ಒಟ್ಟು 96 ಕಡೆಗಳಲ್ಲಿ , 34 ದಾಸರು , 91 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ದಾರಿಯ ತೋರೊ ಮುರಾರಿ ಮುಂದಣ ದಾರಿಯ ತೋರೊ ಮುರಾರಿಪ. ಕಂಸಾರಿ ಭವಾಂಜನ ಪಾರಾವಾರ ಉತ್ತಾರಣಗೈಯುವಅ.ಪ. ಮಾಯಾಶ್ರಿತನಾಗಿಹೆನಲ್ಲೊ ಮೋಕ್ಷೋ- ಪಾಯಭೇದಂಗಳ ಮರತೆನಲ್ಲೊ ಕಾಯಜಪಿತ ಕಮಲಾಯತಲೋಚನ ಕಾಯದೊಳಗೆ ಸನ್ನಾಯದಿ ನೋಡುವ 1 ದುಃಖವಿಲ್ಲದೆ ಸುಖವಿಲ್ಲ ಇದ ಒಕ್ಕಣಿಪರೆ ತುದಿಬುಡವಿಲ್ಲ ಸೊಕ್ಕಿ ನಡೆದು ಭವಯಿಕ್ಕುಳ ಬಾಯೊಳು ಸಿಕ್ಕಿದೆನಲ್ಲವೊ ರಕ್ಕಸವೈರಿಯೆ2 ಬಲ್ಲೆನೆಂಬರೆ ಬಲವಿಲ್ಲ ಭವ ಬಲ್ಲೆಯೊಳಗೆ ಸಿಲುಕಿದೆನಲ್ಲ ಕಲ್ಲೊಳಗ್ನಿ ಕಲಕಿರುವಂದದಿ ಮನ ದಲ್ಲಿ ನಿನ್ನ ಪದಪಲ್ಲವ ಭಜಿಸುವ3 ಸಾರರಹಿತ ಸಂಸಾರದಿ ಮಾಯಾ ನಾರಿ ಗೈದ ಮಮಕಾರದಿ ಘೋರ ದುರಿತವಪಹಾರಗೈವ ಲಕ್ಷ್ಮೀ ನಾರಾಯಣನು ಸೇರಿ ಸೇವಿಸುವಂಥ 4
--------------
ತುಪಾಕಿ ವೆಂಕಟರಮಣಾಚಾರ್ಯ
ದುಷ್ಟ ಮನುಜ ಕೇಳೊ ನೀ ಬಲು ಭ್ರಷ್ಟನಾದೆಯಲ್ಲೋ ಪ ಎಷ್ಟು ಪೇಳಿದರೇನು ನಿನಗೆಳ್ಳಿ- ನಷ್ಟಾದರು ಮತಿ ಬರಲಿಲ್ಲ ಅ.ಪ ಶುದ್ಧ ವೈಷ್ಣವನೆಂಬೀ ನೀನು ನಿ- ಷಿದ್ಧ ಕೂಳನು ತಿಂಬೀ ಬುದ್ಧಿಪೂರ್ವಕವಾಗಿ ನಮ್ಮ ಅನಿ ರುದ್ಧನ ನಾಮದ ನೆನೆಯದಲಿರುವಿ 1 ಬಾಯೊಳು ಬಹುನೀತಿ | ಬೊಗಳುವೆ ಹೇಯ ಕರ್ಮದಿ ಪ್ರೀತಿ ಮಾಯವಾದಿಯನುತವನು ಪೊಗಳುವೆ ಕಾಯಕ್ಲೇಶ ನಿನಗಾಗದಿರದು 2 ಭಂಗ ಹೋಗದೆ ಬಾಳೊ | ಮುಂದಕೆ ಭಂಗಿಕೋರನೆ ಕೇಳೊ ರಂಗೇಶವಿಠಲನ ಮೊರೆಹೊಗು ನಿನ ದುರಿ- ತಂಗಳು ಪೋಪವು ಮಂಗನಾಗಬೇಡ 3
--------------
ರಂಗೇಶವಿಠಲದಾಸರು
ನಿತ್ಯ ಶುಭಮಂಗಳಂ ಪ ಜಗದೇಕ ವೀರನಿಗೆ ಜಗದುದರ ದೇವನಿಗೆ ಜಗವ ಬಾಯೊಳು ತೋರ್ದ ಮಹಮಹಿಮಗೆ ಜಗವ ಸೃಜಿಸಿದ ಹರಿಗೆ ಜಗವಪಾಲಿಪದೊರೆಗೆ ಜಗವ ಸಂಹರಿಸುವಗೆ ಜಯ ಮಂಗಳಂ ಅ.ಪ ವರಮುನಿಯ ತಾಡನದಿ ಹೊರಡೆ ಲಕ್ಷ್ಮಿಯು ಆಗ ಗಿರಿಗಿಳಿದು ಬಂದು ಹುತ್ತದೊಳಗಿರಲು ಪರಮೇಷ್ಠಿ ಅರಸಿಪಾಲ್ಗರಿಯೆ ಗೋಪಾಲಕನ ವರಕುಠಾರದ ಪೆಟ್ಟಿಗಂಜಿ ನಟಿಸಿದವಗೆ 1 ಗಿರಿಗಿರಿಯ ಸಂಚರಿಸಿ ಅಡವಿಮೃಗ ಬೆನ್ನಟ್ಟಿ ಪರಮಪದ್ಮಾವತಿಯ ಮನದಿ ಕಂಡು ದುರುಳ ಮಾತುಗಳಾಡಿ ಶಿಲೆಯತಾಡಿತನಾಗಿ ಕೊರವಂಜಿ ರೂಪದಿಂ ಕಣಿಯ ಹೇಳಿದಗೆ 2 ಆಕಾಶರಾಜನಿಗೆ ಅಳಿಯನೆನಸಿಕೊಂಡು ಆಕೆ ಪದ್ಮಾವತಿಯ ಕೂಡಿದವ ಬೇಕಾದ ವರಗಳನು ಕೊಡುತ ಭಕ್ತರ ಪೊರೆವಶ್ರೀಕಾಂತ ಕಮಲನಾಭವಿಠ್ಠಲಗೆ 3
--------------
ನಿಡಗುರುಕಿ ಜೀವೂಬಾಯಿ
