ಒಟ್ಟು 328 ಕಡೆಗಳಲ್ಲಿ , 72 ದಾಸರು , 298 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಇಂದ್ರಪ್ರಸ್ಥದಲ್ಲೆ ಕುಂತಿ ನಂದ(ನ) ರಾಜಸೂಯ್ಯಾಗವನು ಆ- ನಂದದಿ ಮಾಡಿಂದಿರೇಶಗರ್ಪಿಸಿದನು 1 ಮಂದಬುದ್ಧಿ ಕೌರವನು ಚೆಂದನೋಡಿ ಸೈರಿಸದೆ ಪಾಂಡವರ ಪಟ್ಟಣದಿಂದ್ಹೊರಗ್ಹಾಕುವೆನೆಂದನು 2 ಘಾತಕ ದುರ್ಯೋಧನ ತನ್ನ ಮಾತುಳ ಶಕುನಿಯ ಕೇಳಿ ಪ್ರೀತಿಂದೆ ಪಾಂಡವರ ಕರೆಸಿ ದ್ಯೂತವಾಡಿದ 3 ಆಗ್ರಾದಿಂದಾಟಗಳ ಸೋಲಿಸಿ ಶೀಘ್ರದಿಂದ್ವನವಾಸವ ಚರಿಸಿ ಅಜ್ಞಾತ್ವಾಸೊಂದೊ(ದ್ವ?) ರುಷವೆಂದು ಪ್ರತಿಜÉ್ಞ ಮಾಡಿದ 4 ಸೋತು ಧರ್ಮ ಸಕಲೈಶ್ವರ್ಯ ಸಾದೇವ ನಕುಲ ಭೀಮರ ಪಾರ್ಥ ದ್ರೌಪದಿಯ ಪಣಕಿಟ್ಟು ಕೂತನಾಗಲೆ 5 ಆನೆ ಕುದುರೆ ಅಷ್ಟೈಶ್ವರ್ಯ ಬ್ಯಾಗೆ ತನ್ನಿರಿ ಭಂಡಾರವನು ಹೋಗಿ ದ್ರೌಪದಿ ಕರೆಯಿರೆಂದು ಹೇಳಿದನಾಗ 6 ಕರವ ಮುಗಿದು ನಿಂತು ಇಂದು ನಮ್ಮ ರಾಜಸಭೆಗೆ ಬನ್ನಿರೆಂದರು 7 ದಾಯವಾಡಿ ಸೋತರಿನ್ನುಪಾಯವಿಲ್ಲೀಗೆ 8 ಇಂದಿರೇಶನ ದಯವು ನಮ್ಮಲ್ಲಿದ್ದ ಕಾರಣದಿಂದೀಗ ದುರಿತ ಬಯಲಾಗುವುದ್ಹ್ಯಾಗೆಂದು ನುಡಿದಳು 9 ಚಂದ್ರ ಜ್ಯೋತಿಯಂತೆ ಹೊಳೆವೊ ಮಂದಗಮನೆ (ಇ)ಂದು ವದನೆ ದುಂಡು ಮಲ್ಲಿಗೆಶಿರವ ಬಾಗಿ ಬಂದು ನಿಂತಳು 10 ಕಂಡು ದುರ್ಯೋಧನ ದ್ರೌಪದಿ ನಿನ್ನ ಗಂಡರಡವಿಗೈದುವೋರು ಹೆಂಡತ್ಯಾಗಿರೆನ್ನ ಬಳಿಗೆ ಬಾರೆ ಎಂದನು 11 ಕೆಂಡ ತುಂಬಿದ ಕೊಂಡದೊಳು ಕಂಡೂ ನೀ ಹಾರುವರೇನೊ ತುಂಡು ಮಾಡಿ ಕಡಿವೋರೈವರು ಬ್ಯಾಡೋಯೆಂದಳು 12 ಪತಿಗಳಿಂದೆ ರಹಿತಳೆ ದ್ರೌಪದಿಯೆ ನೀನತಿ ಹರುಷದಿಂದೆ ಸತಿಯಾಗಿ ಬಾಳ್ಹಿತದಿಂದೆನ್ನಕೂಡೇಯೆಂದನು 13 ಪತಿಯಿಂದೆ ರಹಿತಳು ಭಾನುಮತಿಯೋ ಧೃತರಾಷ್ಟ್ರ ಗಾಂಧಾರಿ ಸುತಹೀನರಾಗುವರತಿ ಬ್ಯಾಗೆ ಮತಿಗೇಡಿ ಕೇಳೊ 14 ಪಟ್ಟೆ ಮಂಚಕ್ಕೊಪ್ಪುವ್ಯಂತೇ ಬಾರೇಯೆಂದನು 15 ಅಷ್ಟ ಬಡವರೈವರು ನಿನ ಶಿರ ಕುಟ್ಟಿ ಯಮಪಟ್ಟಣಕ್ಕೆ ಅಟ್ಟಿ ರಾಜ್ಯಕ್ಕಧಿಕಾರ್ಯವರು ಕೇಳೋಯೆಂದಳು 16 ಹೇಮ ಇಚ್ಛ ಮಾಡಿದ್ದೇನೀಗೆನ್ನ ಕೂಡೆ ಎಂದನು 17 ಹುಚ್ಚು ಹಿಡಿದಿತೇನೋ ನಿನಗೆ ಉಚ್ಚು ಬಡಿದು ನಿನ್ನ ಹಲ್ಲು ನುಚ್ಚು ಮಾಡಿ ಕೊಲ್ಲೋರೈವರು ಬ್ಯಾಡೋಯೆಂದಳು 18 ಬಡನಡುವಿನ ವೈಯಾರಿ ಕಡುಚೆಲ್ವೆ ದ್ರೌಪದಿಯೆ ಎನ್ನ ತೊಡೆಯಮ್ಯಾಲೆ ಒಪ್ಪುವ್ಯಂತೆ ಬಾರೆಯೆಂದನು 19 ಕಡುಪಾಪಿ ನೀ ನುಡಿವೋ ನಾಲಿಗೆ ಕಡಿದು ಭೀಮನ ಗದೆಯು ನಿನ್ನ ಉರ ಭೇದಿಸುವೋದನು ನೋಡೇನೆಂದಳು 20 ಅಂಗನೆ ನಿನ್ನಂಗಸಂಗವಾಗದಿದ್ದರೆ ನಿನ್ನ ಮಾನ- ಭಂಗ ಮಾಡಿ ಬತ್ತಲೆ ನಾ ನಿಲಿಸೇನೆಂದನು 21 ಪುಂಡ ಖಳ ನಿನ್ನುದರ ಓಕುಳಿಕೊಂಡಮಾಡೋಕುಳಿಯನಾಡಿ ಚೆಂಡನಾಡಲು ನಿನ್ನ ಶಿರವ ನೋಡೇನೆಂದಳು 22 ಪಾಪಿ ದುಶ್ಶಾಸನನು ಬಂದು ದ್ರೌಪದಿಯ ಮುಂದೆ ನಿಂತು ನೂತನದ ನಿರಿಯ ಪಿಡಿದು ಸೆಳೆಯುತಿದ್ದನು 23 ನಿಲ್ಲೊ ಪಾಪಿ ನಿನ್ನ ರಕ್ತ ಎರೆದು ಹಲ್‍ಹಣಿಗಿಯಲ್ಹಿಕ್ಕಿ ಎಲ್ಲ ಕರುಳ್ವನಮಾಲೆಯ ಮಾಡಿ ಮುಡಿವೆನೆಂದಳು 24 ಮಂಗಳ ಮೂರುತಿ ಮಾರಜನಕ ಎನ್ನ ರಕ್ಷಿಸೆಂದು ಕರವ ಮುಗಿದು ನಿಂತಳು 25 ಮಡುವಿನಲ್ಲೆ ಮುಚ್ಛನಾಗಿ ಬಿಡದೆ ವೇದವ ತಂದು ಕ್ಷೀರ- ಕಡಲ ಕಡೆದ ಕೂರುಮ ಎನ್ನ ಕಾಯೋಯೆಂದಳು 26 ಕಡುಕ್ರೂರ ವರಾಹಾವತಾರ ಹಿಡಿದು ಹಿರಣ್ಯಾಕ್ಷನ ಕಂಬ ವೊಡೆದು ಬಂದಾರ್ಭಟಿಸುವ ಸಿಂಹ ಕಾಯೊ ಎಂದಳು 27 ಬಡವನಾಗಿ ಬಲಿಯ ದಾನ ಬೇಡಿಕೊಂಡ್ವಾಮನನೆ ದೊಡ್ಡ ಕೊಡಲಿ ಪಿಡಿದು ಕ್ಷತ್ರಿಯರನೆ ಕಡಿಬ್ಯಾಗೆಂದಳು 28 ಹತ್ತು ತಲೆಯ ರಾವಣನ ಹತವಮಾಡಿದ್ದವನೆ ಗೋಪೀ ಪುತ್ರನಾದ ಕೃಷ್ಣ ಎನ್ನ ರಕ್ಷಿಸೆಂದಳು29 ಬತ್ತಲಿದ್ದ ಬೌದ್ಧ ನೀ ಬಿಟ್ಟೊ ್ವಸ್ತ್ರ ಎನಗುಡುಗೊರೆಯ ಕೊಟ್ಟು ಹತ್ತಿ ತೇಜಿ ಹರುಷದಿಂದ ಬಾರೋಯೆಂದಳು 30 ಕ್ಷೀರಸಾಗರದಲ್ಲೆ ನೀ ಶ್ರೀಲಕ್ಷ್ಮೀ ಸಹಿತ ಇದ್ದರೇನು ಭೂ ವೈಕುಂಠವಾಸಿ ಎನ್ನ ಕಾಯೋಯೆಂದಳು 31 ಅನಂತಾಸನದಲ್ಲೆ ಆದಿಲಕ್ಷ್ಮೀ ಸಹಿತಾಗಿದ್ದರೇನು ಸೇತೂ(ಶ್ವೇತ?) ದ್ವೀಪವಾಸಿಯೆನ್ನ ಕಾಯೋಯೆಂದಳು 32 ಮಧುರಾ ವಾಸಿ ವೃಂದಾವನ ಗೋವ್ರಜದಲ್ಲಿದ್ದರೇನೊ ಕೃಷ್ಣ ಒದಗಿಬಂದೀಗೆನ್ನಭಿಮಾನ ಕಾಯೋಯೆಂದಳು 33 ಬ್ಯಾಗೆ ಬಿಟ್ಟೀಗೆನ್ನ ಬಳಿಗೆ ಬಾರೋಯೆಂದಳು 34 ಕಾಂತ ಅಕ್ಷಯವೆಂದ ವಸ್ತ್ರಾನಂತವಾದುವು 35 ಕೆಂಪು ಹೂವು ಇರುವಂತಿಗೆಯು ಪಂಚಪೈಠಣಿ ಪಗಡಿ ಬಣ್ಣ ಚಿಂತಾಕು ಪೈಠಣಿಯ ನಿರಿ ಸೆಳೆಯುತಿದ್ದನು 36 ಕರಿಯ ಹೂವು ಕಡ್ಡಿಪೈಠಣಿ ಸೆರಗು ಜರದ ಚಾರಖಾನಿ ಪರಿಪರಿ ಪತ್ತಲಗಳ ತಾ ಸೆಳೆಯುತಿದ್ದನು 37 ಬಿಳಿಯ ಹೂವು ಬಟ್ಟ ಮುತ್ತಿನ ಹೊಳೆವೊ ನಿಂಬಾವಳಿಯು ಚಂದ್ರ ಕಳೆಯ ಸೀರೆಗಳನೆ ಪಿಡಿದು ಸೆಳೆಯುತಿದ್ದನು 38 ಸೂರೂತಿ ಸುಗುತೀಯ ಬಣ್ಣ ಭಾರಿ ಬಾಳೆಪಟ್ಟೆಗಳನು ದ್ವಾರ್ಯಾಮನಿ ಖಂಬಾವತಿ ಸೀರೆ ಸೆಳೆಯುತಿದ್ದನು 39 ತಬಕಾದ್ಹೂವೆಳ್ಳ್ಹೂವು ಗೆರೆ ಸಾಸಿವೆಯ ಚಿಕ್ಕಿ ಸರಪಳ್ಯಂಚು
