ಒಟ್ಟು 48 ಕಡೆಗಳಲ್ಲಿ , 23 ದಾಸರು , 46 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಬಾರೈಯ್ಯಾ ಬಾರೈಯ್ಯಾ ಚಕೋರ ಶಶಾಂಕಾ ಪ ಕ್ಲೇಶ ಕಳೆದು ತವ ದಾಸ ಜನರ ಸಹವಾಸವ ನೀಡಲು 1 ಹನುಮ ಭೀಮ ಮುದ | ಮುನಿವರ ಹರಿಪದ ಅನುದಿನ ಗರೆಯಲು 2 ವಾತಜ ನಿನ್ನಯ ದೂತರು ನಾವೈ ಪಾತಕ ಭೀತಿಯ | ಪ್ರೀತಿಲಿ ಬಿಡಿಸಲು 3 ಭಾವ ಭಕ್ತಿಯಲಿ | ಸೇವಿಪರಿಗೆ ಸುಖ | ದೇವಗುರು | ಛಾವಣಿ ನಿಲಯಾ 4 ತಂದೆ ನೀನೊಲಿದರೆ | ನಂದಜ ಶಾಮ ಸುಂದರ ಸಲಹುವನೆಂದು ಪ್ರಾರ್ಥಿಪೆವು 5
--------------
ಶಾಮಸುಂದರ ವಿಠಲ
ಭೂತರಾಜನೆ ಕೇಳು ಯನ್ನ ಭಾವಿ ಲಿಖಿತಾವನ್ನು ಸೂಚಿಸು ಭವದಿ ಬಹು ಭೀತಿಗೊಳಿಪ ಭೌತಿಕ ಜೀವಿಗಳಾ ನೀ ದೂರಮಾಡಿ ಯನ್ನ ಗಾರುಮಾಡದೆ ಸಲಹಾಬೇಕುಕಾರುಣ್ಯ ನಿಧಿಯೇ ನಿನ್ನ ವನಜಪಾದದಲ್ಲಿ ನವವಿಧಾ ಭಕುತಿ ಕೊಟ್ಟು ನವನಿಧಿ ಚರಣ ಸರೋಜವನ್ನು ಹೃತ್ಸರಸೀದಾಲ್ಲ ಪೊಳೆವಂತೆ ಮಾಡೊಪಾಪಿ ಜನರ ತಾಪಾ ಸಹಿಸಲಾರೆನೋ ದೇವಾ ಶ್ವಾಸ ನಿಯಾಮಕ ಪ್ರೀಯಾ ಸ್ವಾದಿ ಪುರವಾಸಿ ತಂದೆವರದಗೋಪಾಲವಿಠ್ಠಲನ ದೂತಾ 1 ತಾಪ ದಾತ ಜನಕೆ ತಂದೆವರದ-ಗೋಪಾಲವಿಠ್ಠಲನ ನಿಲ್ಲಿಸುವಂತೆ ಕೃಪೆ ಮಾಡೈ 2 ನೀವಿ ಶಿಖಾಮಣಿ ತಂದೆವರದಗೋಪಾಲವಿಠಲನ ಆಪ್ತಾ 3 ದೂಷಿಯಾದವನ ನಿರ್ದೋಷ ಮಾಡುವಿ ದಾಸನೆಂದವನ ಪೋಷಿಸುವಿ ದೂಷಿಪರ ಘಾಸಿಗೊಳಿಸುವಿ ಹಂಸವಾಹನ ಪದ ಪೊಂದುವರ ಸಂಶಯಮಾಡದೆ ಸಮ್ಮೋದವಿತ್ತು ಸಲಹುವಿ ಶೂಲಧಾರಿಯೆ ನಿನ್ನ ಹಾಸಕೆ ನಮೋ ನಮೋಪಾಶದಿಂದ ಪಾಶಿಸಾದೆ ಸಲಹೋ ಪಾಶುಧರ ಪಾಲಾ ಪಶುಪತಿಯೋಗ್ಯಾ ಶಿರಹಾರ ಧಾರಿ ಮೃಗರಾಜ ಸೇವಕ ನದಿಧರಲಾಶಾಮಾನಿಲಯಾ ತಂದೆವರದಗೋಪಾಲವಿಠ್ಠಲನ ಪ್ರೀಯಾ 4 ಪರ ಕಾಮಿನೀಯಳ ಕಾಮುಕತನದಿಂದ ಕಾಮಿಸೇ ಕಾಮಾರಿಗಳೆಲ್ಲ ನೋಡಿ ಕಾಮಿಸುವರೈಕಾಮನಯ್ಯನಾ ಪ್ರೇಮದಿ ಕಾಂಬುವ ಯಾಮ ಯಾಮಕೆ ನಿನ್ನ ನಾಮ ಸ್ಮರಿಸುವಂತೆ ಮಾಡು ಕಾಮವಂದಿತ ತಂದೆವರದಗೋಪಾಲವಿಠ್ಠಲನ ತೋರೋ 5 ಜತೆ :ಭೀತಿಯಾ ಬಿಡಿಪಾ ದಾತಾನು ನೀನಯ್ಯ ಭೂತ ವಂದಿತ ತಂದೆವರದಗೋಪಾಲವಿಠಲನ ಭಜಕಾ 6
--------------
ತಂದೆವರದಗೋಪಾಲವಿಠಲರು
ಯೋಗಿ ಭಾವ್ಯ ಪದ್ಮಮುಖದಿವ್ಯ ಲಕ್ಷಣಾಂಚಿತ ಪದಯುಗಳ 1ಚಂದ್ರ ಕುಲಾವತಂಸ ದ'ುತ ಕಂಸಪರಮಹಂಸ ಚಿದಾವರ್ಣ'ತೇಂದ್ರಮುಖ್ಯ 'ಹಗೇಂದ್ರ ವಾಹನೋಪೇಂದ್ರಕಾಳಿಯೋರಗ ಮದಹರಣ 2ಕಂಜದಳನಿಭಾಕ್ಷ ಸುಜನರಕ್ಷದನುಜಶಿಕ್ಷಾ ಪ್ರ'ೀಣ ಧನಂಜಯಾರ್ತಿಹರಮಂಜುಭಾಷಣ ನಿರಂಜನಾಗಣಿತನಿರುಪಮಲೀಲಾ 3ನಂದಕ ಪ್ರಹರಣ ಭೂರಿಕರಣಾವಾಲ್ಯಶರಣಾ ಗತಾವನನಂದನಂದನ ಸನಂದನಾದಿ ಮುನಿ ಬೃಂದವಂದ್ಯ ಸಕಲಜನ ಶರಣ್ಯಾ 4ದಂತಿರಾಜವರದಾ ರಾತ್ರಿ ಚರದಾವಾಗ್ನಿ ಶರದವ್ರಜಶ್ರೀಕಾಂತ ಮೌನಿಘನ ಚಿಂತನೀಯವೇದಾಂತವೇದ್ಯಕೋಸಲಪುರ ನಿಲಯಾ 5
--------------
ತಿಮ್ಮಪ್ಪದಾಸರು
ರಕ್ಷಿಸೋಯನ್ನ ರಕ್ಷಿಸೋ ರಕ್ಷಿಸೋ ಬೇಗ ಉಪೇಕ್ಷಿಸದಲೆ ಜಲ ಜಾಕ್ಷ ಯನ್ನ ಮೊರೆ ಪಕ್ಷಿವಾಹನ ದೊರೆ ಪ ವಾರಿಧಿ ಮತ್ಸ್ಯಾವತಾರದಿ ಧರಿಸಿ ಪೊಕ್ಕು ಘೋರದೈತ್ಯನ ಕೊಂದು ಇನ್ನು ಚಾರು ಚರಿತ ವಿಸ್ತಾರ ಶೃತಿಗಳನು ವಾರಿಜಾಸನಗಿತ್ತ ವರದ ಜಗನ್ನಾಥ 1 ವರಕೂರ್ಮನಾಗಿ ಮಂದರಗಿರಿ ಪೊತ್ತು