ಒಟ್ಟು 179 ಕಡೆಗಳಲ್ಲಿ , 54 ದಾಸರು , 146 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಕಮಲನಾಭ ಹರುಷದಿಂದ ಖಗವಾಹನನ್ಹೆಗಲನೇರಿ ಬಗೆಬಗೆ ಶೃಂಗಾರವಾಗಿ ಬಂದ ರಂಗನು 1 ಅಂಬರ ಜರನಿರಿಗಳಲಿ ಕುಂದಣದುಡಿದಾರವ ಕಟ್ಟಿ ಚÉಂದುಳ್ಳ ಭುಜಕೀರ್ತಿ ಕರ್ಣಕುಂಡಲನಿಟ್ಟು2 ಶಂಖ ಚಕ್ರ ಕರಗಳಲ್ಲಿ ಕಂಕಣ ಭೂಷಣಗಳಿಂದ ಕಿಂಕಿಣಿ ನೂಪುರಗಳಿಂದ ಅಲಂಕಾರವಾಗಿ 3 ಕಸ್ತೂರಿ ಕೇಸರಿಯು ಗಂಧ ಬುಕ್ಕಿ ್ಹಟ್ಟು ಪರಿಮಳದ ಚೆಂದ ಕರ್ಪೂರ ತಾಂಬೂಲ ಬಾಯಲೊಪ್ಪುವ ರಂಗ 4 ನಿತ್ಯ ಸೂರ್ಯ ಪ್ರಕಾಶ ಮಲ್ಲಿಗೆ- ಮಾಲೆ ಮುಡಿದು ಹೊರಟ ಜಗದಮೋಹನ ರಂಗ5 ಸಾಲು ಸಾಲು ಮನೆಗಳಲಿ ಮೇಲು ಮೇಲುಪ್ಪರಿಗೆನೇರಿ ಬಾಲಕೃಷ್ಣ ಬರುವ ಭರವ ನೋಡುತ್ತಿದ್ದರು 6 ವಾರಿಗೆ ಸತಿಯೇರ ತನ್ನ ವಾರೆನೋಟದಿ ನೋಡುತ ಮಾರನಯ್ಯನು ಬಂದನು ತಾ ಬಜಾರ ಮಧ್ಯದಿ 7 ಚೆಲ್ವೆಯರೆಲ್ಲರು ಅರಳುಮಲ್ಲಿಗೆ ಕರದಲ್ಲಿ ಪಿಡಿದು ಫುಲ್ಲಾಕ್ಷನ ಮ್ಯಾಲೆ ನಗುತ ಚೆಲ್ಲುತಿದ್ದರು 8 ಯಾದವರೇಶನೆ ನಿನಗೆ ಭೇದವ್ಯಾಕೆನ್ನ ಮ್ಯಾಲೆ ನೀ ದಯಮಾಡೆನ್ನ ಮನೆಗೆನುತ ರಾಧೆ ಕರೆದಳು 9 ವಜ್ರದ ಗೊಂಬೆಯಂದದಿ ವೈಯಾರಿ ಮೆಲ್ಲನೆ ಬಂದು ಪದ್ಮನಾಭ ಬಾ ನಮ್ಮನೆಗೆನುತ ಭದ್ರೆ ಕರೆದಳು 10 ಅಂತರಂಗದಲ್ಲಿ ಕೋಟಿ ಪಂಥವ್ಯಾತಕೆನ್ನಮ್ಯಾಲೆ ಸಂತೋಷದಿ ಬಾರೆನುತ ಜಾಂಬವಂತಿ ಕರೆದಳು 11 ಸತ್ಯಭಾಮೆ ರುಕ್ಮಿಣಿದೇವಿ ಮಿತ್ರೆನೀಲಾ ಜಾಂಬವಂತಿ ಲಕ್ಷಣಾ ಕಾಳಿಂದಿ ಭದ್ರೆ ಕರೆಯುತಿದ್ದರು 12 ಇಷ್ಟುಮಂದಿ ಸತಿಯರೊಳಗೆ ನಿಷ್ಠುರವಾಗುವೆನೆಂದು ಎತ್ತ ಕಡೆಗೆ ಪೋಗಲೆಂದು ಶ್ರೀಕೃಷ್ಣ ನುಡಿದನು 13 ಹರಿಯ ಮಾತುಗಳನೆ ಕೇಳಿ ಸರುವರು ಸುಮ್ಮನೆ ನಿಲ್ಲೆ ಕರದಿ ವೀಣೆಯ ಪಿಡಿದು ಬಂದನು ಭರದಿ ನಾರದ 14 ಭಂಗ ಬಂದಿತೇನೊ ನಿನಗೆ ಇಂದೆನ್ನ ಹಿಂದೆ ಬಾರೆನುತ ನಾರಂದ ಕರೆದನು 15 ಕೇಳಿ ನಾರದರ ಮಾತು ತಾಳಲಾರದೆ ರುಕ್ಷ್ಮಿಣಿಯು ದಾನ ಒಯ್ದು ದಕ್ಕಿಸಿಕೊಂಡಿರೆಂದು ನುಡಿದಳು 16 ಅಕ್ಕನ ಮಾತಿನ ಬಾಣ ನೆಟ್ಟಿತು ಎನ್ನೆದೆಗೆ ಬಂದು ಕೃಷ್ಣ ನೀ ಕೇಳೊ ಕೇಳೆಂದು ನುಡಿದಳು ಭಾಮೆ 17 ಬಿಟ್ಟು ಬಾಣವ ಮಾಡಿ ಯುದ್ಧ ದಿಟ್ಟಳೆನಿಸುವುದೆ ಸಿದ್ಧ ಪೃಥಿವಿಯೊಳಗೆ ಬಾಣನಂದಿ ಎಂದು ಪ್ರಸಿದ್ಧಿ 18 ದಾರಿಗೆ ತೆಗೆಸಿದೆ ನೀನು ಮೋರೆಗಡ್ಡ ಮಂಡಿ ಪನ್ನಿ ಹೀನ ಕಾರ್ಯವ ಮಾಡಲು ನೀ ಅರಿಯೇನೆ ರುಕ್ಮಿಣಿ 19 ಗುಣನಿಧಿ ಗೋಪಾಲ ಹರಿಗೆ ಮಡದಿ ಎನಿಸುವುದೆ ಸರಿಯೆ ಮಣಿಯ ಕಳವು ಇಟ್ಟದ್ದು ನಿಮ್ಮ ಗುಣವ ನಾನರಿಯೆ 20 ಮಾಯಕಾರ್ತಿ ಮಾತುಗಳ ಅನ್ಯಾಯವೊ ನ್ಯಾಯವೊ ನಾನು ಬಾಯಬಿಟ್ಟರೇನುಳಿದೀತೆ ನಿನ ಮಾರ್ಯಾದೆ ರುಕ್ಮಿಣಿ 21 ಸಾಕು ಸತ್ಯಭಾಮೆ ನಿನಗೆ ಯಾಕೆ ಕೋಪ ಬಂದಿತೆಂದು ನಾಲ್ಕು ತೋಳಿಂದಪ್ಪಿಕೊಂಡನು ಶ್ರೀಕಾಂತ ನಗುತ 22 ಎಲ್ಲ ಸತಿಯರನು ತಾನಿದ್ದಲ್ಲಿಗೇ ಕರೆಸಿದ ಕೃಷ್ಣ ವಲ್ಲಭೆ ರುಕ್ಮಿಣಿಯ ಚರಣಕ್ಕೆ ಎರಗಿಸಿದನಾಗ 23 ರುಕ್ಮಿಣಿದೇವೇರ ತೊಡೆಯ ವಿಚಿತ್ರದ್ಹಲಿಗೆ ಮಂಚಮಾಡಿ ನಕ್ಷತ್ರದೊಳು ಚಂದ್ರನಂತೆ ಹೊಳೆಯುತ್ತಿದ್ದನು 24 ಆರ್ಯಳು ಎನ್ನ ಪಟ್ಟದ ಭಾರ್ಯಳು ರುಕ್ಮಿಣಿಯ ಮಾತು ಮೀರಬ್ಯಾಡಿರೆಂದೆನುತ ಸಾರಿ ಹೇಳಿದ 25 ಹಚ್ಚಿದ್ಹಗಲು ಬತ್ತಿಯಂತೆ ಹದಿನಾರು ಸಾವಿರ ಮಂದಿ ಭೀಮೇಶ ಕೃಷ್ಣನ ಚರಣಕ್ಕೆರಗಿ ನಗುತ ಕುಳಿತಿರಲು 26
--------------
ಹರಪನಹಳ್ಳಿಭೀಮವ್ವ
ಕಮಲಾಲಯ ವಿಠಲ | ಕಾಪಾಡೊ ಇವಳಾ ಪ ಅಮಿತ ಮಹಿಮಾತ್ಮಾ ಅ.ಪ. ಪಾದ | ವಂದನೆಯ ಬಯಸೀಬಂದಿಹಳು ಎನ್ನಲ್ಲಿ | ಕಂದರ್ಪಪಿತ ನಿನ್ನ |ಅಂದ ದಾಸ್ಯವ ಬಯಸಿ | ಪ್ರಾರ್ಥಿಸುತ್ತಿಹಳೋ 1 ಮನ್ನಿಸುತ ಮನ್ಮನದ | ಬಿನ್ನಪವ ಸಲಿಸುತ್ತನನ್ನೆಯಿಂ ತೈಜಸನು | ನೀನೇವೆ ಆಗೀಚೆನ್ನಮುತ್ತೈದುಳ್ಳ |ಹೆಣ್ಣೆನ್ಯ ರೂಪದಲಿಸನ್ನಿಹಿತ ದಂಕಿತವೆ ಸೂಚಿಸಿದೆ ಹರಿಯೇ 2 ವಜ್ರ ಕವಚವ ತೊಡಿಸಿಶ್ರೇಷ್ಠಭಕುತಳ ಗೈಯ್ಯೊ | ವಿಷ್ಠರ ಶ್ರವನೇ 3 ಎಲ್ಲೆಲ್ಲೂ ನೀನಿದ್ದು | ಬೆಲ್ಲದಚ್ಚಿನ ಪರಿಯಮಲ್ಲ ಮರ್ಧನ ಕೃಷ್ಣ | ಕೈಪಿಡಿದು ಇವಳಾಬಲ್ಲವರ ಸಂಗದಲಿ | ಚೆಲ್ವತವ ಮಹಿಮೆಗಳಸಲ್ಲಲಿತ ಮನದಲ್ಲಿ ಕೇಳುವಂತೆಸಗೋ 4 ಪತಿಸುತರುಹಿತರಲ್ಲಿ | ವಿತತ ನಿನ್ನಯಮೂರ್ತಿಅತಿಶಯಂಗಳ ಕಂಡು | ಮರುತಮಾರ್ಗದಲೀಹಿತ ಗುರು ಗೋವಿಂದ | ವಿಠಲನ್ನ ಸೇವಿಸುವಮತಿಯನೇ ಕೊಡು | ಪ್ರಾರ್ಥಿಸುವೆ ಹರಿಯೇ 5
--------------
ಗುರುಗೋವಿಂದವಿಠಲರು
ಕರದಿಂದ ಅಲುಗಿಸುತರುಹುವಳೂ ಪ ನರರು ತವ ದ್ವಾರದಲಿ ತಮ್ಮಯ | ಭರದಿ ನಿದ್ದೆಯ ತ್ಯಜಿಸುತೇಳೆಂದು ಅ ನೇಕೆ ಮಲಗಿಹೆ ಏಳು ಎನ್ನುತ 1 ಸಡಗರ ನೀ ನೋಡು ಎನ್ನುತ2 ಬಾತುರದಿ ಚಿಲಿಪಿಲಿಯ ಗುಟ್ಟುತ್ತಾ ತಿನಿಸನ್ನು ತಹೆವೆಂದು | ಪ್ರೀತಿಯಿಂದಲಿ ಅರುಹಿ ಪಕ್ಕವ ರ್ಭೀತ ಪಾವಂಜೇಶ ಎನ್ನುತ 3
--------------
ಬೆಳ್ಳೆ ದಾಸಪ್ಪಯ್ಯ
ಕರಿಮುಖದ ಗಣಪತಿಯ ಚರಣಕ್ಕೆಯೆರಗಿ ಶಾರದೆಗೆ ಸೆರಗೊಡ್ಡಿ ವರವನು ವರವ ಬೇಡಿಕೊಂಡೆ ಸ್ಥಿರವಾದ ಭಕುತಿ ಕೊಡುಯೆಂದು 1 ವಾಯು ಬ್ರಹ್ಮ ಭಾರತಿಗೆ ಬಾಳ ಬೇಡಿಕೊಂಡ್ವೇ- ದವ್ಯಾಸರಿಗೆ ನಮೋಯೆಂಬೆ ನ- ಮೋಯೆಂದು ನಾರದರ ಪಾದಪದ್ಮಗಳಿಗೆರಗುವೆ 2 ಅತ್ರಿ ಅಂಗೀರಸ ವಸಿಷ್ಠಗೌತಮ ವಿಶ್ವಾ- ಮಿತ್ರ ಮಾರ್ಕಾಂಡೇಯ ಚ್ಯವನರು ಚ್ಯವನ ಭಾರದ್ವಾಜ ಬಕದಾಲ್ಭ್ಯರಿಗೆ ನಮಿಸುವೆ 3 ಪಂಡಿತ್ವಾಲ್ಮೀಕಿ ಕೌಂಡಿಣ್ಯ ಕೌಂಡಿಣ್ಯ ಅಗಸ್ತ್ಯಮುನಿ ಮರೀಚರಿಗೆ ನಾನು ನಮೋಯೆಂಬೆ4 ಶೇಷಗಿರಿವಾಸನ ಆಕಾಶನಳಿಯನೆ ವೆಂಕ- ಟೇಶ ನೀ ನಮ್ಮನೆ ದೈವ ಮನೆದೈ- ವ ಸಲಹೆನ್ನ ಪದ್ಮಾವತೀಶ ಪರಮಾತ್ಮ 5 ಮಂಗಳಾಂಗನೆ ನೀನು ಮಂಗಳಮಹಿಮನೆ ಮಂಗಳದೇವಿ ರಮಣನೆ ನೀನೆಮಗೆ ಜಯ ಮಂಗಳವ ಕೊಟ್ಟು ಸಲಹೆನ್ನ 6 ವಾಸುದೇವನೆ ನೀನು ವಾಸುಕಿಶಯನನೆ ವಾಸವಿಯ ರಥವ ನಡೆಸಿದೆ ನಡೆಸಿದಂಥ ಶ್ರೀನಿ- ವಾಸ ನೀನೆಮಗೆ ದಯಮಾಡು 7 ಎನ್ನಲ್ಲೆ ನೀನಿದ್ದು ನಿನ್ನಗುಣ ಬಹುರೂಪ- ವನ್ನು ತಿಳಿಸದಲೆ ಇರುವೋರೆ ಇರುವೋರೆ ನೀನು ಪ್ರ- ಸನ್ನನಾಗೆನಗೆ ದಯಮಾಡು 8 ಕಾಲ ಕಾಲಕೆ ನಿನ್ನ ನಾಮವನು ನಾಲಿಗೆ ಮ್ಯಾಲಿಟ್ಟು ನಿನ್ನ ನೆನೆವಂತೆ ನೆನೆವಂತೆ ಅನಿರುದ್ಧ 9 ಕಾಮಕ್ರೋಧವು ಮದ ಮಾತ್ಸರ್ಯ ಲೋಭಗಳು ಮೋಹ ಮಡುವಿನಲಿ ಮುಣುಗಿದೆ ಮುಣುಗಿದೆನೊ ಎನ್ನ ಕೈ ನೀನೆ ಪಿಡಿದೆತ್ತಿ ಕರೆದೊಯ್ಯೊ 10 ಐದು ಮಂದ್ಯೆನ್ನಲ್ಲಿ ಐದಾರೆ ಮಾರಾಯ ಬೈದರು ಬಿಡರೋ ಎನ್ನೀಗ ಎನ್ನೀಗ ಕಟ್ಟಿ ಕೊಂಡೊಯ್ದು ಹಾಕುವರೊ ಯಮನಲ್ಲಿ 11 ಆರು ಮಂದ್ಯರಿಗಳು ಕ್ರೂರ ಶತ್ರುಗಳುಂಟು ಘೋರಬಡಿಸುವರೊ ಅನುಗಾಲ ಅನುಗಾಲ ದುರ್ವಿಷಯ ತಾವೆನಗೆ ಕಲಿಸಿ ದಣಿಸೋರು 12 ಹತ್ತು ಮಂದಿ ಯೆನ್ನ ಸುತ್ತ ಮುತ್ತಿರುವರೊ ಕೂಪ ಭವದೊಳು ಭವದೊಳಗೆ ಬಳಲುವೆನು ಚಿತ್ತಕ್ಕೆ ತಂದು ದಯಮಾಡು 13 ಸಂಚಿತಾಗಾಮಿಗಳ ಮುಂಚೆ ದಹಿಸಿ ಈ ಪ್ರ- ಪಂಚವನು ಬಿಡಿಸೊ ಪರಮಾತ್ಮ ಪರಮಾತ್ಮ ನೀಯೆನ್ನ ವಂಚನಿಲ್ಲದಲೆ ಸಲಹೈಯ್ಯ 14 ಜ್ಞಾನ ಭಕ್ತಿ ಗಾನ ವೈರಾಗ್ಯ ಭಾಗ್ಯಗಳು ಜಾನಕಿರಮಣ ಜಗದೀಶ ಜಗದೀಶ ಜನಕನ ಜಾಮಾತ ನೀನೆ ತಿಳಿಸಯ್ಯ 15 ದ್ವಾಸುಪರುಣನಂತೆ ಈ ಶರೀರದೊಳಿದ್ದು ಏಸೇಸು ಜನ್ಮಕ್ಕಗಲದೆ ಅಗಲದಂತಿದ್ದು ಉ- ದಾಸೀನವ ಮಾಡೋದೊಳಿತಲ್ಲ 16 ಇಂದುಕುಲಜಾತ ನಿನ್ನೊ ್ಹಂದಿಕೊಂಡಿದ್ದು ಎಂದೆಂದಿಗು ಬಿಡದೆ ಗೆಳೆತನ ಗೆಳೆತನವಿದ್ದಲ್ಲಿ ಸಂದೇಹವ್ಯಾಕೊ ಸಲಹಲು 17 ಮುಕ್ತಿದಾಯಕ ನಿನ್ನ ಭಕ್ತರೇಸುಮಂದಿ ಹೆತ್ತಾಯಿಸುತರೇನವರೆಲ್ಲ ನಾ ಹುಟ್ಟಿದೆನೆ ಮತ್ತೆ ಮಲತಾಯಿ ಉದರದಿ 18 ಶ್ರೀಶನೆ ಕೇಳ್ ನಿನ್ನ ದಾಸರಂಗಳದಲ್ಲಿ ಬೀಸಿ ಬಿಸಾಕೊ ಎನ್ನನು ಎನ್ನ ಹರಿದಾಸರ ದಾಸತ್ವಯೆನಗೆ ಕೊಡಿಸಯ್ಯ 19 ಅಂಬರೀಷ್ವರದ ನಿನ್ನ ್ಹಂಬಲೆನಗಿರಲಯ್ಯ ಬಿಂಬ ಮೂರುತಿಯೆ ಬಿಡದೆನ್ನ ನಿನ್ನೂರಲ್ಲಿ ಇಂಬುಕೊಟ್ಟೆನ್ನ (ಅ)ಲ್ಲಿರಿಸಯ್ಯ 20 ಕಡಿದು ಹೊಡೆದು ಬಯ್ದು ಬಂದು ಕಾಲಿಂದೊದ್ದ- ರ್ಹಿಡಿಯದೆ ಅವರ ಅಪರಾಧ ಅಪರಾಧವೆಣಿಸದಿರೆ ನಡೆದರೊ ನಿನ್ನ ಪುರಕಾಗ 21 ಪುಟ್ಟ ಪ್ರಹ್ಲಾದ ಧ್ರುವ ಕೊಟ್ಟರೆಷ್ಟು ಭಾಗ್ಯ ಕಷ್ಟಕ್ಕೆ ಬಂದು ಒದಗಿದೆ ಒದಗಿ ಬಂದವರ ಆಪತ್ತು ಬಂಧನ ಬಿಡಿಸಿದೆ 22 ತನ್ನ ಮಗನ ಕರೆಯೆ ಎನ್ನ ಕರೆದನೆಂದು ನಿನ್ನ ದೂತರನು ಕಳಿಸಿದೆ ಕಳಿಸಿದ್ಯಜಮಿಳಗೆ ಮನ್ನಿಸಿ ಕೊಟ್ಟ್ಯೊ ನಿನಲೋಕ 23 ತಿರುಕ ತಂದವಲಕ್ಕಿ ಕರಕÀರನೆ ನೀಮುಕ್ಕಿ ದೊರೆತನವ ಕೊಟ್ಟು ದಾರಿದ್ರ್ಯ ದಾರಿದ್ರ್ಯ ಕಳೆದದ್ದು ಅರಿಕಿಲ್ಲವೇನೊ ಜನಕೆಲ್ಲ 24 ನಿಲ್ಲಬೇಕೆಂದಿಟ್ಟಿಕಲ್ಲು ಕೊಟ್ಟವಗೆ ಕೈ- ವಲ್ಯವನು ಕೊಟ್ಟ್ಯೋ ಕರುಣಾಳು ಕರುಣಾಳು ಬುಕ್ಕಿ ್ಹಟ್ಟು ಮಲ್ಲಿಗೆಯ ಮಾಲೆಗೊಲಿತೀಯೊ 25 ಕರೆದು ಕಂಸಗೆ ಕೊಟ್ಟು ಕೊಲಿಸಬಂದ- ಕ್ರೂರ(ಗೆ) ನದಿಯಲ್ಲೆ ನಿನ್ನ ನಿಜರೂಪ ನಿಜರೂಪ ತೋರಿದ್ದು ಇದುಯೇನು ನಿನ್ನ ಮಹಿಮೆಯು 26 ಗಂಧಕ್ಕೆ ಒಲಿದು ಕುಬ್ಜೆಯ ಡೊಂಕನೆ ತಿದ್ದಿ ಸುಂದರಿಯ ಮಾಡಿ ಸುಗುಣನೆ ಸುಗುಣನೆ ನೀನಾಕೆ- ಯಂಗಸಂಗ್ಯಾಕೆ ಬಯಸಿದಿ 27 ಕಲ್ಲಾದಹಲ್ಯೆಯನು ಕಡು ಚೆಲ್ವೆಯನು ಮಾಡಿ ಎಲ್ಲಿ ಮಲಗಿದ್ದ ಮುಚುಕುಂದ ಮುಚುಕಂದನ ಗುಹೆ- ಕೈವಲ್ಯ ಕೊಡಹೋದ್ಯೊ 28 ಮಗ್ಗವನೆ ಹಾಕಿ ಮಾರುಬಟ್ಟೆ ನೇದಿಲ್ಲ ರೊಕ್ಕವನೆ ಕೊಟ್ಟು ತರಲಿಲ್ಲ ತರಲಿಲ್ಲ ದ್ರೌಪದಿಗೆ
--------------
ಹರಪನಹಳ್ಳಿಭೀಮವ್ವ
ಕರುಣಿಸು ಜಯೇಶವಿಠಲ ವರ ಅಂಕಿತವಿದನು ಇತ್ತೆ ಪ ತರಳ ನಿನ್ನವನೆಂದು ಗುರುವಾತ ಸ್ಥಿತನಾಗಿ ಭರದಿ ಪಾಲಿಸಿದೆ ಇವನ ಹರಿ ನೀನಿದ್ದೆಡೆಗೆ ಕರೆಸಿ ಅ.ಪ ಇರಿಸು ವರ್ಣಾಶ್ರಮ ವರಧರ್ಮ ಕರ್ಮಗಳಲಿ ಮರೆಸಿ ಕಾಮ್ಯಕರ್ಮಗಳೆಲ್ಲವನು ಸ್ಮರಿಸದಂತೆ ಮಾಡು ಪರಸತಿಯರೊಲುಮೆ ಮರೆಯದಂತಿರಲಿ ಪರತತ್ವವನು 1 ಸತಿ ಸುತ ಪರಿವಾರದಿ ಕೃತಕೃತ್ಯನಾಗಿ ಮಾಡಿಸಿ ಪತಿತರ ಸಹವಾಸ ಹಿತವೆಂದರುಪದೆ ಸ- ದ್ಗತಿಯೀವ ಮಾರ್ಗ ತಿಳಿಸಿ 2 ನಿರುತ ತತ್ವ ನಿಶ್ಚಯದಲ್ಲಿ ಜ್ಞಾನ ಗುರುಹಿರಿಯರಲ್ಲಿ ಭಕ್ತಿ ದುರ್ವಿಷಯದಲಿ ವಿರಕ್ತಿನಿತ್ತು ವರ ವಿಜಯ ರಾಮಚಂದ್ರವಿಠಲ ಸುರರೊಡೆಯ ಬರೆದು ನಾಮಾಮೃತವ ನುಡಿಸಿ 3 (ಜಯೇಶವಿಠಲರಿಗೆ ಅಂಕಿತ ನೀಡಿದ ಸಂದರ್ಭ) ದುರಿತ ವಿ ದೂರ ಕರುಣಾಕರ ಸುಂದರ ಗಂಭೀರ 1 ದೀನೋದ್ಧಾರ ವಿರ್ಪಿವಿಹಾರ ದಾನವಹರ ಸುರಕಾವ್ಯ ವಿಚಾರ 2 ಸೀತಾನಾಥ ವಾನರಯೂಥ ವಾರಾತ್ಮಜ ನುತ ಶ್ರೀ ಲಕ್ಷ್ಮೀಕಾಂತ 3
--------------
ವಿಜಯ ರಾಮಚಂದ್ರವಿಠಲ
