ಒಟ್ಟು 51 ಕಡೆಗಳಲ್ಲಿ , 22 ದಾಸರು , 50 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಮದನನಗೇಹ ಸುಖ ಮರಣ ಸುಖಮದನನ ತೊತ್ತಿನ ಮಕ್ಕಳಾಗ ಬೇಡಿರೋ ಪ ಸ್ತ್ರೀಯರೂಪವ ಕಂಡು ಸೈರಿಸದೆ ಕಳಕಳಿಸಿಸುಯ್ಗರೆದು ಶರೀರವು ಬೆವರೇರುತಕೈಕಾಲ್ಗಳಿಗೆ ನಡುಕ ಹುಟ್ಟಿ ಕಾಮ ಶರಕೆ ಮೈಯನಿತ್ತುಕೊಯಿಸಿಕೊಳ್ಳುವ ಕೊರಳ ನಿತ್ಯದಿ ಕಷ್ಟದಿ ಸುಖವು 1 ಮುಖ ಕಾಂತಿಯ ನೋಡಿ ಮೋಹದಲಿ ಮುಳುಗಾಡಿಸುಖವೆಂದು ಬಗೆಯುತ ಸಂಗಯೋಗದಕಕುಲಾತಿಪಡುತಲಿ ಕೆಡೆದುತಾಪದಿ ಹೊರಳಿಬಕಧ್ಯಾನದಲಿ ತನ್ನ ನಿಜಸುಖವ ಮರೆವ 2 ಪತಿ ಚಿದಾನಂದ ಕಾಣದ ಸುಖವು3
--------------
ಚಿದಾನಂದ ಅವಧೂತರು
ಮಾನವ ಅಜಹರವಿನುತ ನಿಜಪಾದ ಅನುದಿನವು ಭಜಸಿಬದುಕೆಲೊ ಪ ತ್ಯಜಿಸಿ ಅವಗುಣ ಸುಜನರೊಡಗೂಡಿ ನಿಜಾನಂದದಿ ಸುಜನ ಭಜಗಶಯನನ ಅ.ಪ ಹಲವು ಭ್ರಾಂತಿಗಳ್ಯಾಕೆಲೊ ಸುಳ್ಳೆ ಸುಳ್ಳೆ ಸಂಸಾರ ಕೊಳಪಟ್ಟು ಕೆಡದಿರೆಲೊ ಮಲಿನಮನಸಿನ ಸರ್ವ ಹೊಲೆಯ ಯೋಚನೆ ಬಿಟ್ಟು ತಿಳಕೊಂಡು ನಿಜಸುಖ ಪದವಿಗೆ ನದರಿಟ್ಟು ಉಳಕೋ ಸಿಕ್ಕ್ಹೊತ್ತುಗಳೆಯದಲೆ ಶುನಕೆಲುವು ಕಡಿದಂತೆ ಅಳಿವ ಸುಖದಾಸೆಗೆಳಸಿ ಕೆಡಬೇಡ ಜಲಜನಾಭನ ಒಲಿಸಿ ನಲಿಯೊ 1 ಬರುವಾಗ್ಗೆ ಬೆನ್ನಿನ್ಹಿಂದೆ ಹೆಡತಲೆ ಮೃತ್ಯುವಿನ ಕರಕೊಂಡು ಧರೆಗೆ ಬಂದಿ ಅರಲವದ ಸುಖಕಾಗಿ ಮರೆದು ಎಲ್ಲವ ನೀನು ಮರುಳನಾದದ್ದು ಕಂಡು ನಗುತಿಪ್ಪ ಮೃತ್ಯವ ಹೊರಳಿನೋಡದೆ ದುರುಳತನದ ಸ್ಥಿರದ ಪ್ರಪಂಚ ಖರೆಯೆಂದೆನ್ವುದು ಸರಿಯಲ್ಲೆಲೊ ಇದು ನಿರುತದ್ಹರಿಪಾದ ಸ್ಮರಣಾನಂದದಿ ಮರೆಯೊ ಬಿಡದೆ 2 ಫಣೆಯ ಬಾಯೊಳಗಿರುವಂಥ ಕಪ್ಪೆಯು ಮುಂದಾಡ್ವ ನೊಣಕ್ಹವಣಿಸುತಿರುವಂತೆ ಒಣಭ್ರಾಂತಿ ಪಡದಿರು ಮನಸಿಗೆ ಬಂದಂತೆ ಕ್ಷಣತೋರಿ ಅಡಗುವ ಕನಸು ಜಗಸುಖ ಜನನ ಮ ರಣೆಂಬ ದಣಿವು ಕಳೆವಂಥ ಜನಕಜಾತೆಯ ಧಣಿಯ ಶ್ರೀರಾಮನೊನರುಹಂಘ್ರಿಯ ಘನವ ಪೊಗಳುತ ಕುಣಿ ಕುಣಿದು ಧನ್ಯವಾಗೆಲೊ 3
