ಒಟ್ಟು 48 ಕಡೆಗಳಲ್ಲಿ , 26 ದಾಸರು , 48 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ರಾಜಮುಖೀ ಬೇಗ ಪ. ಚಿತ್ರವಿಚಿತ್ರಮಾಗಿ ಮೆರೆವ ರತ್ನಖಚಿತ ಮಂಟಪದಿ ಕೆತ್ತನೆಯ ಹಸೆಯಮೇಲೆ ರತ್ನಗಂಬಳಿಯ ಹಾಸಿ 1 ಪರಿಪರಿಯ ರಾಗದಿಂದ ತರುಣಿಯರು ನಿನ್ನ ಪಾಡಿ ಕರೆಯುತಿಹರೋಳ್ ಕರುಣೆಯಿರಿಸಿ ಅರಸನೊಡನೆ ಸರಸದಿಂದ2 ಪಂಕಜಾಕ್ಷಿ ನಿನ್ನ ಚರಣಕಿಂಕರರ ಮೊರೆಯ ಕೇಳಿ ಕನಕಪೀಠದಲ್ಲಿ ಕುಳಿತು ಕಾಂಕ್ಷಿತಾರ್ಥವಿತ್ತು ಸಲಹು 3 ಪರಮಪುರುಷ ಶೇಷಶೈಲವರದನರಸಿ ನಿನ್ನ ಗುಣವೆ ಸ್ಮರಿಸಿ ಸ್ಮರಿಸಿ ಕರೆಯುತಿರುವ ತರಳೆಯರಂ ಪೊರೆಯೆ ತಾಯೆ4
--------------
ನಂಜನಗೂಡು ತಿರುಮಲಾಂಬಾ
ರಾಜೋಪಚಾರರಾಜೋಪಚಾರರಾಜೀವನೇತ್ರ ನೀನವಧರಿಸು ಬೇಗ ಪಸಾವಿರದ ದಳವುಳ್ಳ ಕಮಲವೊಂದಕೆ ಶಕ್ತಿಸಾವಿರದ ಮೌಕ್ತಿಕದ ಸರಗಳೊಪ್ಪಿಹವುಕಾವಿಹುದು ಸಕಲ ದೇವಾತ್ಮಕದ ಶಾರದೆಯುನಾ ವಹಿಸಿ ತುರಿಯ ಕಲಶದ ಛತ್ರವೆಂದೆಂಬ 1ಆವಗವು ಸತ್ವಾದಿ ಗುಣಗಳಿಂದೊಪ್ಪಿರುವಆವರಣ ವಿಕ್ಷೇಪ ಶಕ್ತಿಯೆಂಬೆರಡುದೇವ ನಿನ್ನುಭಯ ಪಾಶ್ರ್ವದಲೊಲವುತಿಹ ಸರ್ವಭಾವದಿಂದುಭಯ ಚಾಮರವೆರಡರಿಂದ 2ಗಂಧರ್ವ ನಗರದಿಂದೈತಂದ ನಾರಿಯರುಛಂದದಿಂ ನರ್ತಿಸುತಲಿಹರೈವರಿವರುಒಂದಾಗಿ ಬಳಿಕಿವರ ಹೊಂದಿ ಮತ್ತೈವರಿರೆಹಿಂದೆ ನಾಲ್ವರುವೆರಸಿ ನಲಿವ ನರ್ತನವೆಂಬ 3ಪರವೆಂದು ನಾಭಿಯಲಿ ಪಶ್ಯಂತಿ ಹೃದಯದಲಿಸ್ವರವಿಹುದು ಕಂಠದಲಿ ಮಧ್ಯಮಾಖ್ಯೆಯಲಿಸ್ಫುರಿಸಿ ಮುಖಕಮಲದಲಿ ವೇದಶಾಸ್ತ್ರಗಳಾಗಿಮೆರೆವ ವೈಖರಿಯೆಂಬ ಗೀತವಿದ ಕೇಳು 4ತಾಳ ಮರ್ದಳೆ ಘಂಟೆ ಭೇರಿ ಶಂಖಗಳಿಂದಮೇಲಾದ ವೀಣೆ ವೇಣುಗಳ ರವದಿಂದಲಾಲಿಸುವ ಛಿಣಿ ಛಿಣೀ ಛಿಣಿಗಳೆಂಬವರಿಂದನೀಲ ಮೇಘಧ್ವಾನ ದಶನಾದದಿಂದ 5ಪರಿಪರಿಯ ಗತಿಯುಳ್ಳ ಚಿತ್ತವೆಂಬಶ್ವವನುವರ ಸತ್ವ ಗುಣವೆಂಬ ಹಲ್ಲಣವ ಬಿಗಿದುನಿರತ ಪರಮಾತ್ಮನೀಕ್ಷಣದ ಕಡಿವಾಣವನುಪಿರಿದಾಗಿಯಳವಡಿಸಿ ಮುಂದೆ ನಿಂದಿಹುದಾಗಿ 6ಒಲವುತಿಹ ಸುಖ ದುಃಖವೆರಡು ಘಂಟೆಗಳಿಂದನೆಲನ ಸೋಕುವ ಕಾಮ ಸುಂಡಿಲದರಿಂದಫಲ ಚತುಷ್ಟಯ ಪಾದ ಮೇಲು ಮಂಟಪದಿಂದಬಲುಮೆಯಹ ಮೂಲ ಕಾರಣವೆಂಬ ಗಜವು 7ಹಿಂದೆಮುಂದರುವರೊಂದಾಗಿ ವಹಿಸಿರಲದಕೆಹೊಂದಿಸಿದ ಚೌಕಿ ಮನವೆಂಬುದದರಲ್ಲಿಮಂದ ಮೃದು ಬಹು ವಿಷಯ ಸುಖದ ಹಾಸಿಕೆ ಹಾಸಿದಂದಳವಿದನುಭವದ ಕೊಂಬಿನಿಂದೊಪ್ಪಿರುವ 8ಆರು ನೆಲೆಯುಳ್ಳ ರಥವದಕೆ ಶಕ್ತಿಗಳೆಂಬಮೂರು ಕಲಶಗಳಲ್ಲಿ ನಾಲ್ಕು ಸತ್ತಿಗೆಯುಮೂರವಸ್ಥೆಗಳದರ ತುರಿಯವೆಂಬುದೆ ನಾಲ್ಕುಮೂರುಲೋಕವನಾಳ್ವ ಮಹಿಮ ನೀ ಪ್ರತಿಗ್ರಹಿಸು 9ನುಡಿವುದೆಲ್ಲವು ವೇದ ನಡೆವುದೆಲ್ಲವು ಶಾಸ್ತ್ರಬಿಡದೆ ನಿನ್ನಾಜ್ಞೆಯೊಳಗಿರೆ ಪುರಾಣದೃಢವಾಗಿ ನಿನ್ನ ಭಜನೆಯ ಮಾಳ್ಪ ದಿವಸವದುಕಡುಪುಣ್ಯವಾದ ಪಂಚಾಂಗವೆನಿಸುವದು 10ಉದಯದಲಿ ನಿನ್ನ ಸ್ಮರಣೆಯ ಮಾಡೆ ಪುಣ್ಯತಿಥಿಒದಗಿಸುವ ಸತ್ಕರ್ಮ ವಾರವೆನಿಸುವದುಅದರಲ್ಲಿಯನುಭವವೆ ನಕ್ಷತ್ರ ನಿನ್ನಲ್ಲಿಹುದುಗೆ ಜೀವನು ಯೋಗ ಹುದುಗುವದೆ ಕರಣ 11ಸಕಲ ವೇದಂಗಳಲಿ ಪ್ರತಿಪಾದಿಸಿದ ಫಲವುವಿಕಳವಿಲ್ಲದೆ ನಿನ್ನ ನಿಮಿಷ ಧ್ಯಾನಿಸಲುಸಕಲ ತೀರ್ಥಸ್ನಾನ ದಾನ ಜಪ ತಪ ಯಜ್ಞಸಕಲವೂ ಬಹುದೆಂಬ ಸರ್ವೋಪಚಾರ 12ಸುರ ಸಿದ್ಧ ಮುನಿವೃಂದ ನಿರತ ಸೇವಿತ ಚರಣಶರಣಾಗತೋದ್ದರಣ ಶರಧಿಜಾರಮಣತಿರುಪತಿಯ ಸ್ಥಿರವಾಸ ನಿರುಪಮ ಮಹಾಕರುಣಮರೆಯೊಕ್ಕೆ ಸಲಹೆನ್ನ ಪ್ರಾಣ ವೆಂಕಟರಮಣ 13ಓಂ ಜುನೇ ನಮಃ
--------------
ತಿಮ್ಮಪ್ಪದಾಸರು
ವಿವೇಕದಿಂದಾ ಮತಿಯುಕ್ತನಾಗಿ ಕುವಿದ್ಯದಾದಾ ಗುಣವೆಲ್ಲ ನೀಗಿ ಭಾವಾರ್ಥದಿಂದಾ ಸ್ಮರಿಸೋದು ನೀತಿ ಗೋವಿಂದದಾಮೋದರ ಮಾಧವೇತಿ 1 ತ್ರಿವಿಧ ತಾಪದೊಳು ಮಗ್ನನಾಗಿ ನೀವ್ಯರ್ಥದಿನಗಳಿಯದೆ ಹೋಗಿ ಭಾವಾರ್ಥದಿಂದಾ ಸ್ಮರಿಸೋದು ನೀತಿ ಗೋವಿಂದ ದಾಮೋದರ ಮಾಧವೇತಿ 2 ಈ ವಿಷಯದಾಸುಖ ನಿತ್ಯವಲ್ಲಾ ನೀವಾತು ಕೇಳಿಗುರುವೀನ ಸೊಲ್ಲಾ ಭಾವಾರ್ಥದಿಂದ ಸ್ಮರಿಸೂದು ನೀತಿ ಗೋವಿಂದ ದಾಮೋದರ ಮಾಧವೇತಿ 3 ಆವದು ತನ್ನ ಹಿತವನು ನೋಡಿ ಸಾವಧನಾಗೀ ಶ್ರವಣ ಮಾಡಿ ಭಾವರ್ಥದಿಂದ ಸ್ಮರಿಸೋದು ನೀತಿ ಗೋವಿಂದ ದಾಮೋದರ ಮಾಧವೇತಿ 4 ಅವಾವ ಯೋನಿಯಲಿ ಬಂದಹಿಂದಾ ಅವದುಗತಿಯಂದು ನೋಡಿವಂದಾ ಭಾವರ್ಥದಿಂದ ಸ್ಮರಿಸೋದು ನೀತಿ ಗೋವಿಂದ ದಾಮೋದರ ಮಾಧವೇತಿ 5 ತಾವಂದೇ ಆಶ್ರೈಸದೆ ಕಾಮಧೇನು ಸಾವಿರ ಸಾಧನಕ ಬೀಳುದೇನು ಬಾವಾರ್ಥದಿಂದಾ ಸ್ಮರಿಸೋದು ನೀತಿ ಗೋವಿಂದ ದಾಮೋದರ ಮಾಧವೇತಿ 6 ಜೀವಾತ್ಮರಾಗಿ ಸಚ ರಾಚ ರಾವ ಬಾವರ್ಥದಿಂದಾ ಸ್ಮರಿಸೋದು ನೀತಿ ಗೋವಿಂದ ದಾಮೊದರ ಮಾಧವೇತಿ 7 ಗೋವಿಂದ ಅಷ್ಟಕವ ದಾವಪ್ರಾಣೀ ಸೇವಿಸುವನು ಕಾವನು ಚಕ್ರಪ್ರಾಣೀ ಭಾವಾರ್ಥದಿಂದಾ ಸ್ಮರಿಸೋದು ನೀತಿ ಗೋವಿಂದ ದಾಮೋದರ ಮಾಧವೇತಿ 8
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಶ್ರೀ ಕೃಷ್ಣವೇಣಿ ಕಲ್ಯಾಣೀ ಪಂಕಜಾಸನ ಸ್ವೀಕೃತ ಬುಧ ಶ್ರೇಣೀ ನೀ ಕೃಪೆÉಯಿಂದ ಮಹಾಕೃತು ಹರಿಯ ನಿ ಜಾಕೃತಿ ತೋರ್ದೂರಿಕೃತ ದುರಿತೇ ಪ ಸುಜನ ಮಾತೆ ಶಮಲ ಸಂಕೂಲ ನರ್ಧೂತೆ ಸುಮನಸ ಜನ ಸನ್ನುತೆ ಸನ್ಮೋದ ದಾತೆ ವಿಮಲ ಸದ್ಗುಣ ಸಂಭೃತೆ ನಮಿಸುವೆ ತ್ವತ್ಪದÀ ಕಮಲಯುಗಳಿಗನು ಪಮ ಸುಂದರೆ ಭ್ರಮೆಗೊಳಿಸುವ ದುರ್ಮಮ ಕಳೆದು |ಸೋ ತ್ತಮರ ಪದಾಬ್ಜಕೆ ಭ್ರಮರನೆನಿಸಿ ಮಾರಮಣನ ದುಹಿತ್ರೆ 1 ಮದಗಜಯಾನೆ ಪಿಕಗಾನೆ ಉಭಯಾನೆ ಮಾನಿನಿ ಮದನಾರಿ ಜಟಜಸೊನೆ ಪಾಪೌಘದಹನೆ ಮುದವ ಕೊಡು ಎಮಗೆ ನಿ ೀನೆ ಮದಡನರನು ಒಂದು ದಿನ ಮಜ್ಜನವ ವಿಧಿಸೆ ಶರೀರದಿ ಹುದುಗಿದ ಪಾಪಗಳುದುರಿಸಿ ಕಾಲನ ಸದನವ ಹೋಗಗೊಡದುದಧಿ ಮಥನ ಪದ ಪದುಮವ ತೋರ್ಪೆ 2 ನೀಲ ಪುನತ ಹೃತ್ಕುಮುದಾ ಭೇಶೇ ಅನುದಿನ ಪೂರೈಸೇ ಜನನಿಯೆನ್ನ ದುರ್ಗುಣವೆಣಿಸದೆ | ಮಾ ತನು ಲಾಲಿಸು ಸುಹೃದ್ವನರುಹದಲಿ ಶ್ರೀ ವನತೆಯರಸ ಜಗನ್ನಾಥ ವಿಠಲನ ಅನವರತ ನಿಲಿಸು ಘನ ಮಾಂಗಲ್ಯೇ 3
--------------
ಜಗನ್ನಾಥದಾಸರು
ಶ್ರೀ ಮೋಹನದಾಸರು ಇನ್ನಾದರು ಎನ್ನ ಪೊರೆಯೊ | ಮೋಹನರಾಯನಿನ್ನವನಲ್ಲವೇನೋ ಪ ಬನ್ನ ಬಡಿಪದುಚಿತವೇನೋಚೆನ್ನ ಶ್ರೀ ವಿಜಯ ದಾಸಾರ್ಯರ ಚಿಣ್ಣಾ ಅ.ಪ. ಎನ್ನ ಪಾಲಿಸಿದಂದದೀ | ಸಕಲ ಪ್ರಪನ್ನರ ಸಲಹುವುದೆಂದೂ ಬಿನ್ನಪಗೈದು ಮೋಹನ್ನ ವಿಠಲನೀಗೆ ಘನ್ನುಪಕಾರವ ಮಾಡಿದ ಧೀರಾ 1 ಮನ್ನವಚ ಕಾಯದಿ | ನಿನ್ನಯ ಚರಣ |ವನ್ನು ಪೂಜಿಪೆ ಮೋಹನ್ನ |ಮನ್ನಿಸಿಯೆನ್ನಯ ಅವಗುಣವೆಣಿಸದೆಕುನ್ನಿಯ ಕಾಯೊ ಸದ್ಗುರುವೆ ಪ್ರಸನ್ನ 2 ಸಾರ |ಭಕ್ತರಿಗರ್ಥಿಲಿ ಸ್ತವನ |ಮುಕ್ತಿದಾಯಕ ಗುರುಗೋವಿಂದ ವಿಠಲನವ್ಯಕ್ತಮಾಡಿಸೊ ಗುರು ಮೋಹನ್ನರಾಯಾ 3
