ಒಟ್ಟು 78 ಕಡೆಗಳಲ್ಲಿ , 22 ದಾಸರು , 72 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ನಂದನಂದನ ಪದ್ಮಾನಂದನ ವಂದ್ಯನೇ| ತಂದೆ ಮಹಿಪತಿಸುತ ಪ್ರಭುವೇ ಮುಕುಂದ ಕೃಷ್ಣ ಪ ಸಿರಿಯಾ ಸೌಖ್ಯ ದಿಂದುಬ್ಬಿ ಮದದಿಂದ| ಸರಿಯನಗಾರು ಇಲ್ಲೆಂಬ ತಾಮಸದಿಂದ| ಮರದೆನೋ ಹರಿನಿಮ್ಮಾ ಸ್ಮರಣೆಯಾ ಮರವಿಂದ| ತಿರುಗಿ ದಣಿದೆ ನಾನು ನಾನಾಯೋನಿಗಳಿಂದ| ತರಹರಿಸಲಾರೆ ತಾಪತ್ರಯದುಃಖಗಳಿಂದ| ಶಿರಿಕೃಷ್ಣ ಸಲಹೆನ್ನ ಪರಮ ಕರುಣದಿ|1 ಮುನ್ನ ಮಾಡಿದಪರಾಧ ಸಕಲವ ನೀನು ಕ್ಷಮೆಯನುಮಾಡಿ ಚಿನ್ನ ಕಿಂಕರನೆಂದು ದಯದಲಿ ಅಭಯಕರವನು ನೀಡಿ ನಿನ್ನ ಸ್ಮರಣೆಯಕೊಟ್ಟು ಕರುಣ ಕಟಾಕ್ಷದಿಂದಲಿ ನೋಡಿ ಚಿನ್ನ ಶ್ರೀಕೃಷ್ಣ ಭವದಿಂದುದ್ಧರಿಸಯ್ಯಾ ತಾರಿಸಯ್ಯಾ ನೀನು2 ಪತಿತ ಪಾವನ ನೆಂಬಾಬಿರುದು ಸಾರುತಿದೆ ಗತಿಗೆಟ್ಟ ಅಜಮಿಳನ ತಾರಿಸಲಿಲ್ಲವೇ ಪಾಷಾಣ ಉದ್ದರಿಸಲಿಲ್ಲವೇ ಕ್ಷಿತಿಯೊಳೆನ್ನ ತಾರಿಸುವದೊಂದರಿದೇ ಶ್ರೀಕೃಷ್ಣಾ3 ಕರಿರಾಜನಂದದಿ ಹರಿತವಸ್ಮರಣೆ ಮಾಡಲರಿಯೇ ಶರಣ ಪ್ರಲ್ಹಾದನಂತೆ ಕರೆಯ ಬರಿಯೇ ನರೆನಂತೆ ನಾನಿನ್ನ ವಲಿಸಿಕೊಳ್ಳಲರಿಯೇ ತರಳ ಧ್ರುವನಂತೆ ಧ್ಯಾನಿಸಲರಿಯೇ ಶಿರಿಕೃಷ್ಣಾ ಗತಿಯಂಬದುವಿನಾ ಮತ್ತೊಂದರಿಯೇ 4 ನಿನ್ನ ನಾಮವನು ಕೊಂಡಾಡುವೆ ಪೊಗಳುವೆ ಚನ್ನಾಗ್ಯನುದಿನದಲನವರತಾ ತನ್ನಯಕರುವಿಗೆ ಕರುಣಿಪಗೋಪಂತೆ ಎನ್ನ ನೀಸಲಹುದು ಶಿರಿಕೃಷ್ಣರೇಯಾ5
