ಒಟ್ಟು 303 ಕಡೆಗಳಲ್ಲಿ , 58 ದಾಸರು , 263 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಎಂಟಚ್ಚಮ್ಮ ಎಂದಿಗು ಬರಬೇಡಮ್ಮ ಪ ತುಂಟ ಪಟಿಂಗರ ಬಳಿಗೆ ಹೋಗಮ್ಮ ಅ.ಪ ನಿನ್ನ ಗಂಡ ಪಾಂಡವರನ್ನು ಬಾಧಿಸಿ ತನ್ನ ಬಾಯೊಳು ಹುಡಿಮಣ್ಣು ಹಾಕಿಕೊಂಡ 1 ಹುರಿದು ತಿಂಬ ಕಲಿಪುರಷ ಅಯ್ಯಯ್ಯೋ 2 ಗುರುರಾಮವಿಠಲಗೆ ಪರಮದ್ವೇಷಿಯು ಹರಿ ಶರಣರ ಬಾಧಿಸಿ ದುರಿತಗಳಿಸುವನು 3
--------------
ಗುರುರಾಮವಿಠಲ
ಎಂಥ ಟವಳಿಗಾರನಮ್ಮ ಪ ನಂದ ಗೋಪ್ಯಮ್ಮ ಕೇಳೆ - ನಿನ್ನ ಮಗ ಎಂಥ ಟವಳಿಗಾರನಮ್ಮ ಅ ಹಣವ ಕೊಟ್ಟೇನೆಂದುಗುಣದಿಂದ ಎನ್ನ ತಂದಹಣವ ಕೇಳಿದರಲ್ಲಿ - ಹಣವೆ ?ತಡೆಯಲಾರದ ತಲ್ಲಣವೆ ?ಕುದುರೆ ಮೇಲಿನ ಪಲ್ಲಣವೆ ?ಇಲ್ಲ, ಬಾಯಿಗಿಟ್ಟ ಬೊಕ್ಕಣವೆ ? - ಹೋಗೆನುತಾನೆ 1 ಕೊಪ್ಪಾನೆ ಕೊಟ್ಟೇನೆಂದುಒಪ್ಪಿಸಿ ಎನ್ನ ತಂದಕೊಪ್ಪಾನ ಕೇಳಿದರಲ್ಲಿ - ಕೊಪ್ಪ ?ಊರಮುಂದಿನ ತಿಪ್ಪ ?ಕೇರಿಯೊಳಗಿನ ಕೆಪ್ಪ ?ಕೆರೆಯೊಳಗಿನ ಹುಳಿಸೊಪ್ಪ ? - ಹೋಗೆನುತಾನೆ2 ಬಳೆಯ ಕೊಟ್ಟೇನೆಂದುಬಲು ಮಾತಿನಲಿ ತಂದಬಳೆಯ ಕೇಳಿದರಲ್ಲಿ - ಬಳೆಯೆ ?ಊರ ಮುಂದಿನ ಗಳೆಯೆ ?ಗದ್ದೆಯೊಳಗಿನ ಕಳೆಯೆ ?ಕೈಕಾಲ ಹಿಡಿದು ಸೆಳೆಯೆ ? - ಹೋಗೆನುತಾನೆ 3 ವಾಲೆ ?ಕನ್ನಡಿಯ ಕಪೋಲೆ ?ಹೇಳು ಸುವ್ವಿ ಸುವ್ವಾಲೆ ?ನಿನ್ನ ಕಾಲಿಗೆ ಸಂಕೋಲೆ ? - ಹೋಗೆನುತಾನೆ 4 ಕಡಗವ ಕೊಟ್ಟೇನೆಂದುಸಡಗರದಿಂದ ತಂದಕಡಗ ಕೇಳಿದರಲ್ಲಿ - ಕಡಗ ?ಅಂಬರದ ಗುಡುಗ ?ಮುಂಗೈ ಮೇಲಿನ ಗಿಡುಗ ?ಎತ್ತಿನ ಮ್ಯಾಲಿನ ಧಡಗ ? - ಹೋಗೆನುತಾನೆ 5 ಬುಗುಡಿಯ ಕೊಟ್ಟೇನೆಂದುರಗಡು ಕಿವಿಹಿಂಡಿ ತಂದಬುಗುಡಿ ಕೇಳಿದರಲ್ಲಿ - ಬುಗುಡಿ ?ಪಾಂಡವರಾಡಿದ ಪಗಡಿ ?ಮೂಗಿಂದ ಸುರಿವ ನೆಗಡಿ ?ಛಿ ! ನೀನೆಂಥ ಧಗಡಿ ? - ಹೋಗೆನುತಾನೆ 6 ಆದಿಕೇಶವನ ಮೇಲೆಆಣೆಯಿಟ್ಟು ಕರೆತಂದಆಣಿ ಎಲ್ಲಹುದೆಂದು ತೋರ್ದಆನಂದದಿಂದಲಿ ಬೆರೆದಬೀದಿಗೆ ಬಂದು ಕರೆದಹೀಂಗೆ ಧರೆಯೊಳು ಮೆರೆದ - ಶ್ರೀ ಕೃಷ್ಣರಾಯ 7