ಕವಿತಾರಸದ ಸೊಬಗ ಕವಿಗಳೆ ಬಲ್ಲರಲ್ಲದೆಯುವತಿಯರು ಕವಿಯ ಹೃದಯವ ಕಂಡರುಂಟೆ ಪ ಕಾಗೆ ಬಲ್ಲುದೆ ದಿವ್ಯಚೂತಫಲರಸದಿನಿಯಗೂಗೆ ಬಲ್ಲುದೆ ಸೂರ್ಯನುದಯವನ್ನುರೋಗಿ ಬಲ್ಲನೆ ಸುಧಾರಸದ ಸುಸ್ವಾದವನುಭೋಗಿ ಬಲ್ಲನೆ ಯೋಗಮಾರ್ಗ ರೀತಿಯನು 1 ಕಣ್ಣಿಲ್ಲದವಗೆ ಕನ್ನಡಿಯಿದ್ದು ಫಲವೇನುಹೊನ್ನಿದ್ದರೇನು ಲೋಭಿಯ ಕೈಯಲಿಹೆಣ್ಣಿದ್ದರೇನು ಪೌರುಷವಿಲ್ಲದ ನರಗೆಪುಣ್ಯಹೀನಗೆ ಕನಕಶಿಲೆಯಿದ್ದರೇನು 2 ಗಾನರಸಮಾಧುರ್ಯವನು ಬಧಿರಬಲ್ಲನೆಆನೆ ಬಲ್ಲುದೆ ಚಂದನದ ರಸವನುಮಾಣಿಕದ ಮಾಲಿಕೆಯ ಮರ್ಕಟನು ಬಲ್ಲುದೆನೀನೊಬ್ಬ ಬಲ್ಲೆ ಕೆಳದಿ ರಾಮೇಶಲಿಂಗ 3
--------------
ಕೆಳದಿ ವೆಂಕಣ್ಣ ಕವಿ
ಕಷ್ಟಹರಿಸೊ ಪರಮೇಷ್ಟಿಪಿತನೆ ನೀ ಕೈ ಬಿಟ್ಟರೆ ಸೃಷ್ಟಿಯೊಳು ಪಾರುಗಾಣುವುದೆಂತೂ ಪ ಇಷ್ಟದಿಂದಲೋ ಅನಿಷ್ಟದಿಂದಲೋ ನಾನೇ ಹುಟ್ಟಿಬಂದೆನೆ ದೇವ-ನಿನ್ನಿಷ್ಟದಿಂದಲ್ಲವೇ ಅ.ಪ ಬಿಂಬನೆನಿಸಿದೆ ಎನಗೆ ಪ್ರತಿಬಿಂಬ ನಾ ನಿನಗೆ ಬಿಂಬ ಪ್ರತಿಬಿಂಬಕೆ ಉಪಾಧಿಯು ನಿತ್ಯ- ವೆಂಬನ್ವಯಕೆ ಗುಣತ್ರಯಬದ್ಧವೇ ಕಾರಣ- ವೆಂಬ ಗುಣಜೀವಸ್ವರೂಪೋಪಾಧಿಯು ಬೆಂಬಲನೀನಿದ್ದೂ ಗುಣಕಾರ್ಯಕನುವಾಗಿ ಇಂಬುಕೊಡುವೆ ಫಲಭೋಗಿಸಲೀವೇ ಎಂಬನುಡಿ ಶ್ರುತಿಶಾಸ್ತ್ರಸಿದ್ಧವು ನಂಬಿಹುದು ಜಗವೆಲ್ಲ ಸತ್ಯವು ಶಂಬರಾಂತಕ ಪಿತನೆ ಎನ್ನ ಹೃದ- ಯಾಂಬರದಿ ನಿನ್ನ ಬಿಂಬ ತೋರೈ 1 ಕಾಲಕರ್ಮಾದ್ಯಷ್ಟಗುಣಗಳೆಲ್ಲವು ನಿಜ- ವೆಲ್ಲಜಡಗಳು ಮತ್ತು ಅಚೇತನಂಗಳೈ ಶೀಲ ಮೂರುತಿ ನೀ ಪರಮ ಚೇತನನಾಗಿ ಎಲ್ಲ ಕಾಲದಿ ನಿನ್ನ ನಿಯಮನಂಗಳೈ ಕಾಲಕರ್ಮಗುಣಂಗಳೇನಿಹುದೆಲ್ಲ ಫಲಪ್ರದಾನವ ಮಾಡೆ ಶಕ್ತಿ ಜಡಕೆಂತಿಹುದಯ್ಯ ಕಾಲನಾಮಕ ನೀನೆ ಸರ್ವ ಕಾಲದಲಿ ಸ್ವಾತಂತ್ರ್ಯ ನಿನ್ನದೋ ಇಲ್ಲ ಘನ ಸಮರಿಲ್ಲ ಸರ್ವಕರ್ಮ ಫಲವೆಲ್ಲ ನೀನೆ ದಾತೃವೋ 2 ಮರ್ಮವರಿಯೆನೊ ದೇವ ಧರ್ಮಭ್ರಷ್ಟನಾದೆ ಕರ್ಮಫಲಾನುಭವಮಾಡಿ ಬೆಂಡಾದೆನು ಕರ್ಮ ತಾ ಶಿಕ್ಷಿಸಲರಿಯದು ನ್ಯಾಯ ಧರ್ಮಾಧಿಪತಿ ಭೀಕರ ಫಲಕೊಟ್ಟು ಶಿಕ್ಷಿಪಂತೆ ಧರ್ಮಮೂರುತಿ ಶುದ್ಧನಿಷಿದ್ಧಕರ್ಮಂಗಳಿಗೆ ಪೂರ್ಣಫಲವಿತ್ತು ಸಮನೆಂದೆನಿಸಿರುವೆ ಕರ್ಮಮೋಚಕ ನೀನೆ ಸಕಲ ಕರ್ಮಪ್ರದನೆಂದೆನಿಸಿ ಪೂರ್ವ- ಕರ್ಮಫಲ ಭೋಗಿಸಲು ಜನ್ಮವನಿತ್ತು ಕರ್ಮಪ್ರವಹದೊಳಿಡುವೇ 3 ವಿಮುಖನಾಗಿಹೆ ಶ್ರುತಿಸ್ಮøತಿಶಾಸ್ತ್ರಧರ್ಮಕೆ ಪ್ರಮುಖನಾಗಿಹೆ ದುಷ್ಕರ್ಮ ಮಾರ್ಗದಲ್ಲಿ ಕರ್ಮಕಲಾಪದ ಧರ್ಮ ಮರ್ಮವನರಿಯೆ ಹೆಮ್ಮೆಯಿಂದಲಿ ನಾನಾ ಕರ್ಮಕೂಪದಲಿರುವೆ ಪೆರ್ಮೆಗೋಸುಗ ಅಧರ್ಮವೆಷ್ಟೋ ಮಾಡ್ದೆ ಒಮ್ಮೆಗಾದರು ಸದ್ಧರ್ಮಾಚರಿಸಲಿಲ್ಲ ಕರ್ಮ ಅಕರ್ಮ ವಿಕರ್ಮ ಪರಿಚಯವಿಲ್ಲ ಜನ್ಮಕೆ ಧರ್ಮಪುತ್ರನೆ ದ್ವಂದ್ವಕರ್ಮಸಮರ್ಪಿಸಲು ಸನ್ಮತಿಯ ಕೊಟ್ಟಿನ್ನು 4 ಬೆಟ್ಟದೊಡೆಯನೆ ಶ್ರೀ ವೇಂಕಟೇಶ ನೀ ತುಷ್ಟಿಯಾದರೆ ನಿನ್ನಿಷ್ಟದಂತೆ ಫಲವು ಸೃಷ್ಟಿಯೊಳು ಪುಟ್ಟಿಸಿ ದುಷ್ಟಕರ್ಮದ ಪಾಶ ಕಟ್ಟಿನೊಳಿಟ್ಟೆನ್ನ ಕಷ್ಟಪಡಿಸುವರೇ ಸೃಷ್ಟೀಶ ಉರಗಾದ್ರಿವಾಸ ವಿಠಲ ಎನ್ನ ನೀನಿಟ್ಟಿರುವಷ್ಟುಕಾಲ ಧಿಟ್ಟಭಕುತಿಯ ಕೊಟ್ಟು ದಿಟ್ಟ ರಕ್ಷಿಸು ಇಷ್ಟಮೂರುತಿಯೆ ಇಷ್ಟದಾಯಕನೆಂದು ನಾನಿಷ್ಟು ನುಡಿದೆನೋ ನಿನ್ನ ಎನ್ನ ಮನೋಭೀಷ್ಟೆ ಸಲಿಸೆ ನಿನ್ನಿಷ್ಟವಯ್ಯ5
--------------
ಉರಗಾದ್ರಿವಾಸವಿಠಲದಾಸರು
ಕಾಣದೆ ಸುಳ್ಳೆ ಬಡಿದಾಡ್ವಿರ್ಯಾಕಣ್ಣ ನಾನ್ಹೋಗತನ ನಿಮಗೆ ಮುಕ್ತಿಯಿಲ್ಲಣ್ಣ ಪ ಪ್ರಾಚೀನ ಹಿರಿಯರ ಸಾಕ್ಷಿಕೊಡುವೆ ನಿಮಗೆ ಜ್ಞಾನದಿಂ ಕೇಳಿ ತಿಳೀಬಹುದಣ್ಣ ಅ.ಪ ಘನವಂತ ಸತ್ಯವ್ರತ ಭೃಗು ಗಾರ್ಗೆಯರು ಇನಿಸುತಿಳಿಯದೆ ವಿಶ್ವಾಮಿತ್ರನು ಘನಶ್ರಮಬಟ್ಟರು ಮುನಿ ವರದನಾರದರು ದಿನದಿನ ತ್ರಿಣಿಯರು ದರ್ಶನಿದ್ದವರು ಜನಕ ರಾಜರ್ಷಿಯು ಮುನಿ ಅತ್ರಿಮಹಿಮರು ನಾನ್ಹೋಗತನ ಮುಕ್ತಿ ಸಿಗದೆ ಬಳಲಿದರು 1 ಸನಕಾದಿ ಸಾನಂದ ಮಹರ್ಷಿಗಳು ಮುನಿಶ್ರೇಷ್ಠ ಬಲ್ಲಿದ ವಾಲ್ಮೀಕಾದಿಗಳು ಶೌನಕಶುಕಭರದ್ವಾಜಮುನಿಗಳು ಗಣನೆಯಿಲ್ಲದ ಮಿಕ್ಕ ಪತಿತಮೋಕ್ಷಿಗಳು ಪುರಂದರ ಜ್ಞಾನಿಗಳಿವರ್ಗೆಲ್ಲ ನಾನ್ಹೋಗತನ ಮುಕ್ತಿ ಆಗಿಲ್ಲ ಕೇಳೋ 2 ನಾನ್ಹೋಗದದಕಜ ಕಳಕೊಂಡ ಶಿರವ ನಾನು ಹೋಗಿದ್ದರೆ ಅಳಿತಿದ್ದಿಲ್ಲೆಲವೋ ಖೂನವಿಲ್ಲದೆ ಕೂಗಿ ಕೆಡಬೇಡಿ ನೀವು ಭವ ಹೊಂದಿರಿ ಗೆಲವು ನಾನ್ಹೋದಮೇಲೆ ಜಾನಕಿ ಶ್ರೀರಾಮ ಮಾಣದೆ ಕೊಡುವನು ಮುಕ್ತಿ ಸಂಪದವ 3
--------------
ರಾಮದಾಸರು
ಕಾಮಾನ ಜನನಿಯೆ ಸೋಮಾನ ಸೋದರಿ ಸಾಮಾಜ ವರದನ ಪ್ರೇಮವ ಕೊಡಿಸಮ್ಮ ಪ ನೇಮಾದಿಂದಲಿ ಹರಿ ನಾಮಾವ ನುಡಿಸುತ ತಾಮಾಸ ಓಡುವಂತೆ ನೀಮಾಡಬೇಕಮ್ಮ ಅ.ಪ ನಿತ್ಯ ತೃಪ್ತಳೆನಿನ್ನ ನಿತ್ಯದಿ ಬೇಡಿಕೊಂಬೆ ಭೃತ್ಯರೊಳಗೆ ಎನ್ನ ಎತ್ತಿ ಸೇರಿಸೆ ತಾಯೆ || ಮತ್ತನಾಗದೆ ಭವದಿ ಉತ್ತುಮನೆನಿಸುತ ಆತ್ಮದಿ ಹರಿ ತೋರಿ ಕೃತಕೃತ್ಯನೆನಿಸಮ್ಮ 1 ದೇಶಕಾಲದಿನೀನು ಶ್ರೀಶಗೆ ಸಮಳಮ್ಮ ನಾಶಮಾಡುತ ದೋಷ ದಾಸಾನು ಎನಿಸಮ್ಮ || ಶ್ವಾಸಾಶೇಷರನೆಲ್ಲ ಲೇಸಾಗಿ ಆಳುವಳೆ ವಾಸುದೇವನಲ್ಲಿ ಆಸೇಯ ನೀಡಮ್ಮ 2 ಶೃತಿಯಲ್ಲಿ ನೀನಿದ್ದು ಸ್ತುತಿಸೀ ಶ್ರೀಹರಿಯನ್ನ ಮತ್ತೆಸೃಜಿಸುವಂತೆ ಎತ್ತಿಗಾನವ ಮಾಳ್ವೆ || ಎತ್ತ ನೋಡಲು ಬಲು ಕತ್ತಲೆಕಣಿ ತಾಯೆ ಸತ್ಯವ ಬಿಡದಂತೆ ಹತ್ತೀಸೆ ಹರಿದಾರಿ3 ಹರಿಯಂತೆ ಅವತಾರ ನಿರುತನೀ ಮಾಡುತ ಪರಿ ರೂಪದಿಂದ ಪರಿಚರಿಯ ನೀಮಾಳ್ವೆ || ಸರ್ವೇಶ ಹರಿಯಿಂದ ಸರ್ವಕಾಲದಿ ಕೂಡಿ ಸರ್ವಕಾರ್ಯವ ಮಾಳ್ವೆ ಸರಿಯಾರೆ ನಿನಗಮ್ಮಾ 4 ಅಕ್ಷರ ರೂಪಳೆ ಈಕ್ಷಿಸುಕರುಣದಿಂದ ತ್ರ್ಯಕ್ಷೇಶ ವಿಧಿಮಾತೆ ಅಕ್ಷರನರ್ಧಾಂಗಿ || ಕುಕ್ಷೀಲಿ ಬ್ರಹ್ಮಾಂಡ ಲಕ್ಷ್ಯವಿಲ್ಲದೆ ಪಡೆದಿ ಅಕ್ಷಯ ಮಾಡಿ ಜ್ಞಾನ ಮೋಕ್ಷಾವ ಕೊಡಿಸಮ್ಮಾ5 ವಿಕಾರ ಶೂನ್ಯಳೆ ಪ್ರಕೃತಿಗೆ ಮಾನಿಯೆ ನೀಕಾರ್ಯ ಕಾರಣಕ್ಕೆ ಮುಖ್ಯ ಹೇತುವೆ ತಾಯೆ || ಪ್ರಕೃತಿ ಬಂಧವ ಬಿಡಿಸಿ ಸಾಕಾರ ಮೂರುತಿ ಲೋಕನಾಯಕ ಹರಿಯ ಏಕಾಂತದಲಿ ತೋರೆ6 ತ್ರಿಗುಣ ಕಾರ್ಯಗಳೆಲ್ಲ ಸುಗುಣಿ ನೀ ಮಾಡುತ ನಿತ್ಯ ಪೊಗಳಿ ಹಿಗ್ಗುವೆ ಮಾತೆ || ಜಗವೆಲ್ಲ ಕುಣಿಸುತ ನಗುತಲೀಲೆಯಿಂದ ನಿಗಮಾದಿಗಳ ಮೀರಿ ಬಗೆ ಬಗೆ ಲೀಲೆ ಕಾಂಬೆ 7 ನಿತ್ಯಾ ಮುಕ್ತಳು ನೀನು ಪ್ರೀತಿಲಿ ನಮಿಪೆನೆ ಮಾತುಲಾಲಿಸಿ ಎನ್ನ ನಿತ್ಯದಿ ಸಲಹೆಮ್ಮ || ಹೆತ್ತ ತಾಯಿಯು ನೀನು ಎತ್ತಿ ಪೊರೆಯದಿರೆ ಎತ್ತ ಪೋಗಲಿ ನಾನು ಉತ್ತುಮರಮೆ ಹೇಳೆ 8 ಸಾಗರನ ಮಗಳೆ ಆಗಮರೂಪಳೆ ಹೋಗೀಸುಲಿಂಗವ ಸಾಗಿಸಿಗುಣಕಾರ್ಯ || ಭಾಗ್ಯ ಸ್ವರೂಪಳೆ ಬಾಗಿ ನಮಿಸುವೆ ಆಗು ಮಾಡಿಸು ಹರಿ ಗೀತೆಗಳೆನ್ನಿಂದ 9 ಮರುತ ದೇವನ ಪಿತನ ಉರದಲಿ ವಾಸಿಪಳೆ ಹರಿಗುರು ಚರಣದಿ ನಿರುತ ಭಕ್ತಿಯ ಕೊಟ್ಟು || ವಾರಿಜನಾಭನಲ್ಲಿ ಧಾರೆ ಧಾರೆಯ ಭಕ್ತಿ ಸಾರಸ ದಳನಯನೇ 10 ಮಾತು ಮಾತಿಗೆ ನಮ್ಮ ಖ್ಯಾತಾಜಯತೀರ್ಥ ನವನೀತ ಧರಿಸೀಹ || ಶ್ರೀ ತಾಂಡವ ಕೃಷ್ಣ ವಿಠಲರಾಯನ ಸ್ಮರಣೆ ಆತ್ಮಾದೊಳಗೆ ನಿಂತು ಖ್ಯಾತೀಲಿನಡಿಸಮ್ಮಾ 11
--------------
ಕೃಷ್ಣವಿಠಲದಾಸರು