--------------
ಗುರುಗೋವಿಂದವಿಠಲರು
ಷೋಡಶೋಪಚಾರ ಪೂಜೆಪೂಜಿಸುವೆನನವರತ ಪರಮ ಪುರುಷನನುನೈಜ ಮೂರ್ತಿಯನೀಗಲಭಿಮುಖಿಸಿ ನಿರ್ಗುಣದಿ ಪಹೃದಯಕಾಶಿಯಲಿಪ್ಪ ಜ್ಞಾನಗಂಗೆಯ ಮಿಂದುಮೃದುತರದ ಸತ್ವಗುಣವೆಂಬ ನಿತ್ಯಕರ್ಮವ ಮಾಡಿಒದಗಿ ಶಮೆದಮೆಯೆಂಬ ನಿತ್ಯಕರ್ಮವ ಮಾಡಿಮುದದಿಂದ ಪರಮಾತ್ಮನಿಹ ಮಂದಿರಕೆ ಬಂದು1ಧ್ಯಾನಪ್ರಣವ ಮಂಟಪದಲ್ಲಿ ಕನಕಮಯ ಪೀಠವನುತನುಕರಣಮನಃಪ್ರಕೃತಿ ಯೆಂಬ ನೆಲೆಗಳನುಅನುಕೂಲದಿಂ ರಚಿಸಿ ಸಚ್ಚಿದಾನಂದನನುಮನದಲ್ಲಿ ಧ್ಯಾನವನು ಬಳಿಕೀಗ ಮಾಡುವೆನು2ಆವಾಹನ-ಆಸನ-ಪಾದ್ಯದೇಶಕಾಲಾತೀತ ಪರಿಪೂರ್ಣನಾಗಿರುವವಾಸುದೇವನನೊಮ್ಮೆಯಾವಾಹಿಸುವೆನುಆಸನವನೀವೆ ಸರ್ವಾಧಾರವಸ್ತುವಿಗೆದೋಷರಹಿತನ ಪಾದಗಳ ತೊಳೆವೆನೊಲವಿನಲಿ 3ಅಘ್ರ್ಯ-ಆಚಮನ-ಮಧುಪರ್ಕಬೆಲೆರಹಿತಗಘ್ರ್ಯವನು ನೆರೆಕೊಟ್ಟು ಕರಗಳಿಗೆಸಲಿಲದಿಂ ಶುದ್ಧನಿಗೆ ಶುದ್ದಾಚಮನವಸಲಿಸಿ ಮಧುಪರ್ಕವನು ಕ್ಷೀರಸಾಗರಗಿತ್ತುವಿಲಯಾದಿ ಪಂಚಪದಗೆರೆದು ಪಂಚಾಮೃತವ 5ಸ್ನಾನ-ವಸ್ತ್ರಸ್ಮರಿಸಿದರೆ ಸಂಸಾರಮಲವಳಿವ ಮಹಿಮನಿಗೆಸುರನದಿಯ ಪಡೆದವನಿಗಭಿಷೇಕಗೊಳಿಸಿನಿರತ ದಿಗ್ವಸ್ತ್ರನಿಗೆ ವರದುಕೂಲವನುಡಿಸಿಕರಣ ಪ್ರೇರಕನಿಗುಪವೀತದುಪಚಾರದಲಿ 5ಆಭರಣಅಷ್ಟವಿಧಗಂಧವನು ಅಷ್ಟಮದ ರಹಿತನಿಗೆನಿಷ್ಠೆುಂ ಭಕ್ತಿರಸದಿಂದ ಹದಗೊಳಿಸಿಅಷ್ಟ ವಿಧಮೂರುತಿಗೆ ಮುಟ್ಟ ಲೇಪವ ಮಾಡಿದುಷ್ಟಮದವನು ಕುಟ್ಟಿ ದಿವ್ಯ ಕುಂಕುಮವಿಟ್ಟು 7ಪುಷ್ಪ-ಧೂಪ-ದೀಪ-ನೈವೇದ್ಯ-ತಾಂಬೂಲಪರಿಪರಿಯ ಪುಷ್ಪಗಳ ನಿರ್ವಾಸನಗೆ ತಿಮಿರಹರಪ್ರಭಗೆ ಧೂಪದೀಪಂಗಳನು ಬೆಳಗಿಪರಿಪೂರ್ಣಕಾಮನಿಗೆ ಷಡುರಸಾನ್ನವನಿತ್ತುಪರಮ ಮಂಗಳಗೆ ತಾಂಬೂಲದುಪಚಾರದಲಿ 8ಕೋಟಿಸೂರ್ಯಪ್ರಭಗೆ ಕೋಟಿವರ್ತಿಗಳುಳ್ಳಮೀಟಾದ ಮಂಗಳಾರತಿಯ ಪಿಡಿದೆತ್ತಿಕೋಟಿ ಮೂವನ್ಮೂವರೂರ ಪುಷ್ಪವ ಚಂದ್ರಜೂಟಸಖ ತಿರುಪತಿಯ ವೆಂಕಟನ ಪದಕಿತ್ತು 9ಓಂ ಶ್ರೀಶಾಯ ನಮಃ
--------------