ನಿರ್ಜರರಿಗೆ ಸುಧೆಯನುಣಿಸಿ ಹರುಷದಲಿ ಕರುಣಿಸೋಯಂದರೆ ಕಠಿಣತ್ವ ವಹಿಸುವರೇ ಪರಮ ಪುರುಷ ನೀನು ಭಜಕರ ಕಾಮಧೇನು 2 ಧರೆಯ ಕದ್ದು ಒಯ್ದವನ ಕೋಪದಿ ಘನತರ ಕೋರೆಯಲಿ ಸೆಳದೆ ದನುಜಹರ ವರಾಹನಾದ ಶ್ರೀ ವತ್ಸಲಾಂಛನ ದೇವ ಶರಣಜನ ಮಂದಾರ ಶರನಿಧಿ ಗಂಭೀರ 3 ಗರುಡಗಮನ ಶ್ರೀ ಹರಿ ಸರ್ವೋತ್ತಮನೆಂಬ ತರುಳನ ತಂದೆಯ ತಾಮಸದಿ ಪರಿಪರಿಹಿಂಸೆಯ ಪಡಿಸುತಿರಲು ನರಹರಿ ರೂಪತೋರಿ ಪ್ರಹ್ಲಾದಗೊಲಿದ ಧೊರೆ 4 ಬಲಿಯದಾನವು ಬೇಡಿ ಬ್ರಹ್ಮಾಂಡ ಭಾಂಡವು ಅಳೆದು ಮೂರು ಪಾದದೊಳಗೆ ಮಾಡಿ ತುಳಿದವನ ಪಾತಾಳಕಿಳಿಯಲು ವಾಮನ ಬಲಭೇದಿ ಸನ್ನತ ಪಾಲಿಸೋ ಪ್ರಖ್ಯಾತ 5 ಪರಶುರಾಮ ಬಾಹು ಬಲದಿ ಸಕಲ ರಾಜರನೆಲ್ಲ ಗೆದ್ದು ಸುಸ್ಥಿರ ಮೂರ್ತಿ ಧುರದಿಂದ ಭೂಮಿ ಭೂಸುರರಿಗೇ ಧಾರೆಯ ನೆರೆದ ಶ್ರೀಮದನಂತ ನಿರತದಿ ಭಗವಂತ 6 ಅನಿಮಿಷರೊಡೆಯ ಶರಣು ಶರಣೆನುತ ರಾವಣನನು ಜನು ವಿಭೀಷಣನು ಬರಲು ಘನದಿ ಪಂಕ್ತಿ ಕಂಧರನ ಜಯಿಸಿ ಲಂ- ಇನಕುಲ ಪಾವನ 7 ಬಲದು:ಶಾಸನ ಸೀರಿಸೆಳಿಯೇ ದ್ರೌಪದಿ ಮನದಲಿ ಕಾಮಿತಾರ್ಥ ಫಲದಾಯಕ ಮಾನವ ರಕ್ಷಿಸೆಂದು ಸ್ತುತಿಸಲು ಪೊರೆದೆ ಹಲಧರಾನುಜ ಮುದದಿ 8 ಅಂಗಜ ಪಿತ ತ್ರಿಪುರಾಂಗನೆಯರ ವ್ರತ ಭಂಗಮಾಡಿದೆ ಹಿಂಗದಲೇ ಮಂಗಳಮಹಿಮ ಕೃಪಾಂಗ ಗಂಗೆಯನು ಪಾದ 9 ಚಲುವ ಕುದುರೆಯನೇರಿ ಕಲ್ಕಿಕಯ್ಯೊಳು ಖಂಡೆಯ ಪಿಡಿದು ಝಳಪಿಸುತ ಕಲುಷಾತ್ಮರೆಲ್ಲರ ಖಂಡಿಸಿ ಧರ್ಮವು ಪರಿಪಾಲನೆಮಾಳ್ಪ ಶ್ರೀ ಭೂದುರ್ಗಾಧಿಪಾ 10 ಪಾವನಚರಿತ ಕೃಪಾವನ ರಾಶಿ ಶ್ರೀ ದೇವಕೀಸುತ `ಹೆನ್ನೆಪುರೀಶ’ ದೀನ ದೇವೋತ್ತಮ ದೀನ ಬಾಂಧವ ವೃಂದಾವನ ನಿಲಯಾನಂದ ಸುಂದರಕಾಯಾ 11
