ಒಟ್ಟು 108 ಕಡೆಗಳಲ್ಲಿ , 38 ದಾಸರು , 102 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಗೋಪೀಮಾನ ರಂಜನ ಶ್ರೀಪತಿ ಕರುಣಾಳು ವ್ಯಾಪಿಸಿಕೊಂಡಿಹ ಮಾಮಕ ತಾಪವ ವೋಡಿಸು ಸುಲಭದಿ ಪ. ಸೌಂದರ್ಯಾಮೃತ ಸಾರಾನಂದಾತ್ಮಕ ದೇಹ ವೃಂದಾರಕ ಗಣ ನಯನಾ ನಂದನ ನಿಖಿಳಾತ್ಮಾತ್ರಯ ನಿತ್ಯಾವ್ಯಯ ಸತ್ಯಾವರ ಭಕ್ತಾಸ್ಪದ ಸುಮುಖ 1 ಸುಭಗಾಂಬುದನಿಭ ಗೋವರ ಋಭುಗಣನುತ ಚರಣಾ ಇಭರಾಟ್ಕøತ ಕರುಣಾಖಿಳ ವಿಭವಾಶ್ರಯ ತರುಣಿಗಣ ಶುಭ ಸಂಚಯ ಕರುಣಾ ನಿಜಭರಣಾದೃತ ಕರಣಾ 2 ಶೃಂಗಾರ ವಿಲಾಸಿನಿಜಾಪಾಂಗಾಹೃತ ಗೋಪಕತ ಸ್ವಂಗೀಕೃತ ಪ್ರೇಮಭವಾಲಿಂಗಿತ ಶುಭಮೂರ್ತಿ ಅಂಗಜಜನಕಾದ್ಭುತ ಸಾರಂಗ ಮಮತ ಶೇಷಗಿರಿ ಶೃಂಗಾಧಿಷ್ಟಿತ ಕರುಣಾಪಾಂಗವ ದಯಮಾಡೆನುತಲಿ 3
--------------
ತುಪಾಕಿ ವೆಂಕಟರಮಣಾಚಾರ್ಯ
ಚಿಂತಯಾಮಿ ತಾರಕನಾಮಂ ಅಂತರಾತ್ಮ ರಘುರಾಮಂ ಪ ಸೇವ್ಯ ಸೀತಾರಾಮಂ ಅ.ಪ. ರಾಕ್ಷರ ರಹಿತಾಷ್ಟಾಕ್ಷರಿ ಶೂನ್ಯಂ ಮಾಕ್ಷರ ಲೋಪ ಪಂಚಾಕ್ಷರಿ ಶೂನ್ಯಂ ಸಾಕ್ಷರ ರಾಮಾದ್ವ್ಯಕ್ಷರಿ ಮಾನ್ಯಂ ರಾಕ್ಷಸನಾಶ ರಾಮಾಕ್ಷರ ಮಾನ್ಯಂ 1 ರವಿವಂಶಾಂಬುಧಿ ಚಂದ್ರಪ್ರದೀಪಂ ಭುವನಮನೋಹರ ದಿವ್ಯಸ್ವರೂಪಂ ಶಿವಧನುಭಂಜನ ವೀರಪ್ರತಾಪಂ ಅವನಿಜಾಲೋಲ ವೈಭವಯುತ ಭೂಪಂ 2 ಸತ್ಯಧರ್ಮ ಪರಾಯಣ ರಾಮಂ ನಿತ್ಯಮುಕ್ತ ಸೇವಿತ ರಘುರಾಮಂ ಸತ್ಯ ಪರಾಕ್ರಮ ಜಗದಭಿರಾಮಂ ಸ್ತುತ್ಯಚರಿತ್ರ ಮಾಂಗಿರಿವರಧಾಮಂ 3
--------------
ಅಸೂರಿ ರಾಮಸ್ವಾಮಿಅಯ್ಯಂಗಾರ್
ಚಿಂತೆಯಾತಕೊ ಮಾನವಾ ಭಜಿಸು ಶ್ರೀ- ಕಾಂತಾಖ್ಯ ಸುರಕಾಮಧೇನುವಾ ಅಂತಪಾರಗಳಿಲ್ಲದಾಸೆ ಕಡಲೊಳು ಬಿದ್ದು ಭ್ರಾಂತಿಗೊಳಿಸದೆ ಮನವ ಬಳಲಿಸದಿರು ತನುವ ಪ. ಸಂಸಾರವೆಂಬುವುದು ಸುಖ ದುಃಖ ಮಿಶ್ರಿತವು ಕಂಸಾರಿವಶದೊಳಿಹವು ಶೋಣಿತ ಪೂಯ ಕೇಶ ಕ್ರಿಮಿ ದಂಶ ಪೂರಿತ ದೇಹವು ಹಿಂಸೆಯಾಗುವ ಮೊದಲೇ ಹರಿಕೃಪಾಸುಧೆಯ ಲೇ- ಶಾಂಶ ಸಂಪಾದಿಸಿ ನಿಜಾಂಶ ಸುಖವನು ಸೇರು 1 ಹಿಂದಿನನುಭವ ಗ್ರಹಿಸು ಹರಿಯ ಮಹಿಮೆಯ ಸ್ಮರಿಸು ಮಂದ ಭಾವನೆ ವಾರಿಸು ಮುಂದಾಹದೇನೆಂದು ಕುಂದದಿರು ಧೈರ್ಯದಿಂ- ದಿಂದಿರೇಶನ ಪೂಜಿಸು ತಂದೆ ತಾಯಿಗಳು ತಮ್ಮ ಕಂದನನು ಪೊರೆವ ಪರಿ- ಯಿಂದ ಸಲಹೆಂದು ಗೋವಿಂದನಲಿ ಮೊರೆಯಿರಿಸು 2 ದೃಢ ಭಕುತಿಯಿಂದ ತನ್ನಡಿಯ ಸೇರಿದ ಜನರ ಬಿಡನು ಭಕ್ತಾರ್ತಿಹರನು ಪುಡಿಮಾಳ್ಪದುರಿತಗಳ ಪೂರ್ವದಲಿ ಪೊರೆದಂತೆ ಕೊಡವನಖಿಳಾರ್ಥಗಳನು ಮೃಡವಂದ್ಯ ಶೇಷಾದ್ರಿ ಒಡೆಯನಿರಲ್ಯಾಕೆ ಕಂ- ಗೆಡುವಿ ಎಂದಿಗು ನಿನ್ನ ಕಡೆ ಹಾಯಿಸುವ ಹರಿಯು 3
--------------
ತುಪಾಕಿ ವೆಂಕಟರಮಣಾಚಾರ್ಯ
ತತ್ವ ಚಿಂತನೆ ಮಧ್ಯಮತವೇ ದೊಡ್ಡದೆಂದು ತಿಳಿದು ಮನ ಶುದ್ಧಿಯಿಂದ ಮತವನನುಸರಿಸೋ ಪ ಶ್ರೀ ಮಧ್ವಮತದಲ್ಲಿ ಹರಿಯೇ ಸವೋತ್ತಮ ಭೇದಪಂಚ ಜಗತೆರಡು ಸತ್ಯ ಶ್ರೀ ಬ್ರಹ್ಮಾದಿಗಳೆಲ್ಲ ಹರಿಪರಿವಾರರು ತಾರತಮ್ಯವೇ ಸದಾ ಇವರಲ್ಲಿ 1 ಮುಕ್ತಿ ಎಂಬುದು ನಿಜಾನಂದದ ಅನುಭವ ಭಕ್ತಿಯೆಂಬುದೇ ದೊಡ್ಡ ಸಾಧನವು ಅಕ್ಷಾನುಮಾಗಮ ಮೂರು ಪ್ರಮಾಣ ಶ್ರೀ ಲಕ್ಷ್ಮೀಶನೇ ಸರ್ವಶ್ರುತಿವೇದ್ಯನು 2 ಸ್ವತಂತ್ರ ಪರತಂತ್ರ ಎರಡು ತತ್ವಗಳು ಸ್ವತಂತ್ರ ತತ್ವವು ಹರಿಯೊಬ್ಬನೇ ಪ ರತಂತ್ರ ಮಿಕ್ಕಿದ್ದಲ್ಲಾ ಇದಕೆ ಪ್ರಮಾಣವು `ಏಷ ಸರ್ವೇಶ್ವರ ' ವೆನ್ನುತ ಶ್ರುತಿಯು 3 ಹರಿಯೇ ಸರ್ವೋತ್ತಮ ತದನು ರಮಾದೇವಿ ವಿಧಿ ಪ್ರಾಣರಿವರಿಬ್ಬರು ತದನು ಸರಸ್ವತಿ ಭಾರತೇರಿಬ್ಬರು ಶಿವ ಶೇಷ ಗರುಡ ಶ್ರೀ ಹರಿನಾರೇರು 4 ಸೌಪರ್ಣಿ ಪಾರ್ವತಿಯರು ಸಮ ಶಕ್ರ ಕಾಮರು ಸಮ ಸ್ಮರರಮಣಿ ಗುರು ಶಚಿ ಮನು ದಕ್ಷ ಸಮರು ಆ ಮಾನವಿ ಪ್ರವಹ ಯಮೇಂದ್ವರ್ಕ ಸಮರೈವರು 5 ನಿಖಿಲ ದಿವಿಜರಲ್ಲಿ ಈ ವಿಧ ತಾರತಮ್ಯ ನಿಖಿಲ ಸುರೋತ್ತಮ ಹರಿಯೊಬ್ಬನೇ ಮಿಕ್ಕವರಲವೆಂದು ಇಂದ್ರಿಯೇಭ್ಯಃ ಪರಃ ದ್ವಾವಿಮಾ ಇತ್ಯಾದಿ ಶ್ರುತಿವಚನ 6 ಈಶ್ವರ ಜಡ ಭೇದ ಜೀವ ಜಡಕೆ ಭೇದ ಜೀವ ಜೀವಕೆ ಭೇದ ಜಡ ಜಡಕೆ ಜೀವೇಶರಿಗೆ ಭೇದ ಈಶ ಲಕ್ಷ್ಮೀ ಭೇದ ಪರತಂತ್ರ ಚಿತ್ಪರ ಜೀವ ಶಬ್ದ 7 ಬ್ರಹ್ಮವಿಚಾರ ತತ್ಜ್ಞಾನಕೆ ಸಾಧನ ಜ್ಞಾನಪ್ರಸಾದಕೆ ಇದು ಮುಕ್ತಿಗೆ ಆದ ಕಾರಣದಿಂದ ಶಮದಮಯುತನಿಗೆ ಬ್ರಹ್ಮ ಜಿಜ್ಞಾಸವು ಕರ್ತವ್ಯವು 8 ಜಿಜ್ಞಾಸ್ಯಬ್ರಹ್ಮನು ಜೀವನಲ್ಲವೊ ಜಗ ತ್ಕಾರಣತ್ವವು ಜೀವಗೆಲ್ಲಿಹುದೊ ರುದ್ರಾದಿಗಳು ಜಗತ್ಕಾರಣರಲ್ಲವೊ ಶಾಸ್ತ್ರವೇದ್ಯನೆ ಜಗತ್ಕಾರಣನು 9 ಉಪಕ್ರಮಾದಿಗಳ ವಿಚಾರ ಮಾಡಲು ಸರ್ವ ಶಾಸ್ತ್ರ ತಾತ್ಪರ್ಯಗೋಚರ ಹರಿಯೆ ಅಕ್ಷಾದ್ಯವೇದ್ಯನ ಜ್ಞೇಯನಾಗುವ ಹರ್ಯ ವಾಚ್ಯನೆಂಬುವುದದು ಸರಿಯಲ್ಲವೊ10 ಆನಂದಮಯ ಮೊದಲಾದ ವಾಚ್ಯನು ಮತ್ತೆ ಸರ್ವಗತತ್ವಾದಿ ಲಿಂಗಯುತ ದ್ಯುಭ್ವಾದಿಗಳಿಗಾಧಾರನು ಅವ್ಯಕ್ತ ಜ್ಯೋತಿರಾದಿ ಶಬ್ದ ಮುಖ್ಯಾರ್ಥನು 11 ದೋಷವರ್ಜಿತ ಹರಿ ವಿಷಯವಿರಕ್ತಿ ಭಕ್ತ್ಯು ಪಾಸನದಿಂದಲೆ ಅಪರೋಕ್ಷನೊ ಇಂತು ಪ್ರಸನ್ನನು ಮುಕ್ತಿಯನೀವನು ಎಂಬುವುದೆ ಸರ್ವ ಶಾಸ್ತ್ರಾರ್ಥವೊ 12 ವರನಾಮಗಿರಿ ನರಹರಿಯ ಪಾದಾಂಬುಜ ನಿರತ ಹೃದಯನಾಗಿ ಅನುದಿನದಿ ಧರಣಿ ಸುರನು ಇದ ಪೇಳಲು ನರಹರಿ ಚರಣಕಮಲ ಭಕ್ತಿ ಪೊಂದುವನು 13
--------------
ವಿದ್ಯಾರತ್ನಾಕರತೀರ್ಥರು
ತಪ್ಪು ಕ್ಷಮೆ ಮಾಡೋ ಕೃಪೆಯಿಂದ ನೋಡೋ ಪ ನೀನೆದಯಾನಿಧಿ ನಾನು ಅಪರಾದಿ ಖೂನದೋರೋ ಹಾದಿ ಸ್ಥಾನ ನಿಜಾನಾದಿ 1 ಅನಾಥನೆಂದು ನೋಡಿ ಸನಾಥನೆನ್ನಮಾಡಿ ಸ್ವಾನಂದ ಸುಖನೀಡಿ ಮನ್ನಾಥ ನಿಜಗೂಡಿ2 ಹೇಳಲಾರೆ ಬಹಳಾ ಕೇಳೋನೀದಯಾಳಾ ತಾಳಿಯನ್ನ ತೋಲಾಬಾಲವಿಶ್ವಷಾಲಾ 3 ಸೇವಿ ಇದೇನಮ್ಮ ಭಾವಿಸುದು ನಿಮ್ಮ ಪಾವನ್ನಗೈಸು ವರ್ಮಾ ಸುನಿತ್ಯ ಪರಬ್ರಹ್ಮಾ 4 ಬಂದ ಮ್ಯಾಲೆ ಶರಣಾ ಕುಂದವ್ಯಾಕೋ ಪೂರ್ಣ ಕಂದ ಮಹಿಪತಿಗುಣಾ ಛಂದ ಮಾಡೋಕರುಣಾ 5
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ತಾತ್ವಿಕವಿವೇಚನೆ ಏರಿಸಿ ಏರಿಸಿ ಮಾರುತ ಮ್ವತಧ್ವಜ ಸಾರ ಸುಖಂಗಳ ನಿತ್ಯದಲುಂಬುವ ಯೋಗ್ಯತೆ ಯುಳ್ಳವರೂ ಪ ಈರನ ಮತವೇ ಸಾರವು ಶ್ರುತಿಗಳ ಶೌರಿಯ ಮತವೇ ಈರನ ಮತ ಖರೆ ದೂಡಿರಿ ಸಂದೇಹ ಅ.ಪ ಇಲ್ಲವು ಜಗವಿದು ಭ್ರಾಂತಿಯ ಕಲ್ಪನೆ ಸುಳ್ಳೇ ಎಲ್ಲವು ಬ್ರಹ್ಮನ ಬಿಟ್ಟರೆ ಬ್ರಹ್ಮನೆ ಸತ್ಯವೆನೆ ಅಲ್ಲವು ನುಡಿಯಿದು ಬ್ರಹ್ಮನು ಕಾರಣ ಸುಳ್ಳಾಯಿತು ನುಡಿ ಅಲ್ಲವೆ ಯೋಚಿಸಿ ಕೊಡದು ಈ ಮನವು 1 ಉಂಬುದು ಉಡುವುದು ಕಾಂತೆಯ ಸಂಗವು ನಂಬಲು ಬೇಡಿರಿ ಸುಳ್ಳೇಯೆಂತೆಂನೆ ಸಾಕ್ಷಿಯು ಒಪ್ಪುವುದೇ ನಂಬಲನರ್ಹವೆ ಕಾರ್ಯಸುಕಾರಿಯ ಖರೆ 2 ಒಂದೇ ತೆರವಿಹ ವಸ್ತು ದ್ವಯವಿರೆ ಒಂದನು ಮತ್ತೊಂದೆಂಬುವ ಭ್ರಾಂತಿಯು ಕೊಡುವದೂ ಪೊಂದಿಹ ಹೇಗೆನೆ ಉತ್ತರ ಸಿಕ್ಕದು ಯೋಚಿಸಿ ಕೋವಿದರೆ 3 ಭ್ರಾಂತಿಯ ಪೆಣ್ಣನು ಕೊಡುತ ತಾಸ್ವಾ ತಂತ್ರ ವಿಹೀನನು ಆಗುತ ಮಿಡುಕುವ ದೇವನು ಎನಿಸುವನೆ ಮಂತ್ರಿಸೆ ಬ್ರಹ್ಮನ ನಾನಿಹೆ ನೆಂಬುದ ಭ್ರಾಂತಿಯ ತೊಲಗುತ ಬ್ರಹ್ಮನು ಆಹನೆ ಮನವ ವಿಚಾರಿಸಿರಿ4 ನಾನೇ ಬ್ರಹ್ಮನು ಎಂಬೀ ಜ್ಞಾನವು ತಾನೇ ಬಾರದು ಸಹಜ ವಿದಲವು ಅನುಭವ ವಿರುದ್ಧಾ ತಾನೇ ಬ್ರಹ್ಮನು ಆಗಿರೆ ಭವದೊಳು ನಾನಾ ದುಃಖವ ನುಣ್ಣಲು ಬಂದರೆ ಹುಚ್ಚನೆ ಅವಸರಿಯು5 ಬ್ರಹ್ಮ ದ್ವಯವಿದೆ ಸತ್ಯ ದ್ವಯವಿದೆ ಬ್ರಹ್ಮನು ಆಹುದು ಕೊನೆ ಮಾತೆಂದರೆ ಬ್ರಹ್ಮನು ಶೂನ್ಯನಿಹ ಬ್ರಹ್ಮನು ನಿರ್ಗುಣ ನಂದವಿಹೀನನು ಬ್ರಹ್ಮನ ಗತಿಯೆನೆ ಸರ್ವವಿನಾಶವೆ ಯಾರಿದ ಬಯಸುವರೂ6 ವ್ಯಕ್ತಿತ್ವವು ತಾನಾಶವು ಆಹುದೆ ಮುಕ್ತಿಯು ಯೆಂತೆನೆ ಸರ್ವವಿನಾಶಕೆ ಸಾಧನೆಯೇ ಬತವು ಮುಕ್ತಿಯು ದುಃಖವಿವರ್ಜಿತ ಬರಿಸುಖ ರಿಕ್ತವು ಬರಿಯೆನೆ ಭವವಿದು ವರವೈ ಬೇಡವು ಆ ಮುಕ್ತಿ7 ಸತ್ಯವ ನುಡಿವುದು ವೇದವು ಒಂದೆಡೆ ಮಿಥ್ಯವ ನುಡಿವುದು ಮತ್ತೊಂದೆಡೆಯೆನೆ ಯಾವುದು ಸಿದ್ಧಾಂತ ಮೊತ್ತವ ನೂಕುತ ಕಿಚ್ಚಡಿ ವೇದಕೆ ಮೊತ್ತವ ಕೊಳ್ಳುತ ಒಂದೇ ಅರ್ಥವ ಜೋಡಿಸಿ ಇದು ನೀತಿ8 ಬೌದ್ಧರು ಒಪ್ಪನು ಶ್ರುತಿಗಳ ದೇವನ ವೇದವ ಒಪ್ಪುವ ಮಾಯಾವಾದಿಯ ಬ್ರಹ್ಮನು ಸೊನ್ನೆಯಿಹ ವೈದಿಕ ವೇಷದ ಬೌದ್ಧನ ವಾದವೆ ಶೋಧಿಸಿ ನೋಡಲು ಮತ್ತೇನಿಲ್ಲವು ಚಿಂತಿಸೆ ಸರಿಯಿಷ್ಠೆ9 ತರತಮ ಬಹುವಿಧ ಭೋಗವ ಮುಕ್ತಿಲಿ ಇರುವುದು ಸಿದ್ಧವು ಶೃತಿಗಳ ನಂಬಲು ಜೀವರ ಭಿನ್ನತೆಯು ಸ್ಥಿರವೇ ಆಯಿತು ಇದರಿಂ ಮುಕ್ತಲಿ ಪರಿ ಬಗೆತಾ ವಿದಿತವೆ ಜಗದಲಿ ಭೇದವೆ ಸರ್ವತ್ರ10 ನಾಸ್ತಿಕ ವಾದವ ತಳ್ಳಿರಿ ಆಚೆಗೆ ನಾಸ್ತಿಕ ಬಂದನೆ ತಂದೆಯು ಇಲ್ಲದೆ ಕಾರ್ಯವು ಜಗವಿರಲು ಆತನು ನೊಡಿಹ ಜ್ಞಾನಿಗಳಿಲ್ಲವೆ ಪೊಗಳವೆ ಗೋತತಿಯು11 ಪ್ರಕೃತಿ ವಿಕಾರದ ಜಗವಿದು ವಿದಿತವೆ ವಿಕಲ ವಿಶೇಷದ ಜೀವನು ಹಾಗೆಯೆ ಉಭಯರ ಆಳುವನು ವಿಕಲ ವಿವರ್ಜಿತ ಸಕಲ ಗುಣಾರ್ಣವ ಸಕಲ ನಿಯಾಮಕ ಸರ್ವ ಸಮರ್ಥನು ಇರಲೇ ಬೇಕಷ್ಟೆ12 ನಿತ್ಯವು ಈತ್ರಯ ಸಿದ್ಧವು ಆದರೆ ನಿತ್ಯ ಪರಸ್ಪರ ಸಂಬಂಧ ತ್ರಯ ಜ್ಞಾನವೆ ಪುರುಷಾರ್ಥ ಉತ್ತಮ ನೊಬ್ಬನು ಅಧಮರು ಇಬ್ಬರು ಮತ್ತಿವರಲಿ ಹಾಗಧಮನು ಜೀವನು ಚೇತನ ಪ್ರಕೃತಿ ವರ13 ಸರ್ವ ಸ್ವತಂತನು ಒಬ್ಬನೆ ಇರದಿರೆ ಸರ್ವಾ ಭಾಸವೆ ಜಗವಿದು ಆಹುದು ಪ್ರಭು ದ್ವಯ ಕೂಡುವುದೆ ಸರ್ವಗ ಶಾಶ್ವತ ಪೂರ್ಣಾ ನಂದನು ಸರ್ವ ವಿಚಿತ್ರನು ಮುಕ್ತಿದನಿರದಿರೆ ಪ್ರಭು ಅವನೆಂತಾಹ14 ಶುರುಕೊನೆ ಮಧ್ಯವು ಇದ್ದ ದೇವಗೆ ಬರುವನೆ ಹೊಸ ಹೊಸ ದೇವನು ಪ್ರತಿಪ್ರತಿ ಕಲ್ಪದಿ ಯೋಚಿಸಿರಿ ಇರದಿರೆ ಸಕಲೈಶ್ವರ್ಯವು ಆತಗೆ ತರುವನು ನಂದದ ಸೃಷ್ಠಿಯ ಹೇಗವ ವರಸಮರಿಲ್ಲವಗೆ15 ಸುಳ್ಳಿರೆ ಜಗವಿದು ಪಾಲಿಪ ದೊರೆಯದ ಕಳ್ಳನೆ ಅಲ್ಲವೆ ಅಷ್ಠಕರ್ತುತ್ವವು ಕೂಡುವ ದ್ಹೇಗಿನ್ನು ಎಲ್ಲಾ ಜಗವಿದು ನಿತ್ಯಾ ನಿತ್ಯವು ಎಲ್ಲಾ ಸತ್ಯವೆ ಶ್ರುತಿಗಳ ನುಡಿಗಳು ಭೃತ್ಯರು ಜೀವಗಣ16 ನಿತ್ಯವು ಪ್ರಕೃತಿಯು ಜೀವರು ಈಶನು ಸತ್ಯವು ಇದುಯೆನೆ ಪಂಚಸುಭೇದವು ನಿತ್ಯವೆ ಎಲ್ಲೆಲ್ಲು ನಿತ್ಯ ಸುಖಂಗಳ ಬಯಸುವ ನಮಗವು ಹತ್ತವು ಕಾರಣ ಸರ್ವಸ್ವತಂತ್ರನು ದೇವನೆ ಸತ್ಯವಿದು17 ಚೇತನ ಪ್ರಕೃತಿಯೆ ಲಕ್ಷ್ಮಿಯು ತಿಳಿವುದು ಆತನ ರಾಣಿಯು ನಿತ್ಯಸುಮುಕ್ತಳು ನಿತ್ಯಾವಿಯೋಗಿನಿಯು ಚೇತನ ನಿಚಯದ ಚೇತನ ಹರಿ ಇಹ ಆತನೆ ದೊರೆ ಜಗ ಜಂಗಮ ಸ್ಥಾವರ ಸತ್ತಾದಾಯಕನು 18 ದೋಷ ವಿದೂರ ಅಶೇಷ ಗುಣಾರ್ಣವ ದಾಸ ಪೋಷನಿಜ ಮುಕ್ತಿದ ನಿರದಿರೆ ಭಜಿಸುವದೇಕವನ ಶ್ರೀಶನು ಬಿಡೆ ಜಡ ಚೇತನ ಚೇಷ್ಠೆಯು ನಿಹ ಉಲ್ಲಾಸದಿ ಭಜಿಸುವುದು 19 ಪರಿಮಿತ ಶಕ್ತನು ದೇವನು ಇದ್ದರೆ ಪರಿಮಿತ ಜೀವರ ತೆರವೇ ಆಹನು ಕಾರಣ ನಿಸ್ಸೀಮ ಹರಿಗುಣವಗಣಿತ ಸಿಗ ಸಾಕಲ್ಯದಿ ನಿರುಪಮ ಸುಖಜ್ಞಾನಾತ್ಮಕ ವಿಭುವರ ಅನಾದಿ ಸಿದ್ಧವಿದು 20 ಪ್ರಾಕೃತ ಗುಣಗಣ ವರ್ಜಿತ ದೇವನ ಜ್ಞಾನ ಸುದೃಷ್ಠಿಗೆ ಗೋಚರನು ಸ್ವೀಕೃತ ನಾದರೆ ಜೀವನು ಹರಿಯಿಂ ತಾಕಿಸಿ ದೃಷ್ಠಿಗೆ ತನ್ನನೆ ತೋರುವ ಭಕ್ತರ ಬಾಂಧವನು 21 ತರತಮ ಜ್ಞಾನದಿ ಗುಣ ಉತ್ಕರ್ಷವು ಬರುವುದು ಕಾರಣ ತಿಳಿಯುತ ಹರಿಪರ ಮೋಚ್ಛನು ಹೌದೆನ್ನಿ ಅರಿವುದು ಅತಿಪರಿ ಪಕ್ವದ ಭಕ್ತಿಯ ಮಾಧವ ಮೆಚ್ಚುವನು22 ವೇದಗಳಿಂದಲೆ ದೇವನು ವ್ಯಕ್ತನು ವೇದಗಳಿಂದಲೆ ಧರ್ಮಾಧರ್ಮವಿ ವೇಕವು ಸರಿಯಷÉ್ಠ ವೇದ ನಿಜಾರ್ಥವೆ ಸಚ್ಛಾಸ್ತ್ರಂಗಳು ಮೋದವೆ ದೊರಕದು ಬಿಟ್ಟರೆ ಇವುಗಳ ಸಾದರ ಭಜಿಸುವುದು23 ಬಿಂಬನು ಹರಿ ಪ್ರತಿ ಬಿಂಬನು ಜೀವನು ಬಿಂಬಾಧೀನವು ಪ್ರತಿ ಬಿಂಬನ ಚೇಷ್ಠೆಗಳೆಂತರಿತು ಉಂಬುತ ಮುದದಿಂ ಸುಖದುಃಖಂಗಳ ಬಿಂಬಕ್ರಿಯೆಯೆನುಸಂಧಾನವ ಗುರುವಿಂದರಿತು ಸಮರ್ಪಿಸಿ24 ಮೆಚ್ಚುಲು ಮಾಧವದಾವುದಸಾಧ್ಯವು ಅಚ್ಚುತನೊಲಿಮೆಗೆ ಹೆಚ್ಚಿದುದೇನಿದೆ ಕೊಚ್ಚುತಕಲಿ ಸೊಂಕು ತಚ್ಛಭಿಮಾನ ಫಲೇಚ್ಛೆಯ ತ್ಯಜಿಸುತ ಕಚ್ಛಪ ನೊಲಿಮೆಗೆ ವಿಧಿಯ ನಿಷೇಧವ ಮರೆಯದೆ ಗೈಯುತಲಿ25 ಪರ ಮೋಚ್ಚನು ವರಸಮರಿಲ್ಲವು ಸಿರಿ ವರ ವಿಧಿಪಿತ ಸೃಷ್ಠ್ಯಾದ್ಯಷ್ಠಸು ಕರ್ತನು ವಿಭುವೆಂದು ನಿರುಪಮ ನಿಖಿಳಾಗಮ ಪ್ರತಿ ಪಾದ್ಯನು ಸ್ವರತ ಸ್ವತಂತ್ರನು ಪೂರ್ಣಾನಂದನು ಎನ್ನುತ ಸಾರುತಲಿ26 ಸಾಮನು ಸರ್ವರ ಬಿಂಬನು ಸರ್ವಸು ನಾಮನು ಸರ್ವಾಧಾರನು ಜಡಜಂಗಮ ವಿಲಕ್ಷಣನು ಭೂಮನು ಭಕ್ತ ಪ್ರೇಮಿಯು ಸದ್ಗುಣ ಧಾಮನು ಪೂರ್ಣನು ನಿಜ ಸುಖ ಮುಕ್ತಿದನೆನ್ನುತ ಸಾರುತಲಿ27 ವಿಧಿ ಪರಿಸರ ವಿಪಶಿವ ಪ್ರಮುಖರು ಪರಿವಾರವು ನಿರವದ್ಯನು ಮುಕ್ತಾ ಮುಕ್ತರ ನಾಯಕನು ಉರುಗಾಯನ ಜಗದೊಳ ಹೊರವ್ಯಾಪ್ತನು ಪರಿಮರ ಸ್ವಗತ ಭೇದ ವಿವರ್ಜಿತನೆಂಬುದ ಸಾರುತಲಿ28 ತರತಮ ಪಂಚಸುಭೇದವು ನಿತ್ಯವು ನಿರುತದಲುಂಬುವ ಸಾರವೆ ದುಃಖ ನಿರ್ಲೇಪನು ಅದ್ಭುತನು ಅರಿಯರು ಯಾರೂ ಇವನೇ ವಲಿಯದೆ ಪುರುಷೋತ್ತುಮ ಸಾಕಲ್ಯದವಾಚ್ಯನು ಎಂದು ಡಂಗುರ ಹೊಡೆಯುತ 29 ಗುರುವಿನ ದ್ವಾರವೆ ಹರಿತಾ ವಲಿಯುವ ಗುರುವೆನೆ ಮುಖ್ಯದಿ ಮುಖ್ಯ ಪ್ರಾಣನೆ ಸರಿಸಿರಿ ಯೆಂತೆಂದು ಗುರುಗಳು ಹಿರಿಯರು ಎಲ್ಲಾ ಕ್ರಮದಲಿ ಮಧ್ವರಿಗೊಂದಿಸಿ ಮುದದಿ 30 ಅನುಭವವಿಲ್ಲದ ಜ್ಞಾನವು ವಣವಣ ಸಾಧನೆ ಇದು ಖರೆಯ ಚಿನುಮಯ ನೊಲಿಸಲ್ ಮನೆಧನ ಬೇಡವು ತನುಮನೆ ವಿಷಯಗಳಿಂದಲೆ ಪೂಜಿಪ ಕ್ರಮದಿಂಯಜಿಸುತ 31 ಕಲಿಯುಗವಿದು ವರ ಸುಲಭದಿ ಸಾಧನೆ ವಲಿಯುವ ಬೇಗನೆ ನಾಮ ಸ್ಮರಣೆಗೆ ಭಜಿಸಿರಿ ಹರಿನಾಮ ವಳದಾರಿಯು ಸರಿ ಕ್ರಮದಿಂ ಪಾಡಲು ಮುಳುಗುತ ಭಕ್ತಿಯ ಕಡಲೊಳ್ ನಿಜಹರಿ ದಾಸರು ದೀಕ್ಷೆಯಲಿ32 ಕವಿಗುರು ರಾಜರ ಚರಣದಿ ಬಾಗುತ ಪವನ ಮತಾಂಬುಧಿ ಸೋಮನು ಜಯಮುನಿ ಹೃದಯಗ ವಾಯುವಲಿ ಅವಿರತ ನಲಿಯುವ ಶ್ರೀ ಕೃಷ್ಣವಿಠಲನು ತವಕದಿ ವಲಿಯುವ ಗ್ರಹಿಸಲ್ ಈ ಪದ ಜಯ ಜಯವೆನ್ನುತ33
--------------
ಕೃಷ್ಣವಿಠಲದಾಸರು
ತಿಳಿದು ನೋಡಿ ತನುವಿನೊಳು ತಮ್ಮ ನಿಜಖೂನ ಸುಳುಹು ದೋರಿಕುಡುವ ನೋಡಿ ನಿಜಾನಂದ ಘನ ಧ್ರುವ ತಮ್ಮ ಶುದ್ಧಿ ತಮಗಿಲ್ಲವೊ ಹೆಮ್ಮೆ ಬಹಳ ಘಮ್ಮ ಆದರೆ ಎಲ್ಲ ನೋಡಿ ಹೊಕ್ಕು ಮೃಗಜಲ ನಮ್ಮ ನಿಮ್ಮದೆಂದು ಹೊಡೆದಾಡಿ ಬಿತ್ತು ಬೀಳ ಸಮ್ಯಗ್ ಜ್ಞಾನದಿಂದ ತಿಳಿದವನೆ ವಿರಳ 1 ತನ್ನ ತಾ ತಿಳಿದವಗೇನು ಭಿನ್ನಭೇದವಿಲ್ಲ ಉನ್ಮನವಾಗಿ ಪೂರ್ಣ ತಿಳಿದವನೆ ಬಲ್ಲ ಧನ್ಯವಾದ ಮಹಿಮರಿನ್ನು ಮನಿಮನಿಗೆ ಇಲ್ಲ ಕಣ್ಣಾರೆ ಕಾಣುತಿಹ್ಯ ಗುಪ್ತಗುಹ್ಯವೆಲ್ಲ 2 ತಿಳುಹದೋರಿಕೊಟ್ಟ ಗುರು ಎನ್ನೊಳÀಗೆ ಪೂರ್ಣ ಹೊಳೆಹುತಿಹ್ಯಾನಂದ ಘನಸದ್ಗುರು ಪೂರ್ಣ ಥಳಥಳಿಸುತಿಹದು ಸದ್ಗತಿ ಸಾಧನ ಕಳೆದ ಮಹಿಪತಿ ನೋಡಿ ಜನನ ಮರಣ 3