ತಿಮ್ಮಪ್ಪದಾಸರು
ಸರಸ್ವತಿ-ಭಾರತಿ ನಿತ್ಯ ಕಾವುದೆಮ್ಮನು ಪ ನಿತ್ಯ ಪಾವಿತರನ್ನ ಮಾಡುವಿ ನೋವ ಕೊಡದಲೆ ಕಾಯೇ ಅ.ಪ ಪದ್ಮನಾಭನ ನಾಭಿ ಪದ್ಮಜನ ಸಹ ಹೃ ತ್ಪದ್ಮದೊಳಗೆ ನೆಲಸಿ ಛದ್ಮವ ಕಳೆಯೆ ನಿರುತ 1 ಮಾರಮಣನ ದಿವ್ಯ ಚರಣ ಸರೋಜವ ತೋರಿ ಕರುಣವ ಮಾಡೆ ವಾರಿಜಾಸನನ ರಾಣಿ2 ಲಕುಮೀ ನಾರಾಯಣನ ಸುಕುಮಾರ ಚತುರ್ಮುಖ ನ್ವಾಕಿಗಾಗಿ ಬ್ರಾಹ್ಮೀ ಎನಿಸಿ ಸಾಕುವಿ ಲೋಕವ ಕಾಯೆ 3 ವಾಸುದೇವ ಕಾಲ ಪುರುಷರ್ಗೆ ಗಾಯಿತ್ರಿ ಸಾವಿತ್ರಿಯಾಗಿ ತೋಯಜಾಸನ ವಿಹಾರಿ 4 ಸನ್ನುತ ಜಯಾ ಸಂಕರುಷಣನ್ನ ಪಾದ ಕಿಂಕರನ್ನ ಮಾಡಿ ಎನ್ನ ಸಂಕಟ ಪರಿಹಾರ ಮಾಡೆ 5 ಕೃತಿಪತಿ ಪ್ರದ್ಯುಮ್ನನ ಸುತೆ ನುತಿಪೆನು ಸದಾ ಖ್ಯಾತಿಯನ್ನಿತ್ತನ್ಯಥಾ ಖ್ಯಾತಿಯ ಕಳೆಯೆ ಮಾತೆ 6 ಶಾಂತಿಪತಿ ಅನಿರುದ್ಧನಾಂತುದಿಸಿ ವಿರಂಚಿ ದುರಿತ ತರಿದು ಶಾಂತ ಮನಸನು ಕೊಡೆ7 ವಾಣಿ ವೀಣಾಪಾಣಿಯೇ ಕಾಣಿಸನುದಿನವೆನಗೆ ಮೃಡ ಇಂದ್ರಮುಖ ಗಣರಾರಾಧಿತಳೇ ತಾಯೆ 8 ಹೀನಗುಣವೆಣಿಸದೆ ಜ್ಞಾನ ಭಕ್ತಿ ವೈರಾಗ್ಯವ ಸಾನುರಾಗದಲಿ ಇತ್ತು ಶ್ರೀ ನರಹರಿಯ ತೋರೆ 9
--------------
ಪ್ರದ್ಯುಮ್ನತೀರ್ಥರು
ಸೂರ್ಯ ಯತಿವರ್ಯ | ಮ ಧ್ವಾರ್ಯರ ಸುಮತ ಸರೋಜಕೆ ಸುಶೀಲೇಂದ್ರ ಪ ಬುಧಜನ ವಂದಿತ ಸುಧಿ ಸುವೃತೀಂದ್ರರ ಸದಮಲ ಘನ ಸದ್ ಹೃದಯಾ ಕಾಶಕೆ 1 ಧರಣಿ ಸುರಾಗ್ರಣಿ ಗುರು ಸುವೃತೀಂದ್ರರ ಸುರಚಿರ ಸರಸಿಜಕರ ಪೂರ್ವಾದ್ರಿಗೆ 2 ಭೂಸುರ ಸೇವಿತ ಪೂಶರ ನಿರ್ಜಿತ ಭಾಸುರ ವರ ಸನ್ಯಾಸ ಸುಚ್ಭಾಯಕೆ 3 ಬಗೆ ಬಗೆಯಿಂದಲಿ ನಿಗವೋಕ್ತಿಯಲಿ ರಘುವರನರ್ಚಿಪ ಸುಗುಣವೆಂಬ್ಹಗಲಿಗೆ 4 ಶಾಮಸುಂದರನ ನಾಮ ಪೊಗಳಿದ ಪಾಮರ ಮತಿ ಜನಸ್ತೊಮ ಯಾಮಿನಿಗೆ 5
--------------
ಶಾಮಸುಂದರ ವಿಠಲ
ಸ್ವಾಮಿಯು ನೀನಲ್ಲವೊ ಪಾಮರನೆ ಪ ಸ್ವಾಮಿಯು ನೀನಾಗೆ ಭೃತ್ಯಾನು ನಿನಗ್ಯಾರು ಈ ಮಾತಿಗೇನೆಂಬೆಯೊ ಸೋಮಾರಿ ಮನುಜನೆ ಅ.