--------------
ಹೆನ್ನೆರಂಗದಾಸರು
ರೂಪನ ಗುಡಿನಿ¯ಯಾ ವೇಂಟಕರಾಯಾ ರೂಪನ ಗುಡಿ ನಿಲಯಾ ವ್ಯಾಪಕ ಜಗತ್ರಯ ಕಾಪಾಡುವ ಭಾರತರ್ಕನು ದಾಸರ ಪ ದಂಡಿ ದಾನವಮರ್ದನ ಸಕಲಜಗ ಉ- ದ್ದಂಡ ರಕ್ಷಕ ಪಾವನಾ ಚಂಡ ಪ್ರ- ಚಂಡ ಮಾರ್ತಾಂಡ----ದ್ಭವ ಕುಂಡಲಿ ಶಯನ ಕೋದಂಡ ಪಾಣಿ ಹರಿ 1 ಗಂಗಾಜನಕ ದೇವಾ ಸಕಲಮೋಹ- ನಾಂಗನಾ ಪಡೆದನಾ ಶೃಂಗಾರದಲಿ ಕುಜ ರಂಗ ಮಂಟಪದಲಿ ಮಂಗ ಳಾಂಗಿಯ ಬಿಡದೆ ಮಡಗಿಸಿ ಇರುವಂಥಾ 2 ಮಂದರಾದ್ರಿಯ ಧರಿಸಿ ಸುಜನರಿಗೆ ಆ- ನಂದದಿ ಸುಧೆಯನುಣಿಸಿ ಅಂದು ಭಕ್ತರ ಆನಂದದಿ ಸಲುಹಿದ ತಂದೆ 'ಹೊನ್ನ ವಿಠ್ಠಲ’ ದಯಮಾಡಿ ಸಲಹಯ್ಯಾ 3
--------------
ಹೆನ್ನೆರಂಗದಾಸರು
ವೆಂಕಟಾಚಲನಿಲಯಾ ಎನ್ನ ಒಡೆಯ ಪ ವೆಂಕಟಾಚಲನಿಲಯಾ ವಿಧಾತೃಸಂತರೊಡೆಯಾ | ಪಂಕಜಮುಖಿ ರಮಣ ಪಾವನಚರಣಾಅ.ಪ. ಉದಯವಾಗದ ಮುನ್ನ ಉದರ ಪೋಷಣೆ ಚಿಂತೆ | ಅದರ ಮೇಲೆ ಧಾನ್ಯ ಧನದ ಚಿಂತೆ || ಮದನ ಯೌವನದ ಚಿಂತೆ ಮತ್ತೆ ಸತ್ವದ ಚಿಂತೆ | ಹೃದಯದಲಿ ನಿಮ್ಮ ಚಿಂತೆಯನು ಮಾಡದಲೆ ಕೆಟ್ಟೆ1 ಮೇದಿನಿ ಆಳುವ ಆಶೆ | ನಂದನರ ಆಶೆ ನಾನಾ ಆಶೆಯು || ಬಂಧುಬಳಗದ ಆಶೆ ಭಾಗ್ಯವುಳ್ಳವನಾಶೆ | ಒಂದು ದಿನ ನಿಮ್ಮಾಶೆಯನು ಮಾಡದಲೆ ಕೆಟ್ಟಿ 2 ಎದುರುಯಿಲ್ಲವೆಂಬೊ ಗರ್ವ ಎದೆಯ ಬಿಗುವಿನ ಗರ್ವ | ವದನನಿಷ್ಠುರ ಗರ್ವ ವಿದ್ಯ ಗರ್ವವು || ಉದಧಿಶಯನ ನಮ್ಮ ವಿಜಯವಿಠ್ಠಲರೇಯಾ | ಮದ ಗರ್ವದಿಂದ ನಿನ್ನ ನೆನಹು ಮಾಡದೆ ಕೆಟ್ಟೆ 3
--------------
