ಒಟ್ಟು 660 ಕಡೆಗಳಲ್ಲಿ , 82 ದಾಸರು , 556 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಅಥ ಹನುಮದ್ವ್ರತ ಕಥಾ ಸುಳಾದಿ ಧ್ರುವ ತಾಳ ವೃತವೆ ಉತ್ತಮ ವೃತವೆಂದು ಪೇಳಿಹರು ಅತುಳ ಜ್ಞಾನನಿಧಿ ವಿಜಯಾಖ್ಯ ಗುರುಗಳು | ಸತತ ಅಧ್ಯಾತುಮ ಅನಂತ ವೃತವೆಂದು | ಕ್ಷಿತಿಯೊಳು ಈ ವೃತಕೆÀ ಸರಿಗಾಣೆನೊ | ಪತಿತ ಮಾನವರ ಉದ್ಧಾರಗೋಸುಗವಾಗಿ ದ್ವಿತಿಯ ಉತ್ತಮ ವೃತವು ಹನುಮದ್ಪ್ರತವೂ | ಯತನ ಜ್ಞಾನೇಚ್ಛಾ ಶಕ್ತ್ಯಾದಿಗಳಿಗೆ ನಿರುತ | ಜತೆಯಾಗಿ ಕಾರ್ಯ ಮಾಳ್ಪ ಜ್ಞಾನಾಖ್ಯವೃತವೊ | ಅತಿಶಯವಾದ ಜ್ಞಾನ ಭಕ್ತಿ ವಿರಕ್ತಿವೀವುದು | ಮತಿವಂತರು ಮನಕೆ ತಂದು ತಿಳಿದು | ಕ್ಷಿತಿಪತಿ ಧರ್ಮರಾಜನೆಸಗಿದ ಮಹಾ ವೃತವೊ | ಪತಿಭಕುತಿಯುಕುತಳಾದ ದ್ರೌಪದಿಯು | ಪತಿ ಮೂರ್ಲೋಕದ ಶ್ರೀ ಕೃಷ್ಣನುಪದೇಶದಂತ್ಯೆ | ಮಿತ ಜ್ಯಾನದಿಂದ ಚರಿತ ವ್ರತವೊ | ಹಿತವಂತ ಹನುಮಂತ ಪಿತ ರಾಮನಿಗೆ ಪೇಳೆ ಆ | ಚ್ಯುತನಾದ ರಾಮನುಮತಿವಾನ್ ಹನು | ಮಂತನ ಭಕುತಿಗೊಲಿದು ಮಾಡ್ಡ ವೃತವೊ | ಸತತ ಸೂತರು ಶೌನಕಾದ್ಯರಿಗಿದರ ಮಹಿಮೆ | ಮಿತಿ ಇಲ್ಲದೇ ಪೇಳಿ ಮಾಡಿಸಿದ ವೃತವೊ | ವೃತತಿಜಾಸನ ಪ್ರಿಯ ಸುತ ಸುಂದರ ವಿಠಲನ ಭ | ಕುತಿ ಜ್ಞಾನವೀವ ಮಹಾ ಶ್ರೇಷ್ಠ ವೃತವೊ 1 ಮಟ್ಟತಾಳ ಜಾನ್ಹವೀ ತೀರದಲಿ ಶೌನಕಾದ್ಯ ಮುನಿಗಳು | ಧ್ಯಾನಿ ಸೂತರ ಕುರಿತು ಸಾನುರಾಗದಿ ನಮಿಸಿ | ಮೇಣು ಭಕುತಿಯಿಂದ ಙÁ್ಞನವಂತರೆ ನಿಮ್ಮಿಂ | ನಿತ್ಯ | ಧೇನಿಸುವೆವು ಹರಿಯಾ ಪುನೀತರ ಮಾಡುವಾ | ಕಾಣೋವನ್ಯ ವೃತವು ಆವುದುಪೇಳೆನಲು | ನಿತ್ಯ ಶೂದ್ರಾದಿ ನಾಲ್ಕು | ಜಾಣ ವರ್ಣರಿಂದ ಮಾಡ್ವದಕ್ಕೆ ಯೋಗ್ಯವೊ | ಏನು ಬೇಡಿದರೆ ತಡಿಯದೆ ಕೊಡುವುದೊ | ಜ್ಞಾನಿ ಜನಗಳಿಗೆಲ್ಲ ಮಂಗಳತಮ ವೃತವು | ಪುತ್ರಾದಿಗಳೀವುದು ಶ್ರೇಣಿ ದಿನ ಪ್ರತಿ ದಿನದಲ್ಲಿ ವರವಿದ್ಯ ಪ್ರದವೊ ಹಾನಿ ಲಾಭಗಳಲ್ಲಿ ಹನುಮಂತನ ನೆನಸೆ | ಮಾನನಿಧಿ ಸುತ ಸುಂದರ ವಿಠಲನ | ಧ್ಯಾನ ಧಾರಣವೀವ ಉತ್ತುಮಾಮಹವೃತವೊ 1 ರೂಪಕ ತಾಳ ಒಂದಾನೊಂದು ಸಮಯದಲ್ಲಿ ಶ್ರೀ ವ್ಯಾಸ ಶಿಷ್ಯ | ವೃಂದದಿಂದೊಡಗೂಡಿ ಯುಧಿಷ್ಠರನ ನೋಡಲು | ಅಂದುಳ್ಳ ದ್ವೈತ ವನಕೆ ನಡೆತಂದರು ಏನಂಬೆ | ಚಂದಾದ ನಿರ್ವೈರ ಮೃಗವೃಂದಗಳಿಂ ಕೂಡಿರುವ | ಕುಂದ ಮಂದಾರಾದಿ ಪುಷ್ಪಫಲ ವೃಕ್ಷಗಳಿಂ ಶೋಭಿಪ | ಕುಂದು ದೂರೋಡಿಸಿದ ಜ್ಞಾನಿಗಳ ಸಮೂಹವು | ಛಂದದಲಿ ಕಾವ್ಯಷಡಂಘ್ರಿ ನಿರತರಾಗಿ | ಮುಂದೆ ಅಧ್ಯಯನ ಶ್ರುತಸಂಪನ್ನರಾದವರು | ಒಂದೊಂದು ವೇದ ಋಗು ಯಜು:ಸಾಮಾಥರ್ವಣ ಒಂದೋಂದು ಶಾಖಾಶಾಸ್ತ್ರದಿ ಪ್ರವಚನಾಸಕ್ತರು | ಮಿಂದು ಹರಿಪದಜಲದಿ ಚತುರ ವೇದ ಘೋಷದಿ | ಸಂದೇಹವಿಲ್ಲದಲೇ ಭಗವದ್ಗೀತಾ ಲೀಲಾ | ಎಂದೆಂಬುವ ಹರಿಕಥಾಮೃತ ಪಾನ ಮಾಡುವ | ಸಂದೋಹ ಮುನಿಗಳಿಗೆ ನಿತ್ಯನ್ನದಾನವ ಮಾಡಿ | ಬಂಧುಗಳಿಂ ಸಹಿತ ಇರುವ ಯುಧಿಷ್ಟರನನ್ನು | ಸುಂದರ ವಿಠಲಾತ್ಮಕ ವ್ಯಾಸದೇವನು | ಅಂದು ದ್ವೈತವನದಲ್ಲಿ ಕೃಪಾ ದೃಷ್ಟಿಯಿಂದ ನೋಡಿದನು 3 ಕೃಷ್ಣದ್ವೈಪಾಯನಾ ಮುನಿಗಳಾಗಮ ಕೇಳಿ | ಕೃಷ್ಣೆ ಸಹಿತಾ ಅನುಜರೊಡನೆ ಕೂಡಿ | ಜೇಷ್ಠನಾದ ಯುಧಿಷ್ಠರನು ತಾ ದೂರ ನಡೆತಂದುವಾ | ಸಿಷ್ಟ ಕೃಷ್ಣಗೆ ಸಾಷ್ಟಾಂಗ ಪ್ರಣಾಮಗಳ ಮಾಡಿ ನಿ | ರ್ದಿಷ್ಟವಾದೆಕಾಂತ ಸ್ಥಳಕೆ ಕರೆತಂದು | ಶ್ರೇಷ್ಠವಾದಾಸನದ ಮೇಲೆ ಕುಳ್ಳಿರಿಸಿ | ಜೇಷ್ಟಾದಿಕೃಷ್ಣೇಯೊಡನೆ ಉತ್ಕøಷ್ಠ ಪೂಜೆಯ ಮಾಡೆ ಪರ ಮೇಷ್ಠಿ ಜನಕನು ತಾನು ತುಷ್ಟ ನಾಹೆ | ಶಿಷ್ಟಾಚಾರದಂತೆ ಕುಶಲ ಪ್ರಶ್ನೆಯು ಮಾಡ್ದ ನಿ | ರ್ದುಷ್ಟ ಭೀಮಾರ್ಜುನರೆ ಅಶ್ವಿನಿಯರೇ ಮನ | ಮುಟ್ಟಿ ಹರಿಪಾದ ಭಜನೆಯ ಮಾಡಿ ಸುಖಿಗಳಾಗಿಹ್ಯರೇ? ಧಿಟ್ಟತನದಲೆ ತಪವನೆಸಗಿ ಕಿರಿಟಯು | ನಿಷ್ಠಿಯಲಿ ಮಹರುದ್ರನೊಲಿಸಿ ಪಾಶುಪತವೆಂಬು | ತ್ಕøಷ್ಟಾಸ್ತ್ರ ಸಂಪಾದನೆಯ ಮಾಡಿದದು ಕೇಳಿ | ಹೃಷ್ಟನಾದೆನೊ ನಾನು ನಿಮ್ಮಿಂದಲಿ ಕೂಡಿ | ಕಷ್ಟಬಡುತಿರುವ ನಿನ ದುಃಖ ಶಾಂತ್ಯರ್ಥ | ಇಷ್ಟವೀವುದಕಾಗಿ ಬಂದಿಹನು ರಾಜಾಯು | ದ್ಯಿಷ್ಟರನೆ ಕೇಳುತ್ತಮ ವೃತವು ನಿನಗೋಸುಗ | ನಿಷ್ಠಿಯಿಂದಲಿ ಧರ್ಮತನಯ ನುಡಿದನು 4 ತ್ರಿವಿಡಿ ತಾಳ ನಮೊ ನಮೊ ತಾತ ಮಹಾ ಖ್ಯಾತವಂತರೆ ನಿಮಗೆ | ನಮೊ ನಮೊ ನಮೊ ಎಂದು ಬಿನ್ನೈಸುವೆ | ಶ್ರಮ ಪರಿಹರವೃತವಾವುದದÀರ ಮಹಿಮೆ | ಸುಮನಸರೊಡೆಯನೆ ಪೇಳಯ್ಯಾ ಜೀಯ್ಯಾ | ಕುಮತಿ ಪರಿಹರಿಸುವ ದೇವತೆ ಆರು ಉ | ತ್ತಮ ನಿಯಮ ಆವುದು ಪೂಜಾ ಕ್ರಮವು | ಶಮೆ ದಮೆವೀವ ನಿಯಮ ತಿಥಿ ಆವುದು | ರಮೆ ರಮಣನೆÉ ಆವ ಮಾಸದಲಿ ಮಾಡೋದು | ಶಮಲ ವಿವರ್ಜಿತ ವ್ಯಾಸದೇವನೆ ನಿಮ್ಮಾ | ಗಮನವು ಎಮ್ಮಯ ಕಷ್ಟ ದೊರೋಡಿಸಲು | ಸಮೀಚೀನ ಮತಿಯಿತ್ತು ಭಕ್ತರ ಪಾಲಿಪುದೆನುತ | ಸಮಚಿತ್ತ ಉಳ್ಳ ಮುನಿಗಳ ಕೂಡ ನಮಿಸಲು | ಭ್ರಮಣ ಮತಿಯ ಕಳೆವ ಹನುಮಾನ್ ಹ ನುಮನ್ನಾಮ ಪುನಃ ಪುನಃ ಸ್ಮರಿಸಿ ಶ್ರೀವ್ಯಾಸರು | ಆಮಮ ಪೇಳಲೇನೊ ಹನುಮದ್ವ್ರತವೋ | ಧೀಮಂತ ಹನುಮಂತನ ನಾಮೋಚ್ಚಾರಣೆಯಿಂದ | ಸಮಸ್ತ ಕಾರ್ಯ ಸಿದ್ದಿಪದು ಸಂಶಯ ಬ್ಯಾಡಿ | ಆ ಮಹಾ ದುಷ್ಟ ಗ್ರಹೋಚ್ಛಾಟನ ಜ್ವರಾದಿ | ತಾಮಸ ರೋಗ ನಿವರಣವಾಗುವದು | ಪ್ರೇಮದಿಂದಲಿ ಕೇಳು ಬಹು ವಾಕ್ಯಗಳಿಂದೇನು ? ಸೀಮೆಗಾಣದ ಅಭೀಷ್ಟಪ್ರದಾಯಕವೊ ನೀ ಮರೆಯದಿರು ಹಿಂದೆ ದ್ವಾರಕಿಯಲ್ಲಿ ಶ್ರೀ ಮದ್ವಿಷ್ಣುವೆ ಕೃಷ್ಣ ಪಾಂಚಾಲಿಯನಿ ಸ್ಸೀಮ ಭಕುತಿಗೆ ವೊಲಿದು ಈ ಮಹಾ ಹ ನುಮದ್ವ್ರತವನ್ನು ಉಪದೇಶಿಸಿ | ನೇಮದಿಂದಲೀ ವ್ರತವು ಮಾಡಿರೆನಲು ಕಾಮಿತಫಲವೀವಾ ವ್ರತದ ಮಹಿಮೆ ಆ | ಸ್ವಾಮಿ ಅನುಗ್ರಹದಿ ಸಂಪದೈಶ್ವರ್ಯದಿ ಆ ಮಹಾ ಸ್ತೋಮಗಳು ಪ್ರಾಪ್ತವಾಗಲು ನಿಮಗೆ | ಈ ಮಹಾ ವೃತ ಮಹಿಮೆ ತಿಳಿಯದ ಪಾರ್ಥನು ಪ್ರೇಮದಿಂ ದ್ರೌಪದಿ ಧರಿಸಿದ ದೋರವ ನೋಡಿ ಹೇ ಮಹಿಷಿಯೆ ಇದೆನೆನ್ನಲಾಗಿ | ತಾಮರಸನಯನೆ ಶ್ರೀ ಹನುಮದ್ದೋರವನ್ನೆ | ಆ ಮಹಾ ಐಶ್ವರ್ಯ ಗರ್ವಿಕೆ ಕ್ರೋಧಾದಿ ನಿ ಸ್ಸೀಮ ಪರಾಕ್ರಮಿ ನುಡಿದ ಅರ್ಜುನನು ಕಾಮಿನಿಯೆ ಕೇಳು ಆ ಹನುಮನೆಂಬೊ ಕಪಿ ನಾ ಮುದದಿ ಧ್ವಜದಲ್ಲಿ ಧರಿಸಿರುವೆನು ಈ | ಮರ್ಮವನು ತಿಳಿಯದೆ ಆ ವನಚರ ಶಾಖಾಮೃಗ | ಕಾಮಿತ ಫಲ ಕೊಡಬಲ್ಲದೆ ಕೇಳಿನ್ನು ಪಾಮರ ವ್ರತದಿಂದ ವಂಚಿಸಿದೆಲ್ಲದೇ ನೀನು ಕಾಮಿ ಜನರ ತೆರದಿಂದಲಿ ಅರ್ಜುನನು ಭಾಮೆ ದ್ರೌಪದಿ ಧರಿಸಿದ ತ್ರಯೋದಶ ಗ್ರಂಥಿಯುಕ್ತ ಆ ಮುದದ ದೋರವನು ಹರಿದು ಬಿಸಾಟಲು ಹೇಮಾದಿ ಸಕಲ ಸಂಪದೈಶ್ವರ್ಯ ರಾಜ್ಯವು ಭೂಮಿ ಸಹಿತ ಪ್ರಾಪ್ತವಾದುದೆಲ್ಲ ಪೋಗೆ | ಶ್ರಿಮದಾಂಧದಿಂದ ಪ್ರಾಪ್ತವ್ಯ ದುಃಖ ಫಲವು | ಪರಿಯಂತ | ರಾಮ ಮನೊರಮನು ಇನಿತು ನುಡಿಯೆ | ಸ್ವಾಮಿ ಆಜ್ಞವ ತಿಳಿದ ದ್ರೌಪದಿ ದೇವಿಯು | ಹೇ ಮಹತ್ಮರೆ ಶ್ರೀವ್ಯಾಸರ ನುಡಿ ನಿಜವೋ ನೇಮಗಳೆಲ್ಲಾ ತಿಳಿಯಲೋಶವೆ ಎಂದಿಗು 5 ಧ್ರುವ ತಾಳ ಕೇಳಯ್ಯಾ ಧರ್ಮರಾಜ ಆಲಸ ಮಾಡದೆ | ಪೇಳುವೆ ನಿನಗೊಂದು ಪುರಾತನ ಕಥೆಯು | ಆಲಿಸಿ ಮನಕೆ ತಂದು ಬಾಳು ಚನ್ನಾಗಿ ನೀನು | ಶೀಲೆ ಸೀತೆಯ ನೋಡುವ ಇಚ್ಛಾಉಳ್ಳ ಮಾ ನಿತ್ಯ ಲಕ್ಷ್ಮಣನೊಡಗೂಡಿ | ಮೇಲಾದ ಋಷ್ಯಮೂಕ ಗಿರಿಯ ಮಧ್ಯದಲ್ಲಿ ಶೀಲ ಭಕುತಿಯುಳ್ಳ ಹನುಮಂತನ ದರ್ಶನಾಗೆ ಆಳುವ ಕಪಿ ರಾಜ್ಯ ಸುಗ್ರೀವನ ಸಖ್ಯವನು ಬ ಹಾಳ ಮತಿಯುಳ್ಳ ವಾಯುಜ ಮಾಡಿಸೆ | ಮಾಸ ಮಳೆಗಾಲವು ವಾಸ ಮಾಡ್ಡ | ಕಾಲದಲಿ ಹನುಮನು ರಾಮದೇವಗೆ ನಮಿಸಿ | ನೀಲ ಮೇಘ ಶ್ಯಾಮ ಶ್ರೀ ರಾಮ ನೀನಿನ್ನ | ಬಾಲನ ಬಿನ್ನಪ ಮನಕೆ ತರಲು | ಪೇಳುವೆ ನಿಮ್ಮ ಸನ್ನಿಧಾನದಲೆನ್ನ ನಾಮ ಮಹಿಮೆ ಮೇಲುಸಿಲೆಯನದ್ಧರಿಸಿದ ಶ್ರೀರಾಮ ನೀನಙ್ಞನೆ | ಕಾಲ ಜನನದಲಿ ಇಂದ್ರನಿಂದಲಿ ಎನ್ನ ಮೇಲಾದ ವಜ್ರಾಯುಧದಿಂದ ಹನುಘಾತಿಸಲು ಭೂಲೋಕದಲ್ಲಿ ಅಂದಿನಾರಭ್ಯ ಹನುಮನೆಂದು ಖ್ಯಾತನಾಗಿ | ಕೇಳಯ್ಯಾ ಅಂಜನಾದ್ರಿಯಲ್ಲಿ ಸೂರ್ಯೋದಯ | ಕಾಲಕೆ ಪ್ರಕಟನಾದ ಬಾಲ ರವಿಯ ನೋಡಿ ಹಣ್ಣೆಂದು | ಮೇಲಾಗಿ ಭಕ್ಷಿಪುದಕೆ ಉಡ್ಡಾಣ ಮಾಡಲಾಗಿ | ಈ ಲೀಲೆಯ ತಿಳಿದು ಲೋಕ ಶಿಕ್ಷಣ ಗೋಸುಗ | ಕಾಲವಜ್ರಾಯುಧದಿಂದ ಹೊಡೆಯಲು ಮೂರ್ಛಿತ | ಬಾಲನಂತೆ ಬಿದ್ದವನೆನ್ನ ನೋಡಿ ಸ್ವಾಹಾ | ಲೋಲನ ಸಖನಾದ ವಾಯುದೇವನು ಎನ್ನ | ಮೇಲಿನ ಪ್ರೀತಿಯಿಂದ ಸರ್ವಜೀವರ ಶ್ವಾಸ | ಕಾಲನಾಮಕ ಭಗವಾನಿಚ್ಛೆಯಂತ ತೃಟಿ | ಕಾಲಬಿಡದೆ ಮಾಡ್ವ ಶ್ವಾಸ ನಿರೋಧಿಸೆ ಶಚಿ | ಲೋಲನಿಂದನ್ನ ಪುತ್ರನ ಕೆಡಹಿರಲವನನ್ನು ಈ | ಕಾಲಲವದಲ್ಲಿ ಕೆಡಹೆನೆನಲು ಆ | ಕಾಲದಲಿ ಬ್ರಹ್ಮಾದಿ ದೇವತೆಗಳು ಸಾಕ್ಷಾತ್ಕಾರರಾಗಿ | ಓಲೈಸಿ ಪೆಳ್ದ ಮಾತು ಎನಗೋಸುಗ ಆಂಜನೇಯಾ | ಬಾಲನೆ ಚಿರಜೀವಿಯಾಗು ನೀನೆ ಪರಾಕ್ರಮಿ | ಮೇಲೆನಿಪ ಶ್ರೀರಾಮನ ಕಾರ್ಯಸಾಧಕನಾಗೆನುತ | ಬಾಲ ಹನುಮನ ಪೂಜೆ ಮಾಡ್ಡರು ದೇವತೆಗಳು | ಮೇಲಾದ ಮಾರ್ಗಶಿರ ಶುದ್ಧ ತ್ರಯೋದಶಿ | ಕಾಲ ಅಭಿಜಿನ್ ಮೂಹೂರ್ತದಲ್ಲಿ ಆರು ಪೂಜಿಪರೊ | ಆಲಸವಿಲ್ಲದೆ ಪುರುಷಾರ್ಥ ಹೊಂದುವರೆಂದು | ತಾಳ ಮ್ಯಾಳರೊಡನೆ ವರವ ನೀಡಿ ಪೋದರು | ಆಲಯಾ ಸ್ವರ್ಗ ಸತ್ಯಾದಿ ಲೋಕಕೆ ಅಂದು ಹೀಗೆ | ಪೇಳೆ ಸುಂದರ ವಿಠಲ ರಘುರಾಮನು ನಸುನಗೆ | ಯಾಲಿ ಒಲಿದು ಹನುಮಗೆ ಹಸನ್ಮುಖನಾಗಿ ಇರಲು 6 ಮಟ್ಟತಾಳ ಭಕುತ ವತ್ಸಲ ನೀನು ಭಕುತರಿಚ್ಛವ ನೀನು | ಭಕುತ ಭಾಂಧವ ನೀನು ಭಕುತರೊಡಿಯ ನೀನು | ಭಕುತ ಪಾಲಕನೆಂಬ ಬಿರುದುಳ್ಳವ ನೀನು | ಭಕುತರಿಂದಲಿ ನೀನು ನಿನ್ನಿಂದಲೆ ಭಕುತರು | ಅಕಳಂಕ ಐಶ್ವರ್ಯ ಸತು ಚಿತು ಆನಂದಾತ್ಮಾ | ಮುಕುತಿ ಪ್ರದಾತನೆ ಸರ್ವ ಸ್ವಾಮಿ ನೀನು | ಸಕಲ ಲೋಕಗಳೊಡೆಯ ನಿನ್ನಿಂದಲೆ ಸರ್ವ ವ್ಯಕುತವಾಗ್ವದು ಸತ್ಯ ಸರ್ವಙ್ಞನು ನೀನು | ಭಕುತರ ಮನದಿಂಗಿತ ತಿಳಿಯದವನೆ ನೀನು | ಅಖಿಳ ಬ್ರಹ್ಮಾಂಡÀರಸನೆ ನಮೊ ನಮೊ ನಮೊ ನಮೊ | ಭಕುತರಿಂದಲೇ ನಿನ್ನ ಖ್ಯಾತಿ ಮೂರ್ಲೋಕಕ್ಕೆ ಭಕುತರೇ ನಿನ್ನಯಾ ಮಹಿಮೆಯ ಹೊಗಳುವರು | ಭಕುತರು ನಿನ್ನಿಂದಲೆ ಕೀರ್ತಿವಂತರÀಹರು | ಅಕುಟಿಲ ಪ್ರಭೋ ನೀನು ನಾ ನಿನ ನಿಜ ಭಕ್ತ | ಸಕಲ ಕಾಲದಲ್ಲಿ ನಿನ್ನನಾ ಮರೆಯದಲೇ | ಮಾಳ್ಪದು ನಿಜವಾಗೆ | ಶಕುತನೆ ಎನ ಕೀರ್ತಿ ನಿನ್ನಿಂದಾಗಲಿ ವಿಭೋ | ಉಕುತಿ ಲಾಲಿಸು ಪ್ರಭೋ ತವಚಿತ್ತವ ಧಾರೆ | ಭಕುತ ಹನುಮಂತ ಇನಿತು ವಿಙÁ್ಞಪಿಸಿ ನಿಲಲು | ಪ್ರಕಟಿತ ಅಶರೀರ ವಾಕ್ಯವು ಬಿಡದಲೆ | ಸಕಲ ನುಡಿ ಹನುಮಾ ಸತ್ಯನಾಡಿದನೆನಲು | ಸುಕರ ಏಕಮೇವ ದ್ವಿತಿಯ ಸುಂದರವಿಠಲ ತುಷ್ಟನಾಹೆ 7 ಝಂಪಿತಾಳ ಮಾಸಮಾರ್ಗಶೀರ್ಷ ಶುದ್ಧ ತ್ರೊಯೋದಶಿ | ಆ ಸುಮುಹೂರ್ತ ಜಯಾ ಅಭಿಜಿನ್ ಕಾಲಕೆ | ಶ್ರೀಶರಾಮನು ಹನುಮದ್ವ್ರತವ ಮಾಡ್ಡ ತ್ರಯೋ | ದಶ ಗ್ರಂಥಿüಯುತ ಹರಿದ್ರಾದೋರಗಳಲಿ | ಭಾಸುರಾಮತಿವೀವ ಹನುಮನಾವ್ಹಾನಿಸಿ | ಪೇಶಲಾಪೀತಗಂಧ ವಸ್ತ್ರ ಪುಷ್ಟಿಗಳಿಂದಲೀ | ಶ್ರೀಸೀತೆವಕ್ಷಸ್ಥಳದಿಪ್ಪ ನಿತ್ಯಾವಿಯೋಗಿನಿ | ಆ ಸುಗ್ರೀವ ಲಕ್ಷ್ಮಣಾದಿಗಳೊಡನೆ ನೆಸಗಿದನೇನೆಂಬೆ | ಲೇಶಬಿಡದೇ “ಓಂ ನಮೋಭಗವತೇ ವಾಯುನಂದನಾಯ” | ಈ ಸುಮಂತ್ರವ ಜಪಿಸಿ ತಾ ಸಹಸದಿ ಮಾಡ್ಡನೋ | ದೇಶಪರಿಮಿತ ಪ್ರಸ್ಥತ್ರಯೋಶಗೋಧೂಮವನು | ಆ ಸುದಕ್ಷಣೆ ತಾಂಬೂಲ ಸಹ ದ್ವಿಜರಿಗಿತ್ತದಾನ | ಮೀಸಲಾ ಮನದಿ ಈ ಸತ್ಕಥೆಯನು ಕೇಳಿ | ಭೇಶಮುಖಿ ಸೀತಿಯಳ ಕೊಡ್ದನೆಂಬದು ಖ್ಯಾತಿ | ಆ ಸತ್ಯಲೋಕರಿಗೆ ಆದುದು ಅಚ್ಚರವೆ ಪೂರ್ಣಕಾಮನಿಗೆ | ಕ್ಲೇಶನಾಶನವು ಸುಗ್ರೀವನಿಗೆ ವಿಶೇಷವಾದುದು ಸತ್ಯವೆನ್ನಿ | ತೋಷದಲಿ ವಿಭೀಷಣ ಶ್ರೀರಾಮನಾಙÉ್ಞಯಿಂ ಮಾಡ್ಡು | ದೇಶಲಂಕೆಯ ರಾಜ್ಯವನು ಪಡೆದನು | ಹೇ ಸುಮತಿಯೇ ಕೇಳಂದಿನಾರಭ್ಯ ಭೂಲೋಕಕೆ | ಲೇಸುವಿಶ್ರುತವಾದಿತೈ ಹನುಮದ್ವ್ರತವೂ | ಪರಿಯಂತ ಮಾಡ್ಡುದ ಕೀಸು ಉದ್ಯಾಪನೆಯಯ್ಯಾ ಆದಿ ಮಧ್ಯಾಂತಕೆ | “ಮಾಸಾನಾಂ ಮಾರ್ಗಶೀರ್ಷೋಹಂ” ಎಂದು ಗೀತೆÀಯಲಿ ಆ ಸ್ವಾಮಿ ದಿವ್ಯನುಡಿಯುಂಟು ಕೇಳ್ ಧರ್ಮಜನೆ | ಸ್ತ್ರೀಸಹಿತ ಅನುಜರೊಡನೇ ಈ ವ್ರತವನು | ಮೇಶನಾಜ್ಞೆಯಿದೆಂದು ಮಾಡಲು ನಿನಗೆ ರಾಜ್ಯ | ಕೋಶ ಭಾಂಡಾರಪ್ರಾಪ್ತಿಯಾಗುವದು | ಲೇಶ ಸಂಶಯ ಬ್ಯಾಡೆನಲು ಶ್ರೀ ವ್ಯಾಸ | ಆ ಸುಂದರ ವಿಠಲನ ಭಕುತರು ಮುದಭರಿತರಾಗೆ 8 ರೂಪತಾಳ ರವಿಯು ವೃಶ್ಚಿಕ ರಾಶಿಗೆ ಬರಲಾಗಿ | ಸವೆಯಾದ ಪದವೀವ ವ್ರತವಮಾಡುವದಕ್ಕೆ | ಕವಳಾ ಅಜ್ಞಾನಾಖ್ಯ ರಾತ್ರಿಕಳೆದು | ಸುವಿಮಲಾಜ್ಞಾನಾಖ್ಯ ಪ್ರಾತಃ ಕಾಲದಲೆದ್ದು | ಕವಿವ್ಯಾಸರ ಮುಂದೆ ಮಾಡಿ ಧರ್ಮಜನು | ಸುವಿವೇಕಬುದ್ಧಿಯಿಂ ಸ್ನಾನಾದಿಗಳ ಮಾಡಿ | ಹವಿಷಾದಿ ದ್ರÀ್ರವ್ಯಗಳಲಿ ಹರಿಯಚಿಂತಿಸಿ ಮಾ | ಧವÀನಾಜ್ಞೆಯಂತೆ ಉದ್ಯಾಪನವಂಗೈದು | ಕವ್ಯವಾಹನನಲ್ಲಿ ಮೂಲಮಂತ್ರದಿಂದ | ಲವಕಾಲ ಬಿಡದಲೆ ವೇದಸೂಕ್ತಗಳಿಂ ಹೋಮಿಸಿ | ನವಭಕುತಿಯಲಿ ಹನುಮಂತನ ವ್ರತಾಚರಿಸಲು | ಹವಣಿಸಿ ಸಂವತ್ಸರವು ಪೋಗಲು ಪಾಂಡವರು | ಬವರದಲ್ಲಿ ಕೌರವರಗೆ
--------------
ಸುಂದರವಿಠಲ
ಅಧ್ಯಾಯ ಎರಡು ಮೃಗ ಬ್ಯಾಟಯಲಿ ಹೊರಟ್ಹೋಗುವಾ ಯಕ್ಷಾನುಗರಿಂದ ತಾ ಮೃತನಾಗುವಾ ಮಗ ಬಾರಾನೆಂದು ತಾಯಿ ಮಿಡುಕುತಾ ರಾಜ್ಯ ಅಗಲಿ ಹೋಗ್ವಳು ತಾ ಹುಡುಕುತಾ 7 ಅಂತ:ಕರುಣ ತಾಪದಲಿ ಕಾಡಾಕಿಚ್ಚಿ ನಂತದೊಳಗೆ ಬೀಳೋಳು ಗಾಡಾ ಚಿಂತೆಯಾಕೆ ನೃಪಹೋಗಿನ್ನ ನಿ ಶ್ಚಿಂತೆಯಿಂದಲಿ ರಾಜ್ಯ ಮಾಡಿನ್ನ 8 ಎಂದು ಹಸ್ತವ ಶಿರದಲ್ಲಿಟ್ಟು ಆ ನಂದದಿಂದಲಿ ವರಗಳನು ಕೊಟ್ಟು ಮುಂದನಡೆದ ಪಕ್ಷಿವಾಹನನು ಜಗ ದ್ವಂದ್ಯ 'ಶ್ರೀ ಅನಂತದ್ರೀಶ' ನು 9 ಪದ ಆದಿ ಮೂರುತಿ ಶ್ರೀರಮೇಶಾ ತನ್ನ ಧಾಮಕ್ಕ್ಹೋದನು ಮೋದರಹಿತನಾಗಿ ಬಾಲದೀರ್ಘ ಉಸುರಗಳದನು ಪೋದನೆಂದು ದು:ಖದಿಂದ ತಿರುಗಿ ಪುರಕ ನಡದನು ಯಾದವೇಶ ಹಾ ಮುರಾರಿ ಎಂದು ಆಗ ನುಡದನು 1 ಪೂರ್ವ ಪುಣ್ಯದಿಂದ ನಿನ್ನ ರೂಪ ಯನಗ ತೋರಿದಿ ಶರ್ವಮಿತ್ರಯೆನ್ನಾ ವಿಷಯ ಮಡುವಿನೊಳಗ ಹಾಕಿದಿ ಸರ್ವಕಾರ್ಯ ಬಿಟ್ಟು ಕರುಣಾದಿಂದ ಆಗ ನೋಡಿದಿ ಗರ್ವಯುಕ್ತನಾಗಿ ಯನ್ನಬಿಟ್ಟು ಈಗವೋಡಿದಿ 2 ಸಿಕ್ಕಿದಂಥ ದಿವ್ಯಮಾಣಿಕ್ಯ ಕಳದಂತಾಯಿತು ಫಕ್ಕನೆದ್ದು ಕುಳಿತು ಕಂಡಾಕನಸಿನಂತಾಯಿತು ಮಿಕ್ಕ ವಿಷಯ ಭೋಗ ಬೇಡಿ ಜನ್ಮ ವ್ಯರ್ಥವಾಯಿತು ತಕ್ಕ ಮುಕ್ತಿ ಬೇಡಲಿಲ್ಲಾ ಯನ್ನ ಬುದ್ಧಿ ಹೋಯಿತು 3 ಕ್ಲೇಶ ಬಿಟ್ಟು ಈಗ ಬಹಳ ವಿಷ್ಯ ಸೌಖತು” ಏಸು ಜನ್ಮ ಪೂಜೆ ಮಾಡಿದಾರು ದೇವ ದೊರಕನು ಮಾಸ ಪಂಚದಿಂದ ಯನ್ನ ದೃಷ್ಟಿ ವಿಷಯ ನಾದನು 4 ಆಶಿಇಂದ ಆಗ ವಿಷಯ ಸËಖ್ಯವನು ದೈವಕೆ ಮಾಡಿಕೊಂಡು ಹೀಂಗ ಮನಸ್ಸಿನಲ್ಲಿ ಬಂದ ಪಟ್ಟಣಕೆ ಕೊಂಡ ಪುರಸಮೀಪಕೆ 5 ಶ್ಲೋಕ ಆಗ ನೋಡಿದ ಒಬ್ಬ ಧ್ರುವನ್ನಾ ವೇಗ ಪುಟ್ಟಿತು ಮನಸಿಗೆ ತನ್ನ ಬ್ಯಾಗ ಪೇಳಿದ ಅರಿಸಿನ ಮುಂದಾ ಬಾಗಿ ಬಿನ್ನಯಿಸಿ ತಾನಯ ದಿಂದಾ 1 ಪದ ರಾಜಭೂಪಾನೆ ನಿನ ಕಂದ ಬಂದಾ|| ಪೂಜಿಸಿ ದೇವೇಶನ ಛಂದದಿಂದ || ಪರಿಪರಿಯಿಂದಾ ಗುರುಕೃಪೆಯಿಂದಾ | ತಿರುಗಿ ಇಲ್ಲಿಗೆ ಕ್ಷೇಮದಿಂದಲಿಂದಾ 1 ಪುಣ್ಯಗಳಿಂದಾರಣ್ಯದಲಿಂದಾ ಸಣ್ಣಬಾಲನು ಭಾಳನಂದದಿಂದಾ 2 ಅನಂತರದಿಂದಾ ಅನಂತ ಸÉೀವಿಂದಾ 'ನಂತ್ರಾದೀಶನಾ’ ದಯದಿಂದ ಲಿಂದಾ 3 ಆರ್ಯಾ ಕಾಂಬೆನು ಯಂದಾ ಹುಟ್ಟಿತು ಆನಂದಾ1 ಪದ ರಾಗ :ಶಂಕರಾಭರಣ ಆದಿತಾಳ ಸುದ್ದಿ ಹೇಳಿದಾತಾಗೆ ಬೇಕಾದ್ದು ಕೊಟ್ಟು ಹರುಷದಿಂದ ಯದ್ದು ರಥವಾನೇರಿ ತಾ ಸನ್ನದ್ಧ ನಾದನು 1 ಇಬ್ಬರ ಹೆಂಡಿರ ಕೂಡಿ ಒಬ್ಬ ಪುತ್ರನಿಂದ ಕೂಡಿ ಅಬ್ಬರದಿಂದಲಿ ತಾ ಉಬ್ಬುಬ್ಬಿ ನಡದಾನು 2 ಮಂತ್ರಿಗಳು ವಿಪ್ರಾರು(ಗಳು) ಮಂತ್ರಜ್ಞಾರು ಮಾನವಾರು ಸಂತ್ರೋಧಾರ ನಡದಾರು ಬಜಂತ್ರಿ ಘೋಷಾದಿ 3 ಮೃದಂಗ ಘೋಷ ಸಾರಿಸಾರಿ ನುಡದಾವು ಅಬ್ಬಾರದಿಂದಲಿ 4 ತಂಬೂರಿಘೋಷಾ ಜಾಣೆ ರಾಮಂಜುಳಗೀತಾವಾಣಿ ಘೋಷಾವು 5 ಅಂಗಾನೇರು ಕುಂಕುಮಾದಿ ಮಂಗಲ ಭೂಷಾದಿಂದ ಶೃಂಗಾರಿಸಿ ಕೊಂಡಾರು ಕುರಂಗ ನೇತೆÀ್ರರು 6 ಧಟ್ಟಿ ಪೀತಾಂಬರನುಟ್ಟ ಬಟ್ಟಾ ಕುಚದಲ್ಯೊಪ್ಪುವಾ ಕಠ್ಠಾಣಿ ಮೋಹನ ಮಾಲೆನಿಟ್ಟು ಕೊರಳಿಗೆ 7 ರಂಬೇರು ವೀಳ್ಯವ ಮೆದ್ದು ತಾಂಬೂಲಗಲ್ಲಾದಲ್ಯೊತ್ತಿ ತುಂಬಿ ಹರುಷದಿಂದ ಚಂದ್ರ ಬಿಂಬ ಮುಖಿಯರು 8 ಮೀರಿದಾ ಸಂಭ್ರಮದಿ ಶೃಂಗಾರವನು ಮಾಡಿಕೊಂಡು ಥೋರಾಗನ್ನಡಿಲಿ ತಮ್ಮ ಮಾರಿ ನೋಡೋರು 9 ಕುಡಿಗಣ್ಣ ನೋಟಾದವರು ನಡಸಣ್ಣಾದಿ ಬಳಕುವರು ಮಂದ ನಡಗಿ ವಂತರು 10 ಪಟ್ಟಾಣದಿಂದಲಿ ವಳ್ಳೇ ಧಿಟ್ಟನಾರಿಯರು ಕಾಲಾ ಬಟ್ಟಿನಲಿ ಕಾಲುಂಗುರ ಮೆಟ್ಟಿ ನಡದಾರು11 ಪರಿಪರಿ ವಿಲಾಸದಿಂದ ಕರದಲ್ಲಿ ಕರತಳಾನಿಕ್ಕಿ ಕಿರಿನಗಿಯಿಂದಲ್ಲೆ ನಗುತಾ ಬರುವುತೀಹರು 12 ಹಿಂಡುಜನರಾಗಳ ಕೂಡಿಕೊಡು ರಾಜಾಬಂದು ಮಗನಾರಥವಾನಿಳುದು ಅಪ್ಪಿಕೊಂಡಾ ಹರುಷದಿ 13 ಮೂಸಿ ನೋಡಿತನ್ನ ಜಲಜಾ ಲೋಚನಗಳಿಂದ ಜಲವಾಧರಿಸಿದ 14 ಛಂದಾದಿ ಬಾಲಾನು ತನ್ನ ತಂದಿ ಪಾದಾದೊಳು ಯರಗಿ ಪಾದ ಬಂದು ಯರಗಿದ 15 (ತಾಯಿಯರ ಪಾದಗಳಿಗೆ ಪೋರ ಬಂದು ಯರಗಿದ) ಸಾಧುತಂದಿತಾಯಿ ಆಶೀರ್ವಾದ ಯುಕ್ತನಾಗಿ ತನ್ನ ಮೋದ ಬಟ್ಟಾಳು 16 ಏಳಯ್ಯಾ ಎಳಯ್ಯಾಯೆಂದು ಭಾಳಾನಂದಾದಿಂದ ಲ್ಯಪ್ಪಿ ಭಾಳಾಯುಷ್ಯಾವಂತನಾಗೊ ಬಾಲಾಯೆಂದಾಳು 17 ಉತ್ತಮ ಧ್ರುವನು ತಾತಾ ಗುಣೋತ್ತಮ ಇಬ್ಬರು ಕೂಡಿ ಅತ್ಯಂತ ಹರುಷಗೊಂಡಾರಂತ:ಕರುಣದಿ 18 ಇಂದಿಗೆ 'ಅನಂತಾದ್ರೀಶಾ’ ಹೊಂದಿಸಿದಾ ನಮ್ಮಿಬ್ಬರಾ ನೆಂದು ಮಾತನಾಡಿದರು ಕಂದರಿಬ್ಬಾರು 19 ಛಂದ ಹೆತ್ತ ತಾಯಿಗೆ ಚಿತ್ತಸಂಭ್ರಮಾ ಮತ್ತ ಜನರಿಗೆ ಚಿತ್ತ ವಿಭ್ರಮಾ ಪುತ್ರನಷ್ಟಿ ತಾ ಯೆತ್ತಿಕೊಂಡಳು ಸುತ್ತ ಚಿಂತಿಯಾ ಮರ್ತುಬಿಟ್ಟಳು 1 ಸುಂದರಾಂಗಿಯ ಆನಂದ ಬಾಷ್ಪದಾ ಬಿಂದು ಸ್ನಾನವು ಕಂದ ಮಾಡಿದಾ ಮುಂದ ರಥದಲ್ಲಿ ಬಂದು ಕುಳಿತನು ಮುಂದಿರುವ ಬಾಲನ ಒಲಿದು ನೋಡುತಾ ಮೊಲಿಯ ಪಾಲು ಚೆಮ್ಮಿ ತಲಿಯಲಿ ಹರುತಾ ಹಲವು ರಾಜ್ಯಕೆ ಮುಂದ ಸೂಚನಾ2 ಕುದರಿಸೈನ್ಯದಿಂದ ನಡದನು ಭಾಳ ಬಿರುದಿನಾ ಕಾಳಿ ಊದುತಾ ತಾಳ ವಾದ್ಯವು ಭಾಳ ನುಡುವುತಾ ಕೇಳಿಪುರದಲ್ಲಿ ಬಾಲಪುರುಷರು ಮಾಳಿಗಿಯಲಿ ಭಾಳ ನಿಂತರು 3 ಉತ್ತಮಾರ್ಯರು ಮತ್ತ ಸ್ತ್ರೀಯರು ಹತ್ತಿ ಮಾಳಿಗಿ ಸುತ್ತ ನಿಂತರು ಯೆತ್ತ ನೋಡಲು ರತ್ನ ಭೂಷಿತಾ ಉತ್ತುಮಾ ಪುರಿ ಭರ್ತ ಪಾಲಿತಾ 4 ಸಾಲು ಸಾಲಕೆ ವಿಶಾಲ ಮಂಟಪಾ ಸಾಲ ದೀಪದಿ ಭಾಳ ಶೋಭಿಪಾ ಸೆಲ (ಚೆಲ್ವ?) ಮುತ್ತಿನ ಸಾಲಯಳಿಗಳು ಮ್ಯಾಲ ಮಲ್ಲಗಿ ಮಾಲಕಿಗಳು 5 ಆರ್ಯಾ ಮಂದ ಮಾರುತಾನಿಂದ ಭಾಳಮಕರಂದ ಪುಷ್ಟದಾ ವಾಸನವು ಮುಂದ ಪತಾಕಿಗಳಿಂದ ಕಣ್ಣಿಗೆ ಛಂತ ತೋರಿಪಾ ಪಟ್ಟಣ್ಣವು 1 ವೇಗದಿಂದ ರಥ ಸಾಗಿಸಿ ಧ್ರುವ ಛಂ ದಾಗಿ ನಡೆದನು ಪುರದೊಳಗೆ ಬ್ಯಾಗ ಗೋಪುರದ ಬಾಗಿಲದಾಟಿ ಪೋಗಿ ಕುಳಿತನು ಸಭಿಯೊಳಗೆ 2 ಬಾಲನ ಕಂಡು ಭೂಪಾಲನು ಹಿಗ್ಗುತಾ ಭಾಳಪುಟ್ಟಿ ಮನದುದ್ರೇಕಾ ಕಾಲ ಮೂಹೂರ್ತದ ವ್ಯಾಳಯವು ಸಾಧಿಸಿ ಬಾಲಗ ಮಾಡಿದ ನಭಿಷೇಕಾ3 ಕೊಟ್ಟರಾಜ್ಯವನು ಪಟ್ಟಗಟ್ಟಿ ಮುಂ ದಿಟ್ಟ ಶಿಖಾ ಮುದ್ರಿಕಿಯನ್ನು ಅಷ್ಟ ವಿಭೂತಿಗ¼ಷ್ಟು ಕೊಟ್ಟು ಸಂ ತುಷ್ಟನಾದ ಭೂಪತಿ ತಾನು 4 ಛಂದದಿ ದೇವರಿಗೊಂದಿಸಿ ಧ್ರುವ ಆ ನಂದದಿ ಬ್ರಾಹ್ಮರಿಗೆರಗಿದನು ತಂದಿ ತಾಯಿಗಳಿಗೊಂದಿಸಿ ಬಹುತ್ವರ ದಿಂದ ಏರಿದಾ ಪೀಠವನು 5 ಸುಂದರ ಸಭಿಯಲಿ ಬಂದು ಕೂಡಲು ದೇ ವೇಂದ್ರನಂತೆ ಬಹು ಶೋಭಿಸಿದಾ ಬಂಧು ಜನರಿಗ್ಯಾನಂದವ ತೋರುತ ಚಂದ್ರಮನಂತೆ ಶೋಭಿಸಿದ 6 ಝಗಿಝಗಿ ತೋರುವ ಬಗಿಬಗಿ ಕುಪ್ಪುಸ ಬಿಗಿಬಿಗಿ ಇಂದಲಿ ತೊಟ್ಟವರು ಲಗು ಬಗೆಯಿಂದಲಿ ನಗಿನಗಿ ಮಾತಿನ ಸೊಗಸು ಗಾರಿಕೆ ಬಲ್ಲವರು 7 ಥೊರಮುತ್ತು ಜರತಾರ ಮಯದ ಉಡ ಗೊರಿ ತಂದರು ಆ ಜನರು ಸಾರ ಸಿಂಹಾಸನಯೇರಿದ ಧ್ರುವನಿಗೆ ಆರುತಿ ತಂದರು ನಾರಿಯರು 8 ಮುತ್ಹಚ್ಚಿದ ಹೊಸ ನತ್ತುಗಳಿಂದಲಿ ಮತ್ತಿಷ್ಟೊಪ್ಪುವ ಮುಖದವರು ಪುತ್ಥಳಿ ಸರಘುನ ಮುತ್ತಿನ ಸರಗಳು ಉಳ್ಳವರು9 ಹತ್ಹೊರಷುದ ಮ್ಯಾಲ್ಮತ್ತೆರಡೊರ್ಷದ ಉತ್ತಮ ಪ್ರಾಯದ ಬಾಲಿಯರು ಮತ್ತ ಕಾಲುಂಗರ ವತ್ತೊತ್ತಿ ನಡುವುತ ಗತ್ತಿನಿಂದಲೆ ನಡುವುವರು 10 ಪದ ತಂದ್ರು ಆರುತಿ ಚಂದ್ರ ಮುಖಿಯಾರು ತಂದ್ರು ಆರುತಿ ಬಹು ಸುಂದರ ಸುಗುಣೇರು ಪ ಚಂದುಟಿ ಕಚ್ಚುತ ನಿಂದ್ರದ ಮದದ ಗ ಜೇಂದ್ರ ಗಮನಿಯರು ಬಂದ್ರಾಗಲೇ ದೇ ವೇಂದ್ರನ ಸಮರಾಜೇಂದ್ರನÀ ಸುತಗೆ ಅ.ಪ ಬಣ್ಣಗಾರಿಕೆಯಲಿ ಸಣ್ಣಕುಂಕುಮನಿಟ್ಟ ಕಣ್ಣಕುಡಿ ಹುಬ್ಬು ಕುಣಿಕುಣಿಸ್ಯಾಡುತ ಹೆಣ್ಕೋಕಿಲ ಸ್ವರ ಸಣ್ಕಂಠದಿ ನುಡಿ ಸಣ್ಕದಿ ಪಾಡುತ 1 ಕೈ ಬೆರಳಿಗೊಪ್ಪುವ ಹರುಳಿನುಂಗುರ ಇಟ್ಟವರು ಯರಳಿಯಂತೆ ಹೊರಹೊರಳಿ ನೋಡಿ ಮುಂ ಗುರುಳ ಗೂದಲಾ ತೀಡುವರು ಜಾಣಕಾಂತಿಯರು 2 ಮೇಲ್ಮಾಟದ ಬಗಿಯುಲ್ಮಾತಾಡುತ ಬಲ್ಮೋಹದಿ ಬಹು ಮೆಲ್ಲಮೆಲ್ಲನೆ ಹೆಜ್ಜೆ ನೆಲ್ಲ ಮ್ಯಾಲಿಕ್ಕುತ ಸೊಲ್ಮುಡಿನೇವರಿಸಿ ಮ್ಯಾಲ್ಮಲ್ಲಿಗಿ ಸರಗಳ ಮುಡಿಯವರು 3 ಸದ್ರಸ ಕುಂಕುಮ ಮುದ್ರಾಂಕಿತ ಕುಚ ಘದ್ರಿಸುತಲಿ ಬಹು ಉದ್ರೇಕದಿ `ಅನಂತಾದ್ರೀಶನ ' ಮುದ್ರಿಕಿ ಪದಗಳು ಘದ್ರಿಸಿ ನುಡಿವುತಾ ಭದ್ರಾಂಗಿಯರು 4 ಪದ ಮಂಗಳ ಮೂರುತಿ ಬಾಲಾಗೆ ಶ್ರೀ ನೃಪಾಲಾಗೆ ಮಂಗಳ ಗುಣಶೀಲಾಗೆ ಮಂಗಳಮೂರುತಿ ಛಂದಾ ಬಗಿಯಿಂದಾ ಪ ಶುಭದಿಂದಾ ಆನಂದದಿಂದಾ ಅಂಬೂಧಿಯೊಳಗಾಡಿ ಗಂಭೀರಾಗಿರಿಪೊತ್ತಾ ಜಾಂಬುನದಾಕ್ಷಾರಿ ವರ ಪ್ರಿಯಾಗೆ ಗಂಭೀರಾ ನೃಸಿಂಹಾನ ನೆಂಬಿ ರಕ್ಷಿತ ನೀಗೆ ರಂಭೇರು ಕರುಣಾದಿ ನೋಡಿ ಒಡಗೂಡಿ ಕೊಂಡಾಡಿ ತ್ವರಗೂಡಿ ಪಾಡಿ 1
--------------
ಅನಂತಾದ್ರೀಶ - ಕಥನಕಾವ್ಯಗಳು
