ಒಟ್ಟು 120 ಕಡೆಗಳಲ್ಲಿ , 43 ದಾಸರು , 115 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಗೋಪಾಲವಿಠಲ ನೀ ಕಾಪಾಡೊ ಎನ್ನನುಅಪಾರ ಜನುಮದಿ ಪೊಂದಿ ಇಪ್ಪೆ ನಿನ್ನ ಪ. ಉದಿತ ತರಣೀನಿಭ ಪದಪದ್ಮ ನಿನ್ನಯಹೃದಯದೊಳಗಿರಿಸಿ ಮುದದಿಂದ ಧ್ಯಾನಿಪಸದಯುಗಳ ಪಾದಪದುಮಸೇವೆಯನುಒದಗಿ ಪಾಲಿಸೊ ಶಶಿವದನ ಸಂ(ಕಂ)ಸದನನೆ 1 ವಾಸುದೇವನೆ ಎನ್ನ ದೋಷಿಯೆಂತೆಂದರೆಆಸರಿನ್ನ್ಯಾರು ನಿನ್ನ ದಾಸರದಾಸಗೆದಾಸವಿನುತ ಹೀಗುದಾಸೀನ ಮಾಡಲುದಾಸಜನರು ನಿನ್ನ ಲೇಶವು ಮೆಚ್ಚರು 2 ಪಿರಿಯರೆಲ್ಲರು ನಿನ್ನ ಚರಣವ ಪೂಜಿಸಿಪರಮಾನುಗ್ರಹ ಪರಿಪಾಲಿಸಿಪ್ಪರೆನ್ನನಿರುತದಿಬೇಡುವೆ ಗೋಪಾಲವಿಠಲ ಶ್ರೀಲೋಲನೆದೊರೆಯೆ ನಿನ್ನ ಮೂರುತಿ ಬರವೆನ್ನ ಮನಸಿಗೆ 3
--------------
ಗೋಪಾಲದಾಸರು
ಚತುರ್ದಶಿಯ ದಿನ (ಹನುಮಂತನನ್ನು ಕುರಿತು) ರಂಭೆ : ಇವನ್ಯಾರೆ ದೂರದಿ ಬರುವವ ಇವನ್ಯಾರೆಪ. ಇವನ್ಯಾರೆ ಮಹಾಶಿವನಂದದಿ ಮಾ- ಧವನ ಪೆಗಲೊಳಾಂತು ತವಕದಿ ಬರುವವ1 ದಾಡೆದಂತಮಸಗೀಡಿರುವದು ಮಹಾ ಕೋಡಗದಂತೆ ಸಗಾಢದಿ ಬರುವವ2 ಕಡಲೊಡೆಯನು ಮೃದುವಡಿಯಡರಿಸಿ ಬಿಡ ದಡಿಗಡಿಗಾಶ್ರೀತರೊಡಗೂಡಿ ಬರುವವ3 ಊರ್ವಶಿ :ನಾರಿ ಕೇಳೆಲೆಗೆ ವೈಯಾರಿ ನೀ ಮುದದಿ ನಾರಾಯಣನಿಗೀತ ಬಂಟನಾದಾದರಿದಿ ವೀರ ರಾಮವತಾರದಿ ಹಿಂದೆ ಹರಿಯ ಚಾರಕನಾಗಿ ಸೇವೆಯ ಗೈದ ಪರಿಯ ಕ್ರೂರ ದಶಾಸ್ಯನ ಗಾರುಗೆಡಿಸಿ ನೃಪ ವೀರನ ಪೆಗಲಿನೊಳೇರಿಸಿ ದೈತ್ಯರ ಭೂರಿವಧೆಗೆ ತಾ ಸಾರಥಿಯಾದವ ಕಾರುಣೀಕ ಮಹಾವೀರ್ಹನುಮಂತ1 ಆಮೇಲೆ ವೀರಾವೇಶದಿ ವಾರಿಧಿಯನು ರಾಮನಪ್ಪಣೆಯಿಂದ ದಾಟಿದನಿವನು ಭೂಮಿಜೆಗುಂಗುರ ಕೊಟ್ಟ ನಂತರದಿ ಕಾಮುಕರನು ಸದೆಬಡಿದನಾ ಕ್ಷಣದಿ ಹೇಮಖಚಿತ ಲಂಕಾಮಹಾನಗರವ ಹೋಮವ ಗೈದು ಸುತ್ರಾಮಾರಿಗಳ ನಿ- ರ್ನಾಮಿಸಿ ಸೀತೆಗೆ ತಾ ಮಣಿಯುತ ಚೂ- ಡಾಮಣಿ ತಂದ ಮಹಾಮಹಿಮನು ಇವ2 ವಾರಿಮುಖಿ ನೀ ಕೇಳಿದರಿಂದ ಬಂದ ವೀರ ಹನುಮಂತನನೇರಿ ಗೋವಿಂದ ಸ್ವಾರಿಗೆ ಪೊರಟ ಚಾತುರ್ದಶಿ ದಿವಸ ಆರತಿಯನು ಕೈಕೊಳ್ಳುವ ಶ್ರೀನಿವಾಸ ಭೇರಿ ಮೃದಂಗ ಮಹಾರವದಿಂದ ಸ- ರೋರುಹನಾಭ ಮುರಾರಿ ಶರಣರು ದ್ಧಾರಣಗೈಯುವ ಕಾರಣದಿಂದ ಪಾ- ದಾರವಿಂದಗಳ ತೋರಿಸಿ ಕೊಡುವ3 ಬಳಿಕ ಪಲ್ಲಂಕಿ ಏರಿದ ಕಾಣೆ ನಾರಿ ನಲವಿಂದ ವೇದಘೋಷವ ಕೇಳ್ವ ಶೌರಿ ಜಲಜಭವಾದಿ ನಿರ್ಜರರಿಗಸಾಧ್ಯ ಸುಲಭನಾದನು ಭಕ್ತಜನಕಿದು ಚೋದ್ಯ ಸುಲಲಿತ ಮಂಟಪದೊಳೊ ನೆಲಸುತ ನಿ- ಶ್ಚಲಿತಾನಂದ ಮಂಗಲದ ಮಹೋತ್ಸವ ಗಳನೆಲ್ಲವ ಕೈಕೊಳುತಲಿ ಭಕ್ತರ ಸಲಹುವ ನಿರುತದಿ ಮಲಯಜಗಂಧಿನಿ4 ಶ್ರೀಕಾಂತ ಬಳಿಕ ಭಕ್ತರ ಒಡಗೂಡಿ ಏಕಾಂತ ಸೇವೆಯಗೊಂಡ ಕೃಪೆಮಾಡಿ ಸಾಕಾರವಾಗಿ ತೋರುವ ಕಾಣೆ ನಮಗೆ ಬೇಕಾದ ಇಷ್ಟವ ಕೊಡುವ ಭಕ್ತರಿಗೆ ಶ್ರೀಕರ ನಾರಾಯಣ ಶ್ರೀನಿವಾಸ ಕೃ- ಪಾಕರ ವಿಬುಧಾನೇಕಾರ್ಚಿತ ರ- ತ್ನಾಕರಶಯನ ಸುಖಾಕರ ಕೋಟಿ ವಿ- ಚಾರಕ ಭಾಸತ್ರಿಲೋಕಾಧಿಪನಿವ5