ಪ. ನಿತ್ಯತೃಪ್ತನು ದೇವದೇವೋತ್ತಮನವನು ಸತ್ಯ ಸಂಕಲ್ಪನು ಸಕಲ ಜಗವರಿಯೆ ಹೊತ್ತು ಹೊತ್ತಿಗೆ ಗ್ರಾಸಕಿಲ್ಲದವ ಗೃಹಪಾಲ ಸತ್ಯದನುಭವವಿಲ್ಲವೊ ನಿನಗೆ 1 ಸ್ವಾಮಿ ಭೃತ್ಯರಿಗೆ ಬೇಧವಿಲ್ಲೆಂಬುವ ನಿನ್ನ ಭೃತ್ಯ ತಾ ಬರಲು ಕಾಮಾರಿಯಂತೆ ಕೋಪವ ತಾಳುವೆ ನಮ್ಮ ಸ್ವಾಮಿಗೆ ತಾಮಸ ಗುಣವೆಲ್ಲಿಹುದೊ 2 ಕಾಸು ಕೊಟ್ಟರೆ ನೀನು ಹೇಸಿಕ್ಯಾದರು ಬಳಿವೆ ದಾಸ ನೀನಲ್ಲದೆ ಈಶನೆಂತಾದೆಯೊ ವಾಸುದೇವ ನೀನೆಂದು ಘಾಸಿಯಾಗಲು ಬೇಡ ರಂ- ಗೇಶವಿಠಲನ ದಾಸರ ದಾಸ ನೀನಾಗೊ 3
--------------
ರಂಗೇಶವಿಠಲದಾಸರು
ಹನುಮಂತ ಹನುಮಂತ ಹನುಮಂತ ಪ ಜನರ ಪೊರೆಯುತ ತತುವರೊಳು ಪ್ರೇರಿತ ಅ.ಪ ಪವಮಾನ ಪವಮಾನ ಪವಮಾನ ಪವಮಾನ ಪರಮ ಪಾವನ ಅಣುಮಹದ್ಘನ ವನಧಿಲಂಘನ ವೀತಿಹೋತ್ರನ ಪಡಿಸಿತೃಪ್ತನ ರಾಮವಂದನ ಮಾಡುತ ಮನದಿ ಆನಂದ ಆನಂದ ಆನಂದ ಆನಂದದಿಂದ ತ್ವರಿಯಾ ಹಾರಿ ಶರಧಿಯಾ ಸೀತಾಕೃತಿಯಾ ಕುಶಲವಾರ್ತೆಯ ಪೇಳಲು ಜೀಯಾ ರಾಮಾಲಿಂಗನದಿಂದ ಆನಂದ ತಾ ನಿಂದಾ ತಾ ನಿಂದ ತಾ ನಿಂದ ನೆರಹಿ ಆನಂದ ರಣಮುಖಕೆಂದಾ ಮಾಡಿಸಿ ನಿಂದಾ ರಾವಣವಧೆಗೆಂದಾ 1 ತ್ರಿಜಗ ಖ್ಯಾತ ಅತಿ ಮಹಾರಥ ಯದುಪತಿ ಪ್ರೀತಾ ಸುರರ ಸೇವಿತಾ ಗರಳಭುಂಜಿತಾ ಸತಿಗೆ ಪೂವಿತ್ತ ಭುಜಬಲಯುತಾ ಧೀಮಂತಾ ಧೀಮಂತಾ ಧೀಮಂತಾ ಧೀಮಂತಾ ಭಾರತೀಕಾಂತಾ ದುರಳ ಮಣಿಮಂತಾ ಸೆಣಸಿಬರೆ ನಿಂತಾ ಹರಣ ಮಾಡಿ ಪಂಥಗೆಲಿದು ತಾ ನಿಂದಾ ಪ್ರಣಯನಾಗಿ ನಿಂತಾ ಕೀಚಕನ ಧ್ವಾಂತದೊಳು ತಾ ನೋಡಿ ತಾ ನೋಡಿ ತಾ ನೋಡಿ ತಾ ನೋಡಿ ಅವನೊಳು ಕೂಡಿ ಕೈಯ ಹಿಡಿದಾಡಿ ಕೇಳಿಯೊಳು ಕೂಡಿ ಉರದಿಶಿರ ನೆಲಕೆ ಈಡಾಡಿ ನಲಿದು ತೋರಿದಾ 2 ಆನಂದ ಆನಂದ ಆನಂದ ಆನಂದ ತಾ ನಿಂದ ಶ್ರೀಮ ದಾನಂದ ಆನಂದ ಬುಧಜನಕ್ಲೇಶದಿಹ ಮನ ನೋಡಿ ಜೀ ಸೂತ್ರ ವ್ಯಾಖ್ಯಾನ ಮಾಡಿ ಪಾವನ ವಾದಿಭಂಜನ ಬಾದರಾಯಣ ಪ್ರೀತಿಪಾತ್ರ ಏಕಾಂತ ಭಕ್ತ ತಾನಿತ್ತ ತಾನಿತ್ತ ತಾನಿತ್ತ ತಾನಿತ್ತ ಜಗಕತಿಮೋದ ಶಾಸ್ತ್ರ ತ್ರಿವಿಧ ತರತಮಭೇದ ನಿತ್ಯ ಕಾರಣ ನಿತ್ಯ ಕಾರ್ಯ ಅನಿತ್ಯ ಪ್ರಕೃತಿ ಸತ್ಯ ಸುಗುಣವೆ ನಿತ್ಯ ನಿತ್ಯ ದ್ವೈತವು ಸತ್ಯವೆಂದ ಶ್ರೀವೇಂಕಟೇಶನ ನಿಜದೂತ 3
--------------
ಉರಗಾದ್ರಿವಾಸವಿಠಲದಾಸರು
