ಒಟ್ಟು 575 ಕಡೆಗಳಲ್ಲಿ , 76 ದಾಸರು , 506 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಆಪೋಶನವ ಹಾಕೆ ಒ(ವೈ?) ಯ್ಯಾರಿ ಲೋಕಸುಂದರಿ ಶ್ರೀಪತಿಯ ಕರದಲ್ಲಿ ಘೃತಧಾರೆ ಲೋ- ಕಂಸಾರಿ ಕೈಯಲ್ಲಿ ತ್ರಿಧಾರೆ ಪ ಕೊಳಲನೂದುತಾಕಳನೆ ಕಾಯುತ್ತ ದಧಿಚೋರನಾಗಿ ಕಳಲಗಡಿಗೆಯನೊಡೆದು ಪೋಗುತ್ತ ಸೆಳೆದು ಗೋಪೇರ ಸೀರೆಗಳ ಮರಕೆ ಕಟ್ಟಿದ್ದ ಕರಕೆ 1 ವಾರಿಜಾಕ್ಷಗೆ ಒಲಿದು ನಲಿಯುತ್ತ ವರ ಮೋಹನಾಂಗಿ ಸಾರಸಮುಖಿ ಸರಸವಾಡುತ್ತ ಮಾರಜನಕನ ಮನವ ಮೋಹಿಸುತ ಮುಖನೋಡಿ ನಗುತ2 ನಂದನಂದನ ನರನ ಸಾರಥಿಯೊ ಭೀಮೇಶಕೃಷ್ಣ ಕೊಂಡಾಪೋಶನ ಕುಳಿತ ಸತಿಜೊತೆಗೆ ಚೆಂದದಿಂದಲಿ ಬೆಳಗಲಾರತಿಯ ಪಾಡಿ ಕೀರುತಿಯ 3
--------------
ಹರಪನಹಳ್ಳಿಭೀಮವ್ವ
ಆರತಿಯ ಬೆಳಗಬನ್ನಿರೆ ಆರತಿಯ ಬೆಳಗಬನ್ನಿರೆ ಪಾರ್ವತಿದೇವಿಯರಿಗೆ ಕೀರುತಿ ಕೊಂಡಾಡುತಲಿ ಪರ್ವತರಾಜನ ಮಗಳಿಗೆ ಆರತಿಯ ಬೆಳಗಬನ್ನಿರೆ ಪ ವಾಲೆ ಕಠಾಣಿ ಚಿಂತಾಕು ಮ್ಯಾಲೆ ಸರಿಗೆ ಸರ ಮುತ್ತುಗಳು ಕಾಲಗೆಜ್ಜೆಸರಪಳಿನಿಟ್ಟ ಫಾಲಾಕ್ಷನ ಮಡದಿಗೆ 1 ರಂಗುಮಾಣಿಕ್ಯದ ಹೆರಳು ಬಂಗಾರದಾಭರಣವಿಟ್ಟು ದುಂಡುಮಲ್ಲಿಗೆ ಮುಡಿದು ಕುಳಿತ ಮಂಗಳಾದೇವಿಯರಿಗೆ 2 ದುಂಡುಮುತ್ತಿನ ಮುಕುರ್ಯವು ಚಂದ್ರ ಬಾಳ್ಯಬುಗುಡಿನಿಟ್ಟು ದುಂಡು ಹರಡಿ ಕಂಕಣಕಮಲ ದ್ವಾರ್ಯನಿಟ್ಟ ವಾರಿಜಾಕ್ಷಿಗೆ 3 ಜಾತಿಮಾಣಿಕ್ಯದ ವಂಕಿ ನೂತನಾದ ನಾಗಮುರಿಗೆ ಪ್ರೀತಿಯಲಿ ಪೀತಾಂಬ್ರನುಟ್ಟು ಜ್ಯೋತಿಯಂತೆ ಹೊಳೆವೊ ಗೌರಿಗೆ 4 ನೀಲವರ್ಣ ಭೀಮೇಶಕೃಷ್ಣ ಧ್ಯಾನಮಾಡುತ ಕೃಷ್ಣನ ನೀಲಕಂಠನ ಸಹಿತ ಕುಳಿತ್ವಿಶಾಲನೇತ್ರೆ ಪಾರ್ವತಿಗೆ5
--------------
ಹರಪನಹಳ್ಳಿಭೀಮವ್ವ
ಆರತಿಯಾಡುವೆನು ಸದ್ಗುರುವಿಗೆಆರತಿಯಾಡುವೆನು ಪ ಕಾಯವ ಜರೆಯುತ್ತಲಿಕೈಯನೆ ಮುಗಿಯುತಲಿಮಾಯವ ಹರಿಯುತಲಿಬಾಯಿ ಕೊಂಡಾಡುತಲಿ ಸದ್ಗುರುವಿಗೆ 1 ಕುಣಿ ಕುಣಿದಾಡುತಲಿಮನವನೆ ನೀಡುತಲಿಘನಮುಕ್ತಿ ಬೇಡುತಲಿಅನುಮಾನವ ಬಿಡುತಲಿ ಸದ್ಗುರುವಿಗೆ 2 ಅರಿವನೆ ಅರಿತುಗುರಿಯನೆ ಮರೆತುಪೂರವನೆ ಬೆರೆತುಗುರು ಚಿದಾನಂದನರಿತು ಸದ್ಗುರುವಿಗೆ 3
--------------
ಚಿದಾನಂದ ಅವಧೂತರು
ಆವದೆನೆಗೆ ಪ್ರೀತಿ ಎಂದೆಂಬಿಯಾ | ದೇವ ದೇವಕಿ ತನುಜ ಬಿನ್ನಪವ ಮಾಡುವೆನೊ ಪ ದೊರೆತನವಲ್ಲೆ ಧನವಲ್ಲೆ ಒಬ್ಬರ ಬಳಿಯ | ಹಿರಿಯತನವಲ್ಲೆ ಹಿಗ್ಗುವುದು ವಲ್ಲೆ | ಹರಿ ನಿನ್ನ ಚರಣಗಳ ಸ್ಮರಿಸುವ ಭಾಗವತರ | ಅರಮನೆಯ ಬೀದಿಯಲಿ ಹೊರಳುವ ಭಾಗ್ಯವ ಕೊಡು 1 ಪಂಡಿತನಾಗಲಿವಲ್ಲೆ ಫಲವಲ್ಲೆ ನಾವು ಪ್ರ | ಚಂಡ ಯೋಗಗಳೊಲ್ಲೆ ಯಾಗವಲ್ಲೆ | ಥಂಡ ಥÀಂಡದಿ ನಿನ್ನ ಕೊಂಡಾಡುವರ ಬಳಿಯ | ಕೊಂಡರಾಗಿಪ್ಪವರ ಸೇರುವ ಭಾಗ್ಯವ ಕೊಡು 2 ಅಂದಣವೇರಲಿವಲ್ಲೆ ಆತ್ಮಸುಖವಲ್ಲೆ ನಾ | ನೆಂದು ಪೇಳುವರ ಸಂಗತಿಯವಲ್ಲೆ | ನಿತ್ಯ | ನಿಂದಂಗಳದೊಳಗೆ ಯಿಪ್ಪ ಭಾಗ್ಯವ ಕೊಡು 3 ರಸ ರಸಾಯನ ವಲ್ಲೆ ಹಸನಾದ ಪಟ್ಟಿ ರಂ | ಜಿಸುವದುವಲ್ಲೆ ರಾಗಗಳುವಲ್ಲೆ | ವಸುದೇವ ಸುತ ನಿನ್ನ ಪೆಸರು ಎಣಿಸುವವರ | ಶಿಶುವಾಗಿ ಬದಕುವ ಕುಶಲ ಭಾಗ್ಯವ ಕೊಡು 4 ಪುಣ್ಯ ತೀರ್ಥಗಳು ನಿನ್ನ ಮನಸಿಗೆ ಬಂದ | ವನ್ನು ಮಾಡಿಸು ಬಿಡದೆ ಮನ್ನಿಸೆನ್ನ | ಚನ್ನ ಮೂರುತಿ ಚೆನ್ನ ವಿಜಯವಿಠ್ಠಲರೇಯ | ಎನ್ನ ವಂದನೆಯನ್ನು ಮುನ್ನು ನೀ ಕೈಕೊಂಡು5
--------------
ವಿಜಯದಾಸ
ಇಕೋ ಈತ ವೆಂಕಟೇಶನೊ | ಭವದ | ಸಿಕ್ಕು ಬಿಡಿಸಿ ನೆನದವರಿಗೆ ಸಿಕ್ಕಿ ಮನದಿಂದಗಲದಿಪ್ಪಾ ಪ ಕರುಣ ಅರುಣ ಕಿರಣ ಪೋಲುವ | ಚರಣ ಧರಣಿ ತರುಣಿ ಸ್ಮರಿಸಿ | ಕರುಣಗಡಲಾ | ಧರಣಿಯಿಂದ ಉದ್ಧರಣೆ ಮಾಡಿದೆ ಪರಣನೀತ 1 ಮಂಡಿಯ ಮಂಡನ | ಕುಂಡಲ ಕಾಂತಿ | ಗಂಡ ಸ್ಥಳದಲಿ ಮಿರುಗೆ ತುಲಸಿ | ಕೌಸ್ತುಭ ಕಾಲ | ಪೆಂಡೆಯಿಟ್ಟು ನಂದನೀತ 2 ವಾಹನ ಆ ಖಂಡಲ ಇಕ್ಷುಕೋ | ಪರಮೇಷ್ಠಿ | ತೊಂಡರ ನಲಿದು ಕೊಂಡಾಡೆ ಚಂದಿರ ಮಂಡಲದೊಳು ಉ| ದ್ದಂಡನಾಗಿಯಿಪ್ಪಾ | ಪುಂಡ ದೈವನೀತ 3 ಪಂಜಿನಸಾಲು ಪರಂಜಳಿ ವಾದ್ಯ ವಿ | ರಂಜಿಸಲು ಜ್ಞಾನ | ಪುಂಜ ನಾರದ ಜಯ ಜಯ ಪೇಳಲು | ನಿರಂಜನ ಭಂಜನ ಈಶಾ 4 ಕರದ ಜನಕೆ ಸುರಧೇನು ಇದು | ನಿರುತದಲ್ಲಿ ಪೊರೆವ ಭಕ್ತರ | ಕರಿಯ ಕಾಯ್ದ ವಿಜಯವಿಠ್ಠಲ | ಪರಮ ಪುರುಷ ತಿರುಮಲನೀತ 5
--------------
ವಿಜಯದಾಸ
ಇಂಥಾ ಪ್ರಭುವ ಕಾಣೆನೋ ಈಜಗದೊಳ- ಗಿಂಥಾ ಪ್ರಭುವ ಕಾಣೆನೋ ಪ ಇಂಥಾ ಪ್ರಭುವ ಕಾಣೆ ಶಾಂತ ಮೂರುತಿ ಜಗ- ದಂತರಂಗನು ಲಕ್ಷ್ಮೀಕಾಂತ ಸರ್ವಾಂತರ್ಯಾಮಿ ಅ.ಪ. ಬೇಡಿದಿಷ್ಟವ ಕೊಡುವ-ಭಕ್ತರ ತಪ್ಪು ನೋಡದೆ ಬಂದು ಪೊರೆವ ಗಾಡಿಕಾರನು ಗರುಡಾ - ರೂಢ್ಯ ಗುಣವಂತ ಮಹಾ ಪ್ರೌಢ ಪ್ರತಾಪಿ ಜಗದಿ ಪಾಡಿ ಪೊಗಳಿ ಕೊಂಡಾಡುವವರ ಮುಂ- ಕೇಡಿಗನೇ ನಾಡಾಡಿಗಳಂದದಿ ಈಡುಂಟೇನೋ ಈ ವೆಂಕಟಗೆ-ಇಂಥಾ 1 ನಿಗಮ ತತಿಗಳರಿಯದ- ನೀರಜಭವಾ- ಸುರರು ಕಾಣದ ಜಗದೊಡೆಯನು ಭಕ್ತ- ರುಗಳಿಗೊಲಿದು ತ್ರಿಸ್ಥಾ- ನಗಳತ್ಯಜಿಸಿ ಕಲಿ ಅಗಣಿತ ಸುಗುಣಾರ್ಣವ- ಶ್ರೀ ಹರಿಯೇ ಜಗದೊಳು ಸೇವಾದಿಗಳನು ಕೊಳುತಿಹ ಅಘಹರ ಮೋಕ್ಷಾದಿಗಳನೆ ನೀಡುತ ನಗೆಮೊಗದಲಿ ಚನ್ನಿಗನಿಂತಹನೊ - ಇಂಥಾ 2 ಭಾರ್ಗವಿ ಭೂಮಿವಲ್ಲಭ - ಭವದೂರ ಭಕ್ತ ವರ್ಗಕೆ ಇವಸುಲಭ ನಿರ್ಗುಣ ನಿರ್ವಿಕಾರ- ಸ್ವರ್ಗದೈಶ್ವರ್ಯದಿಂದಾ- ನಘ್ರ್ಯದ ಪದವನೀವ ದೀರ್ಘಾಯುವಂತನೀತ ಭಾರ್ಗವರಾಮ ನೃಪರ್ಗಳನೆಲ್ಲರ - ಣಾಗ್ರದಿ ಜಯಿಸಿದ ಉಗ್ರಪ್ರತಾಪಿ ಅಗ್ರಗಣ್ಯ ಸದ್ವಿಗ್ರಹ ಶ್ರೀಮದ - ನುಗ್ರಹ ಮಾಡುತ ದುರ್ಗುಣ ಕಳೆವ 3 ನಿರ್ದುಃಖಾನಂದ ಭರಿತಾ - ನಿರ್ವಾಣ ಸುಖಕೆ ಆದ್ರ್ರಹೃದಯ ತೋರುತ ನಿದ್ರೆಯೊಳಿದ್ದವಗು - ಪದ್ರಬಡಿಸಿ ದೈತ್ಯ ಕ್ಷುದ್ರನಂಕೊಲಿಸಿ ಸು ಭದ್ರ ಜಗಕೆ ಇತ್ತ ನಿರ್ದಯನಲ್ಲ ಸಮುದ್ರಶಯನ ಗೋ- ವರ್ಧನ ಗಿರಿಯನು ಉದ್ಧರಿಸಿದ ಯದು ವರ್ಧನ ದನುಜ ವಿಮರ್ದನ ಲಕ್ಷ್ಮೀ ಜ - ನಾರ್ದನ ವರ ಶೇಷಾದ್ರಿ ನಿವಾಸ - ಇಂಥಾ 4 ವಾರಿಜಾಸನ ಮನೋಜಾ ಈರ್ವರು ಸುತರು ಸುರತರಂಗಿಣಿ ತನುಜಾ ಪುರವೇ ವೈಕುಂಠ ಇಂದ್ರಾದ್ಯ ಮರರು ಕಿಂಕರರು ಗರುಡವಾಹನ ಉರಗ ಪರಿಯಂಕ ನಿಷ್ಕಳಂಕ ಸರಿದೊರೆಗಳ ನಾನರಿಯೆನು ವೆಂಕಟ ಗಿರಿಯಲಿ ಇರುತಿಹ ಕರುಣೆಗಳರಸನೆ ಮರೆಯದೆ ಸಲಹೋ ಶರಣಾಗತರನು ಸಿರಿ ವಿಜಯವಿಠ್ಠಲಾ - ಇಂಥಾ 5
