ಒಟ್ಟು 33 ಕಡೆಗಳಲ್ಲಿ , 23 ದಾಸರು , 33 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಜಯಮಂಗಳಂನಿತ್ಯಶುಭಮಂಗಳಂಪ.ದುರುಳತಮ ವೇದವನು ಕದ್ದು ವಾತಾಳದಲಿಇರಲವನ ಕೊಂದು ವೇದಾವಳಿಗಳಸರಸಿಜೋದ್ಭವಗಿತ್ತು ಸುರಮುನಿಗಳನ್ನೆಲ್ಲಪೊರೆದ ಶ್ರೀ ವತ್ಸಾವತಾರಿ ಹರಿಗೆ 1ಸುರರು ದೈತ್ಯರಕೂಡಿ ಸಿಂಧುವನು ಮಧಿಸುತಿರೆಗಿರಿಮುಳಗಿ ಪಾತಳಕಿಳಿದು ಪೋಗೆಭರದಿಂದ ತಾ ಬಂದು ಗಿರಿಯ ಬೆನ್ನಳಗಾಂತುಸುರರ ಸಂರಕ್ಷಿಸಿದ ಶ್ರೀಕೂರ್ಮಹರಿಗೆ2ಭೂಮಿಯನು ಹಿರಣ್ಯಕ್ಷನೆಂಬ ದೈತ್ಯನು ಸುತ್ತಿಭೀಮ ವಿಕ್ರಮನು ಪಾತಾಳಕೊಯ್ಯುತಾಮರಸ ಸಂಭವನು ಬಿನ್ನೈಸಲವನಳಿದುಭೂಮಿಯನು ತಂದು ಶ್ರೀ ಭೂ ವರಾಹನಿಗೆ 3ಪರಮಭಾಗವತ ಪ್ರಲ್ಹಾದನ ಹಿರಣ್ಯಕನುಪರಿಪರಿಯ ಭಾದೆಯಿಂದಲಿ ಪೀಡಿಸಿಕರುಣಾಳು ಕೋಪದಲಿ ದೈತ್ಯನುದರವ ಬಗೆದಶರಣ ರಕ್ಷಕನಾದ ಶ್ರೀ ನರಸಿಂಹಗೆ 4ಬಲಿಚಕ್ರವರ್ತಿ ಭೂಮಿಯ ಧಾರೆಯರೆಯಲುಇಳೆಯನಳೆದವನ ಸುತಳಕೆ ಕಳುಹಿಸಿದಸಿಲುಕಿಭಕುತಿಗೆ ಮೆಚ್ಚಿ ಬಾಗಿಲವಕಾಯ್ದ ಶ್ರೀಬಲವಂಥಹರಿವಾಮಾನಾವತಾರನಿಗೆ5ಕಾರ್ತವೀರ್ಯಾರ್ಜುನನ ಸಂಹರಿಸಿ ಮುದದಿಂದಕೀರ್ತಿಯನು ಲೋಕದೊಳು ವಿಸ್ತರಿಸಿದಪ್ರಾರ್ಥಿವಾಂತಕ ಬಾಹುಬಲದಿ ಪರಿಪೂರ್ಣಗೆಆರ್ತಬಾಂಧವಗೆಭಾರ್ಗವರಾಮಗೆ6ದಶರಥನ ಮನೆಯುದ್ಭವಿಸಿ ಆ ರಾವಣನದಶಶಿರವ ನೀಡಾಡಿ ಅವನನುಜಗೆವಸುಧಾಧಿಪತ್ಯವನು ಲಂಕೆಯೊಳಗವಗಿತ್ತಅಸಮವಿಕ್ರಮ ರಾಮಚಂದ್ರ ಹರಿಗೆ 7ಯದುಕುಲದಿ ತಾ ಬಂದು ಕೊಂದು ಕಂಸನನಂದುಮುದದಿಂದ ಪಾಂಡವರನುದ್ಧರಿಸಿದಒದೆಗೆ ಕೌರವ ಬಲವ ಸಂಹರಿಸಿ ಪದವಿತ್ತುಮುದದಿ ಮನ್ನಿಸಿದ ಶ್ರೀ ಕೃಷ್ಣ ಹರಿಗೆ 8ತ್ರಿಪುರದ ಮುರಾರಿಗಳ ಸತಿಯರ ಪತಿವ್ರತವಅಪಹರಿಸಿ ದಿವ್ಯ ಮೋಹಕರೂಪದಿತ್ರಿಪುರಹರಗಂಬಾಗಿ ಶಿವಗೆ ಕೀರ್ತಿಯನಿತ್ತಅಪರಮಿತ ಬುದ್ಧಾವತಾರ ಹರಿಗೆ 9ಕರಿಯುಗದ ಕಡಯಲಿ ಖಲನೃಪರನೆಲ್ಲರನುತುಳಸಿ ಕುದುರೆಯ ಖುರದ ಪುಟಗಳಿಂದಸುಲಭದಿಂ ನಡೆಸುತೀ ಕೃತಯುಗದ ಧರ್ಮವನುಒಲಿದಂಥ ಕಲ್ಕಿಯವತಾರ ಹರಿಗೆ 10ಮಂಗಳ ಪದಂಗಳನು ಭಕ್ತಿಯಲಿ ಮೋಹನತರಾಂಗನೆಯರೆಲ್ಲ ರಾಗದಿ ಪಾಡುತಮಂಗಳಾತ್ಮಕಗೆಸಿರಿ ಪುರಂದರವಿಠಲಗೆಅಂಗನೆಯರೆಲ್ಲ ಆರತಿಯೆತ್ತಿರೆ 11
--------------
ಪುರಂದರದಾಸರು
ಶ್ರೀ ಕಂಚಿ ಕಾಮಾಕ್ಷಿ82ಶರಣು ಶರಣು ಶರಣು ಶರಣು ಕಾಮಾಕ್ಷಿಶರಣು ಮೋಹಿನಿಮಾವಾಣಿಶರ್ವಾಣಿಪಹರಿಸಿರಿಸರಸ್ವತಿ ಸಹ ಪ್ರಜ್ವಲಿಸುವೆಗಿರಿಜೆ ಶರಣು ಕಂಚಿನಿಲಯೆ ಸತತಕಾಯೆ ಅ ಪಏಕಾತ್ಮಾನಂದಮಯನಿಖಿಳಗುಣಾರ್ಣವಜಗಜ್ಜನ್ಮಾದಿಗಳಿಗೆ ಮುಖ್ಯ ಕಾರಣೆ ವ್ಯಾಪ್ತೆಅಕಳಂಕ ಪುಂಸ್ತ್ರೀಗಾತ್ರೆ ಚಿನ್ಮಯೆ ವೃಂದಾರಕರಿಗೆಪೀಯೂಷಕರುಣಿಸಿ ಉಣಿಸಿದೆ1ಭಾಮಾ ರುಕ್ಮಿಣಿ ಸೀತಾ ಸೋಮಸೋದರಿ ರಮೆಕಮಲಾಸನಾದಿ ಸುಮನಸವಂದಿತೆ ತ್ರಾತೆಕಮಲನಾಭನ ಸೇವೆ ವನಮಾಲೆ ಚಾಮರಾದ್ಯಮಿತ ರೂಪದಿ ಮಾಳ್ಪ ಮಹಾಲಕ್ಷ್ಮೀ ನಮೋ ನಮೋ 2ಪಕ್ಷಿವಾಹನ ಸಾಕ್ಷಿ ಚೇತಾನಿರ್ಗುಣ ಅಧೋಕ್ಷಜ ಸರ್ವಾಂತರಾತ್ಮನ ತೀವ್ರಪ್ರೇಕ್ಷಿಸೊ ಜ್ಞಾನ ಭಕುತಿ ಮತಿ ಎನಗಿತ್ತುರಕ್ಷಿಸೆ ಸರಸ್ವತಿ ಫಣಿರ ಪಕ್ಷಿಪ ನುತೆ 3ಹೇಮಅಂಕುಶಪಾಶಇಕ್ಷುದಂಡವು ಪುಷ್ಪಕೋಮಲಹಸ್ತ 2 ನಾಲ್ಕಲ್ಲಿ ಶೋಭಿತವುಕಾಮಿತವರಪ್ರದೆ ಕಾತ್ಯಾಯನಿ ಉಮಾಹೈಮವತಿಯೆ ಶಿವೆ ದಯಮಾಡಿ ಪೊರೆಯೆನ್ನ 4ತತ್ರ ತತ್ರ ಸ್ಥಿತೋ ವಿಷ್ಣುಃ ತತ್ ತತ್ ಶಕ್ತಿ ಪ್ರದರ್ಶಯನ್ಸೂತ್ರವು ಮಣಿಗಳೊಳಂತೆ ಧಾರಕಹರಿವೃತತಿಜಪಿತ ವಿಷ್ಣು ಪ್ರಸನ್ನ ಶ್ರೀನಿವಾಸಗತಿಪ್ರಿಯತರೆ ಶಿವೆ ಸತತ ಪಾಲಿಸೆ ಎನ್ನ5
--------------
ಪ್ರಸನ್ನ ಶ್ರೀನಿವಾಸದಾಸರು
ಶ್ರೀ ಭಾರತೀದೇವಿ72ಭಾರತಿತವ ಚರಣಾಂಬುರುಹವ ನಂಬಿದೆಪೊರೆಎನ್ನಪಹರಿಸಿರಿ ಪ್ರಿಯತರ ಮರುತನ ನಿಜಪತಿಹರ ಶಕ್ರಾದಿಗಳಿಂದಾರಾಧಿತೆ ಅಪಉದಿತ ಭಾಸ್ಕರನ ಪೋಲ್ವ ದ್ಯುತಿಯಿಂದಜ್ವಲಿಸುವೆ ಶುಭಕಾಯೆಹೃದಯಾಂತರ್ಬಹಿ ಶ್ರೀಶನ ಕಾಂಬುವಜ್ಞಾನ ಭಕುತಿಯೀಯೆ ತಾಯೆ 1ಬಲ ಕರದಲಿ ಜ್ಞಾನ ಊಧ್ರ್ವದಿಅಭಯಮುದ್ರೆಯು ಶುಭದಒಲಿವ ಸುವರಮುದ್ರೆ ಪುಸ್ತಕವಾಮದಿ ವಿದ್ಯಾಪ್ರದೆ ಸುಖದೆ 2ಶತಸುಖಪಿತ ಪ್ರಸನ್ನ ಶ್ರೀನಿವಾಸನು ಸುಖಮಯನುಸತತ ಎನಗೆ ಒಲಿವಂತೆ ನೀದಯಮಾಡೆ ಮಾತೆಭಾರತಿಶರಣು3
--------------
ಪ್ರಸನ್ನ ಶ್ರೀನಿವಾಸದಾಸರು