ನಿತ್ಯ ಪರಿಪೂರ್ಣ ಕಾಮ ಪಟ್ಟಾಭಿರಾಮ ತನ್ನ ಸ್ಮರಿಸುವ ಜನಕೀವನು ಕ್ಷೇಮ ಪ ಭಾಸ್ಕರವಂಶ ಭೂಷಣ ತರಣಿಜಮಿತ್ರ ಭವ್ಯ ಚರಿತ್ರ | ದಾಶರಥಿ ಕರುಣಾಳು ಸರೋಜನೇತ್ರ ಅ.ಪ ಜಡಮತಿಯಾದರೂ ಇವನ | ಮರೆಯಾ ಇನ್ನು ಧೃಢಮತಿಗೆ ತನ್ನನೇ ಕೊಡುವೆನೈಯ್ಯಾ 1 ತಮ್ಮೋಳು ತಾವು ತಿಳಿದು | ಭಜಿಸುವರು ಇನ್ನು ಹೆಮ್ಮೆಯ ಮಾತುಗಳು ಬಿಡಿರಿ ಜನರು 2 ರಾಮನು ನರನೆಂಬ ಪಾಮರನ ಬಾಯಲಿ ಮಣ್ಣು ಸೋಮಶೇಖರ ತನ್ನ ಸತಿಗೆ | ಪೇಳಿದ ಇವನ ನಾಮದ ಮಹಿಮೆ ಕುಣಿಕುಣಿದು 3 ನಿರುತಾ ಪೊಗಳುವವಿವನ ವೇದ | ಇವನಾ ಚರಣೆ ಸಜ್ಜನರಿಗೆ ಬಲುಸ್ವಾದ 4 ಸೇತುವೆ ಕಟ್ಟುವುದುಂಟೆ ಕೋತಿದಂಡುಗಳೆಲ್ಲಾ ವ್ರಾತ ರಹಸ್ಯವೇತಕೆ ಚಿಂತೆ 5 ಹೊರಗಿನ ಕಣ್ಣಿಂದ ಅರಿಯಲು ಸಾಧ್ಯವಲ್ಲಾ ನೆರೆ ಒಳಗಣ್ಣಲಿ ನೋಡಬೇಕು | ಸ ದ್ಗುರು ಕಟಾಕ್ಷವಾದವಗೆ ಜೋಕು 6 ಪ್ರತ್ಯಕ್ಷವಾದಿಗಳಿಗೆ ಮೃತ್ಯುವಿನ ಬಾಯೊಳು ಸತ್ತು ಹುಟ್ಟುವುದು ತಪ್ಪುವುದಿಲ್ಲಾ | ಆ ಪತ್ತು ಇದೇ ದುರ್ಜನಿರಿಗೆಲ್ಲಾ 7 ಮಗನು ಬ್ರಹ್ಮನು ಮೊಮ್ಮಗನು ರುದ್ರನು ಮೂ ಜಗವನಾಳುವ ನಾರಾಯಣನಿವನು | ತಾನು ಮಗುವಾಗಿ ದಶರಥಗುದಿಸಿದನು 8 ಮುನಿ ಯಾಗವ ಪಾಲಿಸಿ ವನಿತೆಯ ಶಾಪ ಬಿಡಿಸಿ ತನ್ನೊಳಗಿಟ್ಟು ತಾ ಹುಡುಕಿದನು 9 ನರನಾಗಿ ದೈತ್ಯರ ಮುರಿದು ದೇವತೆಗಳಿಗೆ ಗರಸನಾಗಿ ಸಾಕೇತಪುರದಿ ಪೊಳೆದ 10 ನರನು ಪಾಮರನು ಹ್ಯಾಗೆ ತಿಳಿಯುವನು | ಸಂಸೃತಿ ಶರಧಿಯೊಳು ಬಿದ್ದು ಬಳಲುವನು11
--------------
ಗುರುರಾಮವಿಠಲ
ನಿರವದ್ಯ ಪ ಸದ್ಗುಣಪೂರ್ಣ ನೀನೇನೊ ಮೂಢ ಅ.ಪ ಬ್ರಹ್ಮಜಿಜ್ಞಾಸದ ಕ್ರಮವ | ನಿರ- ಸಮ್ಯಕ್ ಶೋಧಿಸದೇ ಅಹಂ ಬ್ರಹ್ಮಾಸ್ಮಿ ಎಂಬುವ ಆಮ್ನಾಯ ವಾಕ್ಯಕೆ ಅರ್ಥವ ತಿಳಿಯದೆ 1 ಕಾಕುಮಾಡುತಲರ್ಥ ಪೇಳ್ವುದಧರ್ಮ ಏಕವಾವುದು ಇನ್ನು ಏಕವಾವುದು ಎಂದು ನೀಕಳವಳಿಸುತ ನಿಜತತ್ವವರಿಯದೆ 2 ಆತ್ಮನಾತ್ಮಗಳೆಂದರೇನೊ | ಪರ- ಮಾತ್ಮ ಜೀವಾತ್ಮರೊ ಜೀವದೇಹಗಳೊ ಸ್ವಾತ್ಮಾನುಸಂಧಾನದಿಂದಲಿ ನೋಡ- ಧ್ಯಾತ್ಮ ವಿದ್ಯಾಭ್ಯಾಸ ಮಾಡದೆ ಬಾಯೊಳು 3 ರವಿ ಗಣಪತಿ ಶಿವ ಶಕ್ತಿ | ಭೈ- ರವ ವಿಷ್ಣು ಎಂಬುವ ಷಣ್ಮತಯುಕ್ತಿ ಎವೆ ಮಾತ್ರ ಸ್ವಾತಂತ್ರ್ಯವಿಲ್ಲ ಕೇಳ್ ಸರ್ವಶ- ಬ್ದವುಯಾವನಲ್ಲಿ ಸಮನ್ವಯವರಿಯದೆ 4 ಜೀವ ಜೀವರಿಗೆಲ್ಲ ಭೇದ | ವಿದುಸ್ವ ಭಾವವಾಗಿರುವುದು ಯಾತಕೀವಾದ ಜೀವರೂಪದಿ ಸರ್ವಜೀವರೊಳಗಿದ್ದು ದೇವಸಕಲ ಕರ್ಮಗಳ ಮಾಡಿಸುವನು 5 ಕರ್ಮವೆಂಬುದು ಅವನಿಗೆ ಲೋಪವಿಲ್ಲ ನಿರ್ಮಲ ಸಚ್ಚಿದಾನಂದ ಬ್ರಹ್ಮ ಎಂದು ನೀನೆ ಪೇಳುವೆಯಲ್ಲ ನಿನಗೆ ನಿಜವಿಲ್ಲ 6 ಸೂರ್ಯ | ಚಂದ್ರ ಕಿನ್ನರ ಸಿದ್ಧ ಸಾಧ್ಯ ನರತಿರ್ಯಕ್ ಪಶುಪಕ್ಷಿ ಕೀಟಾದಿ ನಾಮಗಳು ಪರಮಾತ್ಮನಲಿ ಸಮನ್ವಯವರಿಯದೆ 7 ಮಾಯಾ ಪ್ರಪಂಚವಿದೆನ್ನುತ | ನಿ- ಮಾಯೆಯಧಿಷ್ಠಾನದೊಳನಂತ ಜೀವನಿ- ಕಾಯವು ಗುಣಗಳಿರುವ ಮರ್ಮವರಿಯದೆ 8 ಸಾರ ಭೇದವಬದ್ಧ ಅಭೇದ ನಿಶ್ಚಯವೆಂದು ವಾದಿಸುವುದಕೇನಾಧಾರ ನಿನಗುಂಟೊ 9 ಜೀವಬ್ರಹ್ಮೈಕ್ಯವೆ ಮುಕ್ತಿ | ವೇ- ದಾವಳಿಗಳ ಪರಮಾರ್ಥದ ಉಕ್ತಿ ಜೀವನಿಂದೇನಾಗುವುದೆಂಬುದರಿಯದೆ 10 ದ್ವಾಸುಪರ್ಣವೆಂಬುವುದಕೆ | ವಿಷ- ಯಾಸಕ್ತ ಜೀವ ಆತ್ಮನು ಸಾಕ್ಷಿಯದಕೆ ನೀಸರ್ವೋತ್ತಮನಾದರೆ ಇನ್ನು ಮಹದಾದಿ ಈ ಸೃಷ್ಟಿ ಸ್ಥಿತಿಲಯವೇತಕೆ ತಿಳಿ ಜೋಕೆ 11 ಅಂಧ ಪರಂಪರವಾದ | ಬಿಟ್ಟು ಚಂದಾಗಿ ಪರಿಶೋಧಿಸು ಭÉೀದಾಭÉೀದ ತಂದೆತಾಯಿಗು ಮಗನಿಗೂ ಎಷ್ಟು ಭÉೀದ ಆ- ಪರಿ ತಿಳಿದರೆ ನಿರ್ವಾದ 12 ಪೂರ್ವೋತ್ತರ ವಿರೋಧವಿಲ್ಲ | ದಂತೆ ಸರ್ವಶೃತಿಗಳರ್ಥ ತಿಳಿದು ನುಡಿಸೊಲ್ಲ ಗರ್ವವೇತಕೆ ನಿನಗಿದರೊಳೇನಿಲ್ಲ ನೀ ಸರ್ವಜ್ಞನೊ ಕಿಂಚಜ್ಞನೊ ನೋಡು ದೃಢಮಾಡು 13 ಯೋಗ ಒದಗಿದಾಗ ಒಂದೆ ಎಂಬುವರೆ ಈಗೇನು ಆಗೇನು ಇಲ್ಲೇನು ಉಂಟೆ ನಾ- ವಾಗಲು ಜೀವರಿಗೆ ಹರಿಕರ್ತನಾಗಿರೆ 14 ಕಾಲಕರ್ಮ ಸ್ವಭಾವ ಜೀವ | ಹರಿಯ ಆಲಸ್ಯ ಬಿಟ್ಟು ಅವನಿಗೆ ದಾಸನಾಗದೆ 15 ಆಲೋಚಿಸಿದರರ್ಥ ನಿಜವಾಗಿ ತಿಳಿಯದೆ 16 ಜ್ಞಾನವೆ ನಾನು ಕರ್ಮವೆ ಮಿಥ್ಯವೆಂದು ನೀನಾಡುವುದಕೇನು ನೆಲೆ ಮೂಲ ಯಾವುದು ಸ್ವಾನುಭವವೋ ಶಾಸ್ತ್ರವೊ ಮನಕೆ ತೋರಿದ್ದೊ 17 ಹೋಮ ಜಪವು ಸ್ನಾನ ದಾನ | ನಿತ್ಯ ಭೃತ್ಯ ನ್ಯಾಯವರಿಯದವನು ಶುದ್ಧ ತತ್ವಾರ್ಥಿ ಎನಿಸುವನೆ 18 ಕರ್ತನು ನೀನೆಂದು ಭೃತ್ಯನು ನಾನೆಂದು ತೀರ್ಥಪಾದನ ದಿನದಿನದಿ ಸಂಸ್ತುತಿಸದೆ 19 ಪಾದ ವನಜಕೊಪ್ಪಿಸಿ ಸಂಸಾರದ ಕರಕರೆಯ ಮನದಿ ಲೆಕ್ಕಿಸದೆ ಚಿಂತನಗೈದು ಸರ್ವತ್ರ ಘನಮಹಿಮನ ದಿವ್ಯಗುಣರಾಶಿ ಪೊಗಳದೆ 20 ಹೊರಗಣ್ಣ ಮುಚ್ಚಿ ಮೋದದಲಿ | ಒಳ- ಗಿರುವಾಧಾರಾದಿ ಚಕ್ರಗಳ ಸ್ಥಾನದಲಿ ಸರಸಿಜಭವ ಶಂಕರಾದಿ ಸುರರ ನೋಡಿ ತರತಮವಾಗಿ ಮುಂದಿನ ಪರಿಯ ತಿಳಿಯದೆ 21 ಮಂಗಳ ಮೂರ್ತಿಯ ನೋಡಿ ಕೊಂಡಾಡಿ ಅ- ನಂಗಗೆ ಸಿಲುಕದೆ ಅರ್ಥಿಯ ಪೊಂದದೆ 22 ಎಪ್ಪತ್ತೆರಡು ಸಹಸ್ರನಾಡಿ | ಗಳೊ- ಳೊಪ್ಪುವ ಭಗವದ್ರೂಪಗಳನು ನೋಡಿ ಅಪ್ಪ ನೀನೆಂದು ಭಕ್ತಿಯಲಿ ಕೊಂಡಾಡಿ ಪುನ- ರಾವರ್ತಿರಹಿತ ಶಾಶ್ವತ ಸುಖಿಯಾಗನೆ 23 ವಿಪರೀತ ಮತಿಪುಟ್ಟದಂತೆ | ಧ್ಯಾನ- ಗುಪಿತವಾಗಿರುತ ಜನರಿಗೆ ಹುಚ್ಚನಂತೆ ಅಪವರ್ಗಾಪೇಕ್ಷಯಿಂ ನಿಷ್ಕಾಮಿಯಾಗದೆ24 ಆಪಾದಮಸ್ತಕ ದೇಹ | ದಿಸು ರಾಪದಜನಕ ಶ್ರೀಗುರುರಾಮವಿಠಲ ವ್ಯಾಪಾರವೆಲ್ಲ ಮಾಡಿಸುವನೆಂದರಿತರೆ ಸಾಫಲ್ಯನಾಗಿ ಜೀವನು ಧನ್ಯನಾಗುವ 25
