ಒಟ್ಟು 190 ಕಡೆಗಳಲ್ಲಿ , 50 ದಾಸರು , 141 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಕರುಣಿಸೆನ್ನ ಗುರು ಮಂತ್ರಾಲಯ ನಿಲಯಾ ಶ್ರೀ ನರಹರಿ ಗತಿ ಪ್ರೀಯಾ ಪ. ಹರಿಶಯ ಮರುತರ ಆವೇಶಕೆ ನಿಲಯಾ ನಂಬಿದೆ ಶುಭಕಾಯಾ ಅ.ಪ. ತರಳತನದಿ ಶ್ರೀ ನೃಹರಿ ಶಾಂತನಾಗೇ ಸುರರೆಲ್ಲರು ನಿಮಗೇ ಎರದÀು ಕೀರ್ತಿ ಹಿರೆತನವಹಿಸಿದ ರಾಗೇ ಅದರಂದದಿ ಈಗೇ ವರ ಯತಿಗಳು ಹರಿದಾಸರು ವಂದಾಗೇ ಅಘ ನೀಗೇ ಧರೆ ಕಲ್ಪ ಧ್ರುಮವೆಂದು ನಿಮ್ಮ ಬಳಿಗೇ ವಪ್ಪಿಸುವರು ಅಡಿಗೇ 1 ಎಮ್ಮ ಗುರುಗಳಿಂದ್ಹೇಳಿದ ನುಡಿ ಮರೆದೇ ನಿಮ್ಮಡಿಗೆರವಾದೇ ಸಮ್ಮತದಲಿ ಮೃತ್ತಿಕೆಯನು ಸೇವಿಸದೇ ಹಮ್ಮಿನಲಿ ಮೈಮರೆದೇ ನಿಮ್ಮ ಸುಕೀರ್ತಿಯ ತಿಳಿಸು ತಿಳಿಯದಾದೇ ಅತಿ ಭಕ್ತಿಯ ಜರಿದೇ ನಿಮ್ಮ ಕರುಣವಿರಲದರಿಂದೀಗರಿದೇ ತನುಮನವಪ್ಪಿಸಿದೇ 2 ಕೃತಿ ದ್ವಿದಳಾತ್ಮಕದಪರಾಧ ಪಡಿಸಿತು ಬಹು ಬಾಧ ಸಂದಿತು ಕಾಲವು ಮುಂದರಿಯುವ ಮೋದ ಸಂದಿಸಿತುತ್ಸಹದಾ ನಂದಕೆ ಕಲಿ ಮಲ ತೊಳೆಯಲು ಮೌನದಾ ಪರಿ ಅರಿತೆ ಸುಭೋಧಾ ಕುಂದೆಣಿಸದೆ ಪೊರೆದೆನ್ನ ನಿಮ್ಮಗಾಧಾ ಕೃಪೆತೋರಲು ಬಹು ಮೋದಾ 3 ಎಲ್ಲಿ ನೋಡಲಲ್ಲಲ್ಲಿ ನಿಮ್ಮ ವಾಸಾ ಪುರಗಳು ಜನ ತೋಷಾ ಸೊಲ್ಲು ಸೊಲ್ಲಿಗೇ ನುತಿಪ ಗಾನ ಘೋಷಾ ಮಹಿಮೆಗಳ ಪ್ರಕಾಶ ವಲ್ಲದಾಯಿತ್ಯಾತಕೊ ಎನಗಭಿಲಾಷಾ ಬಲ್ಲವರೀಪರಿ ಮಾಡುವರೇ ಮೋಸಾ ಸದ್ಭಕ್ತರಲಾಭಾಸಾ 4 ಒಂದು ದಿನದ ಮೃತ್ತಿಕೆ ಜಲ ಸೇವಿಂದ ಪೊಂದಿದೆ ನಿಮ್ಮ ಪದಾ ಒಂದಾಗಲಿ ಗುರುವೆನಿಸಿದರೆಲ್ಲರದಾ ಮನವಮ್ಮನ ವಾದಾ ನಂದವು ಶ್ರೀ ನರಹರಿ ತಾ ಪರಿಕಿಸಿದಾ ನಂದವು ಬಹು ಮೋದಾ ಸಂದಲಿ ಗೋಪಾಲಕೃಷ್ಣವಿಠಲನಿಂದಾ ಎಣಿಸದೆ ಬಹು ಕುಂದಾ 5
--------------
ಅಂಬಾಬಾಯಿ
ಕಾಖಂಡಕಿ ಪ್ರಸನ್ನ ವೆಂಕಟದಾಸರು ಸಿರಿ ಪ್ರಸನ್ನವೆಂಕಟನ್ನನಿರುತ ಸ್ಮರಿಪ ಕಾಖಂಡಿಕಿ ವೆಂಕಪ್ಪನವರ ಚರಣವನೆ ನೆನೆವನೆ ಧನ್ಯಾಮಾನ್ಯ ಪ ಮರುತ ಮತಾಬ್ಧಿ ಮರಕತ ಭೂಸುರಜನ್ಮ ಧರನಾಗಿಭೂಮಿಯೊಳುದಿಸಲುತರುಳತ್ವ ಕಳೆದು ತರುಣತನ ಬರಲಿನ್ನು ಅರಿವ ಕಾಣದೆ ಇರುತಿರಲುಹರಿನಾಮಾವಳಿಗಳು ಬರೆದು ಓದುವ ಭಾಗ್ಯ ಅರಿವೆನೆಂದರೆ ಬಾರದಿರಲುತೊರೆದು ಮನೆಯವರ ಗಿರಿಯಾತ್ರೆ ಮಾಳ್ಪರನನುಸರಿಸಿ ತೆರಳಿಬರುತಿರಲು 1 ವರಾಹ ಮೂರ್ತಿಯನೆ ಕಂಡಾಲಸವ ಮಾಡದಲೆಚೆನ್ನಾಗಿಝಷಕೇತು ಜನಕನ ಪುಟ್ಟಿಸಿದ ಕಾರಣವೇನು ಉಸಿರೆಂದು ಚರಣಕ್ಕೆಬಾಗಿ 2 ವಂದಿಸಿದ ಕ್ಷಣ ಸ್ವಪ್ನದಿ ಪ್ರಸನ್ನವೆಂಕಟನೆಂದು ಬರೆಯೆ ನಾಲಿಗೆಲಿನಂದದಿಂದೆಚ್ಚೆತ್ತು ಜ್ಞಾನವುದಿಸೆ ಮುಕುಂದನ ಕಂಡು ಎದೆಯಲಿಚಂದ ಚಂದದಿ ಪೊಗಳುತ್ತ ಕಂಗಳಿಂದಾ ನಂದಬಾಷ್ಪ ಸುರಿಸುತಲಿಇಂದು ಧನ್ಯನಾದೆನೆಂದು ತೋಷಾಬ್ಧಿಯ ಹೊಂದಿ ಹರಿಯಾಜ್ಞೆಯಲಿತೆರಳಿ 3 ಭಾಗವತ ಪೂರ್ವಾರ್ಧಕನ್ನಡದಿಮತಿಪೂರ್ವಕ ರಚಿಸುತಾನಂದವು ತುಳುಕು ತಿಹುದು ಕವಿತೆಯಲಿನುತಿಸಿ ದುರ್ಮತ ನಿರಾಕರಿಸಿ ಬಾಳಿ ಬಲು ಕುಲ ತತಿ ಶುದ್ಧಮಾಳ್ಪರು ಹರಿಪುರವಹೊಂದಿ 4 ಕಲಿಕಾಲದಿ ನರಹರಿ ನಾಮ ಸ್ಮರಣೆಯು ಮುಖದಿಂದ ಬರುವುದು ಅತ್ಯಸಾಧ್ಯಲಲಿತಕವನದಿ ತುತಿಸೆ ರಮಾಪತಿವಿಠಲನು ಒಲಿವನು ಇದು ಸತ್ಯಹಲವು ಮಾತೇಕಿವರು ಸುರರೇ ಸರಿ ನರರಲ್ಲ ಇದು ಸಿದ್ಧವೇ ಸಿದ್ಧಛಲದಿ ಮನುಜನೆಂಬಧಮನು ಹರಿಯಾಜ್ಞೆಯಲಿ ಬಲು ಬಲು ನರಕದೊಳು ಬೇಳುವುದುರಾದ್ಧ 5
--------------
ರಮಾಪತಿವಿಠಲರು
ಕಾಲ ಕಳೆಯುವಿ ನಮ್ಮ ಐಕೂರಾರ್ಯರ ಸುವಾಕು ಕೇಳದೆ ಜೀವಿ ಪ ಮರುತಾಗಮ ಮರ್ಮವರಿಯದವರಿಗೆಲ್ಲಾ | ವರ ಭಾಗವತ ಗೀತಾ ಹರಿಕಥಾ ಮೃತ ತತ್ವ | ಯರಡೊಂದು ಕಾಲ ಕೃಪೆ ನೆಳಲಾಶ್ರಯಿಸದೆ 1 ಹರಿಮೂರ್ತಿ ಹರಿವ್ಯಾಪ್ತಿ ಹರಿಸತ್ಯ ಸುಚರಿತ್ರೆ | ಹರಿದಾಸರುಕ್ತಿ | ಹಿರಿದು ಕಿರಿದು ಭೇದ ನೆರೆ | ಸುರಹಸ್ಯವನರುಹಿ ಕಗ್ಗತ್ತಲೆ ಹರಿಸುವರಿವರೆ ನರ ನೀನಂಬದೆ2 ಮದಡ ಜನರಿಗೆಲ್ಲ ಪದಸುಳಾದಿಗಳನು | ಚತುರತನದಲಿಂದ | ವಿಧ ವಿಧ ವಿವರಿಸಿ | ಸದಮಲ ಸುಜ್ಞಾನ | ವದಗಿಸುವಂಥ ಈ ಬುಧರುಪದೇಶ ಮುದದಿ ಪಡೆಯದೆ 3 ಆಶೆ ಕ್ರೋಧಂಗಳ ಜಯಿಸುತ ಮನದಿಂದ ಕ್ಲೇಶಮೋದ ಸಮ ತಿಳಿದಿಹರೋ | ಯೇಸೇಸು ಕಾಲಕ್ಕೆ ಭೂಸುರೋತ್ತಮ ರಾದ | ಈ ಸುಗುಣರ ಸಹವಾಸ ದೊರೆವುದೆ 4 ಶ್ರೀ ಮುಖವಾಣಿಯು ಸಾಮಾನ್ಯವಲ್ಲವೋ ನೇಮದಿಂ ಕೇಳ್ವರ | ಶಾಮಸುಂದರ ಸುಧಾಮನಿಗೊಲಿದಂತೆ | ಪ್ರೇಮದಿಂ ಸಲಹುವ ನೀ ಮನದಲಿ ತಿಳಿ 5
--------------
ಶಾಮಸುಂದರ ವಿಠಲ
ಕೀಳುಯೋಚನೆ ಬಿಡು ಖೋಡಿಮನವೇ ಪಡಿ ಮಾಧವನಿಂ ಬೇಡಿಪ ಹಾಳುಯೋಚನೆ ಮಾಡಿ ಮಾಡಿ ನೀನು ಬೀಳುಗಳೆಯ ಬೇಡ ತಿಳಿ ಹುಚ್ಚ ಖೋಡಿ ತಾಳದೆ ಜಡಿತಾರ ಒದೆದು ಎಳೆದಾಡಿ 1 ನಾಶನ ಈ ಜಗಸುಖ ಒಂದೇ ತಾಸಿನ ಮೋಜಿದು ಇರದು ಕಡೆತನಕ ಮೋಸದಿ ಸಿಲ್ಕಬೇಡಿದಕೆ ಇದ ರ್ವಾಸನಳಿದು ಬೇಗ ಕಡಕೋ ಭವತೊಡಕ 2 ದಾಸರು ಪೇಳಿದ ಸೊಲ್ಲುಕೇಳಿ ಧ್ಯಾಸಿಟ್ಟು ದೋಷದಿಂ ಕಡೆಗ್ಹಾರಿ ನಿಲ್ಲು ದಾಸನಾಗಿ ಭವಗೆಲ್ಲು ತಂದೆ ಶ್ರೀರಾಮನ ಪಾದಕೆ ಸಲ್ಲು 3
--------------
ರಾಮದಾಸರು
ಕೇಳಿದರೆನಗೇನು ಗೊತ್ತಿಲ್ಲ ಹೇಳುವದ್ಹುಟ್ಟನಾ ಕಲಿತಿಲ್ಲ ಪ ಹೇಳಿದ್ದೆ ಕೇಳಿ ನಾ ಮೂಲತಿಳಿದು ಭವ ಮಾಲನ ಭಜಿಸುವೆನಲ್ಲ ಅ.ಪ ವೇದಮೊದಲು ನಾನೋದಿಲ್ಲ ವೇದಮಂತ್ರ ಗೊತ್ತೆನಗಿಲ್ಲ ಮೇದಿನಿಯೊಳು ಹರಿಪಾದದಾಸರು ನಿ ವೇದಿಸಿದ ತೆರ ಸಾಧಿಪೆನಲ್ಲ 1 ನಿತ್ಯತತ್ತ್ವಗೊತ್ತೆನಗಿಲ್ಲ ಮತ್ತು ಆವಶಾಸ್ತ್ರ ಗತಿಯಿಲ್ಲ ಸತ್ಯರು ಪೇಳಿದ ನಿತ್ಯವಾಕ್ಯಗಳ ಚಿತ್ತವಿಟ್ಟರಿಯುತ್ತ ಸತ್ಯ ನಂಬಿಹೆನಲ್ಲ 2 ಛಂದಸ್ಸು ಲಕ್ಷಣ ನೋಡಿಲ್ಲ ಒಂದು ಪುರಾಣದರ್ಥ ಮಾಡಿಲ್ಲ ಬಂಧುಭಜಕರಾನಂದ ಶ್ರೀರಾಮನ ಬಂಧುರಂಘ್ರಿ ಸ್ಮರಣೊಂದೆ ಬಲ್ಲೆನಲ್ಲ 3
--------------
ರಾಮದಾಸರು
ಕೊಟ್ಟಿಗೋತ್ಸವ ಗೀತೆ ಕೊಟ್ಟೊಗೋತ್ಸವ ನೋಡಿ ಸೃಷ್ಟಿಗೀಶ್ವರನ ಪ. ವಾಸುದೇವನ ಸಹಸ್ರಸ್ತಂಭಮಂಟಪವ ದಾಸರು ಬಂದು ಶೃಂಗಾರವ ಮಾಡಿ ದೇಶದ ಮೇಲುಳ್ಳ ಬೊಂಬೆಗಳನು ರಚಿಸಿ ಲೇಸಾದ ಮೇಲುಕಟ್ಟುಗಳ ಕಟ್ಟಿದರು 1 ಸೃಷ್ಟಿಗೀಶ್ವರನಾದ ರಂಗನಾಥನಿಗೆ ಕೊಟ್ಟಿಗೋತ್ಸವವನ್ನು ನಡೆಸಬೇಕೆನುತ ಕಟ್ಟಿ ಕಂಕಣವನ್ನು ನಾಲ್ಕುವೇದಗಳಿಂದ ಭಟ್ಟರು ಓದಿ ಪೇಳಿದರು ಸಂಭ್ರಮದಿ 2 ವಜ್ರದ ಕಿರೀಟವಿಟ್ಟು ರತ್ನದಂಗಿಯ ತೊಟ್ಟು ಅರ್ಜುನಸಖ ಸಂಭ್ರಮದಲಿ ಪೊರಟು ಸ್ವರ್ಗದ ಬಾಗಿಲೊಳಗೆ ತಾ ನಿಂದು ಮೂರ್ಜಗವೆಲ್ಲ ಮೋಹಿಸುತಲೆ ಬಂದು 3 ಮಂದಹಾಸದಲಿ ನಿಂದು ಮಂಟಪದಲಿ ಬಂದ ಆಳ್ವಾರರಿಗಾಸ್ಥಾನವಿತ್ತು ಚಂದದಿಂದ ದಿವ್ಯ ಪ್ರಬಂಧವ ಕೇಳಿ ಒಂದುಅಂಕಣ ಬಿಡದೆ ಬಂದ ಶ್ರೀರಂಗ 4 ಸಂಕ್ರಾಂತಿಯಲಿ ಶಂಕರನ ಪ್ರಿಯನು ಶಂಕೆ ಇಲ್ಲದೆ ಆಭರಣವನು ಧರಿಸಿ ಪಂಕಜಮುಖಿಯರೊಡಗೊಂಡು ಹರುಷದ ಲಂಕಾರವಾಗಿ ಬಂದನು ಮಂಟಪಕೆ 5 ಮತ್ತೆ ಮರುದಿನದಲ್ಲಿ ಭಕ್ತವತ್ಸಲನು ಮುತ್ತಿನಅಂಗಿ ಮುಂಡಾಸನಳವಡಿಸಿ ಮುತ್ತಿನಛತ್ರಿ ಚಾಮರ ಸೂರೆಪಾನದಿ ಮುತ್ತರಸಿಯ ಮಂಟಪಕೆ ನಡೆತಂದ 6 ಅರ್ಥಿಯಿಂಬಂದು ತಾ ಅಶ್ವವನೇರಿ ಮತ್ತೆ ಬೇಟೆಯಮೃಗವನೆ ಕೊಂದು ಸಂ ಕ್ರಾಂತಿಯ ಪಾರ್ವೇಟೆಯನಾಡಿ ಸಂತೋಷದಿ ಬಂದ 7 ನಾರಿವೇಷವ ಆಳ್ವಾರರಿಗೆ ಧರಿಸಿ ಪೇರಿಯ ತಾ ಬಿಟ್ಟು ತೇಜಿಯನೇರಿ ಚೋರತನವ ಮಾಡಿದ ಭಕ್ತರಿಗೆ ಮೂಲಮಂತ್ರವ ಪೇಳಿ ಮುಕ್ತಿಯನಿತ್ತ 8 ಮಿಂದು ಮಡಿಯನುಟ್ಟು ಅಂದು ರಾತ್ರಿಯಲಿ ಹ ನ್ನೊಂದು ವಿಧ ಭಕ್ಷ್ಯಗಳನು ತಾ ಗ್ರಹಿಸಿ ಬಂದ ಆಳ್ವಾರರಿಗೆ ಮುಕ್ತಿಯನಿತ್ತು ಬಂದು ಆಸ್ಥಾನದಿ ನಿಂದ ಶ್ರೀರಂಗ 9 ಭಕ್ತರು ಮಾಡಿದ ಪ್ರಬಂಧವನೆಲ್ಲ ಭಕ್ತಿಯಿಂದಲೆ ಪೇಳಿದ ಆಚಾರ್ಯರಿಗೆ ಯುಕ್ತಿ ತೋರಿದ ಪರಾಶರವ್ಯಾಸರಿಗೆ ಬ್ರಹ್ಮ ರಥವನಿತ್ತ ಬ್ರಹ್ಮಾಂಡರೂಪ 10 [ಶೌ]ರಿಯು ತಾನಿರಲು ಮೇಘಮಂಡಲದಂತೆ ತೋರುವುದು ತಾರಕೆಯಂತೆ ಮೈಯುಡುಗೆ ವಾರಿಜನಾಭನ ಮುತ್ತಿನಂಗಿಯ ನೋಡು ವವರಿಗೆ ತಾ ಆನಂದವಾಗಿಹುದು 11 ಕ್ಷೀರಸಾಗರದಲ್ಲಿ ಪವಡಿಸಿಹ ಹರಿಗೆ ಕ್ಷೀರಬಿಂದುಗಳು ಮೈಯೊಳಗೆ ಬಿದ್ದಂತೆ ವಾರಿಜನೇತ್ರಗೆ ವಜ್ರದನಾಮವು ಧರಿಸಿದರು ಹೇಮದ ಪಾದಹಸ್ತಗಳ 12 ಮುತ್ತಿನಂಗಿಸೇವೆ ನೋಡಬೇಕೆನುತ ಹತ್ತುಸಾವಿರ ಪ್ರಜೆ ಬಂದು ನಿಂತಿರಲು ಇತ್ತು ಕಾಣಿಕೆಯನು ನೋಡಿ ವೆಂಕಟರಂಗನ ಮುಕ್ತರಾದೆವೆಂದು ಭಕ್ತರು ನುಡಿದರು 13
--------------
ಯದುಗಿರಿಯಮ್ಮ
ಗುರುಸುಶೀಲೇಂದ್ರ | ಚರಣವಾರಿಜ ಯುಗ್ಮ ಸ್ಮರಿಸುವ ನರರು ಶ್ರೀಹರಿದಾಸರು ಪ ಹರಿವರ ಸುಮಚಾಬ್ಧಿ | ಹರಿಣಾಂಕರೆನಿಸಿದ ವರಸುವೃತೀಂದ್ರರ ತೀರ್ಥರ ಕರಕಮಲಜ ಅ.ಪ ಮಾಸ ತ್ರಯದಿ ಸಡಗರದಲಿ ಮಹ ಸಭೆ ನಿರ್ಮಿಸಿ ಪೊಡವಿಯೊಳಿದ್ದ ಭೂಸರರಾಜ್ಞ ಪತ್ರ ಬರಮಾಡಿ ವಿದ್ವಾಂಸರ ಒಡಗೂಡಿ | ಮಧ್ವಾಗಮನವನು ನೋಡಿ ಬೆಲೆಯುಳ್ಳವೆಗ್ಗಳ ಒಡವೆ ಉಡುಪಗಳನು ಕರುಣಿಸಿ ಮೃಷ್ಟಾನ್ನ ದ್ವಿಜರಿಗೆ ಕಡು ಸುಪ್ರೇಮದಿ ಸಲಿಸಿ | ಮುದ ಬಡಿಸಿ ಜಡಕುಮಾಯ್ಗಳ | ಗಡಣ ಜಡಧಿಗೆ ವಡೆಯ ತಾನೆನಿಸಿ ಕ್ರೋಢ ಜಾಸ್ಥಿತ | ಒಡೆಯ ಶ್ರೀಗುರು ರಾಘವೇಂದ್ರರ ಅಡಿಗಳಾಬ್ಜಕಾ ರಡಿಯಂತೊಪ್ಪುತ | ಬಿಡದೆ ಸಂತತ ಧೃಢದಿ ಸೇವಿಸಿ ಜಡಜ ಜಾಂಡದಿ ಮೆರೆದ ಅಸ್ಮದ್ 1 ತರಣಿ ಕುಲೇಂದ್ರನ ಕರುಣವೆಷ್ಟಿವರೊಳು ಅರುಹಲಾರೆ ವರಕಾಪ್ಯಾಸನ ಪುರಕೆ ಎರಡಾರು ಯತಿಗಳ ವತಿಯಿಂದ ತಮ್ಮಯ ಶಿಷ್ಯ ತತಿಯಿಂದ ಬಹುವಿಧ ಬಿರುದಾವಳಿಯಿಂದ ತೆರಳಿ ಶಶಿರವಿವರ ಸುವಾದ್ಯಧ್ವಾನ ಮೊಳಗಿಸುತ ‌ಘನ ಭಕ್ತಿ ಪರವಶರಾಗಿ ಸುರಚಿರ ಕನಕಮಣಿ ಧನ ತನುಮನ ತ್ವರಿತ ತೃಣ ಬಗೆಯ ದೇವಕಿ ತರಳ ರುಕ್ಮಿಣಿ ವರ ಮುರಾಂತಕÀ ಚರಣಗರ್ಪಿಸುತ | ಆನಂದಪಡುತ ಸರ್ವಮುನಿ ಜನಗಳಿಗೆ ಬಲು ಉಪಚರಿಸಿ | ಮನ್ನಣೆ ಧರಿಸಿ ಹರುಷದಿ ವರ ಸುಧೀಂದ್ರರ ಕರಜರನು ನೆರೆಸ್ಥಾಪಿಸಿ ಆಶ್ಚÀರ್ಯ ಚರಿತ 2 ಪತಿ ಶೃತಿ ಶಾಸ್ತ್ರಾರ್ಥ ಚತುರ ತನದಿ ಪಡೆದು ವಿತತ ಮಹಿಮನಾದ ಪತಿತ ಪಾವನ ಶಾಮಸುಂದರನ ಸ್ತುತಿಸುತಲಯ ಚಿಂತನೆ ಗೈಯುತ ಶ್ರೀಯುತ ಸಂಸ್ಥಾನಮತಿ ವಿಶಾರದರಾದವರ ಸುವೃತೀಂದ್ರ ತೀರ್ಥರಿಗೆ ಹಿತದಿಂದ ಒಪ್ಪಿಸಿ | ಯತಿ ಧೀರೇಂದ್ರರ ಚಾರುಸ್ಥಳದೊಳಗೆ ತನುವಿತ್ತು | ಹರಿಪುರಪಥವ ಪಿಡಿದೈದಿದರು ಚನ್ನಾಗಿ | ಸೇವಿಪ ಜನರಿಗೆ ಅತಿದಯದಿ ಮನೋರಥವ ನೀಡುತ ಸತತ ಮಾಣದೆ ಪರಮ ಭಕುತಿಲಿ ಪೃಥ್ವಿ ಸುರಕರ ಶತಪತ್ರಗಳಿಂದ ನುತಿಸಿಕೊಳುತಲರ್ಚನೆಗೊಂಬ 3
--------------
ಶಾಮಸುಂದರ ವಿಠಲ
ಗೋಪಾಲದಾಸರು ಕರದಾಗ ಬಾರದೇ ವೈದುಗ ಬಂದು ಬೋಧಿಸಿ ಮಾರ್ಗವ ತೋರಿಸಿ ಹೃದಯದಿ ಪಾದನಿಲ್ಲಿಸಿ ಮಂದನ ಪೋಷಿಸಿ ಭಂಗವ ಬಿಡಿಸುತಾ ಮಂಗಳ ಮೂರುತಿ ನಿನ್ನ ಮಹಿಮೆಗೆಣೆಗಾಣೆ ಧವಳ ಗುಣವಂತ ತಂದೆವರದಗೋಪಾಲವಿಠಲರೇಯನ ದಾಸನೆಂದೆನಿಸದೆಯನ್ನ 1 ವೈರಿ ಬನ್ನ ಭವ ಬನ್ನ ಪಡುತಿರೆ ಕಣ್ಣು ಕಾಣದೆ ಕರುಣವ ಬೀರುತ ಪಾಣಿಯ ಪಿಡಿದು ವೀಣಾವನಿತ್ತು ಗಾನವ ಪೇಳಿ ಗುಣವಂತನೆಂದೆನಿಸಿದೇ ಎನ್ನ ಅಣ್ಣಾ ಅಣ್ಣಾ ಭಾಗಣ್ಣ ಗಜಮುಖ ರೂಪದಿ ಬಂದು ಪಾಲಿಸಿದೈನಿನ್ನಾ ಕರುಣಾರಸಕೆಣೆಯುಂಟೆ ಯೆಣೆಯುಂಟೆ ನಿನ್ನ ದೇನಿಪರೊಳಗಿಟ್ಟುಶಿರಿಯರಮಣ ತಂದೆವರದಗೋಪಾಲನ ತೋರೋ 2 ನೂರಾರು ಸಾವಿರ ನಾರಿಯರೊಡಗೂಡಿ ಬೆಡಗು ಮಾಡೆ ನಾರಿಯಾಗಿ ನಿನ್ನಡಿಗಳ ಪೂಜಿಸಿ ಗರುಡನಂತೆ ನನ್ನ ಹೆಗಲೀನ ಕೂಡಿಸಿಕೊಂಡುತಿರುಗುವೆ ನೀತಿ ಕಪಿಯಂತೆ ನಿನ್ನ ಕಪ್ಪಾದಿ ವಲಿಸುವೆ ಕಮತವ ಮಾಡಿಸಿ ಮರ್ಮವ ಘಾಡಿಸಿ ಶರ್ಮವ ಗೂಡಿಸಿ ಚರ್ಮವ ತೊಡಿಸಿ ಕರ್ಮವ ಕೆಡಿಸಿಮೃಡನೊಡೆಯ ವಂದಿತ ತಂದೆವರದಗೋಪಾಲವಿಠಲನಡಿಗಳ ಧೇನಿಸುವಂತೆ ಮಾಡೋ 3 ಅಂಬರ ಭೋಜನೆ ಕಂಬುಕಂಧರನಿಂದ ಡಿಂಗರಪಾಲಿಪ ಡಿಂಬದಿ ಪೊಳೆಯುವಅಂಬಾರಮಣಸುತ ಭೀಮಾಂತರ್ಯಾಮಿ ತಂದೆವರದಗೋಪಾಲ ವಿಠಲನ ನಿಜ ಕೊಂಡಾ 4 ನಿಗಮ ನಿಧಿ ಕೃಷ್ಣಾಂತರ್ಯಾಮಿ ಲಕುಮಿ ಅರಸತಂದೆವರದಗೋಪಾಲವಿಠಲನ ವಾರಿಜದಲ್ಲಿ ತೋರೋ 5 ಜತೆ :ಆವಾಗ ಬಂದು ನೀ ಕಾವದಿರೇ ಸೇವಕನಾಗಲ್ಯಾಕೋ ಭಾವಜಪಿತ ತಂದೆವರದಗೋಪಾಲವಿಠಲರೇಯನ ದೂತ
--------------
ತಂದೆವರದಗೋಪಾಲವಿಠಲರು
ಚಿತ್ತಾಭಿಮಾನಿ ನೀನು ಮತ್ತೆ ನಾ ಬಲಗೊಂಡು ದುಷ್ಟವಿಷಯಕ್ಕೆ ಎರಗುವÀ ಮನವನ್ನು ಅಚ್ಚುತನ ಚರಣದಲಿ ಇರಿಸುವೆ1 ಮನದಭಿಮಾನಿಯೆ ಇವನ ನಾ ಬಲಗೊಂಡು ದುರುಳ ವಿಷಯಕೆ ಎರಗುವ ಮನವನ್ನು ನರಹರಿಯ ಚರಣದಲಿ ಇರಿಸುವೆ 2 ಅಚ್ಚುತನೆ ನಾ ನಿನ್ನ ಹೆಚ್ಚು ಬೇಡೋದಿಲ್ಲ ಕಷ್ಟಕಾಲದಲ್ಲಿ ಹರಿಯೆಂಬ ಸ್ಮರಣೀಯೊ ರಕ್ಷಿಸೋ ಲಕ್ಷ್ಮೀರಮಣನೆ 3 ನರಹರಿಯೆ ನಾ ನಿನ್ನ ಹಿರಿದ ಬೇಡೋಳಲ್ಲ ಸರ್ವಕಾಲದಲಿ ಹರಿಯೆಂಬೋ ಸ್ಮರಣೀಯ ಕರುಣಿಸೋ ಲಕ್ಷ್ಮೀರಮಣನೆ 4 ಪಾಲ್ಗಂಜಿಯೆಂದರೆ ಅರಗಂಜಿಯಾಹೋದೆ ಲಕ್ಷ್ಮೀರಮಣಗೆ ಎಂಟುಗುಣಳುಂಟೆಂದರೆ ಮೇಲಿದ್ದ ಗುಣಗಳಡಗೋದೆ 5 ಪಂಚಕನ ದೇಹದಲಿ ನಿಂತೆರಡು ಪಕ್ಷಿಗಳು ಸಂತತ ದುಃಖಿ ಸುಖಿಯೊಬ್ಬ ಜೀವಗೆ ನಿಂತು ಸುಖ ದುಃಖ ಕೊಡುತಿತ್ತು 6 ಪಂಚಮೂರುತಿ ಹರಿಯ ಅಂತರಂಗದಿ ಇಟ್ಟು ಸಂತತ ಸ್ವಪ್ನ ಸುಷುಪ್ತಿ ಏರಿಸುವ ಪ್ರಾರ್ಥಿಸಿ ಪ್ರಾಜ್ಞರಿಗೆ ಸರಿಯೆಂಬೆ7 ಈ ಜಾಗ್ರದವಸ್ಥೆಯಲಿ ನಾನಾವಿಧ ಕರ್ಮಗಳ ಪ್ರೇರಿಸಿ ಸಕಲ ಶ್ರೀಕಾರ ಮಾಡುವೊ ಸ್ವಾಮಿ ಶ್ರೀಹರಿಗೆ ಶರಣೆಂಬೆ 8 ನಡೆವುದು ನಿನ್ನ ಯಾತ್ರೆ ನುಡಿವುದು ನಿನ್ನ ನಾಮಸ್ಮರಣೆ ಅಡಿಯಿಡೋದೆಲ್ಲ ಹರಿಯಾತ್ರೆ ಗುರುಪೂಜೆ ಸ್ಮರಣೇಯ ಪಾಲಿಸೋ ಲಕ್ಷ್ಮೀರಮಣನೆ 9 ವಿಷ್ಣುಭಕ್ತಿಯಿಲ್ಲದೋರ ಹತ್ತಿರ ನಾನಿರೆ ಎಚ್ಚರಿತು ಮಾಡೆ ಗೆಳೆತನವ ಅವರ ಕಂಡರೆ ನಾನು ಕಿಚ್ಚ ಕಂಡಂತೆ ಕೊಲ್ಲಿಸುವೆ 10 ಹರಿಭಕ್ತಿಯಿಲ್ಲದೋರ ಹತ್ತಿರಲಿ ನಾನಿರೆ ಅರೆಘಳಿಗೆ ಮಾಡಿ ಗೆಳೆತನವ ಅವರ ಕಂಡರೆ ತಾನು ಉರಿಯ ಕಂಡಂತೆ ತೊಲಗುವೆ 11 ಕಾಶೀಪಟ್ಟಣ ಶ್ರೀ ವಾಸುದೇವರು ಭೂಮಿ ಹರಿದಾಸರು ಕಟ್ಟಿಸಿದ ಸ್ಥಳದಲ್ಲಿ ಹರಿಯ ನಿಜದಾಸಗೆ ವಿಶ್ವನಾಥನೆಂತೆಂಬೊ ಪೆಸರುಂಟು 12 ಹರಿದಾಸರ ಒಳಗೆ ಪರಮ ವೈಷ್ಣವನ್ಯಾರೆ ಕಿರಿಯ ಕೆಂಜೆÉಡೆಯ ಮಕುಟನೆ ಅಜನ ಸುತನಾ ಶಿವನು ಹರಿದಾಸಕಾಣೆ ಹುಸಿಯಲ್ಲ13 ಗುಣಮಣಿಧಾಮಗೆ ಮಣಿದೊಮ್ಮೆ ಇಕ್ಕದೆ ಹಲವು ದೈವಗಳ ಭಜಿಸಿದ ಪಾಪಿ ನೀನು ಮಣಿಮಂತ ಹೋದಗತಿಗ್ಹೋಗ್ವೆ 14 ಎದ್ದು ತಮಸಿಗೆ ಉರುಳುವೊ ಪಾಪಿ ನೀ ಅದ್ವೈತ ಹ್ಯಾಗೆ ಬಿಡದ್ಹೋದಿ 15 ಅಳಿದ್ಹೋಗೊ ಶರೀರವನು ನರಹರಿಗೆ ಸರಿಯೆಂಬೆ ಬಿಡದೆ ತಮಸಿಗೆ ಉರುಳವೊ ಪಾಪಿ ನೀ ಚಲಹವನು ಹ್ಯಾಗೆ ಬಿಡದ್ಹೋದಿ 16 ನಾಶ್ವಾಗೊ ಶರೀರವನು ವಾಸುದೇವಗೆ ಸರಿಯೆಂಬೆ ಹೇಸದೆ ತಮಸಿಗೆ ಉರುಳವೊ ಪಾಪಿ ನೀ ವಾಸನೆ ಹ್ಯಾಗೆ ಬಿಡದ್ಹೋದಿ 17 ಈ ಸೃಷ್ಟಿಯೊಳಗೆ ಅಚ್ಚುತಗೆ ಸರಿಯುಂಟೆ ಮೆಚ್ಚಿ ನೀ ಮನವೆ ಕೆಡಬೇಡ ಅಲ್ಲಿತ್ತಾರಾ(ಅಲ್ಲದ?) ಎಲೆಯ ಒತ್ತಿ ಹಿಂಡಿದರೆ ರಸವುಂಟೆ 18 ಭೂಮಿಯೊಳಗೆ ಶ್ರೀರಾಮನಿಗೆ ಸರಿಯುಂಟೆ ಮಾನುನೀ ಮನವೇ ಕೆಡಬೇಡ ಅಲ್ಲಿತ್ತಾರಾ(ಅಲ್ಲದ?)ಎಲೆಯ ಒತ್ತಿ ಹಿಂಡಿದರೆ ರಸವುಂಟೆ 19 ಭೂಮಂಡಲದೊಳಗೆ ರಂಗಗೆ ಸರಿಯುಂಟೆ ಅಂದು ನೀ ಮನವೆ ಕೆಡಬೇಡ ಅಲ್ಲಿತ್ತಾರಾ (ಅಲ್ಲದ?) ಎಲೆಯ ಒತ್ತಿ ಹಿಂಡಿದರೆ ರಸವುಂಟೆ 20 ವಿಷ್ಣು ಸರ್ವೋತ್ತಮನೆಂದು ಇಟ್ಟರೆ ಮುಂಡಿಗೆಯ ಮುಟ್ಟಲಂಜಿದನೆ ಪರವಾದಿ ಪರವಾದಿ ತತ್ವದ ಬಟ್ಟೇನೂ ಕಾಣದಿರುತಿದ್ದ21 ಹರಿಸರ್ವೋತ್ತಮನೆಂದು ಇರಿಸಿದರೆ ಮುಂಡಿಗೆಯ ಹಿಡಿಯಲಂಜಿದನೆ ಪರವಾದಿ ಪರವಾದಿ ತತ್ವದ ವಿವರವನು ಕಾಣದಿರುತಿಹ 22 ಅರಣ್ಯದ ಅಡವೀಲಿ ಗೋಡೇನು ಹಾಕಿದರೆ ಯಾರು ಕೂಲೀನಕೊಡುವೋರು ಸಂಕರನ ಮತವನು ಮಾಯದಿಂ ಮೆಚ್ಚಿ ಕೆಡಬ್ಯಾಡ 23 ಅತ್ತಿಹಣ್ಣಿನಂತೆ ಮಿಥ್ಯವಾದಿಮತ ಬಿಚ್ಚಿನೋಡಿದರೆ ಕ್ರಿಮಿರಾಶಿ ಮಧ್ವರಾಯರ ಮತ ಮುತ್ತಿನ ಸರವ ತೆಗೆದಂತೆ 24 ಆಲಹಂಣೀನಸಂತೆ ಮಾಯಾವಾದಿಮತ ಸೀಳಿ ನೋಡಿದರೆ ಕ್ರಿಮಿರಾಶಿ ಮಧ್ವರಾಯರ ಮತ ಹೂವ್ವಿನ ಸರವ ತೆಗೆದಂತೆ 25 ಭಾಗವತ ಅರ್ಥಸಾರವೆಲ್ಲವ ತಿಳಿದು ಹೇಳಿದನೆ ತತ್ವ ಕಥೆಗಳ ಜ್ಞಾನ ಭಕ್ತಿವೈರಾಗ್ಯವ ಈವನೆ ನಮ್ಮ ಹಯವದನ 26
--------------
ವಾದಿರಾಜ
ಜಗನ್ನಾಥದಾಸರು ತಂಗಿ ನೀ ಕೇಳಿದ್ಯಾ ಅಂಗನಾಮಣಿ ರಂಗನೊಲಿದ ಭಾಗವತರ ಮಹಿಮೆಗಳ ಪ ಶ್ರವಣಾದಿ ನವವಿಧ ಸವಿಯ ಭಕುತಿಯಿಂದ ಪ್ರವೀಣನೆನಿಸಿ ಮಾಧವನ ಧ್ಯಾನಿಪ ಖ್ಯಾತಿ 1 ಅಮಿತ ಮಹಿಮನಂಘ್ರಿ ಕಮಲಾಖ್ಯಪರ ಖ್ಯಾತಿ 2 ಶ್ರೀದವಿಠಲನ ಪಾದಭಜಕರಾದ ಸಾಧುವರ್ಯರ ಸುಬೋಧ ಬಣ್ಣಿಪರಾರೆ 3
--------------
ಶ್ರೀದವಿಠಲರು
