ಒಟ್ಟು 1118 ಕಡೆಗಳಲ್ಲಿ , 92 ದಾಸರು , 925 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

(ಮದ್ರಾಸಿನ ತಿರ್ವಳಕೇಣಿ ಪಾರ್ಥಸಾರಥಿ) ಏನು ಮಾಡಲಿನ್ನು ನೀನಲ್ಲದೆ ಯಾದಾರ ಬೇಡಲಿನ್ನು ಪ. ಮಾನಿನಿ ದ್ರೌಪದಿ ಮೊರೆಯಿಡುವುದ ಕೇಳಿ ಸಾರಥಿ ದೇವ ಅ.ಪ. ನೀನಿತ್ತ ಸೌಭಾಗ್ಯದ ಗರ್ವದಿ ಎನ್ನ ಧ್ಯಾನಾದಿಗಳ ಮಾಡದೆ ನಾನಾ ವಿಧದ ದುರ್ಮಾನುವಾದುದರಿಂದ ನೀನೆ ಸದ್ಗತಿಯೆಂದು ಧ್ಯಾನಿಸಿಲ್ಲಿಗೆ ಬಂದೆ 1 ಬಡತನದಿಂದಿರಲು ಸಕಲ ಸುರ- ರೊಡೆಯ ನೀ ಕೈ ಪಿಡಿದು ರೂಢಿ ಮದದಿ ನಿನ್ನನು ಬಿಟ್ಟು ಕಡೆಗೆ ನಿನ್ನಯ ಪಾದದೆಡೆಗೆ ಬಂದೆನು ದೇವ 2 ಪಶ್ಚಿಮ ವಾರಿಧಿಯ ತೀರದಲಾದ ದುಶ್ಚರಿತ್ರೆಯ ತಾಳದೆ ಆಶ್ಚರ್ಯತಮವಾದ ಸಚ್ಚರಿತ್ರನೆ ನಿನ್ನ ನೆಚ್ಚಿ ಬಂದಿಹೆನೊ ವಿಪಶ್ಚಿತರೊಡೆಯನೆ 3 ನಕ್ಷತ್ರಗಳಂದಿಂದಲು ಯೆನ್ನಪರಾಧ- ವಕ್ಷಯವಾಗಿರಲು ಅಕ್ಷರಿ ವಂದ್ಯ ನೀ ಲಕ್ಷ ಬಿಡುವುದೆ ಕ- ಟಾಕ್ಷದಿಂದಲಿ ನೋಡಿ ರಕ್ಷಿಸು ಕರುಣದಿ 4 ಎಷ್ಟು ಕರ್ಮಿಯಾದರು ನಿನ್ನಲಿ ಮನ- ವಿಟ್ಟು ಬಂದಿರುವೆನಲ್ಲ ದುಷ್ಟಮರ್ದನ ಶಿಷ್ಟರಕ್ಷಣ ಭಾಜಕ ಜ- ನೇಷ್ಟದಾಯಕ ಸೃಷ್ಟ್ಯಾದೃಷ್ಟಕರ್ತ 5 ನಟನ ಮಾಡುವ ಬೊಂಬೆಯ ಪೋಲುವ ಯೆನ್ನ ಹಟದಿಂದ ದಣಿಸುವುದೆ ವಟಪತ್ರ ಶಾಯಿ ಧೂರ್ಜಟಿ ವಂದ್ಯ ಅಂಜಲಿ ಪುಟನಾಗಿ ಬೇಡುವೆ ಘಟಿಸೊಭಿಲಷಿತವ 6 ಎಂದಿಗಾದರು ನಿನ್ನಯ ಪಾದಯುಗಾರ- ವಿಂದ ದರ್ಶನವಾಗಲು ಭವ ಸಿಂಧುವ ದಾಟುವೆ- ನೆಂದು ಬಂದಿರುವೆ ಸನಂದನಾದಿ ವಂದ್ಯ 7 ಕೂರ್ಮ ವರಾಹ ನಾರಸಿಂಹ ವಾಮನ ಶ್ರೀ ಭಾರ್ಗವ ರಾಮಕೃಷ್ಣ ಬೌದ್ಧ ಕಲ್ಕಿಯಂಬ ದಿವ್ಯ ನಾಮಗಳನು ಬಿಟ್ಟು ಕಾಮಲಾಲಸನಾಗಿ 8 ಒಂದು ನಿಮಿಷವಾದರು ತತ್ವಾಧಾರ ವಿಂದ ದರ್ಶನ ಮಾಡಲು ಹೊಂದಿದಘಗಳೆಲ್ಲ ಬೆಂದು ಹೋಗುವುದೆಂದಾ- ನಂದತೀರ್ಥಚಾರ್ಯರೆಂದ ನುಡಿಯ ನಂಬಿ 9 ದ್ವೇಷಿ ಮಾನವರ ಮುಂದೆ ನಾನಾ ವಿಧ ಕ್ಲೇಶವ ತಾಳ್ದೆ ಹಿಂದೆ ಘಾಸಿಯಾಗಿ ನಾನಾ ದೇಶ ದಾಟಿ ಬಂದೆ ಮೀಸಲಾದೆ ನಿನ್ನ ದಾಸ ದಾಸ್ಯನೆಂದೆ 10 ಜನರೊಳು ಪ್ರಮಿತನಾಗಿ ಬಾಳಿದ ಮಾನ- ವನು ಮಾನಹೀನನಾಗಿ ತನುವ ಪೊರೆದನತಿ ಘನಕ್ಲೇಶವೆನುತ ಅ- ರ್ಜುನನಿಗೆ ಉಪದೇಶವನು ಪೇಳಿದವ ನೀನೆ 11 ಯುಕ್ತಿ ಒಂದನು ಕಾಣೆನು ದೇಹದಿ ದೃಢ ಶಕ್ತಿಯಿಲ್ಲದವ ನಾನು ಮುಕ್ತಾಶ್ರಯ ಸರ್ವ ಶಕ್ತಿ ನೀನಿಹ ಪರ- ಭುಕ್ತಿ ಮುಕ್ತಿದನೆಂಬ ವಿರಕ್ತಿಯಿಂದಲಿ ಬಂದೆ 12 ಕಾಸೆಲ್ಲ ವ್ಯಯವಾಯಿತು ಎನಗೆ ಪರದೇಶವಾಸವಾಯಿತು ಆಸೆ ಬಿಡದುದರ ಘೋಷಣೆಗಿನ್ನವ- ಕಾಶವೊಂದನು ಕಾಣೆ ಶ್ರೀಶ ನೀನರಿಯೆಯ 13 ನಿಲ್ಲಲಾಶ್ರಯವನು ಕಾಣೆ ಪೋಗುವೆನೆಂದ- ರೆಲ್ಯು ಮಾರ್ಗವನು ಕಾಣೆ ಬಲ್ಲಿದ ವೈರಿಗಳಲ್ಲಿ ತುಂಬಿಹರರಿ- ದಲ್ಲಣ ನೀ ಎನ್ನ ಸೊಲ್ಲ ಲಾಲಿಸು ಕೃಷ್ಣ 14 ಅಶನವಸನ ಕಾಣದೆ ದೇಶವ ಸುತ್ತಿ ಬಸಿದು ಬೆಂಡಾಗಿಹೆನು ಉಶನಾಂiÀರ್i ಶಿಷ್ಯನ ವಶದಿಂದೆತ್ತಿ ಪೃಥ್ವಿಯ ದಶನಾಯಕರಿಗಿತ್ತ ಅಸಮಸಾಹಸ ದೇವ 15 ಮಾಡಿದಪರಾಧಕೆ ಮಾನಹಾನಿ ಮಾಡಿದುದು ಸಾಲದೆ ಬೇಡುವೆ ದೈನ್ಯದಿ ಪಾಡುವೆ ಮಹಿಮೆಯ ರೂಢಿಯೊಳಗೆ ದಯಮಾಡು ಇನ್ನಾದರು 16 ಇನ್ನಾದರೂ ಮನದಿ ಪಶ್ಚಾತ್ತಾಪ ವನ್ನು ತಾಳೊ ದಯದಿ ಕಣ್ಣ ಕಟ್ಟಿ ಕಾಡಿನೊಳು ಬಿಟ್ಟ ತೆರದೊಳಿಂ- ತೆನ್ನನು ಬಳಲಿಪದನ್ಯಾಯವಲ್ಲವೆ 17 ನಷ್ಟವೇನಹುಣನು ಎನ್ನಲಿ ಕ್ರೋಧ ಬಿಟ್ಟು ಬಾಧಿಸುತ್ತಿರಲು ಕೃಷ್ಣ ನೀ ಕರುಣದಿ ಕಷ್ಟ ಬಿಡಿಸಿ ಕಡೆ ಗಿಷ್ಟು ತಾತ್ಸಾರದಿಂದ ಕಷ್ಟಗೊಳಿಸಿದೆ 18 ಇಂದ್ರಾದಿ ಸುರರುಗಳು ಕೆಲವು ಕಾಲ ನೊಂದು ಭಾಗ್ಯವ ಪಡದು ಇಂದಿರೇಶ ನಿನ್ನ ಬಂಧಕ ಶಕ್ತಿಯಾ ನಂದ ತಿಳಿದಂತೆ ಮಂದನಾನರಿವೆನೆ 19 ಆನೆಯ ಭಾರವನು ಹೊರಲು ಸಣ್ಣ ಶ್ವಾನ ಸಹಿಸಲಾಪದೆ ದೀನ ಮಾನವನೆಂದು ಧ್ಯಾನಿಸಿ ಮನದಲಿ ಘನ್ನ ದುಖ್ಖವ ಕಳೆಯಾನಂಥ ಮೂರುತಿ20 ನೀನಿತ್ತ ಮಾನವನು ನೀ ಕಳದುದ ಕಾನು ಮಾಡುವದೇನಯ್ಯ ದಾನವಾರಿ ಸುರಧೇನು ನಿನ್ಡಿಗಳ ಧ್ಯಾನ ಮಾಡುತಲಿ ಸುಮ್ಮಾನದಿಂದಿರುವೆನು 21 ಸಾಕು ಸಾಕು ಮಾಡಿದೆ ಎನ್ನನು ಬಹು ನೀಕರಿಸುತ ದೂಡಿದೆ ಬೇಕಾದರೆ ಭಕ್ತ ನೀ ಕಪಾಲನ ಪ- ರಾಕೆಂಬ ಬಿರುದಿಂದ ಸಾಕುವದುಚಿತವೆ 22 ಅಂಬರೀಷವರದ ಸ್ವಭಕ್ತ ಕು- ಟುಂಬಿಯಂಬ ಬಿರುದ ನಂಬಿದ ಮೇಲೆನಗಿಂಬುದೋರದೆ ವೃಥಾ ಡಂಬರವ್ಯಾಕಿನ್ನು ಶಂಬರಾರಿಯ ಪಿತ 23 ಹಂಸವಾಹನ ಜನಕ ದಾಸಮದ- ಭ್ರಂಶಕನೆಂದನ- ಕ ಸಂಶಯವಿಲ್ಲದೆ ತಿಳಿದೆನು ಮಾತುಳ ಕಂಸ ಮರ್ದನ ವಿಪಾಂಸ ಶೋಭಿತ ದೇವ 24 ತರಳ ಪ್ರಹ್ಲಾದ ಧ್ರುವಾದಿಗಳನೆಲ್ಲ ಪೊರೆದನೆಂಬ ಕಥೆಯ ಹಿರಿಯರು ಪೇಳ್ವರು ಭರವಸೆ ಎನಗಿಲ್ಲ ಸಿರಿನಲ್ಲ ನೀಯೆನ್ನ ಬರಿದೆ ಬಿಟ್ಟದ ಕಂಡು25 ವಿಜಯಸಾರಥಿ ನಿನ್ನಯ ಮೂರ್ತಿಯ ಕಂಡು ಭಜಿಸಿದ ಮೇಲೆನ್ನನು ವಿಜಯ ಪೊಂದಿಸದಿರೆ ತ್ರಿಜಗವು ನಗದೇನೊ ಭುಜಗ ಭೂಷಣ ವಂದ್ಯ ದ್ವಿಜರಾಜ ಗಮನನೆ 26 ಕುಂದಣ ವರ್ಣವಾದ ಕೇತಕಿಯನು ಗಂಧಕೆ ಮರುಳನಾಗಿ ಬಂದು ಕುಸುಮಧೂಳಿಯಿಂದ ಲಂಡನಾದ ತುಂದಿಲೋದರ ಮಿಳಿಂದನಂದದಿ ಸಿಕ್ಕಿ 27 ಬೇಡುವದೇನೆಂದರೆ ನಿನ್ನನು ಧ್ಯಾನ ಮಾಡಿ ಪಾಡುವ ಭಾಗ್ಯವ ನೀಡು ನೀಚರನೆಂದು ಬೇಡದಂದದಿ ಮಾಡು ರೂಢಿಯೊಳಗೆ ದಯಮಾಡು ನೀ ನಿರುಪದಿ 28 ಇನ್ನು ತಾ ತಾಳಲಾರೆ ಕ್ಷಣೆ ಕ್ಷಣೆ ನಿನ್ನ ಪೊಗಳಲಾರೆ ಪನ್ನಗಾಚಲವಾಸ ಪರಮ ಪುರುಷ ಪ್ರ- ಸನ್ನ ವೆಂಕಟೇಶ ಪಾಲಿಸು ಕೃಪೆಯಿಂದ 29
--------------
ತುಪಾಕಿ ವೆಂಕಟರಮಣಾಚಾರ್ಯ
(ಯರ್ಡನಾಡ ವಿಷ್ಣುಮೂರ್ತಿ) ಸಾರಥಿ ಪ. ಶಿಷ್ಟರಾಯಸದ ಸಜ್ಜನರ ಮೇಲ್ಕರುಣಾ ದೃಷ್ಟಿಯಿಂದಲಿ ಉಭಯಾರ್ಥದ ಪುರದಿ ಕಷ್ಟಪಾಶವ ಕಡಿದರಿಗಳ ಗೆಲಿಸುತ ಭೀಷ್ಟ ಕೊಡುವ ಸರ್ವೋತ್ಕøಷ್ಟ ಪರೇಶಾ 1 ಕ್ಷೋಣಿಸುತೆಯ ಚೂಡಾಮಣಿಯ ಬೇಗದಿ ತಂದ ಪ್ರಾಣನಾಥನು ಸುಪ್ರವೀಣನೆಂದದಿರು ಕಾಣಿಕೆ ಕಪ್ಪ ಪೂಜೆಗಳ ತನ್ಮತದಿಂದ ಮಾನಿಸಿಕೊಳುತಿಹ ಮನ್ಮಥ ಜನಕ 2 ನಿನ್ನ ಕಟಾಕ್ಷ ಸಂಪೂರ್ಣ ಪೊಂದಿಹರಾ ಹೆಂಣಾ ತಂದಿಹನಾ ಮೇಲಿರಿಸು ಪದ್ಮ ಕರಾ ಪನ್ನಗಚಲವಾಸ ಪವಮಾನವಂದಿತ ನಿನ್ನ ದಾಸರ ದಾಸ್ಯ ದಯಮಾಡು ಸುಪ್ರೀತ 3
--------------
ತುಪಾಕಿ ವೆಂಕಟರಮಣಾಚಾರ್ಯ
(ಶೇಣಿಯ ಗೋಪಾಲಕೃಷ್ಣನನ್ನು ನೆನೆದು) ತಾಪವ ಬಿಡಿಸು ದಯಾಪರ ಶ್ರೀ ಗೋಪಾಲ ಕೃಷ್ಣ ನೀ ಕಾಪಾಡು ಸಂಸಾರ ಪ. ಲೋಕನಾಯಕ ನಿನ್ನ ಕರುಣವಂದಿದ್ದರೆ ಸಾಕೆಂಬೆ ಜ್ಞಾನಾನಂದಕರ ಪಾಕಶಾಸನ ಸುತಗೊಲಿದಾತನ ಭಂಡಿ ನೂಕಿ ನಡೆಸಿದ ಕೃಪಾಕರ ಮೂರುತಿ 1 ನಡೆವುದು ನುಡಿವುದು ಕೊಡುವುದು ಕೊಂಬುದು ಮಡದಿ ಮಂದಿರ ಮಮತಾಸ್ಪದದ ಒಡವೆ ವಸ್ತುವು ಮೊದಲಾದುದೆಲ್ಲವನು ಶ್ರೀ- ಮುಡಿಯ ಸಂವರಿಸುವ ಕರದಿ ಸಂಗ್ರಹಿಸುತ2 ನಿನ್ನಡಿಗಳ ನಂಬಿ ನಿಂದಿಹೆನಿಲ್ಲಿ ಪ್ರ- ಸನ್ನ ಮುಖಾಂಬುಜ ಪಾಲಿಸೆಂದು ಅನ್ಯರಿಗೆಂದೆಂದು ದೈನ್ಯ ತೋರಿಸಲಾರೆ ಪನ್ನಗಾಚಲವಾಸ ಪರಮ ದಯಾಳೊ 3
--------------
ತುಪಾಕಿ ವೆಂಕಟರಮಣಾಚಾರ್ಯ
(ಶೇಷದೇವರ ಪ್ರಾರ್ಥನೆ) ಸುಕೃತ ಭಾಗ್ಯವಂತನೋ ಗುರುಶೇಷ ಯಂತು ಬಣ್ಣಿಸುವುದಿನ್ನು ಮಾಂತರಂಗದಿ ಪ್ರೇಮ ಪಾತ್ರನಾಗಿರುವದೀ ಪ. ಶ್ರೀನಿವಾಸಗೆ ಮೂರು ಸ್ಥಾನದಿ ಸರಿಯಾಗಿ ತಾನೆ ಶಯನ ಪೀಠ ಛತ್ರನಾಗಿ ಜ್ಞಾನಾನಂದನ ಪರಮಾನುರಾಗದಿ ನೋಡಿ ಮಾನವ ಪಡೆದು 1 ರಾಮರೂಪದಿ ನಿಂದ ಸ್ವಾಮಿಗೆ ನಿರವಧಿ ಪ್ರೇಮದನುಜನಾಗಿ ಪರಿಚಿರಿಸಿ ಸೋಮವಂಶದಿ ಬಲರಾಮನೆನಿಸಿ ಸತ್ಯ- ಭಾಮಾವರನ ಜೇಷ್ಠ ನಾಮವ ಪಡೆದು 2 ಹಲವು ವಿಧದ ಪುಣ್ಯ ಫಲವ ನೀಡಲು ಲಕ್ಷ್ಮಿ ಲಲನೆ ಪದ್ಮಜೆಯರ ಬಲಗೊಳ್ಳುತಾ ಕಲಿಯುಗದಲಿ ಬಂದು ನೆಲೆಯಗೊಳ್ಳಲು ಶೇಷಾ- ಚಲನೆಂದು ಹರಿಗೆ ನಿಶ್ಚಲವಾದ ನಿಲಯಾಗಿ 3
