ಒಟ್ಟು 43 ಕಡೆಗಳಲ್ಲಿ , 23 ದಾಸರು , 43 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಶ್ರೀ ಪತಿಯೆ ನಿನ್ನ ದಯವೆಂತಾಹದೋ ಪಾಪಕರ್ಮವ ಮಾಡಿ ಜೀವಿಸುವೆ ನಿರುತ ಪ ಬಾಲತನವನು ಬಾಲಲೀಲೆಯಿಂದಲಿ ಕಳೆದೆ ಕೀಳು ಜನರೊಡನೆ ಸ್ನೇಹವ ಬೆರಸಿದೆ ಹಾಳು ಹರಟೆಗೆ ಹೊತ್ತು ಸಾಲದೋಯಿತು ಯನಗೆ ಶ್ರೀ ಲೋಲ ನಿನ್ನಡಿಗೆ ದೂರಾದೆ ನಾನು 1 ಬುದ್ಧಿ ಪೂರ್ವಕದಿ ಸದ್ವಿದ್ಯೆಯನು ಕಲಿಯದಲೆ ಶುದ್ಧ ತಾಮಸ ವಿದ್ಯದೊಳು ರಮಿಸಿದೆ ಮಧ್ವಶಾಸ್ತ್ರದಸಾರವನ್ನು ತಿಳಿಯದೆ ನಾನು ಕದ್ದಕಳ್ಳನ ತೆರದಿ ಬಾಳಿದೆನು ಬರಿದೆ 2 ಪ್ರಾಯತನವೆ ವಿಷ ಪ್ರಾಯವಾಯಿತು ಎನಗೆ ಕಾಯಜನ ಉಪಟಳದಿ ಮತ್ತನಾದೆ ತೋಯಜಾಕ್ಷಿಯರ ದುರ್ಮಾಯ ಜಾಲಕೆ ಸಿಲುಕಿ ನೋಯಿಸಿದೆ ನಿಜ ಸತಿಯ ಪರಿಪರಿಯಲಿಂದ 3 ಮದನ ಜನಕನೆ ನಿನ್ನ ಮಧುರನಾಮವ ಮರೆದು ಸುದತಿಯರ ಅಧರಾಮೃತಕೆ ಬೆರೆದು ವಿಧಿಕುಲಾಚರಣೆ ಜರೆದ್ಹÀÀಗಲಿರುಳು ನಾರಿಯರ ವದನವನು ನೋಡಿ ಮೋದಿಪನರಾಧಮನೊಳ್ 4 ಉದರ ಗೋಸುಗ ಪರರ ಹೃದಯ ದ್ರವಿಸುವ ತೆರದಿ ವಿಧ - ವಿಧದಿ, ಆತ್ಮ ಸ್ತೊತ್ರವನೆ ಪೊಗಳಿ ಸದ-ಸದ್ವಿ ವೇಕವನು ತೊರೆದನ್ಯರ್ಹಳಿದು ಬಲು ಚದುರ ನಾನೆಂಧೇಳಿ ಮೋಸಗೊಳಿಸುತ ಜನರ 5 ಸಿರಿ ಚರಣಕ್ಕೆ ಶಿರ ಬಾಗ ದ್ಹರಿ ಭಕುತರಿಗೆ ವಿನಯದಿಂದೆರಗದೆ ನಿರುತದಲಿ ನಾಚಿಕಿಲ್ಲದಲೆ ಭೂದನುಜಯ ವಾನರಿಗೆ ಕರಮುಗಿದು ಜೀವಿಪÀಖೂಳ ಮನುಜನೊಳು 6 ಸತ್ಯಧರ್ಮವÀ ತ್ಯಜಿಸಿ ಮತ್ತೆಯುತ್ತಮರಜಾ - ನ್ನತ್ಯವನು ಸಹಿಸದಲೆ ತತ್ತಳಿಸುವೆ ಪೆತ್ತವರ ಸೇವಿಸದೇ ಮಿಥ್ಯವನೆ ಬೊಗಳಿದು - ಷ್ಕøತ್ಯದಿಂಬಾಳ್ವ ಉನ್ಮತ್ತನರ ಪಶುವಿನೊಳು 7 ಹರಿಗೆರಗದಿರುವÀÀ ಶಿರ ಹರಿಯ ಸ್ಮರಿಸದ ಜಿಂಹೆ ಹರಿವಾರ್ತೆಯಾಲಿಸದ ಕರ್ಣಂಗಳು ಕರ ಹರಿಯ ನೋಡದ ಚಕ್ಷು ಸರುವ ಪರಿಯ ಪವಿತ್ರದೇಹಧರಿಸಿದ ನರಗೆ 8 ವಿತ್ತ ಪಹರಿಸಿ ಪರರ ನಿಂದಿಸಿ ಪರರ ಬಲುವಂಚಿಸಿ ಪರಮೇಷ್ಟಿ ಜನಕನೆ ಪರತರ ಪರಂಜ್ಯೋತಿ ಪರದೈವನೆಂದರಿಯದಿರುವ ಪಾಮರನಿಗೆ 9 ನಾಮಾಡದಿಹ ಪಾಪ ವೀಮಹಿಯೊಳೊಂದಿಲ್ಲ ಸೀಮೆಗಾಣಲು ರವಿಜನಿಗೆ ಸಾಧ್ಯವಿಲ್ಲ ಆ ಮಹಾನರಕÀಂಗಳೆನಗೆÀ ತಕ್ಕವು ಅಲ್ಲ ಸ್ವಾಮಿ ನೀಪೊರೆಯದಿರೆ ಯನಗಾರು ಗತಿಯಿಲ್ಲ 10 ಏನಾದರೊಳಿತೆ ವರದೇಶ ವಿಠಲ ನಿನ್ನಾ ಙÁ್ಞನುಸಾರದಿ ಕರ್ಮಗಳ ಮಾಡಿದೆ ಧೀನರಕ್ಷಕನೆಂಬ ಬಿರಿದು ನಿಜ ವಿದ್ದರಾ - ದೀನನಾದವನನುದ್ಧರಿಸಲರಿಯಾ 11
--------------
ವರದೇಶವಿಠಲ
ಶ್ರೀಪಾದರಾಯ ನಿಮ್ಮ | ಆಪಾದ ಮೌಳಿ ಭಜಿಪಾಪಾಪಿಯಾದರು ಅವ | ಪಾಪವನೆಲ್ಲ ಕಳೆವಾ ಪ ಧೃತ - ಶ್ರೀಪತಿಯೊಲಿಮೆಯ | ಪ್ರಾಪಿಸುತೆನ್ನನುವ್ಯಾಪುತ ದರ್ಶಿಯ ಮಾಡೊ ಮಹಾತ್ಮಾ ಅ.ಪ. ವಾರಿಧಿ ಭವ ತರಣ ||ಕೀರುತಿ ತವ ಸ್ಮರಣ | ಬಾರಿಬಾರಿಗೆ ಶ್ರವಣಸೂರೆಗೊಂಬುವ ನರನ | ಸಾರಿ ಉದ್ಧರಿಪೆ ಅವನಾ ||ಧೃತ - ವಾರವಾರಕೆ ನಿನ ಪರಿವಾರದಲಿಡುಸೂರಿ ಸುವರ್ಣರ ಕರಜ ಉದಾರಾ 1 ಮೋದ ಮಾಧವ ಪ್ರಿಯ ನಿನಪಾದವ ನಂಬಿದೆ | ಬುಧ ಜನ ವಂದ್ಯಾ 2 ಚಾರು ಚರಿತೆಯ ನಾನಾಪರಿಪರಿಯಲಿ ಗಾನಾ | ವಿರಚಿಸಿ ಜನರ ಅಜ್ಞಾನಾ ||ಹರಿಸಿ ಅವರಿಗೆ ಜ್ಞಾನಾ |ಭರಣ ಪಾಲಿಸಿ ಕರುಣಬೀರಿದೆ ಸುಸಾಧನ | ಗುರು ಪರಮ ಪಾವನಾ ||ಧೃತ - ಗುರುಗೋವಿಂದ ವಿಠಲನ | ಚರಣವ ಭಜಿಸುವವರಧೃವ ಮೂರುತಿ | ನಿರುತದಿ ಕೀರ್ತಿ 3