--------------
ರಾಮದಾಸರು
ಮಾನವ ಶ್ರೀಗುರುಚರಣವ ಮಾಡುತ ಪೂಜೆಯ ತೋಷದಲಿ ಪ ಬೇಡುತ ನಿಜಸುಖ ಆಜ್ಞಾಚಕ್ರದೊ ಳಾಡುತ ಪರಮನೆ ನೀನಾಗಿ ಅ.ಪ ಸತ್ತು ಹುಟ್ಟಿ ಈ ಪೋಗುವದೇಹವ ನಿತ್ಯವು ಎನ್ನುತ ಪೋಷಿಸದೆ ಸತ್ಯಪ್ರಬಂಧವ ಶ್ರೀಹರಿಪಾದವ ನೆತ್ತಿಲಿ ಪೊತ್ತರ ಮಗನಾಗಿ 1 ಚಿತ್ತವ ಚಲಿಸದೆಸಿದ್ದಾಪುರದೊಳ ಗಿತ್ತರೆ ಬಂಧುರಸಿದ್ಧಿಗಳೂ ಅರ್ಥಿಯಿಂದ ಬಂದೊದಗುವ ಫಲಗಳ ವ್ಯರ್ಥವ ಮಾಡದೆ ಶೀಘ್ರದಲಿ 2 ಹರಿಯಜ ರುದ್ರರು ಈಶ ಸದಾಶಿವ ಪರತರಮೂರ್ತಿಯ ಧ್ಯಾನಿಸುತ ಗುರುವನೆ ಯಜಿಸುತ ಭಜಿಸುತ ಸರ್ವರು ಗುರುವೇಯಾಗಿಹ ತೆರದಲ್ಲಿ 3 ತತ್ವಮಸಿಯ ಬೋಧಾಮೃತ ಸೇವಿಸಿ ಮೃತ್ಯುವ ಜೇಸುತ ಧೈರ್ಯದಲಿ ಪೃಥ್ವಿಯೊಳೀಮಹದೇವನಪುರದೊಳು ಭಕ್ತರ ಪೊರೆಯುವ ದೊರೆಯನ್ನೆ 4
--------------
ರಂಗದಾಸರು
ಯಾತರ ಭಯ ಶ್ರೀನಾಥನ ಪರಮ ಸುಪ್ರೀತಿಯ ಪಡೆದವಗೆ ಪ ವಿಧಿ ನಿಜಸುಖದಾತ ನೆಂದರಿತವಗೆ ಅ.ಪ ಬಂಧು ಜನರು ತನಗೊಂದಿಸಿದಾಕ್ಷಣ ಬಂದ ಭಾಗ್ಯವೇನೊ ಹಿಂದೆ ಮುಂದೆ ತನ್ನ ನಿಂದಿಸಿ ನುಡಿಯಲು ಕುಂದಾದದ್ದೇನೊ ಮಂದಿರದಲಿ ತಂದಿಟ್ಟಿರುವವಗೆ 1 ದುಸುಮುಸುಗುಟ್ಟುವ ಸತಿಸುತರಿಂದಲಿ ಹಸಗೆಟ್ಟದ್ದೇನೋ ಅಶನಾಚ್ಛಾದನ ತರಲಿಲ್ಲವೆನುತಲಿ ವ್ಯಸನ ಪಡುವುದೇನೊ ವಸುದೇವನಸುತನೊಶದೊಳಗಿರುವವಗೆ 2 ಘಾಸಿಯಿಂದಲಾಯಾಸ ಪಡುತ ಅವಾಸದೊಳಿದ್ದೇನೋ ಕಾಶಿ ಕಂಚಿ ಕಾಳಹಸ್ತಿ ಮೊದಲಾದ ದೇಶ ತಿರುಗಲೇನೋ ಸಂತೋಷದಲ್ಲಿರುವವನಿಗೆ 3
--------------
ಜಗನ್ನಾಥದಾಸರು
