ಒಟ್ಟು 82 ಕಡೆಗಳಲ್ಲಿ , 35 ದಾಸರು , 77 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ನಿತ್ಯ ಸುಖಕರ ನೀರಜಾಕ್ಷರ ಭೃತ್ಯರಾಗುವ ಬನ್ನಿರಿ ಎತ್ತುವನು ಸಂಶಯವಿಡದೆ ಕೃತಕೃತ್ಯರಾಗುವವೆನ್ನಿರಿ ಪ. ಮೋದಮಯನ ಪ್ರಸಾದವನು ಕೊಂಡಾದರದಿ ಸೇವಿಪುದು ಪಾದಪದ್ಮಾಮೋದಯುತಾ ತುಳಸೀದಳಗಳನು ಮುಡಿವುದು ತೇದ ಗಂಧವ ಮಾಧವನಿಗಿರಿಸಾದನಂತರ ಕೊಳುವುದು ಭಾಗವತ ಕೇಳುತ 1 ಭೀಕರಿಪ ಮಹ ದುರಿತಗಣ ನಿರಾಕರಿಸುವನು ನಿಮಿಷದಿ ಕುಯುಕ್ತಿ ಶಕ್ತಿಯ ದೂಕುವನು ದುಷ್ಕೂಪದಿ ವಾಕುಗಳ ತಪ್ಪುಗಳನೆಣಿಸದೆ ಸಾಕುವನು ಸಂತಸದಲಿ ಒಡಗೂಡಿ ನಲಿವನು 2 ಶ್ರೀಶನನು ಭಜಿಸುವದಕೇನಾಯಾಸವಿರುವುದು ಹೇಳಿರಿ ವಾಸವಾಗಿಹ ಸಕಲ ಹೃದಯಾಕಾಶ ಪದ್ಮದಿ ಕೇಳಿರಿ ವಾಸುದೇವನ ವರ್ಣನಾಂಶವ ಲೇಶವಾದರು ತಾಳಿರಿ ಶೇಷ ಗಿರೀಶನ ದಾಸಕೂಟ ಸಮಾಶ್ರಯಣ ಸಂಗ್ರಹಿಸಿ ಬಾಳಿರಿ 3
--------------
ತುಪಾಕಿ ವೆಂಕಟರಮಣಾಚಾರ್ಯ
ನಿನಗೆ ಅಂಜುವನಲ್ಲ ನೀರಜಾಕ್ಷ ಪ ಮನವಚನ ಕಾಯದಿಂ ನಿನ್ನವರಿಗಂಜುವೆನುಅ ರಾಗದಿಂದಲಿ ಇಂದ್ರದ್ಯುಮ್ನ ಭೂಪಾಲಕನು ಯೋಗ ಮಾರ್ಗದಿ ನಿನ್ನ ಭಜಿಸುತಿರಲು ಯೋಗ ಕುಂಭೋದ್ಭವನು ಬಂದು ಶಾಪವೆ ಕೊಡಲು ಆಗ ಮೌನದಲವನನೊಪ್ಪಿಸಿದ ಬಗೆ ಬಲ್ಲೆ 1 ಗುಣವಂತರೀರ್ವರು ಜಯವಿಜಯರು ನಿನ್ನ ಅನುಗಾಲ ಬಾಗಿಲನು ಕಾಯುತಿರಲು ಸನಕಾದಿಗಳು ಬಂದು ಶಪಿಸಲಾಕ್ಷಣದಲ್ಲಿ ಸನುಮತದಲವರ ನೀನೊಪ್ಪಿಸಿದ ಬಗೆಬಲ್ಲೆ 2 ನೃಗರಾಯ ಪುಣ್ಯ ಬರಬೇಕೆನುತ ವಿಪ್ರರಿಗೆ ನಿಗಮೋಕ್ತಿಯಿಂದ ಗೋದಾನ ಕೊಡಲು ಜಗಳ ಪುಟ್ಟಿತು ನೋಡು ಅನ್ಯೋನ್ಯರೊಡಗೂಡಿ ಮಿಗೆ ಶಾಪ ಕೊಡಲವನನೊಪ್ಪಿಸಿದ ಬಗೆ ಬಲ್ಲೆ 3 ಉಣಲಿತ್ತರೆ ಉಂಡು ಪೋಗಲೊಲ್ಲದೆ ಒಂದು ತೃಣದಲ್ಲಿ ಗೋವನ್ನೆ ರಚಿಸಿ ನಿಲಿಸಿ ಮುನಿಪ ಗೌತಮನಿಗೆ ಗೋಹತ್ಯವನು ಹೊರಿಸಿ ಕ್ಷಣದೊಳಗೆ ಅವನ ನೀನೊಪ್ಪಿಸಿದ ಬಗೆ ಬಲ್ಲೆ 4 ಅನಪರಾಧಿಗಳಿಗೆ ಇನಿತಾಯಿತೋ ದೇವ ಎನಗೆ ತನಗೆಂಬುವರಿಗಾವ ಗತಿಯೊ ಮಣಿದು ಬೇಡಿಕೊಂಬೆ ವಿಜಯವಿಠ್ಠಲರೇಯ ನಿನಗಿಂತ ಭಕುತಿ ನಿನ್ನವರಲ್ಲಿ ಕೊಡು ಎನಗೆ 5
--------------
ವಿಜಯದಾಸ
ನಿನ್ನನಗಲಿ ಪೋಗಲಾರೆವೋ ನೀರಜಾಕ್ಷ ನಿನ್ನ ಸೇರಿ ಸುಖಿಸ ಬಂದೆವೊ ಪ ಮನ್ನಿಸದೆ ಮಮತೆಯಿಂದ ಭಿನ್ನ ನುಡಿಗಳಾಡಿ ನಮಗೆ ಹಣ್ಣು ತೋರಿ ಕಾಳಕೂಟವನ್ನು ಕೊಡುವರೇನೊ ಕೃಷ್ಣ ಅ ಐದುವದಕೆ ಶಕ್ಯವಲ್ಲದ ಅಪ್ರಮೇಯ ಆದಿಪುರುಷ ಅಮರಸನ್ನುತ ಶ್ರೀದ ನಮ್ಮ ಕೈಯ ಬಿಡದೆ ಆದರಿಸಬೇಕು ಪರವ- ರಾದರೇನು ನಿನ್ನ ಶರಣರಾದ ಮೇಲೆ ಬಿಡುವುದುಂಟೆ1 ಬಂಧುವರ್ಗವನ್ನು ಬಿಡುವುದು ಸ್ತ್ರೀಯರಿಗೆ ನಿಂದ್ಯವೆಂದು ಶಾಸ್ತ್ರ ಪೇಳ್ವುದು ಎಂದೆಗೆಂದಿಗೆಮಗೆ ನೀನೆ ಬಂಧುವೆಂದು ಬಂದಿಹೆವೊ ಇಂದು ಹೋಗಿರೆಂಬೆ ನೀನು2 ಶಮದಮಾದಿ ಗುಣಗಳಿಂದಲಿ ಸಜ್ಜನರು ಮೂರ್ತಿ ಮನದಲಿ ಮಮತೆಯಿಂದ ಪೂಜಿಸುತ್ತ ಗಮಿಸುವರೊ ನಿನ್ನ ಪುರಕೆ ನಮಗೆ ಮಾತ್ರ ಪತಿಸುತಾದ್ಯರಮಿತ ಸುಖವ ಕೊಡುವರೇನೊ 3 ಮೋಕ್ಷ ಇಚ್ಛೆಯಿಂದ ನಿನ್ನನು ಭಜಿಪ ಜನರಾ ಪಕ್ಷ ವಹಿಸಿದಂತೆ ನಮ್ಮನು ರಕ್ಷಿಸದೆ ಬಿಡುವರೇ ಕಟಾಕ್ಷದಿಂದ ಈಕ್ಷಿಸದೆ ಲಕ್ಷ್ಮೀದೇವಿ ನಿಮಗೆ ಬಹಳಾಪೇಕ್ಷೆಯಿಂದ ಮೋಹಿಸಿದಳೆ 4 ಅನಘ ನಿನ್ನ ನೋಡಿ ಮೋಹಿಸಿ ಅಂತರಾತ್ಮ ತನುವು ಮನವು ನಿನಗೆ ಅರ್ಪಿಸಿ ಜನನ ಮರಣದಿಂದ ಜನರು ದಣಿವರೇನೂ ಕಾಂತ ನಮ್ಮ ಮನಸಿನಂತೆ ಒಲಿದು ಸಲಹೊ ವನಜನಾಭ ವಿಜಯವಿಠ್ಠಲ 5
--------------
ವಿಜಯದಾಸ
ನೀ ಬಾರದಿರೆ ಬಾರನು ಶ್ರೀ ನರಹರಿ ಪ ನೀ ಬಾರದಿರೆ ಬಾರ ನೀರಜಾಕ್ಷನು ಹರಿನಾನು ನಂಬಿದೆ ನಿಮ್ಮ ನೀವು ಪಾಲಿಸಬೇಕು ಅ.ಪ. ನೀನು ಆತನ ಕಾಯ್ದಿ ತಾನು ಆತನ ಕಾಯ್ದನೀನು ಬಿಡಲು ಬಿಟ್ಟ ಭಾನುಸುತನ ಕೃಷ್ಣ 1 ನಿಮ್ಮ ಮಾತುಗಳನ್ನು ಒಮ್ಮೆ ಮೀರನು ಹರಿನಮ್ಮ ಬಿಡುವುದ್ಯಾಕೊ ಬ್ರಹ್ಮ ಪದಾರ್ಹನೆ 2 ಇಂದು ನಾಳೆನ್ನದೆ ಆನಂದತೀರ್ಥರೆ ನಮ-ಗಿಂದು ತೋರಿಸು ಹರಿಯ ಇಂದಿರೇಶನ ಪ್ರೀಯ 3
--------------
ಇಂದಿರೇಶರು
ನೀರಜಾಕ್ಷ ನಿನ್ನೂರಿಗೆ ಪೋಗುವ ದಾರಿಯ ತೋರಯ್ಯ ಪ ದಾರಿಯ ಕಾಣದೆ ಅ.ಪ ಜನ್ಮಾಂತರ ಕೃತ ಕರ್ಮಗಳೆಂಬುವ ಹೆಮ್ಮರಗಳು ಬೆಳೆದು ಧರ್ಮನಿರೋಧ ವಿಕರ್ಮದ ಬಳ್ಳಿಯು ಬಿಮ್ಮನೆ ಬಿಗಿವಡೆದು ಕಂಟಕ ವೆಮ್ಮನು ಕಾಲಿಡಲಮ್ಮಗೊಡವು ಹರಿ1 ದಾರಿಯೊಳಡಸಿಹುದು ರಾರು ಮಂದಿ ಮುಳಿದು ಸಾರಿ ಸಾರಿ ಬಾಯಾರಿಸುತಿರ್ಪವು 2 ಯನು ದಾಂಟುವೊಡರಿದು ಧನಕನಕಾದಿಗಳೆನಿಪ ಪಿಶಾಚಗಳನವರತವು ಬಿಡವು ತನು ಸಂಬಂಧದ ಜನಗಳು ದುರ್ಮೃಗ ವನು ಪೋಲುತ ನಮ್ಮನು ಬಾಧಿಸುತಿರುವರು 3 ಕ್ಷುದ್ರವಿಷಯಗಳುಛಿದ್ರವಹುಡುಕುವ ವಧ್ರುವದೇಹದೊಳು ಕದ್ರುಸುತರವೊಲುಪದ್ರವ ಗೈವ ಭದ್ರದ ಭೀತಿಗಳೂ ಪದ್ರವ ಜರೆಯೆಂಬುದ್ರಿಕ್ತಾಂಗನೆ 4 ಸುರನರವರರೊಳು ಶರಣೋಪಾಯವರ ವರದವಿಠಲ ನಿಜ ಚರಣವ ನಂಬಿದೆ 5
--------------
ವೆಂಕಟವರದಾರ್ಯರು
ನೀರಜಾಕ್ಷ ನಿರ್ದಯವ್ಯಾಕೊ ಕರುಣದಿ ಎನ್ನಾ ಪ ಒಡಲಿಗನ್ನಾ ತೊಡಲು ಅರಿವೆ ಕೊಡುವವರನು ನಾ ಕಾಣೆ ಹರಿಯೇ ಬಡತನ ಕಂಗೆಡಿಸಿತೋ ಕಡೆಗ್ಹಾಯಿಸಯ್ಯ ತ್ವರದಿ ಗುಣಮಣಿಯೇ 1 ಖೂಳ ಜನರ ಆಳಾಗಿ ನಾ ಹಾಳು ಒಡಲನ್ನು ಹೊರೆಯಲಾರೇ ಕೂಳಿಗೋಸುಗ ಬಾಳಾಯ್ತೀಪರಿ ತಾಳಲಾರೆ ಕಾಯೋ ಮುರಾರೇ2 ನೀ ಕೈಬಿಡಬ್ಯಾಡೋ ಶ್ರೀ ಹನುಮೇಶವಿಠಲನೆ ಎನ್ನಾ ಇಷ್ಟದಂದರಿ ಥಟ್ಟನೆ ಮಾಡೋ 3
--------------
ಹನುಮೇಶವಿಠಲ