ಜಗನ್ನಾಥದಾಸರು ರಕ್ಷಿಸೋ-ಗುರುವರ-ರಕ್ಷಿಸೋ ಪ ಈಕ್ಷಿಸೊ ಕರುಣ ಕಟಾಕ್ಷದಲಿನ್ನ ಶಿಕ್ಷಿಸು ಮಧ್ವಾಗಮವ ಮುನ್ನ ಉಕ್ಕಿಸು ಭಕ್ತಿ ವಿರಕ್ತಿ ಚೆನ್ನ | ಆಹ ಲಕ್ಷ್ಮೀಕಾಂತನ ಅಪರೋಕ್ಷದಲಿ ಕಂಡು ಪ್ರ- ತ್ಯಕ್ಷ ಔತಣ ಉಂಡ ದಕ್ಷ ಶ್ರೀ ಜಗನಾಥ ವಿಠಲನ ದೂತ ಅ.ಪ. ನರಸಿಂಹದಾಸರ ಕುವರಾ-ಧರಿಸಿದೆ ಶ್ರೀನಿವಾಸನಪೆಸರ ವರಕವಿತಾ ಹುಟ್ಟಿನ ಸಾರ-ಮೆರೆಯಿತು ಕೀರ್ತಿ ಅಪಾರ \ಆಹ ವರದೇಂದ್ರನ್ನ ಅಶುಕವಿತಿಯಲಿಪೊಗಳಿ ವರಶಿಷ್ಯನಾಗುತ ಮೂರೊಂದು ಶಾಸ್ತ್ರದಿ ಕಡುಹುಲಿ ಎನಿಸಿದೆ 1 ನ್ಯಾಯಶಾಸ್ತ್ರದಿ ಜಗಜ್ಜಟ್ಟೀ-ವೇದಾಂತರಸಗಳ ಭಟ್ಟಿ ಮಾಯಾವಶಿರ ಮೆಟ್ಟಿ-ಅಹಂಕಾರ ಶಿರದಲಿಟ್ಟಿ ಆಹ ಶ್ರೇಷ್ಠವಿಜಯದಾಸರು ಮನೆ ಮುಟ್ಟಿ ಕರೆದರು ನಿನ್ನ ಬಹು ಬಹು ಕಂಗೆಟ್ಟೀ ಬತ 2 ಹೋಯಿತು ಕಳೆಮುಖದಿಂದ ಕಚ್ಚಿತು ಭರದಿಂದ ಆಹ ಭರದಿ ಹರಿಯ ಕರುಣ ಜರುಗಿ ಪೋದುದಕಂಡು ಕೊರಗಿ ಕೊರಗುತ ಕ್ಷೇತ್ರ ತಿರುಗುತ ಕೊನೆಗೆ ಗುರು ರಾಘವೇಂದ್ರರ ಪುರವ ಸೇರುತ ಬಹಳ ಕಾಯ ದೆರಗಿ ಸೇವೆಯಗೈದೆ 3 ಕರುಣಾಮಯನು ಸ್ವಪ್ನದಿ ಗುರುವು- ಗುರು ದ್ರೋಹ ಕಾರಣ ವರುಹಿ ಸುರಿಸಿ ಆಶೀರ್ವಾದವ ಶಿರದಿ- ತೆರಳೆಂದ ವಿಜಯದಾಸರ ಬಳಿ ಆಹ ತೆರೆದು ಕಂಗಳು ಒಡನೆ ತರಿದು ಮದಮಾತ್ಸರ್ಯ ಕರೆದು ಕುಡಿಯುತ ಶಿಷ್ಯ- ವರನು ಎನಿಸುತ ಚರಣಸಾರುವ ಬಿಡದೆ ಗೋಪಾಲದಾಸರ 4 ಸ್ವಗುರುಭಾವವತಿಳಿದು ತನ್ನಾಯುವನೆ ಇತ್ತ ಆಹ ಕೊಂಡು ಆಯುರ್ದಾನ ತೊಂಡನೆಂದಡಿಗೆರಗಿ ಕೊಂಡು ಶ್ರೀಹರಿದಾಸ ಗಂಡುದೀಕ್ಷೆಯ ಒಡನೆ ತಾಂಡವಾಡುತ ಪೋಗಿ ಪಾಂಡುರಂಗನ ಪುರದಿ ಮಂಡೆ ಮುಳುಗಿಸೆ ನದಿಲಿ ಕಂಡೆ ಅಂಕಿತ ಶಿರದಿ 5 ಪಂಡಿತನಾನೆಂಬ ಹೆಮ್ಮೆ ಬರಿ-ಪುಂಡತನವಲ್ಲದೆ ಹರಿಯ ನಿಜ ನಿನ್ನ ಚರಿತೆ ಆಹ ತಂಡತಂಡದ ಕವನ ದಂಡೆ ಹಾರಲು ಹರಿಗೆ ಕೊಂಡು ಔಡಣ ನಡಿಸೆ ಉಂಡು ಸಂತಸದಿಂದ ತುಂಡುಗೈಯುವ ಭವವ ಕಂಡೆ ನಾಕವ ಭುವಿಲಿ 6 ದೇಶದೇಶಗಳ ಸಂಚರಿಸಿ-ಹೇಸಿ ಮತಗಳ ನಿರಾಕರಿಸಿ ಪೊರೆದೆ ಹರೆಸಿ ಆಹ ಭಾಷಾದ್ವಯ ಯೋಜನೆ ಮೀಸಲು ನಿನಗೆಂಬೆ ವ್ಯಾಸ ರಾಜಾದಿಗಳ ಆಶೆಯಂದದದಿ ತತ್ವ- ರಾಶಿ ತುಂಬುತ ಗ್ರಂಥರಾಜ ರಚಿಸುತ ಜಗಕೆ ತೋಷ ತಂದಿತ್ತಿಯೊ ದಾಸಜನರುಲ್ಲಾಸ 7 ಶ್ರೀಮದ್ಧರಿಕಥಾಮೃತಸಾರ-ನೇಮ ದಿಂದೋದುವನೆ ಧೀರ ತಾಮಸರಿಗಿದು ಬಹಳದೂರ- ನೀಮಾಡಿದೆ ಮಹೋಪಕಾರ ಆಹ ಕಾಮವರ್ಜಿತವಾಗಿ ಪ್ರೇಮದಿ ನರಹರಿಯ ಭಾಮಸಹ ಸಂತತ ನೇಮದಿಂ ಧ್ಯಾನಿಸುತ ನಿತ್ಯ ಸಕಲೇಂದ್ರಿಯ ವ್ಯಾಪಾರ ಧೂಮಕೇತುವು ಎನಿಸುತ ನಮ್ಮಘಕಾನನಕೆ 8 ಪ್ರಾಣೇಶ ಕರ್ಜಗಿ ದಾಸಾರ್ಯರವೃಂದ- ನೀನಾಗಿ ಪೂರೆದಂತೆ ಘನ ಅಭಿಮಾನದಿಂದ ದೀನರೆಮ್ಮಯವೃಂದ ಕಾಯೆಂಬೆ ಮುದದಿಂದ- ತಾಣ ನಿಮ್ಮದೆ ನಮಗೆ ದಾಸಪಂಥ ಸ್ತಂಭ ಆಹ ಕೃಷ್ಣಾಗ್ರಜ ಶಲ್ಯ ಸಹ್ಲಾದ ಮತ್ತಾ ಪುರಂದರ ದಾಸಾತ್ಮಜನೀನಂತೆ ದೀನಜನೋದ್ಧಾರಗೈಯ್ಯೆ ಮುಂದೇಳುಬಾರಿ ಜನ್ಮಯೆತ್ತು ವಿಯಂತೆ ಶರಣು ಕರುಣಾಮಯ 9 ಕನ್ನಡಕೆ ಮುಳ್ಳು ಕುವರ ನೀಮುದ್ದು ಆಹ ಶರ್ಕರಾಕ್ಷಸಗೋಸ್ಥ ಅನುಸಂಧಾನ ಕ್ರಮ ಸು ನೀಕವಡಗಿಸಿ ಕವನ ಕಡಲೊಳು ಸಾಕಿಹೆ ಹರಿ ಭಕ್ತಸಂಘವ ಹಿರಿಯ ದಾಸರ ಪಥವನನುಸರಿಸಿ ಶಕ್ತನಾವನು ಗುಣಿಸೆ ನಿನ್ನುಪಕಾರ ಜಗಕೆ 10 ಸಣ್ಣವನು ನಾ ನಿನ್ನು ಗುರುವೇ-ನಿನ್ನವ ಸತ್ಯ ಮನ್ಮನ ಪ್ರಭುವೆ ಮನ್ನಿಸಪರಾಧ ಕಲ್ಪ ಧ್ರುಮವೆ-ಚಿಣ್ಣರ ಸಲಹೆ ಪಿತಗೆ ಶ್ರಮವೆ ಆಹ ಘನ್ನ ಜಯತೀರ್ಥ ವಾಯ್ವಂತರ್ಗತ ಶ್ರೀ ಕೃಷ್ಣವಿಠಲ ತದ್ವನನೆಂದು ಭಜಿಸುವ ಭಾಗ್ಯ ಜನ್ಮಜನ್ಮಂತರ ಕೊಟ್ಟು ಕಾಪಾಡುವಂಥ ನಿನ್ನಭಯಕರವೆನ್ನ ಶಿರದಲಿಡುವಲಿ ಸತತ 11
--------------
ಕೃಷ್ಣವಿಠಲದಾಸರು
