ಒಟ್ಟು 39 ಕಡೆಗಳಲ್ಲಿ , 20 ದಾಸರು , 37 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಹರಿ ಮಾಡ್ದ ಮರ್ಯಾದೆ ಅನುಭವಿಸಲೀ ಬೇಕು ಸರಸಿಜಭವಾದ್ಯರಿಗೆ ಬಿಡದು ಪ ವರಕಲ್ಪ ಕಲ್ಪದಲಿ ಮೀರಿದವರುಂಟೆ ನಿಂ ದಿರದಾವ ಜನುಮವಾಗೆ ಪ್ರಾಣಿ ಅ.ಪ. ವಾರಿಜಭವನ ನೋಡು ಮುನಿಶಾಪದಿಂ ಧಾರುಣಿಯೊಳು ಪೂಜೆ ತೊರೆದ ಪ್ರಾರಬ್ಧ ನಿರ್ದೋಷಿಗಾದರೂ ತಪ್ಪದವ- ತಾರವಿಲ್ಲದವನಾದನೋ ಪ್ರಾಣಿ1 ಜಗಕೆ ಗುರುವೆಂದೆನಿಸಿಕೊಂಡ ಪ್ರಾಣನ ನೋಡು ಯುಗದೊಳಗೆ ಕೋತ್ಯಾದನಲ್ಲೋ ಮಗುಳೆ ಮಾತನು ಕೇಳು ಕಚ್ಚುಟವ ಧರಿಸಿದ ಅಗಣಿತ ಸತ್ವನಿಗೆ ಈ ಪರಿಯೆ ಪ್ರಾಣಿ 2 ಶಿವನ ನೋಡೋ ಮರುಳೆ ದೂರ್ವಾಸ ಮುನಿಯಾಗಿ ಅವನಿಪತಿ ಮೊರೆ ಹೊಕ್ಕನಲ್ಲೊ ಭುವನದೊಳಗೆಂದೆಂದು ವ್ರಣದಿಂದ ದುರ್ಗಂಧ ಸ್ರವಿಸುವುದು ಶಿರಸಿನಲ್ಲೀ ಪ್ರಾಣಿ 3 ಇಂದ್ರ ತರ್ಕವನೋದಿ ನರಿಯಾದ ಪರಸತಿ- ಯಿಂದ ಮೇಷ ವೃಷಣನಾಭ ಕಂದರ್ಪ ಶರೀರದಿಂದ ನಾಶನನಾಗಿ ಬಂದ ಮೀನಿನ ಗರ್ಭದಿಂದ ಪ್ರಾಣಿ4 ಸೂರ್ಯ ಚಂದ್ರರ ನೋಡು ಮೂಲ ರೂಪದಿ ಪರ ಭಾರ್ಯರಿಗೆ ಶಿಲುಕಿ ತಮ್ಮಾ ವೀರ್ಯವನು ಕಳಕೊಂಡು ಬರಿದಾದರೋ ಕರ್ಮ- ಕಾರ್ಯ ವಾರಿಗು ಬಿಡದೆಲೋ ಪ್ರಾಣಿ 5 ಪಾವಕನು ಸರ್ವಭಕ್ಷಕನಾದ ಮಿಕ್ಕಾದ ಅವಾವ ಸುರರ ಕರ್ಮಂಗಳ ಯಾವತ್ತು ವರ್ಣಿಸಲಳವಲ್ಲ ಎಚ್ಚತ್ತು ಪಾವನ್ನ ನೀನಾಗೆಲೋ ಪ್ರಾಣಿ 6 ಆವಾವ ಸ್ಥಳದಲ್ಲಿ ಜನನ ಸ್ಥಿತಿಗತಿ ಮತ್ತೆ ಸಾವು ಸಾಕಲ್ಯದಿ ಮರೆಯದಲೆ ಕ್ಲುಪ್ತ ಮಾಡಿಪ್ಪನೋ ಅದನು ಆವನಾದರು ಮೀರಲೊಳÀವೇ ಪ್ರಾಣಿ 7 ಉಣಬೇಕು ಉಣಬೇಕು ಮತ್ತೆ ಉಣಲೀಬೇಕು