--------------
ಗುರುರಾಮವಿಠಲ
ನೀನೆ ಗತಿಯೊ ಎನಗೆ ಜಾನಕೀಶನೆ ಎನ್ನ ಮಾನದಿಂ ಕಾಯಲಿಕ್ಕೆ ಪ ದೀನರ ಸಮಯಕ್ಕೆ ನೀನಾಗದಿರ್ದರೆ ಜ್ಞಾನಿಗಳೊಪ್ಪುವರೇ ಜಾಹ್ನವೀಜನಕ 1 ಮೃತ್ತಿಕೆ ಬಾಯೊಳು ತತ್ತರಬಹುತಿಹ್ಯೆ ಭಕ್ತನ ಪಿಡಿದೆತ್ತಿ ತುರ್ತು ಸಲಹು ದೇವ 2 ಉಗ್ರತಾಪದಿ ಸಮಗ್ರ ಪರಿಹರಿಸೆನ್ನ ಶೀಘ್ರದಿ ಬಾ ಭಕುತಾಗ್ರಣಿ ಶ್ರೀರಾಮ 3
--------------
ರಾಮದಾಸರು
ನೀಲಮೇಘಶ್ಯಾಮಾ ಬಾರೊ ನೀವೊಂದು ಮುತ್ತ ತಾರೋ ಪ. ನೀರಜಾಕ್ಷ ನಲಿದು ಬಾರೊ ನಗೆಮೊಗವನ್ನೆ ತೋರೊ ಅ.ಪ. ನಿನ್ನ ಸಮರ್ಯಾರೊ ಕೃಷ್ಣಾ ಸನ್ನುತಾಂಗ ಓಡಿ ಬಾರೋ ಬೆಣ್ಣೆಕೋಲು ಬೆಂಡು ಬುಗುರಿ ಚಿನ್ನ ರನ್ನ ಕೊಡುವೆ ಬಾರೋ 1 ಮುತ್ತಿನಂಗಿ ಕೊಡಿಸುವೇನೂ ರತ್ನತಿಲಕವಿಡುವೆ ಬಾರೋ ವತ್ತಿ ನಿನ್ನ ಬಾಯೊಳೂದೆ ರತ್ನ ಕೊಳಲ ಕೊಡುವೆ ಬಾರೋ 2 ಸ್ವರ್ಣಮಯೂರಂಗವ ತೋರೊ ನೀಲವರ್ಣಾ ಚಂದ್ರಬಿಂಬ ಬಾರೋ 3 ಭಕ್ತಿ ಸುರಧೇನುಬಾರೊ ಮುಕ್ತಿದಾತ ಶ್ರೀ ಶ್ರೀನಿವಾಸ ಮಾಧವ ಬಾರೋ 4
--------------
ಸರಸ್ವತಿ ಬಾಯಿ
ನೋಡಮ್ಮಮ್ಮಾ ಎಂಥವನಿವಾ ಚಿನ್ನನೆ| ಗೋಪಿಯ ಕಂದಾ ಅಂತವ ದೋರಗುಡನೆ ಪ ಸಗಟನ ಮುರಿದೊತ್ತಿದ|ಮೊಲೆಯ ಕೊಟ್ಟ| ಮುಗುದೆಯ ಪ್ರಾಣ ಹೀರಿದಾ 1 ವಿಷಮಡು ಕಲಕಿದನೆ|ಕಾಳಿಂಗನಾ| ವಸುಧೆಗೆ ಎಳೆತಂದನೆ 2 ಪಶುಪಕ್ಷಿ ಮೃಗಾಂಗನೇರು|ಕೊಳಲಧ್ವನಿಗೆ| ನಿಸಿದಿನಿ ಮರುಳಹರು3 ತಿನಬ್ಯಾಡಮಣ್ಣವೆಂದರೆ|ಬಾಯೊಳು ಜಗವ| ದೋರಿದ ಜನ ಬೆದರೆ 4 ತಂದೆ ಮಹಿಪತಿ ಸ್ವಾಮಿಯ|ಹೇಳಲಿ ನಾನು ಒಂದೆರಡೆಂದು ಲೀಲೆಯ 5
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಪಂಚಮಿಯ ದಿನ ವಿಭವ ನಮ್ಮ ಶ್ರೀನಿವಾಸನ ಮಹಾತ್ಮವ ಮಾನಿನಿ ರನ್ನೆ ನೀ ಪೇಳೆ ಭಕ್ತಾ- ಧೀನದ ಚರಣದ ಲೀಲೆ ಭಾನು ಉದಯದಲಿ ವೀಣಾದಿ ಸು- ಗಾನ ವಾದ್ಯ ನಾನಾವಿಧ ರಭಸದಿ1 ಎತ್ತಲು ನೋಡಿದಡತ್ತ ಜನ- ಮೊತ್ತವಿಲಾಸವಿದೆತ್ತ ಚಿತ್ತದಿ ನಲಿನಲಿದಾಡಿ ತೋಷ- ವೆತ್ತಿರುವನು ಒಟ್ಟುಗೂಡಿ ಸುತ್ತುಮುತ್ತು ಒತ್ತೊತ್ತಿಲಿಹರು ವಿ- ಪ್ರೋತ್ತಮ ಶ್ರೀಹರಿಭಕ್ತರ ಮಯವಿದು2 ಚಾಮರ ಛತ್ರ ಸಿಗುರಿಯು ಜನ- ಸ್ತೋಮ ಪತಾಕೆ ತೋರಣವು ಹೇಮದ ಕಂಚುಕಿ ಈಟಿ ಗುಣ- ಧಾಮನ ಬಿರುದುಗಳ್ ಕೋಟಿ ಆ ಮಹಾಭೇರಿ ಪಟಹ ನಿಸ್ಸಾಳಕ ಸಾಮಗಾನ ಸಾಮ್ರಾಜ್ಯವೋಲಿಹುದು3 ಬಾಲರು ವೃದ್ಧ ಯೌವನರು\ಜನ- ಜಾಲವೆಲ್ಲರು ಕೂಡಿಹರು ಲೋಲ ಸ್ರೀಮುಂದ್ರಾಂಕಿತದಿ ಬಹು ವಿ- ಶಾಲ ದ್ವಾದಶನಾಮ ಮುದದಿ ಆಲಯದೊಳಗಿಹ ಬಾಲಕಿಯರು ಸಹ ಸಾಲಂಕೃತ ಸಮ್ಮೇಳದಿ ನಲಿವರು4 ಒಂದು ಭಾಗದಿ ವೇದಘೋಷ ಮ- ತ್ತೊಂದು ಭಾಗದಿ ಜನಘೋಷ ಇಂದಿನ ದಿನದತಿಚೋದ್ಯ ಏ- ನೆಂದು ವರ್ಣಿಸುವದಸಾಧ್ಯ ಚಂದಿರಮುಖಿ ಯಾರೆಂದೆನಗುಸುರೆಲೆ ಮಂದರಧರ ಗೋವಿಂದನ ಮಹಿಮೆಯ5 ಊರ್ವಶಿ : ಕೇಳಿದ್ಯಾ ನಳಿನಾಕ್ಷಿ ಶ್ರೀಹರಿಲೀಲೆ ಪೇಳಲೇನದಾ ಮೂರ್ಲೋಕದೊಳಗೀ ವಿ- ಶಾಲವ ನಾ ಕಾಣೆಪ. ಸೋಜಿಗ ಸೌಭಾಗ್ಯ ಸಂಪದಕಿದು ಬೀಜ ಕಾಣೆಲೆ ರಾಜೀವನಾಭನ ಪೂಜಾವಿನೋದದಿ ರಾಜವದನೆ ವನಭೋಜನದಿಂದಿನ1 ನೇತ್ರದ ಕಲ್ಮಷವಡಗುವದು ಪವಿತ್ರವಾಗಿಹ ಗೋತ್ರಕುಮಾರಿ ಪ್ರೀತ್ಯರ್ಥದಿ ಕೊಟ್ಟಿಹ ರಾತ್ರಿ ಪೂಜೆ ಗೈವ ಮಾತ್ರದಿ ಪೊರಟರು2 ನೂತನವೆಂದು ನೀ ಪೇಳುವಿ ಚಂದಿರ ಮುಖಿ ಜನಸಂದಣಿಗಳು ಮಹಾ ಮಂದಿ ಓಲೈಸುವರಿಂದು ಮುಕುಂದನ3 ಬಾರೆ ನಾರೀಮಣಿ ವೈಯ್ಯಾರೆ ನೀರೆ ಬಾರೆಪ. ನಿನ್ನಿಂದಾಯಿತ್ತು ಪುಣ್ಯ ಸಂಪಾದನೆ ಕಣ್ಣಾರೆ ಕಾಣುವ ಯೋಗಭೋಗ1 ಎನಗತಿ ಮನವು ನಿನಗತಿ ಛಲವು ಜನುಮಾಂತರ ಪುಣ್ಯವೈಸೆ ನೀ2 ರಂಭೆ : ಏನಮ್ಮ ಬಾರಿತ್ತಲು ನೋಡೀತನ್ಯಾರಮ್ಮಾ ಭಾನುಕೋಟಿ ಪ್ರಕಾಶದಿಂದ ಮೆರೆವನಮ್ಮಾಪ. ಅನವರತದಿಂದ ಬರುವ ಪುರುಷನಲ್ಲ ಮೀನಕೇತನ ಶತರೂಪ ಕಾಣೆ1 ನೂತನ ಪುರುಷನಿವನ್ಯಾರೆಂದರಿಯೆನಮ್ಮಾ ಶಾತಕುಂಭದ ಮಂಟಪವೇರಿ ಬರುವನಮ್ಮಾ2 ಸುರುಚಿರಫಣಿಪ ಪೆಡೆ ಶಿರದೊಳಿರುವದಮ್ಮಾ ತರತರ ರತ್ನವರದ ಬಾಯೊಳಿರುವದಮ್ಮಾ3 ಕೊರಳೊಳು ಕೌಸ್ತುಭವ ಧರಿಸಿಕೊಂಡಿಹನಮ್ಮಾ ಪರಮ ಪುರುಷನಂತೆ ತೋರುವನು ಅಮ್ಮಾ4 ಬಾಲಾರ್ಕನಂತೆ ಮುಖ ಪ್ರಜ್ವಲಿಪುದು ನೀಲಮಾಣಿಕ್ಯ ಕಾಂತಿಯ ಸೋಲಿಪುದು5 ತೋರಲರಿಯೆ ಕಾಲಿಗೆರಗುವೆನು ಪೇಳಬೇಕು ಸಖಿಯೆ6 ಕರದೊಳು ಶಂಖಚಕ್ರವ ಧರಿಸಿಕೊಂಡಿಹನಮ್ಮಾ ಬೆರಳೊಳು ವಜ್ರದುಂಗುರವನಿಟ್ಟವನಮ್ಮಾ7 ವರರತ್ನಖಚಿತದಾಭರಣದಿಂದ ಮೆರೆವ ಚರಣ ಸರೋಜದೊಳು ರೇಖೆಯಿಂ ಶೋಭಿಸುವ 8 ವಲ್ಲಭೆಯರ ಸಹಿತುಲ್ಲಾಸದಿ ಬರುವ ಖುಲ್ಲರ ಮಾನಸಕೆ ಝಲ್ಲೆನಿಸಿ ಮೆರೆವ9 ಬಲ್ಲಿದ ಪುರುಷನಿವನೆಲ್ಲಿಂದ ಬಂದ ಎಲ್ಲವ ಪೇಳೆಲೆಗೆ ನಲ್ಲೆ ಸದಾನಂದ10 ಊರ್ವಶಿ : ನೋಡು ನಿತ್ಯಾನಂದಕರನ ಮೂಡಗಿರಿಯಿಂದೋಡಿ ಬಂದನ ನೋಡೆಪ. ಛಪ್ಪನ್ನೈವತ್ತಾರು ದೇಶ ಸರ್ಪಶೈಲ ರಾಜವಾಸ ಚಪ್ಪರ ಶ್ರೀ ಶ್ರೀನಿವಾಸ1 ತಿರುಗುತ್ತಿಪ್ಪಾ ತಿರುಮಲೇಶ ಶರಣ ರಾಮನ ಭಕ್ತಿಪಾಶ ದುರುಳಿನಲಿ ನಿಂದಿರ್ಪಶ್ರೀಶ ತರಿಸುವನು ಕಾಣಿಕೆ ವಿಲಾಸ2 ಪಟ್ಟದರಸನಾದ ದೇವ ಸೃಷ್ಟಿಯಾಳುವಜಾನುಭಾವ ದೃಷ್ಟಿಗೋಚರವಾಗಿ ಕಾಯ್ವ ಇಷ್ಟವೆಲ್ಲವ ಸಲಿಸಿ ಕೊಡುವ 3 ಊರ್ವಶಿ : ಬಂದ ಗೋವಿಂದ ಸಾನಂದದಿ ಭಕ್ತರ ವೃಂದ ನೆರಹಿ ವನಕೆ ಅಂದಣವೇರಿ ಮುಕುಂದನೊಲವಿನಲಿ ಕುಂದಣ ಮಂಟಪವೇರಿ ಮತ್ತೊಬ್ಬನು