ಅಧ್ಯಾಯ ಮೂರು ಪದ ಸಾವಿರ ಬುಧರÀರನೆಲ್ಲ ಮೀರಿ ಪರಮೇಶ್ವರಗೆ ಹಾರ ಹಾಕುವೆನೆಂದು ಪಾರಿಜಾತದ ಕುಸುಮ ಪಾರ್ವತಿಯು ತಾತರಿಸಿ ಪೂರ್ವದಲಿ ಮಾಡಿದಳ ಪೂರ್ವ ಮಾಲೆಯ ಭಕ್ತಿಪೂರ್ವಕವಾಗಿ ಚಾರುತರವಾಗಿಹ ಅಲಂಕಾರಗಳ ನಿಟ್ಟು ಶೃಂಗಾರ ಭರಿತಳು ಆಗಿ ಪಾರಿಜಾತದ ಹೂವಿನ ಹಾರಕೈಯಲಿ ಪಿಡಿದು ಚಾರು ಸಖಿಯಲ್ಲಿ 1 ಚಂದ್ರವದನೆಯ ಬಹಳ ಛಂದಾದ ಮುಖನೋಡಿ ಚಂದ್ರಮನು ಇದುಕಾಂತಿ ನಂದು ಒಯ್ದಳು ಈಕೆ ಮುಂದಿವಳನೊಯ್ಯಬೇಕೆಂದು ಕುಚಗಳ ಕಂಡು ಇಂದ್ರ ತಾ ಯನ ನಾ ಗೇಂದ್ರನ ಶಿರವೆಂದ ಮುಂದದರ ಸೊಂಡೆ ಇದು ಯೆಂದು ಕರಗಳಿಗೆಂದಾ ಮಂದಗತಿ ಮತ್ತಾದರರಿಂದ ನಡಗಿಯ ಕಂಡು ಸುಂದರಿಯ ಆಹುಬ್ಬು ಕರಿದರ್ಪ ತಾ ಕಂಡು 2 ಎರಳೆ ನೋಟವ ಕಂಡು ಎರಳೆವಾಹನ ನುಡಿದ ಯರವಿಂದವಯವಕ್ಹಿಗ್ಗಿ ಹೊರಳು ವಳು ಯಂತೆಂದು ಕೊರಳವನು ಕಂಡು ಹರಿ ಕರದಲೊಪ್ಪುವಯೆನ್ನ ವರಪಾಂಚಜನ್ಯವಿದು ಸರಿಯೆಂದು ನುಡಿದಾ ಗುರುಳು ಗೂದಲದವಳ ಹೆರಳವನು ನೋಡಿಹರಿ ಇರುಳ ಮಲಗುವಯನ್ನ ಸರಳ ಹಾಸಿಗೆಯೆಂದು ಸುರರು ಎಲ್ಲರು ಪರಿ ಪರಿಯಿಂದ ನುಡಿದರನುಸರಿಸಿಯಿದರಂತೆ 3 ಪದ ಮುಂದೆ ಆ ಪಾರ್ವತಿ ಬಂದು ಕುಳಿತಳಲ್ಲೆ ಬಂದ ಶಿವನು ತಾ ಬಾಲಕನಾಗಿ 1 ಲೀಲೆಯಿಂದಲಿ ತೊಡೆಯ ಮೇಲೆ ಮಲಗಿದನಾಗ ಬಾಲೆ ಹೀಗೆಂದಳು ಎಲ್ಲರಿಗೆ 2 ಮುನ್ನೆತ್ತಿದವರಿಗ್ಹಾಕುವೆ ಮಾಲೆ 3 ಅಂದಮಾತನು ಕೇಳಿ ಇಂದ್ರ ಬಂದನು ಆಗ ಮುಂದೆ ಆ ಬಾಲನೆತ್ತುವೆನೆಂದು4 ಚನ್ನಿಗನಂತಾದ್ರೀಶನ ಹಿಂದಕೆ ಮಾಡಿ ಸಣ್ಣ ಬಾಲನ ತಾ ಮುಂದಕೆ ಕರೆದಾ 5 ಪದ ಸಣ್ಣಬಾಲನೇ ಬಾರೋ ಹಣ್ಣು ಕೊಡುವೆ ನಿನಗಿನ್ನು ಕೈತಾರೋ ಪ ಚಂಡು ಬೊಗರಿ ಗೋಲಿಗುಂಡು ನಾ ಕೊಡುವೆ ಬೆಂಡು ಬತ್ತಾಸವ ಕೊಂಡು ನಾ ಕೊಡುವೆ 1 ಚಿಣಿಕೋಲು ಮತ್ತೆ ಈಕ್ಷಣ ತಂದು ಕೊಡುವೆ ಮನಸಿಗೊಪ್ಪುವ ಚಿಂತಾಮಣಿ ತಂದು ಕೊಡುವೆ 2 ನಡಿಯೋ ನಿನಗೆ ದೊಡ್ಡ ಗುಡಿಯ ತೋರಿಸುವೆ ಒಡೆಯ ನಂತಾದ್ರೀಶನಡಿಯ ತೋರಿಸುವೆ 3 ಪದ್ಯ ಮತ್ತೇ ಮತ್ತೀಪರಿಯ ಒತ್ತಿ ಒದರಿದರೇನು ವ್ಯರ್ಥ ಬಾಲನು ಕಣ್ಣೆತ್ತಿ ನೋಡಲುವಲ್ಲ ಒತ್ತಿ ತೋಳುಗಳ್ಹಿಡಿದು ಎತ್ತಿನೋಡಿದನಾಗ ಯತ್ನದಿಂದಲ್ಲಿಯೆ ತಿತ್ತಿದಮ್ಮನೆ ದಣಿದು ಮತ್ತ ದೇವೇಂದ್ರ ಬಲು ಮೆತ್ತಗಾದ ವ್ಯರ್ಥ ಈ ಬಾಲಕನ ಎತ್ತಿ ನಗೆಗೀಡು ಈವತ್ತು ಆಯಿತು ಎಂದು ವೃತ್ರಾರಿ ತಾ ಮುಂದೆ ಅತ್ಯಂತ ಕೋಪದಲಿ ಎತ್ತಿದನು ವಜ್ರವನು ಎತ್ತಿದಾ ಕೈಬರದೆ ಮತ್ತಲ್ಲಿ ನಿಂತಿಹುದು ಚಿತ್ರದಲ್ಲಿಯ ಗೊಂಬೆ ಹಸ್ತದಂತೆ 1 ಪದ ಆಯಿತು ಈ ಪರಿಯು ದೇಹಕೆ ಆಯಾಸವೇ ಸರಿಯ ಪ ಮತ್ತೆ ಅಗ್ನಿಯು ಅಲ್ಲೆ ಬಾಲನ ಎತ್ತದೆ ದಣಿವುತಲೆ ಶಕ್ತಿ ಎತ್ತಿದ ಮೇಲೆ ಮತ್ತಾ ಶಕ್ತಿ ನಿಂತಿತು ಅಲ್ಲೆ1 ದಂಡಧರನು ಆಗ ಯೆತ್ತದೆ ಭಂಡಾದನು ಬೇಗ ದಂಡ ನೆತ್ತಿದನಾಗ ಎತ್ತಿದ ದಂಡ ನಿಂತಿತುಹಾಗೆ 2 ಮತ್ತೆ ನೈರತಿ ಅಲ್ಲೆ ಬಾಲನ ಎತ್ತದೆ ದಣಿವುತಲೆ ಕತ್ತಿಯೆತ್ತಿದ ಮೇಲೆ ಮುಂದಾ ಕತ್ತಿನಿಂತಿತು ಅಲ್ಲೆ 3 ಪಾಶಧರನು ಆಗ ಬಹು ಕಾಸೋಸಿ ಬಿಟ್ಟು ಬೇಗ ಪಾಶವೆತ್ತಿದನಾಗ ಮುಂದಾ ಪಾಶನಿಂತಿತು ಹಾಗೆ 4 ವಾಯು ಬಂದನಲ್ಲೆ ಬಳಲಿದ ಕಾಯಕ್ಲೇಶದಲ್ಲೆ ಕಯ್ಯನೆತ್ತಿದ ಮೇಲೆ ಮತ್ತಾಕೈಯು ನಿಂತಿತು ಅಲ್ಲೆ 5 ಸತ್ವರ ಬರವುತಲೆ ಕುಬೇರ ನಿಸ್ಸತ್ವನಾದನಲ್ಲೆ ಶಸ್ತ್ರಯೆತ್ತಿದ ಮೇಲೆ ಮುಂದಾ ಶಸ್ತ್ರ ನಿಂತಿತು ಅಲ್ಲೆ 6 ಶೂಲಧರನು ಅಲ್ಲೆ ಮತ್ತಾ ಬಾಲನಯೆತ್ತದಲೆ ಶೂಲನೆತ್ತಿದ ಮೇಲೆ ಮುಂದಾಶೂಲ ನಿಂತಿತು ಅಲ್ಲೆ7 ಬುಧಜನಕನು ಅಲ್ಲೆಬರವುತ ಗದಗದ ನಡುಗುತಲೆ ಗದೆಯನೆತ್ತಿದ ಮೇಲೆ ಮುಂದಾಗದೆಯು ನಿಂತಿತು ಅಲ್ಲೆ8 ಗೋಣನಲ್ಲಾಡುವ ತಲೆಯತ್ತಿದ ಹರಿ ತಾನು ಚಕ್ರವು ಮೇಲೆಖೂನದಿ ಅದು ಅಲ್ಲೆ ಆಯಿತು ಗೋಣವು ತಿರುವುತಲೆ 9 ಅಲ್ಲೆ ಪೂಷಣ ಬೇಗ ಕರಕರ ಹಲ್ಲು ತಿಂದನಾಗ ಹಲ್ಲು ಬಿದ್ದವಾಗ ತೋರಿದ ಎಲ್ಲ ದೇವತೆಗಳಿಗೆ 10 ಕೂಸನೆತ್ತದಾಗಿ ಎಲ್ಲರು ಮೋಸವಾದರು ಹೋಗಿ ಆ ಸ್ವಯಂವರಕಾಗಿ ಅನಂತಾದ್ರೀಶನ ಸಹಿತಾಗಿ 11 ಪದ್ಯ ಅಂಬುಜೋದ್ಭವ ತಾನು ಸ್ತಂಭಿತಾಗಿಸುರ ಕ ದಂಬವನು ಕಾಣುತಲೆ ಸಾಂಬನ ಮಹಿಮೆಯಿದು ಅಂಬಿಕೆಯ ತೊಡೆಯ ತಲೆಗಿಂಬು ಮಾಡಿಹ ಬಾಲ ಸಾಂಬನಿವನಹದೆಂದು ಸಂಭವಿಸಿದಾಗ ನಂಬಿ ಸ್ತುತಿ ಮಾಡಿದನು ಸ್ತಂಭೀತರು ಎಂದೆನಿಸಿ ಕೊಂಬುವರು ಎಲ್ಲಾರು ನಂಬಿ ಸ್ತುತಿಸಿದರು ಆ ಸಾಂಬಗೀಪರಿಯು ಪದ ಸಾಂಬಸದಾಸಿವನೆ ರಕ್ಷಿಸು ಬಾಲಕನೇ ಸಾಂಬಸದಾಶಿವನೆಂಬುವ ಬಾಲಕ ನೆಂಬುವದರಿಯದೆ ಸ್ತಂಭಿತರಾದೆವು ನಂಬಿಗೆ ತಿಳಿಯದೆ ನಂಬಿದೆವೋ ಜಗ ದಂಬೆಯ ತೊಡೆ ತಲೆ ಗಿಂಬು ಇಟ್ಟವನೆ ಪ ಪಟುತರನಾದಂಥವನೆ ತಿಳಿಯದೋ ನಿನ್ನ ಘಟಿತ ಘಟನೆ ಹರನೆ ಸ್ಫಟಿಕ ಸನ್ನಿಭ ಧೂರ್ಜಟಿಯೆ ನಿನಗೆ ಸಂ ಘಟಿತಳಾದ ಈ ಕುಟಿಲ ಕುಂತಳೆಯು ಹಟದಲಿ ಗೆಲವುದುವ ಹಟವೊಂದಿದು ಈ ಸ್ಪುಟವಾಯಿತು ಸಂಕಟ ಪರಿಹರಿಸು 1 ಸರ್ವರನೆಲ್ಲಾ ತರಿಸಿ ಸರಸ ಮಾಡಿದೆಯೊ ಗರ್ವವ ಪರಿಹರಿಸಿ ಉರ್ವಿಯೊಳಗೆ ನಿನಗಿರ್ವರಾರು ಸರಿ ಸರ್ವರನ್ನು ಮೀರಿರುವ ದೇವನೆ ಸರ್ವಪ್ರಕಾರದಿ ಸರ್ವರ ಅವಯವ ಪೂರ್ವದಂತಾಗಲಿ ಪಾರ್ವತಿಪ್ರಿಯನೇ 2 ಭೋ ಶಿಶುವರ ರೂಪ ಬೇಗನೆ ಬಿಡು ಈ ಸಮಯಕ್ಕೆ ಕೋಪ ಈ ಶಶಿವದನೆಯ ಆಶೆಗೆ ವ್ಯರ್ಥದಿ ಮೋಸಹೋಗಿ ಕಾಸೋಸಿ ಬಟ್ಟೆವು ಘಾತಿ ಮಾಡಬೇಡಾಸೆಯ ಪೂರಿಸು ಶ್ರೀ ಅನಂತಾದ್ರೀಶ ಪ್ರಿಯನೆ 3 ಪದ್ಯ ವಿರಳಾಟ ಈ ಸ್ತುತಿಗೆ ಮರುಳಾಗಿ ತಾನು ಗರಳ ಗೊರಲಿಸಾ ಮೂರುತಿಯ ಸರಳ ಮಾಡೆಲ್ಲವರು ಗುರುಳು ಗೂದಲದವ ಸರಳಾದವ ತೊಡೆಯಲ್ಲಿ ಹೊರಳೆದ್ದು ತೋರಿಸಿದ ಸರಳ ನಿಜರೂಪ ವಿರಳೆ ನೋಟದಲಿರುವ ತರಳೆ ಆ ಪಾರ್ವತಿಯು ಹೊರಳಿ ನೋಡುತಲೆದ್ದು ಹರಳಿನುಂಗರ ಕೈಯ್ಯ ಹೆರಳಿನೊಳಗಿರುವಂಥ ಅರಳಿದ್ಹೂವಿನ ದಿವ್ಯ ಸರಳ ಮಾಲೆಯ ಅವನ ಕೊರಳಿಗ್ಹಾಕಿದಳು 1 ಗಂಭೀರ ವಾದ್ಯಗಳೇಳು ಸಾರಿ ನುಡಿದವು ಆಗ ಸಾವಿರಬುಧರ ಎಲ್ಲ ವೃಷ್ಟಿಸೂರಿಮಾಡಿದರು ಚಾರ್ವನಂತಾದ್ರಿಯಲ್ಲಿರುವ ದೇವನ ಬಿಟ್ಟು ಸಾರ ಪರಮೇಶ್ವರಗೆ ಹಾರ ಹಾಕುವೆನೆಂಬ ಪಾರ್ವತಿಯ ಅಭಿಲಾಷೆ ಪೂರ್ಣವಾದಲ್ಲೆ ಸಂಪೂರ್ಣ ಸಾಂಬ ಮೂರುತಿಯ ದಯೆಯಿಂದ ಮೂರು ಅಧ್ಯಾಯ
--------------
ಅನಂತಾದ್ರೀಶ - ಕಥನಕಾವ್ಯಗಳು
ಅನಂತಶಯನ ವಿಠಲಾ | ಕಾಪಾಡೊ ಇವಳಾ ಪ ಸಾರ ಅ.ಪ. ತಾಪತ್ರಯಗಳು ಎಂಬ | ಕೂಪಾರದಲಿ ಬಿದ್ದು ಶಾಪಕೊಳಗಾಗಿ ಹಳ ಕಾಪಾಡಬೇಕೊದ್ರೌಪದಿಯವರದ ಕರು | ಣಾಪಯೋನಿಧಿಹರೆಯೆನೀ ಪೊರೆಯದಿರಲನ್ಯ | ಕಾಪಾಡ್ವರ್ಯಾರೊ 1 ತೈಜಸನೆ ನೀನಾಗಿ | ಸೂಚಿಸಿಹ ಅಂಕಿತವಯೋಜಿಸಿಹೆ ಇವಳೀಗೆ | ಅವ್ಯಾಜ ಕರುಣೀಪ್ರಾಜ್ಯ ಎನ ಸಂಸಾರ | ಗೌಜು ಕಳೆಯಲ್‍ವೆನ್‍ತ್ರ್ಯಜಗದ್ವಾಪನೆ | ವಾಜಿವದನಾಖ್ಯ 2 ಕರ್ಮಾಕರ್ಮಗಳ | ಮರ್ಮಗಳ ತಿಳಿಸುತ್ತಪೇರ್ಮೆಯಲಿ ಪತಿಸೇವೆ | ಕರ್ಮಪ್ರಾಧಾನ್ಯಧರ್ಮವನೆ ತಿಳಿಸುತ್ತ | ಭರ್ಮಗರ್ಭನ ಪಿತನೆಕರ್ಮಬೀಜವ ಕಳೆಯೊ | ಬ್ರಹ್ಮಣ್ಯದೇವಾ3 ಮರುತಾಂತರಾತ್ಮನೆ | ಮೂರೆರಡು ಭೇದಗಳತರತಮಂಗಳನರುಹಿ | ಪೊರೆಯೊ ಇವಳಾಅರುಹುವೆನೊ ಸರ್ವಜ್ಞ | ತರುಳೆಬಹುಭಕ್ತಿಯಂತೆಕರುಣಿಸೆಲೊ ಕೃಪಾಸಾಂದ್ರ | ಕಂಜಜಾನಯ್ಯ 4 ಗಾವಲ್ಗಣೀ ವರದ | ಭಾವದಲಿ ಮೈದೋರಿನೀ ವೊಲಿಯೆ ಬಿನ್ನಪದೆ | ಗೈಯೆ ಶ್ರೀಹರಿಯೆಕೋವಿದೊತ್ತಂಸ ಗುರು | ಗೋವಿಂದ ವಿಠಲನೆಕಾವ ಕರುಣಿ ಎಂದು | ಪ್ರಾರ್ಥಿಸುವೆ ಹರಿಯೆ 5
--------------
ಗುರುಗೋವಿಂದವಿಠಲರು
ಅನುದಿನ ಮನದಲಿ -----ದೆ ಪ ಮನಶುದ್ಧಿಯ ಮಾಡುವನು---------- 1 ಜಗತ್ರಯ ನಾರಾಯಣನ 2 ಇಂದಿರೆಯರಸನ ಇಷ್ಟರ ಬೆರೆದು 3 ನೀರಜ ನಯನನಾ 4 `ಹೆನ್ನೆವಿಠ್ಠಲ ದೇವರ ಇನ್ನುಸದಾ 5
--------------
ಹೆನ್ನೆರಂಗದಾಸರು
ಅಮೃತ ನೀಡೆನಗೆ ಪ ಅಮೃತ ನೀಡಪಮೃತ್ಯುಕಳೆದು ಧ್ಯಾ ನಾಮೃತವೆಂಬ ಸಾಮ್ರಾಜ್ಯ ಸಂಪದವಿತ್ತು ಅ.ಪ ಜರಾ ಮರಣವ ಗೆಲಿಪ ಅಮೃತ ದುರಿತ ಪರ್ವತಲೋಪ ಭರದಿಗೈದು ಮಾಯಮರವೆ ಹರಿಗೆ ಸ್ಥಿರ ಪರಮಪಾವನ ಮಾಳ್ಪ ಹರಿಸ್ಮರಣಾನಂದ 1 ಭವಬಾಧೆಯ ಗೆಲಿಪ ಅಮೃತ ಜವನ ಭಯವ ಲೋಪ ಜವದಿಗೈದು ತ್ರಯ ಭುವನದೊಳ್ಮಿಗಿಲಾಗಿ ಧ್ರುವನು ನಿರುತಮಾಗಿ ಸವಿದ ಮಹದಾನಂದ2 ತಾಮಸಗಳನಳಿವ ಅಮೃತ ಪಾಮರತನ ತುಳಿವ ಆ ಮಹ ವೈಕುಂಠದ ವಿಮಲ ಪದವಿಯನು ಕ್ಷೇಮದೀಯುವ ಶ್ರೀರಾಮ ಪ್ರೇಮಾನಂದ 3
--------------
ರಾಮದಾಸರು
ಅವತಾರತ್ರಯ ಅಕ್ಷಯ ನೀನಾಮೃತಂ ಕುಕ್ಷಿಯೊಳಗೆ ಪೂರ್ಣವಾಗಿಹ ಅಕ್ಷಯಾಂತಕನೀಕ್ಷಿಪುದು ಸುಜನರು ಪ ಇಕ್ವಾಕು ಕುಲಾಧ್ಯಕ್ಷ ರಾಘವನಾ ಶಿಕ್ಷೆಯಲಿ ಪ್ರಾಣ ರಕ್ಷಕನೆÉಂದರುಹಲು ಧರೆಗೆ ತಕ್ಷಣದಿ ಮರುದ್ವಾಕ್ಷ ಮರಕಟ ಕೃತಿಯ ತೋರಿ ಜಲಧಿಯನೆ ಪಾರಿ ರಕ್ಷಕೇಂದ್ರನ ಪುರಸೇರಿ ರಕ್ಕಸಿಯದೆಡೆಯಲಿ ಜನನಿಗೊಂದಿಸಿ ಲಕ್ಷಣದುಂಗುರವ ತೋರಿ ರಕ್ಷಸದಕ್ಷರವನಳಿದಾ 1 ಯದುಕುಲದೊಳುದಯಿಸೆÉ ಹರಿಯು ತದನರಿತು ವಾಯು ಉದಭವಿಸಿ ಭೀಮಾಭಿಧಾನದಿ ಮುದಗೊಳಿಸಲಿಳೆಗೆ ಕುದಿಯುವ ಬಕ ಹಿಡಿಂಬರರಳಿದು ಕೀಚಕನ ಸದೆದು ಅಧಮಕಾರವ ಕುಲವನಳಿದು ವಧಿಸಿzಖಿಲ ಬಲವ ತೋರಿ ಮುದವ ಬೀರಿ ಧರೆಯ ಜನಕೆ ಯಶವ ಗಳಿಸಿದವನ ಇಹಕೆ ಚರಕೆ2 ಗುರುವಾಗವತರಿಸಿ ಧರೆಯ ಸುಜನರು ಕರುಣಾಬ್ಧಿ ಹರಿಯು ಧರೆಯೊಳುಡುಪಿ ಪುರದಿ ಜನಿಸಲಿ ಸುರರಿಗೆ ತಿಳಿಯಲು ಹರಿಯ ಮತವ ಸೃಜಿಸಲಿಳೆಯಲು ತದಾಜ್ಞೆಯ ಕೇಳಲು ಭರದಿ ಮಧ್ವನಾಮ ಪಡೆದು ಹರಿಮತವ ಪಿಡಿಯ ಬೋಧಿಸಲು ನರಸಿಂಹವಿಠಲನ ಸ್ಮರಣೆಯಗೈದು ನರಜನ್ಮ ಸಾರ್ಥಕವು ಪರಮಪದವ ಗೈದು 3
--------------
ನರಸಿಂಹವಿಠಲರು
ಅವತಾರತ್ರಯ ಚರಣ ಸೇವಕರನ್ನು ಪೊರೆದ ಪ್ರಾಣೇಶನ್ನಹರುಷಾದಿ ವಂದಿಸಿ ವರಬೇಡಿರೈ ಪ ಕರುಣ ಸಾಗರ ಕಲ್ಪತರು ಭಕ್ತ ಕುಮುದ ಚಂದಿರನೆನಿಸುತಭೀಷ್ಟ ಸುರಿಸುವ ನೋಡಿರೈ ಅ.ಪ. ಸುದತಿ ಜಾನಕಿಯಾಪದಕೆರಗಿ ಪೇಳಿದ ಮುದದಿ ರಾಮನಹೃದಯ ವಾರುತಿಯಾಮುದ್ರಿಕೆಯ ಸಲಿಸುತ ವದಗಿದಸುರತ ಒಡೆದ ಕೀರುತಿಯಾಪಿಡಿಯಲ್ಕೆ ಕ್ಷಣದೊಳು ಕದನಕಂಠಕನೆನಿಪರಾವಣನೆದುರಿಸಿ ಗರ್ವ ಶಿಕ್ಷಿಸಲುಪುಚ್ಛದಲಿ ಪಟ್ಟಣ ಸುಟ್ಟು ದಹಿಸಿದಸದಯಕಾಮನ ಕಾರ್ಯ ಪೂರ್ತಿಯಾ 1 ದುರುಳ ಹರಣ ಸಂನುತ ಚರಣ ಕಮಲª Àಧರೆಯೊಳಗೆ ಪರಿಪರಿ ಮೆರೆದಾ 2 ಮರಳಿ ಭೂಸುರನು ಮಂದಿರದೊಳು ಜನಿಸಿತಾಗುರು ಮಧ್ವಮುನಿಯೆಂದು ಕರೆಸೀದನುವರವೇದವ್ಯಾಸರಾ ಕರುಣಪಡೆದು ದೇಶ ಸಂಚರಿಸಿದಾನಿಂದಕರ ಧಿಕ್ಕರಿಸಿದಾ ಸೇವಕರನುದ್ಧರಿಸಿದಾಗ್ರಂಥಗಳ ರಚಿಸಿ ಭರದಿ ಕಲಿ ಸಂಕರನೋಳ್ವಾದಿಸಿದಾಗುರು ಇಂದಿರೇಶನೆ ಧರೆಗೆ ಪಿತನೆಂದರುಹಿ ಸಾಧಿಸಿದಾಕರಕಂಜಜಾತದಿ ಕರಕೆ ಶಾಸ್ತ್ರದರಿವ ಬೋಧಿಸಿದಾನವರತ್ನ ಭಾಸಿತ ಕರಣಕುಂಡಲಮಕುಟ ಸಕಲಾಭರಣ ಭೂಷಿತಸುಮನಸೋತ್ತುಮ ಮುನಿಪ ಮಾನಂದಾತ್ಮಬುಜಗುಣದರಸೆ ಘನಸುಂದರ ಸುಖಪ್ರದ 3
--------------
ಗುರುಇಂದಿರೇಶರು
ಅವತಾರತ್ರಯ ಮೂರು ರೂಪವ ತೋರೋ ಮಾರ್ಜಿವದೊಡೆಯಾ ಪ. ಸಾರುವೆನು ಶರಣೆಂದು ಚಾರುತವ ಚರಣಕ್ಕೆ ಅ.ಪ.ಅಂಜನೆಯಲುದ್ಭವಿಸಿ ಸಂಜೀವನವ ತಂದುಕಂಜನಾಭನ ದಯದಿಅಂಜದತಿ ಕೆಂಜಡೆಯ ಪಿತಗಂಜಲಿ ಮುಗಿಯುವೆನು 1 ವಾರಿಧಿಯ ನೆರೆದಾಂಟಿ ನಾರಿಗುಂಗುರವಿತ್ತುಕ್ರೂರ ಕೀಚಕನ ಸಂಹಾರವನೆ ಮಾಡುತಲಿವೀರ ಬದರಿಲಿ ಪೋಗಿ ಸಾರಶಾಸ್ತ್ರವ ತಿಳಿದಧೀರ ಮಧ್ವಾಚಾರ್ಯ ಭೀಮ ಕರುಣವ ತೋರೋ 2 ಎರಡೈದು ಶಿರದವನ ಪುರವನೇ ನೀನುರುಹಿದುರುಳ ದುರ್ಯೋಧನನ ಧುರದಿ ಗೆಲಿದುವರ ಉಡುಪಿ ಕ್ಷೇತ್ರದಲಿಸಿರಿಯ ರಮಣಾ ತಂದೆ ವರದ ವಿಠ್ಠಲರೇಯಾ3
--------------
ಸಿರಿಗುರುತಂದೆವರದವಿಠಲರು
ಅವತಾರತ್ರಯ (1) ಕರುಣದೆನ್ನನು ಕಾಯಬೇಕಯ್ಯಾ ಕದರೂರ ರಾಯಕರುಣದೆನ್ನನು ಕಾಯಬೇಕ್ಕೆಹರಸುರಾದಿಗಳಿಂದ ವಂದ್ಯನೇದುರಿಥ ಪರಿಹರಿಸಿಹ ಪರಕೆ ನೀ-ನ್ಹರುಷದಲಿ ಸಾಧನ ಮಾಡಿ ಪ ಅಂಜನಿಯ ಗರ್ಭದಲ್ಲಿ ಜನಿಸಿದೆಯೊ ಶ್ರೀರಾಮನಂಘ್ರಿಕಂಜದಲ್ಲಿಹ ಭ್ರಮರನೆನಿಸಿಯಾಅಂಜದಂಬುಧಿಯ ದಾಟಿ ಸೀತೆಯ -ನಂಜಿಸುವ ರಾವಣನ ಬಲಗಳಭಂಜಿಸಿದಿ ಧರೆಯೊಳಗೆ ತೇಜಃಪುಂಜನಾಗಿಹ ಪ್ರಭುವೆ ಎನ್ನನು 1 ಅಖಿಳ ಕುರುಬಲಅಂತಕನಿಗೊಪ್ಪಿಸಿದಿ ಜಗದಾ -ದ್ಯಂತ ಸುಜನರಿಗಿತ್ತಿ ಸಂತಸಸಂತತೆನ್ನನು ಬಿಡದೆ ಪವನನೆ 2 ಮಧ್ಯಗೇಹನಲ್ಲಿ ಪುಟ್ಟಿದೆಯೊ ಸಚ್ಛಾಸ್ತ್ರ ಪಠಿಸಿ ಆ -ಪದ್ಧ ಮತದವರನ್ನು ಕುಟ್ಟಿದಿಯೊಉಧ್ವನುತ ರಮಾಪತಿ ವಿಠ್ಠಲನಸದ್ಯ ಮನದಲಿ ತೋರಿ ಕೊಟ್ಟೆ -ನ್ನುದ್ಧರಿಸಿ ಭವಕಡಲ ದಾಟಿಸೊಮಧ್ವಮುನಿ ಸಜ್ಜನತ್ಪ್ರಸಿದ್ಧನೆ 3
--------------
ರಮಾಪತಿವಿಠಲರು
ಅವನೆವೆ ಯೋಗ್ಯ ನೋಡಿರೈ ಭಕುತಿಗೆ | ಸಾಯಾಸವಿಲ್ಲದ ಯೈದನವನಿಯೊಳಗ ಮುಕುತಿಗೆ ಪ ನಿತ್ಯ ಶ್ರವಣ ಮಾಡಲೆಂದು ಬ್ಯಾಸರಾ | ಹ್ಯಾವ ಹೆಮ್ಮೆಯಲ್ಲಿ ಕಳಿಯ ವ್ಯರ್ಥವಾಸರಾ | ನೋವ ಮಾಡುತಿರಲು ತಾಪತ್ರಯದ ತೂರಾ | ಬಳಲ ಆವಗಿರುವ ಕೂಡಿಕೊಂಡು ಹರಿಯ ದಾಸರಾ 1 ನ್ಯೂನ ನೋಡದೆ ಪರರ ಸದ್ಗುಣವನೆ ಕೊಂಬನು | ದಂಭ | ಮಾನ ತೊರೆದು ಸ್ತುತಿಯ ನಿಂದ್ಯ ಸರಿಯ ಕಾಂಬನು | ಜ್ಞಾನದಿಂದ ಪಡೆದು ಗುರುಹಿರಿಯರಿಂಬನು | ತ್ವರಿತ | ಸ್ವಾನುಭವದ ಸೌಖ್ಯಸಾರ ಸವಿಯನುಂಬನು 2 ಬಲಿದು ಭಾವನಿಂದ ತಿಳಿದು ಸ್ವಹಿತುಪಾಯನು ದೃಢದಿ | ಹುಲು ಮನಿಜರಿದಿರ ಹೋಗಿ ದೆರಿಯ ಬಾಯನು | ತಳೆದು ವೇಷದಿಂದ ದಣಿಸವಾವ ಕಾಯನು | ಹೃದಯ | ದೊಳನವನ ನಲುವ ಗುರುಮಹಿಪತಿ ಪ್ರೀಯನು 3
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಆ ನಮಿಪೆ ವಿಷ್ಣು ಶ್ರೀ ಬ್ರಹ್ಮ ವಾಯು ವಾಣಿ ಭಾರತಿ ಮುಖ್ಯರವತಾರ ಆವೇಶಕಾನಮಿಪೆ ಪ ಮತ್ಸ್ಯ ಕೂರ್ಮ ಭೂವರಹ ನರಸಿಂಹ ದಧಿ ವಾಮನ ತ್ರಿವಿಕ್ರಮ ಭೃಗುಕುಲೋದ್ಭವ ಬುದ್ಧ ಕಲ್ಕಿ ಹಯಾಸ್ಯ ನಾಮ ತಾಪಸ ಮನು ಉಪೇಂದ್ರ ಅಜಿತಾದಿಗಳಿಗಾ ನಮಿಪೆ 1 ದಾಸ ಧನ್ವಂತ್ರಿ ಹರಿ ಹಂಸ ದತ್ತಾ ವ್ಯಾಸ ಕಪಿಲಾತ್ಮಂತರಾತ್ಮ ಪರಮಾತ್ಮ ಯ ಜ್ಞೇಶ ವೈಕುಂಠ ನಾರಾಯಣಾಧ್ಯವತಾರಕಾನಮಿಪೆ 2 ನಾರಾಯಣೀ ಋಷಭ ಐತರೇಯ ಶಿಂಶು ಮಾರ ಯಜ್ಞ ಪ್ರಾಜ್ಞ ಸಂಕರುಷಣಾ ಕ್ಷಿರಾಬ್ದಿ ನಿಲಯ ಯಮನಂದನಾ ಕೃಷ್ಣ ಹರಿ ನಾರಾಯಣ ಧರ್ಮಸೇತು ರೂಪಾದಿಗಳಿಗಾನಮಿಪೆ 3 ಗುಣಗಳಭಿಮಾನಿ ಶ್ರೀ ಭೂ ದುರ್ಗ ದಕ್ಷಿಣಾಂ ಭೃಣಿ ಮಹಾಲಕ್ಷ್ಮೀ ಶ್ರೀ ವಿಷ್ಣುಪತ್ನೀ ಮಾಯಾ ಕೃತಿ ಶಾಂತಿ ಶುದ್ಧ ರು ಕ್ಮಿಣಿ ಸತ್ಯ ಸೀತಾದ್ಯಮಿತ ರೂಪಗಳಿಗಾನಮಿಪೆ 4 ಹೀನಳೆನಿಸುವಳನಂತಾಂಶದಲಿ ಸುಖ ಬಲ ಜ್ಞಾನಾದಿ ಗುಣದಿ ಮಹಾಲಕ್ಷ್ಮಿ ಹರಿಗೆ ಆನಂದ ವಿಜ್ಞಾನ ಮಯನ ವಕ್ಷಸ್ಥಳವೆ ಸ್ಥಾನವಾಗಿಹುದು ಇಂದಿರೆಗೆ ಆವಾಗ 5 ವಿಧಿ ವಿರಿಂಚಿ ಮಹನ್ ಬ್ರಹ್ಮ ಸೂತ್ರ ಗುರು ಮಹಾಪ್ರಭು ಋಜ ಸಮಾನ ವಿಜ್ಞ ಪ್ರಾಜ್ಞ ಹರಿಭಕ್ತಿ ಮೇಧಾವಿ ಮುಕ್ತಿ ಧೃತಿ ಅಮೃತನಿಗೆ 6 ಸ್ಥಿತಿ ಯೋಗ ವೈರಾಗ್ಯ ಚಿಂತ್ಯ ಬಲಸುಖ ಬುದ್ಧಿ ವಿತತಾದಿ ಗೋಪ ಹನುಮ ಭೀಮ ವೃಷಿವರಾನಂದ ಮುನಿ ಮೊದಲಾದ ರೂಪಶ್ರೀ ಪತಿಗಧಿಷ್ಟಾನ ಕೋಟಿಗುಣಾಧಮರು ರಮೆಗೆ ಆ ನಮಿಪ 7 ಸರಸ್ವತಿ ಗಾಯತ್ರಿ ಬುದ್ಧಿ ವಿದ್ಯಾ ಪ್ರೀತಿ ಗುರುಭಕ್ತಿ ಸರ್ವ ವೇದಾತ್ಮಿಕ ಭುಜಿ ಪರಮಾನು ಭೂತಿ ಸಾವಿತ್ರಿ ಸು ಸುಖಾತ್ಮಿಕಾ ಪತಿ ನಾಮಗಳಿವೆಂದರಿದು 8 ಶಿವಕನ್ಯ ಇಂದ್ರಸೇನಾ ಕಾಶಿಜಾ ಚಂದ್ರ ಯುವತಿ ದ್ರೌಪದಿಯು ಭಾರತಿ ರೂಪವು ಪವಮಾನ ಬ್ರಹ್ಮರಿಗೆ ಶತಗುಣಾಧಮ ಸದಾ ಶಿವನ ರೂಪಗಳ ಈ ಪರಿಯ ಚಿಂತಿಸುತ 9 ತತ್ಪುಮಾನ್ನೂಧ್ರ್ವಪಟ ದುರ್ವಾಸ ವ್ಯಾಧ ಅ ಶ್ವತ್ಥಾಮ ಜೈಗೀಷವ್ಯ ತಪ ಅಹಂಕ್ರತು ಶುಕ ವಾಮದೇವ ಗುರು ಮೃತ್ಯುಂಜಯೋರ್ವ ಸದ್ಯೋಜಾತ ತತ್ಪುರುಷಗಾನಮಿಪೆ 10 ನರ ವಯು ಶುಕಕೇಶವೇಶ ಬಲಗೆ ಸಂ ಕರುಷಗಾವೇಶ ಲಕ್ಷ್ಮಣದೇವಗೆ ಗರುಡ ಶೇಷಾಘೋರ ಸಮರು ಶತಗುಣದಿಂದ ಕೊರತೆಯೆನಿಸುವರು ಮೂವರು ವಾಣಿ ದೇವಿಗೆ 11 ಶೇಷಗೆ ಸಮಾನನೆನಿಪಳು ಜಾಂಬವತಿ ರಮಾ ವೇಶ ಕಾಲದಿ ಷಣ್ಮಹಿಷಿಯರ ಒಳಗೆ ಹ್ರಾಸಕಾಲದಿ ಸಮಳು ಐವರಿಗೆ ಜಾಂಬವತಿ ವೀಶಾದ್ಯರಿಗೆ ಹರಿ ಸ್ತ್ರೀಯರ ಸಮರೈದುಗುಣ12 ರೇವತಿ ಶ್ರೀಯುತ ಶ್ರೀ ಪೇಯ ರೂಪತ್ರ ಯಾವಕಾಲದಿ ವಾರುಣಿಗೆ ಪಾರ್ವತೀ ದೇವಿ ಸೌಪರಣಿಗೆ ಸಮ ಷಣ್ಮಹಿಷಿಯರಿಗೆರಡು ಮೂವರೀರೈದು ಗುಣ ಕಡಿಮೆ ಪತಿಗಳಿಗೆ 13 ಕುಶ ವಾಲಿ ಗಾಧಿ ಮಂದ್ರದ್ಯುಮ್ನನು ವಿಕುಕ್ಷಿ ಶ್ವಸನ ಹರಿ ಶೇಷ ಸಂಯುಕ್ತಾರ್ಜುನಾ ಅಶನೀಧರನ ಸುರೂಪಂಗಳಿವು ಮನ್ಮಥನ ನಿತ್ಯ 14 ಪ್ರದ್ಯುಮ್ನ ಸಂಯುಕ್ತ ರುಕ್ಮಿಣೀ ದೇವಿ ಸುತ ಪ್ರದ್ಯುಮ್ನ ಭರತನು ಸನತ್ಕು ಮಾರಾ ಸಾಂಬ ಸ್ಕಂಧ ಸುದರುಶನ ರುದ್ರ ನಾರ್ಧಾಂಗಿನಿಗೆ ದಶಗುಣಾಧಮರೆಂದು15 ಭವ ಪ್ರಾಣ ನಾಮರಗೆ ರೂಪ ಸರ್ಮೋತ್ತುಂಗನು ಕಾಮ ಪುತ್ರಾನಿರುದ್ದಾದಿಗಳು ದಶ ಹೀನ ಈ ಮಹಾತ್ಮರ ದಿವ್ಯ ಅವತಾರರೂಪಗಳಿಗಾನಮಿಪೆ 16 ಪ್ಲವಗ ಬ್ರಹ್ಮಾಂಶಯುಗ್ದೋಣ ಮಾರುತಾವೇಶ ಸಂಯುತ ವುದ್ಧವಾ ಮುರು ರೂಪವು ಬೃಹಸ್ಪತಿಗೆ ಪ್ರದ್ಯುಮ್ನನ ಕು ಮಾರಾನಿರುದ್ಧ ಶತೃಘ್ನ ಅನಿರುದ್ಧನಿಗೆ 17 ತಾರ ಚಿತ್ರಾಂಗದ ಶಚಿ ರೂಪ ಲಕ್ಷುಣ ಈ ರುಗ್ಮವತ್ರಿ ಎರಡು ರತಿರೂಪವು ಆರುಜನ ದಕ್ಷ ಸ್ವಯಂಭುವ ಮನು ಪ್ರಾಣ ಗಿರೈದು ಗುಣಗಳಿಂದಧಮರೆಂದರಿದು 18 ಭೂತಾಭಿಮಾನಿ ಪ್ರವಹ ಪಂಚಗುಣದಿ ಪುರು ಹೊತ ಪತ್ನ್ಯಾದಿಗಳಿಗಧಮನೆನಿಪ ಈತಗವತಾರವಿಲ್ಲವನಿಯೊಳು ಚಂದ್ರ ಪ್ರ ದ್ಯೋತನಾಂತಕ ಸ್ವಯಂಭುವ ಪತ್ನಿ ಶತರೂಪಿ 19 ಸತ್ಯಜಿತ ಜಾಂಬವಾನ್ ವಿದುರ ಗುರು ವಾಯು ಸಂ ಯುಕ್ತ ಧರ್ಮಜ ಯಮಗೆ ರೂಪ ನಾಲ್ಕು ರಾತ್ರಿ ಚರನವತಾರ ಯಿಂದ್ರ ಯುಕ್ತಾಂಗದಾ ದಿತ್ಯ ನವತಾರ ಬ್ರಹ್ಮ ವಿಷ್ಟ ಸುಗ್ರೀವ 20 ಹರಿಯುಕ್ತ ಕರ್ನ ಮನು ಪತ್ನಿ ಶತರೂಪ ನಾ ಲ್ವರು ಸಮರು ಪ್ರವಹಗಿಂದೆರಡು ಗುಣದೀ ಕೊರತಿ ಮಹ ಭಿಷಕು ಮಂಡೂಕ ಶಂತನು ಸುಶೇ ಪಾದ ಪಾದಾರ್ಧಿಕಾನಮಿಪೆ21 ನಾರದಾಧಮ ವರುಣಗಿಂತಗ್ನಿ ಅವ ತಾರ ದೃಷ್ಟದ್ಯುಮ್ನ ಲವ ನೀಲರೂ ಪಾದ ಗುಣದಾಧಮರು ಎಂದು22 ಅಂಗೀರ ಪುಲಸ್ತ್ಯಾತ್ರಿ ಪುಲಹನು ಮರೀಚಿ ಮುನಿ ಪುಂಗವ ದಶಿಷ್ಠ ಕೃತು ಬ್ರಹ್ಮ ಸುತರೂ ತುಂಗ ವಿಶ್ವಾಮಿತ್ರ ವೈವಸ್ವತರು ಸದಾ ಕೆಂಗದಿರಗಧಮರೊಂಭತ್ತು ಜನರೆಂದು 23 ಸಪ್ತ ಋಷಿಗಳಿಗೆ ಸಮನೆನಿಪ ವೈವಸ್ವತನು ಲುಪ್ತವಾಗಲು ಕಡಿಮೆಯೆನಿಪ ಪ್ರಾವಹ ತಾರ ಕ್ಲುಪ್ತ ಒಂದೇ ರೂಪ ಕೃಪೆಯೆಂದು ಕರೆಸುವಳಿಗಾನಮಿಪೆ24 ಹರನಾವೇಶಯುತ ಘಟೋತ್ಕಚ ದುರ್ಮಖನು ನಿಋಋತಿ ಕರೆಸುವನು ರಾಹು ಯುಗ್ಭೀಷ್ಟಕ ನೃಪಾ ನರೆ ಮಿತ್ರ ನಾಮಕನ ರೂಪ ನಾಲ್ವರು ಅಗ್ನಿ ಗೆರಡು ಗುಣದಿಂಧಮರೆನಿಪರೆಂದೆಂದು 25 ಮಾರಾರಿಯುಕ್ತ ಭಗದತ್ತ ತತ್ತನÀಯ ಕು ಬೇರಗೆರಡವತಾರ ವಿಘ್ನೇಶಗೆ ಚಾರುದೇಷ್ಣನು ಒಂದೆ ಇಂದ್ರನಾವೇಶಯುತ ಆರುರೂಪಗಳುಳ್ಳ ನಾಸತ್ಯ ದಸ್ರರಿಗೆ 26 ವಿವಿಧÀ ಮೈಂದ ತ್ರಿಸಿಖ ನಕುಲ ಸಹದೇವ ವಿಭು ಅವತಾರ ಅಶ್ವಿನೀ ದೇವತೆಗಳ ಲವಣಾದಿ ಷಡ್ರಸಗಳೊಳಗಿದ್ದು ಜೀವರಿಗೆ ವಿವಿಧ ಭೋಗಗಳಿತ್ತು ಸಂತೈಪರೆಂದೆಂದು 27 ದ್ರೋಣಾರ್ಕ ದೋಷಾಗ್ನಿ ಧ್ರುವ ವಿಭಾವಸು ವಸ್ತು ಪ್ರಾಣಾಷ್ಟ ವಸುಗಳೊಳಗೆ ದ್ಯುನಾಮಕ ವಾಣೀಶಯುಕ್ತ ಭೀಷ್ಮನು ನಂದಗೋಪಾಲ ದ್ರೋಣನಾಮಕ ಪ್ರಧಾನಾಗ್ನಿಗಿಂದಧಮರೆಂದಾ ನಮಿಪೆ 28 ಭೀಮರೈವತ ವೋಜಜ್ಯೆಕಪಾದ ಹಿರ್ಬದ್ನಿ ಭವ ವಾಮ ಬಹುರೂಪೋಗ್ರಜ ವೃಷಾಕಪಿ ಈ ಮಹನ್ನೆಂಬ ಹನ್ನೊಂದು ರುದ್ರರು ಭೂರಿ ನಾಮಕ ಜೈಕ ಪಾದಹಿರ್ಬದ್ನಿ ಭೂರಿಶ್ರವಗಾನಮಿಪೆ29 ತ್ರ್ಯಕ್ಷನುಳಿಧತ್ತು ರುದ್ರರು ಸಮರು ಶಲ್ಯ ವಿರು ಪಾಕ್ಷನವತಾರ ಕೃಪ ವಿಷ್ಕಂಭುನೂ ಅಕ್ಷೀಣಬಲ ಪತ್ರತಾಪಕ ಸಹದೇವ ರಕ್ಷಘ್ನ ಸೋಮದತ್ತನು ಎನಿಸುತಿಹಗೆ 30 ವಿರೂಪಾಕ್ಷ ವಿಷ್ಕಂಭ ಪತ್ರತಾಪಕ ಮೂರು ಹರನ ರೂಪಾಂತರಗಳಿವು ವಿವಸ್ವಾನ್ ಅರಿಯಮ ಪೂಷ ಭಗ ಸವಿತು ತೃಷ್ಟಾಧಾತ ವರುಣ ಶಕ್ರೋರುಕ್ರಮನು ಮಿತ್ರ ಪರ್ಜನ್ಯಗಾನಮಿಪೆ 31 ಶೌರಿನಂದನ ಭಾನು ಸವಿತ್ರ ನಾಮಕ ಸೂರ್ಯ ವೀರಸೇನನು ಯಮಾವಿಷ್ಟ ತ್ವಷ್ಟಾ ಆರುಜನ ರುಕ್ತರೆನಿಪರು ವುರುಕ್ರ್ರಮ ಶಕ್ರ ವಾರಿಧಿ ವಿವಸ್ವಾನ್ ಮಿತ್ರ ಪರ್ಜನ್ಯರಿಗೆ 32 ಪ್ರಾಣ ನಾಗ ಪಂಚಕ ಅಹಂಕಾರಿಕ ಪ್ರಾಣ ಪ್ರವಹ ನಿವಹ ಸಂವಹ ಸ್ವಹಾ ಕಾಲ ಶ್ವಾಸ ಏ ಕೋನ ಪಂಚಾಶನ್ ಮರುದ್ಗಣಸ್ಥರು ಎಂದು 33 ಶ್ವೇತ ಶಂ ಹನುಮ ಭೀಮ ಯತಿವುದಿತ ಕಾಮ ಜಡಪಿಂಗ ಕಂ ಪನ ವೃದ್ವಹ ಧನಂಜಯ ದೇವದತ್ತರಿಗೆ 34 ಶುಕ್ರ ಶಂಕು ಗುರು ಕಾಂತ ಪ್ರತಿಭ ಸಂವರ್ತಕನು ಪಿಕ ಕಪಿಗಳಿವರು ಮುರುತರು ಸಮೀರಾ ಯುಕುತ ಪಾಂಡು ವರಾಹನು ಎನಿಪ ಸಂಪಾತಿ ಕೇಸರಿ ಶ್ವೇತ ಮರುತನವತಾರ ವೆಂದಾನಮಿಪೆ35 ಪ್ರತಿಭವಂಶನು ಚೇಕಿತಾನೆಂದೆನಿಪ ವಿ ಪ್ರಥು ಸೌಮ್ಯ ಕುಂತೀಭೋಜನೆ ಕೂರ್ಮನು ಕ್ಷಿತಿ ಯೊಳಗೆ ಪ್ರಾಣಪಂಚಕರೊಳು ಪ್ರಾಣ ಗಜ ಅಥ ಗವಾಕ್ಷಾಪಾನ ವ್ಯಾನ ಗವಯನು ಎಂದು 36 ವೃಷನು ಸರ್ವತ್ರಾತನು ವುದಾನಗಂಧ ಮಾ ದ ಸಮಾನನರಿವರು ವಿತ್ತಪನ ಸುತರು ಶ್ವಸನಗಣದೊಳು ಕಿಂಚಿದುತ್ತ ಮರಹಂ ಪ್ರವಹ ಗಸಮರೆನಿಪರು ಪ್ರಾಣ ಪಂಚಕರು ಎಂದೂ 37 ಪ್ರತಿ ವಿಂಧ್ಯ ಧರ್ಮಜನ ಭೀಮಸೇನನ ಪುತ್ರ ಶೃತಸೋಮ ಅರ್ಜುನಜ ಶೃತಕೀರ್ತಿಸಾ ಶತಾನೀಕÀನ ಕುಲಜ ಸಹದೇವಾತ್ಮಜನು ಶೃತಕರ್ಮರಿವರು ದ್ರೌಪದಿ ದೇವಿಗಾತ್ಮಜರಿಗಾನಮಿಪೆ38 ಚಿತ್ರರಥ ಅಭಿಪೌಮ್ರಬಲ ಕಿಶೋರ ಗೋಪಾಲ ರುತ್ತಮರು ಗಂಧರ್ವರೈವರಿಂದ ಯುಕ್ತರಾಗಿಹರು ಕೈಕೇಯರೈವರು ಪಾಂಡು ಪುತ್ರಜರು ವಿಶ್ವದೇವತೆಗಳಿವರೆಂದು39 ಕಾಲ ಕಾಮಲೋಚನದಕ್ಷ ಕೃತು ಪುರೂ ರವ ಸತ್ಯ ವಸು ಧುರಿಗಳಿವರು ವಿಶ್ವೇ ಋಭು ಗುಣ ಪಿತೃತ್ರಯ ದ್ಯಾವ ಅವನಿಪರು ಗಣಪಾದ್ಯರಧಮ ಮಿತ್ರನಿಗೆಂದು 40 ವಸುಗಳೆಂಟಾದಿತ್ಯರೀರಾರು ಒಂದಧಿಕ ದಶರುದ್ರಗಣ ಪಿತೃತ್ರಯ ಬೃಹಸ್ಪತೀ ವಿಶ್ವ ದೇವ ಅಶ್ವಿನಿಗಳೆರಡೈವತ್ತು ಶ್ವಸನಗಣರು ಋಭುವೊಂದು ಎರಡು ದ್ಯಾವಾಪೃಥವಿ 41 ಒಂಭತ್ತು ಕೋಟಿ ದೇವತೆಗಳೊಳು ನೂರು ಜನ ಅಂಬುಜಾಪ್ತರ ಒಳಗುರುರುಕ್ರಮನುಳಿದು ಪದ್ಮ ಸಂಭವನ ಸಹರಾಗಿಹರು ಶತಸ್ಥರಿಗೆ 42 ಮರುತತ್ರಯರು ವನಿಯಮ ಸೋಮ ಶಿವದಿವಾ ಕರರಾರು ರುದ್ರ ಗುರು ಇವರುಕ್ತರೂ ಉರವರಿತ ಎಂಭತ್ತೈದು ಸಮರು ತಮ್ಮೊಳಗೆ ಸರಸಿಜೋದ್ಭವನ ಸುತರೆನಿಪ ಸನÀಕಾದಿಗಳಿಗಾನಮಿಪೆ43 