ಒಟ್ಟು 70 ಕಡೆಗಳಲ್ಲಿ , 33 ದಾಸರು , 68 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಬಣ್ಣಿಸಲಳವೆ ನಾನು ಬಣ್ಣಿಸಲಳವೆ ನಾ ಬಹುವೇಷವುಳ್ಳ ಲಾ-ವಣ್ಯದ ಕಣಿಯಾದ ಉಡುಪಿನ ಕೃಷ್ಣನ ಪ. ಕರಗುವ ಮಿಸುನಿಯ ಕಾಂತಿಯಿಂ ಗರುಡನಗರಿಗಳ ಇರವ ಧಿಕ್ಕರಿಪ ಪೀತಾಂಬರಎರಡು ಪಾಶ್ರ್ವಗಳಲ್ಲಿ ಶಿರದ ಕಿರೀಟವುಕೊರಳಹಾರದ ಜೋಡು ಇರಲು ಈ ಪರಿಯಿಂದಮರೆಯಲಬ್ಜದ ಕಂಕಣ ಭೂಮಿಗೈದುವವರ ಸೂರ್ಯನಾರಾಯಣ ಬಾಹುಗಳುಳ್ಳಮಕರಕುಂಡಲ ಬಾಹುಪುರಿಗಳಿಂದೆಸೆವನ1 ಪಾದ ಕಂಸೆಯಗಲಿ ಇಂದ್ರ ನೀಲದದಾಳ ದಿಕ್ಕುಗಳನೆಬೆಳಗುತಲೆ ಬಹಳ ಲೀಲೆಯ ತೋರ್ಪಖಳರೆದೆ ಶೂಲನ ಚೆಲುವ ಗೋಪಾಲನ 2 ಜಾತಿಮುತ್ತಿನ ಚುಂಗು ಖ್ಯಾತಿಯಿಂದೊಪ್ಪುವಚಾತುರ್ಯದಿ ವಾರೆಗೊಂಡೆಯ ಕಟ್ಟಿಆ ಜೂತದಿಂದಲಿ ಅತಿ ಮೈಜೋಡು ತೊಟ್ಟು ಈ-ರೀತಿಯಿಂದೆಡಗೈಯ ವಂಕಿ ಮಧ್ಯದೊಳಾನುಚ್ಚುತ ಖಡ್ಗದಿಂದೊಪ್ಪುವ ಭೂತಳದಿವಿಖ್ಯಾತಿ ಪಡೆದು ಮೆರೆವÀ ದುಷ್ಟಮೃಗವಘಾತಿಸಿ ಬಿಡುವ ಕಿರಾತÀ ಸ್ವರೂಪನ್ನ 3 ಮಿಸುನಿಯ ಮುಂಡಾಸು ಪೊಸರವಿಯಂತಿರೆಶಶಿಯ ಪ್ರಭೆಯಂತೆ ಪಸರಿಸಲಂಗಿಯುಹಸನಾದ ನವರಂಜು ವಶದಲ್ಲಿ ತುಂಬಿರೆಕುಸುಮನಂದದಿ ಧೋತ್ರವ ಉಟ್ಟುವೈರ್ವಸನವ ಸುತ್ತಿ ಗಾತ್ರದಿ ಕುಲಾಯಿ ಒಪ್ಪಿನಸುನಗೆಯಿಂದೊಪ್ಪುವ ನವವಿಪ್ರವೇಷನ್ನ 4 ಕಡೆದ ಬೊಗರಿಯಂತೆ ಕಡೆದು ಮಾಡಿದ ಬಾಹುದೃಢವಾದ ಕುಚಗಳು ದುರಿತದುನ್ನತವಾದಬಡನಡು ಬಳುಕಲು ಕಡೆಗಣ್ಣ ನೋಟದಿಮೃಡ ಮುಖ್ಯರ್ಮೋಹಿಸಿ ಒಡಲ ಮಾರದಿರಲುಮುಡಿಯ ನೋಡುತ ನವಿಲು ನಾಚಿ ಮೊಗಗೊಡದಡವಿಯ ಸೇರಲು ಭೂಷಣಗಳುಜಡಿವುತ್ತ ಜಗದೊಳು ಕಡುಮೋಹಿನೀ ಬಲು 5 ಕರ್ಮ ಕಿಂಕರರೊಳಗಾಗಿಟೊಂಕದಿ ಕೈಯಿಟ್ಟು ಶಂಕಿಸಲು ತನ್ನಂಘ್ರಿಪಂಕಜಂಗಳ ಬೇಡಿ ಪುರುಷಾರ್ಥ ಪಡೆಯಿರೊಶಂಕೆ ಬೇಡವೊ ಎಂದು ಲೆಂಕರಿಗೆ ಸೂಸಿಪ್ಪ-ಸಂಖ್ಯಾತ ಕರಯುಗಳದಿಂದೊಪ್ಪುವಶಂಖ ಚಕ್ರ ಆಯುಧಂಗಳ ಪಿಡಿದು ಸರ್ವಾಲಂಕಾರದಿಂ ವೆಂಕಟೇಶನ ರೂಪ6 ಈ ವಿಧ ತಪ್ಪದೆ ಏಳು ವಾರಗಳಲ್ಲಿಪಾವನಮತ ಗುರು ಬಳಿಗೆ ಬಂದವರೆಲ್ಲಶ್ರೀವರ ಹಯವದನನ ಸೇವೆಗೊಳ್ಳಿರೋ ನಿತ್ಯಆವಾವ ನಾಡಿನ ಆಶ್ರಿತ ಜನರನ್ನುಭಾವಶುದ್ಧಗಳರಿತು ಕೋರಿಕೆಗಳಈವ ಭಕ್ತರಿಗೊಲಿದು ಪಾಷಂಡಾದಿಶೈವರ ತರಿದ ಸದ್ವೈಷ್ಣವರ ದೇವÀನ್ನ7
--------------
ವಾದಿರಾಜ
ಬಂದಳು ನೋಡೆ ಇಂದಿರ ದೇವಿ ಪ. ಬಂದಳು ನೋಡೆ ಗೋವಿಂದನ ಸತಿಯು ಸುಂದರ ಪಾದದಿಂದ ಒಂದೊಂದು ಹೆಜ್ಜೆಯನಿಡುತಾ ಅ.ಪ. ಉಲ್ಲಾಸದಿಂದಲೀ ಚೆಲ್ವೆ ಬಂದಳೀಗ 1 ವಜ್ರದಂತೆ ಕಾಂತಿ ಪ್ರಜ್ವಲಿಸುತ್ತಲೀ ಗೆಜ್ಜೆಪಾದದಿಂದ್ಹೆಜ್ಜೆಯನಿಡುತಲೀಗ2 ಮಾರನಮಾತೆಯು ಮುಂಗುರುಳನೇ ತಿದ್ದಿ ಮುಡಿಯ ಮೇಲಿನ ಮಲ್ಲಿಗೆ ಉದುರುತ್ತ 3 ಕಡಗ ಕಂಕಣವು ಬೆಡಗಿನಿಂದಾಲಿಟ್ಟು ನಡಮುಡಿಮೇಲೆ ಅಡಿಯನಿಡುತಲೀಗ 4 ಕುಕ್ಷಿಯೊಳೀರೇಳು ಜಗವಪೊತ್ತುವನಾ ವಕ್ಷಸ್ಥಳದ ಲಕ್ಷ್ಮಿ ಬಂದಾಳೀಗ 5 ಹರಿಯ ಮಂದಿರಕ್ಕೆ ಸರಸದಿಂದಲೀಗ ಓರೆನೋಟದಿಂದ ಮುಗುಳು ನಗೆಯ ನಗುತ 6 ಚಂದದಿಂದಲೀಗ ಬಂದು ಕುಳಿತುಕೊಂಡು ಮಂದ ಭಾಗ್ಯಳಿಗಾನಂದವ ಕೊಡುವಳು 7 ಇಂದಿರೆ ದೇವನ್ನ ಬಂಧನವಾ ಬಿಡಿಸಿ ತಂದೆಗೋವಿಂದನ್ನ ಕಂಡು ತೋರೆ ತಾಯಿ 8 ರಮಾವಲ್ಲಭವಿಠಲನ ಸ್ಮರಣೆಯು ನಿರುತ ಮಾಡುವಂಥ ವರವ ಕೊಡು ತಾಯೆ 9
--------------
ಸರಸಾಬಾಯಿ
ಬಾರೈಯ ಬಾರೈಯ ಸೂರಿವರಿಯ ಐಕೂರು ನಿಲಯ ಪ ನೀನ್ಹಾಕಿದ ಸುಜ್ಞಾನದ ಸಸಿಗಳು ಮ್ಲಾನವಾಗುತಿವೆ ಸಾನುರಾಗದಲಿ 1 ಸತಿ ತವಕರುಣ ಸಲಿಲವ ಎರೆದು ಫಳಿಲನೆ ವೃಥ್ಧಿಯ ಗಳಿಸಿ ಸಲಹಲು 2 ನಾಟಿಸಿದ ಸಸಿಗಳು ನೀಟಾಗುವ ಪರಿ ತೋಟಗ ನೀ ಕೃಪೆ ನೋಟದಿ ನೋಡಲು 3 ಕೋವಿದರ ನೀ ಕಾವಲಿ ಇರಲು | ಕು ಜೀವಿಗಳಿಂದಲಿ ಹಾವಳಿಯಾಗದು 4 ನೀಮರೆದರೆ ಸುಕ್ಷೇಮವಾಗದು ಶಾಮಸುಂದರನ ಪ್ರೇಮದ ಪೋತ 5
--------------
ಶಾಮಸುಂದರ ವಿಠಲ