ವಿಜಯದಾಸ
ಶರಣು ಶರಣು ಶ್ರೀ ದತ್ತಾತ್ರೇಯಾ ಶರಣು ಸಕಲಾ ಭುವನಾಶ್ರಯಾ ಶರಣೆಂಬೆ ಸಿಂಹಾಚಲ ನಿಲಯಾ ಸುರಜನ ರೇಯಾ ಸಲಹಯ್ಯಾ 1 ವನರುಹ ಸಂಭವ ತ್ರಿಲೋಚನ ಸನಕಾದಿ ಮುನಿ ವಂದಿತ ಚರಣ ಜನವನ ವಿಜನ ವ್ಯಾಪಕ ಘನ ಅನಸೂಯಾ ನಂದನ ಯೋಗೀಶಾ 2 ತತ್ವಯೋಗ ಸಿದ್ಧಿ ಬುದ್ಧಿ ದಾತಾರಾ ಸತ್ವ ಗುಣಾಲಂ ಕೃತ ಜ್ಞಾನ ಸಾಗರಾ ಸತ್ಯ ಸನಾತನೇ ಮುನಿ ದಿಗಂಬರಾ ಭಕ್ತ ಸಹಕಾರಾ ಅವಧೂತಾ 3 ಕಂದರ್ಪ ಕೋಟಿ ಸುಂದರಾಕಾರಾ ಹೊಂದಿದಾಭರಣಾನೇಕ ಶೃಂಗಾರಾ ಇಂದು ಸೂರ್ಯಾನಳ ತೇಜ ವ್ಯಾಪಾರಾ ಎಂದೆಂದೆಚ್ಚರಾ ಕಂಡು ನಿನ್ನಾ 4 ಮಂದಮತಿ ಬಾಲನ ಬಿನ್ನಾಹದ ಸ್ತುತಿ ಬಂದು ಅರ್ಪಿಸಿಕೋ ದುದಿ ಶ್ರೀಪತಿ ಇಂದು ಮೊರೆ ಹೊಕ್ಕೆನು ಅನನ್ಯಾಗತಿತಂದೇ ಮಹಿಪತಿ ಸುತ ಸ್ವಾಮೀ 5
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಶಿಲೆಯ ನಾರಿಯ ಮಾಡ್ದ ಹನುಮ ನಿಲಯಾ ಪ ನೆಲೆಯಿಲ್ಲದಾ ಮಹಿಮ ಶ್ರೀರಾಮ ಗೋಚರಿಸೊ ಅ.ಪ ಶ್ರುತಿಗಗೋಚರ ನೀನು ಸರ್ವೇಶ ಸ್ವಾತಂತ್ರ ನೀನು ಕೃತಿಮಗ್ನ ಪಶು ನಾನು ಗೋಪಾಲದೇವ ಮೃತಿ ಭೀತಿ ವಶನಾಗಿ ನೆಲೆತಪ್ಪಿ ಪೋಗುತಿಹೆ ಅತಿಭಯದಿ ನಡುಗುವೆ ಹೇ ಶ್ರುತಿನಾಥ ಪೊರೆ ಎನ್ನ 1 ಪರಮ ಮಂಗಳ ಅನಿಲದೇವ ಮಂದಿರ ಶ್ರೀಶ ಪರತತ್ವ ಪರಮಾತ್ಮ ಪಿಡಿಯೊ ಕರವ ಮರುವೆಂಬ ಮಾರಿಯನು ನಿರ್ಮೂಲ ಮಾಡಯ್ಯ ದೊರಿ ನಿನ್ನ ಸ್ಮøತಿ ಸತತ ಅಚ್ಛಿನ್ನವಾಗಿರಲಿ 2 ಭಾನು ಕೋಟಿ ತೇಜ ಶ್ರೀ ಕ್ರೀಡೆಮಾಳ್ಪ ಜ್ಞಾನ ಪಾಲಿಸು ಎನಗೆ ಜಯೇಶವಿಠಲ ಆನಿ ಅಜಮಿಳ ಅನಿಮಿತ್ತ ಬಾಂಧವನೆ 3
