ಒಟ್ಟು 89 ಕಡೆಗಳಲ್ಲಿ , 41 ದಾಸರು , 83 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ನೀನೊಲಿಯಬೇಕು ನೀನೊಲಿಯಬೇಕು 'ಜ್ಞಾನ'ೀನನಿಗೆ ನಿತ್ಯಾನಂದ ಮೂರುತಿಯೆ ವಾಸುದೇವಾರ್ಯ ಪನರಳಿ ಬಹುಭವದಿ ನಾನಾ ಯೋನಿಮುಖಗಳಿಂದುರುಳಿ ಕೋಟಲೆಗೊಂಡು ಪುಳು ಪಕ್ಷಿ ಪಶು ಜಲಜತರು ಶಿಲೆಗಳೆನಿಪ ಹಲವಲಿ ನವೆಸವೆದು ಸ್ತ್ರೀಪುರುಷತ್ವ ಭೇದವಹ ನರಜನುಮ ಬಹರೆ 1ಪುರುಷನೆನಿಸಿದರು ಪಾದೋರು ಬಾಹುಜ ಭೇದವರಿತು 'ಪ್ರತ್ವ 'ದ್ಯಾ ನಯ 'ಜ್ಞಾನಶರಧಿಯೆನಿಸುವ ಭಾಗ್ಯ ಬರುವ ಸಾಧನಗಳನುಕರುಣಿಸುವ ಪರಮೇಶನೊಲಿವಂತೆನಗೆ 2'ವೃತ ಫಲವಹ ಸಶಾಸ್ತ್ರ ನಿಗಮಾಧೀತಿಯೊಪ್ಪದಿತದುಕ್ತ ಕರ್ಮಾಚರಣೆಗೈಯುತ ಸಮರ್ಪಿಸುತ್ತೀಶ್ವರಗೆ ತತ್ಫಲವ ಬಯಸದೆತೆಪ್ಪಗಿರುವಧಿಕಾರಿಯಪ್ಪ ಸತ್ಪಥಕೆ3ಶೃತಿಯುಕ್ತಿ ಸ್ವಾನುಭವಗಳ ಬಲದಿ ಮನನಗೈಯುತಲಿ ನಿತ್ಯಾನಿತ್ಯ ವಸ್ತುಗಳ ತಿಳಿದನರ್ಥತೆಯರ್ಥಗಳೊಳು ವೈರಾಗ್ಯ ಭಾಗ್ಯವನೀವಮತಿ ಬಂದು ಭಕತಿ ಜ್ಞಾನಗಳಳವಡುವರೆ 4ಬಂದ ವೈರಾಗ್ಯ ನೆಲೆಗೊಂಡು ಬಳಸಿದ ಕ್ರಿಯಾದಂದುಗವು ಸಡಿಲಿ ಬ'ರಂಗ ವ್ಯಾಪಿಸಿ ಕನಸೆಂದು ಕಾಣುತಲೂಡಲುಣುತಲುಡಿಸಿದರುಡುತತಿಂದು ತೇಗುವ ಕರ್ಮ ಬೆಂದು ಸುಖಿಯಹರೆ 5ಹೊರಗೊಳಗುಗಾಣದಾಗಸದಂತೆ ಬಯಲಾಗಿಕರಣಗಳ ಕಾಲಾಟವುಡುಗಿ ಸ್ವ ವ್ಯತಿರಿಕ್ತವರಸಿದರು ಸಂತೃಪ್ತಿ ತೋರದೆ ಸ್ವಾನುಭವಬರಿಯರಿವೆ ನೆಲೆಯಾಗಿ ತಾನೆ ತಾನಹರೆ 6ನಿಂತವೇದಾಂತ ಪದ್ಧತಿಯ ನಿಲಿಸುವರೆ ಮೊದಲಂತೆ ಕೃಷ್ಣಾವತಾರದಿ ಪಾರ್ಥಗೊರೆದ ಕೃಪೆವಂತ ನೀ ಮರಳಿ ಚಿಕನಾಗಪುರದಲಿ ಹೊಳೆದನಂತಮ'ಮನಾಗಿರುವೆ ವಾಸುದೇವಾರ್ಯ 7
--------------
ತಿಮ್ಮಪ್ಪದಾಸರು
ನೋಡಿ ದಣಿಯವೆನ್ನ ಕಂಗಳು ಈ ಸೋದೆಲಿರುವ ಈಡು ಇಲ್ಲದುತ್ಸವಂಗಳ ಬೇಡಿದವಗೀ ಧ್ವಜಬುತ್ತಿ (?) ನೀಡಿ ದಯಸೂರ್ಯಾಡುವರ ಪ ಯತಿಗಳ ಸಮೂಹವೆಷ್ಟು ಮಿತಿಯಿಲ್ಲದ ಬ್ರಾಹ್ಮಣ್ಯವೆಷ್ಟು ಮತಿಹೀನರಿಗೆ ಗತಿಯ ಕೊಡುವ ಪೃಥಿವಿಗಧಿಕ ಗುರುಗಳನ್ನು 1 ಭೂತನಾಥಗೆರಗಿ ನಿಂತು ವಾತಸುತಗೆ ಕೈಯ ಮುಗಿದು ಆತ ನಾರಾಯಣಭೂತನೆಂಬೋ ನೀತವಾದ ದೂತನಂತೆ2 ಕೊಳಲ ಕೃಷ್ಣ ಧವಳಗಂಗಾ ಹೊಳೆಯೊ ಮುತ್ತಿನ ಗದ್ದಿಗೆ ಮ್ಯಾಲೆ ಕಳೆಯು ಸುರಿವೊ ಕಮಲಪಾದ ಇಳೆಯೊಳ್ ಇಲ್ಲೀಳಿಗೆಯ ಪೂಜೆ 3 ಸನಕಾದಿ ಸುರೇಶನೆದುರು ಕಣಕ ಹ್ವಾಲಗ (ಹೋಳಿಗೆ?)ವನ್ನೆ ಮಾಡಿ ಮನಕೆ ಬಂದ ಮೃಷ್ಟಾನ್ನವನು ಜನಕೆ ತೃಪ್ತಿಬಡಿಸುತಿರಲು 4 ಸುತ್ತ ವೃಂದಾವನದ ಮಧ್ಯೆ ಉತ್ತಮರಾದ ವಾದಿರಾಜರು ಸತ್ಯವತಿಯ ಸುತರ ಎದುರು ನಿತ್ಯಾನಂದಭರಿತರಾಗಿ 5 ಸೃಷ್ಟಿಗಧಿಕಾನಂತಾಸನವು ಶ್ವೇತದ್ವೀಪ್ವೈಕುಂಠವೆಂಬೊ ಮುಕ್ತಸ್ಥಳದಲ್ವಾಸವಾದ ಲಕ್ಕುಮಿ ತ್ರಿವಿಕ್ರಮನ 6 ನೇಮನಿಷ್ಠ ಸೇವಕ ಜನಕೆ ಬೇಡಿದ ಇಷ್ಟಾರ್ಥ ಕೊಡುವೊ ಭೀಮೇಶಕೃಷ್ಣ ದಯದಿ ನೋಡಿದೆ ಹಯವದನನಂಘ್ರಿ 7
--------------
ಹರಪನಹಳ್ಳಿಭೀಮವ್ವ
ಪತಿವ್ರತೆ ಹ್ಯಾಂಗಿರಬೇಕು ನಿಜವಾಗಿ ಪ ರತಿಪತಿಪಿತನನ್ನು ಪತಿಯಲ್ಲಿ ನೆನೆಯುತ್ತ ಅ.ಪ. ಹೊತ್ತಾರೆ ಏಳಬೇಕು ಪತಿಗೆ ವಂದಿಸಬೇಕು ನಿತ್ಯತುಳಸಿಗೆರಗಿಕೃತ್ಯಮಾಡಲಿಬೇಕು ಅತ್ತೆಮೆಚ್ಚಿಸಬೇಕು ತೊತ್ತಿನಂತಿರಬೇಕು ರತಿಯ ನೀಡುತ ಪತಿಗೆ ಹಿತದಿಂದ ಬಾಳಬೇಕು 1 ಮಿತಮಾತು ಇರಬೇಕು ಸುತರ ಪಾಲಿಸಬೇಕು ಮತಿಮತದಿ ನಡಿಬೇಕು ಅತಿಥಿ ಪೂಜಿಸಬೇಕು ವ್ರತನೇಮ ವಿರಬೇಕು ಗತಿ ಹರಿಯೆ ತಿಳಿಬೇಕು ಮಾತ್ಸರ್ಯಬಿಡಬೇಕು ತೃಪ್ತಿಯಿರಲಿಬೇಕು 2 ನೆರೆಹೊರೆ ಗಂಜಬೇಕು ತಿರುಗೋದು ಬಿಡಬೇಕು ತಿರಿ ತಿಂಡಿ ಬಿಡಬೇಕು ಹರಟೆಗಳ ಬಿಡಬೇಕು ಹರಿಕಥೆ ಕೇಳಬೇಕು ಹರಿದಿನ ಮಾಡಬೇಕು ಹರಿಯ ಪಾಡಲಿಬೇಕು 3 ನೆಟ್ಟಕುಂಕುಮ ಬೇಕು ಕೆಟ್ಟವರ ಬಿಡಬೇಕು ಕಟ್ಟಿ ಆಶೆಯ ಬಿಟ್ಟು ತೃಪ್ತಿಯಿಂದಿರಬೇಕು ಕಷ್ಟಬಂದರು ಬಹು ಗುಟ್ಟಿನಿಂದಿರಬೇಕು ನೆಂಟರೊಡನೆ ಕಠಿಣ ನಿಷ್ಟೂರ ಬಿಡಬೇಕು 4 ಚುಚ್ಚಬಾರದು ಚಾಡಿ ಬಿಚ್ಚಬಾರದು ಗಾಡಿ ಹಚ್ಚಬಾರದು ವಿಷಯ ಕೊಚ್ಚಬಾರದು ಜಂಭ ಹುಚ್ಚಳಂತಿರದ್ಹಾಂಗೆ ಸ್ವಚ್ಚನಡತೆಯು ಬೇಕು 5 ಪಾಪವ ತೊರಿಬೇಕು ಲೇಪನವ ಬಿಡಬೇಕು ಕೋಪವ ಬಿಡಬೇಕು ಕಪಟತ್ವ ಬಿಡಬೇಕು ರೂಪ ಮದವ ಬಿಟ್ಟು ಚಪಲತ್ವ ತೊರಿಬೇಕು ವಿಪರಿತ ಮಡಿಬಿಟ್ಟು ಶ್ರೀ ಪತಿಯ ನೆನಿಬೇಕು 6 ಅಂಗ ಶುದ್ಧಿಯು ಬೇಕು ಶೃಂಗಾರ ರಸಬೇಕು ನಗೆಮೊಗವಿರಬೆಕು ಸವಿಮಾತು ಗುಣಬೇಕು ಭಂಗಾರ ವಿಡಬೇಕು ರಂಗಗೆನ್ನಲಿ ಬೇಕು ಮಂಗಳಾಂಗ ನಮ್ಮ “ಶ್ರಿ ಕೃಷ್ಣವಿಠಲ” ನ್ನ ಹಿಂಗದೆ ನೆನೆಬೇಕು ಅಂಗಿನೀಗಲಿ ಬೇಕು 7
--------------
ಕೃಷ್ಣವಿಠಲದಾಸರು
ಪರಮ ಸಂಜೀವನವು ಗುರು ನಿಮ್ಮನಾಮ ಸರುಮುನಿಯು ಸೇವಿಸುವ ದಿವ್ಯನಾಮ ಧ್ರುವ ದುರಿತ ಹರಿಸಿದ ನಾಮ ಮೊರೆಯ ಹೊಕ್ಕವರ ಸ್ಥಿರ ಹೊರೆವ ನಾಮ ತರಳ ಪ್ರಲ್ಹಾದನವಸರಕೆ ಒಲಿದಿಹ ನಾಮ ಸ್ಮರಿಸುವರ ವಜ್ರಪಂಜರ ನಿಮ್ಮ ನಾಮ 1 ಧರೆಯೊಳಗೆ ದ್ರೌಪದಿಯ ಸ್ಮರಣಿಗೊದಗಿದ ನಾಮ ಕರುಣದಿಂದಭಿಮಾನಗಾಯ್ದ ನಾಮ ದಾರಿದ್ರ್ಯವನು ಸುಧಾಮನಿಗಿಂಗಿಸಿದ ನಾಮ ಸಿರಿ ಸಂಪತ್ತವು ಅಯಿತೀ ನಾಮ 2 ಹರುಷಕರವಿತ್ತು ಉಪಮನ್ಯಗೊಲಿದ ನಾಮ ಕ್ಷೀರಸಾಗರದ ನಾಮ ಶರಣುಹೊಕ್ಕವರ ಪರಿಪರಿ ಕಾಯ್ದ ನಾಮ ಧೀರ ಧ್ರುವಗಚಳ ಪದವಿತ್ತ ನಾಮ3 ಕರೆದು ನಾರಗ ನೆಂದವನ ತಾರಿಸಿದ ನಾಮ ಪರಮಪಾತಕ ಪರಿಹರಿಸಿದ ನಾಮ ವರ ಮುನಿಜನರ ತೃಪ್ತಿಗೈಸುವ ನಾಮ ಪರಮ ಭಕ್ತರ ಪ್ರಾಣಪ್ರಿಯ ನಾಮ 4 ದುರಿತ ದಾರಿದ್ರ್ಯ ವಿಧ್ವಂಸಗೈಸುವ ನಾಮ ಕರುಣಸಾಗರ ಪರಿಪೂರ್ಣ ನಾಮ ನರಕೀಟಕ ಮಹಿಪತಿಯ ತಾರಕ ನಾಮ ಪರಮ ಸಾಯೋಜ್ಯ ಗುರು ದಿವ್ಯ ನಾಮ 5
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಪ್ರಸನ್ನ ಶ್ರೀನಿವಾಸ ಕಲ್ಯಾಣ ಜಯ ಜಯ ಜಯ ಶ್ರೀನಿವಾಸ ಕೃತಿ ಮಾಯಾ ಶ್ರೀಶ ಭಯಬಂಧಮೋಚಕ ಜೀಯ ಆಹ ಸುಂದರ ಚಿನ್ಮಯಾನಂದ ಜ್ಞಾನಾತ್ಮನೆ ಮಂದಜಭವ ಸುರವೃಂದ ಸಂಸೇವ್ಯ ಜಯ ಪ ಸುರಸರಿತ ತೀರದಿಂದ ಸುರಮುನಿ ಭೃಗು ಬಂದು ನಿನ್ನ ಪರಸಮರಹಿತನೆಂದರಿತ ಆಹ ಸಿರಿಯು ನಿನ ಭಾವವನುಸರಿಸಿ ಬೇಗ ಕರವೀರ ಪುರ ಪೋಗೆ ಗಿರಿಪುತ್ತ ಪೊಕ್ಕೆಯೊ 1 ಮೇರುಸುತನೆ ಹಾಟಕಾದ್ರಿ ವೀರ ಭಕುತ ವೃಷಭಾದ್ರಿ ಸರೀಸೃಪಾವರಿಸಿದ ಸೌರಭ್ಯಗಿರಿಯಿದು ಪರವೇಂಕಟಾದ್ರಿಯು ಹರಿತು ವಿಪ್ರನ ಪಾಪ 2 ನೀನಿದ್ದ ಸ್ಥಳವೇ ವೈಕುಂಠ ನಿನಗಾರು ಸಮರುಂಟೆ ಶ್ರೀಶ ದೀನ ಸುಜನರಿಗೆ ನಂಟ ಆಹ ಧೇನು ಪಾಲ್ಗರೆಯಲು ಪಾಲಕ ಹೊಡೆಯಲು ದೀನರಕ್ಷಕ ನೀನು ಶಿರಸಿತ್ತು ಪೊರೆದೆಯೊ 3 ಏಳು 2ತಾಳದ ಉದ್ದ ರಕ್ತ ತಾಳಲಾರದೆ ಬಿದ್ದ ಗೋಪ ಚೋಳರಾಯಗೆ ಕೊಟ್ಟೆ ಶಾಪ ಆಹ ಪೇಳಬಲ್ಲೆನೆ ನಿನ್ನ ಅತಿಶಯ ಲೀಲೆಯ ಶೀಲ ಸುರರ ಗುರು ಚಿಕಿತ್ಸೆಯನೈದಿದೆ 4 ಸ್ವಗತ ಭೇದವಿಲ್ಲದಂಥ ಸ್ವಚ್ಛ ಚಿತ್ಸುಖಮಯನಂತ ಸ್ವಾನಿರ್ವಾಹಕ ವಿಶೇಷ ಆಹ ಶ್ವೇತವರಾಹನ ಸಂವಾದದಿಂದಲಿ ಸ್ವೀಕರಿಸಿದೀ ಸ್ಥಳ ಮೊದಲು ಪೂಜೆಯ ಕೊಟ್ಟು 5 ಸರಸ್ವತೀ ಸ್ವಾಮಿ ಪುಷ್ಕರಣಿ ಸುರಮುನಿನರರಿಗೆ ಸ್ನಾನ ಪರಸುಖಮಾರ್ಗ ಸೋಪಾನ ಆಹ ಸುರತಟಿನ್ಯಾದಿ ಸುತೀರ್ಥಗಳೆಲ್ಲವು ಸರಿತವಾಗಿರುತವೆ ಈ ಸ್ವಾಮಿ ತೀರ್ಥದಿ 6 ಆದಿಕಾರಣ ನಿನ್ನ 3ಲೀಲಾ ಮೋದಸಂಭ್ರಮವನ್ನು ನೋಡೆ ಕಾದುಕೊಂಡಿಹರು ಕೋವಿದರು ಆಹ ಸಾಧು ಸಂಭಾವಿತ ಬಕುಳಾದೇವಿಯುಗೈದ ನಿತ್ಯ ಸಂತೃಪ್ತ 7 ಮಂಗಳ ಚಿನ್ಮಯ ರಂಗಾ - ನಂಗನಯ್ಯನೆ ಮೋಹನಾಂಗ ತುಂಗ ಮಹಿಮನೆ ಶುಭಾಂಗ ಆಹ ಬಂಗಾರ ಕುದುರೆ ಮೇಲಂಗನೇರಲಿ 4ಬಂದ ಶೃಂಗಾರವೇನೆಂಬೆ ಎಂದಿಗೂ ಸ್ವರಮಣ8 ತೋಂಡಮಾನ ರಾಯನಣ್ಣ ಚಂಡಭೂಪನು ಆಕಾಶ ಕಂಡನು ಕಮಲದೊಳ್ ಶಿಶುವ ಆಹ ಅಖಿಳ ಕೋಟಿ ಅಸಮ ಈ ಶಿಶುವನ್ನು ಹೆಂಡತಿ ಧರಣಿಯು ಕೊಂಡಳು ಮಗಳಾಗಿ 9 ಮೂಲೇಶ ನಿನ್ನಯ ರಾಣಿ ಮೂಲಪ್ರಕೃತಿ ಗುಣಮಾನಿ ಭವ ತಾಯಿ ಆಹ ಶೀಲ ಭೂಪಾಲನ ಸುತೆ ಪದ್ಮಾವತಿಯೆಂದು 5 ಬಾಲೇರ ಸಹ ಪುಷ್ಪವನಕೆ ಬಂದಿಹಳೊ 10 ಮಹಿದೇವಿ ಕಮಲವಾಸಿನಿಯು ಬಹಿನೋಟಕ್ಕೆ ರಾಜಸುತೆಯು ಬಹು ಚಿತ್ರ ಪುಷ್ಪವ ಕೊಯ್ಯೆ ಆಹ ಮಹತಿಪಾಣಿಯು ಬಹು ವಯೋರೂಪದಲಿ ಬಂದು ಅಹಿತಲ್ಪ ಶ್ರೀಶನೆ ಪತಿಯೆಂದು ನುಡಿದ 11 ಹಾಟಕಗಿರಿಯಿಂದ ನೀನು ಬೇಟೆಯಾಡುವ ರೂಪ ತಾಳಿ ಘೋಟಕವೇರಿ ಸಂಭ್ರಮದಿ ಆಹ ಆಟವಾಡುವ ಬಾಲೆ ಬಳಿಯಲ್ಲಿ ಬಂದು ನೀ ನಾಟಕವಾಡಿದ್ದು ಪಾಡಲರಿಯೆನೊ 12 ನಿತ್ಯನಿರ್ಮಲ ಅವಿಕಾರ ಮತ್ರ್ಯರವೋಲು ನೀ 1ನಟಿಸೋ ಕೃತ್ಯಗಳರಿವರು ಯಾರೋ ಆಹ ಭೃತ್ಯವತ್ಸಲ ನೀನು ಬಕುಳೆಯ ಬಳಿ ಪೇಳಿ ಸಂತ್ಯಸಂಕಲ್ಪ ನಿನ ಸಂದೇಶ ಕಳುಹಿದೆ 13 ಪೊಂದಿದೆ ಫುಲ್ಕಸೀ ರೂಪ ಮಂಧಜಭವ ಶಿಶುವಾಗೆ ನಂದಿನಿಧರ ಯಷ್ಟಿಯಾದ ಆಹ ಮಂದಜಭವಾಂಡ ಗುಣಗುಲ್ಮ ಮಾಡಿ ನೀ ಕಂಧರದಲಿ ಗುಂಜ ಕಂಬುಸರವ ತೊಟ್ಟೆ 14 ನಾರಾಯಣಪುರಿಯಲ್ಲಿ ಮಾರನಯ್ಯನೆ ನಿನ್ನ ಸುಗುಣ ವಾರಿಧಿ ಪೊಕ್ಕಳು ಪದುಮೆ ಆಹ ಪುರಿಪ ಧರಣೀದೇವೀ ಪುತ್ರಿಗೆ ಜ್ವರವೆಂದು ಪರಿಪರಿ ಪರಿಹಾರ ಪರದು ನೋಡಿದರಾಗ 15 ಶುದ್ಧ ಸುಂದರ ಸುಖಕಾಯ ವೃದ್ಧ ಫುಲ್ಕಸೀ ವೇಷಧಾರಿ ಬದ್ಧ ಶೋಕರ ಬಳಿ ಪೋದೆ ಆಹ ಇದ್ದ ಸುದ್ದಿಯ ಅಬದ್ಧವಿಲ್ಲದೆ ಪೇಳಿ ಮುದ್ದು ಪದ್ಮೆಗೆ ಅನಿರುದ್ಧನೆ ಪತಿಯೆಂದೆ 16 ವಹಿಸಿ ನಿನ ಶಾಸನ ಬಕುಳ ಮಹದೇವನಾಲಯದಿಂದ ಮಹಿಳೆಯರ ಸಹ ಕೂಡಿ ಆಹ ಮಹಿದೇವಿಯಲಿ ಪೋಗಿ ವಿಹಿತ ಮಾತುಗಳಾಡಿ ಬಹು ಶುಭವಾರ್ತೆಯ ತಂದು ಪೇಳಿದಳೊ 17 ಶುಕಮುನಿ ಕರಪ್ರದವಾದ ಆಕಾಶ ನೃಪ ಲಗ್ನಪತ್ರ ಸ್ವೀಕರಿಸಿದೆ ಬಹು ಹಿತದಿ ಆಹ ವಾಗೀಶ ಶಶಿಧರ ನಾಗೇಶ ಸೌಪರ್ಣ ನಾಕೀಶ ಮೊದಲಾದ ಸುರರನು ಕರೆದೆ 18 ಶಿಷ್ಟ ಸನ್ಮುನಿಜನ ಕೂಟ ತುಷ್ಟ ಸುಮನಸ ಸಮೂಹ ಶ್ರೇಷ್ಠಸುಗಂಧಿ ಆಗಮನ ಆಹ ಸೃಷ್ಟ್ಯಾದಿಕರ್ತೆ ನಿನ ಸುಮಹೋತ್ಸವ ನೋಡಿ ಇಷ್ಟಾರ್ಥ ಪಡೆವರು ಎಷ್ಟೆಂಬೆ ವಿಭುವೆ 19 ಮಾಯ ಜಯೇಶ ಶ್ರೀವತ್ಸ ಛಾಯೇಶಗುಪಾಯ ಪೇಳಿ ತೋಯಜೆಯನು ಕರೆತಂದೆ ಆಹ ಸಿರಿ ಕೃತಿ ಕಾಂತಿ ನಿನ್ನಿಂದ ವಿಯೋಗರಹಿತರು ಎಂದೂ ಎಲ್ಲೆಲ್ಲೂ 20 ಬೃಹದಣುವಿಗೆ ಸತ್ತಾಪ್ರದನೆ ಸುಹೃದ ಸಂತೃಪ್ತ ಮುಖಾಬ್ಧೇ ದೃಢವ್ರತ ಶುಕಮುನಿಗೊಲಿದೆ ಆಹ ಬೃಹತೀ ಫಲಾನ್ನವನುಂಡು ಫೂತ್ಕಾರದಿ ಗೃಹ ಬಹಿರದಿ ಇದ್ದ ಜನರ ತೃಪ್ತಿಸಿದೆ 21 ಸುಜನರಿಗಾನಂದ ದಾತ ದ್ವಿಜರೂಢ ಜಗದೀಶ ನೀನು ಅಜಸುರರೊಡಗೂಡಿ ಬರೆ ಆಹ ಅಜಿತ ಚಿನ್ಮಯ ನಿನ್ನ ಆಕಾರ ನೃಪ ನೋಡಿ ನಿಜವಾಗಿ ಕೃತಕೃತ್ಯ ಧನ್ಯ ತಾನೆಂದ 22 ಅಜರ ಮಂದಿರ ಪೋಲ್ವ ಮನೆಯು ಪ್ರಜುವಲಿಸುವ ದಿವ್ಯ ಸಭೆಯು ನಿಜಭಕ್ತ ಪುರುಜನ ಗುಂಪು ಆಹ ದ್ವಿಜರ ವೇದಗಾನ ವಾದ್ಯ ಘೋಷಿಸಲಾಗ ನಿಜಸತಿ ಪದ್ಮೆಗೆ ಮಾಂಗಲ್ಯ ಧರಿಸಿದೆ 23 ಸುರಮುನಿಜನ ಮೂರು ವಿಧಕೆ ತರತಮ ಯೋಗ್ಯತೆ ಆರಿತು ಪರಿಪರಿ ಸಾಧನವಿತ್ತೆ ಆಹ ನೀರರುಹಜಾಂಡವು ನಿನ್ನಾಧೀನವು ಸಿರಿಭೂದೊರೆಯೇ ಶ್ರೀನಿವಾಸ ದಯಾನಿಧೆ 24 ನೀ ನಿಂತು ನುಡಿಸಿದೀ ನುಡಿಯು ನಿನ್ನಡಿಗಳಿಗೆ ಅರ್ಪಣೆಯು ಚನ್ನಮಾರುತ ಮನೋಗತನೆ ಆಹ ವನರುಜಹಾಸನ ತಾತ ಪ್ರಸನ್ನ ಶ್ರೀನಿವಾಸ ನಿನಗೆ ಪ್ರೀತಿಯಾಗಲೊ ಸುಹೃದ ಸಂತೃಪ್ತ 25
--------------
ಪ್ರಸನ್ನ ಶ್ರೀನಿವಾಸದಾಸರು
ಬಟ್ಟೆ ಪ ಕೆಟ್ಟವನೆಂಬಪಕೀರ್ತಿಯ ಪಡಿಯುವ ಅ.ಪ ಒಂದು ಹೊತ್ತಿಲ್ಲದಿರುಲು ತಾಳಲಾರೆ | ನಿನಗಾಗಿ ನೀಚ- ವೃಂದವÀ ಯಾಚಿಸಿ ನಾ ಬಳಲಲಾರೆ ತಂದೆ ತಾಯಿಗಳನ್ನಾದರೂ ವಂಚಿಸಿ ಮುಂದಾಗುವ ಕೇಡರಿಯದಿರುವ ಹಾಳು 1 ಹೆಚ್ಚು ಕೊಟ್ಟರು ಒಲ್ಲೆಯೆಂಬೆ | ಕಡಿಮೆಯಾದರೂ ಬಾಯಿ ತುಚ್ಛರ ಸೇವಿಸಿ ಅನ್ಯಾರ್ಜಿಸಿ ಹುಚ್ಚು ಹಿಡಿಸುವೆಯೇನೊ ನೀ ಕೊನೆಗೆ 2 ನಿನಗಾಗೀ ಸಕಲ ವಿದ್ಯಗಳರಿತು | ಸಭೆಯೊಳು ವಾದಿಸಿ ಮನಸು ಚಪಲ ಮಾಡಿ ತಹ ತಹ ಪಡಿಸುವ 3 ವ್ಯವಸಾಯಯೋಗ್ಯ ವ್ಯಾಪಾರಗಳು | ಯಾಚನೆಕಷ್ಟ ಭಾರವಾಹತ್ವ ಮೊದಲು ದಿವಸ ದಿವಸ ಮಾಡುತ ನಿನ್ನೊಲಿಸಲು ಜವನಾಳ್ಗಳ ಕೈಗೊಪ್ಪಿಸಿಸುವೆ ಕಡೆಗೆ 4 ಜ್ಞಾನ ನಿಷ್ಕಾಮ ಕರ್ಮದಾನ | ಸಂಧ್ಯಾಜಪತಪ ಸ್ನಾನಾನುಷ್ಠಾನ ಸತ್ಸಾಧನಾ ಏನು ನಡೆಯಲೀಸದೆ ದಿನದಿನದಲಿ ನಾನು ನನಗೆ ಎನ್ನಿಸಿ ಬಾಯಿಬಿಡಿಸುವ 5 ಮುಷ್ಕರದಿಂದ ನಿನ್ನ ನೋಯಿಸಲು | ಕರಗಿಯೆಲ್ಲ ನಿಷ್ಕಾರಣವಲ್ಲವು ನೀ ಜಗದೊಳು 6 ಕೊಟ್ಟಷ್ಟರಲ್ಲೆ ತೃಪ್ತಿಯ ಹೊಂದು | ಸಾಲದಿರಲು ಸಿಟ್ಟೇಕೆನ್ನೊಳು ದಯಮಾಡಿಂದು ಮುಟ್ಟಿ ಭಜಿಸೆ ಸಂತುಷ್ಟಿಯ ಪಡೆವೆ 7
