ಒಟ್ಟು 73 ಕಡೆಗಳಲ್ಲಿ , 31 ದಾಸರು , 71 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ನಮಿಸುವೇಂ ಜಗದಂಬೆ ನಿನ್ನಂ ಮುದದಿಂ ದೃಢದಿಂ ಮನವಾರೆ ನಾಂ ಪ ಉದಯಾದ್ರಿಯೊಳುದಿಸಿದ ನಾರೈ ಮನಿದೆ ಬಂದೇಂ ಬಳಿಸಂದೇಂ ಪದುಳದಿ ನಿಂದೇಂ ಅ.ಪ ಮೂಡಿದ ಕತ್ತಲೆಯೋಡಿÉಸಿ ಭರದಿಂ ನೋಡೆಚಿರಂ, ನಾಡೆಜಗಂ ಬೆಳಗಲಿ ಬೆಳಕಿಂ 1 ಭಾಮಿನಿಯರು ಸದ್ಭಾವನೆಯಿಂದಲಿ ದೇವಿಯ ಸಂಸೇವಿಸಿವೊಲ್ ತಾ ವರವಂ2 ಶೇಷಗಿರೀಶನ ದಾಸರು ನಾವೆನೆ ಭಾಷಾನಿಧಿಯಂ ಬಲಗೊಂಡಾಂ ಬೇಡುತ ನಲವಿಂ3
--------------
ನಂಜನಗೂಡು ತಿರುಮಲಾಂಬಾ
ನೀ ಯನ್ನ ಸಲಹುತಿಹೆ ಜನುಮ ಜನುಮಗಳಲ್ಲಿ| ದಾನವಾರಿಯೆ ಉರಗಶಯನ ಸಿರಿರಂಗರೇಯಾ ಪ ಮುದದಿಂದ ತನ್ನ ಮಕ್ಕಳನು ತಾ ನೆನಿಯಲಿಕೆ| ಅದರಿಂದ ಪದಳಿಸುವ ಕಮಠದಂತೆ| ಉದರದಲಿ ನವಮಾಸ ವಾಸಾಗಿ ಬೆಳೆಯುತಿರೆ| ಪದುನಾಭನೆ ನಿಮ್ಮದಯದಿ ವರ್ಧಿಸಿದೆನಯ್ಯಾ 1 ಜಲಧಿಯೊಳಗ ತನ್ನ ನೋಟದಿ ನೋಡಲಾಕ್ಷಣ ದಿ| ಎಳೆಮೀನಗಳು ಬಹಳ ಸುಖಿಸುವಂತೆ| ಇಳೆಯೊಳಗ ಜನಿಸಿದ ಬಳಿಕ ಕರುಣ ನೋಟದಾ| ಒಲುಮಿಂದ ಸಕಲ ಸೌಖ್ಯದಲಿರುತಿಹೆನಯ್ಯಾ 2 ನಂದನನು ಪೋಷಿಸುವ ಮಾತೆಯಂದದದಿ ದುರಿತ| ಬಂದಡರೆ ಅಡಿಗಡಿಗೆ ಪರಿಹರಿಸುತಾ| ಕುಂದ ದಾವಾಗ ರಕ್ಷಿಪೆ ತಂದೆ ಮಹಿಪತಿ ಕಂದ ನೊಡಿಯನೇ ಚಿದಾನಂದ ಮೂರುತಿ ದೇವಾ3
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ನೀನೆ ನಾನೆಂಬುವ ಮಾನವಾಧಮನನ್ನು ಏನು ಮಾಡಲು ಬೇಕು ನಾನರಿಯೆನೊ ರಂಗ ಪ ದಾನವಾರಿಯೆ ಎನ್ನನೇನೆಂದರೂ ಅನಲಿ ನಾ ನಿನ್ನ ನಿಂದಿಸುವರಾನನವ ನೋಡೆನೋಅ.ಪ. ಆನೆಕಾಲಿಗೆ ಕಟ್ಟಿ ಬೀದಿಯೊಳೆಳೆಸಲೆ ಕಾನನಕೆ ಕೊಂಡೊಯ್ದು ಕೈಕಾಲು ಕಡಿಸಲೆ ಮೀನು ಮೊಸಳೆಗಳಿರುವ ಮಡುವೀಲಿ ನೂಕಿಸಲೆ ನೇಣುಗಳಿಂದಲಿ ಬಿಗಿದು ಶೂಲಕೇರಿಸಲೆ 1 ಜೀವದೊರಸೆ ಅವನ ಹೂಳಿಸಿರೆಂದ್ಹೇಳಲೆ ಹಾವುಗಳ ಹಿಂಡಿನೊಳು ನೂಕಿರೆಂದ್ಹೇಳಲೆ ನೋವು ಬಹಳಾಗಲು ಸೂಜಿಗಳಿಂದಿರಿಸಲೆ ಪಾವಕನೊಳು ಕಾಲ್ಕಟ್ಟಿ ಎತ್ತಿ ಹಾಕಿಸಲೇ 2 ಗಿರಿಯ ತುದಿಯಲಿ ನಿಲಿಸಿ ಜರಿಯೊಳಗೆ ನೂಕಿಸಲೆ ಭರದಿ ಕಣ್ಕಟ್ಟಿ ಕಾದತೈಲದೊಳಿಡಿಸಲೆ ಸಿರಿಹರಿಯೆ ಪೇಳೆಂದು ರಂಗೇಶವಿಠಲನೊಳು ತರಣಿನಂದನ ತಾನು ಬಿನ್ನೈಸಿದನಂದು 3
--------------
ರಂಗೇಶವಿಠಲದಾಸರು
ನೆನೆವೆನನುದಿನ ನೀಲನೀರದವರ್ಣನ ಗುಣರನ್ನನಮುನಿಜನಪ್ರಿಯ ಮುದ್ದು ಉಡುಪಿನ ರಂಗನ ದಯಾಪಾಂಗನ ಪ. ದೇವಕೀ ಜಠÀರೋದಯಾಂಬುಧಿಚಂದ್ರನ ಸುಖಸಾಂದ್ರನಗೋವ್ರಜಕೆ ಘನ ಯಮುನೆಯನು ದಾಟಿ ಬಂದನ ಅಲ್ಲಿ ನಿಂದನಮಾವ ಕಳುಹಿದ ಮಾಯಶಠವಿಯ ಕೊಂದನ ಚಿದಾನಂದನ ದೇವರಿಪು ದೈತ್ಯೇಂದ್ರ ಶಕಟನ ಒದ್ದನ ಶ್ರುತಿಸಿದ್ಧನ 1 ಗೋಕುಲದ ಗೋಪಿಯರ ಸಂಚಿತ್ತ ಚೋರನ ಬಹು ಧೀರನ ಅ-ನೇಕ ನಾರಿಯರ್ವಸನವನು ಕದ್ದೊಯ್ದನ ಪುರಗಾಯ್ದನನಾಕಿಯರ ನೋಯಿಪಧೇನುಕ ವತ್ಸವಿಘಾತ ವಿಖ್ಯಾತನಕಾಕುಮತಿ ಕಾಳಿಂಗನ ಫಣ ತುಳಿದನ ಆವಗೊಲಿದನ 2 ಕರ ಪಿಡಿದನ ಸುಧೆಗುಡಿದನಬಾಲ ಭಾಮೆಯರೊಡನೆ ಜಲಕ್ರೀಡೆಗಿಳಿದನ ಅಲ್ಲಿ ನಲಿದನಲೀಲೆಯಲಿ ಲಲನೆಯರಿಗಿಷ್ಟವ ಕೊಟ್ಟನ ಸಂತುಷ್ಟನ 3 ಕ್ರೂರ ಬಕ ಕೇಶಿಗಳನೆಲ್ಲ ಸೀಳ್ದನ ಸುರರಾಳ್ದನ ಅಕ್ರೂರ ಕರೆಯಲು ಹರುಷದಿಂದಲಿ ಬಂದನ ಸುರವಂದ್ಯನಸಾರಿ ಕುಬ್ಜೆಗೆ ಭೂರಿಸಂತಸವಿತ್ತನ ಅತಿಶಕ್ತನವಾರಣವ ಒದ್ದು ಕೆಡಹಿದಾಪ್ರತಿಮಲ್ಲನ ಅತಿಚೆಲ್ವನ4 ಸುಲಭದಿಂದಲಿ ಶಿವನ ಧನುವನು ಮುರಿದನ ನೆರೆಮೆರೆದನಮಲೆತÀ ಮಲ್ಲರ ಮಡುಹಿರಂಗದಿ ನಿಂತನ ಜಯವಂತನಖಳಕುಲಾಗ್ರಣಿ ಕಂಸನೆಂಬನ ಹೊಡೆದನ ಹುಡಿಗೆಡೆದನಬಲದಿ ತಾಯಿತಂದೆ ಬಂಧನ ಕಡಿದನ ಕೀರ್ತಿ ಪಡೆದನ 5 ಭುವನ ಪಟ್ಟವನುಗ್ರಸೇನಗೆ ಕೊಟ್ಟನ ಅತಿ ದಿಟ್ಟನಯುವತಿಯರಿಗುದ್ಧವನ ಕಳುಹಿದ ಜಾಣನ ಸುಪ್ರವೀಣನವಿವಿಧ ವಿದ್ಯಾ ಕಲೆಗಳನ್ನೆಲ್ಲ ಅರಿತನ ಶುಭಚರಿತನ ಜವನ ಶಿಕ್ಷಿಸಿ ದ್ವಿಜನ ಕಂದನ ತಂದನ ಆನಂದನ 6 ಕುಮತಿ ಖಳ ಮಾಗಧನ ಯುದ್ಧದಿ ಗೆದ್ದನ ಅನವದ್ಯನದ್ಯುಮಣಿಸಮ ದ್ವಾರಕೆಯ ರಚಿಸಿದುದಾರನ ಗಂಭೀರನಸುಮತಿ ಮುಚುಕುಂದನೊದ್ದ ಯವನನ ಸುಟ್ಟನ ಅತಿದಿಟ್ಟನವಿಮಲ ಸುಚರಿತ್ರಾಷ್ಟಮಹಿಷಿಯರಾಳ್ದನ ನೆರೆಬಾಳ್ದನ 7 ಮುರನರಕ ಮುಖ್ಯರನು ಚಕ್ರದಿ ತರಿದನ ಕರಿವರದನಸುರತರುವ ಸತಿಗಾಗಿ ತಂದ ಸಮರ್ಥನÀ ಜಗತ್ಕರ್ತನದುರುಳ ಶಿಶುಪಾಲಾದಿ ದೈತ್ಯ ಸಂಹಾರನ ಬಹು ಶೂರನಕುರುಕುಲಕೆ ಲಯವಿತ್ತ ಪಾಂಡವಪ್ರೀಯನ ಕವಿಗೇಯನ 8 ಸಂತತವೀ ಸಾರÀ ಕತೆಯನು ಕೇಳ್ವರ ನೆರೆ ಬಾಳ್ವರಕಂತುಪಿತ ಕಾರುಣ್ಯದಿಂದಲಿ ಹೊರೆವನು ಸುಖಗರೆವನುಇಂತು ಇಳೆಯ ಸುಜನರ ಸಲಹುವ ಕಾಂತನ ಸಿರಿವಂತನಪಂಥವುಳ್ಳ ಪ್ರಸನ್ನ ಹಯವದನ್ನನಮುನಿಮಾನ್ಯನ 9
--------------
ವಾದಿರಾಜ
ಪನ್ನಗ ನಗಾಧೀಶ ಅಗಣಿತ ಗುಣಾನಂದ ಚಿದ್ಘನ ಪರೇಶ ಪ. ಜಗದ ಜೀವರಿಗೆ ಬಗೆ ಬಗೆ ವೇಷವ ತೊಡಿಸಿ ಸೊಗಸಿನಿಂದಲಿ ನೋಡಿ ನಗುತಲಿಹೆಯೊ ತ್ರಿಗುಣಮಾನಿನಿಯೊಡನೆ ಹಗಲಿರುಳು ಕ್ರೀಡಿಸುತ ಮಿಗೆ ಹರುಷದಿಂದಿರುವ ಖಗವರಧ್ವಜ ಹರಿಯೆ 1 ನಾನಾವತಾರದಲಿ ನಂಬಿದ ಸುರಾದಿಗಳಿ- ಗಾನವಾರಿಧಿಯ ಸ್ನಾನ ಮಾಡಿಸುವಿ ದೀನತ್ವದಲಿ ನಿನ್ನ ಧ್ಯಾನವೇ ಗತಿಯೆಂದು ನಾನಿದಿರು ಬಂದೆರಗೆ ಮಾನಿಸದೆ ಮರುಳಾಗಿ 2 ಅಂತರಾತ್ಮಕನಾಗಿ ಚಿಂತನಾದಿಗಳ ಬಲ ವಂತದಲಿ ನೀನೆ ಮಾಡಿಸಿದ ಮೇಲೆನ್ನ ಇಂತು ಬಳಲಿಸುವ ದುರಂತ ಮಹಿಮನೆ ನಿನಗೆ ಕಂತು ಬ್ರಹ್ಮರ ಜನಕ 3 ನಾನು ನನ್ನದು ಎಂಬ ಮಾನವಿತ್ತದರಿಂದ ಈ ನಳಿನಜಾಂಡವದೊಳು ನಾನು ಸಿಲುಕಿಹೆನು ಮಾನಾಭಿಮಾನಿಗಳ ನೀನೀವುದರಿಂದ ದೀನತನ ಕಳದು ಸನ್ಮಾನ ಪಾಲಿಸು ದೇವ 4 ತಂದೆತಾಯಿಗಳು ನಿಜ ಬಂಧುಬಳಗಗಳೆಲ್ಲ ಒಂದೊಂದು ಜನ್ಮದಲಿ ಬ್ಯಾರೆಬ್ಯಾರಹರು ಎಂದೆಂದಿಗೂ ನೀನೆ ತಂದೆ ನಿನ್ನರಸಿ ತಾ- ಯ್ಯೆಂದು ತಿಳಿಹೆನು ಮುಚಕುಂದ ರಕ್ಷಕ ಸ್ವಾಮಿ 5