--------------
ತುಪಾಕಿ ವೆಂಕಟರಮಣಾಚಾರ್ಯ
(ಹಯವದನ ಪ್ರಾರ್ಥನೆ) ಹಾರುತ ಬಂದಿಹ ಹಯಮುಖ ಮೂರುತಿಯನು ನೋಡಿ ಮಾರುತ ವಂದಿತ ಮಹಿಮೆಯ ತೋರುವ ಕಾಪಾಡಿ ಪ. ವೇದವ ಕದ್ದ್ಯೊದಸುರನ ಹಾದಿಯೊಳಡ್ಡಗಟ್ಟಿ ಮೇದಿನಿಗೊರಗಿಸಿ ಶ್ರುತಿಯನು ಕಾದನು ಜಗಜಟ್ಟಿ ವೇಧಗೆ ಪರತತ್ವಂಗಳ ಬೋಧಿಸಿ ಮನಮುಟ್ಟಿ ಶ್ರೀಧರ ದುರ್ಜನರೆದೆಗಳ ಭೇದಿಸುವನು ಮೆಟ್ಟಿ1 ವಾದಿನೃಪ ಯತೀಂದ್ರ ಮನೋಲ್ಲಾಸದಿ ಪದಾಂಭೋಜ ಸಾಧಿಸುವನು ಸಕಲಾರ್ಥನ ಸ್ವಜನಕೆ ಸುರರಾಜ ಸ್ವೋದರಗತ ವಿಶ್ವಂಭರ ಶಮಿತದುರಿತ ಬೀಜ ವ್ಯಾಧಿಯ ಹರಸುವ ವಿಭವಾಸಾದಿತ ಗಜರಾಜ 2 ಹೇಷಾ ನಿಭೃತಾಶಾನತ ಕೋಶಾಸ್ಪದ ರೂಪ ದೋಷಾಂಬುಧಿಶೋಷಾದ್ಭುತ ವೇಷಾಸುರ ತಾಪ ವೀಶಾಹಿ ಗಣೇಶಾದ್ಯಮರೇಶಾರ್ಚಿತ ಪಾದ ಶೇಷಾಚಲ ಭೂಷಾಗಮ ಭಾಷಾಮಿತವಾದ 3
--------------
ತುಪಾಕಿ ವೆಂಕಟರಮಣಾಚಾರ್ಯ
(ಹೋಳಿ ಪದ) ಧುಮ್ಮಿಶಾಲೆನ್ನಿ ನಮ್ಮ ರಮ್ಮೆಯರಸ ಕೃಷ್ಣನಡಿಯ ಒಮ್ಮನದಿ ನೆನೆದು ಸಕಲ ಕರ್ಮಕಲುಷವ ಕಳಿಯಿಸಿ ಪ. ನಿಗಮ ಸ್ಮøತಿ ಗಣೋಕ್ತ ಕರ್ಮಕರಣ ಭವಿ ಷ್ಯೋತ್ತರ ಪುರಾಣವಚನವೆತ್ತಿ ಜಗಕೆ ತಿಳಿಸಿದಾ ಒತ್ತಿ ಬರುವ ವಿಘ್ನಗಣವ ಕತ್ತರಿಸುವ ಹೋಳಿಯೆಂಬ ಉತ್ತಮದ ವ್ರತವು ಜಗವ ಸುತ್ತಿಕೊಂಡು ಮೆರೆವುದು 1 ವಿಧಿಯ ಸ್ತುತಿಗೆ ಮೆಚ್ಚಿ ಕರುಣಾಸುಧೆಯ ಸುರರ ಮೇಲೆ ಕರದು ಮಧುರೆಯಲ್ಲಿ ಜನಿಸಿ ಬಂದ ಮಧುಮುರಾರಿ ಮರ್ದನ ಯದುಕುಲೇಶ ಕೃಷ್ಣಗೋಪ ಚದುರೆಯರನು ಒಲಿವೆನೆಂದು ಮದನನು ಹುಣ್ಣಿವೆಯ ಹಬ್ಬ ಸದರದಿಂದ ರಚಿಸಿದ 2 ಮೇಲು ಬೆಲೆಗಳುಳ್ಳ ಬಿಳಿಯ ಶಾಲೆಗಳನು ಧರಿಸುತ ಗು ಲಾಲ ಪುಡಿಯ ಸುರಿವ ಗೋಪ ಬಾಲಜನರ ಕೂಡುತ ಗಜ ಮೇಲಾಳುತನವ ನಡೆಸುತಿರಲು ಶ್ರೀ ಲಲಾಮ ವಾರನಾರಿ ಜಾಲವನ್ನು ಕರೆಸಿದ 3 ಸಿರಿಯ ಮುಡಿಯ ಮೇಲೆ ನವಿಲಗರಿಯ ಗೊಂಚಲಿರಿಸಿ ನಾನಾ ಪರಿಯ ಪುಷ್ಪ ಮಾಲೆಗಳನು ಧರಿಸಿ ಕಂಠ ಮಧ್ಯ ಪೋಕ ಥರವ ತೋರ್ಪ ಪದವ ಸಪ್ತ ಸ್ವರದಿ ಕೂಡಿ ವಾಡಿ ಬೀದಿ ತಿರುಗಿ ಬಂದ ಕೃಷ್ಣನು 4 ಶಿಷ್ಟ ಸಂಗ್ರಹೀತ ಕಾರ್ಯ ಶ್ರೇಷ್ಠವಾಗಿ ತಿಳಿಯಿರೆಂದು ದಮನ ನರನೊಳೆಂದ ಸ್ಪಷ್ಟ ಗೀತ ವಚನವ ಶಿಷ್ಟ ಜನರು ಗ್ರಹಿಸಿ ನಡದರಷ್ಟ ಭಾಗ್ಯವಿತ್ತು ಶೇಷ ಬೆಟ್ಟದೊಡೆಯ ಹರಿಯು ಕರುಣಾ ದೃಷ್ಟಿಯಿಂದ ಪೊರೆವನು 5
--------------
ತುಪಾಕಿ ವೆಂಕಟರಮಣಾಚಾರ್ಯ
|| ಶ್ರೀ|| ಪದ್ಯ|| ಮುಂದೆ ತುಳುಜಾ ದೇವಿ ಬಂದು ನಿಂತಿರಲು ತ್ವರದಿಂದ ನೋಡ್ಯನುಭೂತಿ ಬಂದಂಥ ದೇವಿಯ ಚಂದದ ಬಹು ತೇಜವೆಂದು ತಿಳಿಯದೆ ಎನ್ನ ಮುಂದೆದುರಿಗೆ ಏನು ಬಂದಿರುವುದೆಂದು ತ್ವರದಿಂದ ನಡುಗಿದಳು|| ಮುಂದ ಆದೇವಿ ತಾ ಮುಂದಕ್ಕೆ ಕರೆಯುತಲೇ ಕುಂದರದನಿಯೇ ಕೇಳು ಕುಂದು ನಿನ್ನಲ್ಲಿ ಇಲ್ಲ ಎಂದು ನಿನ್ನ ಭಕ್ತಿಗೆ ಚಂದಾಗಿ ಅಭಯದ ಕೂಟ್ಟಂದಳೀಪರಿಯ||1 ಪದ ರಾಗ:ಕಾನಾಡ ಆದಿತಾಳ ಬೇಡು ಬೇಕಾದ್ದು ಬ್ಯಾಗನೇ|| ಅನುಭೂತಿ|| ಬೇ|| ನೀಡುವೆ ನಾನು|| ಪ ಮಾನಸ ದುಃಖವ್ಯಾಕಿದು || ನಿನ್ನ ಭಿಮಾನವೆಂಬುದು ನನ್ನದು|| ಮಾನಿತರೊಳ್ಹಗತಿ ಮಾನವಂತೆಯೇ ಮಾನುನಿ ಮಣಿ ಅನುಮಾನವ ಬಿಟ್ಟು|| 1 ಎಷ್ಟು ಸ್ನೇಹವ ತೋರಲಿ|| ಬಂದೆ ಸಂತುಷ್ಟಳಾಗುತ ನಿನ್ನಲಿ|| ಶಿಷ್ಟಳೆ ನೀ ಕೇಳಸ್ಪಷ್ಟದಿ ನಿನಗೆ ದೃಷ್ಟಿಗೆ ಬೀಳಲು ಕಷ್ಟಗಳುಂಟೆ|| 2 ಚಿಂತಿಸಿದಿ ಯಾಕೆನ್ನನು|| ಬಂದಂತಹ ಚಿಂತೆ ಎಲ್ಲಾನೂ ಕಳೆವೆನು|| ಸಂತೋಷದಲಿ ಅನಂತಾದ್ರೀಶನ ಚಿಂತನದಿಂದಿರು ಚಿಂತೆಯನು ಬಿಟ್ಟು|| 3 ಆರ್ಯಾ ಅತಿ ಹಿತ ವಚನವನು ಕೇಳಿ || ಅತಿ ಹರುಷಿತಳಾದಳಾಗ ಆ ಬಾಲೆ ಹಿತವಾಯಿತು ಎನಗೆಂದು || ನತಿಸುತ ಮಾತಾಡಿದಳು ಹೀಗೆಂದು|| 1 ಪದ ರಾಗ:ಮುಖಾರಿ ಆದಿತಾಳ ತುಳುಜಾದೇವಿಯೇ|| ಪ ನಮೋ ಎಂಬೆ ಮತ್ತು ಜಗದ್ಥಾತ್ತಿಯೆ || ಬಹುಪ್ರಮಿತಾ ಹಿಮಾಚಲನ ಪುತ್ರಿಯೇ || ಸುಮಹಿಮ ಸುಂದರಗಾತ್ರಿಯೇ|| ಮನದಾ ಅಮಿತಾರೋಗಕ್ಕೆ ಮಹಾಮಾತ್ತಿಯೇ|| 1 ತ್ವರಿತಾದಿಂದಲೇ ಬಂದಂಥಾಕಿಯೇ || ಎಂದು ತ್ವರಿತಾ ತ್ವರಿತಾದೇವಿಯು ಎನಿಸು ವಾಕೆಯೆ|| ಮರೆತಿರಲಾರೆ ನಾ ನಿನ್ನಕಿಯೇ || ಸ್ನೇಹಾಭರಿತಾಗಿ ಭಕ್ತರನ ಸಲಹವಾಕಿಯೇ|| 2 ಚಿಂತಿ ಮಾಡಲು ಬಂದು ನಿಂತಿಯೇ || ಎನಗೆ ಚಿಂತಿಯು ಮಾಡಬ್ಯಾಡಂತಿಯೇ|| ಎಂಥಾಕಿ ನೀನು ದಯಾವಂತಿಯೇ || ವರದಾ ನಂತಾದ್ರೀಶನ ಸಖನ ಕಾಂತಿಯೇ|| 3 ಆರ್ಯಾ ಕರ ಮುಗಿದು|| 1 ಪದ ರಾಗ :ಆನಂದ ಭೈರವಿ ವರಕೊಡು ಎನಗಿದು ತ್ವರಿತದಿ ತಾಯಿ|| ಮರೆಯ ದೆಂದೆಂದೂ ಹಗಲಿರುಳು ನೀ ಕಾಯಿ|| ಪ ಮಂದ ಮತಿಯು ದೈತ್ಯ ಬಂದಿಹನೋಡು|| ಕೊಂದವನ ಎನಗಾನಂದವ ನೀಡು 1 ಮಾಡುವ ತಪಸ್ಸಿಗೆ ಕೇಡು ತಂದಿಹನು|| ಮಾಡಲಿನ್ನೇನು ನಿನಗೆ ಬೇಡಕೊಂಬುವೆನು|| 2 ಪತಿಯ ಸೇವಿಸುವಂಥ ಸತಿಯು ಬೇಡುವೆನೂ|| ಸತತಾನಂತಾದ್ರೀಶನಾ ಸ್ವøತಿಯು ಮಾಡುವೆನು|| 3 ಅನುಭೂತಿಯ ವಚನವನು || ಅನುಸರಿಸುತ ಬ್ಯಾಗಕೊಟ್ಟು ಎನಗಿಲ್ಲೆಂತ್ಯಂದಳಾಗ ಜಗದಂಬಾ|| 1 ಮಾಡಿದಳು|| ಹುಂಕಾರ|| 2 ಒಗೆದಾನು ಯುದ್ಧದಲ್ಲಿ ಜಾಣಾ|| 3 ಸಾರಶಕ್ತಿಯನು ತೆಗೆದಾ ಶೌರ್ಯದಿ ಮತ್ತಾಕೆಯಲ್ಲೇ ಒಗೆದಾ|| 4 ಎದೆಗ್ಹೊಡೆದಳು ಶೂಲದಲೆ||ಅದುರೂಪವು ಬಿಟ್ಟು|| ತನ್ನಕ ಪಟದಲೆ ಕುದುರೆಯ ರೂಪವ ಧರಿಸಿ|| ಒದರುತ ನಿಂತಾಗ ಮುಂದ ಖ್ಯಾಕರಿಸಿ|| 5 ಗಾಢನೆ ಮಹಿಷಾಗಿ ಬಂದ ಬದಿಯ್ಮಲೇ 6 ತೋರುವ ಬಹುಬೆಟ್ಟಗಳ|| ಕೊಡಗಳಿಂದಲೇ ಕೊಡಗಳ್ಹಗಳು| ಮಾಡುವ ವೃಷ್ಟಿಯದೆಷ್ಟು|| ಕಾಡುವ ಕಪಟದಿಂದ ಮತ್ತಿಷ್ಟು 7 ಶೃಂಗಗಳಿಂದ ಹಿಡಿದಳು ದÉೈತ್ಯಬಾಯಿಬಿಡುವಾ|| 8 ಅವನ ಮುರದೊತ್ತಿ 9 ಕಡೆದಳು ಆಗವನ ಬಿಲ್ಲುಬಾಣದಲೆ|| 10 ದಾನವನು|| ಹುಟ್ಟಿದ ಸೈನ್ಯವು ಎಲ್ಲಾ|| ಪೆಟ್ಟು ಹಾಕುತ ಬಂತು ಭೂತಗಳಿಗೆಲಾ||್ಲ 11 ತಡಿಯದೇ ಅವನ ಹುಡುಕುತಲಿ || ಕಡಿದಳು ಶಿರ ಕಡೆದಳು ಮತ್ತವನ ಶಿರವು ಖಡ್ಗದಲೇ|| 12 ಸುರರು ಥಟ್ಟನೆ ಕರೆದರು ಪುಷ್ಪ ದೃಷ್ಟಿಯನು|| 13 ಪದ್ಯ ರಾಗ:ದೇಶಿ ಅಟತಾಳ, ಸ್ವರ ಷಡ್ಜ ಓಡಿ xಟ್ಟನೆ ಹಿಡಿದರಾಗ|| 1 ಕುಕ್ಷಿಗಿಲ್ಲದಲೆ ಬುಭೂಕ್ಷಿತರದು ಎಲ್ಲಾ ಭಕ್ಷಣ ಮಾಡುವರು|| ಅಕ್ಷಯ ಬಲದಿಂದ ದಕ್ಷರು ಎಲ್ಲಾರು ರಾಕ್ಷಸರಾದರು|| 2 ಭೈರವಾದಿಗಳು ಎಲ್ಲಾರು ದೇವಿಯ ಪರಿಚಾರಕರಾದವರು ಸೇರಿ ಸೈನ್ಯದಲ್ಲಿ ಅಪಾರ ಸಂಭ್ರಮದಲ್ಲಿ ಹಾರ್ಯಾಡುತಿರುವರು3 ಆ ತಾಳಮೊರದಂಥ ಬೇತಾಳ ಗಣಗಳು ಪ್ರೇತ ಪಿಶಾಚಿಗಳು|| ಯಮದೂತರಸಮರವರು|| 4 ರಕ್ತ ಪಾನವ ಮಾಡಿದರು|| 5 ದುರುಳರನೆಲ್ಲನು ಹೊರಳಿಸಿ ಹೊಟ್ಟೆಯ ಕರಳವ ಬಗಟಿದರು| ಸರಳವಾದ ಆ ಕರಳ ಮಾಲೆಯ ಮಾಡಿ ಕೊರಳೊಗ್ಹಾಕಿದರು||6 ಹಾಕಿಕೊಂಡು ಕುಣಿದಾಡಿದರು||7 ಕಂಕಲಾದಿಗಳು ಭಯಂಕರರವರು ಅಸಂಖ್ಯಾಕರಾಸವರು|| ಶಾಂಕರೀ ದೇವಿಯ ಕಿಂಕರರಿಂಥ ಅಲಂಕಾರಗಳನಿಟ್ಟರು || 8 ಅವನಂತವ ಅರಿಯೇ ನಾನು|| 9 ಆರ್ಯಾ ಬಲ್ಲಿದ ದೈತ್ಯದ ಕೊಂದು || ನಿಲ್ಲದೆ ಅನುಭೂತಿ ಬದಿಯಲೇ ಬಂದು || ಅಲ್ಲಿಹಳು ಮಹಾಮಾಯಾ|| ಇಲ್ಲಿ ಗೆ ಪೂರ್ಣಾಯಿತು ಎರಡು ಅಧ್ಯಾಯಾ || ಶ್ರೀ ಹರೇಪ್ರಸೀದ||
--------------
ಅನಂತಾದ್ರೀಶ - ಕಥನಕಾವ್ಯಗಳು
