ಒಟ್ಟು 104 ಕಡೆಗಳಲ್ಲಿ , 43 ದಾಸರು , 100 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಗುರುಹಿರಿಯರನುಸರಿಸಿ ಹÀರಿಯ ಮನದೊಳಗಿರಿಸಿಪರಗತಿಯ ಬೇಗ ಸಾಧಿಸಿರೊ ಪ. ಲೆಕ್ಕವಿಲ್ಲದ ದೇಹವೆಂಬ ಸೆರೆಮನೆಯೊಳಗೆಸಿಕ್ಕಿ ಬಹುಕಾಲ ಬಳಲದಿರಿರಕ್ಕಸಾರಿಯ ಭಕ್ತರೊಳು ಸೇರಿ ಮುಂದೆ ಸೆರೆ-ಯಿಕ್ಕದಂತವನ ಮರೆಹೋಗಿರೊ 1 ಕಂಬಳಿಯ ಬುತ್ತಿಯಂತೀ ದೇಹದೊಳಗೆ ಸುಖವೆಂಬುದಿಲ್ಲವು ದುಃಖಭರಿತಅಂಬುಜಾಕ್ಷನ ದಿವ್ಯ ಮಂಗಳ ಕಥಾಮೃತವ-ನುಂಬ ಸಂಭ್ರಮಕೆ ಸರಿಗಾಣೆನು 2 ಮಕ್ಕಳುಗಳಳುವಾಗ ಮಡದಿಯರು ಜರಿವಾಗಭಿಕ್ಷುಕರು ಬಂದು ಬೈದ್ಹೋಗುವಾಗಇಕ್ಕಿ ಪೊರೆವುದಕೆ ಬಗೆಯಿಲ್ಲದ ದರಿದ್ರಂಗೆಸೌಖ್ಯವೆತ್ತಣದು ಮನುಜರಿಗೆ 3 ತಾಯ ಮಾರಿ ತೊತ್ತಕೊಂಬ ಪಾಮರನಂತೆಹೇಯಕುಜನರ ಚರಣಕೆರಗಿಶ್ರೀಯರಸನಂಘ್ರಿಗಳ ನೆನೆಯಲೊಲ್ಲದ ಮನುಜರಿಗೆಆಯುಷ್ಯ ಬರಿದೆ ಹೋಯಿತಲ್ಲ 4 ಐವರಿತ್ತೊಡವೆಯನು ಅವರವರು ಒಯ್ವರು ಮ-ತ್ತೈವರೆಂಬುವರು ತೊಲಗುವರುಮೈಯ ಹತ್ತರಕೂಟ ಹರಿದು ಹೋಗುವ ಮುನ್ನಕೈಯ ಪಿಡಿದೆತ್ತುವರ ಕಾಣೆ 5 ಕಾಲು ಜವಗುಂದಿದವು ರೋಗರುಜಿನಗಳಿಂದಕಾಲನ ಭಟರು ಬಂದು ಕವಿದುಸಾಲಾಗಿ ನಿಂತಾಗ ಮುಖಘಂಟೆಯೊಳಗಿನನಾಲಿಗೆಗೆ ನಾದವೆಲ್ಲಿಹುದೊ 6 ಈಗಲೆ ಹರಿನಾಮನಾದದಿಂದೆಚ್ಚೆತ್ತುನಾಗಶಯನನ ಪುರದ ಪಥವಆಗಮಜ್ಞರ ಕೈಯ ಕೇಳಿಕೊಳ್ಳಿರೊ ನೀವುಈ ಗಾಳಿದೀಪ ಸ್ಥಿರವಲ್ಲ7 ಜರೆ ಬಂದು ಕಡೆಯಲ್ಲಿ ಗುರುಗುರುಟ್ಟುವಾಗಶರೀರಸಂಬಂಧಿಗಳ ಕಾಟತರುಣಿಯರ ಮೇಲಾಸೆ ತಮ್ಮ ಹಿತವರಿಯದೆಬರಿದೆ ಭವದೊಳಗೆ ಬಳಲದಿರಿ 8 ವೇದಶಾಸ್ತ್ರವನೋದಲಿಲ್ಲ ಜಪತಪಸಾಧು ಸತ್ಕರ್ಮಗಳ ಸರಕಿಲ್ಲಮಾಧವನ ಪೂಜೆಯನು ಮಾಡಿದವನಲ್ಲ ಹರಿಪಾದತೀರ್ಥ ವ್ರತಗಳಿಲ್ಲ 9 ಊಧ್ರ್ವಪುಂಢ್ರsÀಗಳೆಲ್ಲಿ ಹರಿಯ ಲಾಂಛನವೆಲ್ಲಿಪದ್ಮಾಕ್ಷಿ ಶ್ರೀತುಲಸಿ ಸರಗಳೆಲ್ಲಿಸದ್ಧರ್ಮಪಥವೆಲ್ಲಿ ವಿಷಯಾಂಧಕೂಪದೊಳುಬಿದ್ದು ಹೋರಳುವ ಮನುಜರೆಲ್ಲಿ 10 ಏಕಾದಶಿಯ ಮಾಡಿ ಯತಿಗಳೊಡನೆ ಆಡಿಪೋಕವೃತ್ತಿಗಳನೀಡಾಡಿಶ್ರೀಕಾಂತನನು ಬೇಡಿ ಸುಕೃತಿಗಳನೆ ಕೂಡಿಆ ಕೃಷ್ಣನಂಘ್ರಿಗಳ ಪಾಡಿ 11 ಉಕ್ಕಿ ಹರಿಯನೆ ಪೊಗಳಿ ಅವನಂಗಣದಿ ಹೊರಳಿಶುಷ್ಕ ತರ್ಕಗಳ ಮೇಲೆ ಉಗುಳಿಭಕ್ತಿಜ್ಞಾನಗಳಿರಲಿ ಮಿಕ್ಕ ಪಥದಿಂ ಮರಳಿಮುಕ್ತಿಮಾರ್ಗದಲಿನ್ನು ತೆರಳಿ 12 ಕೊಳ್ಳೆನಾಯಕ ಬಂದು ಕೋಟೆಗಡರದ ಮುನ್ನಕಳ್ಳರೈವರ ಕಾಟದಿಂದಉಳ್ಳ ಪುಣ್ಯಾರ್ಥಗಳು ಕೊಳ್ಳೆ ಹೋಗದ ಮುನ್ನಫುಲ್ಲನಾಭದಲಿ ಬಚ್ಚಿಡಿರೊ 13 ಮಲಮೂತ್ರರಕ್ತಮಾಂಸದ ರಾಸಿಗಳು ಕೂಡಿಎಲುವಿನ ಬಿಲದಲ್ಲಿ ಗೂಡಮಾಡಿಬೆಳೆಸಿದೀ ತನುವೆಂಬ ನರಕದಾಸೆಯ ಬಿಟ್ಟುಜಲಜನಾಭನ ಸೇರಿಕೊಳ್ಳಿರೊ14 ಒಂಬತ್ತು ಛಿದ್ರವುಳ್ಳ ದೇಹವೆಂಬ ಮಡಕೆಯಲ್ಲಿತುಂಬಿದ ವಾಯು ಸ್ಥಿರವೆಂದುನಂಬಿಕೊಂಡಿರಬೇಡಿ ಹಯವದನ ಹರಿಯ ಪಾ-ದಾಂಬುಜವ ಸೇರಿ ಬದುಕಿರೊ 15
--------------
ವಾದಿರಾಜ