--------------
ವಿಜಯದಾಸ
ಇಂದಿನ ದಿನ ಸುದಿನವಿದು ನೋಡಿ ತಂದೆ ಸದ್ಗುರು ಕೀರ್ತಿಯ ಕೊಂಡಾಡಿ ಧ್ರುವ ಸಾರ್ಥಕವಾಯಿತು ಜನ್ಮಕ ಬಂದು ಕರ್ತು ಸದ್ಗುರು ಕರುಣವ ಪಡೆದಿಂದು ಮಾಯಾ ನೋಹದಸಂದು ಆರ್ಥಿ ಆಯಿತು ಮನದೊಳು ನಮಗಿಂದು 1 ಕೇಳಿದೆವು ಹರಿನಾಮದ ಘೋಷ ಹೊಳೆಯಿತು ಮನದೊಳು ಅತಿ ಉಲ್ಹಾಸ ಕಳೆದೆವು ಕತ್ತಲೆ ಜ್ಞಾನದ ದೋಷ ಬೆಳಗಾಯಿತು ಗುರುಜ್ಞಾನ ಪ್ರಕಾಶ 2 ಸೇವಿಸಿ ಸದ್ಗುರು ನಾಮಸುರಸ ಆಯಿತು ಮನ ಚಿದ್ಭನ ಸಮರಸ ಹೋಯಿತು ಭವಭಯದ ತಾ ಕ್ಲೇಶ ಮಹಿಪತಿಗಾಯಿತು ಅತಿ ಸಂತೋಷ 3
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಇಂದಿನ ದಿನವೇ ಶುಭದಿನವು | ಇಂದಿರೇಶನ ಕೀರ್ತಿಯ ಕೊಂಡಾಡಿದೆವೆಂದು ಪ ಮುನ್ನ ಮಾಡಿದ ಜನ್ಮಾಂತರದ ದುಷ್ಕ್ರತವೆಂಬ | ಘನ್ನ ಕೆಸರಸೋಸಿ ಹೃದಯ ಶುದ್ದಾಯಿತೆಂದು 1 ತರಣಿ ಉದಯವಾಗಿ | ಪರಿಹಾರಾಯಿತು ಅಜ್ಞಾನವೆಂಬ ಕತ್ತಲೆಯಿಂದು 2 ಕಂದ ನೊಡೆಯ ತನ್ನ ಸ್ಮರಣೆ ಕೊಟ್ಟನೆಂದು3
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಇಂದು ಕಂಡೆ ಕಣ್ಣಾರೆ ನನ್ನ ಸ್ವಾಮಿಯ ಬಂದ ಜನ್ಮಸಾಫಲ್ಯವಾಯಿತೀಗ ಧ್ರುವ ಮುಂಬಿಗಾಗ್ಯಾವೆನ್ನೊಳು ಸುಉಲ್ಹಾಸ ಅಂಬುಜಾಕ್ಷನ ಕಂಡೆ ಸುಪ್ರಕಾಶ ತುಂಬಿತುಳುಕುತಲ್ಯದ ಬಲುಹರುಷ ಇಂಬುಸಾಲದು ಬ್ರಹ್ಮಾಂಡ ಆಕಾಶ 1 ಎನ್ನಹೃದಯ ಮಂದಿರದೊಳು ನೋಡಿ ತನ್ನಿಂದ ತಾಂ ಬಂದನು ದಯಮಾಡಿ ಕಣ್ಣುಪಾರಣೆಗೈಸಿದೆನ್ನ ಕೂಡಿ ಇನ್ನು ದಣಿಯದೆನ್ನಮನ ಕೊಂಡಾಡಿ 2 ಘನ ಸುಖದೋರುತದೆ ಎನಗಿಂದು ಭಾನುಕೋಟಿ ಉದಯವಾದನೆಂದು ದೀನ ಮಹಿಪತಿಸ್ವಾ,ಮಿ ಕೃಪಾಸಿಂಧು ಮನೋಹರ ಮಾಡಿದ ತಾನೆ ಬಂದು 3