ನೀರಜಾಕ್ಷ ರಾಮ ಲೋಕಾಭಿರಾಮ ಪ ನೀರದನಿಭಶ್ಯಾಮ ನಿತ್ಯಮಂಗಳ ನಾಮ ಅ.ಪ. ನಿನ್ನ ಬಿಟ್ಟು ನಾನು ಅನಾಥನು ಸನ್ನುತ ಗುಣರನ್ನ ಸತ್ಕೀರ್ತಿ ಸಂಪನ್ನ 1 ದೇಶಕೊಡೆಯ ನೀನು ದಾಸ ನಿನಗೆ ನಾನು ಕೌಸಲ್ಯವರಪುತ್ರ ಕೋಮಲ ಶುಭಗಾತ್ರÀ 2 ನಿನ್ನ ಸನ್ನಿಧಿವಾಸ ಪುಣ್ಯಫಲವಿಶೇಷ ಘನ್ನ ಕರಿಗಿರೀಶ ಗಂಭೀರ ಗುಣಭೂಷ 3
--------------
ವರಾವಾಣಿರಾಮರಾಯದಾಸರು
ನೀರಜಾಕ್ಷನಿನ್ನೂರಿಗೆ ಪೋಗುವ ದಾರಿಯ ತೋರಯ್ಯ ಪ ತೊಳಲುವೆ ದಾರಿಯ ಕಾಣದೆ ಅ.ಪ. ಜನ್ಮಾಂತರಕೃತ ಕರ್ಮಗಳೆಂಬುವ ಹೆಮ್ಮರಗಳು ಬೆಳೆದು ಧರ್ಮನಿರೋಧವಿ ಕರ್ಮದ ಬಳ್ಳಿಯು ಬಿಂಮನೆ ಬಿಗಿವಡೆದು ಲಮ್ಮಗೊಡವುಹರಿ 1 ಮೀರಿಬರಲುಘನ ಚೋರರು ಕಾದಿಹರಾರುಮಂದಿ ಮುಳಿದು ಸಾರಿ ಬಾಯಾರಿಸುತಿರ್ಪವು 2 ದಾಂಟುವೊಡರಿದು ಧನಕನಕಾದಿಗಳೆನಿಪ ಪಿಶಾಚಗಳನವರತವು ಬಿಡವು ಪೋಲುತ ನಮ್ಮನು ಬಾಧಿಸುತಿರುವರು3 ಕ್ಷುದ್ರವಿಷಯಗಳು ಛಿದ್ರವಹುಡುಕುವ ವಧ್ರುಗದೇಹದೊಳು? ಕದ್ರುಸುತರವೋಲುಪದ್ರವಗೈವವಭದ್ರದ ಭೀತಿಗಳೂ ಜರೆಯೆಂಬುದ್ರಿಕ್ತಾಂಗನೆ4 ನರಿಗಳ ಪರಿಯಲಿ ನರಳುವರೆಲ್ಲರು ನರಕಗಳನುಭವಿಸಿ ವರದ ವಿಠಲನಿಜ ಚರಣವೆ ನಂಬಿದೆ 5
--------------
ಸರಗೂರು ವೆಂಕಟವರದಾರ್ಯರು
ನೀರಜಾಕ್ಷನೆ ಚಾರುರೂಪನೆಸೇರಿ ಚಿತ್ತದೊಳು ಮೋರೆ ತೋರಿಸೀಗಾ ಪ ಎಷ್ಟು ಭಕ್ತರಾಭೀಷ್ಟ ನೀಡಿದಿವೃಷ್ಣಿವರ್ಯನೆ ಭೆಟ್ಟಿ ಪಾಲಿಸೀಗಾ 1 ಮುಷ್ಠಿ ಅವಲಿಯಾ ಕೊಟ್ಟ ವಿಪ್ರಗೆ ಕೊಟ್ಟೆ ಸಂಪದವಾಭೀಷ್ಟದಾಯಕನೆ 2 ಇಂದಿರೇಶನೆ ಬಂಧ ಮೋಚನೆ ಗೈದು ಬಂದು ಕಾಯೋ ನಂದ ಬಾಲಕನೇ 3
--------------
ಇಂದಿರೇಶರು
ನೀರಜಾಕ್ಷೇರೆಲ್ಲ ಬಂದು ಮಾರಜನಕಗೆ ಆರತಿ ಎತ್ತಿರೇ ನಾರಿಮಣಿ ಶ್ರೀ ರುಕ್ಮಿಣಿಮಣಿಗೆ ಪ ವೇದವನು ಕದ್ದ ಖಳನ ಬೇಧಿಸಿದವಗೆ ಆದರದಿಂದ ಮಂದರವೆಂಬೋ ಭೂಧರ ತಂದವಗೆ 1 ಕುಂಭಣಿಯನ್ನು ಬಿಡದೆ ತಂದ ಕುಂಭಿಣಿರಮಣಗೆ ಕಂಭದಿ ಬಂದು ದನುಜ ಡಿಂಭನ ಕಾಯ್ದ ನೃಹರಿಗೆ 2 ಭೂಮಿ ಬೇಡಿದವನಿಗೆ ದುಷ್ಟ ಭೂಮಿಪ ಹರನಿಗೆ ಕಾಮಿನಿಚೋರನ ಶಿರವ ತರಿದ ಸ್ವಾಮಿ ರಾಮಗೆ 3 ಪಾಂಡುಸುತರ ಸಲಹಿ ಖಳರ ದಂಡಿಸಿದವಗೆ ಚಂಡತ್ರಿಪುರರ ಹೆಂಡರ ವ್ರತವ ಖಂಡನೆ ಮಾಳ್ಪಗೆ 4 ದುರುಳ ನೃಪರ ತರಿದ ಕಲ್ಕಿಗೆ ವರದ ನಾಮಗಿರಿ ಶ್ರೀಹರಿಯ ಚರಣಕಮಲಕೆ 5