ತ್ರಿ-ಗುಣ ಕಾರ್ಯರ ಭವಣೆ ಮನುಜ ತೃಣ ಜನ್ಮ ಬಂದ ಕಾಲಕ್ಕು ತ್ರೈತಾಪಗಳು ಅಣುಮಾತ್ರವೂ ತಪ್ಪವೋ ಪ್ರಾಣಿ 8 ಧೀರನಾಗಲಿ ಮಹಾಶೂರನಾಗಲಿ ಮತ್ತೆ ಧಾರುಣೀಪತಿ ಭಾಗ್ಯನಾಗೆ ಆರಿಗಾದರು ಬಿಡದು ಪರೀಕ್ಷಿತರಾಯನು ನೀರೊಳಗಿದ್ದ ತಿಳಿಯೋ ಪ್ರಾಣಿ 9 ಜಲಗಿರಿವನ ಪೊದೆ ಹೊದರು ಗಹ್ವರ ಹುತ್ತ- ಬಿಲ ಸಪ್ತದ್ವೀಪ ಪಾತಾಳದಿ ನಭ ಸ್ವರ್ಗಾದಿಲೋಕ ಜನನಿಯ ಜಠರ- ದೊಳಗಿರೆ ತಪ್ಪುವುದೆ ಬರಹಾ ಪ್ರಾಣಿ 10 ಅಣಿಮಾದಿ ಅಷ್ಟಾಂಗ ಯೋಗ ಮಾಡಲು ಮಹಾ ಗುಣವಂತ ಜನರು ಒಂದು ಕ್ಷಣವ ಮೀರಲುಬಹುದೆ ಮೃತ್ಯು ಬಂದೆದುರಾಗಿ ಸೆಣಸುತಿರೆ ಬೇರುಂಟೆ ಕಾರ್ಯ ಪ್ರಾಣಿ 11 ಎಲ್ಲೆಲ್ಲೆ ಅನ್ನ ಮತ್ತೆಲ್ಲೆಲ್ಲಿ ಉದಕ ಇ- ನ್ನೆಲ್ಲೆಲ್ಲಿ ನಿದ್ರೆ ಜಾಗರಣಿಯೊ ಎಲ್ಲೆಲ್ಲಿ ಹೆಜ್ಜೆಗಳನಿಡುವ ಪರಿಮಿತಿಯುಂಟೊ ಅಲ್ಲಿಲ್ಲಿಗೊಯ್ಯುವುದೊ ಬಿಡದೆ ಪ್ರಾಣಿ 12 ಧಿಕ್ಕಾರ ಸತ್ಕಾರ ನಿಂದೆ ವಂದನೆಗಳು ರೊಕ್ಕಾ ಸುಖ ದುಃಖ ಕಾರಣಗಳು ಉಕ್ಕೇರಿದಂತೆ ಬರುತಿಹುದೊ ನಮ್ಮ ದೇ- ವಕ್ಕಿ ಕಂದನ ಆಜ್ಞಯಿಂದ ಪ್ರಾಣಿ 13 ಕಾಶಿಯಲ್ಲಿರೆ ಮರಣ ಆವಲ್ಲಿ ಇಪ್ಪುದಾ- ದೇಶಕ್ಕೆ ಒಯ್ಯುವುದು ಕಾಲ ಕಾಶಿರಾಯನ ನೋಡು ಒಡನೆ ಅಪಮೃತ್ಯು ವೇದ- ವ್ಯಾಸರಿದ್ದರು ತಪ್ಪಲಿಲ್ಲ ಪ್ರಾಣಿ 14 ಮಾರುತ ಭಾರತಿ ಶೇಷ ಶಿವ ಪಾರ್ವತಿ- ಸರಸಿಜ ಬಾಂಧವಾಗ್ನಿ ಧರ್ಮ ಕಾಲ ಮೃತ್ಯು ಕಾಲನ ದೂತರು ಅರಸುತಿಪ್ಪರು ಲವ ತೃಟಿಯ ಪ್ರಾಣಿ 15 ಇವರಿವರಿಗುತ್ತಮರು ಇವರಿವರಗಧಮರು ಇವರೆಲ್ಲರಿಗೆ ಶ್ರೀ ಭೂಮಿ ದುರ್ಗಾ ಅವಳಿಗೆ ಶ್ರೀ ಹರಿಯು ತಾನೆ ನಿಯಾಮಕನು ವಿವರದಲಿ ತಿಳಿ ತಾರತಮ್ಯ ಪ್ರಾಣಿ 