--------------
ಗುರುಗೋವಿಂದವಿಠಲರು
ಶ್ರೀರಂಗಶಾಯಿ ವಿಠಲ ಪೊರೆಯ ಬೇಕಿವಳ ಪ ಭವ ಶರಧಿ ದಾಂಟಿಸುತ ಅ.ಪ. ಕಾರಾಣಾತ್ಮಕ ನಿನ್ನ | ಗುಣರೂಪ ಕ್ರಿಯೆಗಳಧಾರಣೆಗಳಿಲ್ಲದಲೆ | ಧ್ಯಾನರತಳಾಗಿಮೂರಾರು ದ್ವಾರಗಳ | ಬಂಧಿಸುತ ಯೋಗದಲಿಆರಾಧ್ಯ ಮೂರ್ತಿಯನೆ | ಮರೆತ ಯೋಗಿಣಿಯ 1 ತೈಜಸ ಸು | ವ್ಯಕ್ತ ಅಂಕಿತವಾ 2 ತಾರತಮ್ಯ ಜ್ಞಾನ | ಮೂರೆರಡು ಭೇದಗಳಸಾರತತ್ವಗಳರುಹಿ | ಪೊರೆಯ ಬೇಕಿವಳ |ಕಾರುಣಿಕ ಕಂಕಣಾ | ಕಾರ ಚಕ್ರಾಕೃತಿಯತೋರಿರುವೆ ತನ್ಮಹಿಮೆ | ಅರಿಯ ಕಾತುರಳಾ 3 ಸಿರಿ ಸತ್ಯ ನರೆಯಣನೆಪರಿಪರಿಯಲಿಂದಿವಳ | ಪೊರೆಯ ಬೇಕೋಗರುಡಗಮನನೆ ದೇವ | ಸರ್ವಜ್ಞ ನೀನಿರಲುಒರೆವೆನೆಂಬಪರಾಧ | ಮರೆದು ಪಾಲಿಪುದೋ 4 ಅದ್ವೈತ ಉಪದೇಶ | ತಿದ್ದಿನಿನ ಪದದಲ್ಲಿಶುದ್ಧ ಭಕ್ತಿಜ್ಞಾನ | ವೃದ್ಧಿಯನೆ ಗೈಸೀಮಧ್ವಾಂತರಾತ್ಮ ಗುರು | ಗೋವಿಂದ ವಿಠ್ಠಲನೆಅದ್ವಿತೀಯನು ಯೆಂಬ | ಬುದ್ಧಿ ಸ್ಥಿರ ಮಾಡೋ 5
--------------
ಗುರುಗೋವಿಂದವಿಠಲರು
ಸರ್ವಾಧಾರ ವಿಠಲ | ಶರ್ವ ನೊಡೆಯ ಪ ಸರ್ವವಿಧದಲ್ಲಿವನ | ಪೊರೆಯ ಬೇಕಯ್ಯ ಅ.ಪ. ಮಧ್ವಸಿದ್ದಾಂತದಲಿ | ಅಂಕುರವ ಪುಟ್ಟಿಹುದುಶುದ್ಧಭಾವದಲದನ | ವೃದ್ಧಿಗೈಸುತಲೀಮಧ್ವಸನ್ಮಾರ್ಗದಲಿ | ಪದ್ಮನಾಭನ ಪಾದಪದ್ಮವನೆ ಭಜಿಪಂಥ | ಅಧ್ಯಾನ ತೋರೋ 1 ಲೇಸು ಸಾಧನ ಹರಿಯ | ದಾಸ್ಯದಲಿ ಮನವಿರಿಸಿಆಶೆ ಪೂರೈಸಲ್ಕೆ | ಆಶಿಸುತ್ತಿಹನೋ |ವಸುದೇವಭಿದ ತೈ | ಜಸನ ರೂಪದಲಿ ಉಪದೇಶವಿತ್ತಂತೆ ಉಪ | ದೇಶವಿತ್ತಿಹೆನೋ 2 ಹರಿಗುರು ಸದ್ಭಕ್ತಿ | ವೈರಾಗ್ಯ ವಿಷಯದಲಿಕರುಣಿಸಿ ಪೊರೆಯೊ ಹರಿ | ಮರುತಂತರಾತ್ಮನಿರುತ ಸಜ್ಜನ ಸೇವೆ | ದೊರಕಿಸುತ ಸಾಧನವಪರಿಪರಿಯಲಿಂಗೈಸಿ | ಪೊರೆಯೊ ಸರ್ವೇಶಾ 3 ಕಂಸಾರಿ ಮನಮಾಡಿವಂಶ ಉದ್ದರಿಸಿವಗೆ | ಹಂಸಜನ ವಂದ್ಯಹಂಸೋಪಸನೆ ಮಾಳ್ವ | ಶ್ವಾಸ ಮಾನೀ ವಾಯುಶಂಸನವ ಕೈಗೊಂಡು | ಜೀವರೋದ್ಧಾರೀ 4 ಕ್ಲೇಶಮೋದದಿ ಸಮತೆ | ಲೇಸಾಗಿ ಕೊಟ್ಟಿವಗೆಪೋಷಿಸೋ ಹಯವದನ | ಬಾಸುರಾಂಗ ಹರೀಮೇಶ ಮಧ್ವೇಶ ಉಪ | ದೇಶ ಸಾರ್ಥಕ್ಯವನುಆಶಿಸುವೆ ಕರುಣಿ ಗುರು | ಗೋವಿಂದ ವಿಠಲಾ 5
--------------
ಗುರುಗೋವಿಂದವಿಠಲರು
ಸಿರಿಯು ಬೇಡೆನಗೆ ಈ ಬರಿಯ ವೈಭವದ ಪರಿಯು ಬೇಡವೆನಗೆ ಪ ಪರಿಪರಿಯಲಿ ನಿನ್ನ ಚರಣ ಸೇವೆಯಲಿ ಪರತರ ಸುಖಗಳ ಅರಿವು ಬೇಕಲ್ಲದೆ ಅ.ಪ ಮರೆತೆನೊ ನಿನಗಾಗಿ ಚೆಲುವ ಸತಿಸುತರ ತೊರೆದೆನೋ ಬಹು ವಿಧ ಪ್ರೇಮಪಾಶಗಳ ಬೆರಗಾದೆನೋ ದೇವ ಮರುಕದಿಂದೆನಗೆ ನೀ ವರ ಮಾರ್ಗವ ತೋರೋ ಮುರಳೀಧರನೆ 1 ಮಂದಮತಿಗಳೆನ್ನ ನಿಂದಿಸುತಿರುವುದಾ ನಂದವೇನೋ ನಿನಗೆ ಸುಂದರ ಮೂರುತಿ ಕುಂದಿ ಕುಂದಿದ ಮನ ಮಂದಿರದಲಿ ನಿಲ್ಲೋ ಇಂದಿರಾ ರಮಣನೆ 2 ಎನ್ನ ಕುಂದುಗಳನ್ನು ಮನ್ನಣೆ ಮಾಡಿ ಸಂ ಪನ್ನತೆ ಎನಗೀಯೋ ಘನ್ನ ಮಹಿಮ ಸುಪ್ರಸನ್ನವಿಠ್ಠಲನೇ ನಿನ್ನವನೆನಿಸೆಲೋ ಪನ್ನಗಶಯನನೇ 3
--------------
ವಿದ್ಯಾಪ್ರಸನ್ನತೀರ್ಥರು
161ರಂಗ ಒಲಿದ ದಾಸರಾಯರ - ಪಾದಪದುಮಕಂಗಳಿಂದ ನೋಡಿದಾವರ - ಪಾಪಂಗಳೆಲ್ಲಹಿಂಗಿಪೋಪವಲ್ಲೊ ಸತ್ವರಾ - ಏನು ಪೇಳಲಿವರಾ ಪತುಂಗಮಹಿಮೆ ತೋರಿ ಜನಕೆಮಂಗಳಾವ ಕೊಡುವನಿಂಥಾ ಅ.ಪಪರಮಭಕುತರೆನಿಸಿ ಸತತ-ಹರಿಯ ಮಹಿಮೆತುತಿಸಿಪಾಡುತಾ- ತಮ್ಮ ಮನದಿಹರಿಯ ಮೂರ್ತಿಯನ್ನೇ ನೋಡುತಾ - ಸಾಧುಜನರದುರಿತರಾಶಿ ದೂರಮಾಡುತಾ- ನಿತ್ಯದಲ್ಲಿಹರುಷದಿಂದ ಸ್ತಂಭದೊಳಗೆ -ಇರುವೆವೆಂಬಭಾವಜನಕೆಅರುಹಿ ಜನರ ಈಪ್ಸಿತಾರ್ಥ ಕರೆದು ನೀಡಿ ಮೆರೆವೊರಿಂಥಾ 1ಪರಮತತ್ವ ಸಾರಪುಂಜ - ಹರಿಕಥಾಮೃತಸಾರಹರುಷದಿಂದ ರಚಿಸಿ ಹರಿಯ -ಚರಣಭಜಿಪ ಜನಕೆ ಉಣಿಸಿಪರಮ- ಗೋಪ್ಯ-ಭಾವತಿಳಿಸಿದಾ-ಅರಿಪು ಮಾಡಿರೆಂದು ಪೇಳಿದಾ - ಮೂಢ ಜನಕೆದೊರೆಯದೆಂದು ತಾನು ಪೇಳಿದಾ - ತನ್ನ ಜನಕೆಪರಮಸುಲಭ ತೋರಿ ಮುದದಿಪರಿಪರಿಯಲಿ ಪೊರೆವೊರಿಂಥಾ 2ಧಾತನಾಂಡ - ಮಧ್ಯದಲ್ಲಿ ಜಾತರಾದ ಸ್ವೀಯ ಜನರಮಾತೆ- ಜನಕರಂತೆಅವರಮಾತನಡಸಿಕೊಡುವ ಜಗ -ನ್ನಾಥವಿಠಲನೊಲಿದನೀತಗೆ - ಜಗದಿ ತಾನುನಾಥನಾಮ ಕಾಣೆನೆಂದಿಗೆ - ದಾಸಜನಕೆನಾಥರೆನಿಸಿ ಜಗದಿ ಮಹಾ - ದಾತರಾಗಿ ಸಕಲಭೀಷ್ಠ -ವ್ರಾತಸಲಿಸಿಗುರುಜಗ-ನ್ನಾಥದಾಸವಿಠ್ಠಲ ಪ್ರೀತಿಗೊಳಿಪರಿಂಥಾ 3
--------------
ಗುರುಜಗನ್ನಾಥದಾಸರು
ಕಷ್ಟಪಟ್ಟರೂ ಇಲ್ಲ ಕಳವಳಿಸಿದರಿಲ್ಲಭ್ರಷ್ಟಮಾನವ ಹಣೆಯ ಬರಹವನ್ನದೆ ಇಲ್ಲ ಪಸಿರಿವಂತನ ಸ್ನೇಹಮಾಡಿ ನಡೆದರಿಲ್ಲಪರಿಪರಿಯಲಿ ವಿದ್ಯ ಕಲಿತರಿಲ್ಲನರಿಯ ಬುಧ್ಧಿಯಲಿ ನಡೆದುಕೊಂಡರು ಇಲ್ಲಅರಿಯದೆ ಹಲವ ಹಂಬಲಿಸಿದರಿಲ್ಲ 1ಕೊಂಡೆಗಾರಿಕೆಯನ್ನು ಹೇಳಿ ನಡೆದರಿಲ್ಲಕಂಡಕಂಡವರಿಗೆ ಕೈ ಮುಗಿದರಿಲ್ಲಗಂಡುಗತ್ತರಿಯನ್ನು ಕೊರಳಿಗಿಟ್ಟರು ಇಲ್ಲಚಂಡನಾದರೂ ಇಲ್ಲ ಪರಿಹಾಸ್ಯವಲ್ಲ 2ಕಟ್ಟಾಳು ಕಂಡು ಜಾಣನಾಗಿ ಪುಟ್ಟಿದರಿಲ್ಲಬೆಟ್ಟಗಳನು ಕಿತ್ತಟ್ಟರಿಲ್ಲಸೃಷ್ಟಿಯೊಳು ಪುರಂದರವಿಠಲರಾಯ
--------------
ಪುರಂದರದಾಸರು