--------------
ಕನಕದಾಸ
ಎಂಥಾ ಮಹಿಮನಿವನೆ ಗೋಪಾಲಕೃಷ್ಣ ಎಂಥ ಮಹಿಮನಿವನೆ ಪ. ಎಂಥಾ ಮಹಿಮನಿವನಂತ ಕಂಡವರಿಲ್ಲ ಕಂತು ಜನಕ ಸರ್ವರಂತರಂಗದೊಳಿಪ್ಪ ಅ.ಪ. ಕರಚರಣಗಳಿಲ್ಲದೆ ಇದ್ದರು | ಮುದುರಿ ಘುರುಘುರುಗುಟ್ಟುತಿಹುದೆ ವರಕಂಬೋದ್ಭವ ವಟು ಪರಿಶು | ಧರಿಸಿರುವನ ಚರಿಸಿ ಮಾವನ ಕೊಂದ ನಿರ್ವಾಣ ಹಯವೇರಿ ಶರಧಿಯೊಳಾಡಿ ಗಿರಿಯಡಿ ಓಡಿ ಧರೆಯನು ತೋಡಿ ಕರಳೀಡ್ಯಾಡಿ ಕರವ ನೀಡಿ ಭಾರ್ಗವ ದಶರಥ ಸುತ ಅಂಬರ ತೊರೆದ ರಾವುತ 1 ಮಂದರ | ಬೆಂಡಂತೆ ಧರಿಸಿ ವನಿತೆಯ ತಂದನೀ ಧೀರ ಘನ‌ಘರ್ಜನೆಯು ಗಂಗಾಜನಕ | ಜಮದಗ್ನಿಸುತ ವನಚಾರಿ ತುರುಪಾಲ ವನಿತೆರೊಂಚಕ ಕಲ್ಕಿ ಜನಿಸಿ ಜಲದಿ ಬೆನ್ನಲಿ ಗಿರಿಕೋರೆ ಘನ ಹೊಸಲಾಸನ ತಿರಿದನುಜನ ತರಿದ ಮಾತೆ ಕಪಿವೆರಸಿ ವೃಂದಾವನ ಚರಿಸಿ ದಿಗಂಬರ ಹರಿ ಏರಿದನೆ 2 ಸುತನಿಗಾಗಮವಿತ್ತನೆ | ಕ್ಷಿತಿಧರಧಾರಿ ಸುತನ ಮೂಗಿನೊಳ್ ಬಂದನೆ ಸುತವಾಕ್ಯ ಸತ್ಯವೆನಿಸಿ ಅತಿ ಕುಬ್ಜ ಕ್ಷಿತಿಯನಿತ್ತು ವ್ರತಧಾರಿ ವಸನ ಚೋರ ವ್ರತಭಂಗ ಏರಿ ತುರಂಗ ಸತಿಯನೆ ಪೊರೆದ ಸತಿಯಂತಾದ ಸತಿಯಳ ಸಂಗ ಸತಿಗರಿದಂಗ ಸತಿಯ ಬೇಡಿ ನೀಡಿ ಸತಿಯ ಕೂಡಿ ಜಾರ ಸತಿ ಹೆಗಲೇರಿದ 3 ವಾಸ ಜಲದಿ ಮೈ ಚಿಪ್ಪು | ಯಜ್ಞ ಸ್ವರೂಪ ಮಾನವ ಮೃಗರೂಪು ಆಸೆಬಡಕ ಮಾತೆ ದ್ವೇಷ ವನದಿ ವಾಸ ಪೋಷ ಪಾಂಡವ ಜಿನ ಮೋಸ ವಾಜಿ ಮೇಲ್ವಾಸ ನಾಸಿಕ ಶೃಂಗ ನಗಪೋತ್ತಂಗÀ ಮಾನವ ಸಿಂಗ ನೃಪರ ದ್ವೇಷ ಪೋಷಿ ಯಜ್ಞವೃಂದ ವಾಸಿ ಘಾಸಿವ್ರತ ಕಲಿಮುಖ ದ್ವೇಷಿ 4 ಅಮೃತ ಭೂಸತಿಯ ಪೊರೆದು ಪಾಪಿ ಕರುಳ್ಬಗೆದ ಜಲಪಿತ ಭೂಪರ ಕಾಡಿ ರಘುಭೂಪ ಸೋದರತಾಪ ಗೋಪ್ಯಕಲ್ಯಂತಕಾಲ ಗೋಪಾಲಕೃಷ್ಣವಿಠ್ಠಲ ಆಪಜವಾಸ ಆ ಪೃಥ್ವೀಶ ಆ ಪುತ್ರಪೋಷ ಆ ಪದ ಸರಿತ ಕೋಪಿ ಲಂಕೆ ಪುರತಾಪಿ ಗೋಪಿಕಾ ವ್ಯಾಪಿ ಮಾನಹೀನ ಘೋಟಕವಹನ 5
--------------
ಅಂಬಾಬಾಯಿ