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ನಂಬಲು ಕೆಟ್ಟವರು ಆರು ಜಗದೊಳು ಪ ಹರಿ ನೀನೆ ಗತಿ ಎಂದು ಅರಿತ ಪ್ರಲ್ಹಾದನ ದುರಿತವ ಭರದಲಿ ತರಿದ ಶ್ರೀಹರಿಯನು 1 ಕುರು ಸಭೆಯೊಳು ನರಹರಿಯನು ಸ್ಮರಿಸಿದ ತರುಣಿಯೊಳು ಕರುಣಿಸಿ ಪೊರೆದ ಶ್ರೀಧರನನ್ನು 2 ಅನುದಿನದಲಿ ನಮ್ಮ ಹನುಮೇಶ ವಿಠಲನ ನೆನೆದ್ವಾಲ್ಮೀಕನ ವಿಮೋಚನೆ ಮಾಡ್ದ ಶ್ರೀರಾಮನ 3
--------------
ಹನುಮೇಶವಿಠಲ
ನಂಬಿದವರ ಕಾವ ದೈವ ಅಂಬುಜಾಕ್ಷನೀತನೆಂದು ಧ್ರುವ ನಂಬಿದ ಪ್ರಲ್ಹಾದಗ ತಾಂ ಸ್ತಂಭದೊಳು ಮೂಡಿ ಬಂದು ಹಂಬಲಿಸಿ ದಲ್ಲ್ಯೊದಗಿ ಇಂಬವಾದನೀತನೆಂದು 1 ನಾಮ ನಂಬಬಾರದೆ ನೀ ಕಾಮಧೇನುವೆಂದು ಪೂರ್ಣ ನೇಮದಿಂದ ಸಲಹುತಿಹ್ಯ ಸ್ವಾಮಿ ಸರ್ವೋತ್ತಮನೆಂದು 2 ದೀನ ಮಹಿಪತಿಸ್ವಾಮಿ ಭಾನುಕೋಟಿತೇಜಪೂರ್ಣ ಮನದಪೇಕ್ಷೆ ಪೂರೈಸುವ ಘನಸುಖದಾಯಕನೆಂದು 3
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ನಾರಾಯಣ ನರಹರಿ ನಾರದಪ್ರಿಯ ನರಸುರಮುನಿ ವರದಾಯಕ ಧ್ರುವ ವೇದ ಕದ್ದೊಯ್ದವನ ಮರ್ದಿಸಲಿಕ್ಕೆ ಸಾಧಿಸಿ ಬಂದ್ಯೊ ಮಚ್ಛರೂಪನೆ ಮಾಧವ ನೀ ಬಂದು ಕೂರ್ಮನಾಗಿ ನಿಂದು ಮೇದಿನಿಯ ಭಾರವ ತಾಳಿದೆ 1 ಧರೆಯ ಕದ್ದಸುರನ ಕೋರದಾಡಿಂದ ಸೀಳಿ ವರಾಹರೂಪಬಂದು ದೋರಿದೆ ಹಿರಣ್ಯಕಶ್ಯಪ ವಿದಾರಣ ಮಾಡಿ ನೀ ತರಳ ಪ್ರಲ್ಹಾದನ ರಕ್ಷಿಸಿದೆ 2 ವಾಮನ ರೂಪವದೋರಿದೆ ನೇಮದಿಂದಲಿ ಪಿತನಾಜ್ಞೆಯ ನಡೆಸಲು ಸ್ವಾಮಿ ಭಾರ್ಗವರೂಪ ತಾಳಿದೆ 3 ದೇವತೆಗಳ ಸ್ಥಾಪಿಸಲಿಕ್ಕೆ ಬಂದು ದೈತ್ಯ ರಾವಣನ ಕೊಂದ್ಯೊ ಶ್ರೀರಾಮ ನೀ ದೇವಕಿ ಉದರದಲಿ ಜನಿಸಿ ಬಂದು ಕೃಷ್ಣ ಗೋವಳರನ್ನು ಪ್ರತಿಪಾಲಿಸಿದೆ 4 ಪತಿವ್ರತೆಗಳ ವ್ರತ ಅಳಿಯಲಿಕ್ಕಾಗಿ ಬಂದು ಸುಳಹುದೋರಿದೂ ಬೌದ್ದ್ಯರೂಪನೆ ಹತ್ತಿ ಕುದರಿಯ ಒತ್ತಿ ಆಳಲಿಕ್ಕೆ ಮತ್ತೆ ಬಂದೆಯ ಕಲ್ಕಿರೂಪನೆ 5 ಹತ್ತವತಾರ ಧರಿಸಿ ಬಂದು ಕ್ಷಿತಿಯೊಳ ಪತಿತರ ಪಾವನಗೈಸಿದೆ ಭಕ್ತಜನರುದ್ದರಿಸಲಿಕ್ಕೆ ಬಂದು ಶಕ್ತಿಪರಾಕ್ರಮದೋರಿದೆ 6 ಸಾವಿರ ನಾಮದೊಡೆಯ ಸ್ವಾಮಿ ನೀ ಬಂದು ಭಾವಿಸುವರೊಡನೆ ಕೂಡಿದೆ ಭವಭಂಧನ ತಾರಿಸಿ ಮಹಿಪತಿಯ ಪ್ರಾಣ ಪಾವನ ನೀ ಮಾಡಿದೆ 7
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ನೀನಲ್ಲದಿನ್ನಾರು ಸಲಹುವರು ಹರಿಯೆ ಪ ನಾನನ್ಯರನು ಕಾಣೆನೆಲ್ಲಿಯೂ ಕೇಳ್ದರಿಯೆ ಅ.ಪ. ಪೋರ ಶಶಿಹಾಸನನು ತಂದೆ ತಾಯ್ಸಲುಹಿದರೆಧೀರ ಪ್ರಲ್ಹಾದನನು ತಂದೆ ತಾಯ್ ಸಲುಹಿದರೆವೀರ ಕರ್ಣನ ಹಡೆದ ತಾಯಿ ಸಲುಹಿದಳೆನಾರಿ ದ್ರೌಪದಿಯನ್ನು ಭರ್ತೃಗಳು ಸಲುಹಿದರೆ 1 ಕರ್ಣ ತಾ ಸಲುಹಿದನೆಕಡುಗಲಿಯ ವಾಲಿಯನು ಸುಗ್ರೀವ ಸಲುಹಿದನೆಗಡ ಬಬ್ರುವಾಹನನು ತಂದೆಯನು ಸಲುಹಿದನೆ 2 ಪುಸಿಯಲ್ಲದೆಲ್ಲವನು ಸಲಹುವಾತನೆ ನೀನುಪಿಸುಣರೈ ಸಲಹುವರು ತಾವೆಂದು ಗಳಹುವರುಉಸಿರು ಗದುಗಿನ ವೀರನಾರಾಯಣನೆ ನೀನು 3
--------------
ವೀರನಾರಾಯಣ
ನೆನೆದು ಸುಖಿಸಿ ನಮ್ಮ ಆದಿ ಶರಣರಾ ಅನುದಿನ ಹರಿ ಮೆಚ್ಚಿದ ಪ್ರಿಯರಾ ಪ ಪ್ರಲ್ಹಾದ ನಾರದ ಪರಾಶರ ಮುನಿ ವಲ್ಲಭ ರುಕ್ಮಾಂಗದಾ ಧ್ರುವರಾ ಉಲ್ಹಾಸದಿಂದಲಿ ಅಂಬರೀಷ ಗಜೇಂದ್ರನಾ ಬಲ್ಲಿದ ಬಲಿ ಗುಣ ಸಾಗರರಾ ಹನುಮ ವಿಭೀಷಣ ಜಾಂಬವ ಅಜಮಿಳ ಮುನಿ ಮುಚಕುಂದಾರ್ಜುನ ಮುಖ್ಯರಾ 1 ಉದ್ಧವ ಉಪಮಾನ್ಯನು ಜನÀದೋಳಧಿಕರಾದಾ ಪುಂಡಲೀಕ ಭೀಷ್ಮರಾ ಭಕುತಿ ವನಧಿಯೊಳು ಮೆರೆವರ ತನವಾದಾ 2 ಶುಕಶೌನಕ ಮುಖ್ಯ ಸಜ್ಜನರಾ | ಪ್ರಕಟದಿ ಮಹಿಪತಿ ನಂದನು ಸ್ತುತಿಸಿದ | ಮುಕುತಿಗೆ ಯೋಗ್ಯ-ನಾ ಮಾಡುವರಾ 3