ಗುಟ್ಟ ಪೇಳಿದಳೊಂದು ಗುಣು ಗುಣು ಗುಣು ಎಂದು |ಗಟ್ಟಿ ಪೇಳಿದರತ್ತೆ ಬೈಯ್ಯುವಳೆಂದು ಪಪಚ್ಚೆ ಮಂಚದಿ ಬಂದು ಮಲಗಿಕೊಳ್ಳೆಂದು |ನಟ್ಟಿರುಳಲಿ ಬಹೆ ಕೃಷ್ಣ ಕೇಳೆಂದು ಅ.ಪಹದಿನಾರು ಸಾವಿರ ಸುದತಿಯರನು ಸೇರಿ |ಮದನಕೇಳಿದೊಳೆನ್ನ ಮರೆತೆಯಶೌರಿ|ಮದುವೆಯಾದವನೂರೊಳಿಲ್ಲ ಬಿಕಾರಿ |ಮದನತಾಪದಿ ಬೆಂದು ಬಳಲಿ ಬಾಯಾರಿ 1ಗುರುಕುಚವನುನೋಡುಹರುಷ ಮಾತಾಡು |ಮರುಗ ಮಲ್ಲಿಗೆ ಜಾಜಿ ಸರವ ತಂದೀಡೊ |ಕರುಪುರ ವೀಳ್ಯವ ಸವಿದು ನೀನೋಡು|ಪರಿಪರಿಯಲಿ ನಿನ್ನ ಕೃಪೆಯನೀಡಾಡು 2ಚಂದ್ರಗಾವಿಯ ಸೀರೆ ನೆರಿ ಹಿಡಿದುಟ್ಟು |ಚಂದದಿ ಕುಪ್ಪಸ ತೊಟ್ಟು ಜಡೆಬಿಟ್ಟು |ಚಂದನಕುಂಕುಮ ಕಸ್ತೂರಿ ಬೊಟ್ಟು |ಮಂದರಧರ ಗೊೀವಿಂದಗೆ ಚುಂಬನ ಕೊಟ್ಟು 3
--------------
ಗೋವಿಂದದಾಸ
ನಮಸ್ಕಾರ ಮಾಡುವೆನು ಭಾಸ್ಕರನಿಗೆನಮಸ್ಕಾರ ಮಾಡುವೆನುಪನಮಸ್ಕಾರ ಮಾಡುವೆ ಸಮವರ್ತಿ ತಾತಗೆಕುಮುದವಿರೋಧಿಗೆ ಕಮಲಮಿತ್ರನಿಗೆಅ.ಪತಮವೆಂಬ ಯಾಮಿನಿಯ ನಿವಾರಿಸಿದ್ಯುಮಣಿಶೋಭಿಸೆ ಭೂಮಿಯನಮಿಸಿದ ಭಕ್ತರ ದೋಷನಾಶವಗೈದಅಮಿತ ಮಂಗಳದ್ವಯ ಅಯನ ಆದಿತ್ಯಗೆ1ಉರಗರೂ ಗಂಧರ್ವರು ಅಪ್ಸರ ಸ್ತ್ರೀಯರಧರಣಿಸುರರುಯಕ್ಷರುಪರಿಪರಿಯಲಿ ಬಂದು ಸೇವೆಯನೆಸಗಲುಭರದಿಂದ ಬರದಿ ಸಂಚರಿಸುವರ್ಕಗೆ2ಗಾಲಿ ಒಂದರ ರಥದೀ ಬಂಧಿಸಿದಂಥಏಳಶ್ವಗಳ ಮಧ್ಯದೀಕಾಲಿಲ್ಲದರುಣನು ಸಾರಥಿಯಾಗಿರೇಮೂರ್ಲೋಕವನು ಸುತ್ತಿ ಬೆಳಗುವ ತರಣಿಗೆ3ಮಾಸಕ್ಕೆ ಒಂದೊಂದರ ಸಂಖ್ಯೆಯೊಳ್ರಾಶಿ ಚಕ್ರದಿ ಸಂಚಾರದೇಶದಿ ಪ್ರಾಣಿಗಳಾಯುಷ್ಯವ ಸೆಳೆಯುವದೋಷವರ್ಜಿತ ಕಮಳಸಾಕ್ಷಿ ಮಾರ್ತಾಂಡಗೆ4ಹಿರಣ್ಯರೇತಸ್ಸುಭಾನುನವಗ್ರಹಾ-ದ್ಯರೊಳು ಶೋಭಿಸುತೀರ್ಪನುಧರಣಿಗೆ ಲಕ್ಷಯೋಜನ ದೂರ ತೋರುವಹರ ಗೋವಿಂದ ದಾಸನೊಡೆಯ ಪ್ರಭಾಕರಗೆ ನಮಸ್ಕಾರ5xmಟ veಡಿsioಟಿ='1.0' eಟಿಛಿoಜiಟಿg='%SಔUP-ಇಓಅಔಆIಓಉ%'