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಇಂದು ಗುರುಪೂಜಿ ಮಾಡುವ ನಿಂದು ಮನದೊಳು ಹರುಷಪಡುವ ಧ್ರುವ ತಂದೆ ಸದ್ಗುರುಸೇವೆ ಮಾಡುವ ಬಂದ ಜನ್ಮದ ಹಾದಿ ಬಿಡುವ ಪಥ ಬ್ಯಾಗೆ ಹಿಡುವ ಹೊಂದಿ ಸದ್ಗತಿ ಮುಕ್ತಿ ಕೊಡುವ 1 ಬಂದು ಸಾರ್ಥಕ ಮಾಡುವ ಪಾದ ನೋಡುವ ತಂದು ರತಿಪ್ರೇಮ ನೀಡುವ ಒಂದು ನಾಮ ನಿಶ್ಚಯವಿಡುವ 2 ಒಂದು ಮನದಿ ಪೂಜಿಮಾಡುವ ಎಂದು ಬಿಡದೆ ನಾಮವ ಕೊಂಡಾಡುವ ಇಂದು ನಲಿನಲಿದಾಡುವ ಕಂದ ಮಹಿಪತಿಸ್ವಾಮಿ ನೋಡುವ 3
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಇಂದು ಶ್ರೀ ಗುರುಪಾದಪದ್ಮ ನೋಡುವ ಎಂದೆಂದು ಬಿಡದೆ ಭಾವಭಕ್ತಿ ಮಾಡುವ ಧ್ರುವ ಮನವೆಂಬ ಮನಮಂಟಪವನಾಡುವ ನೆನವು ನವರತ್ನದ ಸಿಂಹಾಸನಿಡುವ ಙÁ್ಞನಧ್ಯಾನದಡಬಲದಿ ಪಿಡಿವ ಅನುವಾಗಿ ಅನಿಮಿಷದಲಿ ನೋಡುವ 1 ತನುವೆಂಬ ತಾರತಮ್ಯಭಾವ ಮಾಡುವ ಅನುಭದಿಂದನುಪಮನ ನೋಡುವ ಆನಂದವೆಂಬ ಅಭಿಷೇಕವ ಮಾಡುವ ಮನೋ ಅಭೀಷ್ಟೆಯ ಸುವಸ್ತ್ರನೀಡುವ 2 ಬುದ್ಧಿ ಭಾವನೆಯ ಗಂಧಾಕ್ಷತಿಡುವ ಶುದ್ಧ ಸುವಾಸನೆ ಪರಿಮಳ ಮಾಡುವ ಶಬ್ದ ಸುವಾಕ್ಯವೇ ಪುಷ್ಪವ ನೀಡುವ ಸಿದ್ಧಾಂತವೆಂಬುದೇ ಸುಸೇವೆ ಮಾಡುವ 3 ಪ್ರಾಣ ಪಂಚವೇ ಪಾದಪೂಜೆಯ ಮಾಡುವ ಪುಣ್ಯಪೂರ್ವಾರ್ಜಿತ ಫಲಗಳಿಡುವ ಅನೇಕವಾದ ಪರಿಪೂಜೆ ಮಾಡುವ ಧನ್ಯ ಧನ್ಯವಾಗುವ ಮುಕ್ತಿಬೇಡುವ 4 ನಿರ್ವಿಕಲ್ಪ ನಿಜಮೂರುತಿ ನೋಡುವ ಪೂರ್ವಕರ್ಮವೆಂಬ ಧೂಪಾರ್ತಿ ಮಾಡುವ ಅರುವೆಂಬ ದೀಪದಿ ಏಕಾರ್ತಿ ಮಾಡುವ ಸರ್ವಕಾಲದಲಿ ಸಂತೋಷಬಡುವ 5 ಜೀವ ಭಾವನೆಂಬ ನೈವೇದ್ಯವಿಡುವ ವಿವೇಕುದಕ ಸಮರ್ಪಣೆ ಮಾಡುವ ತ್ರಿವಿಧಗುಣವೆಂಬ ತಾಂಬೋಲನಿಡುವ ಅವಾವಪರಿಯು ಪ್ರಾರ್ಥನೆ ಮಾಡುವ 6 ಪಂಚತತ್ವದ ಪಂಚಾರತಿ ಮಾಡುವ ಚಂಚಲವಿಲ್ಲದೆ ಚಿದ್ಛನ ನೋಡುವ ಪಂಚಭೂತವೆಂಬಾರತಿ ಮಾಡುವ ಸಂಚಿತಕ್ರಿಯ ಮಂತ್ರಪುಷ್ಪನೀಡುವ 