ಬಾಲೆಯರು ನಿನ್ನ ಲಾಲಿಸುವರೋ ಸೋಲದಿರು ಮನವ ಗೋಪಾಲ ಪ ಲೋಲತನದಿ ಬಾಲ ನಿನಗೆ ಕಾಲ ಕಳೆಯಲು ಅ.ಪ ಪೊಂದಲೋಸುಗ ಸುಂದರಿಯರು ಸಂದು ಮಾಡುವರೊ ಮುಕುಂದ ಮಂದಹಾಸದಿಂದ ನಿನಗೆ ಗಂಧ ಪೂಸುವರೊ ಗೋವಿಂದ 1 ಓರೆಗಣ್ಣಿನ ನೋಟದಿಂದ ಸೂರೆಗೊಳುವರೊ ನಾರೇರು ಕೋರಿಕೆಯನು ಮೀರಿದರೆ ನೀ ದೂರು ಮಾಡುವರೊ ಮುರಾರೆ 2 ಮುರಳಿನಾದವ ಮಾಡೆ ನಿನ್ನ ತೆರಳ ಬಿಡರಿವರು ಮನೆಗೆ ಸರಳನೆಂದು ಅರಿತು ನಿನ್ನ ಮರುಳು ಮಾಡುವರೊ ಶ್ರೀ ಕೃಷ್ಣ 3 ಎನ್ನ ಮನವನು ತಿಳಿಯುವುದಕೆ ಕನ್ಯೆಯರಿಗಳವೇ ಪೇಳಮ್ಮ ಇನ್ನು ಪೋಗುವುದಿಲ್ಲವೆ ಪ್ರ ಸನ್ನಳಾಗಮ್ಮ ಯಶೋದೆ 4
--------------
ವಿದ್ಯಾಪ್ರಸನ್ನತೀರ್ಥರು
ಬಿಟ್ಟಿರಲಾರೆ ಬಾ ಗೋವಿಂದಾ ಸೃಷ್ಟಿಶಾನಂದ ಪ ಬಿಟ್ಟಿರಲಾರೆ ಮನಮುಟ್ಟಿ ಭಜಿಪೆನಯ್ಯ ಅಷ್ಟಮಹಿಷೇರ ಸಹಿತ ನಾಟ್ಯವಾಡುತ ಬೇಗ ಬಾ ಅ.ಪ ಗೊಲ್ಲರ ಮನೆ ಪೊಕ್ಕು ಪಾಲ್ಬೆಣ್ಣೆಗಳ ಮೆದ್ದು ಚೆಲ್ವ ಲಲನೇರ ಗಲ್ಲ ಮುದ್ದಾಡುತ ಬೇಗ 1 ಮಂದಗಮನೆಯರ ಮಂದಹಾಸದಿ ಅಪ್ಪಿ ದ್ವಂದ್ವ ಕುಚದಲ್ಲಿಟ್ಟ ನಂದಜ ಕರಗಳಿಂದ 2 ಮಿರಿಮಿರಿ ಮಿಂಚುವ ಕಿರೀಟ ಕುಂಡಲ ಧರಿಸಿ ವಾರೆ ನೋಟದಿ ನಾರೇರ ಮನ ಸೆಳೆವ 3 ಸುಮನಸರೊಂದಿತ ಯಮುನಾ ಪುಳಿನದಿ ವಿಮಲ ವೇಣುಸ್ವರದಿ ಕಮಲಾಕ್ಷಿಯರೊಲಿಸಿದ 4 ಶ್ರೀವತ್ಸ ಕೌತ್ಸುಭ ಪವಳ ಮುತ್ತಿನಹಾರ ನ್ಯಾವಳ ಸರಿಗಿಟ್ಟು ಗೋವಳರೊಡಗೂಡಿ 5 ತುತ್ತೂರಿ ಝಾಂಗಟೆ ಒತ್ತಿ ಪಿಡಿದಿಹ ಕಹಳೆ ಬತ್ತೀಸ ರಾಗದಿ ತತ್ಥೈವಾದ್ಯದೀ 6 ಎತ್ತಿ ಪಿಡಿದಿಹ ಛತ್ರಿ ಸುತ್ತು ಮಾಗಧ ಮಂದಿ ಸ್ತೋತ್ರವ ಮಾಡೆ ನೇತ್ರೋತ್ಸವ ತೋರುತ 7 ದಿವಪನ ಸೋಲಿಪ ನವ ಪೀತಾಂಬರ ಧರಿಸಿ ಭುವನವ ಮೋಹಿಪ ನವ ಸುವಿಶೇಷನೆ 8 ವಿಜಯ ರಾಮಚಂದ್ರವಿಠಲರಾಯನೆ ನಿಜ ಪರಿವಾರದಿಂ ಭಜಕರ ಪಾಲಿಪ 9
--------------
ವಿಜಯ ರಾಮಚಂದ್ರವಿಠಲ
ಬಿಟ್ಟು ಬನ್ನಿರೊ ಸಂಸಾರದ್ಹಂಬಲ ಪ. ಸೃಷ್ಟಿಪತಿಯ ಸೇರಿ ನೀವು ಸುಖಿಸಬನ್ನಿರೊ ಅ.ಪ. ಹೆಂಡಿರುಮಕ್ಕಳು ಎಂಬೋ ಹಂಬಲ ಬೇಡಿರೊಕೊಂಡವರಲ್ಲ ಕೊಡುವರಲ್ಲ ಮುಂದಿನ ಗತಿಯನು 1 ಎಷ್ಟು ಮಾಡಿ ಗಳಿಸಿ ತಂದರು ಸಾಲದೆಂಬರೊನಷ್ಟಮಾಡಿ ಇವನ ಬದುಕು ಎಲ್ಲ ತಿಂಬರು 2 ನಡುಬೀದಿಯಲಿ ಇವನ ಎಳೆದು ಸೆಳೆವರೊಕಡೆಗಣ್ಣು ಕುಡಿಹುಬ್ಬು ನೋಟದಿಂದಲಿ 3 ಉಂಡು ಉಟ್ಟು ಗುಂಡಿನಂತೆ ಮನೆಯಲಿರುವರೊಚಂಡ ಯಮನದೂತರು ಬಂದು ಎಳೆದು ಒಯ್ವರೊ4 ಮುಟ್ಟಿ ಭಜಿಸಿರೊ ಹಯವದನನಂಘ್ರಿಯನೆಟ್ಟನೆ ಮುಕ್ತಿಮಾರ್ಗ ತೋರಿಕೊಡುವೆನೊ 5
--------------
ವಾದಿರಾಜ
ಬೆಳಗಾಯಿತು ಏಳಿ ಪಾದ ನಳಿನ ಸೇವಕರು ಪ ಉದಯ ಕಾಲದೊಳೆದ್ದು ಹೃದಯ ನಿರ್ಮಲರಾಗಿ ಮಧುಸೂದನನ ಪಾಡಿ ಸ್ತುತಿಸುತಲಿ ಮುದದಿಂದ ಮಾಧವನ ವಿಧವಿಧದಿ ಪೂಜಿಸಿ ಪದುಮನಾಭನ ಪಾಡಿ ಪೊಗಳುವ ಜನರು 1 ರಂಗನ ಮಹಾದ್ವಾರದ ಮುಂದೆ ಕಾಣುವ ಗಜ ಸಾಲುಗಳ ನೋಡುತ ಬಂಗಾರ ಕೋಡುಳ್ಳ ಗೋವ್ಗಳಿಗೆರಗುತ್ತ ಅಂಗಜ ಜನಕನ ಪಾಡಿ ಪೊಗಳುವರು2 ರಂಭೆ ಊರ್ವಶಿ ಮೇನಕೆಯರೆಲ್ಲರು ಕೂಡಿ ಸಂಭ್ರಮದಲಿ ನಾಟ್ಯವಾಡುತಿರೆ ಗಂಗೆ ಗೋದಾವರಿ ಕೃಷ್ಣ ತುಂಗಭದ್ರೆ ಯಮುನೆಯರು ಇಂಬಿಲ್ಲದೆ ಪಾಡುತಿಹರೊ ಶ್ರೀ ಹರಿಯ 3 ಅತ್ರಿ ವಸಿಷ್ಠ ಗೌತಮ ಭಾರದ್ವಾಜರು ಅರ್ಥಿಯಲ್ಲಿ ಜಮದಗ್ನಿ ಋಷಿಗಳೆಲ್ಲ ಸ್ತೋತ್ರಮಾಡುತ ಪುರುಷೋತ್ತಮನನು ಪಾಡಿ ವಿಶ್ವಾಮಿತ್ರರು ಬಹು ಭಕ್ತಿಯಲಿ 4 ಸುತ್ತ ಸನಕಾದಿ ನಾರದರೆಲ್ಲ ಪಾಡಲು ನೃತ್ಯಗಾಯನದಿಂದ ಶ್ರೀ ಕೃಷ್ಣನ ಅರ್ತಿಯಿಂದ ಅಜಭವ ಸುರರೆಲ್ಲ ಸ್ತುತಿಸಲು ಸ್ತೋತ್ರಮಾಡಲು ದುರ್ಗದೇವಿಯರು5 ಗಜರಾಜ ಗೋಮಾತೆ ಮೊದಲಾದವರು ಬಂದು ಮಧುಸೂದನನ ನೋಡೆ ನಿಂತಿಹರು ಮದಗಜಗÀಮನೇರು ಮುದದಿ ಕಲಶ ಕನ್ನಡಿಗಳ ಪಿಡಿದು ನಿಂತಿಹರು ಬೇಗದಲಿ 6 ಮುತ್ತಿನ ಕದಗಳು ತೆಗೆವ ವ್ಯಾಳ್ಯದಲಿ ನೌಬತ್ತು ನಗಾರಿ ವಾದ್ಯಗಳಾಗಲು ಸಪರ್Àನ್ಹಾಸಿಕೆಯಲ್ಲಿ ಮಲಗಿರುವ ದೇವನ ಅರ್ಥಿವೈಭವ ನೋಡೊ ವೇಳೆ ಮೀರುವದು7 ಗಂಗಾಜನಕನ ಚರಣಂಗಳು ನೋಡುವ ಬಂಗಾರ ಕಿರುಗಂಟೆಗಳ ನಡುವನು ನೋಡುವ ರಂಗು ಕೇಸರಿಯ ಪೀತಾಂಬರ ನೋಡುವ ಶೃಂಗಾರ ವೈಜಯಂತಿಯ ನೋಡುವ 8 ವಕ್ಷ ಸ್ಥಳದಲ್ಲಿ ಶ್ರೀ ಲಕ್ಷ್ಮಿಯ ನೋಡುವ ಹಸ್ತದ ಆಭರಣಂಗಳ ನೋಡುವ ಮುತ್ತಿನ ಭುಜ ಕೀರ್ತಿ ರತ್ನದ್ಹಾರಗಳಿಂದ ಒಪ್ಪುವ ಉರದಿ ಶ್ರೀವತ್ಸನ ಸ್ತುತಿಸೆ 9 ಕೋಟಿ ಸೂರ್ಯರ ಕಾಂತಿ ಸೋಲಿಪ ನಗುಮುಖ ಲಲಾಟದಿ ಕಸ್ತುರಿ ತಿಲಕ ಒಪ್ಪಿರಲು ಮಾಟದ ಕರ್ಣಕುಂಡಲಗಳು ಹೊಳೆಯುತ್ತ ನೋಟದಿ ಜಗವ ಮೋಹಿಪ ದೇವನನು ನೋಡೆ10 ಅಂದದ ಮುಗುಳು ನಗೆಯು ದಂತ ಪಂಙÉ್ತಯು ಪಾದ ಕದಪುಗಳಂದವು ಇಂದ್ರ ನೀಲದಮಣಿ ಖಚಿತ ಕಿರೀಟದ ಮಂದಹಾಸದ ನಗೆÀಮುಖ ನೋಡುವ 11 ಕಡೆಗಣ್ಣ ನೋಟದಿ ಜಗವ ಸೃಷ್ಟಿಪದೇವ ಖಗವಾಹನನು ಸಂರಕ್ಷಿಪ ಲೋಕವ ಅಗಣಿತ ಮಹಿಮ ಅತಿಶಯದಿ ಲಯವ ಮಾಳ್ಪ ಸುಗುಣ ಸುಂದರನ ಗುಣ ಪೊಗಳುವ ಜನರು12 ನಿಖಿಳ ವ್ಯಾಪಕ ಕೃಷ್ಣ ಶುಕಮುನಿ ವಂದಿತ ದಿವ್ಯ ಚರಣನ ರುಕುಮಿಣಿ ಅರಸನ ಭಕುತರ ಪೋಷನ ಸಖ್ಯದಿಂದ ಪ್ರಿಯನ ನೋಡುವ ಸುಜನರು13 ಅನಿರುದ್ಧ ದೇವ ಶ್ರೀ ಪ್ರದ್ಯುಮ್ನ ಮೂರ್ತಿಯ ಸಂಕರುಷಣ ವಾಸುದೇವೇಶನ ನವನೀತ ಚೋರನ ನಾರಾಯಣನ ನಾಮ ಸ್ಮರಿಸುವ ಸುಜನರು 14 ಕವಿಜನ ಪ್ರಿಯನ ಕಮನೀಯ ರೂಪನ ಕಮಲನಾಭವಿಠ್ಠಲನ ಪಾಡುವ ಕಮಲಸಖನ ಸೋಲಿಸುವ ಮುಖಕಾಂತಿಯಕಮಲಾಕ್ಷಿಯರಸನ ಪೊಗಳುವ ಸುಜನರು15
--------------
ನಿಡಗುರುಕಿ ಜೀವೂಬಾಯಿ
ಮದನ ಜನಕ ಪುರು| ಷೋತ್ತಮ ಪರತರ ಶೇಷಗಿರಿವಾಸಾ| ಪ ಕರುಣ ನೋಟದಿ ಸರ್ವಜೀವನುಳಹಿ ಕೊಂಡು| ಅಮೃತ ನುಣಿಸಿದನು| ಧರಣಿಯ ಮೋಹಿಸಿ ಬಿಗಿದಪ್ಪಿ ತರಳನು| ಹರಣಗಾಯ್ವ ದೇವ ಶರಣೆಂದೆನಲ್ಲದೆ| ತೆರೆಗಣ್ಣಿನವನೇಂದೆನೇ ಉಬ್ಬಿಗೊಂಡ| ಬಿರುಸು ಮೈಯ್ಯವನೆಂದನೇ ದಾಡಿಲಿಂದ| ಸುರಿವ ಜೊಲ್ಲುವನೆಂದನೇ ಬ್ರಹ್ಮಾದಿಗ| ಳರಸ ಉಗ್ರಾವ ತಾರೀ ಬಾಯೆಂದೆನಲ್ಲದೆ1 ಚಿಕ್ಕಮಾಟದಿ ಬಹು ಚಲುವ ಭೂಸುರರುಗೆ ಪುಕ್ಕಟೆ ಅರಸು ತನವ ಕೊಟ್ಟನು| ಸಿಕ್ಕಿದ ದೇವರ ಸೆರೆಬಿಡಿಸಿದ ಕುಂತೀ| ಸಾರಥಿ ಶರಣೆಂದೆನಲ್ಲದೇ| ಕಕ್ಕು ಲಾತೆವನೆಂದೆನೇ ಕೊಡಲಿಹೊತ್ತ| ನಿಕ್ಕರುಣಿಕನೆಂದನೇ ವಾನರ ಕೂಡಾ| ಹೊಕ್ಕವನನೆಂದೆನೇ ಕೌರವರ| ಸೊಕ್ಕು ಮುರಿದ ಸ್ವಾಮಿ ಬಾಯೆಂದೆನಲ್ಲದೆ2 ನೊಸಲಗಣ್ಣಿನವನ ಸಾಹ್ಯಕ ಶರವಾಗಿ| ಯಶೆವ ಮುಪ್ಪುರವನು ಧರೆಗಿಳುಹೀ| ವಸುಧಿಲಿ ಕಲಿಮಲ ಬಿಡಿಸಿ ಸಜ್ಜನರಪಾ| ಲಿಸಿದ ಮಹಿಪತಿ ಸುತಪ್ರಭು ಎಂದೆನಲ್ಲದೆ ಹುಸಿನುಡಿಯುವ ನೆಂದನೇ ಯವನರ| ದೆಸಿಗೆಡಿಸಿದ ನೆಂದನೇ ಆರಿಗೆ ನೆಲೆ| ತುಸುಗುಡದವ ನೆಂದನೇ ಜಗದೊಳು| ದಶ ಅವತಾರನೇ ನಮೋ ಎಂದೆ ನಲ್ಲದೆ.3