--------------
ತುಪಾಕಿ ವೆಂಕಟರಮಣಾಚಾರ್ಯ
ಪಾದ | ಭೃಂಗನು ಎನಿಸುವಡಿಂಗರಿಗನೆ ಧನ್ಯನೊ ಪ ಧೃತ :ಅಂಗಜನಪಿತ ಕಾ | ಳಿಂಗ ಮರ್ದನತುಂಗ ಮಹಿಮನಪಾಂಗ ಕರುಣನಡಿಂಗರಿಗೆ ಅಭಯಾಂಕ ಹಸ್ತನರಂಗನಂಘ್ರಿ ಸರೋಜ ಭೃಂಗನ ಅ.ಪ. ಮೇದಿನಿ | ಮೌನಿವರ ವರದೇಂದ್ರ ಯತಿಯಲಿ |ಸಾನು ರಾಗದಿ ಜ್ಞಾನವಾರ್ಜಸಿ | ಜ್ಞಾನ ನಿಧಿ ಎಂದೆನಿಸಿ ಮೆರೆದ 1 ವಿಜಯರ ನಿಂದೆಯಿಂದ | ಸಂದಿತು ರೋಗವುನಿಜತನು ತ್ಯಜಿಸುವಂತೇ ||ಅಜನ ನಿಜಪದ ಯೋಗ್ಯ ಪ್ರಾಣನು | ಬಿಜಯಗೆಯ್ಯುತನಿಜ ಸುಸ್ವಪ್ನದಿ |ವಿಜಯದಾಸರ ಪೂಜಿಸೆನ್ನಲು | ಭಜಿಸುತಲಿ ವರವನ್ನೆ ಪಡೆದ 2 ತ್ಯಾಗೀ ಭೋಗೀ ಶೀಲ | ವಿಜಯರ ಸೇವಕಭಾಗಣ್ಣಾರ್ಯರ ಸೇವಿಸೀ ||ಆಗಮಜ್ಞನ ನಾಲ್ದಶಾಯು | ಭಾಗ್ಯವನೆ ತಾಪಡೆದು ಚಂದ್ರಭಾಗದಲಿ ಮೀಯುತಿರೆ ಶಿರಿ | ಜಗದೀಶ ವಿಠಲಾಂಕ ಪಡೆದ 3 ಸ್ವಾದಿ ಸ್ಥಳಕೆ ಪೋಗಿ | ರಾಜರ ಆಜ್ಞೆಯ ಆದರದಲಿ ಕೊಳ್ಳುತಾ ||ಮೋದ ತೀರ್ಥರ ಮತವ ಸಾರುತ | ವೇದ ಶಾಸ್ತ್ರ ಸುಧಾದಿ ಗ್ರಂಥದಸ್ವಾದುರಸ ಪ್ರಾಕೃತದಿ ಬೋಧಿಸಿ | ಶ್ರೀ ಹರಿಕಥೆ ಸುಧೆಯ ಗರೆದ 4 ಲಕ್ಷ್ಯವಿಡುತ ಶುಕ್ಲ | ವರ್ಷವು ಸಿತವೆನ್ನಪಕ್ಷ ಭಾದ್ರ ಪದದೀ ||ದಕ್ಷಿಣಾಯನ ಶುದ್ಧನವಮಿಲಿ | ದೀಕ್ಷೆ ಪಿಡಿಯುತ ಆದಿವಾರದಿಪಕ್ಷಿವಹ ಗುರು ಗೋವಿಂದ ವಿಠಲನ | ಈಕ್ಷಿಸುತ ಭುವಿಯನ್ನೆ ತೊರೆದ 5
--------------
ಅಸೂರಿ ರಾಮಸ್ವಾಮಿಅಯ್ಯಂಗಾರ್
ಪಾರ್ವತೀದೇವಿಯ ಸ್ತುತಿ (ಮಂಗಳೂರು ಮಂಗಳಾದೇವಿ) ಮಹಾಮಾಯೆ ದಯದೋರೆಲೆ ತಾಯೆ ಪ. ಸದರದೊಳೆಬ್ಬಿಸುತಿದಿರಾದ ಮದನಾಂಬಾ ಮುದ ದಾಯಿ ಶುಭಪದದಾಯಿ 1 ದೇವತೆಗಳ ಸೇರಿರುವಾ ಮನೋಹರ ತನುವಾಗಿ ನಿಕರ ಮಹಿಷಾಸುರನಾ ಮೃಗಪತಿಗಮನಾ 2 ಖಂಡ್ಯಧಾರೆಯೊಳ್ದಿಂಡರಿದೂ ಖಂಡಿಸುತಾ ರಣ ಮಂಡಲದಿ ಬ್ರಹ್ಮಾಂಡ ನಿದಾನಿ 3 ತ್ರಿಗುಣಜಮಲವು ದಾನವಾರಿಗಳ ಮಾನಿಸಿ ದಿತಿಜರ ಹಾನಿಗೊಳಿಸುವದು ಹರಿಪರವು ಮಹಭರವು ಮನದಿರವೂ 4 ರಕ್ಷಿಸು ಪುರುಕರುಣಿ ಕ್ಷಮೆಯಿಂದಂ ಭರಣಿ ಖೂಳ ವೈರಿಗಳನೇಳದಂತೆ ಪಾತಾಳಕೆ ಕೆಡಹಿಸು ಮಮ ಜನನಿನೀಲ ಮೇಘ ನಿಭ ವೆಂಕಟರಾಜನ ಲೋಲಕಟಾಕ್ಷಸದಾಕರುಣಿ 5
--------------
ತುಪಾಕಿ ವೆಂಕಟರಮಣಾಚಾರ್ಯ
ಪಾಲಿಸೈ ಮುಕುಂದ ಗೋವಿಂದ ಆನಂದದಿಂದ ಪ. ಮಾರಜನಕನೆ ಕೋರಿ ನಿನ್ನೆಡೆ ಸಾರಿ ಬೇಡುವೆನೊ ಗಾರುಗೊಳಿಸದೆ ತೋರು ಕರುಣೆಯ ಮಾರಹರನುತ ವೀರರಾಘವ 1 ಭಾನುಕೋಟಿ ಸಮಾನ ಭಾಸುರ ಜಾನಕೀ ಮನೋಹರ ದಾನವಾಂತಕ ದೀನರಕ್ಷಕ ಮಾನನಿಧಿ ಪೊರೆ ಸುಜ್ಞಾನವಾರಿಧಿ 2 ಪೋಷ ಭವಭಯನಾಶನ ಕ್ಲೇಶಹರಣ ಶ್ರೀಕೇಶವಾಚ್ಚುತ ಲೇಸು ಬೇಡುವೆ (ನಾ) ಮೀಸಲಿರಿಸಿಹೆ 3
