾಕೆನ್ನಯ ಕರೆ ಕೇಳುವುದಿಲ್ಲೋ ಪ ಯಾಕೆನ್ನ ಅರ್ಚನೆಗೊಲಿಯುವುದಿಲ್ಲೋ ಯಾಕೆನ್ನೊಳು ದಯಮಾಡುವುದಿಲ್ಲೋ ಅ.ಪ ತರಳ ಧೃವನ ಮೊರೆ ಕೇಳಿಸಿತಲ್ಲ ಕರಿ ಎತ್ತಿದ ಸುಮ ಕಾಣಿಸಿತಲ್ಲ ಅರಿ ಅನುಜನ ಸೇವೆ ಹಿರಿದಾಯ್ತಲ್ಲಾ ಕರುಣ ಎನ್ನೊಳಗೇಕೆ ಬರದೋ ಕೃಷ್ಣಯ್ಯ 1 ಅಗಣಿತ ಗೋಪಿಯರೆಡೆಯಲಿ ನಲಿದೆ ನಗಧರನಾಗಿ ಗೋಪಾಲರ ಪೊರೆದೆ ಖಗನಿದ್ದೆಡೆಗೇ ಭರದಲಿ ನಡೆದೆ ನಗುಮೊಗದರಸ ಮಾಂಗಿರಿಯ ರಂಗಯ್ಯ2
--------------
ಅಸೂರಿ ರಾಮಸ್ವಾಮಿಅಯ್ಯಂಗಾರ್
ರಂಗನಂಗದ ಸಂಗ ಸುಖ ನೋಡ ಅಂಗನೆಲಕುಮಿಯ ಸಂಗದುರ್ಲಭವೆಈಅಂಗನೆಯರು ಮಾಡಿದ ಸುಕೃತವಂತೆ ಪ. ಗುಂಗುರಗೂದಲ ಮ್ಯಾಲೆ ಭೃಂಗದ ಮರಿಗಳು ರಂಗನ ಮುಖದ ರಸವನೆರಂಗನ ಮುಖದ ರಸವನೆ ಸÀವಿದುತಮ್ಮಂಗವ ಮರೆತು ಕುಳಿತಾರೆ ಬ್ರಹ್ಮಾದಿ ವಂದ್ಯ1 ಪಂಕಜನಾಭಗೆ ವಂಕಿ ಬಾಪುರಿ ಇಟ್ಟುಕಂಕಣ ಕಡಗ ಮೊದಲಾಗಿಕಂಕಣ ಕಡಗ ಮೊದಲಾಗಿ ರಂಗಗೆಅಲಂಕಾರ ಮಾಡಿ ಕೆಲದೆಯರು2 ಪಂಚಬೆರಳಿಗೆ ತಕ್ಕ ಮಿಂಚು ಮುದ್ರೆಗಳಿಟ್ಟುಪಂಚರತ್ನದಲಿ ರಚಿಸಿದಪಂಚರತ್ನದಲಿ ರಚಿಸಿದ ವಡ್ಯಾಣಕೆಂಚೆಯರು ಇಟ್ಟು ನಡುವಿಗೆ 3 ಶ್ರೀದೇವಿ ಅರಸಗೆ ಕ್ಯಾದಿಗೆ ಮುಡಿಸುತಊದಿನ ಕಡ್ಡಿಪರಿಮಳಊದಿನ ಕಡ್ಡಿಪರಿಮಳ ಮೂಸುತಮೋದ ಬಡುವವರು ಕಡೆಯಿಲ್ಲ4 ನೀಲವರ್ಣನ ಮುಂದೆ ಸಾಲು ದೀವಿಗೆಯಿಟ್ಟುಮ್ಯಾಲೆ ಚಾಮರವ ಸುಳಿಸುತಮ್ಯಾಲೆ ಚಾಮರವ ಸುಳಿಸುತಶಿರಮ್ಯಾಲೆ ಪೂಮಳೆಯ ಗರೆದಾರು 5 ಚಲ್ವ ರಂಗನ ಮುಂದೆ ಜಲಪಾತ್ರೆಯನ್ನಿಟ್ಟುಎಲೆಅಡಕಿ ತಬಕ ಫಲಗಳು ಎಲೆಅಡಕಿ ತಬಕ ಫಲಗಳ ತಂದಿಟ್ಟುಕೆಲದೆಯರು ಕೈಯ ಮುಗಿದಾರು 6 ಅಪಾರ ಮಹಿಮಗೆ ಧೂಪಾರತಿಯನೆತ್ತಿಭೂಪರಾಮೇಶ ಸಲುಹೆಂದುಭೂಪರಾಮೇಶ ಸಲುಹೆಂದುಗೋಪಾಲಕೃಷ್ಣಯ್ಯನ ಎದುರಲಿ ನಿಂತಾರು 7
--------------
ಗಲಗಲಿಅವ್ವನವರು