ತಾರಮ್ಮಯ್ಯಾ ರಘುಕುಲ ರಾಮಚಂದಿರನ ಪ ಈರೇಳು ವರುಷವು ಮೀರಿ ಪೋಗುತಲಿದೆಸೇರದನ್ನೋದಕ ಮಾರಪಿತನ ಕರೆ ಅ.ಪ. ಪರ್ಣ ಶಾಲೆಯಂತೆ ಅಲ್ಲಿ ಸು-ವರ್ಣದ ಮೃಗವಂತೆ ||ಕನ್ಯೆ ಸೀತಾಂಗನೆ ಬಯಸಿದಳಂತೆಸ್ವರ್ಣಾಂಬರ ಬೆನ್ಹತ್ತಿ ಪೋದನಂತೇ 1 ಲಕ್ಷ್ಮಣ ಅಲ್ಲಿಂದ ಪೋಗಲುತಕ್ಷಣ ಖಳ ಬಂದ ||ಲಕ್ಷ್ಮಿಯಾಕೃತಿಯ ಕೊಂಡು ಪೋಗೆ ಕಮ-ಲೇಕ್ಷಣ ಪೊರಟನು ತೀಕ್ಷಣವಲ್ಲಿಗೆ 2 ಅಂಜನೆ ಸುತ ಬಂದ ಹರಿಪದಕಂಜಕೆರಗಿ ನಿಂದಾ ||ಕುಂಜರಗಮನೆಯ ಕುರುಹು ಪೇಳೆನೆ ನಿ-ರಂಜನ ಮೂರ್ತಿಗೆ ಅಂಜದೆ ಬೆಸಸಿದ 3 ಶರಧಿಯನೇ ಹಾರಿ ಉಂಗುರಧರಣಿಸುತೆಗೆ ತೋರೀ ||ತರು ಪುರ ಗೋಪುರ ಉರುಹಿ ಚೂಡಾಮಣಿಹರಿಗೆ ಸಮರ್ಪಿಸಿ ಹರುಷದಲಿಹನಂತೆ 4 ಸೇತುವಿಯನೆ ಕಟ್ಟಿ ಖಳಕುಲನಾಥನ ತರಿದೊಟ್ಟೀ ||ಸೀತೆ ಸಹಿತ ಮೋಹನ್ನ ವಿಠ್ಠಲ ಜಗ-ನ್ನಾಥ ಹೊರಟನಂತೇ ಕಾಂತೇ 5
--------------
ಮೋಹನದಾಸರು
ತೊಲಗು ನೀ ತೊಲಗಿನ್ನು ಅಭಿಮಾನವೆಅಲೆಬಡಿಸದಿರೆನ್ನನೂ ಹಲವು ಜನರಕಾಲಕೆಳಗೆ ನಿಲ್ಲಿಸಿಯನ್ನ ಹೊಲೆಗೆಲಸವ ಮಾಡಲೆಳಸಿ ನೆಗ್ಗಿದೆಯಲ್ಲ ಪಸತಿಸುತ ಪೋಷಣೆಯು ಮುಖ್ಯವು ಮಾತಾಪಿತೃಗಳಾರಾಧನೆಯು ಬಳಗ ಬಂಧು ತತಿಗಳ ಮನ್ನಣೆಯು ಕುಲ ಜಾತಿ ದೇವತೆಯ ಪೂಜಿಪ ಹಬ್ಬವು ಬಿಡಕೂಡದುವ್ರತ ಉಪವಾಸವಾರತಿಯಕ್ಷತೆಯು ಮುಂಜಿಯುಸುತೆಗೆ ಮದುವೆಯೆಂದು ಮತಿಗೆಡಿಸಿದೆಯಲ್ಲ 1 ಅರೆಘಳಿಗೆಯು ನಿಲ್ಲಲು ವೇಳೆಯ ಕೊಡದೆರಗಿಸಿ 'ಷಯದೊಳು ನಾನಾ ಬಗೆಹರುಬಿಗೆ ಹರುಸಲು ಮನವನೀಕೊರಗಿಸಿ ಕುಣಿಸುತಲು ಒಂದೇ ಕ್ಷಣಹರಿನಾಮ ಸ್ಮರಣೆಗೆ ತೆರಹುದೋರಿಸದಾಯುಹರಿದು ಪೋಗುವ ಹಾಗೆ ಕರಗಿಸಿದುದೆ ಸಾಕು 2ಶ್ರವಣಕೆ ಮನ'ತ್ತೆಯಾ ನಾಮ ಸ್ಮøತಿ ಸ'ಯ ಸೇ'ಸಬಿಟ್ಟೆಯ ಸಜ್ಜನರೊಳೊಂದುವ ದಾರಿಯ [ತೋರಿ]ದೆಯ ಎಂದಾದರು ಶಿವಸೇವೆಗಳ ತಂದೆಯ 'ೀಗಾಗುವ ಹವಣನರಿಯದೆ ಸಂಗವ ಮಾಡಿ ನಿನ್ನೊಳಗ'ವೇಕವನು ಪಡೆದವನಾದೆನಯ್ಯಯ್ಯೊ 3ಕಂಡವರೊಡವೆಯನು ತಂದು ಕರೆದು'ಂಡು ಬಳಗವನ್ನು ಮನ್ನಿಸಿಯವರ್ಕೊಂಡಾಡೆ ಹರುಷವನು ತೋರಿಸಿ ಬಹಭಂಡಾಟನಡತೆಯನು ಕರೆಸಿಯನ್ನಗುಂಡಿಗೆ ನೂಕಿಸೆ ಕಂಡೆ ನಿನ್ನಾಟವಮೊಂಡಮುಂಡೇದೆನ್ನೀ ಕೂಗಕೇಳಿ ಬೇಗ 4ಶ್ರೌತ ಸ್ಮಾರ್ತದ ಬಟ್ಟೆಯ ಹೊಂದುವರೆ ನೀನೋತು ಮಾರ್ಗವ ತೊಟ್ಟೆಯ ಅನ್ಯಾಯದ ರೀತಿಯ ನೀ ಬಿಟ್ಟೆಯ ನರಕಬಪ್ಪ ಭೀತಿಯ ನೀತೊಟ್ಟೆಯ ಯೇನೆನ್ನದೆಲೆಕಾತರಿಸುತ ಕಾಮಕಾತು ಕ್ರೋಧವ ಮಾಡಿಮಾತಿಗಾದರು ಒಮ್ಮೆ ಸೋತವನಾದೆಯ 5ಕಲಹವ ಜನರೊಳಗೆ ಗಂಟಿಕ್ಕಿತುತೊಲಗಿಸಿ ಬಯಲೊಳಗೆ ನಿಲ್ಲಿಸಿಯೆನ್ನಹಲವು ಬಗೆಯ ಮಾತಿಗೆ ಗುರಿಯ ಮಾಡಿಬಳಲಿ ಬಾಡುವ ರೀತಿಗೆ ಕಂಗೆಡಿಸಿದೆಕಾಲದೊಳು ಧನದೊಳು ಬಲದೊಳು ಛಲದೊಳುನೆಲೆಗೊಂಡು ನೀಯೆನ್ನ ಥಳಿಸಿದುದೇ ಸಾಕು 6ಅರಿಯದಾದೆನು ನಿನ್ನನು ಅದರಿನಿಂದಹುರಿದೆ ನೀನೆನ್ನುವನು ಚಿಕ್ಕನಾಗಪುರದೊಳಗಜ್ಞರನು ರಕ್ಷಿಸಲಾಗಿಗುರುವಾಸುದೇವಾರ್ಯನು ನೆಲಸಿಹನುಮರೆಯೊಕ್ಕೆರಗಿ ನಿನ್ನ ಪರಿಯ ಪೇಳಲು ಜ್ಞಾನದುರಿಯೊಳು ದ'ಪನೆಚ್ಚರ ನಿಲಬೇಡಿನ್ನು 7
--------------
ವೆಂಕಟದಾಸರು