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಮರುಳು ಮಾಡಿದನಲ್ಲೇ ಏಣಾಕ್ಷಿ ಪ ಘವ ಘವಿಸುವಾಯವಿಯಾ ನೋಟದಿ ನೋಡಿ|| ಸವಿಸವಿಯಾದಾ ಮಾತನಾಡೀ 1 ಚಿತ್ತರ ಮಿಸುವಂತೆ ರೂಪವ ದೋರಿ| ಅತ್ತಿತ್ತಗಲದ್ಹಾಂಗ ನಿಜ ಬೀರಿ 2 ಗುರುವರ ಮಹಿಪತಿ ನಂದ ನೊಡೆಯನಾ| ಅರಫಳಿಗಿರಲಾರೆ ಅಗಲಿನಾ 3
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಮುರಳೀ ಲೋಲನ ಪ್ರೇರಿಸುವಳು ರಾಧೆ ಪ ಒಲಿವಲಿ ನಲಿವಲಿ ಉಲಿವಲಿ ನಿಲುವಲಿ ಮಲಿನವ ಕಳೆವಲಿ ಲೀಲೆಗಳಲಿ ರಾಧೆ ಅ.ಪ ಕಂಗಳ ನೋಟದಿ ಸಂಗರದಾಟದಿ ಅಂಗ ಸೌಂದರ್ಯದಿ ಮಂಗಳ ವೇಷದಿ 1 ಮುರಳಿಯ ರವದಲಿ | ಕೊರಳಿನ ಸರದಲಿ ಕರುಣೆಯ ಮನದಲಿ | ಪರಿಮಳ ಭರದಲಿ2 ಮಾಂಗಿರಿ ಶೃಂಗದಿ | ರಂಗನ ವೇಷದಿ ಮಂಗಳನಾದದಿ | ಹೊಂಗೊಳಲೂದಿ 3
--------------
ಅಸೂರಿ ರಾಮಸ್ವಾಮಿಅಯ್ಯಂಗಾರ್
ಮುರುಳಿಯ ನೂದಿದನಾಗ ಹರಿ ವಿಧವಿಧರಾಗದೊಳೀಗ ಪ ತುರುಗಳ ಕಾಯುತ ತರಳರ ಒಡಗೂಡಿ ಸುರಮುನಿವಂದಿತ ಸರಸಿಜನಾಭನು ಅ.ಪ ಚಂದದ ಪಾಡಗರುಳಿಯು ಕಾ- ಲಂದುಗೆ ಕಿರುಗೆಜ್ಜೆ ಧ್ವನಿಯು ಹಿಂಡುಗೋವ್ಗಳ ವೃಂದದಿ ನಲಿಯುತ ಮಂದರೋದ್ಧರ ಗೋವಿಂದ ಮುಕುಂದನು1 ಉಟ್ಟ ಪೀತಾಂಬರ ಹೊಳೆಯೆ ನಡು ಕಟ್ಟಿದ ಚಲ್ಲಣ ಹೊಳೆಯೆ ಪರಮೇಷ್ಟಿ ಪಿತನು ತನ್ನ ಪುಟ್ಟ ಕರದಲಿ ಉತ್ತಮನಾದದ 2 ವಿಧವಿಧಹಾರಗಳಿಂದ ರನ್ನ ಪದಕದ ಮುತ್ತುಗಳಿಂದ ಹೃದಯದಿ ಶ್ರೀ ಭೂ ಸಹಿತದಿ ಮೆರೆಯಲು ಪದುಮನಾಭ ಶ್ರೀ ಚಲ್ವ ಮದನಗೋಪಾಲನು 3 ಕೋಟಿಸೂರ್ಯರಂದದಲಿ ಬಹು ಮಾಟದ ಮುಖಕಾಂತಿಯಲಿ ನೋಟದಿ ಜಗವನೆ ಮೋಹವಗೊಳಿಪ ಕಿರೀಟಿಯ ಪೊರೆದ ವೈರಾಟನು ಹರುಷದಿ 4 ಕರ್ಣದಿ ಬಾವುಲಿ ಹೊಳಪು