ಒಟ್ಟು 78 ಕಡೆಗಳಲ್ಲಿ , 45 ದಾಸರು , 74 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ನಮ್ಮ ಗೋವಿಂದನ ಭಜಿಸುವೆ ಸತ್ಯ ನಿತ್ಯ ಪ ಹಿಂದಿನ ಜನ್ಮದಿ ಕಾಯ್ದ ಶ್ರೀಧರನ ಚಂದದಿ ನರಜನ್ಮಕ್ಕೆಳತಂದ ಪರಿಯ 1 ಜನನಿಯ ಜಠರದಿ ಕಾಯ್ದ ಶ್ರೀಧರನ ಜನನ ಕಾಲಕೆ ಬಂದೊದಗಿದ ಪರಿಯ 2 ಕಾಲಕಾಲಕೆ ಬಂದು ಸಲಹಿದ ಪರಿಯ 3 ದುಷ್ಟ ಜನರ ಕಾಟ ಬಿಡಿಸುವ ಪರಿಯ4 ದೀನರಿಗೊದಗುತ್ತ ಕಾಯ್ವ ಶ್ರೀಧರನ ಚನ್ನಕೇಶವ ದೇವನೆಂಬ ಶ್ರೀ ಹರಿಯ5
--------------
ಕರ್ಕಿ ಕೇಶವದಾಸ
ನಾನಾ ಯೋನಿಗಳೊಳು ಹೀನಜನ್ಮದಿ ಬಂದು ನಾನು ತಿರುಗಲಾರೆನೊ ಗೋಪಾಲ ಪ. ಶ್ರೀನಿವಾಸ ನಿನ್ನ ಸೇರಿದ ಬಳಿಕ ಉದಾಸೀನ ಮಾಳ್ಪರೇನೋ ಗೋಪಾಲ ಅ.ಪ. ಇಂದ್ರಿಯದೊಳಿದ್ದೆನೊ ಗೋಪಾಲ ಪಿಂಡವಾದೆನೊ ಗೋಪಾಲ ಮಾಸ ನಾಲ್ಕಯಿದಾಗಲ ವಯವಂಗಳಿಂದ ಬೆಳೆವುತಿದ್ದೆನೊ ಗೋಪಾಲ 1 ನರಳಿ ಕೋಟಲೆಗೊಂಡೆನೊ ಗೋಪಾಲ ಹಿರಿದು ಚಿಂತಿಸಿದೆನೊ ಗೋಪಾಲ ಕಷ್ಟಬಡುತಿದ್ದೆನೊ ಗೋಪಾಲ ಸಂದ ಧರೆಗೆ ಪತನವಾದೆನೊ ಗೋಪಾಲ2 ಘಾಸಿಯೊಳೊರಲುವೆನೊ ಗೋಪಾಲ ಘಾಸಿಸಿ ದುಃಖಿಪೆನೊ ಗೋಪಾಲ ಬ್ಯಾಸತ್ತು ಒರಲುವೆನೊ ಗೋಪಾಲ ಶ್ವಾಸ ಎತ್ತಿದೆನೊ ಗೋಪಾಲ 3 ಬಾಲತನದಿ ಬಹುವಿಧದಾಟವ ತೋರಿ ಮೇಲನರಿಯದಿದ್ದೆನೊ ಗೋಪಾಲ ಮಾರ್ಜಾಲ ಘಾತಕನಾಗಿದ್ದೆನೊ ಗೋಪಾಲ ಕೂಳಿಗೀಡಾಗಿದ್ದೆನೊ ಗೋಪಾಲ ಪಾಳೆಯಕೀಡಾದೆನೊ ಗೋಪಾಲ 4 ಆಗಿ ಬಾಳುತಲಿದ್ದೆನೊ ಗೋಪಾಲ ನೀಗಿ ಬಾಳುತಿದ್ದೆನೊ ಗೋಪಾಲ ಬಾಧೆಗೆ ಬೆಂಡಾದೆನೊ ಗೋಪಾಲ ಆಗಲು ಪುತ್ರ ಬಾಂಧವರಿಗೋಸ್ಕರ ಭವ- ಸಾಗರ ಎತ್ತಿದೆನೊ ಗೋಪಾಲ 5 ಬಾಲ್ಯಯೌವನವಳಿದು ಜರೆ ಒದಗಿ ನಾನು ಮೇಲೇನರಿಯದಿದ್ದೆನೊ ಗೋಪಾಲ ಬೀಳುತೇಳುತಲಿದ್ದೆನೊ ಗೋಪಾಲ ಹೋದಂತಿದ್ದೆನೊ ಗೋಪಾಲ ಗೂಳಿಯಂದದಲಿದ್ದೆನೊ ಗೋಪಾಲ 6 ಬಾಳುತಲಿದ್ದೆನೊ ಗೋಪಾಲ ಗಿಷ್ಟನೆನಿಸಿಕೊಂಡೆನೋ ಮುಟ್ಟರೆನಿಸಿಕೊಂಡೆನೊ ಗೋಪಾಲ ಕೊಟ್ಟು ತಿನಿಸಿದೆನೊ ಗೋಪಾಲ7 ವೇದನೆಗೊಳುತಿದ್ದೆನೊ ಗೋಪಾಲ ಕೊಂಡದಿ ಬಿದ್ದೆನೊ ಗೋಪಾಲ ಗುಹ್ಯ ಯಾತನೆಗೊಳಗಾದೆ ಗೋಪಾಲ ಬಾಧೆಯೊಳು ಒರಲುವೆನೊ ಗೋಪಾಲ 8 ನಿನ್ನ ನೆನೆಯದಿದ್ದೆನೊ ಗೋಪಾಲ ದುಷ್ಟಬುದ್ಧಿಯೊಳಿದ್ದೆನೊ ಗೋಪಾಲ ಶ್ರೇಷ್ಠಜನ್ಮದಿ ಬಂದೆನೊ ಗೋಪಾಲ ಸೃಷ್ಟಿಯೊಳು ತುರುಗೇರಿ ಗುರು ಅಚಲಾನಂದವಿಠಲ ಸಲಹೆಂದೆನೋ ಗೋಪಾಲ 9
--------------
ಅಚಲಾನಂದದಾಸ
ನಾರಾಯಣ ನರಹರಿಯೆ ನರ ಜನ್ಮದಿ ಸಿಲುಕಿದೆನು ಮರಳಿ ಜನಿಸದಂದಲೆನ್ನ ಕರುಣಿಸೋ ಕ್ಷೀರವಾರಿಧಿಶಯನ ಪ ಮುರಹರ ಮಧುಸೂಧನ ಶ್ರೀಹರಿ ಧರಣೀಧರ ವರಾಹ ನಾರಾಯಣ ವಟು ವಾಮನ ಕೇಶವ ವಾರಿಜದಳನಯನ 1 ನಂದನಂದನ ಹರಿಯೆ ನಾರದವಂದಿತ ಸುರ ಸಂಹಾರಿ ಮಂದಜಾಯತನಯನ 2 ಅರಿಗದೆ ಶಂಖಾಬ್ಜ ಕರದೊಳು ಮೆರೆವ ಪೀತಾಂಬರ ಧಾರಿ ಕರಿವದನನೆ ಕಾಳಿಂಗಮರ್ಧನ ಸರಸಿರುಹದಳನಯನ 3 ಮುಳುಗಿದೆನು ಎತ್ತು ಕಮಲನಯನ 4 ಬಲ್ಲುದೇ ಕರು ಎತ್ತಿಕೋ ಹರಿಯೇ 5
--------------
ಕವಿ ಪರಮದೇವದಾಸರು
ನಾರಾಯಣನಿನ್ನಪಾರಾಯಣಗೈವ ಧೀರತನವಪಾಲಿಸೋ ಪ ತೀರಕೆನ್ನನು ಸೇರಿಸೋ ಅ.ಪ ಜನ್ಮದಿ ತೊಳಲುತ ಖಿನ್ನನಾಗಿ ವರ್ಣಶ್ರೇಷ್ಠಕುಲದಿ ಬಹುಪುಣ್ಯದಿ ಘನ್ನ ಮಹಿಮನೆ ನಿನ್ನ ಸೇವೆಯೊ ಳುನ್ನತದ ರತಿಯನ್ನು ಪಾಲಿಸಿ 1 ಅಷ್ಟಯೋನಿಗಳಲ್ಲಿ ಹುಟ್ಟಿ ಸಾಯುತ ಬಲು ಕೆಟ್ಟಕರ್ಮವ ಮಾಡಿ ಕಷ್ಟಪಟ್ಟು ಎಷ್ಟು ನಿನಗೆ ಮೊರೆಯಿಟ್ಟು ಬೇಡಲು ಎಳ್ಳಿ ನಷ್ಟು ಕಾರುಣ್ಯವು ಪುಟ್ಟದೇನೋ ಕಟ್ಟಕಡೆಯೊಳು ನಷ್ಟಪಡಿಸುವೆ ದಿಟ್ಟರಾರೈ ಇಷ್ಟ ಮೂರುತಿ 2 ಪರಮೇಷ್ಟಿ ಪುರದೊಳಗಿರಲಾನೊಲ್ಲೆನು ನಿನ್ನ ನಿರುತ ನಿನ್ನಯ ಚರಿತೆಯಲಿ ಮನ ವಿರಲಿ ನಾನಾತೆರದ ಭಕ್ತಿಯೊಳು ಪರಮ ಪುಲಿಗಿರಿ ವರದವಿಠಲ 3
--------------
ವೆಂಕಟವರದಾರ್ಯರು
ನೀ ಬುದ್ಧಿ ಕೊಡದಿರಲು ಮನುಜ ಪಶುವೊ ಜೀವ ಪಶುವೊ ಪ ಶ್ರೀ ಭೂಮಿ ದುರ್ಗೇಶ ಗೋವಿಂದ ಪರಿಪೂರ್ಣ ಅ.ಪ ಜಡಜನ್ಮದಿಂದಲೆ ದ್ವಿಜ ಜನ್ಮ ಬಂದಿಹುದು ಒಡೆಯಾ ನಮ್ಮೆತ್ನವೇ ಸತ್ಯ ಪೇಳೊ ಕಡುನಿದ್ರೆಯಲಿ ಜೀವ ನಿಶ್ಚೇತನಾಗಿರಲು ಬಿಡದೆ ದಿನದಿನದಲ್ಲಿ ಎಚ್ಚರಿಕೆ ಯಾರಿಂದ 1 ಸೃಷ್ಟಿಗೆ ಬರಲಿನ್ನು ಜೀವ ಯತ್ನವು ಉಂಟೆ ಸೃಷ್ಟಿ ಸ್ಥಿತಿ ಲಯ ಕರ್ತ ನೀನೆ ತಿಳಿಯೊ ಮೊಟ್ಟ ಮೊದಲಿಗೆ ನಿನ್ನ ವಶನಾಗಿ ನಾನಿರಲು ಸೃಷ್ಟಿಯಲಿ ನಮ್ಮೆತ್ನ ಕಲ್ಪಿಸುವುದುಂಟೆ 2 ಇಂತಿರಲು ನಿಜತತ್ವ ಎಂಥ ಶಕ್ತಿಯು ನಮಗೆ ಸ್ವಾಂತ ಮಂಗಳ ಸುಗುಣ ನಿಧಿಯೆ ಪೇಳೊ ಭ್ರಾಂತಿ ಜೀವನ ಬಿಡಿಸಿ ಜಯೇಶವಿಠಲ ಶಾಂತಿ ಪಾಲಿಸು ನಮಗೆ ಅಂತರಾತ್ಮಕ ದೇವ3
--------------
ಜಯೇಶವಿಠಲ
ನುಡಿಯಲ್ಲಿ ರಸತೋರೆ ಉಡಿಯೊಳಗೆ ವಿಷಮಿರೆ ನಡೆಯಲ್ಲಿ ವಕ್ರಮುರೆ ನೋಡಲರರೆ ಅನೃತೋಕ್ತಿಯಿಂತಿವಗೆ ಅಮೃತಾನ್ನದಂತಾಗೆ ಸೂನೃತದಿ ಚಿತ್ತಮಿಗೆ ಬಹುದು ಹೇಗೆ ನಗಧರಗೆ ಸತಿಯಾದೆ ಹಗರಣಕ್ಕೀಡಾದೆ ನಗೆಗೇಡಿಗೊಳಗಾದೆ ಜಗದ ಮುಂದೆ ಪರರ ಬಿನ್ನಣದ ನುಡಿ ಗೆÀರಕಮಾಗಿರೆ ಕಿವಿಯ ಪರಿಯದೇಂ ವರ್ಣಿಸುವೆ ನರಿಯೆನಾನು ಕೋಟಿಜನ್ಮದಿನೋಂತ ಪುಣ್ಯಫಲದಿ ಬೂಟಕವ ತೋರುವನ ಪಡೆದೆ ಮುದದಿ ನಾಟಕಪ್ರಿಯನಿಂದೆ ಸುಖೆಪ ಬಗೆಗೆ