--------------
ತುಪಾಕಿ ವೆಂಕಟರಮಣಾಚಾರ್ಯ
ಚರಣವನೆನೆಮನವೆ | ನಂಬಿ ಚರಣವ ನೆನೆಮನವೆ | ಶ್ರೀರಾಮವೇದವ್ಯಾಸರ ಪಾದಕಮಲವ | ನಿರುತದಿ ಪೂಜಿಪಗುರು ಸತ್ಯಪೂರ್ಣರ ಪ ಶ್ರೀ ಮಧ್ವಶಾಸ್ತ್ರದಾ | ಸರೋವರ | ಪ್ರೇಮದಿಹಂಸರಾ | ವ್ಯೋಮ ಕೇಶನಪ್ರಿಯನಾಮ ಮುಕ್ತಾಫಲ | ಪ್ರೇಮದಿಸೇವಿಪ ಕೋಮಲ ಕಾಯರ 1 ಪೋಕದುರ್ವಾದಿಗಳಾ | ವದನಕೆ | ಹಾಕಿದ ಕೀಲಿಗಳಾ | ಬೇಕಾದ ಸಂಪದನೇಕವನುಣಿಸುವ | ಲೋಕಕೆ ಮಾನ್ಯಾಗಿ ಸಾಕುವರೊಡೆಯರ 2 ಮುನಿ ಅಭೀನವತೀರ್ಥರ | ಶುಭಕರ | ವನಜದಿಜನಿಸಿದರಾ | ವನಿಯೊಳು ಮಹೀಪತಿಜನ ಸಲಹುವರಾ 3
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಜಗವಿದು ಪುಸಿಯೈ ಬಗೆವೊಡೆ ಮನುಜಾ ತೋರುತಿಹ ಕನಸಿನಂತೆ ಇರುವೆ ಪ ನನಸಿನ ಅರಿವದು ದೊರಕುವ ತನಕ ಕನಸಿದು ಎನ್ನುವ ಕಲ್ಪನೆ ಇಹುದೆ ? ನನಸಿನ ನನಸಾಗಿಹ ಪರವಸ್ತುವೆ ತಾನೆ ನಿಜವು ಎಂಬರಿವಾಗುತಲಿರೆ 1 ನಿರುತದಿ ಸಮನಾಗಿರಲರಿಯದ ಈ ತೋರಿಕೆ ಅನಿಸಿಕೆಗಳು ನಿಜವಲ್ಲವು ಪರಿಕಿಸೆ ಸತತದಿ ಸಮನಾಗಿರುತಿಹ ಪರಮ ಪದವೆ ತಾನೆಂದರಿಯುತಲಿರೆ 2 ಅಳಿಯುವ ಜಗವಿದು ಬೆದರುವಿ ಏತಕೆ ತಿಳಿಯುತಲೀಪರಿ ನಿಜವಸ್ತುವನು ಗಳಿಸಿಕೊಂಡು ನೀ ನಿನ್ನಯ ಮುಕುತಿಯ ಕಲುಷರಹಿತಶಂಕರನಡಿಯರಿಯಲು 3
--------------
ಶಂಕರಭಟ್ಟ ಅಗ್ನಿಹೋತ್ರಿ
ತಾತ್ವಿಕ ಹಿನ್ನೆಲೆಯ ಹಾಡುಗಳು (ಸರ್ವೋತ್ತಮತ್ವ ವರ್ಣನೆ) ಸಕಲವು ತ್ವದಧೀನವು ಶ್ರೀಶನೀ ಕೇಳು ಪ. ಸಕಲವು ತ್ವದಧೀನ ಸಾಕಯ್ಯ ಸತ್ಯಮಾನ ವಿಖನ ಸಗಣಧಾಮ ವಿಶ್ವಗುಣಾಭಿರಾಮ ಅ.ಪ. ಕಮಲ ಸಂಭವ ಮುಖರು ಶ್ರೀಶ ತ್ವತ್ಪಾದ ವಿಮಲ ಪದ್ಮ ಸೇವಕರು ಅಮಿತ ಗುಣಾಂಬುಧಿ ಆಡುವಿ ನಿರುತದಿ ದುರಿತ ಬೀಜ ಶ್ಯಾಮ ಸುಂದರ ರಾಜ 1 ದೇಹ ಗೇಹಾದಿಗಳೆಲ್ಲ ಸುವರ್ಣ ಪಕ್ಷಿ ವಾಹ ನಿನ್ನೊಶ ಭೂನಲ್ಲ ಮೋಹದಿ ತನ್ನದೆಂದು ಜೋಹಗೊಂಡ ಪರಿಗೆ ಬಾಹದಿರದು ಕೇಡು ಬಿಡದೆಂದು ನಗೆಗೇಡು 2 ಪರಮ ಕೃಪಾಳು ನಿನ್ನ ಪಾದವ ನಂಬಿ ಮರೆದೆ ದುರ್ಮಾನವನ್ನ ಉರಗ ಗಿರೀಂದ್ರನೋಳ್ಮೆರೆವ ಮಹಾತ್ಮನೆ ಶರಣ ಜನ ಮಂದಾರ ಸೇರಿಸು ಕೃಪಾಧಾರ3
--------------
