ಒಟ್ಟು 363 ಕಡೆಗಳಲ್ಲಿ , 75 ದಾಸರು , 318 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಆನಮಿಸುವೆ ಗುರುವಾ ಮಂತ್ರಾಲಯ ಸ್ಥಾನ ಮಾಡಿದ ಯತಿಯಾ ಪ ದಾನವರೊಳವತರಿಸಿ ದೈನ್ಯರ ಮಾ£ನಿಧಿಯು ತಾನು ಜ್ಞಾನಿಗಳಿಗೆ ಕಾಮಧೇನುವೆನಿಸಿದೀ ಮಾನಿಯತೀಂದ್ರ ವಿಜ್ಞಾನಪೊಯ್ಯವನು ಅ.ಪ ಸದಯ ಸರ್ವದಾಯೆನಿಸಿ ಹೃದಯದಿ ಮುದವಾಂಕುರಿಸುವನು ಪರಿ ಸದಮಲ ಕೀರ್ತಿಯ ವಿದಿಶಮಾಗಿ ಭೂತಳದಿ ಉದಯಿಸಿದ 1 ದೋಷದೂರ ನೆನಿಸೀ ದಾಸರಿಗೀಶನಡಿಯ ತೋರ್ಪಾ ವಾಸುದೇವನಿಗೆ ನಿಜ ದಾಸನೆನಿಸಿ ಭವ- ವಾಸದೊಳಿಹ ಪರತೋವೀವನು 2 ಕರುಣಸಾಗರನೆನಿಸಿ ಶರಣಗೆ ವರಗಳ ತಾನೀವಾ ಗುರುವೆಂದೆಂಬ ಯಥಾರ್ಥ ಪದವಿ ತಾ ನರಸಿಂಹವಿಠಲನ ಕರುಣದೊಳಿಹನು 3
--------------
ನರಸಿಂಹವಿಠಲರು
ಆನೆಯ ನೋಡಿರಯ್ಯ ನೀವೆಲ್ಲರುಆನಂದ ಪಡೆಯಿರಯ್ಯ ಪ ತಾನು ತನ್ನವರೆಂಬ ಮಾನವರ ಸಲಹಿದಅ ಪಾಂಡು ಚಕ್ರೇಶನ ಸುತರಿಗೊಲಿದಾನೆಗಂಡುಗಲಿ ಮಾಗಧನ ಒರಸಿದಾನೆಹಿಂಡು ಗೋವಳರೊಳಗೆ ಹಿರಿಯನ ಕಳೆಯದಾನೆಲಂಡರಿಗೆ ಎದೆಗೊಡುವ ಪುಂಡಾನೆ 1 ಬಾಲಕನ ನುಡಿಗೇಳಿ ಖಳನ ಸೀಳಿದಾನೆಪಾಲುಂಡು ವಿದುರನ ಸಲಹಿದಾನೆಲೋಲಾಕ್ಷಿ ಮಾನಭಂಗಕ್ಕೊದಗಿದಾನೆಖೂಳ ಶಿಶುಪಾಲನನು ಸೀಳಿದಾನೆ2 ಅಜಮಿಳನಿಗೆ ನಿಜಪದವಿಯ ಕೊಟ್ಟಾನೆಕುಜನರೆಲ್ಲರನು ಒರಗಿಸಿದಾನೆಅಜಪಿತ ಕಾಗಿನೆಲೆಯಾದಿಕೇಶವಾನೆತ್ರಿಜಗವಲ್ಲಭ ತಾನು ಭಜಕರ ವಶವಾನೆ 3
--------------
ಕನಕದಾಸ
ಆರಿಲ್ಲಿಲ್ಲೋ ಮನುಜಾ | ಅರಿಲ್ಲಿಲ್ಲೋ | ಹರಿಭಕ್ತರಿಗೆ ಸರಿ ಉಂಟೇನಣ್ಣಾ | ಆರಿಲ್ಲಿಲ್ಲೋ ತಮ್ಮಾ | ಬಿರದಿನ ಘಲಗಳ ನಡೆಸುವರಯ್ಯಾ ಪ ಕಂಭದೊಳಗ ಹರಿ ಬಿಂಬವ ತೋರಿಸಿ | ಹಿರಣ್ಯ ಕನಾ | ವೆಂಬ ಶಾರ್ದೂಲ ಕರಳವ ಹಾರಿಸಿದ | ನಂಬಿದ ಪ್ರಲ್ಹಾದ ಮಾಸಾಳ ನಮಾ 1 ಕಂಡು ಸೀತಾಪತಿ ನೊಯ್ದು ರಾವಣ ನೆಂಬಾ | ಖಂಡಿಸಿ ಮದ ಸೊಕ್ಕಿದಾನಿಯನು | ತುಂಡ ಮುಂಡ ಮಾಡಿ ಪದವಿಯ ಪಡದಾ | ಚಂಡ ವಿಭೀಷಣ ಮಾಸಾಳ ನಮಾ 2 ಖಂಡ ದಾಸನಬೇಡಿ ಹೊಂದಿದ್ದ ಕಾಯನ | ಸಂದ ಬಿಡಿಸಿ ಮಲ್ಲಯುದ್ಧದಲಿ | ಮಂದರ ಧರನತಿ ಮೆಚ್ಚಿಸಿ ಮೆರೆದಾ | ನಂದ ಭೀಮಶೇನ ಮಾ-ಸಾಳ ನಮಾ 3 ಬೊಮ್ಮ ಸಾರಥಿ | ಉರಗಸ ಹದಿ ಮೇರು ಗಿರಿ ಪಾಪವು | ಹರಿಶರದಿಂದಲಿ ತ್ರಿಪುರವ ಕೆಡಹಿದ | ಸುರ ರಕ್ಷ ಮಹೇಶ ಮಾಸಾಳನಮಾ 4 ಹಿಂದಿನ ಮಾತಿಂದು ಇಂದಿಲ್ಲ ವೆನಬ್ಯಾಡಿ | ಎಂದೆಂದು ಸ್ವರ್ಗದ ಸುಖಗಳಿಗೆ | ಕುಂದವ ನಿಡುವರು ಮಹಿಪತಿ ಸುತ ಪ್ರಭು | ಹೊಂದಿದ್ದ ದಾಸರು ಮಾಸಾಳರೈಯ್ಯಾ 5