--------------
ಹರಪನಹಳ್ಳಿಭೀಮವ್ವ
ಇಷ್ಟಲಿಂಗಾರ್ಚನವಾ | ಮಾಡುವರಾ | ಎಷ್ಟೆಂದ್ಹೇಳಲಿ ಭಾಗ್ಯವಾ | ಕಟ್ಟಿ ಉಡಲಾಗದೇನಟ್ಟುತ್ತ ಮಾಂಗದಿ | ಕಟ್ಟಲಿಲ್ಲದ ತೇಂಜಾಂಗುಷ್ಟದ ಲಿಪ್ಪಾ ಪ ಹೃದಯವೇ ಮಂದಿರವು | ಅಷ್ಟದಳ | ಪದುಮವೇ ಮಂಟಪವು | ವದಗಿ ಮರುಹು ಎಂಬುವದೇ ನಿರ್ಮಾಲ್ಯವ ಬಿಟ್ಟು | ಸದಮಲ ಅರುಹಿನಾ ಉದಕದ ಮಜ್ಜನದೀ 1 ಶ್ರೀ ವಿಭೂತಿಯ ನಿಟ್ಟು | ಭಾವಗಂಧ ಭಕ್ತೀವ ತಿಲಾಕ್ಷತೆ | ಸಾವಧಾನದಿ ತ್ರಿಗುಣವೇ ತ್ರಿದಳ ಬಿಲ್ವದಿ 2 ಪುಣ್ಯಗಂಧವೇ ಧೂಪವು ಸುಜ್ಞಾನದ | ರನ್ನ ಜೋತಿಯ ದೀಪವು | ತನ್ನನುಭವ ಸಂಪನ್ನ ನೈವೇದ್ಯವು | ಮುನ್ನೆ ತಾಂಬೋಲವಾನನ್ಯ ಚಿಂತನೆಯಂಬಾದಿ 3 ಕರಣ ದಾರತಿಗಳನ್ನು | ಬೆಳಗುವಾ | ಪರಿಚಾರ ಪ್ರಾಣಗಳು | ಸ್ಪುರಿತ ನಾಹತದ ವರವಾದ್ಯ ಘೋಷವು | ಪರಿಪರಿಯಾದ ಝೆಂಕರಿಸುವ - ರವದಿಂದಾ 4 ವೃಂದದಿ ಷಡ್ಡಸ್ಥಳದೀ ನುಡಿವ ಮಂತ್ರ | ವೆಂದು ಅಜಪ ಸೂತ್ರದೀ | ತಂದೆ ಮಹಿಪತಿ ನಂದನ ಪ್ರಭು ನಮೋ | ಯಂದು ನಿಷ್ಕಾವ್ಯದಾದ ಸಂದಿ ಸುಖಸುತ 5
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಈಡಾಡಿದ್ಯಾ ಪಾಪಂಗಳ ಆಹಾ ಪ ಮನಸಿಲಿ ನೋಡಿದ್ಯಾ ಯತಿಗಳನ್ನ ನಾಡಿನೊಳಗೆ ಈಡಿಲ್ಲದಿಹ ಈ ಗುರುಗಳಾ ಅ.ಪ. ಹೊದ್ದ ಕಾವಿಶಾಠಿಯಲ್ಲಿ ಶ್ರೀ ಮುದ್ರೆ ಹಚ್ಚಿದ ದೇಹಕಾಂತಿಯು ಆಹಾ ತಿದ್ದಿದ ಅಂಗಾರದ ನಡುವೆ ಅಕ್ಷತೆಯು ಎದ್ದು ಬರುವಂಥ ಈ ಮುದ್ದು ಗುರುಗಳಾ 1 ನಿಂತ ಎದುರಲ್ಲಿ ಮುಖ್ಯಪ್ರಾಣಾ ಬೇಡಿ- ದಂಥ ವರಗಳ ಕೊಡುವ ಜಾಣಾ ಆಹಾ ಜಗದಂತರದೊಳಗೆ ಪ್ರವೀಣಾ ಸೀತಾ- ಕಾಂತರೊಳಗೆ ಅತಿಪ್ರಾಣಾ2 ಮಂತ್ರಾಲಯದಲ್ಲಿರುವ ಮುದ್ದು ಬೃಂದಾವನದ ನೋಟ ನಮ್ಮಲಿದ್ದ ಪಾಪಗಳೆಲ್ಲ ಓಟಾ ಅಲ್ಲಿ ವಿದ್ವಾಂಸರ ಜಗ್ಯಾಟ ಆಹಾ ಮುದ್ದುವಾಹನನೆ ನೀನು ನರಸಿಂಹವಿಠ್ಠಲ ದೂತ ದಾರಿದ್ರ್ಯಗಳೆಲ್ಲವ ಪರಿಹರಿಸುವಂಥಾ 3
--------------
ನರಸಿಂಹವಿಠಲರು
ಉತ್ಸವದಲಾಹ್ನಿಕವ ಕಡು ಜನರು ಕೇಳಿರಯ್ಯ ಪ. ಅರುಣ ಉದಯದೊಳೆದ್ದು ಆ ದ್ವಾರಪಾಲಕರುಭರದೆ ಘಂಟೆ ಸುವಿಘ್ನ ಮಾಡೆತರತರದ ಹರಿದಾಸರು ತಾಳ ಮೇಳಗಳಿಂದಪರಿಪರಿಯ ಗಾನ ಪಾಡೆ ತ್ವರಿತ ವಾದ್ಯಗಳಿಂದ ತರುವಾಯ ಭೋರಿಡೆ ಮುರಹರನುಪ್ಪವಡಿಸೆತರುಣ ಯತಿಗಳು ಎದ್ದು ಸ್ನಾನ ಜಪಗಳ ಮಾಡಿನಿರುತ ಶಂಖ ಭ್ರಮಣೆ ಮಾಡೆ ನೀಟಾಗಿಒಪ್ಪುತಿಹ ಉಡುಪಿಯ ಶ್ರೀಕೃಷ್ಣನ 1 ಘೃತ ನೆನೆಕಡಲೆಯುಶುದ್ಧಾದ ಪಾಲ್ಮೊಸರು ಶುಂಠಿ ಸಕ್ಕರೆಲಡ್ಡಿಗೆತಂದ ನೈವೇದ್ಯವ ಸವಿದು ತಾ ಪೂಜೆ ಮಾಡಿಸಿಕೊಂಬ 2 ಪದ್ಮನಾಭಗೆ ಬೇಗ ಪುರುಷಸೂಕ್ತದಭಿಷೇಕಮುದದಿಂದ ಮಾಡಿದ ಬಳಿಕವಿಧಿಯ ಪೂರ್ವಕವಾಗಿ ಅಗಿಲು ಗಂಧ ತುಲಸಿಮಾಲೆಅಧಿಕವಾಗಿ ಸಮರ್ಪಿಸಿ ಒದಗಿದ್ದ ಶುಂಠಿ ಬೆಲ್ಲ ಒಳಿತಾದ ಅನ್ನ ಸೂಪದಧಿ ಕ್ಷೀರ ಕದಳಿಫಲವು ಮುರಮರ್ದನನುಚೆಲುವ ತಾ ಹಂಸಪೂಜೆಯ ಕೊಂಬ ತದನಂತರದಲಿ ಮೃತ್ತಿಕೆಯ ತಾ ಗಣಿಯಕಟ್ಟಿಸಿಕೊಂಬ 3 ದಧಿ ದಿವ್ಯ ಮಧು ಸಕ್ಕರೆ ಸೀಯಾಳವು ಇಂ-ದಿರೇಶಗೆ ಬೇಗ ಶಿರದ ಮೇಲ-ಭಿಷೇಕ ಮುದದಿಂದ ಮಾಡಿದ ಬಳಿಕತಿರುಗಿ ನೈವೇದ್ಯವನು ತೀವ್ರದಿಂದಲೆ ಸ-ಮರ್ಪಿಸಿ ಚೆಲುವ ಮಂಗಳಾರತಿಯಿಂದಪಂಚಾಮೃತದ ಪೂಜೆಗೊಂಬ 4 ಜಲಜನಾಭಗೆ ಉಷ್ಣಜಲವ ತಂದ್ಹದ ಮಾಡಿಲಲಿತವಾಗಿ ಎರೆಯುತಒಳಿತಾದ ಹೆಸರ್ಹಿಟ್ಟಿನಲಿ ಒರೆಸಿ ಮೈಯನೆತೊಳೆದು ಸುಲಭಗೆ ಪಾಲನುಣಿಸಿ ಬಳಿಕಬಾಲಉಡಿಗೆಯಿಟ್ಟು ಬಹುನೈವೇದ್ಯವನರ್ಪಿಸಿಚೆಲುವ ಉದ್ವಾರ್ಚನೆ ಪೂಜೆಚೆಂದಾಗಿ ಮಾಡಿಸಿಕೊಂಬ 5 ಮಧ್ವ ಸರೋವರಜಲವು ಹೊಳೆವÀ ಚಿನ್ನ ಕಲಶÀದಲಿಶುದ್ಧದಲಿ ಶೋಧಿಸಿ ತುಂಬಿಸಿಬದ್ಧ ಘಂಟೆನಾದದಲಿ ಬಹುಬೇಗದಲಿಬಂದು ಸನ್ನಿಧಿಯಲಿ ಪೂಜಿಸಿವಿಧುರಥನೆ ಶಂಕರಥನೆ ಪುರುಷಸೂಕ್ತÀದಭಿಷೇಕಮುದದಿಂದ ಮಾಡಿದ ಬಳಿಕ ಸಜ್ಜಿ ಘೃತದೋಸೆ ಬೆಣ್ಣೆ ಸಾರು ನೈವೇದ್ಯವ ಸವಿದು ಚೆಲುವಮಂಗಳಾರತಿಯಿಂದ ಮುದದಿ ತೀರ್ಥಪೂಜೆಗೊಂಬ 6 ಉರು ಪದಕಾಭರಂಣಗಳು ಉನ್ನಂತತೋಳ್ಬಂದಿಕರಮುದ್ರೆ ಕಂಕಣಗಳು ಚರಣಾರವಿಂದಗಳಿಗೆ ಚಾರುಚಿನ್ನದ್ಹಾವಿಗೆಕಿರುಗೆಜ್ಜೆ ಕಾಲಲಂದುಗೆವರ ಪೀತಾಂಬರ ಕಟಿಗೆ ವಡ್ಯಾಣ ನೇವಳ ಇಟ್ಟುನಿರುತ ಸುವರ್ಣದ ಕವಚವುಕೊರಳ ಕೌಸ್ತುಭಹಾರ ಕೋಮಲ ಸುವರ್ಣಕುಂಡಲಸಿರಿಮೂರುತಿ ಸಣ್ಣ ನಾಮ ಶಿರದ ಜಾವಳ ಜಡೆ ಕಡಗೋಲು ನೇಣುಸಹಿತ7 ದಧಿ ಶುಂಠಿ ನಿಂಬೆರಸ ತಕ್ರಜಗದೇಕ ಸವಿದ ಪರಿಯ 8 ಬಗೆಬಗೆಯ ಮಂಗಳಾರತಿ ಬಾರಿಬಾರಿಗೆ ಮಾಡಿ ಚಾ-ಮರ ದರ್ಪಣಗಳೆಸೆಯೆ ನಗೆಮುಖದ ಕೃಷ್ಣ-ನಂಘ್ರಿಗೆ ಷೋಡಶ ಪೂಜೆಯ ಮಾಡಿಮುಗಿಸಿ ಗುರುರಾಯ ಬರಲುಹನುಮಂತದೇವರಿಗೆ ಹಸನಾದ ಭಕ್ಷ್ಯಭೋಜ್ಯಅನುದಿನದಲರ್ಪಿಸಿ ಪೂಜಿಸಿಮುನಿ ಮಧ್ವರಾಯರಿಗೆ ಮುದದಿಂದಲರ್ಪಿಸಿ9 ಅರಳು ಆರಚ್ಚು ಬೆಲ್ಲವುಆ ಕಾಲದಲರ್ಪಿಸಿ ಪೂಜಿಸಿ ಕರಣದಲಿ ನೋಡಿ ನಗುವ 10 ಪುಟ್ಟ ಕೃಷ್ಣರಾಯರಿಗೆ ಹೊನ್ನ ಕವಚವ ತೊಡಿಸಿಇಟ್ಟ ರನ್ನದ ಕಿರೀಟವುದಿಟ್ಟಾದ ಪದಕಂಗಳು ದಿವ್ಯಮುತ್ತಿನ ಸರಕಟ್ಟಿದ್ದ ಪೂಮಾಲೆ ಎಸೆಯೆಶ್ರೇಷ್ಠವಾದ ಧೂಪದೀಪ ಶ್ರೀಪತಿಗೆ ದೋಸೆ ಬೆಣ್ಣೆಗಟ್ಟುರುಳಿ ನೈವೇದ್ಯವು ಕಟಕಟನೆಶುಂಠೀಕಷಾಯುಂಡು ಬಾಯಿ ತೊಳೆದುತಟ್ಟನೆ ರಾತ್ರಿ ಪೂಜೆಯಗೊಂಡು ತಾ ಪಲ್ಲಕ್ಕಿಯೇರಿ ಬರುವ11 ಅರಳು ಬಹುಕೊಬರಿ ಚೂರುಗಳು ಆ ಕಾಲದಲಿ ಸೂಸಿ ಪೂಜಿಸೆ ಕರುಣದಲಿ ನೋಡಿ ನಗುವ 12 ಧೀರನಿಗೆ ಚತುರ್ವೇದ ದಿವ್ಯಶಾಸ್ತ್ರಪುರಾಣ ಚೆಲುವಗಷ್ಟಕ ಗೀತವುಭೇರಿಮೌಳಿ ಮೌಳಿವಾದ್ಯಮೌಳಿಮೌಳಿ ಚಕ್ರವಾದ್ಯತಾರತಮ್ಯದ ಸರ್ವವಾದ್ಯಗಳೆಸೆಯೆತಾರಿ ಸೇವೆಯ ಮಾಡಿ ಸ್ವಾಮಿ ವೀಳ್ಯ ಮಂತ್ರಾಕ್ಷತೆ ಕಾರುಣ್ಯದಲಿಬೆರೆಸಿ ಮಾರಜನಕಗೆ ಏಕಾಂತ ಸೇವೆಯ ಮಾಡಿ ನವಮಾರಜನಕನ ಹಂಪೂಜೆಯ ಜಾಗ್ರತೆಯಲಿ ನೋಡಿ ನಗುವ 13 ಹಡಗಿನಿಂದಲಿ ಬಂದು ಕಡಲ ತಡಿಯಲಿ ನಿಂದುಬಿಡದೆ ಯತಿಗಳ ಕೈಯ ಬಿಂಕದಿ ಪೂಜೆಗೊಂಬಆದಿ ಕೃಷ್ಣನ ಆಹ್ನಿಕವನು ಆಧಾರದಲಿಓದಿವಿನೋದದಲಿ ಪಠಿಪ ಜನರಿಗೆಆಧಿವ್ಯಾಧಿಗಳಟ್ಟಿ ಬಹು ಭಾಗ್ಯಗಳ ಕೊಡುವಮಾಧವನ ಕೃಪೆಯಿಂದಲಿವಾದಿರಾಜರಿಗೊಲಿದು ವಚನ ಶುದ್ಧೋಕ್ತದಲಿ ಹೇಳುವ ಜನರಿಗೆಬರುವ ದುರಿತವ ಕಳೆದು ಮೇಲಾಗಿ ರಕ್ಷಿಸಿಕೊಂಬ ಹಯವದನ 14
--------------
ವಾದಿರಾಜ
ಉರುಟಣೆ ಪದ ಜಯ ಜಯ ರಾಮ ಜಯಜಯ ಜಯ ನಮ್ಮ ಜಾನಕೀ ರಮಣಗೇ ಪ ಇಂದಿರಾದೇವಿ ರಮಣಿ ಶರಣ್ಯಮಂದರ ಗಿರಿಧರ ಶರಣ್ಯಕಂದನ ನುಡಿ ಕೇಳಿ ಕಂಬದಿಂದಲಿ ಬಂದಸಿಂಧು ಶಯನ ಸಲಹುವಾದೆನ್ನ 1 ಗುರು ವಿಜಯದಾಸರ ಚರಣಾಸರಸಿರುಹವ ಮನದೊಳಾಗಿರಿಸಿಹರಿ ಸರ್ವೋತ್ತಮ ಮಂಗಳ ಚರಿತೆಯವಿರಚಿಸುವೆನು ಸುಜನರು ಕೇಳಿ 2 ಮುತ್ತೈದೆರೆಲ್ಲಾ ಬೇಗಾದಿ ಬಂದುಅರ್ತಿಯಿಂದಲಿ ಶೃಂಗಾರವಾಗಿಚಿತ್ತಜನಯ್ಯನ ಉರುಟಣೆ ಎನುತಾಲಿಮತ್ತ ಗಮನೇರು ಬಂದರಾಗಾ 3 ಸರಸ್ವತಿ ಭಾರತಿ ಮೊದಲಾದಸರಸಿಜ ಮುಖಿಯರೆಲ್ಲಾರು ನೆರೆದುಸರಸ ಉರುಟಣಿಯ ಮೊಡಬೇಕೆನುತಾಲಿಕರೆಸಿದರಾಗ ಮುತ್ತೈದೆರಾಗ 4 ಹೇಮಮಯದ ಮಂಟಪದೊಳಗೆಪ್ರೇಮದಿಂದಲಿ ಹಾಸಿಕೆ ಹಾಕಿಸೋಮವದನನ ಗುಣವ ಕೊಂಡಾಡುತಕಾಮಿನಿಯರು ಕರೆದಾರು ಹಸೆಗೇ 5 ಕೌಸಲ್ಯಾದೇವಿ ತನಯಾನೆ ಕೇಳುಹರ್ಷದಾಯಕ ರಕ್ಷಕನೇಳುಹಂಸವಾಹನನಯ್ಯನೆ ಹಸೆಗೆ ಏಳೇಳೆಂದುಹಂಸಗಮನೆಯರು ಕರೆದರು ಹಸೆಗೆ 6 ನಿಗಮವ ತಂದಾ ಮಚ್ಚ್ಯಾನೇಳುನಗವ ಬೆನ್ನಿಲಿ ಪೊತ್ತ ಕೂರ್ಮನೇಳುಜಗವನುದ್ಧರಿಸಿದ ವರಹ ಮೂರುತಿ ಏಳುಮೃಗ ನರ ರೂಪ ಹರಿಗೇಳೆಂದಾರು 7 ಸುರನದಿಯ ಪಡೆದ ವಾಮನನೇಳುಪರಶುರಾಮ ಮೂರುತಿ ಏಳುಶರಧಿಯ ದಾಟಿ ಸೀತೆಯ ತಂದಶಿರಿ ರಾಮಕೃಷ್ಣ ಹಸೆಗೇಳೆಂದರು 8 ವ್ರತವನಳಿದ ಬೌದ್ಧನೇಳುಅತಿಬಲ ರಾಹುತನೇಳುಪೃಥಿವಿಗೊಡೆಯ ರಾಮನೇಳೆಂದುಅತಿ ಚಮತ್ಕಾರದಿ ಕರೆದರಾಗ 9 ಇಂತು ಬಗೆಯಾಲಿ ತುತಿಸಿ ಕರೆಯೇಕಂತುಜನಕನು ಹರುಷದಾಲೆದ್ದುಕಾಂತೆ ಕೈ ಪಿಡಿದು ನಡೆ ತರಲಾಗಲುನಿಂತಾರು ನಾರಿಯರೆಲ್ಲರಾಗ 10 ಎತ್ತಿಕೊಂಬುವದು ರಾಘವ ನಿಮ್ಮಪತ್ನಿಯ ನಡೆಸಲಾಗದು ಕೇಳಿನೀ ಪೃಥ್ವೀಶನಾದರೆ ನಮಗೇನೆನುತಾಲಿಸುತ್ತು ಕಟ್ಟಿದರು ವಾಮಾಕ್ಷಿಯರು 11 ಮಂಗಳಾಂಗಿಯನು ಎತ್ತಿಕೊಂಡು ರಾಮಹಿಂಗಾದೆ ದ್ವಾರದಲ್ಲಿಗೆ ಬರಲುಮಂಗಳದೇವಿಯ ಹೆಸರು ಹೇಳೆನುತಾಲಿಅಂಗನೆಯರು ಅಡ್ಡಗಟ್ಟಿದರಾಗಾ 12 ನಾಳೆ ಹೇಳುವೆನು ಇವಳ ಹೆಸರುತಾಳಲಾರೆನು ಭಾರವು ಎನಲುಶ್ರೀ ಲಕ್ಷ್ಮೀದೇವಿಯ ಹೆಸರು ಹೇಳಿದೆ ಬಿಡೆವೆಂದುಬಾಲೆಯರೆಲ್ಲಾರು ಇಟ್ಟರು ಕದವಾ 13 ಪುತ್ಥಳಿ ಗೊಂಬೆ ಹೆಸರು ಹೇಳೆನೆ ರಘು-ನಾಥಾನು ಎಂದಾಳು ಜಾನಕೀ 14 ಅಂಗಜನಯ್ಯಾ ಸತಿಯು ಸೀತೆಯ ಸಹಿತರಂಗು ಮಾಣಿಕದ ಹಾಸಿಕೆಯ ಮೇಲೆಶೃಂಗಾರದಿಂದಾಲಿ ಬಂದು ಕುಳ್ಳಿರಲಾಗಸುರರೆಲ್ಲಾ ಹಿಗ್ಗಿ ಕರೆದರು ಪೂ ಮಳೆಯಾ 15 ಸಾಸಿರ ನಾಮದ ಒಡೆಯ ಬಂದಾಶೇಷಶಯನಾ ಮೂರುತಿ ಬಂದಾಭಾಸುರಾಂಗನೆ ಸೀತೆ ಆಳಿದಾ ರವಿಕುಲಾ-ಧೀಶ ಬಂದಾನು ಎಂದಾರು ಕೇಳೆ 16 ವಾನರಾಧೀಶನೊಡೆಯಾ ಬಂದಾದಾನವಾಂತಕ ರಾಘವ ಬಂದಾ ಶ್ರೀ-ಜಾನಕೀದೇವಿ ಪ್ರಾಣದೊಲ್ಲಭ ಜಗ-ತ್ರಾಣ ಬಂದಾನು ಎಂದಾರು ಕೇಳೆ 17 ಸತ್ಯ ಸಂಕಲ್ಪ ಶ್ರೀ ಹರಿಯು ಬಂದಾಭೃತ್ಯ ಪಾಲಕ ದೊರೆಯು ಬಂದಾಮಿತ್ರೆ ಜಾನಕಿದೇವಿ ಪ್ರಾಣದೊಲ್ಲಭ ಸ-ರ್ವೋತ್ತಮ ಬಂದನೆಂದಾರು ಕೇಳೇ 18 ಸುಗ್ರೀವನ ಪರಿಪಾಲಕ ಬಂದಾ ಕ-ರಿಗ್ರಾಹ ಸಂಹಾರಿಕ ಬಂದಾವ್ಯಾಘ್ರ ಚರ್ಮಾಂಬರ ಸಖ ಸುಂದರವಿಗ್ರಹ ಬಂದಾ ಎಂದಾರು ಕೇಳೇ 19 ಇಂದ್ರನ್ನ ಪರಿಪಾಲಕ ಬಂದಾಚಂದ್ರನ್ನ ಪ್ರಭೆಯಾ ಸೋಲಿಪ ಬಂದಾಇಂದುವದನೆ ಸೀತೆ ಪ್ರಾಣದೊಲ್ಲಭ ರಾಮ-ಚಂದ್ರ ಬಂದನೆಂದಾರು ಕೇಳೇ 20 ಚಂದನ ಗಂಧೆಯರು ಎಲ್ಲಾರು ಕೂಡಿಗಂಧ ಕುಂಕುಮ ಅರಿಷಿಣ ಕಲಿಸಿಇಂದುವದನೆ ಸೀತೆಯ ಕೈ ಒಳಗಿಟ್ಟು ಶ್ರೀರಾಮ-ಚಂದ್ರಗೆ ಹಚ್ಚಿಸಿರೆಂದರಾಗ 21 ವಾರಿಜೋದ್ಭವ ಮೊದಲಾದವರುತಾರತಮ್ಯದಿಂದಾಲಿ ಕುಳಿತುವಾರಿಜಾಮುಖಿ ಸೀತೆ ನುಡಿಯೆಂದೆನುತಾಲಿಸಾರಿದರಾಗ ಸಂದಣಿಯರೆಲ್ಲಾ 22 ವಾಕು ಕೇಳಬೇಕೆಂದುಜಲಜ ಸಂಭವನು ನುಡಿದಾನು ನಗುತಾ 23 ಕಂಜವದನೆ ಜಾನಕೀದೇವಿಅಂಜಲಾಗ ನಿಮ್ಮ ಪುರುಷಾರಿಗೆಕುಂಜರ ವರದಾ ದಾಕ್ಷಿಣ್ಯ ಬ್ಯಾಡೆಂದುಅಂಜಾದೆ ನುಡಿದಾರು ನಸುನಗುತಾ 24 ದೋಷ ವರ್ಜಿತನೇ ಹರಿ ನಿಮ್ಮದೂಷಣೆ ಮಾಡಿದಳೆನ ಬ್ಯಾಡಿಮೋಸದಿಂದಲಿ ಬಲು ದೈತ್ಯರ ಕೊಂದ ಜಗ-ದೀಶ ನಿಮ್ಮ ಮುಖವಾ ತೋರೆಂದಾಳು 25 ದೇವಿ ಹಸ್ತದೊಳು ಅರಿಶಿನವ ಪಿಡಿದುಭಾವಜನಯ್ಯನ ನುಡಿದಾರಾಗದೇವರ ದೇವೋತ್ತಮ ಶಿಖಾಮಣಿದೇವಾ ನಿಮ್ಮಯ ಮುಖವಾ ತೋರೆಂದಾಳು 26 ಭಸ್ಮಾಸುರನ ಕೊಂದಾ ಬಹು ಶೂರನಾರಿಕಂಸನಳಿದಾ ಧೀರ ಅಸುರ ಹಿರಣ್ಯಕನಅಸುವ ಹೀರಿದ ದೊಡ್ಡಅಸುರಾಂತಕ ಮುಖವಾ ತೋರೆಂದಾಳು 27 ವಾಲಿಯ ಸಿಟ್ಟಿನಿಂದಾಲಿ ಕೊಂದುಕಾಲ ಯಮನಾನಸುವ ಯುಕ್ತಿಯಿಂದಾಭಳಿರೆ ಮಧುಕೈಟಭರ ಕೊಂದಾಕಾಲಾಂತಕ ಮುಖವ ತೋರೆಂದಾಳು 28 ಶ್ರೀನಾಥ ದ್ವಾರಕಾಪುರ ಮಾಡಿಆ ನಂದಿ ಗೋಮಂತಾ ಗಿರಿಗೊಲಿದೆವಾನರಾಧೀಶನಾ ಬಲು ಕೊಂಡಾಡುತ್ತದಾನವಾಂತಕಾ ಮುಖವಾ ತೋರೆಂದಾಳು 29 ಅರಿಶಿನವಾನು ಹಚ್ಚಿದಳು ಸೀತೆಅರಸನ ಫಣೆಗೆ ಕುಂಕುಮವಾ ಹಚ್ಚಿಸರಸದಿ ವದನಕ್ಕೆ ಗಂಧವಾ ಹಚ್ಚಲುಸುರರೆಲ್ಲಾ ನಕ್ಕಾರು ಕೈ ಹೊಡೆದು 30 ಪತಿ ಮೊದಲಾಗಿ ಚಪ್ಪಾಳೆನಿಟ್ಟುಹರಸಿದರಾಗ ಜಾನಕಿದೇವಿಶಿರಿಯು ಗೆದ್ದಳು ಅಯೋಧ್ಯದಅರಸು ಸೋತನೆಂದು ನಗುತೆ 31 ಬಾಹುಗಳಿಗೆ ಗಂಧವಾ ಹಚ್ಚಿಸಿಮ್ಯಾಲೆ ಪರಿಮಳಾ ಪೂಸಿದಳುಶ್ರೀ ಹರಿಯ ಚರಣಾವ ಪಾಲಿಸಬೇಕೆನುತಲಿಸರಸಾದಿಂದಾಲಿ ನುಡಿದಾಳು ಜಾನಕೀ 32 ಪಾಷಾಣ ಪೆಣ್ಣಾ ಮಾಡಿದಾ ಚರಣಶೇಷನಾ ಮ್ಯಾಲೆ ಮಲಗಿದ ಚರಣಭಾಸುರಾಂಗಿ ನಿನ್ನ ಲೀಲೆಯಾ ತೋರಿದಾಶೇಷಶಯನ ಚರಣಾ ಪಾಲಿಸೆಂದಾಳು 33 ಆಕಾಶಗಂಗೆಯ ಪಡೆದಾ ಚರಣಾಶಕಟನ ಮುರಿದೊಟ್ಟಿದ ಚರಣಾಭಕುತ ಜನರ ಸೇವೆ ಕೊಂಬ ಚರಣರಕ್ಕಸ ದಲ್ಲಣ ಚರಣಾವ ಪಾಲಿಸೆಂದಾಳು 34 ಅಂಕುಶದೊಜ್ರ ರೇಖೆಯ ಚರಣಾಕುಂಕುಮಾಂಕಿತ ರಾಶಿಯ ಚರಣಾಬಿಂಕದಿಂದ ಕುರುಪತಿಯ ಕೆಡಹಿದ ಬಿರು-ದಾಂಕ ನಿನ್ನಯ ಚರಣಾ ಪಾಲಿಸೆಂದಾಳು 36 ನಸುನಗುತ ಹರಿ ಚರಣ ವೀಕ್ಷಿಸಿಶಶಿಮುಖಿ ಸೀತೆ ಆನಂದದಿಂದಾಮಿಸಣಿಯಂತೊಪ್ಪುವ ಅರಿಶಿನೆಣ್ಣೆಯಾಎಸೆವ ಪಾದಕ್ಕೆ ಹಚ್ಚಿದಳಾಗ 37 ಪಾದ ಪದ್ಮಕ್ಕೆ ಎರಗಿಪಾಲಿಸಬೇಕೆಂದಾಳು ಅಂಗನೆ 38 ಕರಗಳ ಪಿಡಿದೆತ್ತಿದನು ರಾಮಾಹರಸಿದ ಮುತ್ತೈದಾಗೆಂದುಪರಮ ಪತಿವ್ರತೆಯೆನಿಸು ಎನುತಾಲಿಹರಿ ಹರಸೀದಾನು ಹರುಷದಲ್ಲಾಗ 39 ಅಂಡಜವಾಹ ಭಗವಂತನುಹೆಂಡತಿಯ ಮುಖವ ನೋಡೆನುತಲಿಗಂಡು ಮಕ್ಕಳ ಘನವಾಗಿ ಪಡೆಯೆಂದುಪುಂಡರೀಕಾಕ್ಷ ಹರಸಿದನಾಗ 40 ಮಂದಗಮನಿಯ ಕುಳ್ಳಿರಿಸಿಇಂದಿರೇಶ ಮುಂಗುರಳಾ ತಿದ್ದಿಎಂದೆಂದಿಗೆ ಅಗಲದಿರೆಂದು ರಾಮ-ಚಂದ್ರಾನು ಹರಸಿದನಾಗ 41 ಭೂಲೋಕದೊಡೆಯ ರಾಘವರಾಯನಶ್ರೀಲತಾಂಗಿಯ ಕುಳ್ಳಿರಿಸಿದನುಬಾಲಕಿಯರೆಲ್ಲಾರು ಗಲಿಬಿಲಿ ಮಾಡಾದಿರೆಂದುಫಾಲಾಲೋಚಾನು