2. ಕವಿ ಲಕ್ಷ್ಮೀಶನ ವಸಂತ ವರ್ಣನೆಯ ಹಾಡುಗಳು ಇಂದು ಮುಖಿಯರು ಬಂದು ನೆರದು ಕಂದರ್ಪನಯ್ಯಗೋವಿಂದ ಮುಕುಂದನೊಳು ದ್ವಂದ್ವದಿಂದೊಲಿದು ವಸಂತವಾಡಿದರೂ ಪ ನವರತ್ನ ಖಚಿತ ಮೋಹನದ ಮಂಟಪದಲ್ಲಿ ನವಕುಸುಮ ಫಲಗಳನು ಕಟ್ಟಿದರು ನಲವಿನಲಿ ನವಮೋಹನಾಂಗಿಯರು ನವರಸ ಪ್ರೌಢೆಯರು ನವನೀತ ಚೋರನನು ನಿಲಿಸಿ ತವ ತವಕದಿಂದ ತರುಣಿಯರೆಲ್ಲ ವೊಲವಿನಲಿ ಕವಕವಿಸಿ ಹೊಳೆವ ಹೊನ್ನಂದುಗೆ ಘಲಿರೆನಲು ಭವ ಭವಕೆ ಕಾಣೆ ಯೆಂದತಿ ಮನೋಪ್ರೀತಿಯಲಿ ಪವಣರಿತು ಕುಂಕುಮವ ತಳಿದರು ಶ್ರೀಹರಿಗೆ 1 ಕಳಹಂಸ ಗಮನೆಯರು ತಳಿರಡಿಯ ನೀರೆಯರು ಸೆಳೆನಡುವಿನಬಲೆಯರು ಹೊಳೆವ ನಳಿದೋಳವನು ಥಳಥಳಿಪ ಕುಚದ ಕಾಂತೆಯರು ನಳನಳಿಪ ವದನೆಯರು ಎಳೆನಗೆಯ ಭಾವೆಯರು ಸುಳಿಗುರುಳ ನಾರಿಯರು ಅಳವಟ್ಟ ಚಲುವೆಯರು ನಳಿನನೇತ್ರನಿಗೆ ಕಮ್ಮಲರ ಸೂಸಿದರೂ 2 ಪುಣುಗು ಜವ್ವಾಜಿ ಪಚ್ಚೆ ಪರಿಮಳವನೆ ತೆಯಿದು ಘಣಿರಾಜಶಯನ ಬಾಬಾಯೆಂದು ಪ್ರೇಮದಿ ಕುಣಿವ ಸೋಗೆಗಳ ಮುಡಿಯಂದದಬಲೆ ಬಲೆಯರೆಯಡಿ ಗುಣನಿಧಿಯ ಹಿಡಿಯ ಬೇಕೆನುತಾ ಕ್ಷಣ ಬೇಗದಲಿ ಹಾಯ್ದು ಗಿಣಿವಾಕಿನಲಿ ನುಡಿದು ಕ್ಷಣ ಬೇಗದಲಿ ಹಾಯಿದು ಗಿಣಿವಾಕಿನಲಿ ನುಡಿದು ಯೆಣೆಯಿಲ್ಲ ನಿನಗೆಂದು ಪ್ರಣವಗೋಚರಗೆ ಚಂದನವ ಮಾಡಿದರೂ 3 ಮತ್ತಗಜಗಾಮಿನಿಯರೊತ್ತಾಗಿ ಒಡಂಬಟ್ಟು ಹತ್ತಬಿಗಿದಂಬರವನುಟ್ಟೂ ಒತ್ತರಿಸಿ ಸು ತ್ತುವರಿಯುತ್ತ ಹಾಹಾಯೆಂದು ಚಿತ್ತಿನಿ ಪದ್ಮಿನಿ ಶಂಖಿನಿಯರೊಂದಾಗಿ ಚಿತ್ತಜನ ಪಿತಗೆ ಕತ್ತುರಿಯ ರಚಿಸಿದರೂ 4 ಅಂಬುಜಾಕ್ಷಿಯರೆಲ್ಲ ಹರುಷದಿಂದನೆರದು ಚೆಂಬೊನ್ನ[ಕಳಸ]ಗಳ ಪಿಡಿದು ಪುಳಕವ ಜಡಿದು ಸುರರು ಪೂಮಳೆಗರೆದು ಹಾಯೆಂದು ಕಂಬುಧರ ನಿಲ್ಲು ನಿಲ್ಲೆಸುತಾ ಕುಂಭಿನಿಯೊಳಧಿಕ ಸುರಪುರದ ಲಕ್ಷ್ಮೀಪತಿಯ ಬೆಂಬಿಡದೆ ಪೊಂಬಟ್ಟೆಯಂ ಪಿಡಿದು ಸರಸದಿ ಕುಂಭಕುಚದಿಂದಪ್ಪಿ ತಕ್ಕೈಸಿ ಮನ ಬಂದು ಸಂಭ್ರಮದಲೋಕುಳಿಯನಾಡಿದರು 5
--------------
ಕವಿ ಲಕ್ಷ್ಮೀಶ
2. ಶನೀಶ್ವರ ದಂಡಕ ಮಾಸ ಮಾನಿನಿ ಒಡಲು ಹಿಂಡು ನೆಟ್ಟನೆ ಹಗೇವದಲ್ಲಿದ್ದ ನಿಜಧಾನ್ಯ ಪಟ್ಟೆಂದು ಚಲಿಪುದು ಪರಿಪರಿಯ ವಸನಗಳು ಇಟ್ಟಲ್ಲಿ ನೆಲೆಸಿಹವಾಗಿಕಾಣಿಸದು ಅಟ್ಟೀವಹುಲಿಕರಡಿಉರಿಬಿಸಿಲು ಘನವಾಗಿ ಮಟ್ಟ ಮಧ್ಯಾಹ್ನದಲಿ ನೀರಡಿಸಿ ಕುಳಿತಿರಲು ಆರಿ[ಹ] ರೈ[ಕಾ]ವರಿಲ್ಲೆಂದು ಸಾರಸಂ [ಬಡುತ] ಕಾಡಿ [ಮೊರೆ]ಯಿಡೆ ನಿನ್ನ ಮೋಡಿ [ಮೆರೆವುದು] ಜರ್ಝರಿ ಭೂತ[ಂಗಳೆಲ್ಲಂ] ಬಿಟ್ಟು ಈ ದಂಡಕಂ ಹನ್ನೊಂದು ಬಾರಿ ಶನಿವಾರವೈದರಲಿ ಪಠಿಪರ್ಗೆ ಹನ್ನೊಂದನೆ ರಾಶಿಯೊಳಿರ್ದ ಫಲವನಿತ್ತು ಚೆಲುವ ವೇಲಾಪುರದ ವೈಕುಂಠ ವಿಠಲನ ಭಕ್ತನೆಂದೆನಿಸಿ ನಿನ್ನ ಪೆತ್ತ ಮಾತೆಯ ಪೆಸರನೆನಿತ ಧನ್ಯರಂ ಮಾಡಿಸದೆ ಅನ್ಯಾಯ[ಹಂ] ಕಾರಗಳಿಗಂಜಿ ನೀ ಬಿಡದೆ ನಿನ್ನ ಮನಬಂದ ರೀತಿಯಲಿ ಬಾಧಿಸದೈಯಾ ಸನ್ಮುನಿವಂದ್ಯ ಸರ್ವೇಶ್ವರಾನಂದ ಸಂಚಾರಿರವಿಸೂನು ಯಮ ಸಹೋದರ ವೀರಧರ್ಮ ಪರಿಪಾಲನೆ ಶನೈಶ್ವರ ಮಹಾರಾಯನೆ ತ್ರಾಹಿ ತ್ರಾಹಿ ನಮಸ್ತೆ ನಮಸ್ತೆ ನಮಃ ಶ್ರೀ ಕೃಷ್ಣಾರ್ಪಣಮಸ್ತುಃ
--------------
ಬೇಲೂರು ವೈಕುಂಠದಾಸರು
2. ಶ್ರೀ ವೆಂಕಟೇಶ ಸ್ತೋತ್ರ 6 ಶರಣಾಗತರ ಕಲ್ಪತರುವೆ ವೆಂಕಟ ಧರಾ ಧರನಾಥ ನಿನ್ನ ಚರಣಾಬ್ಜ | ಚರಣಾಬ್ಜಯುಗಳ ಸಂ ದರುಶನವ ಈಯೊ ಎಂದೆಂದು 1 7 ಸ್ವಾಮಿ ತೀರ್ಥ ನಿವಾಸ ಸು ಭಯಹಾರಿ ಸುರರ ಸಾರ್ವ ಭೌಮ ನೀ ಸಲಹೆಮ್ಮೆ 2 8ವೆಂಕಟಾಚಲನಿಲಯ ಪಂಕಜೋದ್ಭವನಯ್ಯ ಕಿಂಕರನೆನಿಸೊ ಶುಭಕಾಯ 3 9 ಸತ್ಯಸಂಕಲ್ಪ ಜಗದತ್ಯಂತ ಭಿನ್ನಸ ರ್ವೋತ್ತಮ ಪುರಾಣ ಪುರುಷೇಶ | ಪುರುಷೇಶ ಸತತತ್ವ ದ್ಭೈತ್ಯನ್ನ ಕಾಯೊ ಕರುಣಾಳೊ 4 10 ದೇವಶರ್ಮನ ತುತಿಗೆ ನೀನೊಲಿದು ಪಾಲಿಸಿದೆ ದೇವಕೀಕಂದ ದಯದಿಂದ | ದಯದಿಂದ ಒಲಿದೆನ್ನ ತಾವಕರೊಳಿಟ್ಟು ಸಲಹಯ್ಯ 5 11 ಕೃತಿಪತಿಯೆ ನಿನ್ನ ಸಂಸ್ಮøತಿಯೊಂದಿರಲಿ ಜನ್ಮ ಮೃತಿ ನರಕ ಭಯವು ಬರಲಂಜೆ | ಬರಲಂಜೆ ಎನಗೆಕೃಸಂ ತತ ನಿನ್ನ ಸ್ಮರಣೆ ಕರುಣೀಸೊ 6 12ಶುಚಿಸದ್ಮನೆ ಮನೋವಚನಾತ್ಮಕೃತ ಕರ್ಮ ನಿಚಯ ನಿನಗೀವೆ ಸುಚರಿತ್ರ | ಸುಚರಿತ್ರ ಸುಗುಣಗಳ ರಚನೆ ಸುಖವೀಯೊ ರುಚಿರಾಗ 7 13ಹೃದಯದಲಿ ತವರೂಪ ವದನದಲಿ ತವನಾಮ ಉದರದಲಿ ನೈವೇದ್ಯ ಶಿರದಲ್ಲಿ | ಶಿರದಲ್ಲಿ ನಿರ್ಮಾಲ್ಯ ಪದಜಲಗಳಿರಲು ಭಯವುಂಟೆ 8 14ಸತತ ಸ್ಮರಿಸುತ ನಿನ್ನ ನುತಿಸಿ ಬೇಡಿಕೊಳುವೆ ಹಿತದಿಂದ ನಿನ್ನ ವಿಜ್ಞಾನ | ವಿಜ್ಞಾನ ನಿಜ ಭಾಗ ವತರ ಸಂಗವನ್ನೇ ಕರುಣೀಸೊ 9 15ಪ್ರಕೃತಿ ಗುಣಗಳ ಕಾರ್ಯ ಸುಖ ದುಃಖ ಮೂಲ ಜಡ ಪತಿ ನಿನ್ನ ಭಕುತ ನಾನಯ್ಯ ಎಂದೆಂದು 10 16ಪುಣ್ಯಪಾಪಾದಿಗಳು ನಿನ್ನಾಧೀನದೊಳಿರಲು ಎನ್ನದೆಂದರುಹಿ ದಣಿಸುವಿ | ದಣಿಸುವುದು ಧರ್ಮವೇ ನಿನ್ನರಿವ ಜ್ಞಾನ ಕರುಣೀಸೊ 11 17ಝಷಕೇತು ಜನಕ ದುರ್ವಿಷಯಕೊಳಗಾಗಿ ಸಾ ಹಸ ಪಡುವ ಚಿತ್ತ ಪ್ರತಿದಿನ | ಪ್ರತಿದಿನಗಳಲ್ಲಿ ನಿನ್ನ ವಶಮಾಡಿಕೊಳ್ಳೊ ವನಜಾಕ್ಷ 12 18ಇನಿತಿದ್ದ ಬಳಿಕ ಯೋಚನೆ ಯಾಕೆ ಗರುಡವಾ ಹನನೆ ಮಹಲಕ್ಷ್ಮಿ ನರಸಿಂಹ/ನರಸಿಂಹ ಬಿನ್ನೈಪೆ ಘನತೆ ನಿನಗಲ್ಲ ಕರುಣಾಳು 13 19ಸುಲಭರಿನ್ನುಂಟೆ ನಿನ್ನುಳಿದು ಲೋಕತ್ರಯದಿ ಬಲವಂತರುಂಟೆ ಸುರರೊಳು/ಸುರರೊಳು ನೀನು ಬೆಂ ಬಲವಾಗಿ ಇರಲು ಭಯವುಂಟೆ 14 20ಹಯವದನ ಸೃಷ್ಟಿ ಸ್ಥಿತಿಲಯ ಕಾರಣನುನೀನೆ ದಯವಾಗಲೆಮಗೆ ದುರಿತೌಘ / ದುರಿತೌಘರ್ಕಳು ಬಟ್ಟ ಬಯಲಾಗುತಿಹವೊ ಸುಕೃತಿಯಿಂದ 15 21ಕಲುಷವರ್ಜಿತನೆ ಮಂಗಳ ಚರಿತ ಭಕ್ತವ ತ್ಸಲ ಭಾಗ್ಯವ ಪುಷ ಬಹುರೂಪಿ /ಬಹುರೂಪಿ ಎನಗೆಚಂ ಚಲ ಬಿಡಿಸಿ ನೀ ಕರುಣೀಸೊ 16 22ಫಾಲಾಕ್ಷಪ್ರಿಯ ನಿನ್ನ ಲೀಲೆಗಳ ಮರೆಯದಲೆ ಕಾಲಕಾಲದಲಿ ಸ್ಮರಿಸುವ/ ಸ್ಮರಿಸಿ ಹಿಗ್ಗುವ ಭಾಗ್ಯ ಪಾಲಿಸೊ ಎನಗೆ ಪರಮಾತ್ಮ 17 23ಚತುರವಿಧ ಪುರುಷಾರ್ಥ ಚತುರಾತ್ಮ ನೀನಿರಲು ಇತರ ಪುರುಷಾರ್ಥ ನಾನೊಲ್ಲೆ | ನಾನೊಲ್ಲೆ ತ್ವತ್ಪಾದ ರತಿ ಭಾಗ್ಯ ನೀನೆ ಕರುಣೀಸೊ 18 24 ಜಯ ಮತ್ಸ್ಯ ಕೂರ್ಮ ವರಹ ನರಸಿಂಹ ಭೃಗುರಾಮರಘುರಾಮ ಜಯ ಬೌದ್ಧ ಕಲಿಹರ್ತಾ 19 25 ಜಯ ವಿಶ್ವತೈಜಸನೆ ಜಯ ಪ್ರಾಜ್ಞ ತುರ್ಯಾತ್ಮ ಜಯ ಅಂತರಾತ್ಮ ಪರಮಾತ್ಮ | ಪರಮಾತ್ಮ ಜ್ಞಾನಾತ್ಮ ಅನಿರುದ್ಧ ಪ್ರದ್ಯುಮ್ನ 20 26 ಜಯ ಸಂಕರುಷಣನೆ ಜಯ ವಾಸುದೇವನೆಜಯ ಜಯತು ಲಕ್ಷ್ಮೀನಾರಾಯಣಾ |ನಾರಾಯಣಾನಂತ ಜಯತು ಗೋವಿಂದಾಚ್ಯುತ ಶ್ರೀ ಕೃಷ್ಣ 21 27ಜಯ ಪೂರ್ಣ ಜ್ಞಾವಾತ್ಮ ಜಯ ಪೂರ್ಣೈಶ್ವರ್ಯ ಜಯ ಪ್ರಭಾ ಪೂರ್ಣ ತೇಜಾತ್ಮ | ತೇಜಾತ್ಮ ನಂದಾತ್ಮ ಜಯತು ಶಕ್ತ್ಯಾತ್ಮ ಕೃದ್ಧೋಲ್ಕ 22 28ಜಯ ಜಯತು ಮಹೋಲ್ಕ ಜಯತು ವೀರೋಲ್ಕ ಜಯ ಜಯತು ದ್ಯುಲ್ಕ ಸಹಸ್ರೊಲ್ಕ | ಸಹಸ್ರೊಲ್ಕ ಜಯ ಜಯ ಜಯತು ಜಗನ್ನಾಥ ವಿಠಲಾರ್ಯ 23 29 ಶ್ರೀನಿವಾಸನ ಪೋಲ್ವ ದೀನವತ್ಸಲರುಂಟೆ ದಾನಿಗಳುಂಟೆ ಜಗದೊಳು |ಜಗದೊಳು ನೀನೆ ಗತಿಯೆಂದನರರಿಗೆ ಆನಂದವೀವೆ ಅನುಗಾಲ 24 30ಒಪ್ಪಿಡಿ ಅವಲಕ್ಕಿಗೊಪ್ಪಿಕೊಂಡು ಮುಕುಂದ ವಿಪ್ರನಿಗೆ ಕೊಟ್ಟ ಸೌಭಾಗ್ಯ | ಸೌಭಾಗ್ಯ ಕೊಟ್ಟ ನ ಮ್ಮಪ್ಪಗಿಂತಧಿಕ ದೊರೆಯುಂಟೆ 25 31ಏನು ಕರುಣಾ ನಿಧಿಯೊ ಶ್ರೀನಿತಂಬಿನಿರಮಣ ತಾನುಮ್ಮನಗಲಿ ಸೈರಿಸ | ಸೈರಿಸದ ಕರುಣಿಯ ನಾನೆಂತು ತುತಿಸಿ ಹಿಗ್ಗಲಿ 26 32ಶ್ರೀನಿಧೆ ನಿನ್ನವರ ನಾನಾಪರಾಧಗಳ ನೀನೆಣಿಸದವರ ಸಲಹುವಿ | ಸಲಹುವಿ ಸರ್ವಜ್ಞ ಏನೆಂಬೆ ನಿನ್ನ ಕರುಣಕ್ಕೆ 27 33ಎನ್ನ ಪೋಲುವ ಭಕ್ತರನ್ನಂತ ನಿನಗಿಹರು ನಿನ್ನಂಥ ಸ್ವಾಮಿ ಎನಗಿಲ್ಲ | ಎನಗಿಲ್ಲವದರಿಂದ ಬಿನ್ನೈಪೆನಿನ್ನು ಸಲಹೆಂದು 28 34ಅಚ್ಯುತನೆ ನಿನ್ನಂಥ ಹುಚ್ಚು