ದ್ವಾದಶನಾಮ ನಿರ್ವಚನ ಶ್ರೀಕೃಷ್ಣ ನಿನ್ನ ಚರಣಾರವಿಂದಕ್ಕೆರಗಿ ಭಕುತಿಯಿಂ ನಿನ್ನ ಪನ್ನೆರಡು ರೂಪಗಳ ನಾಮ ನಿರ್ವಚನದಿಂ ಕೂಡಿ ನುತಿಸುವೆ ನಾನು ಸರ್ವಸಿದ್ಧಿಯನ್ನಿತ್ತು ಕಾಪಾಡು ಹರಿಯೆ 18 ಸೃಷ್ಟಿಲಯಕಾರಿಗಳು ಬೊಮ್ಮರುದ್ರರು ಇವರೆ ಕೇಶವೆಂಬಕ್ಷರದಿ ಮೆರೆಯುತ್ತಲಿಹರು ವರ್ತನವು ಯಾರಿಂದಲಹುದವನೆ ಪರದೇವ ಕೇಶವಾತ್ಮಕನವನು ಶ್ರೀಕೃಷ್ಣ ದೇವ 19 ನಾರವೆಂದರೆ ದೋಷ ಲೇಶವಿಲ್ಲದ ಗುಣವು ನಾರವೆಂದರೆ ನೀರು ಜೀವನಾಧಾರ ನಾರವಯನವು ಯಾರಿಗವನೆ ನಾರಾಯಣನು ರಜತಪೀಠದ ಪುರದ ಪರದೈವವವನು 20 ಮಾಧವನು ಮಾಲಕುಮಿಗೊಡೆಯನವ ಪರಮಾತ್ಮ ಮಾಯೆಯನು ಎದೆಯಲ್ಲಿ ತಾಳ್ದ ಸಿರಿವರನು ಮಾಯೆಯಿಂದಲಿ ಮಾನವಗೆ ಮುಸುಕನು ಹಾಕಿ ತನ್ನ ರೂಪವನಾರು ನೋಡದಂತಿಹನು 21 ಹಿರಿ ಬೆಟ್ಟವನು ತಾನು ಕಿರಿ ಬೆಟ್ಟಿನಲಿ ಹೊತ್ತು ಗೋವುಗಳ ರಕ್ಷಿಸಿದ ಗೋಪಾಲ ನೀನು ವೇದರಕ್ಷಕನಾಗಿ ಗೋವಿಂದನೆನಿಸಿರುವೆ ಶ್ರೀಕೃಷ್ಣ ನಿನ್ನ ಮಹಿಮೆಯನೇನ ಪೇಳ್ವೆ 22 ಚೇಷ್ಟಕನು ಬಲರೂಪನಾಗಿರುವ ಕಾರಣದಿ ವಿಶ್ವದಲ್ಲೆಲ್ಲು ವ್ಯಾಪಿಸಿರುವುದರಿಂ ವಿಷ್ಣುನಾಮದ ನೀನು ವೈಷ್ಣವರ ಕುಲದೊಡೆಯ ಮಧ್ವಹೃನ್ಮಂದಿರದ ನೆಲೆಯಲ್ಲಿ ಇರುವೆ 23 ಮಧುವೆಂಬ ದೈತ್ಯನನು ಸೃಜಿಸಿಯವನನು ಕೊಂದು ಮಧುಸೂದನನು ಎಂಬ ಬಿರುದು ನೀ ಪೊತ್ತೆ ದುರ್ಜನರ ಸಂಹಾರ ಸಜ್ಜನರ ಉದ್ಧಾರ ಎಂಬೆರಡು ಕಾರ್ಯಗಳಿಗಾಗಿಯವತಾರ 24 ತ್ರೈವಿಕ್ರಮಾವತಾರವ ತಾಳ್ದು ದೇವ ಕಾಲ ತೊಳೆದು ಮೂರು ಲೋಕದ ಭಕುತರಿಗೆ ದರ್ಶನವ ಕೊಟ್ಟು ಭಕ್ತರಕ್ಷಕನಾಗಿ ಮೆರೆದೆ ಸಿರಿವರನೆ25 ವಾಮನನು ನೀನಾಗಿ ವಾಮಪಂಥದಿ ಹೋಗಿ ಬಲಿ ಚಕ್ರವರ್ತಿಯಲಿ ಮೂಹೆಜ್ಜೆ ಬೇಡೆ ಭಕುತಿಯಿಂದವ ಕೊಡಲು ಮುಕುತಿಯನು ಕೊಡಲೆಂದು ಬಲಿಯ ಮನೆಯೂಳಿಗವ ಗೈದೆ ಪರಮಾತ್ಮ26 ಸಿರಿಯನೆದೆಯಲಿ ಪೊತ್ತು ಶ್ರೀಧರನು ನೀನಾಗಿ ಸರ್ವ ಭೂಷಣಗಳಿಂ ಶೋಭಿಸುತಲಿರುವೆ ಅನ್ನದಾತನು ನೀನು ಅನ್ನಭೋಕ್ತøವು ನೀನು ಭುಕ್ತಿ ಮುಕ್ತಿ ಪ್ರದನು ನೀನಿರುವೆ ದೇವ 27 ಇಂದ್ರಿಯಗಳು ಹೃಷೀಕಾಭಿಧಾನದಲಿಹವು ನೀನವುಗಳಿಗೆ ಎಲ್ಲ ಒಡೆಯನಾಗಿರುವೆ ಹೃಷೀಕೇಶ ನಾಮವದು ನಿನಗೊಪ್ಪುವದು ಹರಿಯೆ ನನ್ನ ಮನ ನಿನ್ನಡಿಯೊಳಿರುವಂತೆ ಮಾಡು28 ಸಾಗರವನುದರದಲ್ಲಿರಿಸಿ ನೀನದರಿಂದ ನಾಭಿಯಲಿ ಪದುಮವನು ಸೃಷ್ಟಿಸಿದೆ ದೇವಾ ಪದುಮನಾಭನು ನೀನು ಬೊಮ್ಮಪಿತನಾಗಿರುವೆ ಮಾಯಾ ರೂಪವನೇನಪೇಳ್ವೆ29 ಮೊಸರ ಕುಡಿಕೆಯನೊಡೆದು ತಾಯಿಯಿಂ ಬಂಧಿತನು ದಾಮೋದರನು ಎನಿಸಿ ಉಜಡೆಯನ್ನೊಯ್ದು ಮರಗಳೆಡೆಯಲಿ ಪೊಕ್ಕು ಬೀಳಿಸುತಲವುಗಳನು ಭಕುತರಾ ಶಾಪಮೋಚನೆಯ ನೀ ಮಾಡ್ದೆ30 ಕೇಶವನೆ ಮೊದಲಾದ ಪನ್ನೆರಡು ನಾಮಗಳ ಅರ್ಥವರಿತನವರತ ಪೇಳಲವಗೊಲಿದು ಸಂಸಾರ ಬಂಧನವ ತೊಲಗಿಸಿಯೆ ಪರಮಾತ್ಮ ತನ್ನ ಬಳಿಗೊಯ್ಯುವನು ನಿಜ ಪೇಳ್ವೆ ನಾನು31 ಶ್ವೇತ ರಕ್ತವು ಪೀತ ಕೃಷ್ಣ ವರ್ಣಗಳೆಂಬ ನಾಲ್ಕು ಬಣ್ಣದ ದೇವನೊಬ್ಬನೇ ಇಹನು ಕಲಿಯುಗದ ಕಾಲದಲಿ ಕೃಷ್ಣನೊಬ್ಬನ ನೆನೆದು ನಾಮಜಪ ಮಾಡಿದರೆ ಮುಕ್ತಿಯನು ಕೊಡುವ 32
--------------
ನಿಡಂಬೂರು ರಾಮದಾಸ
ನಮೋ ಹನುಮ ಜೈ ಬಲವಂತ ನಮೋ ಪರಾಕ್ರಮ ಧೀಮಂತ ಪ ಹಾರಿ ಮಹಾಸಾಗರ ಸೇರಿ ದುರುಳನಪುರ ಮೀರಿದ ಬಲು ಶೃಂಗಾರದಿ ಶೋಭಿಪ ಸೂರಗೈದೆಲೋ ವನ 1 ಬಿಂಕಮುರಿದು ಅಶಂಕ ದನುಜಕುಲ ಪಂಕಜಮುಖಿಪಾದಪಂಕಜಕೆರಗಿ ಲಂಕೆ ದಹನ ಗೈದ್ಯೋ 2 ಸ್ವಾಮಿ ಶ್ರೀರಾಮನ ಪ್ರೇಮ ಪಡೆದು ನಿ ಸ್ಸೀಮನೆ ಎನ್ನನು ಪ್ರೇಮದಿ ಪೊರೆಯೈ ಸ್ವಾಮಿ ಮೂರುತಿ 3