ಸನಕಾದಿಗಳೊಳುತ್ತಮ ಸತತ್ಕುಮಾರ ಶಿಖಿ ತನುಜ ಪಾವಕನು ಪರ್ಜನ್ಯನು ಮೇಘಪ ಎನಿಸುವನು ಶರಭವೊಂದೇರೂಪ ಧರ್ಮರಾ ಜನ ಪತ್ನಿ ದೇವಕಿಯು ಶಾಮಲೆಯ ರೂಪವೆಂದಾ ನಮಿಪೆ44 ಯಮ ಭಾರ್ಯ ಶಾಮಲಾ ರೋಹಿಣಿದೇವಿ ಚಂ ದ್ರಮನ ಸ್ತ್ರೀ ಅನಿರುದ್ಧದೇಹಿ ಉಷಾ ದ್ಯುಮಣಿ ಭಾರ್ಯಾ ಸಂಜ್ಞ ಗಂಗಾ ವರುಣ ಭಾರ್ಯ ಸುಮರಾರು ಜನರು ಪಾವಕಗೆ ಕಿಂಚಿದಧಮರೆಂದಾ ನಮಿಪೆ45 ಪರ್ಜನ್ಯ ಈ ರೆರಡು ವನ್ಹಿಗೆ ಕಡಿಮೆ ಪಾದಮಾನೀ ಸುರಪನಂದನ ಜಯಂತನು ಪ್ರಹಲ್ಲಾದ ಈ ರ್ವರು ಮುಖ್ಯರಧಮ ಪರ್ಜನ್ಯಗೆಂದೆಂದು 46 ಎರಡು ಗುಣ ಪರ್ಜನ್ಯಗಿಂದಧಮಳು ಸ್ವಹಾ ರೆರಡಧಿಕ ಗುಣದಿ ಸ್ವಪತಿಗೆ ನೀಚಳೂ ಹರಿ ಶಕ್ರಸತಿ ಅಶ್ವಿ ಯುಕ್ತಾಭಿಮನ್ಯು ಚಂ ದಿರಜ ಬುಧನವತಾರ ಸ್ವಾಹಾ ದೇವಿಗಧಮಳೆಂದಾ ನಮಿಪೆ 47 ಎನಿಸುವಳು ಶಲ್ಯ ಜರಾಸಂಧನಾತ್ಮಜಾ ಶ್ವಿನಿ ಭಾರ್ಯಾನಾಮಾಭಿಮಾನಿ ಉಷಾ ಘನರಸಾಧಿಪ ಬುಧಗೆ ಕಿಂಚಿದ್ಗುಣ ಕಡಿಮೆ ಅವಳ ಪತ್ನಿಗೆ ದಶಗುಣಾಧಮಳುಯೆಂದು 48 ಧರಣಿಗಭಿಮಾನಿ ಎನಿಸುವ ಸೂರ್ಯಸುತ ಶನೇ ಶ್ವರ ಉಷಾದೇವಿಗೆರಡು ಗುಣಾಧಮ ತರಣಿ ನಂದನಗೆ ಸತ್ಕರ್ಮಾಭಿಮಾನಿ ಪು ಷ್ಕರ ಕಡಿಮೆ ಪಂಚಗುಣದಿಂದ ಎಂದೆಂದು 49 ನಾರದನ ಶಿಷ್ಯ ಪ್ರಹ್ಲಾದ ಬಾಲ್ಹೀಕ ಸ ಮೀರ ಸಂಯುಕ್ತ ಸಹ್ಲಾದ ಶಲ್ಯಾ ಮೂರನೆಯನುಹ್ಲಾದ ಸವಿತ್ರನಾವೇಶದಲಿ ತೋರಿದನು ದೃಷ್ಟಕೇತು ಎನಿಸಿ ಧರೆಯೊಳಗೆ 50 ತಾಮಾಂಶಯುಗ್ ಜಯಂತನು ಬಭ್ರುವಹ ವರು <ಈ
--------------
ಜಗನ್ನಾಥದಾಸರು
ಆತ್ಮನಿವೇದನೆ ಅಂಜಬ್ಯಾಡ ಅಂಜಬ್ಯಾಡೆಲೋ ಜೀವ ಭವ ಭಂಜನ ಹರಿ ಶರಣರ ಕಾವಾ ಪ ಮಾತ ಹೇಳುವೆ ನಿನಗೊಂದ ಪರರಜ್ಯೋತಿ ಕಾಣುವತನಕೀ ಬಂಧ ಭೂತ ಭೇತಾಳಗಳಿಂದ ನಿನಗೆ ಭೀತಿ ಪುಟ್ಟಲಿಲ್ಲೋ ಮತಿಮಂದ 1 ಛೇದ ಭೇದಗಳು ನಿನಗೆಲ್ಲಿ ನೀ ಅ- ನಾದಿ ನಿತ್ಯವೆಂಬುದ ಬಲ್ಲಿ ವೇದ ಬಾಹ್ಯರಾಗದೆ ಇಲ್ಲಿ ಹರಿ ಪಾದ ಇನ್ಯಾಕೆ ಪೂಜಿಸಲೊಲ್ಲಿ 2 ನೀನು ನಿನ್ನದು ಅಲ್ಲವೋ ನೋಡಾ ದೇಹ ನಾನು ನನ್ನದೆಂಬರೋ ಮೂಢಾ ಮಾನಹಾನಿ ಮಾಡಿಕೊಳಬೇಡ ಬಿಡು ಸಾನುಬಂಧಿಗಳ ಸ್ನೇಹವ ಗಾಢ 3 ಅಹಿತಾದಿ ವಿಭೂತಿಯ ನೋಡೋ ಸೋಹಂ ಎಂಬರೆ ವಿಘಾತಿಯ ನೇಹವ ಪಡೆವರೆ ಗೀತೆಯ ಕೇಳಿ ಮೋಹವ ಕಳಕೋ ವಿಜಾತಿಯ 4 ಮಧ್ವವಲ್ಲಭ ಮಾಡಿದ ಗ್ರಂಥ ದೊಳಗದ್ವೈತತ್ರಯ ತಿಳಿದಂಥ ವಿದ್ವಾಂಸರು ಚರಿಸುವ ಪಂಥವನ್ನು ಸದ್ಭಕ್ತಿಲಿ ಸಾಧಿಸು ಭ್ರಾಂತ 5 ಜಾಗರ ಸ್ವಪ್ನ ಸುಷುಪ್ತಿಗಳೊಳು ವರ ಭೋಗಿಶಯನನ ರೂಪಗಳೇಳು ಭಾಗವತ ಬಲ್ಲವರ ಕೇಳು ಬೃಹ- ದ್ಯಾಗವ ಹರಿಗರ್ಪಿಸಿ ಬಾಳು 6 ಪಂಚಾತುಮ ಸಿಲುಕವ ಷಟ್ ಪಂಚ ಪಂಚಿಕೆಗಳ ಕರ್ಮವ ಮೀಟಿ ಪಂಚಿಕೆ ತಿಳಿದುಕೊಂಡರೆ ನಿಷ್ಪ್ರ ಪಂಚನಾಗಿ ನೀ ಕಡೆದಾಟಿ7 ಜ್ಞಾನೇಚ್ಛಾ ಕ್ರಿಯಾ ಶಕ್ತಿಗಳೆಂಬ ಈ ಮ- ಹಾನುಭಾವದಿ ನಿನ್ನ ಬಿಂಬ ತಾನೇ ಸರ್ವತ್ರದಲಿ ಕಾಂಬ ಇದ- ಕೇನು ಸಂದೇಹವಿಲ್ಲವೋ ಶುಂಭ 8 ತಾಪತ್ರಯಂಗಳು ನಿನಗೆಲ್ಲಿ ಪುಣ್ಯ ಪಾಪಕ್ಕೆ ಲೇಪನಾಗೋಕೆ ಹೊಲ್ಲ ಪ್ರಾಪಕ ಸ್ಥಾಪಕ ಹರಿಯೆಲ್ಲ ಜಗ ದ್ವ್ಯಾಪಕನೆಂದರಿತರೆ ಕೊಲ್ಲ 9 ಡಿಂಭದೊಳಗೆ ಚೇತನವಿಟ್ಟು ಜಗ- ದಂಬಾರಮಣ ಮಾಡಿದ ಕಟ್ಟು ಉಂಬುಡುವ ಕ್ರಿಯೆಗಳನಷ್ಟು ನಿನ್ನ ಬಿಂಬನಾಧೀನನಾದರೆ ಇಷ್ಟ 10 ಲಕ್ಕುಮಿ ಅವನ ಪಟ್ಟದ ರಾಣಿ ದೇ- ವರ್ಕಳು ಪರಿಚಾರಕ ಶ್ರೇಣಿ ವಕ್ಕಲು ನಾವೆಲ್ಲರು ಪ್ರಾಣಿ ದಶ- ದಿಕ್ಕುನಾಳುವ ನಮ್ಮ ದೊರೆಯ ನೀ 11 ಮತ್ರ್ಯಲೋಕದ ಸಂಪದ ಪೊಳ್ಳು ಜಗ ಮಿಥ್ಯಮತವೆಂದಿಗು ಜೊಳ್ಳು ಶ್ರುತ್ಯನ್ನರ್ಥ ಪೇಳ್ವದೇ ಸುಳ್ಳು ನೀ ಭೃತ್ಯನು ಕರ್ತನಾಗದಿರೆಲೋ ಕೇಳು12 ಮಾಧವನಲಿ ತನುಮನ ಮೆಚ್ಚು ಕ್ರೋಧರೂಪದ ಕಲಿಮಲ ಕೊಚ್ಚು ಮೋದತೀರ್ಥರ ವಚನವ ಮೆಚ್ಚು ವಾದಿ ಮತಕ್ಕೆ ಬೆಂಕಿಯ ಹಚ್ಚು 13 ಸವಿವುಳ್ಳರೆ ಕೇಳೆನ್ನಯ ಸೊಲ್ಲ ನಮ್ಮ ಪವನನಯ್ಯನ ಪ್ರೇರಣೆಯಿಲ್ಲ ಎವೆಯಿಕ್ಕಲರಿಯದೀ ಜಗವೆಲ್ಲ ಎಂದು ಶಿವ ತನ್ನ ಸತಿಗೆ ಹೇಳಿದನಲ್ಲ 14 ಧ್ರುವ ಬಲ್ಯಾದಿ ರಾಯರ ನೋಡು ನಿನ್ನ ಅವಗುಣಗಳನೆಲ್ಲಾ ಈಡ್ಯಾಡೋ ಅವಶ್ಯವಾಗಿ ಕರ್ಮವ ಮಾಡೋ ಮಾ- ಧವ ನಿನ್ನವನೆಂದು ನಲಿದಾಡೋ 15 ನಿಂದಾ ಸ್ತುತಿಗಳ ತಾಳಿಕೋ ಬಲು ಸಂದೇಹ ಬಂದಲ್ಲಿ ಕೇಳಿಕೋ ಬಂದವರಿಂದಲಿ ಬಾಳಿಕೋ ಗೋ- ವಿಂದ ನಿನ್ನವನೆಂದು ಹೇಳಿಕೋ 16 ತತ್ವವಿಚಾರವ ಮಾಡಿಕೋ ನಿನ್ನ ಭಕ್ತಿಯ ಆಳವ ಅಳಿದುಕೋ ಮಾಯಾ ಮೋಹ ಕಳೆದುಕೋ ನಿನ್ನ ಹತ್ತಿರ ಹರಿಯಿರುವ ನೋಡಿಕೋ 17 ಹಿಂಡು ದೈವಗಳಿಂದ್ಹಿರಿಯನೀತ ತನ್ನ ತೊಂಡನೆಂದದವರಿಗೆ ತಾ ಸೋತಾ ದಂಡಿಸಿ ದಯಮಾಡುವ ದಾತಾ ಭೂ- ಮಂಡಲದೊಳಗೆಲ್ಲ ಪ್ರಣ್ಯತಾ 18 ನಾಡ ಖೋಡಿ ದೈವಗಳಂತೆ ತನ್ನ ಬೇಡಲು ತಾ ಬೇಡಿಕೊಳನಂತೆ ನೀಡುವ ನಿಖಿಳಾರ್ಥವದಂತೆ ನಿಜ ನೋಡಿಕೋ ನಿನಗ್ಯಾತರ ಚಿಂತೆ 19 ಏನು ಕೊಟ್ಟರೆ ಕೈಚಾಚುವ ತನ್ನಾ- ಧೀನವೆಂದರೆ ನಸುನಾಚುವಾ ದಾನವ ಕೊಡಲೂರಿ ಗೀಚುವ ತನ್ನಲಿ ತಾನೇವೇ ಮನದೊಳು ಸೂಚುವ20 ಕರಕರದಲ್ಲಿ ತಾ ಬರುವಾನು ಮರತುಬಿಟ್ಟವರ ತಾ ಮರೆಯಾನು ನಿಜ ಶರಣರ ಕಾದುಕೊಂಡಿರುವಾನು ತನ್ನ ಸರಿಯಂದವರ ಹಲ್ಲು ಮುರಿದಾನು 21 ಆರು ಮುನಿದು ಮಾಡುವದೇನು ಪ್ರೇರ್ಯ ಪ್ರೇರಕರೊಳಗಿದ್ದು ಹರಿ ತಾನು ಓರಂತೆ ಕಾರ್ಯವ ನಡೆಸೋನು ಮುಖ್ಯ ಕಾರಣ ಶ್ರೀಹರಿ ಅಲ್ಲವೇನೋ 22 ಹಲವು ಹಂಬಲಿಸಲ್ಯಾತಕೆ ಹುಚ್ಚಾ ವಿದ್ಯಾ ಕುಲಶೀಲಧನದಿಂದ ಹರಿ ಮೆಚ್ಚಾ ಕಲಿಯುಗದೊಳಗಾರ್ಯರ ಪೆಚ್ಚಾ ತಿಳಿ ಸುಲಭೋಪಾಯಾದಿಗಳ ನಿಚ್ಯಾ 23 ದುರ್ಜನರೊಳು ದೈನ್ಯ ಬಡದಿರು ಸಾಧು ಸಜ್ಜನರೊಳು ವೈರ ತೊಡದಿರು ಅರ್ಜುನಸಖನಂಘ್ರಿ ಬಿಡದಿರು ನಿ- ರ್ಲಜ್ಜನಾಗಿ ಬಾಯ್ಬಿಡದಿರು 24 ಭಯರೂಪದಿ ಒಳಹೊರಗಿದ್ದು ನಿ- ರ್ಭಯ ನಾಮಕನು ಧೈರ್ಯವನೆ ಗೆದ್ದು ಭಯದೋರುವನೆಂಬುದೆ ಮದ್ದು ಮಹಾ ಭಯಕೃದ್ಭಯಹಾರಿಯನೆ ಪೊಂದು 25 ಪರಸತಿಯರ ಸಂಗವ ಬಿಡು ಹರಿ ಸರ್ವೋತ್ತಮನೆಂದು ಕೊಂಡಾಡು ಪರಮಾತ್ಮನ ಧ್ಯಾನವ ಮಾಡು ನರ ಹರಿದಾಸರಂಗಳ ಒಡಗೂಡು 26 ಸೃಷ್ಟಿಗೊಡೆಯ ಶ್ರೀದವಿಠಲ ವಿಷ್ಟಾವಿಷ್ಟನಾಗಿದ್ದೆಲ್ಲ ಇಷ್ಟಾನಿಷ್ಟವ ಕೊಡಬಲ್ಲ ಮನ- ಮುಟ್ಟಿದವರ ಬೆಂಬಿಡನಲ್ಲಾ 27
--------------
ಶ್ರೀದವಿಠಲರು