--------------
ನಂಜನಗೂಡು ತಿರುಮಲಾಂಬಾ
ನೆಚ್ಚದಿರು ಸಂಸಾರ ನೆಲೆಯಲ್ಲವೀ ಕಾಯಅಚ್ಯುತನ ನಾಮವನು ನೆನೆದು ಸುಖಿಯಾಗೊ ಪ ಗಳಿಸದಿರು ಸೀಮೆಯನು ಗಳಿಸದಿರು ದ್ರವ್ಯವನುಗಳಿಸದಿರು ನೀ ದುರಿತರಾಶಿಗಳನುನಳಿನನಾಭನ ದಿವ್ಯ ನಾಮವನು ನೆನೆನೆನೆದುನೆಲೆಯಾದ ಪರಮ ಪದವಿಯ ಪಡೆಯೊ ಮನವೆ 1 ನೋಡದಿರು ಪರಸತಿಯ ಕೂಡದಿರು ದುರ್ಜನರಆಡದಿರು ಮಾತುಗಳ ಗರ್ವದಿಂದಬೇಡದಿರು ಕೈಯ ಹಿಂದೆಗೆವ ಲೋಭಿಯನು, ಕೊಂ-ಡಾಡದಿರು ಬೀದಿಗೂಳುಂಬ ದೈವಗಳ 2 ನಾನಾ ಜನ್ಮದಿ ಬಂದ ನಾಟಕದ ಬೊಂಬೆಯಿದುಮಾನಕ್ಕೆ ಮೆಚ್ಚಿ ನೀ ಮರುಳಾಗದೆಜಾಣತನದಿಂ ಕಾಗಿನೆಲೆಯಾದಿಕೇಶವನಮಾನಸದಲಿ ನೆನೆದು ಸುಖಿಯಾಗು ಮನುಜ 3
--------------
ಕನಕದಾಸ
ಪತಿ ಪೋದನೆಂದು ಶೋಕಿಸುವುದ್ಯಾಕೆ ಶ್ರೀ - ಪತಿಯು ಇರಲಾಗಿ ಮರುಳೆ ಪ ಪ್ರತಿ ಪ್ರತಿ ಜನ್ಮದಿ ಜತೆ ಮಾಡಿದ ಪಂಚ - ಕಾಯ ಸತ್ಯ ಸ್ಥಿರವಲ್ಲವೇ ಮರುಳೆ ಅ.ಪ ನೋತ ಪುಣ್ಯಾಪುಣ್ಯದ ಫಲ ವ್ರಾತ ಸುಖ ಸುಖವಿತ್ತು ಬರಿದಾಗುವುದು ನಿತ್ಯವಾಗಿ ಸುಖವೆ ಇರಲೆಂದು ಬೇಡಿದರೆ ವ್ಯರ್ಥಧಾವತೆ ಅಲ್ಲದೆ ಸಾರ್ಥಕೆಲ್ಲಿ ಮರುಳೆ 1 ಸೃಷ್ಟಿಯಲಿ ಎಲ್ಲರೂ ನಷ್ಟವಾಗುವರಲ್ಲದೆ ಶ್ರೇಷ್ಠರಾಗಿ ಬಾಳುವರೊಬ್ಬರಿಲ್ಲ ಎಷ್ಟು ಶೋಕಿಸಿದರು ಪೋದ ಕಾಷ್ಠ ಬರಲರಿಯದು ಎ- ಳ್ಳಷ್ಟು ಲಾಭ ಇದರಿಂದ ಇಲ್ಲ ಮರುಳೆ2 ಮುಟ್ಟಿ ಕಟ್ಟಿದ ತಾಳಿಯ ಸಂಬಂಧ ಕೊಟ್ಟ ಹರಿ ತಾ ತಟ್ಟನೆ ಒಯ್ದ ಮೇಲೆ ದುಷ್ಟವೆನ್ನದಲೆ ಇಷ್ಟವೆಂದೆಣಿಸಲು ಸೃಷ್ಟಿಪತಿಯು ತುಷ್ಟನಾಗುವ ಮರುಳೆ 3 ಸರಿಯಲ್ಲಾ ಬರಿದೆ ಚಿಂತಿಸುವುದು ನಿನಗೆ ಕರೆಕರೆಯು ಹೆಚ್ಚುವುದು ಮುಂದೆ ಬಹಳ ಹರಿಕಥೆಯ ಕೇಳು ಹರಿದಾಸರೊಳ್ ಬೀಳು ಹರಿಗೆ ಪೇಳು ನಿನ್ನಯ ಗೋಳು 4 ಇನ್ನಾದರೂ ನೀನು ಹರಿಯ ಸಂಕಲ್ಪವಿದೆಂದು ನಿನ್ನ ಮನದೊಳು ತಿಳಿದುಕೊಂಡು ಘನ್ನ ಮಹಿಮಾ ವಿಜಯ ರಾಮಚಂದ್ರವಿಠಲನ್ನ ಸನ್ನುತಿಸಲು ಮುನ್ನೆ ಹತಿಯಾಗುವುದು ಮರುಳೆ 5
--------------
ವಿಜಯ ರಾಮಚಂದ್ರವಿಠಲ
ಪಾದ ಭಜಿಸಿದವಗನವರತವಿಜಯವಾಗುವದಕ್ಕೆ ಸಂದೇಹವ್ಯಾಕೆ ಪ ಗಜರಾಜ ವರದನಿಗೆ ನಿಜದಾಸರೆಂದೆನಿಸಿದ್ವಿಜಕುಲದಲ್ಲಿ ಮೆರೆವರಾ ಯಿವರ ಅ.ಪ. ಭವ ಬಂಧು ಮುನಿವೃಂದಹೃದಯ ಸಂಶಯ ಹೊಂದಲು (ಹೊಂದಿಸಲು)ವಿಧಿ ವಿಷ್ಣು ಶಿವರೊಳಗೆ ಉತ್ತಮರ ತೋರದಲೆಮದಡ ಭಾವವ ವೊಹಿಸಲು ||ಒದಗಿ ಭೃಗುಮುನಿಗಳೇ ಸರ್ವೇಶ ವೈಕುಂಠಸದನನೆಂದರುಹಿದವರೊ ಯಿವರೊ 1 ಪುರಂದರ ದಾಸರಾಗಿ | ಈ |ಮೇದನೀ ತಳಕೆ ಬರಲೂಸಾಧು ಸಮ್ಮತವಾದ ಪದಪಂಚಲಕ್ಷಕೆ (ತ್ರಿ)ಪಾದವೇ ನ್ಯೂನವಿರಲು | ಆ |ಪಾದವನು ಪೂರ್ತಿಪರು ಮತ್ಪುತ್ರರಿವರೆಂದುಆದಿಯಲಿ ಸೂಚಿಸಿರಲೂ ||ಭೂದೇವ ಜನ್ಮದಿಂದಾ ದಾಸರಭಿಲಾಷೆಸಾಧಿಸಿದ ಸದಯರಿವರೊ ಯಿವರೊ 2 ವೀ ಯೆನಲು ವಿಮಲತೆಯು ಜ ಯೆಂದವಗ ಜಯವುಯ ಯೆನಲು ಯಾಗಫಲವುರಾ ಯೆನಲು ರಾಜ್ಯವು ಯ ಯೆನಲು ಯಮಭಟರುನೋಯಿಸರು ಯಿವನ ಕುಲವೂ ||ಈ ಯಾವದಕ್ಷರವ ಓಂಕಾರ ಸಹ ಪಠಿಸೆಕಾಯಭವ ಪಿತನ ಬಲವೊ ||ಜಾಯಾ ಸಮೇತ ಮೋಹನ್ನ ವಿಠಲನ ಪಾದತೋಯಜ ಭ್ರಮರರಿವರೊ ಯಿವರೊ 3
--------------
ಮೋಹನದಾಸರು