--------------
ವಿದ್ಯಾರತ್ನಾಕರತೀರ್ಥರು
ನೀರಿನಿಂದಲೆ ಸರ್ವಫಲ ಬಾಹೋದು ನೀರಜಾಕ್ಷನ ಸೇವೆ ಮಾಳ್ಪ ಸುಜನರಿಗೆ ಪ ನೀರಿಲ್ಲದಲೆ ಯಾವ ಸಾಧನವು ನಡೆಯದು ನೀರಿಲ್ಲದಲÉ ಯಾಗ ತಪಸ್ಸು ನಿಲ್ಲುವದು ನೀರಿಲ್ಲದಲೆ ಸ್ನಾನ ಆಚಾರಹೀನವು ನೀರಿಲ್ಲದಲೆ ದೇವತಾರ್ಚನೆಯು ಇಲ್ಲವು 1 ನೀರೆಂದರೆ ಬರಿಯ ಜಡವಾದ ನೀರಲ್ಲ ನೀರಜಾಕ್ಷನು ಜಲದಿ ವಾಸವಾಗಿಹನು ವಾರಿಜಾಸನ ಮುಖ್ಯ ಸುರರೆಲ್ಲ ಹರುಷದಲಿ ನೀರಮಧ್ಯದೊಳಿರುವ ಹರಿಯಧ್ಯಾನಿಪರೆಲ್ಲ2 ಉದಯಕಾಲದಿ ಮುಖವ ತೊಳೆಯೆ ಜಲವಿರಬೇಕು ಮಧುಸೂದನನ ಮನೆಯ ಸಾರಿಸಲು ಜಲಬೇಕು ಹೃದಯ ಶುದ್ಧದಿ ಸ್ನಾನ ಮಾಡೆ ಜಲವಿರಬೇಕು ಮುದದಿ ಮಡಿಯುಡುವುದಕೆ ಉದಕವಿರಬೇಕು3 ಮೃತ್ತಿಕಾಶೌಚಕ್ಕೆ ಅಗತ್ಯಜಲವಿರಬೇಕು ನಿತ್ಯ ಗೋಸೇವೆಗೆ ಉದಕಬೇಕು ಮತ್ತೆ ಶ್ರೀ ತುಳಸಿಗೆರೆಯಲು ಉದಕವಿರಬೇಕು ಮತ್ತೆ ಹರಿಪೂಜೆಗಗ್ರೋದಕವು ಬೇಕು4 ಸಚ್ಚಿದಾನಂದನ ಅಭಿಷೇಕಕ್ಕೆ ಜಲಬೇಕು ಮತ್ತೆ ಪಾಕವು ಮಾಡೆ ಜಲವುಬೇಕು ನಿತ್ಯ ತೃಪ್ತನ ನೈವೇದ್ಯಕ್ಕೆ ಜಲವು ಬೇಕು ಅರ್ತಿಯಿಂದ ಅತಿಥಿ ಪೂಜೆಗೆ ಉದಕಬೇಕು 5 ಪಾದ ತೊಳಿಬೇಕು ಮತ್ತೆ ಅವರಿಗೆ ಸ್ನಾನಕಣಿ ಮಾಡಬೇಕು ಸುತ್ತ ಬೆಳೆÀಗಳಿಗೆಲ್ಲ ಮತ್ತೆ ನೀರಿರಬೇಕು ಸತ್ಯ ಮೂರುತಿ ಪಾದದಂಗುಷ್ಟದಲಿ ಜನಿಸಿದ6 ನಿತ್ಯ ಎರೆಯೆ ನೀರಿರಬೇಕು ಕುಸುಮ ಪುಷ್ಪದ ಗಿಡಕೆ ನೀರುಬೇಕು ವಸುದೇವಸುತನ ತೆಪ್ಪೋತ್ಸವಕೆ ಜಲಬೇಕು ಎಸೆವ ಕದಲಾರತಿಗೆ ಉದಕಬೇಕು 7 ನೀರಿನೊಳು ಹಾವಿನ ಮೇಲೆ ಮಲಗಿದ ಹರಿಯ ನಾಭಿನಾಳದ ತುದಿಯಲಿರುವ ಕಮಲದಲಿ ನೀರಜಾಸನನ ಪಡೆದಿರುವ ಮಹಿಮೆಯ ಕೇಳಿ ನೀರಿನಲಿ ಹರಿಯ ಅವತಾರ ರೂಪಗಳುಂಟು8 ನೀರಿನೊಳು ವಾರುಣಿಯಪತಿಯ ಶಯ್ಯದೊಳಿಹನು ನೀರಿನೊಳು ಮುಳುಗಿ ವೇದವ ತಂದನು ನೀರಿನೊಳು ಮುಳುಗಿ ಭಾರವ ಪೊತ್ತು ನಿಂತನು ನೀರಜಾಕ್ಷನು ನಾರಬೇರ ಮೆದ್ದಿಹನು 9 ನೀರಜೋದ್ಭವಪಿತನು ಕ್ರೂರರೂಪವ ತಾಳ್ದ ನೀರೆ ಅದಿತಿಯ ಪುತ್ರನಾಗಿ ನಿಂತ ನೀರಜಾಕ್ಷನು ಪರಶುವಿಡಿದು ಸಂಚರಿಸಿದನು ನೀರೆಗೋಸುಗ ಸಾಗರಕÉ ಸೇತುವೆಯ ಕಟ್ಟಿದನು10 ನೀರಿನೊಳು ಗಜದ ಶಾಪವ ಕಳೆದು ಪೊರೆದನು ನೀರೆ ದ್ರೌಪದಿಯ ಅಭಿಮಾನವನು ಕಾಯ್ದ ನೀರ ಮಧ್ಯದಿ ದ್ವಾರಕಾಪುರವ ರಚಿಸಿದನು ನೀರಜಾಕ್ಷಿಯರ ಕೂಡಿ ನೀರೊಳಗೆ ಆಡಿದನು 11 ಕಮಲ ಜಲದಲ್ಲಿಹುದು ಕಮಲನಾಭ ವಿಠ್ಠಲ ಜಲದೊಳೋಲ್ಯಾಡುವ ಶ್ರಮವ ಪರಿಹರಿಪ ಚಂದ್ರನು ಜಲದಿ ಪುಟ್ಟಿಹನು ಕಾಮಧೇನು ಐರಾವತವು ಪುಟ್ಟಿದ ಜಲವಯ್ಯ 12
--------------
ನಿಡಗುರುಕಿ ಜೀವೂಬಾಯಿ
ನೀಲಮೇಘಶ್ಯಾಮಾ ಬಾರೊ ನೀವೊಂದು ಮುತ್ತ ತಾರೋ ಪ. ನೀರಜಾಕ್ಷ ನಲಿದು ಬಾರೊ ನಗೆಮೊಗವನ್ನೆ ತೋರೊ ಅ.ಪ. ನಿನ್ನ ಸಮರ್ಯಾರೊ ಕೃಷ್ಣಾ ಸನ್ನುತಾಂಗ ಓಡಿ ಬಾರೋ ಬೆಣ್ಣೆಕೋಲು ಬೆಂಡು ಬುಗುರಿ ಚಿನ್ನ ರನ್ನ ಕೊಡುವೆ ಬಾರೋ 1 ಮುತ್ತಿನಂಗಿ ಕೊಡಿಸುವೇನೂ ರತ್ನತಿಲಕವಿಡುವೆ ಬಾರೋ ವತ್ತಿ ನಿನ್ನ ಬಾಯೊಳೂದೆ ರತ್ನ ಕೊಳಲ ಕೊಡುವೆ ಬಾರೋ 2 ಸ್ವರ್ಣಮಯೂರಂಗವ ತೋರೊ ನೀಲವರ್ಣಾ ಚಂದ್ರಬಿಂಬ ಬಾರೋ 3 ಭಕ್ತಿ ಸುರಧೇನುಬಾರೊ ಮುಕ್ತಿದಾತ ಶ್ರೀ ಶ್ರೀನಿವಾಸ ಮಾಧವ ಬಾರೋ 4
--------------
ಸರಸ್ವತಿ ಬಾಯಿ
ಪಾದ ಸಲಹವೆ ಬಿಡಲಾರೆ ಕಲಿತ ಕಲ್ಮಶವನ್ನು ಸುಲಭಾದಿ ಓಡಿಸು ಪ ಅಂದು ಆ ಕರಿರಾಜ ಸರಸಿಲಿವಂದಿಸಿದಾ ಪಾದ ಪಾದ 1 ನಾರಿಯು ನಿನ್ನ ನೆನದಾ ಮಾತ್ರದಿ ಶೀರಿಯ ಮಾಳೇಗರದಾ ಪಾದ 2 ಕಮಲನಾಭ ನೀನು ದೇವರ ದೇವ ಸುಮನಸರೊಡೆಯನು ಅಮಿತ ಮಹಿಮೆ ತೋರಿ ಭ್ರಮೆಯ ಹರಿಸು 3 ಆರು ವೈರಿಗಳು ಮಿತಿಮೀರಿರುವರು ಕೇಳು ನೀರಜಾಕ್ಷಯನ್ನನಾರು ಕಾಯುವರೊ ಧೀರ ನೀನೇ ಪೇಳು 4 ಪೊರೆಯದೆ ಬಿಡದಿರು ಶಿರಿನುತಚರಣವನ್ನು ತೋರು ನರಸಖ ನಿನ್ನಯ ಕರುಣವ ಬೀರು 5
--------------
ಸಿರಿವತ್ಸಾಂಕಿತರು
ಪಾವನ ಮಹಿಮನೇ ದೇವಾಧಿದೇವನೇ ಪ ವರಲಕುಮಿ ಕರಕಮಲಪೂಜಿತ ನಮಿಪೆ ನೀರಜಾಕ್ಷ ಮಂಗಳವನು ಕೊಡು ದೇವಾ ಅ.ಪ. ಸೃಷ್ಟಿಸ್ಥಿತಿ ಕಾರಣಕರ್ತಾ ಮುಕ್ತಿಪ್ರದ ಹನುಮೇಶವಿಠಲವರ 1
--------------
ಹನುಮೇಶವಿಠಲ
ಪುರಂದರದಾಸರು ಎಂತು ಪೊಗಳಲಿ ನಾನು ಪ ಕಂತುಪಿತನೇಕಾಂತ ಭಕ್ತನ ಪಂಥವನು ಪದ ಪಂಕ್ತಿಯಲಿ ತುಂಬಿಟ್ಟು ಸಲಹಿದ ದಾಸವರ್ಯರ ಅ.ಪ. ನಿತ್ಯ ನೆನೆಯುತ್ತ ಪಂಡಿತೋತ್ತಮರೊಡನೆ ಸುಖಿಸುತ್ತ ಕಂಡು ಹರಿಯನು ಮುಂದೆ ಕುಣಿಯುತ್ತ ಕುಂಡಲಿಗೆ ನಿಜ ಭೂಷಣವು ಎನಿಸುತ್ತ ಭಂಡಜನರಾ ಪುಂಡುಮಾರ್ಗವ ಕಂಡಕಂಡೆಡೆ ಖಂಡ್ರಿಸುತ ಬ್ರಹ್ಮಾಂಡ ದೊಡೆಯನ ಭಕ್ತಿ ಬಿತ್ತುತ ಹಿಂಡಿ ಮತಿಮತ ರಸವ ಕುಡಿಸಿದ ದಾಸವರ್ಯರ 1 ಮೊದಲು ಗಾಯಕ ದೇವಸಭೆಯಲ್ಲಿ ಮುದದಿ ಕಾಮುಕ ಚೇಷ್ಟೆ ನಡೆಸುತಲಿ ಪದವಿಯಿಂ ಚ್ಯುತನಾಗಿ ದಾಸಿಯಲಿ ಉದಿಸಿ ಬಂದು ಸಾಧು ಸಂಗದಲಿ ಬದಿಗೆ ತಳ್ಳುತ ಭವದ ಕೋಟಲೆ ಮುದದಿ ಜಪಿಸುತ ವಾಸುದೇವನ ಪದವಿ ಸಾಧಿಸಿ ದೇವ ಋಷಿ ತಾ ಪದುಮನಾಭನ ನೆನೆದು ನರಕವ ಬ ರಿದು ಮಾಡ್ಡ ಮಹಾನುಭಾವನ 2 ಕಾಸಿನಾಶಯವು ಮೋಸವೆಂತೆಂದು ಹೇಸಿವಿಷಯದಿ ಲೇಸು ಸಿಗದೆಂದು ಶ್ರೀಶ ಸಿಗುವನು ದಾಸಗೆಂತೆಂದು ಆಶೆಯಿಂದಲಿ ಸಾರಬೇಕೆಂದು ಓಸು ಸಂಪದ ನೂಕಿ ಭರದಿಂ ವ್ಯಾಸರಾಯರ ಶಿಷ್ಯನೆನಿಸುತ ವಾಸುದೇವನ ದಾಸನಾಗುತ ದೋಷಜ್ಞಾನವ ನಾಶಮಾಡಿದ ದೇಶ ತಿರುಗಿದ ದಾಸವರ್ಯರ 3 ಭಕ್ತಿಯಿಲ್ಲದ ಗಾನ ತಾನಿನ್ನು