ಒಟ್ಟು 32 ಕಡೆಗಳಲ್ಲಿ , 22 ದಾಸರು , 32 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ನಿನ್ನನಾಶ್ರಯಿಸುವೆ - ನಿಗಮಗೋಚರನಿತ್ಯಬೆನ್ನ ಬಿಡದಲೆ ಕಾಯೊ ಮನದಿಷ್ಟವೀಯೋ ಪಕುಂದಣದ ಆಶ್ರಯವು ನವರತ್ನಗಳಿಗೆಲ್ಲಚಂದಿರನ ಆಶ್ರಯ ಚಕೋರಗಳಿಗೆ ||ಕಂದರ್ಪನಾಶ್ರಯ ವಸಂತ ಕಾಲಕ್ಕೆ ಗೋವಿಂದ ನಿನ್ನಾಶ್ರಯವು ಮರಣಕಾಲದೊಳು 1ಹಣ್ಣುಳ್ಳ ಮರಗಳು ಪಕ್ಷಿಗಳಿಗಾಶ್ರಯವುಪುಣ್ಯನದಿಗಳು ಋಷಿಗಳಿಂಗೆ ಆಶ್ರಯವು ||ಕಣ್ಣಿಲ್ಲದಾತನಿಗೆ ಕೈಗೋಲಿನಾಶ್ರಯವುಎನ್ನಿಷ್ಟ ಪಡೆಯುವರೆ ನಿನ್ನ ಆಶ್ರಯವು 2ಪತಿವ್ರತಾವನಿತೆಗೆ ಪತಿಯೊಂದೆ ಆಶ್ರಯವುಯತಿಗಳಿಗನುಶ್ರುತದಿ ಪ್ರಣವದಾಶ್ರಯವು ||ಮತಿವಂತನಿಗೆಹರಿಸ್ತುತಿಗಳೇ ಆಶ್ರಯವುಹಿತವಹುದು ಪುರಂದರವಿಠಲನಾಶ್ರಯವು 3
--------------
ಪುರಂದರದಾಸರು
ವೃಂದಾವನ ಲಕ್ಷ್ಮಿ ಜಯಜಯತೂಸುಂದರಿ ಸುಗುಣೆ ಸುಶೀಲೆ ಜಯತು ಜಯಪ<?xmಟ veಡಿsioಟಿ='1.0' eಟಿಛಿoಜiಟಿg='uಣಜಿ-8'?>ಕ್ಷೀರಾಬ್ಧಿ ಮಥಿಸಲುಸುಧೆಹುಟ್ಟಿ ಬರಲೂನಾರಾಯಣ ಹರುಷಾಶ್ರು ಸುರಿಸಲೂಧಾರಿಣಿಯೊಳಗದು ಗಿಡವಾಗಿ ಶೋಭಿಸೆನಾರಿ ಲಕ್ಷುಮಿಯಂಗ ತುಳಸಿಯೆಂದೂ1ಆಲಯದಿಪ್ಪತ್ತೆಂಟು ಹೆಜ್ಜೆ ಈಶಾನ್ಯದಿಏಳುದಳಿದ ತುಳಸಿಗಿಡವಮೂಲದಿ ನವರತ್ನವಿಟ್ಟು ಪ್ರತಿಷ್ಠಿಸೆಪಾಲಿಸೆ ವಿಷ್ಣು ತಾನಲ್ಲಿರುವೆನೆಂದು2ಧಾತ್ರಿನೆಲ್ಲಿಯು ವಾಣಿ ಗಿರಿಜೆಯರಂಶದಿಪೃಥಿವಿಯೊಳಿರೆ ಕಂಡು ತುಳಸಿಯಂಕದಲಿಅರ್ತಿಯಿಂದಲಿ ನಟ್ಟು ಪೂಜೆಯನೆಸಗಲುಪ್ರೀತಿಸಿ ಬ್ರಹ್ಮ ವಿಷ್ಣು ರುದ್ರರೆ ವರವೀವರು3ಬೃಂದೆ ಜಲಂಧರನರಸಿ ಪತಿವ್ರತೆ-ಯಂದಿರೆ ವಿಷ್ಣುವೊಲಿಸಿ ದುರುಳರ ಗೆಲಿಸೆಬೃಂದೆ ವರವ ಬೇಡಿ ಸಹಗಮನವಾದ ಸ್ಥಳನಿಂದಾನು ವಿಷ್ಣು ತುಳಸಿಯೊಳ್4ಕಾರ್ತೀಕ ದಾಮೋದರನೆನಿಸಿ ಪ್ರೀತಿಯಿಂದಲಿತುಳಸಿಯಲಿ ತಾ ನೆಲಸಿಘೃತದಿ ಜ್ಯೋತಿಯನಿಟ್ಟು ಪೂಜಿಸಿದವರಿಗೆಅತಿಶಯ ವರವಿತ್ತು ಸ್ವಾಮಿ ಪರಸುವನು5ಕಟ್ಟಿಗೋಮಯದಿ ಬಳಿದೂಹಿಟ್ಟಲಿ ರಂಗೋಲಿ ಬರೆದೂ ನೀರೆರೆದುಶ್ರೇಷ್ಠದಿ ತೀರ್ಥವಗೊಂಡು ನಿರ್ಮಾಲ್ಯ ಧರಿಸಲುಅಕ್ಷಯವರವಿತ್ತು ದೇವಿ ಮನ್ನಿಪಳೂ6ವಿಷ್ಣು ಪಾದದಿ ತುಳಸಿ ದಳದಿಂದರ್ಚಿಸಲುಇಷ್ಟ ಪಡುವ ವಾಸುದೇವನು ತಾನುಇಷ್ಟದಿ ತುಳಸಿ ಚರಿತೆ ನಿತ್ಯದಿ ಪಠಿಸಲುಇಷ್ಟಾರ್ಥ ವರವೀವ ಗೋವಿಂದದಾಸರಿಗೆ7
--------------
ಗೋವಿಂದದಾಸ