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ನೆನೆವೆನಾ ನೆನೆವರಿಗೊಲಿವನಾ ಅನುದಿನಾ ನೆನೆವನಾ| ಕಾವನಾ ಪಾವನಾ ದೇವನಾ ಪ ಗಜರಾಜ ಧ್ರವ ಪ್ರಲ್ಹಾದಂಬರೀಷನ| ಅಜಮಿಳ ವಿಭೀಷಣ ರುಕ್ಮಾಂಗದರ್ಜುನ| ಸುಜನ ಭೀಷ್ಮ ವಿದುರನ| ನಿಜವ ದೋರಿಧನ್ಯ ಗೈಸಿದವನಾ1 ಮುರಾರಿ ವಾರಿಜಾರಿ ವಂಶ ವೀರಧೀರನಾ ಪಾರ ವಾರನಾ ಸುರ ಸಹಕಾರನಾ ಕರುಣಾಳು ಮೂರುತಿ ಪರಮೋದಾರನ ಗುರು ಮಹಿಪತಿಜ ಮನೋಹರನಾ2
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಪರಮ ಸಂಜೀವನವು ಗುರು ನಿಮ್ಮನಾಮ ಸರುಮುನಿಯು ಸೇವಿಸುವ ದಿವ್ಯನಾಮ ಧ್ರುವ ದುರಿತ ಹರಿಸಿದ ನಾಮ ಮೊರೆಯ ಹೊಕ್ಕವರ ಸ್ಥಿರ ಹೊರೆವ ನಾಮ ತರಳ ಪ್ರಲ್ಹಾದನವಸರಕೆ ಒಲಿದಿಹ ನಾಮ ಸ್ಮರಿಸುವರ ವಜ್ರಪಂಜರ ನಿಮ್ಮ ನಾಮ 1 ಧರೆಯೊಳಗೆ ದ್ರೌಪದಿಯ ಸ್ಮರಣಿಗೊದಗಿದ ನಾಮ ಕರುಣದಿಂದಭಿಮಾನಗಾಯ್ದ ನಾಮ ದಾರಿದ್ರ್ಯವನು ಸುಧಾಮನಿಗಿಂಗಿಸಿದ ನಾಮ ಸಿರಿ ಸಂಪತ್ತವು ಅಯಿತೀ ನಾಮ 2 ಹರುಷಕರವಿತ್ತು ಉಪಮನ್ಯಗೊಲಿದ ನಾಮ ಕ್ಷೀರಸಾಗರದ ನಾಮ ಶರಣುಹೊಕ್ಕವರ ಪರಿಪರಿ ಕಾಯ್ದ ನಾಮ ಧೀರ ಧ್ರುವಗಚಳ ಪದವಿತ್ತ ನಾಮ3 ಕರೆದು ನಾರಗ ನೆಂದವನ ತಾರಿಸಿದ ನಾಮ ಪರಮಪಾತಕ ಪರಿಹರಿಸಿದ ನಾಮ ವರ ಮುನಿಜನರ ತೃಪ್ತಿಗೈಸುವ ನಾಮ ಪರಮ ಭಕ್ತರ ಪ್ರಾಣಪ್ರಿಯ ನಾಮ 4 ದುರಿತ ದಾರಿದ್ರ್ಯ ವಿಧ್ವಂಸಗೈಸುವ ನಾಮ ಕರುಣಸಾಗರ ಪರಿಪೂರ್ಣ ನಾಮ ನರಕೀಟಕ ಮಹಿಪತಿಯ ತಾರಕ ನಾಮ ಪರಮ ಸಾಯೋಜ್ಯ ಗುರು ದಿವ್ಯ ನಾಮ 5