ಕತ್ತೆಕೂಗನುಮಾನವಿಲ್ಲೆಂದು ನಿತ್ಯದೇವನ ಗಾನ ಗೈಯಲು ಗಾತ್ರವಿದು ನಿಜವೀಣೆಯೆಂತೆಂದು ಸಪ್ತಸ್ವರಗಳ ಕ್ಲಪ್ತಮರ್ಮಗ ಳೆತ್ತಿ ತೋರುತ ಶ್ರೇಷ್ಠತರ ಸಂಗೀತ ಸೂತ್ರ ಸಂಮತ ನೀತಿ ನುಡಿದಿಹ ದಾಸವರ್ಯರ 4 ಪೊಂದಿ ಪುಸ್ತಕ ದೀಚೆ ಬರದೆಂದು ಛಂದ ಮರ್ಮವ ತಂದಿಡುವೆ ನಮ್ಮೀ ಅಂದ ಕನ್ನಡ ದೊಳಗೆ ಎಂತೆಂದು ಕಂದ ವೃತ್ತ ಸುಳಾದಿ ಪದಗಳ ಛಂದ ಭೂಷಣವೃಂದ ನೀಡುತ ನಂದದಿಂ ಕರ್ಣಾಟಮಾತೆಯ ಮುಂದೆ ತಾ ನಲಿವಂತೆ ಮಾಡಿದ ದಾಸವರ್ಯರ 5 ನಾರಿ ಮನೆ ಪರಿವಾರ ಹರಿಗೆಂದು ಸಾರವನ್ನೆ ಮುರಾರಿ ಮನೆಯೆಂದು ಚಾರು ಶ್ರುತಿಗತಸಾರ ನಡತೆಯಲಿ ಸೂರಿಯಾದವ ತೊರಬೇಕೆಂದು ನೀರಜಾಕ್ಷನ ಧೀರ ದೂತನ ಸಾರ ಮನವನು ಸಾರಿ ಸಾರುತ ದೂರ ಒಡಿಸಿ ಮೂರು ಮತಗಳ ನೇರ ಸುಖಪಥ ತೋರಿಸಿದ ಮಹರಾಯ ದಾಸರ 6 ಕರ್ಮಕೋಟಲೆಗಿಲ್ಲ ಕೊನೆಯೆಂದು ಮರ್ಮತಿಳಿಯುತ ಬಿಂಬಹೃದಯಗನ ನಿರ್ಮಮತೆಯಿಂದೆಸಗಿ ಕರ್ಮಗಳ ಕರ್ಮಪತಿಗೊಪ್ಪಿಸುತ ಸರ್ವಸ್ವ ಭರ್ಮಗರ್ಭನ ಭಕ್ತಿ ಭಾಗ್ಯದಿ ಪೇರ್ಮೆಯಿಂ ಹರಿದಾಸನೆಸಿಸುತ ಶರ್ಮ ಶಾಶ್ವತವಿತ್ತು ಸಲಹುವ ವರ್ಮ ನೀಡಿದ ವಿಶ್ವಬಾಂಧವ 7 ಇಂದಿರೇಶನು ಮುಂದೆ ಕುಣಿಯುತಿರೆ ಕುಂದುಂಟೆ ಮಹಿಮಾತಿಶಯಗಳಿಗೆ ತಂದೆ ಕೌತಕ ವೃಂದ ಮಳೆಗರೆದು ಕಂದನನು ಪೊರೆದಂದವೇನೆಂಬೆ ಬಂದು ಸತಿಸಹ ಮಂದಿರಕೆ ಗೋ ವಿಂದ ಪಾಕವಗೈದು ಬ್ರಾಹ್ಮಣ ವೃಂದಕಿಕ್ಕುತ ದಾಸರಿಗೆ ಮುದ ಮಾಧವ ಭಾಗ್ಯಕೆಣೆಯುಂಟೆ 8 ದೀನ ಹೊಲೆಯಗೆ ಪ್ರಾಣ ಬರಿಸಿದನು ಏನು ಒಲ್ಲದೆ ಹರಿಯ ಯಜಿಸಿದನು ಜ್ಞಾನ ಭಾಗ್ಯದಿ ಮುಳುಗಿ ತೇಲಿದನು ದೀನ ಜನರುದ್ಧಾರ ಮಾಡಿದನು ದಾನಿ ಜಯಮುನಿ ವಾಯು ಹೃದಯಗ ಚಿನ್ಮಯ ಶ್ರೀ ಕೃಷ್ಣವಿಠಲನ ಗಾನ ಸುಧೆಯನು ಬೀರಿಸುತ ವಿ ಜ್ಞಾನವಿತ್ತ ಮಹೋಪಕಾರಿ ವಿಶೇಷ ಮಹಿಮನ 9
--------------
ಕೃಷ್ಣವಿಠಲದಾಸರು