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಆರ್ತಭಾವ ಸುಳಾದಿ ಧ್ರುವತಾಳ ವೊಂದು ತೋರೆನಗರವಿಂದನಯನ ಮಂದಾಕಿನಿಯ ಪಡೆದ ಮುದ್ದು ಚರಣ ಸುಂದರಾಂಗ ತೋರೆನಗೆ ಸುರೇಂದ್ರನಾಥ ಕಂದರ್ಪಪಿತನ ಕಾಲಂದಿಗೆ ರುಳಿ ಗೆಜ್ಜೆ ಚೆಂದುಳ್ಳ ಪದ್ಮರೇಖೆಯಿಂದೊಪ್ಪುವೊ ಇಂದಿರೆ ಕರಕಮಲದಿಂದ ಪೂಜಿತನಾದ ಚಂದ್ರವದನ ನಿನ್ನ ಚೆಲುವ ಪಾದ ಇಂದ್ರಾದಿ ಹರ ನಾರಂದ ಸುರಬ್ರಹ್ಮಾದಿ ವಂದ್ಯ ನಿನಗೆ ಕೋಟಿ ನಮೋ ನಮೋ ಎಂದು ಬೇಡುವೆ ದಯಾಸಿಂಧು ಎನಿಸಿದಾತ ಕಂದನಂದದಿ ನೋಡಿ ಸಲಹೋ ಎನ್ನ ಮಂದಬುದ್ಧಿಯ ಮಹಾಮದಡ ಪಾಮರ ಭವ ಬಂಧನದೊಳು ಸಿಲುಕಿ ನೊಂದೆನಯ್ಯ ಸಂದೇಹ ಮಾಡದೆ ಸಲಹದಿದ್ದರೆ ನಿನ್ನ ಹೊಂದಿ ಬಾಳುವುದೆಂತೊ ಮುಂದರಿಯೆ ಬಿಂದು ಮಾತ್ರದಿ ನಾಮಾಮೃತವ ಭೀಮೇಶಕೃಷ್ಣ ತಂದು ನೀಡೆನಿಗೆ ಇಂದೀವರಾಕ್ಷ 1 ಮಠ್ಯತಾಳ ಯುಗಳ ಪಾದಕೆ ಕೈಯ ಮುಗಿದು ಬೇಡುವೆನಯ್ಯ ಜಗದುದರನೆ ನಿನ್ನ ಜಾಣತನವ ಬಿಟ್ಟು ಅಗಣಿತಗುಣಮಹಿಮ ಅಂತರಾತ್ಮಕ ದೇವ ಬಗೆಬಗೆಯಲಿ ಸಲಹೋ ಭಕ್ತವತ್ಸಲ ನಿನ್ನ ಮಗುವೆಂದೆನ್ನ ಕಾಯೊ ಮಂದರೋದ್ಧರ ದೇವ ನಿಗಮಗೋಚರ ಸ್ವಾಮಿ ನಿಂತು ನೋಡುತ ಎನ್ನ ಚಿಗುರುದೋಷದಕುಡಿಯ ಚಿವುಟಿ ಹಾಕುತ ನಿನ್ನ ಸುಗುಣಗಳನೆ ಬಿಟ್ಟೆನ್ನವಗುಣವೆಣಿಸಿದರೆ ಇಗೋ ನಿನಗಪಕೀರ್ತಿ ಈಗ ಒಪ್ಪಿಸುವೆನು ಬಿಗಿದ ಭವಪಾಶ ಬಿಚ್ಚಿ ಭೀಮೇಶಕೃಷ್ಣ ತೆಗೆಯದೆ ನಿನ್ಹೊರತೀ ಜಗದೊಳಗುಂಟೇನಯ್ಯ 2 ವಚನ ಸಕಲ ಸ್ನಾನವು ನೇಮ ಹೋಮ ಜಪಂಗಳು ಸಕಲ ಪುಣ್ಯಕ್ಷೇತ್ರ ಮೂರ್ತಿನಾಮಂಗಳು ಸಕಲ ಪುರಾಣ ವೇದಾದಿಗ್ರಂಥಗಳು ಸಕಲ ಕಾರ್ಯವು ಸರ್ವೇಷ್ಟ ಫಲಂಗಳು ಸಾಯುಜ್ಯ ಪದವಿಗಳು ಲಕುಮೀಶ ಇವು ನಿನ್ನ ನಖಶಿಖ ಪರಿಯಂತ್ರ ಸಾರಥಿ ಸಮದೃಷ್ಟಿಲಿ ನೋಡಲು ಸಕಲಸಿದ್ಧ್ದಿಯು ಸರಿಯಾಗಿ ಕೈಗೂಡೋದು ಶಕಟಸುರಾಂತಕ ಕಕುಲಾತಿ ಮಾಡದೆ ಬಕನ್ವೈರಿಯೆನ್ನ ಭಾರವ ನೀ ವಹಿಸಲಿ ಬೇಕೊ ಇಕೋ ನಿನ್ನ ಚರಣಕ್ಕೆ ಈ ದೇಹ ಅರ್ಪಿಸುವೆ ಗೋಕುಲಾವಾಸ ನಿನ್ನ ಪಾದಕೆ ನಮಸ್ಕರಿಸುವೆ ಮುಕುತಿದಾಯಕ ಮುದ್ದು ಭೀಮೇಶಕೃಷ್ಣನೆ ಭಕುತಿಜ್ಞಾನದಲಿಡೊ ಭಯಹಾರಿ ಎನ್ನ 3 ಗೋಪಸುತನೆ ನಿನ್ನ ಗುರುವಿನ್ವಲ್ಲಭೆ ಮಹ ದಪರಾಧವೆಣಿಸದೆ ನೀ ಕರುಣದಲೆ ಸಾಂ- ದೀಪಗೆ ಸುತರನಿಟ್ಟ ಪಯಾಂಬುಧಿವಾಸ ಕೋಪದಿ ಬಯ್ದ್ದಾ ಶಿಶುಪಾಲಗೊಲಿದೆಯೊ ಶ್ರೀಪತಿ ಶರಣೆಂದಾ ದ್ರೌಪದಿ ಕಾಯ್ದಂತೆ ಕಾಪಾಡೊ ಈ ಭವಕೂಪದೊಳಗೆ ಬಿದ್ದೆ ನೀ ಪಿಡಿಕೈಯ ದಯಾಪರಮೂರುತಿ ಆಪತ್ತು ಬಾಂಧವ ಈ ದೇಹವೃಕ್ಷದಲಿ ದ್ವಾ- ಸೂಪರಣನಂತೆ ದೂರೇನೋ ಎನ್ನ ಸ- ಮೀಪದಲ್ಲಿದ್ದು ಸ್ವರೂಪ ತೋರದಲೆ ಸಂ- ತಾಪ ಬಡಿಸದಿರೆಂದಾಪನಿತು ಪೇಳ್ವೆ ಭೂಪಾಲ ಭೀಮೇಶಕೃಷ್ಣ ನಿನ್ನ ಪಾದ ನಾ ಪೊಂದಿದೆನೊ ದೊರೆ ನೀ ಪೊರೆಯೆಂದು 4 ಜತೆ ಏಸೇಸು ಕಾಲಕೆ ಬ್ಯಾಸರದೆ ಭೀಮೇಶಕೃಷ್ಣ ಲೇಸು ನೀಡೆನಗೆ ಸದಾ ಸುಮಂಗಳವ 5
--------------
ಹರಪನಹಳ್ಳಿಭೀಮವ್ವ
ಆವಪರಿಯಲಿ ನಿನ್ನನು ವೊಲಿಸುವೆ ದೇವ ಎನ್ನೊಳಗೆ ಒಂದಾದರೂ ಗುಣವಿಲ್ಲಾ ಪ ಅರಿಯೆ ಧರ್ಮವ ಪಾಪ | ಮರಿಯೆ ಉತ್ತಮರನ್ನ ಕರಿಯೆ ನಾಮಕೆ ಬಾಯಿ | ತೆರಿಯೆ ಸುರಿಯೆ ಜರಿಯೆ ಮೋºಕೆ ಮನ | ಮುರಿಯೆ ವ್ಯಾಕುಲ ಜ್ಞಾನಾಂ | ಕುರಿಯ ನಿನ್ನವರೊಳು | ಬೆರಿಯೆನರಿಯೆ ಸರಿಯೆ ದುಸ್ಸಂಗ ಕಥಾ | ಬರಿಯೆ ಕರದಿ ಯಾತ್ರಿಗೆ ಹರಿಯೆ ಪುಣ್ಯ ತೀರ್ಥ | ವರಿಯೆ ಮೊರಿಯೆ ಹರಿಯೆ ಜಗದೊರೆಯೆ | ಸಿರಿದೊರೆಯೆ ಅಘ ಕರಿಗೆ ಕೇಸರಿಯೆ ಮತ್ತಾ | ರರಿಯೆ ನಿನ್ನವರ ಮರಿಯೆ1 ನಡಿಯೆ ಸುಮಾರ್ಗ ವ್ರತವಿಡಿಯೆ ಮುಡಿದ ಪೂವು ಮುಡಿಯೆ ಕಾಮದ ಮರ್ಮ | ತಡಿಯೆ ಕಡಿಯೇ ಕುಡಿಯೆ ಪಾಪೋದಕವ ನುಡಿಯೆ ಮಂಗಳ ವಾರ್ತಿ ಪಿಡಿಯೆ ಭಕುತಿ ನೀತಿ ಪಿಡಿಯೆ ಗುಡಿಯೇ ಸುಕೃತಿ ಕಾಳ | ಗೆಡಿಯೆ ಪರರೊಸ್ತಕ್ಕೆ ತೊಡಿಯೆ ಚಿಂತಾತುರವ | ವುಧಿಯೆ ಹೊಡಿಯೆ ಕೊಡಿಯೆ ಎನ್ನಗೊಡಿಯೆ ನೆಂ | ದೆಡೆಯಲ್ಲಿ ಸೂಸಿದಾ ಪುಡಿಯಲ್ಲಿ ವೊಡಬೆರಸೆ | ಅಡಿಗಡಿಗೆ ಎನ್ನ ಕಡಿಗೆ 2 ಸುಳಿಯೆ ಕೀರ್ತನಿಗೆ ಮದ | ವಳಿಯೆ ಗುರುನಿಂದಕರ ಹಳಿಯೆ ಕಾಮದ ಕುಪ್ಪೆ | ಕಳಿಯೆ ಬಳಿಯೆ ತೊಳಿಯೆ ಮನನ ನರಕಕ್ಕೆ | ಮುಳಿಯೆ ಸುಮತಿಮಾರ್ಗ ತಿಳಿಯೆ ಪದವಿಗೆ ಪೋಗಿ | ಇಳಿಯೆ ಬೆಳಿಯೆ ಛಳಿಯೆ ಮುಂದಿನ ಜನನ | ಹೊಳೆಯೆಂಬೋದು ಅರಿದು ಸಂಚಿತ ಕರ್ಮ | ವಳಿಯೆ ತುಳಿಯೆ ವುಳಿಯೆ ಬೊಬ್ಬುಳಿಯೆ ಈ | ಕಳೆಯೇನುವಲ್ಲನಭ ಸುಳಿ ಹೃದಯಾವಳಿಯಲ್ಲಿ | ವಿಜಯವಿಠ್ಠಲವೊಳಿಯೆ3