ನುಡಿದನು ನಗುತ 42 ಕಂತುಜನಕ ರಾಘವಾ ನಿಮ್ಮಾಪಂಥ ಸಲ್ಲಾದು ಜಾನಕಿಯೊಡನೆಯಂತ್ರವಾಹಕ ಶ್ರೀರಾಮ ಏಳೇಳೆಂದುಕಾಂತೆಯರೆಲ್ಲರು ನುಡಿದಾರು ನಗುತಾ 43 ಭಾಗೀರಥಿ ಪಾರ್ವತಿದೇವಿಬೇಗದಿ ಅರಿಷಿನ ಕೈಲಿ ಕಲಿಸಿಸಾಗರ ಶಯ್ಯನ ಕೈಯೊಳಗಿಟ್ಟುಬಾಗಿ ಸೀತೆಯ ಮುಖಕೆ ಹಚ್ಚೆಂದಾರು 44 ನಿಂದಲ್ಲಿ ನಿಲ್ಲಾದೆ ಚಂಚಳೆ ಲಕ್ಷ್ಮೀಬಂಧು ಬಳಗವನಗಲಿಸುವ ತರಳೆತಂದೆ ಮಕ್ಕಳೊಳಗೆ ಕದನವ ನಿಡುವಂಥಮಂದಹಾಸೆ ಮುಖವ ತೋರೆಂದಾನು ರಾಮಾ 45 ಅಣ್ಣನ ವಂಚಿಸಿ ಬೇಡಿದವಳೇಮನ್ನೆ ಮನ್ನೆಯರಾ ಕಳಿಸಿದವಳೇಚೆನ್ನಾಗಿ ಮನೆಯೋಳಿದ್ದು ಪೋಗುತಚೆನ್ನಾಯಿತೆ ಮುಖವ ತೋರೆಂದಾನು 46 ಭಾಷೆಯನು ಕೊಟ್ಟು ತಪ್ಪಿಸುವಳೆಕಾಸುವೀಸಾಕೆ ವತ್ತಿ ಬೀಳುವಳೆಹೇಸಿಕಿಲ್ಲದೆ ಕುಲಹೀನನ ಮನೆಯೊಳುವಾಸವಾಗಿರುವಾ ಮುಖವ ತೋರೆಂದಾನು 47 ರಾಮಚಂದ್ರಾನು ಅರಿಶಿನ ಗಂಧವಭೂಮಿಜಳಿಗೆ ಹಚ್ಚಿದನಾಗಾಸಾಮಜಗಮನೆಯ ಹಣೆಗೆ ಕುಂಕುಮ ಹಚ್ಚಿಪ್ರೇಮದಿ ಪರಿಮಳ ಪೂಸಿದಾನು 48 ಕುಸುಮ ದಂಡೆಯ ಮಾಡಿದರುಬಾಸಿಂಗವನು ಕಟ್ಟಿದಾರುಭೂಸುರರೆಲ್ಲರು ಮಂತ್ರಾಕ್ಷತೆ ತಳಿದು ನಿ-ರ್ದೋಷನಾಗೆಂದು ಹರಸಿದರು 49 ಇಂದುಮುಖಿಯರೆಲ್ಲಾರು ಕೂಡಿನಂದದಿ ಜಾನಕಿಗೆ ವೀಳ್ಯವನಿತ್ತುಅಂದಮಾಣಿಕದ ಅಕ್ಷತೆಗಳ ತಳಿದುಮಂದರೋದ್ಧರನ ಹರಿಸಿದರು 50 ದೇವಿಯನ್ನೆತ್ತಿಕೊಂಡು ರಾಮದೇವರ ಮನೆಗೆ ಬಾಹೋದು ಕಂಡುಭಾವುಕರೆಲ್ಲಾ ಹೆಸರು ಪೇಳೆಂದೆನುತದೇವಿ ರಘುನಾಥನೆಂದು ಪೇಳಿದಳಾಗ 51 ಇಂದುಮುಖಿಯರೆಲ್ಲಾರು ಕೂಡಿಇಂದಿರೇಶಾನೆ ಹೆಸರು ಪೇಳೆನಲುಎಂದಾ ಮೇಲೆ ಜಾನಕಿಯೆಂತೆಂದುಮಂದರಧರನು ನುಡಿದನಾಗ 52 ಸತಿಪತಿಯರಿಬ್ಬರು ಕೂಡಿಅತಿಶಯದಲಿ ನಮಸ್ಕರಿಸಿದಾರುಕ್ಷಿತಿಯ ಸುರರಿಗೆ ಲೀಲೆಯ ತೋರಿದ ದೇವಾಪತಿತ ಪಾವನ್ನ ಎನ್ನ ಸಲಹು ಎಂದಾನು 53 ಈ ಕಥೆಯನು ಆದರದಿಂದಾ ಬರೆದು ಹೇ-ಳಿ ಕೇಳುವ ಜನರಾಶ್ರೀಕಾಂತನೊಲಿದು ಕರುಣಿಸುವ ತಾ ಸಿದ್ಧನೇಮದಿಂದಾ ಪಾಡಿರಿ ಜನರು 54 ಕುರುಡಾನು ಈ ಕಥೆಯಾನು ಕೇಳಿದರೆಕರುಣದಿಂದಾಲಿ ಕಂಗಳ ಬರಿಸುವಶರಣವತ್ಸಲ ತನ್ನ ಶರಣರೊಳಿಟ್ಟುಪರಿಪಾಲಿಸುವನು ಶತಸಿದ್ಧ 55 ಸಿರಿ ಒದಗುವದುದಾರ ಇಲ್ಲದ ಬ್ರಹ್ಮಚಾರಿ ತಾ ಕೇಳಲುನಾರಿಯ ಸಹಿತೆ ವಾಸಿಸುವನು 56 ಉದ್ಯೋಗ ಇಲ್ಲದವನು ಕೇಳಿದರೆಸದ್ಯ ಐಶ್ವರ್ಯ ಒದಗುವದು ಸಿದ್ಧಮುದ್ದು ಸುತರಿಲ್ಲದ ಸ್ತ್ರೀಯು ಕೇಳಲುಬುದ್ಧಿವಂತ ಸುತರಾಗುವರು ಸಿದ್ಧ 57 ಮೂರ್ತಿ 58 ಕಮಲ ಧರಿಸಿಪ್ಪಪಾವನ ಮೂರುತಿ ಹೃದಯಾದಲ್ಲಿದೇವಿ ಸಹಿತವಾಗಿ ಕಾವನು ಕರುಣಾದಿನೀವೆಲ್ಲಾರು ತಿಳಿರಿ ಜನರು 59 ಜಾಹ್ನವಿ ಜನಕನುಜಯ ಜಯವೆಂದು ಮಂಗಳವ ಪಾಡೇ 60
--------------
ಮೋಹನದಾಸರು
ಎಂತು ಗುರು ಪೂಜೆಯ ಮಾಡಲಿನಿಂತಿಹನು ಅಂತರ್ಬಾಹ್ಯದಲಿ ಪ ವಾಕು ಮೊದಲಲ್ಲಿಜ್ಞಾನೇಂದ್ರಿಯ ಪಂಚಕ ನೋಡಲ್ಲಿ |ಪ್ರಾಣಾಪಾನ ವ್ಯಾನೋದಾನದಲ್ಲಿತಾನೇ ಇಹ ದಶಪ್ರಾಣದಲ್ಲಿ 1 ಮೂರ್ತಿ ತುಂಬಿಹವಿವನಲ್ಲಿ 2 ಭಾನುಶಶಿ ನಕ್ಷತ್ರಂಗಳಲ್ಲಿನಾನಾ ಜಾತಿ ಕುಲಗೋತ್ರದಲ್ಲಿ |ತಾನು ತಾನೇ ತೋರಿಸುವಲ್ಲಿಜ್ಞಾನಬೋಧ ಬೇರುಂಟು ಮತ್ತೆಲ್ಲಿ 3
--------------
ಜ್ಞಾನಬೋದಕರು
ಎಂತು ವರ್ಣಿಸಲಮ್ಮ ನಾನು ಕಂತುಜನಕನಾನಂತನಗಮ್ಯನನÀಂತವತಾರನಪ. ಸಂತತ ಸಜ್ಜನರಂತರಂಗದಲಿ ನಿಂತಿಹ ಲಕ್ಷ್ಮೀಕಾಂತನ ಮಹಿಮೆಯ ಅ.ಪ. ನೀರೊಳಾಡುತ ಭಾರವ ಹೊರೆವ ಧಾರುಣಿಯ ಪೊರೆವ ಘೋರ ರೂಪದಲಿ ಭೂಮಿಯನಳೆವ ಕ್ರೂರನೃಪರಳಿವ ಆ ರಾವಣನ ಬಲವ ಮುರಿವ ಚೋರ ದಿಗಂಬರವ ಚಾರು ಕುದುರೇಯನೇರಿ ಬರುವ ಸುಕು- ಮಾರ ಜಗದೊಳು ಶೂರ ಜಾರುವ ಕಠಿಣಶರೀರದಿ ಭೂಮಿಯ ಸೇರುವ ಕಂಬವಿದಾರಣ ಮಾಡುವ ಮೀರುವಭುವನಕೆ ತೋರುವ ಪರಶುವ ಜಾರ ವಸನಹೀನ ಧೀರ ಸುಅಶ್ವವನೇರಿ ಮೆರೆವನ 1 ನಿಗಮೋದ್ಧರಿಸುವ ನಗವನು ತರುವ ಜಗತಿಯುದ್ಧರಿಸುವ ಮಗುವ ಪಾಲಿಸುವ ಮಾಯದಿ ಬೆಳೆವ ದುಗುಡ ನೃಪಕುಲವ ಬಗಿದು ಭಾಸ್ಕರ ತನಯನಿಗೊಲಿವ ನೆಗಹಿ ಗೋವರ್ಧನವ ಬಗೆಬಗೆ ಮಾತಾಡಿ ಸುಗುಣ ವಾಜಿಯನೇರಿ ಬಂದ ಸಚ್ಚಿದಾನಂದ ಹುಗಿದು ಸೋಮಕನ ಅದ್ರಿಗೆ ಬೆನ್ನಿತ್ತು ಅಗಿದು ಭೂಮಿಯ ನರಮೃಗನಾಗುತ ಗಗನಕೆ ಬೆಳೆದು ಘಾತಿಸಿ ಕ್ಷತ್ರಿಯರ ರಘುವರ ಯದುಪತಿ ವಿಗತವಸನನಾಗಿ ಜಗಕೆ ಬಲ್ಲಿದ ಹಯವೇರಿ ಬರುವನ 2 ನಳಿನೋದ್ಭವನಿಗಾಗಮವನಿತ್ತ ಗಿರಿಯ ನಿಲಿಸಿತ್ತ ಇಳೆಯ ಕದ್ದೊಯ್ದ ದಾನವನಳಿದ ನರಹರಿ ತಾನಾದ ಬಲಿಮುಖವ ಮುರಿದ ಖಳಭೂಪರಳಿದ ದÀಶಶಿರನÀಳಿದ ಕೊಳಲನೂದಿದ ದುಷ್ಟ ಲಲನೇರ ವ್ರತವಳಿದ ಕಲಿಯ ಮರ್ದಿಸಿದ ಹೊಳೆವ ಬೆನ್ನಲಿ ಗಿರಿತಳವೆತ್ತಿದನ ನೆಲನ ಬಗಿದು ಕಂಬದಲಿ ಬಂದವನ ಬೆಳೆದ ಬೊಮ್ಮಾಂಡಕೆ ಭಾರ್ಗವಾಧಿಪನ ಬುದ್ಧ ಕಲ್ಕಿ ಚೆಲುವ ಹಯವದನನ ಬಲ್ಲಿದನ 3