ಕಾಶಿಯ ಹಾದಿಯಲಿ ಕೇಶವನಿದ್ದಾನೆ ರಾಮರಾಮ ಕೇಶವನ ದಯದಿ ಕಾಶಿಯಾತ್ರೆಯ ಕಂಡೆ ರಾಮರಾಮ 1 ಬದರಿಕಾಶ್ರಮದಲ್ಲಿ ನಾರಾಯಣನಿದ್ದಾನೆ ರಾಮರಾಮ ಬದರಿಕಾಶ್ರಮ ಕಂಡೆ ನಾರಾಯಣನ ದಯದಿ ರಾಮರಾಮ 2 ಪ್ರಯಾಗ ನದಿಯಲ್ಲಿ ಮಾಧವನಿದ್ದಾನೆ ರಾಮರಾಮ ಪ್ರಯಾಗ ನದಿ ಮಿಂದೆ ಮಾಧವನ ದಯದಿ ರಾಮರಾಮ 3 ಗೋಕುಲದಲ್ಲಿ ಶ್ರೀ ಗೋವಿಂದನಿದ್ದಾನೆ ರಾಮರಾಮ ಗೋಕುಲವನು ಕಂಡೆ ಗೋವಿಂದನ ದಯದಿ ರಾಮರಾಮ 4 ವಿಷ್ಣು ತೀರ್ಥದಲಿ ಶ್ರೀವಿಷ್ಣುವಿದ್ದಾನೆ ರಾಮರಾಮ ವಿಷ್ಣು ತೀರ್ಥದಿ ಮಿಂದೆ ವಿಷ್ಣುವಿನ ದಯದಿಂದ ರಾಮರಾಮ 5 ಮತ್ಸ್ಯತೀರ್ಥದಲ್ಲಿ ಮಧುಸೂದನನಿದ್ದಾನೆ ರಾಮರಾಮ ದಯದಿ ರಾಮರಾಮ6 ತ್ರಿವೇಣಿಯಲ್ಲಿ ತ್ರಿವಿಕ್ರಮನಿದ್ದಾನೆ ರಾಮರಾಮ ತ್ರಿವಿಕ್ರಮನ ದಯದಿ ತ್ರಿವೇಣಿಯಲ್ಲಿ ಮಿಂದೆ ರಾಮರಾಮ7 ವಾಮನ ನಮ್ಮನು ಒಲಿದು ಕಾಯುವನಂತೆ ರಾಮರಾಮ ವಾಮನನ ದಯದಿ ಭೂವೈಕುಂಠವ ಕಂಡೆ ರಾಮರಾಮ8 ಶ್ರೀಧರ ನಮ್ಮ ಹೃದಯದಲ್ಲಿದ್ದಾನೆ ರಾಮರಾಮ ಶ್ರೀಧರನ ದಯದಿಂದ ಹೃದಯವಾಸನ ಕಂಡೆ ರಾಮರಾಮ9 ಋಷಿಗಳಾಶ್ರಮದಲ್ಲಿ ಹೃಷಿಕೇಶನಿದ್ದಾನೆ ರಾಮರಾಮ ಹೃಷಿಕೇಶನ ದಯದಿ ಋಷಿಗಳಾಶ್ರಮ ಕಂಡೆ ರಾಮರಾಮ10 ಪದ್ಮನಾಭದಲ್ಲಿ ಪದ್ಮನಾಭನಿದ್ದಾನೆ ರಾಮರಾಮ ಪದ್ಮನಾಭನ ದಯದಿ ಪದ್ಮನಾಭನ ಕಂಡೆ ರಾಮರಾಮ11 ಸಾಧು ಬೃಂದದಲ್ಲಿ ದಾಮೋದರನಿದ್ದಾನೆ ರಾಮರಾಮ ಸಾಧು ಬೃಂದವ ಕಂಡೆ ದಾಮೋದರನ ದಯದಿ ರಾಮರಾಮ 12 ಸಕಲ ತೀರ್ಥದಲ್ಲಿ ಸಂಕರ್ಷಣನಿದ್ದಾನೆ ರಾಮರಾಮ ಸಂಕರ್ಷಣನ ದಯದಿ ಸಕಲ ತೀರ್ಥವೆ ಮಿಂದೆ ರಾಮರಾಮ 13 ವಸುಧೇಯ ಮೇಲೆಲ್ಲ ವಾಸುದೇವನಿದ್ದಾನೆ ರಾಮರಾಮ ವಾಸುದೇವನ ದಯದಿ ವಸುಧೆಯೆಲ್ಲವ ಕಂಡೆ ರಾಮರಾಮ 14 ವೃದ್ಧಗಂಗೆಯಲ್ಲಿ ಪ್ರದ್ಯುಮ್ನನಿದ್ದಾನೆ ರಾಮರಾಮ ಪ್ರದ್ಯುಮ್ನನ ದಯದಿ ವೃದ್ಧಗಂಗೆಯ ಮಿಂದೆ ರಾಮರಾಮ 15 ಅಲಕನಂದೆಯಲ್ಲಿ ಅನಿರುದ್ಧನಿದ್ದಾನೆ ರಾಮರಾಮ ಅಲಕನಂದನೆ ಮಿಂದೆ ಅನಿರುದ್ಧನ ದಯದಿ ರಾಮರಾಮ 16 ಪುಣ್ಯಕ್ಷೇತ್ರದಲ್ಲಿ ಪುರುಷೋತ್ತಮನಿದ್ದಾನೆ ರಾಮರಾಮ ಪುಣ್ಯಕ್ಷೇತ್ರವ ಕಂಡೆ ಪುರುಷೋತ್ತಮನ ದಯದಿ ರಾಮರಾಮ 17 ವೈತರಣಿಯಲ್ಲಿ ಅಧೋಕ್ಷಜನಿದ್ದಾನೆ ರಾಮರಾಮ ವೈತರಣಿದಾಟಿದೆ ಅಧೋಕ್ಷಜನ ದಯದಿ ರಾಮರಾಮ 18 ನಿರ್ಮಲ ಗಂಗೆಲಿ ನರಸಿಂಹನಿದ್ದಾನೆ ರಾಮರಾಮ ನಿರ್ಮಲ ಗಂಗೆಯ ಮಿಂದೆ ನರಸಿಂಹನ ದಯದಿ ರಾಮರಾಮ 19 ವೈಕುಂಠಗಿರಿಯಲ್ಲಿ ಅಚ್ಯುತನಿದ್ದಾನೆ ರಾಮರಾಮ ವೈಕುಂಠಗಿರಿ ಕಂಡೆ ಅಚ್ಯುತನ ದಯದಿ ರಾಮರಾಮ20 ಜಾಹ್ನವಿಯಲ್ಲಿ ಜನಾದರ್Àನಿದ್ದಾನೆ ರಾಮರಾಮ ಜನಾರ್ದನನ ದಯದಿ ಜಾಹ್ನವಿಯಲಿ ಮಿಂದೆ ರಾಮರಾಮ21 ಉಡುಪಿ ಕ್ಷೇತ್ರದಲ್ಲಿ ಉಪೇಂದ್ರನಿದ್ದಾನೆ ರಾಮರಾಮ ಉಡುಪಿ ಕ್ಷೇತ್ರವ ಕಂಡೆ ಉಪೇಂದ್ರನ ದಯದಿ ರಾಮರಾಮ 22 ಹರಿಯುವ ನದಿಯಲ್ಲಿ ಶ್ರೀ ಹರಿಯಿದ್ದಾನೆ ರಾಮರಾಮ ಹರಿಯ ದಯದಿಂದ ಹರಿವ ನದಿಯ ಮಿಂದೆ ರಾಮರಾಮ 23 ಕೃಷ್ಣನ ದಯದಿ ಸಕಲ ಕಷ್ಟ ಬಿಟ್ಟಿತು ರಾಮರಾಮ 24 ಭಕ್ತಿಲಿಪ್ಪತ್ನಾಲ್ಕು ನಾಮ ಪೇಳುವರಿಗೆ ರಾಮರಾಮ ಭುಕ್ತಿ ಮುಕ್ತಿಯ ನೀವ ವಿಜಯವಿಠ್ಠಲರೇಯ ರಾಮರಾಮ 25
--------------
ವಿಜಯದಾಸ
