ಒಟ್ಟು 35 ಕಡೆಗಳಲ್ಲಿ , 22 ದಾಸರು , 33 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಪಂಚಮಿಯ ದಿನರಂಭೆs :ಏನಿದು ಇಂದಿನವಿಭವನಮ್ಮಶ್ರೀನಿವಾಸನ ಮಹಾತ್ಮವಮಾನಿನಿರನ್ನೆ ನೀ ಪೇಳೆ ಭಕ್ತಾ-ಧೀನದ ಚರಣದ ಲೀಲೆಭಾನುಉದಯದಲಿ ವೀಣಾದಿ ಸು-ಗಾನ ವಾದ್ಯ ನಾನಾವಿಧ ರಭಸದಿ 1ಎತ್ತಲು ನೋಡಿದಡತ್ತ ಜನ-ಮೊತ್ತವಿಲಾಸವಿದೆತ್ತಚಿತ್ತದಿ ನಲಿನಲಿದಾಡಿ ತೋಷ-ವೆತ್ತಿರುವನು ಒಟ್ಟುಗೂಡಿಸುತ್ತುಮುತ್ತು ಒತ್ತೊತ್ತಿಲಿಹರು ವಿ-ಪ್ರೋತ್ತಮ ಶ್ರೀಹರಿಭಕ್ತರ ಮಯವಿದು 2ಚಾಮರ ಛತ್ರ ಸಿಗುರಿಯು ಜನ-ಸ್ತೋಮಪತಾಕೆ ತೋರಣವುಹೇಮದ ಕಂಚುಕಿ ಈಟಿ ಗುಣ-ಧಾಮನ ಬಿರುದುಗಳ್ ಕೋಟಿಆ ಮಹಾಭೇರಿ ಪಟಹ ನಿಸ್ಸಾಳಕಸಾಮಗಾನ ಸಾಮ್ರಾಜ್ಯವೋಲಿಹುದು 3ಬಾಲರು ವೃದ್ಧ ಯೌವನರು\ಜನ-ಜಾಲವೆಲ್ಲರು ಕೂಡಿಹರುಲೋಲಸ್ರೀಮುಂದ್ರಾಂಕಿತದಿ ಬಹು ವಿ-ಶಾಲ ದ್ವಾದಶನಾಮ ಮುದದಿಆಲಯದೊಳಗಿಹ ಬಾಲಕಿಯರು ಸಹಸಾಲಂಕೃತ ಸಮ್ಮೇಳದಿ ನಲಿವರು 4ಒಂದು ಭಾಗದಿ ವೇದಘೋಷ ಮ-ತ್ತೊಂದು ಭಾಗದಿ ಜನಘೋಷಇಂದಿನ ದಿನದತಿಚೋದ್ಯ ಏ-ನೆಂದು ವರ್ಣಿಸುವದಸಾಧ್ಯಚಂದಿರಮುಖಿ ಯಾರೆಂದೆನಗುಸುರೆಲೆಮಂದರಧರಗೋವಿಂದನ ಮಹಿಮೆಯ5ಪೇಳಲೇನದಾ ಮೂರ್ಲೋಕದೊಳಗೀ ವಿ-ಶಾಲವ ನಾ ಕಾಣೆ ಪ.ಸೋಜಿಗಸೌಭಾಗ್ಯ ಸಂಪದಕಿದು ಬೀಜ ಕಾಣೆಲೆರಾಜೀವನಾಭನ ಪೂಜಾವಿನೋದದಿರಾಜವದನೆ ವನಭೋಜನದಿಂದಿನ 1ನೇತ್ರದ ಕಲ್ಮಷವಡಗುವದು ಪವಿತ್ರವಾಗಿಹಗೋತ್ರಕುಮಾರಿ ಪ್ರೀತ್ಯರ್ಥದಿ ಕೊಟ್ಟಿಹರಾತ್ರಿ ಪೂಜೆ ಗೈವ ಮಾತ್ರದಿ ಪೊರಟರು 2ಇಂದಿನ ದಿನದಂದವನೂತನವೆಂದು ನೀ ಪೇಳುವಿಚಂದಿರ ಮುಖಿ ಜನಸಂದಣಿಗಳು ಮಹಾಮಂದಿ ಓಲೈಸುವರಿಂದು ಮುಕುಂದನ 3ಬಾರೆ ನಾರೀಮಣಿ ವೈಯ್ಯಾರೆ ನೀರೆ ಬಾರೆ ಪ.