16 ಲಕುಮಿ ಮೊದಲು ಮಾಡಿ ಇವರೆಲ್ಲರಿಗೆ ಲೇಶ ಶಕುತಿಯಿಲ್ಲವೊ ಕಾಣೊ ಮರುಳೆ ಅಕಟಕಟ ಗುಣಪೂರ್ಣ ಸರ್ವ ಸ್ವಾತಂತ್ರ ವ್ಯಾ- ಪಕ ಸರ್ವಾಂತರ್ಯಾಮಿಯೆನ್ನೋ ಪ್ರಾಣಿ 17 ಕರುಣಾ ಕಟಾಕ್ಷವುಳ್ಳನಕ ಸುರ ನರೋರಗ ಯಕ್ಷಲೋಕದಲ್ಲಿದ್ದವರು ಬರಿದೆ ಕೂಗಿದರೇನು ಆಹುದೋ ಪ್ರಾಣಿ 18 ಕಾಲ ತಪ್ಪಿಸಿ ಕಾವ ಹರಿತಾನು ಸಾವ ಕಾಲವ ಮಾತ್ರ ತಪ್ಪಿಸನೋ ಕಾವ ಕೊಲ್ಲುವ ಸ್ವಾಮಿ ಕಾಲನಾಮಕ ಪುರುಷ ಜೀವಿಗಳು ಮುಖ್ಯವಲ್ಲ ಕಾಣೋ ಪ್ರಾಣಿ 19 ಭಗವವÀಸ್ವತಂತ್ರವನು ತಿಳಿಯದೆ ಮರುಳಾಗಿ ಜಗದೊಳಗೆ ಚರಿಸದಿರೊ ಮಾನವ ಅಘ ದೂರನಾಗೊ ನಾನಾ ಬಗೆಯಿಂದಲ- ನ್ಯಗರ ಚಿಂತೆಗಳಲ್ಲಿ ಬಿಟ್ಟು ಪ್ರಾಣಿ 20 ಹಲವು ಮಾತೇನಿನ್ನು ದಾಸಭಾವವ ವಹಿಸಿ ಕಲಿಯುಗದೊಳಗೆ ಸಂಚರಿಸೆಲೊ ಬಲವಂತ ವಿಜಯವಿಠ್ಠಲನ ಪಾದಾಂಬುಜವ ನಿಲಿಸಿ ವಲಿಸಿಕೊ ಮನಸಿನಲ್ಲಿ ಪ್ರಾಣಿ 21
--------------
ವಿಜಯದಾಸ
ಹರಿಭಜನವೇ ಬಹುಮಿಗಿಲು ನರನಿಗೆ ಧರೆಯಸುಖವೆಲ್ಲ ಸುಳ್ಳೊ ಸುಳ್ಳೋ ಪ ತಂದೆತಾಯಿಗಳು ಮಂದಿ ಮಕ್ಕಳು ಬಂಧುಬಳಗ ಒಂದು ಸಂಬಂಧವಿಲ್ಲ 1 ಕೋಟಿಕೊತ್ತಲ ಕೋಟಿಧನಬಲ ನೀಟಾದ ಮಹಲು ನಿಜವಿಲ್ಲ ಇಲ್ಲ 2 ರಾಜ್ಯಭಂಡಾರ ಪ್ಯಾಟೆ ತೇಜಿ ಆನೆ ಒಂಟಿ ರಾಜಿಪುದೆಲ್ಲ ಸುಳ್ಳ ಮುಷ್ಟಿಮುಷ್ಟಿ 3 ಸಿರಿ ಅಂದಣ ಭಾರಿ ನಂದಿಪೋಗುವುದೆಲ್ಲ ಹಾರಿ ಹಾರಿ 4 ವರದ ಶ್ರೀರಾಮನ ಚರಣಸ್ಮರಣಿಲ್ಲದ ನರರ ಜನುಮವೆಲ್ಲ ಹಾಳು ಹಾಳು 5
--------------
ರಾಮದಾಸರು