ಪಾಪೋಸು ಹೋದುವಲ್ಲಾ ಪ ಅಪಾರ ಜನ್ಮದಿಂದ ಆರ್ಜನ ಮಾಡಿದ ಅ.ಪ. ಉರುಗಾದ್ರಿಯಲ್ಲಿ ಸ್ವಾಮಿ ಪುಷ್ಕರಣಿ ಮೊದಲಾದಪರಿಪರಿ ತೀರ್ಥ ಸ್ನಾನಗಳ ಮಾಡಿಹರಿದಾಸರ ಕೂಡ ಶ್ರೀನಿವಾಸ ಮೂರ್ತಿದರುಶನದಲಿ ಮೈಮರೆತು ಇದ್ದೆನು ಎನ್ನ 1 ಪರಮ ಭಾಗವತರು ಹರಿಕಥೆ ಹೇಳಲುಪರಮ ಹರ್ಷದಿಂದ ಕೇಳುತಿದ್ದೆಪರಮ ಪಾಪಿಷ್ಠರ ಪಾಲಾಗಿ ಹೋದಾವುಪರಮಾತ್ಮನ ಚಿತ್ತಕೆ ಬಂದಿತೀಗೆನ್ನ 2 ಮಾಯಿ ಒಲಿದು ಎನಗೆ ಕೊಂಡು ಕೊಟ್ಟಿದ್ದಳುದಾಯಿಗಾರರು ನೋಡಿ ಸಹಿಸಲಿಲ್ಲಾಮಾಯಾರಮಣ ನಮ್ಮ ಮೋಹನ್ನ ವಿಠಲನ್ನಮಾಯದಿಂದಲಿ ಮಟ್ಟವಾಯಿತು ಎನ್ನ 3
--------------
ಮೋಹನದಾಸರು
ಪೊರಿಯ ಬೇಕೆಲಾ |ಮರಿ ನೀನು ಛಲಾ ಪ ಏಸು ಜನ್ಮದಿ ನಿನ್ನ ದಾಸನೆನಿಸಿದೆ | ಉ |ದಾಸ ಮಾಡದೆ ಮಹಿದಾಸ ಎನ್ನನು ನೀ 1 ನಿನ್ನನೆ ಮರೆವುದು ಎನ್ನ ಸ್ವಧರ್ಮವು |ನಿನ್ನ ಘನ್ನತಿಗಿದು ಸನ್ನು ಮತವೆ ಹರಿ 2 ಸರುವಜ್ಞ ನೀನೆಂದೂ ಒರೆದವು ಶೃತಿಗಳು |ಮರೆವುದುಚಿತವೇನೊ ಗುರು ಪ್ರಾಣೇಶ ವಿಠಲಾ 3
--------------
ಗುರುಪ್ರಾಣೇಶವಿಠಲರು
ಭವಸಾಗರ ದಾಟುವ ಬಗೆ ಪೇಳಯ್ಯ ಭವನಂಗಳಿಗೊಡೆಯ ಭವಸಾಗರ ದಾಟುವ ಬಗೆ ಪೇಳಯ್ಯಾ ಪ ಕ್ಷಿತಿಯೊಳು ದಾನವರತಿ ಪೆರ್ಚಿಹರು ಮಿತಿಮೀರಿ ಮೆರೆವೋರು ಕ್ಷಿತಿಪತಿ ನಿನ್ನನೆ ಮರೆತಿಹರು ಶ್ರುತಿಗಳ ಕಾಡ್ವರು ಸತಿ ಮಾತೆಯರಿಯರು ಧರ್ಮವೆನುತಿಹರು1 ಹಿಂದಿನ ಜನ್ಮದಿ ಕಲಿಶೇವಕರು ನಿಂದಕರುನ್ಮತ್ತರು ಹೊಂದೀ ದ್ವಿಜ ಜನ್ಮವ ದ್ವಿಜರಿಗಸುರರು ಕುಂದದೆ ಬೇಡಿಪರು ತಂದೆ ತವದಾಸರ ನೆರೆ ದೂಷಿಪರು ಕುಂದದೆ ಪೋಲಿಪರು ಹೊಂದಿಸದೀರೆನಗೆಂದಿಗೆ ಖಳರನು 2 ನರಜನ್ಮದಿ ಯಾತ್ರೆಯ ಚರಿಸಲಿಲ್ಲಾ ವರವ್ರತಗಳೆ ಇಲ್ಲಾ ಹರಿಪಾದತೀರ್ಥದ ಪಾನಗಳಿಲ್ಲಾ ಹರಿಪೂಜೆ ಮೊದಲಿಲ್ಲಾ ವರತೀರ್ಥದೆಂದಿಗೂ ಮೀಯಲಿಲ್ಲ ಹರಿಕೀರ್ತನವಿಲ್ಲಾ ನರಸಿಂಹವಿಠ್ಠಲ 3