ತಂದೆ ಮುದ್ದು ಮೋಹನಾ | ನಿನ್ | ಅಂದ ಪಾದವ ಭಜಿಸುವೆ ಪ ನಂದ ಕಂದನ ತಂದು ತೋರಿಸಿ | ಬಂಧನವ ಪರಿಹರಿಸು ನೀ ಅ.ಪ. ವತ್ಸರ | ತರಳನಾಗಿರುವಾಗಲೇ 1 ಹರಿಯ ವ್ಯಾಪ್ತಿಯ ಕಂಡು ನೀ | ಗಿರಿ ಗುಹೇಯಲಿ ಚರಿಸುತಾತೊರೆದು ಮಮತೆಯ ಚರಿಸಿದೇ | ಕರೆಕರೆಯ ಸಂಸಾರದೀ 2 ತಪವನಾಚರಿಸುತ್ತಲೀ | ವಿಪಿನವಸಿ ಸಂಚರಿಸುತಾವಿಪವರಸ ಪೆಗಲೇರಿದವನ್ನ | ಅಪರೋಕ್ಷದಿ ಕಾಣುತಾ 3 ನಡುನಡುವೆ ಮನೆಗೈದುತಾ | ಮಡದಿಯನೆ ತಕ್ಕೈಸುತಾ ಎಡ ಬಲದ ಒಡನಾಡಿ ಜನ ಕಡು | ಮೋಹಬಡುವಂತಾಡುತಾ 4 ಇಭಗಿರೀ ರಥೋತ್ಸವಕ್ಕೇ | ಪ್ರಭು ಮುದ್ದು ಮೋಹನ ದಾಸರುವಿಭವದಿಂದಲಿ ಬಂದು ನಿಮಗೆ | ಶುಭದ ಅಂಕಿತವಿತ್ತರು 5 ಶಾಂತ ಚಿತ್ತದಿ ಜಪಿಸುತಾ | ಮಂತ್ರ ಸಿದ್ಧಿಯ ಪಡೆಯುತಾ ಭ್ರಾಂತ ಜನರನು ಭಕ್ತಿ ಪಂಥದಿ | ನಿಂತು ನಲಿವಂತೆ ಮಾಡುತಾ6 ಸಾಹಸ್ರಾರಂಕಿತವನಿತ್ತೂ | ಮಾಹಿತಾಂಘ್ರಿಯ ಭಜಿಸಿದಾ ಸಾಹಸಿಗ ಶೇಷಾಂಶ ಭಕ್ತರ | ಮೋಹ ಕಳೆದುದ್ಧರಿಸಿದಾ 7 ನಕ್ರಹರಗತಿ ಪ್ರೀತನಾ | ವಿಕ್ರಮದಿ ಸಂಸ್ಥಾಪಿಸೀಚಕ್ರಿಪುರಿಗಾ ರಾಮನವಮಿಲಿ | ವಿಕ್ರಮದಿ ನೀ ಹೊರಡುತಾ 8 ಅಹಿ ಭವ ವಂದ್ಯನಾ | ಗುರುಗೋವಿಂದ ವಿಠಲನನಿರುತ ಭಜಿಸುವ ಜ್ಞಾನವಾ | ಕರುಣಿಸೀ ಸಲಹೆನ್ನನು 9
--------------
ಗುರುಗೋವಿಂದವಿಠಲರು
ತಾತ್ವಿಕವಿವೇಚನೆ ಏರಿಸಿ ಏರಿಸಿ ಮಾರುತ ಮ್ವತಧ್ವಜ ಸಾರ ಸುಖಂಗಳ ನಿತ್ಯದಲುಂಬುವ ಯೋಗ್ಯತೆ ಯುಳ್ಳವರೂ ಪ ಈರನ ಮತವೇ ಸಾರವು ಶ್ರುತಿಗಳ ಶೌರಿಯ ಮತವೇ ಈರನ ಮತ ಖರೆ ದೂಡಿರಿ ಸಂದೇಹ ಅ.ಪ ಇಲ್ಲವು ಜಗವಿದು ಭ್ರಾಂತಿಯ ಕಲ್ಪನೆ ಸುಳ್ಳೇ ಎಲ್ಲವು ಬ್ರಹ್ಮನ ಬಿಟ್ಟರೆ ಬ್ರಹ್ಮನೆ ಸತ್ಯವೆನೆ ಅಲ್ಲವು ನುಡಿಯಿದು ಬ್ರಹ್ಮನು ಕಾರಣ ಸುಳ್ಳಾಯಿತು ನುಡಿ ಅಲ್ಲವೆ ಯೋಚಿಸಿ ಕೊಡದು ಈ ಮನವು 1 ಉಂಬುದು ಉಡುವುದು ಕಾಂತೆಯ ಸಂಗವು ನಂಬಲು ಬೇಡಿರಿ ಸುಳ್ಳೇಯೆಂತೆಂನೆ ಸಾಕ್ಷಿಯು ಒಪ್ಪುವುದೇ ನಂಬಲನರ್ಹವೆ ಕಾರ್ಯಸುಕಾರಿಯ ಖರೆ 2 ಒಂದೇ ತೆರವಿಹ ವಸ್ತು ದ್ವಯವಿರೆ ಒಂದನು ಮತ್ತೊಂದೆಂಬುವ ಭ್ರಾಂತಿಯು ಕೊಡುವದೂ ಪೊಂದಿಹ ಹೇಗೆನೆ ಉತ್ತರ ಸಿಕ್ಕದು ಯೋಚಿಸಿ ಕೋವಿದರೆ 3 ಭ್ರಾಂತಿಯ ಪೆಣ್ಣನು ಕೊಡುತ ತಾಸ್ವಾ ತಂತ್ರ ವಿಹೀನನು ಆಗುತ ಮಿಡುಕುವ ದೇವನು ಎನಿಸುವನೆ ಮಂತ್ರಿಸೆ ಬ್ರಹ್ಮನ ನಾನಿಹೆ ನೆಂಬುದ ಭ್ರಾಂತಿಯ ತೊಲಗುತ ಬ್ರಹ್ಮನು ಆಹನೆ ಮನವ ವಿಚಾರಿಸಿರಿ4 ನಾನೇ ಬ್ರಹ್ಮನು ಎಂಬೀ ಜ್ಞಾನವು ತಾನೇ ಬಾರದು ಸಹಜ ವಿದಲವು ಅನುಭವ ವಿರುದ್ಧಾ ತಾನೇ ಬ್ರಹ್ಮನು ಆಗಿರೆ ಭವದೊಳು ನಾನಾ ದುಃಖವ ನುಣ್ಣಲು ಬಂದರೆ ಹುಚ್ಚನೆ ಅವಸರಿಯು5 ಬ್ರಹ್ಮ ದ್ವಯವಿದೆ ಸತ್ಯ ದ್ವಯವಿದೆ ಬ್ರಹ್ಮನು ಆಹುದು ಕೊನೆ ಮಾತೆಂದರೆ ಬ್ರಹ್ಮನು ಶೂನ್ಯನಿಹ ಬ್ರಹ್ಮನು ನಿರ್ಗುಣ ನಂದವಿಹೀನನು ಬ್ರಹ್ಮನ ಗತಿಯೆನೆ ಸರ್ವವಿನಾಶವೆ ಯಾರಿದ ಬಯಸುವರೂ6 ವ್ಯಕ್ತಿತ್ವವು ತಾನಾಶವು ಆಹುದೆ ಮುಕ್ತಿಯು ಯೆಂತೆನೆ ಸರ್ವವಿನಾಶಕೆ ಸಾಧನೆಯೇ ಬತವು ಮುಕ್ತಿಯು ದುಃಖವಿವರ್ಜಿತ ಬರಿಸುಖ ರಿಕ್ತವು ಬರಿಯೆನೆ ಭವವಿದು ವರವೈ ಬೇಡವು ಆ ಮುಕ್ತಿ7 ಸತ್ಯವ ನುಡಿವುದು ವೇದವು ಒಂದೆಡೆ ಮಿಥ್ಯವ ನುಡಿವುದು ಮತ್ತೊಂದೆಡೆಯೆನೆ ಯಾವುದು ಸಿದ್ಧಾಂತ ಮೊತ್ತವ ನೂಕುತ ಕಿಚ್ಚಡಿ ವೇದಕೆ ಮೊತ್ತವ ಕೊಳ್ಳುತ ಒಂದೇ ಅರ್ಥವ ಜೋಡಿಸಿ ಇದು ನೀತಿ8 ಬೌದ್ಧರು ಒಪ್ಪನು ಶ್ರುತಿಗಳ ದೇವನ ವೇದವ ಒಪ್ಪುವ ಮಾಯಾವಾದಿಯ ಬ್ರಹ್ಮನು ಸೊನ್ನೆಯಿಹ ವೈದಿಕ ವೇಷದ ಬೌದ್ಧನ ವಾದವೆ ಶೋಧಿಸಿ ನೋಡಲು ಮತ್ತೇನಿಲ್ಲವು ಚಿಂತಿಸೆ ಸರಿಯಿಷ್ಠೆ9 ತರತಮ ಬಹುವಿಧ ಭೋಗವ ಮುಕ್ತಿಲಿ ಇರುವುದು ಸಿದ್ಧವು ಶೃತಿಗಳ ನಂಬಲು ಜೀವರ ಭಿನ್ನತೆಯು ಸ್ಥಿರವೇ ಆಯಿತು ಇದರಿಂ ಮುಕ್ತಲಿ ಪರಿ ಬಗೆತಾ ವಿದಿತವೆ ಜಗದಲಿ ಭೇದವೆ ಸರ್ವತ್ರ10 ನಾಸ್ತಿಕ ವಾದವ ತಳ್ಳಿರಿ ಆಚೆಗೆ ನಾಸ್ತಿಕ ಬಂದನೆ ತಂದೆಯು ಇಲ್ಲದೆ ಕಾರ್ಯವು ಜಗವಿರಲು ಆತನು ನೊಡಿಹ ಜ್ಞಾನಿಗಳಿಲ್ಲವೆ ಪೊಗಳವೆ ಗೋತತಿಯು11 ಪ್ರಕೃತಿ ವಿಕಾರದ ಜಗವಿದು ವಿದಿತವೆ ವಿಕಲ ವಿಶೇಷದ ಜೀವನು ಹಾಗೆಯೆ ಉಭಯರ ಆಳುವನು ವಿಕಲ ವಿವರ್ಜಿತ ಸಕಲ ಗುಣಾರ್ಣವ ಸಕಲ ನಿಯಾಮಕ ಸರ್ವ ಸಮರ್ಥನು ಇರಲೇ ಬೇಕಷ್ಟೆ12 ನಿತ್ಯವು ಈತ್ರಯ ಸಿದ್ಧವು ಆದರೆ ನಿತ್ಯ ಪರಸ್ಪರ ಸಂಬಂಧ ತ್ರಯ ಜ್ಞಾನವೆ ಪುರುಷಾರ್ಥ ಉತ್ತಮ ನೊಬ್ಬನು ಅಧಮರು ಇಬ್ಬರು ಮತ್ತಿವರಲಿ ಹಾಗಧಮನು ಜೀವನು ಚೇತನ ಪ್ರಕೃತಿ ವರ13 ಸರ್ವ ಸ್ವತಂತನು ಒಬ್ಬನೆ ಇರದಿರೆ ಸರ್ವಾ ಭಾಸವೆ ಜಗವಿದು ಆಹುದು ಪ್ರಭು ದ್ವಯ ಕೂಡುವುದೆ ಸರ್ವಗ ಶಾಶ್ವತ ಪೂರ್ಣಾ ನಂದನು ಸರ್ವ ವಿಚಿತ್ರನು ಮುಕ್ತಿದನಿರದಿರೆ ಪ್ರಭು ಅವನೆಂತಾಹ14 ಶುರುಕೊನೆ ಮಧ್ಯವು ಇದ್ದ ದೇವಗೆ ಬರುವನೆ ಹೊಸ ಹೊಸ ದೇವನು ಪ್ರತಿಪ್ರತಿ ಕಲ್ಪದಿ ಯೋಚಿಸಿರಿ ಇರದಿರೆ ಸಕಲೈಶ್ವರ್ಯವು ಆತಗೆ ತರುವನು ನಂದದ ಸೃಷ್ಠಿಯ ಹೇಗವ ವರಸಮರಿಲ್ಲವಗೆ15 ಸುಳ್ಳಿರೆ ಜಗವಿದು ಪಾಲಿಪ ದೊರೆಯದ ಕಳ್ಳನೆ ಅಲ್ಲವೆ ಅಷ್ಠಕರ್ತುತ್ವವು ಕೂಡುವ ದ್ಹೇಗಿನ್ನು ಎಲ್ಲಾ ಜಗವಿದು ನಿತ್ಯಾ ನಿತ್ಯವು ಎಲ್ಲಾ ಸತ್ಯವೆ ಶ್ರುತಿಗಳ ನುಡಿಗಳು ಭೃತ್ಯರು ಜೀವಗಣ16 ನಿತ್ಯವು ಪ್ರಕೃತಿಯು ಜೀವರು ಈಶನು ಸತ್ಯವು ಇದುಯೆನೆ ಪಂಚಸುಭೇದವು ನಿತ್ಯವೆ ಎಲ್ಲೆಲ್ಲು ನಿತ್ಯ ಸುಖಂಗಳ ಬಯಸುವ ನಮಗವು ಹತ್ತವು ಕಾರಣ ಸರ್ವಸ್ವತಂತ್ರನು ದೇವನೆ ಸತ್ಯವಿದು17 ಚೇತನ ಪ್ರಕೃತಿಯೆ ಲಕ್ಷ್ಮಿಯು ತಿಳಿವುದು ಆತನ ರಾಣಿಯು ನಿತ್ಯಸುಮುಕ್ತಳು ನಿತ್ಯಾವಿಯೋಗಿನಿಯು ಚೇತನ ನಿಚಯದ ಚೇತನ ಹರಿ ಇಹ ಆತನೆ ದೊರೆ ಜಗ ಜಂಗಮ ಸ್ಥಾವರ ಸತ್ತಾದಾಯಕನು 18 ದೋಷ ವಿದೂರ ಅಶೇಷ ಗುಣಾರ್ಣವ ದಾಸ ಪೋಷನಿಜ ಮುಕ್ತಿದ ನಿರದಿರೆ ಭಜಿಸುವದೇಕವನ ಶ್ರೀಶನು ಬಿಡೆ ಜಡ ಚೇತನ ಚೇಷ್ಠೆಯು ನಿಹ ಉಲ್ಲಾಸದಿ ಭಜಿಸುವುದು 19 ಪರಿಮಿತ ಶಕ್ತನು ದೇವನು ಇದ್ದರೆ ಪರಿಮಿತ ಜೀವರ ತೆರವೇ ಆಹನು ಕಾರಣ ನಿಸ್ಸೀಮ ಹರಿಗುಣವಗಣಿತ ಸಿಗ ಸಾಕಲ್ಯದಿ ನಿರುಪಮ ಸುಖಜ್ಞಾನಾತ್ಮಕ ವಿಭುವರ ಅನಾದಿ ಸಿದ್ಧವಿದು 20 ಪ್ರಾಕೃತ ಗುಣಗಣ ವರ್ಜಿತ ದೇವನ ಜ್ಞಾನ ಸುದೃಷ್ಠಿಗೆ ಗೋಚರನು ಸ್ವೀಕೃತ ನಾದರೆ ಜೀವನು ಹರಿಯಿಂ ತಾಕಿಸಿ ದೃಷ್ಠಿಗೆ ತನ್ನನೆ ತೋರುವ ಭಕ್ತರ ಬಾಂಧವನು 21 ತರತಮ ಜ್ಞಾನದಿ ಗುಣ ಉತ್ಕರ್ಷವು ಬರುವುದು ಕಾರಣ ತಿಳಿಯುತ ಹರಿಪರ ಮೋಚ್ಛನು ಹೌದೆನ್ನಿ ಅರಿವುದು ಅತಿಪರಿ ಪಕ್ವದ ಭಕ್ತಿಯ ಮಾಧವ ಮೆಚ್ಚುವನು22 ವೇದಗಳಿಂದಲೆ ದೇವನು ವ್ಯಕ್ತನು ವೇದಗಳಿಂದಲೆ ಧರ್ಮಾಧರ್ಮವಿ ವೇಕವು ಸರಿಯಷÉ್ಠ ವೇದ ನಿಜಾರ್ಥವೆ ಸಚ್ಛಾಸ್ತ್ರಂಗಳು ಮೋದವೆ ದೊರಕದು ಬಿಟ್ಟರೆ ಇವುಗಳ ಸಾದರ ಭಜಿಸುವುದು23 ಬಿಂಬನು ಹರಿ ಪ್ರತಿ ಬಿಂಬನು ಜೀವನು ಬಿಂಬಾಧೀನವು ಪ್ರತಿ ಬಿಂಬನ ಚೇಷ್ಠೆಗಳೆಂತರಿತು ಉಂಬುತ ಮುದದಿಂ ಸುಖದುಃಖಂಗಳ ಬಿಂಬಕ್ರಿಯೆಯೆನುಸಂಧಾನವ ಗುರುವಿಂದರಿತು ಸಮರ್ಪಿಸಿ24 ಮೆಚ್ಚುಲು ಮಾಧವದಾವುದಸಾಧ್ಯವು ಅಚ್ಚುತನೊಲಿಮೆಗೆ ಹೆಚ್ಚಿದುದೇನಿದೆ ಕೊಚ್ಚುತಕಲಿ ಸೊಂಕು ತಚ್ಛಭಿಮಾನ ಫಲೇಚ್ಛೆಯ ತ್ಯಜಿಸುತ ಕಚ್ಛಪ ನೊಲಿಮೆಗೆ ವಿಧಿಯ ನಿಷೇಧವ ಮರೆಯದೆ ಗೈಯುತಲಿ25 ಪರ ಮೋಚ್ಚನು ವರಸಮರಿಲ್ಲವು ಸಿರಿ ವರ ವಿಧಿಪಿತ ಸೃಷ್ಠ್ಯಾದ್ಯಷ್ಠಸು ಕರ್ತನು ವಿಭುವೆಂದು ನಿರುಪಮ ನಿಖಿಳಾಗಮ ಪ್ರತಿ ಪಾದ್ಯನು ಸ್ವರತ ಸ್ವತಂತ್ರನು ಪೂರ್ಣಾನಂದನು ಎನ್ನುತ ಸಾರುತಲಿ26 ಸಾಮನು ಸರ್ವರ ಬಿಂಬನು ಸರ್ವಸು ನಾಮನು ಸರ್ವಾಧಾರನು ಜಡಜಂಗಮ ವಿಲಕ್ಷಣನು ಭೂಮನು ಭಕ್ತ ಪ್ರೇಮಿಯು ಸದ್ಗುಣ ಧಾಮನು ಪೂರ್ಣನು ನಿಜ ಸುಖ ಮುಕ್ತಿದನೆನ್ನುತ ಸಾರುತಲಿ27 ವಿಧಿ ಪರಿಸರ ವಿಪಶಿವ ಪ್ರಮುಖರು ಪರಿವಾರವು ನಿರವದ್ಯನು ಮುಕ್ತಾ ಮುಕ್ತರ ನಾಯಕನು ಉರುಗಾಯನ ಜಗದೊಳ ಹೊರವ್ಯಾಪ್ತನು ಪರಿಮರ ಸ್ವಗತ ಭೇದ ವಿವರ್ಜಿತನೆಂಬುದ ಸಾರುತಲಿ28 ತರತಮ ಪಂಚಸುಭೇದವು ನಿತ್ಯವು ನಿರುತದಲುಂಬುವ ಸಾರವೆ ದುಃಖ ನಿರ್ಲೇಪನು ಅದ್ಭುತನು ಅರಿಯರು ಯಾರೂ ಇವನೇ ವಲಿಯದೆ ಪುರುಷೋತ್ತುಮ ಸಾಕಲ್ಯದವಾಚ್ಯನು ಎಂದು ಡಂಗುರ ಹೊಡೆಯುತ 29 ಗುರುವಿನ ದ್ವಾರವೆ ಹರಿತಾ ವಲಿಯುವ ಗುರುವೆನೆ ಮುಖ್ಯದಿ ಮುಖ್ಯ ಪ್ರಾಣನೆ ಸರಿಸಿರಿ ಯೆಂತೆಂದು ಗುರುಗಳು ಹಿರಿಯರು ಎಲ್ಲಾ ಕ್ರಮದಲಿ ಮಧ್ವರಿಗೊಂದಿಸಿ ಮುದದಿ 30 ಅನುಭವವಿಲ್ಲದ ಜ್ಞಾನವು ವಣವಣ ಸಾಧನೆ ಇದು ಖರೆಯ ಚಿನುಮಯ ನೊಲಿಸಲ್ ಮನೆಧನ ಬೇಡವು ತನುಮನೆ ವಿಷಯಗಳಿಂದಲೆ ಪೂಜಿಪ ಕ್ರಮದಿಂಯಜಿಸುತ 31 ಕಲಿಯುಗವಿದು ವರ ಸುಲಭದಿ ಸಾಧನೆ ವಲಿಯುವ ಬೇಗನೆ ನಾಮ ಸ್ಮರಣೆಗೆ ಭಜಿಸಿರಿ ಹರಿನಾಮ ವಳದಾರಿಯು ಸರಿ ಕ್ರಮದಿಂ ಪಾಡಲು ಮುಳುಗುತ ಭಕ್ತಿಯ ಕಡಲೊಳ್ ನಿಜಹರಿ ದಾಸರು ದೀಕ್ಷೆಯಲಿ32 ಕವಿಗುರು ರಾಜರ ಚರಣದಿ ಬಾಗುತ ಪವನ ಮತಾಂಬುಧಿ ಸೋಮನು ಜಯಮುನಿ ಹೃದಯಗ ವಾಯುವಲಿ ಅವಿರತ ನಲಿಯುವ ಶ್ರೀ ಕೃಷ್ಣವಿಠಲನು ತವಕದಿ ವಲಿಯುವ ಗ್ರಹಿಸಲ್ ಈ ಪದ ಜಯ ಜಯವೆನ್ನುತ33