ಈ ಕಾರಣ ಹರಿನಾಮವ ನೆನೆಯಲಿಬೇಕಾಲಸ್ಯವಿಲ್ಲದಲೆಭೀಕರ ಯಮಭಟರಂತ್ಯದಿ ಕವಿಯಲಿನೂಕುವುದೀ ಅಸ್ತ್ತ್ರದಲಿ ಪ.ಷೋಡಶ ಉಪಚಾರದ ಪೂಜಾವಿಧಿಮಾಡುವ ಪಕ್ವಗೆ ಸಾಧ್ಯ ತಾಮಾಡೇನೆಂದರಗಾಧಮಾತಾಡಿದರೇನದಸಾಧ್ಯರೂಢಿಲಿ ಶ್ರೀಹರಿಗುಣ ಸಂಕೀರ್ತನೆಪಾಡಿದರತಿ ಆಹ್ಲಾದ 1ಸುಜ್ಞಾನಿಗಳ್ಹರಿ ಮೆಚ್ಚಿಸಿದರೆ ಅನಭಿಜÕರಿಗೆಲ್ಲಿಯ ಜ್ಞಾನಭವಸುಗ್ಗಿಯೊಳೆಲ್ಲಿ ಧ್ಯಾನ ವೈರಾಗ್ಯದ ನಡೆಯು ಕಠಿಣ ಅನಘ್ರ್ಯದ ಭೋಜನ ದೊರೆತಿದೆ ಹರಿನಾಮಂಗಳೆ ಅಮೃತದ ಪಾನ 2ಈ ಜನುಮವು ಜಗುಳುವ ಮುನ್ನಖಗರಾಜಗಮನ ರಂಗನ್ನ ಸರ್ವದಾ ಜಪಿಸುವನೆ ಧನ್ಯ ಸುಖಬೀಜವಿದೆನ್ನಿತ್ರಿಜಗತ್ಪತಿ ಪ್ರಸನ್ವೆಂಕಟರಾಯನಸೋಜಿಗನಾಮಂಗಳಣ್ಣ3
--------------
ಪ್ರಸನ್ನವೆಂಕಟದಾಸರು
ಕರುಣಿಸೊ ಕರುಣಾಸಾಗರ ನರಹರಿಯೆ ನಿನ್ನಚರಣದಾಚರಣೆಗೆಚ್ಚರಾದರನು ಪ.ಮನ ಮಲಿನವ ತೊಳೆದನುದಿನ ದೃಢದೊಳುಜ್ಞಾನ ಭಕ್ತಿ ವಿರಕ್ತಿಯ ಘನಾಸಕ್ತಿಯಮನಗಂಡು ಮುದವಂತರೆನಿಸಿ ನಾಮಾಮೃತಉಣಬಲ್ಲ ಪೂತಾಂಗ ಮಾನಿಸರ ಸಂಗ 1ಸಭ್ಯರ ದೂಷಣ ಕೇಳುಬ್ಬಸ ಶ್ರವಣಕೆಇಬ್ಬರ ಕಲಹದಿ ಶಬ್ದಗುಂದಿಅಬ್ಜನಾಭನ ಬಿರುದುಬ್ಬುಬ್ಬಿ ಸುಖವೇರಿಕೊಬ್ಬಿ ಕುಣಿವ ಶಂಲಬ್ಧರೂಳಿಗವ 2ವೃಂದಾವನದಲಿ ಮುಕುಂದನಾಲಯದಮುಂದಾ ದಿಗಿದಿಗಿತ ವಾದ್ಯವಂದನಿಂದತಂದೆ ಪ್ರಸನ್ನವೆಂಕಟೇಂದ್ರ ನಿನ್ನ ಮುದ್ರಾಂಕಹೊಂದುವ ಜನುಮವ ಆನಂದಮುನಿಮತವ 3
--------------
ಪ್ರಸನ್ನವೆಂಕಟದಾಸರು
ನಿನ್ನ ನೋಡಿ ಧನ್ಯನಾದೆನೊ ಶ್ರೀಕೃಷ್ಣ ದಯದಿಮನ್ನಿಸಯ್ಯ ಮರೆಯ ಹೊಕ್ಕೆನು ಪಅನ್ನಪಾನದಿಂದ ಬೆಳೆದ ತನುವು ಸ್ಥಿರವಿದೆಂದು ನಂಬಿಮುನ್ನ ಮತಿಹೀನನಾಗಿ ನಿನ್ನ ಸ್ಮರಣೆ ಮರೆತೆ ಅ.