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಬರಬೇಕು ಬರಬೇಕು ಸಕಲ ಸಜ್ಜನಭಕ್ತರುಗುರುಸಾರ್ವಭೌಮರ ಆರಾಧನೆಗೆ ಗಲಗಲಿಗೆ ಪಪಂಚರಾತ್ರೋತ್ಸವವು ವೈಭವದಿ ನಡೆಯುವದುಚಂಚ'ುತ ಸುಪ್ರಸಾದವು ಇರುವದುವಂಚಿಸದೆ ಸೇವೆಯನು ಮಾಡಿದರೆ ಗುರುರಾಯವಾಂಛಿತಾರ್ಥವನಿತ್ತು ಸಂತೋಷಪಡಿಸುವನು 1ನಿತ್ಯ ಅಷ್ಟೋತ್ತರ ಅಲಂಕಾರ ಮಹಾಪೂಜೆಕ್ಷೇತ್ರ ಭೋಜನ ಕೀರ್ತನೆ ಪುರಾಣನೃತ್ಯಗೀತಗಳಿಂದ ಪಲ್ಲಕ್ಕಿ ಸೇವೆಯುಉತ್ತರಾರಾಧನೆಗೆ ರಥೋತ್ಸವದ ವೈಭವವು 2ಸಹಸ್ರಕುಂಭಾಭಿಷೇಕೋತ್ಸವವು ಕೊನೆಯದಿನಸತ್ಯನಾರಾಯಣನ ಮಹಾಪೂಜೆಯುಪವಮಾನಹೋಮ ಸಂಭಾವನಾ 'ತರಣೆಮುಕ್ತಾಯವಾಗುವದು ಪಂಚರಾತ್ರೋತ್ಸವವು 3ಕೃಷ್ಣವೇಣಿಯ ಪುಣ್ಯಕ್ಷೇತ್ರ'ದು ಗಲಗಲಿಯುಪ್ರಲ್ಹಾದವರದ ಶ್ರೀನರಹರಿಯ ಕ್ಷೇತ್ರವುಶ್ರೀವೆಂಕಟೇಶ'ಠ್ಠಲ ದತ್ತ, ಎಲ್ಲಮ್ಮ 'ೀರಮಾರುತಿ ಪರ್ವತೇಶ್ವರನ ಕ್ಷೇತ್ರ4ಗಾಲವ ಮರ್'ಗಳು ತಪವಗೈದಿಹ ಕ್ಷೇತ್ರಎಲ್ಲದರಲ್ಲಿಯೂ ಮುಂದಿರುವ ಕ್ಷೇತ್ರದೇವ ಭಕ್ತರ ಕ್ಷೇತ್ರ ದೇಶಭಕ್ತರ ಕ್ಷೇತ್ರಭೂಪತಿ'ಠ್ಠಲನ ಪ್ರೀತಿಯ ಕ್ಷೇತ್ರ5
--------------
ಭೂಪತಿ ವಿಠಲರು
ಭಜನೆಯೊಂದೇ ಸಾಲದೇ ರಂಗಯ್ಯನ ಭಜನೆಯೊಂದೇ ಸಾಲದೇ ಪ ಅನುದಿನ ಸ್ಮರಿಸಲು ಭಜಕರ ದುರಿತವ ತರಿಯುವ ಪರಿಯ ಅ.ಪ. ಹಿಂದೆ ನೋಡಜಮಿಳ ತರಳ ಪ್ರಲ್ಹಾದರ ಚಂದದಿ ಮೆರೆದ ಗೋಪಾಲ ಬಾಲಕರ ವೃಂದಾವನದೊಳಿದ್ದ ಗೋಪಸೇವಕರ 1 ಕೋಮಲೆ ದ್ರೌಪದಿ ಸಭೆಯೊಳು ಸ್ಮರಿಸಲು ಭಾಮೆಗಕ್ಷಯವಿತ್ತ ಕ್ರೂರ ರಕ್ಷಕನ ಪ್ರೇಮದಿ ಅಹÀಲ್ಯೇ ಶಿಲೆಯೊಳು ಭಜಿಸಲು ಸ್ವಾಮಿ ತಾನೊಲಿದು ಮುಕ್ತಿಯ ಕೊಟ್ಟ ಹರಿಯ 2 ದಶರಥನಲಿ ಬಂದು ದಶಕಂಠನನು ಕೊಂದು ವಸುಮತಿಯನು ಪೊರೆದ ಶ್ರೀ ಹರಿಯ ಪಶÀುಪತಿ ಸಖನಾದ ಪನ್ನಗಶಯನನಅಸುರರ ತರಿದ ಶ್ರೀ ಚನ್ನಕೇಶವನ 3