--------------
ಗೋವಿಂದದಾಸ
ಪರಿಪರಿಯಲಿ ವರ್ಣಿಸುವೆ ಕಳಾನಿಧಿಯಾನರಜನರು ಅರಿತವನ ಸ್ಮರಿಸಿರಯ್ಯಾ ಪಕಾಲುಗಳು ಹದಿನೆಂಟು ತೋಳುಗಳುಹತ್ತು ಕಣ್ಣಾಲಿಗಳು ಇಪ್ಪತ್ತ ಒಂದುಸಾಲಾಗಿ ರಂಜಿಸುವ ಶಿರಸಂಗಳೀರೈದುಮೇಲಾದ ಫಣಿಂಗಳಾರ ಹನ್ನೆರಡುನೀಳವಾಗಿಯೆ ಹೊಳೆವ ಕೋರೆದಾಡೆಗಳೆರಡುಗಾಳಿಯನು ಭೇದಿಸುವ ಬಾಲ ನಾಲ್ಕುಪೇಳಲೇನಿದನು ಕೇಳ್ ನಾಲಿಗೆಗಳ್ಹನ್ನೊಂದುಮೂರ್ಲೋಕದೊಡೆಯನ ಪೀಠದಲಿರಂಜಿಸುವ ದೇಹವೇಳು 1ಧರಣಿಯೊಳಗಿನ ಪರಿವಾರದವರಿಗೆಲ್ಲಪರಸ್ಪರನೆ ವೈರತ್ವ ಬೆಳೆಸಿಕೊಂಡಿಹುದೂಉರಗಮೂಷಕನಿಂಗೆ ಕರಿಮುಖಗೆ ಕೇಸರಿಗೆಗಿರಿಜೆ ಭಾಗೀರಥಿಗೆ ಉರಿನಯನ ಚಂದ್ರನಿಗೆಎತ್ತು ವ್ಯಾಘ್ರನ ತೊಗಲಗೆ ಮರೆಯ ಹೊಕ್ಕರೆ ಕಾಯ್ವನರಕೇಸರಿಯ ತೆರದಿ ಕರುಣಾಳು ಭಕ್ತವತ್ಸಲ ದೇವನಾ 2ಬಲಿದಾಗ್ನಿಸಖಸರ್ವ ನಿಳಯದೀವಿಗೆವೈರಿಹಲವು ನಾಸಿಕದ ಸಂಚಾರಿಯಾ ಹಾರದಲಿಬೆಳೆದ ದೇಹದ ಮೇಲೆ ಮಲಗಿ ನಿದ್ರೆಯಗೈವನಳಿನನಿಳಯಳ ರಮಣ ಜಲಜಾಕ್ಷಗೋವಿಂದನನುಜೆಯರಸ ಹಲವುಮಾತೇನು ಕೇಳ್ ತಲೆ ಮೇಲೊಂದುಕೊಂಬಿನ ಋಷಿಯ ಪಿತನ ಚರಣಕೆಕೆೈಂiÀ್ಯು ಮುಗಿದು ತಲೆಬಾಗಿ 3
--------------
ಗೋವಿಂದದಾಸ
ಬೇಡುವೆ ನಿನ್ನನು ಜೋಡಿಸಿ ಕರಗಳ |ಕೂಡಲೆ ವರಗಳ | ನೀಡುವದೀಶನೆ ಪನಂದನ ಕಂದ ಮುಕುಂದ ಮುರಾರೆ |ಸುಂದರ ಶುಭಕರ | ಮಂದರೋದ್ಧಾರ 1ಶಂಕರ ಹಿತನೇ ಪಂಕಜನಾಭನೇ |ವೆಂಕಟರಮಣನೆ | ಶಂಖಚಕ್ರಧರನೇ 2ಸುರನರಕಿನ್ನರ| ತುಂಬುರ ನಾರದರ್ |ಪರಿಪರಿಯಲಿ ನಿನ್ನ | ಸ್ಮರಿಸುತಲಿಹರೂ 3ಅಸುರರ ಬಾಧೆಯೊಳ್ | ಸುರರೆಲ್ಲ ಭಜಿಸಲು |ಕುಶಲದಿ ಭಕ್ತರ|ಪೊರೆದೆ | ಗೋವಿಂದನೇ 4