ಯಾರಿಗುಸುರಲಿ ಸಾರತತ್ವ ವಿ ಚಾರ ಭವದೂರಾ ಪ ಚಾರು ಸೇರಿ ಮುಕ್ತಿಯ ಸೊರೆವಿಡಿವುದಿನ್ಯಾರಿಗುಸುರಲಿ ಅ.ಪ. ಶ್ರೀ ಗುರುನಾಥನ ಕಟಾಕ್ಷದಿ ತ್ಯಾಗಿಸಿ ಸಂಸಾರದ ಗೊಡವೆಯ ಯೋಗಿಯಂದದೊಳಿದ್ದು ಆಗಮ ನಿಗಮಾರ್ಥಕೆ ಸಿಲುಕದ ಯೋಗ ಘನವನೊಳಗೊಂಡಿಹ ಅಂಗದ ಯೋಗಾನಂದದುಯ್ಯಾಲೆಯ ತೂಗಿ ನೆಲೆಗೆ ನಿಂದಿಹ ನಿಜಸುಖವಿನ್ಯಾರಿಗುಸುರಲಿ 1 ಉದರದ ನಾಭಿಯ ನೀಳದ ತುದಿ ಹೃದಯ ವಾರಿಜದೊಳಗಿಪ್ಪ ಶಿವ ಸದನ ಲಿಂಗವ ಕಂಡು ಅದು ಇದು ಬೇರ್ಪಡಿಸದೆ ಹೃದಯದಿ ಚದುರ ಸಾಧು ಸತ್ಪುರುಷರ ಮತದಲಿ ಮುದದಿ ಮುಕ್ತಿ ಮಾನಿನಿಗೆ ಮಂಗಲ ಮದುವೆಯಾದ ಮನಸಿನ ಮಹಾ ಗೆಲವಿನ್ಯಾರಿಗುಸುರಲಿ 2 ನೆತ್ತಿಯೊಳ್ ಹೊಳೆ ಹೊಳೆವ ಚಿದಾ ದಿತ್ಯನ ಪ್ರಕಾಶವ ಕಂಡು ಚಿತ್ತದಿ ನಲಿದಾಡಿ ಉತ್ತಮಾನಂದಾತ್ಮರಸ ಸವಿ ಯುತ್ತ ಚಪ್ಪರಿದು ಶರಣರ ಮೊತ್ತದೊಡನೆ ಕುಣಿಕುಣಿದು ಬ್ರಹ್ಮನ ಗೊತ್ತು ತಿಳಿದ ಗುರುತಿನ ವಿಸ್ತರವಿನ್ಯಾರಿಗುಸುರಲಿ 3 ಕುಂದುವ ಕಾಯದ ಸುಖಿಕೆಳೆಸದೆ ಹೊಂದಿದ ಸರ್ವಾಂಗದ ಶೋಧಿಸಿ ಒಂದೇ ದೇವನೊಳಾಡಿ ವಂದಿಸಿ ಗುರುಹಿರಿಯರ ಚರಣಕೆ ಹೊಂದಿ ಹೊಂದಿ ಓಲಾಡುವ ಅರಿಗಳ ಬಂದಿಯೊಳಗೆ ಸಿಲುಕದೆ ಬ್ರಹ್ಮಾ ನಂದರಸಾಮೃತ ಸವಿದಿಹ ಸುಖವಿನ್ಯಾರಿಗುಸುರಲಿ 4 ಹಲವು ಯೋನಿಯೊಳಗೆ ಹೊರಳ ಕುಲ ಛಲ ಶೀಲವ ಮೂರಡಗಿಸಿ ಸುಲಭ ವಂಶದೊಳುಂಡು ಮಲಿನ ಮಾಯಾಮೋಹಕೆ ಸಿಲುಕದೆ ಬಲೆಯ ಛೇದಿಸಿ ಮುಕ್ತಾಂಜ್ಯದ ಬಗೆ ಇನ್ಯಾರಿಗುಸುರಲಿ 5
--------------
ಭಟಕಳ ಅಪ್ಪಯ್ಯ
ರಂಗ ಕರುಣಿಸೊ ಚರಣಾ ಶ್ರೀ ಪ ರಂಗಗರುಡತುರಂಗಸಿರಿಮನ ತುಂಗಭವಗಜ ಸಿಂಗರಿಪುಕುಲ ಭಂಗ ಮಹಿಮತರಂಗ ದೇವೋತ್ತುಂಗನಿಜನಿಸ್ಸಂಗ ನರಹರಿ ಅ.ಪ ದೇವಸಕಲ ಸೃಷ್ಠಿಯಗೈವ ಸುಸ್ವಭಾವ ದೇವ ತ್ರಿಭುವನ ಜೀವಭಕ್ತರ ಕಾವಶೃತಿತತಿ ಭಾವ ದೋಷಾಭಾವನಿಜಸುಖ ವೀವ ಬ್ರಾಹ್ಮಿಯ ಮಾವ ತರಿತರಿ ನೋವ ಪರಿಮರ 1 ಛೇಧಖಳಜನ ಖೇದ ಸಜ್ಜನ ಮೋದನಿರ್ಗತ ಭೇದ ಸಿರಿನುತ ಪಾದವ್ಯಾಹೃತಿ ನಾದಸಿರಿಜಗ ಭೇದ ಸುಖಮಯ ಸಾಧು ಶಿರಶ್ರೀ2 ಶ್ರೀಶ ನಿಜದಾಸ ಜನರ ಮನ ಉಲ್ಲಾಸಾ ಶ್ರೀಶ ತರಿತರಿ ಪಾಶ ಕೊಡುಕೊಡು ಲೇಸ ನಿಖಿಳರ ಭಾಸ ಸಿರಿಮನೆ ವಾಸ ವಿಶ್ವನು ಪೋಷ ಬ್ರಹ್ಮಸುಕೋಶ ನಿರ್ಗತ ನಾಶ 3 ಸತ್ಯ ನಿತ್ಯಾನಿತ್ಯ ಜಗರೂಪ ಸ್ವತಂತ್ರ ಕಳತ್ರ ಪರಮಪ ವಿತ್ರ ಚಿನ್ಮಯ ಭೃತ್ಯವತ್ಸಲ ನಿತ್ಯನೂತನ ಸತ್ಯವತಿಸುತ ಚಿತ್ತಮಂದಿರ 4 ವಿಶ್ವತೈಜಸ ಪ್ರಾಜ್ಞತುರಿಯ ಶರಣು ಅಶ್ವತ್ಥ ವಿಶ್ವವಿಶ್ವಗ ವಿಷ್ಣುಜಗ ಬಲ ವಿಶ್ವಪ್ರೇರಕ ಜಿಷ್ಣುಸಾರಥಿ ಕೃಷ್ಣವರಸ್ಥಿತ “ಕೃಷ್ಣವಿಠಲ” ಶಿಷ್ಟದೋಷಸಹಿಷ್ಣುವಂದಿಪೆ 5
--------------
ಕೃಷ್ಣವಿಠಲದಾಸರು
ರಾಮನ ನೋಡಿರೋ ನಮ್ಮ ಸೀತಾರಾಮನ ನೋಡಿರೋ ಪ ರಾಮನನೋಡುತ ಪ್ರೇಮವ ಸುರಿಸುತ ನಾಮವ ನುಡಿಯುತ ನೇಮದಿ ಬೇಡುತ ಅ.ಪ ಅಜಭವಾದಿಗಳರಸನೀತಾ ಮತ್ತೆ ನಿಜಭಕುತರಿಗೆ ಮುಕ್ತಿಪ್ರದಾತ ತ್ಯಜಿಸಿ ದುಷ್ಟರಸಂಗ ಭಜಿಸಿ ಶಿಷ್ಯರ ಸಂಗ ಭುಜಗಭವವೆಂದರಿತು ನಿಜಸುಖಮೆಲ್ಲಲು 1 ಪಾದ್ಯ ಮತ್ತೆ ನಿತ್ಯಾನಿತ್ಯ ಜಗಸೃಜಿಪ ದೇವದೇವೇಶ ಮುಕ್ತಾಮುಕ್ತಾಶ್ರಯ ಸತ್ಯ ಪ್ರಾಣನ ಹೃಸ್ಥ ಉತ್ತಮೋತ್ತಮನೆಂದು ಎತ್ತಿಕೈಗಳ ಮುಗಿದು 2 ಭಕ್ತಿಯಿಂದಲಿ ನೋಡೆ ಸರ್ವಾಘಹರವೋ ಮತ್ತೆಪಾಡಲು ಕಾಮಿತ ಕರಗತವೊ ಹಸ್ತಿವರದನ ನೋಡೆ ಮತ್ತರಿಗೆ ಸಾಧ್ಯವೆ ವತ್ತುತ ಗೃಹಕೃತ್ಯ ಬೇಗ ಉತ್ತಮರಲ್ಲಿ 3 ಸುಲಭವಲ್ಲವೊ ಇಂಥಾ ಸಮಯ ಘಳಿಸಿ ನೋಡೀದವನೆ ಕೃತಾರ್ಥ ನಿತ್ಯ ಸಲಹುತ್ತಿರುವಂಥ ಅಲವ ಮಹಿಮಾರ್ಣವ ಲಲನೆ ಲಕ್ಷ್ಮಿಯ ನಾಳ್ವ 4 ಸರ್ವನಾಮಕ ನಿವನೂ ಮತ್ತೆ ಸರ್ವಪ್ರೇರಕ ಬಲಖ್ಯಾತ ನಿಹನೂ ಸರ್ವ ಸರ್ವಾಧಾರ ಸರ್ವೇಶ ಶಾಶ್ವತ ಸರ್ವಗುಣಗಣ ಪೂರ್ಣ ಸರ್ವವ್ಯಾಪ್ತನಾದ 5 ಆರಿಲ್ಲ ಸಮವಧಿಕ ಇವಗೇ ಮತ್ತೆ ಆರು ಕಾಣರು ನೆಲೆಯ ಸಾಕಲ್ಯ ಸತ್ಯ ಸಾರವಿಲ್ಲದ ಜಗದಿ ಸಾರನೊಬ್ಬನೆ ಇವನು ತೊರು ಪಾದಗಳೆಂದು ಸಾರಿಬೀಳುತ ಅಡ್ಡ 6 ಶರಣೆಂದ ವಿಭೀಷಣಗೆ ಪಟ್ಟ ಕಟ್ಟಿದನೂ ಕರುಣದಿಂದಲಿ ಶಬರಿಯ ಪೊರೆದವನು ದುರುಳ ಪಾಪಿಯ ದೊಡ್ಡ ಕವಿಯ ಮಾಡಿದ ಮಹಿಮ ಕರುಣ ಬೇಕಾದವರು 7