ನಿನ್ನಿಂದಾಯಿತ್ತು ಪುಣ್ಯ ಸಂಪಾದನೆ ಕಣ್ಣಾರೆಕಾಣುವ ಯೋಗಭೋಗ 1ಎನಗತಿ ಮನವು ನಿನಗತಿ ಛಲವುಜನುಮಾಂತರ ಪುಣ್ಯವೈಸೆ ನೀ 2ರಂಭೆ : ಏನಮ್ಮ ಬಾರಿತ್ತಲು ನೋಡೀತನ್ಯಾರಮ್ಮಾಭಾನುಕೋಟಿ ಪ್ರಕಾಶದಿಂದ ಮೆರೆವನಮ್ಮಾ ಪ.ಅನವರತದಿಂದ ಬರುವ ಪುರುಷನಲ್ಲಮೀನಕೇತನ ಶತರೂಪ ಕಾಣೆ 1ನೂತನ ಪುರುಷನಿವನ್ಯಾರೆಂದರಿಯೆನಮ್ಮಾಶಾತಕುಂಭದ ಮಂಟಪವೇರಿ ಬರುವನಮ್ಮಾ 2ಸುರುಚಿರಫಣಿಪ ಪೆಡೆ ಶಿರದೊಳಿರುವದಮ್ಮಾತರತರ ರತ್ನವರದ ಬಾಯೊಳಿರುವದಮ್ಮಾ 3ಕೊರಳೊಳು ಕೌಸ್ತುಭವ ಧರಿಸಿಕೊಂಡಿಹನಮ್ಮಾಪರಮಪುರುಷನಂತೆ ತೋರುವನು ಅಮ್ಮಾ4ಬಾಲಾರ್ಕನಂತೆ ಮುಖ ಪ್ರಜ್ವಲಿಪುದುನೀಲಮಾಣಿಕ್ಯ ಕಾಂತಿಯ ಸೋಲಿಪುದು 5ಮೂರ್ಲೋಕದೊಳಗೆ ಸರಿಯುಪಮೆತೋರಲರಿಯೆಕಾಲಿಗೆರಗುವೆನು ಪೇಳಬೇಕು ಸಖಿಯೆ 6ಕರದೊಳು ಶಂಖಚಕ್ರವ ಧರಿಸಿಕೊಂಡಿಹನಮ್ಮಾಬೆರಳೊಳು ವಜ್ರದುಂಗುರವನಿಟ್ಟವನಮ್ಮಾ 7ವರರತ್ನಖಚಿತದಾಭರಣದಿಂದ ಮೆರೆವಚರಣಸರೋಜದೊಳು ರೇಖೆಯಿಂ ಶೋಭಿಸುವ8ವಲ್ಲಭೆಯರ ಸಹಿತುಲ್ಲಾಸದಿ ಬರುವಖುಲ್ಲರ ಮಾನಸಕೆ ಝಲ್ಲೆನಿಸಿ ಮೆರೆವ 9ಬಲ್ಲಿದಪುರುಷನಿವನೆಲ್ಲಿಂದ ಬಂದಎಲ್ಲವ ಪೇಳೆಲೆಗೆ ನಲ್ಲೆ ಸದಾನಂದ 10ಊರ್ವಶಿ :ನೋಡುನಿತ್ಯಾನಂದಕರನಮೂಡಗಿರಿಯಿಂದೋಡಿ ಬಂದನ ನೋಡೆ ಪ.ಛಪ್ಪನ್ನೈವತ್ತಾರು ದೇಶಕಪ್ಪಕಾಣಿಕೆಗೊಂಬ ತೋಷಸರ್ಪಶೈಲ ರಾಜವಾಸಚಪ್ಪರ ಶ್ರೀ ಶ್ರೀನಿವಾಸ 1ತಿರುಗುತ್ತಿಪ್ಪಾ ತಿರುಮಲೇಶಶರಣ ರಾಮನ ಭಕ್ತಿಪಾಶದುರುಳಿನಲಿ ನಿಂದಿರ್ಪಶ್ರೀಶತರಿಸುವನುಕಾಣಿಕೆವಿಲಾಸ2ಪಟ್ಟದರಸನಾದ ದೇವಸೃಷ್ಟಿಯಾಳುವಜಾನುಭಾವದೃಷ್ಟಿಗೋಚರವಾಗಿ ಕಾಯ್ವಇಷ್ಟವೆಲ್ಲವ ಸಲಿಸಿ ಕೊಡುವ 3ವೃಂದ ನೆರಹಿ ವನಕೆಅಂದಣವೇರಿ ಮುಕುಂದನೊಲವಿನಲಿಕುಂದಣಮಂಟಪವೇರಿ ಮತ್ತೊಬ್ಬನುಸಂದರುಶನವಂ ನೀಡುತ ಯಿಬ್ಬರುಒಂದಾಗುತ್ತಾನಂದವ ಬೀರುತ್ತ 1ಅಕ್ಕ ನೀನೋಡುಬಹುಮಾನದಿಸಿಕ್ಕಿದಿ ಬಿರುದು ಪೊತ್ತಾತೆಕ್ಕೆಪಕ್ಕೆಯ ವಿಲಾಸ ಮನಸಿನೊಳುಉಕ್ಕುವದತಿ ತೋಷಇಕ್ಕೆಲದಲಿ ಬೀಸುವ ಚಾಮರಗಳ ವಕ್ಕಣಿಸುವಸ್ತುತಿಪಾಠಕ ಜನಗಳಮಿಕ್ಕಿ ನೊಡುವ ನೋಟಕೆ ಮನಸಿನೊಳುಝಕ್ಕೆನ್ನುವ ಕ್ಷಿತಿಗಕ್ಕಜ ತೋರುತ್ತಾ 2ಛತ್ರ ಚಾಮರ ತೋರಣ ಪತಾಕೆಪವಿತ್ರ ನಿಶಾನಿಧಾರಣಾಸುತ್ರಾಮಾರ್ಚಿತ ಚರಣಭಕ್ತರನುಪವಿತ್ರಗೈಯುವ ಕಾರಣಮಿತ್ರಮಂಡಳವನು ಮೀರಿ ಪೊಳೆವುತಿಹರತ್ನಖಚಿತ ಮಂಟಪದಲಿ ಮಂಡಿಸಿಧಾತ್ರಿಯೊಳಗೆ ಅನ್ಯತ್ರವಿಲ್ಲೆಂಬುವಕೀರ್ತಿಯ ಧರಿಸಿ ಜಗತ್ರಯಪಾವನ 3ವಾಲಗಶ್ರುತಿಭೇರಿಡಿಂಡಿಮನಿಸ್ಸಾಳ ಪಟಹಭೂರಿತಾಳ ಮೃದಂಗ ರವದಿಂದಜನಜಾಲಕೂಡಿರುವಮೇಳವಿಸುತ್ತನುಕೂಲಿಸಿ ಬಹು ಬಿರುದಾಳಿಗೆ ಸಂಭ್ರಮದೇಳಿಗೆಯಿಂದಲಿಕೋಲು ಪಿಡಿದು ಓಹೋಯೆಂಬಂಥ ವಿ-ಶಾಲ ಭಕ್ತರ ಮೇಲು ಸಂತೋಷದಿ 4ದೇಶದೇಶದ ಜನರು ನಾನಾ ವಿಧಭಾಷೆ ಪ್ರವರ್ತಕರುಆಶಾಪಾಶರು ಪಾತಕಮಾನಸ-ರೀ ಸಮಯದಿ ಶ್ರೀನಿವಾಸನೆ ಎಮ್ಮಯದೋಷಗಳೆಲ್ಲವ ನಾಸಿಸು ಯೆನುತಭಿ-ಲಾಷೆಯ ಜನಗಳ ಪೈಸರದಿಂದಲಿ 5ವೇದಶಾಸ್ತ್ರಪೌರಾಣಪ್ರಜÕರು ತರ್ಕವಾದಿಪಾಠಕ ಜಾಣಸಾಧು ಕುಶಲದಿ ವಿದ್ಯಾಪ್ರವೀಣವಿನೋದ ಸಿದ್ಧ-ಸಾಧ್ಯ ಸಾದರದಿಂದ ಸರಸಕವಿ ವಾಗೀಂ-ದ್ರಾದಿಗೀರ್ವಾಣಸಮುದಾಯದಿಂದ ಕೃ-ಪೋದಯ ತೋರುತ್ತಾದಿಮೂರುತಿ ಜಯ-ನಾದದಿ ಭಕ್ತರಮೋದಪಡಿಸುತ್ತಾ6ರಂಭೆ : ನಾರಿ ಕೇಳೆ ಶ್ರೀರಮಾಧವಸ್ವಾರಿ ಪೊರಟ ಕಾರಣ ಪೇಳೆ 1ಯಾವ ರಾಜ್ಯದಿ ಪ್ರಭುದೇವಸ್ವಾರಿಯಠೀವಿಯ ಕಾಣೆ ಅಂತರ್ಭಾವವೇನೆ 2ಭೂರಿದೇಶವ ಸಂತತಪ .