--------------
ನಂಜನಗೂಡು ತಿರುಮಲಾಂಬಾ
ಪ್ರಭು ಪಾಂಡುರಂಗ ವಿಠಲ | ಅಭಯಪ್ರದಾತಾ ಪ ಇಭವರದ ನೀನಾಗಿ | ಪೊರೆಯ ಬೇಕಿವನಾ ಅ.ಪ. ಮರ್ಮಗಳ ನರಿಯದಲೆ | ಕರ್ಮೂನುಭವದೊಳಗೆಪೇರ್ಮೆಯಲಿ ಸಿಲ್ಕಿ ಬಲು | ನೊಂದಿಹನೊ ಬಹಳಾಧರ್ಮಕೃದ್ಧರ್ಮಿ ಹರಿ | ಧರ್ಮಸೂಕ್ಷ್ಮವ ತಿಳಿಸಿನಿರ್ಮಮನ ಮಾಡಿವನ | ಕರ್ಮನಾಮಕನೇ 1 ಮಧ್ವರಾಯರ ಕರುಣ | ಬದ್ಧ ನಿರುವನು ಈತಸಿದ್ದಾಂತ ತತ್ವಗಳು | ಬುದ್ದಿಗೇ ನಿಲುಕೀಅದ್ವಯನು ನೀನೆಂಬ | ಶುದ್ಧಬುದ್ಧಿಯನಿತ್ತುಉದ್ಧಾರಮಾಡೊ ಹರಿ | ಕೃದ್ಧಖಳಹಾರೀ 2 ನಾನು ನನ್ನದು ಎಂಬ | ಹೀನಮತಿಯನು ಕಳೆದುನೀನು ನೀನೇ ಎಂಬ | ಸುಜ್ಞಾನವಿತ್ತುದಾನವಾರಣ್ಯ ಕೃ | ಶಾನು ಶ್ರೀ ಹರಿಯೇಸಾನುರಾಗದಿ ಪೊರೆಯೊ | ದೀನವತ್ಸಲ್ಲಾ 3 ಹರಿ ನಾಮ ವೆಂತೆಂಬೊ | ವಜ್ರಕವಚವತೊಡಿಸಿದುರಿತಾಳಿ ಅಟ್ಟುಳಿಯ | ದೂರಗೈ ಹರಿಯೇಸರುವ ಕಾರ್ಯಗಳಲ್ಲಿ | ಹರಿಯು ಓತಪ್ರೋತನಿರುವ ನೆಂಬುದ ತಿಳಿಸಿ | ಪೊರೆಯ ಬೇಕಿವನಾ 4 ಪಾದನಾತ್ಮಕನೆನಸಿ | ಪಾವ ಮಾನಿಯ ಪ್ರೀಯಧೀವರನೆ ಶ್ರೀವರನೆ | ಕಾವ ಕರುಣಾಳುಗೋವುಗಳ ಕಾವ ಗುರು | ಗೋವಿಂದ ವಿಠಲನೆನೀವೊಲಿಯದಿನ್ನಿಲ್ಲ | ದೇವ ದೇವೇಶಾ 5
--------------
ಗುರುಗೋವಿಂದವಿಠಲರು
ಬಾರೋ ಮನೆಗೆ ಗೋವಿಂದ ನಿನ್ನಂಘ್ರಿ ಕಮಲವತೋರೋ ಎನಗೆ ಮುಕುಂದ ನಲಿದಾಡು ಮನದಲಿಮಾರಪಿತ ಆನಂದನಂದನ್ನ ಕಂದ ಪ ಭವ ಘೋರ ನಾಶನವಾರಿಜಾಸನ ವಂದ್ಯ ನೀರಜಸಾರ ಸದ್ಗುಣ ಹೇ ರÀಮಾಪತೆ ಅ.ಪ. ನೋಡೋ ದಯದಿಂದೆನ್ನ-ಕರಪದುಮ ಶಿರದಲಿನೀಡೋ ಭಕ್ತಪ್ರಸನ್ನ-ನಲಿದಾಡೊ ಮನದಲಿಬೇಡಿಕೊಂಬೆನೊ ನಿನ್ನ-ಆನಂದ ಘನ್ನಮಾಡದಿರು ಅನುಮಾನವನು ಕೊಂ -ಡಾಡುವೆನು ತವ ಪಾದಮಹಿಮೆಗಳನುಜೋಡಿಸುವೆ ಕರಗಳನು ಚರಣಕೆಕೂಡಿಸೊ ತವ ದಾಸಜನರೊಳು 1 ಹೇಸಿ ವಿಷಯಗಳಲ್ಲಿ-ತೊಳಲ್ಯಾಡಿ ನಾ ಬಲುಕ್ಲೇಶ ಪಡುವುದು ಬಲ್ಲಿ-ಘನಯುವತಿಯರ ಸುಖಲೇಸು ಎಂಬುದನ್ನು ಕೊಲ್ಲಿ-ಆಸೆ ಬಿಡಿಸಿಲ್ಲಿಏಸು ಜನುಮದ ದೋಷದಿಂದಲಿಈಸುವೆನು ಇದರೊಳಗೆ-ಇಂದಿಗೆಮೋಸವಾಯಿತು ಆದುದಾಗಲಿಶ್ರೀಶ ನೀ ಕೈಪಿಡಿದು ರಕ್ಷಿಸು 2 ನೀನೆ ಗತಿಯೆನಗಿಂದು ಉದ್ಧರಿಸೊ ಬ್ಯಾಗನೆದೀನ ಜನರಿಗೆ ಬಂಧು-ನಾ ನಿನ್ನ ಸೇವಕಶ್ರೀನಿವಾಸ ಎಂದೆಂದು-ಕಾರುಣ್ಯ ಸಿಂಧುಪ್ರಾಣಪತಿ ಹೃದಯಾಬ್ಜಮಂಟಪ-ಸ್ಥಾನದೊಳಗಭಿವ್ಯಾಪ್ತ ಚಿನುಮಯಧ್ಯಾನಗೋಚರನಾಗಿ ಕಣ್ಣಿಗೆಕಾಣಿಸುವೆ ಶ್ರೀರಂಗವಿಠಲ 3
--------------
ಶ್ರೀಪಾದರಾಜರು