--------------
ಕರ್ಕಿ ಕೇಶವದಾಸ
ಮಂಗಲಂ ಮುಚಕುಂದ ವರದ ಹರಿಗೆಮಂಗಲಂ ಪ್ರಲ್ಹಾದ ವರದ ನರಹರಿಗೆ ಪಮಂಗಲಂ ಮಾಧವಗೆ ವಂಗಲಂ ಶ್ರೀಧರಗೆಮಂಗಲಂ ಗಿರಿಧರ ಕಾವೇರಿರಂಗನಿಗೆಮಂಗಲಂ ಶ್ರೀಪಾಂಡುರಂಗನಿಗೆ ಭವಭಂಗಸಂಗೀತ ಪ್ರಿಯನಾದ ಪಾಂಡುರಂಗನಿಗೆ 1ಮಂಗಲಂ ಅಕ್ರೂರವರದ ಶ್ರೀಕೃಷ್ಣನಿಗೆಮಂಗಲಂ ಪುಂದಲೀಕ ವರದ 'ಠ್ಠಲಗೆಮಂಗಲಂ ದ್ರುವರಾಜ ವರದನಾರಾಯಣಗೆಮಂಗಲಂ ಮಧ್ವಮುನಿಗೊಲಿದ ವ್ಯಾಸರಿಗೆ 2ಪುರಂದರ'ಠ್ಠಲಗೆ ಸಿರಿ'ಜಿಯ'ಠ್ಠಲಗೆಗೋಪಾಲ'ಠ್ಠಲ ಮೋಹನ'ಠಲಗೆಜಗನ್ನಾಥ'ಠಲಗೆ ಪ್ರಾಣೇಶ'ಠ್ಠಲಗೆಶ್ರೀಪತಿ'ಠ್ಠಲ ಭೂಪತಿ'ಠ್ಠಲಗೆ 3
--------------
ಭೂಪತಿ ವಿಠಲರು
ಮಂಗಳಂ ಶ್ರೀರಂಗಗ ಮಂಗಳಂ ಇಂಗಿತ ಭಕ್ತರ ಅಂಗಸಂಗಾದವಗ ಪ ಸಿರಿತಳಕ ಮಂಗಳ ಕಾಲಿಯ ವರದನಾ ವರನಖಮಂಗಳ ಗಂಗೆ ಪಡಿದನಾ ಚರಣ ಕಮಂಗಳ ಅಹಿಲ್ಯ ಉದ್ಧಾರಗ ನೆರೆಜಂಘಗೆ ಮಂಗಳೆ ಶೊದಾನಂದನಾ 1 ತೊಡೆಗಳಿಗೆ ಮಂಗಳ ಗರುಡ ವಾಹನನಾ ನಡುವಿಗೆ ಮಂಗಳ ಧೃವ ಗೊಲಿದನ ಒಡಲ ಕಮಂಗಳ ಜಗವಳ ಕೊಂಬನಾ ಧೃಡ ನಾಭಿಗೆ ಮಂಗಳ ಬ್ರಹ್ಮ ಪಿತನಾ 2 ಉರ ಸಕ ಮಂಗಳ ಉಪಮನ್ಯು ಪ್ರೀಯನಾ ಸಿರಿವಕ್ಷಕ ಮಂಗಳ ಭೃಗು ರಕ್ಷನಾ ಕರಗಳಿಗೆ ಮಂಗಳ ಕರಿರಾಜ ವರದನಾ ಕೊರಳಿಗೆ ಮಂಗಳ ತುಳಸಿ ಧರನಾ 3 ಇದು ಶೃತಿಗೆ ಮಂಗಳ ಹನುಮನೇ ಕಾಂತನಾ ವದನಕ ಮಂಗಳ ವಿದುರ ಗೊಲಿದನಾ ಅದೇ ಫ್ರಾಣಕೆ ಮಂಗಳ ಪ್ರಲ್ಹಾದ ವತ್ಸಲನಾ ಮದನ ಮೋಹನನಾ 4 ಸಿರಸಕ ಮಂಗಳ ಫಣಿರಾಜಶಯನನಾ ದೊರೆತನಕ ಮಂಗಳ ಶ್ರೀ ಭೂರಮಣನಾ ಗುರುತನಕ ಮಂಗಳ ಉದ್ಬವತಾರಕನಾ ಕರುಣಿಗೆ ಮಂಗಳಾರ್ಜುನ ಬೋಧನಾ 5 ಪ್ರಭುಗೆ ಮಂಗಳ ಬಲಿ ವಿಭೀಷಣರ ಸ್ಥಾಪನಾ ಅಭಯಕ ಮಂಗಳಾಜಮೀಳ ಪಾಲನಾ ಅಭಿಮಾನಿಗೆ ಮಂಗಳಾ ಪಾಂಚಾಲಿಕಾಯಿದನಾ ಪ್ರಭೆಗೆ ಮಂಗಳಾ ರವಿ ಸೋಮಾತ್ಮಕನಾ 6 ಸಿರಿನಾಮಕ ಮಂಗಳ ನಾರದ ಪ್ರೀಯನಾ ಕ ಮಂಗಲ ಶಿವ ವಂದ್ಯನಾ ಗುರುವರ ಮಹಿಪತಿ ನಂದನಸಾರಥಿ ಬಿರದಿಗೆ ಮಂಗಳಾಂಬರೀಷ ನೊಡಿಯನಾ 7
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಮರುಳು ಮನವೇ ವ್ಯರ್ಥ ಚಿಂತಿಸುವಿಯಾಕೋ ಹರಿ ತಾನೇ ಕಾಯ್ವ ಮನ ದೃಢವಿರಲಿ ಬೇಕೊ ಪ ಎಲ್ಲಿ ನೋಡಿದರಲ್ಲಿ ಇರುವಾತಾ ಎಲ್ಲರನು ಪೊರೆವಾತಾ ಬಲ್ಲಿದನು ಬಲಿಯ ತುಳದಾತಾ ಸೊಲ್ಲು ಸೊಲ್ಲಿಗೆ ಬಂದು ಎಲ್ಲಿವನು ಪೇಳಿದರೆ ಕಲ್ಲಾಗುವನೇ ಸ್ವಾಮಿ ಪ್ರಲ್ಹಾದ ತಾತಾ 1 ಹಬ್ಬಿರುವ ಮಾಂಸಗಾಗರ್ಭದೊಳಿರುವಾಗ ಉಬ್ಬಸವ ಬಡುವಾಗ ಸಲಹಿದವರ್ಯಾರೋ ಅಬ್ಬರದ ನೋವಿನೊಳು ಒಬ್ಬನೇ ಬರುವಾಗ ಹೆಬ್ಬಾಗಿಲವ ನಿನಗೆ ತೋರಿದವರ್ಯಾರೋ 2 ವರದ ಹನುಮೇಶವಿಠಲನ ಚರಣವ ನಂಬು ಮೊರೆಯಾಗ್ವನಲ್ಲಾ ಹರಿ ಕರುಣ ಸಾಗರನೋ ಕರಿರಾಜ ಕರಿಯಲಾಕ್ಷಣಕೆ ಅವಸರದಲಿ ಗರುಡವಾಹನ ಕೃಷ್ಣ ಬರಲಿಲ್ಲವೇನೋ 3
--------------
ಹನುಮೇಶವಿಠಲ
ಮರೆಯದಿರು ಭವಶರಧಿ ಕೊನೆದೋರದು ಹರಿಯ ಮರೆತರೆ ಮನವೆ ಗತಿಯೇನು ಇಹುದು ಪ ಪಿಂತೆ ಧೃತರಾಷ್ಟ್ರ ನಿಶ್ಚಿಂತೆಯಲಿ ಸುತರಿಂದ ಎಂಥ ಸಿರಿವಂತನೆಂದೆನಿಸಿ ಮೆರೆದಾ ಕಂತುಪಿತನನು ಸುತರು ಪಂಥದಲಿ ನೆನೆಯದಿರೆ ಎಂಥವನ ಪಾಡಾದುದರಿಯೆ ನೀ ಮರುಳೇ 1 ತಾನೆ ಪರಬ್ರಹ್ಮನೆಂದರಿದಾ ಹಿರಣ್ಯಕಶು- ಪಾನೆಯೆಂದರಿದು ಮೆರೆಯೆ ಹರಿವೈರದಿ ಸೂನು ಪ್ರಲ್ಹಾದನಾನತನಾಗಿ ಮೊರೆವೋಗಲು ಹೀನ ರಕ್ಕಸನ ಪರಿಸರಿ ಏನಾಯಿತು 2 ಸತಿಸುತರ ಮುದದಿಂದ ಹಿತವಂತ ಬಳಿಗದಿಂ- ದತಿ ತೃಪ್ತವಾಗಿ ನಾನಿರುತಿರಲು ನಿನ್ನ ಧೃತಿಗುಂದಿ ಪವಡಿಸಿರೆ ಗೆಜ್ಜೆಪಾದವ ಕಂಡು ನುತಿಸುವೆನನವರತ ನರಸಿಂಹವಿಠಲರಾಯಾ 3
--------------
ನರಸಿಂಹವಿಠಲರು
ಯಾಕುಪೇಕ್ಷಿಸುವಿ ಕರುಣೈಕನಿಧಿ ನರಸಿಂಹ ವೈರಿ ಪುಂಜನನ ಶ್ರೀಕರನೆ ನೀನೆನಗೆ ಶರಣೆಂದು ನಂಬಿದೆನು ಸಾಕಬೇಕಯ್ಯ ದಾಸರನು ಪ. ಹುಡುಗ ಪ್ರಲ್ಹಾದ ಜಗದೊಡೆಯ ನೀನಹುದೆಂಬ ನುಡಿಯಲಾಲಿಸುತವನ ಪಿತನು ಕಡಿವೆನೆಂದೆದ್ದು ಮುಂದಡಿಯಿಟ್ಟು ಮುಂದರಸಿ ದೃಢ ಮುಷ್ಟಿಯಿಂದ ಖಂಬವನು ಬಡಿಯುತಿರೆ ಶತಕೋಟಿ ಸಿಡಿಲಂತೆ ಗರ್ಜಿಸುತ ಘುಡುಘುಡಿಸಿ ಬಂದು ದೈತ್ಯನನು ಪಿಡಿದೆತ್ತಿ ತೊಡೆಯ ಮೇಲ್ ಕೆಡಹಿ ದಶನಖದಿಂದ ಒಡಲ ಬಗೆದನೆ ನೀಚರನು 1 ನರಸಿಂಹನೆಂಬ ಈರೆರಡು ವರ್ಣವ ಜಪಿಸೆ ದುರಿತ ದೂರೋಡುತಿಹವೆಂದು ಸರಸಿಜೋದ್ಭವ ಶಂಭು ಸುರನಾಥ ಮುಖ್ಯಮುನಿ ವರರು ಕೊಂಡಾಡುತಿಹರಿಂದು ಅರಿತದನು ತ್ವತ್ಪಾದ ಸರಸಿಜವೆ ಶರಣೆಂದು ದೊರೆ ನಿನ್ನ ನಂಬಿಕೊಂಡಿಹೆನು ಅರಿಭಾವ ಸಾಧಿಸುವ ದುರುಳರನು ಪಿಡಿದವರ ಕರುಳ ತೆಗೆದೆತ್ತಿ ಬೀರದನು 2 ಅತಿ ಸೂಕ್ಷ್ಮಯಂದಗ್ನಿ ಗತಿಯನ್ನುಪೇಕ್ಷಿಸಲು ವಿತತವಾಗುವುದು ಕ್ಷಣದೊಳಗೆ ಜತನ ಮಾಡುವರದರ ಗತಿಯನಳಿಸುವುದು ಸ- ಮ್ಮತವಾಗಿರುವುದು ಜಗದೊಳಗೆ ಪತಿತಪಾವನ ಶೇಷಗಿರಿರಾಜ ನೀ ಯೆನಗೆ ಗತಿಯಾಗಿ ಸಲಹುವುದರಿಂದ ವಿತಥಾಭಿಲಾಷೆಯಾತತಾಯಿಗಳ ತ್ವರೆಯಿಂದ ಹತಮಾಡಿಸು ಶ್ರೀ ಮುಕುಂದ 3
--------------
ತುಪಾಕಿ ವೆಂಕಟರಮಣಾಚಾರ್ಯ