--------------
ಕೃಷ್ಣವಿಠಲದಾಸರು
ಶ್ರೀ ವಾಯುದೇವರು ಕಾಯೊ ಹನುಮರಾಯ ನಿನ್ನ ಕಾಯ ಮನದಿ ನಮೋ ಪ ಭಾರತೀಶ ಕೃಪಾಸಮುದ್ರನೆ ವಾರಿಜಜಾಂಡದಿ ಸರ್ವಜೀವರೊಳಿದ್ದು ಮೂರೇಳು ಸಾಸಿರ ನೂರಾರು ಜಪಗಳ ಇರುಳು ಹಗಲು ನರಹರಿಗೆ ಅರ್ಪಿಪ ಸುರ 1 ಮಾತರಿಶ್ವಪ್ರಖ್ಯಾತ ಮಹಿಮನೆ ವಾತ ಪ್ರಭಂಜನ ಸತತ ಎನ್ನನು ಅತಿ ಹಿತದಿ ನೀ ಸಲಹುವೆ ಪ್ರತತ ಶ್ರೀ ನೃಹರಿಯ ಪ್ರಥಮಾಂಗನೆ ದಣಿ 2 ಸತ್ಪಾತ್ರ ಮಾಡೆನ್ನ ಸೂತ್ರಸುಖ ಸಿತಗಾತ್ರ ಪವಿತ್ರನೆ ಮಾತ್ರಾಕರಣನಿಯಂತೃ ಮಹಂತನೆ ಚಿತ್ರ ಪುರುಷ ಮಾಕಳತ್ರನ ತೋರಿಸೊ 3 ದೇವಜನನುತ ಭಾವಿ ಬ್ರಹ್ಮನೆ ಕಾವ ಕರುಣಿಯೆ ಪವಮಾನ ನಮೋ ನಮೋ ಭಾವುಕರೊಡೆಯ ಶ್ರೀದೇವಿ ಶಾಂತಿಯ ಪತಿ ದೇವವರೇಣ್ಯನನಿರುದ್ಧನ ತೋರಿಸೊ 4 ಶುದ್ಧ P್ಪರುಣಾಬ್ಧಿ ನಮೋ ನಮೋ ಶುದ್ಧ ಭಕ್ತ್ಯಾದಿ ಸಂಪತ್ತು ಎನಗಿತ್ತು ಉದ್ಧರಿಸೊ ಎನ್ನ ಶ್ರದ್ಧೇಶ ಮುಖ್ಯಪ್ರಾಣ ಪದ್ಮೆ ಕೃತೀಶ ಪ್ರದ್ಯುಮ್ನಗೆ ಪ್ರಿಯತಮ 5 ಜ್ಞಾನಬಲರೂಪ ಹನುಮ ನಮೋ ನಮೋ ಜ್ಞಾನಸುಖಮಯ ಜಾನಕೀಶನ ದೂತ ಇನನ ಸುತನಿಗೆ ವಿಭೀಷಣನಿಗೆ ರಾಮ ತಾನೂ ಒಲಿದ ನೀನೊಲಿದ ಕಾರಣದಿ 6 ಕಾಂತ ಕೃಷ್ಣನೇಕಾಂತ ಭಕ್ತಾಗ್ರಣಿ ಅಂತಕ ಸುಜನರ ಸಂತತ ಪೊರೆವ ಧನಂಜಯಗೊಲಿದನೆ 7 ಪಂಚಭೇದ ಪ್ರಪಂಚ ಸತ್ಯವಿ ರಿಂಚಿಪಿತನೆ ಸ್ವತಂತ್ರ ಸರ್ವೋತ್ತಮ ಚಿಂತಿಸೆ ಭಕ್ತಿಯಿಂ ಮಿಂಚುಪೊಲ್ ತೋರಿ ನಿ ರಂತರ ನಿಜಸುಖವೀವನೆಂದೆಯೊ ಮಧ್ವ 8 ಶ್ರೀಶ ಚಿನ್ಮಯ ದೋಷದೂರನು ವ್ಯಾಸ ಸುಖಮಯ ಪ್ರಸನ್ನ ಶ್ರೀನಿವಾಸ ಭಾಸಿಪ ನಿನ್ನಯ ಹೃತ್ಸರಸಿಜದಲಿ ದಾಶರಥಿಯ ಮುಖ್ಯ ದಾಸವರ್ಯನೆ ನಮೋ 9
--------------
ಪ್ರಸನ್ನ ಶ್ರೀನಿವಾಸದಾಸರು
ಶ್ರೀಮಾಧವ ಪಾದವ ಸಂತತ ಮನದಿ ನೇಮದಿ ಧ್ಯಾನಿಸು ನೀ ಪ ಪ್ರೇಮಮೂರ್ತಿಯನೆನೆವರಾರಾದರೇನಯ್ಯ ಸ್ವಾಮಿತಾನವರನು ಸರ್ವತ್ರ ಸಲಹುವನು ಅ.ಪ ಮದಗಜವನುಸರದಿ ಮೊಸಲೆಯನು ತಾನು ಅಧಿಕ ಕಷ್ಟವ ಗೊಳಸೆ ಪದುಮನಾಭ ನೀನೆ ಪೊರೆಯಬೇಕೆನ್ನಲು ಮುದದಿಂದಲೊದಗುತ್ತ ಸೌಖ್ಯವ ತೋರಿದೆ 1 ತರಳನಾದ ಧ್ರುವನು ಪ್ರಹ್ಲಾದನು ಶರಣೆಂದು ಮೊರೆವೋಗಲು ಸರಸಿಜಾಕ್ಷ ಶ್ರೀಶ ತ್ವರಿತದಿಂದಲಿ ಬಂದು ಕರುಣದಿ ಕರೆದೆತ್ತಿಕೊಂಡು ಮುದ್ದಾಡಿದ 2 ಮಾನಿನಿ ದ್ರೌಪದಿಯು ತನ್ನಯ ಘನ ಮಾನಭಂಗದ ಕಾಲದಿ ದೀನರಕ್ಷಕ ಕೃಷ್ಣ ದಾನವಾರಿಯೆನೆ ಸಾನುರಾಗದಿಂದಲಕ್ಷಯ ವರವಿತ್ತ3 ಅಜಮಿಳ ಬಹುಪಾಪದಿ ಮೆರೆಯುತಲಿದ್ದು ನಿಜಸುಖ ಮರೆತಂತ್ಯ ಕಾಲದಿ ಬಜಬಜಿಸುತಮಗನನು ಹೆಸರೆತ್ತಲು ಭಜನೆಯಾಯ್ತು ನಾರಾಯಣ ನಾಮವು 4 ವಿದುರನುಧ್ದವನರ್ಜುನ ಕುಚೇಲನು ಮೊದಲಾದ ಭಕ್ತರೆಲ್ಲ ಹೃದಯದಿ ಬಚ್ಚಿಟ್ಟು ನಿರುತ ಪೂಜೆಯ ಮಾಡೆ ಪದವಿಯಿತ್ತು ಕಾಯ್ದ ಜಾಜಿಯೀಶನ5
--------------
ಶಾಮಶರ್ಮರು
ಸನ್ನುತ ಪಾದ ಭಕುತಿಯ ಬಿತ್ತಿ 1ದೇಹವೆ ನಾನೆಂಬ ದೈನ್ಯವ ಬಿಡಿಸಿಸಾಹಸದಲಿ ಸಕಲ ಸಾಧನವ ತೊಡಿಸಿಮೋಹ ಮತ್ಸರವೆಂಬ ಮೋಸವ ಕೆಡಿಸಿಸೋಹಮೆಂಬರಿವಿನಲ್ಲಿ ಸೊಗಸಾಗಿ ನಡೆಸಿ 2ಕಾಲಕರ್ಮಂಗಳ ಮೂಲವ ಕಿತ್ತು ಗೋಪಾಲಾರ್ಯ ನಿಜಸುಖ ಶೀಲವನಿತ್ತುಮೇಲಾದ ಮುಕುತಿಯ ಕೀಲಕಳೆದೆತ್ತುಶ್ರೀಲಕ್ಷ್ಮಿಯರಸನೆ ಚಿತ್ತವನಿತ್ತು 3
--------------
ಗೋಪಾಲಾರ್ಯರು
ಸುಳ್ಳೆಭ್ರಮಿಸಿ ಕೆಡಬೇಡವೋ ಹೇ ಮುಳ್ಳುಮನುಜ ಎಲ್ಲ ಮಿಥ್ಯೆಜಗದ ಬಾಳವ್ಯೋ ಪ ನಿಲ್ಲದಳಿಕೆ ಪೋಗ್ವುದಿದು ಜಲದಮೇಲಿನ ಲಿಖಿತತೆರದಿ ಪಾದ ದುರ್ಭವದ ಭಂಗವೋ ಅ.ಪ ಬಂಧುಬಳಗರೆಂಬರೆಲ್ಲರು ನಿನ್ನೊಳಿರುವತನಕ ತಿಂದು ಉಂಡು ಸೇವೆ ಮಾಳ್ಪರು ನೀನುಹೋಗುವಕಾಲ ಸಂದಿಸಲಾಗ ಆರುಬಾರರು ಹಿಂದೆ ಉಳಿವರು ಮಂದಗಮನೆ ಸತಿಯು ತನ್ನ ಮುಂದಿನ ಗತಿಗೆ ಅತ್ತುಕರೆದು ಮಿಂದು ಮುಟ್ಟುಚಟ್ಟು ತೊಳೆದು ಚಂದದ್ಹೋಳಿಗೆ ತುಪ್ಪ ಉಂಬಳು 1 ಜನರಗೋಣು ಮುರಿದು ಹಲವು ಹಂಚಿಕ್ಹಾಕಿ ಬಿಡದೆ ಬಿನುಗುಯೋಚನದನುದಿನವು ಶೋಧಮಾಡಿ ನಾನಾರೀತಿಯಲಿ ಗಳಿಸಿದ ಧನವು ನಿನಗೆ ಎರವು ಕನಿಕರಿಲ್ಲದೆ ಜವನದೂತರು ಹಣಿದು ಎಳೆದಾಡೊದೆಯುವಾಗ ಮನೆಯೊಳ್ಹೊಳಿದಳದೆ ಧನವು ಬಂದು ನಿನಗೆ ಸಹಾಯ ಮಾಳ್ಪುದೇನೋ 2 ಭೂಮಿಸೀಮೆ ತನ್ನದೆನುತ ಶಾಸನವ ಬರೆಸಿ ನೇಮವಿಲ್ಲದೆ ಕಷ್ಟಬಡುತ ನಿಜಸುಖವ ಮರೆದು ತಾಮಸದೊಳಗೆ ಮುಳುಗಿ ಕೆಡುತ ಪ್ರೇಮದೊರಲುತ ಭೂಮಿಗಧಿಕ ಭಕ್ತಜನರ ಪ್ರೇಮಮಂದಿರ ಸ್ವಾಮಿ ಶ್ರೀರಾಮ ಮುನಿದು ನೋಡಲಾಗ ಭೂಮಿ ಸೀಮೆ ಕಾಯ್ವುದೇನೋ 3
--------------
ರಾಮದಾಸರು
ಸೇವೆಮಾಡಿ ಹರಿಯ ನವವಿಧಪರಿಯ ಧ್ರುವ ಪಥ ಕೂಡಿ ಗೋವಿಂದನಾಮ ಪಾಡಿ ಅವಿದ್ಯುಪಾಧೀಡ್ಯಾಡಿ 1 ಯುಕ್ತಿಗೆ ವಿವೇಕ ಭಕ್ತ ಸಂರಕ್ಷಕ ಮುಕ್ತಿಗಿಂದಧಿಕ ಭಕ್ತಿನಿಜಸುಖ 2 ಸೇವೆಸುಖ ಹರಿಯ ಮಹಿಪತಿ ದೊರೆಯ ಸೇವಿಸಲೀಪರಿಯ ಭವನಾಶ ಖರಿಯ 3
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಸ್ವಾಮಿ ನೀನಹುದೋ ಶ್ರೀಗುರು ಸಾರ್ವಭೌಮ ನೇಮದಿಂದಲಿ ಹೊರೆವ ದಯಗುಣನಿಸ್ಸೀಮ ಧ್ರುವ ಜಗತ್ರಯಕ ಜೀವಭಗತ ಜನಕಾವ ಸುಗಮ ಸುಪಥವೀವ ಸುಗುಣ ಶ್ರೀದೇವ 1 ದಾತ ದೀನದಯಾಳು ನೀನಹುದು ಶ್ರೀನಾಥ2 ನಿಜದಾಸರ ಪಕ್ಷ ಸುಜನರ ಸಂರಕ್ಷ ಗಜವರ ಸಮೋಕ್ಷ ಭಜಕರಿಗೆ ಸುಭಿಕ್ಷ 3 ತೇಜೋಮಯ ಸಾಂದ್ರ ನಿಜಸುಖ ಸಮುದ್ರ ರಾಜಾಧಿರಾಜ ಮಹಾ ರಾಜರಾಜೇಂದ್ರ 4 ಶರಣಜನಪಾಲ ಸಿರಿಯ ಸುಖಲೋಲ ತಗಳ ಮಹಿಪತಿ ಸ್ವಾಮಿ ನೀನಹುದೊ ಕೃಪಾಲ 5