ಎನ್ನ ಕೈ ಬಿಡಬೇಡವೋ ಪ ರಿನ್ನಾರ ಕಾಣೆನು ಪನ್ನಗಶಯನನೆ ಅ.ಪ ತಂದೆ ಅನಾಥರ ಬಂಧು ಕಾಪಾಡಯ್ಯ 1 ಭುವನವಿಖ್ಯಾತನೆಂದೆನಿಸಿ ಕಾಯ್ದವ ನೀನೆ 2 ಸ್ಥಿರ ಸುಖದೊಳು ಕಾಯ್ದೆ ಕರುಣಿಗಳರಸನೆ 3 ಇಂಬಿಟ್ಟು ಭಕುತನ ಸಂಭ್ರಮದೊಳು ಕಾಯ್ದೆ 4 ಶರಣನ ಸಲಹಿದ ಪರಮ ಪುರುಷ ನೀನೆ 5 ಜೋಕೆಯೊಳ್ ನಿಜದಿ | ಸಾಕಿದೆ ಕರುಣಾಳು 6 ಕೃಪೆಯೊಳವಳಿಗೊಲಿಖಿಲವಸ್ತ್ರವನಿತ್ತೆ 7 ಸಂತೈಸಿ ಮತ್ತೆ ಪಾಂಡವರನ್ನು ಸತ್ಯಾತ್ಮರೆನಿಸಿದೆ 8 ಕುಡುತೆ ದಾಸ ವಿದುರನಿಗೆ ಲೇಸ ಮುಕ್ತಿಯ ಕೊಟ್ಟೆ 9 ವಂದ್ಯನೆಂದೆನಿಸಿದೆ ಇಂದಿರಾ ವರದನೆ 10 ದೃಢಭಕ್ತಿಗೊಲಿದಿತ್ತೆ ತಡೆಯದಿಷ್ಟಾರ್ಥವ 11 ನೀನೇನು ತೋರದೇನು || ಏನು ಗತಿಯೆನಗಿನ್ನು ನೀನೊಲಿಯದಿಲ್ಲಿನ್ನು 12 ಲೀಲೆಯಿಂದನುದಿನ ಸಲಹೊ ಸದಾನಂದ 13
--------------
ಸದಾನಂದರು
ಎಷ್ಟು ಕೂಗಲು ದಯ | ಪುಟ್ಟಲಿಲ್ಲವೊ ನಿನಗೆ ಬೆಟ್ಟದೊಡೆಯ ಹರಿಯೆ ಪ. ಸಿಟ್ಟೇಕೆ ಎನ್ನೊಳು ಕೃಷ್ಣಮೂರುತಿ ನಿನಗೆ ಬಿಟ್ಟರೆ ನೀ ಎನ್ನ ಸೃಷ್ಟಿಯೊಳಾರುಂಟೊ ಅ.ಪ. ಪರಮ ಪಾತಕಿಯೆಂದು | ತೊರೆದರೆ ನೀ ಎನ್ನ ಮೊರೆಬೀಳಲಿನ್ನಾರಿಗೆ ಕರುಣಾಮೂರುತಿ ಎಂಬೊ ಬಿರುದು ಪೊತ್ತಿಲ್ಲವೆ ಸರಿಯೆ ನಿನಗಿದು ಕೊರಗಿಸುವುದು ಜರಿದು ಬಳಲುವೆ ಧರೆಯೊಳೀಗ ನಾ ಸುರರ ರಕ್ಷಕ ಪರಮಪಾವನ ಕರವ ಮುಗಿವೆ ದರುಶನವ ನೀಡೊ 1 ನೀನಲ್ಲದೆ ಇನ್ನು | ನಾನಾರ ಭಜಿಸಲೊ ಗಾನವಿಲೋಲ ಹರಿ ಕಾನನದೊಳು ಕಣ್ಣು ಕಾಣದಂತಾಗಿದೆ ಧ್ಯಾನಕೆ ಸಿಲುಕದೆ ನೀನೆನ್ನ ಕಾಡುವೆ ಮಾನ ಪ್ರಾಣ ಶರೀರ ನಿನ್ನದೊ ನಾನು ಅನ್ಯರ ಭಜಿಸಲಾರೆನೊ ಹೀನಬುದ್ಧಿಯ ಬಿಡಿಸಿ ಗುರುಗಳ ಧ್ಯಾನವೆನಗಿತ್ತು ನೀನು ಕಾಯೊ 2 ಅನ್ನಪಾನವ ಬಿಟ್ಟು | ನಿನ್ನನು ಸ್ತುತಿಸಲು ಇನ್ನು ಕರುಣವಿಲ್ಲವೆ ಇನ್ನು ಸೈರಿಸಲಾರೆ ಘನ್ನ ಮಹಿಮನೆ ದುಃಖ ನಿನ್ನ ಮನಸು ಕರಗಲಿನ್ನೇನಗೈಯ್ಯಲೊ ಎನ್ನ ಯತ್ನವು ವ್ಯರ್ಥವಾಯಿತು ಇನ್ನು ನೀ ದಯೆಗೆಯ್ಯಬೇಕೊ ಮುನ್ನ ಮಾಡಿದ ತಪ್ಪನೆಣಿಸದೆ ಎನ್ನ ದೃಷ್ಟಿಗೆ ನಿನ್ನ ತೋರೊ 3 ಸುತನ ಮೊರೆಯನೆ ಕೇಳಿ | ಹಿತದಿ ವೇದವನಿತ್ತೆ ಶರಧಿ ಅಮೃತ ಸುರರಿಗಿತ್ತೆ ಕ್ಷಿತಿಯ ಬಾಧೆಯ ಬಿಡಿಸಿ ಸುತನ ಬಾಧಿಸೊವೊನ ಹತಮಾಡಿ ಇಂದ್ರಗೆ ಗತಿಸಿದ ಪದವಿತ್ತೆ ಕ್ಷಿತಿಯನಾಳ್ವರ ಹತವಗೈಸಿದೆ ಕ್ಷಿತಿಸುತೆಯ ಪ್ರೇಮದಲಿ ತಂದೆ ಹಿತದಿ ಪಾಂಡವ ಸುತರ ಕಾಯ್ದೆ ವ್ರತವ ಕೆಡಿಸಿ ಕಲಿಹತವಗೈದೆ 4 ಕಂತು ಜನಕನೆ ನಿನಗೆ ನ್ನಂತರ ತಿಳಿಯದೇನೋ ಸಂತತ ಗೋಪಾಲಕೃಷ್ಣವಿಠ್ಠಲ ನಿನ್ನ ಶಾಂತರೂಪವ ಎನ್ನ ಅಂತರಂಗದಿ ತೋರೊ ಚಿಂತಿತಾರ್ಥ ಪಂಥಗಾರನೆ ಎಂತು ದಿನಗಳು ಸಂದು ಹೋದುವೊ ಸಂತತಾನಂದನಂತಶಯನ 5
--------------
ಅಂಬಾಬಾಯಿ
ಎಷ್ಟೆಂದು ಹೇಳಲಮ್ಮಯ್ಯಕೃಷ್ಣನ ದಯವ ದಿಟ್ಟ ಪಾಂಡವರಲ್ಲೆಪ್ರಾಣ ಇಟ್ಟುಕೊಂಡಿ ಹನಮ್ಮ ಪ. ನೀರಜಾಕ್ಷಗೆ ನಮಿಸಿ ವೀರರೈವರು ಮಹಾದ್ವಾರದಲ್ಲಿ ಹೋರೆಂದು ಸಾರಿ ಹೇಳಿದೆನಮ್ಮಮಾರನಯ್ಯನ ಪಿತನ ಮೋರೆ ನೋಡುತಲಿತೀವ್ರ ಕರೆತಾರೆ ಮುತ್ತಿನ ಹಾರ ನಿನಗೆ ಈವೆನೆಂದ1 ಇಂದು ಮುಖಿಗೆ ನಾನು ವಂದಿಸಿ ಐವರು ಹೊರಗೆ ಬಂದಾರೆ ಹೀಗೆಂದೆ ನಮ್ಮಯ್ಯಮಂದಹಾಸನು ದಯದಿಂದ ನೋಡುತಲೆನ್ನತಂದು ತೋರಮ್ಮ ತೋಳಬಂದಿ ನಿನಗೀವೆನೆಂದ2 ಪುಟ್ಟ್ಟಸುಭದ್ರೆ ಪಾಂಡವರ ಪಟ್ಟದರಾಣಿ ದ್ರೌಪತಿಅಷ್ಟೂರೂ ಬಂದಾರೆಂಬೊ ಉತ್ಕ್ರಷ್ಟ ಹೇಳಿದೆನಮ್ಮತುಷ್ಟÀನಾಗಿ ರಮಿಯರಸು ಥಟ್ಟನೆ ಕರೆತಾರೆÀಂದುಕೊಟ್ಟು ವೀಳ್ಯವ ದಯದ ವೃಷ್ಟಿಗರೆದನಮ್ಮ 3
--------------
ಗಲಗಲಿಅವ್ವನವರು
ಏ ನೀರೇ ತೋರೇ ರಂಗನಾ ಪ ರಂಗನಾ ಸಕಲಾಂತ ರಂಗನಾ | ಕೋಮಲ ಸುಂದ | ರಾಂಗನಾ ಭೂ ಭುಜ ಯದು ತುಂಗನಾ 1 ಸಿರಿ ಲೋಲನಾ | ನಯನಸುವಿ | ಮೃಗ ಮದಾಂಕ ಬಾಲನಾ2 ತಪನ ನಂತೆತೇಜಸ್ವರೂಪನಾ | ಪಾಂಡವರಸಂ ಸ್ಥಾಪನಾ ಮಹಿಪತಿಜ ರಕ್ಷಿಪನಾ 3