ತುಪಾಕಿ ವೆಂಕಟರಮಣಾಚಾರ್ಯ
ತಾತ್ಸಾರಕಿದು ಕಾಲವಲ್ಲ ರಂಗಯ್ಯ ಶ್ರೀ- ವತ್ಸಲಾಂಛನ ಸುಖ ಚಿನ್ಮಯನೆ ವತ್ಸನ ಧ್ವನಿ ಕೇಳಿ ಒದಗುವ ಗೋವಂತೆ ಭೃತ್ಯರ ಸಲಹುವ ಬಿರುದುಳ್ಳ ನರಸಿಂಹ ಪ. ಹುಚ್ಚಾಗೆಲ್ಲರ ಕಚ್ಚುವ ನಾಯಂತೆ ತುಚ್ಛವಾದ ಬಗುಳುಚ್ಚರಿಸಿ ಇಚ್ಛಾನುಸಾರದಿಂದಿರುವ ಹೂಣನ ಬಾಯಿ ಮುಚ್ಚಿಸಿ ಮೂಲೆಯೊಳ್ಮುರಿದೊತ್ತು ಮುರಹರ 1 ನಿನ್ನ ಸೇವೆಯನ್ನು ನಿರುತದಿ ನಡೆಸುತ ಅನ್ಯರ ಲಕ್ಷಿಸದಿರಲೆನ್ನನು ಭಿನ್ನ ಭಾವದಿ ಭೀತಿ ಬಡಿಸುವ ದುಷ್ಟನ ಇನ್ನುಪೇಕ್ಷಿಸಿ ಸುಮ್ಮನಿರುವೆ ಯಾತಕೆ ಸ್ವಾಮಿ 2 ದುಷ್ಟ ಹಿರಣ್ಯಚರ್ಮಾದಿದಮನ ನಿನ- ಗೆಷ್ಟೆಂದು ಪೇಳಲಿ ವಿಧಿಜನಕ ಸೃಷ್ಟಿಗೊಡೆಯ ವೆಂಕಟೇಶನ ಹೂಣನ ಮಾಧವ 3
--------------
ತುಪಾಕಿ ವೆಂಕಟರಮಣಾಚಾರ್ಯ
ತಿರುಪತಿ ಯಾತ್ರೆಯ ಮಾಡಿ ತಿರುಪತಿ ಪ ತಿರುಪತಿಯಾತ್ರೆಯ ಮಾಡಿ ಮನದ ದುರಿತಪಾಪಗಳನೀಡಾಡಿ ಆಹ ಸ್ಮರಕೋಟಿ ತೇಜನ ದರುಶನಲಾಭವು ದೊರಕಿದ ಸುಜನರ ಚರಿತೆಯ ಕೇಳುತ್ತ ಅ.ಪ ಸುಟ್ಟು ಹೋಗುವದಿದು ಚಂದ ಮೆಟ್ಟು ಮೆಟ್ಟಿಲನೇರುವ ವೃಂದ ಜನ ಸೃಷ್ಟಿಗೊಡೆಯ ಗೋವಿಂದ ಆಹಾ ದಿಟ್ಟಮನದಿ ಪರಮೇಷ್ಠಿಪಿತನ ಪಾಡಿ ಗಟ್ಯಾಗಿ ಗೋವಿಂದ ಗೋವಿಂದನೆನುವರು1 ಗಾಳಿಗೋಪುರವನ್ನೆ ದಾಟಿ ಭಕ್ತ- ರಾ ಮಂಟಪಕೆ ಉಂಟೆ ಸಾಟಿ ತಾಳ ಮೇಳದವರ ಗಲಾಟೀಯಿಂದ ಶೋಭಿಪ ಪವನನಕೋಟಿ ಕೇಳಿ ನೋಡುತ್ತ ಭಕುತಿಸೂರ್ಯಾಡುತ್ತ ಮಹಿಮೆ ಕೊಂ- ಡಾಡುತ್ತ ಪಾಡುತ್ತ ಕುಣಿವ ಸಜ್ಜನರೆಲ್ಲ 2 ಸ್ವಾಮಿ ಪುಷ್ಕರಣಿಯ ಸ್ನಾನ ಮಾಡಿ ಆ ಮಹವರಹದೇವರನ್ನ ಕಾಮ- ಧೇನೆಂಬ ಶ್ರೀ ಗುರುಗಳನ್ನ ನೋಡಿ ಆ ಮಹಾ ಅಶ್ವತ್ಥರಾಜನ್ನ ಸ್ತುತಿಸಿ ನೇಮದಿ ದಿಗ್ಗಾವಿ ಆಚಾರ್ಯರಿಗೆ ನಮಿಸಿ ಶ್ರೀಧರನಾಲಯ ದ್ವಾರಕ್ಕೆ ಪೋಗಲು 3 ಮೂರು ದ್ವಾರಗಳನ್ನೆ ದಾಟಿ ಮು- ರಾರಿಯ ಗುಡಿಸುತ್ತ ಕೋಟೆಯಲ್ಲಿ ಸಾರುವ ಭಕುತರ ಭೇಟಿಯಿಂದ ಅ- ಪಾರ ಜನುಮದ ಪಾಪಮೂಟೆ ಪೋಗಿ ಬೇಗದಿ ವಿಮಾನ ಶ್ರೀನಿವಾಸನ ನೋಡಿ ಸಾಗರಶಯನನ ದರುಶನ ಕೊಡುಕೊಡು ಎಂದು 4 ಕೊಪ್ಪರಿಗೆಯು ಮನೆಯಂತೆ ಹಣ ತಪ್ಪದೆ ಸುರಿಯುವರಂತೆ ನ- ಮ್ಮಪ್ಪ ವೆಂಕಟಸ್ವಾಮಿಯಂತೆ ತಪ್ಪನಾಡುವರ ಶಿಕ್ಷಿಪನಂತೆ ಆಹಾ ಕ್ಷಿಪ್ರದಿ ಶ್ರೀಧರನಪ್ಪಣೆಯಂದದಿ ಅಪ್ರಮೇಯನ ಸೇವೆಗೊಪ್ಪುವ ಸುಜನರು 5 ಹೇಮದ್ವಾರದಿ ನಿಂತ ಜನರು ನಮ್ಮ ಸ್ವಾಮಿ ಶೃಂಗಾರ ನೋಡುವರು ಶ್ರೀನಿ- ವಾಸನೆ ಸಲಹು ಎಂಬುವರು ಪಾಹಿ ಪಾಹಿ ಶ್ರೀಪತಿ ಎನ್ನುತಿಹರು ಶ್ರೀಶ ಗೋವಿಂದ ಗೋವಿಂದ ಗೋವಿಂದ ಮಾಧವ ಮಾತುಳಾಂತಕ ದೇವ ಮಾತು ಲಾಲಿಸು ಎಂದು6 ಚರಣದಂದಿಗೆ ಗೆಜ್ಜೆವಲಿಯೆ ಪೊನ್ನ ಸರಪಳಿ ಪಾಡಗ ನಲಿಯೆ ಒಳ್ಳೆ ಜರದ ಪೀತಾಂಬರ ಹೊಳೆಯೆ ಪಟ್ಟೆ ವರವಲ್ಲಿ ಹೊಳೆಯುತ್ತ ಮೆರೆಯೆ ಆಹ ಸರಗಳು ವಲಿಯುತ್ತ ಪದಕಂಗಳ್ಹೊಳೆಯುತ್ತ ಉರದಲ್ಲಿ ಶ್ರೀದೇವಿ ಇರುವ ವೈಭವ ನೋಡಿ7 ವರಶಂಖು ಚಕ್ರ ಹಸ್ತದಲಿ ದಿವ್ಯ ಸಿರದಿ ಕಿರೀಟ ಮೆರೆಯುತಲಿ ಪಟ್ಟೆ ತಿಲುಕ ಕಸ್ತೂರಿ ಹೊಳೆಯುತಲಿ ಥಳ ಥಳ ಹೊಳೆವ ಮುಖಕಾಂತಿಯಲಿ ಅಹ ಕಡೆಗಣ್ಣ ನೋಟದಿ ಜಗವಮೋಹನ ಮಾಳ್ಪ ಅಗಣಿತ ಮಹಿಮನ ಸುಗುಣವ ಪಾಡುತ್ತ 8 ಕರುಣಿಗಳರಸನೆ ದೇವ ತನ್ನ ಶರಣು ಹೊಕ್ಕವರನ್ನೆ ಕಾವ ತನ್ನ ಭಜಕರಿಗಭಯವ ನೀವ ಇನ್ನು ಸರಿಯುಂಟೆ ಶ್ರೀರಮಾದೇವ ಅಹ ಪರಿಸರನೊಡೆಯನ ನಿರುತದಿ ಧ್ಯಾನಿಸಿ ದುರಿತಗಳಳಿದು ಸದ್ಗತಿಯ ಪಡೆವರೆಲ್ಲ 9 ಕಾಲಹರಣ ಮಾಡದಂತೆ ತ್ರಿ- ಧಾಮನ ಸ್ಮರಿಸುವ ಚಿಂತೆಯಲ್ಲಿ ಆಲಸ್ಯ ತೊರೆದಿಹರಂತೆ ಶ್ರೀನಿ- ವಾಸನೆ ಇದಕ್ಹೊಣೆಯಂತೆ ಅಹ ಕಾಲಕಾಲಕೆ ತಕ್ಕ ಲೀಲೆಯ ತೋರುವ ಪಾದ ಧ್ಯಾನಿಪ ಸುಜನರು 10 ಹತ್ತವತಾರದ ಹರಿಯು ತನ್ನ ಭಕ್ತರು ಸ್ತುತಿಸುವ ಧ್ವನಿಯ ಕೇಳಿ ಚಿತ್ತದಿ ನಲಿಯುವ ಪರಿಯು ಸುರರು ವಿಸ್ತರಿಸುವ ದಿನಚರಿಯು ಅಹ ಭಕ್ತರ ಸ್ತುತಿಸಲು ಮತ್ತವರಿಗೊಲಿಯುವ 11
--------------
ನಿಡಗುರುಕಿ ಜೀವೂಬಾಯಿ
ತೂಗಿರೆ ಗುರುಗಳ ತೂಗಿರೆ ಯತಿಗಳ ತೂಗಿರೆ ದಾಸಗ್ರೇಸರರ ನಾಗಶಯನನು ರಾಗವ ಪಡೆದಂಥ ಯೋಗಿವರೇಣ್ಯರ ತೂಗಿರೆ ಪ ಈ ಮಹಿಯೊಳು ಪುಟ್ಟಿ ಶ್ರೀಮುದತೀರ್ಥ ಸು- ನಾಮದಿ ಕರೆಸುವರ ತೂಗಿರೆ ಆ ಮುದತೀರ್ಥ ಪದ್ಮನಾಭ ನಾಮದಿಂದಿರುವರ ತೂಗಿರೆ1 ರಾಮನ ತಂದಿತ್ತ ನರಹರಿ ಮುನಿಪರ ಮಾಧವ ತೀರ್ಥರ ತೂಗಿರೆ ಆಮ- ಹಾವಿದ್ಯಾರಣ್ಯರನ ಗೆಲಿದಂಥ ಶ್ರೀ ಮದಕ್ಷೋಭ್ಯರ ತೂಗಿರೆ 2 ಕಾಕಿಣಿತೀರಸ್ಥ ಟೀಕಾಚಾರ್ಯರೆಂಬೊ ನಾಕಪಾಂಶಜರನ ತೂಗಿರೆ ಶ್ರೀಕೃಷ್ಣ ತಟದಿ ಜಿತಾಮಿತ್ರರೆಂಬೊ ಪಿ- ನಾಕಿ ಅಂಶಜರನ ತೂಗಿರೆ 3 ರಾಜರಂದದಿ ಸುಖಭೋಜನ ಕೃದ್ಯತಿ ರಾಜ ಶ್ರೀಪಾದರ ತೂಗಿರೆ ವ್ಯಾಜದಿ ವಿಜಯ ಸಾಮ್ರಾಜ್ಯರೆನಿಸಿ ವ್ಯಾಸರಾಜರು ಮಲಗ್ಯಾರ ತೂಗಿರೆ 4 ವಾದಿಗಳನು ಯುಕ್ತಿವಾದದಿ ಗೆಲಿದಂಥ ವಾದಿರಾಜರನ್ನ ತೂಗಿರೆ ಮೇದಿನಿಯೊಳು ಕೃಷ್ಣದ್ವೈಪಾಯನರೆಂಬೊ ವೇದವ್ಯಾಸಾತ್ಮಜರ ತೂಗಿರೆ 5 ಪರಿಮಳ ರಚಿಸಿದ ವರಹಜ ತೀರಸ್ಥ ಇರುಳು ಕಾಲದಲಿ ತರಣಿಯ ತೋರಿದ ಗುರುಸತ್ಯ ಬೋಧರ ತೂಗಿರೆ 6 ಪರಮತ ಖಂಡನ ನಿರುತದಿ ಮಾಡಿದ ಗುರುವರದೇಂದ್ರರ ತೂಗಿರೆ ಗುರು ಭುವನೇಂದ್ರರ ಕರಜವ್ಯಾಸತತ್ವ ವರಿತ ಯತೀಶರ ತೂಗಿರೆ 7 ವರಭಾಗವತಸಾರ ಸರಸದಿ ರಚಿಸಿದ ಗುರುವಿಷ್ಣು ತೀರ್ಥರ ತೂಗಿರೆ ಪರಮ ಕ್ಷೇತ್ರಕೂಡಲಿಯೊಳಗಿರುವಂಥ ಗುರುರಘುವೀರರ ತೂಗಿರೆ 8 ಹರಿಯ ಮಹಿಮೆಯನ್ನು ಸರಸದಿ ಪೇಳಿದ ಪುರಂದರ ದಾಸರ ತೂಗಿರೆ ಹರಿಸರ್ವೋತ್ತಮನೆಂದು ಸುರಮುನಿ ಗರುಹಿದ ಗುರು ವಿಜಯದಾಸರ ತೂಗಿರೆ 9 ಬನ್ನವ ಬಿಡಿಸಿ ಶಿಷ್ಯನ್ನ ಪಾಲಿಸಿದ ಭಾಗಣ್ಣ ದಾಸರನ್ನು ತೂಗಿರೆ ಘನ್ನ ಹರಿಯಗುಣ ವರ್ಣಿಸಿದಂಥ ಜ ಗನ್ನಾಥ ದಾಸರ ತೂಗಿರೆ 10 ಮಾನವಿರಾಯರ ಪ್ರಾಣಪದಕರಾದ ಪ್ರಾಣೇಶದಾಸರ ತೂಗಿರೆ ವೇಣುಗೋಪಾಲನ್ನ ಗಾನದಿ ತುತಿಸಿದ ಆನಂದದಾಸರ ತೂಗಿರೆ 11 ವಾಸ ಆದಿಶಿಲಾಧೀಶನ್ನ ಭಜಿಸಿದ ಶೇಷ್ಠ ದಾಸರನ್ನ ತೂಗೀರೆ ಶ್ರೇಷ್ಠ ಕಾರ್ಪರ ನರಕೇಸರಿಗತಿಪ್ರೀಯ ದಾಸೋತ್ತಮರನ್ನ ತೂಗೀರೆ 12
--------------
ಕಾರ್ಪರ ನರಹರಿದಾಸರು
ಧ್ಯಾನ ಮಾಳ್ಪುದು ಮನಸಾ | ಹೃದಯಾರವಿಂದದಿಸಾನು ಕೂಲಿಪ ಅರಸ | ವಿಸ್ತರಿಸಿ ಗುಣಗಳಮೌನಿಯಾಗುತ ಸಹಸ | ಚಿಂತಿಸೆಲೊ ಅನಿಶಾ ಪ ಸಾನು ರಾಗದಿ ರೂಪಗುಣಗಳ | ಮಾನಮೇಯ ಜ್ಞಾನ ಸಹಿತದಿಏನು ಫಲದನು ರಾಗವಿಲ್ಲದೆ | ಶ್ರೀನಿವಾಸನ ಭಕುತಿಯಿಂದಲಿ ಅ.ಪ. ನತ ನಾ | ಸಾಗ್ರದಲಿ ದೃಷ್ಟಿಯನೆ ಇಡುತ 1 ಮಾನವ ಪ್ರಾಣ ನಿಯಮನ ವಾರ್ತಿ | ತಿಳಿಯುತ ಮನದಲಿಪ್ರಾಣ ರೇಚಕ ನೀತಿ | ಪೂರಕವು ಕುಂಭಕಜಾಣ ತನದಲಿ ಪೂರ್ತಿ | ಗೈದೋಂಕಾರ ಕೀರ್ತಿ ||ಪ್ರಾಣ ನಿರುತದಿ ಮಾಳ್ಪ ಅನು ಸಂಧಾನ ತಿಳಿದಾ ಚರಿಸೆ ವಿಹಿತದಿಪ್ರಾಣ ಸಂಯವ ಭಕ್ತಿ ಪೂರ್ವ ವಿ | ಧಾನ ಮಾಡಲು ವೇಗ ವಲಿದನು|2| ಹತ್ತು ಸಲ ಪ್ರತಿಸವನ | ಪ್ರಾಣನ್ನ ಸಂಯವ ಕರ್ತೃ ಹೀಗೆ ತ್ರಿಸದನ ಮಾಸಕ್ಕೆ ಮುಂಚೆಯೆಭರ್ತೃವಾಗಿಹ ಪ್ರಾಣ | ವಶನ ಹನು ಅವಗೆಂದುಉಕ್ತವಿದು ಸನ್ಮಾನ | ತಿಳಿದಾ ಚರಿಸು ಧ್ಯಾನ ||ಪೊತ್ತು ಕದಳಿಯ ಮೊಗ್ಗಿನಾಕೃತಿ | ಮತ್ತೆ ನಡು ಸತ್ಕರ್ಣಿಕವು ಇಹಹೃತ್ಸ ಅಷ್ಟದಳಾಖ್ಯ ಕಮಲವ | ಎತ್ತುವುದು - ಉದಯಾರ್ಕ ಮಂತ್ರದಿ |3| ಚಿಂತೆ ಕರ್ಣಕೆಯಲ್ಲಿ | ಮಾರ್ತಾಂಡ ಮಂಡಲಅಂತೆ ಅದರುಪರೀಲಿ | ತಾರೇಶ ಮಂಡಲಚಿಂತೆ ತದ್ದುಪರೀಲಿ | ಮಂಡಲ ವಿಭಾವಸುಅಂತೆ ತನ್ನಡುವೀಲಿ | ಹರಿಪದಾಜ್ಜಾಳಿ ||ಯಂತೆ ಚಿತ್ತ ಸ್ಥೈರ್ಯದಿಂದಲಿ | ಚಿಂತಿಸುತ ಗುಣರೂಪ ಕ್ರಿಯೆಗಳಕ್ರಾಂತನಾಗುವ ಹರಿಯ ಚರಣದಿ | ಶಾಂತ ಸತ್ಸಮಾಧಿಯನು ಪಡೆ 4 ಕಂಬು ಕುಂಡಲ ಮಕರ | ಶೋಭಿ ಕರ್ಣಾಪಾರ ||ಮಾರಪಿತ ಶಿರಿವತ್ಸ ಲಾಂಛನ | ಶ್ರೀ ರಮಾಪತೆ ಶ್ಯಾಮಸುಂದರಕಾರಣಿಕ ಕನಕಾಂಬರಾಧರ | ಹಾರ ಸುಮನ ವಿಶಾಲ ವಕ್ಷನ 5 ಕಂಬು ಕಟಿ ಸೂತ್ರಾಂಗದೈರ್ಯುತ | ವಸ್ತು ಸರ್ವಾಧಾರ ಹೃದ್ಯನ 6 ಧ್ಯಾನ ಬಹು ದುರ್ಭಾವ್ಯ | ಶ್ರೀಹರಿ ವಿಭೂತಿಯುಮನಕೆ ದುರ್ವಿಜ್ಞೇಯ | ಪೆಸರಿಹುದು ಕಾರಣಅನಘನಂಗವು ದೇಹ | ಒಂದೊಂದು ಸ್ಥಿರ ಪಡೆಪುನಹ ಸರ್ವಾವಯದ ಸ್ಥಿರ ತೆರದಿ ಧೇಯ ||ಎಣಿಸು ಪ್ರತ್ಯಾಹರಣ ಕಾರ್ಯವ | ವಿನಹವಿದು ಮನಸ್ಥೈರ್ಯವಾಗದುಅನಿಲದಯ ಸಂಪಾದಿಸುತ್ತಲಿ | ಗುಣಿಸು ನೈರಂತರ್ಯವೀತೆರ 7 ಶಿಷ್ಟನಾಗುತಲಿನ್ನು | ಅನ್ಯತ್ರ ಮನವನುಸುಷ್ಠು ಸೆಳೆಯುತಲಿನ್ನು | ಹರಿಪಾದ ವನಜದಿಘಟ್ಟ ಇಡುತಲಿ ಮುನ್ನ | ಸುಸ್ಥಿರದ ಚಿತ್ತದಿ ||ಪ್ರೇಷ್ಟ ತಮ ಅವನೆನ್ನು | ಸರ್ವಕಧಿಕೆನುನಷ್ಟವಾಗುತ ಭ್ರಾಮಕ ತ್ರಯ | ಶ್ರೇಷ್ಠ ಧ್ಯಾನಾಸಕ್ತನಾಗಲು ದೃಷ್ಟಿಸುತಲಿ ತತ್ವಪತಿಗಳ | ಇಷ್ಟ ಮೂರ್ತಿಯ ಕಾಂಬೆ ಕೊನೆಗೆ8 ಯೋಗವಿಹುದು ಸಮಾಧಿ | ಅಭ್ಯಾಸ ಸಾಧ್ಯ ನಿಯೋಗಿಸಿದನ ನಿರುತದಿ | ಸುಸ್ಥಿರದಿ ಚಿತ್ತವಯೋಗಿಸ್ಹರಿ ಚರಣದಿ | ಏನೊಂದು ಬೇಡದೆವೇಗ ಹರಿ ರೂಪದಿ | ನೋಡವನ ದಯದಿ ||ಆಗಮೈಕ ಸುವೇದ್ಯ ಭಕ್ತಿಯ | ಯೋಗ ಕೊಲಿಯುತ ಸಾಧಕಂಗೆಯೋಗಿ ಗುರು ಗೋವಿಂದ ವಿಠ್ಠಲ | ವೇಗತನ ದರ್ಶನವ ಪಾಲಿಪ 9
--------------
ಗುರುಗೋವಿಂದವಿಠಲರು
ನಾನೇ ಸಜ್ಜನನಾದಡೆ ಇಂಥ ಹೀನ ವಿಷಯಗಳಿಗೆರಗುವೆನೇನಯ್ಯ ಪ. ನಿರುತದಿ ಪರರ ನಿಂದಿಸುತಿಹೆನೆಗುರುಹಿರಿಯರು ಸಜ್ಜನರೆನ್ನದೆಹರಿ ಪರದೈವವೆಂದರಿತು ಭಜಿಸದೆಪರರ ವಡವೆಗಳ ಬಯಸುವೆನೇನಯ್ಯ 1 ಚಿತ್ತವ ಪುರುಷೋತ್ತಮನ ಮನದಲ್ಲಿಡದೆಉತ್ತಮರಾದವರೊಡನಾಡದೆತತ್ವ ವಿಚಾರವ ಮಾಡದೆ ನಾನು ನ್ಮತ್ತರ ಸಂಗವ ಮಾಡುವೆನೇನಯ್ಯ 2 ಹೇಯ ಶರೀರವ ಪೋಷಿಸಿಕೊಂಡುಪಾಯವ ಚಿಂತಿಸಿ ಬಳಲುವೆನುರಾಯರ ಶರಣರ ಸಲಹುವರಂಗವಿಠಲನ ಬಿಡುವೆನೇನಯ್ಯ 3
--------------
ಶ್ರೀಪಾದರಾಜರು
ನಾರಾಯಣ ಅವತಾರ್ದೋಳು ಸ್ವಾಮಿ ನೀ ಗಿರಿಯಾನೆತ್ತಿ ಗೋಗಳ ಕಾಯ್ದದ್ದು ಮರತೇನೋ ಪಾವನಾತ್ಮನೆ ಪ ಶ್ರೀರಾಮ ಅವತಾರ್ದೋಳು ಸ್ವಾಮಿ ನೀ ಶಿಲೆಯಾಮೆಟ್ಟಿ ಪೆಣ್ಣನು ಮಾಡಿದ್ದು ಮರೆತೇನೋ ದೇವ ದೇವಾನೆ 1 ನರಸಿಂಹವಿಠ್ಠಲ ಕೇಳು ಸ್ವಾಮಿ ನಾ ಪಾದದಾಸ ನಿರುತದಿ ಪೊರೆವದು ಮರತೇನೋ ಜೀವರಕ್ಷಕನೆ 2
--------------
ನರಸಿಂಹವಿಠಲರು
ನಾರಾಯಣನ ನೆನೆ ವರ್ಣಿಸು ಮನ್ನಿಸುಆರಾಧನೆಗಳ ಮಾಡುತ ಪಾಡುತನೀರಾಜನದಿಂದಲರ್ಚಿಸಿ ಮೆಚ್ಚಿಸಿ ವೇದಪಾರಾಯಣಪ್ರಿಯನÀ ಪ. ಅವನ ಶ್ರವಣ ಮನನ ನಿಧಿಧ್ಯಾಸನಶ್ರೀವಿಷ್ಣುವಿನ ಭಕ್ತಿಮಹಾಪ್ರಸಾದಂಗಳುಕೈವಲ್ಯ ಪದಕಿಕ್ಕಿದ ನಿಚ್ಚಣಿಕೆ ಎಂದು ಭಾವಜ್ಞರು ಪೇಳ್ವರೊಜೀವನ ಜವನಬಾಧೆಯ ತಪ್ಪಿಸಿಪಾವನ ವೈಕುಂಠಪುರದೊಳಗೆಂದೆಂದುಆವಾಸವನು ಮಾಡಿ ಸುಖಿಸಬೇಕಾದರೆ ಸೇವಿಸು ವೈಷ್ಣವರ 1 ಲೋಕದಿ ವರಂ ವರಯ ಭದ್ರಂತೆಋತೆ ಕೈವಲ್ಯಮಾತ್ಮನಃಏಕಮೇವೇಶ್ವÀರಸ್ತ ಸಾದ್ಭಗವಾನ್ ವಿಷ್ಣುರವ್ಯಯ ಎಂಬಾಈ ಕಲಿಯುಗದಲಿ ಬೇಕಾದ ಪುರಾಣಾದಿವಾಕುವಿವೇಕವ ಮನದಿ ವಿಚಾರಿಸಿಸ್ವೀಕರಿಸು ವೈಷ್ಣವ ಮತವ ಜೀವ ನಿರಾಕರಿಸನ್ಯಮತವ 2 ದ್ವಾರಾವತಿಯ ಗೋಪಿಚಂದನದಿಂದಶ್ರೀರÀಮಣನ ವರ ನಾಮವ ನೆನೆ-ದೆರಡಾರೂಧ್ರ್ವ ಪುಂಡ್ರಗಳ ಧರಿಸೆಂದೆಂದು ವೀರವೈಷ್ಣವಗುರುವಸೇರಿ ಸಂತಪ್ತ ಸುದರುಶನ ಶಂಖಧಾರಣವನು ಭುಜಯುಗದಲಿ ಮಾಡಿಮುರಾರಿಯ ಮಂತ್ರಗಳವರಿಂದ ಕೇಳುತ ಓರಂತೆ ಜಪಿಸುತ್ತಿರು 3 ಹರಿ ನಿರ್ಮಾಲ್ಯವ ಶಿರದಿ ಧರಿಸುತಿರುಹರಿ ನೈವೇದ್ಯವನೆ ಭುಂಜಿಸುತಿರುಇರುಳು ಹಗಲು ಹರಿಸ್ಮರಣೆಯ ಬಿಡದಿರು ದುರುಳರ ಕೂಡದಿರೊಹರಿಪದ ತೀರ್ಥದ ನೇಮವಬಿಡದಿರುಹರಿಪರದೇವತೆ ಎಂದರುಪುತಲಿರುಗುರುಮುಖದಿಂದ ಸಚ್ಛಾಸ್ತ್ರ ಪುರಾಣವ ನಿರುತದಿ ಕೇಳು 4 ತುಷ್ಟನಹನು ಎಳ್ಳಷ್ಟು ಮುಂದಿಟ್ಟರೆಅಷ್ಟಿಷ್ಟೆನ್ನದೆ ಸಕಲೇಷ್ಟಂಗಳಕೊಟ್ಟುಕಾಯ್ವನು ಶಕ್ರನಿಗೆ ತ್ರಿವಿಷ್ಟಪಪಟ್ಟವ ಕಟ್ಟಿದವದುಷ್ಟರನೊಲ್ಲ ವಿಶಿಷ್ಟರಿಗೊಲಿವ ಅ-ನಿಷ್ಟವ ತರಿದೊಟ್ಟುವ ಜಗಜಟ್ಟಿ ಅರಿಷ್ಟಮುಷ್ಟಿಕಾದ್ಯರÀ ಹುಡಿಗುಟ್ಟಿದ ವಿಠಲ ಬಹು ದಿಟ್ಟ 5 ಕಂದ ಬಾಯೆಂದರೆ ನಂದನಿಗೊಲಿದಿಹಕುಂದುಕೊರತೆ ಬಂದರೆ ನೊಂದುಕೊಳನುಇಂದಿರೆಯರಸ ಮುಕುಂದ ಮುಕುತಿಯ ನಂದನವನೀವ ದೇವಸಂದೇಹವಿಲ್ಲದೆ ಒಂದೆಮನದಿ ಸ-ನಂದನಾದಿಗಳು ಭಜಿಸಲು ಒಲಿವ ಉ-ಪೇಂದ್ರನ ಶುಭಗುಣಸಾಂದ್ರನ ಯದುಕುಲಚಂದ್ರನ ವಂದಿಸಿರೊ 6 ಓಡುವ ಅಡಗುವ ದೇವರೆ ಬಲ್ಲರುಬಾಡುವ ಬೇಡುವ ಮುನಿಗಳೆ ಬಲ್ಲರುನೋಡುವ ಕೂಡುವ ಮುಕುತರೆ ಬಲ್ಲರೊಡನಾಡುವ ರಮೆ ಬಲ್ಲಳುಊಡುವ ಪಾಡುವ ಯಶೋದೆ ಬಲ್ಲಳುಕಾಡುವ ಖಳರ ಮರ್ದಿಸಿ ಹುಡಿಗುಟ್ಟಿದನಾಡೊಳು ಕೇಡುಗಳೆವ [ಕೃಷ್ಣನಿಗೀಡೆಂದಾಡದಿರು] 7 ಆವನ ಪಕ್ಷವದಕೆದುರಿಲ್ಲಆವನ ಕುಕ್ಷಿಯೊಳಕ್ಕು ಜಗತ್ರಯಆವನು ಶಿಕ್ಷಿಪ ರಕ್ಷಿಪನು ಮತ್ತಾವನು ಪಾವನನುಆವನ ಶಿಕ್ಷೆಯ ಮಿಕ್ಕವರಿಲ್ಲ ಕೇ-ಳಾವನುಪೇಕ್ಷೆ ಕುಲಕ್ಷಯವೆನಿಪುದುಆವನುರುಕ್ರಮ ವಿಕ್ರಮನೆನಿಸಿದ ದೇವನಿಗಾವನೆಣೆ 8 ಪತಿ ಆವನ ಚರಣಸೇವಕನಾದಸುರರೊಳಗೀ ಹಯವದನಗಿನ್ನಾರನು ಸರಿಯೆಂದುಸುರುವೆನೊ 9
--------------
ವಾದಿರಾಜ