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಹರಿಹರಿ ಎನ್ನಿ ಹರಿವದು ಪಾಪ ಧರೆಯೊಳು ಧರೆಯೊಳು ಕರಮುಗಿದು ಗುರುವಿಗೆ ಕೇಳುವುದು ಬಲುಮೇಲು ಧ್ರುವ ಮೂಢಗೆ ಉಪಾಯ ಹೇಳಿದರೆ ತಿಳುವದೆ ತಿಳುವದೆ ಖೋಡಿಗೆ ಸುಲಕ್ಷಣದ ಮಾತು ಹೊಳೆವದೆ 1 ಬಿಸಲು ಬೀಳುದೆ ಬೀಳುದೆ ಗೂಢ ಗುರುವಿನ ಮಾತಿದು ನಾಡಿಗೆ ತಿಳುವದೆ 2 ವಿಷ ಕಚ್ಚಿದ ಮನಕೆ ಸುಘನ ಭಾಸುದೆ ಭಾಸುದೆ ತುಸು ಝರಿ ಇಲ್ಲದೆ ಬಾವಿಲಿ ನೀರು ಸೂಸುದೆ ಸೂಸುದೆ 3 ಹಸಗೆಟ್ಟಹ್ಯ ಕುಕ್ಕಡಿನೂಲ್ಹಾಸಿಗೆ ಬಾಹುದೆ ಬಾಹುದೆ ಕಸಕಡ್ಡಿಲ್ಲದ ಮುಗಿಲೆಂದಿಗೆ ತಾ ಮಾಸುದೆ 4 ಮೀಸಲ ಮನ ಒಂದಾದರೆ ಸಾಕು ತಿಳಿಕೊಳ್ಳಿ ತಿಳಿಕೊಳ್ಳಿ ಭಾಸ್ಕರ ಗುರುರಾಯನ ಶ್ರೀಪಾದಕೆ ಬಲಗೊಳ್ಳಿ ಬಲಗೊಳ್ಳಿ 5 ಲೇಸಿನ ನಿಜಸುಖ ನೆರೆಗೊಳ್ಳು ಮಹಿಪತಿ ನಿನ್ನಲ್ಲಿ ನಿನ್ನಲ್ಲಿ ಹೇಸಿ ಮುಖದೋರದೆ ಹೋಗುವುದು ಭವದ ತಳ್ಳಿ 6
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಮನವೆ ಚಂಚಲ ಮತಿಯ ಬಿಡು - ನಮ್ಮ |ವನಜನಾಭನ ಪಾದಭಜನೆಯಮಾಡುಪ.ಬಡಮನುಜಗೆ ಬಾಯಬಿಡುವ ದೈನ್ಯದಲವನ |ಅಡಿಗಳಿಗೆರಗಲು ಕೊಡುವನೇನೊ ||ಕಡಲಶಯನ ಜಗದೊಡೆಯನ ನೆನೆಯಕ್ಕೆ - |ಪಿಡಿದು ತಾ ಸಲಹುವ ಬಿಡದಲೆಅನುಗಾಲ1ಬಲ್ಲಿದ ಭಕುತರ ಬಲ್ಲವ ಬಹುಸಿರಿ |ಯುಳ್ಳ ಕರುಣಿ ಲಕ್ಷ್ಮೀನಲ್ಲನಿರೆ ||ಕ್ಷುಲ್ಲಕರನು ಕಾಯಸಲ್ಲದೆಂದೆಂದಿಗುನಿಲ್ಲು ಹರಿಯ ಪಾದದಲ್ಲಿ ತಲ್ಲಣಿಸದೆ 2ಮುಗಿಲು ಮೇಲದೆಗಡೆ ಅಗಣಿತವಾದಾಪ - |ತ್ತುಗಳು ಬಂದಡರಲು ನಗುತಲಿರು ||ಜಗದಧೀಶನ ಮಹಿಮೆಗೆ ನಮೋ ನಮೋ ಎಂದು |ಪೊಗಳುತ ಬಾಳು ನೀ ಅಘಗಳ ಗಣಿಸದೆ 3ಆವಾವ ಕಾಲಕೆ ದೇವನಿಚ್ಛೆಯಿಂದ |ಆವಾವುದು ಬರೆ ನಿಜಸುಖವೆನ್ನು ||ಶ್ರೀವರ ಅನಾದಿಜೀವರ ಕ್ಲಪ್ತದಂತೆ |ಈವನು ನಿಜಸ್ವಭಾವ ಬಿಡದೆನಿತ್ಯ4ಕೇಶವಾಚ್ಯುತ ಶ್ರೀನಿವಾಸ ಮುರಾರೇ |ದೋಷರಹಿತ ದೀನ ಪೋಷಕನೆನ್ನು ||ಮೋಸಗೊಳಿಪ ಭವಪಾಶವ ಖಂಡಿಪ |ಶ್ರೀಶ ಪುರಂದರವಿಠಲನು ಜಗಕಿರೆ 5
--------------
ಪುರಂದರದಾಸರು