ಪಮಾಯ ಪಾಶದಲಿ ಸಿಲುಕಿದೆಯನ್ನನಗಲಿ ಅಳಿದ ತಾಯಿತಂದೆಯರಿಗೆ ಮರುಗಿದೇ ಪ್ರಿಯಮಡದಿ ಪರಸ್ತ್ರೀಯರಲಿ ಮೋಹವೆರಸಿಮರುಳನಾದೆಕಾಯಸುಖವನೆಣಿಸಿಸರ್ವೇ ನ್ಯಾಯ ತಪ್ಪಿ ನಡೆದೆ ಕೃಷ್ಣಾ 1ಹಲವು ಜನ್ಮವೆತ್ತಿ ತೊಳಲಿದೇ ತರಳನೆನಿಸಿಹಲವು ಜಾತಿ ಮೊಲೆಯ ಭುಜಿಸಿದೆಹಲವು ದೇಶಗಳನು ಸುತ್ತಿ ಹಲವುಕ್ರೂರಕೃತ್ಯ ಗೈದೆ ತಲೆಯ ಹಿಂದೆಇರುವ ಮೃತ್ಯು ನೆಲೆಯನರಿಯದಿರ್ದೆ ಕೃಷ್ಣಾ 2ಆಶಾಪಾಶಗಳಲಿ ಸರ್ವ ದೋಷ ಮೋಸವೆಣಿಸದಾದೆಲೇಸ ಕಾಣೆ ಮುಂದೆ ಯಮನ ಪಾಶಕರ್ಹನಾದೆ ಕೃಷ್ಣಾ3ಅರಿಗಳಾರು ಮಂದಿ ದೇಹದಿ ನೆಲಸಿರ್ದು ಎನ್ನಮರುಳುಗೊಳಿಸೆ ಇಂದ್ರಿಯ ಸಹಾಯದಿನರವು ಮಾಂಸ ಅಸ್ಥಿಯಿಂದ ವಿರಚಿಸಿದ ದೇಹವಿದನುಪರಿಪರಿಯ ಶೃಂಗರಿಸುತ ಸ್ಮರನ ತೆರದಿ ಮೆರೆದೆ ಕೃಷ್ಣಾ 4ಒಂದು ದಿನವು ಸುಖವ ಕಾಣೆನೂ ಈ ಜೀವನಸಂಬಂಧಿಗಳ್ಯಾರೆಂಬುದನರಿಯೆನೂಬಂಧು ನೀನೇ ಸರ್ವಪ್ರದನು ಮುಂದೆ ಜನುಮವೆತ್ತದಂತೆಬಂದು ಎನ್ನ ಸಲಹೋ ಗೋವಿಂದದಾಸನೊಡೆಯ ಕೃಷ್ಣಾ 5
--------------
ಗೋವಿಂದದಾಸ
ಸುಮ್ಮನೆ ಕಾಲವ ಕಳೆವರೆ - ಯಮ - |ಧರ್ಮರಾಯನ ದೂತರೆಳೆಯರೆ ಪ.ನರಿ - ನಾಯಿ ಜನುಮವು ಬಾರದೆ - ಹಾಗೆ - |ನರಜನ್ಮದಲಿ ಬಂದು ಸೇರದೆ ||ಹರಿಯ ಸ್ಮರಣೆ ಮಾಡಲಾರದೆ - ಸುಮ್ಮ |ನಿರಲು ಪಾಪದ ವಿಷವೇರದೆ 1ಬಾಲನಾಗಿದ್ದಾಗ ಬಹುಲೀಲೆ - ಮುಂದೆ |ಲೋಲನಾಗಿ ಬಾಳಿದ ಮೇಲೆ ||ಮೂಳ ವೃದ್ಧಾಪ್ಯ ಬಂತಾಮೇಲೆ - ಇನ್ನು - |ಬಾಳುವುದೆಲ್ಲ ನೂಲಮಾಲೆ 2ಮಡದಿ - ಮಕ್ಕಳ ಕೂಡಣ ಬಾಳು - ತನ್ನ |ಒಡಲಿಗಾಗೆ ತಾನು ಕರವಾಳು ||ಬಿಡದೆ ಸಂಕೀರ್ತನೆ ಮಾಡೇಳು - ಮಿಕ್ಕ - |ನುಡಿದ ನುಡಿಗಳೆಲ್ಲವು ಬೀಳು 3ಮನೆಮನೆ ವಾರ್ತೆಯು ಸ್ಥಿರವಲ್ಲ - ಈ |ಮನುಜರ ಮಾತೇನು ಘನವಲ್ಲ ||ವನಜಸಂಭವಗೂ ನಿಶ್ಚಯವಿಲ್ಲ - ಮುಂದೆ |ಹನುಮಂತ ಪಟ್ಟಕೆ ಬಹನಲ್ಲ 4ಇಂದಿನಹಮ್ಮು ನಾಳೆಗೆ ಇಲ್ಲ -ಭವ |ಬಂಧನದೊಳು ಸಿಕ್ಕಿ ನರಳಿದೆನಲ್ಲ ||ಮುಂದನರಿತು ನಡೆದುದಿಲ್ಲ - ಮೃತ್ಯು |ಬಂದಾಗ ಬಿಡಿಸಿಕೊಳ್ಳುವರಿಲ್ಲ 5ಮರಣವುಆವಾಗ ಬರುವುದೋ - ತನ್ನ |ಶರೀರವುಆವಾಗ ಮುರಿವುದೊ ||ಕರಣಂಗಳೆಲ್ಲವು ಜರಿವುದೊ - ತನ್ನ |ಗರುವದುಬ್ಬಸವೆಲ್ಲ ಮುರಿವುದೊ 6ಮರಣಕಾಲಕೆ ಅಜಮಿಳನಾಗ - ತನ್ನ |ತರಳನನಾರಗನೆಂದು ಕರೆದಾಗ ||ಕರುಣದಿ ವೈಕುಂಠ ಪದವೀಗ -ನಿತ್ಯ - |ಪುರಂದರವಿಠಲನ ನೆನೆ ಬೇಗ 7
--------------
ಪುರಂದರದಾಸರು
ಹರಿಹರಿಯೆ ಕಡೆಗಾಣೆನೈ ಜನುಮವಭವಕಡಲ ತಡಿಯ ಸೇರಿಸುಮಾಧವಪ.ವಿಷಯಾಸೆ ತೆರೆಗಳಲ್ಲಿ ಗೃಹವೆ ಗ್ರಹವಿಷಮ ಸತಿಸುತ ಗುಲ್ಮವು ವಡವಾಗ್ನಿಹಸಿವುತೃಷೆದಹಿಸಿತೆನ್ನ ಇದರೊಳಾಲಸಿಕೆಸುಳಿಭ್ರಮಣ ಘನ್ನ1ಷಟ್ಚರ್ಯ ಹಡಗದವರು ಬಿಡದೆ ಬೆನ್ನಟ್ಟಿ ಬಡಿದಂಜಿಸುವರು ಮನವಾಯುವಿನಟ್ಟುಳಿಗೆ ನಿಲವಿಲ್ಲವು ಇಂದ್ರಿಯಜಂತುಕಟ್ಟಿಲ್ಲದೆಳೆದೊಯ್ವವು 2ಸಂಸಾರಸಾರಫೇನ ಭುಂಜಿಸಲುಸಂಶಯದ ರೋಗ ನವೀನ ದುರಿತಾಂಬುಹಿಂಸೆ ಮಾಡದೆ ಉಳುಹಿತು ಅಜÕವ್ಯಾಳದಂಶ ಕ್ಷಣಲವಕಾಯಿತು 3ಸುಖವೆ ಬೊಬ್ಬುಳಿ ರಾಶಿಯು ಬಂಧು ಬಳಗಸಖಸ್ನೇಹ ಪಾಶಲತೆಯು ಅಹಿತಾಗಮ ಕಠೋರ ದುಶ್ಯಬ್ದಕೆಸ್ಮøತಿಹೋಗಿಚಕಿತನಹೆ ದೀನಬಂಧು 4ಇಂತು ಬಳಲುವುದ ನೋಡಿ ಸಿರಿಲಕುಮಿಕಾಂತ ನಿರ್ದಯನಾದೆ ನೀ ಪ್ರಸನ್ನವೆಂಕಟಕಾಂತ ಸಂತರ ಕೂಡಿಸೊ ಶ್ರೀ ಮೂರುತಿಅಂತ್ಯಯಾತ್ರೆಗೆ ಉದಯಿಸೊ 5
--------------
ಪ್ರಸನ್ನವೆಂಕಟದಾಸರು