ನವ- ರನ್ನ ಕಿರೀಟದ ಬೆಳಕು ಕನ್ನಡಿಯಂದದಿ ಕದುಪಿನ ಝಳಪು ಮೋ- ಹನ್ನ ಮಾಲೆನಿಟ್ಟ ಸೊಗಸಿನ ವಲಪು 5 ಮುಖದಲಿ ಮುಂಗುರುಳೊಲಿಯೆ ಪ್ರಿಯ ಸಖಿಯರು ಹರುಷದಿ ನಲಿಯೆ ಅಕಳಂಕ ಮಹಿಮನು ಗುಪಿತದಿ ಗೆಳೆಯರ ಸುಖವ ಪಡಿಸುತಲಿ ಸಖ್ಯದಿಂದ ಪ್ರಿಯನು 6 ತುರು ವೃಂದದಲಿ ಗೋ- ವಿಂದನು ಕುಣಿಕುಣಿಯುತಲಿ ಅಂಬರದಲಿ ದೇವದುಂದುಭಿ ಮೊಳಗಲು ಕಂಬು ಕಂಧರ ಹರಿ ಸಂಭ್ರಮ ಸೂಸುತ 7 ವಾಸವ ವಂದಿತ ಹರಿಯೆ ಸರ್ವೇಶ ಕೃಪಾಕರ ದೊರೆಯೆ ವಾಸುದೇವ ಸರ್ವೇಶನೆ ಭಕುತರ ಸಾಸಿರನಾಮದಿ ತೋಷಪಡಿಸುತಲಿ 8 ಪಾಹಿ ಪಾಹಿ ಶ್ರೀಶ ನಮೋ ಪಾಹಿ ಪಾಹಿ ಬ್ರಹ್ಮೇಶ ಪಾಹಿ ಪಾಹಿ ಪರಿಪಾಲಿಸು ನಮ್ಮನುಪಾಹಿ ಕಮಲನಾಭವಿಠ್ಠಲ ದಯಾನಿಧೆ 9
--------------
ನಿಡಗುರುಕಿ ಜೀವೂಬಾಯಿ
ಯಲ್ಲರಮ್ಮನಲ್ಲವೆ ಸಿರಿದೇವಿ | ಎಲ್ಲರಮ್ಮನಲ್ಲವೆ || ಬಲ್ಲಿದರಾಗಿಪ್ಪ ಬೊಮ್ಮಾದಿಗಳಿಗೆ ಪ ಆಲದೆಲೆಯ ಮೇಲೆ ತನ್ನ ಪುರುಷನಂದು | ಕಾಲವರಿತು ಪವಡಿಸಿರಲು || ವಾಲಗವನು ಮಾಡಿ ಕೊಂಡಾಡಿ ಜೀವರ | ಮೂಲ ಕರ್ಮಂಗಳು ತೀರುವಂತೆ ಮಾಡಿದ 1 ಆಮೋಘ ವೀರ್ಯ ಗರ್ಭದಿ ಧರಿಸಿ ತಾ | ಬೊಮ್ಮಾಂಡವನೆ ಪೆತ್ತ ಲೋಕಾಮಾತಾ || ಸುಮನಸರಿಗೆ ಕಡೆಗಣ್ಣ ನೋಟದಿ | ಆ ಮಹಾ ಪದವಿಯ ಕೊಡುವ ಭಾಗ್ಯವಂತೆ 2 ಎರಡೊಂದು ಗುಣದಲ್ಲಿ ಪ್ರವಿಷ್ಠಳಾಗಿ ಜೀ ವರ ಯೋಗ್ಯತೆಯಂತೆ ಪಾಲಿಸುತಿಪ್ಪಳು || ನಿತ್ಯ 3
--------------
ವಿಜಯದಾಸ
ರಾಘವೇಂದ್ರ ತೀರ್ಥ ಬೋಧಿಸುಭಾಗವತ ಗತಾರ್ಥರಾಘವ ಪದಾಂಬುಜ ಲಬ್ದಾರ್ಥ ಸರಾಗದಿ ಪಾಲಿಸು ನಿಜ ಪುರುಷಾರ್ಥ ಪ ತುಂಗಾತಟವಾಸ ರಾಘವಸಿಂಗನ ನಿಜದಾಸಪಂಗು ಬಧಿರ ಮುಖ್ಯಾಂಗ ಹೀನರನಪಾಂಗ ನೋಟದಿ ಶುಭಾಂಗರ ಮಾಡಿ 1 ಪಾದೋದಕ ಸೇವಾರತರಿಗಗಾಧ ಫಲಗಳೀವಬೂದಿ ಮುಖದ ದುರ್ವಾದಿಗಳೋಡಿಸಿಸಾಧು ಜನರಿಗಾಲ್ಹಾದ ಬಡಿಸುತಿಹ 2 ಭುಜಗಧರಾಧಿಪನಾ ವೊಲಿಸಿದಸುಜನ ಶಿರೋಮಣಿಯೇನಿಜ ಪದ ಯುಗಳವ ಭಜಿಸುವ ಜನರಿಗೆ(ವಿಜಯದ ನೆನಿಸುವ ದ್ವಿಜಕುಲನಂದನ)ವಿಜಯದ ಗೋಪತಿ ವಿಠಲ ನಂದನ 3