--------------
ಕೃಷ್ಣವಿಠಲದಾಸರು
ತಿಳಿವುದನ್ನಮಯ ಕೋಶಗಳನು ಇಳೆಯೊಳಚ್ಯುತನ ದಾಸರು ನಿತ್ಯದಲಿ ಪ ಮೇದಿನಿ ಸಲಿಲನ್ನಮಯ ವಿಹಾಯಸ ವಾಯು ಮುಖ್ಯಪ್ರಾಣ ಮನೋಮಯಕೆ ಆದುದು ಮನ ಅಹಂಕಾರ ವಿಜ್ಞಾನಮಯ ವೇದ್ಯ ತತ್ತ್ವಾನಂದ ಮಯಕೆ ಅವ್ಯಕ್ತವನು1 ಕೃತಿ ಸಂಕರು ವಾಸುದೇವ ಮಾಯಾ ಘನ ಸುಲಕ್ಷಣ ಲಕ್ಷ್ಮೀ ನಾರಾಯಣರು ಮುಖ್ಯ ರೆನಿಸುವರು ಪಂಚಕೋಶದಲಿ ಎಂದೆಂದೂ 2 ಪ್ರಾಣಾಪಾನ ವ್ಯಾನೋದಾನ ಸಮಾನ ಪಂ ಚಾನಿಲರೂ ಅಲ್ಲಿಹರು ಮತ್ತು ದಾನವಾದಿಗಳಿಹರು ಭೂತ ಮಾತ್ರ ಕರ್ಮ ಜ್ಞಾನೇಂದ್ರಿಯಗಳು ತನ್ನಿಷ್ಟವಾಗಿಹವಲ್ಲಿ 3 ಅಬುಜ ಭವಾಂಡ ಪಿಂಡಾಂಡಕ್ಕೆ ಈ ತತ್ತ್ವ ಒಂಬತ್ತು ಆವರಣವೆಂದೆನಿಪವು ಕಂಬುಪಾಣಿಯ ರೂಪ ಲಕ್ಷ್ಮೀ ರೂಪವು ಪಂಚ ಇಂಬುಗೊಂಡಿಹವು ಚಿಂತಿಪುದು ಭೂಸುರರು 4 ಭೂಶನೇಶ್ವರ ವರುಣ ಸುರನದಿಗಳನ್ನಮಯ ಕೋಶದೊಳಗಿರುತಿಹರು ಪ್ರಾಣಮಯದಿ ಮೇಷವಾಹನ ಪ್ರವಹವಾಯು ಪ್ರಾವಹಿ ಮಹಾ ಕಾಶಾಧಿಪತಿ ಗಣಪರಧಿಪರೆಂದೆನಿಸುವರು 5 ಕಾಮೇಂದ್ರ ಶಿವ ರತೀಂದ್ರಾಣಿ ಪಾರ್ವತಿ ಮುಖ್ಯ ಈ ಮನೋಮಯಕಧಿಪರೆನಿಸುತಿಹರು ತಾಮರಸಭವ ವಾಯು ವಾಣಿ ಭಾರತಿ ಮುಖ್ಯ ಸ್ವಾಮಿಗಳೆನಿಸುವರು ವಿಜ್ಞಾನಕೋಶದಲಿ 6 ಆನಂದಮಯ ಕೋಶಕಭಿಮಾನಿ ಶ್ರೀನಿವಾಸನು ಪಂಚರೂಪಾತ್ಮಕಾ ಈ ನಿರ್ಜರರೊಳಿದ್ದು ತತ್ತದಾಹ್ವಯನಾಗಿ ಪಾನೀಯಜಾಂಡದೊಳಿಪ್ಪ ಕರುಣೀ 7 ಪೃಥಿವಿ ಗಂಧ ಘ್ರಾಣೋಪಸ್ಥಪ್ಪುರ ಸಂಜೀವಾ ಪ್ರಥಮ ಕೋಶದಿ ವಾಯು ಅಷ್ಟತತ್ತ್ವ ದ್ವಿತೀಯ ಕೋಶದಿ ತೇಜರೂಪ ಚಕ್ಷುಪಾದ ಪ್ರಥಮಾಂಗ ಸ್ಪರ್ಶ ತ್ವಕು ಪಾಣಿ ತತ್ವಗಳಿಹವು 8 ಆಕಾಶ ಶಬ್ದ ಶ್ರೋತ್ರವು ಪಿಂತೆ ಪೇಳ್ದಷ್ಟು ವಾಕು ಪ್ರಾಣಾದಿ ತತ್ತ್ವ ದ್ವಾದಶ ಕಾಮ ಶ್ರೀ ಕಂಠ ತತ್ವ ಮನ ಮನೋಮಯದಿ ವಿಜ್ಞಾನ ಕಮಲ ಭವ ನಂದ ಮಯತೆ ಅವ್ಯಕ್ತವನು 9 ಸ್ಥೂಲ ದೇಹಕೆ ಇನಿತು ಲಿಂಗ ತನುವಿನಲಿ ತತ್ತ ್ವ ಜಾಲ ಸೂಕ್ಷ್ಮಗಳಿಹವು ಗುಣ ಭೇದದಿ ಪೇಳುವೆನು ಅವ್ಯಕ್ತ ಮಹದಹಂಕಾರ ಮನ ಮೇಳೈಸಿಹವು ಸತ್ವಪರಿ ಭೇದದಲಿ 10 ರಜೋಪರಿಚ್ಛೇದದಲಿ ಜ್ಞಾನ ಕರ್ಮೇಂದ್ರಿಯವು ರಜನೀ ಗುಣದ ಮಾತ್ರ ಭೂತ ಇಹವು ಯಜಿಸು ಈ ತತ್ತ್ವ ಮಾನಿ ದಿವಿಜರನರಿತು ವೃಜಿನವರ್ಜಿತನಾಗಿ ಸುಪದವೈದುವಿ ಮನುಜ11 ಭೂಮ್ಯಭ್ರನ್ನ ಮಯನಳನೀಳಾಗಸ ಪ್ರಾಣ ಮಯ ಮ ನೋಮಯ ಮಹಾ ಅವ್ಯಕ್ತ ಸಮ್ಯಗಾನಂದ ವಿಜ್ಞಾನಮಯನೆನಿಸಿ ಗುರು ಸಮೀರನೊಳಗಿದ್ದು ಪಾಲಿಸುವ ಜಗವಾ 12 ಪಂಚಕೋಶದ ವಿವರ ತಿಳಿದ ಮಹಾತ್ಮರಿಗೆ ಕಿಂಚಿತಾದರು ದೋಷ ಬರಲರಿಯದು ಮಾರ್ಗಣ ಪಿತ ಜಗನ್ನಾಥ ವಿಠಲನು ಸಂಚತಾಗಾಮಿ ಕರ್ಮಗಳ ಫಲ ಬಿಡಿಸುವನು 13
--------------
ಜಗನ್ನಾಥದಾಸರು
ತೆಪ್ಪದುತ್ಸವ ನಿನಗೆ ಏನು ಹಿತವೋ ಅಪ್ಪ ಹನುಮಯ್ಯ ನಿನ್ನಾಟಕೇನೆಂತೆಂಬೆ ಪ. ರಾಮ ಉಂಗುರ ಸತಿಗೆ ಕಂಡಿತ್ತು ಬಾರೆನಲು ನೇಮದಿಂದಲಿ ನೂರು ಯೋಜನುದಧಿ ಪ್ರೇಮದಿಂದಲಿ ಹಾರಿ ಕುರುಹು ತಂದಾ ಮಹಿಮ ಈ ಮಡುವಿನ ಜಲದಿ ಈ ಆಟವಾಡುವುದು 1 ಕುರುಕುಲಾರ್ಣವವೆಂಬ ಘನ ಶತ್ರು ಸೈನ್ಯವನು ಒರಸಿ ಕ್ಷಣದಲಿ ಭುಜಬಲದ ಶೌರ್ಯದಲಿ ಧುರವೆಂಬ ಶರಧಿಯನು ಲೀಲೆಯಲಿ ದಾಟಿದಗೆ ವರ ಸರೋವರದ ಈ ಜಲದಾಟವಾಡುವುದು 2 ಅನ್ಯ ದುರ್ಮತ ಮಹಾರ್ಣವನು ಶೋಷಿಸುತ ಬಹು ಉನ್ನತದ ವೇದ ಶಾಸ್ತ್ರಾರ್ಣವದಲಿ ಚೆನ್ನಾಗಿ ಈಜಿ ಶ್ರೀ ಹರಿಚರಣ ದಡ ಸೇರ್ದ ಘನ್ನ ಮಹಿಮನಿಗೆ ಈ ಚಿನ್ನ ಮಡುವೀಜುವುದು 3 ಮುಕ್ತಿಯೊಗ್ಯರ ಕರ್ಮಶರಧಿಯನು ದಾಟಿಸುತ ಮುಕ್ತರಾಶ್ರನ ಪುರ ಸೇರಿಸುವನೆ ಅತ್ಯಂತ ಅಲ್ಪ ಈ ಜಲದಾಟವಾಡಿದರೆ ಭಕ್ತರಾದಂತ ದಾಸರು ನಗರೆ ಹನುಮ 4 ವರ ಕದರುಂಡಲಿಯಲ್ಲಿ ನೆಲಸಿರುವ ಭಕ್ತರಿಗೆ ಮರುಳುಗೊಳಿಸುತ ಮಹಾ ಮಹಿಮನೆನಿಸಿ ಪರಿಪರಿಯ ಉತ್ಸವಪಡುವೆ ಶ್ರೀ ಕಾಂತೇಶ ಸಿರಿರಮಣ ಗೋಪಾಲಕೃಷ್ಣವಿಠ್ಠಲನ ದಾಸ 5
--------------
ಅಂಬಾಬಾಯಿ