--------------
ಜಯೇಶವಿಠಲ
ಶಿವಮಂಗಳಂ ಸದಾಶಿವ ಮಂಗಳಂಮಂಗಳಂ ರಜತಾದ್ರಿ ಮುಖ್ಯನಿಲಯಾಯ ಪಹಿಮಕರಾವತಂಸಾಯ ಹಿಮರುಚಿರಕಾಯಾಯಹಿಮರೂಪಗಿರಿಚಿತ್ತ ಹಾರಕಾಯಹಿಮಹರಾಮಿತಕಾಂತಿ ಸದೃಶಾಯ ಸೌಮ್ಯಾಯಹಿಮತಾಪರಹಿತಾಯ ಹೇಮವರ್ಣಾಯ 1ವರಜಟಾಮಕುಟಾಯ ವಾರಿಯುತಕೇಶಾಯಸ್ಫುರದಿನಾನಲಸೋಮಲೋಚನಾಯಗರನೀಲಕಂಠಾಯ ಕದ್ರುಸುತ ಹಾರಾಯಪರಶು ಮೃಗ ಶೂಲಾದಿ ಪರಮಾಯುಧಾಯ2ನಾಗೋಪವೀತಾಯ ನಾಗೇಶ ವಲಯಾಯನಾಗಧವಳಾಂಗಾಯ ನಾಯಕಾಯನಾಗವಾಹನ ಮುಖ್ಯ ನಾಕಜನನಾಥಾಯನಾಗಪರ್ಯಂಕಸ್ಥ ನಿತ್ಯಮಿತ್ರಾಯ 3ಗೌರೀಧೃತಾಂಗಾಯ ಗಂಧರ್ವಸೇವ್ಯಾಯಭೂರಿ ಗುಣಬ್ರಹ್ಮಾಂಡ ಭೂತಾಯಚಾರು ಕಟಿ ಶುಭ ಜಂಘಾಯನೀರಜಾಮಲ ಪೀಠ ನಿಹಿತ ಪಾದಾಯ 4ಮೃಗಚರ್ಮವಸನಾಯ ಮಂಜುಳ ಮಯೂಖಾಯಜಗದೇಕನಾಥಾಯ ಜೀವನಾಯಸುಗಮ ತಿರುಪತಿ ನಾಮ ಸದ್ಮಾಧಿನಾಥಾಯಗಗನಧುನಿ ಗಿರಿ ವಾಸ ಗಂಗಾಧರಾಯ 5 ಓಂ ನವನೀತನವಾಹಾರಾಯ ನಮಃ
--------------
ತಿಮ್ಮಪ್ಪದಾಸರು
ಶೇಷ ಗೀರೀಶ ವಿಠಲ | ಪೋಷಿಸೊ ಇವಳಾ ಪ ಕಾಸು ವೀಸಕ್ಕೆ ಮನ | ಕ್ಲೇಶಗೊಳಿಸದಂತೆ ಅ.ಪ. ಪಥ ಮಾರ್ಗಕ್ಕೆ | ಸದ್ಗುರು ಕಟಾಕ್ಷವೆಉತ್ತಮೋತ್ತಮ ಹಾದಿ | ಎಂದು ಪೇಳಿದರೂ 1 ಹರಿಗುರೂ ಸದ್ಭಕ್ತಿ | ತರತಮ ಜ್ಞಾನವನುಕರುಣಿಸೀ ಕಾಪಾಡೊ | ಕರಿವರದ ಹರಿಯೇಕರುಣಾಳು ನಿನ್ಹೊರತು | ಆರಿಯೆ ನಾ ಅನ್ಯರನುಮರುತಾಂತರಾತ್ಮಕನೆ | ಆನಂದ ನಿಲಯಾ2 ಎರಡು ಮೂರರಿಗಳನು | ಪರಿಹರಿಸಿ ವೈರಾಗ್ಯವರಜ್ಞಾನ ಸಂಪದವ | ಕರುಣಿಸುತ ಹರಿಯೇಕರಪಿಡಿದು ಉದ್ಧರಿಸೊ | ಶರಣ ಜನ ಕಾರುಣ್ಯಮರುತಾಂತರಾತ್ಮ ಗುರು | ಗೋವಿಂದ ವಿಠಲಾ 3