ಸಂದರುಶನವಂ ನೀಡುತ ಯಿಬ್ಬರು ಒಂದಾಗುತ್ತಾನಂದವ ಬೀರುತ್ತ 1 ಅಕ್ಕ ನೀ ನೋಡು ಬಹುಮಾನದಿ ಸಿಕ್ಕಿದಿ ಬಿರುದು ಪೊತ್ತಾ ಉಕ್ಕುವದತಿ ತೋಷ ಸ್ತುತಿಪಾಠಕ ಜನಗಳ ಮಿಕ್ಕಿ ನೊಡುವ ನೋಟಕೆ ಮನಸಿನೊಳು ಝಕ್ಕೆನ್ನುವ ಕ್ಷಿತಿಗಕ್ಕಜ ತೋರುತ್ತಾ 2 ಪವಿತ್ರ ನಿಶಾನಿಧಾರಣಾ ಪವಿತ್ರಗೈಯುವ ಕಾರಣ ಮಿತ್ರಮಂಡಳವನು ಮೀರಿ ಪೊಳೆವುತಿಹ ರತ್ನಖಚಿತ ಮಂಟಪದಲಿ ಮಂಡಿಸಿ ಧಾತ್ರಿಯೊಳಗೆ ಅನ್ಯತ್ರವಿಲ್ಲೆಂಬುವ ಕೀರ್ತಿಯ ಧರಿಸಿ ಜಗತ್ರಯಪಾವನ 3 ನಿಸ್ಸಾಳ ಪಟಹ ಭೂರಿ ಜನ ಜಾಲ ಕೂಡಿರುವ ಮೇಳವಿಸುತ್ತನುಕೂಲಿಸಿ ಬಹು ಬಿರು ದಾಳಿಗೆ ಸಂಭ್ರಮದೇಳಿಗೆಯಿಂದಲಿ ಕೋಲು ಪಿಡಿದು ಓಹೋಯೆಂಬಂಥ ವಿ- ಶಾಲ ಭಕ್ತರ ಮೇಲು ಸಂತೋಷದಿ 4 ದೇಶದೇಶದ ಜನರು ನಾನಾ ವಿಧ &ಟಿ
--------------
ತುಪಾಕಿ ವೆಂಕಟರಮಣಾಚಾರ್ಯ
ಪಾದ ಸೇವೆಯಿಂದಲಿ ಸುಖಿಸೋಳೊ ಲಕ್ಷ್ಮೀಲೋಲ ಪಾಡಿ ತೂಗುವಳೊ ಮೋಹದಲಿ ಯಶೋದ ಯೋಗಿ ಜನರು ಕೊಂಡಾಡಲ್ವಿನೋದ 1 ಜಲಧಿ ಭೂದೇವಿ ಪ್ರಜ್ವಲಿಸುವ ಆಲದೆಲೆಯು ತಾನಾಗಿ ನಿದ್ರೆಹಸಿವು ಬಿಟ್ಟು ನಿರುತದಿ ಆತನ- ಲ್ಲಿದ್ದಳಂಭ್ರಣಿ ಸ್ತೋತ್ರದಲಿ ಭೂದೇವಿ 2 ವಟದ ಎಲೆಯ ಮೇಲೆ ವಟುವಾಗಿ ಮಲಗಿ ಉಂ- ಗುಟವ ಬಾಯೊಳಗಿಟ್ಟು ಮುದದಿ ಚಪ್ಪರಿಸೆ ಕಟುತರದಲಿ ನಾಲ್ಕು ವೇದವ ತೋರುತ ಪಟುತರದಲಿ ಯೋಗನಿದ್ರೆ ಮಾಡಿದನು 3 ಹದಿನಾಲ್ಕು ಲೋಕ ತನ್ನುದರದಲ್ಲಿಡುವ ಪದುಮಾಕ್ಷ ಶ್ರೀಕೃಷ್ಣ ಪರಮಾತ್ಮ ಲಾಲಿ ಅಜಭವಸುರರೆಲ್ಲ ಭಜನೆಯ ಗೈವರು ಮುದದಿ ಶಯನವ ಮಾಡೊ ಮಧು ಮುರಾಂತಕನೆ 4 ಕಡಲಶಯನ ಹರಿ(ಯ) ತೊಟ್ಟಿಲೊಳಿಟ್ಟು ಬಿಡದೆ ನಾರಿಯರೆಲ್ಲ ಪಾಡಿ ತೂಗುವರು ಪೊಡವಿಗೊಡೆಯ ನಿನ್ನ ನಾಮ ಕೊಂಡಾಡಲು ಬಿಡದೆ ಭಕ್ತರ ಕಾಯೊ ಭೀಮೇಶಕೃಷ್ಣ 5
--------------
ಹರಪನಹಳ್ಳಿಭೀಮವ್ವ
ಪೆಣ್ಣೆಂದರಿದು ಮೆಚ್ಚಿ ಕೆಡಬೇಡ ನಿನ್ನ ತಿನ್ನುವ ಮರಿಗಿದು ತಿಳಿ ಮೂಢ ಪ ತಾಯಾಗಿ ಮೊದಲು ನಿನ್ನ್ಹಡೆದಿಹ್ಯದು ಪುನ: ಮಾಯಾಗಿ ಬೆನ್ನ್ಹತ್ತಿ ಸುಡುತಿಹ್ಯದು ಬಾಯೊಳು ಮೊಲೆಯಿಟ್ಟು ಬೆಳೆಸಿಹ್ಯದು ಮತ್ತು ಕೈಯೊಳು ಮೊಲೆಯಿಟ್ಟು ಕೊಲುತಿಹ್ಯದು 1 ಸುತನೆಂದು ಮುದ್ದಿಟ್ಟು ಒಲುತಿಹ್ಯದು ಮತ್ತು ಪತಿಯೆಂದು ನಿಜಮತಿ ಸುಲಿತಿಹ್ಯದು ರತಿಗೊಟ್ಟು ಅತಿಮೋಹದಾಡುವುದು ನಿನ್ನ ಗತಿಗೆಡಿಸಿ ಜವಗೀಡು ಮಾಡುವುದು 2 ಕಣ್ಣುಸನ್ನೆಯ ಮಾಡಿ ಕರಿತಿಹ್ಯದು ಬಹು ಬಣ್ಣ ಮಾತಾಡಿ ಸೋಲಿಪುದು ಕುನ್ನಿಯಂತೆ ನಿನ್ನ ಮಾಡುವುದು ಬಲು ಬನ್ನಬಡಿಸಿ ಬಾಯಿ ಬಿಡಿಸುವುದು 3 ಶ್ವಾನನಂದದಿ ಕೂಗಲ್ಹಚ್ಚುವುದು ಮಾನಾಭಿಮಾನ ತೊರೆಸುವುದು ನಿಜ ಜ್ಞಾನಕೆಡಿಸಿ ಪಾಪದ್ಹಾಕುವುದು 4 ತಂದ ಪುಣ್ಯವನೆಲ್ಲ ಸೆಳೆತಿಹ್ಯದು ಬಲು ಮಂದನೆನಿಸಿ ಕುಣಿಸ್ಯಾಡುವುದು ತಂದೆ ಶ್ರೀರಾಮಪ್ರೇಮ ಕೆಡಿಸುವುದು ನಿಜಾ ನಂದ ಮುಕ್ತಿಗೆ ಕಿಡಿ ಹಾಕುವುದು 5