--------------
ವಿಜಯದಾಸ
ಇದಕು ಸಮ್ಮತನಾಗೆಲೋ ನೀ ನದಕುನು ಸಮ್ಮತನಾಗೆಲೊ ಪ ಇದು ಅದು ಎಂಬುದರ್ವಿಧವ ತಿಳಿದು ನೀ ನೆದಕುನು ಸಮ್ಮತನಾಗೆಲೊ ಅ.ಪ ಕಡುಸಿರಿಯೆಂಬುದು ಮರವೆಕುಣಿ ಬಡತನವೆಂಬುದು ಅರಿವಿನಮನೆ ಒಡೆತನವೆಂಬುದು ಪಾಪದ ಗೋಣು ದುಡಿತವೆಂಬುವುದು ಜ್ಞಾನದ ಖನಿ ದೃಢದಿಂದರಿದು ಹುಡುಕಾಡಿದರೋ ಳ್ಹಿಡಕೋ ನಿನಗೆ ಹಿತವಾವುದು ನೋಡಿ1 ಕೆಟ್ಟ ಸಂಸಾರ ಹೇಯಮೂತ್ರ ಕುಣಿ ನಿಷ್ಠೆ ಭಕ್ತಿ ಆನಂದಾಮೃತ ಖಣಿ ದುಷ್ಟಜನರ ಸಂಗ ನರಕಕುಣಿ ಶಿಷ್ಟ ಸಜ್ಜನಸಂಗ ಮುಕ್ತಿಮನೆ ನಿಷ್ಠೆಯಿಂದರಿತು ಇಷ್ಟರೊಳಗೆ ನೀ ಇಷ್ಟಕೆ ಬಂದದ್ದು ಹಿಡಕೋ ನೋಡಿ 2 ನರರ ಸೇವೆ ಮಹ ದುರಿತಬೇರು ಶರಣರ ಸೇವೆ ಸ್ಥಿರಸುಖದ ತವರು ಬರಿದೆ ಕೆಡದೆ ಹರಿಚರಣ ಕೋರು ಮರುಳು ಗುಣಗಳೆಲ್ಲ ತರಿದು ತೂರು ಧೀರ ಶ್ರೀರಾಮನ ಚಾರುಚರಣ ಸೇರಿ ಪರಮಪದವಿಯೊಳು ಲೋಲ್ಯಾಡು 3
--------------
ರಾಮದಾಸರು
ಇಂದಿಗೆ ಕಡೆಮಾಡು ಎನ್ನ ಮಂದಬುದ್ದಿ ತಂದೆ ಕೇಳಿ ಮರೆಬಿದ್ದೆ ನಿನ್ನವರ ಸುದ್ದಿ ಪ ಒಪ್ಪಿಡ್ಯವಲಕ್ಕಿಗೆ ಒಪ್ಪಿ ಘನ ಬಡತನವ ಕಪ್ಪುಕುಲದವನಿಂಗೆ ತುಪ್ಪ ಸಕ್ಕರೆಯನ್ನು ಗಪ್ಪತ್ತಿಲುಂಡು ಮುಕ್ತಿ ಸಂಪದ1 ವಿದುರನರ್ಧಾಂಗಿಯ ಸದಮಲದ ತವಪಾದ ಸದನಕೈಯಲು ಪದುಮವದನೆ ಮೈ ಮರೆದು ಕದಳಿಫಲ ಮೇಲ್ಭಾಗ ವದನದಿಕ್ಕಲು ಸವಿದು ಸದುಯಾಂಬುಧೊಲಿದಸಮಪದವಿ ದಯಮಾಡ್ದಿ2 ಅಧಮಾಧಮಾಗಿ ದುರ್ಮದದಿಂದ ಮತಿಗೆಟ್ಟು ಸದಮಲ ಕುಲಪದ್ಧತಿ ವಿಧಿಯನ್ನು ಮರೆತು ಅಧಮಕುಲಜಳಿಗೊಲಿದು ಮದುವ್ಯಾದ ಅಜಮಿಳಗೆ ಒದಗಿ ಬಂದಂತ್ಯಕೆ ನಿಜಪದವಿ ಕರುಣಿಸಿದಿ3 ವರಧರ್ಮ ಹಿತಭಕ್ತ ನರನಿವರ ಲೆಕ್ಕಿಸದೆ ಕರುಣದ್ವಿದುರನ ಮನೆಗೆ ಭರದಿ ಬಂದಿಳಿದಿ ಪರಮಪಾವನ ನಿಮ್ಮ ಚರಣಭಕ್ತ್ಯೊಂದೆನಗೆ ಕರುಣಿಸು ಮತ್ತಾವ ಸಿರಿಯ ನಾನೊಲ್ಲೆ 4 ನಿನ್ನ ಎಂಜಲು ಉಣಿಸಿ ನಿನ್ನವರೊಳಾಡಿಸಿ ನಿನ್ನ ಉನ್ನತ ಧ್ಯಾನವನ್ನೆ ದಯಮಾಡಿ ಮನ್ನಿಸಿ ಸಲಹಯ್ಯ ನಿನ್ನ ದಾಸನೆಂದೆನಿಸಿ ಎನ್ನಯ್ಯ ಶ್ರೀರಾಮ ನಿನ್ಹ್ನೊರತನ್ಯರಿಯೆ 5
--------------
ರಾಮದಾಸರು
ಇಂದಿರಾಪತಿ ನಿನ್ನ ಸುಂದರ ಚರಣವ ನಾ ನೆಂದೆಗೆ ಕಾಣುವೆನೋ ಶ್ರೀಮಂದರೋದ್ಧರನೇ ಪ ಹಿಂದೆ ಸುಜನರೂ ಪದವಿಹೊಂದಲಿಲ್ಲವೇ ಇದ ಕ್ಕೊಂದುಪಾಯವೇನೊ ನಿನ್ನ ಕಂದನಲ್ಲವೇ 1 ಪರಿ ನಾನೊಂದಿಪೆನೆಲೊ ನೀ ಬಂದು ಮುಖವ ತೋರಲು ಎನಗೊಂದೆ ಸಾಕೆಲೊ 2 ಸುಜನರೊಡನೆಯೇ ಕೂಡಿಭಜನೆ ಮಾಡಿದೇ ನೀ ನಿಜ ಕಲ್ಯಾಣಪುರದ ಒಡೆಯನೆಂದು ಬೇಡಿದೇ3 ದಾಸದಾಸನು ಶೇಷಾದ್ರಿವಾಸನೇ ನನ್ನ ದೋಷರಹಿತಗುರುವು ತುಲಸೀರಾಮದಾಸನೇ 4
--------------
ಚನ್ನಪಟ್ಟಣದ ಅಹೋಬಲದಾಸರು
ಇನ್ನೆಲ್ಲಿ ಪರಮುಕ್ತಿ ಸಾಧನವು ನಿಮಗೆ ಭಿನ್ನ ಭೇದವಳಿಯದ ಕುನ್ನಿಮನುಜರಿಗೆ ಪ ಆಸೆಮೊದಲಳಿದಿಲ್ಲ ಮೋಸಕೃತಿನೀಗಿಲ್ಲ ಹೇಸಿ ಸಂಸಾರದ ವಾಸನ್ಹಿಂಗಿಲ್ಲ ದೋಷಕೊಂಡದಿ ನೂಕ್ವ ಕಾಸಿನಾಸ್ಹೋಗಿಲ್ಲ ದಾಸಜನ ವ್ಯಾಸಂಗ ಕನಸಿನೊಳಗಿಲ್ಲ 1 ಸತಿಮೋಹ ಕಡಿದಿಲ್ಲ ಸುತರಾಸೆ ಬಿಟ್ಟಿಲ್ಲ ಅತಿಭ್ರಮೆ ಸುಟ್ಟಿಲ್ಲ ಹಿತಚಿಂತನಿಲ್ಲ ಸ್ಮøತಿವಾಕ್ಯ ಅರಿತಿಲ್ಲ ಅತ್ಹಿತಪಥಗೊತ್ತಿಲ್ಲ ಗತಿಮೋಕ್ಷ ಕೊಡುವಂಥ ಪವಿತ್ರರೊಲಿಮಿಲ್ಲ 2 ಹಮ್ಮು ದೂರಾಗಿಲ್ಲ ಹೆಮ್ಮೆಯನು ತುಳಿದಿಲ್ಲ ಬ್ರಹ್ಮತ್ವ ತಿಳಿದಿಲ್ಲ ಚುಮ್ಮನದಳಿಕಿಲ್ಲ ಕರ್ಮ ತುಸು ತೊಳೆದಿಲ್ಲ ಧರ್ಮಗುಣ ಹೊಳಪಿಲ್ಲ ನಿರ್ಮಲಾನಂದ ಪದವಿ ಮರ್ಮ ಗುರುತಿಲ್ಲ 3 ಸತ್ಯಸನ್ಮಾರ್ಗವಿಲ್ಲ ಭೃತ್ಯನಾಗಿ ನಡೆದಿಲ್ಲ ಉತ್ತಮರೊಳಾಡಿಲ್ಲ ಮತ್ರ್ಯಗುಣ ತೊಡೆದಿಲ್ಲ ನಿತ್ಯಸುಖ ದೊರೆವಂಥ ಸತ್ಸೇವೆಯಿಲ್ಲ4 ಮೂರಾರು ಕೆಡಿಸಿಲ್ಲ ಈರೈದು ತರಿಸಿಲ್ಲ ಆರೆರಡು ಮುರಿದಿಲ್ಲ ತಾರತಮ್ಯವಿಲ್ಲ ಸಾರಮೋಕ್ಷದೀಪ ಧೀರ ಶ್ರೀರಾಮನಡಿ ಗಂ ಭೀರ ದಾಸತ್ವ ಸವಿಸಾರ ಕಂಡಿಲ್ಲ 5
--------------
ರಾಮದಾಸರು
ಉದಯದಲೆದ್ದು ಶ್ರೀಹರಿಯ ನಾಮಂಗಳನು | ವದನದಿಂದುಚ್ಚರಿಸಿ ಪಾಡುವ ನರರು ದುರಿ | ಮುದದಿಸದಮಲಾನಂದ ಸುಖವ ಪ ಕೃಷ್ಣ ಕಮಲೇಶ ಕಂಜಾಕ್ಷ ಕರುಣಾಬ್ಧಿ ಶ್ರೀ | ವಿಷ್ಣು ವಿರಂಚಿಪಿತ ವಿಮಲ ವಿಶ್ವೇಶ ಭ್ರಾ | ತುಷ್ಣಿಕರ ಕೋಟಿತೇಜಾ || ವೃಷ್ಣಿ ಕುಲತಿಲಕ ವೃಂದಾವನ ವಿಹಾರಿ ಗೃಹ | ಜಿಷ್ಣು ಸುರಸೇವೆ ಸಜ್ಜನ ಪ್ರಿಯ ಸರ್ವೇಶನ | ಅಭಿಮಾನಿ ಎಂದು1 ಪರಮ ಪುರುಷೋತ್ತಮ ಪರಂಧಾಮ ಪರಬ್ರಹ್ಮ | ಪರಮಾತ್ಮ ಪರಂಜ್ಯೋತಿ ಪರತರಾನಂದ ಗುಣ ಪರಿಪೂರ್ಣ | ಪದ್ಮನಾಭ | ಮುರಮಥನ ಮದನಮೋಹನ ಮುರಲಿಲೋಲ ಮಧು | ಹರಹಲಾಯುಧ ಹಯವದನ ಸ್ಮರಹರಾರ್ಚಿತ | ಚರಣ ಸಚರಾಚರ ವ್ಯಾಪ್ತ ಚಿದ್ವನರೂಪ ಚಾರುಚರಿತ ಚಲರದಹಿತನೆಂದು 2 ಕಾಮಜಿತರೂಪ ಕೌಸ್ತುಭಧಾರಿ ತ್ರಿ | ಧಾಮ ತ್ರಿವಿಕ್ರಮ ತ್ರಿಕಾಲಙ್ಞ ತ್ರಿಜಗನುತ | ಹರಣ || ಶುಭ | ನಾಮ ನಾರದ ಪ್ರಿಯ ನಾರಾಯಣ ಜನಕ | ಕಾಮಪೂರಿತನೆಂದ 3 ಅನಿರುದ್ಧ ಧೋ ಕ್ಷಜಾಕ್ಷರತೀತಕ್ಷಯ ಗದಾಂ | ಪವನಜ ಪ್ರಿಯ ನರಕಾಂತಕಾ | ಗಜಗತಿಪ್ರದ ಗರುಡಗಮನ ಗೋವಿಂದ ಗೊ | ವ್ರಜಪಾಲ ವನಮಾಲಿ ವಸುದೇವಸುತ ಶಾರಂಗಿ | ಕುಜಹರ ಕಿರೀಟಧರ ಜಂಭಾರಿಧೃತ ಚತುರ್ಭುಜ ಭುವನ ಭರಿತನೆಂದು4 ಶ್ರೀರಂಗ ಮುನಿಸಂಗ ಸುರತುಂಗ ಗೋಪಾಂಗ | ನಾರಿಮಣಿ ನೀಲಾಂಗ ಕಾಳಿಂಗ ಮದಭಂಗ | ಸಹಕಾರನೆಂದು | ನೂರೆಂಟು ನಾಮಾವಳಿಯ ರತ್ನಮಾಲಿಕೆಯ | ನಾರುಧರಿಸುವರವರ ಇಷ್ಟಾರ್ಥಗಳ ಕೊಟ್ಟು | ಸಹಕಾರ ನಿಜಪದವಿತ್ತು 5
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಎಂದು ಕಾಣ್ವೆನೊ ಇಂದಿರೇಶನ ದಿವ್ಯಚರಣ ಎಂದು ಕಾಣ್ವೆನು ಪ ಎಂದು ಕಂಡಾನಂದಿಸುವೆನು ಮಂದರೋದ್ಧರ ಸಿಂಧುಶಾಯಿಯ ಸುಂದರ ಪಾದಾರವಿದಂಗಳನು ನಿಂದು ಮನದಣಿ ನೇತ್ರದಿಂದ ಅ.ಪ ದನುಜಾರಿಯ ಘನಮಹಿಮೆ ಜನಕಜೆಯ ಪ್ರಾಣಪ್ರಿಯನ ಮಿನುಗುವ ದಿನಮಣಿಕೋಟಿತೇಜೋಮಯನ ಘನಕೋಮಲ ನಿಜರೂಪ ಕಣ್ಣಿಲಿಂ ನೋಡ್ಹಿಗ್ಗುವ ದಿನ 1 ಕರಿಯ ಕಾಯ್ದನ ಕರುಣದಿಂದ ತರುಣಿಗ್ವಂದನ ಶರಣೆನುತ ಮರೆಬಿದ್ದವಗೆ ಸ್ಥಿರಪಟ್ಟವ ಕರುಣಿಸಿದನ ಕಾಲ 2 ಪಕ್ಷಿಗಮನನ ಲಕ್ಷ್ಮೀನಾಥ ಸಹಸ್ರಾಕ್ಷಶಯನನ ಲಕ್ಷವಿಟ್ಟು ಭಕ್ತರನ್ನು ರಕ್ಷಿಸಿ ಭಕ್ತವತ್ಸಲನೆಂಬ ನೋಡುವ ಪದವಿ 3
--------------
ರಾಮದಾಸರು
ಎಂದು ನಿನ್ನ ದಯವು ಆಗೋದೋ ಇಂದಿರೇಶ ದುರಿತ ಹಿಂದಕ್ಕ್ಹೋಗೋದೊ ಮಂದಬುದ್ಧಿಯಿಂದ ನಾಲಿಗೆ ಹಿಂದೆ ಮುಂದೆ ನೋಡುತಿಹುದು ಸಂದೇಹ ಬಿಟ್ಟು ಗೋವಿಂದನ್ನ ನೆನೆಯಲಿಕ್ಕೆ ಪ ಹರಿಯ ತನಯ ಹರಿಯು ಹರಿಯೆಂದು ಒರೆಯುತಿರಲು ಗಿರಿಯನ್ಹತ್ತಿಸಿ ಉರಿಗೆ ಕೆಡುಹಿದ ಕರುಣವಿಲ್ಲದ ಹಿರಣ್ಯಕನು ಪರಮ ಬಾಧೆ ಬಡಿಸುತಿರಲು ಕರೆಯೆ ಕಂಬದಿ ಬಂದು ನರ- ಹರಿಯ ನಾಮ ಕಾಯ್ತು ಅವನ 1 ಕಂತುಪಿತನೆ ನಿನ್ನ ಭಜಿಸದೆ ದ್ವಿಜನು ಕೆಟ್ಟು ಅಂತ್ಯಜ ಸ್ತ್ರೀಯಳ ಕೂಡಿ ಮೆರೆಯಲು ಅಂತ್ಯಕಾಲದಲ್ಲಿ ಏಕಾಂತದಿಂದ ಮಗನ ಕರೆಯೆ ಕಂತುನಯ್ಯ ನಿನ್ನ ನಾಮ ಎಂಥಗತಿಯ ಕೊಟ್ಟಿತವಗೆ2 ದುಷ್ಟಪತ್ನಿ ನುಡಿಗೆ ಉತ್ತಾನಪಾದ ತನ್ನ ಪುತ್ರನಿಂದ ರಹಿತನಾಗಲು ಅಚ್ಚುತನ ಧ್ಯಾನದಲಾಸಕ್ತನಾಗೆ ಉಗ್ರತಪಕೆ ಮೆಚ್ಚಿಕೊಟ್ಟ ನಮ್ಮ ಸ್ವಾಮಿ ಹೆಚ್ಚಿನ ಲೋಕ ಪದವಿ ಧ್ರುವಗೆ 3 ಬಂದು ಭರದಿ ಮಡುವ ಕಲಕುವೋ ಮದಡಗಜವ ಕಂಡು ಮಕರಿ ಕಾಲು ಹಿಡಿಯಲು ಬಂಧುಗಳಿಂದ ರಹಿತವಾಗಿ ಒಂದು ಸಾವಿರ್ವರುಷ ಬಾಳಲು ಇಂದಿರೇಶ ನಿನ್ನ ಸ್ಮರಣೆಯಿಂದ ಶಾಪ ವಿಮೋಚಿತನಾದ 4 ಸೃಷ್ಟಿಗಧಿಕ ನಿನ್ನ ದಯವಿರೆ ಪಾಂಡುಸುತರ ಪಟ್ಟದ ರಾಣಿ ಸಭೆಗೆ ಎಳೆಯಲು ವಸ್ತ್ರಹರಣ ಕಾಲದಲ್ಲಿ ಭಕ್ತಿಯಲ್ಲಿ ಭೀಮೇಶ- ಕೃಷ್ಣನ ಮುಟ್ಟಿ ಭಜಿಸೆ ಕೃಷ್ಣೆಗಾಕ್ಷಣ ತೃಪ್ತನಾಗಿ ಕೊಟ್ಟೆಯೊ ವಸನ 5
--------------
ಹರಪನಹಳ್ಳಿಭೀಮವ್ವ
ಎನಗಿನ್ಯಾತರ ಹಂಗೇನು | ಘನ ಗುರು ತಾನಾದ ಶ್ರಯಧೇನು ಪ ಸುರಲೋಕ ಪದವಿಯ ಸುಖದಿಚ್ಛೆಯಾತಕ | ಪರಗತಿ ದಾಯಕ ದೊರಕಿರಲಿಕ್ಕೆ 1 ರಿದ್ದಿ ಶಿದ್ದಿಗಳೆಂಬ ಮಾತಿನ ಗೊಡವಿಲ್ಲಾ | ಪಾದ ಕಮಲಾ 2 ಹಂಬಲಿಸೆನು ಯೋಗ ಭೋಗ ಮುಕ್ತಿಯ ನಾಲಕು | ಅಂಬುಜಾಕ್ಷನ ಸೇವೆಲಿರುವುದೇ ಸಾಕು 3 ತಂದೆ ಮಹೀಪತಿ ಪ್ರಭು ದಯದಿಂದಲಿ | ಕಂದಗ ವಿಶ್ರಾಂತಿ ಇದಿರಿಟ್ಟಿರಲಿ 4
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಎನ್ನ ಸಲಹೋ ಚರಣವನ್ನು ದೋರಿ ಪರಮ| ನಿನ್ನ ಕಿಂಕರನೆಂದು ಘನ್ನದಯವನು ಬೀರಿ ಎನ್ನಾ ಪ ಶರಣ ಜನ ಮಾನ ರಕ್ಷಕನೇ ವರಕಮಲ ಕರಕಮಲ ಪದವಿಮಲ ಮಹಿಮನೇ ಸಕಲ ಗುಣಧಾಮ ಘನಶ್ಯಾಮ ಸುರ ರಿಪು ಮಥನ| ಗೋಕುಲರಿ ಸೋದರಾನಂತ ಗುಣಾ ಶ್ರೀ ಹರಿ ಭಕ್ತರ ವಸರಕೊದಗುವೆ ನೀ ಪರೋಪರಿ| ಸುಕಲ್ಪತರು ದನುಜ ಕುಲಸಂಹಾರ ಸರ್ವದುರಿತ ನಿವಾರಾ 1 ಅಖಿಳ ಶೃತಿ ಸ್ಮøತಿ ನಿಕರಲಿಂದ ನುತಿಸಿಕೊಂಬೆ| ವಿಕಸಿತನುಪಮ ವದನಬ್ಜ ಕುಲ ಅಬ್ಜರವಿ ಪ್ರಕಟದೊಳೊದಗಿ ಬಂದೆ ಸರಸೀರುಹ ನಯನ ಜಗದ ತಂದೇ| ಸಿರಿನಂದ ನಂದನ ಪರಮುದಾರೇ| ಸುರವೃಂದ ರಕ್ಷಕ ವರ ಮುರಾರೇ 2 ಶರಣಾಗತ ಜನರ ಪಾಲಾ| ಸಿರಿ ಉರಗಾರಿಗಮನ ಸೂರಾರಿ ಸಿಬಿಕುಲ| ಶೌರಿ ನರಸಹಕಾರಿ ಗಿರಿಧರನೇ| ಕರುಣಾಕರ ತ್ರಯದಿ ಸ್ಮರಣ ಮಾಳ್ಪರ ಭಯವ| ಹರಣ ಶರಣ ಕೌಸ್ತುಭಾಭರಣ ನೀಲವರಣಾನಂದ3 ವರ ಶ್ರೀರಮಣ ದೇವ ಜಗಜೀವ ಮಹಿಪತಿ ನಂದ ನೊಡಿಯ| ಪರಮಾನಂದ ಜೀವದೊರಿಯೇ| ಭವ ವಿನುತ ಮತಿ ಚರಿತಾ ಸಿಂಧೂರ| ನವನೀತ ಚೋರ ಜಗದೀಶ ಹರಿಯೇ4