--------------
ಗುರುಗೋವಿಂದವಿಠಲರು
ಶ್ರೀ ಜಗದೀಶ ಮುರಾರಿ ಶ್ರೀತಜನ ರಕ್ಷಕನೆ ಪೂಜಿತ ಸರ್ವತ್ರ ಪೂರ್ಣ ಪ್ರಭಾವನೆ ಪುರುಷೋತ್ತಮಹರಿಯೆ ಪ ರಾಜಾಧಿರಾಜ ಶ್ರೀ ರಘು ಕುಲೋತ್ತಮ ನೀರಜದಳನಯನಾ ಈ ಜಗತ್ರಯಗಳ ಇಷ್ಟದಿ ಸಲಹುವ ವೆಂಕಟಗಿರಿ ರಮಣ ಭೋಜ ಭಾನುಕೋಟಿತೇಜ ಪ್ರಕಾಶನೆ ಪಾಂಡವ ಪಕ್ಷಕನೆ ಸದ್ಗುಣ ಭೂಷಿತನೆ 1 ಪುಂಡರೀಕವರದ ಪುರಾಣಪುರುಷ ಕೋದಂಡಧರ ಪ್ರಿಯಾ ಅಂಡಜವಾಹನ ಅಖಿಲಲೋಕಕರ್ತ ಆನಂದ ನಿಲಯಾ ಮಾಧವ ಗೋವಿಂದ ಕೃಪೆಯ ಮಾಡುಯೆಂದಾ 2 ಮಹಾನುಭಾವಾ ಗಂಗಾಪಿತ ಶ್ರೀಗೌರಿಪತಿ ಪ್ರಿಯಾ ಕರುಣಾಸಾಗರ ದೇವಾ ಶೃಂಗಾರಾಂಗನೆ ಶ್ರೀ ಲಕುಮಿಯ ಉರಸೂಸುತಲಿರುವಂಥಾ ರಕ್ಷಿಸೊ ಭಗವಂತಾ
--------------
ಹೆನ್ನೆರಂಗದಾಸರು
ಶ್ರೀಧವ ಮಾಮವ ಪ್ರಣತ ಜಾನರ್ತಿ ಹರಭೋ ಭೂಧರಜಾವರನುತಪದ ಪ ಸಾದರದಲಿ ನಿನ್ನಾ ಪಾದವ ಭಜಿಸುವೆ ನಾ ಮೋದವ ಕೊಡು ಕರುಣಾಂಬೋಧಿಯೆ ಮಧು ಮಥನಾ ಸದಾಮಲಾಚರಿತನೆ ಒದಗಿಸುತವ ಪದದಲಿ ಮನ 1 ನತಜನ ಕೃತ ಕರುಣಾ ಶ್ರೀತಜನರಘಹರಣ ಶೃತಿಗಣನುತ ಶರಣಾಗತ ಜನವತ್ಸಲನ ನತಿಸುವೆ ಸತತದಿ ರತಿಪತಿ ಪಿತಕರ ಪಿಡಿವದು 2 ಧರಿ ಸುರ ಜನ ಪ್ರಿಯಾ ಕರುಣದಿ ಭವಮಾಯಾ ಪರಿಹರಿಸೆಲೊ ಜೀಯಾ ವರಕಾರ್ಪರ ನಿಲಯಾ ನರಹರಿ ವಿಠಲನೆ ವರಪಿಪ್ಪಲತರು ಸಂಸ್ಥಿತ 3
--------------
ಕಾರ್ಪರ ನರಹರಿದಾಸರು