--------------
ರಾಮದಾಸರು
ಪ್ರಳಯಜಲದಲಿ ನೀನಾಲದೆಲೆಯ ಮ್ಯಾಲೆ ಹಲವು ಜೀವರು ನಿನ್ನ ಹೃದಯದೊಳಿರಲು ಕೆಲವುದಿನದಿ ಯೋಗನಿದ್ರೆಯೊಳಿರೆ ಒಲವಿಂದ ಸೃಜಿಸುವೆನೆಂದು ನೇಮಿಸುವೆ1 ಪ್ರಕೃತಿಯ ಮೂಲಕಾರಣವನು ಮಾಡಿ ಸಕಲತತ್ವಗಳ ಸಮ್ಮೋಹದಿ ಕೂಡಿ ವಿಕಳಿಸದಂತೆ ತನ್ಮಾತ್ರೆಯ ಕೂಡಿ ಅಖಿಳೇಶ ಮಹತತ್ವಗಳ ನಿರ್ಮಿಸಿದೆ 2 ಮಹತತ್ವದಿಂದಹಂಕಾರವ ಪುಟ್ಟಿಸಿ ಅಹಂಕಾರದಿಂದ ವೈಕಾರಿಕ ಮೊದಲಾದ ತ್ರಿವಿಧತತ್ವಗಳ ನಿರ್ಮಾಣವÀ ಮಾಡ್ದೆ ಮಹಮಹಿಮೆಯ ಮೆರೆದೆ ಜಗವರಿಯೆ 3 ಇಪ್ಪತ್ತುನಾಲ್ಕು ಅಯಿದಾರುತತ್ವಗಳಿಂದ ತÀಪ್ಪದೆ ಬೊಮ್ಮಾಂಡವ ನಿರ್ಮಿಸಿದೆ ಸರ್ಪಶಯನನಾಗಿ ನಾಭಿಕಮಲದಿಂದ ಅಪ್ಪಬ್ರಹ್ಮನ ಪ್ರಸವಿಸಿದೆ ನೀನೆಂದು 4 ಒಂದು ಮೂರುತಿಯಿಂದ ಸೃಷ್ಟಿಯ ಮಾಡಿ ಮತ್ತೊಂದು ಮೂರುತಿಯಿಂದ ಪಾಲನೆ ಮಾಡಿ ಒಂದು ಮೂರುತಿಯಿಂದ ಸಂಹರನೆ ಮಾಡಿ ಒಂದೊಂದು ಮಹಿಮೆಯು ಅನಂತಾದ್ಭುತವು 5 ಒಂದು ರೋಮಕೂಪದಲಿ ಬ್ರಹ್ಮಾಂಡ ಇಂದಿರೆ ಅನಂತಕೋಟಿ ನಾಮಗಳಲ್ಲಿ ಬಂದು ಗೋಕುಲದಲ್ಲಿ ಶಿಶುವಾಗಿ ತೋರಿದೆ ಆ- ಸುರರು 6 ಜನನಮರಣ ಭಯದಿಂದ ದೇವತೆಗಳು ಅನುದಿನ ನಿನ್ನ ಪೂಜೆಯ [ಮಾಡೇವೆನಲು] ಪುನರಾವೃತ್ತಿ ರಹಿತವಾದ ಫಲವೆತ್ತಿ ಮನುಜನಂತೆ ತೋರುವುದೇನುಚಿತವೊ 7 ಒಮ್ಮೆಕಾಣಲು ಸಿರಿರಮ್ಮೆ ಚೆಲುವನ ಒಮ್ಮನದಿಂದ ನೋಡೇನೆಂಬ ಭಯದಿಂದ ರಮ್ಮೆ ಮೊಗವ ತಗ್ಗಿಸಿ ನಾಚಿಸಿದಳೆ 8 ದÀಶದಿಕ್ಕು ನೋಡುತ್ತ ಭಯದಿಂದ ಕಮಲಜ ಶಶಿನಾಳದೊಳಗಿದ್ದ ದಾರಿಯ ಕಾಣದೆ ದಶಶತವರುಷ ನಿಮ್ಮನು ಧ್ಯಾನಿಸುತಿರೆ ವಸುಧೀಶ ನಿಮ್ಮ ನಿಜವ ತೋರಿದಿರಿ 9 ಆಲೋಚನೆಯಿಂದ ಸರ್ವ ವಿಷಯದಿಂದ ಲೀಲೆಯಿಂದ ಪಾಡಿ ಕಮಲಸಂಭವನ ವೋಳು ಮಾಡದಂತೆ ಒಳಿತಾಗಿ ತಲೆವಾಗೆ ಮೂಲ್ಲೋಕವ ಕೃಪೆಯಿಂದ ಪಾಲಿಸಿದೆ 10 ನಂದ ಯಶೋದೆ ವಸುದೇವ ದೇವಕಿಯರು ಸುಕೃತ ಫಲವಾಯಿತೆಂದು ಬಂದ ಬ್ರಾಹ್ಮಣರ ದ್ರವ್ಯದಿ ದಣಿಸಿದರು 11 ಜಾತಕರ್ಮವ ಮಾಡಿ ಮಧುವ ಬಾಯೊಳಗಿಟ್ಟು ಒತ್ತುಮೊರನ ಗೊಟ್ಟಿನಲಿ ಮಲಗಿದ್ದು ಸಾ- ಕ್ಷಾತ್ ಶ್ರೀ ನಾರಾಯಣನ ಅವತಾರವೆಂದು ಮಾತೆಯ ಮೊಲೆವಾಲನುಂಡ ಬೇಗದಲಿ 12 ವಾರುಣಿ ಶ- ಚಿ ರತಿ ಮೊದಲಾದ ಸತಿಯರು ನಾರಾಯಣ ಪರದೇವತೆಯೆಂದು ನಾರಿಯರೆಲ್ಲ ಪಾಡಿದರತಿ ಹರುಷದಲಿ 13 ನಾಮಕರಣ ದಿವಸ ಬ್ರಹ್ಮಾದಿ ಸುರರು ಈ ಮಹಾಶಿಶುವ ನೋಡೇವೆಂಬ ಭರದಿಂದ ಆ ಮಹಾಸ್ತೋಮವೆಲ್ಲ ಕೂಡಿಬರ- ಲೀ ಮಹಾಶಿಶುವ ನೋಡಿದರೆ ಅರ್ಥಿಯಲಿ 14 ವ್ಯಾಸ ಧೌಮ್ಯಾಚಾರ್ಯರೊಲಿದು ಮಂತ್ರಗಳಿಂದ ಸಾಸಿರಕೋಟ್ಯನಂತ ನಾಮಗಳುಳ್ಳ ವಾಸುದೇವ ಕೃಷ್ಣನೆಂಬ ನಾಮಗಳಿಟ್ಟು ಸೂಸಿದರಕ್ಷತೆ ಸುಮೂಹೂರ್ತದಲಿ 15 ಕ್ಷೀರಾಂಬುಧಿಯನ್ನೆ ತೊಟ್ಟಿಲು ಮಾಡಿ ಓರಂತೆ ನಾಲ್ಕುವೇದಗಳ ನೇಣನೆ ಮಾಡಿ ಧೀರಶೇಷನು ಬಂದು ಹಾಸಿಕೆ ಹಾಕಲು ನಾರಿಯರೊಡನೆ ಮಲಗಿದೆಯೊ ಹಯವದನ 16
--------------
ವಾದಿರಾಜ
ಬಾಯೊಳು ಉಂಗುಷ್ಟವನಿಟ್ಟಮಾಯವ ನÉೂೀಡಮ್ಮಾ ಪ ಶ್ರೀಯರಸನೀಲಮೇಘಛ್ಛಾಯ ಕೃಷ್ಣರಾಯತನ್ನ ಅ.ಪ. ನಿರಂಜನ ತಾ ಲೀಲೆಯಿಂದ1 ಪುಟಿತ ಹಾಟಕ ಮಣಿಘಟಿತ ಕಂಕಣಾಂಗದಕಟಿಸೂತ್ರಗಳನಿಟ್ಟು ನಟನಂದದಿವಟಪತ್ರ ಶಾಯಿ ಓಷ್ಠಪುಟದಿ ಪಾದವನಿಕ್ಕಿಕಟಬಾಯೊಳಮೃತವ ಸ್ಫುಟವಾಗಿ ಸುರಿಸುತ 2 ನಿತ್ಯ ಮಂಗಳ ದೇವಿಯರಗಂಗೆಯ ಪಡೆದ ಶಿವನಂಗ ಶುದ್ಧಿಗೈಸಿದಾತನ3 ಗೋಪಿ ಗೃಹಕರ್ಮರತಳಾಗಿರಲು ಒಮ್ಮನದಿಂದಅಮರಗಣಾರಾಧೀತ ಕ್ಷಮೆಯನಳೆದ ಪಾದಸುಮ್ಮನೆ ಕರದೊಳೆತ್ತಿ ಕಮ್ಮಗಿಹದೆಂದು ತನ್ನ 4 ಕರಪಲ್ಲವಾಮೃತ ಲೋಕವಂದ್ಯರೂಪ ಫಣಿಶೇ-ಖರಾದ್ರಿವಾಸ ಭಕ್ತನಾಕ ಭೂರುಹ ನೀಕರೆಸಿ ದುರಿತವ ಸೋಕದಂತೆ ನಮ್ಮನೀಗಸಾಕುವ ಪರಮ ಕರುಣಾಕರ ಶ್ರೀಕೃಷ್ಣ 5
--------------
ವ್ಯಾಸರಾಯರು
ಬಾಲನಾಗಿ ಬಂದ ಶ್ರೀಹರಿಲೀಲೆಯಿಂದ ತೋರಲೀಪರಿಮೂಲ ಕೊಲೆಗಳಿಲ್ಲದಾತಗೋಲವ್ಯಾಪಿ ನಿರಾಕಾರಿ ಪ ಪಾದ ನೆಲವಬಿಕ್ಕೆಬೇಡಿಯವನು ಹತ್ತಿಕ್ಕಿ ತಳಕೆ ತುಳಿಯಲೆಂದು 1 ಇಡಿಯ ಜಗವ ತನ್ನೊಡಲಿನಲ್ಲಿಹಿಡಿಯ ಪರಿಯ ಬಾಯ ತೆರೆದು ಜಡೆದು ತೋರಿ ಯಶೋದೆಯತೊಡೆಯ ಮೇಲೆ ಆಡಲೆಂದು 2 ಹಾಳುಮಾಡಿ ಹೂಡಿದಾಟಕಾಲ ಬೆರಳು ಬಾಯೊಳಿಟ್ಟುಆಲದೆಲೆಯ ಮೇಲೆಮಲಗೆ ಗದುಗು ವೀರನಾರಾಯಣ 3
--------------
ವೀರನಾರಾಯಣ
ಮಕ್ಕಳ ಮಾಣಿಕವೆ ಮೋಹನ್ನ ಬಾ ರಂಗೈಯ್ಯಾ ಮಕ್ಕಳ ಮಾಣಿಕವೆ ಮೋಹನ್ನ ಎನ್ನಕ್ಕರದ ಗುಣನಿಧೆ ಬಾ ರಂಗೈಯ್ಯಾ ಪ. ಅಪ್ಪುತಪ್ಪು ಹೆಜ್ಜೆನಿಕ್ಕುತ ಬಾಯೊಳು ಜೊಲ್ಲು ಸುಪ್ಪಾಣಿಮುತ್ತಂತೆ ಸುರಿಯುತಾ ಬಾರಂಗೈಯ್ಯಾ ನಿನಗೊಪ್ಪುವಾಭರಣ ನೀಡುವೆನೊ ಅದನೊಲ್ಲದಿದ್ದರೆ ತುಪ್ಪಾಕಜ್ಜಾಯ ಕೊಡುವೆನೂ 1 ಅಂದಿಗೆ ಕಿರುಗೆÉಜ್ಜೆ ಅಲಗೊತ್ತು ಕೈಯೊಳಗಿದ್ದು ಬಿಂದುಲಿ ಬಾಜುಬಂದು ತಿರುಹೂತ ಬಾರಂಗೈಯ್ಯಾ ಬಂದೆನ್ನ ಬಿಗಿಯಪ್ಪಿಕೊಳ್ಳಯ್ಯ ಅದನೊಲ್ಲದಿದ್ದರೆ ಅಂದವಾದ ಒಂದು ಮುದ್ದು ತಾರಯ್ಯ 2 ಓಡಿಓಡಿ ಬಾರೋ ವಸುದೇವನಂದನಾ ಕಂದ ನೋಡಿ ನೋಡಿ ನಗುತ ಬಾರೊ ರಂಗಯ್ಯ ಕೋಡಗಲ್ಲವಾಸ ವೆಂಕಟ 3
--------------
ಹೆಳವನಕಟ್ಟೆ ಗಿರಿಯಮ್ಮ