ದೊರೆಯನು ಕಾಣೆ ಕಚ್ಚಿ ಬಯದೊಡ್ಡೆ ಭಕುತರ | ಭಕುತರಪರಾಧಗಳ ತುಚ್ಛಗೈದವರ ಸಲಹೀದೆ 29 35ಎನ್ನ ಬಂಧುಗಳೆಲ್ಲ ನಿನ್ನ ದಾಸರು ಸ್ವಾಮಿ ಮನ್ನಿಸಬೇಕು ಮಹರಾಯ | ಮಹರಾಯ ನೀನಲ್ಲ ದನ್ಯರು ಸಾಕಲರಿಯರು 30 36 ತಂದೆ ತಾಯಿಯು ಭ್ರಾತ ಸಖ ಗುರು ಪುತ್ರ ಎಂದೆಂದು ನೀನೆ ಗತಿ ಗೋತ್ರ | ಗತಿಗೋತ್ರ ಇಹಪರಕೆ ಇಂದಿರಾರಾಧ್ಯ ಸಲಹೆಮ್ಮ 31 37 ಪತಿತ ನಾನಾದರೂ ಪತಿತ ಪಾವನ ನೀನು ರತಿನಾಥ ನಗಪಾಣಿ | ನಗಪಾಣಿ ನೀನಿರಲು ಇತರ ಚಿಂತ್ಯಾಕೊ ಎನಗಿನ್ನು 32 38 ನಡೆ ನುಡಿಗಳಪರಾಧ ಒಡೆಯ ನೀನೆಣಿಸಿದರೆ ಬಡವ ನಾನೆಂತು ಬದುಕಲಿ | ಬದುಕಲಿ ಕರುಣಿಯೆ ಕಡೆ ಬೀಳ್ವುದೆಂತೊ ಭವದಿಂದ 33 39ಏಸೇಸು ಜನ್ಮದಲಿ ದಾಸ ನಾ ನಿನಗಯ್ಯ ಈಶ ನೀನೆಂಬೊ ನುಡಿಸಿದ್ಧ | ನುಡಿಸಿದವಾಗಿರಲು ದಾಸೀನ ಮಾಡೋದುಚಿತಲ್ಲ 34 40ಆವ ಯೋನಿಯಲಿರಿಸು ಆವ ಲೋಕದಲಿರಿಸು ಆವಾಗ್ಯೆ ನಿನ್ನ ನೆನೆವಂತೆ | ನೆನೆವಂತೆ ಕರುಣಿಸೊ ದೇವಕೀಕಂದ ದಯದಿಂದ 35 41ಶಿಷ್ಟನೆಂದೆನಿಸೆನ್ನ ಭ್ರಷ್ಟನೆಂದೆನಿಸು ಸ ಜನರಿಂದ ನುಡಿಸಿದ್ದು
--------------
ಜಗನ್ನಾಥದಾಸರು
3. ದೇವ-ದೇವತೆಗಳ ಸ್ತುತಿ ದೇವಿ ನೀಕರುಣಿಸಮ್ಮಾ|| ಮನದಲಿ ಭಜಿಸುವೆ ತಾಯಿ ಪ ವಾರಿಜಮುಖಿ ನಿನ್ನ ವಂದಿಸುವೆ ನಾನು ದಾರಿದ್ರ್ಯ ಪರಿಹರಿಸಿ ದಯಮಾಡಿ ಸಲಹಮ್ಮಾ 1 ಸಾಗರನ ಸುತೆ ಸಕಲ ಲೋಕ ಮಾತೆ ನಾಗಶಯನ ನುರದಲಿ ನಲಿದಾಡುವಿ 2 ಮದಗಜಗಾಮಿನಿ ಮಹಿಮಾ ಪ್ರಕಾಶಿನಿ ಪದುಮನಾಭನ ಪಟ್ಟಿದ ರಾಣಿ 3 ಚಂದಿರಮುಖಿ ಚಲುವಕಾಂತೆ ಸೀತೇ ಇಂದ್ರಾದಿಗಳಿಗೊಲಿದಿಷ್ಟಾರ್ಥ ವೀಯುವಿ 4 ಅರವಿಂದಾಲಯರನ್ನೆ ಆನಂದ ಪರಿಪೂರ್ಣೆ 'ವರ ಹೆನ್ನೆ ವಿಠಲನ’ ರಮಾ ನಮ್ಮಮ್ಮಾ ಕಾಯಮ್ಮಾ 5
--------------
ಹೆನ್ನೆರಂಗದಾಸರು
4. ವೆಂಕಟವರದಾರ್ಯರ ಹಿಂದಿಮಿಶ್ರಿತ ಕೃತಿ ಶ್ರೀನಿವಾಸ ಪದ ಧ್ಯಾನಕರೋರೆ ಸಾನುರಾಗಯುತ ಮಾನಸ ಮೇರೆ ಪ ಮದಪರಿಪೂರಿತ ಹೃದಯ ಸುನೋರೆ ಸದಯ ಹೃದಯ ಪರಿಪದಮಿಳನಾರೆ 1 ಕಾಮಕ್ರೋಧ ಉಪರಾಮ ಕರೋರೆ ರಾಮಾನಾಮ ಜಪಕಾಮು ಕರೋರೆ 2 ದೇಹಗೇಹಧನ ಮೋಹನಲೇರೆ ಶ್ರೀಹರಿಚರಣ ಕಾಂಹಿ ಚಲೇರೆ 3 ಪುತ್ರ ಮಿತ್ರ ಬಹು ಶತ್ರು ಕು ಮಾರೆ ವೃತ್ರ ವೈರೀಸುತ ಮಿತ್ರನಗಾರೆ 4 ಭಂಗ ಜನ ಸಂಗ ನ ಕರೋರೆ ಮಂಗಳಾಂಗ ನರಸಿಂಹ ಭಜೋರೆ 5 ಸೂಕ್ಷ್ಮಬುದ್ಧಿ ನಿರಪೇಕ್ಷ ಭಲಾರೆ ಮೋಕ್ಷದಾತ ಕಮಲಾಕ್ಷಕು ಲಾರೆ 6 ದಾಸ ಲೋಕ ಸಹವಾಸ ಕರೋರೆ ವಾಸುದೇವ ನಿಜದಾಸಕು ಹೋರೆ 7 ಶ್ರೀಪುಲಿಗಿರಿವರ ಭೂಪ ಮುರಾರೆ ಶ್ರೀಪತಿಘನ ಚಿದ್ರೂಪಕ ಹೋರೆ8 ಪರಮಪುರುಷ ನರಹರಿ ಕರುಣೀರೆ ವರದವಿಠಲ ಕರಿವರ ಧಣೀರೆ 9
--------------
ವೆಂಕಟವರದಾರ್ಯರು
6. ತಾತ್ವಿಕ ಪದಗಳು ಇಲ್ಲವಲ್ಲಾ ಏ ಹರಿಯೆ ಪ ಗಂಧಾರದೊಳು ---ಕೊದ ಪಶುವಂತೆ ಹಿಂದೂ ಮುಂದು ತಿರುಗಿ ತಿರುಗಿ ಬಳಲುವದೊಂದೆ ಅ.ಪ ಕೆಲವು ದಿನವು ಮೇಘದೊಳು ಕೂಡಿ ಅಲ್ಲಿ ಜಾರಿಬೀಳುತಾ ಪರಿಪರಿಯಲ್ಲಿ ಇನ್ನೂ ಚಲನೆಯಿಂದ ಮೇಘ ಜಲದಾರಿಗಳಿಂದ ನೆಲದೊಳಗೆ ಹೊಕ್ಕು ನರಳಾಡುತಾ ಒಲಿದು ಔಷಧಿಗಳ ವಶವಾಗಿ ಧಾನ್ಯದೊಳು ಕಲೆತು ಪಚನೆಯಿಂದ ಬಳಲುತ ನೀ ಅಲ್ಲಿ ಪಕ್ವಾನ್ನಗಳಿಂದ ಪುರುಷನುದರ ಸೇರಿ ನಲಿದಾಡುತಲಿ ಹೋಗೆ ಕೆಲವು ಕಾಲಾದಲ್ಲಿ 1 ಸ್ತ್ರೀ ಪುರುಷ ಸಂಯೋಗದಿಂದ ಸ್ತ್ರೀ ಗರ್ಭದಲಿ ವ್ಯಾಪಿಸಿ ಕೊಂಡಿಯ ರೂಪತೋರುತ ನೀ ತಾಪವು ಬಡುತಾಲಿ ತಾಯಿ ಉದರದಲ್ಲಿ ಪರಿ ನವಮಾಸ ಪರಿಯಂತರದಲಿ ಪರಿ ಮಾಡಿದ ಹಿಂದಿನ ದೋಷಗಳಿಂದ ತನ್ನೊಳು ತನು ತಪಿಸುತಲಿ ದೀಪವಿಲ್ಲದೆ ಗುಡಿಯೊಳಗಿನ ದೇವರಂತೆ ಕೂಪದೊಳಗೆ ಬಿದ್ದು ಕಷ್ಟವ ಪಡುತಲಿ 2 ಎಂದೆಂದು ಬಯಲಿಗೆ ಹೊರಡುವೆಯೆನುತಾಲಿ ಸಂದೇಹ ಪಡುತಾಲಿ ಸರ್ವದಲಿ ಸಂಧಿಸಿಕಾಲದಿ ತಂದೆ ತಾಯಿಗಳಿಗೆ ತನಯನಾಗಿ ಹುಟ್ಟಿ ತೋರುತಲಿ ಕಂದನಾಗಿ ಅತಿ ಕಡುಮೋಹ ತೋರುತ ಸಂದುಹೋಯಿತು ಕಾಲಸ----ದಿನವೂ ಮುಂದು ಗಾಣದೆ ಬಾಲಪ್ರಾಯದ ಹಮ್ಮಿಲಿ ಅಂದದಿ ಆಟಪಾಟಗಳಿಂದ -------ದಿನಾ 3 ವಾರಕಾಂತೇರ ಸಂಗವುದ್ಯೋಗ ವ್ಯವ- ಹಾರ ದೈನಂದಿನ ಕೆಲವು ಕಾಲಾಯಿತು ಕ್ರೂರ ಚೋರ ದುಷ್ಟ ವ್ಯಾಪಾರಗಳ ಕೂಡಿ ಮೀರಿ ಗರ್ವದಲಿನ್ನೂ ಮೈಯ ಸ್ಮರಣೆದಪ್ಪಿ ಕಾಲ ಕೆಲವಾಯಿತು ಪಾರಗಾಣದೆ ಪ್ರಪಂಚದೊಳಗೆ ಬಿದ್ದು ಹೊರಟು ಬಿಡುತಾಲಿ ಹೋಯಿತು ಕೆಲವು ಕಾಲ4 ಸತಿಸುತರ ಸಂಪತ್ತು ಅತಿಮೋಹ ವ್ಯಾಸಂಗ ಕಾಲ ಸಂದು ಹೋಯಿತು ಮಂದ ಬುದ್ಧಿಲಿ ವಾರ್ಧಿಕದಿ ಹಿತಗಳು ತಪ್ಪಿ ಮಾನ ಹೀನನಾಗಿ ಗತಿಯು ಕಾಣದೆ ಘೋರ ಕಷ್ಟಕ್ಕೊಳಗಾಗಿ ಮತಿಯಲ್ಲಿ ಹರಿನಾಮ ಮರೆದು ಹೋಗಿ ಪತಿ ಹೆನ್ನೆ ವಿಠ್ಠಲನ ಪ್ರೀತಿಯ ಪಡೆಯದೆ ಅತಿ ಘೋರತಮಸಿ ಗರ್ಹಾನು ಆಗೊ ಕಾಲಾಯಿತು 5
--------------
ಹೆನ್ನೆರಂಗದಾಸರು
6. ಶಾಮಶರ್ಮರ ಕೇಶವನಾಮ ರಸಾಯನ ಶ್ರೀಕೇಶವ ಸುರಸೇವ್ಯ ನಮೋ ಶ್ರೀಕರ ಜಾಜೀಶ ನಮೋ ಪ ನಾರಾಯಣಶ್ರೀನಾಥ ನಮೋ ನಾರದಾದಿಮುನಿವಂದ್ಯ ನಮೋ 1 ಮಾಧವ ಮಂಗಳನಾಮ ನಮೋ ಭೂದೇವಿ ಭಯನಾಶನಮೋ 2 ಭೋಗಿಶಯನ ಗೋವಿಂದ ನಮೋ ಭಾಗವತಪ್ರಿಯ ಭೋಗ ನಮೋ 3 ಜಗ ಪರಿಪಾಲಕ ವಿಷ್ಣುನಮೋ ಖಗವಾಹನ ಗುಣಪೂರ್ಣ ನಮೋ 4 ಮಧುಸೂದನ ಮತ್ರ್ಪಾಣ ನಮೋ ವಿಧಿಶಿವ ಋಷಿಗಣ ಸ್ತುತ್ಶನಮೋ 5 ವಾಮನ ಮೂರುತಿ ಸ್ವಾಮಿನಮೋ ಭೀಮಾನುಜಪ್ರಿಯ ನಿಗಮನಮೋ 6 ತ್ರಿವಿಕ್ರಮಶ್ರೀವಕ್ಷನಮೋ ಪವಿತ್ರ ಫಲದ ಶ್ಯಾಮ ನಮೋ 7 ಶ್ರೀಧರ ದೇವಾನುತ ನಮೋ ಆಧಾರಮೂರುತಿ ಅಮಿತನಮೋ 8 ಹೃಷಿಕೇಶ ಹೃದ್ವಾಸಿ ನಮೋ ಪಶುಪತಿ ಪಾವನ ಪುಣ್ಯನಮೋ 9 ಪದ್ಮನಾಭ ಪರಮಾತ್ಮನಮೋ ಶುದ್ಧ ಸತ್ವರುಚಿರೂಪನಮೊ 10 ದಾಮೋದರ ದೈತ್ಯಾರಿನಮೋ ಕಾಮಜನಕ ಕರಿವರದ ನಮೋ 11 ಸಂಕರ್ಷಣ ಶೇಷಾಂಶ ನಮೋ ಶಂಖ ಚಕ್ರಗದಾಪಾಣಿ ನಮೋ 12 ವಾಸುದೇವ ವೈಕುಂಠನಮೋ ಭೂಸುರ ಪೂಜಿತ ಪಾದನಮೋ 13 ಪರಮಪುರುಷ ಪ್ರದ್ಯುಮ್ನ ನಮೋ ಶರಣಾಗತ ಜನ ತೋಷ ನಮೋ14 ಅಖಿಲೇಶಾನಿರುದ್ಧ ನಮೋ ಸುಖದಾತಾ ಪರಬ್ರಹ್ಮನಮೋ 15 ಪುರುಷೋತ್ತಮ ಪದ್ಮಾಕ್ಷ ನಮೋ ಸರಸಿಜಭವಪಿತ ಸತ್ಯ ನಮೋ 16 ಅಧೊಕ್ಷಜನತ ರಕ್ಷನಮೋ ಅದ್ಭುತ ಮಹಿಮಾಧಿಕ್ಯ ನಮೋ 17 ಶ್ರೀಲಕ್ಷ್ಮೀನರಸಿಂಹ ನಮೋ ಬಾಲಕ ಭಕ್ತ ಪ್ರೀತ ನಮೋ 18 ಅಚ್ಯುತ ಸಚ್ಚಾರಿತ್ರ ನಮೋ ನಿಶ್ಚಲ ನಿರ್ಮಲ ಚಿತ್ತ ನಮೋ 19 ಜನಾರ್ಧನ ಜಗದೀಶ ನಮೋ ದಿನೇಶಕೋಟಿ ಪ್ರಕಾಶನಮೋ 20 ಉಪೇಂದ್ರ ವಿಶ್ವವ್ಯಾಪ್ತನಮೋ ಉಪಮಾರಹಿತ ಉದಾರಿನಮೋ 21 ಶ್ರೀಹರಿಸಕಲ ಸ್ವರೂಪನಮೋ ಸಾಹಸರಹಿತ ಸುಕಾರ್ಯ ನಮೋ 22 ಶ್ರೀಕೃಷ್ಣ ಪರಂಧಾಮ ನಮೋ ಸಾಕಾರ ಮೋಕ್ಷ ಪ್ರದಾತ ನಮೋ 23 ಜಯಮಂಗಳಂ ಶ್ರೀರಂಗನಮೋ ಜಯಮಂಗಳಂ ಭವಭಂಗನಮೋ 24
--------------
ಶಾಮಶರ್ಮರು
ಅಚ್ಯುತ ಅಡಿಗಡಿ ಗೆಚ್ಚರಿಕ್ಹೇಳುತಾನೋ ಪ ಮೆಚ್ಚಿ ಬಿಡದೆ ಎನಗೆಚ್ಚರಿಕ್ಹೇಳುತಾನೋ ಹುಚ್ಚರಾಗಿ ಇಹ್ಯಮೆಚ್ಚಲು ಮುಂದೆಮ ಕಿಚ್ಚುಕಾಣೆನುತಾನೋಅ.ಪ ನಿಂದೆ ಬಿಡೆನ್ನುತಾನೋ ಜಗವಿದು ಕುಂದುವುದೆನುತಾನೋ ನಿನಗಿದು ಒಂದು ಇಲ್ಲೆನುತಾನೋ ಬಂದದ್ದು ತಿಳೀದಿರೆ ಮುಂದೆ ನಿನಗೆ ಭವಬಂಧ ಬಿಡದೆನುತಾನೋ 1 ನಿಶ್ಚಲಾಗೆನ್ನುತಾನೋ ಮನ ಬಹು ಸ್ವಚ್ಛಮಾಡೆನ್ನುತಾನೋ ತನು ಮುಚ್ಚಿ ಭಜಿಸೆನ್ನುತಾನೋ ಬಚ್ಚಿಟ್ಟು ಭಜಿಸಲು ಇಚ್ಛೆಯಂತಿರ್ದು ನಿನ್ನ ಮೆಚ್ಚಿಕೊಂಬೆನ್ನುತಾನೋ 2 ಮರೆವು ತಾರೆನುತಾನೊ ನಿಚ್ಚವಾ ದರಿವು ತಿಳಿಯೆನುತಾನೋ ಅರಿವಿನ ಕುರಹು ಕಾಣೆನುತಾನೋ ಪರಮ ಶ್ರೀರಾಮನ ತರಣಿ ಕಂಡು ಹರಷದ್ಹಾಡೆನುತಾನೋ 3
--------------
ರಾಮದಾಸರು