--------------
ವಾದಿರಾಜ
ಎಂಥ ಶೂರನೊ ರಾಮ ಎಂಥ ಧೀರನೊ ಪ ಕಂತುಹರನ ಧನುವನೆತ್ತ ಪಂಥದಿಂದ ಮುರಿದು ಬಿಸುಟ ಅ.ಪ. ಹಲವು ಶೂರರಾಜರದನು ಚಲಿಸಲಾಗದ ಧನುವ ಸುಲಭದಿಂದಲೆತ್ತಿ ಮುರಿದು ಲಲನೆ ಸೀತೆಯೊಲಿಸಿದವನು 1 ಸಕಲ ಕ್ಷತ್ರಿಯರನು ಗೆಲಿದು ಪ್ರಕಟನಾದ ಪರಶುರಾಮ ಶಕುತಿಯನ್ನು ತಾನು ಪರಮ ಯುಕುತಿಯಿಂದ ಗೆಲಿದು ಬಂದ 2 ಸಾಲು ಶಿರನ ಕೀಟವೆಂದು ಬಾಲದಲ್ಲಿ ತಂದ ವೀರ ವಾಲಿಯನೇಕ ಬಾಣದಲಿ ಲೀಲೆಯಿಂದಲಿರಿದ ಜಾಣ 3 ಹತ್ತನಾಲ್ಕು ಲೋಕಗಳನು ಸುತ್ತಿಗೆಲಿದು ಖ್ಯಾತನಾದ ಹತ್ತು ತಲೆಯ ದುಷ್ಟನನ್ನು ಕತ್ತು ಕಡಿದು ಕೆಡಹಿದವನು 4 ರಾಸಿ ದೈತ್ಯರನ್ನು ಕೊಂಡು ದೇಶವನ್ನು ಉದ್ಧರಿಸಿದ ವಾಸವಾದಿ ಸುರನುತ ರಂ- ಗೇಶವಿಠಲರೇಯನವನು 5
--------------
ರಂಗೇಶವಿಠಲದಾಸರು
ಎಂದಿಗೆ ದೊರಕುವನು ಶ್ರೀಗುರುವನ ಗೆಂದಗೆ ದೊರಕುವನು ಪ ಮಂದಮತಿಯ ಕಡೆಗ್ಹೊಂದಿಸಿ ಸಚ್ಚಿದಾ ನಂದ ಬ್ರಹ್ಮನ ಕೃಪೆಯಿಂದ ಪಾಲಿಸಿದಾತಾ ಅ.ಪ. ಕರುಣದಿ ಕರದು ತನ್ನಾ ತೊಡೆಯ ಮೇಲ್ಕು ಳ್ಳಿರಿಸಿ ಶರಧಿಯೊಳೀಡಾಡಿ ಈಶ್ವರನ ತೋರಿದ ಗುರು ಎಂದಿಗೆ 1 ತನ್ನ ತಾ ತಿಳಿವವೊಲು ತತ್ವನಸಾರ ವನ್ನು ಸಾಧುಗಳಿಂದಲಿ ಚೆನ್ನಾಗಿ ಅರಿತುಕೊಳ್ಳೆಂದು ಅಮೃತಪಾನವನ್ನು ಮಾಡಿಸಿದ ಪ್ರಸನ್ನವದನ ಗುರು ಎಂದಿಗೆ 2 ಹುಟ್ಟಿಸಾಯದಂದದಿ ವಾಕ್ಯದ ಮದ್ದು ಕೊಟ್ಟು ಜೀವನ್ಮುಕ್ತಿಯ ಪಟ್ಟವ ಗಟ್ಟಿ ಫಣಿಗೆ ಮಂಗಲಾಕ್ಷತೆ ಇಟ್ಟ ವಿಮಲಾನಂದ ಬಟ್ಟೆದೋರಿದ ಗುರು 3
--------------
ಭಟಕಳ ಅಪ್ಪಯ್ಯ
ಎದ್ದಳೀಗಿದಕೋ ಶ್ರೀರಮಣಿ || ಎದ್ದಳೀಗಿದಕೋ ಪ ಮುದ್ದು ಶ್ರೀ ಹರಿಯಾ ತೋಳ ತೆಕ್ಕೆಯಾನುಸಳಿ ಶುದ್ಧ ರಾತ್ರಿಲಿ ಹರಿ ರತಿಯೊಳು ಮಲಗಿ ಅ.ಪ. ಸರಸಿಜ ಸಖನ ಮುಂಬೆಳಗವ ಹರಿಯಲು | ಭರದಲಿ ಹಕ್ಕಿಯು ಕಲಕಲವೆನಲು 1 ನಾರದ ತುಂಬುರ ಮಾಡುವ ಪ್ರಾತ:| ಸ್ಮರಣೆಯ ಗಾಯನ ಧ್ವನಿಯನು ಕೇಳಿ 2 ಕರತಳದಲಿಯವಿಗಳನು - ವರೆಸುತಲಿ | ತೆರೆವುತ ಮುಚ್ಚುತ ಅರೆಗಣ್ಣ ನೋಟದಿ 3 ಬಾಯೊಳಗಿನ ತಂಬುಲವ ನುಗುಳುತ | ಅಧರ ವಕೆಂಪವ ನಡಗಿಸುತ 4 ಕಿರಿಬೆಮರವ ಕೊನೆ ಯುಗುರದಿ ಹಾರಿಸಿ | ಕುರುಳು ಗೂದಲು ಬೈತಲು ನೀಟಾಮಾಡುವ5 ಸಡಲಿದ ಅಲರ ಮುಡಿಯಾತಿದ್ದಿ ಬಿಗಿವುತಾ | ಒಡನೆ ಕೊರಳಾ ಭರಣವ ತಿರುಹುತಲಿ 6 ಎಡಬಲ ಕೊಲದ ವಡ್ಯಾಣ ಸರಿಸಿ ಉಟ್ಟಾ | ಉಡಿಗಿಯಾ ನಿರಯಾ ಮುಂದಕ sಸಾಂವರಿಸುತ7 ಪ್ರಕಟದಿದೋರ್ವ ಕುಚದ ನಖಕ್ಷತಗಳ | ಯುಕುತಿಲಿ ಅಡಗಿಸಿ ಪುಟವನು ಬಿಗಿವುತ 8 ತನ್ನನಂಬಿದ ಬಾಲರ ಹೊರಿಯಲುದಯ | ಕಮಠ ನ್ಯಾಯದಲಿ9 ಈರೇಳು ಜಗದ ಜೀವನ ಪಡೆದ ಜನನಿ | ಗುರುಮಹಿ ಪತಿಸುತ ಪ್ರಭುವಿನ ಅರಸಿ10
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಎರಡನೆಯ ಸಂಧಿ ಶ್ರೀಕಾಂತನ ಕರುಣವುಳ್ಳವಗೆ ಕುಂತಳಪುರಕೆ ಕಳುಹಿದನು 1 ಗಂಧಾಕ್ಷತೆ ಫಲಪುಷ್ಪದಿಂದ ಸಾಕ್ಷಾತು ಗಣಪತಿಗರ್ಪಿಸಿ ತರಳನ ಶಿಕ್ಷಾಗುರುವಿಗೆ ಒಪ್ಪಿಸಿದ2 ಮಣ್ಣ ಹರಹಿ ಅಕ್ಷರವ ಬರೆದು ಎನ್ನಣ್ಣನೀ ತಿದ್ದು ಬಾ ಎನಲು ಎನ್ನೊಡೆಯ ಶರಣೆಂದು ಬರೆದ 3 ನಿನ್ನ ಜ್ಞಾನ ಬೇರೆ ಚಿತ್ತ ಬೇರೆ 4 ಎಂದು ಧಿಕ್ಕರಿಸಿ ಹೇಳಿದನು 5 ಚಾತುರ್ಯದ ಬುದ್ಧಿ ಬೇರೆ ತೊಡರು ತಾತಗೆ ಒಯ್ದು ಒಪ್ಪಿಸಿದ 6 ಮುಕುಂದನ ಭಜಕನೆಂದೆನದೆ ಬಂದ ಹಾಂಗಿರಲೆಂದು ಸುತನ 7 ಧ್ರುವ ಪ್ರಹ್ಲಾದ ಅಕ್ರೂರಾಂಬರೀಷ ಮಾಧವ ಮುರಾರಿಯನ್ನು ಭಜಿಸಿ ಭವ ಭಯಾದಿಗಳಿಲ್ಲ ನಮಗೆ 8 ಕಟ್ಟಿಕೊಟ್ಟರು ಕರಲೇಸು ಎನುತ ಕಟ್ಟೆದರ್ ವೇದೋಕ್ತದಲಿ 9 ಓದಿಸಿದರು ಗುರುಮುಖದಿ ಮಾಧವನಲ್ಲದೆ ಅನ್ಯತ್ರರಿಲ್ಲವೆಂದು ಭೇದಾಭೇದವನೆಲ್ಲ ತಿಳಿದು 10 ಹೊಳೆವ ಶ್ರೀ ಮುದ್ರಿಕೆಯಿಟ್ಟು ಗೆಳೆಯರೆಲ್ಲರಿಗೆ ಬೋಧಿಸಿದ 11 ಪತಿತರಾದಪಗತಿ ಕುಮಾರರಿಗೆಲ್ಲ ಸದ್ಗತಿಯಾಗಬೇಕೆಂದೆನುತ ಮಾಡಿಸಿದನಾಜೆÉ್ಞಯಲಿ 12 ದ್ವಾದಶ ನಾಮವ ಹಚ್ಚಿ ಸಾದಿ ಸಾಧಿಸಿರಿ ಏಕಾದಶಿ ವ್ರತವೆಂದು ಬೋಧಿಸಿದನು ಎಲ್ಲರಿಗೆ13 ಜಾಗರ ಮಾಡಿ ಫುಲ್ಲನಾಭನ ಭಜಿಸುವರು