ಕೃಷ್ಣರಾಯನೆ ನಿನ್ನ ಕೃತ್ಯಗಳೆಲ್ಲ ಸೃಷ್ಟಿಯೊಳಗೆ ನಾ ಬೀರಲ್ಯಾ ಪ ಕಷ್ಟ ಬಿಡಿಸದೆ ಸುಮ್ಮನಿದ್ದೆಯಾ ಸ್ವಾಮಿ ಅ.ಪ. ಜನನ ಮರಣ ಶೂನ್ಯನೆನಿಸಿಕೊಂಡು ಗೋಪಿ ತನಯನಗಿದ್ದುದ ಹೇಳಲ್ಯಾ ಸನಕಾದಿಸೇವ್ಯ ಪೂಜ್ಯನೆ ತುರುಗಳ ಹಿಂಡು ವನದಲ್ಲಿ ಕಾಯ್ದದ್ದು ಹೇಳಲ್ಯಾ ನಾನು 1 ದನುಜ ಭಂಜನನಾದ ‌ಘನ ಮಹಿಮನೆ ಮಾಗ ಧನಿಗಂಜಿ ಓಡಿದ್ದು ಹೇಳಲ್ಯಾ ಎಣೆಯಿಲ್ಲದಾ ಶೂರ ರಣದೊಳು ಪಾರ್ಥಗೆ ಅನುಗನಾಗಿದ್ದದ್ದು ಹೇಳಲ್ಯಾ ನಾನು 2 ಸತತ ತೃಪ್ತನಾಗಿ ಕ್ಷಿತಿಯೊಳು ಬೆಣ್ಣೆಯ ಮಿತವಾಗಿ ಕದ್ದದ್ದು ಹೇಳಲ್ಯಾ ಕೃತಿದೇವಿರಮಣನೆ ಅತಿ ಪ್ರೀತಿಯಲಿ ಗೋಪ ಸತಿಯರ ಕೂಡಿದ್ದು ಹೇಳಲ್ಯಾ ನಾನು 3 ಶ್ರುತಿತತಿಗಳಿಗಭೇದ್ಯ ಪ್ರತಿಯಿಲ್ಲದೆ ದೇವ ಸತಿಗೊಶನಾದದ್ದು ಹೇಳಲ್ಯಾ ಶತಕೃತು ವಿಧಿವಂದ್ಯ ಸುತರಾಪೇಕ್ಷಿಸಿ ಭೂತ ಪತಿಯನ್ನು ಬೇಡಿದ್ದು ಹೇಳಲ್ಯಾ ನಾನು 4 ಭೂತಳದೊಳು ದೇವತೆಗಳೊಡÀನೆ ಇಂಥ ರೀತಿಲಿ ಚರಿಸಿದ್ದು ಹೇಳಲ್ಯಾ ಭೀತಿರಹಿತ ಜಗನ್ನಾಥವಿಠ್ಠಲನೆ ಅ ದ್ಭುತ ಮಹಿಮನೆಂದು ಹೇಳಲ್ಯಾ ನಾನು 5
--------------
ಜಗನ್ನಾಥದಾಸರು
ಕೇಶವನೊಲುಮೆಯು ಆಗುವ ತನಕ ಹರಿದಾಸರೊಳಿರುತಿರು ಹೇ ಮನುಜ ಪ ಕ್ಲೇಶಪಾಶಂಗಳ ಹರಿದು ವಿಲಾಸದಿಶ್ರೀಶನ ನುತಿಗಳ ಪೊಗಳುತ ಮನದೊಳುಅ ಘಾಸಿ ಮಾಡಿದ ಪಾಪಕಾಶಿಗೆ ಹೋದರೆ ಹೋದೀತೆಶ್ರೀಶನ ಭಕುತರ ದೂಷಿಸಿದಾ ಫಲಕಾಸು ಕೊಟ್ಟರೆ ಬಿಟ್ಟೀತೆಭಾಷೆಯ ಕೊಟ್ಟು ನಿರಾಶೆಯ ಗೈದ ಫಲಕ್ಲೇಶಗೊಳಿಸದೆ ಇದ್ದೀತೆಭೂಸುರಸ್ವವ ಹ್ರಾಸ ಮಾಡಿದ ಫಲಏಸೇಸು ಜನುಮಕು ಬಿಟ್ಟೀತೆ 1 ಜೀನನ ವಶದೊಳು ನಾನಾ ದ್ರವ್ಯವಿರೆದಾನಧರ್ಮಕೆ ಮನಸಾದೀತೆಹೀನ ಮನುಜನಿಗೆ ಜ್ಞಾನವ ಬೋಧಿಸೆಹೀನ ವಿಷಯ ಅಳಿದ್ಹೋದೀತೆಮಾನಿನಿ ಮನಸದು ನಿಧಾನವಿರದಿರೆಮಾನಾಭಿಮಾನಗಳುಳಿದೀತೆಭಾನುಪ್ರಕಾಶನ ಭಜನೆಯ ಮಾಡದಹೀನಗೆ ಮುಕುತಿಯು ದೊರಕೀತೆ2 ಸತ್ಯಧರ್ಮಗಳ ನಿತ್ಯವು ಬೋಧಿಸೆತೊತ್ತಿನ ಮನಸಿಗೆ ಸೊಗಸೀತೆತತ್ವದ ಅರ್ಥವ ವಿಚಿತ್ರದಿ ಪೇಳೆಕತ್ತೆಯ ಚಿತ್ತಕೆ ಹತ್ತೀತೆಪುತ್ಥಳಿ ಬೊಂಬೆಯ ಚಿತ್ರದಿ ಬಣ್ಣಿಸಿಮುತ್ತು ಕೊಟ್ಟರೆ ಮಾತನಾಡೀತೆಕತ್ತುರಿ ತಿಲಕವನೊತ್ತಿ ಫಣೆಯೊಳಿಡೆಅರ್ತಿಯ ತೋರದೆ ಇದ್ದೀತೆ 3 ನ್ಯಾಯವ ಬಿಟ್ಟನ್ಯಾಯವ ಪೇಳುವನಾಯಿಗೆ ನರಕವು ತಪ್ಪೀತೆಬಾಯಿ ಕೊಬ್ಬಿನಲಿ ಬಯ್ಯುವ ಮನುಜಗೆಘಾಯವಾಗದೆ ಬಿಟ್ಟೀತೆತಾಯಿತಂದೆಗಳ ನೋಯಿಸಿದವನಿಗೆಮಾಯದ ಮರಣವು ತಪ್ಪೀತೆಮಾಯಾಜಾಲವ ಕಲಿತ ಮನುಜನಿಗೆಕಾಯ ಕಷ್ಟವು ಬಿಟ್ಟೀತೆ 4 ಸಾಧು ಸಜ್ಜನರ ನೋಯಿಸಿದ ಮಾಯಾವಾದಿಗೆ ನರಕವು ತಪ್ಪೀತೆಬಾಧಿಸಿ ಪರರರ್ಥವ ದೋಚುವವಗೆವ್ಯಾಧಿಯು ಕಾಡದೆ ಬಿಟ್ಟೀತೆಭೇದವೆಣಿಸಿ ಬಲು ಕ್ಷುದ್ರವ ಕಲಿತರೆಮೋದವೆಂದಿಗು ಆದೀತೆಕದ್ದು ಒಡಲ ಪೊರೆವವನ ಮನೆಯೊಳುಇದ್ದದ್ದು ಹೋಗದೆ ಉಳಿದೀತೆ5 ಅಂಗಜ ವಿಷಯಗಳನು ತೊರೆದಾತಗೆಅಂಗನೆಯರ ಸುಖ ಸೊಗಸೀತೆಸಂಗ ದುಃಖಗಳು ಹಿಂಗಿದ ಮನುಜಗೆಶೃಂಗಾರದ ಬಗೆ ರುಚಿಸೀತೆಇಂಗಿತವರಿತ ನಿಸ್ಸಂಗಿ ಶರೀರ ವ-ಜ್ರಾಂಗಿಯಾಗದೆ ತಾನಿದ್ದೀತೆಮಂಗಳ ಮಹಿಮನ ಅಂಘ್ರಿಯ ಕಾಣದಮಂಗಗೆ ಮುಕುತಿಯು ದೊರಕೀತೆ 6 ಕರುಣಾಮೃತದಾಭರಣವ ಧರಿಸಿದಶರಣಗೆ ಸಿರಿಯು ತಪ್ಪೀತೆಕರುಣ ಪಾಶದುರವಣೆ ಹರಿದಾತಗೆಶರಣರ ಕರುಣವು ತಪ್ಪೀತೆಅರಿತು ಶಾಸ್ತ್ರವನಾಚರಿಪ ಯೋಗ್ಯಗೆಗುರು ಉಪದೇಶವು ತಪ್ಪೀತೆವರ ವೇಲಾಪುರದಾದಿಕೇಶವನಸ್ಮರಿಸುವನಿಗೆ ಮೋಕ್ಷ ತಪ್ಪೀತೆ 7
--------------
ಕನಕದಾಸ