ಹ್ಯಾಗಾಗುವುದೊ ತಿಳಿಯದು ಈಶನಜ್ಞೆ ಪ ಭಾಗವರತ ಸೇವೆಯಲ್ಲಿ ಬಹು ಪ್ರವೀಣವೆನೆಪುದೊ ರಾಗಲೋಭದಲ್ಲಿ ಮುಳುಗಿಸಿ ರಚ್ಚೆಗಿಕ್ಕಿ ಬಿಡುವುದೊ ಅ.ಪ ಕೋರಿಕೆಗಳ ಬಿಡಿಸಿ ಸದಾ ಗುಣವಂತನೆನಿಸುವುದೊ ನಾರಿ ಮಕ್ಕಳಾಸೆಯಲಿಯನಾಥವ ಮಾಡಿಸುವುದೊ 1 ದ್ವಂದ್ವಗಳಲಿಲೇಪವಿಲ್ಲದಾನಂದವ ಪೊಂದಿಸುವುದೊ ಮಂದಮತಿಯನಿಸುವುದೊ 2 ಶ್ರವಣಮನನ ಸಾಧನೆಗಳ ಸದಾ ಮಾಡಿಸುವುದೊ ಭವಭವದಲಿ ಮೂಢನೆನಿಸಿ ಪಾಪರತನ ಮಾಳ್ವದೊ 3 ಸರ್ವರಲ್ಲಿ ಗುಣವೆ ಕಾಣಿಸಿ ಸಂತೋಷಪಡಿಸುವುದೊ ದುರ್ವಿನೀತನೆನಸಿ ಸದಾ ದುಷ್ಕಾರ್ಯ ಮಾಡಿಸುವುದೊ 4 ಪಂಚಭೇದ ಜ್ಞಾನ ತತ್ವ ತಿಳಿಸಿ ಸುಖಿಪುದೊ ದುರಹಂಕಾರರಲ್ಲಿ ಮೆರೆಸಿ ನರಕದಿ ಬೀಳಿಸುವುದೊ 5 ದಾನಧರ್ಮ ಪರೋಪಕಾರ ದಯಾವಂತನೆನಿಪುದೊ ಹೀನನೆನಸಿ ಸಕಲರಿಂದ ಹೀಯ್ಯಾಳಿಸಿಬಿಡುವುದೊ 6 ಭಾರ ಅವರವರಧಿಕಾರದಂತೆ ಎಲ್ಲರಿಗೂ ನಡಿಸುವಾ 7
--------------
ಗುರುರಾಮವಿಠಲ
ಒಂದೇ ನಾಮದೊಳಡಗಿದುವೊ ಆ -ನಂದದಿಂದುಸುರುವಅಖಿಳ ವೇದಗಳುಪಒಂದೇ ನಾಮವು ಪ್ರಹ್ಲಾದನ ಕಾಯ್ತು - ಮ -ತ್ತೊಂದೆ ನಾಮವೆ ಅಜಮಿಳನ ಸಲಹಿತು ||ತಂದೆ ತಾಯಿಯ ಬಿಟ್ಟ ಕಂದ ಧ್ರುವರಾಯಗಾ -ನಂದಪದವನಿತ್ತ ಅದ್ಭುತಗುಣವೆಲ್ಲ 1ಮಚ್ಛ್ಯಾದ್ಯಾನಂತಾವತಾರ ಅಷ್ಟಾದಶಸ್ವಚ್ಛ ಪುರಾಣಗಳಮೃತದಸಾರ ||ಕಚ್ಛಪನಾಗಿ ತ್ರೈಜಗಕೆ ಆಧಾರ ತ -ನ್ನಿಚ್ಛೆಯಿಂದಲಿ ತಾನು ಮಾಳ್ಪ ವ್ಯಾಪಾರ 2ಒಬ್ಬರೀತಗೆ ಸಮರಿಲ್ಲ ತ -ನ್ನಬ್ಬರದಿಂದಲಿ ಸಲಹುವನೆಲ್ಲ ||ಕಬ್ಬು ಬಿಲ್ಲನ ಪಿತಪುರಂದರ ವಿಠಲ ವೈದರ್ಭಿಯ ರಮಣನ ವರಸುಗುಣಗಳೆಲ್ಲ 3
--------------
ಪುರಂದರದಾಸರು
ಕರುಣಿಸಬಾರದೆ ಕಂಜನಾಭನೆ ಕೈಯ ಮುಗಿವೆನಯ್ಯಾ ಪ.ವರಫಣಿಗಿರಿ ಸುಸ್ಥಿರಮಂದಿರ ಶ್ರೀಗುರುಜನಾರ್ದನಾಮರಗಣ ಪಾಲಕಅ.ಪ.ಅಪರಾಧಗಳಾಲೋಚಿಸುವರೆ ಸರೀ-ಸೃಪರಾಜನಿಗಳವೆಕೃಪೆಯಿಂದಲಿ ಸಂರಕ್ಷಿಸದಿದ್ದರೀ-ಯಪಕೀರ್ತಿಯು ಶ್ರೀಹರಿ ನಿನಗಲ್ಲವೆ 1ಕನಕಪುರಂದರಮುಖ್ಯ ದಾಸರಂತೆಗುಣವೆನಗಿನಿತಿಲ್ಲಜನರ ವಿಡಂಬನಕೆ ದಾಸನಾದರೂಘನಕೃಪಾರ್ಣವನೆ ಕನಕಾಂಬರಧರ2ಲಕ್ಷ ಮಾತ್ಯಾತಕೆ ಲಕ್ಷ್ಮೀನಾರಾಯಣರಕ್ಷಾಮಣಿ ನೀನೆಪಕ್ಷೀಂದ್ರವಾಹನ ಪಾಪವಿಮೋಚನತ್ರ್ಯಕ್ಷಮಿತ್ರನೆನ್ನಕ್ಷಿಗೋಚರನಾಗಿ 3