--------------
ಗುರುರಾಮವಿಠಲ
ಬಂದು ನಿಲ್ಲೆಲೊ ಮನಮಂದಿರದೊಳು ಹರಿ ಇಂದುವದನ ಆನಂದದಿಂದ ಪ. ಮುಂದಗಮನೆರ ಅಂದದಿ ಕೂಡ್ಯರ- ವಿಂದ ಮಧ್ಯದಿ ಬಹು ಸುಂದರ ವೆಂಕಟ ಅ.ಪ. ಗಜವ ಪಾಲಿಸಿದಂಥ ಭುಜಗಶಯನ ಹರೆ ತ್ರಿಜಗದೊಳಗೆ ದಿಗ್ವಿಜಯ ಮೂರುತಿ ಗೋ- ವ್ರಜವ ಪಾಲಿಸಿ ಭೂಭುಜರ ಪೊರೆದೆ ಅಂ- ಬುಜನೇತ್ರ ಅಜಪಿತ ಭಜಿಸಲಾಪೆನೆ ನಿನ್ನ ಭುಜಗ ಭೂಷಣವಂದ್ಯ ರಜ ತಮೊ ಸತ್ವದಿ ತ್ರಿಜಗವ ಸೃಷ್ಟಿಪೆ ಕುಜನರ ಶಿಕ್ಷಿಪೆ ರಜ ತಮೊ ದೂರನೆ ಸುಜನರ ಪೊರೆಯುವ ಋಜುಗಣವಂದಿತ 1 ವ್ಯಾಪ್ತಾ ಜಗದಿ ನಿರ್ಲಿಪ್ತ ಗುಣಗಳಿಂದ ಆಪ್ತ ಜೀವಕೆ ಸುಷುಪ್ತಿ ಕಾಲದಿ ನೀ ಗುಪ್ತನಾಗಿ ಪೊರೆವ ಶಕ್ತನಹುದೊ ತ್ರಿ- ಸಪ್ತ ಇಂದ್ರಿಯಗಳ ತೃಪ್ತಿಗೊಳಿಸು ನಿನ್ನೊಳ್ ಸಪ್ತ ಋಷಿಗಳಿಂದ ಗುಪ್ತರ್ಚನೆಗೊಂಬೆ ಸಪ್ತಜಿಹ್ವನೊಳು ವ್ಯಾಪ್ತನಾಗಿ ಸುರರ ತೃಪ್ತಿಪಡಿಸುವ ವ್ಯಾಪ್ತ ಮೂರುತಿಯೆ ಸಪ್ತ ಸಪ್ತ ಭುವನೇಶ ಪ್ರಕಾಶ 2 ವೇದಸುತಗೆ ಇತ್ತು ಆದರದಿ ಸುಧೆ ಮೋದದಿ ಸುರರಿಗುಣಿಸಿ ಭೂದೇವಿಯನು ಕಾಯ್ದೆ ಬಾಧಿಸೆ ಖಳ ಸುತನ ಭೇದಿಸಿ ಕಂಭ ಬಂದೆ ಪಾದದಿ ಗಂಗೆ ಪೆತ್ತು ಬಾಧೆ ಕ್ಷತ್ರಿಯರಿಗಿತ್ತೆ ಆದರದಲಿ ಸುಗ್ರೀವನ ಪೊರೆದೆ ಯಾದವ ವಂಶ ಮಹೋದಧಿ ಚಂದ್ರ ಸಾಧಿಸಿ ತ್ರಿಪುರರ ಛೇಧಿಸಿ ಕಲಿಮುಖ- ರಾದ ದುಷ್ಟರ ಸೀಳಿ ಬಾಧೆಯ ಬಿಡಿಸಿದೆ 3 ಪದ್ಮನಾಭನ ತೋರೊ ಪದ್ಮಸಂಭವ ಜನಕ ಪದ್ಮನಾಭನೆ ಹೃತ್ಪದ್ಮ ಮಧ್ಯದಿ ವಾಸ ಪದ್ಮ ಬಾಂಧವ ತೇಜ ಪದ್ಮ ನಯನಕರ ಪದ್ಮದಿಂದಲಿ ನೀ ಪದ್ಮಾವತಿಯ ಕೂಡ್ದೆ ಪದ್ಮವೈರಿಯ ಕೋಟಿ ಮುದ್ದು ಮುಖದ ತೇಜ ಪದ್ಮ ಉದರ ಷಟ್ಪದ್ಮದಿ ವಾಸ ಪದ್ಮ ಸರೋವರ ತೀರವಾಸ ಹೃ ತ್ಪದ್ಮ ಮಧ್ಯದಿ ಭೂಪದ್ಮಿನಿ ಸಹಿತ 4 ಆಪಾರ ಮಹಿಮನೆ ಗೋಪಾಲಕೃಷ್ಣವಿಠ್ಠಲ ಭೂಪರೈವರ ಕಾಯ್ದೆ ದ್ರೌಪದಿ ಮಾನದೊಡೆಯ ನೀ ಪ್ರೀತಿಯಿಂದ ಪೋಗಿ ತಾಪವ ಬಿಡಿಸಿದೆ ವ್ಯಾಪಕನೊ ಜಗಸ್ಥಾಪಕನೊ ಬಹು ರೂಪಕನೊ ದುಷ್ಟತಾಪಕನೊ ಹರಿ ಪಾಪ ಹರಿಸಿ ಕರ್ಮಲೇಪನ ಮಾಡದೆ ಪರಿ ಪರಿಯಿಂದ ಕಾಪಾಡೊ ಭಕ್ತರ5
--------------
ಅಂಬಾಬಾಯಿ
ಬಯಲ ಜಾತ್ರೆಗೆ ನಡೆಹೋಗುವ ಬಾರದಲೆ ಅಲ್ಲಿರುವ ಪ ಶಾಂತಿ ಎಂದೆಂಬ ಕಂಟಲೆಗಳು ಶಮೆ ಹುರಿಗೆಜ್ಜೆ ಎತ್ತುಗಳುದಾಂತಿ ಎಂದೆಂಬ ಕಾವಡಿಗಳು ದಮೆ ಎಂಬ ಹೂಜೆಗಳು1 ಮಂಗಳವೆಂಬ ಬಾಲಕರು ಮುಕ್ತಿ ಎಂಬ ಮುತ್ತೈದೆಯರುಸಂಗ ಹರರಹ ವಿಟಗಾರರು ಸೈರಣೆ ಎಂಬ ಹಿರಿಯರು 2 ಸಂತೋಷವೆಂಬ ಅಂಗಡಿಗುಂಪು ಸಹಜದ ಹೂಕಂಪುಶಾಂತರೆನಿಪ ದೊರೆಗಳ ಗುಂಪು ಸುಖ ಛತ್ರಿಯ ತಂಪು 3 ಓಂಕಾರನಾದದ ನಗಾರಿ ವೀಣಾನಾದದ ತುತ್ತೂರಿಸಂಕಲ್ಪ ಸುಳ್ಳೆಂಬ ತಂಬೂರಿ ಸಾಮವೆನಿಸುವ ಭೇರಿ 4 ಅಮೃತ ಬಿಂದುವಿನ ಮೊಗೆಯುದಾರಿದಾರಿಗೆ ಸೋಹಂಸ್ಮರಣೆ ದೃಢ ಮನವದು ಚಡಿಯು 5 ಆನಂದ ವನಗಳ ಸಾರುತ ಆಯಾಸ ಕಳೆಯುತ್ತಸ್ವಾನಂದ ಗೋಪುರ ಕಾಣುತ ಸುಮ್ಮಾನವ ಪಡೆಯುತ6 ಮೃಢನಾಳ ದ್ವಾರವ ಪೋಗುತ ಮುಂದೆ ಚಂದ್ರನ ಕಾಣುತಅಡರಿದ್ವಿದಳ ಸದರೇರುತ ಅತ್ತತ್ತ ಸಾರುತ 7 ಕಮಲ ಪೀಠವನೇರುವರ ಮಹೇಶನೆನ್ನು ಅವರ8 ತುರೀಯವೆಂದೆಂಬ ಬಯಲಗೂಡಿ ತಾವು ಹೋಗುವ ನಾಡಿಹರ್ಷದ ಧೂಳ ದರ್ಶನ ಮಾಡಿ ಹಾಯಿಗುಡಾರ ಹೂಡಿ9 ಶಿಂಶುಮಾರವೇ ದೇವರ ಪೀಠ ಸಿದ್ಧವೆಂಬ ಕವಾಟಸಂಶಯವಿಲ್ಲದ ಎಡೆಯಾಟ ತತ್ಪುರುಷರ ಕೂಟ10 ಸೂರ್ಯ ಕೋಟಿಗೆ ಘನವುಒತ್ತೊತ್ತು ಪೂರ್ಣಾಭಿಷೇಕ ಓಂ ಎಂದೆಂಬ ಸ್ವರವು 11 ಸುವಾಸನೆ ಎಂದೆಂಬ ಧೂಪವು ಸುಂದರ ಪುಷ್ಪಗಂಧತಾವು ಮಾಡುವ ಭಾವದಲಿಂದ ತೃಪ್ತಿ ನೈವೇದ್ಯ ಚಂದ12 ಎರಡಿಲ್ಲದೇಕಾರ್ತಿ ಬೆಳಗುತ ಎಲ್ಲೆಡೆ ತಾ ಹೊಳೆಯುತಹೊರ ವೊಳಗೆಂಬುದ ಮರೆಯುತ ಹೇಮದ ತಗಡಾಗಿ ಇರುತ13 ಬೆಳಕ ಕಂಡಾರತಿ ಎತ್ತುತ ಬೆಳಗನು ಬೆಳಗುತ್ತತಿಳಿದು ಪ್ರದಕ್ಷಿಣೆ ಮಾಡುತ ತೋರುವುದು ಬ್ರಹ್ಮವದೆನ್ನುತ 14 ಭಯದ ವಿಸರ್ಜನೆ ಮಾಡುತ ಬಯಲಾಗಿಯೆ ತೋರುತಬಯಲ ಚಿದಾನಂದನಿಗೆರಗುತ್ತ ಬ್ರಹ್ಮನಾಗಿ ತಾನಿರುತ 15
--------------
ಚಿದಾನಂದ ಅವಧೂತರು
ಬಾರೋ ಬಾರೋ ರಂಗಯ್ಯಾ | ಅಂದುಗೆ ಗೆಜ್ಜೆ | ಝಣ ಝಣ ಝಣ ಝಣ ರವದಿಂದಾ ಪ ಕಡೆಗಣ್ಣು ಹೊಳವನು | ಅಡಿಗಡಿಗೆ ದೋರುತಾ | ಎಡಬಲದೋಳಿಂದೊಲಿದು | ದುಡುದುಡು ದುಡು ನಲಿಯುತಾ 1 ಪದಹತಿಗೆ ಮಯೂರಾ | ವದನ ತಗ್ಗಿಸುವಂತೆ | ಮುದದಿ ಗೆಳೆಯರವೆರಸಿ | ಒದಗಿ ಧಿಗಿಧಿಗಿ ಧಿಗಿಲೆನುತಾ 2 ಅಂದು ಉದಯದಲೆದ್ದು | ಬಂದು ಬೆಣ್ಣೆಯ ಬೇಡೆ | ಕಂದಾ ನೀ ಕುಣಿಯೆನಲು | ನಿಂದು ತೋರಿದ ಭಾವದಿಂದ 3 ಬಿರಮುಗುಳ ನಗುತಾ | ಪೆರೆ ನೊಸಲೊಳು ಮೆರೆವಾ | ಕರ್ಣ ಕುಂಡಲಾ | ಭರದಿಂದಾ ಒಲಿಯುತಾ 4 ಗುರು ಮಹಿಪತಿ ಸ್ವಾಮಿ | ಹಾರೈಸುವಾ ನಯನಕ | ಹರುಷದಿ ತೃಪ್ತಿಗೈವಾ | ಕರುಣಾ ಸಾಕಾರದಿಂದಾ5
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಬಾಲಕೃಷ್ಣವಿಠಲ | ಕಾಪಾಡೊ ಇವನಾ ಪ ನೀಲ ನೀರದ ವರ್ಣ | ಕಾಳಿಂದಿ ರಮಣ ಅ.ಪ. ಮೋದ ತೀರ್ಥರ ಮತದಿಹಾದಿಯಲ್ಲಿರುವವನ | ಕಾದುಕೋ ಹರಿಯೇವೇದಾಣಿ ಸನ್ನುತನೆ | ಭೇದ ಪಂಚಕ ತಿಳಿಸಿಮೋದ ಪಡಿಸುವುದಿವನ | ವೇದಾಂತ ವೇದ್ಯ 1 ವ್ಯಾಪ್ತೋಪಾಸಕ ಜೀವಿ | ಗಿತ್ರಿಹೆನೊ ಅಂಕಿತವಸುಪ್ತೀಶ ಪೇಳ್ದಪರಿ | ಗೋಪ್ತ ಮಹಿಮಾಆಪ್ತ ನಿವ ನೆಂದೆನುತ | ಗೊತ್ತು ಮಾಡಿಹೆ ದೇವದೀಪ್ತ ಮೂರುತಿ ಹರಿಯೆ | ತೃಪ್ತಿ ಪಡಿಸಿವನಾ 2 ಸ್ವಾಪದಲಿ ಸತ್ಪಂಚ | ಪುಷ್ಪ ಬಕುಳವನಿತ್ತುಶ್ರೀಪ ನಿನ್ನನುಗ್ರಹ | ಪ್ರಾಪಕದಸೂಚ್ಯಾನೀ ಪಾಲಿಸುತ್ತಿವಗೆ | ಬಾಷ್ವಾವಾನಂದುದರಿಸೋಪಾನ ಮುಕ್ತಿಗೆನೆ | ವ್ಯಾಪಾರ ನಿನದೋ 3 ಉಂಬುಡುವ ಕ್ರಿಯೆ ಸರ್ವ | ಬಿಂಬ ತಾಗೈಯೈ ಪ್ರತಿಬಿಂಬ ಕುಂಟೆಂಬುವಾ | ಸುಜ್ಞಾನವಿತ್ತುಗುಂಭ ಸಾದನದಿ ಹೃದ | ಯಾಂಬರದಿ ನೀತೋರಿಸಂಭ್ರಮದಲಿರಿಸಿವನ | ಅಂಬುಜದಳಾಕ್ಷ 4 ಎಲ್ಲೆಲ್ಲೂ ನಿನ್ನ ವ್ಯಾಪ್ತಿ | ಸೊಲ್ಲನುಣಿಸುತ ಹರಿಯೆಬಲ್ಲಿದರ ಸಂಗವನು | ಸಲ್ಲಿಸುತ ಇವಗೇಪಲ್ಲಿವಿಸೆ ಸುಜ್ಞಾನ | ಬೇಡ್ವೆ ನಿನ್ನನು ದೇವಚೆಲ್ವ ಹಯಮುಖ ಗುರು | ಗೋವಿಂದ ವಿಠಲಾ 5