--------------
ರಾಮದಾಸರು
ನಾರಸಿಂಹ ನಾರಸಿಂಹ ನಾರಸಿಂಹ ಪ ನಿತ್ಯದಲಿ ಬರುವ ಅಪಮೃತ್ಯುವಿನ ಬಾಧೆಯ ಕೃತ್ತಿ ಒತ್ತಿ ಪರಿಹರಿಸಿ ಭೃತ್ಯನಾದ ಜೀವನ್ನ ತೃಪ್ತಿಪಡಿಸುವ ದೇವ ಭಕ್ತವತ್ಸಲ ನಾರಸಿಂಹ 1 ಅಂದು ಸ್ವಪ್ನದಿ ಬಂದೆ ದ್ವಂದ್ವ ಪಾದಕ್ಕೆರಗಿ ನಿಂದು ನಾ ನಿನ್ನ ಬೇಡೆ ಸಂಧಿಸಿ ಕ್ರೂರ ದೃಷ್ಟಿಯಿಂದ ನೋಡಿ ಮಂದೀಗೆ ಕುಂದು ಮಾಡಬ್ಯಾಡೆಂದೆ 2 ಅಂದಿನಾರಭ್ಯ ಬಲು ಬಂಧನಕೆ ಸಿಲ್ಕಿ ನಾ ಪರಿ ಪೇಳಲಾರೆ ಹಿಂದಿನ ಅಘವೆಣಿಸದೆ ಬಂದು ನಾರಿ ಸಹಿತ ತಂದೆ ಈ ಸುತನ ಕಾಯೋ 3 ತಂದೆ ತಾಯಿಯು ನೀನೆ ಬಂಧು ಬಳಗವು ನೀನೆ ಎಂದು ಎನ್ನಗಲದೆ ಬಂದು ನೆಲಸೆನ್ನಲ್ಲಿ ಅಜ್ಞಾನ ಕೊಡದಿರು ವಂದಿಸುವೆನು ನಾರಸಿಂಹ 4 ಮುಂದಾದರು ಹೃನ್ಮಂದಿರದಿ ನೆಲೆಗೊಂಡು ಸಂದರ್ಶನವನೀಯೊ ದೇವ ಕಂದರ್ಪಹರ ವಿಜಯ ರಾಮಚಂದ್ರವಿಠಲರೇಯ ವಂದೆ ಭಕ್ತಿಯ ಪಾಲಿಸು 5
--------------
ವಿಜಯ ರಾಮಚಂದ್ರವಿಠಲ
ನಿನ್ನ ಪೋಲುವ ಕರುಣಿಗಳನಾರ ಕಾಣೆ ಪ್ರ ಪನ್ನ ತಾ ಪಾಪಹರನೇ ಪ ಎನ್ನಪರಾಧಗಳ ಎಣಿಸದಿರು ಅಜಭವಶ ರಣ್ಯ ಪರಿಪೂರ್ಣೇಂದಿರಾಗಾರ ಅ ಶುದ್ಧಾಖ್ಯ ದ್ವಿಜನು ದಾರಿದ್ರ್ಯದಲಿ ನೆರೆ ನೊಂದು ಸದ್ಧರ್ಮ ತೊರೆದು ಮರೆದು ಶ್ರಾದ್ಧಾದಿ ದುಷ್ಟನ್ನ ಮೆದ್ದು ನಿಂದಿತನಾಗಿ ಬಿದ್ದಿರಲು ಸತಿಯು ಮತಿಯು ತಿದ್ದಿ ಪೇಳಲು ಕೇಳಿ ಶುದ್ಧ ಭಾವದಿ ತವ ಪ ದದ್ವಯಕ್ಕೆರಗಿ ಮರುಗಿ ಪದ್ಮೇಶ ಸಲಹೆನಲು ಸಿದ್ಧಿಸಿ ಮನೋರಥವ ಉದ್ಧಾರವನು ಮಾಡ್ದೆ ನೋಡ್ದೆ 1 ವಿಧಿಯ ಸಂಸ್ತುತಿ ಕೇಳಿ ಮಧ್ವಜಾಕಾರಿ ಮದಡತಮನುದರ ಬಗೆದೇ ಉದಧಿ ಮಥನದಲುದಿಸಿದಮೃತ ದೇವತೆಗಳಿಗೆ ಮುದದಿಂದಲೆರೆದೆ ಪೊರೆದೆ ಹೇಮ ಲೋಚನನ ನೀ ದೌಂಷ್ಟ್ರ ತುದಿಯಿಂದ ಕೊಂದೆÀ ತಂದೆ ಬೆದರದಲೆ ಕರೆದರ್ಭಕನ ನುಡಿಗೆ ಅವನಯ್ಯ ನುದರ ರಕ್ತವನು ಸುರಿದೇ ಮೆರೆದೇ 2 ವೈರೋಚನಿಯ ಭೂಮಿ ದಾನವನು ಬೇಡಿ ಭಾ ಗೀರಥಿಯ ಪಡದಿ ಪದದಿ ಧಾರಿಣಿಯ ದಿವಿಜರಿಗೆ ದಾನವಿತ್ತವನಿಪರ ಗಾರು ಮಾಡಿದೆ ಸವರಿದೇ ನೀರಧಿಯ ಬಂಧಿಸಿ ದಶಾಸ್ಯನ ಬಲವನು ಸಂ ಹಾರ ಮಾಡಿದೆ ರಣದೊಳು ಕಾರಗೃಹದೊಳಗಿಪ್ಪ ಜನನಿ ಜನಕರ ಬಿಡಿಸಿ ತೋರಿಸಿದೆ ವಿಶ್ವರೂಪಾ ಶ್ರೀಪಾ 3 ಆದಿತೇಯರು ಮಾಳ್ಪ ಸಾಧುಕರ್ಮಗಳ ಶುದ್ಧೋದನಾಚರಿಸೆ ತಿಳಿದು ವೇದ ಶಾಸ್ತ್ರಾರ್ಥ ಪುಸಿಯೆಂದರುಪಿ ಜಿನನತಿ ಭೇದಗೈಸಿದೆ ಸಹಿಸಿದೇ ಭೇದಗೊಳಿಸುವ ಕಲಿಯ ಕೊಂದು ಶೀ ಘ್ರದಿ ತಮಸಿಗೈಸಿದೆ ಕಲ್ಕಿ ಭಳಿರೇ ನಿಖಿಳ ಲೋಕವನೆಲ್ಲ ಧರಿಸಿ ಪ್ರಳ ಯೋದಕದಿ ಮಲಗಿ ಮೆರೆದೇ ಪೊರೆದೇ 4 ಹಂಸರೂಪದಲಿ ಕಮಲಾಸನಗೆ ತತ್ವೋಪ ದೇಶಮಾಡಿದೆ ಕರುಣದೀ ವ್ಯಾಸಾವತಾರದಲಿ ದೇವ ಋಷಿ ಪಿತೃಗಳಭಿ ಲಾಷೆ ಪೂರೈಪ ನೆವದೀ ಭಾಷ್ಯತ್ರಯಗಳಿಂದ ಭಗವದ್ಗುಣಂಗಳ ಪ್ರ ಭಾಷ್ಯತ್ರಯಗಳಿಂದ ಭಗವದ್ಗುಣಂಗಳ ಪ್ರ ಕಾಶÀ ಮಾಡಿದೆ ಮೋದದಿ ವಾಸವಾನುಜ ಜಗನ್ನಾಥವಿಠಲ ನಿನ್ನವರ ಸಲ ಹೋ ಸಮರ್ಥಾ ಕರ್ತಾ 5
--------------
ಜಗನ್ನಾಥದಾಸರು