ಬ್ರಹ್ಮಕೊರವಂಜಿ ಸುರರು ಕಿನ್ನರರು ಸ್ಮರಣೆ ಮಾಡುವ ಪಾದ ಕುರುಪತಿಯ ಗರ್ವವನು ಪರಿಹರಿಸುವ ಪಾದ ಪರಮ ಯೋಗಿಗಳ ಹೃತ್ಕಮಲದಲ್ಲಿಹ ಪಾದ ಪಾದ ಪದ್ಮವನು ನೆನೆವೆ ನಾನು 1 ದಾನವಾರಿಯ ಚೆಲ್ವ ಜಾನು ಜಂಘೆಗಳೆಸೆವ ಮೀನ ಖಂಡಗಳ ಪೆರ್ದೊಡೆಯ ಸೊಬಗಿನ ಭಾನುಕೋಟಿ ಪ್ರಕಾಶದಂತೆ ವರಕಾಂತಿಯಲಿ ಆನಂದದಿಂದಲಿ ಮೆರೆವ ಮೂರುತಿಯ ನೆನೆವೆÀ ನಾನು 2 ಮಿಸುನಿ ಒಡ್ಯಾಣ ಕಾಂಚಿಯದಾಮ ತೆಳ್ವಸುರ ಬಿಸಜನಾಭನ ಬಾಹುಪುರಿಯ ಸೊಬಗಿನ ಎಸೆವ ಗದೆ ಶಂಕಚಕ್ರವು ಪದ್ಮಕರದಿ ಶೋ ಭಿಸುತಿರುವ ಕಂಬುಕಂಧರದ ಮೂರುತಿಯ ನೆನೆವೆ ನಾನು 3 ಕದಪು ಕಂಗಳು ಎಸೆಯೆ ಕರ್ಣಕುಂಡಲದ ಸಂಪಿಗೆಯ ನಾಸಿಕದ ರನ್ನ ತುಟಿ ಝಗಝಗಿಸೆ ಕುಡಿಹುಬ್ಬುಗಳು ಎಳೆಯ ಮನ್ಮಥನ ಚಾಪದಂತೆಸೆವ ಮೂರುತಿಯ ನೆನೆವೆÀ ನಾನು 4 ಅರೆದಿಂಗಳಂತೆಸೆವ ನೊಸಲ ಕಸ್ತೂರಿತಿಲಕ ಹೊಳೆÀವ ಕಿರೀಟ ಮಸ್ತಕದಿ ಢಾಳಿಸುವ ಅಲಸದೀರೇಳ್ಜಗವ ಕರುಣದಲಿ ರಕ್ಷಿಸುವ ಹೆಳವನಕಟ್ಟೆ ಶ್ರೀ ವೆಂಕಟೇಶ್ವರನ ನೆನೆವೆ ನಾನು 5 ಕಂಸಾಸುರನಿಟ್ಟ ಸೆರೆಯ ಮನೆಯೊಳು ಕಷ್ಟಪಡುತಲಿ ದೇವಕಿನಿ- ಮಿಷ ಯುಗವಾಗಿ ಕಳೆಯುತಿದ್ದಳು ನಿತ್ಯಾನಂದನ ನೆನೆಯುತಾ ಕಂಸರಿಪು ನಾರಾಯಣನು ಜನಿಸುವನೆಂದು ಅರುಹುವೆನೆನುತಲಿ ಧರಿಸಿದ ಆದನೆ ಕೊರವಿ 6 ಮಲ್ಲಿಗೆಯ ವನಮಾಲೆಯ ಚಂದ್ರಗಾವಿಯನುಟ್ಟು ಪಣೆಯೊಳು ತಿದ್ದಿತಿಲಕವನಿಟ್ಟನು ಗಂಧ ಕಸ್ತೂರಿ ಪರಿಮಳವನು ಲೇಪಿಸಿ ಸರ್ವಾಂಗದಿ ಭಾಸ್ಕರನಂದದಿ ಆದನೆ ಕೊರವಿ 7 ಗುಂಜಿಯ ದಂಡೆಯು ತೋಳಭಾಪುರಿ ಗಲ್ಲಕೊತ್ತಿದ ವೀಳ್ಯವು ಮಂಜಾಡಿಯಸರ ಹವಳ ಸರ ಹತ್ತೆಸರವಾ ಕೊರಳಲಿ ಹೊಳೆಯಲು ಅಂಜನವನಿಟ್ಟು ಅಲರಗಣ್ಣಿಗೆ ಅತಿಹರುಷದಿಂದ ಬೇಗದಿ ಆದನೆ ಕೊರವಿ 8 ಮುತ್ತು ಮಾಣಿಕ ಹೊನ್ನಗೂಡೆಯ ಪಿಡಿದು ಉತ್ತಮ ಶಿಶುವ ಬೆನ್ನಲಿ ಕಟ್ಟಿ ಚಿತ್ತದೊಳಗೆ ನರಹರಿ ಶರಣೆನುತ ಸತ್ಯಲೋಕದಿಂದಿಳಿದಳೆ ಕೊರವಿ 9 ಮಧುರಾ ಪಟ್ಟಣಕಾಗಿ ಬಂದಳೆ ಕೊರವಿ ಹದಿನಾರು ಬಾಗಿಲ ದಾಟಿ ನಡೆದಳು ಮದಗಜದಂತೆ ಮೆಲ್ಲಡಿಗಳನಿಡುತ ಬೆದರದೆ ಕೇರಿಕೇರಿಯಲಿ ಸ್ವರಗೈದು 10 ಮನೆಮನೆ ಬಾಗಿಲಗಳ ಮುಂದೆ ನಿಂತು ವನದ ಕೋಗಿಲೆಯಂತೆ ಯವ್ವಾ ಯವ್ವಾ ಎನುತ ವಿನಯದಿ ಸ್ವರಗೈವ ಕೊರವಿಯ ಕಂಡು ವನಿತೆ ದೇವಕಿ ಸನ್ನೆಮಾಡಿ ಕರೆದಳು 11 ಸನ್ನೆಮಾಡಿ ಕರದರೆ ಚೆನ್ನಕೊರವಂಜಿ ಬಂದು ಎನ್ನವ್ವ ಎನ್ನಕ್ಕ ಎನ್ನ ತಂದೆಯ ಹೆತ್ತವ್ವ ನಿನ್ನ ಮನದಾಯತವ ಹೇಳೇನು ಬಾರವ್ವ ಎನ್ನ ಕೂಸಿಗೆ ಒಂದಿಷ್ಟನ್ನವನಿಕ್ಕವ್ವ ಸೊಲ್ಲಕೇಳೆ ಸೊಲ್ಲಕೇಳೆ ಸಿರಿವಂತೆ ಬಾರೆ 12 ಮಲೆಯಾಳ ಕೊಂಕಣದೇಶ ಮಹಾರಾಷ್ಟ್ರ ಗುಜ್ಜರದೇಶ ಚೆಲುವ ಕಾಶ್ಮೀರ ಕಳಿಂಗ ಕರ್ನಾಟಕದೇಶ ತುಳುವ ತಿಲುಗ ದೇಶವನ್ನು ತಿರುಗಿ ಸೊಲ್ಲ ಹೇಳಿ ಬಂದೆ ಒಲುಮೆಯ ಕೊರವಂಜಿ ನಾನಲ್ಲವೆಯಮ್ಮ ಸೊಲ್ಲ ಕೇಳೆ ಸೊಲ್ಲ ಕೇಳೆ ಸಿರಿವಂತೆ ಬಾರೆ13 ಛಪ್ಪನ್ನ ದೇಶವನೆಲ್ಲ ಸುತ್ತಿ ಸೊಲ್ಲ ಹೇಳಿಬಂದೆ ತಪ್ಪ ಹೇಳುವ ಕೊರವಿ ನಾನಲ್ಲವೆಯಮ್ಮ ಕರ್ಪೂರ ವೀಳ್ಯವ ತಾರೆ ಕಾಂತೆ ನಿನ್ನ ಕೈಯ ತೋರೆ ಸೊಲ್ಲಕೇಳೆ ಸೊಲ್ಲಕೇಳೆ ಸಿರಿವಂತೆ ಬಾರೆ 14 ವಚನ :ಇತ್ತಿತ್ತ ಬಾರವ್ವ ವಿವರಿಸಿ ಹೇಳೇನು ಮುತ್ತಿನ ಮುಡಿಯವ್ವ ಮುದ್ದುಮುಖವ ತೋರೆ ಮತ್ತಗಜಗಮನೆ ಮಂದಹಾಸವದನೆ ರತ್ನದ ಸೆಳೆಗೋಲ ಪಿಡಿಯೆ ರಾಜೀವನೇತ್ರೆ ನಿನ್ನ ಚಿತ್ತದೊಳಗಣ ಮಾತ ಛಂದವಾಗಿ ಹೇಳ್ವೆನು ಕೇಳೆ ಅಮ್ಮಯ್ಯ ಬರಿಯ ಡಂಬಕದ ಕೊರವಿ ನಾನಲ್ಲ ಅರುಹುವೆನು ಮುಂದಣ ಕಥಾಂತ್ರವೆಲ್ಲವ ಮೊರದ ತುಂಬ ಮುತ್ತು ತಾರೆ ಮಾನಿನಿರನ್ನಳೆ ಕುರುಹ ಹೇಳೇನು ಇಲ್ಲಿ ಕುಳ್ಳಿರು ಬಾರೆಯವ್ವ15 ಎಂದ ಮಾತ ಕೇಳಿ ಹರುಷದಿಂದ ದೇವಕಿ ಮಿಂದು ಮಡಿಯನುಟ್ಟು ಕಾಂತೆ ಬಂದು ಕುಳಿತಳು ಇಂದುಮುಖಿಯು ಮೊರನ ತುಂಬ ಮುತ್ತನಿಟ್ಟಳು ತಂದು ಕೈಯತುಂಬ ಹೊನ್ನ ಕಾಣಿಕಿಟ್ಟಳು 16 ಗುಣಿಸಿ ಮುತ್ತಿನ ಅಕ್ಷತೆಯಿಟ್ಟು ಗುಪಿತದಿಂದಲಿ ನೆನೆದಳು ಮನದಭೀಷ್ಟವೀವ ಕೃಷ್ಣನ ಜನಿಸಿದೆನು ಮಧುರಾಪುರದ ಅರಸನುದರದಿ ಎನ್ನ ಸೋದರನೆಂಬ ಪಾಪಿ ಸೆರೆಯೊಳಿಟ್ಟನು17 ಎನ್ನ ಸುತನು ತನ್ನ ಕೊಲುವನೆಂಬ ಮಾತಿಗೆ ಎನ್ನ ಅಗ್ರಜ ಎನ್ನ ಮೇಲೆ ಖಡ್ಗವೆತ್ತಲು ಎನ್ನ ಪತಿಯು ಎನ್ನ ಮೇಲಣ ಮಮತೆಯಿಂದಲಿ ತನ್ನ ಸುತರ ಕೊಡುವೆನೆಂದು ಕೊಲೆಯನುಳುಹಿದ18 ಒಡನೆ ಹುಟ್ಟಿದ ಅಣ್ಣ ಎನಗೆ ವೈರಿಯಾದನು ಪಡೆದ ಪಡೆದ ಸುತರನರೆಯಲಪ್ಪಳಿಸಿದನು ಒಡೆಯ ಕೃಷ್ಣಸಲಹೊ ಎಂದು ಸ್ತುತಿಸಿ ದೇವಕಿ ಗಡಣದಿಂದ ಕೊರವಿ ತಾನು ಹೇಳ ಕುಳಿತಳು 19 ವಚನ :ತಿರುಪತಿ ತಿಮ್ಮಪ್ಪ ಚಳ್ಳಪಿಳ್ಳೆರಾಯ ಸುರಪುರವಾಸ ಲಕ್ಷ್ಮೀವರ ಕರುಣವಾಗು ವಂದನೆ ಸೊಲ್ಲ ಚಂದಾಗಿ ಹೇಳೇನು ಕೇಳೆಯಮ್ಮಯ್ಯಾ ಉರ್ಬಿಯೊಳತಿ ದಿಟ್ಟನಮ್ಮ ನಿಮ್ಮ ಮಗನು ಗರ್ಭದೊಳಿಹನು ಕಾಣಮ್ಮ ಕೊಬ್ಬಿದ ಕಂಸನ ಹಮ್ಮ ಮುರಿದು ನಿಮ್ಮ ನಿರ್ಬಂಧ ಬಿಡಿಸುವನಮ್ಮ 20 ಎಂಟನೆ ಗರ್ಭವಿದಮ್ಮ ನಿಮ್ಮುದರದಿ ಅಂಟಿಹ ಮಗನು ಕಾಣಮ್ಮ ಗಂಟಲ ಮುರಿವ ಕಾಣಮ್ಮ 21 ನಿಷ್ಕರುಣಿ ನಿಮ್ಮಣ್ಣನಮ್ಮ ನೀ ಪಡೆದಂಥ ಮಕ್ಕಳ ಕೊಲ್ಲುವ ಕಾಣಮ್ಮ ಚಕ್ರಧರನ ಕೈಯೊಳಮ್ಮ ಈ ಕಂಸನು ಸಿಕ್ಕುವುದು ತಡವಿಲ್ಲವಮ್ಮ 22 ವಚನ : ಈ ಮಾತು ಪುಸಿಯಲ್ಲ ಸ್ವಾಮಿಯ ಕರುಣ ಉಂಟು ಕೈಗೂಡಿತು ಕೇಳೆಯಮ್ಮಯ್ಯಾ ಕೈಯ ತೋರೆ ಕೈಯ ತೋರೆ ಕೈಯ ತೋರೆ ಅಮ್ಮಯ್ಯ ಕೈಯ ತೋರೆ ನಿನ್ನ ಮನದ ಕುರುಹ ಹೇಳುವೆ ಸೈಯೆನಿಸಿಕೊಂಬೆ ನಿನಗೆ ಸುಖವಾಕ್ಯವನು ಹೇಳಿ ಭಯ ಬೇಡವೇ ಅಮ್ಮಯ್ಯ ನಿನಗೆ ಭಾಷೆಯ ಕೊಡುವೆ 23 ಸಟೆಯ ಮಾತುಗಳಾಡಿ ಸೆಳೆದುಕೊಂಡು ಹೋಗಿ ಹೊಟ್ಟೆಯ ಹೊರೆವ ಕೊರವಿ ನಾನಲ್ಲವಮ್ಮ ನೆಟ್ಟನೆ ಸದಾಶಿವನ ತಟ್ಟಿ ಬಂದ ಕೊರವಿಯ ಮಾತ ದಿಟ್ಟವೆಂದು ಸೆರಗ ಗಂಟಿಕ್ಕಿಕೊಳ್ಳಮ್ಮ 24 ಅಂಗನೆ ನಿನ್ನ ಮನದ ಆಯಿತವ ಹೇಳೇನು ಮಾನಿನಿ ರನ್ನೆ ಬಂಗಾರದ ಕೈಯ ತೋರೆ ಬೊಗಸೆಗಂಗಳ ನೀರೆ ಹಿಂಗುವದು ನಿನ್ನ ಕಷ್ಟ ಹುಸಿಯಲ್ಲವಮ್ಮ 25 ವಚನ :ಚಂದ್ರವದನೆಯ ಚೆಲ್ವ ವಾಮಹಸ್ತವ ಚಂದದಿಂದಲಿ ಕೊರವಿ ವಿವರಿಸಿ ಹೇಳಿದಳು ಹಿಂದಣ ಕಷ್ಟವೆಲ್ಲ ಪರಿಹಾರವಾಯಿತು ಶುಭ ಶ್ರಾವಣ ಬಹುಳಾಷ್ಟಮಿ ರಾತ್ರೆಯ ನಡುವಿರುಳು ರೋಹಿಣಿ ನಕ್ಷತ್ರದಲ್ಲಿ ನಿಮ್ಮುದರದಿ ಕೃಷ್ಣ ಜನಿಸುವನು ಕಾಣೆ ಕೇಳಮ್ಮಯ್ಯ 26 ಪಂಕಜ ಪೀತಾಂಬರ ಅ- ಲಂಕಾರ ಮೂರುತಿಯಾಗಿ ಪುಟ್ಟುವ ಕೃಷ್ಣ ಶಂಕೆಯಗೊಳದಿರೆ ಕೇಳಮ್ಮಯ್ಯ 27 ಅಮ್ಮಾ ನಿಮ್ಮುದರದಿ ಬ್ರಹ್ಮನಪಿತ ಬಂದು ನಿಮ್ಮ ನಿರ್ಬಂಧವ ಬಿಡಿಸುವನು ಕಾಣೆ ಉಮ್ಮಯಗೊಳಬೇಡವೆ ಕೇಳಮ್ಮಯ್ಯ 28 ಆದಿಮೂರುತಿ ನಿಮ್ಮುದರದೊಳವತರಿಸಿ ಮೇದಿನಿ ಭಾರವನಿಳುಹಲು ಕಂಸನ ಭೇದಿಸುವನು ಕಾಣೆ ಕೇಳುಮ್ಮಯ್ಯ 29 ಏಳು ಮಕ್ಕಳ ಕಂಸ ಅರೆಯಲಪ್ಪಳಿಸಿದನೆ ಚಳ್ಳೆ ಬೀಜದಂತೆ ನುಣಿಚಿ ತಪ್ಪಿಸಿಕೊಂಬ ಕಳ್ಳಮಗನು ಪುಟ್ಟುವ ಕೇಳಮ್ಮಯ್ಯ 30 ವಚನ : ಇಂಥಾ ಮಗನು ನಿಮ್ಮುದರದಿ ಜನಿಸಲು ಕಾಂತ ವಸುದೇವರು ಗೋಕುಲಕೆ ಒಯ್ಯಲು ಸಂತೋಷದಿಂದಲ್ಲಿ ಬೆಳೆವನೆ ಕೃಷ್ಣ ಕೇಳಮ್ಮಯ್ಯ ಗೋಕುಲದೊಳಗೆ ಶ್ರೀ ಕೃಷ್ಣನನಿಟ್ಟು ದುರ್ಗೆಯ ಈ ಕಡೆಗೆ ಕೊಂಡುಬಹ ನಿಮ್ಮ ಪತಿಯು ಕಾಕು ಕಂಸಾಸುರನು ಆಕೆಯ ಪಿಡಿಯೆ ಗಗ- ನಾಕೆ ಹಾರಿ ಹೋಗುವಳು ಮಾಯಾಕಾರಿಯು 31 ಕ್ರೂರ ರಕ್ಕಸ ಎನ್ನ ಕೊಲ್ಲುವದೇತಕೋ ನಿನ್ನ ವೈರಿ ಕೃಷ್ಣ ಹೋಗಿ ಗೋಕುಲದೊಳಗೆ ಧೀರನಾಗಿ ಬೆಳೆದು ಸಂಹಾರವ ಮಾಡುವನೆಂದು ಸಾರಿ ಹಾರಿ ಹೋಗುವಳಂಬರಕೆ ದುರ್ಗಿ 32 ನಂದನ ಗೋಕುಲದಿ ಆನಂದದಿ ಬೆಳೆದಾನು ಕೃಷ್ಣ ಸಂದೇಹ ಬೇಡವವ್ವ ನಿಮ್ಮ ಮನದೊಳಗೆ ಬಂದು ಮz
--------------
ಹೆಳವನಕಟ್ಟೆ ಗಿರಿಯಮ್ಮ
ಭೂಮಿಜೆಯು ಸೀತೆಯು ಜನನಿ ಗರ್ಭವ ವಡೆದು ಬಂದಳು ದನುಜ ವಧಕೆಂದೇ ಪ ದುರುಳ ದನುಜರು ಪೆಸರು ರಾವಣ ಕುಂಭಕರ್ಣರು ಋಷಿ ಜನಂಗಳ ಮುಖವ ಕೆಡಿಸುತ ಮೆರೆಯುತಿರೆ ಕೇಳ್ದು 1 ಭವದ ಭಟ ಶ್ರೀರಾಮಚಂದ್ರನು ಮೂವರನು ಜರ ಕೂಡಿ ಜನಿಸಿದಾ ಭುವನ ಭಾರವ ಪರಿಹರಿಪೆನೆಂದಭಯ ತೋರುತಲೀ 2 ಸಿರಿಲಕುಮಿ ನಿಜವರನು ಜನಿಸಿದ- ನರಿತು ¥ರಮಾನಂದದಲಿ ತಾ ಭರದಿ ಮೈದೋರಿದಳು ಹರಿಗೆ ತಾನರಸಿ ಎನಿಸಿದಳು 3 ವಾನರರ ಸೇನಾಧಿಪನು ಪವ- ಸೂನು ಶ್ರೀ ಹನುಮನೆಂಬುವನು ದಾನವಾರಿ ಶ್ರೀ ರಾಮಚಂದ್ರಗೆ ಭೃತ್ಯನೆನಿಸಿದನು 4 ವಿಪಿನ ಚರವ್ಯಾಜದಲಿ ರಕ್ಕಸ- ರಪರಿಮಿತ ಕೆಡಹಿದನು ಧರಣಿಗೆ ವಿಪರೀತ ಬತ್ತದ ಶರಧಿಯನು ಹನುಮಂತನ್ಹಾರಿದನು 5 ಪ್ರತಿಭಟಿಸಿ ಶ್ರೀ ರಾಮಚಂದ್ರನು ಅತಿಮೆರೆವ ರಾವಣನ ಮಡುಹಿದಾ ಮತಿವಂತ ಹನುಮನಿಗೆ ಇತ್ತಾ ಚತುರವದನ ಪದಾ 6 ಧರಣಿ ಮಗಳಿಂಗೂಡಿ ರಾಮನು ಧರೆಯನೆಲ್ಲವನಾಳಿ ನ್ಯಾಯದಿ ಸ್ವರಗವಾಸಕೆ ತೆರಳಿದನು ನರಸಿಂಹವಿಠಲನು 7