--------------
ಗೋಪತಿವಿಠಲರು
ವಾಯುದೇವರು ಆಂಜನೇಯ ಕುಂತೀತನಯ- ಅಂಜನಾಭಪ್ರಿಯ ಮಧ್ವಾಖ್ಯರಾಯ ಪ. ಮಂಜುಳಾಂಗ ಮೃತ್ಯುಂಜಯಾದಿ ಸುರ- ನಿತ್ಯ ನಿ- ರಂಜನ ದೇವಪ್ರಭಂಜನತನಯ ಅ.ಪ. ರಾಮರಾಯಬಂಟ ದಿತಿಸುತ- ಸ್ತೋಮಹರಣ ತುಂಟ ಸ್ವಾಮಿಕಾರ್ಯಮನಪ್ರೇಮನಿರಾಮಯ ಭೀಮಪರಾಕ್ರಮಧಾಮ ಘನಾಘನ- ಶ್ಯಾಮ ನಿಕಾಮ ಸುಧೀಮಲಲಾಮ 1 ಚಿಂತಾಮಣಿ ರಾಮ ನೇಮ- ವಾಂತು ಸಾರ್ವಭೌಮ ಸಂತೋಷದಿ ಗಗನಾಂತರಪಂಥದಿಂ ಅಂತರಿಸುತ ಮಹಾಂತೋದಧಿಯ ಪ್ರಾಂತಕೆ ಹಾಯ್ದ ನಿಶ್ಚಿಂತ ಹನುಮಂತಾ2 ಆಟನೋಟದಿಂದ ವನದೊಳು ಸಾಟಿಯಾಗಿ ಬಂದ ಮೀಟೆನಿಸುವ ಬಲು ಕಾಟಕ ದೈತ್ಯರ ಕೂಟ ಕೆಡಹಿ ಪುರಕೋಟಿಯ ತಿಕ್ಕಿದ ಪಾಟಲಮುಖ ಶತಕೋಟಿಶರೀರ 3 ಅಟ್ಟಹಾಸದಿಂದ ಕಮಲದಿ ಪುಟ್ಟಿದಾಸ್ತ್ರದಿಂದ ಕಟ್ಟಿಕೊಳ್ಳಿಸಿ ಜಗಜಟ್ಟಿ ಖ್ಯಾತಿಯಿಂದ ದಟ್ಟಿಸಿ ಲಂಕೆಯ ಪಟ್ಟಣವನು ಸೂರೆ- ಸುಟ್ಟುಬಿಟ್ಟ ಕಡುದಿಟ್ಟ ಹನುಮಂತಾ 4
--------------
ಪಾವಂಜೆ ಲಕ್ಷ್ಮೀನಾರ್ಣಪ್ಪಯ್ಯ
ವಾಯುದೇವರು ಆಂಜನೇಯ ಕುಂತೀತನಯ- ಅಂಜನಾಭಪ್ರಿಯ ಮಧ್ವಾಖ್ಯರಾಯ ಪ. ಮಂಜುಳಾಂಗ ಮೃತ್ಯುಂಜಯಾದಿ ಸುರ- ನಿತ್ಯ ನಿ- ರಂಜನ ದೇವಪ್ರಭಂಜನತನಯ ಅ.ಪ. ರಾಮರಾಯಬಂಟ ದಿತಿಸುತ- ಸ್ತೋಮಹರಣ ತುಂಟ ಸ್ವಾಮಿಕಾರ್ಯಮನಪ್ರೇಮನಿರಾಮಯ ಭೀಮಪರಾಕ್ರಮಧಾಮ ಘನಾಘನ- ಶ್ಯಾಮ ನಿಕಾಮ ಸುಧೀಮಲಲಾಮ 1 ಚಿಂತಾಮಣಿ ರಾಮ ನೇಮ- ವಾಂತು ಸಾರ್ವಭೌಮ ಸಂತೋಷದಿ ಗಗನಾಂತರಪಂಥದಿಂ ಅಂತರಿಸುತ ಮಹಾಂತೋದಧಿಯ ಪ್ರಾಂತಕೆ ಹಾಯ್ದ ನಿಶ್ಚಿಂತ ಹನುಮಂತಾ 2 ಆಟನೋಟದಿಂದ ವನದೊಳು ಸಾಟಿಯಾಗಿ ಬಂದ ಮೀಟೆನಿಸುವ ಬಲು ಕಾಟಕ ದೈತ್ಯರ ಕೂಟ ಕೆಡಹಿ ಪುರಕೋಟಿಯ ತಿಕ್ಕಿದ ಪಾಟಲಮುಖ ಶತಕೋಟಿಶರೀರ 3 ಅಟ್ಟಹಾಸದಿಂದ ಕಮಲದಿ ಪುಟ್ಟಿದಾಸ್ತ್ರದಿಂದ ಕಟ್ಟಿಕೊಳ್ಳಿಸಿ ಜಗಜಟ್ಟಿ ಖ್ಯಾತಿಯಿಂದ ದಟ್ಟಿಸಿ ಲಂಕೆಯ ಪಟ್ಟಣವನು ಸೂರೆ- ಸುಟ್ಟುಬಿಟ್ಟ ಕಡುದಿಟ್ಟ ಹನುಮಂತಾ 4
--------------
ತುಪಾಕಿ ವೆಂಕಟರಮಣಾಚಾರ್ಯ