7 ದಿವ್ಯ ಯೋಗ ಭೋಗ ಚೌರ ಢಾಳಿಸುವ ಅವಲೋಕನೆಯ ಬೀಸಣಿಕೆ ಬೀಸುವ ಪಾದ ನಮಿಸುವ ಭವಬಂಧನದ ಮೂಲ ಛೆÉೀದಿಸುವ 8 ನಮ್ರತವೆಂಬ ಸಮಸ್ಕಾರ ಮಾಡುವ ಸಂಭ್ರಮದಿಂದ ಸ್ವಸ್ವರೂಪ ನೋಡುವ ಪ್ರೇಮಪ್ರೀತೆಂಬ ಪ್ರದಕ್ಷಿಣಿ ಮಾಡುವ ಜನ್ಮ ಮರಣದ ಹಾದಿಯು ಬಿಡುವ 9 ನಿರ್ಗುಣದಿಂದ ಸ್ವರೂಪ ನೋಡುವ ನಿಗಮಗೋಚರನೆಂದು ಸ್ತುತಿ ಪಾಡುವ ಅಗಣಿತಗುಣ ಸುಕೀರ್ತಿ ಸೂರ್ಯಾಡುವ ಜಗದೊಳಾನಂದದಿಂದ ನಲಿದಾಡುವ 10 ಅನಾಹತವೆಂಬ ಧ್ವನಿವಾದ್ಯ ಮಾಡುವ ಅನಂದೋ ಬ್ರಹ್ಮದೊಳು ಮುಳಗ್ಯಾಡುವ ಭಾನುಕೋಟಿತೇಜ ಪ್ರಕಾಶ ನೋಡುವ ದೀನಮಹಿಪತಿ ಸ್ವಾಮ್ಯೆಂದು ಕೊಂಡಾಡುವ 11
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಇಂದು ಸಾರ್ಥಕವಾಯಿತು ಎನ್ನ ಜನನಾ ಚಂದ್ರ ಪುಷ್ಕರಣಿಯ ವಾಸ ರಂಗನ್ನ ಕಂಡು ಪ ಸುತ್ತೇಳು ಪ್ರಾಕಾರಗೋಪುರ ಮಹಾದ್ವಾರ ರತ್ನದ ಕವಾಟ ತೋರಣಗಳು ಕತ್ತಲೆ ಹರನಂತೆ ಕಣ್ಣಿಗೆ ತೋರುತಿದೆ ತುತ್ತಿಸಲಳವೆ ಅನಂತ ಜನುಮಕೆ 1 ಸಾಲು ಬೀದಿಗಳು ಒಂದೊಂದರ ಮಧ್ಯದಲಿ ಸಾಲು ಮಂಟಪ ಮುತ್ತಿನ ಚಪ್ಪರಾ ಕೀಲುಮಣಿಗಳಿಂದ ಬಿಗಿದ ಸೊಬಗು ಹೊಂ ಬಾಳೆಸ್ತಂಭಗಳೆಡಬಲದಲ್ಲಿ ಒಪ್ಪಲು 2 ಮುಂದೆ ಗರುಡಗಂಭ ಪವಳದ ಗವಾಕ್ಷಿ ಹಿಂದೆ ನೆರೆದ ಬಲು ಪರಿಯಂಗಡಿ ಸಂದಣಿಯಿಂದ ಭೂಸುರರು ಸ್ತೋತ್ರವ ಪೇಳೆ ಒಂದೊಂದು ಬಗೆಯಲ್ಲಿ ವಂದಿಸುವುದು ಕಂಡು 3 ಚಂದನ್ನನಿಂದೆ ಪೋಗಾಡಿದ ಸರೋವರ ಒಂದು ಸುರವನ್ನೆ ವೃಕ್ಷದಲ್ಲಿ ಮಿಂದು ಸಜ್ಜನರು ಕೈಗಳ ಮುಗಿದು ನಮೊ ಎಂದು ಕೊಂಡಾಡುವರು ವೇಗದಲ್ಲಿ 4 ಪ್ರಣವಾಕಾರವಾದ ವಿಮಾನ ಅದರ ಮೇಲೆ ಮಿನುಗುವ ವಾಸುದೇವಾದಿಗಳ ಮನದಣಿಯ ಕೊಂಡಾಡಿ ಮುದದಿಂದ ಪಾಡುತ್ತಾ ಫಣಿ ತಲ್ಪನಾಥ ಶ್ರೀ ಪರಮಪುರುಷನ ಕಂಡು 5 ಕಮಲಾಕ್ಷ ಕುಳಿರತೆರದಿ ಕದಪು ಕರ್ಣ ಕುಂಡಲ ಉರದಲ್ಲಿ ಕೌಸ್ತುಭ ಹಾರ ಪದಕ ಪಾವನ ಪಾದಾ6 ನಸುನಗೆ ಚತುರ್ದಶ ಲೋಕವ ಬಿಸಜ ಕರಗಳು ಭೂಷಣದಿಂದಲಿ ಬಿಸಜ ಭವನ ಪಡೆದು ನಾಭಿ ವಸನಕಟಿ ಮಿಸುಣಿಪ ವಡ್ಯಾಣ ಸರ್ವ ಲಕ್ಷಣನಾ 7 ಕಾಲ ಕಡಗ ಪೆಂಡೆ ಪೊಂಗೆಜ್ಜೆ ಅಂದಿಗೆ ವಾಲಾಯ ಪದತಳದಲಿ ರೇಖೆ ವಾಲಗ ಸಿರಿದೇವಿ ಪ್ರೀತಿಯಿಂದಲೆ ಮಾಡೆ ಸುರರು ಸಮ್ಮುಖದಲಿ ನುತಿಸೆ 8 ಉಭಯ ಕಾವೇರಿ ನಡುವೆಯಿದ್ದು ದಕ್ಷಿಣ ಅಭಿಮುಖವಾಗಿ ಪವಡಿಸಿದ ವಿ ಭೀಷಣದ ವರದ ರಂಗ ಮಂದಿರ ನಿಲಯಾ ವಿಬುಧೇಶ ವಿಜಯ ವಿಠ್ಠಲ ರಂಗನ ಕಂಡು9
--------------
ವಿಜಯದಾಸ
ಇದೇ ನಮ್ಮ ಶ್ರೀ ಹರಿ ಕೀರ್ತನಿ ಸಾಧು ಸಜ್ಜನರ ಮೃತಸಂಜೀವನಿ ಸದ್ಗೈಸುವ ದಿವ್ಯ ಸುಸಾಧನಿ ಸದ್ಗುರು ಸುಮೂರ್ತಿ ಪ್ರಾರ್ಥನಿ ಧ್ರುವ ಶಮದಮವೆಂಬೆರಡು ತಾಳಗೂಡಿ ಪ್ರೇಮ ಭಾವನೆ ಧ್ರುಪÀದಿಗಳ ಮಾಡಿ ಸಮರಸವೆ ಮೃದಂಗವಿದು ನೋಡಿ ಸಮದೃಷ್ಟಿಲಿವೆ ನಾಮ ಕೊಂಡಾಡಿ 1 ಸಾವಧಾನವೆಂಬ ನಿರೋಪಣಿ ನಿವಾಂತ ಕೇಳು ವಿಚಾರಣಿ ಈ ವಾಕ್ಯಬಲ್ಲ ಲಕ್ಷಕೊಬ್ಬ ಙÁ್ಞನಿ ಭಾವ ಬಲ್ಲುದೆ ಮುಖ್ಯ ಸಾಧನಿ 2 ಮನಸ್ವಸ್ತ ಮಾಡಿ ನೀವಿನ್ನು ಕೇಳಿ ಅನುಮಾನ ಬಿಟ್ಟಿ ಇಕ್ಕಿ ಚಪ್ಪಾಳಿ ಗನಗುರು ಪಾದದಲ್ಯೊಮ್ಮೆ ಹೊರಳಿ ಹಣಿಗ್ಹಚ್ಚಿಕೊಂಬಾ ಗುರುಪಾದಧೂಳಿ 3 ಚಿತ್ತ ಚಂಚಲಾಗ ಬಾರದು ನೋಡಿ ವಸ್ತು ಬಾಹುದು ಬ್ಯಾಗೆ ಕೈಗೂಡಿ ಮಿಥ್ಯಾ ಪ್ರಪಂಚ ಈಡ್ಯಾಡಿ ನಿತ್ಯ ನಿರ್ಗುಣಾನಂದ ಸ್ತುತಿಪಾಡಿ 4 ಪುಣ್ಯಕೀರ್ತನೆ ಕೇಳಿ ಸಂಭ್ರಮ ಧನ್ಯ ಧನ್ಯ ಕೇಳಿದವರ ಜನ್ಮ ಕಣ್ಣಾರೆ ಕಾಂಬುವ ನಿಜವರ್ಮ ಚಿಣ್ಣ ಮಹಿಪತಿಗಾನಂದೋ ಬ್ರಹ್ಮ 5
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಇನಿತೆಂದು ಶಾಸ್ತ್ರ ಪೇಳುವವು ಪ ಪುನಹ ಪುನಹ ಭಗವತ್ಪ್ರಾಪ್ತಿ ಬೇಕೆಂಬುವರಿಗೆ ಅ.