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಓ ಎನ್ನಬಾರದೇ ಹರಿಯೆ | ಶ್ರೀಯರಸನೇ ನೀನೇ ಗತಿಯೆಂದು ಅನ್ಯ ಉ| ಪಾಯವನರಿಯದ ಬಾಲಕ ಕರೆದರೆ ಪ ಹಾಲವ ಬೇಡುವ ಮೊರೆಯಿಡಲುಪಮನ್ಯು ಆ | ಬಾಲಗ ಧ್ವನಿ ದೋರಿದಂತೆ | ಚಾಲವರಿದು ಸರೋವರದಲಿ ಕರೆದ ಶುಂ| ಡಾಲಗೆ ಧ್ವನಿ ದೋರದಂತೆ | ವ್ಯಾಳ್ಯೆಕ್ಕ ಒದಗೆಂದು ರಾತ್ರಿಲಿ ಕರೆದ ಪಾಂ| ಚಾಲಿಗೆ ಧ್ವನಿ ದೋರಿದಂತೆ | ಕಾಲಕಾಲಕ ಬಂದು ಮೊರೆಯಿಡೆ ಸುರಮುನಿ | ಜಾಲಕ ಮೈದೋರಿ ಧ್ವನಿ ದೋರಿದಂತೀಗ 1 ಆವಾಗ ಧ್ವನಿದೋರಿದಂತೆ | ಗೋವ ಮೇಯಿಸಿ ತೆರಳಲು ಗೊಲ್ಲರೊದರುವ ಭಾವಕ ಧ್ವನಿದೋರಿದಂತೆ | ದೇವ ನೀಮರಿಯಾಗೆ ಹುಂಕರಿಸ್ಸೊದರಲು | ಆವಿಗೆ ಧನಿ ದೋರಿದಂತೆ | ಕಾವನೈಯ್ಯನೆ ನಿನ್ನ ನೆನೆದ ಗೊಲ್ಲತೆರಾ | ಜೀವನ ಹಿತವಾಗಿ ಧನಿದೋರಿದಂತೀಗ 2 ಬಂದೂಳಗಕ ನಿನ್ನ ಪಾಂಡವರೊದಲು | ನಿಂದು ನೀ ಧನಿದೋರಿದಂತೆ | ಇಂದಾದಾ ಕಲಿಯುಗದ ದಾಸರ ಮಾತಿಗೆ | ಬಂದು ನೀ ಧನಿ ದೋರಿದಂತೆ | ಕಂದನಳುವ ಧ್ವನಿ ಕೇಳುತ ಜನನಿ ಅ | ನಂದದಿ ಧನಿದೋರುವಂತೆ | ತಂದೆ ಮಹಿಪತಿ - ನಂದನ ಪ್ರಭು ಗೋ | ವಿಂದ ಮುಕುಂದೆನ್ನ ಸಲಹೆಂಬ ಮೂಢನಾ3
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಕಂಡು ಎಂದಿಗೆ ಧನ್ಯಳಾಗುವೆ ನಾನು ಪಾದ ಪುಂಡರೀಕವನೂ ಪ. ಪುಂಡರೀಕನಿಗೊಲಿದು ಒಂದು ಇಟ್ಟಿಗೆ ಮೇಲೆ ಪಾಂಡವರ ಪ್ರಿಯ ಬಂಧು ನೆಲಸಿದಂಥಾ ಪಂಡರೀ ಕ್ಷೇತ್ರದಲಿ ಚಂದ್ರಭಾಗದಿ ಮಿಂದು ಮಂಡೆ ಬಾಗುತ ಹರಿಗೆ ಹಿಂಡಘವ ಕಳೆದೂ 1 ಕೋಮಲದ ಚರಣಕಭಿನಮಿಸಿ ಕರಯುಗದಿಂದ ಶ್ಯಾಮವರ್ಣನ ಪಾದಕಮಲ ಮುಟ್ಟೆ ಆ ಮಹಾ ಆನಂದ ಅನುಭವಿಪ ಭಾಗ್ಯವನು ಶ್ರೀ ಮಹಾಲಕುಮಿಪತಿ ಎಂದು ಕಾಂಬುವೆನೋ 2 ಆಪಾರಭಕ್ತರಿಗೆ ವಲಿದ ವಿಠಲನ ಮೂರ್ತಿ ಆಪಾದ ಮೌಳಿ ಈಕ್ಷಿಸುತ ಹೃದಯದಲಿ ಇರ್ಪಮೂರ್ತಿಯ ತಂದು ಗುರುಬಿಂಬ ಸಹಿತದಲಿ ಗೋಪಾಲಕೃಷ್ಣವಿಠಲನ ಎಂದು ಕಾಂಬೆ 3
--------------
ಅಂಬಾಬಾಯಿ
ಕಂಡೆ ಕಂಡೆ ಸ್ವಾಮಿಯ ಕಂಡೆ ಕಂಡೆ ನಾ ಬ್ರಹ್ಮಾಂಡದೊಡೆಯನ ಪಾಂಡವರ ಪರಿಪಾಲಿಸುವನ ಪ್ರ- ಚಂಡ ಅಸುರರ ಶಿರವ ಚಕ್ರದಿ ಚೆಂಡನಾಡಿದ್ದ ಚೆಲುವ ಕೃಷ್ಣನ ಪ ಪಾದನಖದಿ ಭಾಗೀರಥ್ಯುದಿಸಿದಳು ಈರೇಳು ಲೋಕವನಿಟ್ಟ ಉದರದೊ- ಳಾದಿ ಮೂರುತಿ ಸಾರ್ವಭೌಮ 1 ಎಳೆದುಳಸಿ ಶ್ರೀವತ್ಸ ಕೌಂಸ್ತುಭ ಅ- ರಳು ಮಲ್ಲಿಗೆ ಹಾರ ಪದಕವು ಕೊ- ವೈಜಯಂತಿ ಮಾಲೆಯಂ- ತ್ಹೊಳೆವೊ ಮಾಣಿಕಾಭರಣ ಭೂಷಿತ 2 ಶೀಘ್ರದಲಿ ಜರೆಸುತನ ವಧÉ ಮಾ ಡ್ಯಜ್ಞದಲಿ ಶಿಶುಪಾಲರಂತಕ ರುಕ್ಮಿಣೀಪತಿ ಧರ್ಮಭೀಮರಿಂ- ದಗ್ರಪೂಜೆ ತಕ್ಕೊಂಡ ಕೃಷ್ಣನ 3 ಕಂಕಣ ಕರದಲಿ ಶಂಖ ಚಕ್ರವು ಅರ- ವಿಂದ ರೇಖವು ಚರಣದಲಿ ಪಂಕಜಾಕ್ಷನ ಮುಖದ ಕಾಂತಿಯು ಶಂಕೆಯಿಲ್ಲದೆ ಸೂರ್ಯರಂದದಿ 4 ಎಂಟು ಮಂದ್ಯೆರಡೆಂಟು ಸಾವಿರ ಸತಿಯ- ರಿಂದ ದ್ವಾರಾವತಿಯನಾಳಿದ ಪತಿತಪಾವನ ಪಾರಿಜಾತವ ಸತಿಗೆ ತಂದ ಶ್ರೀಪತಿಯ ಪಾದವ 5 ನಳಿನಮುಖಿ ದ್ರೌಪದಿಯು ಕರೆಯಲು ಸೆಳೆಯೆ ವಸ್ತ್ರ ಅಕ್ಷಯವ ಮಾಡಿಸಿ ಖಳರ ಮರ್ದನ ಕರುಣ ಸಾಗರೆಂ ದಿಳೆಯೊಳಗೆ ಹೆಸÀರಾದ ಕೃಷ್ಣನ 6 ನಂಬಿದವರನು ಬಿಡದೆ ತಾನಿ- ದ್ದಿಂಬಿನಲಿ ಸ್ಥಳಕೊಟ್ಟು ಕರೆವನು ಸುಂದರಾಂಗ ತಾ ಸೋಮಕುಲದಲಿ ಬಂದುದಿಸಿದ ಭೀಮೇಶ ಕೃಷ್ಣನ 7
--------------
ಹರಪನಹಳ್ಳಿಭೀಮವ್ವ
ಕಂಡೆ ಕಂಡೆನು ಸ್ವಾಮಿಯ ಸುಪ್ರೇಮಿಯಾ ಪ ಕಂಡೆ ಕಂಡೆನು ಕೃಷ್ಣರಾಯನ ಪುಂಡರೀಕ ದಳಾಯತಾಕ್ಷನ ಪಾಂಡವಪ್ರಿಯ ಪಾರ್ಥಸಖನ ಉ ದ್ದಂಡ ಮಹಿಮ ಸುರೇಂದ್ರವಂದ್ಯನ ಅ.ಪ. ಕನಕ ನವಮಣಿ ಖಚಿತ | ವಾಗಿಹ ಸಿಂಹಾ ಸನದೊಳು ಸಲೆ ಶೋಭಿತ | ಸುರುಚಿರ ದಿವ್ಯ ಘನನೀಲನಿಭರಂಜಿತ | ನಿರ್ಮಲಗಾತ್ರ ಕುಂಡಲ ಮಣಿ ಗಣದ ಹಾರಾದಿ ಬಹು ಭೂ ಷಣಗಳನುಪಮ ಕಾಂತಿಯಿಂದಲಿ ಮಿನುಗುವತಿ ಲಾವಣ್ಯ ಮೂರ್ತಿಯ 1 ಕೋಟಿ ಮನ್ಮಥರೂಪನ | ಶ್ರೀಕೃಷ್ಣನ ಹಾಟಕಾಂಬರಧಾರನ | ಕರುಣಾಮಯ ಕಂಬು ಕಂಠನ ಆಟಮಾತ್ರದಿ ಪ್ರಬಲ ದೈತ್ಯ ಮ ಹಾಟವಿಯ ನಿರ್ಧೂಮಗೈದನ ಖೇಟವಾಹನನೆನಿಪ ತ್ರಿಜಗದಿ ಸಾಟಿಯಿಲ್ಲದ ದೇವದೇವನ 2 ಮೆರೆವ ದ್ವಾರಕಾಧೀಶನ | ದ್ರೌಪದಿದೇವಿ ಮೊರೆ ಕೇಳಿ ಸಲಹಿದನ | ಭಜಿಪರ ಅವ ಸರಕೊದಗುವ ದೇವನ | ಶ್ರೀ ಕೃಷ್ಣನ ತರಳತನದಲಿ ಗೋಕುಲದಿ ತಾ ಪರಿಪರಿಯ ಲೀಲೆಗಳ ತೋರಿದ ಪರಮ ಪುರುಷನ ಕರಿಗಿರೀಶನ ಸರಿಯಧಕರಿಲ್ಲದ ಸುರೇಶನ 3