ಆನಂದ ಲಹರಿ (ಪಾರಮಾರ್ಥ ಮುಯ್ಯದ ಹಾಡು ) ಗಿರಿಜೇಶ ಮನೋಜಾತಾ ಸುರಮುನಿಜನಪ್ರೀತಾ ಕರುಣಾ ಸಾಗರ ಗಣನಾಥಾ ಜಗವದನಾ ಚರಣಕೆ ಶರಣೆಂದು ಬಲಗೊಂಬೆ ಕೋಲೆ 1 ಸಕಲಾ ಮುಖದೊಳು ಯುಕುತಿಯ ನುಡಿಗಳಾ ಪ್ರಕಟದಿ ನುಡಿಸುವೆ ಜನನಿ ಸರಸ್ವತಿ ಭಕುತಿಲಿ ಶರಣೆಂಬೆ ಕಲ್ಯಾಣಿ 2 ಆಚ್ಯುತಾನಂತನೆ ಸಚ್ಚಿದಾನಂದನೆ ನೆಚ್ಚಿದ ಶರಣರ ಸುರಧೇನುವೆ ಅವಧೂತಾ ಎಚ್ಚರ ಕೊಟ್ಟು ಸಲಹಯ್ಯ 3 ಕರಿಯಾ ಮೊರೆಯ ಕೇಳಿ ಭರದಿಂದೊದಗಿ ಬಂದು ಕರದಿಂದಲೆತ್ತಿ ಸಲಹಿದೆ ಶ್ರೀಶಾ ಚರಣವದೋರಿ ಕಾಯಯ್ಯ 4 ಶರೀರ ಒಂದರಲಿದ್ದು ನರನಾರೀರೂಪದಲಿ ಚರಿತವ ದೋರದೆ ಅನುಪಮ ಶಂಕರ ಕರುಣಿಸು ಫಣಿಗಣ ಭೂಷಣಾ 5 ಅಂಜನೀಸುತನಾಗಿ ಕಂಜನಾಭವ ಸೇವೆ ರಂಜಿಸುವಂತೆ ಮಾಡಿದ ದೈತ್ಯರ ಭಂಜನ ಹನುಮಂತ ಕರುಣಿಸು6 ಚಾರು ಚರಿತಗಳ ತೋರಿದೆ ಜಗದೊಳು ಮುನಿರಾಯಾ ಸುಖತೀರ್ಥ ತಾರಕ ಶರಣರ ನಿಜಗುರು7 ಮೇದನಿಯೊಳಗುಳ್ಳ ಸಾಧು ಸಂತರ ನಿಜ ಅನುದಿನ ಜಗದೊಳು ಸಾದರದಿಂದ ನೆನೆಯುತ 8 ಶರಣವ ಹೊಕ್ಕರ ಕರುಣದಿಂದಲಿ ನೋಡಿ ತರುಣೋಪಾಯವ ತೋರುವಾ ಮಹಿಪತಿ ಗುರುರಾಯ ನಿನ್ನ ಬಲಗೊಂಬೆ9 ಕರುಣವಾಗಲು ಅವರ ಪರಮ ಮೂಕನಜ್ಜಿಹ್ವಾ ಸುರಸ ಮಾತುಗಳ ಆಡೋದು ಹುಸಿಯಲ್ಲ ಧರೆಯೊಳು ಅನುಭವವಿದು10 ಅವರಾಮಹಿಮೆಗಳ ವಿವರಿಸಿ ಹೇಳಲು ಹವಣವೆಲ್ಲಿಹುದು ಮನುಜಗ ಭಕುತರು ಅವನಿಲಿಬಲ್ಲರು ನಿಜಸುಖ 11 ಏನೆದು ಅರಿಯದಾ ಹೀನ ಅಜ್ಞಾನಿಯು ನ್ಯೂನಾರಿಸದೇ ಸಲಹಯ್ಯಾ ಮಹಿಪತಿ ದೀನೋದ್ಧಾರಕಾ ಕರುಣಿಸು 12 ಪದುಮನಾಭನ ಭಕ್ತಿ ಚದುರಾ ಮುತ್ತೈದೇರು ಒದಗಿನ್ನು ಬನ್ನಿ ಹರುಷದಿ ಮುಪ್ಪದಾ ಉದಿತಾ ನುಡಿಗಳ ಕೇಳಲು 13 ವಿವೇಕಬೋಧಿಯಂತ ನಾವಕ್ಕತಂಗೇರು ದೇವಗುರುರಾಯನ ಮಕ್ಕಳು ನಿಜಶಕ್ತಿ ಭುವನದಿ ನಮ್ಮಾ ಹಡೆದಳು 14 ಸುಜ್ಞಾನ ವೈರಾಗ್ಯ ಸಂಜ್ಞದಿ ಮೆರೆವರು ಪ್ರಾಜ್ಞರು ನಮ್ಮಣ್ಣಾ ತಮ್ಮರು ಹರಿಭಕ್ತಿ ಮಜ್ಞರು ಅವರಿಗೆ ಸರಿ ಇಲ್ಲಾ 15 ಭಕ್ತಿಯ ತೌರಮನಿ ಶಕ್ತಿಯ ಬಲದಿಂದ ಯುಕ್ತೀಲಿ ನಾವು ಬರುತೇವು ಹರಿಭಕ್ತಿ ಭೋಕ್ತರು ನೀವು ಬರಬೇಕು 16 ದಿವ್ಯಾಂಬರವನುಟ್ಟು ಸುವಿದ್ಯಾ ಇಡಗಿಯು ತೀವಿದರ ಅರಹು ಅಂಜನಾ ವನೆ ಇಟ್ಟು ಸುವಾಸನೆಯ ಪುಷ್ಪ ಮುಡಿದಿನ್ನು 17 ಈರೆರಡು ಭೇರಿಯ ಸಾರಿಸಿ ಎಡಬಲಕ ಆರು ವಂದಣಾ ನಡಸೂತ ಕಹಳೆಗಳು ಮೂರಾರು ಊದಿಸುತೆ ಬರುತೇವು 18 ಸಾಧನ ನಾಲ್ಕರ ಕುದುರೆಯ ಕುಣಿಸುತ ಒದಗಿದ ಪ್ರೇಮದ ಮದ್ದಾನಿ ಯೊಡಗೂಡಿ ಚದುರೇರು ಮುಯ್ಯ ತರುತೇವು 19 ಭಾವದ ಬಯಲಾಟ ಆವಾಗ ಆಡುತ ಸಾವಧ ಮುಯ್ಯಾ ತರುತೇವು ನುಡಿಗಳ ನೀವಾತ ಕೇಳಿ ಜನವೆಲ್ಲಾ 20 ಮೆರೆವಾಭಿಮಾನಿಯು ಇರುವ ಸೋದರ ಮಾವ ಅರಸಿ ವಿಷಯಯೆಂಬತ್ತೆರಯರ ಮನಿಗೀಗ ಭರದಿಂದ ಮುಯ್ಯ ತರುತೇವು 21 ರಾಯ ಅಭಿಮಾನಿ ಸಿರಿಯದ ಸಡಗರ ನಾ ಏನ ಹೇಳಲಿ ಜಗದೊಳು ಪಸರಿಸಿ ತಾ ಎಡ ಬಲವನು ನೋಡನು 22 ಏಳು ಸುತ್ತಿನ ಗೋಡಿ ಮೇಲಾದ ಮನಿಗಿನ್ನು ಸಾಲಾದ ಒಂಭತ್ತು ಬಾಗಿಲು ಚಲುವಾದ ಮ್ಯಾಲಿಹ ಒಂದೊಂದು ಗಿಳಿಗಳು 23 ಅಂಗಳ ಹೋಗಲಿಕ್ಕೆ ಕಂಗಳ ಲೇಸಕಂಡೆ ಮಂಗಳವಾದ ಉಪ್ಪರಿಗೆ ಥರಥರ ರಂಗ ಮಂಟಪ ನಡುವಂದು24 ಬಿಡದೆಂಟು ಕಂಬದಿ ಸಡಗರ ರಚಿಸಿದ ಒಡನಿಹ ಚಾವಡಿರಾಯನ ಸೌಖ್ಯಕ ಪೊಡವಿಲಿ ಸರಿಯಾ ಕಾಣೆನು 25 ಎಂಟು ದಿಕ್ಕಿಗೆ ನೋಡೀ ಘಂಡೆಯ ಕಟ್ಟಿದ ಎಂಟು ಆನೆಯಾ ಘಡಘಾಡಿ ತಲಿಯಲಿ ಉಂಟಾದ ಗುರುತರದ ಅಂಕೂಶಾ 26 ಬಿಡದೆಂಟು ಕಂಬದಿ ಸಡಗರ ರಚಿಸಿದ ಒಡನಿಹ ಆನೆಯಾ ಘಡಘೂಢೀ ಥಳೀಐಳೀ ಊಂಠಾಧ ಘೂಋಊಥೃಧ ಆಂಖೂಶಾ 26 ಐದೈದು ಸಾಲಕ ಐದೈದು ಕುದುರೆಯು ಐದೈದು ಭಂಟರು ಅದಕಿನ್ನು ಅನುದಿನ ಮೈದಡುವುತಾ ಏರುವರು27 ಹತ್ತು ಮಂದಿಯಾ ಆಪ್ತರು ಮನರಾಯಾ ಒತ್ತಿ ಆಳುವ ಪ್ರಧಾನಿ 28 ಅನುವಾದ ಗುಣತ್ರಯಾ ಅನುಜರು ಈತಗೆ ಅನುಭವಿ ಒಬ್ಬ ಇದರೊಳು ಹರಿನಾಮಾ ನೆನೆವನು ಅನ್ಯ ಹಂಬಲವಿಲ್ಲಾ 29 ನಾಕಾವಸ್ಥೆಗಳೆಂಬಾ ನಾಕು ಒಳ ಮನೆಗಳು ಇಕ್ಕಿಹದೊಂದು ಅದರೊಳು ಭಂಡಾರ ಬೇಕಾದವರೆ ತೆರೆವರು 30 ಈರಾಯ ನೈಶ್ವರ್ಯ ಆರು ಬಣ್ಣಿಸುವರು ಆರೊಂದು ಮಂದಿ ಮಕ್ಕಳು ಹೆಸರಾದ ಪರಿಯಾಯ ಕೇಳಿ ಹೇಳುವೆ 31 ಮೊದಲು ಕಾಮ ಕ್ರೋಧವೊದಗಿ ಲೋಭಮೋಹ ಮದಮತ್ಸರೆಂಬ ಬಾಂಧವರು ನಿಜ ತಂಗಿ ವಿದಿತ ಅಜ್ಞಾನಿ ಶಕ್ತಿಯು 32 ಬಂದು ಹೊರಗನಿಂತು ಒಂದು ಜಾವಾಯಿತು ಮುಂದಕ ನಮ್ಮ ಕರಿಯಾರು ನಾವರಸಿ ಕಂದಿದ ಮಾರೀ ತೋರಳು 33 ಪಶ್ಚಾತಾಪವೆಂಬ ಬಿಚ್ಚಿ ಹಾಸಿಗೆ ಹಾಸಿ ತುಚ್ಚರ ದೂರ ಝಾಡಿಸೀ ಬರುತೇವು ಎಚ್ಚರ ಲೋಡಾ ತಂದಿರಿಸಿ 34 ಈ ಕಲ್ಲ ಮ್ಯಾಲದ್ದು ಈ ಕಲ್ಲಿಗ್ಹಾರುವಾ ತಾ ಕೋಡಗನಾ ಗುಣದಂತೆ ಭಾವಯ್ಯ ಆ ಕಾಮಣ್ಣನ ಕರಿಯಾರೆ35 ಎಷ್ಟು ಉಂಡರ ದಣಿಯಾ ಎಷ್ಟು ಇಟ್ಟರ ದಣಿಯಾ ಎಷ್ಟು ಉಟ್ಟರ ದಣಿಯಾನು ಕಾಮಣ್ಣ ಎಷ್ಟು ಕೊಟ್ಟರ ದಣಿಯಾ 36 ಒಳ್ಳೆವರರಿಯನು ಹೊಲ್ಲವರರಿಯನು ಕೊಳ್ಳಿಕಾರನಾ ಮತಿಯಂತೆ ಭಾವಯ್ಯ ನಿಲ್ಲರು ಈತನ ಇದರೀಗೆ 37 ಈತನ ತಮ್ಮನು ಮಾತು ಮಾತಿಗೆ ಬಹಳಾ ಖ್ಯಾತಿಯ ತಾನು ಪಡೆದಾನು ಕೋಪಣ್ಣ ಆತನ ಮುಂದಕ ಕರಿಯಾರೆ 38 ನೆಂಟರ ಅರಿಯನು ಇಷ್ಟರ ಅರಿಯನು ಬಂಟರಾ ಮೊದಲೇ ಅರಿಯನು ತಪಸಿಗೆ ಕಂಟರನಾದಾ ಈತನೇ 39 ಥರ ಥರ ಕುಣಿವುತ ಘರ ಘರ ಹಲ್ಲು ತಿಂದು ನೆರೆಮೋರೆ ಕೆಂಪು ಮಾಡುವಾ ಕೋಪಣ್ಣಾ ಸ್ಮರಣೆಯಾ ತನ್ನ ಮರೆವನು 40 ಕಂಡವರಿಗೆ ತಾನು ಕೆಂಡದ ನುಡಿಯಾಡಿ ಖಂಡಿಸಿ ಬಿಡುವಾ ಗೆಳತನಾ ಕೋಪಣ್ಣ ಹಿಂಡುವ ಹಿಡಿದು ಪ್ರಾಣವ41 ತಾನಾರೆ ಉಣ್ಣನು ಜನರಿಗೆ ಇಕ್ಕನು ಜೇನಿನನೊಣದಾ ಗುಣದಂತೆ ಲೋಭೇಶಾ ದೀನನ ಮುಂದಕ ಕರಿಯಾರೆ42 ಬಿಚ್ಚಾರುವಿಯನು ವೆಚ್ಚಮಾಡೆಂದಿಗೆ ಬಚ್ಚಿಟ್ಟು ಹೂಳಿನೆಲದೊಳು ಲೋಭೇಶಾ ಹುಚ್ಚಾಗಿ ಕಾಯ್ದಾ ಫಣಿಯಂತೆ43 ಕಾಸು ಹೋದಾವೆಂದು ಅಸುವ ಹೋಗುವವರಿ ಕಾಸಾವೀಸಿಯಾ ಬಡವನು ಲೋಭೇಶಾ ಹೇಸನು ಎಂದು ಮತಿಗೇಡಿ 44 ಇಳೆಯೊಳೀ ಪರಿಯಲೀ ಗಳಿಸಿದ ಧನವನು ಕಳೆದುಕೊಂಬರು ಅರಸರು ಕಡಿಯಲಿ ಶೆಳೆದು ಕೊಂಡನು ಪುಗಸಾಟೆ 45 ಇವರಿಂದ ಕಿರಿಯನಾ ಹವಣವ ನೋಡೀರೆ ಅವಗುಣದ ರಾಶಿ ಜಗದೊಳು ಮೋಹಾಂಗಾ ಅವನಾ ಮುಂದಕ ಕರಿಯಾರೇ 46 ತಾಯಿ ತಂದೆಗಳ ನ್ಯಾಯನೀತಿಗಳಿಂದ ಸಾಯಾಸದಿಂದ ಭಕ್ತಿಯ ಮಾಡದೆ ಮಾಯದಾ ಬಲಿಗೊಳಗಾದಾ 47 ಏನು ಬೇಡಿದುದೆಲ್ಲಾ ಪ್ರಾಣವವೆಚ್ಚಿಸಿ ಮಾನಿನೀಯರಿಗೆ ಕುಡುವನು ಮೋಹಾಂಗಾ ಮನವಿಡ ಒಳ್ಳೆವರ ಸೇವೆಗೆ 48 ಲೆಕ್ಕ ವ್ಯವಹಾರವಾ ಲೆಕ್ಕದಿ ಮಾಡದೇ ಮಕ್ಕಳಾಟಕಿಯ ಮಾಡುವಾ ಕ್ರೀಡೆಯಾ ನಕ್ಕಾರೆಂಬ ಸ್ಮರಣಿಲ್ಲಾ 49 ಕಮಲದ ವಾಸನೆಗೆ ಭ್ರಮರವು ಸಿಕ್ಕಿದ ಕ್ರಮದಿಂದ ನೋಡಿ ಸೆರೆಯಾದಾ ಶ್ರೀವಧು ರಮಣನ ನಾಮಾ ನೆನಿಯನು 50 ತರುವಾಯದವನೀತಾ ದುರುಳನ ನೋಡಿರೆ ಮರಳು ಬುದ್ಧಿಯಾ ಮದರಾಯಾ ಆತನಾ ಸರಕು ಮಾಡುವಾ ಕರಿಯಾರೆ 51 ಹೊರಸು ತೊಯ್ಯದಂತೆ ಭರ್ರನೆ ಬಿಗಿವನು ಶರಣರ ಕಂಡು ಬಾಗನು ತಲೆಯನು ಅರಿತವರಿಗೇನಾ ಹೇಳಲಿ 52 ಬಗೆಯಾದೆ ಹಿತವನು ಪಗಡಿಪಂಚಿಗಳಾಡಿ ಹಗಲಿನಾ ಹೊತ್ತುಗಳೆವನು ರಾತ್ರೀಲಿ ಮುಗುಧೇಯರೊಡನೆ ಒಡನಾಟಾ 53 ಕಣ್ಣಿಲ್ಲದಾನೆಯು ಚನ್ನಾಗಿ ತಿರುಗುತ ಮುನ್ನ ಬತ್ತಿದಾ ಬಾವಿಯ ಬೀಳ್ವಂತೆ ಕಣ್ಣೆದ್ದು ಕುರುಡನಾದನು&
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಆನಂದತೀರ್ಥ ವಂದ್ಯ ಪಾಲಿಪುದು ಸು- ಜ್ಞಾನ ಭಕುತಿಯಾನಂದ ಸಾನುರಾಗದಿ ಕಾಯೊ ಸನಕಾದಿ ಮುನಿವಂದ್ಯ ಪ. ಅಖಿಳ ವೇದವಿದಿತ ದಾಸೀಕೃತ ವಿಖನಸಗಣವಿನುತ ನಿಖಿಳ ದೋಷದೂರ ಸಕಲ ಸದ್ಗುಣಪೂರ ಪ್ರಕಟನಾಗೀಗೆನ್ನಿದಿರಿನಲಿ ಸುರನಿಕರನಂದನ ನೀರದಪ್ರಭ 1 ಮಾರನಂದನ ನಿನ್ನಯ ಲೀಲಾಮೃತವಾರುಧಿಯೊಳಗಿಳಿದು ಶ್ರೀರಮಣಿಯು ಇನ್ನು ಪಾರಗಾಣದೆ ತತ್ವ- ಸಾರ ನಿನ್ನುರವನು ಸೇರಿಕೊಂಡಿಹಳು ಕ್ರೂರ ಕರ್ಮಾಚರಣ ತತ್ವವಿಚಾರಗಂಧ ವಿದೂರವಾಗಿಹ ಹಾರಕೂಪದಿ ಮುಳುಗಿರುವನ ಕರಾರವಿಂದದಿ ಪಿಡಿದು ರಕ್ಷಿಸು 2 ವೇದ ಸ್ಮøತ್ಯುಕ್ತವಾದ ಕರ್ಮಗಳೆಂಬೊ ಹಾದಿಯನರಿಯೆ ಇನ್ನು ಈ ಧರೆಯೊಳಗಿಹ ತೀರ್ಥಕ್ಷೇತ್ರಯಾತ್ರೆ- ಯಾದರು ಮಾಡದಿನ್ನು ಎನ್ನನು ಶ್ರೀಧರ ಕರಕಮಲ ಪೂಜಿತಪಾದ ನಿನಗೊಪ್ಪಿಸಿದೆ ದೈನ್ಯದಿ ಕಾದುಕೊಂಬುವ ನೀನೆ ಕರುಣಾಂಬೋಧಿ ಶೇಷಧರಾಧಿರೇಶನ 3
--------------
ತುಪಾಕಿ ವೆಂಕಟರಮಣಾಚಾರ್ಯ