ಕೇಶವನೊಲುಮೆಯು ಆಗುವತನಕ ಹರಿ ದಾಸರೊಳಿರು ಮನವೆ ದಾಸರ ಸ್ತುತಿಯನು ಪೊಗಳುತ ಮನದೊಳು ಪ ಕಾಶಿಗೆ ಪೋದರೆ ಪೋದೀತೆ ಲೇಸಾಗದೆ ಸುಮ್ಮನಿದ್ದೀತೆ ಮೋಸವ ಮಾಡದೆ ಬಿಟ್ಟೀತೆ ನಿಜವಲ್ಲದೆ ಪುಸಿಯಾದೀತೆ 1 ಸೊಣಕನ ಮನಸಿಗೆ ಸೊಗಸೀತೆ ಹೀನ ವಿಷಯಗಳು ಬಿಟ್ಟೀತೆ ಮಾನಾಭಿಮಾನವು ಉಳಿದೀತೆ ದೀನಗೆ ಮುಕ್ತಿಯು ದೊರಕೀತೆ 2 ಕತ್ತೆಯ ಮನಸಿಗೆ ಬಂದೀತೆ ತೊತ್ತಿನ ಮನಸಿಗೆ ಬಂದೀತೆ ಅರ್ಥ ತೊರೆಯದೇ ಬಿಟ್ಟೀತೆ ಚಿತ್ರದಿ ಬೊಂಬೆ ವಿಚಿತ್ರದಿ ಬರೆದಿತ್ತ ಮುತ್ತು ಕೊಟ್ಟರೆ ಮಾತಾಡೀತೆ 3 ನಾಯಾಗಿ ಹುಟ್ಟೋದು ಬಿಟ್ಟೀತೆ ಮಾಯಾವಾದಿಗೆ ಮುಕುತಿಯು ದೊರಕೀತೆ ಬಾಯಿಬೊಬ್ಬಿಲಿ ಬೊಗಳುವ ಮನುಜಗೆ ಘಾಯವಾಗದೆ ಬಿಟ್ಟೀತೆ ಕಾಯಕ ಕಷ್ಟ ಬಿಡದಿದ್ದೀತೆ 4 ರ್ವಾದಿಗೆ ಮುಕುತಿಯು ದೊರಕೀತೆ ಗೈದವಗೆ ವ್ಯಾಧಿ ಕಾಡದೆ ಬಿಟ್ಟೀತೆ ಬುದ್ಧಿಹೀನನೆಂಬೋದು ಬಿಟ್ಟೀತೆ ಇದ್ದದ್ದೋಗದೆ ಉಳಿದೀತೆ 5 ಅಂಗನೆಯರ ಬಯಸೀತೆ ಶೃಂಗಾರದ ಬಗೆ ತೋರೀತೆ ಭೃಂಗಗೆ ಮುಕ್ತಿಯು ದೊರಕೀತೆ 6 ಕರುಣಾನನ ಸ್ಮರಣೆವುಳ್ಳರಿಗೆ ಪರಮ ಪದವಿ ಆಗದಿದ್ದೀತೆ ಚರಣ ಸೇವಕನಾಗಿ ಇರು ಕಂಡ್ಯ ಮನವೆ 7
--------------
ಬೇಲೂರು ವೈಕುಂಠದಾಸರು
ಕೇಳೆ ಯಶೋದೆ ನಿನ್ನ ಮಗನ ಲೂಟಿಯಪ ತಾಳಲಾರೆವೆ ನಾವು ತರಳನ ದುಡುಕುಪೇಳಬಾರದೆ ಗೋಪಾಲಕೃಷ್ಣಗೆ ಬುದ್ಧಿಅಮ್ಮಾ-ಇದು ಚೆನ್ನಾಯಿತು ತಿಳಿದವನಲ್ಲವೆನೀ ಕೇಳೆ ಯಶೋದೆ ನಿನ್ನ ಮಗನ ಲೂಟಿಯ ಅ.ಪ. ಬಾಲಕನೆಂದು ಲಾಲಿಸಿ ಕರೆದರೆಮೂಲೆ ಮನೆಯೊಳಗೆ ಪೊಕ್ಕುಪಾಲು ಮೊಸರು ಬೆಣ್ಣೆಗಳ ಮೆದ್ದುಕೋಲಲಿ ನೀರ ಕೊಡಗಳೊಡೆದನೀಲವರ್ಣದ ದಿಟ್ಟ ನಿತ್ಯವೀ ಹೋರಾಟಬಾಲೆಯರಲ್ಲಿ ನೋಟ ಬಹಳ ಬಗೆಯಲ್ಲಿತಿಳಿದೆವೆಂದರೆ ಮೇಲೆ ಎಂಜಲುಗುಳಿ ಪೋದಅಮ್ಮಾ ಇದು ಚೆನ್ನಾಯ್ತು ತಿಳಿದವನಲ್ಲವೆನೀ ಕೇಳೆ ಯಶೋದೆ ನಿನ್ನ ಮಗನ ಲೂಟಿಯ 1 ಮತ್ತೆ ಭಾಮಿನಿಯರೆಲ್ಲರು ಕೂಡಿಮಡುವಿನೊಳು ಜಲಕ್ರೀಡೆಯನಾಡಲುಚಿತ್ತಚೋರ ನಮ್ಮ ಸೀರೆಗಳೆಲ್ಲವಹೊತ್ತು ಕೊಂಡು ಮರವನೇರಿದಬತ್ತಲೆ ಭಾಮೆಯರೆಲ್ಲ ಬೇಡಿದರೆ ಕೊಡನಲ್ಲಯುಕ್ತಿ ಬಹುಬಲ್ಲ ಹತ್ತಿಲಿ ಬಂದು ಕರವೆತ್ತಿ ಮುಗಿದರೆ ವಸ್ತ್ರ ಕೊಡುವೆನೆಂದಅಮ್ಮಾ ಇದು ಚೆನ್ನಾಯ್ತು ತಿಳಿದವನಲ್ಲವೆನೀ ಕೇಳೆ ಯಶೋದೆ ನಿನ್ನ ಮಗನ ಲೂಟಿಯ 2 ಸದ್ದು ಮಾಡದೆ ಸರಿ ಹೊತ್ತಿಲಿನಿದ್ದೆಗಣ್ಣಿಲಿ ನಾನಿರಲುಮುದ್ದು ಕೃಷ್ಣ ನಮ್ಮ ಮನೆಯವರಂತೆಮುದದಿಂದಲೆನ್ನನು ತಾ ಕೂಡಿದಎದ್ದು ನೋಡುವೆನಲ್ಲ ಆಹ ಏನೆಂಬುವರೆಲ್ಲಬುದ್ಧಿ ಮೋಸ ಬಂತಲ್ಲ ಪೊದ್ದಿ ಸಲ್ಲಿಸಿದೆಬುದ್ಧಿವಂತನೆಂದರೆ ಪರಿಹಾಸ್ಯ ಮಾಡಿ ನಗುವಅಮ್ಮಾ ಇದು ಚೆನ್ನಾಯ್ತು ತಿಳಿದವನಲ್ಲವೆನೀ ಕೇಳೆ ಯಶೋದೆ ನಿನ್ನ ಮಗನ ಲೂಟಿಯ 3
--------------
ವ್ಯಾಸರಾಯರು
ಕೋಪಿಸದಿರು ಸ್ವಾಮಿ ಶ್ರೀ ನರಸಿಂಹ ಪ. ಕೋಪಿಸದಿರು ಕರುಣಾಪಯೋನಿಧಿಯೆ ಮ- ಹಾಪರಾಧಗಳನು ಲೇಪಗೊಳಿಸದಿರು ಅ.ಪ. ಮಧ್ವ ವಲ್ಲಭ ನಿನ್ನ ಸೇವೆಯ ನಡಸುವ ಮಧ್ಯ ಮಧ್ಯದೊಳೆದ್ದು ಹೋದ ತಪ್ಪು ಶುದ್ಧಿಯಿಲ್ಲದ ತಪ್ಪು ಸೂಕ್ತಿ ಪಾಠಗಳೊಳಾ- ಬದ್ಧ ಬರುವ ತಪ್ಪೆನಿದ್ದರು ಕ್ಷಮಿಸಿನ್ನು 1 ಸಂಸಾರ ಲಂಪಟನಾಗಿ ಬಳಲುವೆನು ಕಂಸಾರಿ ನಿನಗಿನ್ನು ಪೇಳ್ವದೇನು ಹಂಸವಾಹನ ಪೀಠ ಹಲಧರನನುಜನೆ ಸಂಶಯಿಸದೆ ಎನ್ನ ಕಾಯೊ ಕಮಲನಾಭ 2 ಪತಿತಜನರಿಗಧಿಪತಿಯಾಗಿರುವೆ ನಾನು ಮತಿಹೀನನೆಂಬುದ ಬಲ್ಲಿ ನೀನು ಪಾದ ಪದ್ಮವೆ ಇನ್ನು ಗತಿ ಎಂದು ನಂಬಿದನ ಮೇಲೆ ಮುನಿಸಿನ್ನೇನು 3 ಪಾತಕ ಕಡಲೊಳು ಪೊರಳುತ ನೆರಳುತ ಯಾತರಿಂದಲು ಏಳಲಾರದಿನ್ನು ಶ್ರೀ ತರುಣಿಯವರ ನಿನ್ನ ಸೇರಿದ ಜಗ ನ್ನಾಥ ದಾಸರ ಪಾದದವಲಂಬಗೊಂಡೆನು 4 ಶ್ರೀಶ ಶೇಷಗಿರೀಂದ್ರ ವಾಸ ನಿನ್ನನೆ ನಂಬಿ ದಾಸ ಕೂಟದಿ ಸೇರಿಕೊಂಡಿಹೆನು ಣಾ ಸಮುದ್ರನೆ ಎನ್ನ ಕಾವದುಚಿತವಿನ್ನು 5
--------------
ತುಪಾಕಿ ವೆಂಕಟರಮಣಾಚಾರ್ಯ