--------------
ವರಾವಾಣಿರಾಮರಾಯದಾಸರು
ಕತ್ತಲೆಗಂಜುವುದೇನುಮೈದುನ ನಿನ್ನ ಬತ್ತಲೆ ಮಾಡಿದನ ಚಿತ್ತ ಸ್ವಸ್ಥ್ಯವಾದ ಚಪಲಾಕ್ಷಿ ನೀ ಇಂಥಕತ್ತಲೆಗಂಜುವುದೇನ ಪ. ಪುನುಗಿನ ಪರಿಮಳ ಬಿನುಗು ಬೆಕ್ಕಿಗೆ ಉಂಟೆನಿನ್ನ ಮನದಿ ಪಾಂಡವರು ಸರಿಯೆಂದು ದ್ರೌಪತಿನಿನ್ನ ಮನದಿ ಪಾಂಡವರು ಸರಿಯೆಂದು ಕೈ ಹಿಡಿದಿಜನರೆಲ್ಲ ನಗರೆ ಜಗದೊಳು ದ್ರೌಪತಿ1 ಗಿಳಿಯಂಥ ಕಳೆಯ ಹೊಳೆಯ ಬಲ್ಲುದೆ ಗುಬ್ಬಿತಿಳಿದು ನಿನ್ನ ಗರವು ಬಿಡು ಕಂಡ್ಯಾ ದ್ರೌಪತಿತಿಳಿದು ನಿನ್ನ ಗರವು ಬಿಡು ಕಂಡ್ಯಾ ಐವರೂ ಹಳಿದುಕೈ ಹೊಯಿದು ನಗರೇನ ದ್ರೌಪತಿ2 ಆತುರವಾಗಿದ್ದ ಕೀಚಕನಿಗೆಮಾತು ಕೊಟ್ಟವನ ಮಡುಹಿದಿಮಾತು ಕೊಟ್ಟವನ ಮಡುಹಿದ ನಿನ್ನಂಥಫಾತಕಳುಂಟೆ ಜಗದೊಳು ದ್ರೌಪತಿ3 ಮಾಯಗಾರುತಿ ಪತಿಯ ದಾಯದಾಟಕೆ ಹಚ್ಚಿಕಾಯದ ಕಾಂತಿ ಅಡಗಿಸಿಕಾಯದ ಕಾಂತಿ ಅಡಗಿಸಿ ಮೆರೆಸಿದಿಯಾವ ಕಚ್ಚೆತನ ಪರಿಯಲೆ ದ್ರೌಪತಿ4 ಸೃಷ್ಟಿಕರ್ತನೆಂಬೊ ಧಿಟ್ಟ ಗಂಡನ ಒಯ್ದುಅಟ್ಟು ಹಾಕುವನ ಪರಿಯಲಿಅಟ್ಟು ಹಾಕುವನ ಪರಿಯಲಿ ಕೈಯೊಳುಹುಟ್ಟು ಕೊಟ್ಟವನ ಮೆರೆಸೀದಿ ದ್ರೌಪತಿ 5 ಕಳೆಯ ಸುರಿಯುವ ಮುದ್ದು ಎಳೆಯ ಚನ್ನಿಗಪತಿಗೆಬಳೆಯನೆ ಇಡಿಸಿ ಜನರೊಳುಬಳೆಯನೆ ಇಡಿಸಿ ಜನರೊಳು ರೂಪವ ತಿಳಿಯದಂತವನ ತಿರುಗಿಸಿ ದ್ರೌಪತಿ 6 ರಾಜಪುತ್ರನ ಒಯ್ದುತೇಜಿ ಕೆಲಸಕೆ ಇಟ್ಟಿಸೋಜಿಗವಲ್ಲ ಜನರೊಳು ಸೋಜಿಗವಲ್ಲ ಜನರೊಳು ರೂಪವಮಾಂಜುಕೊಂಡವನ ಮೆರೆಸಿದಿ ದ್ರೌಪತಿ7 ಘನ ಗಂಭೀರನ ಒಯ್ದು ದನದ ಕೆಲಸಕೆ ಇಟ್ಟಿಜನರೆಲ್ಲ ನಗರೆ ಜಗದೊಳುಜನರೆಲ್ಲ ನಗರೆ ಜಗದೊಳು ದ್ರೌಪತಿಮನಬುದ್ಧಿ ಎಂದು ಬರಬೇಕು8 ಅತಿ ಅಂತಃಕರಣಿ ಹಿತದ ಅಗ್ರಜನ ಒಯ್ದುರಥಿಕನ ಮಾಡಿ ಮೆರೆಸಿದಿ ದ್ರೌಪತಿರಥಿಕನ ಮಾಡಿ ಮೆರೆಸಿದಿ ರಾಮೇಶನ ಪತಿಗಳಭಿಮಾನ ಇರಲುಂಟೆ ದ್ರೌಪತಿ9
--------------
ಗಲಗಲಿಅವ್ವನವರು