ನಾಲಗೆ ಬರದಯ್ಯಾ ಶ್ರೀ ಗುರುವರರಾಯಾಪಾಲಿಸೆನ್ನೊಳು ನಿನ್ನ ಪೂರ್ಣದಯ ಪ ನಾಲಿಗೆ ಮತಿಗಳು ತಡೆದು ನಿಂತಿಹವಯ್ಯಮೇಲು ನಿಮ್ಮಯ್ಯ ನಾಮಾ ನಾ ಪೇಳೆನೆಂದರೆ ಅ.ಪ. ಕಥೆಯ ಕಟ್ಟಿದೆ ನಾಟಕ ಪದ್ಯವ ರಚಿಸಿದೆನೆಂಬಿ ಹೆಮ್ಮೆಯೊಳಿದ್ದೆ ಯತಿರಾಯಾನಿನ್ನ ಸುಚರಿತೆಯ ಕಥಿಸಲುಗತಿಕಾಣದೆ ನಿಂತು ಬಾಯ್ಬಿಡುವೆ ಪೊರೆಯಯ್ಯಾ 1 ಪಾದ ತುತಿಸುವೆನೆಂದರೆ 2 ಸ್ಮರಿಸುವೆ ಮನದೊಳು ನಿರುತದಿ ಯತಿವರ್ಯಾಶ್ರೀ ರಾಘವೇಂದ್ರರಾಯಾಧರೆಯೊಳು ಪರಮ ದಾನಿಗಳ ಹಿರಿಯನೆಂದುಅರಿತು ನಾ ಬಂದೆನೊ ಮೂಕನಾಗಿರುವೆನೊ 3 ಮನದೊಳಗಿರುತಿರ್ದ ಭಕುತಿ ಭಾವಗಳುಏನಿತೆಂಬುದನು ನೀನೇ ನೋಡಿಮನಸಿನಭೀಷ್ಟವನಿತ್ತು ಕಾಯುವದಯ್ಯಾಮನದೊಳು ನೆನೆಯುವೆ ಹೊರಗಾಡಲಾರದೆ 4 ಕರುಣಾಳು ಗದುಗಿನ ವೀರನಾರಾಯಣಹರನೆ ಕಳುಹಿಸಿದನೆಂದು ನಾನಿಲ್ಲಿ ಬಂದೇವರ ನಿನ್ನ ಚರಣವೂ ದೊರೆಯೆ ನಾ ತುತಿಸಲುಸರಿಯಾದ ನುಡುಗಳ ಕರುಣಿಸು 5
--------------
ವೀರನಾರಾಯಣ
ನಿರುತದಿ ನೆನೆ ನರಹರಿಯ ನರಹರಿಯ ಶಿರಿಧೊರೇಯ ಪ ಪೋತ ಧ್ರುವನು ತಾ ತಾತನ ತೊಡಿಯಲಿ ಪ್ರೀತಿಲಿ ಕುಳಿತಿರೆ ಮಾತೆ ದೂಡಲತಿ ಸೋತು ಮನದಿ ಹರಿ ಸ್ತೋತ್ರವ ಗೈಯ್ಯಲಾತಗೆ ಪದ ನೀಡಿದಾ 1 ಕಡಿಗ್ಯಾದ ದ್ರೌಪದಿ ಮುಡಿಯ ಪಿಡಿದು ಖಳ ಬಿಡÉಳೆದೊಯ್ಯೊ ಕಡುದುರುಳ ಸಭೆಗೆ ಸಿಡಿದೆಳೆಯೆ ಶೀರೆಯನು ಒಡನೆ ಹರಿಯೆನಲುಡುವಾಸವಕ್ಷೈಸಿತು 2 ದುರುಳ ಹಿರಣ್ಯಕಶು- ಪಿರದೆ ಪೀಡಿಸಲು ಪರಿಪರಿಯಿಂದಲಿ ಹರಿಗೆ ಮೊರೆಯಿಡಲು ಕರುಳು ಬಗೆದ ನರಸಿಂಹವಿಠಲನು 3
--------------
ನರಸಿಂಹವಿಠಲರು
ನಿರುತದಿ ಭಜಿಪೆನಾ ಭರತನ ರಾಣಿಯೇ ಭಾರತಿಯೇ ಪ ಗುರುವರಂತರ್ಗತ ಹರಿಭಕ್ತಿ ಪಾಲಿಸೇ ಭಾರತಿಯೇ ಅ.ಪ ಕಾವೋದು ಬಾಲನ ಸೇವೆ ನೀಕರಿಸದೆ ಭಾರತಿಯೇ ಶಿವಮುಖ ಸುರ ಸಂಸ್ತವಕೆ ಸುಪ್ರೀತಳೆ ಭಾರತಿಯೇ 1 ಕಾಳೀದ್ರೌಪದಿ ಶಿವಕನ್ಯಳೆಂದೆನಿಸಿ ಭಾರತಿಯೇ ನಳನಂದಿನಿ ಮನ ಕೊಳೆಯ ತೊಳೆಯಬೇಕೇ ಭಾರತಿಯೇ 2 ವಂದಿಪೆ ನಿನಗಿಂದ್ರೇಶನಳೆಂದೆನಿಸಿದಿ ಭಾರತಿಯೇ ಕಂದನ ಕುಂದುಗಳೊಂದೆಣಿಸದೆ ಕಾಯೇ ಭಾರತಿಯೇ 3 ಕಾಲಾಭಿಮಾನಿಯೆ ಶೈಲಜೆ ಶ್ಯಾಮಲ ಭಾರತಿಯೇ ವಾಲಗ ಕೈಕೊಂಬೆ ಭಾರತಿಯೇ 4 ಹರಿಯ ಹಿರಿಯ ಸೊಸಿ ಪರಮ ಪದಕೆ ಬರುವಿ ಭಾರತಿಯೇ ಕರುಣಾದಿ ಭಾರತಾದ್ಯರ್ಥವರುಹೆ ನಿತ್ಯಾ ಭಾರತಿಯೇ 5 ಯೋಗಿ ವಿನುತ ಚರಣಳೆ ಎನ್ನ ಭಾರತಿಯೇ ಹೀನ ಬುದ್ಧಿಯ ಕಳಿ ಜ್ಞಾನಮಾರ್ಗವ ತೋರೆ ಭಾರತಿಯೇ6 ಮಾನಾಭಿಮಾನ ನಿನ್ನಾಧೀನ ಎನಗೆ ನೀ ಭಾರತಿಯೇ ಪಾದ ಮನದಿ ತೋರಿಸೇ ನಿತ್ಯಾ ಭಾರತಿಯೇ 7
--------------
ಪ್ರದ್ಯುಮ್ನತೀರ್ಥರು