ವೀರವೈಷ್ಣವ ಭಕ್ತರು ಸದ್ಭಕ್ತಿಯಸಾರದಿ ನಿಲಿಸಿದರುಮಾರಜನಕನಿಗೆ ಮನನಿಲ್ಲದೆ ಸಂ-ಚಾರಕೆ ತಾ ಮೈದೋರಲು ಬೇಕೆಂ-ಬೀ ರೀತಿಗೆ ತಾ ಪೂರ್ವಸ್ಥಾನ ವಿ-ಚಾರಕೆ ಬಂದಿಹ ಕಾರಣವೀಗಲೆ 1ರಾಜ ಬಂದನೆ ಅಮ್ಮಾ ಆಶ್ರಿತಸುರ-ಭೂಜಬಂದನೆ ಅಮ್ಮಾಓಜೆಯಿಂದಲಿ ಕಾಣಿಕೆಯನ್ನು ಒಪ್ಪಿಸಿರಾಜಕದಿವ್ಯಾರತಿಯನು ಎತ್ತುತರಾಜೀವನಾಭನೆ ರಕ್ಷಿಸೆನುತ್ತಲಿಸೋಜಿಗಪಟ್ಟೆಲ್ಲಾಜನವಿರ್ದುದು 2
--------------
ಪಾವಂಜೆ ಲಕ್ಷ್ಮೀನಾರ್ಣಪ್ಪಯ್ಯ
ಬಗೆಬಗೆ ಆಟಗಳೆಲ್ಲಿ ಕಲಿತೆಯೊ |ಜಗದ ಮೋಹಕನೆ ಪಖಗವರಗಮನನೆಅಗಣಿತಮಹಿಮನೆ |ಜಗದೊಳು ನೀ ಬಹು ಮಿಗಿಲಾಗಿ |ಪರಿಅ.ಪಒಬ್ಬಳ ಬಸಿರಿಂದಲಿ ಬಂದು-ಮ-|ತ್ತೊಬ್ಬಳ ಕೈಯಿಂದಲಿ ಬೆಳೆದು ||ಕೊಬ್ಬಿದ ಭೂಭಾರವನಿಳುಹಲು ಇಂಥ |ತಬ್ಬಿಬ್ಬಾಟಗಳೆಲ್ಲಿ ಕಲಿತೆಯೊ 1ಮಗುವಾಗಿ ಪೂತಣಿ ಮೊಲೆಯ-ಉಂಡು |ನಗುತಲವಳ ಅಸುವನೆ ಕೊಂಡು |ಅಘಹರ ನೀ ಗೋಪಿಯೊಳು ಜನಿಸಿ ಇಂಥ |ಸೊಗಸಿನ ಆಟಗಳೆಲ್ಲಿ ಕಲಿತೆಯೊ 2ಲೋಕರಂತೆ ನೀ ಮಣ್ಣನು ತಿನಲು |ತಾ ಕೋಪಿಸಿ ಜನನಿಯು ಬೇಗ ||ಓಕರಿಸೆನ್ನಲು ಬಾಯೊಳು ಸಕಲ |ಲೋಕವ ತೋರಿದುದೆಲ್ಲಿ ಕಲಿತೆಯೊ | 3ಮಡುವ ಧುಮುಕಿ ಕಾಳಿಂಗನ ಪಿಡಿದು |ಪಡೆಯ ಮೇಲೆ ಕುಣಿದಾಡುತಿರೆ ||ಮಡದಿಯರು ನಿನ್ನ ಬಿಡದೆ ಬೇಡಲು |ಕಡುದಯೆದೋರಿದುದೆಲ್ಲಿ ಕಲಿತೆಯೊ | 4ಒಂದುಪಾದಭೂಮಿಯಲಿ ವ್ಯಾಪಿಸಿ ಮ-|ತ್ತೊಂದುಪಾದಗಗನಕ್ಕಿಡಲು ||ಅಂದದಿ ಬಲಿಯ ಶಿರದಿ ಮೂರನೆಯದಿಟ್ಟು |ಬಂಧಿಸಿದಾಟಗಳೆಲ್ಲಿ ಕಲಿತೆಯೊ | 5ಭರದಿ ಭಸ್ಮಾಸುರ ವರವನು ಪಡೆದು |ಹರನು ಶಿರದಿ ಕರವಿಡ ಬರಲು ||ತರುಣಿರೂಪವ ತಾಳಿ ಉರಿಹಸ್ತದವನ |ಮರುಳುಗೊಳಿಸಿದುದನೆಲ್ಲಿ ಕಲಿತೆಯೊ | 6ಜಗಕೆ ಮೂಲನೆಂದು ನಾಗರಾಜ ಕರೆಯೆ |ಖಗವಾಹನನಾಗದೆ ನೀ ಬಂದು ||ನಗುತ ನಗುತ ಆ ವಿಗಡನಕ್ರನ ಕೊಂದ |ಹಗರಣದಾಟಗಳೆಲ್ಲಿ ಕಲಿತೆಯೊ 7ವೇದಗಳರಸಿಯು ಕಾಣದ ಬ್ರಹ್ಮ ನೀ-|ನಾದರದಲಿ ವಿದುರನ ಗೃಹದಿ ||ಮೋದದಿ ಒಕ್ಕುಡಿತೆಯ ಪಾಲನೆ ಕೊಂಡು |ಹಾದಿಯೊಳ್ ಹರಿಸಿದುದೆಲ್ಲಿ ಕಲಿತೆಯೊ 8ಡಂಬಕಹಿರಣ್ಯಕಶಿಪು ಪ್ರಹ್ಲಾದನ |ಹಂಬಲವಿಲ್ಲದೆ ಶಿಕ್ಷಿಸಲು ||ಸ್ತಂಭದಿ ಭಕ್ತಗೆ ರೂಪವ ತೋರಿ |ಸಂಭ್ರಮವಿತ್ತುದನೆಲ್ಲಿ ಕಲಿತೆಯೊ 9ಚಕ್ರಧರನೆ ಜರಾತನಯನೊಂದಿಗೆ ಕಾದಿ |ಸಿಕ್ಕಿ ಓಡಿದವನಿವನೆಂದೆನಿಸಿ ||ಭಕ್ತ ಭೀಮನ ಕೈಯಲಿ ಕೊಲ್ಲಿಸಿದ |ಠಕ್ಕಿನಾಟಗಳನೆಲ್ಲಿ ಕಲಿತೆಯೊ | 10ಆ ಶಿರವಾತನ ತಂದೆಯ ಕರದೊಳು |ಸೂಸುತ ರಕ್ತವ ಬೀಳುತಿರೆ ||ಸೋಸಿ ನೋಡದೆ ರುಂಡ ಬಿಸುಡಲವನ ಶಿರ |ಸಾಸಿರ ಮಾಡಿದುದೆಲ್ಲಿ ಕಲಿತೆಯೊ 11ಪ್ರಾಣ ಸೆಳೆವನೀ ದಿನವೆಂದರ್ಜುನ |ಧೇನಿಸದಲೆ ಸೈಂಧವಗೆನಲು ||ಕಾಣದಂತೆ ಸೂರ್ಯಗೆ ಚಕ್ರವನಿಟ್ಟು |ಬಾಣ ಹೊಡಿಸಿದುದನೆಲ್ಲಿ ಕಲಿತೆಯೊ 12ಸರ್ಪನ ಬಾಣವು ಉರಿಯುತ ಬರಲು ಕಂ-|ದರ್ಪನ ಪಿತ ನೀ ಕರುಣದಲಿ ||ತಪ್ಪಿಸಿ ಪಾರ್ಥನ ರಥ ನೆಲಕೊತ್ತಿ |ತೋರ್ಪಡಿಸಿದಾಟವೆಲ್ಲಿ ಕಲಿತೆಯೊ 13ದುರುಳದುಃಶಾಸನ ದ್ರೌಪದಿ ಸೀರೆಯ |ಕರದಿಂದ ಸಭೆಯೊಳು ಸೆಳೆಯುತಿರೆ ||ಹರಿಶ್ರೀ ಕೃಷ್ಣ ನೀ ಪೊರೆಯೆನಲಾಕ್ಷಣ |ಅರಿವೆ ರೂಪದೆ ಬಂದುದೆಲ್ಲಿ ಕಲಿತೆಯೊ 14ಕುರುಪತಿ ಸಭೆಯೊಳು ಗುರುವಿನಿಂದಿರುತ |ಸಿರಿಕೃಷ್ಣನು ಬರೆ ವಂದಿಸದೆ ||ಸ್ಥಿರವಾಗಿ ಕುಳಿತಿರೆ ಚರಣದಿ ಧರೆಮೆಟ್ಟಿ |ಕುರುಪನನುರುಳಿಸಿದ್ದೆಲ್ಲಿ ಕಲಿತೆಯೊ | 15ದುರಿಯೋಧನ ಪಾಂಡವರ ಶಿಕ್ಷಿಸಲು |ಮೊರೆಯಿಡಲವನ ಮರುಳುಗೊಳಿಸಿ ||ಧುರದೊಳುಪಾರ್ಥಗೆ ಸಾರಥಿಯಾಗಿ ನೀ |ಕುರುಕುಲವಳಿದುದನೆಲ್ಲಿ ಕಲಿತೆಯೊ | 16ಪತಿಶಾಪದಿ ಶಿಲೆಯಾದ ಅಹಲ್ಯೆಯ |ಹಿತದಿಂದವಳನು ಉದ್ಧರಿಸಿ ||ಪತಿಯೊಡಗೂಡಿಸಿ ಪತಿವ್ರತೆಯೆನಿಸಿದ-ಅ-|ಮಿತಮಹಿಮೆಯ ಕೃತಿಯೆಲ್ಲಿ ಕಲಿತೆಯೊ 17ಅಂಬರೀಷ ದ್ವಾದಶಿ ವ್ರತ ಸಾಧಿಸೆ |ಡೊಂಬೆತನದಿದೂರ್ವಾಸಬರೆ ||ಇಂದುಧರಾಂಶನು ರಾಜನ ಪೀಡಿಸ-|ಲಂದು ಚಕ್ರದಿ ಕಾಯ್ದುದೆಲ್ಲಿ ಕಲಿತೆಯೊ | 18ಕುಲಛಲಗಳನಳಿದ ಅಜಮಿಳ ಸರಸದಿ |ಹೊಲತಿಯ ಕೂಡಿರೆ ಮರಣ ಬರೆ ||ಬಲು ಮೋಹದ ಸುತ ನಾರಗನೊದರಲು |ಒಲಿದು ಗತಿಯನಿತ್ತುದೆಲ್ಲಿ ಕಲಿತೆಯೊ 19ಬಡತನ ಪಾರ್ವನ ಬಿಡದೆ ಬಾಧಿಸಲು |ಮಡದಿಯ ನುಡಿಕೇಳಿಆಕ್ಷಣದಿ ||ಒಡೆಯ ನೀನವನೊಪ್ಪಿಡಿಯವಲನು ಕೊಂಡು |ಕಡುಭಾಗ್ಯನಿತ್ತುದನೆಲ್ಲಿ ಕಲಿತೆಯೊ | 20ಎಂದೆಂದು ನಿನ್ನ ಗುಣವೃಂದಗಳೆಣಿಸಲು |ಇಂದಿರೆಬೊಮ್ಮನಿಗಸದಳವು ||ಮಂದರಧರಸಿರೆಪುರಂದರವಿಠಲನೆ |ಚೆಂದ-ಚೆಂದದಾಟಗಳೆಲ್ಲಿ ಕಲಿತೆಯೊ 21
--------------
ಪುರಂದರದಾಸರು
ಮಾವಗೆ ನೀ ಮತ್ತೆ ಮಾವನಾದೆಯೊ ರಂಗ |ಮಾವನ ಮಗಳ ನೀ ಮದುವೆಯಾದೆಯೊ ರಂಗ ||ಭಾವಗೆ ನೀ ಮತ್ತೆ ಭಾವನಾದೆಯೊ ರಂಗ |ಭಾವಜವೈರಿಗೆ ಸಖನಾದೆಯೊ ರಂಗ 2ಅತ್ತೆಯ ಅರ್ಥಿಯಿಂದಾಳಿದೆಯೋ ರಂಗ |ಅತ್ತೆಯ ಮಗಳ ನೀ ಮದುವೆಯಾದೆಯೊ ರಂಗ ||ಮತ್ತೊಬ್ಬರಿಗುಂಟೆ ಈಪರಿಮಹಿಮೆಯು |ಕರ್ತೃ ಶ್ರೀ ಪುರಂದರವಿಠಲನಿಗಲ್ಲದೆ3
--------------
ಪುರಂದರದಾಸರು