--------------
ನರಸಿಂಹವಿಠಲರು
ಭಾರತೀಶ ಹರಿದಾಸನಾದನಿಲ್ಲೀ ವೀಣೆಯ ಧರಿಸುತಲೀ ಪ. ಭಾರಿಭಾರಿಗವತಾರ ಮಾಡಿ ಬಳಲೀ ಆನಂದದಲ್ಲೀ ಅ.ಪ. ತ್ರೇತೆಯಲ್ಲಿ ಶ್ರೀ ರಾಮದೂತನಾಗಿ ತನುಸುಖವ ನೀಗಿ ಪ್ರೀತಿ ಭಕ್ತಿಯಲಿ ರಾಮ ಕಾರ್ಯಕಾಗಿ ತನುವಪ್ಪಿಸಿ ಬಾಗಿ ಖ್ಯಾತಿ ಪಡೆದು ಶರಧಿಯ ಲಂಘಿಸಿ ಪೋಗಿ ಸೀತೆಯ ಕಂಡೆರಗಿ ವೀಹೋತ್ರಗೆ ಪುರವಪ್ಪಿಸಿ ತಿರುಗೀ ರಾಮರ ಕಂಡೆರಗಿ 1 ಕುಂತಿಯ ಜಠರದಿ ಜನಿಸಿ ಭೀಮನೆನಿಸೀ ಬಕಮುಖರನೆ ಜೈಸಿ ಸಂತೋಷದಿ ಸೌಗಂಧ ಸತಿಗೆ ಸಲಿಸೀ ಕೌರವರ ಸಂಹರಿಸೀ ಅಂತರಂಗದಲಿ ಕೃಷ್ಣನಂಘ್ರಿ ಭಜಿಸಿ ಪಾಂಡವರನೆ ಮೆರಸೀ ಕಂತುಪಿತನ ಕಡುಕೃಪೆಯ ಪಡೆದು ಸುಖಿಸೀ ಮೇಲ್ತೋರದೆ ಸ್ಮರಿಸೀ 2 ಮೂರನೆ ರೂಪದಿ ಮುನಿಯಾಗವತರಿಸೀ ದುರ್ಮತಗಳ ಜೈಸೀ ಸಾರತತ್ವಮತ ಸಜ್ಜನರಿಗೆ ತಿಳಿಸೀ ಸರ್ವೋತ್ತಮ ಹರಿ ಎನಿಸೀ ಆರು ಅರಿಯದಂತೆ ದಾಸತ್ವವಚರಿಸೀ ದುರ್ಮತಗಳ ಜೈಸೀ ತೋರಿ ತೋರದಂತೆ ಸದ್ಗ್ರಂಥದಿ ತಿಳಿಸೀ ಯತಿ ಕುಲಜರೋಳ್ ನಿಲಿಸೀ 3 ಮೀಸಲ ದಾಸ್ಯವ ಮೂರವತಾರದಲ್ಲಿ ಚರಿಸಲು ಕಲಿಯಲ್ಲೀ ವ್ಯಾಸ ಮುನಿಯು ಬಹಿರಂಗಪಡಿಸೆ ಚಲ್ಲೀ ನಾರದ ಮುನಿಯಲ್ಲೀ ಪುರಂದರ ಗುರುವೆನಿಸುತಲೀ ಮೆರೆಯಲು ಜಗದಲ್ಲೀ ಮೀಸಲು ಉಳಿಯದೆ ಪೋಯಿತೆಂದು ಇಲ್ಲೀ ದಾಸ ತಾನಾಗುತಲೀ 4 ದಾಸತನದ ಆನಂದವನನುಭವಿಸೇ ದೇವತೆಗಳು ಬಯಸೇ ಭೂಸುರ ಜನ್ಮದಿ ಭೂಮಿಯಲವತರಿಸೇ ಹರಿದಾಸರಾಗಿ ಸುಖಿಸೇ ವಾಸುದೇವಗೆ ತಾ ನಿಜದಾಸನು ಎನಿಸೇ ಮಾರುತಿ ಇದ ಬಯಸೇ ಶ್ರೀಶ ಗೋಪಾಲಕೃಷ್ಣವಿಠಲದಾಸಾ ಬೆಳಗಾವಿ ವಾಸಾ 5