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಎಷ್ಟು ಕೂಗಲು ದಯ | ಪುಟ್ಟಲಿಲ್ಲವೊ ನಿನಗೆ ಬೆಟ್ಟದೊಡೆಯ ಹರಿಯೆ ಪ. ಸಿಟ್ಟೇಕೆ ಎನ್ನೊಳು ಕೃಷ್ಣಮೂರುತಿ ನಿನಗೆ ಬಿಟ್ಟರೆ ನೀ ಎನ್ನ ಸೃಷ್ಟಿಯೊಳಾರುಂಟೊ ಅ.ಪ. ಪರಮ ಪಾತಕಿಯೆಂದು | ತೊರೆದರೆ ನೀ ಎನ್ನ ಮೊರೆಬೀಳಲಿನ್ನಾರಿಗೆ ಕರುಣಾಮೂರುತಿ ಎಂಬೊ ಬಿರುದು ಪೊತ್ತಿಲ್ಲವೆ ಸರಿಯೆ ನಿನಗಿದು ಕೊರಗಿಸುವುದು ಜರಿದು ಬಳಲುವೆ ಧರೆಯೊಳೀಗ ನಾ ಸುರರ ರಕ್ಷಕ ಪರಮಪಾವನ ಕರವ ಮುಗಿವೆ ದರುಶನವ ನೀಡೊ 1 ನೀನಲ್ಲದೆ ಇನ್ನು | ನಾನಾರ ಭಜಿಸಲೊ ಗಾನವಿಲೋಲ ಹರಿ ಕಾನನದೊಳು ಕಣ್ಣು ಕಾಣದಂತಾಗಿದೆ ಧ್ಯಾನಕೆ ಸಿಲುಕದೆ ನೀನೆನ್ನ ಕಾಡುವೆ ಮಾನ ಪ್ರಾಣ ಶರೀರ ನಿನ್ನದೊ ನಾನು ಅನ್ಯರ ಭಜಿಸಲಾರೆನೊ ಹೀನಬುದ್ಧಿಯ ಬಿಡಿಸಿ ಗುರುಗಳ ಧ್ಯಾನವೆನಗಿತ್ತು ನೀನು ಕಾಯೊ 2 ಅನ್ನಪಾನವ ಬಿಟ್ಟು | ನಿನ್ನನು ಸ್ತುತಿಸಲು ಇನ್ನು ಕರುಣವಿಲ್ಲವೆ ಇನ್ನು ಸೈರಿಸಲಾರೆ ಘನ್ನ ಮಹಿಮನೆ ದುಃಖ ನಿನ್ನ ಮನಸು ಕರಗಲಿನ್ನೇನಗೈಯ್ಯಲೊ ಎನ್ನ ಯತ್ನವು ವ್ಯರ್ಥವಾಯಿತು ಇನ್ನು ನೀ ದಯೆಗೆಯ್ಯಬೇಕೊ ಮುನ್ನ ಮಾಡಿದ ತಪ್ಪನೆಣಿಸದೆ ಎನ್ನ ದೃಷ್ಟಿಗೆ ನಿನ್ನ ತೋರೊ 3 ಸುತನ ಮೊರೆಯನೆ ಕೇಳಿ | ಹಿತದಿ ವೇದವನಿತ್ತೆ ಶರಧಿ ಅಮೃತ ಸುರರಿಗಿತ್ತೆ ಕ್ಷಿತಿಯ ಬಾಧೆಯ ಬಿಡಿಸಿ ಸುತನ ಬಾಧಿಸೊವೊನ ಹತಮಾಡಿ ಇಂದ್ರಗೆ ಗತಿಸಿದ ಪದವಿತ್ತೆ ಕ್ಷಿತಿಯನಾಳ್ವರ ಹತವಗೈಸಿದೆ ಕ್ಷಿತಿಸುತೆಯ ಪ್ರೇಮದಲಿ ತಂದೆ ಹಿತದಿ ಪಾಂಡವ ಸುತರ ಕಾಯ್ದೆ ವ್ರತವ ಕೆಡಿಸಿ ಕಲಿಹತವಗೈದೆ 4 ಕಂತು ಜನಕನೆ ನಿನಗೆ ನ್ನಂತರ ತಿಳಿಯದೇನೋ ಸಂತತ ಗೋಪಾಲಕೃಷ್ಣವಿಠ್ಠಲ ನಿನ್ನ ಶಾಂತರೂಪವ ಎನ್ನ ಅಂತರಂಗದಿ ತೋರೊ ಚಿಂತಿತಾರ್ಥ ಪಂಥಗಾರನೆ ಎಂತು ದಿನಗಳು ಸಂದು ಹೋದುವೊ ಸಂತತಾನಂದನಂತಶಯನ 5
--------------
ಅಂಬಾಬಾಯಿ