--------------
ಗೋವಿಂದದಾಸ
ರಂಗನಾಯಕಸ್ವಾಮಿ ರಾಜೀವಲೋಚನ ಬೆಳಗಾಯಿತೇಳೆನ್ನುತಅಂಗನೆ ಲಕುಮಿ ತಾ ಪತಿಯನೆಬ್ಬಿಸಿದಳುಶೃಂಗಾರದ ನಿದ್ರೆ ಸಾಕೆನ್ನುತಪ.ಪಕ್ಷಿರಾಜನು ಬಂದು ಬಾಗಿಲೊಳಗೆನಿಂದುಅಕ್ಷಿ ತೆರೆದು ಬೇಗ ಈಕ್ಷಿಸೆಂಬ ||ಪಕ್ಷಿಜಾತಿಗಳೆಲ್ಲ ಚಿಲಿಪಿಲಿಗುಟ್ಟುತಸೂಕ್ಷ್ಮದಲಿ ನಿನ್ನನು ಸ್ಮರಿಸುವುವೊ ಕೃಷ್ಣ 1ಸನಕ - ಸನಂದನ - ಸನತ್ಸುಜಾತರು ಬಂದುವಿನಯದಿ ಕೈಮುಗಿದು ಓಲೈಪರು ||ಘನಶುಕ - ಶೌನಕ - ವ್ಯಾಸ ವಾಲ್ಮೀಕರುನೆನೆದು ಕೊಂಡಾಡುವರೊ ಹರಿಯೇ 2ಸುರರು ಕಿನ್ನರರು ಕಿಂಪುರುಷರು ಉರಗರುಪರಿಪರಿಯಲಿ ನಿನ್ನ ಸ್ಮರಿಸುವರು ||ಅರುಣನು ಬಂದುದಯಾಚಲದಲ್ಲಿ ನಿಂದಕಿರಣ ತೋರುವ ಭಾಸ್ಕರನು ಶ್ರೀ ಹರಿಯೇ 3ಪದುಮನಾಭನೆ ನಿನ್ನ ನಾಮಾಮೃತವನುಪದುಮಾಕ್ಷಿಯರು ತಮ್ಮ ಮನೆಯೊಳಗೆ ||ಉದಯದೊಳೆದ್ದು ಸವಿದಾಡುತ ಪಾಡುತದಧಿಯ ಕಡೆವರೇಳು ಮಧುಸೂದನ ಕೃಷ್ಣ 4ಮುರುಮಢನನೆ ನಿನ್ನ ಚರಣದ ಸೇವೆಯಕರುಣಿಸಬೇಕೆಂದು ತರುಣಿಯರು ||ಪರಿಪರಿಯಿಂದಲಿ ಸ್ಮರಿಸಿ ಹಾರೈಪರುಪುರಂದರವಿಠಲ ನೀನೇಳೊ ಹರಿಯೇ 5
--------------
ಪುರಂದರದಾಸರು
ವಂದಿಸಿ ನೋಡುವ ಬಾರೆ ಇಂದುಮುಖಿಯಳೆ ರಾಘ-ಬಹುಜನುಮಗಳಲ್ಲಿ ಅಹಿಶಾಯಿ ಇವರಿಂದನರಹರಿರೂಪ ತಾನಾಗಿ ಪರಿಪರಿಯಲಿ ಬಂದಂಥವ್ಯಾಸರೂಪನಾಗಿ ಇಲ್ಲಿ ವಾಸವಾಗಿ ಬಂದಬಂದಅನಿರುದ್ಧಾದಿ ನಾಲ್ಕುಮೂರ್ತಿಘನವಾಗಿ ತಾವಿದ್ದು ಪ್ರತಿದಿನಆ
--------------
ಗೋಪಾಲದಾಸರು