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ದತ್ತವಧೂತ ಶ್ರೀ ಗುರು ಸಾಕ್ಷಾತ ನಿತ್ಯವಾಗಿಹ್ಯ ನಿಜ ನಿರ್ಗುಣನೀತ ಪ ನಿರ್ಗುಣ ನಿಶ್ಚಲ ಗಗನಾಕಾರ ಸುಗುಣದಲಿ ತಾನೆ ಸಹಕಾರ 1 ಸಹಕಾರನಹುದು ಸದ್ಗುರುನಾಥ ಬಾಹ್ಯಾಂತ್ರದಲಿ ತಾನೆ ಪ್ರಖ್ಯಾತ 2 ಪ್ರಖ್ಯಾತನಹುದು ತ್ರಿಗುಣರಹಿತ ಮುಖ್ಯಮುನಿಗಳಿಗೆ ಮೋಕ್ಷ ಸುದಾತ 3 ದಾತನಹುದು ತ್ರೈಲೋಕ್ಯದೊಳೀತ ಈತನೆ ವಿಶ್ವದೊಳಗೆ ದೈವತ 4 ದೈವತನಹುದು ದೇವಾದಿಗಳಾತ್ಮ ಮೂರ್ತಿ ಶ್ರೀಹರಿ ಸರ್ವಾತ್ಮ 5 ಹರಿ ಸರ್ವಾತ್ಮನಾಗಿಹ ನಿಜಪೂರ್ಣ ಪರಿಪರಿ ಆಗುವ ಅಗಣಿತಗುಣ 6 ಅಗಣಿತಗುಣ ಅಗಾಧ ಅಪಾರ ನಿಗಮಗೋಚರ ನಿರುಮಪ ನಿರ್ಧಾರ 7 ನಿರ್ಧಾರನು ನಿಜನಿಷ್ಟರಪ್ರಾಣ ಸಾಧಕರಿಗೆ ಸದ್ಗತಿ ಸಾಧನ 8 ಸಾಧನದೊಡೆಯನಹುದು ಶಾಶ್ವತ ಆದಿದೇವ ಸಕಲಾಗಮ ಪೂಜಿತ 9 ಪೂಜಿತ ಬ್ರಹ್ಮಾದಿಗಳ ಕೈಯ ಮೂಜಗದೊಳು ರಾಜಿಸುತಿಹ 10 ರಾಜಿಸುತಿಹ ತಾ ರಾಜರಾಜೇಂದ್ರ ಸುಜನರ ದೃಷ್ಟಿಯೊಳಿಡದಿಹ ಸಾಂದ್ರ 11 ಸಾಂದ್ರವಾಗಿಹನು ಸಾರ್ವಭೌಮ ಇಂದ್ರಾಧಿಕÀರೊಂದಿತ ಮಹಿಮ 12 ಮಹಿಮನಹುದು ಮುನಿಜನ ಮಂದಾರ ಧ್ಯಾಯಿಸುವರ ನಿಜ ಸಾಕ್ಷಾತಾರ 13 ಸಾಕ್ಷಾತಾರ ಶ್ರೀಗುರು ಜಗದೀಶ ಮೋಕ್ಷಾಧಿಕರಿಗಳಾತ್ಮ ಉಲ್ಹಾಸ 14 ಉಲ್ಹಾಸವೆ ನಿಜ ವಸ್ತುವೆ ತಾನು ಕಲ್ಪದ್ರುಮ ನಿಜ ಕಾಮಧೇನು 15 ಕಾಮಧೇನುವಾಗಿ ರಕ್ಷಿಸುವ ಬ್ರಹ್ಮನಿಷ್ಠರ ಹೃದಯದಲಿ ಭಾಸಿಸುವ 16 ಭಾಸುವ ಭಾಸ್ಕರಕೋಟಿ ಪ್ರಕಾಶ ಋಷಿ ಮುನಿಗಳ ನಿಜಮಾನಸ ಹಂಸ 17 ಹಂಸನಾಗಿ ವಿಶ್ವಂಭರಿತ ಸೂಸುವ ಸರ್ವಾಂತ್ರಲಿ ಅನಂತ 18 ಅನಂತ ಕೋಟಿ ಬ್ರಹ್ಮಾಂಡನಾಯಕ ಅನುಭವಿಗಳಿಗೆ ದೋರುವ ಕೌತುಕ 19 ಕೌತುಕದೋರಿದ ಕರುಣದಲ್ಯನಗೆ ಜೀವಪಾವನಗೈಸಿದ ಜಗದೊಳಗೆ 20 ಜಗದೊಳು ಸ್ತುತಿಸುವೆನು ಅನುದಿನ ಶ್ರೀಗುರು ದತ್ತವಧೂತ ಪೂರ್ಣ 21 ಪೂರ್ಣ ಸ್ಮರಿಸುವೆನು ಮನದೊಳು ನೋಡಿ ಪುಣ್ಯ ಪ್ರಭೆಯ ನಿಜ‌ಘನ ಒಡಗೂಡಿ22 ಒಡಗೂಡಿದ ನಿಜಾನಂದದ ಗತಿಯು ಕ್ಷಿತಿಯೊಳು ಕೊಂಡಾಡಿದ ಮಹಿಪತಿಯು 23
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ದಾನವಗಿರಿಕುಲಿಶಾ ನರಸಾರಥಿ ದಶರಥ ಸುಕುಮಾರ ಪ ಕುಂಭಿನಿಜಾರಮಣ ನಂಬಿದೆ ನಾನಿನ್ನ 1 ಕಮಠ ವರಾಹ ನರಹರಿ ವಾ- ಮನ ಭಾರ್ಗವ ರಾಮ ಭಂಜನ ಜಿನಸುತ ಕಲ್ಕಿಯೆ ದೀನ ಜನ ಪ್ರೇಮಾ 2 ತಿರುಪತಿಯಲಿ ನೆಲಸಿರುವೆ ಭಕ್ತಸುರ- ತರುವೆ ವೆಂಕಟೇಶ ಗುರುರಾಮವಿಠಲ ಕೋರಿದ ವರಗಳ ಕೊಡುವ ಶ್ರೀನಿವಾಸ 3
--------------
ಗುರುರಾಮವಿಠಲ
ದಾರೇನೆಂಬುರೈ|ಹರಿ ಭಕ್ತರಿಗೆ|ದಾರಲ್ಲವೆಂಬುರೈ ಪ ಗುರುವಿನಂಘ್ರಿವಿಡಿದು|ಗುರುತುಕೀಲವರಿತು ನಿಜಾ| ಪರಮಾನಂದ ಸುಖಾ|ಸುರಸನುಂಬುವರಿಗೇ 1 ಕುತ್ಸಿತ ಮಾರ್ಗವನೆಲ್ಲಾ|ಕೊಚ್ಚಿಜರಿದು ಧರಿಯೊಳು| ಅಚ್ಯುತ ಪರದೈವನೆಂದು|ನೆಚ್ಚಿದ ಮಹಿಮೆಗೆ 2 ಮಾಧವ ಮುದ್ರೆಯಿಂದ|ದ್ವಾದಶ ನಾಮವನಿಟ್ಟು| ಪದುಮಾ ತುಳಸೀಸರ|ಹೃದಯದಲ್ಲಿ ಮೆರೆವಂಗೆ 3 ನಷ್ಟನೃಪರಾ ಮನೆಯಾ|ತನಿಷ್ಟೆಯೊಳು ಲೆಕ್ಕಿಸದೆ| ಹುಟ್ಟಿದ ಲಾಭದಲ್ಲಿ|ತುಷ್ಟಿ ಬಟ್ಟಿರುವಂಗೆ 4 ಅವರವರಂತೆ ಲೋಕ|ದವರಿಗೆ ತೋರುತಾ| ವಿವರಿಸಿ ವಿವೇಕ ಹಾದಿ|ಭವದಾ ಬೇರಿಳಿದಂಗೆ 5 ತಾಳದಂಗಡಿಗೆಯ ಸಿಡಿದು|ಮೇಳ ಭಾಗವತರೊಳು| ಶ್ರೀಲೋಲನನು ಪಾಡಿ|ನಲಿದಾಡುತಿಹರಿಂಗೆ 6 ತಂದೆ ಮಹಿಪತಿ ನಿಜಾ|ನಂದನ ಸಾರಿದ ನುಡಿ| ಹೊಂದಿ ಭಾವಭಕ್ತಿಯಿಂದ|ಛಂದವಾಗಿಪ್ಪರಿಂಗೆ7
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ದಾಸರೆ ಪುರಂದರದಾಸರು ಲೇಸಾಗಿ ಎನಗೆ ಸುಮಾರ್ಗವನು ತೋರಿದರು ಪ ಅತಿ ಮುಗ್ಧನಾಗಿ ದುರುಳರಾ ದುರಾಚಾರದಲ್ಲಿ ಮತಿಗೆಟ್ಟು ಮಹಿಯೊಳಗೆ ತಿರುಗುತಿರಲೂ ಅತಿ ದಯಾಪರರಾಗಿ ತನ್ನವನಿವನೆಂದು ಹಿತದಲ್ಲಿ ಪೊರೆದು ಕುಮತಿಯ ಬಿಡಿಸಿದರು1 ಶಬ್ದಾದಿ ಮೊದಲಾದ ವಿಷಯಂಗಳಾ ಕರ್ಮ ದಬ್ಧ್ದಿಯೊಳಗೆ ಬಿದ್ದು ಪೊರುಳುತಿದ್ದಾ ಲುಬ್ಧಕನ ಕರೆದು ದೃಢವಾಗಿ ಸುಜ್ಞಾನದ ಅಬ್ಧಿಯೊಳಗಿಟ್ಟು ಕರುಣದಲಿ ನೋಡಿದರು 2 ಹಿಂದೆ ಏಸೇಸು ಜನ್ಮ ಜನಿಸಿ ಅನ್ಯ ಕಾಲ ನೊಂದ ನರನಾ ತಂದು ವೈರಾಗ್ಯದೊಳು ಪೊಗಸಿ ಸೌಖ್ಯವ ಪರಶಿ ತಂದೆ ಮಕ್ಕಳನು ಸಾಕಿದಂತೆ ಸಾಕಿದರು3 ಉಪದೇಶವಿತ್ತರು ಸುಪ್ರೀತಾರ್ಥದಲಿ ಬಂದು ಜಪ ನಿಜಾಸನ ಧ್ಯಾನ ಜ್ಞಾನದಿಂದ ಸಪುತೆರಡು ಲೋಕದ ಒಡೆಯನ್ನ ಪಾದವ ಸಫಲವಾಗುವಂತೆ ಸಾಧನವ ಪೇಳಿದರು 4 ದಾರಿದ್ರ ದೋಷವ ಸೇರಿದ ಮಾನವನಿಗೆ ಆರು ಕೊಡದಲೆ ಧೇನು ದೊರಕಿದಂತೆ ಕಾರುಣ್ಯದಲಿ ಗುರು ಪುರಂದರದಾಸರು ಮೂರುತಿ ವಿಜಯವಿಠ್ಠಲನ್ನ ತೋರಿಸಿದರು 5
--------------
ವಿಜಯದಾಸ
ದೇವಾ ನಿನ್ನ ಪಾದವನ್ನು ಯಾವಾಗಲೂ ಸ್ಮರಿಸುವೆನೂ ಭಾವ ಭಕ್ತಿ ಪ್ರೇಮವಿತ್ತು ಕಾವುವೆನ್ನ ಹರಿಯೇ ನೀನು ಪ ದೀನನಾಥನೆಂಬ ಬಿರುದಾ ಮಾನಭಕ್ತರಿಂದ ಪೊರೆದಾ ಹೀನ ದೀನನಾದ ಎನ್ನಾ ಜ್ಞಾನವಿತ್ತು ರಕ್ಷಿಪುದು 1 ಇಂದಿರೇಶ ನಾರಾಯಣಾ ಬೃದದಿಂದಾ ಭಜಿಪೆ ನಿನ್ನಾ ಮಂದಮತಿಯ ಕಳೆದು ನಿಜಾನಂದದೊಳಗಿರಿಸೊ ಯನ್ನಾ 2 ಬೇಡಿಕೊಂಬೆನೀಗ ನಿನ್ನಾ ನೋಡುವುದು ಕೃಪೆಯೊಳೆನ್ನಾ] ಬಿಡಬ್ಯಾಡಾ ಬ್ಯಾರೆನಗೆ ಇಡೊ ಇಡೊ ನಿನ್ನೊಳೆನ್ನಾ 3 ಚಿಂತೆಗಳನ್ನೆಲ್ಲಾ ತೊರಿಸೊ ಸಂತ ಸಂಗದೊಳಿರಿಸೊ ಕಂತುಪಿತನೆ ಗುರುವೆ ಎನ್ನಾ ಶಾಂತಿ ಪದವ ಪಾಲಿಸೊ 4
--------------
ಶಾಂತಿಬಾಯಿ
ದೇವಾ ಪಾಲಿಸೋ ಎನ್ನಾ ನಿಜ ಭಾವದಿ ರಕ್ಷಿಸೆನ್ನಾ ಕಾವುದೆನ್ನನು ನೀನೂ ಪ ಗಜರಾಜ ಪಶುವಾ ಹಿಂದೆ ಭಜಿಪಾಗತಾ ನೀನೇ ಕಾಯ್ದೆ ನಿಜದಾಪದವ ತೋರಿದೇ 1 ಮಂದವಾಗಿಹೇ ನಾನು ನಿಜಾನಂದದೊಳ್ ಇಡೋ ನೀನು ಛಂದದೀ ಸಲಹೊ ನೀನು 2 ಚಿಂತೆಗಳೆಲ್ಲ ತೊರಿಸೊ ನಿಶ್ಚಿಂತ ಪದದೊಳ್ ಪಾಲಿಸೊ ಶಾಂತಿ ಪದದೊಳ್ ಇರಿಸೊ 3
--------------
ಶಾಂತಿಬಾಯಿ
ನಾರಾಯಣಾ ಹರಿನಾರಾಯಣಾ ಕೃಷ್ಣಾ ನಾರಾಯಣಾ ಸ್ವಾಮಿ ನಾರಾಯಣಾ 1 ಅಚ್ಯುತಾನಂತ ಗೋವಿಂದ ಪರಬ್ರಹ್ಮ ಸಚ್ಚಿದಾನಂದ ಶ್ರೀ ನಾರಾಯಣಾ 2 ಭಕ್ತವತ್ಸಲ ದೇವಾ ಪಂಡವಾಪಕ್ಷಕಾ ಮುಕ್ತಿ ದಾಯಕ ಶ್ರೀ ನಾರಾಯಣಾ 3 ನಂದನಂದನ ಆನಂದ ಶಂಕರ ಪ್ರೀಯಾ ವಂದಿತಾ ಮುನಿಜನರ ನಾರಾಯಣ 4 ಇಂದಿರಾರಮಣ ಮುಕುಂದ ಮುರಹರಿ ಮಂದರಧರ ಹರಿನಾರಾಯಣ 5 ದ್ರೌಪದಿ ರಕ್ಷಕಾ ದಾನವಾ ಶಿಕ್ಷಕಾ ಕವಿಜನ ಪೋಷಕ ನಾರಾಯಣಾ 6 ರಾವಣ ಮರ್ದನಾ ಆಜೀವಲೋಚನಾ ಯದುಕುಲಾಬ್ದಿ ಚಂದ್ರ ನಾರಾಯಣಾ 7 ಅಕ್ರೂರವರದಾ ನಿಜಾನಂದ ಮೂರುತಿ ಚಕ್ರಧರ ಹರಿ ನಾರಾಯಣಾ 8 ಭವ ನಾಯಕ ವಿಷ್ಣು ನಾರಾಯಣಾ 9 ಗಂಗಜನಕ ದೇವೋತ್ತುಂಗ ಮಹಾನುಭಾವ ಶೃಂಗಾರ ಮೂರುತಿ ನಾರಾಯಣಾ 10 ಅಂಬುಜಾದಳ ನೇತ್ರಾ ಅಜಮಿಳಾರಕ್ಷಕ ಪತಿ ನಾರಾಯಣ 11 ಪಕ್ಷಿವಾಹನ ಜಗದೃಕ್ಷಾ ಸುಲಕ್ಷಣಾ ಲಕ್ಷ್ಮೀರಮಣ ಶ್ರೀ ನಾರಾಯಣಾ 12 ಕಮಲಸಂಭವಪಿತಾ ಕರುಣಪಯೋನಿಧಿ ಅಮಿತ ಪರಾಕ್ರಮ ನಾರಾಯಣಾ 13 ಮೂರ್ತಿ ಪೂಜಿತ ಸರ್ವತ್ರಾ ಪೂತನ ಸಂಹಾರ ನಾರಾಯಣಾ 14 ದಿನಕರಾ ಕುಲದೀಪಾ ದೀನ ದಯಾಪರ ಅನಿಮಿತ್ತ ಬಂಧು ದೇವಾ ನಾರಾಯಣಾ 15 ಕಾಲಿಯಾ ಮರ್ದನಾ ಗಂಗಾಧರಾರ್ಚಿತ ಕಲ್ಮಷರಹಿತ ಶ್ರೀನಾರಾಯಣಾ 16 ಪಾಲಿತಾ ಸುರಮುನಿ ಪಾಪವಿನಾಶನಾ ವಾಲಿ ಸಂಹಾರಕಾ ನಾರಾಯಣ 17 ದಶರಥನಂದನ ಧರಣಿರಕ್ಷಕಾ ಲವ ಕುಶಪಿತಾ ಶ್ರೀಹರಿನಾರಾಯಣಾ 18 ವೇದಗೋಚರ ನಿಗಮಾಗಮ ವೇದ್ಯ ಸು- ನಾದ ವಿನೋದ ಶ್ರೀನಾರಾಯಣ 19 ಕೋಟಿದರ್ಪಕ ರೂಪಲಾವಣ್ಯ ಭಕ್ತ ಸಂಕಟ ಪರಿಹಾರ ನಾರಾಯಣಾ 20 ವಾರಿಧಿ ಬಂಧನಾ ವನಚರ ಪಾಲನಾ ವೈಕುಂಠ ಶ್ರೀನಾರಾಯಣಾ 21 ಗಜರಾಜ ವರದಾ ಕಾಮಿತಫಲದಾಯಕಾ ಅಜಭವ ಪೂಜಿತಾ ನಾರಾಯಣಾ 22 ಸಾಧುಜನ ಪ್ರಿಯಾ ಸಾಮಗಾನವೇಣು ನಾದ ಲೋಲ ಕೃಷ್ಣ ನಾರಾಯಣಾ 23 ಯಾದವ ಕುಲದೀಪಾ ಯಶೋದಾನಂದನಾ ಯಜ್ಞರಕ್ಷಕಾ ಹರಿನಾರಾಯಣಾ 24 ಕೇಶವಾ ಮಾಧವಾ ಕೃಷ್ಣ ದಾಮೋದರಾ ವಾಸುದೇವ ಹರಿನಾರಾಯಣ 25 ಸುಂದರ ವಿಗ್ರಹಾಸುಗುಣ ವಿಲಾಸ ಆನಂದ ನಿಲಯಾ ಹರಿನಾರಾಯಣಾ 26 ವ್ಯಾಸಾಂಬರೀಷ ವಾಲ್ಮೀಕ ನಾರದಾ ಪಾರಾಶರ ವಂದಿತ ನಾರಾಯಣ 27 ದೋಷದೂರಾ ನಿರ್ದೋಷಾ ಪರಮಪುರಷ ಪೋಷಿತ ಜಗತ್ರಯ ನಾರಾಯಣಾ 28 ಮಕರಕುಂಡಲಧರಾ ಮಹಿಮಾ ಚರಾಚರಾ ಸಕಲಂತರ್ಯಾಮಿ ನಾರಾಯಣ 29 ಲೋಕನಾಯಕಾ ವಿಲಾಸ ಮೂರುತಿ ತ್ರೀಲೋಕ ವಂದ್ಯ ಹರಿನಾರಾಯಣಾ 30 ವಿಶ್ವವ್ಯಾಪಕಾ ಘನ ವಿಶ್ವರೂಪಾ ಮಹಾ ವಿಶ್ವೇಶ್ವರಾ ಹರಿನಾರಾಯಣಾ 31 ಅಖಿಲಾಂಡ ಕೋಟಿ ಬ್ರಹ್ಮಾಂಡ ನಾಯಕ ದೇವ ಸಕಲ ಕರ್ತ ನೀನೆ ನಾರಾಯಣಾ 32 ಆಪನ್ನ `ಹೆನ್ನೆ ವಿಠ್ಠಲ ' ನಾರಾಯಣಾ 33
--------------
ಹೆನ್ನೆರಂಗದಾಸರು
ನಿತ್ಯ ಚರಣ ಕಮಲವನ್ನು ಭವ ಹರಣ ನಾರಾಯಣ ಪ ಕನಸಿನ ಸಂಸಾರ ನೆನಸದಂತೆ ಎನ್ನಾ ಮನಸ್ಸು ಶ್ರೀಹರಿನಿಜ ಬರಿವಿನೊಳ್ ನಿಲಿಸಯ್ಯಾ 1 ಮಂದ ಬುದ್ಧಿಲಿ ನಿಜಾನಂದವನರಿಯದೇ ಬಂಧನೆಗೊಳಗಾದೆ ತಂದೆ ನೀ ರಕ್ಷಿಸೊ2 ದುರಿತಗಳೆಲ್ಲವ ಹರಣಗೊಳಿಸಿ ನಿಜ ಸ್ಮರಣೆಯೊಳಿರುವಂತೆ ಕರುಣದಿ ನೋಡೆನ್ನಾ 3 ಶಬರಿಯ ಕಾಯ್ದೆಯಾ ಬದರಿಯ ಫಲವುಂಡು ವಿಭು ಪರಮಾನಂದಾ ಪ್ರಭೆಯೊಳಗಿರಿಸೆನ್ನಾ 4 ನೆನೆವರ ಮನದಾ ಕೊನೆಯಲಿ ಮಿನುಗುವ ಸನಕಸನಂದನ ವಂದಿತನೀದೇವಾ 5 ವಾಸುದೇವನೇ ನಿನ್ನ ದಾಸಿ ಶಾಂತಿಘನ ವಾಸ ಸ್ವಸುಖವೀವ ಕೇಶವಾಶ್ರಮಗುರು 6
--------------
ಶಾಂತಿಬಾಯಿ