--------------
ನರಸಿಂಹವಿಠಲರು
ಮನ್ನಿಸೈ ಹರಿ ಪನ್ನಗೇಂದ್ರಶಯನ ಪ ಘನ್ನವಾದ ಪಾಪವನ್ನು ಮಾಡಿ ಜಗದಿ ನಿನ್ನ ನಾಮ ಮರದೆ ಸನ್ನುತಾಂಗ ಸಲಹೊಅ.ಪ ಜ್ಞಾನ ಶೂನ್ಯವಾಗಿ ನಾನಾ ವಿಷಯಗಳಲಿ ನಾನು ನನ್ನದೆಂಬ ಹೀನ ಮಮತೆಯಿಂದ ದಾನವಾರಿ ನಿನ್ನ ಧ್ಯಾನಿಸದಲೆ ಕಾಲ ಸಾನುರಾಗದಿಂದ ಶ್ವಾನನಂತೆ ಕಳೆದೆ 1 ರೋಗಹರನೆ ಭವದ ರೋಗವೈದ್ಯನೆಂದು ಬಾಗಿ ನಿನ್ನನುತಿಪೆ ನಾಗಾರಿವಾಹನ ಯೋಗಿವಂದ್ಯನೆ ಚನ್ನಾಗಿ ನಿನ್ನ ಸ್ತುತಿಪ ಭಾಗವತರ ಸಂಗ ದೇವ ಪಾಲಿಸಯ್ಯ 2 ರಕ್ಷಿಸೆಮ್ಮ ಬಿಡದೆ ಲಕ್ಷ್ಮಿರಮಣದೇವ ಕುಕ್ಷಿಯೊಳಗೆ ಜಗವ ರಕ್ಷಿಸುತ್ತ ಪೊರೆವ ಸೂಕ್ಷ್ಮ ಸ್ಥೂಲದೊಳು ಪ್ರತ್ಯಕ್ಷನಾದ ಹರಿ ಉ- ಪೇಕ್ಷಿಸದಲೆ ಕಾಯೋ ಪಕ್ಷಿವಾಹನ ದೇವ 3 ಕಡಲೊಡೆಯನೆ ದೇವ ಮೃಡನ ಸಖವೆ ಕಾಯೊ ಅಡಿಗಡಿಗೆ ಸ್ತುತಿಸಿ ಬಿಡದೆ ಮುಗಿವೆ ಕಯ್ಯ ಎಡಬಲದಲಿ ಶ್ರೀ ಭೂಮಡದೇರಿಂದ ಮೆರೆವ ಉಡುಪ ಮುಖನೆ ಕಾಯೋ ಕಡಲೊಡೆಯನೆ ರಂಗ 4 ಕಮಲಪತ್ರದಳಾಕ್ಷ ಕಮಲಜೋದ್ಭವೆ ಪ್ರಿಯ ಕಮಲಸಂಭವ ಜನಕ ಕಮನೀಯ ಸ್ವರೂಪ ಕಮಲನೇತ್ರೆರ ರಸಕಮಲಪುಷ್ಪಮಾಲಾ ಹೃ- ತ್ಕಮಲದೋಳು ಶೋಭಿಪ ಕಮಲನಾಭ ವಿಠ್ಠಲ 5
--------------
ನಿಡಗುರುಕಿ ಜೀವೂಬಾಯಿ
ಮುಕುಂದನ ಮುದ್ದು ರೂಪವ ಕಳೆದೆ ಸಂತಾಪವ ಪ ಬೀರುತಾ ವೊಡನಿಪ್ಪ ಮಾರುತಾ 1 ಝಗಝಗಿಪ ಪದಯುಗಳ ಬಿಗಿದಪ್ಪಿ ದಾಡಿದೆ ಸಂತರ ಸಂಗ ಬೇಡಿದೆ 2 ಧನ್ಯನಾದೆನೊ ದಾನವಾರಿಯ ಘನ್ನ ವೈಭೋಗ ಕಂಡೆ ನಾ ಪುಣ್ಯವನು ಕೈಕೊಂಡೆ ನಾ ನಾಮಾಮೃತ ಉಂಡೆ ನಾ 3 ಮರೆವದು ಸುರಗಣ ಪೊರೆವುದು 4 ವಾಸನಾಗುಣ ಮಂದಹಾಸನಾ5
--------------
ವಿಜಯದಾಸ
ಯಾರಿಗುಸರಲೇನು ದುರಿತಾರಿ ನೀನೆ ರಕ್ಷಿಸು ಕಂ- ಸಾರಿ ನೀನೆ ರಕ್ಷಿಸು ಮುರಾರಿ ನೀನೆ ರಕ್ಷಿಸು ಪ. ಭಾರಿ ಭಾರಿ ನಿನ್ನ ಪದವ ಸೇರಿದವರ ಕಾಯ್ದ ದೊರೆಯೆ ಅ.ಪ. ಪತಿಗಳೈವರಿದಿರೆ ಪತಿವ್ರತೆಯ ಖಳನು ಸೆಳೆಯೆ ಲಕ್ಷ್ಮೀ- ಪತಿಯೆ ನೀನೆ ಕಾಯ್ದೆಯಲ್ಲದೆ ಗತಿಯದಾರು ತೋರ್ದರಯ್ಯ 1 ಪಿತನ ತೊಡೆಯೊಳಿದ್ದ ಸುತನ ಸತಿಯು ಕಾಲಿನಿಂದೊದೆಯೆ ಖತಿಯೊಳೈದಿ ಭಜಿಸೆ ಅತಿಶಯದ ವರವನಿತ್ತೆ 2 ದನುಜ ಕೋಪದಿಂದ ತನ್ನ ತನುಜನನ್ನು ಬಾಧೆಗೊಳಿಸೆ ಮನುಜ ಸಿಂಹನಾಗಿ ಭಕ್ತಗನುಪಮಾದ ಹರುಷವಿತ್ತೆ 3 ಮಕರ ಬಾಧೆಯಿಂದ ಕರಿಯು ಸಕಲಕರ್ತನೆನುತಲೊದರೆ ಅಖಿಳ ದೈವಂಗಳಿರಲು ಬಕವಿರೋಧಿ ನೀನೆ ಪೊರೆದೆ 4 ಕೂರ್ಮ ಕ್ರೋಢ ಸಿಂಹ ಬ್ರಾಹ್ಮಣೇಂದ್ರ ರಾಮಕೃಷ್ಣ ಬುದ್ಧ ಕಲ್ಕಿ ದಾನವಾರಿ ಸಲಹೊ ಎನ್ನ 5 ಸರ್ವಲೋಕ ಜನಕ ನಿನ್ನ ಸರ್ವಕಾಲದಲ್ಲಿ ನೆನೆವೆ ವಿನುತ ಸರ್ವಸೌಖ್ಯ ನೀಡು ಹರಿಯೆ 6 ಕಂಜಜೇಶ ಪನ್ನಗೇಶ ನಿರ್ಜರೇಶ ಮುಖ್ಯ ದಾಸವರದ ಶೇಷ ಭೂಧರೇಶ ಎನ್ನ ಸಲಹೊ ಬೇಗ 7
--------------
ತುಪಾಕಿ ವೆಂಕಟರಮಣಾಚಾರ್ಯ