--------------
ಅಂಬಾಬಾಯಿ
ಮನುಜಾ ಹಿಡಿ ದಾರಿ ದಾರಿ ದಾರಿ ದಾರಿ | ಪ್ರಾಣಿ ಹಿಡಿ ದಾರಿ ದಾರಿ ದಾರಿ ದಾರಿ ಪ ದೃಢಭಾವದಿಂದಾ | ಪಡೆದು ಸದ್ಬೋಧಾ | ಒಡನೆ ಸದ್ಗುರು ಪಾರಾ | ಸಾರಿ ಸಾರಿ ಸಾರಿ ಸಾರಿ 1 ಚಾರು ಭಕುತಿಯಾ | ದಾರಿ ನಿಶ್ಚಯಾ | ಆರು ಅರಿಗಳ ಕೈಯ್ಯಾ | ಮೀರಿ ಮೀರಿ ಮಮೀರಿ ಮೀರಿ 2 ತನುಧನ ಬೆರೆದು | ಋಣವೆಲ್ಲ ಮರೆದು | ಕ್ಷಣದೊಳೆಲ್ಲಡಗುವದು | ತೋರಿ ತೋರಿ ತೋರಿ ತೋರಿ 3 ಸ್ವಾನಂದ ವಿರಹಿತಾ | ದಿನಗಳೆವರೆ ವ್ಯರ್ಥಾ| ಮಾನವಜನ್ಮದಿ ಮತ್ತೆ | ಬಾರಿ ಬಾರಿ ಬಾರಿ ಬಾರಿ 4 ಸಾರಥಿ | ತೋರಿ ತೋರಿ ತೋರಿ 5
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಮಾನವ ಪ ಜ್ಞಾನದಿಂದ ನಿನ್ನ ನೀನೆ ತಿಳಿದು ನೋಡೆಲೊ ಅ ಹೆಣ್ಣು ಹೊನ್ನು ಮಣ್ಣು ಮೂರು ನಿನ್ನದೇನೆಲೊಅನ್ನದಿಂದ ಬಂದ ಕಾಮ ನಿನ್ನದೇನೆಲೊಕರ್ಣದಿಂದ ಬರುವ ಘೋಷ ನಿನ್ನದೇನೆಲೊನಿನ್ನ ಬಿಟ್ಟು ಹೋಹ ದೇಹ ನಿನ್ನದೇನೆಲೊ1 ಹಲವು ಜನ್ಮದಿಂದ ಬಂದಿರುವನು ನೀನೆಲೊಮಲದ ಗರ್ಭದಲಿ ನಿಂದಿರುವನು ನೀನೆಲೊಜಲದ ದಾರಿಯಲಿ ಬಂದಿರುವನು ನೀನೆಲೊಕುಲವು ಜಾತಿ ಗೋತ್ರವುಳ್ಳವನು ನೀನೆಲೊ 2 ಕಾಲಕರ್ಮ ಶೀಲ ನೇಮ ನಿನ್ನದೇನೆಲೊಬಾಲವಿದ್ಯೆ ಬಯಲ ಮಾಯೆ ನಿನ್ನದೇನೆಲೊಕೀಲು ಜಡಿದ ತೊಗಲಗೊಂಬೆ ನಿನ್ನದೇನೆಲೊಲೋಲ ಆದಿಕೇಶವನ ಭಕ್ತನಾಗೆಲೊ 3
--------------
ಕನಕದಾಸ