ಪರಗೋಷ್ಠಿಯಿಲ್ಲ 14 ಬೆಳೆಸುವ ಹÀರಿಭಕ್ತರೊಡನೆ ಪರಾಕ್ರಮಿಯೆನಿಸಿದನು 15 ಇಮ್ಮಡಿಯನು ಗೆದ್ದು ಹೇರಿಸಿದನು ತನ್ನ ಪುರಕೆ 16 ತಂದು ಆರತಿಗಳನೆತ್ತಿ ಚರಣಕ್ಕೆರಗಿದನು 17 ಜಗದಧಿಪತಿಯಾಗು ಎಂದು ಹರುಷವನೆ ತಾಳಿದಳು 18 ಲೇಸಾದ ಶುಭಲಗ್ನವ ಕಟ್ಟಿ ಸುತನ ಸಿಂಹಾಸನದಲ್ಲಿ ಕುಳ್ಳಿರಿಸಿ ಭೂಸುರ ಬಂಧುಗಳೆಲ್ಲರು ನೆರೆದಿಂದುಹಾಸಗೆ ಪಟ್ಟಗಟ್ಟಿದರು19 ಪರಿ ಪಾಲಿಸುತ್ತ ರಾಜ್ಯನೀತಿಯಿಂದಾಳುತಲಿಹನು 20 ಲಾಲಿಸು ಕುಂತಳೇಶ್ವರಗೆ ಕಾಲಕಾಲಕೆ ಕಪ್ಪವ ಕೊಟ್ಟು ಬಹೆವು ಆಲಸ್ಯವಾಯಿತು ಎಂದ21 ಉದಾರಬುದ್ಧಿಯಲಿಂದುಹಾಸ ವಿಚಾರಿಸಿದನು ತನ್ನಪಿತನ 22 ಜೋಯಿಸ ಪುರೋಹಿತಗೆ ಕಾಂತಿಗೊಡದ ಕನಕಾಭರಣವೆಲ್ಲವ ಅಂತಸ್ಥದಿಂದ ಕಟ್ಟಿದನು23 ಜ್ಞಾನವುಳ್ಳ ಭೃತ್ಯರೊಡನೆ ದಾನವಾಂತಕನ ಕಿಂಕರನು 24 ತೆರಳಿದರಲ್ಲಿಂದ ಮುಂದೆ ಹೆಬ್ಬಾಗಿಲ ಮುಂದೆ 25 ದಿಟ್ಟರಾರೆಂದು ಕೇಳಿದನು ಅಟ್ಟಿದೆನ್ನೊಡೆಯ ಪುಳಿಂದ 26 ಮಂದಿರಕಾಗಿ ಕರೆಸಿದ ಕರವ ಮುಗಿದರು 27 ಕಡೆಗಣ್ಣಲಿ ನೋಡಲಿಲ್ಲವರೊಳು ಮಾತನುಡಿಯದೆ ಸನ್ಮಾನಿಸದೆ ಝೇಂಕರಿಸಿ ಕೇಳಿದನು 28 ಜೀಯ ಹಸಾದ ನಿಮ್ಮಡಿಗೆ ಇಂದಿನ ವಾಯಿದ ಕಟ್ಟಿದ ಧನವು ದೇವರು ಕೈಕೊಂಬುದೆನಲು 29 ನಗ ನಾಣ್ಯ ದೇವಾಂಗವನು ನಗ ನಾಣ್ಯ ದೇವಾಂಗವನು 30 ಸೊಗಸಾಗಿ ಮಾಡಿಸು ಎಂದ ನಗೆಮುಖದಿಂದ ಹೇಳಿದನು 31 ಸಣ್ಣ ರಾಜಾನ್ನದಕ್ಕಿಯನ್ನ ಶಾಕವು ಅಣ್ಣೆವಾಲೆರೆದ ಪಾಯಸವು ಉಣ್ಣೇಳಿರೆಂದು ಕರೆದರು 32 ನಿರಾಹಾರವು ನಮಗೆ ಎಂದು ಕೇಳಿದನು 33 ಎಮ್ಮೊಡೆಯನ ಸುಕುಮಾರ ತಮ್ಮ ರಾಜ್ಯದಲ್ಲಿ ಏಕಾದಶಿವ್ರತ ನಿರ್ಮಾಣವನ್ನೆ ಮಾಡಿದನು34 ಸತಿ ಎಂದೆಲ್ಲರು ಹೇಳುತಲಿಹರು ಎಲ್ಲಿದ್ದ ಆತಗೆ ಸುತನು 35 ಹಿಂದಟ್ಟಿ ಹೋದನು ಪುಳಿಂದ ಅಟ್ಟಡವಿಯೊಳಗಿರಲು 36 ಪೋಷಣೆಯನು ಮಾಡಿದರು ಭೂಸುರರನೆ ಪಾಲಿಸುವನು 37 ನಟ್ಟಂದದಿ ಮನದೊಳು ಮರುಗಿ ಎಂದು ತಾ ಮನದೊಳು ತಿಳಿದ 38 ಅನುಕೂಲವಾದ ಕಾರ್ಯವು ಮನದಲ್ಲಿ ಚಿಂತೆ ಮಾಡಿದನು 39
--------------
ಹೆಳವನಕಟ್ಟೆ ಗಿರಿಯಮ್ಮ
ಎಲ್ಲಮ್ಮಾದೇವಿ ನಮ್ಮ ದೇವರು ಬಂದರು ಕಾಣ ಪ. ಸೋಮಾಸುರನೆಂಬ ದೈತ್ಯನು ಸಾಮಕ ವೇದವನೊಯ್ಯಲು ಮಾ ಸೋಮಾಸುರನೆಂಬವನ ಕೊಂದು ಸಾಮಕವೇದವ ತಂದನು ಮಾ 1 ಗುಡ್ಡವು ಮುಳುಗಿ ಪೋಗಲು ನಮ್ಮದೇವ ಗುಡ್ಡವ ಬೆನ್ನಲ್ಲಿಟ್ಟನು ಮಾ ಗುಡ್ಡದಂಥÀ ದೈತ್ಯರನೆಲ್ಲ ಅಡ್ಡÀಕೆಡಹಿ ಬಿಸುಟನು ಮಾ 2 ಚಿನ್ನಗಣ್ಣಿನವನು ಬಂದು ಕನ್ನೆ ಪೆಣ್ಣನೊಯ್ಯಲು ಮಾ ವರ್ಣರೂಪವ ತಾಳಿ ಅವನ ಭಿನ್ನ ಭಿನ್ನವ ಮಾಡಿದನು ಮಾ 3 ಕಂಭದಿಂದಲೆ ಉದಿಸಿ ನಮ್ಮ ದೇವ ಜಂಭದಸುರನ ಬಡಿದನು ಮಾ ನಂಬಿದ ಪ್ರಹ್ಲಾದನ್ನ ಕಾಯಿದ ಅಂಬುಜನಾಭ ನರಸಿಂಗನು ಮಾ 4 ಬಲು ಮುರುಡನಾಗಿ ಭೂಮಿಯ ಬಲಿಯ ದಾನವ ಬೇಡಿದ ಮಾ ಇಳೆಯ ಈರಡಿಯ ಮಾಡಿ ಬಲಿಯ ಪಾತಾಳಕೊತ್ತಿದ ಮಾ 5 ಕೊಡಲಿಯನ್ನು ಪಿಡಿದು ನಮ್ಮದೇವ ಕಡಿದ ಕ್ಷತ್ರಿಯ ರಾಯರ ಮಾ ಹಡೆದ ತಾಯ ಶಿರವ ತರಿದು ಪಡೆದನಾಕೆÉಯ ಪ್ರಾಣವ ಮಾ 6 ಎಂಟೆರಡು ತಲೆಯ ಅಸುರನ ಕಂಠವ ಛೇದಿಸಿ ಬಿಟ್ಟನು ಮಾ ಒಂಟಿರೂಪವ ತಾಳಿ ಲಂಕೆಯ ಬಂಟ ವಿಭೀಷಣಗಿತ್ತನು ಮಾ 7 ಸೋಳಸಾಸಿರ ಗೋಪಿಯರೊಡನೆ ಕೇಳೀಮೇಳದಲಿಪ್ಪನು ಮಾ ಬಾಲಕನಾಗಿ ಪೆಣ್ಣರೂಪದಲಿ ಶ್ರೀ- ಲೋಲ ಲಕ್ಷ್ಮಿಯ ಅರಸನು ಮಾ 8 ಒಪ್ಪದಿಂದಲಿ ಬಂದು ನಮ್ಮ ದೇವ ಇಪ್ಪೆವನದೊಳಗಿಪ್ಪನು ಮಾ ಸರ್ಪಶರನಾಗಿ ಪೋಗಿ ತ್ರಿಪುರಸಂಹರ ಮಾಡಿದ ಮಾ 9 ಎಲ್ಲಮ್ಮಾ ಎಲ್ಲಮ್ಮಾ ನಮ್ಮದೇವ ಬಲ್ಲಿದ ಕಲ್ಕ್ಯವತಾರನು ಮಾ ಇಳೆಯ ಸ್ವರ್ಗ ಪಾತಾಳಕೊಡೆಯ ಚೆಲುವ ಹಯವದನನು ಮಾ 10
--------------
ವಾದಿರಾಜ
ಏ ರಂಗಧಾಮ ರಂಗ ಏ ರಂಗಧಾಮ ಪ. ನಾರುವ ಮೈಯವನತ್ತ ಸಾರು ಮುಟ್ಟದಿರೊ ಎನ್ನ ದೂರನಿಲ್ಲು ತರವಲ್ಲ ಏ ರಂಗಧಾಮ ಧೀರ ಮತ್ಸ್ಯರೂಪಕಾಣೆ ಎಲೆ ಸತ್ಯಭಾಮೆ 1 ಚೆಂದವಂತನೆಂದು ನಾ ಬಂದೆ ತರ್ಕಿಸಿ ನಿನ್ನ ಬೆನ್ನು ಡÉೂಂಕಿದೇನೋ ಪೇಳೋ ಏ ರಂಗಧಾಮ ಮಂದರ ಮುಳುಗೆ ಕೂರ್ಮ ಎಲೆ ಸತ್ಯಭಾಮೆ 2 ನೋಡಿದರೆ ಮೈಯೊಳಗೆ ಮೂಡಿರುವ ರೋಮಗಳು ಗಾಡಿಕಾರ ನೀನಾರಯ್ಯ ಏ ರಂಗಧಾಮ ಕ್ರೋಡರೂಪದಿಂದಿಳೆಯ ದಾಡೆಯ ಮೇಲಿಟ್ಟು ತಂದ ಕಾಡವರಾಹನು ಕಾಣೆ ಎಲೆ ಸತ್ಯಭಾಮೆ 3 ಮನುಷ್ಯಾಗಿದ್ದಮೇಲಣಕಾನನದ ಮೃಗರಾಜ ಆನನವಿದೇನೊ ಪೇಳೊ ಏ ರಂಗಧಾಮ ಮಾನಿನಿ ಕೇಳೆ ಪ್ರಹ್ಲಾದನ್ನ ಮಾನಭಂಗಕ್ಕೊದಗಿದ ಶ್ರೀ ನರಸಿಂಹ ಕಾಣೆ ಎಲೆ ಸತ್ಯಭಾಮೆ 4 ದೊರೆತನವುಳ್ಳವನೆಂದು ಮರುಳುಗೊಂಡೆ ನಾ ನಿನಗೆ ತಿರುಕನೆಂಬೋದರಿಯದಾದೆನೊ ಏ ರಂಗಧಾಮ ತರಳೆ ಸುರರಿಗಾಗಿ ಬಲಿಯ ತುಳಿದು ಪಾತಾಳಕೊತ್ತಿದ ಗರುವ ವಾಮನ ಕಾಣೆ ಎಲೆ ಸತ್ಯಭಾಮೆ 5 ಅಡವಿಯೊಳು ಕಟ್ಟಿಗೆಯ ಕಡಿವವನಂತೆ ಕೊಡಲಿಯ ಪಿಡಿವುದೇನೊ ಪುಣ್ಯವಾಸ ಏ ರಂಗಧಾಮ ಮಡುಹಿ ಕ್ಷತ್ರೇರನೆಲ್ಲ [ಮುದದಿ] ಸೇರ್ದ ಮಾತೆಗಾಗಿ ಒಡೆಯನಾದ ಪರಶುರಾಮ ಎಲೆ ಸತ್ಯಭಾಮೆ 6 ಊರಬಿಟ್ಟರಣ್ಯವನು ಸೇರಿ ಮುನಿಗಳಂತಿಪ್ಪ [ಕಾರಣ]ವಿದೇನೊ ಪೇಳೊ ಏ ರಂಗಧಾಮ ಕ್ರೂರರಾವಣನ ಗೆಲಿದು ನಾರಿಸೀತೆಯನು ತÀಂದ ಧೀರರಾಘವನು ಕಾಣೆ ಎಲೆ ಸತ್ಯಭಾಮೆ 7 ವಲ್ಲಭೆಜನರಿಗೆಲ್ಲ ನೀ ವಲ್ಲಭನಾಗಿ ಗೊಲ್ಲನಂತೆ ಗೋವ ಕಾಯುವ ಕಾರಣವೇನೊ ಏ ರಂಗಧಾಮ ಬಿಲ್ಲಹಬ್ಬಕ್ಕೆ ಹೋಗಿ[ಮಲ್ಲ] ಕಂಸನ ಕೊಂದ ಬಲ್ಲಿದ ಶ್ರೀಕೃಷ್ಣ ಕಾಣೆ ಎಲೆ ಸತ್ಯಭಾಮೆ 8 ನಗೆಗೀಡು ಮಾಡಿಕೊಂಡು ದಿಗ್ವಸನನಾಗಿ ನಿಂತ ಹಗರಣವಿದೇನೊ ಪೇಳೊ ಏ ರಂಗಧಾಮ ಮಿಗೆ ಮೂರುಪುರದ ಸತಿಯರ ವ್ರತವ ಕೆಡಿಸಿ ಜಗವ ಮೋಹಿಸುವ ಬೌದ್ಧ ಎಲೆ ಸತ್ಯಭಾಮೆ 9 ಕರದಿ ಖಡ್ಗವನೆ ಪಿಡಿದು ತರಳ ಅಶ್ವವನೇರಿ ತಿರುಗುವುದಿದೇನು ಪೇಳೊ ಏ ರಂಗಧಾಮ ವರ ಹಯವದನ ಹರುಷದಿಂದಲಾಡಿ ಪಾಡಿ ಕಲ್ಕಿಯಾದೆ ಹರಿಲೋಚನೆ ಎಲೆ ಸತ್ಯಭಾಮೆ 10
--------------
ವಾದಿರಾಜ
ಏನ ಹೇಳಲಿ ಈತನಿರವ ಭಕ್ತರ ಮನಾ- ಧೀನ ಹೆಳವನಕಟ್ಟೆ ರಂಗ ದೇವೋತ್ತುಂಗನ ಪ. ಹೊಳೆವ ಮೈಯ್ಯವ ಕಲ್ಲಹೊರುವ ಕಡಲೊಳಾಡುವ ತಿಳಿಯ ಎರಡಂಗನೆ ತಿರಿವ ಪರುಶುವಿಡಿವ ಕೋಡಗ ಕುಲವನಾಳುವ ಗೋವಕಾಯ್ವ ಕಾಂತೆಯರ ವ್ರತವ- ನಳಿವ ಅಶ್ವವನೇರಿ ಮೆರೆವನ್ಯಾರೆ ಅಮ್ಮಯ್ಯ ಜಲವಪೊಕ್ಕು ದೈತ್ಯನ ಸಂಹರಿಸಿ ಕಲಕಿ ಸಮುದ್ರವ ಕಾರಣಕಾಗಿ ನೆಲಗಳ್ಳನ ಮರ್ದಿಸಿ ಹಿರಣ್ಯಾಕ್ಷನ ಚಲುವ ಚೆಳ್ಳುಗುರಿಂದೊಡಲನೆ ಬಗಿದು ಸುಲಭನಾಗಿ ಶುಕ್ರನ ಕಣ್ಣಿರಿದು ಬಲುಸಾಹಸದಿ ಕ್ಷತ್ರಿಯರನು ಗೆಲಿದು ಗೆಲವ ತೋರಿ ಗೋಪಿಗೆ ಸುತನಾಗಿ ನಿಲುವ ದಿಗಂಬರಧರ ರಾವುತನಾಗಿ ಇಳೆಯೊಳು ಚರಿಸುವ ಈತ ಕಾಣೆ ಅಮ್ಮಯ್ಯ 1 ನಿಲ್ಲದಾಡುವ ನಗವ ಪೊರುವ ಮಣ್ಣಬಗೆವ ಕಲ್ಲ ಕಂಬವನೊಡೆವ ಇಳೆಯನಳೆವ ಭಾರ್ಗವ ವಲ್ಲಭನವರಗೆಲುವ ಲಜ್ಜೆನಾಚಿಕೆ- ಯಿಲ್ಲದೆ ಅಶ್ವವನೇರಿ ಮೆರೆವನ್ಯಾರೆ ಅಮ್ಮಯ್ಯ ಎಲ್ಲ ವೇದವನುದ್ಧರಿಸ್ಯಂಬುದಿಯ ಜಲ್ಲಿಸಿ ಧಾರುಣಿಯನು ತಂದಿರುಹಿ ತಲ್ಲಣಿಸುವ ಪ್ರಹಲ್ಲಾದನ ಪೊರೆÀದು ಬಲ್ಲಿದ ಬಲಿಯ ಬಂಧಿಸಿ ಪಿತನಾಜ್ಞೆಯ ಸಲ್ಲಿಸಿ ಮಾತೆಯ ಶಿರವ ಚೆಂಡಾಡಿ ಬಿಲ್ಲನ್ನೆತ್ತಿ ಭೂಮಿಜೆಯೊಡಗೂಡಿ ಮಲ್ಲರ ಮಡುಹಿ ಮುಪ್ಪುರದ ಬಾಲೆಯರ ಜಳ್ಳು ಮಾಡಿ ಧರ್ಮವ ಹೋಗ್ಯಾಡಿ ಹಲ್ಲಣಿಸುವ ತೇಜಿಯನೇರಿದ ಶಿರಿ ವಾಸುದೇವ ಕಾಣೆ ಅಮ್ಮಯ್ಯ 2 ಎವೆ ಇಕ್ಕ ಬೆನ್ನಲ್ಹೊತ್ತು ಗಿರಿಯಕೊ- ನೆವಲ್ಲ ಮಸೆವ ಸಮಯದಿ ಬಹವಿಪ್ರ ಮುನಿ ಭವ ಶ್ರೀರಾಘವ ನವನೀತಚೋರ ನಾರಿಯರ ಮೋಹಿಸಿ ತವಕದಿ ತುರಗವನೇರಿ ಮೆರೆವನ್ಯಾರೆ ಪೇಳಮ್ಮಯ್ಯ ತಮನ ಮರ್ದಿಸಿ ಸಾಮವನಜಗಿತ್ತು ಸುಮನಸರಿಗೆ ಸುಧೆಯನು ತಂದೆರದು ಅವನಿಗಳೆದ ಅಸುರನ ಸಂಹರಿಸಿ ಮಮತೆಯಿಂದ ಪುಟ್ಟ ಮಗುವನೆ ಸಲಹಿ ಗಮಕದೊಳಗಿದ್ದ ಬಲಿಯನು ಕೆಡಮೆಟ್ಟಿ ಸಮರಂಗದಿ ಸುರಧೇನುವ ತಂದು ದಿನಕರ ವಂಶೋದ್ಧಾರಕನಾಗಿ ಕಂಸ- ನ ಮಡುಹಿ ಮುಪ್ಪುರದ ಬಾಲೆಯರು ಭ್ರಮಿಸುವಂತೆ ಬೌದ್ಧಾವತಾರನಾದ ಕಲ್ಕಿ ಹೆಳವನಕಟ್ಟೆರಂಗ ದೇವೋತ್ತುಂಗನ 3
--------------
ಹೆಳವನಕಟ್ಟೆ ಗಿರಿಯಮ್ಮ
ಏನು ಕಾರಣ ಬಾಯಿ ತೆರೆದಿ - ಪೇಳೆಲೊದಾನವಾಂತಕ ಅಹೋಬಲ ನಾರಸಿಂಹನೆ ಪ ನಿಗಮ ಚೋರನ ಕೊಲಲು ತೆರೆದೆಯೋ ಈ ಬಾಯನಗವ ಬೆನ್ನಲಿ ಹೊತ್ತು ನಡುಗಿ ತೆರೆದೆಯೋ ಬಾಯ ಭೂ-ಮಿಗಳ್ಳನ ಕೊಂದು ಬಳಲಿ ತೆರೆದೆಯೋ ಬಾಯಜಗವರಿಯೆ ಪೇರುರವಿರಿದ ಪ್ರಹ್ಲಾದವರದಅಹೋಬಲ ನಾರಸಿಂಹನೆ1 ಬಲಿಯ ದಾನವ ಬೇಡಲೆಂದು ತೆರೆದೆಯೊ ಬಾಯಛಲದಿಂದ ಕ್ಷತ್ರಿಯರ ಕೊಲಲು ತೆರೆದೆಯೊ ಬಾಯಕುಲಸತಿಯ ಅರಸಿ ಕಾಣದೆ ತೆರೆದೆಯೊ ಬಾಯಮರೆತು ಮಾವನ ಕೊಂದು ನಿಂದೆ - ಇಂಥಇಳಿಯ ಬಾರದ ಭೂಮಿಗಿಳಿದ ನಾರಸಿಂಹ2 ನಾರಿಯರ ಚೆಲ್ವಿಕೆಯ ನೋಡಿ ತೆರೆದೆಯೊ ಬಾಯಏರಿ ಅಶ್ವವ ಮೆಟ್ಟಿ ಅಳಲಿ ತೆರೆದೆಯೊ ಬಾಯಮಾರಪಿತ ಕಾಗಿನೆಲೆಯಾದಿಕೇಶವ ರಂಗಧೀರ ಶ್ರೀನಾಥ ಭವನಾಶ ಪೇಳೋ ಪೇಳುಏತಕೆ ಅಹೋಬಲ ನಾರಸಿಂಹನೆ 3
--------------
ಕನಕದಾಸ