--------------
ಗುರುಗೋವಿಂದವಿಠಲರು
ಬಿಡೋ ಇನ್ನು ಬಿಡೋ ಇನ್ನು ಪ ಕಡೆಗಾದರೂ ನಿನ್ನ ಹುಡುಗು ಬುದ್ಧಿಯನು ಅ.ಪ. ಜೀರ್ಣವಾಯಿತು ದೇಹವು ನಿನಗೆ ಜೀರ್ಣವಾಗಲಿಲ್ಲ ನೇಹವು ಕೊನೆಗೆ 1 ವಾಹನ ಮೃಷ್ಟಾನ್ನಗ ಳಾ ಮಹನೀಯನೊಲಿಸವೊ ಮೂಢ 2 ಸ್ನಾನ ದಾನ ಅಧ್ಯಯನಾದಿಗಳಿಗೆ ಶ್ರೀನಿವಾಸ ತಾನೊಲಿಯನೊ ಬರಿದೆ 3 ತಾಳ ಮೇಳ ಸಂಗೀತಾದಿಗಳನು ಕೇಳನು ಪ್ರೇಮದ ಭಾವವಿಲ್ಲದೊಡೆ 4 ಚಿತ್ತ ಮಲಿನವಿದ್ದು ಸತ್ಕಾರವಗೈಯ್ಯೆ ಆಪ್ತ ಕಾಮ ತಾ ತೃಪ್ತಿಯ ಪೊಂದನು 5 ಶ್ರೀಧರ ತಾ ದಯದಿಂದೊಲಿದಲ್ಲದೆ ಸಾಧನ ಮಾತ್ರಕ್ಕೆ ಒಲಿಯಲು ಸಾಧ್ಯವೆ 6 ನಳಿನನಯನನಾಜ್ಞೆಯ ನೀ ಪಾಲಿಸೆ ಒಲಿವನು ನಿಜವಿದು ನಲಿಯುತ ನಿನಗೆ 7 ಮೃಡವಂದಿತ ಶ್ರೀ ಕರಿಗಿರೀಶನೊಳ್ ದೃಢ ಭಕ್ತಿಯನಿಡು ಬಿಡದೆ ಪೊರೆವನೊ 8
--------------
ವರಾವಾಣಿರಾಮರಾಯದಾಸರು
ಬೃಂದಾವನವಿದೆಕೊ ಯತಿವರ ಪ ನಂದ ನಂದನ ಗೋವಿಂದನ ಪಾದಾರ ವಿಂದವ ಪೂಜಿಪ ಶ್ರೀರಾಘವೇಂದ್ರನ ಅ.ಪ ಮಂತ್ರಾಲಯದಿ ಸ್ವತಂತ್ರ ಭೂಮಿಕೆಯಲ್ಲಿ ಯಂತ್ರ ಸ್ಥಾಪನೆಗೈದು ಸಂತೃಪ್ತಿಯಾಂತು ಮಂತ್ರಾರ್ಥ ತತ್ವಗಳನುಪದೇಶ ಗೈಯುವ ಮಂತ್ರ ಸ್ವರೂಪನು ಸೇವಿಪ್ಪ ಪುಣ್ಯದ1 ಗುರುರಾಜರಾಜನು ಕರುಣಾಪಯೋಧಿಯು ನಿರುತ ಭಕ್ತರಿಗೆಲ್ಲ ವರವೀವ ದೊರೆಯು ಸರಸೀರುಹಾಕ್ಷ ಮಾಂಗಿರಿವಾಸ ರಂಗನ ಚರಣವ ತೋರುವ ಕೃಪೆಮಾಡುವಾತನ 2
--------------
ಅಸೂರಿ ರಾಮಸ್ವಾಮಿಅಯ್ಯಂಗಾರ್
ಬೊಂಬೆಯಾಟವನಾಡಿಸಿದೆ ಮಹಾಭಾರತದ ಪ ಅಂಬುಜಭವಾದಿ ಅಮರರು ನೋಡುತಿರಲು ಅ ಕುರುಭೂಮಿಯೆಂಬ ಪುರವೀಧಿಯನು ರಚಿಸಿಮರೆಯ ಮಾಯದ ಐದು ತೆರೆಯ ಹಾಕಿಧರಣೀಶರೆಂಬ ನರಪ್ರತಿಮೆಗಳನಳವಡಿಸಿನರನ ರಥವಾಜಿಯ ಸೂತ್ರವನು ಪಿಡಿದು 1 ಓದುವನು ನಾರದನು ವಾದ್ಯಕಾರನೆ ಶಂಭುಬಾದರಾಯಣದೇವ ಕಥಾಪ್ರಸಂಗಿಮೇದಿನಿಯ ಹೊರೆಗಳೆವ ಮೃತ್ಯುವಿನ ಹಾಸ್ಯರಸವೇದನಿಕರಗಳು ಕೈವಾರಿಸುತಿರಲು 2 ಹದಿನೆಂಟು ಅಕ್ಷೋಹಿಣಿ ಮಾರ್ಬಲವ ನೆರೆಸಿಹದಿನೆಂಟು ದಿನ ಕದನಕೇಳಿಕೆ ನಡೆಸಿಅದರೊಳೈವರನುಳುಹಿ ಅವನಿಭಾರವನಿಳುಹಿಮುದದಿ ಬ್ರಹ್ಮಕಪಾಲವನು ತೃಪ್ತಿಗೊಳಿಸಿ 3 ಲೋಕದೊಳಗೈದನೆಯ ವೇದವಿದೆಂದೆನಿಸಿಪಾಕಶಾಸನ ಸಭೆಯನು ಮೆಚ್ಚಿಸಿಈ ಕಥೆಯ ಕೇಳಿದ ಜನಮೇಜಯನ ಪತಿಕರಿಸಿತಾ ಕಪಟನಾಟಕದ ಸೂತ್ರಧರನೆನಿಸಿ 4 ಇಂತೆಸೆವ ಲೀಲಾವಿನೋದ ರಚನೆಗಳಿಂದ ಲೋ-ಕಾಂತರಂಗಳ ಸಂಚರಿಸುತಸಂತಸದಿ ಭರತ ಸಂಸಾರವನು ಪೊರೆವ ವೇ-ದಾಂತನುತ ಕಾಗಿನೆಲೆಯಾದಿಕೇಶವರಾಯ 5
--------------
ಕನಕದಾಸ