ಪರಮಪದವಿಯನೀವ ಗುರುಮುಖ್ಯ ಪ್ರಾಣನಧರೆಯೊಳಗುಳ್ಳ ಮಾನವರೆಲ್ಲ ಭಜಿಸಿರೊ ಪ ಅಂದು ತ್ರೇತಾಯುಗದಿ ಹನುಮನಾಗವತರಿಸಿಬಂದು ದಾಶರಥಿಯ ಪಾದಕೆರಗಿಸಿಂಧುವನು ದಾಂಟಿ ಮುದ್ರಿಕೆಯಿತ್ತು ದಾನವರವೃಂದಪುರ ದಹಿಸಿ ಚೂಡಾಮಣಿಯ ತಂದವನ1 ದ್ವಾಪರಯುಗದಲಿ ಭೀಮಸೇನನೆನಿಸಿಶ್ರೀಪತಿಯಪಾದ ಕಡು ಭಜಕನಾಗಿಕೋಪಾವೇಶದಲಿ ದುಶ್ಶಾಸನನನು ಸೀಳಿಭೂಪನ ಜಲದೊಳಗೆ ಕರೆಕರೆದು ಜರೆದವನ 2 ಕಲಿಯುಗದಲಿ ತುರೀಯಾಶ್ರಮವನೆ ಧರಿಸಿಕಲುಷದ ಮಾಯಿಗಳನೆ ಸೋಲಿಸಿಖಿಲವಾದ ಮಧ್ವಮತವನು ಬಲಿದೆನಿಸಿ ಕಾಗಿನೆಲೆಯಾದಿಕೇಶವನೆ ಪರದೈವನೆಂದವನ 3
--------------
ಕನಕದಾಸ
ಪಾದ - ಮೋದದಿ ಭಜಿಸಿದ ಮನುಜನೆ ಬಲು ಧನ್ಯನೋ ಪ ಬೋಧ ಪಾದ ಸೇವಕರಾದ ಮಹಸುಸ್ವಾದಿ ಪುರದೊಳು | ವೇದ ವಿನುತನ ಸ್ತುತಿಸಿ ಮೋದಿಪ ಅ.ಪ. ವಾಗೀಶ ಮುನಿಪ ಸದಾಗಮಜ್ಞನ ವರ | ವೇಗದಿಂದಲಿ ಫಲಿಸಲುಜಾಗು ಮಾಡದೆ ಗೌರಿ ತತ್ಪತಿ | ರಾಗ ರಹಿತರು ನಿನ್ನನೊಪ್ಪಿಸೆ |ರೋಗಹರ ಹಯವದನ ಪದವನು | ರಾಗದಿಂದಲಿ ಭಜಿಪ ಯತಿ 1 ತಿಮಿರ ತಾಮರಸ ಬೋಧ ಶಾಸ್ತ್ರವ | ಪ್ರೇಮದಿಂದಲಿ ಪೇಳ್ದಯತಿವರ 2 ಮೂರ್ತಿ ಪ | ರಾಕ್ರಮನಿಂ ತರಿಸೀಚಕ್ರಿಯನೆ ನಿಲಿಸ್ಯುತ್ಸವದಿ ಸುರಪನ | ವಿಕ್ರಮದ ಆಳ್ಬಂದು ಕರೆಯಲು |ಉತ್ಕ್ರಮಣ ತೊರೆದವರ ಕಳುಹುತ | ವಿಕ್ರಮನ ಪದಕೆರಗಿನಿಂದ3 ನಿಗಮವೇದ್ಯನ ಬಗೆಬಗೆಯಲಿ ಸಂಸ್ಕøತ | ಮಿಗಿಲು ಪ್ರಾಕೃತ ಪದ್ಯದೀಸುಗುಣಮಣಿಮಯ ಮಾಲೆಗಳ ಪ | ನ್ನಗನಗೇಶನ ಕೊರಳೂಳರ್ಪಿಸಿ |ಚಿಗಿ ಚಿಗಿದು ಆನಂದದಿಂದಲಿ | ದೃಗು ಜಲದಿ ಹರಿಪದವ ತೊಳೆದ 4 ಸುರನದಿ ನದಿಧರರಾದಿ ಸ್ಥಾಪಿಸುತಲ್ಲಿ | ಎರಡೆರಡೊಂದು ವೃಂದಾವನವಾ | ಸ್ಥಿರಪಡಿಸಿ ಶ್ರೀವ್ಯಾಸ ಸಮ್ಮುಖ | ವರ ನರೇಯಣ ಭೂತಬಲದಲಿಇರಿಸಿ ಗುರು ಗೋವಿಂದ ವಿಠಲನ | ನಿರುತ ಧ್ಯಾನಾನಂದಮಗ್ನ5
--------------
ಗುರುಗೋವಿಂದವಿಠಲರು
ಪಾದ ನೋಡಿದೆ ಪ ಚೆನ್ನದೇವಿಯ ಪಾದಕೆರಗಿದೆ ಮನ್ನಿಸೆಂತೆಂದವಳ ಬೇಡಿದೆ ಅ.ಪ. ಚರಣ ಯುಗಳಲಿ ಮೆರೆವ ನೂಪುರಧರಿಸಿ ಪೀಠದೊಳಿಂದಿರೆಜರದ ಶೀರೆಯನುಟ್ಟು ನಡುವೊಳುಹಿರಿದು ಒಡ್ಯಾಣದೊಳು ನಿಂದಿರೆ 1 ಕುಂಡಲ ಮೂಗು ಮುಕುರವುಪರಮ ತೇಜದ ಸೊಬಗ ತಂದಿರೆ 2 ಹೊಳೆವ ಕಂಗಳು ಹಣೆಯ ಕುಂಕುಮಥಳಿಸೆ ಸರಸಿಜ ಮಂದಿರೆಬಿಳಿಯ ಕೊಡೆಯನು ಹಿಡಿವ ತೆರದಲಿಎಳೆಯ ನಾಗವು ಹಿಂದಿರೆ 3 ಬೆರಳೊಳುಂಗುರ ಕುರುಳು ಸುಂದರಹೆರಳು ಸಿಂಗರದಿಂದಿರೆತಿರುಳು ಗಂಧದ ಸರಳ ಮೂರ್ತಿಯತರಳೆ ಎನ್ನಾಯ ಮುಂದಿರೆ 4 ಧೀರ ಭಕುತರ ಪೊರೆವುದಕೆ ಕರವೀರ ಪುರದೊಳು ಬಂದಿರೆಧಾರುಣೀಯೊಳು ಮೆರೆವ ಗದುಗಿನವೀರನಾರಾಯಣನ ಚಂದಿರೆ5
--------------
ವೀರನಾರಾಯಣ
ಪಾದ ಕ್ಕೆರಗಿ ಯಾಚಿಸುತಲೆ ಮುಗಿವೆನು ಕೈಯ್ಯಾನೆರೆ ನಂಬಿದವರನು ಎರವು ಮಾಡಲು ನಿನಗೊಳತೇನಯ್ಯಾ ಪಿಡಿ ಬೇಗನೆ ಕೈಯ್ಯ ಕರದಶಿಗಳರಸನೆ ಕಾಮಿತ ಫಲದನೆ ಕರಿರಾಜನ ಭೀಕರ ಹರ ವೆಂಕಟ ಪ ಆಪಾರ ಮಹಿಮಾ ಆಪದ್ಬಂಧೋ ಆಪನ್ನರ ಪಾಲಿಪ ವ್ಯಾಪಾ ನಿನಗಲ್ಲದೆ ಮತ್ತೊಂದು ಕಾಣೆನೊ ಜಗದೀ ಭೂಪಾನೆ ಭೂಮ್ನ ಗುಣಗಣಸಿಂಧೋ ಸ್ವಾಮಿಯೆ ಎನಗಿಂದು ಪರಿಪಾಲಿಸು ಶ್ರೀಪತಿ ಅಂಜನ ಗಿರಿರಾಜ 1 ಕಲಿಯುಗದೊಳಗೀ ಪರ್ವತಕೆಲ್ಲಿ ಸರಿಗಾಣೆನು ಯೆಂದು ನೆಲಸಿದೀ ನೀನೆ ಈ ಸ್ಥಳದಲ್ಲಿ ವೈಕುಂಠಕಿಂತ ನೆಲೆಯು ವೆಗ್ಗಳವೆಂದು ನೀ ಬಲ್ಲೀ ಅದಕಾರಣ ಇಲ್ಲೀ ತಲೆಯಾಗುವರಯ್ಯಾ ಭಳಿರೆ ಕಾಂಚನ 2 ತರುಜಾತಿ ಮೃಗಪಕ್ಷಿಗಳಾಕಾರ ಮೊದಲಾದ ರೂಪದಿ | ನೂರಾರು ಕಿನ್ನರು ತಮ್ಮ ಪರಿವಾರ ಒಡಗೂಡಿ ನಿನ್ನ ಚರಣಾರಾಧನೆ ಮಾಡಿದ ವಿಸ್ತಾರ ಈ ಬಗೆ ಶೃಂಗಾರ ಸರಿಗಾಣೆನೊ ಹೇ ತಿರುಪತಿ ವೆಂಕಟ ಗಿರಿರಾಜ3 ಹದಿನಾಲ್ಕು ಲೋಕದ ಭಾಗ್ಯಗಳಲ್ಲಿ ಅಮರತತಿಗೆ ಕೊಟ್ಟ ವಿಧವೆಲ್ಲಾ ಪ್ರತ್ಯಕ್ಷವು ಪುಸಿಯಲ್ಲ ನಾನವರ ನೋಡೆ ಅಧಮಾಧಮನು ನೀನೆ ಬಲ್ಲೆಲ್ಲಾ ಎನ್ನ ಯೋಗ್ಯತಯ ಫಣಿ 4 ಸುವರ್ಣ ಮುಖರಿತೀರ ನಿವಾಸ ನವರಾತ್ರಿಯಲ್ಲೀ ಆವ ಬ್ರಹ್ಮೋತ್ಸವ ನೋಡಲು ಶ್ರೀಶ ಸಂಪದವನಿತ್ತು ಪೊ ರವಾನು ಕಲುಷದ ಭಯ ಬರಲೀಸ ಶ್ರೀನಿವಾಸ ಭೂದೇವರ ವರದ5
--------------
ವಿಜಯದಾಸ
ಪಾರ್ಥಸಾರಥಿ ನಿಮ್ಮ ಸೇವೆಯ ಮಾಡಿ ಸಾರ್ಥಕವಾದೆನು ಪ ವಾರ್ಥಿಪುರುಷನೆ ನಿಮ್ಮ ಕೀರ್ತಿಯ ಕೊಂಡಾಡಲೆನಗೆ ಶಕ್ತಿಯ ವಿಸ್ತರಿಸೆನಗೆ ಯುಕ್ತಿಯ ಅ.ಪ ಆಚಾರ್ಯರಿಗೆ ಅಭಿವಂದನೆ ಮಾಡಿ ಅಜನರಾಣಿಯ ಭಜಿಸುವೆ ಅನಾದಿಕ್ರಮವನು ಪೇಳುವೆ 1 ಕೈರವಿಣಿಯಲ್ಲಿ ಸ್ನಾನವಮಾಡಿ ಕೈಮುಗಿದು ಮಾರುತಿಗೆ ನಾ ಕರುಣಿಆಚಾರ್ಯರಿಗೆ ವಂದಿಸಿ ಕರಿಯಬಳಿಗೆ ನಾ ಬಂದೆನು ನಾ ಕರಿಯ ಬಳಿಗೆ ಬಂದೆನು 2 ದವನೋತ್ಸವದ ಮಂಟಪಂಗಳು ಭಾಗವತರ ಭವನವು ಬಲವಬಳಸಿ ಭಕ್ತವತ್ಸಲನ ಚೆಲುವರಥವನು ನೋಡಿದೆ ನಾ ಶೇಷರಥವನು ಸೇವಿಸಿ 3 ಮೂಡಬೀದಿಯ ಸುತ್ತಿಬಂದು ಮಹದಾಹ್ವಯರನು ಸೇವಿಸಿ ಮಹಾನುಭಾವನ ವಿಮಾನವನು ನೋಡಿ ಮಾನವನ್ನು ಬಿಟ್ಯೆನೊ ದೇಹಾಭಿಮಾನವನ್ನು ಬಿಟ್ಯೆನೊ 4 ಕಾರಿಮಾರಿ ಪುತ್ರರಿಗೆ ಬಾರಿಬಾರಿಗೆ ವಂದಿಸಿ ವಾರಿಜಾಕ್ಷನ ಗೋಪುರವ ನೋಡಿ ಘೋರಪಾಪವ ಕಳೆದೆನೊ ಯನ್ನ ಘೋರಪಾಪವ ಕಳೆದೆನೊ 5 ಗರುಡಕಂಭವ ದೀಪಸ್ತಂಭವು ವಾಹನದ ಮಂಟಪಂಗಳು ವಾರಿಜನಾಭನ ಪಕ್ಷಿವಾಹನನ ನೋಡಿ ವಂದನೆಯ ಮಾಡಿದೆ ಅಭಿವಂದನೆಯ ನಾ ಮಾಡಿದೆ 6 ತೋರಣದ ಬಾಗಿಲನು ದಾಟಿ ವಾರುಣದೆದುರಲಿ ವಂದಿಸಿ ವಾರಿಜಾಕ್ಷಿ ಶ್ರೀವೇದವಲ್ಲಿಯ ಸಾರೂಪ್ಯವನು ನಾ ಬೇಡಿದೆ ಸಾಯುಜ್ಯವನು ನಾ ಬೇಡಿದೆ 7 ಭಕ್ತಿಸಾರರ ಚರಣಕೆರಗಿ ಹಸ್ತಗಿರೀಶನ ವಂದಿಸಿ ಸುತ್ತಿ ಗರುಡಕಂಬವನ್ನು ಮತ್ತೆ ಸಿಂಹನ ಸೇವಿಸಿ ದಿವ್ಯ ನಾರಸಿಂಹನ ಸೇವೆಸಿ 8 ವಿಷ್ಣುಚಿತ್ತರ ಪುತ್ರಿಯನ್ನು ಅರ್ಥಿಯಿಂದಲೆ ಸೇವಿಸಿ ಮುಕ್ತಿದಾಯಕ ರಂಗನ ಪಾದಕೆ ಮುದದಿ ವಂದನೆ ಮಾಡಿದೆ ನಾ ಮುದದಿ ವಂದನೆ ಮಾಡಿದೆ 9 ಯಾಮುನಾಚಾರ್ಯರಿಗೆ ವಂದಿಸಿ ಕಾಂಚೀಪೂರ್ಣರಿಗೆರಗುವೆ ವೇದಾಂತಾಚಾರ್ಯರ ವಂದನೆ ಮಾಡಿ ಅನಾದಿ ಪಾಪವ ಕಳೆದೆನೊ ನಾ ಅನಾದಿ ಪಾಪವ ಕಳೆದೆನೊ 10 ಭಾಷ್ಯಕಾರರ ಚರಣಕೆರಗಿ ವರಯೋಗಿಗಳಿಗೆ ವಂದಿಸಿ ಕುಲೇಶ ದಾಶರಥಿಗೆ ವಂದಿಸಿ ದ್ವಾರಪಾಲಕರ ನೋಡಿದೆ ನಾ ದ್ವಾರಪಾಲಕರ ನೋಡಿದೆ 11 ಗಂಟೆಬಾಗಿಲ ದಾಟಿ ಶ್ರೀವೈಕುಂಠವಾಸನ ಭಕ್ತರು ಹದಿ ನೆಂಟು ಆಳ್ವಾರುಗಳ ಸೇವಿಸಿ ಕಂಟಕಗಳ ಕಳೆದೆನೊ ಭವ ಕಂಟಕಗಳ ಕಳೆದೆನೊ 12 ಮಾಧವ ಅನಂತ ಶ್ರೀಪದ್ಮನಾಭನ ಸೇವಿಸಿ ಶ್ರೀರಾಮ ಲಕ್ಷ್ಮಣ ಭರತ ಶತ್ರುಘ್ನ ಸೀತೆಯನು ನಾ ನೋಡಿದೆ ಲೋಕಮಾತೆಯನು ನಾ ಬೇಡಿದೆ 13 ಆದಿಶೇಷನ ಮೇಲೆ ಮಲಗಿದ ಅನಾದಿರಂಗನ ಸೇವೆಗೆ ಕುಲ ಶೇಖರರ ಸ್ಥಾನದಲಿ ನಿಂದು ಯದುಕುಲೇಶನ ನೋಡಿದೆ ನಾನೆದುಕುಲೇಶನ ನೋಡಿದೆ 14 ಅನಿರುದ್ಧ ಸಹಿತಲೆ ಎಡದಿ ಸಾತ್ಯಕಿ ಪಂಚಮೂರ್ತಿಗಳ ನಡುವೆ ಪಾರ್ಥಸಾರಥಿ ಯೆಡಬಲದಿ ಶ್ರೀದೇವಿ ಭೂದೇವಿ 16 ಆದಿಶೇಷನ ಮೇಲೆ ತನ್ನಯ ಪಾದವನ್ನು ಪ್ರಸÀರಿಸಿ ವಿ ಅಂದುಗೆ ಗೆಜ್ಜೆ ಕುಂದಣದ ಪಾಡಗಗಳು ಆನಂದದ ಪಾಡಗಗಳು 17 ಕನ್ನಡಿಯಂದದಿ ಕಣಕಾಲುಗಳು ಉನ್ನತವಾದ ಪೀತಾಂಬರವು ಪನ್ನಗಶಯನನ ವಡ್ಯಾಣದಲಿ ಪರಮಮೂರ್ತಿಯ ಸರಗÀಳು ಶ್ರೀಮೂರ್ತಿ ಸರವನು ಸಿಕ್ಕಿಸಿ 18 ದುಷ್ಟನಿಗ್ರಹವನ್ನು ಮಾಡಿ ಶ್ರೇಷ್ಠರನ್ನು ಪರಿಪಾಲಿಪ ಶ್ರೀ ಕೃಷ್ಣಮೂರುತಿಯ ಎಡದ ಭಾಗದಿ ಶ್ರೇಷ್ಠವಾದ ಖಡ್ಗವು ಸರ್ವಶ್ರೇಷ್ಠವಾದ ಖಡ್ಗವು 19 ಸಿಂಧುರಾಜನ ಕೊಲ್ಲುವುದಕಾಗಿ ಅಂದು ಚಕ್ರವ ಕಳುಹಿದೆ ಒಂದು ಕೈಯಲಿ ಪಾದವ ತೋರುತ ಮತ್ತೊಂದು ಕೈಯಲಿ ಶಂಖವು ಅನಂದದಿಂದಲೆ ಶಂಖವು 20 ಸೃಷ್ಟಿಯೆಳಗ್ಹದಿನಾಲ್ಕು ಲೋಕವ ಪಕ್ಷಿವಾಹನವಂ ಬಿಟ್ಟು ವಕ್ಷಸ್ಥಳದಲಿ ಲಕ್ಷ್ಮಿದೇವಿಯ ರತ್ನಾದ್ಹಾರದಪದಕವು ನವರತ್ನದ್ಹಾರದ ಪದಕವು 21 ಕಂಠದೊಳಗಿಟ್ಟ ಕೌಸ್ತುಭಮಣಿ ಎಂಟುಪುಷ್ಪದ ಹಾರವು ವೈ ಕುಂಠವಾಸನ ಸೇವಿಸಿದರೆ ಕಂಟಕಂಗಳು ಕಳೆವುದು ಭವಕಂಟಕಗಳು ಕಳೆವುದು 22 ಕುಂದಕುಸುಮದಂತೆ ದಂತವು ಪವಳದಂತೆ ಅಧರಕಾಂತಿಯು [ಚೆಂದದಿ] ಪೊಳೆವ ಕರ್ಣಕುಂಡಲ ಚೆಲುವ ನಾಸಿಕದಂದವು ತಿಲಕುಸುಮನಾಸಿಕದಂದವು 23 ದೀಪದಂದದಿ ಕರುಣನೇತ್ರವು ಚಾಪದಂದದಿ ಪುಬ್ಬುಗಳಲಿ ವಿವೇಕವಾಗಿ ತೋರ್ಪುದು 24 ಪದುಮನಾಭನ ಸೇವಿಸಿದವರಿಗೆ ಒದಗಿ ಬರುವುದು ಮುಕ್ತಿಯು ಎಲ್ಲರಿಗೊದಗಿ ಬರುವುದಿಷ್ಟಾರ್ಥವು 25 ಪಾದದಿ ಕೇಶದ ಸೇವೆಯನು ಮಾಡಿ ಅನಾದಿಪಾಪವ ಕಳೆದೆನೊ ವೇದಮೂರುತಿ ವೆಂಕಟಕೃಷ್ಣನೆ ಪಾದವನ್ನು ತೋರಿಸು ನಿಮ್ಮ ಶ್ರೀ ಪಾದವನ್ನು ತೋರಿಸು 26
--------------
ಯದುಗಿರಿಯಮ್ಮ
ಪ್ರಾಣನಾಥ ಪ್ರಾಣನಾಥ ತ್ರಿಭುವನಚೇಷ್ಟ ಪ್ರದಾತಾ ಪ ಅಖಿಲನೇತಾ ಸುಗುಣಜಾತಾ ಶೂರ ಸೀತಾರಾಘವದೂತ ಅ.ಪ ನೂರು ಯೋಜನ ಶರಧಿಯ ಹಾರಿ ಲಂಕಾಪುರವ ಸೇರಿ ಹರುಷದಿ ಜನಕಕುಮಾರಿಗುಂಗುರವಿತ್ತ 1 ದುಷ್ಟ ದಶಕಂಧರನನು ಮುಷ್ಟಿತಾಡನದಿಂದ ಚೇಷ್ಟರಹಿತನ ಮಾಡಿ ದಿಟ್ಟತನದಲಿ ಮೆರೆದ 2 ಗಂಧಮಾದನ ಗಿರಿಯನು ಒಂದು ಕರದಲಿ ಸುಖದಿ ಪಾದ ದ್ವಂದ್ವಕೆರಗಿದ ಮುಖ್ಯ 3 ಕ್ರೂರನಿಶೇಚರಪತಿ ಪರಿವಾರವನು ಸದೆ ಬಡಿದು ಮೂರು ಜಗಂಗಳ ಮೀರಿದ ಕೀರುತಿಯ ಪೊಂದಿದ 4 ಇನ್ನು ಎರಡವತಾರಗಳನ್ನು ಧರಿಸುತ ಜಗದಿ ಪ್ರ ಸನ್ನ ಮಾಧವವ್ಯಾಸರನ್ನು ಸೇವೆಯ ಮಾಡಿದ 5
--------------
ವಿದ್ಯಾಪ್ರಸನ್ನತೀರ್ಥರು
ಬಾಗಿಲು ತೆರೆಯುವ ಹಾಡು ನಾರಿ ಶಿರೋಮಣಿ ವಾರಿಜ ಮುಖಿಯೆ ಗಂಭೀರಳೆ ಬಾಗಿಲು ತೆರೆಯೇ |ಗಂಭೀರಳೆ ಬಾಗಿಲ ತೆರೆಯೇ ಪ ಆರು ನಿನ್ನಯ ಪೆಸರೆನಗೆ ಪೇಳದಲೆ ದ್ವಾರವ ತೆಗೆಯೆನು ನಾನು |ನಾ ದ್ವಾರವ ತೆಗೆಯೆನು ನಾನು ಅ.ಪ. ನೀರೊಳು ಸಂಚರಿಸಿ ಕ್ರೂರ ತಮನ ಕೊಂದಧೀರ ಮತ್ಸ್ಯನು ಕಾಣೆ ನಾರೀ | ನಾಧೀರ ಮತ್ಸ್ಯನು ಕಾಣೆ ನಾರೀ ||ಧೀರ ಮತ್ಸ್ಯನು ನೀನಾದರೊಳಿತು ದೊಡ್ಡವಾರಿಧಿಯೊಳಗಿರು ಹೋಗಯ್ಯ | ದೊಡ್ಡವಾರಿಧಿಯೊಳಗಿರು ಹೋಗಯ್ಯ 1 ಶರಧಿ ಕೂರ್ಮ ಕೂರ್ಮ ಕಾಣೆ ||ಗಿರಿಯ ತಾಳಿದ ಕೂರ್ಮನಾದರೊಳಿತು | ದೊಡ್ಡಮಡುವಿನೊಳಗೆ ಇರು ಹೋಗಯ್ಯ | ದೊಡ್ಡಮಡುವಿನೊಳಗೆ ಇರು ಹೋಗಯ್ಯ2 ಧರೆಯ ಕದ್ದಸುರನ ದಾಡಿಯಿಂದಲಿ ಸೀಳ್ದವರಹ ಕಾಣೆಲೆ ವಾರಿಜಾಕ್ಷಿ | ನಾವರಹ ಕಾಣೆಲೆ ವಾರಿಜಾಕ್ಷೀ ||ವರಹ ನೀನಾದರೊಳಿತು ನಡೆ ನಡೆ | ದೊಡ್ಡವನಾಂತ್ರದೊಳಗಿರು ಹೋಗಯ್ಯ || ದೊಡ್ಡವನಾಂತರದೊಳಗಿರು ಹೋಗಯ್ಯ 3 ಮೃಗ ಮೃಗ ಮೃಗ ನೀನಾದರೊಳಿತು ದೊಡ್ಡಗಿರಿ ಶಿಖರದೊಳಗಿರು ಹೋಗಯ್ಯ | ದೊಡ್ಡಗಿರಿ ಶಿಖರದೊಳಗಿರು ಹೋಗಯ್ಯ 4 ಭೂಮಿ ಈರಡಿ ಮಾಡಿ ಬಲಿಯ ಪಾತಾಳಕಿಟ್ಟವಾಮನ ಕಾಣೇ ವಾರಿಜಾಕ್ಷೀ | ನಾವಾಮನ ಕಾಣೇ ವಾರಿಜಾಕ್ಷೀ ||ವಾಮನ ನೀನಾದರೊಳಿತು ನಿನ್ನಪ್ರೇಮ ಬಂದಲ್ಲಿರು ಹೋಗಯ್ಯ | ನಿನ್ನಪ್ರೇಮ ಬಂದಲ್ಲಿರು ಹೋಗಯ್ಯ 5 ತಂದೆ ಆಜ್ಞೆಯ ಪೊತ್ತು ತಾಯಿ ಸೋದರನ್ನಕೊಂದವ ನಾನೇ ಕೋಮಲಾಂಗೀ | ನಾಕೊಂದವ ನಾನೇ ಕೋಮಲಾಂಗೀ ||ಕೊಂದವ ನೀನಾದರೊಳಿತು ಮುನಿವೃಂದದಲ್ಲಿ ಇರು ಹೋಗಯ್ಯಾ | ಮುನಿವೃಂದಾದಲ್ಲಿ ಇರು ಹೋಗಯ್ಯ 6 ಲಂಡ ರಾವಣನ ಶಿರವ ಚಂಡಾಡಿ ಸೀತೆ ತಂದ | ಪ್ರ-ಚಂಡ ವಿಕ್ರಮ ರಾಮ ಕಾಣೇ | ನಾ ಪ್ರ-ಚಂಡ ವಿಕ್ರಮ ರಾಮ ಕಾಣೇ ||ಪ್ರಚಂಡ ವಿಕ್ರಮನಾದರೊಳಿತು ಕೋತಿಹಿಂಡುಗಳೊಳಗಿರು ಹೋಗಯ್ಯ | ಕೋತಿಹಿಂಡುಗಳೊಳಗಿರು ಹೋಗಯ್ಯ 7 ಮಧುರಾಪುರದಿ ಪುಟ್ಟಿ ಮಾವ ಕಂಸನ ಕೊಂದಚದುರ ಕಾಣೆಲೆ ಶಾಮಲಾಂಗೀ | ನಾಚದುರ ಕಾಣಲೆ ಶಾಮಲಾಂಗೀ ||ಚದುರ ನೀನಾದರೊಳಿತು ನಡೆ ನಡೆ ಗೋಪೇ-ರಧರ ಚುಂಬಿಸುತಿರು ಹೋಗಯ್ಯ | ಗೋಪೇ-ರಧರ ಚುಂಬಿಸುತಿರು ಹೋಗಯ್ಯ 8 ಶುದ್ಧ ಖಳನು ಆಗಿ ವ್ರತವನಳಿದು ಬಂದಬೌದ್ಧ ಕಾಣಲೇ ಮಂದಗಮನೇ | ನಾಬೌದ್ಧ ಕಾಣಲೇ ಮಂದಗಮನೇ ||ಬೌದ್ಧನು ನೀನಾದರೊಳಿತು ನಡೆ ನಡೆ ನಿನ್ನಬುದ್ಧಿ ಬಂದಲ್ಲಿರು ಹೋಗಯ್ಯ | ನಿನ್ನಬುದ್ಧಿ ಬಂದಲ್ಲಿರು ಹೋಗಯ್ಯ 9 ತುರಗವನೇರಿ ಕಲಿಯ ಕಡಿದು ಶಾಂತನ ಸಹೋ-ದರಗೆ ರಾಜ್ಯವನಿತ್ತೆ ಕಾಣೇ | ಸಹೋ-ದರಗೆ ರಾಜ್ಯವನಿತ್ತೆ ಕಾಣೇ ||ಪರಮ ಪುರುಷನಹುದೋ ರಾಹುತರಿರುವಸ್ಥಳದಲ್ಲಿರು ಹೋಗಯ್ಯ | ನೀರಾಹುತರಿರುವ ಸ್ಥಳದಲ್ಲಿರು ಹೋಗಯ್ಯ 10 ಕನ್ಯಾಮಣಿಯೆ ಕೋಮಲೆಯೇ ಗುಣಪೂರ್ಣ ಮೋ-ಹನ್ನ ವಿಠಲ ರಾಯ ಕಾಣೆ | ನಾ ಮೋ-ಹನ್ನ ವಿಠಲ ರಾಯ ಕಾಣೆ ||ಎನ್ನ ಅಪರಾಧ ಕ್ಷಮಿಸಬೇಕು ಎನುತಲಿಚೆನ್ನಾಗಿ ಪಾದಕ್ಕೆರಗಿದಳು ದೇವಿ 11
--------------
ಮೋಹನದಾಸರು
ಬಾದರಾಯಣ ಪಾದಕೆರಗಿದೆನೊ ಪ ನೀದಯದಿ ಕಾಮಕ್ರೋಧಗಳನೆ ಬಿಡಿಸಿ ಸಾಧು ಕರ್ಮದಲಿ ಆದರವೀಯೊ ಅ.ಪ ಜ್ಞಾನಿ ಗೌತಮಿ ಮೌನಿ ಶಾಪದಿಂದ ಜ್ಞಾನಿಗಳಿಗೆ ಅಜ್ಞಾನತೆ ಬರಲು ದೈನ್ಯದಲಿ ಚತುರಾನನಾದಿಗಳು ನೀನೆ ಗತಿಯೆನಲು ಮಾನಿಸಿದ ಸುಖಾತ್ಮ 1 ತಾಪಸೋತ್ತಮ ಆ ಪರಾಶರರು ದ್ವೀಪದಲ್ಲಿರಲು ನೀ ಪವಳಿಸಿದೆ ಶಾಪದಿಂದ ಕ್ರಿಮಿರೂಪ ಪೊಂದಿದವಗೆ ಭೂಪತನವನಿತ್ತ ದ್ವೈಪಾಯನಾಖ್ಯ 2 ಶೃತಿಗಳರ್ಥ ಮಂದಮತಿಗಳರಿಯದಿರೆ ಹಿತದಿ ಬ್ರಹ್ಮಸೂತ್ರತತಿಗಳನ್ನೆ ರಚಿಸಿ ಭಾಗವತ ವರ ಮಹಾಭಾ- ರತಗಳನ್ನು ರಚಿಸಿ ಅತಿ ಪ್ರಸನ್ನರಾದ 3
--------------
ವಿದ್ಯಾಪ್ರಸನ್ನತೀರ್ಥರು