--------------
ಪಾವಂಜೆ ಲಕ್ಷ್ಮೀನಾರ್ಣಪ್ಪಯ್ಯ
ಯೋಗಿಯಹುದಹುದೋ ಚಿದಾನಂದಯೋಗಿಯಹುದುಹುದೋ ದಯಾಸಾಗರ ಕಾರಣ್ಯದಾಗರ ನಿತ್ಯಾತ್ಮಪಅಷ್ಟಮದಂಗಳನ್ನು ಸುಟ್ಟು ಭಸ್ಮವ ಮಾಡಿಹಅಷ್ಟ ಪ್ರಕೃತಿಯನ್ನು ಕಾರಿ ಕಾರಿ ಮಹದಷ್ಟ ಯೋಗವ ಸಾಧಿಸಿ ಶ್ರವಣವನ್ನುಕೊಟ್ಟುನಾದವ ಭೇದಿಸಿ ಆತ್ಮದಲ್ಲಿದೃಷ್ಟಿ ಎಂಬುದ ನಿರಿಸಿ ಸರ್ವಕಾಲಶಿಷ್ಟರೆಂದೆನಿಪ ಉತ್ಕøಷ್ಟಮಾರ್ಗದವಾಸಿ1ಆರು ಅರಿಯ ಮೀರಿದರು ಭ್ರಮೆಯ ವಿಕಾರವ ತರಿದುತರಿದು ಹೀರಿ ಆರು ಚಕ್ರದ ಮೇಲೆಏರಿ ಸಹಸ್ರಾರ ಸ್ಥಳದಿನಿಂದುಜ್ಯೋತಿರ್ಮಯಸಾರವ ಸೇವಿಸುತಲಂದು ನಿತ್ಯಾನಿತ್ಯಘೋರತಪದಿಯೋಗಿಶೂರ ಭಕ್ತರ ಬಂಧು2ಸಪ್ತವ್ಯಸನರೂಪಕೆಡಿಸಿ ಬಳಿಕ ದುಷ್ಟಸಪ್ತಾವರಣವನ್ನು ತುಳಿದು ಪಾದದಲೊದ್ದುಗುಪ್ತವಾಗಿಹ ಪ್ರಭೆಯ ಶೋಧಿಸಿಘನತೃಪ್ತ ಅಮೃತ ಸುಧೆಯ ಸುರಿದು ಮೇರುಕಾಂಚನ ಗಿರಿಯ ಸೇರಿಯೆ ಜ್ಯೋತಿವ್ಯಾಪಕಭಾಸ್ಕರದೀಪ್ಯಮಾನ ಪ್ರಭಾ3ಕರ್ಮಪಾಪವು ಪುಣ್ಯಹಮ್ಮುವಾಸನಕ್ಷಯದುರ್ಮತಿ ದುರ್ಗುಣವೆಲ್ಲ ದೊಡ್ಡಬ್ರಹ್ಮಾನಂದದ ಲಕ್ಷಣ ತಿಳಿದಾ ನಿತ್ಯಾನಿರ್ಮಳ ನಿರಾವರಣ ರೂಪಿತ ಆತ್ಮಸ್ವರ್ಮಣಿ ಸುಗುಣನಿರ್ಗುಣಪರಬ್ರಹ್ಮವೇ ತಾನಾಗಿ ಬೆಳಗುವ ಯತಿ ಜಾಣ4ಸಾಧನ ನಾಲ್ಕನು ಸಾಧಿಸಿನಾದವ ಭೇದಿಸಿ ಜ್ಯೋತಿ ಸಂಪಾದಿಸಿ ಆತ್ಮನಭೇದವೆಂಬುದನರಿತ ಬಳಿಕಘನಸಾಧನಗುಣಚರಿತಯೋಗಿ ತಾನೆನಿಸಿ ಕೈವಿಡಿಯೆನ್ನಬೋಧಸದ್ಗುರು ಚಿದಾನಂದಅವಧೂತ5
--------------
ಚಿದಾನಂದ ಅವಧೂತರು
ರಾಮನ ಮಹಿಮೆ ರಾಮನೆ ಬಲ್ಲಪಾಮರಜನಲುಕು ತೆಲಿಯುಟತಲ್ಲ ಪಸುಗುಣ ನಿರ್ಗುಣವೆಂದು ನಿಗಮಗಳ್ಕೂಗುಅಗಣಿತಕಲ್ಯಾಣಗುಣಮುಲುಬಾಗು1ನಿರತಜನನಸ್ಥಿತಿ ಲಯಗಳಕರ್ತಸಿರಯುರಮುನಗಲ ಧರಣಿಜ ಭರ್ತ 2ಒಳಗೆ ಹೊರಗೆ ವ್ಯಾಪೀ ಪರಿಪೂರ್ಣಮೂರ್ತಿಸುರಮುನಿವರುಲಕು ಧೋರಯನು ಕೀರ್ತಿ 3ಮೂರುನು ಬಿಡಿಸಿ ಮೂರನು ಕೆಡಿಸಿಜೇರುನುನಮ್ಮಿ ಸವಾರಿನಿಕಲಸಿ 4ಸಿರಿಗಿರಿ ಶಿಖರದೊಳ್ ಇರುತಿಹದೇವಧರನು ತುಲಸಿರಾಮದಾಸುನಿ ಬ್ರೋವಾ 5
--------------
ತುಳಸೀರಾಮದಾಸರು