ಶ್ರೀನಿವಾಸ ತವಚರಣ ಸರೊರುಹ-ಮಾನತೋಸ್ಮಿ ಸತತಂ ಫಲದಂ ಶುಭಚರಿತಂ ಪ ಸನ್ನುತ ವಾಸುಕಿ ಶ್ರೀಶವಾಸ ಹಿರಣ್ಮಯವಾಸ ಸಮಸ್ತ ವಾಸತರುಣಿಶತ ಬಾಸಸುಮನೋಲ್ಲಾಸ ವಿಜಿತ ರೊಷ ವಾಸರೇಶ ಶತ ಭಾಸುರ ಭೂಷಣ ಭೂಷಿತಾಂಗವಿಶೇಷಕರುಣಮೃದುಭಾಷಣ ಭವಜಲಶೋಷಣ ಪೂಷಣ 1 ಸುರಮಂಡಲಸೇವಿತ ಚಂಡನಿಶಾಚರ ಮಂಡಲ ಖಂಡನ ಪಂಡಿತರಣ ಶೌಂಡ ಪುಂಡರೀಕ ನಯನಾಂಡಜವಾಹನ ಪುಂಡರೀಕಗಿರಿ ಮಂಡನ ಹಿಮಕರಮಂಡಲ ಸನ್ನಿಭಕುಂಡಲಾಭರಣ 2 ನೀಲ ಸುಮಂದರಧಾರಣ ಚತುರುತಲಾಗ್ರವಿ ಮೃಗೇಂದ್ರಾ ವಾರಿಜನಿಲಯಾವರ ಕರುಣಾಕರ ಮಾರಜನಕ ಸುರವಾರವಂದ್ಯಪದ ಸಾರಸುಗುಣ ಪರಿ ಜಲದಿ ಗಂಭೀರ ವ್ಯಾಘ್ರಗಿರಿವರದ ವಿಠಲಹರಿ 3
--------------
ಸರಗೂರು ವೆಂಕಟವರದಾರ್ಯರು
ಸಾರಿದೆನೋ ನಿನ್ನ ವೆಂಕಟರಮಣ ಪ ನಾರಪ್ಪಯ್ಯನಿಗೊಲಿದು ಗೋರೂಪದಲಿ ಬಂದಿಯೊ ಅ.ಪ ಸುಂದರ ಶುಭಕಾಯಾ ಆಕಾಶರಾಜನ ನಂದಿನಿಯಳ ಪ್ರೀಯ ವಂದಿಸುವೆನು ಭವಬಂಧನ ಬಿಡಿಸಯ್ಯ 1 ಕುರಕಿಹಳ್ಳಿಯ ಗ್ರಾಮದಿ ಶಿಲೆಯೊಳಗೆನಿಂದು ವರಕೃಷ್ಣಾನದಿ ಜಲದೀ ಅರುಣನುದಯದಲ್ಲಿ ನಿರುತ ಪೂಜೆಯಕೊಳುವಿ 2 ನೀರದ ನಿಭಕಾಯಾ ಧರೆಯೊಳುಕೃಷ್ಣಾ ತೀರ ಕಾರ್ಪರನಿಲಯಾ ಘೋರ ಪಾತಕಹರ ನಾರಸಿಂಹಾತ್ಮಕನೆ 3
--------------
ಕಾರ್ಪರ ನರಹರಿದಾಸರು
ಕೃಷ್ಣ ನೀನೆ ರಕ್ಷಿಸೆನ್ನ |ಪಕ್ಷಿಗಮನ | ಲಕ್ಷ್ಮೀರಮಣ ||ಸೃಷ್ಟಿಗೊಡೆಯಾ ಜಿಷ್ಣುಪ್ರೀಯ |ದುಷ್ಟ ಹನನಾ ಶಿಷ್ಟ ಸ್ಮರಣಾ 1ಯಮಿಕುಲಾಳಿ | ಹೃದಯನಿಲಯಾಕಮಲನಯನಾ ವಿಮಲಚರಣಾ ||ಸುಮನಸಾದೀ | ನಮಿತ ಪಾದಂಕುಮುದಸಖನಾ ಸಮಸುವದನಾ 2ತಂದೆ ತಾಯೀ | ಯಂದ ಸಲಹೋಇಂದಿರೇಶಾ ಸುಂದರಾಸ್ಯ ||ವಂದಿಸುವೆ ಗೋವಿಂದ ನಿನಗೆ |ಸಿಂಧುವಾಸಾ ಬಂಧನಾಶಾ ||ಕೃಷ್ಣ||
--------------
ಗೋವಿಂದದಾಸ