ಕರವ ಮುಗಿವೆ ಚರಣಕ್ಕೆರಗುವೆ ಭರದಿ ರಕ್ಷಿಸು ಬಿಡದೇ ಶ್ರೀ ಪ ಮಾನವ ಕಾಯ್ದೆಯೊ ಹೀನರ ಮದಗರ್ವವನೆಲ್ಲ ಅಳಿದೆಯೊ ಧ್ಯಾನ ಮಾಡುವ ಸ್ವಾನುಭವಿಗಳ ಸ್ಥಾನ ಹೃದಯವಾಸ ಶ್ರೀ 1 ಧ್ಯಾನಿಸಿವಂಥಾ ಗಜರಾಜನ ಕಾಯ್ದೆ ಮಾನಿನಿ ಅಹಲ್ಯೆಯ ಪಾದದೊಳುದ್ಧರಿಸಿದೆ ದೀನರಕ್ಷಕ ಬಿರುದ ಪೊತ್ತ ವಿ ಜ್ಞಾನದೊಳಗಿರಿಸೆನ್ನಾ 2 ಶಬರಿಯ ಭಕ್ತಿಗೆ ಮೆಚ್ಚನೀ ಬಂದೆಯೊ ಬದರಿಯ ಹಣ್ಣನೆ ಸವಿಸವಿ ದುಂಡೆಯೊ ವಿಭು ಪರಮಾನಂದಾ ಪ್ರಭೆಯೊಳಗಿರಿಸಿದೆ 3 ಸ್ವರ್ಣಕಶ್ಯಪನ ಸೊಕ್ಕಗಿಸಿದೆ ದೇವಾ ಮನ್ನಿಸಿ ಪಾಂಡವರೈವರ ಸಲಹುವಾ ಚನ್ನ ಗೋಪಿಯರ ಕೂಡಿ ಮನ್ನಣೆಕ್ರೀಡೆಯ ನಾಡಿ 4
--------------
ಶಾಂತಿಬಾಯಿ
ಕರಿ ಕಮಲೇಶ ಪ ಗರುಡಾರೂಢನು ಗಜವರದ ವೈಕುಂಠ ಕೊಡುವ ಪಾಲಿಸಿ ಪಾಂಡವರ ಮನೆ ಭಂಟ1 ಪಕ್ಷಿವಾಹನ ರಾಕ್ಷಸಾರಿ ರಾವಣನ ಶಿಕ್ಷಿಸಿ ವಿಭೀಷಣನ ರಕ್ಷಿಸಿದ ರಾಮ 2 ವಿನತೆಸುತನ ಏರಿ ಘನತರುತ್ಸವದಿ ಸವರಿದಿ ಸುರವಂದ್ಯ ಸುಜನಕ್ಕಾನಂದ 3 ಹಕ್ಕಿಯ ಪಕ್ಕದಲ್ಲ್ಯರ್ಕಕೋಟಿತೇಜ ಜಾ- ನಕ್ಕಿ ಸಹಿತಯೋಧ್ಯನಾಳುವ ರಾಮ 4 ನಗಧರ ಖಗನ್ಹೆಗಲೇರಿ ಉಲ್ಲಾಸ ನಗುವ ಭೀಮೇಶ ಕೃಷ್ಣÀ ಬರುವ ಜಗದೀಶ5
--------------
ಹರಪನಹಳ್ಳಿಭೀಮವ್ವ
ಕರುಣಸಾಗರನಹುದೊ ಶರಣ ಜನರ ಪ್ರಿಯ ಧ್ರುವ ಕರಿರಾಜ ಮೊರೆ ಇಡಲು ಭರದಿಂದೊದಗಿ ಬಂದ್ಯೊ ದುರಿತ ಬಂದಡರಿದಾವಸರದೊಳು ನೀ ಪರಿಹರಿಸಿದ್ಯೊ ಶ್ರಮ ಪರಮ ದಯಾಳು 1 ದುರಿತ ನಿರ್ಮಿಸಿದವನ ಬೆರಳಲಿ ಸೀಳಿದ್ಯೊ ಪೂರ್ಣ ಹರಿಯಂದಾ ಮಾತಿಗೆ ಕರುಣದಿಂದೊದಗಿ ನೀ ಪರಪರಗಾಯಿದ್ಯೊ ತರಳ ಪ್ರಹ್ಲಾದನ 2 ಧರ್ಮಪತ್ನಿಯ ಸೆರಗೆ ಭರದಿಂದೆಳೆಯುವ ಸಮಯ ಸ್ಮರಣಿ ಒದಗಿ ಬಂದೊ ಪರಿಪರಿ ವಸ್ತುವ ಪೂರಿಸಿದ್ಯೊ ಶ್ರೀ ಹರಿ ಕೃಷ್ಣ ಕೃಪಾಳು 3 ಅರಗಿನ ಮನೆಯೊಳು ಮರೆ ಮೋಸ ಮಾಡಿರಲು ಶರಣಾಗತವತ್ಸಲ ಪಾಂಡವಪ್ರಿಯ 4 ಹಲವು ಪರಿಯಲೆನ್ನ ಸಲಹುವ ಸದ್ಗುರುಪೂರ್ಣ ಬಾಲಕ ಮಹಿಪತಿಯ ಪಾಲಕ ನೀನಹುದೊ ಮೂಲೋಕದೊಡೆಯ ಶ್ರೀ ಹರಿ ದಯಾಳ 5
--------------
ಕಾಖಂಡಕಿ ಶ್ರೀ ಮಹಿಪತಿರಾಯರು