ಪ. ಅನುಬಂಧಿಗಳಲಿ ಮಮತೆಯನೆ ಬಿಡು ವಿಷಯ ವಾ ಸನೆಯನೀಡಾಡು ಸುಜ್ಞಾನ ಭಕ್ತಿಯ ಬೇಡು ಮನದಲ್ಲಿ ಹರಿಯ ಮೂರ್ತಿಯನೆ ನೆರೆ ನೋಡು ಸುಜ್ಞ ರನು ಕೊಂಡಾಡು ಅಜ್ಞಾನಿಗಳ ಸಹವಾಸ ಸುಡು ವನಜನಾಭನ ಪೂಜೆ ಮಾಡು ಪ್ರತಿ ಕ್ಷಣ ಬಿಡದೆ ಭಗವದ್ಗುಣಗಳ ಕೊಂಡಾಡು 1 ಪರಮಾಣು ಮೊದಲ್ಗೊಂಡು ವ್ಯಕ್ತ ತತ್ತ್ವದೊಳ ಹೊರಗೆ ವ್ಯಾಪಕನಾಗಿ ತದ್ರೂಪ ನಾಮದಿಂ ಕರೆಸುತಲಿ ತದ್ವಿಕಾರಗಳಿಲ್ಲದಲೆ ಸೃಷ್ಟಿ ಪರಿಪಾಲನೆ ಲಯಗಳನೆ ಮಾಡಿ ಮೋದಿಸುತಾ ಪರಮಾತ್ಮನೊಬ್ಬನಿಹನೆಂದು ಹರಿಗೆ ಮರೆಯದಲೆ ಮಹಿಮೆಗಳ ಪೊಗುಳುತಿರು ಮನುಜಾ 2 ಹರಿಭಕ್ತರಿದ್ದೆಡೆಗೆ ಹರಿದು ಹೋಗಲಿ ಬೇಕು ತಿರಿಯ ಕ್ಪುಂಡ್ರಗಳ ನಿಂದಿಸಬೇಕು ಹರಿಯ ನಾಮತ್ರಯಾಂಕಿತರಿಗೆರಗಲು ಬೇಕು ಗುರು ಹಿರಿಯರ ವಗುಣಗಳೆಣಿಸದಿರ ಬೇಕು ಮ ತ್ಸರವ ಬಿಡಬೇಕು ಭಕ್ತರಲಿ ಹೀಗೆ ಒರೆದೊರೆದು ಪೇಳುವರು ಬುಧರು ನಿತ್ಯದಲಿ 3 ನಿತ್ಯ ನೈಮಿತ್ತಿಕ ಸುಕರ್ಮ ಮಾಡಲು ಬೇಕು ಕೃತ್ಯವಲ್ಲದೆ ಲೋಕವಾರ್ತೆಗಳ ಬಿಡಬೇಕು ಚಿತ್ತದಲಿ ಹರಿಪಾದ ಚಿಂತಿಸುತಲಿರಬೇಕು ವಿತ್ತದೇಹಾಗಾರ ಭಗವಂತನದೆಂದು ದೇ ಪರಿಯಂತ ಮಾಳ್ಪ ಕರ್ಮ ಸತ್ಯಸಂಕಲ್ಪಕಿವು ಪೂಜೆ ಎನಬೇಕು 4 ಸೀತೋಷ್ಣ ಸುಖ ದುಃಖ ಮಾನಾಪಮಾನ ಜಯ ಭೀತಿ ನಿರ್ಭೀತಿ ಅಪಜಯ ಜ್ವರಾಪಸ್ಮಾರ ಭೂತ ಬಾಲ ಗ್ರಹ ಮೃಗಸರ್ಪ ನೃಪ ಚೋರ ಯಾತನೆಗೆ ಭಯಪಡದೆ ಸರ್ವತ್ರದಲಿ ಜಗ ನ್ನಾಥವಿಠ್ಠಲನ ಸ್ಮರಿಸುತಿರು ಮಹಾ ಪಾತಕವ ಪರಿಹರಿಸಿ ಪೊರೆವ ದಯದಿಂದಾ 5
--------------
ಜಗನ್ನಾಥದಾಸರು
ಇನ್ಯಾಕೆ ಭವಬಾಧೆ ಇವಗೆ ಪನ್ನಂಗಶಯನನಡಿ ಚೆನ್ನಾಗಿ ಭಜಿಪವಗೆ ಪ ದುರಿತ ದುರ್ಗುಣಗಳನು ತರಿದೊಟ್ಟಿ ನ ಶ್ವರದ ಸಿರಿಯನಾಪೇಕ್ಷಿಸಿದೆ ನಿರುತ ಮಾನಸದಿ ಪರಕೆ ಪರತರವೆನಿಪ ಹರಿಯಂಘ್ರಿ ಎಡೆಬಿಡದೆ ಸ್ಮರಿಸುತ ಮನದೊಳಗೆ ಹರುಷಬರುವವಗೆ 1 ಹೀನಸಂಸಾರದ ನಾನಾ ಸಂಪದವೆಲ್ಲ ಶ್ವಾನನ ಕನಸಿನಂತೇನಿಲ್ಲವೆನುತ ಜ್ಞಾನದೊಳಳವಟ್ಟು ಜಾನಕೀಶನ ಧ್ಯಾನ ಮಾನಸದಿ ಒಲಿಸಿಕೊಂಡಾನಂದಿಸುವವಗೆ 2 ಹೇಸಿಯ ಪ್ರಪಂಚದ್ವಾಸನವನಳುಕಿಸಿ ದಾಸಜನ ಸಂಪದವೆ ಶಾಶ್ವತವೆನುತ ಶ್ರೀಶ ಶ್ರೀರಾಮನ ಸಾಸರನಾಮಗಳ ಧ್ಯಾಸದ್ಹೊಗಳುತ ಸಂತೋಷದಿರುವವಗೆ 3
--------------
ರಾಮದಾಸರು