ಭವ ಎನಗೆ ಹರಿುತುಸದಯ ಗೋಪಾಲಾರ್ಯನ ಪದ ಕರುಣವಾಯ್ತೆನಗೆ ಪಮೊದಲು ಬಹು ಜನ್ಮಂಗಳಲ್ಲಿ ಮಾಡಿದ ಪುಣ್ಯಒದಗಿತೀ ಸಮಯದಲಿ ಧನ್ಯನಾದೆಸದಸದ್ವಿವೇಕ ಸಂಪತ್ತಿ ಮುಂತಾದ ಸತ್ವದ ಸಾಧನಂಗಳೊದಗಿದವೀಗಲೆನಗೆ 1ದೇವ ಋ ಪಿತೃ ಋಣಂಗಳು ತಿದ್ದಿದವು ಶುದ್ಧಭಾವನಾದೆನು ಕುಲ ಪವಿತ್ರವಾುತೆನ್ನಾಪಾವನತೆಯಾಗಿ ಜನನೀ ಜನಕರಿಗೆ ದೇವದೇವ ಪದವಾುತು ಕೃತಕತ್ಯ ನಾನಾದೆ 2ಸಕಲ ಸಂದೇಹಗಳಳಿದು ದೇಹಾತ್ಮ ಮತಿವಿಕಲವಾದುದು ನಿತ್ಯ ತೃಪ್ತಿಯಾುತುಪ್ರಕಟ ಗೋಪಾಲಾರ್ಯ ಪದವ ಸಾಕ್ಷಾತ್ಕರಿಸಿಸುಕರ ಸತ್ಯಾನಂದ ರೂಪ ನಾನಾದೆ 3
--------------
ಗೋಪಾಲಾರ್ಯರು
ಭವ ಮುಖ್ಯ ಸುರಗಣ ಮುನಿನಿಕರ ಸಿದ್ಧ ಪರಿವಾರವು 1 ಸರಿತು ಪ್ರವಾಹದಂತೆ ವಾಗ್ವೈಖರಿಯಿಂದ ನಿರುತ ತೃಪ್ತಿಪಡಿಸಲಾರರು ಇನ್ನು 2 ಉರು ಉಗ್ರಜಾತಿ ಅಸುರ ಕುಲದಿ ಪುಟ್ಟಿದ ನಾನು ನೆರೆ ತುತಿಸಿ ತೃಪ್ತಿಪಡಿಸಲಾಪೆನೆ ನಿನ್ನ 3 ಆದೊಡೆ ಕುಲ ರೂಪ ವಯಸ್ಸು ವಿದ್ಯೆಗೆ ನೀನು ಮೋದಪಡುವನಲ್ಲ ಭಕ್ತಿಯೊಂದಕೆ ನಲಿವೆ 4 ಕರಿರಾಜನೇ ಸಾಕ್ಷಿ ಕರುಣಾಮಯನೇ ನಿನ ಗಿರುವುದೇ ವೈಷಮ್ಯ ? ಭಕ್ತಗೆ ವಶ ನೀನು 5 ಅರವಿಂದನಾಭ ನಿನ್ನ ಚರಣಾರವಿಂದವನು ನಿರುತ ಭಜಿಸುವ ಉತ್ತಮನೆನಿಸುವ 6 ಸರುವ ಸ್ವತಂತ್ರ ಪೂರ್ಣಕಾಮ ನಿನ್ನನು ನಾವು ಹಿರಿದಾಗಿ ಆರಾಧಿಸಿ ತೃಪ್ತಿಪಡಿಸುವುದೇನೊ 7 ನಾವು ಮಾಡುವ ಕರ್ಮಸಾಧನದಿಂದ ನಿನಗೆ ಯಾವ ಫಲವೂ ಇಲ್ಲ ! ಫಲವೆಲ್ಲ ನಮಗಯ್ಯಾ 8 ಬಿಂಬವನಲಂಕರಿಸೆ ಕನ್ನಡಿಯೊಳಗೆ ಪ್ರತಿ ಬಿಂಬಕೆ ಅಲಂಕಾರ ಕಾಣುವ ಪರಿಯಲಿ 9 ತರಳನ ಮೊರೆಯನು ಲಾಲಿಸಿ ಪಾಲಿಸೊ 10 ನಮ್ಮ ಸಾಧನೆಗಾಗಿ ನಿನ್ನ ಆರಾಧಿಪೆವು ಬೊಮ್ಮನಯ್ಯನೆ ನಿನ್ನ ಆನುಗ್ರಹದಿಂದಲಿ 11 ಬ್ರಹ್ಮಾದಿ ಸುರರೆಲ್ಲ ನಿನ್ನ ಸೇವಕರಯ್ಯಾ ಹಮ್ಮು ಮತ್ಯಾತಕಯ್ಯಾ ನಮ್ಮಂಥವರಿಗೆಲ್ಲ 12 ನಿನ್ನ ಕೋಪಕೆ ಅಂಜಿ ನಡುಗದವರುಂಟೆ ಮನ್ನಿಸಿ ಕೋಪವ ಉಪಶಮ ಮಾಡೋ ಸ್ವಾಮಿ 13 ನಿನ್ನ ಈ ಉಗ್ರರೂಪ ಧ್ಯಾನವು ಜನರಿಗೆ ಘನ ಭಯವ ಕಳೆಯೆ ಸಾಧನವಾಗಲಿ 14 ದಿಗಿಲು ಪುಟ್ಟಿಸುವಂಥ ಈ ನಿನ್ನ ಮುಖ ಜಿಹ್ವೆ ಭೃಕುಟಿ ಕರಾಳ ದಂಷ್ಟ್ರ 15 ಕೊರಳಲ್ಲಿ ಧರಿಸಿಹ ಕರುಳ ಮಾಲಿಕೆ ರಕ್ತ ಬೆರದ ಕೇಸರ ಮತ್ತೆ ನಿಗುರಿದ ಕರ್ಣಗಳು 16 ಲೋಕ ಭಯಂಕರವಾಗಿವೆ ಆಂದೊಡೆ ಶ್ರೀಕರ ನಿನ್ನ ಕೃಪೆಯಲಿ ನಾನವಕೆ 17 ಅಂಜುವನಲ್ಲ ಕೇಳು ಕಂಜನಾಭನೆಯಿನ್ನು ಅಂಜುವೆನೊಂದಕೆ ಸಂಸಾರ ಚಕ್ರಕೆ 18 ತೊಳಲಿಸÀುವುದು ಜನ ದುಃಖದಿ ಸಂಸಾರ ಬಲು ಪರಿಯಲಿ ಅದು ದುಃಖದಿ ಸಾಗರ 19 ಇಷ್ಟವಾದದ್ದು ಕೊಡದೆ ಇಷ್ಟವಿಲ್ಲದ್ದುಣಿಸಿ ಭವ 20 ಸಂಸಾರ ಸಾಗರ ದಾಟಿಸೋ ಮಹಾಮಹಿಮ ಸಂಶಯವಿಲ್ಲದೆ ಸೇರಿಸೋ ನಿನ್ನ ಬಳಿ 21 ಕರುಣಾಸಾಗರ ನಮ್ಮ ಕರಿಗಿರೀಶನೆ ಸ್ವಾಮಿ ತರಳನ ಮೊರೆಯನು ಲಾಲಿಸಿ ಪಾಲಿಸೊ 22 ( ಪ್ರಹ್ಲಾದ ನರಹರಿಯನ್ನು ಸ್ತುತಿಸಿದ್ದು )
--------------
ವರಾವಾಣಿರಾಮರಾಯದಾಸರು